Headlines

Video: ಪಶ್ಚಿಮ ಬಂಗಾಳ ಚುನಾವಣೆ, ಜನತೆಗೆ 6 ಭರವಸೆಗಳ ಕೊಟ್ಟ ಪ್ರಧಾನಿ ಮೋದಿ

ಕೋಲ್ಕತ್ತಾ, ಏಪ್ರಿಲ್ 09: ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆ ಹಿನ್ನೆಲೆಯಲ್ಲಿ ಜನತೆಗೆ ಪ್ರಧಾನಿ ನರೇಂದ್ರ ಮೋದಿ 6 ಭರವಸೆಗಳನ್ನು ಕೊಟ್ಟಿದ್ದಾರೆ. ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದ ತಕ್ಷಣ ಭ್ರಷ್ಟರನ್ನು ಜೈಲಿಗೆ ಕಳುಹಿಸಲಾಗುತ್ತದೆ ಮತ್ತು ಎಲ್ಲಾ ಹಳೆಯ ಹಗರಣದ ಕಡತಗಳನ್ನು ಮತ್ತೆ ತೆರೆಯಲಾಗುತ್ತದೆ ಎಂದು ಸ್ಪಷ್ಟವಾಗಿ ಹೇಳಿದ್ದಾರೆ. ಟಿಎಂಸಿ ಹರಡಿರುವ ಭಯ ಮತ್ತು ಭಯೋತ್ಪಾದನೆಯನ್ನು ಬಿಜೆಪಿ ಕೊನೆಗೊಳಿಸುತ್ತದೆ ಮತ್ತು ರಾಜ್ಯದಲ್ಲಿ ಕಾನೂನಿನ ಮೇಲಿನ ನಂಬಿಕೆಯನ್ನು ಪುನಃಸ್ಥಾಪಿಸುತ್ತದೆ. ಟಿಎಂಸಿ ಆಳ್ವಿಕೆಯಲ್ಲಿ ಮಹಿಳೆಯರಿಗೆ ಆಗಿರುವ ಪ್ರತಿಯೊಂದು ಹಗರಣ, ಭ್ರಷ್ಟಾಚಾರ ಮತ್ತು ಅನ್ಯಾಯದ …

Read More

ಮೂರು ತಿಂಗಳಲ್ಲಿ 80,000 ಟೆಕ್ಕಿಗಳ ಲೇ ಆಫ್; ಮುಂದೈತೆ ಇನ್ನೂ ದೊಡ್ಡ ಬಲಿ

ನವದೆಹಲಿ, ಏಪ್ರಿಲ್ 9: ಎಐ ಬೆಳವಣಿಗೆ ಮತ್ತು ಅಳವಡಿಕೆಯ ಫಲ ಪೂರ್ಣವಾಗಿ ಸಿಗುವಂತಾಗಲು ಬಹಳ ದಿನಗಳು ಬೇಕು. ಆದರೆ, ಈಗಲೇ ಹಲವು ಟೆಕ್ ಕಂಪನಿಗಳು ಲೇ ಆಫ್​ಗೆ ತೊಡಗಿವೆ. ಜಾಗತಿಕ ತಂತ್ರಜ್ಞಾನ ಕ್ಷೇತ್ರದ ಸಂಸ್ಥೆಗಳು ಈ ವರ್ಷದ ಮೊದಲ ಕ್ವಾರ್ಟರ್​ನಲ್ಲಿ (ಜನವರಿ-ಮಾರ್ಚ್) 80,000 ಉದ್ಯೋಗಿಗಳನ್ನು ಮನೆಗೆ ಕಳುಹಿಸಿವೆ. ರ್ಯಾಷನಲ್ ಎಫ್​ಎಕ್ಸ್ (RationalFX) ಬಿಡುಗಡೆ ಮಾಡಿದ ದತ್ತಾಂಶದ ಪ್ರಕಾರ, ಜನವರಿ 1ರಿಂದ ಏಪ್ರಿಲ್ 1ರವರೆಗೆ 78,557 ಮಂದಿಯನ್ನು ಲೇ ಆಫ್ (Lay offs) ಮಾಡಲಾಗಿದೆ. ಇದು ಅಧಿಕೃತವಾಗಿ ಲೇ…

Read More

ಬಾಗಲಕೋಟೆ ಉಪಚುನಾವಣೆ: ಮತದಾನ ಮಾಡಲು ಗೋವಾದಿಂದ ಎರಡು ಬಸ್‌ಗಳಲ್ಲಿ ಬಂದ 80 ಮತದಾರರು!

