ಜಾತ್ರೆ ನೋಡಲು ಹೋಗಿ ಹಸೆಮಣೆ ಏರಬೇಕಿದ್ದವನ ದುರಂತ ಅಂತ್ಯ: ಪಲ್ಲಕ್ಕಿ ಹೊತ್ತ ಟ್ರ್ಯಾಕ್ಟರ್​ ಹರಿದು ಸಾವು

ಜಾತ್ರೆ ನೋಡಲು ಹೋಗಿ ಹಸೆಮಣೆ ಏರಬೇಕಿದ್ದವನ ದುರಂತ ಅಂತ್ಯ: ಪಲ್ಲಕ್ಕಿ ಹೊತ್ತ ಟ್ರ್ಯಾಕ್ಟರ್​ ಹರಿದು ಸಾವು

ಆನೇಕಲ್​​, ಏಪ್ರಿಲ್​​ 09: ಪಲ್ಲಕ್ಕಿ ಹೊತ್ತ ಟ್ರ್ಯಾಕ್ಟರ್​ ಹರಿದ ಪರಿಣಾಮ ಹಸೆಮಣೆ ಏರಬೇಕಿದ್ದ ಯುವಕ ದಾರುಣವಾಗಿ ಮೃತಪಟ್ಟಿರುವ ಹೃದಯವಿದ್ರಾವಕ ಘಟನೆ ಹುಳಿಮಾವು ಜಾತ್ರೆಯಲ್ಲಿ ನಡೆದಿದೆ. ಹುಳಿಮಾವು ಗ್ರಾಮದ ಶ್ರೀ ಕೋದಂಡ ರಾಮಸ್ವಾಮಿ ದೇವಾಲಯದ ಬ್ರಹ್ಮರಥೋತ್ಸವ ನಿನ್ನೆ ನಡೆದಿದ್ದು, ರಥೋತ್ಸವ ಹಿನ್ನಲೆ ರಾತ್ರಿ ಪಲ್ಲಕ್ಕಿ ಉತ್ಸವ ಹಮ್ಮಿಕೊಳ್ಳಲಾಗಿತ್ತು. ಈ ವೇಳೆ ಪಲ್ಲಕ್ಕಿಗಳನ್ನ ನೋಡುತ್ತಾ ನಿಂತಿದ್ದ ಯುವಕನ ಮೇಲೆ ಟ್ರ್ಯಾಕ್ಟರ್​​ ಹರಿದಿದ್ದು, ಅಕ್ಷತ್ (27) ಮೃತಪಟ್ಟಿದ್ದಾರೆ. ತೀವ್ರವಾಗಿ ಗಾಯಗೊಂಡಿದ್ದ ಅವರನ್ನು ಆಸ್ಪತ್ರೆಗೆ ದಾಖಲಿಸಲು ಕರೆದೊಯ್ಯಲಾಗಿತ್ತಾದರೂ ಮಾರ್ಗ ಮಧ್ಯೆಯೇ ಉಸಿರು ಚೆಲ್ಲಿದ್ದಾರೆ.

ಬನಶಂಕರಿ ನಿವಾಸಿಯಾಗಿರುವ ಅಕ್ಷತ್​​, ಸಂಬಂಧಿಕರಿಗೆ ಹಾಗೂ ಸ್ನೇಹಿತರಿಗೆ ಮದುವೆಯ ಅಹ್ವಾನ ಪತ್ರಿಕೆ ವಿತರಿಸಲೆಂದು ಬಂದಿದ್ದರು. ಹಾಗೆ ಜಾತ್ರೆಯನ್ನೂ ನೋಡಿ ಹೋಗೊಣ ಎಂದು ಅಲ್ಲಿಯೇ ಉಳಿದುಕೊಂಡಿದ್ದರು ಎನ್ನಲಾಗಿದೆ. ಇನ್ನು ಟ್ರ್ಯಾಕ್ಟರ್​ ಚಾಲಕನ ಅಜಾಗರೂಕತೆಯಿಂದಲೇ ಅಪಘಾತ ನಡೆದಿದೆ ಎನ್ನಲಾಗಿದ್ದು, ಘಟನೆ ಬಳಿಕ ಚಾಲಕ ಸ್ಥಳದಿಂದ ಪರಾರಿಯಾಗಿದ್ದಾನೆ. ಹುಳಿಮಾವು ಸಂಚಾರಿ ಪೋಲಿಸ್ ಠಾಣಾ ವ್ಯಾಪ್ತಿಯಲ್ಲಿ ಈ ಅಪಘಾತ ನಡೆದಿದ್ದು, ಸ್ಥಳಕ್ಕೆ ಬೆಂಗಳೂರು ದಕ್ಷಿಣ ಸಂಚಾರ ಡಿಸಿಪಿ ಗೋಪಾಲ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ದುರ್ಘಟನೆ ನಡೆದು ಓರ್ವ ಮೃತಪಟ್ಟಿದ್ದರೂ ದೇವಾಲಯದ ಟ್ರಸ್ಟಿಗಳು ಸ್ಥಳಕ್ಕೆ ಬಂದಿಲ್ಲ ಎನ್ನಲಾಗಿದೆ.

ಇದನ್ನೂ ಓದಿ: ಬೆಳಗಾವಿ ಸಿದ್ದೇಶ್ವರ ಜಾತ್ರೆಯಲ್ಲಿ ರಕ್ತದೊಕುಳಿ; ಮನೆ ಮುಂದೆ ಕುಣಿದಿದ್ದಕ್ಕೆ ವ್ಯಕ್ತಿಯ ಬರ್ಬರ ಹತ್ಯೆ

ಕಾರು ಡಿಕ್ಕಿ:ಮೂವರಿಗೆ ಗಂಭೀರ ಗಾಯ

ಚಿಕ್ಕಬಳ್ಳಾಪುರ ಜಿಲ್ಲೆ ಚಿಂತಾಮಣಿ ತಾಲೂಕಿನ ಕೆಂದನಹಳ್ಳಿ ಗೇಟ್ ಬಳಿ ಕಾರು ಡಿಕ್ಕಿಯಾದ ಪರಿಣಾಮ ಬೈಕ್​ನಲ್ಲಿದ್ದ ಮೂವರು ಗಂಭೀರವಾಗಿ ಗಾಯಗೊಂಡಿರುವ ಘಟನೆ ನಡೆದಿದೆ. ವಿಜಯ್, ದೊಡ್ಡಗೌಡ, ಅಂಬರೀಶ್​​ ಗಾಯಾಳುಗಳಾಗಿದ್ದು, ಇವರನ್ನು ಕೋಲಾರ ಜಿಲ್ಲಾಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಚಿಂತಾಮಣಿ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಈ ಬಗ್ಗೆ ಪ್ರಕರಣ ದಾಖಲಾಗಿದೆ.

ಮತ್ತಷ್ಟು ಸುದ್ದಿ ಓದಲು ಇಲ್ಲಿ ಕ್ಲಿಕ್​​ ಮಾಡಿ.

