Headlines

U19 World Cup: 6ನೇ ಬಾರಿಗೆ ಅಂಡರ್-19 ವಿಶ್ವಕಪ್ ಗೆದ್ದ ಟೀಂ ಇಂಡಿಯಾ

ಜಿಂಬಾಬ್ವೆಯ ಹರಾರೆ ಮೈದಾನದಲ್ಲಿ ಯುವ ಭಾರತ ತಂಡ ಇತಿಹಾಸ ಸೃಷ್ಟಿಸಿದೆ. ಅಂಡರ್ 19 ವಿಶ್ವಕಪ್‌ನ ಫೈನಲ್‌ನಲ್ಲಿ ಭಾರತ ತಂಡ ಇಂಗ್ಲೆಂಡ್ ತಂಡವನ್ನು ಬರೋಬ್ಬರಿ 100 ರನ್​ಗಳಿಂದ ಸೋಲಿಸಿತು. ಇದರೊಂದಿಗೆ, ಭಾರತ ಆರನೇ ಬಾರಿಗೆ ಅಂಡರ್ 19 ವಿಶ್ವಕಪ್ ಎತ್ತಿಹಿಡಿಯಿತು. ಈ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್ ಮಾಡಿದ ಭಾರತ 50 ಓವರ್‌ಗಳಲ್ಲಿ 9 ವಿಕೆಟ್‌ಗಳಿಗೆ 411 ರನ್ ಕಲೆಹಾಕಿತು. ಇದಕ್ಕೆ ಉತ್ತರವಾಗಿ ಈ ಗುರಿ ಬೆನ್ನಟ್ಟಿದ ಇಂಗ್ಲೆಂಡ್ ತಂಡವು 311 ರನ್​ಗಳಿಗೆ ಆಲೌಟ್ ಆಗುವ ಮೂಲಕ 100 ರನ್​ಗಳಿಂದ…

Read More

ಇಂದೋರ್‌ನಲ್ಲಿ ಕಲುಷಿತ ನೀರು ಸೇವಿಸಿ 7 ಜನ ಸಾವು; ಆಸ್ಪತ್ರೆಯಲ್ಲಿ ಅಸ್ವಸ್ಥರ ಆರೋಗ್ಯ ವಿಚಾರಿಸಿದ ಸಿಎಂ – Kannada News | Madhya Pradesh CM Mohan Yadav meets the people hospitalised in Indore after drinking contaminated water

ಇಂದೋರ್‌, ಡಿಸೆಂಬರ್ 31: ಮಧ್ಯಪ್ರದೇಶದ ಇಂದೋರ್‌ನಲ್ಲಿ (Indore) ಕಲುಷಿತ ನೀರು ಸೇವನೆಯಿಂದ 7 ಜನರು ಸಾವನ್ನಪ್ಪಿದ್ದು, 35ಕ್ಕೂ ಹೆಚ್ಚು ಜನರು ಅಸ್ವಸ್ಥರಾಗಿದ್ದಾರೆ. ಈ ಹಿನ್ನೆಲೆಯಲ್ಲಿ ಮಧ್ಯಪ್ರದೇಶದ ಮುಖ್ಯಮಂತ್ರಿ ಮೋಹನ್ ಯಾದವ್ ಇಂದೋರ್‌ನಲ್ಲಿ ಕಲುಷಿತ ನೀರು ಕುಡಿದು ಅಸ್ವಸ್ಥರಾಗಿ ಆಸ್ಪತ್ರೆಗೆ ದಾಖಲಾಗಿರುವ ಜನರನ್ನು ಭೇಟಿಯಾದರು. ಮುನ್ನೆಚ್ಚರಿಕಾ ಕ್ರಮವಾಗಿ ಮುನ್ಸಿಪಲ್ ಕಾರ್ಪೊರೇಷನ್ ಮನೆಗಳಿಗೆ ನೀರು ಸರಬರಾಜು ಮಾಡುತ್ತಿದೆ, ಯಾವುದೇ ರೀತಿಯ ರೋಗಲಕ್ಷಣಗಳನ್ನು ಹೊಂದಿರುವವರಿಗೆ ಆಂಬ್ಯುಲೆನ್ಸ್‌ಗಳನ್ನು ನಿಯೋಜಿಸಲಾಗಿದೆ. ಇಂದೋರ್‌ನ ಭಾಗೀರಥಪುರ ಪ್ರದೇಶದಲ್ಲಿ ಕಳೆದ 15 ದಿನಗಳಿಂದ ಕೊಳಕು ನೀರಿನ ಬಗ್ಗೆ ದೂರುಗಳು…

