Headlines

ತವರಿನಲ್ಲಿ ‘ಶತಕ’ ಪೂರೈಸಿದ ಟೀಮ್ ಇಂಡಿಯಾ

ಟೀಮ್ ಇಂಡಿಯಾ, ನ್ಯೂಝಿಲೆಂಡ್ ವಿರುದ್ಧ 2ನೇ ಟಿ20 ಪಂದ್ಯದಲ್ಲಿ ಕಣಕ್ಕಿಳಿಯುವ ಮೂಲಕ ಹೊಸ ವಿಶ್ವ ದಾಖಲೆ ನಿರ್ಮಿಸಿದೆ. ರಾಯ್​ಪುರದಲ್ಲಿ ನಡೆದ ಈ ಪಂದ್ಯದಲ್ಲಿ ಟಾಸ್ ಗೆದ್ದ ಟೀಮ್ ಇಂಡಿಯಾ ನಾಯಕ ಸೂರ್ಯಕುಮಾರ್ ಯಾದವ್ ಬೌಲಿಂಗ್ ಆಯ್ದುಕೊಂಡಿದ್ದರು. ಅದರಂತೆ ಶಹೀರ್ ವೀರ್ ನಾರಣಾಯಣ್ ಸಿಂಗ್ ಮೈದಾನದಲ್ಲಿ ಟೀಮ್ ಇಂಡಿಯಾ ಕಣಕ್ಕಿಳಿಯುತ್ತಿದ್ದಂತೆ ತವರಿನಲ್ಲಿ 100 ಟಿ20 ಪಂದ್ಯಗಳನ್ನಾಡಿದ ವಿಶೇಷ ದಾಖಲೆಯನ್ನು ತಮ್ಮದಾಗಿಸಿಕೊಂಡರು. ಈ ಮೂಲಕ ಈ ಸಾಧನೆ ಮಾಡಿದ ವಿಶ್ವದ 3ನೇ ತಂಡವೆಂಬ ಹೆಗ್ಗಳಿಕೆಗೂ ಪಾತ್ರರಾದರು. ಇದಕ್ಕೂ ಮುನ್ನ ಟಿ20…

Read More

ಜಿಬಿಎ ಚುನಾವಣೆ: ಹೈಕಮಾಂಡ್​​ ಅಂಗಳದಲ್ಲಿದ್ಯಾ BJP, JDS ಮೈತ್ರಿ ಭವಿಷ್ಯ?

ಬೆಂಗಳೂರು, ಏಪ್ರಿಲ್​​ 07: ಗ್ರೇಟರ್​​ ಬೆಂಗಳೂರು ಪ್ರಾಧಿಕಾರದ (GBA) ಚುನಾವಣೆಗೆ ಬಿಜೆಪಿ ಮತತು ಜೆಡಿಎಸ್​​ ಮೈತ್ರಿಯಾಗಿಯೇ ಕಣಕ್ಕೆ ಇಳಿಯುತ್ತವೆಯೇ ಎಂಬ ಪ್ರಶ್ನೆಗೆ ವಿಪಕ್ಷ ನಾಯಕ ಆರ್​​. ಅಶೋಕ್​​ ಉತ್ತರಿಸಿದ್ದು, ಮೈತ್ರಿ ಕುರಿತ ಯಾವುದೇ ನಿರ್ಧಾರ ತಮ್ಮ ಕೈಯಲ್ಲಿಲ್ಲ. ಆ ತಿರ್ಮಾನ ನಮ್ಮ ರಾಷ್ಟ್ರೀಯ ಅಧ್ಯಕ್ಷರಿಗೆ ಸೇರಿದ್ದು. ಮೈತ್ರಿ ಇದೆ ಎಂದರೆ ಇದೆ, ಇಲ್ಲ ಎಂದರೆ ಇಲ್ಲ. ಆದರೆ, ನಾವು ಚುನಾವಣೆಗೆ ಸಿದ್ಧತೆ ಮಾಡಿಕೊಂಡಿದ್ದೇವೆ ಎಂದು ಅವರು ತಿಳಿಸಿದ್ದಾರೆ. ಜೆಡಿಎಸ್ ಶೇಕಡಾ 50ರಷ್ಟು ಸ್ಥಾನಗಳನ್ನು ಕೇಳುತ್ತಿದೆ ಎಂಬ ಮಾತುಗಳ…

