Headlines

ಉಲ್ಟಾ ಹೊಡೆದ ಚೇತನ್ ಅಹಿಂಸ ವಿರುದ್ಧ ಸಾರಾ ಗೋವಿಂದು ವಾಗ್ದಾಳಿ – Kannada News | Sa Ra Govindu lashes out on Chetan Ahimsa for his duel personality

ನಟ ಚೇತನ್ ಅಹಿಂಸ, ಡಾ ರಾಜ್​ಕುಮಾರ್ (Dr Rajkumar) ಅವರ ಸಮಾಧಿ ಕುರಿತು ಮಾಡಿದ್ದ ಟೀಕೆಗೆ ಭಾರಿ ಆಕ್ರೋಶ ಎದುರಾಗಿತ್ತು. ನಿನ್ನೆ ಹಲವು ಕನ್ನಡಪರ ಸಂಘಟನೆಗಳು ಚೇತನ್ ಮನೆಗೆ ಮುತ್ತಿಗೆ ಹಾಕಿದ್ದವು. ಈ ವೇಳೆ ನಟ ಚೇತನ್ ಅಹಿಂಸ ಅವರು, ಕರವೇ ಅಧ್ಯಕ್ಷ ಶಿವರಾಮೇಗೌಡ ಎದುರು ಬಹಿರಂಗವಾಗಿ ಕ್ಷಮೆ ಕೇಳಿದ್ದರು. ಆದರೆ ಇಂದು (ಏಪ್ರಿಲ್ 26) ಮತ್ತೆ ತಮ್ಮ ಮಾತಿಗೆ ಉಲ್ಟಾ ಹೊಡೆದಿದ್ದು, ರಾಜ್​ಕುಮಾರ್ ಸಮಾಧಿ ಕುರಿತು ತಾವು ಆಡಿರುವ ಮಾತಿಗೆ ಬದ್ಧ ಎಂದಿದ್ದಾರೆ. ಅಲ್ಲದೆ, ನಿನ್ನೆ…

Read More

ಕಲಬುರಗಿ: ಮೊಬೈಲ್ ಟಾರ್ಚ್ ಬೆಳಕಿನಲ್ಲಿ KKRTC ಬಸ್ ಚಾಲನೆ, ಮೂವರು ಸಸ್ಪೆಂಡ್ – Kannada News | Driver And Two technical Staff Suspended Over kkrtc Bus Driver Drives With mobile torch at Kalaburagi

ಕಲಬುರಗಿ, (ಜುಲೈ 06): ಮೊಬೈಲ್ ಟಾರ್ಚ್​ ಬೆಳಕಿನಲ್ಲಿ ಕೆಕೆಆರ್‌ಟಿಸಿ ಬಸ್ (KKRTC Bus) ಚಾಲನೆ ಮಾಡಿದ ವಿಡಿಯೋ ವೈರಲ್ ಆಗಿದ್ದು, ಹೆಡ್​​ಲೈಟ್ ಇಲ್ಲದೇ ಮೊಬೈಲ್​ ಟಾರ್ಚ್​​​​ನಲ್ಲೇ ಬಸ್ ಚಲಾಯಿಸಿ ಪ್ರಯಾಣಿಕರ ಜೀವದೊಂದಿಗೆ ಚೆಲ್ಲಾಟವಾಡಿದ್ದಾರೆ ಎಂಬ ಆಕ್ರೋಗಳು ವ್ಯಕ್ತವಾಗಿವೆ. ಇದರ ಬೆನ್ನಲ್ಲೇ ಚಾಲಕ ಹಾಗೂ ಇಬ್ಬರು ತಾಂತ್ರಿಕ ಸಿಬ್ಬಂದಿಯನ್ನು ಸಸ್ಪೆಂಡ್ ಮಾಡಲಾಗಿದೆ. ತಾಂತ್ರಿಕ ಸಿಬ್ಬಂದಿ ಶಿವಾನಂದ, ಮೇಲ್ವಿಚಾರಕ ಬಸವರಾಜ ಹಾಗೂ ನಿರ್ಲಕ್ಷ್ಯ ವಹಿಸಿದ ಚಾಲಕ ಆಕಾಶ್​ನನ್ನ ಅಮಾನತು ಮಾಡಿ ಕಲಬುರಗಿ (Kalaburagi) ವಿಭಾಗೀಯ ನಿಯಂತ್ರಣಾಧಿಕಾರಿ ಇಂದು (ಜುಲೈ 06)…