ಬಾಗಲಕೋಟೆ, ಏಪ್ರಿಲ್ 9: ಬಾಗಲಕೋಟೆ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ ಹಕ್ಕು ಚಲಾಯಿಸಲು ಗೋವಾದಲ್ಲಿ ನೆಲೆಸಿದ್ದ ಕರ್ನಾಟಕದ ಮತದಾರರು ವಿಶೇಷ ಆಸಕ್ತಿ ತೋರಿದ್ದಾರೆ. ಕ್ಷೇತ್ರದ ವ್ಯಾಪ್ತಿಯ ಮಾದಾಪುರ ಗ್ರಾಮದ ಸುಮಾರು 70 ರಿಂದ 80 ಮತದಾರರು ಎರಡು ಖಾಸಗಿ ಬಸ್‌ಗಳ ಮೂಲಕ ಗೋವಾದಿಂದ ಸ್ವಗ್ರಾಮಕ್ಕೆ ಆಗಮಿಸಿದ್ದಾರೆ. ಉದ್ಯೋಗಕ್ಕಾಗಿ ಗೋವಾಕ್ಕೆ ವಲಸೆ ಹೋಗಿದ್ದ ಇವರು, ಮಾದಾಪುರ ಗ್ರಾಮದ ಮತಗಟ್ಟೆಗಳಲ್ಲಿ ಉತ್ಸಾಹದಿಂದ ಸರದಿಯಲ್ಲಿ ನಿಂತು ಮತ ಚಲಾಯಿಸುತ್ತಿದ್ದಾರೆ. ಚುನಾವಣೆ ಸಂಬಂಧಿತ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ Source link

Read More

Havan Bhasma Power: ಕೈಯಲ್ಲಿ ಹಣ ನಿಲ್ಲುತ್ತಿಲ್ಲವೇ? ನಿಮ್ಮ ಲಾಕರ್‌ನಲ್ಲಿ ಈ ಒಂದು ವಸ್ತುವನ್ನಿಡಿ

ಹಿಂದೂ ಧರ್ಮದಲ್ಲಿ ಹವನ ಅಥವಾ ಯಜ್ಞ ಎನ್ನುವುದು ಕೇವಲ ಒಂದು ಧಾರ್ಮಿಕ ವಿಧಿ ವಿಧಾನವಲ್ಲ, ಅದು ಪರಿಸರ ಮತ್ತು ಅಂತಃಕರಣವನ್ನು ಶುದ್ಧೀಕರಿಸುವ ಒಂದು ವೈಜ್ಞಾನಿಕ ಪ್ರಕ್ರಿಯೆ. ವೇದ ಮಂತ್ರಗಳ ಘೋಷದ ನಡುವೆ, ಪವಿತ್ರ ಅಗ್ನಿಗೆ ಅರ್ಪಿತವಾದ ದ್ರವ್ಯಗಳು ದಹಿಸಿ ಉಳಿಯುವ ‘ಭಸ್ಮ’ (ಬೂದಿ) ಅಗಾಧವಾದ ದೈವಿಕ ಗುಣಗಳನ್ನು ಹೊಂದಿರುತ್ತದೆ. ಜ್ಯೋತಿಷ್ಯ ಶಾಸ್ತ್ರ ಮತ್ತು ಆಧ್ಯಾತ್ಮದ ಪ್ರಕಾರ, ಈ ಪವಿತ್ರ ಭಸ್ಮವನ್ನು ಸರಿಯಾದ ರೀತಿಯಲ್ಲಿ ಬಳಸುವುದರಿಂದ ಜೀವನದ ಅನೇಕ ಸಂಕಷ್ಟಗಳಿಂದ ಮುಕ್ತಿ ಪಡೆಯಬಹುದು. ಅದರ ಅದ್ಭುತ ಪ್ರಯೋಜನಗಳು ಇಲ್ಲಿವೆ:…

