Headlines

ಸಲ್ಮಾನ್ ಮುಂದೆ ಹೀಗೆ ಮಾಡ್ತೀರಾ? ರಿತೇಶ್ ದೇಶಮುಖ್ ಜೊತೆ ಅಸಭ್ಯವಾಗಿ ವರ್ತಿಸಿದ ವ್ಯಕ್ತಿಗೆ ನೇರ ಪ್ರಶ್ನೆ – Kannada News | Lock Upp 2: Ram Kapoor Lashes Out At Host Riteish Deshmukh Over Water During Paintball Task

ಹೆಚ್ಚು ಚರ್ಚೆಗೆ ಗ್ರಾಸವಾಗಿರುವ ‘ಲಾಕ್ ಅಪ್: ಸಚ್ ಯಾ ಸಜಾ’ ರಿಯಾಲಿಟಿ ಶೋನ ಎರಡನೇ ಸೀಸನ್ ಇದೀಗ ಆರಂಭವಾಗಿದೆ. ಈ ಸೀಸನ್ ಮೊದಲ ಕಂತಿನಿಂದಲೂ ವಿವಾದಗಳು, ಜಗಳಗಳು ಭಾರಿ ಸುದ್ದಿಯಲ್ಲಿದೆ. ಇತ್ತೀಚಿನ ಎಪಿಸೋಡ್‌ನಲ್ಲಿ ನಟ,ಸ್ಪರ್ಧಿ ರಾಮ್ ಕಪೂರ್ ತುಂಬಾ ಅಸಭ್ಯವಾಗಿ ವರ್ತಿಸಿದ್ದಾರೆ. ಅವರು ಶೋನ ನಿರೂಪಕ ರಿತೇಶ್ ದೇಶಮುಖ್ ಮೇಲೆ ತೀವ್ರ ಕೋಪಗೊಂಡಿದ್ದರು. ಈ ವರ್ತನೆಗೆ ನೆಟ್ಟಿಗರು ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಸಲ್ಮಾನ್ ಖಾನ್ ಅವರ ಮುಂದೆ ಇಂತಹ ಕೆಲಸ ಮಾಡಲು ಇವರಿಗೆ ಧೈರ್ಯ ಇರುತ್ತಿತ್ತಾ ಎಂದು…

Read More

ಮಳೆರಾಜೇಂದ್ರಸ್ವಾಮಿ ರಥೋತ್ಸವ: ತೇರು ಎಳೆದ ಸಹಸ್ರಾರು ಭಕ್ತರು; ವಿಡಿಯೋ ನೋಡಿ – Kannada News | Bagalkote Hosamuranala Witnesses Grand Malerajendra Swamy Rathotsava; Lakhs of Devotees Participate

ಬಾಗಲಕೋಟೆ, ಫೆಬ್ರವರಿ 25: ಜಿಲ್ಲೆಯ ಹೊಸಮುರನಾಳ ಗ್ರಾಮದಲ್ಲಿ ಮಳೆರಾಜೇಂದ್ರಸ್ವಾಮಿ ರಥೋತ್ಸವವು ಅದ್ದೂರಿಯಾಗಿ ನೆರವೇರಿತು. ಈ ಭವ್ಯ ಕಾರ್ಯಕ್ರಮಕ್ಕೆ ಲಕ್ಷಾಂತರ ಭಕ್ತರು ಸಾಕ್ಷಿಯಾದರು. ಭಾವೈಕ್ಯತೆಗೆ ಹೆಸರಾದ ಈ ರಥೋತ್ಸವದಲ್ಲಿ ಸಹಸ್ರಾರು ಭಕ್ತರು ಉತ್ಸಾಹದಿಂದ ತೇರನ್ನು ಎಳೆದರು. ಪಲ್ಲಕ್ಕಿ ಮೆರವಣಿಗೆ, ಮಹಿಳೆಯರಿಂದ ಆರತಿ ಸೇವೆ ಮತ್ತು ಕುದುರೆ ಮೇಲೆ ಆದಿತ್ಯನಾಥ ಸ್ವಾಮೀಜಿ ಅವರ ಮೆರವಣಿಗೆಯು ರಥೋತ್ಸವದ ಪ್ರಮುಖ ಆಕರ್ಷಣೆಯಾಗಿತ್ತು. ಹೊಸಮುರನಾಳ ಗ್ರಾಮದಾದ್ಯಂತ ಸಂಭ್ರಮದ ವಾತಾವರಣ ನೆಲೆಸಿತ್ತು. ಭಕ್ತರು ಶ್ರೀ ಮಳೆರಾಜೇಂದ್ರಸ್ವಾಮಿಯ ದರ್ಶನ ಪಡೆದು ಪುನೀತರಾದರು. ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು…