Read More

ನಿರ್ದೇಶಕ ರೋಹಿತ್ ಶೆಟ್ಟಿ ತಲೆಗೆ ಬಾಟಲಿಯಿಂದ ಹೊಡೆದರಾ ದೀಪಿಕಾ ಪಡುಕೋಣೆ? – Kannada News | Deepika Padukone Viral Bottle Video: Chennai Express Prank with Rohit Shetty Explains Fake Blood

ಬಾಲಿವುಡ್ ಅಷ್ಟೇ ಅಲ್ಲದೆ, ಈಗ ದಕ್ಷಿಣ ಭಾರತದ ಸಿನಿಮಾಗಳಲ್ಲೂ ಮಿಂಚುತ್ತಿರುವ ನಟಿ ದೀಪಿಕಾ ಪಡುಕೋಣೆ ಸದಾ ಸುದ್ದಿಯಲ್ಲಿರುತ್ತಾರೆ. ಪ್ರಭಾಸ್ ನಟನೆಯ ‘ಕಲ್ಕಿ’ ಚಿತ್ರದ ಯಶಸ್ಸಿನ ಬೆನ್ನಲ್ಲೇ, ಈಗ ಅಟ್ಲೀ ನಿರ್ದೇಶನದ ಹಾಗೂ ಅಲ್ಲು ಅರ್ಜುನ್ ನಟನೆಯ ‘ರಾಕಾ’ ಚಿತ್ರಕ್ಕೂ ಇವರೇ ನಾಯಕಿ . ಸಿನಿಮಾ ಬದುಕು, ವೈಯಕ್ತಿಕ ಜೀವನದ ನಡುವೆ ದೀಪಿಕಾ ಅವರ ಹಳೆಯ ವಿಡಿಯೋವೊಂದು ಈಗ ಸಾಮಾಜಿಕ ಜಾಲತಾಣದಲ್ಲಿ ಭಾರಿ ಸದ್ದು ಮಾಡುತ್ತಿದೆ. ಏನಿದು ಬಾಟಲಿ ಪ್ರಹಸನ? ದೀಪಿಕಾ ಪಡುಕೋಣೆ ಮತ್ತು ಶಾರುಖ್ ಖಾನ್ ನಟನೆಯ…

Read More

ಸಲ್ಮಾನ್ ಖಾನ್ ಆಪ್ತನ ಜಿಮ್ ಮೇಲೆ ಬಿಷ್ಣೊಯಿ ಗ್ಯಾಂಗ್ ದಾಳಿ – Kannada News

ಕುಖ್ಯಾತ ಪಾತಕಿ ಲಾರೆನ್ಸ್ ಬಿಷ್ಣೋಯ್ (Lawrence Bishnoi) ಗ್ಯಾಂಗ್ ಮತ್ತೊಮ್ಮೆ ದಾಳಿ ನಡೆಸಿದೆ. ಈ ಬಾರಿ ಸಲ್ಮಾನ್ ಖಾನ್​ ಆಪ್ತರೊಬ್ಬರನ್ನು ಗುರಿ ಮಾಡಿ ದಾಳಿ ಮಾಡಲಾಗಿದೆ. ಬುಧವಾರ ರಾತ್ರಿ ದೆಹಲಿಯ ಪಶ್ಚಿಮ ವಿಹಾರ್ ಪ್ರದೇಶದಲ್ಲಿರುವ ಪ್ರಸಿದ್ಧ ಗಾಯಕ ಗುರು ರಂಧಾವ ಒಡೆತನದ ಫಿಟ್‌ನೆಸ್ ಸೆಂಟರ್ ಮೇಲೆ ಗುಂಡಿನ ದಾಳಿ ನಡೆದಿದೆ. ಬಿಷ್ಣೋಯ್ ಗ್ಯಾಂಗ್ ಸಾಮಾಜಿಕ ಜಾಲತಾಣಗಳಲ್ಲಿ ಪೋಸ್ಟ್‌ ಮಾಡುವ ಮೂಲಕ ಈ ದಾಳಿಯ ಹೊಣೆಗಾರಿಕೆಯನ್ನು ಹೊತ್ತುಕೊಂಡಿದೆ. ಬಿಷ್ಣೋಯ್ ಗ್ಯಾಂಗ್‌ನ ಸದಸ್ಯ ಎಂದು ಹೇಳಿಕೊಂಡಿರುವ ಅನಿಲ್ ಪಂಡಿತ್ ಎಂಬಾತ,…

Read More

ಊಟ ಮಾಡುವಾಗ ಅಥವಾ ಊಟವಾದ ಎಷ್ಟು ಹೊತ್ತಿನ ನಂತರ ನೀರು ಕುಡಿಯಬೇಕು? ಆಯುರ್ವೇದ ಏನು ಹೇಳುತ್ತದೆ?