Read More

ಯೋಗೇಶ್ ಗೌಡ ಕೊಲೆ ಪ್ರಕರಣ: ಇಂದಲ್ಲ, ಏಪ್ರಿಲ್​​ 15ಕ್ಕೆ ವಿನಯ್ ಕುಲಕರ್ಣಿ ಭವಿಷ್ಯ ನಿರ್ಧಾರ

ಬೆಂಗಳೂರು, ಏಪ್ರಿಲ್​​ 09: ಧಾರವಾಡದ ಬಿಜೆಪಿ ಮುಖಂಡ ಯೋಗೇಶ್ ಗೌಡ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯವು ತೀರ್ಪನ್ನು ಏಪ್ರಿಲ್ 15ಕ್ಕೆ ಮುಂದೂಡಿದೆ. ಪ್ರಮುಖ ಆರೋಪಿ ಮಾಜಿ ಸಚಿವ ವಿನಯ್ ಕುಲಕರ್ಣಿ ಅವರ ಭವಿಷ್ಯ ಇಂದು ನಿರ್ಧಾರವಾಗುವ ನಿರೀಕ್ಷೆಯಿತ್ತು, ಆದರೆ ತೀರ್ಪು ಸಿದ್ಧಪಡಿಸುವ ಪ್ರಕ್ರಿಯೆ ಅಂತಿಮ ಹಂತದಲ್ಲಿದ್ದು, ವಿಸ್ತೃತ ಪರಾಮರ್ಶೆಯ ಅಗತ್ಯವಿರುವುದರಿಂದ ಮುಂದೂಡಲಾಗಿದೆ. ವಾದ-ಪ್ರತಿವಾದದ ಸಮಯದಲ್ಲಿ ಎರಡೂ ಕಡೆಯ ವಕೀಲರು ಸಾವಿರಾರು ಪುಟಗಳ ಸುಪ್ರೀಂ ಕೋರ್ಟ್ ತೀರ್ಪುಗಳನ್ನು ಉಲ್ಲೇಖಿಸಿದ್ದು, ಪ್ರಕರಣದಲ್ಲಿ ಅನೇಕ ದಾಖಲೆಗಳು ಮತ್ತು ಸಾಕ್ಷ್ಯಗಳಿವೆ….

Read More

‘ರಾಕಾ’ ಪೋಸ್ಟರ್ ರಿಲೀಸ್ ಬೆನ್ನಲ್ಲೆ Jr NTR ಸಿನಿಮಾದ ನಿರ್ದೇಶಕ ವೈರಲ್ ಆಗಿದ್ದೇಕೆ?

ಅಲ್ಲು ಅರ್ಜುನ್ (Allu Arjun) ನಟಿಸಿ ಅಟ್ಲಿ ನಿರ್ದೇಶನ ಮಾಡುತ್ತಿರುವ ಹೊಸ ಸಿನಿಮಾದ ಟೈಟಲ್ ಪೋಸ್ಟರ್ ನಿನ್ನೆಯಷ್ಟೆ ಬಿಡುಗಡೆ ಆಯ್ತು. ಸಿನಿಮಾಕ್ಕೆ ‘ರಾಕಾ’ ಎಂದು ಹೆಸರಿಟ್ಟಿದ್ದು, ಪೋಸ್ಟರ್​​ನಲ್ಲಿ ರಾಕ್ಷಸನ ರೀತಿ ಅಲ್ಲು ಅರ್ಜುನ್ ಕಾಣಿಸಿಕೊಂಡಿದ್ದಾರೆ. ಪೋಸ್ಟರ್ ಬಗ್ಗೆ ಅಲ್ಲು ಅರ್ಜುನ್ ಅಭಿಮಾನಿಗಳಿಂದ ಮಿಶ್ರ ಪ್ರತಿಕ್ರಿಯೆ ವ್ಯಕ್ತವಾಗಿದೆ. ಆದರೆ ಪೋಸ್ಟರ್ ಬಿಡುಗಡೆ ಆದ ಬಳಿಕ ಜೂ ಎನ್​​ಟಿಆರ್ ಜೊತೆಗೆ ಸಿನಿಮಾ ಮಾಡಿದ್ದ ನಿರ್ದೇಶಕ ಟ್ರೆಂಡ್ ಆಗಲು ಆರಂಭಿಸಿದ್ದು, ಹಠಾತ್ತನೆ ಆ ನಿರ್ದೇಶಕನ ವಿಡಿಯೋಗಳು, ಹಳೆ ಸಂದರ್ಶನಗಳು ವೈರಲ್ ಆಗುತ್ತಿವೆ….