Read More

ಹೀಗೆ ಕಲುಷಿತಗೊಂಡರೆ ಸೌಪರ್ಣಿಕಾ ನದಿ ಉಳಿಯುತ್ತಾ? ಸಮಗ್ರ ವರದಿ ಸಲ್ಲಿಸುವಂತೆ ಹಸಿರು ನ್ಯಾಯಮಂಡಳಿ ಆದೇಶ – Kannada News | NGT Orders Action: Kollur Souparnika River Pollution from Temple Area Commercial Waste

ಕೊಳಚೆ ನೀರಿನಿಂದ ಅಶುದ್ಧವಾಗಿರುವ ಸೌಪರ್ಣಿಕಾ ಉಡುಪಿ, ಜನವರಿ 20: ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಾಲಯದ (Kolluru Mukambika Temple) ಸುತ್ತಮುತ್ತಲ ಪ್ರದೇಶದಲ್ಲಿ ವಾಣಿಜ್ಯ ಕಟ್ಟಡಗಳಿಂದ ಹರಿಯುತ್ತಿರುವ ಮಲಿನ ನೀರಿನಿಂದ ಸೌಪರ್ಣಿಕಾ ನದಿ ತೀವ್ರವಾಗಿ ಮಾಲಿನ್ಯಗೊಳ್ಳುತ್ತಿರುವ ಪ್ರಕರಣಕ್ಕೆ ಸಂಬಂಧಿಸಿ  ರಾಷ್ಟ್ರೀಯ ಹಸಿರು ನ್ಯಾಯಮಂಡಳಿ (NGT) ಮಹತ್ವದ ಆದೇಶ ನೀಡಿದೆ. ಫೆಬ್ರವರಿ 9, 2026ಕ್ಕೆ ಮುಂದಿನ ವಿಚಾರಣೆ ನಿಗದಿಪಡಿಸಿರುವ ನ್ಯಾಯಮಂಡಳಿ, ಉಡುಪಿ ಜಿಲ್ಲಾಧಿಕಾರಿ ಸ್ವರೂಪಾ ಟಿ.ಕೆ. ಹಾಗೂ ಕರ್ನಾಟಕ ನಗರ ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ (KUWSDB) ಅಧ್ಯಕ್ಷರಿಗೆ…

Read More

Airport Jobs: ವಿಮಾನ ನಿಲ್ದಾಣದಲ್ಲಿ ಉದ್ಯೋಗ ಪಡೆಯುವುದು ಹೇಗೆ? ಅರ್ಹತೆ ಮತ್ತು ಆಯ್ಕೆ ಪ್ರಕ್ರಿಯೆಯ ಸಂಪೂರ್ಣ ಮಾಹಿತಿ ಇಲ್ಲಿದೆ

