‘ಜನ ನಾಯಗನ್’ ಸಿನಿಮಾದ 20 ನಿಮಿಷ ದೃಶ್ಯಕ್ಕೆ ಕತ್ತರಿ? ವಿಜಯ್ಗೆ ನಿರಾಸೆ – Kannada News | Producer agrees to cut 20 minutes scene from Jana Nayagan movie
ದಳಪತಿ ವಿಜಯ್ (Thalapathy Vijay) ನಟನೆಯ ಕೊನೆಯ ಸಿನಿಮಾ ಎನ್ನಲಾಗಿರುವ ‘ಜನ ನಾಯಗನ್’ ಸಾಕಷ್ಟು ಸಮಸ್ಯೆಗಳನ್ನು ಎದುರಿಸುತ್ತಿದೆ. ರೀಮೇಕ್ ಸಿನಿಮಾ ಆಗಿದ್ದರೂ ಸಹ ಸಿನಿಮಾಕ್ಕೆ ಸೆನ್ಸಾರ್ ಪ್ರಮಾಣ ಪತ್ರವನ್ನು ಸಿಬಿಎಫ್ಸಿ ನಿರಾಕರಿಸಿದ್ದು, ಚಿತ್ರತಂಡ ನ್ಯಾಯಾಲಯದ ಮೆಟ್ಟಿಲೇರಿದೆ. ಆದರೆ ನ್ಯಾಯಾಲಯದಲ್ಲಿ ಸಹ ಚಿತ್ರತಂಡಕ್ಕೆ ನ್ಯಾಯ ವಿಳಂಬ ಆಗುತ್ತಿದೆ. ತಮಿಳುನಾಡು ವಿಧಾನಸಭೆ ಚುನಾವಣೆ ಸಹ ಸನಿಹದಲ್ಲೇ ಇದ್ದು, ಒಂದೊಮ್ಮೆ ಚುನಾವಣೆ ಘೋಷಣೆ ಆಗಿಬಿಟ್ಟರೆ ಸಿನಿಮಾ ಬಿಡುಗಡೆ ಎರಡು ತಿಂಗಳು ಮುಂದೂಡಲೇ ಬೇಕಾಗುತ್ತದೆ. ಇದೇ ಕಾರಣಕ್ಕೆ ಇದೀಗ ಚಿತ್ರತಂಡವು, ಆಗಿದ್ದು ಆಗಲೆಂದು…