Headlines

‘ಡಕೈತ್’ ಸಿನಿಮಾದಿಂದ ಶ್ರುತಿ ಹಾಸನ್ ಹೊರಬಂದಿದ್ದೇಕೆ?

ಅಡಿವಿ ಶೇಷ್ (Adivi Sesh) ನಟನೆಯ ‘ಡಕೈತ್’ (Dacoit) ಸಿನಿಮಾ ಇದೇ ವಾರ ಬಿಡುಗಡೆ ಆಗಲಿದೆ. ಈ ಮೊದಲು ಈ ಸಿನಿಮಾ ‘ಟಾಕ್ಸಿಕ್’ ಎದುರು ಬಿಡುಗಡೆಗೆ ಸಜ್ಜಾಗಿತ್ತು. ಆದರೆ ಸಿನಿಮಾ ಬಿಡುಗಡೆಯನ್ನು ಮುಂದೂಡಿ ಈಗ ನಾಳೆ ಅಂದರೆ ಏಪ್ರಿಲ್ 10ಕ್ಕೆ ತೆರೆಗೆ ಬರಲಿದೆ. ಈ ಸಿನಿಮಾದ ಮೊದಲ ಪ್ರೋಮೊ ಬಿಡುಗಡೆ ಆದಾಗ ಸಿನಿಮಾ ನಾಯಕಿ ಆಗಿದ್ದಿದ್ದು ಶ್ರುತಿ ಹಾಸನ್. ಅವರು ನಟಿಸಿದ್ದ ಪ್ರೋಮೊ ಸಹ ಒಂದು ಬಿಡುಗಡೆ ಆಗಿತ್ತು. ಆದರೆ ಅದಾದ ಕೆಲ ತಿಂಗಳ ಬಳಿಕ ಶ್ರುತಿ…

Read More

Video: ಮಗಳ ತೊಡೆ ಮೇಲೆ ತಲೆಯಿಟ್ಟು ಹಾಯಾಗಿ ಮಲಗಿದ ತಂದೆ; ಎಷ್ಟು ಚಂದ ನೋಡಿ ಈ ಬಾಂಧವ್ಯ

ಹೆಣ್ಣು ಮಕ್ಕಳಿಗೆ ತಂದೆಯೆಂದರೆ (father) ಪ್ರಪಂಚ. ಅದೇ ರೀತಿ ತಂದೆಗೂ ತಮ್ಮ ಮುದ್ದು ಮಗಳೆಂದರೆ ಅದೇನೋ ವಿಶೇಷ ಪ್ರೀತಿ ಹಾಗೂ ಕಾಳಜಿ. ತಂದೆ ಮಗಳ ಬಾಂಧವ್ಯ ಸಾರುವ ವಿಡಿಯೋಗಳು ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗುತ್ತಿರುತ್ತವೆ. ಇದೀಗ ಇಲ್ಲೊಬ್ಬಳು ಮಗಳು ತನ್ನ ತಂದೆಗೆ ಎರಡನೇ ತಾಯಿಯಾಗಿದ್ದಾಳೆ. ತನ್ನ ತಂದೆಯನ್ನು ತೊಡೆ ಮೇಲೆ ಮಲಗಿಸಿಕೊಂಡಿದ್ದು, ತಂದೆ ತಲೆಯಿಟ್ಟು ನಿದ್ರಿಸುತ್ತಿರುವ ವಿಡಿಯೋ ವೈರಲ್ ಆಗಿದೆ. theiconictrolls ಹೆಸರಿನ ಇನ್ಸ್ಟಾಗ್ರಾಮ್ ಖಾತೆಯಲ್ಲಿ ತಂದೆ ಮಗಳ ಬಾಂಧವ್ಯ ಸಾರುವ ವಿಡಿಯೋ ಹಂಚಿಕೊಳ್ಳಲಾಗಿದೆ. ಈ ಕ್ಲಿಪಿಂಗ್‌ನಲ್ಲಿ…

Read More

ಹಿಂದೂ ದೇವರ ಹಾಡು ಹಾಡಿದಾಗ ಸುಹಾನಾಗೆ ಆದ ತೊಂದರೆಗಳು ಒಂದೆರಡಲ್ಲ; ಭದ್ರತೆ ಹೇಗಿತ್ತು?