ಭಾರತೀಯ ಯುವಜನತೆಯಲ್ಲಿ ವಿಮಾನ ನಿಲ್ದಾಣದ ಉದ್ಯೋಗಗಳ ಬಗ್ಗೆ ಯಾವಾಗಲೂ ಒಂದು ರೀತಿಯ ಕ್ರೇಜ್ ಇರುತ್ತದೆ. ಅತ್ಯಾಧುನಿಕ ಕೆಲಸದ ವಾತಾವರಣ, ವೃತ್ತಿಪರ ಗೌರವ ಮತ್ತು ಆಕರ್ಷಕ ವೇತನ ಶ್ರೇಣಿಯು ಈ ಕ್ಷೇತ್ರವನ್ನು ಯುವಕರ ನೆಚ್ಚಿನ ಆಯ್ಕೆಯನ್ನಾಗಿ ಮಾಡಿದೆ. ನೀವು ವಿಮಾನ ನಿಲ್ದಾಣದಲ್ಲಿ ವೃತ್ತಿಜೀವನವನ್ನು ಆರಂಭಿಸಲು ಬಯಸಿದ್ದರೆ, ಅಲ್ಲಿ ಲಭ್ಯವಿರುವ ವಿವಿಧ ಹುದ್ದೆಗಳು ಮತ್ತು ಅವುಗಳನ್ನು ಪಡೆಯುವ ಹಾದಿಯ ಬಗ್ಗೆ ಸವಿಸ್ತಾರವಾದ ಮಾಹಿತಿ ಇಲ್ಲಿದೆ ವಿಮಾನ ನಿಲ್ದಾಣದಲ್ಲಿ ಲಭ್ಯವಿರುವ ಪ್ರಮುಖ ಹುದ್ದೆಗಳು: ವಿಮಾನ ನಿಲ್ದಾಣದ ಕಾರ್ಯನಿರ್ವಹಣೆಯು ಕೇವಲ ವಿಮಾನ ಹಾರಾಟಕ್ಕೆ…

Read More

Jupiter Saturn Retrograde: ಜುಲೈನಲ್ಲಿ ಶನಿ-ಗುರುವಿನ ವಕ್ರ ಸಂಚಾರ; ಈ 4 ರಾಶಿಗಳಿಗೆ ಆದಾಯ ದ್ವಿಗುಣವಾಗುವ ಸಾಧ್ಯತೆ! – Kannada News | July Astrology: 4 Zodiac Signs to Prosper from Guru Shani Retrograde!

ಜುಲೈ ತಿಂಗಳಲ್ಲಿ ಗುರು ಮತ್ತು ಶನಿ ಗ್ರಹಗಳು ವಕ್ರಗತಿಯಲ್ಲಿ ಸಂಚರಿಸುತ್ತಿರುವುದು ಜ್ಯೋತಿಷ್ಯದಲ್ಲಿ ಮಹತ್ವದ ಬೆಳವಣಿಗೆಯಾಗಿ ಪರಿಗಣಿಸಲಾಗಿದೆ. ಈ ಗ್ರಹಗಳ ಸಂಚಾರದ ಪರಿಣಾಮವಾಗಿ ಕೆಲವು ರಾಶಿಯವರಿಗೆ ವಿಶೇಷ ಶುಭಯೋಗಗಳು ರೂಪುಗೊಳ್ಳಲಿದ್ದು, ಆರ್ಥಿಕ ಪ್ರಗತಿ, ಉದ್ಯೋಗದಲ್ಲಿ ಯಶಸ್ಸು ಹಾಗೂ ಕುಟುಂಬದಲ್ಲಿ ಸಂತೋಷದ ವಾತಾವರಣ ನಿರ್ಮಾಣವಾಗುವ ಸಾಧ್ಯತೆ ಇದೆ ಎಂದು ಜ್ಯೋತಿಷ್ಯ ಶಾಸ್ತ್ರ ಹೇಳುತ್ತದೆ. ಹಾಗಾದರೆ, ಈ ಅವಧಿಯಲ್ಲಿ ಹೆಚ್ಚು ಶುಭಫಲ ಪಡೆಯುವ ಆ ನಾಲ್ಕು ರಾಶಿಗಳು ಯಾವುವು ಎಂಬುದನ್ನು ಇಲ್ಲಿ ತಿಳಿದುಕೊಳ್ಳಿ. ಸಿಂಹ ರಾಶಿ: ಸಿಂಹ ರಾಶಿಯವರಿಗೆ ಜುಲೈ ತಿಂಗಳು…