ಆಹಾರ ಮತ್ತು ನೀರು (Water) ಎರಡೂ ಕೂಡ ದೇಹದ ಆರೋಗ್ಯಕ್ಕೆ ಅತ್ಯಂತ ಮುಖ್ಯ. ಆದರೆ ಅವುಗಳನ್ನು ಯಾವ ಸಮಯದಲ್ಲಿ, ಹೇಗೆ ಸೇವನೆ ಮಾಡಬೇಕು ಎಂದು ತಿಳಿದಿರಬೇಕಾಗುತ್ತದೆ. ಇಲ್ಲವಾದಲ್ಲಿ ಈ ರೀತಿಯ ಅಭ್ಯಾಸ ಆರೋಗ್ಯದ ಮೇಲೆ ಪರಿಣಾಮ ಬೀರುತ್ತದೆ. ಆಯುರ್ವೇದದ ಪ್ರಕಾರ, ಆಹಾರ ಸೇವಿಸುವ ಸಮಯ ಮತ್ತು ನೀರು ಕುಡಿಯುವ ಸಮಯವು ಜೀರ್ಣಕ್ರಿಯೆಗೆ (Digestion) ಬಹಳ ಮಹತ್ವದ್ದಾಗಿದ್ದು ಇದು ಸರಿಯಾಗಿ ಆಗದಿದ್ದಲ್ಲಿ ಹೊಟ್ಟೆ ಭಾರವಾಗುವುದು, ಅನಿಲ (ಗ್ಯಾಸ್) ಉಂಟಾಗುವುದು, ಅಜೀರ್ಣ, ಹೊಟ್ಟೆ ಉಬ್ಬುವುದು ಅಥವಾ ಆಸಿಡಿಟಿ ಮುಂತಾದ ಸಮಸ್ಯೆಗಳು…

Read More

ದೂರು ನೀಡಿದವರ ವಿರುದ್ಧವೇ ಪ್ರತಿದೂರು ನೀಡಿದ ಗಾಯಕಿ ಮಂಗ್ಲಿ

ತೆಲುಗು ಚಿತ್ರರಂಗದ (Tollywood) ಜನಪ್ರಿಯ ಗಾಯಕಿ ಮಂಗ್ಲಿ (Singer Mangli) ವಿರುದ್ಧ ಹೈದರಾಬಾದ್‌ನ ಪಂಜಗುಟ್ಟಾ ಪೊಲೀಸ್ ಠಾಣೆಯಲ್ಲಿ 10 ಕೋಟಿ ರೂಪಾಯಿಗಳ ವಂಚನೆಯ ಆರೋಪದ ಮೇಲೆ ಪ್ರಕರಣ ದಾಖಲಾಗಿದೆ. ವಕೀಲ ಸುಬ್ಬಾರಾವ್ ಎಂಬುವವರು ಈ ದೂರನ್ನು ನೀಡಿದ್ದು, ಮಂಗ್ಲಿ ಮತ್ತು ಅವರ ಸಹೋದರ ಶಿವ ಸೇರಿದಂತೆ ಇತರರು ಹಲವರಿಂದ ಹಣ ಪಡೆದು ಹೂಡಿಕೆದಾರರಿಗೆ ವಂಚಿಸಿದ್ದಾರೆ, ಹಣ ಮರಳಿ ಕೇಳಿದವರಿಗೆ ಬೆದರಿಕೆ ಹಾಕಿದ್ದಾರೆ ಎಂದು ಆರೋಪಿಸಿದ್ದಾರೆ. ಇದೀಗ ವಕೀಲ ಸುಬ್ಬರಾವ್ ವಿರುದ್ಧ ಗಾಯಕಿ ಮಂಗ್ಲಿ ಪ್ರತಿದೂರು ದಾಖಲಿಸಿದ್ದಾರೆ. ದೂರುದಾರ…