Source link

IPL 2026: 5 ಆಟಗಾರರ ಬಗ್ಗೆ ಬಿಗ್ ಅಪ್​ಡೇಟ್​

Source link

ಇಂತಹ ಸ್ಥಿತಿ ಯಾವ ಹೆತ್ತವರಿಗೂ ಬರಬಾರದು: ಪತಿಯ ಶವದೊಂದಿಗೇ 10 ದಿನ ಕಳೆದ ಪತ್ನಿ! ಮಕ್ಕಳಿದ್ದೂ ಅನಾಥರಾದ ಪೋಷಕರು

ಚಿಕ್ಕಮಗಳೂರು, ಏ.9: ಜಿಲ್ಲೆಯ ಮೂಡಿಗೆರೆ ತಾಲೂಕಿನ ಕೊಟ್ಟಿಗೆಹಾರದಲ್ಲಿ ಮನ ಕಲಕುವ ಘಟನೆಯೊಂದು ಬೆಳಕಿಗೆ ಬಂದಿದೆ. 77 ವರ್ಷದ ಸಿರಿಲ್ ಮೋನಿಸ್ ಎಂಬುವವರು ಅನಾರೋಗ್ಯದಿಂದ ಮಲಗಿದ್ದಲ್ಲೇ ಮೃತಪಟ್ಟಿದ್ದರು. ಆದರೆ, ಅವರ ಪತ್ನಿ ಮಾನಸಿಕ ಅಸ್ವಸ್ಥತೆಯಿಂದ ಬಳಲುತ್ತಿದ್ದ ಕಾರಣ, ಪತಿ ಸಾವನ್ನಪ್ಪಿರುವುದು ಅವರಿಗೆ ತಿಳಿದಿರಲೇ ಇಲ್ಲ. ಸುಮಾರು 10 ದಿನಗಳ ಕಾಲ ಅವರು ಕೊಳೆತು ಹುಳ ಹಿಡಿದಿದ್ದ ಪತಿಯ ಶವದ ಪಕ್ಕದಲ್ಲೇ ಕಾಲ ಕಳೆದಿದ್ದಾರೆ.

ಮನೆಯಿಂದ ವಿಪರೀತ ದುರ್ವಾಸನೆ ಬಂದಾಗ ಅಕ್ಕಪಕ್ಕದ ನಿವಾಸಿಗಳು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಪೊಲೀಸರು ಬಂದಾಗ ಪತ್ನಿ “ನನ್ನ ಗಂಡ ನನಗೆ ಬೇಕು, ಯಾರೂ ಮುಟ್ಟಬೇಡಿ” ಎಂದು ಶವವನ್ನು ಮುಟ್ಟಲು ಬಿಡದೆ ಹಠ ಹಿಡಿದಿದ್ದರು. ಮಗ ಬೆಂಗಳೂರಿನಲ್ಲಿ ಕೆಲಸ ಮಾಡುತ್ತಿದ್ದರೆ, ಮಗಳು ದುಬೈನಲ್ಲಿ ಶಿಕ್ಷಕಿಯಾಗಿದ್ದಾರೆ. ಮಗ ನಿತ್ಯ ಕರೆ ಮಾಡಿದಾಗಲೂ ತಾಯಿ “ಅಪ್ಪ ಚೆನ್ನಾಗಿದ್ದಾರೆ” ಎಂದೇ ಹೇಳುತ್ತಿದ್ದರು. ಅಪ್ಪ ಸತ್ತ 10 ದಿನಗಳ ನಂತರ ಮಗ ಬಂದರೂ, ತಂದೆಯ ಮುಖ ನೋಡುವ ಭಾಗ್ಯ ಆತನಿಗೆ ಸಿಗಲಿಲ್ಲ. ಇನ್ನು ಮಗಳು ಅಪ್ಪ ಸತ್ತರೂ ಬಂದು ನೋಡಿಲ್ಲ.

ಇದನ್ನೂ ಓದಿ: 4 ದಿನ ಕಾಡಿನಲ್ಲಿದ್ದ ಯುವತಿ ಮೇಲೆ ಈಗ ನಕ್ಸಲ್ ಶಂಕೆ! ಈ ಬಗ್ಗೆ ಶರಣ್ಯ ಹೇಳಿದ್ದೇನು?

ಶವ ಸಂಪೂರ್ಣ ಕೊಳೆತು ಹೋಗಿದ್ದರಿಂದ ಸ್ಥಳೀಯರು ಮುಟ್ಟಲು ಹಿಂಜರಿದರು. ಈ ವೇಳೆ ಸಮಾಜ ಸೇವಕ ಆರೀಫ್ ಅವರು ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ಸಾಗಿಸಿ, ಅಂತ್ಯಸಂಸ್ಕಾರಕ್ಕೆ ನೆರವಾದರು.ಬಣಕಲ್ ಕ್ರೈಸ್ತ ಸ್ಮಶಾನದಲ್ಲಿ ಸಂಜೆ ವೇಳೆಗೆ ಮೋನಿಸ್ ಅವರ ಅಂತ್ಯಸಂಸ್ಕಾರ ನೆರವೇರಿತು. ಚಿಕ್ಕಮಗಳೂರು ಜಿಲ್ಲೆ ಮೂಡಿಗೆರೆ ತಾಲೂಕು ಬಣಕಲ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.

ರಾಜ್ಯದ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

ಆಟವಾಡುವಾಗ ಮೊದಲನೇ ಮಹಡಿಯಿಂದ ಬಿದ್ದ ಒಂದೂವರೆ ವರ್ಷದ ಮಗು: ಬದುಕಿದ್ದೇ ಪವಾಡ!

ಬೆಂಗಳೂರು, ಏಪ್ರಿಲ್​​ 09: ಆಟವಾಡುವಾಗ ಮೊದಲನೇ ಮಹಡಿಯಿಂದ ಬಿದ್ದು ಮಗುವೊಂದು ಗಂಭೀರ ಗಾಯಗೊಂಡಿರುವ ಘಟನೆ ಬೆಂಗಳೂರಿನ (Bengaluru) ನಾಯಂಡಳ್ಳಿಯಲ್ಲಿ ನಡೆದಿದೆ. ಆಯತಪ್ಪಿ ಬಿದ್ದ ಪರಿಣಾಮ ಒಂದೂವರೆ ವರ್ಷದ ಹೆಣ್ಣು ಮಗು ಸಹನಾಗೆ ಗಂಭೀರ ಗಾಯಗಳಾಗಿದ್ದು, ಖಾಸಗಿ ಆಸ್ಪತ್ರೆಯ ಐಸಿಯುನಲ್ಲಿ ಮಗುವಿಗೆ ಚಿಕಿತ್ಸೆ ನೀಡಲಾಗುತ್ತಿದೆ. ಏಪ್ರಿಲ್‌ 6ರಂದು ನಡೆದಿರುವ ಘಟನೆ ತಡವಾಗಿ ಬೆಳಕಿಗೆ ಬಂದಿದ್ದು, ಮಹಡಿಯಿಂದ ಹೆಣ್ಣು ಮಗು ಬೀಳುವ ದೃಶ್ಯ ಸಿಸಿಟಿವಿ ಕ್ಯಾಮರಾದಲ್ಲಿ ಸೆರೆಯಾಗಿದೆ.