Read More

Assembly Election 2026 LIVE Counting and Results: ಪಂಚರಾಜ್ಯ ಚುನಾವಣೆ ಫಲಿತಾಂಶ 2026, ಮತ ಎಣಿಕೆಗೆ ಕ್ಷಣಗಣನೆ – Kannada News | West Bengal, Tamil Nadu, Kerala, Assam, Puducherry Assembly Election 2026 Live Counting and Results Updates

Bagalkot, Davangere, West Bengal, Tamil Nadu, Kerala, Assam, Puducherry Assembly Election 2026 Live Counting and Results Updates in Kannada: ಪಶ್ಚಿಮ ಬಂಗಾಳ, ಅಸ್ಸಾಂ, ಕೇರಳ, ಪುದುಚೇರಿ, ತಮಿಳುನಾಡು ವಿಧಾನಸಭಾ ಚುನಾವಣೆ, ಕರ್ನಾಟಕದ ದಾವಣಗೆರೆ, ಬಾಗಲಕೋಟೆ ಕ್ಷೇತ್ರಗಳ ಉಪಚುನಾವಣೆ ಫಲಿತಾಂಶ ಇಂದು (ಮೇ 4) ಪ್ರಕಟವಾಗುತ್ತಿದೆ. ಅಸ್ಸಾಂನ 126 ಸ್ಥಾನಗಳಿಗೆ, ಕೇರಳದ 140 ಸ್ಥಾನಗಳಿಗೆ ಮತ್ತು ಪುದುಚೇರಿಯ 30 ಸ್ಥಾನಗಳಿಗೆ ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ ನಡೆದಿತ್ತು. ತಮಿಳುನಾಡಿನ…

Read More

ಹಾರ್ಮುಜ್ ಜಲಸಂಧಿಯ ದಿಗ್ಬಂಧನ ತೆರೆಯುವ ಕುರಿತ ಇಂಗ್ಲೆಂಡ್​​ನ ಶೃಂಗಸಭೆಯಲ್ಲಿ ಭಾರತ ಭಾಗಿ

ನವದೆಹಲಿ, ಏಪ್ರಿಲ್ 2: ಹಾರ್ಮುಜ್ ಜಲಸಂಧಿಯನ್ನು ಪುನಃ ತೆರೆಯಲು ಇಂಗ್ಲೆಂಡ್ (UK) ಡಜನ್‌ಗಟ್ಟಲೆ ದೇಶಗಳೊಂದಿಗೆ ಮಾತುಕತೆ ನಡೆಸುತ್ತಿದೆ. ಪಶ್ಚಿಮ ಏಷ್ಯಾದಲ್ಲಿನ ಸಂಘರ್ಷದ ಮಧ್ಯೆ ಹಾರ್ಮುಜ್ ಜಲಸಂಧಿಯನ್ನು ಮತ್ತೆ ತೆರೆಯಲು ಯುನೈಟೆಡ್ ಕಿಂಗ್‌ಡಮ್ ಆಯೋಜಿಸಿರುವ ಬಹು-ರಾಷ್ಟ್ರಗಳ ವರ್ಚುವಲ್ ಶೃಂಗಸಭೆಯಲ್ಲಿ ಭಾರತ ಭಾಗವಹಿಸಿದೆ ಎಂದು ವಿದೇಶಾಂಗ ಸಚಿವಾಲಯ (MEA) ತಿಳಿಸಿದೆ. ಸಂಘರ್ಷ ಪೀಡಿತ ಹಾರ್ಮುಜ್ ಜಲಸಂಧಿಯನ್ನು ಮತ್ತೆ ತೆರೆಯುವ ಕುರಿತು ಬಹುಪಕ್ಷೀಯ ಮಾತುಕತೆಗಳಿಗೆ ಯುನೈಟೆಡ್ ಕಿಂಗ್‌ಡಮ್ (UK) ಭಾರತ ಸೇರಿದಂತೆ 35 ದೇಶಗಳನ್ನು ಆಹ್ವಾನಿಸಿದೆ ಎಂದು ವಿದೇಶಾಂಗ ಸಚಿವಾಲಯ ತಿಳಿಸಿದೆ….

