ಶಾರುಖ್ ಖಾನ್ ಅಲಭ್ಯತೆ; ‘ಜೈಲರ್ 2’ ಸಿನಿಮಾದಲ್ಲಿ ಅತಿಥಿ ಪಾತ್ರವೇ ಡಿಲೀಟ್

ಸೂಪರ್‌ಸ್ಟಾರ್ ರಜನಿಕಾಂತ್ (Rajinikanth) ನಟನೆಯ, 2026ರ ಅತ್ಯಂತ ನಿರೀಕ್ಷಿತ ಚಿತ್ರಗಳಲ್ಲಿ ಒಂದಾದ ‘ಜೈಲರ್ 2’ (Jailer 2) ಸದ್ಯ ಭಾರಿ ಚರ್ಚೆಯಲ್ಲಿದೆ. ನೆಲ್ಸನ್ ದಿಲೀಪ್‌ಕುಮಾರ್ ನಿರ್ದೇಶನದ ಈ ಸೀಕ್ವೆಲ್‌ನಲ್ಲಿ ಬಾಲಿವುಡ್ ಬಾದ್‌ಶಾ ಶಾರುಖ್ ಖಾನ್ (Shah Rukh Khan) ಅತಿಥಿ ಪಾತ್ರದಲ್ಲಿ ಕಾಣಿಸಿಕೊಳ್ಳಲಿದ್ದಾರೆ ಎನ್ನಲಾಗಿತ್ತು. ಆದರೆ, ಬಳಿಕ ಕೇಳಿಬಂದ ಮಾಹಿತಿ ಪ್ರಕಾರ, ಶಾರುಖ್ ಅವರು ಈ ಆಫರ್ ನಿರಾಕರಿಸಿದರು. ಬಳಿಕ ಬೇರೆ ನಟರನ್ನು ಚಿತ್ರತಂಡ ಸಂಪರ್ಕಿಸಿತ್ತು. ಆದರೆ ಈಗ ಆ ಪಾತ್ರವನ್ನೇ ಚಿತ್ರದಿಂದ ಸಂಪೂರ್ಣವಾಗಿ ಕೈಬಿಡಲು ನಿರ್ಧರಿಸಲಾಗಿದೆ ಎಂಬ ಮಾಹಿತಿ ಕೇಳಿಬಂದಿದೆ.

ವರದಿಗಳ ಪ್ರಕಾರ, ಶಾರುಖ್ ಖಾನ್ ಅವರಿಗಾಗಿ ಸೃಷ್ಟಿಸಲಾಗಿದ್ದ ಇಡೀ ಪಾತ್ರವನ್ನು ಸ್ಕ್ರಿಪ್ಟ್‌ನಿಂದ ತೆಗೆದುಹಾಕಲು ‘ಜೈಲರ್ 2’ ತಂಡ ಮುಂದಾಗಿದೆ. ರಜನಿಕಾಂತ್ ಅವರು ಸದ್ಯ ಪ್ರವಾಸ ಮುಗಿಸಿ ಹಿಂತಿರುಗಲಿದ್ದು, ಜೂನ್ 8 ಅಥವಾ 9ರಂದು ಅವರೊಂದಿಗೆ ಒಂದು ಸಣ್ಣ ಪ್ಯಾಚ್‌ವರ್ಕ್ ಶೂಟಿಂಗ್ ನಡೆಸಲು ಚಿತ್ರತಂಡ ಯೋಜಿಸಿದೆ. ಆದರೆ, ಈ ಬಗ್ಗೆ ಚಿತ್ರದ ನಿರ್ಮಾಪಕರಿಂದ ಯಾವುದೇ ಅಧಿಕೃತ ಮಾಹಿತಿ ಹೊರಬಿದ್ದಿಲ್ಲ.