ಮಗುವಿನ ಆರೋಗ್ಯದಲ್ಲಿ ಚೇತರಿಕೆ

ಇನ್ನು ಗಂಭೀರ ಗಾಯಗೊಂಡಿರುವ ಮಗು ಸಹನಾ ನವೀನ್ ಮತ್ತು ಜಯಶ್ರೀ ದಂಪತಿಯದ್ದಾಗಿದ್ದು, ಮಗಳ ಸದ್ಯದ ಆರೋಗ್ಯದ ಬಗ್ಗೆ ತಂದೆ ನವೀನ್​​ ಮಾಹಿತಿ ನೀಡಿದ್ದಾರೆ. ಬಸವನಗುಡಿಯ ರಂಗದೊರೆ ಸ್ಮಾರಕ ಆಸ್ಪತ್ರೆಯ ಐಸಿಯುನಲ್ಲಿ ಸಹನಾಗೆ ಚಿಕಿತ್ಸೆ ನೀಡಲಾಗುತ್ತಿದ್ದು, ಆಕೆಯ ಪ್ರಾಣಕ್ಕೆ ಯಾವುದೇ ಅಪಾಯವಿಲ್ಲ ಎಂದು ವೈದ್ಯರು ತಿಳಿಸಿದ್ದಾರೆ. ಮಗುವಿನ ತಲೆ ಭಾಗಕ್ಕೆ ಸ್ವಲ್ಪ ಗಾಯವಾಗಿದ್ದು ಬಿಟ್ಟರೆ ಮತ್ತೆಲ್ಲಿಯೂ ಏನೂ ಆಗಿಲ್ಲ. ತಲೆಗೆ ಮೂರು ಹೊಲಿಗೆ ಹಾಕಲಾಗಿದ್ದು, ಸಹನಾ ಆರೋಗ್ಯದಲ್ಲಿ ಚೇತರಿಕೆ ಕಂಡುಬರುತ್ತಿದೆ ಎಂದು ತಿಳಿಸಿದ್ದಾರೆ.

ಇದನ್ನೂ ಓದಿ: ಡಿಜೆ ಹಳ್ಳಿಯಲ್ಲಿ ಹಸುಗಳ‌ ಶೆಡ್​​ಗೆ ಬೆಂಕಿ; ವಿಕೃತನ ಕೃತ್ಯ ಸಿಸಿಟಿವಿಯಲ್ಲಿ ಸೆರೆ

ಘಟನೆ ನಡೆದಿದ್ದೇಗೆ?

ಮಗುವಿನ ಜೊತೆಗೇ ಇದ್ದ ತಾಯಿ ಜಯಶ್ರೀ ಹಾಲು ಕಾಯಿಸಲು ಇಟ್ಟಿದ್ದರು. ಹೀಗಾಗಿ ಹಾಲು ಉಕ್ಕಿತಾ ಎಂದು ನೋಡಿ ಬರಲು ಅರೆಕ್ಷಣ ಅವರು ತೆರಳಿದ್ದರು. ಅಷ್ಟರಲ್ಲಿ ಮಗು ಸಹನಾ ಮಹಡಿಯಿಂದ ಬಿದ್ದು ಗಾಯಗೊಂಡಿದೆ. ಹೊರಗಡೆ ಇದ್ದ ಚೇರ್​​ ಹತ್ತಿದ ಪರಿಣಾಮ ಮಗುವಿಗೆ ಆಯತಪ್ಪಿದೆ. ಮಗು ಕೆಳಗಡೆ ಬಿದ್ದಿದ್ದನ್ನು ಕಂಡ ರಸ್ತೆಯಲ್ಲಿ ತೆರಳುತ್ತಿದ್ದ ಜನ ಕಿರುಚಾಡುತ್ತಿದ್ದಂತೆ ಹೊರಬಂದು ಮಗುವಿನ ಸ್ಥಿತಿ ಕಂಡ ಜಯಶ್ರೀ ಲೋ ಬಿಪಿ ಉಂಟಾಗಿ ಅಸ್ವಸ್ಥರಾಗಿದ್ದರು. ಸದ್ಯಕ್ಕೆ ಅವರೂ ಚೇತರಿಸಿಕೊಂಡಿದ್ದು, ದಂಪತಿಗೆ ಸಹನಾ ಏಕೈಕ ಮಗು ಎನ್ನಲಾಗಿದೆ. ಮಗು ಸಹಾನಳ ತಂದೆ ನವಿನ್​​ ಆಟೋ ಓಡಿಸಿಕೊಂಡು ಜೀವನ ನಡೆಸುತ್ತಿರುವ ವ್ಯಕ್ತಿ ಎಂಬ ವಿಚಾರವೂ ಈ ವೇಳೆ ಗೊತ್ತಾಗಿದೆ.

ಮತ್ತಷ್ಟು ಸುದ್ದಿ ಓದಲು ಇಲ್ಲಿ ಕ್ಲಿಕ್​​ ಮಾಡಿ.

Source link

Video: ಪುದುಚೇರಿಯಲ್ಲಿ ಸೀರೆಯುಟ್ಟು ಮತದಾರರನ್ನು ಸ್ವಾಗತಿಸಿದ ರೋಬೋಟ್ ನೀಲಾ

ಪುದುಚೇರಿ, ಏಪ್ರಿಲ್ 09: ಇಂದು ಎರಡು ರಾಜ್ಯ ಹಾಗೂ ಒಂದು ಕೇಂದ್ರಾಡಳಿತ ಪ್ರದೇಶದಲ್ಲಿ ವಿಧಾನಸಭಾ ಚುನಾವಣೆ ನಡೆಯುತ್ತಿದೆ. ಅದರಲ್ಲಿ ಪುದುಚೇರಿ ಕೂಡ ಒಂದು. ಇಂದು ಬೆಳಗ್ಗೆಯಿಂದಲೇ ಮತದಾನ ಶುರುವಾಗಿದೆ. ಮತದಾರರು ಮತಗಟ್ಟೆಗೆ ಬರುತ್ತಿದ್ದಂತೆ ಒಂದು ಅಚ್ಚರಿ ಕಾದಿತ್ತು. ರೋಬೋಟ್ ನೀಲಾ ಕೈಯಲ್ಲಿ ಹೂವು, ಸ್ವೀಟುಗಳನ್ನು ಹಿಡಿದು ಮತದಾರರನ್ನು ಸ್ವಾಗತಿಸುತ್ತಿರುವುದು ಕಂಡು ಬಂತು. ಪುದುಚೇರಿಯ ಸರ್ಕಾರಿ ಶಾಲೆಯ ಮತದಾನ ಕೇಂದ್ರದಲ್ಲಿ ನೀಲಾ ಎಂಬ ರೋಬೋಟ್ ಮತದಾರರನ್ನು ಸ್ವಾಗತಿಸುತ್ತಿದೆ, ಮತದಾನದ ಅನುಭವಕ್ಕೆ ತಂತ್ರಜ್ಞಾನದ ಟಚ್ ಸಿಕ್ಕಂತಾಗಿದೆ.