Read More

ಸರಳವಾಗಿ ನಡೆದ ಆಮಿರ್ ಖಾನ್ ಮೂರನೇ ಮದುವೆ, ಅತಿಥಿಗಳು ಯಾರ್ಯಾರು? – Kannada News | Aamir Khan, Gauri Spratt marriage, Here is the first photo of the newly wed couple

ಆಮಿರ್ ಖಾನ್ (Aamir Khan) ಇಂದು (ಜೂನ್ 05) ಮೂರನೇ ಮದುವೆ ಆಗಿದ್ದಾರೆ. ತಮ್ಮ ಗೆಳತಿ ಗೌರಿ ಸ್ಪ್ರಾಟ್ ಅವರನ್ನು ಆಮಿರ್ ಖಾನ್ ವರಿಸಿದ್ದಾರೆ. ಗೌರಿ ಅವರಿಗೆ ಇದು ಎರಡನೇ ಮದುವೆ ಆದರೆ, ಆಮಿರ್ ಖಾನ್ ಅವರಿಗೆ ಇದು ಮೂರನೇ ಮದುವೆ. ಆಮಿರ್ ಖಾನ್ ಅವರ ಮುಂಬೈ ನಿವಾಸದಲ್ಲಿಯೇ ಅತ್ಯಂತ ಸರಳವಾಗಿ ಈ ಮದುವೆ ಸಮಾರಂಭ ನೆರವೇರಿದೆ. ಆಮಿರ್ ಮತ್ತು ಗೌರಿ ಅವರುಗಳು ಮದುವೆಯ ರಿಜಿಸ್ಟರ್ ಪುಸ್ತಕಕ್ಕೆ ಸಹಿ ಹಾಕುತ್ತಿರುವ ಚಿತ್ರ ಇದೀಗ ಸಾಮಾಜಿಕ ಜಾಲತಾಣದಲ್ಲಿ ವೈರಲ್…

Read More

ಭಾರತದ ವಿರುದ್ಧದ ಭಯೋತ್ಪಾದನಾ ಸಂಘಟನೆಗೆ ಪಾಕಿಸ್ತಾನ ಆಶ್ರಯ ನೀಡುತ್ತಲೇ ಇದೆ; ಅಮೆರಿಕದ ಸಂಶೋಧನಾ ವರದಿ

ಇಸ್ಲಮಾಬಾದ್, ಮಾರ್ಚ್ 28: ಪಹಲ್ಗಾಮ್​ನಲ್ಲಿ ನಡೆದ ಭಯೋತ್ಪಾದನಾ ದಾಳಿಯ ಬಳಿಕ ಭಾರತ ಪಾಕಿಸ್ತಾನದ ಉಗ್ರರ ನೆಲೆಗಳ ಮೇಲೆ ಆಪರೇಷನ್ ಸಿಂಧೂರ್ (Operation Sindoor) ಕಾರ್ಯಾಚರಣೆ ನಡೆಸಿತ್ತು. ಆದರೆ, ಪಾಕಿಸ್ತಾನ (Pakistan) ತಮ್ಮ ದೇಶದಲ್ಲಿ ಯಾವುದೇ ಉಗ್ರರಿಗೆ ನೆಲೆ ಕಲ್ಪಿಸಿಲ್ಲ ಎಂದು ಹೇಳಿಕೊಂಡಿತ್ತು. ಅಲ್ಲದೆ, ಭಾರತ ಉಗ್ರರ ಮೇಲೆ ದಾಳಿ ನಡೆಸಿಲ್ಲ, ಪಾಕಿಸ್ತಾನದ ಮಿಲಿಟರಿ ನೆಲೆಗಳ ಮೇಲೆ ದಾಳಿ ನಡೆಸಿದೆ ಎಂದು ಪಾಕ್ ಸುಳ್ಳು ಹೇಳಿಕೆ ನೀಡಿತ್ತು. ಇದಾದ ನಂತರ ಪಾಕಿಸ್ತಾನದ ಮೇಲೆ ಸಮರ ಸಾರಿದ್ದ ಭಾರತದ ಕಾರ್ಯಾಚರಣೆಯಿಂದ…

Read More

ಗಿನ್ನಿಸ್ ದಾಖಲೆ ಪುಟ ಸೇರಲಿದೆಯಾ ಕಾಂಗ್ರೆಸ್​​ ಸಾಧನಾ ಸಮಾವೇಶ? ಪರಮೇಶ್ವರ್ ಹೇಳಿದ್ದಿಷ್ಟು – Kannada News | Tumakur: Will Congress Sadhana Samavesh Enter the Guinness Book of Records Here’s What G. Parameshwara Said

