Headlines

ತಮಿಳು ಸ್ಟಾರ್ ನಟನ ವಿರುದ್ಧ ವಂಚನೆ ಪ್ರಕರಣ ದಾಖಲು – Kannada News | Cheating Case registered against Tamil actor Arya

ಇತ್ತೀಚೆಗೆ ತಮಿಳು ಚಿತ್ರರಂಗದ (Kollywood) ನಾಯಕ ನಟರುಗಳು ಕೆಟ್ಟ ಕಾರಣಗಳಿಗೆ ಹೆಚ್ಚು ಸುದ್ದಿ ಆಗುತ್ತಿದ್ದಾರೆ. ರವಿ ಮೋಹನ್, ಧನುಶ್ ತಮ್ಮ ವಿಚ್ಛೇದನ ಮತ್ತು ಅಫೇರ್​​ಗಳ ಕಾರಣಕ್ಕೆ ಸುದ್ದಿ ಆದರು. ನಟ ವಿಶಾಲ್ ಹಣಕಾಸು ವಂಚನೆ ಕಾರಣಕ್ಕೆ ಸುದ್ದಿ ಆದರು. ಇದೆಲ್ಲದರ ನಡುವೆ ಇದೀಗ ತಮಿಳಿನ ಜನಪ್ರಿಯ ನಾಯಕ ನಟನೊಬ್ಬನ ವಿರುದ್ಧ ಹೈದರಾಬಾದ್​​ನಲ್ಲಿ ವಂಚನೆ ಪ್ರಕರಣ ದಾಖಲಾಗಿದೆ. ತಮಿಳು ಮಾತ್ರವೆ ಅಲ್ಲದೆ ತೆಲುಗು ಭಾಷೆಗಳಲ್ಲಿ ನಟಿಸಿರುವ ನಟ ಆರ್ಯ ವಿರುದ್ಧ ಈಗ ಹೈದರಾಬಾದ್​​ನ ಜುಬಿಲಿ ಹಿಲ್ಸ್ ಪೊಲೀಸ್ ಠಾಣೆಯಲ್ಲಿ…

Read More

2 ಕಂತು ಇಎಂಐ ಕಟ್ಟಿಲ್ಲವೆಂದು ಜೆಸಿಬಿಯನ್ನೇ ಹರಾಜು ಹಾಕಿದ ಬ್ಯಾಂಕ್: 10 ದಿನಗಳಿಂದ ಧರಣಿ ನಡೆಸುತ್ತಿರುವ ತಾಯಿ-ಮಗ – Kannada News | Mother and Son Protest Outside HDFC Bank in Chikkamagaluru After JCB Seized and Auctioned Over EMI Default

ಬ್ಯಾಂಕ್ ಎದುರು ಧರಣಿ ನಡೆಸುತ್ತಿರುವ ತಾಯಿ-ಮಗImage Credit source: tv9 ಚಿಕ್ಕಮಗಳೂರು, ಫೆಬ್ರವರಿ 11: ಕೇವಲ ಎರಡು ಕಂತು ಇಎಂಐ (EMI) ತಡವಾದ ಕಾರಣ ಜೆಸಿಬಿ ವಾಹನವನ್ನು ಸೀಜ್ ಮಾಡಿ ಹರಾಜು ಮಾಡಲಾಗಿದೆ ಎಂದು ಆರೋಪಿಸಿ ತಾಯಿ ಮತ್ತು ಮಗ ಚಿಕ್ಕಮಗಳೂರು ನಗರದ ಎಂಜಿ ರಸ್ತೆಯಲ್ಲಿರುವ ಹೆಚ್​ಡಿಎಫ್​ಸಿ (HDFC) ಬ್ಯಾಂಕ್ ಮುಂದೆ ಹತ್ತಿ ದಿನಗಳಿಂದ ನಿರಂತರ ಧರಣಿ ನಡೆಸುತ್ತಿದ್ದಾರೆ. ಚಿಕ್ಕಮಗಳೂರು (Chikkamagaluru) ತಾಲೂಕಿನ ಗೌಡನಹಳ್ಳಿ ಗ್ರಾಮದ ಮಂಜುನಾಥ್ ಅವರು ಜೆಸಿಬಿ ಖರೀದಿಸಲು ಐದು ವರ್ಷಗಳ ಅವಧಿಗೆ HDFC…