Read More

3 ಗಂಟೆಗಳ ಕಾಲ ಚಿತ್ರಹಿಂಸೆ, ಎಲೆಕ್ಟ್ರಿಕ್ ಶಾಕ್ ಕೊಟ್ಟು, ವಿಷ ಕುಡಿಸಿ, ಪ್ರಿಯಕರನ ಜತೆ ಸೇರಿ ಗಂಡನ ಹತ್ಯೆಗೈದ ಪತ್ನಿ – Kannada News | UP: Husband Tortured, Electrocuted, Poisoned by Wife and Lover for Questioning Affair

ಮೊರಾದಾಬಾದ್, ಮೇ 26: ತನ್ನ ಅನೈತಿಕ ಸಂಬಂಧವನ್ನು ಪ್ರಶ್ನಿಸಿದ ಪತಿ(Husband)ಯನ್ನು ಪತ್ನಿಯೇ ತನ್ನ ಪ್ರಿಯಕರ ಮತ್ತು ತಂಗಿಯ ಸಹಾಯದಿಂದ ಅತ್ಯಂತ ಕ್ರೂರವಾಗಿ ಚಿತ್ರಹಿಂಸೆ ನೀಡಿ ಕೊಲೆ(Murder) ಮಾಡಿರುವ ಆಘಾತಕಾರಿ ಘಟನೆ ಉತ್ತರ ಪ್ರದೇಶದ ಮೊರಾದಾಬಾದ್​ನಲ್ಲಿ ನಡೆದಿದೆ.ಕೊಲೆಯನ್ನು ಆತ್ಮಹತ್ಯೆ ಎಂದು ಬಿಂಬಿಸಲು ಯತ್ನಿಸಿದ್ದ ಪತ್ನಿ ಸೇರಿದಂತೆ ನಾಲ್ವರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಕೊಲೆಯಾದ ದುರ್ದೈವಿಯನ್ನು ಪವನ್ ಎಂದು ಗುರುತಿಸಲಾಗಿದೆ. ಪವನ್ ಮತ್ತು ಆಂಚಲ್ (24) ದಂಪತಿಗೆ 6 ವರ್ಷಗಳ ಹಿಂದೆ ಮದುವೆಯಾಗಿದ್ದು, 3 ವರ್ಷದ ಹೆಣ್ಣು ಮಗಳಿದ್ದಾಳೆ. ಆದರೆ,…

Read More

ಬಿಗ್​​ಬಾಸ್ ಕನ್ನಡ 12ರ ವಿನ್ನರ್ ಯಾರು: ಪ್ರಶಾಂತ್ ಸಂಬರ್ಗಿ ಹೇಳಿದ್ದು ಹೀಗೆ – Kannada News | Bigg Boss Kannada 12: Prashanth Sambargi pics his contestant