ತುಮಕೂರು, ಮೇ 18: ಕಾಂಗ್ರೆಸ್ ಸರ್ಕಾರದ 3ನೇ ವರ್ಷದ ಸಾಧನಾ ಸಮಾವೇಶವು ಮೇ 19 ಬೆಳಗ್ಗೆ 11 ಗಂಟೆಗೆ ತುಮಕೂರಿನ ಪದವಿ ಪೂರ್ವ ಕಾಲೇಜು ಮೈದಾನದಲ್ಲಿ ನಡೆಯಲಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಡಾ. ಜಿ. ಪರಮೇಶ್ವರ್ ತಿಳಿಸಿದರು. ನಗರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ತಾಂಡಾಗಳನ್ನು ಕಂದಾಯ ಗ್ರಾಮಗಳೆಂದು ಘೋಷಿಸಿರುವುದು ಹಾಗೂ ರಾಜ್ಯದಲ್ಲಿ 13.5 ಲಕ್ಷ ಜನರಿಗೆ ಹಕ್ಕುಪತ್ರ ವಿತರಿಸಿರುವುದು ಸರ್ಕಾರದ ಪ್ರಮುಖ ಸಾಧನೆ ಎಂದು ತಿಳಿಸಿದರು. ತುಮಕೂರು ಜಿಲ್ಲೆಯೊಂದರಲ್ಲೇ 1,52,492 ಜನರಿಗೆ ಹಕ್ಕುಪತ್ರ ನೀಡಲಾಗಿದ್ದು, ಆ…

Read More

IPL 2026: 6 ಉದ್ಘಾಟನಾ ಪಂದ್ಯಗಳನ್ನಾಡಿರುವ ಆರ್​ಸಿಬಿ ಗೆದ್ದಿದ್ದೆಷ್ಟು? ಸೋತಿದ್ದೆಷ್ಟು?

19ನೇ ಆವೃತ್ತಿಯ ಐಪಿಎಲ್ ಆರಂಭಕ್ಕೆ ಕೆಲವೇ ದಿನಗಳು ಬಾಕಿ ಉಳಿದಿವೆ. ಬಿಸಿಸಿಐ ನಿನ್ನೆಯಷ್ಟೆ ಈ ಮಿಲಿಯನ್ ಡಾಲರ್ ಟೂರ್ನಿಯ ಮೊದಲ 20 ಪಂದ್ಯಗಳ ವೇಳಾಪಟ್ಟಿಯನ್ನು ಪ್ರಕಟಿಸಿದೆ. 15 ದಿನಗಳ ಕಾಲ ನಡೆಯಲಿರುವ ಈ 20 ಪಂದ್ಯಗಳಲ್ಲಿ ಹಾಲಿ ಚಾಂಪಿಯನ್ ಆರ್​ಸಿಬಿ 4 ಪಂದ್ಯಗಳನ್ನು ಆಡಲಿದೆ. ಅದರಲ್ಲಿ ಉದ್ಘಾಟನಾ ಪಂದ್ಯವೂ ಸೇರಿದೆ. ಹಾಗಿದ್ದರೆ, ಆರ್​ಸಿಬಿ ಇದುವರೆಗೆ ಎಷ್ಟು ಉದ್ಘಾಟನಾ ಪಂದ್ಯಗಳನ್ನಾಡಿದೆ? ಅದರಲ್ಲಿ ತಂಡದ ಪ್ರದರ್ಶನ ಹೇಗಿದೆ ಎಂಬುದನ್ನು ನೋಡುವುದಾದರೆ.. ಆರ್​ಸಿಬಿ ಹಾಲಿ ಚಾಂಪಿಯನ್ ಆಗಿರುವ ಕಾರಣ ಉದ್ಘಾಟನಾ ಪಂದ್ಯವನ್ನು…

Read More

ಡಿ. 30ರಂದು ಕಸ್ಟಮ್ಸ್ ಇಲಾಖೆಯಿಂದ ಹರಾಜು: ಅತ್ಯಂತ ಕಡಿಮೆ ಬೆಲೆಗೆ ಸಿಗಲಿವೆ ಈ ವಸ್ತುಗಳು – Kannada News | Bengaluru Customs Online Auction via MSTC: Get Electronic Items, Vehicles, Furniture at Low Prices