Read More

RCB vs RR: ಜೋಶ್ ಹೇಝಲ್​ವುಡ್ ಕಣಕ್ಕಿಳಿಯುತ್ತಾರಾ, ಇಲ್ವಾ? ಇಲ್ಲಿದೆ ಮಾಹಿತಿ

IPL 2026: ಇಂಡಿಯನ್ ಪ್ರೀಮಿಯರ್ ಲೀಗ್ ಸೀಸನ್​-19 ರಲ್ಲಿ ಬ್ಯಾಕ್ ಟು ಬ್ಯಾಕ್ ಎರಡು ಭರ್ಜರಿ ಜಯ ಸಾಧಿಸಿರುವ ರಾಯಲ್ ಚಾಲೆಂಜರ್ಸ್ (RCB) ತಂಡಕ್ಕೆ ಮೂರನೇ ಪಂದ್ಯಕ್ಕೂ ಮುನ್ನ ಆನೆಬಲ ಬಂದಂತಾಗಿದೆ. ಏಕೆಂದರೆ ರಾಜಸ್ಥಾನ್ ರಾಯಲ್ಸ್ ವಿರುದ್ಧದ ಪಂದ್ಯದಲ್ಲಿ ಆರ್​ಸಿಬಿ ವೇಗಿ ಜೋಶ್ ಹೇಝಲ್​ವುಡ್ ಕಣಕ್ಕಿಳಿಯುವ ಸಾಧ್ಯತೆ ದಟ್ಟವಾಗಿದೆ. ಗಾಯದ ಸಮಸ್ಯೆ ಮತ್ತು ಪುನರಾಗಮನ: ಹ್ಯಾಮ್‌ಸ್ಟ್ರಿಂಗ್ ಮತ್ತು ಅಕಿಲಿಸ್ ಸ್ನಾಯು ಸೆಳೆತದಿಂದಾಗಿ ಜೋಶ್ ಹೇಝಲ್‌ವುಡ್ ಈ ಸೀಸನ್‌ನ ಆರಂಭಿಕ ಪಂದ್ಯಗಳಿಂದ ಹೊರಗುಳಿದಿದ್ದರು. ಇತ್ತೀಚಿನ ವರದಿಗಳ ಪ್ರಕಾರ, ಅವರು…

Read More

ಕಾಂಗ್ರೆಸ್‌ನವರು ನಿನ್ನೆ ರಾತ್ರಿ ಕೋಟ್ಯಂತರ ರೂಪಾಯಿ ಹಣ ಹಂಚಿಕೆ ಮಾಡಿದ್ದಾರೆ: ವೀರಣ್ಣ ಚರಂತಿಮಠ

ಬಾಗಲಕೋಟೆ, ಏ.9: ಉಪಚುನಾವಣೆಗೆ ಮತದಾನ ಪ್ರಕ್ರಿಯೆ ಭರದಿಂದ ಸಾಗುತ್ತಿದೆ. ಬೆಳ್ಳಂಬೆಳಿಗ್ಗೆಯೇ ಮತದಾರರು ತಮ್ಮ ಹಕ್ಕು ಚಲಾಯಿಸುತ್ತಿದ್ದು, ಬಿಜೆಪಿ ಅಭ್ಯರ್ಥಿ ವೀರಣ್ಣ ಚರಂತಿಮಠ ಅವರು ತಮ್ಮ ಕುಟುಂಬ ಸಮೇತರಾಗಿ ಮತದಾನ ಮಾಡಿದರು. ನಂತರ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಈ ಬಾರಿಯೂ ಗೆಲುವಿನ ಕುರಿತು ಸಂಪೂರ್ಣ ವಿಶ್ವಾಸ ವ್ಯಕ್ತಪಡಿಸಿದರು. ಕಳೆದ ಬಾರಿ ಕಡಿಮೆ ಅಂತರದಲ್ಲಿ ಸೋಲುಂಡಿದ್ದ ವೀರಣ್ಣ ಚರಂತಿಮಠ ಅವರು, ಈ ಬಾರಿಯ ವಾತಾವರಣ ಚೆನ್ನಾಗಿದೆ ಎಂದರು. ಇದೇ ವೇಳೆ, ಕಾಂಗ್ರೆಸ್ ಪಕ್ಷದ ವಿರುದ್ಧ ಗಂಭೀರ ಆರೋಪ ಮಾಡಿದರು. ಕಾಂಗ್ರೆಸ್‌ನವರು…