ಬಿಗ್​​ಬಾಸ್ ಕನ್ನಡ ಸೀಸನ್ 12 (Bigg Boss) ರ ಫಿನಾಲೆ ಹತ್ತಿರವಾಗುತ್ತಿದೆ. ಮನೆಯಲ್ಲಿ ಸದ್ಯಕ್ಕೆ ಎಂಟು ಮಂದಿ ಸದಸ್ಯರಿದ್ದಾರೆ. ಗಿಲ್ಲಿ ಸದ್ಯದ ವಿನ್ನರ್ ಎನ್ನಲಾಗುತ್ತಿದೆ. ಆದರೆ ಅಶ್ವಿನಿ, ರಕ್ಷಿತಾ, ಧನುಶ್ ಸಹ ವಿನ್ನರ್ ಆಗುವ ಸಾಧ್ಯತೆ ಇದೆ ಎನ್ನಲಾಗುತ್ತಿದೆ. ಇದೀಗ ಕೆಲವು ಮಾಜಿ ಸ್ಪರ್ಧಿಗಳು ತಮ್ಮ ಮೆಚ್ಚಿನ ಸ್ಪರ್ಧಿ ಯಾರು? ಈ ಬಾರಿ ಗೆಲ್ಲಬಹುದು ಎಂಬ ಊಹೆಯನ್ನು ಸಹ ಮಾಡುತ್ತಿದ್ದಾರೆ. ಎರಡು ಬಾರಿ ಬಿಗ್​​ಬಾಸ್ ಸ್ಪರ್ಧೆಯಲ್ಲಿ ಭಾಗವಹಿಸಿರುವ ಪ್ರಶಾಂತ್ ಸಂಬರ್ಗಿ ಅವರು ಈ ಬಾರಿ ತಮ್ಮ ಮೆಚ್ಚಿನ…

Read More

IPL 2026: ಪ್ಲೇಆಫ್​ನಲ್ಲಿ 4 ತಂಡಗಳ ಸ್ಥಾನ ಖಚಿತ; ಹೇಗಿರಲಿದೆ ಪ್ಲೇಆಫ್‌ ಸುತ್ತು? – Kannada News | IPL 2026 Playoff Fixtures: RCB vs GT, SRH vs RR; Complete Match Schedule and Dates

ಐಪಿಎಲ್ 2026 (IPL 2026) 69 ನೇ ಪಂದ್ಯದಲ್ಲಿ, ರಾಜಸ್ಥಾನ್ ರಾಯಲ್ಸ್ ತಂಡವು ವಾಂಖೆಡೆ ಕ್ರೀಡಾಂಗಣದಲ್ಲಿ ಮುಂಬೈ ಇಂಡಿಯನ್ಸ್ (RR vs MI) ತಂಡವನ್ನು 30 ರನ್‌ಗಳಿಂದ ಸೋಲಿಸಿತು. ಈ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್‌ ಮಾಡಿದ ರಾಜಸ್ಥಾನ್, ಮುಂಬೈಗೆ 206 ರನ್‌ಗಳ ಗುರಿ ನೀಡಿತ್ತು. ಈ ಗುರಿ ಬೆನ್ನಟ್ಟಿದ ಮುಂಬೈ 20 ಓವರ್‌ಗಳಲ್ಲಿ 9 ವಿಕೆಟ್‌ಗಳ ನಷ್ಟಕ್ಕೆ 175 ರನ್‌ಗಳಿಸಲಷ್ಟೇ ಶಕ್ತವಾಯಿತು. ಈ ಗೆಲುವಿನೊಂದಿಗೆ ರಾಜಸ್ಥಾನ್ ರಾಯಲ್ಸ್ ತಂಡ ಕೊನೆಯ ತಂಡವಾಗಿ ಪ್ಲೇಆಫ್ ಟಿಕೆಟ್ ಪಡೆದುಕೊಂಡಿದೆ. ಈ…

Read More

ಯಲ್ಲಾಪುರ: ವಿವಾಹಿತ ಮಹಿಳೆ ಜತೆ ಯುವಕನ ಲವ್, ಮದುವೆಯಾಗಲು ಒಪ್ಪದ್ದಕ್ಕೆ ನಡುರಸ್ತೆಯಲ್ಲೇ ಕೊಲೆ ಮಾಡಿ ಪರಾರಿ – Kannada News | Woman Killed for Refusing Marriage in Yellapur, Uttara Kannada; Accused Rafeek on the Run