ಗಾಯಕಿ ಸುಹಾನಾ ಸೈಯ್ಯದ್ (Suhana) ಅವರು ‘ಸರಿಗಮಪ’ ಮೂಲಕ ಫೇಮಸ್ ಆಗಿದ್ದಾರೆ. ಅವರು ಮುಸ್ಲಿಂ ಧರ್ಮದವರಾದರೂ ಹಿಂದೂ ಹಾಡನ್ನು ಹಾಡಿದ್ದರು. ಈ ಮೂಲಕ ಚರ್ಚೆ ಹುಟ್ಟುಹಾಕಿದ್ದರು. ಆ ಬಳಿಕ ಅವರು ರಂಗಭೂಮಿ ಕಲಾವಿದ ನಿತೀನ್ ಶಿವಾಂಶ್ ಜೊತೆ ಮದುವೆ ಆಗಿ ಮತ್ತಷ್ಟು ಚರ್ಚೆ ಹುಟ್ಟುಹಾಕಿದರು. ಅವರು ಮಂತ್ರ ಮಾಂಗಲ್ಯ ಮಾಡಿಕೊಂಡಿದ್ದಾರೆ. ಅವರಿಗೆ ಕೆಲವರು ಅಭಿನಂದನೆ ತಿಳಿಸಿದರೆ, ಇನ್ನೂ ಕೆಲವರು ವಿವಾಹವನ್ನು ಟೀಕೆ ಮಾಡಿದ್ದರು. ಭಕ್ತಿಗೀತೆ ಹಾಡಿದ ಬಳಿಕ ಆದ ಘಟನೆ ಬಗ್ಗೆ ಸುಹಾನಾ ಮಾಹಿತಿ ನೀಡಿದ್ದಾರೆ. ಸುಹಾನಾ…

Read More

ಶಾಂತಿ ಒಪ್ಪಂದದ ನಡುವೆಯೂ ಯುದ್ಧದ ಕಾರ್ಮೋಡ, ಒಪ್ಪಂದ ಮೀರಿದರೆ ಹುಷಾರ್, ಇರಾನ್ ಸುತ್ತ ಸೇನೆ ಜಮಾವಣೆ ಮಾಡಿದ ಟ್ರಂಪ್

ವಾಷಿಂಗ್ಟನ್, ಏಪ್ರಿಲ್ 09: ಅಮೆರಿಕ ಮತ್ತು ಇರಾನ್(Iran) ನಡುವಿನ ಕದನ ವಿರಾಮದ ಘೋಷಣೆಯ ಬೆನ್ನಲ್ಲೇ ಜಾಗತಿಕ ರಾಜಕೀಯದಲ್ಲಿ ಮತ್ತೆ ಯುದ್ಧದ ಕಾರ್ಮೋಡಗಳು ಕವಿಯತೊಡಗಿವೆ. ತಮ್ಮ ‘ಟ್ರುತ್ ಸೋಶಿಯಲ್’ ವೇದಿಕೆಯಲ್ಲಿ ಅಬ್ಬರಿಸಿದ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್, ಇರಾನ್ ಸರ್ಕಾರಕ್ಕೆ ಅತ್ಯಂತ ಗಂಭೀರ ಎಚ್ಚರಿಕೆ ನೀಡಿದ್ದಾರೆ.ಇರಾನ್ ಸುತ್ತಮುತ್ತ ಅಮೆರಿಕದ ನೌಕಾಪಡೆ, ಯುದ್ಧ ವಿಮಾನಗಳು ಮತ್ತು ಮಿಲಿಟರಿ ಸಿಬ್ಬಂದಿ ಸರ್ವ ಸನ್ನದ್ಧ ಸ್ಥಿತಿಯಲ್ಲಿ ಇರಲಿದ್ದಾರೆ ಎಂದು ಟ್ರಂಪ್ ಸ್ಪಷ್ಟಪಡಿಸಿದ್ದಾರೆ. ಹೆಚ್ಚುವರಿ ಮದ್ದುಗುಂಡು ಮತ್ತು ಅತ್ಯಾಧುನಿಕ ಶಸ್ತ್ರಾಸ್ತ್ರಗಳೊಂದಿಗೆ ನಮ್ಮ ಸೇನೆ ಇರಾನ್‌ನ…