Read More

ಬೆಂಗಳೂರು: ನಮ್ಮ ಮೆಟ್ರೋ ಪ್ರಯಾಣಿಕರಿಗೆ ಡಬಲ್​​ ಗುಡ್​​ನ್ಯೂಸ್​​ – Kannada News | Namma Metro Pink and Blue Lines will open in 2026

ಬೆಂಗಳೂರು, ಜನವರಿ 06: ಕೊರೊನಾ ಬಳಿಕ ಕೊಂಚ ಇಳಿಕೆಯಾಗಿದ್ದ ಬೆಂಗಳೂರಿನ ಟ್ರಾಫಿಕ್​​ ಸಮಸ್ಯೆ ಈಗ ಮತ್ತೆ ಹಳೆಯ ಸ್ಥಿತಿಗೆ ಮರಳಿದೆ. ಪ್ರತಿದಿನ ವಾಹನ ದಟ್ಟಣೆ ಸಮಸ್ಯೆಗೆ ಸಿಲುಕಿ ಒದ್ದಾಡುತ್ತಿರುವ ಸಿಲಿಕಾನ್​ ಸಿಟಿ ಮಂದಿಗೆ ನಮ್ಮ ಮೆಟ್ರೋ ಗುಡ್​​ನ್ಯೂಸ್​​ ಕೊಟ್ಟಿದ್ದು, ಒಂದಲ್ಲ ಎರಡು ಹೊಸ ಮಾರ್ಗಗಗಳು ಈ ವರ್ಷದಿಂದಲೇ ಕಾರ್ಯಾರಂಭ ಮಾಡಲಿವೆ. ಈಗಾಗಲೇ ಸೇವೆ ಒದಗಿಸುತ್ತಿರುವ ಹಸಿರು, ಗುಲಾಬಿ ಮತ್ತು ಹಳದಿ ಮಾರ್ಗಗಳ ಜೊತೆ ಮತ್ತೆರಡು ಮಾರ್ಗಗಳಲ್ಲಿ ಮೆಟ್ರೋ ರೈಲುಗಳ ಸಂಚಾರದಿಂದ ನಗರದ ಟ್ರಾಫಿಕ್​​ ಸಮಸ್ಯೆಗೆ ಬಹುತೇಕ ಪರಿಹಾರ…

Read More

ONGC Scholarship 2026: ಒಎನ್‌ಜಿಸಿ ವಿದ್ಯಾರ್ಥಿವೇತನ; ಅರ್ಹ ವಿದ್ಯಾರ್ಥಿಗಳಿಗೆ ವಾರ್ಷಿಕ 48,000ರೂ. ಆರ್ಥಿಕ ನೆರವು – Kannada News | ONGC Scholarship 2026: Apply Now! Eligibility, Last Date and Benefits for UG/PG Students

ತೈಲ ಮತ್ತು ನೈಸರ್ಗಿಕ ಅನಿಲ ನಿಗಮವು (ONGC) ಆರ್ಥಿಕವಾಗಿ ಹಿಂದುಳಿದ ಮತ್ತು ಪ್ರತಿಭಾವಂತ ವಿದ್ಯಾರ್ಥಿಗಳಿಗಾಗಿ 2026ನೇ ಸಾಲಿನ ವಿದ್ಯಾರ್ಥಿವೇತನವನ್ನು ಘೋಷಿಸಿದೆ. ಈ ಯೋಜನೆಯಡಿ ಎಸ್‌ಸಿ/ಎಸ್‌ಟಿ ಅಭ್ಯರ್ಥಿಗಳಿಗೆ 1000, ಒಬಿಸಿ ಅಭ್ಯರ್ಥಿಗಳಿಗೆ 500 ಮತ್ತು ಸಾಮಾನ್ಯ ವರ್ಗದ ಅಭ್ಯರ್ಥಿಗಳಿಗೆ 500 ವಿದ್ಯಾರ್ಥಿವೇತನಗಳನ್ನು ಮೀಸಲಿಡಲಾಗಿದೆ. ವಿಶೇಷವಾಗಿ ಮಹಿಳಾ ಸಬಲೀಕರಣಕ್ಕೆ ಒತ್ತು ನೀಡಲಾಗಿದ್ದು, ಎಲ್ಲಾ ವಿಭಾಗಗಳಲ್ಲಿ ಶೇಕಡಾ 50 ರಷ್ಟು ವಿದ್ಯಾರ್ಥಿವೇತನವನ್ನು ವಿದ್ಯಾರ್ಥಿನಿಯರಿಗೇ ಹಂಚಿಕೆ ಮಾಡಲಾಗುತ್ತದೆ. ಪ್ರಸ್ತುತ ಸಂಬಂಧಿತ ವಿಭಾಗಗಳಲ್ಲಿ ಯುಜಿ (UG) ಮತ್ತು ಪಿಜಿ (PG) ಕೋರ್ಸ್‌ಗಳನ್ನು ಕಲಿಯುತ್ತಿರುವ ಆಸಕ್ತ…