ಮೊದಲಿಗೆ ಶಾರುಖ್ ಖಾನ್ ಮತ್ತು ರಜನಿಕಾಂತ್ ಇಬ್ಬರೂ ತೆರೆ ಹಂಚಿಕೊಳ್ಳಲಿದ್ದಾರೆ ಎಂಬ ಸುದ್ದಿ ಅಭಿಮಾನಿಗಳಲ್ಲಿ ಭಾರಿ ರೋಮಾಂಚನ ಉಂಟುಮಾಡಿತ್ತು. ಆದರೆ ಶಾರುಖ್ ಅವರು ತಮ್ಮ ಮುಂಬರುವ ‘ಕಿಂಗ್’ ಚಿತ್ರದ ಕೆಲಸಗಳಲ್ಲಿ ಬ್ಯುಸಿಯಾಗಿರುವುದರಿಂದ ಈ ಅವಕಾಶವನ್ನು ಕೈಬಿಟ್ಟಿದ್ದಾರೆ ಎನ್ನಲಾಗಿದೆ. ಶಾರುಖ್ ನಂತರ ಆ ಪಾತ್ರಕ್ಕೆ ಬಾಲಿವುಡ್ ನಟ ಹೃತಿಕ್ ರೋಷನ್ ಅವರನ್ನು ಪರಿಗಣಿಸಲಾಗುತ್ತಿದೆ ಎಂಬ ವದಂತಿಗಳು ಕೇಳಿಬಂದಿದ್ದರೂ, ಅದಕ್ಕೂ ಯಾವುದೇ ಗಟ್ಟಿ ಪುರಾವೆ ಸಿಕ್ಕಿಲ್ಲ.

‘ಜೈಲರ್ 2’ ಚಿತ್ರದಲ್ಲಿ ರಜನಿಕಾಂತ್ ಮತ್ತೆ ಮುತ್ತುವೇಲ್ ಪಾಂಡಿಯನ್ ಪಾತ್ರದಲ್ಲಿ ಅಬ್ಬರಿಸಲಿದ್ದಾರೆ. ಈ ಬಾರಿ ಚಿತ್ರದಲ್ಲಿ ಮಿಥುನ್ ಚಕ್ರವರ್ತಿ, ವಿದ್ಯಾ ಬಾಲನ್, ಎಸ್.ಜೆ. ಸೂರ್ಯ ಮತ್ತು ಸೂರಜ್ ವೆಂಜಾರಮೂಡು ಪ್ರಮುಖ ಪಾತ್ರಗಳಲ್ಲಿ ನಟಿಸುತ್ತಿದ್ದಾರೆ. ಇವರ ಜೊತೆಗೆ ಮೊದಲ ಭಾಗದಲ್ಲಿದ್ದ ಮೋಹನ್‌ಲಾಲ್ ಮತ್ತು ಶಿವರಾಜ್‌ಕುಮಾರ್ ಕೂಡ ಸೀಕ್ವೆಲ್‌ನಲ್ಲಿ ಮುಂದುವರಿಯಲಿದ್ದಾರೆ.

ಇದನ್ನೂ ಓದಿ: ಭಾರತದಲ್ಲಿ ಸಿಗದ 5 ಕೋಟಿ ರೂಪಾಯಿ ಬೆಲೆಯ ಹೊಸ ಕಾರು ತರಿಸಿಕೊಂಡ ಶಾರುಖ್ ಖಾನ್

ಚಿತ್ರತಂಡ ಅಧಿಕೃತವಾಗಿ ಬಿಡುಗಡೆ ದಿನಾಂಕವನ್ನು ಘೋಷಿಸದಿದ್ದರೂ, ಮೂಲಗಳ ಪ್ರಕಾರ ಸಿನಿಮಾ ಸೆಪ್ಟೆಂಬರ್ 11ರಂದು ವಿಶ್ವದಾದ್ಯಂತ ತೆರೆಕಾಣುವ ಸಾಧ್ಯತೆ ಇದೆ. ಪಾತ್ರವರ್ಗದ ಕಾರಣದಿಂದ ಈ ಸಿನಿಮಾ ಆಗಾಗ ಸುದ್ದಿ ಆಗುತ್ತಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Source link