Read More

Gold Rates: ನಿನ್ನೆ ಏರಿದ್ದ ಚಿನ್ನದ ಬೆಲೆ ಇವತ್ತು ಕುಸಿತ; ಬೆಳ್ಳಿಯೂ ಅಗ್ಗ

ಬೆಂಗಳೂರು, ಏಪ್ರಿಲ್ 9: ಚಿನ್ನ ಮತ್ತು ಬೆಳ್ಳಿ ಬೆಲೆಗಳು ಕಣ್ಣಾಮುಚ್ಚಾಳೆ ಆಟ ಆಡುತ್ತಿವೆ. ಅದರಲ್ಲೂ ಚಿನ್ನದ ಬೆಲೆಯಂತೂ ಪ್ರಕ್ಷುಬ್ಧತೆಯಿಂದ ಕೂಡಿದೆ. ನಿನ್ನ ಬಹುತೇಕ 500 ರೂಗಳಷ್ಟು ಏರಿದ್ದ ಚಿನ್ನದ ಬೆಲೆ (Gold Rates) ಇವತ್ತು 200ಕ್ಕೂ ಹೆಚ್ಚು ರೂಗಳಷ್ಟು ಕುಸಿತ ಕಂಡಿದೆ. ಆಭರಣ ಚಿನ್ನದ ಬೆಲೆ ಮತ್ತೆ 14,000 ರೂ ಗಡಿಯೊಳಗೆ ಇಳಿದಿದೆ. ಬೆಳ್ಳಿ ಬೆಲೆಯೂ ಇಂದು ಗುರುವಾರ ಕಡಿಮೆಗೊಂಡಿದೆ. ನಿನ್ನೆ 10 ರೂ ಇಳಿದಿದ್ದ ಇದರ ಬೆಲೆ ಇವತ್ತು 5 ರೂ ತಗ್ಗಿದೆ. ಭಾರತದಲ್ಲಿ ಸದ್ಯ…

Read More

ಪಾಕಿಸ್ತಾನದ ಮಧ್ಯಸ್ಥಿಕೆ ನಾಟಕಕ್ಕೆ ಇಸ್ರೇಲ್ ತಡೆ: ಪಾಕ್​ನ ವಿಶ್ವಾಸಾರ್ಹತೆ ಪ್ರಶ್ನಿಸಿದ ರಾಯಭಾರಿ ರುವೆನ್ ಅಜರ್

ವಾಷಿಂಗ್ಟನ್, ಏಪ್ರಿಲ್ 09: ಜಾಗತಿಕ ರಾಜಕೀಯದಲ್ಲಿ ಅಮೆರಿಕ ಮತ್ತು ಇರಾನ್(Iran) ನಡುವಿನ ಎರಡು ವಾರಗಳ ಕದನ ವಿರಾಮವು ಒಂದು ಅಚ್ಚರಿಯ ಬೆಳವಣಿಗೆಯಾಗಿ ಹೊರಹೊಮ್ಮಿದೆ. ಆದರೆ, ಈ ಶಾಂತಿ ಪ್ರಕ್ರಿಯೆಯ ಹಿಂದೆ ಯಾರ ಕೈವಾಡವಿದೆ ಎಂಬ ಪ್ರಶ್ನೆ ಈಗ ದೊಡ್ಡ ರಾಜತಾಂತ್ರಿಕ ಸಂಘರ್ಷಕ್ಕೆ ನಾಂದಿ ಹಾಡಿದೆ. ಪಾಕಿಸ್ತಾನವು ತನಗೆ ಬೇಕಾದಂತೆ ವಿಚಾರಗಳನ್ನು ತಿರುಚಿದೆ ಎನ್ನುವ ಆರೋಪ ಕೇಳಿಬಂದಿದೆ. ಲೆಬನಾನ್ ಮೇಲೆ ದಾಳಿ ಮಾಡಬೇಡಿ ಎನ್ನುವ ಷರತ್ತು ಕೂಡ ಅಮೆರಿಕಕ್ಕೆ ಇರಾನ್ ನೀಡಿದ್ದ ಷರತ್ತುಗಳ ಪಟ್ಟಿಯಲ್ಲಿತ್ತು ಎಂದು ಇರಾನ್ ಹೇಳಿದೆ…

Read More

Scorpio Horoscope: ವೃಶ್ಚಿಕ ರಾಶಿಯವರೇ ಗಮನಿಸಿ; ಈ ತಿಂಗಳು ನೀವು ಅಪ್ಪಿತಪ್ಪಿಯೂ ಈ ತಪ್ಪು ಮಾಡಬೇಡಿ!