Read More

IND vs SA: ಭಾರತ- ಆಫ್ರಿಕಾ ನಡುವೆ ಸೂಪರ್ 8 ಫೈಟ್; ಮುಖಾಮುಖಿ ದಾಖಲೆ ಹೇಗಿದೆ? – Kannada News | India vs South Africa: T20 World Cup Super 8 Clash & Dominant Head to Head Record

2026 ರ ಟಿ20 ವಿಶ್ವಕಪ್​ನ (T20 World Cup 2026) ಗುಂಪು ಹಂತದಲ್ಲಿ ಸೂರ್ಯಕುಮಾರ್ ಯಾದವ್ ನಾಯಕತ್ವದಲ್ಲಿ ಆತಿಥೇಯ ಟೀಂ ಇಂಡಿಯಾ ಅದ್ಭುತ ಪ್ರದರ್ಶನ ನೀಡಿ ಆಡಿದ ನಾಲ್ಕು ಪಂದ್ಯಗಳನ್ನು ಗೆದ್ದುಕೊಂಡಿತು. ಮೊದಲು ಸುತ್ತಿನಲ್ಲಿ ಯುಎಸ್ಎ, ನಮೀಬಿಯಾ, ಪಾಕಿಸ್ತಾನ ಮತ್ತು ನೆದರ್ಲ್ಯಾಂಡ್ಸ್ ತಂಡಗಳು ಸೋಲಿಸುವ ಮೂಲಕ ಭಾರತ ತಂಡ 4 ಸೂಪರ್ 8 ಸುತ್ತಿಗೆ ಅರ್ಹತೆ ಪಡೆದುಕೊಂಡಿದೆ. ಈಗ ಟೀಂ ಇಂಡಿಯಾ ವಿಶ್ವಕಪ್ ಟ್ರೋಫಿಯತ್ತ ಒಂದು ಹೆಜ್ಜೆ ಮುಂದಿಡಲು ಸಿದ್ಧವಾಗಿದ್ದು, ಸೂಪರ್ 8 ಅಭಿಯಾನದ ತನ್ನ ಮೊದಲ…

Read More

ಸಿದ್ದರಾಮಯ್ಯನವರಿಂದ ದೂರ: ವಿಡಿಯೋ ವೈರಲ್ ಬಗ್ಗೆ ಸ್ಪಷ್ಟನೆ ನೀಡಿದ ಸತೀಶ್ ಜಾರಕಿಹೊಳಿ – Kannada News | Minister Satish Jarkiholi clarify about distance maintained from Siddaramaiah

ಬೆಂಗಳೂರು, (ಜುಲೈ 08): ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಸಚಿವ ಸತೀಶ್ ಜಾರಕಿಹೊಳಿ ನಡುವಿನ ಸಂಬಂಧ ಹಳಸಿದೆ ಎನ್ನುವ ಮಾತುಗಳು ಕೇಳಿಬರುತ್ತಿವೆ.ಡಿಕೆ ಶಿವಕುಮಾರ್ ಅವರು ಸಿಎಂ ಆಗುತ್ತಿದ್ದಂತೆಯೇ ಸಿದ್ದರಾಮಯ್ಯ ಮತ್ತು ಸತೀಶ್ ಜಾರಕಿಹೊಳಿ ನಡುವೆ ಆತ್ಮೀಯತೆ ಇಲ್ಲ. ಅಂತರ ಕಾಯ್ದುಕೊಳ್ಳುತ್ತಿದ್ದಾರೆ ಎನ್ನವ ಗುಸು ಗುಸು ರಾಜ್ಯ ರಾಜಖಾರಣದಲ್ಲಿ ಹರಿದಾಡುತ್ತಿದೆ.  ಸಿದ್ದರಾಮಯ್ಯನವರನ್ನು ಸಿಎಂ ಕುರ್ಚಿಯಿಂದ ಕೆಳಗಿಳಿಸಲು ಸತೀಶ್ ಜಾರಕಿಹೊಳಿ ಅವರು ಸಹಿ ಸಂಗ್ರಹಿಸಿದ್ದರು ಎನ್ನುವ ಆರೋಪ ಕೇಳಿಬಂದಿದ್ದವು. ಇದು ಇಬ್ಬರು ನಾಯಕರ ಅಭಿಮಾನಿಗಳ ನಡುವೆ ಸಾಮಾಜಿಕ ಜಾಲತಾಣಗಳಲ್ಲಿ ಭಾರೀ…