PhD Research Rules: ಪಿಎಚ್‌ಡಿ ಸಂಶೋಧಕರ ಗಮನಕ್ಕೆ; ಎಐ ಬಳಕೆ ಮತ್ತು ಕೃತಿಚೌರ್ಯಕ್ಕೆ ಬೀಳಲಿದೆ ಬ್ರೇಕ್! – Kannada News

ಪಿಎಚ್‌ಡಿ ಸಂಶೋಧಕರ ಗಮನಕ್ಕೆImage Credit source: Pinterest

ಕೃತಕ ಬುದ್ಧಿಮತ್ತೆ (AI) ತಂತ್ರಜ್ಞಾನದ ಬಳಕೆ ದಿನೇದಿನೆ ಹೆಚ್ಚಾಗುತ್ತಿರುವ ಬೆನ್ನಲ್ಲೇ, UGC ಪಿಎಚ್‌ಡಿ ಸಂಶೋಧನಾ ಪ್ರಬಂಧಗಳಲ್ಲಿ (Thesis) ಕಂಡುಬರುತ್ತಿರುವ ಕೃತಿಚೌರ್ಯ (Plagiarism) ಮತ್ತು ಎಐ ಉಪಕರಣಗಳ ದುರುಪಯೋಗವನ್ನು ತಡೆಯಲು ಹೊಸ ಮಾರ್ಗಸೂಚಿಗಳನ್ನು ಬಿಡುಗಡೆ ಮಾಡಿದೆ. ಈ ಹೊಸ ನಿಯಮಗಳ ಮುಖ್ಯ ಉದ್ದೇಶ ಸಂಶೋಧನಾ ಕಾರ್ಯಗಳ ನೈಜತೆಯನ್ನು ಕಾಪಾಡುವುದು ಮತ್ತು ದೇಶದ ಉನ್ನತ ಶಿಕ್ಷಣ ಹಾಗೂ ಸಂಶೋಧನೆಯ ವಿಶ್ವಾಸಾರ್ಹತೆಯನ್ನು ಎತ್ತಿಹಿಡಿಯುವುದಾಗಿದೆ. ಇದರೊಂದಿಗೆ, ಸಂಶೋಧನಾ ಪ್ರಕ್ರಿಯೆಯಲ್ಲಿ ಪಾರದರ್ಶಕತೆ ತರಲು ಮತ್ತು ಈ ನಿಯಮಗಳ ಬಗ್ಗೆ ಸಂಶೋಧಕರಿಗೆ ಕಡ್ಡಾಯವಾಗಿ ಮಾಹಿತಿ ನೀಡುವಂತೆ ದೇಶದ ಎಲ್ಲಾ ವಿಶ್ವವಿದ್ಯಾಲಯಗಳಿಗೆ ಯುಜಿಸಿ ಸೂಚನೆ ನೀಡಿದೆ.

ಕೃತಿಚೌರ್ಯದ ಪ್ರಮಾಣಕ್ಕೆ ತಕ್ಕಂತೆ ಕಠಿಣ ದಂಡನೆ:

ಯುಜಿಸಿ ತನ್ನ ಹೊಸ ಮಾರ್ಗಸೂಚಿಗಳಲ್ಲಿ ಪಿಎಚ್‌ಡಿ ಪ್ರಬಂಧಗಳ ಕೃತಿಚೌರ್ಯಕ್ಕೆ (ನಕಲು ಮಾಡುವುದು) ಸಂಬಂಧಿಸಿದಂತೆ ಅತ್ಯಂತ ಕಟ್ಟುನಿಟ್ಟಿನ ನಿಯಮಗಳನ್ನು ಜಾರಿಗೆ ತಂದಿದೆ. ನಕಲು ಮಾಡಿದ ಪ್ರಮಾಣದ ಆಧಾರದ ಮೇಲೆ ಶಿಕ್ಷೆಯನ್ನು ನಿಗದಿಪಡಿಸಲಾಗಿದೆ:

  • ಶೇಕಡಾ 10 ರಿಂದ 40 ರಷ್ಟು ನಕಲು: ಸಂಶೋಧನಾ ಪ್ರಬಂಧದಲ್ಲಿ ಈ ಪ್ರಮಾಣದ ಕೃತಿಚೌರ್ಯ ಕಂಡುಬಂದರೆ, ಅದನ್ನು ತಿದ್ದುಪಡಿಗಾಗಿ ವಿದ್ಯಾರ್ಥಿಗೆ ವಾಪಸ್ ನೀಡಲಾಗುತ್ತದೆ. ಇಂತಹ ಸಂಶೋಧಕರು ಮುಂದಿನ ಆರು ತಿಂಗಳ ಒಳಗಾಗಿ ಅಗತ್ಯ ಬದಲಾವಣೆಗಳನ್ನು ಮಾಡಿ ಪ್ರಬಂಧವನ್ನು ಮರುಸಲ್ಲಿಸಬೇಕಾಗುತ್ತದೆ.
  • ಶೇಕಡಾ 40 ರಿಂದ 60 ರಷ್ಟು ನಕಲು: ಒಂದು ವೇಳೆ ಪ್ರಬಂಧದಲ್ಲಿ ಕೃತಿಚೌರ್ಯದ ಪ್ರಮಾಣವು ಶೇಕಡಾ 40 ರಿಂದ 60 ರಷ್ಟಿದ್ದರೆ, ಆ ಸಂಶೋಧಕರಿಗೆ ಮುಂದಿನ ಒಂದು ವರ್ಷದವರೆಗೆ ಪ್ರಬಂಧವನ್ನು ಸಲ್ಲಿಸಲು ಅನುಮತಿ ನೀಡುವುದಿಲ್ಲ.
  • ಶೇಕಡಾ 60 ಕ್ಕಿಂತ ಹೆಚ್ಚು ನಕಲು: ಪ್ರಬಂಧದಲ್ಲಿ ಶೇಕಡಾ 60 ಕ್ಕಿಂತಲೂ ಅಧಿಕ ಪ್ರಮಾಣದ ಮಾಹಿತಿ ನಕಲು ಆಗಿರುವುದು ಸಾಬೀತಾದರೆ, ಅಂತಹ ವಿದ್ಯಾರ್ಥಿಯ ಪಿಎಚ್‌ಡಿ ನೋಂದಣಿಯನ್ನೇ (Registration) ಶಾಶ್ವತವಾಗಿ ರದ್ದುಗೊಳಿಸಲಾಗುತ್ತದೆ. ಈ ಮೂಲಕ ಸಂಶೋಧನೆಯಲ್ಲಿ ಕೇವಲ ನೈಜತೆಗೆ ಮಾತ್ರ ಮನ್ನಣೆ ಸಿಗುವಂತೆ ಯುಜಿಸಿ ನೋಡಿಕೊಳ್ಳುತ್ತಿದೆ.

ತಪ್ಪು ಮಾಡಿದರೆ ಸಂಶೋಧನಾ ಮಾರ್ಗದರ್ಶಕರಿಗೂ ಶಿಕ್ಷೆ:

ಹೊಸ ನಿಯಮಗಳ ಪ್ರಕಾರ, ಸಂಶೋಧನಾ ಪ್ರಬಂಧದಲ್ಲಿ ನಿಯಮಗಳ ಉಲ್ಲಂಘನೆಯಾದರೆ ಕೇವಲ ವಿದ್ಯಾರ್ಥಿ ಮಾತ್ರವಲ್ಲದೆ, ಅವರ ಸಂಶೋಧನಾ ಮಾರ್ಗದರ್ಶಕರು (ಗೈಡ್ ಅಥವಾ ಸೂಪರ್‌ವೈಸರ್) ಸಹ ನೇರ ಹೊಣೆಗಾರರಾಗುತ್ತಾರೆ. ಯಾವುದೇ ಒಬ್ಬ ವಿದ್ಯಾರ್ಥಿಯ ಪ್ರಬಂಧದಲ್ಲಿ ಗಂಭೀರ ಮಟ್ಟದ ಕೃತಿಚೌರ್ಯ ಕಂಡುಬಂದಲ್ಲಿ ಅಥವಾ ಇಂತಹ ತಪ್ಪುಗಳು ಪದೇಪದೇ ಮರುಕಳಿಸಿದರೆ, ಸಂಬಂಧಪಟ್ಟ ಮಾರ್ಗದರ್ಶಕರಿಗೆ ಹೊಸ ವಿದ್ಯಾರ್ಥಿಗಳಿಗೆ ಮಾರ್ಗದರ್ಶನ ನೀಡುವುದನ್ನು ನಿರ್ಬಂಧಿಸಲಾಗುತ್ತದೆ. ಅಷ್ಟೇ ಅಲ್ಲದೆ, ತಪ್ಪು ಗಂಭೀರ ಸ್ವರೂಪದ್ದಾಗಿದ್ದರೆ ಅವರ ಗೈಡ್‌ಶಿಪ್ ಮಾನ್ಯತೆಯನ್ನೂ ಸಹ ಸಂಪೂರ್ಣವಾಗಿ ರದ್ದುಗೊಳಿಸುವ ಅಧಿಕಾರವನ್ನು ವಿಶ್ವವಿದ್ಯಾಲಯಗಳಿಗೆ ನೀಡಲಾಗಿದೆ.

ಇದನ್ನೂ ಓದಿ: 16 ಸರ್ಕಾರಿ ಉದ್ಯೋಗ ತಿರಸ್ಕರಿಸಿ IPS ಆದ ಯುವತಿ; ಮೊದಲ ಪ್ರಯತ್ನದಲ್ಲೇ UPSC ಪಾಸ್ ಮಾಡಿದ ತೃಪ್ತಿ ಭಟ್ ಯಶೋಗಾಥೆ

ಕೃತಕ ಬುದ್ಧಿಮತ್ತೆ (AI) ಬಳಕೆಗೆ ಯುಜಿಸಿಯಿಂದ ಸ್ಪಷ್ಟ ಲಕ್ಷ್ಮಣ ರೇಖೆ:

ಪ್ರಬಂಧ ರಚನೆಯಲ್ಲಿ ಎಐ (AI) ತಂತ್ರಜ್ಞಾನದ ಬಳಕೆಗೆ ಸಂಬಂಧಿಸಿದಂತೆ ಯುಜಿಸಿ ಅತ್ಯಂತ ಸ್ಪಷ್ಟವಾದ ನೀತಿಯನ್ನು ರೂಪಿಸಿದೆ. ಸಂಶೋಧಕರು ತಮ್ಮ ಪ್ರಬಂಧದ ವ್ಯಾಕರಣ ದೋಷಗಳನ್ನು ತಿದ್ದಿಕೊಳ್ಳಲು, ಭಾಷಾ ಸಂಪಾದನೆಗೆ (Language Editing) ಮತ್ತು ಇತರ ಸಾಮಾನ್ಯ ಕಾರ್ಯಗಳಿಗಾಗಿ ಚಾಟ್‌ಜಿಪಿಟಿಯಂತಹ ಎಐ ಉಪಕರಣಗಳನ್ನು ಬಳಸಬಹುದು. ಆದರೆ, ತಾವು ಎಲ್ಲಿ ಮತ್ತು ಯಾವ ಕೆಲಸಕ್ಕಾಗಿ ಎಐ ಬಳಸಿದ್ದೇವೆ ಎಂಬುದನ್ನು ಪ್ರಬಂಧದಲ್ಲಿ ಕಡ್ಡಾಯವಾಗಿ ಉಲ್ಲೇಖಿಸಬೇಕಾಗುತ್ತದೆ. ಆದರೆ ನೆನಪಿರಲಿ, ಸಂಶೋಧನೆಯ ಮುಖ್ಯ ತಿರುಳಾದ ತೀರ್ಮಾನಗಳು (Conclusions), ಸಾರಾಂಶ (Summary) ಅಥವಾ ದತ್ತಾಂಶ ವಿಶ್ಲೇಷಣೆಯನ್ನು (Data Analysis) ಸಿದ್ಧಪಡಿಸಲು ಎಐನಿಂದ ಪಡೆದ ಸಿದ್ಧ ಸಾಮಗ್ರಿಗಳನ್ನು ಬಳಸುವುದನ್ನು ಸಂಪೂರ್ಣವಾಗಿ ನಿಷೇಧಿಸಲಾಗಿದೆ.