 

ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Source link

ಹಂಪಿ ಎಕ್ಸ್‌ಪ್ರೆಸ್ ರೈಲಿನಲ್ಲಿ ಬೆಂಕಿ ಅವಘಡ: ತಪ್ಪಿದ ಭಾರಿ ಅನಾಹುತ

ಬಳ್ಳಾರಿ, ಏಪ್ರಿಲ್ 9: ಬಳ್ಳಾರಿಯಿಂದ ಬೆಂಗಳೂರು ಕಡೆಗೆ ತೆರಳುತ್ತಿದ್ದ ಹಂಪಿ ಎಕ್ಸ್‌ಪ್ರೆಸ್ ರೈಲಿನಲ್ಲಿ ಬುಧವಾರ ತಡರಾತ್ರಿ ಬೆಂಕಿ ಕಾಣಿಸಿಕೊಂಡಿದೆ. ಹಗರಿ ಗ್ರಾಮದ ಬಳಿ ರೈಲು ಚಲಿಸುತ್ತಿದ್ದಾಗ ಶಾರ್ಟ್ ಸರ್ಕ್ಯೂಟ್‌ನಿಂದಾಗಿ ಬೆಂಕಿ ಹೊತ್ತಿಕೊಂಡಿದೆ ಎನ್ನಲಾಗಿದ್ದು, ತಕ್ಷಣ ರೈಲು ನಿಲ್ಲಿಸಿ ಬೆಂಕಿ ನಂದಿಸಲಾಗಿದೆ. ಅದೃಷ್ಟವಶಾತ್ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ. ಬೆಂಕಿ ನಂದಿಸಿದ ಬಳಿಕ ರೈಲು ಪ್ರಯಾಣ ಮುಂದುವರಿಸಿದ್ದು, ಪ್ರಯಾಣಿಕರು ನಿಟ್ಟುಸಿರು ಬಿಟ್ಟಿದ್ದಾರೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Source link

ಚಾರಣಿಗರ ಸುರಕ್ಷತೆಗೆ ಸರ್ಕಾರದ ಮಾಸ್ಟರ್ ಪ್ಲಾನ್: ಕಡ್ಡಾಯವಾಗಲಿದೆ ಟ್ರ್ಯಾಕಿಂಗ್ ಆ್ಯಪ್, ವಿಮೆ ! ಸಚಿವ ಈಶ್ವರ ಖಂಡ್ರೆ ಸೂಚನೆ

ಬೆಂಗಳೂರು, ಏಪ್ರಿಲ್ 9: ಕರ್ನಾಟಕದ (Karnataka) ಗಿರಿಶ್ರೇಣಿಗಳಲ್ಲಿ ಚಾರಣಕ್ಕೆ (Trekking) ಹೋಗುವವರ ಸುರಕ್ಷತೆಯನ್ನು ಖಚಿತಪಡಿಸಲು ಅರಣ್ಯ ಇಲಾಖೆಯು ಕಟ್ಟುನಿಟ್ಟಿನ ನಿಯಮಗಳನ್ನು ಜಾರಿಗೆ ತರಲು ಮುಂದಾಗಿದೆ. ಚಂದ್ರದ್ರೋಣ ಪರ್ವತ ಶ್ರೇಣಿ ಮತ್ತು ಕೊಡಗಿನ ತಡಿಯಂಡಮೋಳ್​​ನಲ್ಲಿ ಇತ್ತೀಚೆಗೆ ಚಾರಣಿಗರು ನಾಪತ್ತೆಯಾದ ಆತಂಕಕಾರಿ ಪ್ರಕರಣಗಳ ಹಿನ್ನೆಲೆಯಲ್ಲಿ, ಸಚಿವ ಈಶ್ವರ ಖಂಡ್ರೆ ಅವರು ದೇಶಕ್ಕೇ ಮಾದರಿಯಾಗುವಂತಹ ಪ್ರಮಾಣಿತ ಕಾರ್ಯವಿಧಾನ (SOP) ರೂಪಿಸಲು ಪ್ರಧಾನ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.

ಹೊಸ SOP ನಲ್ಲಿ ಏನೇನು ಇರಲಿದೆ?

ಹೊಸ ಪ್ರಮಾಣಿತ ಕಾರ್ಯವಿಧಾನದಲ್ಲಿ ಏನೇನು ಇರಬೇಕು ಎಂಬ ಬಗ್ಗೆಯೂ ಸಚಿವರು ಸೂಚನೆ ನೀಡಿದ್ದಾರೆ. ಆ ಕುರಿತ ವಿವರ ಇಲ್ಲಿದೆ;

ಟ್ರ್ಯಾಕಿಂಗ್ ಆ್ಯಪ್ ಅಳವಡಿಕೆ

ಹುಲಿ ಸಂರಕ್ಷಿತ ಪ್ರದೇಶಗಳಲ್ಲಿ ಬಳಸುವ ‘ಎಂ-ಸ್ಟ್ರೈಪ್ಸ್’ ಮಾದರಿಯಲ್ಲೇ ಚಾರಣಿಗರಿಗಾಗಿ ವಿಶೇಷ ಆ್ಯಪ್ ಅಭಿವೃದ್ಧಿಪಡಿಸಲು ಸೂಚಿಸಲಾಗಿದೆ. ಚಾರಣದ ಅವಧಿಯಲ್ಲಿ ಈ ಆ್ಯಪ್ ಚಾರಣಿಗರ ಮೊಬೈಲ್‌ನಲ್ಲಿ ತಾತ್ಕಾಲಿಕವಾಗಿ ಕಾರ್ಯನಿರ್ವಹಿಸಲಿದ್ದು, ಯಾರಾದರೂ ದಾರಿ ತಪ್ಪಿಸಿಕೊಂಡರೆ ಅವರನ್ನು ಪತ್ತೆಹಚ್ಚುವುದು ಸುಲಭವಾಗಲಿದೆ.

ಚಾರಣಿಗರಿಗೆ ಕಡ್ಡಾಯ ಗುಂಪು ವಿಮೆ

ಚಾರಣಿಗರ ಸುರಕ್ಷತೆಯ ದೃಷ್ಟಿಯಿಂದ ಅವರಿಗೆ ಕಡ್ಡಾಯವಾಗಿ ಗುಂಪು ವಿಮೆ (Group Insurance) ಮಾಡಿಸುವಂತೆ ಸಚಿವರು ನಿರ್ದೇಶನ ನೀಡಿದ್ದಾರೆ. ಇದರಿಂದ ಅನಿರೀಕ್ಷಿತ ಅಪಘಾತಗಳ ಸಂದರ್ಭದಲ್ಲಿ ಕುಟುಂಬಕ್ಕೆ ಆರ್ಥಿಕ ನೆರವು ಸಿಗಲಿದೆ.