Read More

ದೈವದ ಅನುಕರಣೆ ಮಾಡಿದ ಬಾಲಿವುಡ್ ಸ್ಟಾರ್ ರಣ್ವೀರ್​​ಗೆ ಹೈಕೋರ್ಟ್ ತರಾಟೆ – Kannada News | Karnataka High Court slams Ranveer Singh in hurting religious sentiment case

‘ಕಾಂತಾರ’ (Kantara) ಸಿನಿಮಾ ಕರಾವಳಿಯ ಸಂಸ್ಕೃತಿ, ದೈವದ ಆಚರಣೆಗಳನ್ನು ವಿಶ್ವದಾದ್ಯಂತ ಪರಿಚಯ ಮಾಡಿಸಿತು. ಆದರೆ ಸಿನಿಮಾ ನೋಡಿದ ಮಂದಿ ಕೆಲವರು ಹಾಸ್ಯಕ್ಕಾಗಿ, ಇನ್ನಿತರೆ ಕಾರಣಗಳಿಗಾಗಿ ದೈವದ ಅನುಕರಣೆ ಮಾಡಲು ಆರಂಭಿಸಿದರು. ಇದರಿಂದ ದೈವವನ್ನು ನಂಬುವ ಭಕ್ತರ ಭಾವನೆಗಳಿಗೆ ಧಕ್ಕೆ ಆಗುತ್ತದೆ ಎಂದು ಚಿತ್ರತಂಡ ಹೇಳಿದರೂ ಸಹ ಅನುಕರಣೆ ನಿಂತಿಲ್ಲ. ಕೆಲ ತಿಂಗಳ ಹಿಂದೆ ಬಾಲಿವುಡ್ ಸ್ಟಾರ್ ನಟ ರಣ್​​ವೀರ್ ಸಿಂಗ್ ಸಹ ಗೋವಾ ಸಿನಿಮೋತ್ಸವದಲ್ಲಿ ವೇದಿಕೆ ಮೇಲೆ ಅಸಭ್ಯವಾಗಿ ದೈವದ ಅನುಕರಣೆ ಮಾಡಿದ್ದರು. ಬಳಿಕ ಕ್ಷಮೆ ಕೇಳಿದರಾದರೂ…

Read More

Bengaluru Air Quality: ಇನ್ನೂ ಕಳಪೆ ಮಟ್ಟಕ್ಕಿಳಿದ ಬೆಂಗಳೂರಿನ ವಾಯು ಗುಣಮಟ್ಟ!

ಬೆಂಗಳೂರು, ಮಾರ್ಚ್​ 09: ರಾಜ್ಯದೆಲ್ಲೆಡೆ ಬಿಸಿಲಿನ ಬೇಗೆ ಹೆಚ್ಚಾಗಿದ್ದು ಈ ತಿಂಗಳು ಪೂರ್ತಿ ಇದೇ ವಾತಾವರಣ ಇರಲಿದೆ. ಈ ನಡುವೆ ಬೆಂಗಳೂರು ಸೇರಿದಂತೆ ರಾಜ್ಯದ ಹಲವೆಡೆ ವಾಯು ಗುಣಮಟ್ಟ (Bengaluru Air Quality) ಕುಸಿತ ಕಂಡಿದೆ. ದಿನದಿಂದ ದಿನಕ್ಕೆ ಹೆಚ್ಚುತ್ತಿರುವ ಈ ನಗರಗಳ ಗಾಳಿಯ ಕಳಪೆ ಗುಣಮಟ್ಟ, ಸ್ಥಳೀಯರಲ್ಲಿ ಆತಂಕ ಮೂಡಿಸಿದೆ. ಬೆಂಗಳೂರು, ಕಲಬುರ್ಗಿ, ಬಳ್ಳಾರಿ ಸೇರಿದಂತೆ ಹಲವೆಡೆ ಇಂದು ವಾಯು ಗುಣಮಟ್ಟ 150 ದಾಟಿದೆ. ಕೆಲ ದಿನಗಳ ಹಿಂದೆಯಷ್ಟೇ ತೀವ್ರ ಕಳಪೆ ಮಟ್ಟಕ್ಕೆ ಇಳಿದಿದ್ದ ಬೆಂಗಳೂರಿನ…