ಕಾರವಾರ, ಜನವರಿ 3: ಮದುವೆಗೆ ಒಪ್ಪದ ಮಹಿಳೆಯನ್ನು ಯುವಕನೊಬ್ಬ ಭೀಕರವಾಗಿ ಹತ್ಯೆ ಮಾಡಿ ಪರಾರಿಯಾದ ಘಟನೆ ಉತ್ತರ ಕನ್ನಡ (Uttara Kannada) ಜಿಲ್ಲೆಯ ಯಲ್ಲಾಪುರದಲ್ಲಿ ಶನಿವಾರ ನಡೆದಿದೆ. ಯಲ್ಲಾಪುರ ಪಟ್ಟಣದ ನಿವಾಸಿ ರಂಜಿತಾ ಹತ್ಯೆಯಾದ ಮಹಿಳೆ ಎಂದು ಪೊಲೀಸರು ತಿಳಿಸಿದ್ದಾರೆ. ರಫೀಕ್ ಎಂಬ ಯುವಕ ರಂಜಿತಾಳನ್ನು ಕಳೆದ ಕೆಲವು ವರ್ಷಗಳಿಂದ ಪ್ರೀತಿಸುತ್ತಿದ್ದ. ಸುಮಾರು ಹತ್ತು ವರ್ಷಗಳ ಹಿಂದೆ ರಂಜಿತಾಳಿಗೆ ವಿಚ್ಛೇದನವಾಗಿದ್ದು, ಆಕೆಗೆ ಒಂದು ಮಗು ಕೂಡ ಇದೆ. ರಂಜಿತಾ ತಂದೆ-ತಾಯಿ ಹಾಗೂ ಅಣ್ಣನೊಂದಿಗೆ ಯಲ್ಲಾಪುರದಲ್ಲಿ ವಾಸವಾಗಿದ್ದು, ಸರ್ಕಾರಿ…

Read More

ಎಸ್​ಯುವಿಯಲ್ಲಿ ರಾಶಿಗಟ್ಟಲೆ ಶಾಲಾ ಮಕ್ಕಳನ್ನು ತುಂಬಿದ ವಿಡಿಯೋ ವೈರಲ್ – Kannada News | Viral Video Shows School children Risking Lives In Overcrowded Vehicle In Kushinagar

ಖುಷಿನಗರ, ಜನವರಿ 3: ಉತ್ತರ ಪ್ರದೇಶದ ಖುಷಿನಗರ ಜಿಲ್ಲೆಯ ಪದ್ರೌನಾದಲ್ಲಿ ಶಾಲಾ ಮಕ್ಕಳನ್ನು ಅಪಾಯಕಾರಿಯಾಗಿ ಶಾಲಾ ವ್ಯಾನ್​​ನಲ್ಲಿ ತುಂಬಿರುವ ವಿಡಿಯೋವೊಂದು ವೈರಲ್ (Viral Video) ಆಗಿದೆ. ಎಸ್​ಯುವಿಯಲ್ಲಿ ಕೆಲವರು ಹಿಂಭಾಗದಿಂದ ನಿಂತಿರುವುದನ್ನು ಅಥವಾ ನೇತಾಡುತ್ತಿರುವುದನ್ನು ವಿಡಿಯೋದಲ್ಲಿ ನೋಡಬಹುದು. ಇದಕ್ಕೆ ಆಕ್ರೋಶ ವ್ಯಕ್ತವಾಗಿದೆ. ಮಕ್ಕಳ ಸುರಕ್ಷತೆ, ಶಾಲಾ ಸಾರಿಗೆ ಸೌಲಭ್ಯಗಳ ಕೊರತೆ ಮತ್ತು ಆಡಳಿತಾತ್ಮಕ ನಿರ್ಲಕ್ಷ್ಯದ ಬಗ್ಗೆ ಈ ವಿಡಿಯೋ ಗಂಭೀರ ಕಳವಳವನ್ನು ಹುಟ್ಟುಹಾಕಿದೆ. ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ Source link

Read More