Read More

‘ಮಹಾವೀರ್ ನರಸಿಂಹ’ ಫೈಟ್ ಸೀನ್​​ ಕಾಪಿಯಾ ಅಥವಾ ಸ್ಪೂರ್ತಿಯಾ? – Kannada News | Did Mahavatar Narsimha movie scene copied from God Of war game

ಕಳೆದ ವರ್ಷ ಬಿಡುಗಡೆ ಆಗಿ ಬಾಕ್ಸ್ ಆಫೀಸ್​​ನಲ್ಲಿ (Box Office) ಭಾರಿ ಕಲೆಕ್ಷನ್ ಮಾಡಿದ ಸಿನಿಮಾಗಳಲ್ಲಿ ಅನಿಮೇಷನ್ ಸಿನಿಮಾ ‘ಮಹಾತಾರ್ ನರಸಿಂಹ’ ಸಹ ಒಂದು. ಮಾತ್ರವಲ್ಲದೆ ಭಾರತ ಬಾಕ್ಸ್ ಆಫೀಸ್​​ನಲ್ಲಿ ಅತಿ ಹೆಚ್ಚು ಹಣ ಗಳಿಕೆ ಮಾಡಿದ ಮೊದಲ ಅನಿಮೇಷನ್ ಸಿನಿಮಾ ಸಹ ‘ಮಹಾವತಾರ್ ನರಸಿಂಹ’. ಕ್ಲೀಂ ಪ್ರೊಡಕ್ಷನ್ಸ್ ನಿರ್ಮಾಣ ಮಾಡಿ ಅಶ್ವಿನ್ ಕುಮಾರ್ ನಿರ್ದೇಶನ ಮಾಡಿದ್ದ ಈ ಸಿನಿಮಾವನ್ನು ಹೊಂಬಾಳೆ ಫಿಲಮ್ಸ್ ವಿತರಣೆ ಮಾಡಿತ್ತು. ಕಿರಿಯರು, ಹಿರಿಯರು ಮುಗಿಬಿದ್ದು ಈ ಸಿನಿಮಾ ನೋಡಿದ್ದರು. ಆದರೆ ಇದೀಗ…

Read More

ಸುಮ್ನೆ ಇರೋಕಾಗ್ದೆ ಭಾರತ-ಇರಾನ್ ನಡುವೆ ಬೆಂಕಿ ಹಚ್ಚಲು ಕುತಂತ್ರ ನಡೆಸಿದ ಪಾಕ್

ನವದೆಹಲಿ, ಮಾರ್ಚ್​ 20: ಯುದ್ಧಭೂಮಿಯಲ್ಲಿ ಗೆಲ್ಲಲಾಗದೆ ಒಪ್ಪಂದವನ್ನು ಮಾಡಿಕೊಂಡ ರಾಷ್ಟ್ರಗಳಿಗೆ ರಕ್ಷಣೆಯನ್ನೂ ನೀಡಲಾಗದೆ ಅತಂತ್ರವಾಗಿರುವ ಪಾಕಿಸ್ತಾನ(Pakistan)ವು ಇರಾನ್ ಹಾಗೂ ಭಾರತದ ನಡುವೆ ವೈಷಮ್ಯವನ್ನು ಹುಟ್ಟುಹಾಕಲು ಕುತಂತ್ರ ನಡೆಸುತ್ತಿರುವುದು ಬಹಿರಂಗವಾಗಿದೆ. ಇತ್ತೀಚೆಗೆ ಅಮೆರಿಕದ ಸೇನೆಯು ಇರಾನ್​ನ ಯುದ್ಧನೌಕೆ ಐರಿಸ್ ಡೇನಾವನ್ನು ಹೊಡೆದುಹಾಕಿತ್ತು, ಇದು ಭಾರತದಲ್ಲಿ ಸಮರಭ್ಯಾಸ ನಡೆಸಿಕೊಂಡು ಇರಾನ್​​ನತ್ತ ಹೊರಟಿದ್ದ ಯುದ್ಧನೌಕೆಯಾಗಿತ್ತು. ಶ್ರೀಲಂಕಾದ ಬಳಿಯ ಹಿಂದೂ ಮಹಾಸಾಗರದಲ್ಲಿ ಈ ಅವಘಡ ಸಂಭವಿಸಿತ್ತು. ಇರಾನ್​ ಇಸ್ರೇಲ್ ಅಮೆರಿಕ ಯುದ್ಧ ನಡೆಯುತ್ತಿರುವ ಸಂದರ್ಭದಲ್ಲಿ ಪಾಕಿಸ್ತಾನದಲ್ಲಿಯೂ ಯುದ್ಧದ ಸನ್ನಿವೇಶ ನಿರ್ಮಾಣವಾಗಿದೆ. ಒಂದೆಡೆ ಅಫ್ಘಾನಿಸ್ತಾನ…