Read More

Virat Kohli: ವಿರಾಟ್ ಕೊಹ್ಲಿ ಇರಬೇಕಿತ್ತು..! – Kannada News | Virat Kohli was the highest individual scorer in India successfull chase

ಟಿ20 ವಿಶ್ವಕಪ್​ ಇತಿಹಾಸದಲ್ಲಿ ಟೀಮ್ ಇಂಡಿಯಾ 150 ಕ್ಕಿಂತ ಹೆಚ್ಚಿನ ಸ್ಕೋರ್ ಬೆನ್ನತ್ತಿ ಗೆದ್ದಿರುವುದು ಕೇವಲ 3 ಬಾರಿ ಮಾತ್ರ. ಈ ಮೂರು ಗೆಲುವಿನ ರೂವಾರಿ ವಿರಾಟ್ ಕೊಹ್ಲಿ. ಹೀಗಾಗಿ ಸೌತ್ ಆಫ್ರಿಕಾ ವಿರುದ್ಧದ ಹೀನಾಯ ಸೋಲಿನ ಬೆನ್ನಲ್ಲೇ ವಿರಾಟ್ ಕೊಹ್ಲಿ ಇರಬೇಕಿತ್ತು ಎಂಬ ಮಾತುಗಳು ಕೇಳಿ ಬರಲಾರಂಭಿಸಿದೆ. ಭಾರತ ತಂಡವು ಮೊದಲ ಬಾರಿಗೆ ಟಿ20 ವಿಶ್ವಕಪ್​ನಲ್ಲಿ 150+ ಸ್ಕೋರ್ ಚೇಸ್ ಮಾಡಿ ಗೆದ್ದಿದ್ದು 2014 ರಲ್ಲಿ. ಶೇರೆ ಬಾಂಗ್ಲಾ ನ್ಯಾಷನಲ್ ಸ್ಟೇಡಿಯಂನಲ್ಲಿ ನಡೆದಿದ್ದ 2014ರ ಟಿ20…

Read More

ನಮ್ಮ ಪ್ರಜೆಗಳ ರಕ್ಷಣೆಗಾಗಿ ಒಗ್ಗಟ್ಟಾಗಿ ನಿಲ್ಲುತ್ತೇವೆ; ಇರಾನ್‌ ವಿರುದ್ಧ ಅಮೆರಿಕ ಮುಂತಾದ 7 ದೇಶಗಳ ಜಂಟಿ ಹೇಳಿಕೆ – Kannada News | Joint Statement on Irans Missile and Drone Attacks in Qatar, UAE, Kuwait, Bahraine and Other States

ನವದೆಹಲಿ, ಮಾರ್ಚ್ 2: ಇಸ್ರೇಲ್ ಜೊತೆಗಿನ ವೈಷಮ್ಯದ ಬಳಿಕ ಇದೀಗ ಕತಾರ್, ಬಹ್ರೇನ್, ಯುಎಇ ಮುಂತಾದ ಅರಬ್ ದೇಶಗಳ ಮೇಲೆ ಇರಾನ್ ದಾಳಿ (Iran Attack) ನಡೆಸಿದೆ. ಇದರಿಂದ ಅಲ್ಲಿನ ಜನಜೀವನ ಅಸ್ತವ್ಯಸ್ತವಾಗಿದೆ. ಹೀಗಾಗಿ, ಅಮೆರಿಕ ಸೇರಿದಂತೆ ಈ 7 ದೇಶಗಳು ಜಂಟಿಯಾಗಿ ಪತ್ರಿಕಾ ಹೇಳಿಕೆ ಬಿಡುಗಡೆ ಮಾಡಿವೆ. “ನಮ್ಮ ನಾಗರಿಕರು, ಸಾರ್ವಭೌಮತ್ವ ಮತ್ತು ಪ್ರದೇಶದ ರಕ್ಷಣೆಯಲ್ಲಿ ನಾವು ಒಗ್ಗಟ್ಟಿನಿಂದ ನಿಲ್ಲುತ್ತೇವೆ. ಈ ದಾಳಿಗಳ ಸಂದರ್ಭದಲ್ಲಿ ನಮ್ಮ ಆತ್ಮರಕ್ಷಣೆಯನ್ನು ಮಾಡಿಕೊಳ್ಳಲು ಬದ್ಧರಾಗಿದ್ದೇವೆ” ಎಂದು ಹೇಳಿಕೆಯಲ್ಲಿ ಇರಾನ್​ಗೆ ಖಡಕ್…

Read More