Read More

2 ದಿನ ವರ್ಕ್ ಫ್ರಂ ಹೋಂ, ಆನ್​ಲೈನ್ ಮೀಟಿಂಗ್, ವಾಹನ ರಹಿತ ದಿನ; ದೆಹಲಿ ಸರ್ಕಾರ ಮಹತ್ವದ ನಿರ್ಧಾರ – Kannada News | 2 day Work From Home Online Meeting no car day Delhi government takes measures after PM Modis appeal

ನವದೆಹಲಿ, ಮೇ 14: ಮೇ 15ರಿಂದ ಪ್ರಾರಂಭವಾಗಲಿರುವ “ನನ್ನ ಭಾರತ, ನನ್ನ ಕೊಡುಗೆ” ಅಭಿಯಾನದಡಿಯಲ್ಲಿ ದೆಹಲಿ ಸರ್ಕಾರ ಇಂದು ಹಲವಾರು ಪ್ರಮುಖ ಘೋಷಣೆಗಳನ್ನು ಮಾಡಿದೆ. ಸರ್ಕಾರಿ ನೌಕರರು ಇನ್ನು ವಾರದಲ್ಲಿ ಎರಡು ದಿನ ಮನೆಯಿಂದಲೇ ಕೆಲಸ (Work from Home) ಮಾಡಬೇಕು. ಖಾಸಗಿ ಸಂಸ್ಥೆಗಳು ಸಹ ಇದೇ ರೀತಿ ಕೆಲಸ ಮಾಡಲು ಸೂಚಿಸಲಾಗಿದೆ. ಹಾಗೇ ಪ್ರತಿ ಸೋಮವಾರ ಖಾಸಗಿ ವಾಹನದ ಬದಲು ಮೆಟ್ರೋ ಬಳಸಲು ಕರೆನೀಡಲಾಗಿದೆ. ಪ್ರಸ್ತುತ ಜಾಗತಿಕ ಪರಿಸ್ಥಿತಿಯನ್ನು ಗಮನದಲ್ಲಿಟ್ಟುಕೊಂಡು ಪ್ರಧಾನಿ ಮೋದಿ ಅವರು ಪೆಟ್ರೋಲ್…

Read More

ಮುಡಾ ಸೈಟ್ ಹಂಚಿಕೆ ಕೇಸ್ ಹಿನ್ನೆಲೆ ಯತೀಂದ್ರ ಖಾತೆ ಬದಲಾವಣೆಗೆ ಆಗ್ರಹ: ನೈಜ ಹೋರಾಟಗಾರರ ವೇದಿಕೆಯಿಂದ ಸಿಎಂಗೆ ಪತ್ರ – Kannada News | MUDA Row: NGO Demands CM DK Shivakumar to Change Minister Dr Yatindra’s Urban Development Portfolio

ಯತೀಂದ್ರ ಮತ್ತು ನೈಜ ಹೋರಾಟಗಾರರ ವೇದಿಕೆಯ ಪತ್ರದ ಪ್ರತಿImage Credit source: tv9 ಬೆಂಗಳೂರು, ಜುಲೈ 6: ಕರ್ನಾಟಕ ರಾಜಕಾರಣದಲ್ಲಿ ಮುಡಾ (ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ) ಬದಲಿ ನಿವೇಶನ ಹಂಚಿಕೆ ಹಗರಣದ ವಿವಾದ ಈಗ ಮತ್ತೆ ಮುನ್ನೆಲೆಗೆ ಬಂದಿದೆ. ಸಚಿವ ಡಾ. ಯತೀಂದ್ರ (Yathindra Siddaramaiah) ಅವರ ಖಾತೆ ಬದಲಾವಣೆಗೆ ತೀವ್ರ ಒತ್ತಡ ವ್ಯಕ್ತವಾಗಿದೆ. ನಗರಾಭಿವೃದ್ಧಿ ಇಲಾಖೆಯ ಸಚಿವರಾಗಿರುವ ಡಾ. ಯತೀಂದ್ರ ಅವರಿಗೆ ತಕ್ಷಣದಿಂದಲೇ ಜಾರಿಗೆ ಬರುವಂತೆ ಆ ಖಾತೆಯಿಂದ ಮುಕ್ತಿ ನೀಡಿ, ಬದಲಿ ಇಲಾಖೆಯನ್ನು ಹಂಚಿಕೆ…

Read More