Read More

VHT 2025-26: 77 ರನ್ ಬಾರಿಸಿದ ಕೊಹ್ಲಿಗೆ 10000 ರೂ. ಬಹುಮಾನ ನೀಡಿದ ಬಿಸಿಸಿಐ – Kannada News | Virat Kohli’s Vijay Hazare Blitz: Century, 77 Runs and Rs 10K Prize Controversy

ಬಿಸಿಸಿಐ (BCCI) ಆದೇಶದಂತೆ ದೇಶಿ ಟೂರ್ನಿ ವಿಜಯ್ ಹಜಾರೆ ಟ್ರೋಫಿಯಲ್ಲಿ (Vijay Hazare Trophy) ಎರಡು ಪಂದ್ಯಗಳನ್ನಾಡಿದ ಕಿಂಗ್ ಕೊಹ್ಲಿ, ಆಡಿದ ಎರಡರಲ್ಲೂ ಅಮೋಘ ಪ್ರದರ್ಶನ ನೀಡಿದರು. ಮೊದಲ ಪಂದ್ಯದಲ್ಲಿ ಭರ್ಜರಿ ಶತಕ ಸಿಡಿಸಿದ್ದ ವಿರಾಟ್ ಕೊಹ್ಲಿ (Virat Kohli), ಎರಡನೇ ಪಂದ್ಯದಲ್ಲಿ 77 ರನ್​ಗಳ ಗೆಲುವಿನ ಇನ್ನಿಂಗ್ಸ್ ಆಡಿದರು. ಕೊಹ್ಲಿಯ ಈ ಅರ್ಧಶತಕದ ನೆರವಿನಿಂದ ಡೆಲ್ಲಿ ತಂಡ ಗುಜರಾತ್ ವಿರುದ್ಧದ ಈ ಪಂದ್ಯವನ್ನು 7 ರನ್​ಗಳಿಂದ ಗೆದ್ದುಕೊಂಡಿದಲ್ಲದೆ, ಟೂರ್ನಿಯಲ್ಲಿ ಸತತ ಎರಡನೇ ಜಯ ದಾಖಲಿಸಿತು. ಈ ಪಂದ್ಯದೊಂದಿಗೆ…

Read More

ಮಧ್ಯಪ್ರದೇಶ: ಮಾದಕವಸ್ತು ನೀಡಿ ಅತ್ಯಾಚಾರ, ಬ್ಲ್ಯಾಕ್​ ಮೇಲ್, ಪಿಎಚ್​ಡಿ ವಿದ್ಯಾರ್ಥಿನಿ ಆತ್ಮಹತ್ಯೆ – Kannada News | PhD Scholar Found Dead in Madhya Pradesh, Police Probe Allegations of Harassment