ನೇಚರ್ ಗೈಡ್‌ಗಳಿಗೆ ಹೆಚ್ಚಿನ ಹೊಣೆ

ಚಾರಣಿಗರ ಜೊತೆ ಹೋಗುವ ಗೈಡ್‌ಗಳಿಗೆ ಇನ್ಮುಂದೆ ಹೆಚ್ಚಿನ ಹೊಣೆಗಾರಿಕೆ ಇರಲಿದೆ. ಪ್ರತಿ ಗೈಡ್​ಗೆ ‘ವೈರ್‌ಲೆಸ್ ಸೆಟ್’ ನೀಡುವಂತೆ ನಿರ್ದೇಶನ ನೀಡಲಾಗಿದೆ. ಇದರಿಂದ ನೆಟ್‌ವರ್ಕ್ ಇಲ್ಲದ ಕಾಡಿನ ಭಾಗದಲ್ಲೂ ಸಂಪರ್ಕ ಸಾಧ್ಯವಾಗುತ್ತದೆ.

ಹಳೆಯ ಘಟನೆಗಳಿಂದ ಪಾಠ

ಚಿಕ್ಕಮಗಳೂರಿನ ಚಂದ್ರದ್ರೋಣ ಪರ್ವತ ಸಾಲಿನಲ್ಲಿ ಕೇರಳದ ಅಪ್ರಾಪ್ತೆ ನಾಪತ್ತೆಯಾಗಿರುವುದು ಹಾಗೂ ಕೊಡಗಿನ ತಡಿಯಂಡಮೋಳ್​​ನಲ್ಲಿ ಶರಣ್ಯ ಎಂಬ ಯುವತಿ ನಾಪತ್ತೆಯಾಗಿ ಬಳಿಕ ಪತ್ತೆಯಾದ ಪ್ರಕರಣದ ಬೆನ್ನಲ್ಲೇ ಸರ್ಕಾರ ಎಚ್ಚೆತ್ತುಕೊಂಡು ಕ್ರಮಕ್ಕೆ ಮುಂದಾಗಿದೆ. ಇಂತಹ ಘಟನೆಗಳು ಮರುಕಳಿಸದಂತೆ ತಡೆಯಲು ಈ ತಾಂತ್ರಿಕ ಮತ್ತು ಕಾನೂನುಬದ್ಧ ಕ್ರಮಗಳನ್ನು ಕೈಗೊಳ್ಳಲು ಮುಂದಾಗಿದೆ.

ಇದನ್ನೂ ಓದಿ: ಶರಣ್ಯ ಸಿಕ್ಕ ಬೆನ್ನಲ್ಲೇ ಮತ್ತೋರ್ವ ಬಾಲಕಿ ಕಾಣೆ: ಚಂದ್ರದ್ರೋಣ ಪರ್ವತ ಸರಣಿಯಲ್ಲಿ ಕೇರಳದ ಅಪ್ರಾಪ್ತೆ ನಾಪತ್ತೆ!

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Source link

IPL 2026: ಐಪಿಎಲ್​ ನಡುವೆ 5 ಹೊಸ ನಿಯಮಗಳು ಜಾರಿ

IPL 2026: ಇಂಡಿಯನ್ ಪ್ರೀಮಿಯರ್ ಲೀಗ್ 19ನೇ ಆವೃತ್ತಿಯಲ್ಲಿ ಪಂದ್ಯದ ಶಿಸ್ತು ಮತ್ತು ಸಮಯ ಪಾಲನೆಯನ್ನು ಕಾಪಾಡಿಕೊಳ್ಳಲು ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ (BCCI) ಕಟ್ಟುನಿಟ್ಟಿನ ನಿಯಮಗಳನ್ನು ಜಾರಿಗೊಳಿಸಿದೆ. ಮುಖ್ಯವಾಗಿ ಪಂದ್ಯದ ವೇಳೆ ತಂಡದ ‘ಬೆಂಚ್ ಆಟಗಾರರ’ (ಆಡದ ಆಟಗಾರರು) ಅನಗತ್ಯ ಓಡಾಟಕ್ಕೆ ಬಿಸಿಸಿಐ ಕಡಿವಾಣ ಹಾಕಿದೆ.

ಪಂದ್ಯದ ವೇಳೆ ಮೈದಾನದ ಒಳಗೆ ಮತ್ತು ಬೌಂಡರಿ ಗೆರೆಯ ಸುತ್ತ ಉಂಟಾಗುವ ಗೊಂದಲಗಳನ್ನು ತಪ್ಪಿಸಲು ಈ ಕೆಳಗಿನ ಹೊಸ ನಿಯಮಗಳನ್ನು ಜಾರಿಗೆ ತರಲಾಗಿದೆ:

  1. ಮೈದಾನ ಪ್ರವೇಶಕ್ಕೆ ನಿರ್ಬಂಧ: ತಂಡದ ಪಟ್ಟಿಯಲ್ಲಿ ಹೆಸರಿಸಲಾದ 16 ಆಟಗಾರರಿಗೆ (ಇಂಪ್ಯಾಕ್ಟ್ ಪ್ಲೇಯರ್ ಸೇರಿ) ಮಾತ್ರ ಮೈದಾನದ ಒಳಗೆ ಪ್ರವೇಶಿಸಲು ಅನುಮತಿ ಇರುತ್ತದೆ. ಈ 16 ಆಟಗಾರರ ಪಟ್ಟಿಯಲ್ಲಿ ಇಲ್ಲದ ಉಳಿದ ಆಟಗಾರರು ಪಂದ್ಯ ನಡೆಯುವಾಗ ಡ್ರಿಂಕ್ಸ್ ತರುವುದು, ಬ್ಯಾಟ್ ನೀಡುವುದು ಅಥವಾ ಸಂದೇಶ ರವಾನಿಸಲು ಮೈದಾನ ಪ್ರವೇಶಿಸುವಂತಿಲ್ಲ.
  2.  ಬೌಂಡರಿ ಲೈನ್ ಬಳಿ ಕೇವಲ ಐವರು: ಪಂದ್ಯದ ವೇಳೆ ಬೌಂಡರಿ ಲೈನ್​ ಸುತ್ತ ತರಬೇತಿ ಬಿಬ್ಸ್ (Bibs) ಧರಿಸಿ ಓಡಾಡುವ ಆಟಗಾರರ ಸಂಖ್ಯೆಯನ್ನು ಐದಕ್ಕೆ (5) ಸೀಮಿತಗೊಳಿಸಲಾಗಿದೆ. ಈ ಐವರು ಆಟಗಾರರು ನಾಮನಿರ್ದೇಶಿತ 16 ಆಟಗಾರರ ಪೈಕಿ ಇರಬಹುದು ಅಥವಾ ತಂಡದ ಇತರೆ ಆಟಗಾರರಾಗಿರಬಹುದು.
  3. ಡಗೌಟ್ ನಿಯಮ: ಬೌಂಡರಿ ಲೈನ್​ ಸುತ್ತ ತರಬೇತಿ ಬಿಬ್ಸ್​ ಧರಿಸಿದ ಆಟಗಾರರನ್ನು ಬಿಟ್ಟು ಉಳಿದ ಎಲ್ಲಾ ಆಟಗಾರರು ಕಡ್ಡಾಯವಾಗಿ ತಂಡದ ಡಗೌಟ್‌ನಲ್ಲೇ ಇರಬೇಕು.
  4. ಜಾಹೀರಾತು ಫಲಕಗಳ ನಿಯಮ: ಬೌಂಡರಿ ಲೈನ್ ಮತ್ತು ಎಲ್ಇಡಿ (LED) ಜಾಹೀರಾತು ಫಲಕಗಳ ನಡುವಿನ ಜಾಗದಲ್ಲಿ ಆಟಗಾರರು ಅನಗತ್ಯವಾಗಿ ಓಡಾಡುವಂತಿಲ್ಲ.
  5. ಬೌಂಡರಿ ಲೈನ್​ನಲ್ಲಿ ಕೂರುವಂತಿಲ್ಲ: ಯಾವುದೇ ಆಟಗಾರ ಅಥವಾ ಸಿಬ್ಬಂದಿ ಎಲ್ಇಡಿ ಬೋರ್ಡ್‌ಗಳ ಮುಂದೆ ಕುಳಿತುಕೊಳ್ಳುವಂತಿಲ್ಲ, ಇದು ಪ್ರಾಯೋಜಕರ ಪ್ರಚಾರಕ್ಕೆ ಅಡ್ಡಿಯಾಗಬಾರದು ಎಂಬುದು ಬಿಸಿಸಿಐ ಉದ್ದೇಶ.