ವೃಶ್ಚಿಕ ರಾಶಿಯವರಿಗೆ 2026ರ ಏಪ್ರಿಲ್ ತಿಂಗಳ ಭವಿಷ್ಯವು ಮಿಶ್ರ ಫಲಿತಾಂಶಗಳಿಂದ ಕೂಡಿದೆ. ಗ್ರಹಗತಿಗಳ ಬದಲಾವಣೆಗಳು ನಿಮ್ಮ ಜೀವನದ ವಿವಿಧ ಆಯಾಮಗಳ ಮೇಲೆ ಪ್ರಭಾವ ಬೀರಲಿವೆ. ಈ ತಿಂಗಳು ನಿಮ್ಮ ಆರ್ಥಿಕ ಸ್ಥಿತಿಯಲ್ಲಿ ಏರಿಳಿತಗಳಿರುತ್ತವೆ. ತಿಂಗಳ ಆರಂಭದಲ್ಲಿ ಆದಾಯದ ಹರಿವು ಉತ್ತಮವಾಗಿರುತ್ತದೆ. ಹಳೆಯ ಹೂಡಿಕೆಗಳಿಂದ ಲಾಭ ಬರುವ ಸಾಧ್ಯತೆಯಿದೆ. ರಾಹು ಮತ್ತು ಕೇತುಗಳ ಪ್ರಭಾವದಿಂದ ಅನಿರೀಕ್ಷಿತ ಖರ್ಚುಗಳು ಎದುರಾಗಬಹುದು. ವಿಶೇಷವಾಗಿ ಆರೋಗ್ಯ ಅಥವಾ ಮನೆಯ ಶುಭ ಕಾರ್ಯಗಳಿಗಾಗಿ ಹಣ ವ್ಯಯವಾಗಬಹುದು. ಅನಗತ್ಯ ಹೂಡಿಕೆಗಳಿಂದ ದೂರವಿರಿ. ಶೇರು ಮಾರುಕಟ್ಟೆಯಲ್ಲಿ ಎಚ್ಚರಿಕೆ…

Read More

4 ದಿನ ಕಾಡಿನಲ್ಲಿದ್ದ ಯುವತಿ ಮೇಲೆ ಈಗ ನಕ್ಸಲ್ ಶಂಕೆ! ಈ ಬಗ್ಗೆ ಶರಣ್ಯ ಹೇಳಿದ್ದೇನು?

ಬೆಂಗಳೂರು, ಏ.9: ಕೊಡಗಿನ ತಡಿಯಂಡಮೋಳ್ ಬೆಟ್ಟದಲ್ಲಿ ಟ್ರೆಕ್ಕಿಂಗ್‌ಗೆ ತೆರಳಿ ದಾರಿ ತಪ್ಪಿದ್ದ ಕೇರಳದ ಶರಣ್ಯ ಎಂಬ ಯುವತಿ, ನಾಲ್ಕು ದಿನಗಳ ಕಾಲ ದಟ್ಟ ಕಾಡಿನಲ್ಲಿ ಕಳೆದ ನಂತರ ಸುರಕ್ಷಿತವಾಗಿ ಹೊರಬಂದಿದ್ದಾರೆ. ಆದರೆ, ಈ ಘಟನೆ ಈಗ ವಿವಾದಕ್ಕೆ ಈಡಾಗಿದೆ. ಆಕೆ ಪಬ್ಲಿಸಿಟಿಗಾಗಿ ಹೀಗೆ ಮಾಡಿದ್ದಾರೆ ಎಂಬ ಆರೋಪಗಳು ಕೇಳಿಬರುತ್ತಿವೆ. ಇದಕ್ಕೆ ಪ್ರತಿಕ್ರಿಯಿಸಿರುವ ಶರಣ್ಯ, “ನಾನು ಪ್ರಾಣ ಉಳಿಸಿಕೊಳ್ಳಲು ಝರಿಗಳ ನೀರು ಕುಡಿದು ಬದುಕಿದೆನೇ ಹೊರತು, ಯಾವುದೇ ನಾಟಕ ಮಾಡಿಲ್ಲ” ಎಂದು ಸ್ಪಷ್ಟಪಡಿಸಿದ್ದಾರೆ. ದಟ್ಟ ಕಾಡು ಮತ್ತು ಬೆಟ್ಟಗುಡ್ಡಗಳ…