ಭೋಪಾಲ್, ಮೇ 20: ಪಿಎಚ್​ಡಿ ವಿದ್ಯಾರ್ಥಿನಿ ಆತ್ಮಹತ್ಯೆ(Suicide)ಗೆ ಶರಣಾಗಿರುವ ಘಟನೆ ಮಧ್ಯಪ್ರದೇಶದ ದಾಟಿಯಾಳದಲ್ಲಿ ನಡೆದಿದೆ. ವ್ಯಕ್ತಿಯೊಬ್ಬ ಆಕೆಗೆ ಮತ್ತು ಬರುವ ಔಷಧ ಕುಡಿಸಿ, ಅತ್ಯಾಚಾರವೆಸಗಿ, ಅಶ್ಲೀಲ ವಿಡಿಯೋಗಳನ್ನು ತೋರಿಸಿ ಬ್ಲ್ಯಾಕ್​ಮೇಲ್ ಮಾಡುತ್ತಿದ್ದ, ಇದಕ್ಕೆ ಮನನೊಂದು ಆಕೆ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ ಎನ್ನುವ ಮಾಹಿತಿಯನ್ನು ಪೊಲೀಸರು ನೀಡಿದ್ದಾರೆ. ಆರೋಪಿಯನ್ನು ಯೋಗೇಶ್ ರಾವತ್ ಎಂದು ಗುರುತಿಸಲಾಗಿದೆ. ಆ ಮಹಿಳೆ ಗ್ವಾಲಿಯರ್‌ನಲ್ಲಿದ್ದಾಗ ಪಿಎಚ್‌ಡಿ ಓದುತ್ತಿದ್ದಳು. ಪೊಲೀಸರ ಪ್ರಕಾರ, ಆಕೆಯ ಸ್ನೇಹಿತರೊಬ್ಬರ ಸಹೋದರ ಯೋಗೇಶ್ ರಾವತ್ ಜೊತೆ ಆಕೆಗೆ ಸ್ನೇಹ ಬೆಳೆಯಿತು. ರಾವತ್ ಆಕೆಯನ್ನು…

Read More

ಕಂಟ್ರಿ ಪಿಸ್ತೂಲ್ ತೋರಿಸಿ ಬಂಗಾರದ ಅಂಗಡಿ ದರೋಡೆ: ಬೆಚ್ಚಿ ಬೀಳಿಸೋ ದೃಶ್ಯ ಸಿಸಿ ಕ್ಯಾಮರಾದಲ್ಲಿ ಸೆರೆ – Kannada News | Two Masked Men Rob a Gold Shop in Halasangi, Vijayapur, Using a Country Made Pistol

ವಿಜಯಪುರ, ಜನವರಿ 26: ಮೈಸೂರು ಜಿಲ್ಲೆಯ ಹುಣಸೂರು ಬಸ್ ನಿಲ್ದಾಣದ ಹಿಂಭಾಗದ ಬೈಪಾಸ್‌ ರಸ್ತೆಯಲ್ಲಿರುವ ʻಸ್ಕೈ ಗೋಲ್ಡ್‌ ಅಂಡ್‌ ಡೈಮಂಡ್ಸ್ʼಗೆ ನುಗ್ಗಿದ್ದ ಗ್ಯಾಂಗ್‌, ಸಿಬ್ಬಂದಿಗೆ ಗನ್ ತೋರಿಸಿ 7 ಕೆಜಿ ಚಿನ್ನ ಮತ್ತು ವಜ್ರ ದರೋಡೆ ಮಾಡಿದ್ದ ಪ್ರಕರಣ ಮಾಸುವ ಮುನ್ನವೇ ರಾಜ್ಯದಲ್ಲಿ ಅಂತಹುದ್ದೇ ಮತ್ತೊಂದು ರಾಬರಿ ನಡೆದಿದೆ. ಹೆಲ್ಮೆಟ್ ಧರಿಸಿ ಬಂದಿದ್ದ ಇಬ್ಬರು ಕಂಟ್ರಿ ಪಿಸ್ತೂಲ್ ತೋರಿಸಿ ವಿಜಯಪುರ ಜಿಲ್ಲೆಯ ಚಡಚಣ ತಾಲೂಕಿನ ಹಲಸಂಗಿ ಗ್ರಾಮದ ಚಿನ್ನದ ಅಂಗಡಿಯಲ್ಲಿ ದರೋಡೆ ನಡೆಸಿದ್ದಾರೆ. ಗಾಳಿಯಲ್ಲಿ 2 ಸುತ್ತು…

Read More