ಈ ಹಿಂದೆ ಪ್ರಕಟಿಸಿದ ನಿಯಮಗಳು:

  1.  ಪಂದ್ಯದ ದಿನದ ಅಭ್ಯಾಸ: ಪಂದ್ಯ ನಡೆಯುವ ದಿನದಂದು ಮುಖ್ಯ ಪಿಚ್‌ನ ಸುತ್ತಲಿನ ಜಾಗದಲ್ಲಿ ಯಾವುದೇ ಅಭ್ಯಾಸ ನಡೆಸುವುದನ್ನು ಸಂಪೂರ್ಣವಾಗಿ ನಿಷೇಧಿಸಲಾಗಿದೆ.
  2. ಸಮವಸ್ತ್ರ ಸಂಹಿತೆ: ಪಂದ್ಯದ ನಂತರದ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಆಟಗಾರರು ಸ್ಲೀವ್‌ಲೆಸ್ ಜೆರ್ಸಿ ಅಥವಾ ಫ್ಲಾಪಿ ಹ್ಯಾಟ್‌ಗಳನ್ನು ಧರಿಸುವಂತಿಲ್ಲ.
  3. ಖಾಸಗಿ ವಾಹನಗಳಿಗೆ ನೋ ಎಂಟ್ರಿ: ಆಟಗಾರರು ಕ್ರೀಡಾಂಗಣಕ್ಕೆ ಬರಲು ಕಡ್ಡಾಯವಾಗಿ ತಂಡದ ಬಸ್ ಮಾತ್ರ ಬಳಸಬೇಕು, ಖಾಸಗಿ ವಾಹನ ಬಳಕೆಗೆ ಅನುಮತಿ ಇಲ್ಲ.

ಇದನ್ನೂ ಓದಿ: IPL 2026: 5 ಆಟಗಾರರ ಬಗ್ಗೆ ಬಿಗ್ ಅಪ್​ಡೇಟ್​

ಐಪಿಎಲ್ ಪಂದ್ಯಗಳು ಜಾಗತಿಕ ಮಟ್ಟದಲ್ಲಿ ದೊಡ್ಡ ಪ್ರಭಾವ ಬೀರುತ್ತಿರುವುದರಿಂದ, ಪಂದ್ಯದ ಘನತೆ ಮತ್ತು ವೃತ್ತಿಪರತೆಯನ್ನು ಕಾಪಾಡಿಕೊಳ್ಳಲು ಈ ಬದಲಾವಣೆಗಳು ಅನಿವಾರ್ಯ ಎಂದು ಬಿಸಿಸಿಐ ಅಭಿಪ್ರಾಯಪಟ್ಟಿದೆ. ಈ ನಿಯಮಗಳನ್ನು ಉಲ್ಲಂಘಿಸುವ ತಂಡಗಳಿಗೆ ಕಠಿಣ ದಂಡ ವಿಧಿಸುವ ಸಾಧ್ಯತೆಯೂ ಇದೆ.

 

Source link

ಧುರಂಧರ್ ರಣವೀರ್ ಸಿಂಗ್ ಸಿನಿಮಾ ಎಂದು ಹೇಳಲು ಸಾಧ್ಯವಿಲ್ಲ; ಕರೀನಾ ಕಪೂರ್

ಆದಿತ್ಯ ಧಾರ್ ನಿರ್ದೇಶನದ ‘ಧುರಂಧರ್: ದಿ ರಿವೆಂಜ್’ (Dhurandhar Movie) ಚಿತ್ರ ಬಾಕ್ಸ್ ಆಫೀಸ್‌ನಲ್ಲಿ ಸುನಾಮಿ ಸೃಷ್ಟಿಸಿದೆ. ಈ ಚಿತ್ರದ ಎರಡೂ ಭಾಗಗಳನ್ನು ಪ್ರೇಕ್ಷಕರನ್ನು ರಂಜಿಸಿವೆ. ಬಾಲಿವುಡ್‌ನಿಂದ ಟಾಲಿವುಡ್‌ವರೆಗೆ.. ಅನೇಕ ನಟರು ಇದನ್ನು ಹೊಗಳುತ್ತಿದ್ದಾರೆ. ಅದೇ ರೀತಿ, ನಟಿ ಕರೀನಾ ಕಪೂರ್ ಅವರ ಪ್ರತಿಕ್ರಿಯೆಯ ಬಗ್ಗೆ ಪ್ರಸ್ತುತ ಸಾಕಷ್ಟು ಚರ್ಚೆ ನಡೆಯುತ್ತಿದೆ. ‘ಧುರಂಧರ್’ ಚಿತ್ರದ ಯಶಸ್ಸಿಗೆ ಅವರು ನೀಡಿದ ಪ್ರತಿಕ್ರಿಯೆಗಾಗಿ ನೆಟ್ಟಿಗರು ಅವರನ್ನು ಟ್ರೋಲ್ ಮಾಡುತ್ತಿದ್ದಾರೆ.