Read More

ತಿರುಪತಿಗೆ ಭೇಟಿ ನೀಡಿ ದೇವರ ದರ್ಶನ ಪಡೆದ ವಿಘ್ನೇಶ್ ಶಿವನ್-ನಯನತಾರಾ

ವಿಘ್ನೇಶ್ ಶಿವನ್ ನಿರ್ದೇಶನದ ‘ಎಲ್​​ಯುಕೆ’ ಸಿನಿಮಾ ರಿಲೀಸ್​​ಗೆ ರೆಡಿ ಇದೆ. ಈ ಚಿತ್ರ ಏಪ್ರಿಲ್ 10ರಂದು ರಿಲೀಸ್ ಆಗುತ್ತಿದೆ. ಈ ಸಿನಿಮಾ ರಿಲೀಸ್​​ಗೂ ಮೊದಲು ವಿಘ್ನೇಶ್ ಹಾಗೂ ನಯನತಾರಾ ಅವರು ತಿರುಪತಿಗೆ ತೆರಳಿ ತಿಮ್ಮಪ್ಪನ ದರ್ಶನ ಮಾಡಿದ್ದಾರೆ. ಆ ಸಂದರ್ಭದ ವಿಡಿಯೋ ಲಭ್ಯವಾಗಿದೆ. ಆ ವಿಡಿಯೋ ಇಲ್ಲಿದೆ. ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.   Source link

Read More

ಜಾತ್ರೆ ನೋಡಲು ಹೋಗಿ ಹಸೆಮಣೆ ಏರಬೇಕಿದ್ದವನ ದುರಂತ ಅಂತ್ಯ: ಪಲ್ಲಕ್ಕಿ ಹೊತ್ತ ಟ್ರ್ಯಾಕ್ಟರ್​ ಹರಿದು ಸಾವು

ಆನೇಕಲ್​​, ಏಪ್ರಿಲ್​​ 09: ಪಲ್ಲಕ್ಕಿ ಹೊತ್ತ ಟ್ರ್ಯಾಕ್ಟರ್​ ಹರಿದ ಪರಿಣಾಮ ಹಸೆಮಣೆ ಏರಬೇಕಿದ್ದ ಯುವಕ ದಾರುಣವಾಗಿ ಮೃತಪಟ್ಟಿರುವ ಹೃದಯವಿದ್ರಾವಕ ಘಟನೆ ಹುಳಿಮಾವು ಜಾತ್ರೆಯಲ್ಲಿ ನಡೆದಿದೆ. ಹುಳಿಮಾವು ಗ್ರಾಮದ ಶ್ರೀ ಕೋದಂಡ ರಾಮಸ್ವಾಮಿ ದೇವಾಲಯದ ಬ್ರಹ್ಮರಥೋತ್ಸವ ನಿನ್ನೆ ನಡೆದಿದ್ದು, ರಥೋತ್ಸವ ಹಿನ್ನಲೆ ರಾತ್ರಿ ಪಲ್ಲಕ್ಕಿ ಉತ್ಸವ ಹಮ್ಮಿಕೊಳ್ಳಲಾಗಿತ್ತು. ಈ ವೇಳೆ ಪಲ್ಲಕ್ಕಿಗಳನ್ನ ನೋಡುತ್ತಾ ನಿಂತಿದ್ದ ಯುವಕನ ಮೇಲೆ ಟ್ರ್ಯಾಕ್ಟರ್​​ ಹರಿದಿದ್ದು, ಅಕ್ಷತ್ (27) ಮೃತಪಟ್ಟಿದ್ದಾರೆ. ತೀವ್ರವಾಗಿ ಗಾಯಗೊಂಡಿದ್ದ ಅವರನ್ನು ಆಸ್ಪತ್ರೆಗೆ ದಾಖಲಿಸಲು ಕರೆದೊಯ್ಯಲಾಗಿತ್ತಾದರೂ ಮಾರ್ಗ ಮಧ್ಯೆಯೇ ಉಸಿರು ಚೆಲ್ಲಿದ್ದಾರೆ….

Read More