ಬೆಂಗಳೂರು, ಡಿಸೆಂಬರ್​​ 23: ಕೇಂದ್ರ ಪರೋಕ್ಷ ತೆರಿಗೆಗಳು ಮತ್ತು ಕಸ್ಟಮ್ಸ್ ಮಂಡಳಿ (CBIC) ಅಡಿಯಲ್ಲಿ ಕಾರ್ಯನಿರ್ವಹಿಸುವ ಬೆಂಗಳೂರು ಕಸ್ಟಮ್ಸ್ ಇಲಾಖೆ ವಶಪಡಿಸಿಕೊಂಡಿರುವ ದೇಶಕ್ಕೆ ಅಕ್ರಮವಾಗಿ ಸಾಗಾಟ ಮಾಡಿದ ವಸ್ತುಗಳ ಹರಾಜು ಪ್ರಕ್ರಿಯೆ ಡಿಸೆಂಬರ್​​ 30ರಂದು ನಡೆಯಲಿದೆ. ಎಕ್ಸ್​​ ಖಾತೆಯಲ್ಲಿ ಕಸ್ಟಮ್ಸ್ ಇಲಾಖೆ ನೀಡಿರುವ ಮಾಹಿತಿಯಂತೆ, ಈ ಹರಾಜಿನಲ್ಲಿ ಮೊಬೈಲ್ ಫೋನ್‌ಗಳು, ಕಂಪ್ಯೂಟರ್‌ಗಳು, ಐಪ್ಯಾಡ್‌ಗಳು ಹಾಗೂ ಟಿವಿಗಳಂತಹ ಉತ್ಪನ್ನಗಳು ಮಾರುಕಟ್ಟೆ ಬೆಲೆಗೆ ಹೋಲಿಸಿದರೆ ಬಹಳ ಕಡಿಮೆ ದರದಲ್ಲಿ ಲಭ್ಯವಾಗಲಿವೆ. ವಸ್ತುಗಳ ಖರೀದಿ ಹೇಗೆ? “Auction of Electronics Goods…

Read More

Viral: ಬೆಂಗಳೂರಿನಿಂದ ಗುರಂಗಾವ್‌ಗೆ ಸ್ಥಳಾಂತರಗೊಳ್ಳುವ ಹಿಂದಿನ ಕಾರಣ ವಿವರಿಸಿದ ವ್ಯಕ್ತಿ – Kannada News | A man leaving Bengaluru for Gurgaon after 20 years explained the reason

ಉದ್ಯೋಗಕ್ಕಾಗಿ ಅನೇಕರು ದೂರದ ಊರು, ರಾಜ್ಯದಿಂದ ಬೆಂಗಳೂರಿಗೆ ಬರುತ್ತಾರೆ. ಹೀಗೆ ಬಂದವರಲ್ಲಿ ಕೆಲವರು ಇಲ್ಲೇ ನೆಲೆಸುತ್ತಾರೆ. ಇನ್ನು ಕೆಲವರು ಅನಿವಾರ್ಯ ಕಾರಣಕ್ಕಾಗಿ ಮಾಯನಗರಿ ಬಿಟ್ಟು ತಮ್ಮ ಊರಿಗೆ ತೆರಳುವುದಿದೆ. ಇದೀಗ ಕಳೆದ ಇಪ್ಪತ್ತು ವರ್ಷಗಳಿಂದ ಬೆಂಗಳೂರಿನಲ್ಲಿ (Bengaluru) ನೆಲೆಸಿರುವ ವ್ಯಕ್ತಿಯೊಬ್ಬರು ಗುರಗಾಂವ್‌ಗೆ (Gurgaon) ಹೋಗುವ ನಿರ್ಧಾರ ಮಾಡಿದ್ದಾರೆ. ತನ್ನ ತಂದೆ ತಾಯಿಯನ್ನು ನೋಡಿಕೊಳ್ಳುವ ಉದ್ದೇಶದಿಂದ ಈ ನಿರ್ಧಾರ ತೆಗೆದುಕೊಳ್ಳಬೇಕಾಯಿತು ಎಂದು ಹೇಳಿದ್ದಾರೆ. ಈ ರೆಡ್ಡಿಟ್ ಪೋಸ್ಟ್ ಸದ್ಯ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ. ರೆಡ್ಡಿಟ್ ಪೋಸ್ಟ್‌ನಲ್ಲಿ, ಬೆಂಗಳೂರಿನಿಂದ…

Read More