‘ಫೈನಾನ್ಷಿಯಲ್ ಟೈಮ್ಸ್’ ಗೆ ನೀಡಿದ ಸಂದರ್ಶನದಲ್ಲಿ ಕರೀನಾ ಅವರು ಧುರಂಧರ್ ಸಿನಿಮಾ ಬಗ್ಗೆ ಮಾತನಾಡಿದ್ದಾರೆ. ‘ಧುರಂಧರ್ ಸಿನಿಮಾ ಕೇವಲ ನಾಯಕ ನಟ ರಣವೀರ್ ಸಿಂಗ್ ಚಿತ್ರ ಅಲ್ಲ. ಇದು ಸಂಪೂರ್ಣವಾಗಿ ನಿರ್ದೇಶಕರ ಚಿತ್ರ. ಇಂದಿಗೂ ಸಹ, ಈ ಚಿತ್ರವನ್ನು ಉಲ್ಲೇಖಿಸಿದಾಗ, ಇದನ್ನು ಆದಿತ್ಯ ಧಾರ್ ಅವರ ‘ಧುರಂಧರ್’ ಎಂದು ಕರೆಯಲಾಗುತ್ತದೆ’ ಎಂದಿದ್ದಾರೆ ಕರೀನಾ.

ಕರೀನಾ ಕಪೂರ್ ಹೇಳಿಕೆಗೆ ಈಗ ನೆಟ್ಟಿಗರು ವಿವಿಧ ಪ್ರತಿಕ್ರಿಯೆಗಳನ್ನು ನೀಡುತ್ತಿದ್ದಾರೆ. ಕೆಲವರು ಅವರ ಅಭಿಪ್ರಾಯವನ್ನು ಒಪ್ಪಿಕೊಂಡಿದ್ದಾರೆ. ‘ನಿರ್ದೇಶಕರು ಈ ಚಿತ್ರದ ಹಿಂದೆ ಸಾಕಷ್ಟು ಶ್ರಮ ವಹಿಸಿದ್ದಾರೆ. ಹೀಗಾಗಿ. ಕರೀನಾ ಹೇಳಿದ್ದರಲ್ಲಿ ತಪ್ಪಿಲ್ಲ’ ಎಂದು ಹೇಳಿದರು. ಕೆಲವರು ಕರೀನಾ ಪಕ್ಷಪಾತ ಹೊಂದಿದ್ದಾರೆ ಎಂದು ಆರೋಪಿಸಿದರು. ‘ಧುರಂಧರ್‌ನ ಯಶಸ್ಸನ್ನು ಅವರು ಅರಗಿಸಿಕೊಂಡಿಲ್ಲ . ಅವರು ರಣವೀರ್ ಸಿಂಗ್ ಅವರ ಕಠಿಣ ಪರಿಶ್ರಮವನ್ನು ಸಂಪೂರ್ಣವಾಗಿ ನಿರ್ಲಕ್ಷಿಸಿದ್ದಾರೆ’ ಎಂದು ನೆಟ್ಟಿಗರು ಬರೆದಿದ್ದಾರೆ.

ಕೆಲವರು ಕರೀನಾ ಅವರನ್ನು ಟೀಕಿಸಿ, ‘ಜಬ್ ವಿ ಮೆಟ್ ಕೂಡ ಇಮ್ತಿಯಾಜ್ ಅಲಿ ಅವರ ಚಿತ್ರ. ಕರೀನಾ ಅವರದ್ದಲ್ಲ. ಈ ಲೆಕ್ಕಾಚಾರದ ಪ್ರಕಾರ, ರಾಮಾಯಣವು ನಿತೇಶ್ ತಿವಾರಿ ಅವರ ಚಿತ್ರ ಮಾತ್ರ, ರಣಬೀರ್ ಕಪೂರ್ ಅವರದ್ದಲ್ಲ’ ಎಂದು ಹೇಳಿದ್ದಾರೆ.

ಇದನ್ನೂ ಓದಿ: ಕೊಹ್ಲಿ ಹೊಗಳಿಕೆ ಬಳಿಕ ‘ಧುರಂಧರ್ 2’ ಹೌಸ್​​ಫುಲ್? ಕಲೆಕ್ಷನ್ ಏನ್​ ಅನ್ನುತ್ತೆ?

‘ಧುರಂಧರ್’ ಮತ್ತು ‘ಧುರಂಧರ್: ದಿ ರಿವೆಂಜ್’ ಎರಡೂ ಚಿತ್ರಗಳು ಬಾಕ್ಸ್ ಆಫೀಸ್‌ನಲ್ಲಿ ಭಾರಿ ಲಾಭ ಗಳಿಸಿವೆ. ಇದರಲ್ಲಿ ರಣವೀರ್ ಸಿಂಗ್ ಗೂಢಚಾರ ಹಮ್ಜಾ ಅಲಿ ಮಜಾರಿ ಪಾತ್ರದಲ್ಲಿ ನಟಿಸಿದ್ದಾರೆ. ಅವರೊಂದಿಗೆ, ಚಿತ್ರದಲ್ಲಿ ಆರ್. ಮಾಧವನ್, ಅರ್ಜುನ್ ರಾಂಪಾಲ್, ಸಂಜಯ್ ದತ್, ರಾಕೇಶ್ ಬೇಡಿ ಮತ್ತು ಸಾರಾ ಅರ್ಜುನ್ ಕೂಡ ನಟಿಸಿದ್ದಾರೆ. ಮಾರ್ಚ್ 19 ರಂದು ಬಿಡುಗಡೆಯಾದ ‘ಧುರಂಧರ್ 2’ ಚಿತ್ರವು ಇಲ್ಲಿಯವರೆಗೆ ವಿಶ್ವಾದ್ಯಂತ 1600 ಕೋಟಿ ರೂ.ಗಳಿಗೂ ಹೆಚ್ಚು ಗಳಿಸಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Source link

‘ಡಕೈತ್’ ಸಿನಿಮಾದಿಂದ ಶ್ರುತಿ ಹಾಸನ್ ಹೊರಬಂದಿದ್ದೇಕೆ?

ಅಡಿವಿ ಶೇಷ್ (Adivi Sesh) ನಟನೆಯ ‘ಡಕೈತ್’ (Dacoit) ಸಿನಿಮಾ ಇದೇ ವಾರ ಬಿಡುಗಡೆ ಆಗಲಿದೆ. ಈ ಮೊದಲು ಈ ಸಿನಿಮಾ ‘ಟಾಕ್ಸಿಕ್’ ಎದುರು ಬಿಡುಗಡೆಗೆ ಸಜ್ಜಾಗಿತ್ತು. ಆದರೆ ಸಿನಿಮಾ ಬಿಡುಗಡೆಯನ್ನು ಮುಂದೂಡಿ ಈಗ ನಾಳೆ ಅಂದರೆ ಏಪ್ರಿಲ್ 10ಕ್ಕೆ ತೆರೆಗೆ ಬರಲಿದೆ. ಈ ಸಿನಿಮಾದ ಮೊದಲ ಪ್ರೋಮೊ ಬಿಡುಗಡೆ ಆದಾಗ ಸಿನಿಮಾ ನಾಯಕಿ ಆಗಿದ್ದಿದ್ದು ಶ್ರುತಿ ಹಾಸನ್. ಅವರು ನಟಿಸಿದ್ದ ಪ್ರೋಮೊ ಸಹ ಒಂದು ಬಿಡುಗಡೆ ಆಗಿತ್ತು. ಆದರೆ ಅದಾದ ಕೆಲ ತಿಂಗಳ ಬಳಿಕ ಶ್ರುತಿ ಹಾಸನ್, ‘ಡಕೈತ್’ ಸಿನಿಮಾದಿಂದ ಹೊರ ನಡೆದರು. ಅವರ ಸ್ಥಾನಕ್ಕೆ ಮೃಣಾಲ್ ಠಾಕೂರ್ ಬಂದರು.