Read More

Women’s Reservation Bill 2026: ಮಹಿಳಾ ಸಬಲೀಕರಣದತ್ತ ಐತಿಹಾಸಿಕ ಹೆಜ್ಜೆ: 2029 ರಿಂದ ಶೇ. 33 ಮಹಿಳಾ ಮೀಸಲಾತಿ ಜಾರಿ, ವಿಶೇಷ ಅಧಿವೇಶನಕ್ಕೆ ಕೇಂದ್ರದ ಕರೆ

ನವದೆಹಲಿ, ಏಪ್ರಿಲ್ 09: ದೇಶದ ರಾಜಕೀಯ ಇತಿಹಾಸದಲ್ಲಿ ಮಹಿಳೆಯರ ಪಾಲ್ಗೊಳ್ಳುವಿಕೆಯನ್ನು ಹೆಚ್ಚಿಸುವ ನಿಟ್ಟಿನಲ್ಲಿ ಕೇಂದ್ರ ಸರ್ಕಾರ ಮಹತ್ವದ ಹೆಜ್ಜೆ ಇರಿಸಿದೆ. 2029 ರಿಂದ ಲೋಕಸಭೆ ಮತ್ತು ರಾಜ್ಯ ವಿಧಾನಸಭೆಗಳಲ್ಲಿ ಶೇಕಡಾ 33 ರಷ್ಟು ಮಹಿಳಾ ಮೀಸಲಾತಿಯನ್ನು ಜಾರಿಗೆ ತರಲು ಅಗತ್ಯವಿರುವ ಮೂರು ಪ್ರಮುಖ ಮಸೂದೆಗಳಿಗೆ ಕೇಂದ್ರ ಸಚಿವ ಸಂಪುಟ ಅನುಮೋದನೆ ನೀಡಿದೆ. ಬಜೆಟ್ ಅಧಿವೇಶನ ವಿಸ್ತರಣೆ: ಪ್ರಧಾನಿ ಮೋದಿ ಘೋಷಣೆ ಈ ಕುರಿತು ಭಾನುವಾರ (ಏಪ್ರಿಲ್ 5, 2026) ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, 2023 ರಲ್ಲಿ…

Read More

ಬೆಂಗಳೂರು NIA ವಿಶೇಷ ನ್ಯಾಯಾಲಯದಿಂದ ಮಹತ್ವದ ತೀರ್ಪು: ಮಾನವ ಕಳ್ಳಸಾಗಣೆ ಜಾಲದ ನಾಲ್ವರಿಗೆ ಜೈಲು ಶಿಕ್ಷೆ!

ಬೆಂಗಳೂರು, ಏ.9: ಬೆಂಗಳೂರಿನ ಎನ್‌ಐಎ (NIA) ವಿಶೇಷ ನ್ಯಾಯಾಲಯವು ಅಂತರಾಷ್ಟ್ರೀಯ ಮಾನವ ಕಳ್ಳಸಾಗಣೆ ಜಾಲದಲ್ಲಿ ಭಾಗಿಯಾಗಿದ್ದ ನಾಲ್ವರು ಬಾಂಗ್ಲಾದೇಶಿ ಪ್ರಜೆಗಳಿಗೆ 3 ವರ್ಷಗಳ ಕಠಿಣ ಜೈಲು ಶಿಕ್ಷೆ (Rigorous Imprisonment) ಮತ್ತು ತಲಾ 20,000 ರೂ. ದಂಡ ವಿಧಿಸಿ ಆದೇಶಿಸಿದೆ. ಜಾಕಿರ್ ಖಾನ್, ಬಾದಲ್ ಹೌಲಾದರ್, ಕಬೀರ್ ತಾಲುಕ್ದಾರ್ ಮತ್ತು ಮೊಹಮ್ಮದ್ ಬಚ್ಚು ಘರಾಮಿ ದೋಷಿಗಳು ಎಂದು ಹೇಳಿದ್ದಾರೆ. ಇವರು ಬೆನಾಪೋಲ್ ಮತ್ತು ಅಖೌರಾ ಮೂಲಕ ಅಕ್ರಮವಾಗಿ ಭಾರತ ಪ್ರವೇಶಿಸಿದ್ದರು. ನಕಲಿ ಭಾರತೀಯ ಗುರುತಿನ ಚೀಟಿಗಳನ್ನು ಸೃಷ್ಟಿಸಿ…

Read More