ಶ್ರುತಿ ಹಾಸನ್ ಅವರು ಹಲವು ದಿನಗಳ ಕಾಲ ಸಿನಿಮಾಕ್ಕಾಗಿ ಚಿತ್ರೀಕರಣ ಸಹ ನಡೆಸಿದ್ದರು. ಪ್ರೋಮೊ ನಲ್ಲಿ ಅವರ ಪಾತ್ರ ಚೆನ್ನಾಗಿತ್ತು. ಪಾತ್ರಕ್ಕೆ ಚೆನ್ನಾಗಿ ಸೂಟ್ ಆಗುತ್ತಾರೆ ಎನಿಸಿತ್ತು. ಅನುಭವಿ ನಟಿ ಸಹ ಆಗಿದ್ದ ಅವರನ್ನು ಚಿತ್ರತಂಡವೇ ಕೈಬಿಟ್ಟಿತು. ಅವರ ಜಾಗಕ್ಕೆ ಮೃಣಾಲ್ ಠಾಕೂರ್ ಅವರನ್ನು ನಾಯಕಿಯನ್ನಾಗಿ ಆಯ್ಕೆ ಮಾಡಲಾಯ್ತು. ಆದರೆ ಇದಕ್ಕೆ ಕಾರಣವೇನು ಎಂಬುದನ್ನು ಚಿತ್ರತಂಡದವರು ವಿವರಿಸಿರಲಿಲ್ಲ. ಆದರೆ ಇದೀಗ ಸಿನಿಮಾದ ನಾಯಕ ಮತ್ತು ಕತೆ ಬರೆದಿರುವ ಅಡಿವಿ ಶೇಷ್ ಅವರು ಈ ಬಗ್ಗೆ ಮಾತನಾಡಿದ್ದಾರೆ.

ತೆಲುಗಿನ ಖ್ಯಾತ ನಿರೂಪಕಿ ಸುಮಾ ಅವರೊಟ್ಟಿಗಿನ ಸಂದರ್ಶನದಲ್ಲಿ ಈ ಬಗ್ಗೆ ಮಾತನಾಡಿರುವ ಅಡಿವಿ ಶೇಷ್, ‘ಶ್ರುತಿ ಹಾಸನ್ ಆರಂಭದಲ್ಲಿ ಸಿನಿಮಾನಲ್ಲಿದ್ದರು, ಹಲವು ದಿನಗಳ ಕಾಲ ಚಿತ್ರೀಕರಣ ಸಹ ಮಾಡಿದೆವು. ಆದರೆ ನಮ್ಮ ಕೆಲಸ ಮಾಡುವ ವಿಧಾನ ಬೇರೆ ರೀತಿ, ನಾವು ನಾಲ್ಕೈದು ಶಾಟ್ ತೆಗೆದ ಮೇಲೆಯೂ ಸಹ ಇದನ್ನು ಭಿನ್ನವಾಗಿ ತೆಗೆಯಬಹುದಾ ಎಂದು ಯೋಚಿಸುತ್ತೀವಿ, ನಾವು ಸಿನಿಮಾ ತೆಗೆಯಲು ಸಾಕಷ್ಟು ಸಮಯ ತೆಗೆದುಕೊಳ್ಳುತ್ತೀವಿ, ಇದು ಕೆಲವರಿಗೆ ಕಿರಿ-ಕಿರಿ ಎನಿಸಬಹುದು’ ಎಂದಿದ್ದಾರೆ.

ಇದನ್ನೂ ಓದಿ:ರಾಷ್ಟ್ರೀಯ ಸಿನಿಮಾ ಅಕಾಡೆಮಿ ಪ್ರಶಸ್ತಿ ಘೋಷಣೆ: ಯಾರಿಗೆಲ್ಲ ಸಿಕ್ಕಿತು ಅವಾರ್ಡ್

‘ನಮ್ಮ ಮೊದಲ ಸಿನಿಮಾ ‘ಕ್ಷಣ-ಕ್ಷಣಂ’ನಿಂದಲೂ ನಮ್ಮ ತಂಡ ಹೀಗೆಯೇ ಕೆಲಸ ಮಾಡುತ್ತದೆ. ನಾವೆಲ್ಲ ಈ ರೀತಿಯ ಕೆಲಸದ ಪ್ರಾಸೆಸ್​ಗೆ ಒಗ್ಗಿ ಹೋಗಿದ್ದೇವೆ ಆದರೆ ಶ್ರುತಿ ಅವರಿಗೆ ಅದಕ್ಕೆ ಒಗ್ಗಿಕೊಳ್ಳಲಾಗಲಿಲ್ಲ. ಹಾಗಾಗಿ ಅವರನ್ನು ನಾವು ಕಳಿಸಿಕೊಡಬೇಕಾಯ್ತು. ನಾವು ಸೌಹಾರ್ದಯುತವಾಗಿಯೇ ಬೇರಾದೆವು, ಆ ಸ್ಥಾನಕ್ಕೆ ಮೃಣಾಲ್ ಠಾಕೂರ್ ಅವರನ್ನು ಕರೆದುಕೊಂಡೆವು’ ಎಂದಿದ್ದಾರೆ ಅಡಿವಿ ಶೇಷ್.

‘ಡಕೈತ್’ ಸಿನಿಮಾನಲ್ಲಿ ಅಡಿವಿ ಶೇಷ್, ಮೃಣಾಲ್ ಠಾಕೂರ್ ಜೊತೆಗೆ ವಿಲನ್ ಆಗಿ ಅನುರಾಗ್ ಕಶ್ಯಪ್ ನಟಿಸಿದ್ದಾರೆ. ಸಿನಿಮಾ ನಿರ್ದೇಶನ ಮಾಡಿರುವುದು ಶನಿಲ್, ನಿರ್ಮಾಣ ಮಾಡಿರುವುದು ಸುಪ್ರಿಯಾ ಯರ್ಲಗಡ್ಡ, ಕತೆ ಅಡವಿ ಶೇಷ್ ಅವರದ್ದು. ಸಂಗೀತ ನೀಡಿರುವುದು ಭೀಮ್ಸ್. ಸಿನಿಮಾ ಏಪ್ರಿಲ್ 10ಕ್ಕೆ ತೆರೆಗೆ ಬರಲಿದೆ.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Source link

Exit mobile version