ಯುಜಿಸಿಯ ಈ ಕ್ರಾಂತಿಕಾರಿ ಹೆಜ್ಜೆಯು ಭಾರತೀಯ ಉನ್ನತ ಶಿಕ್ಷಣ ವಲಯದಲ್ಲಿ ಗುಣಮಟ್ಟದ ಸಂಶೋಧನೆಗೆ ಹೊಸ ದಾರಿಯನ್ನು ತೋರಿಸಲಿದೆ. ಎಐ ತಂತ್ರಜ್ಞಾನವನ್ನು ಕೇವಲ ಒಂದು ಸಹಾಯಕರ ವಸ್ತುವಾಗಿ ಬಳಸಬೇಕೇ ಹೊರತು, ಅದು ಸಂಶೋಧಕನ ಸ್ವಂತ ಬುದ್ಧಿಮತ್ತೆಗೆ ಪರ್ಯಾಯವಾಗಬಾರದು ಎಂಬುದನ್ನು ಈ ನಿಯಮಗಳು ಸ್ಪಷ್ಟಪಡಿಸುತ್ತವೆ. ಇನ್ಮುಂದೆ ಪಿಎಚ್‌ಡಿ ಪದವಿ ಪಡೆಯಲು ಕೇವಲ ಕಠಿಣ ಪರಿಶ್ರಮ ಮತ್ತು ಸಂಶೋಧನೆಯ ನೈಜತೆ ಮಾತ್ರವೇ ಮಾನದಂಡವಾಗಲಿದ್ದು, ಶಾರ್ಟ್‌ಕಟ್ ಹುಡುಕುವವರಿಗೆ ಯುಜಿಸಿ ಸೂಕ್ತ ರೀತಿಯಲ್ಲಿ ಬ್ರೇಕ್ ಹಾಕಿದೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Source link

ಸಿಂಗಾಪುರದಲ್ಲಿ ಭಾರತೀಯ ಸಮುದಾಯದ ವಿರುದ್ಧದ 14 ದ್ವೇಷಪೂರಿತ ಪೋಸ್ಟ್‌ಗಳಿಗೆ ನಿರ್ಬಂಧ – Kannada News

ಸಿಂಗಾಪುರ, ಜೂನ್ 07: ಸಿಂಗಾಪುರ(Singapore)ದಲ್ಲಿ ಭಾರತೀಯ ಸಮುದಾಯದ ಬಗ್ಗೆ ವಿಷಬೀಜ ಬಿತ್ತುತ್ತಿದ್ದ 14 ಪೋಸ್ಟ್​ಗಳನ್ನು ಸರ್ಕಾರ ನಿರ್ಬಂಧಿಸಿದೆ. ಜಾಗತಿಕ ಮಟ್ಟದಲ್ಲಿ ಬಹುಸಂಸ್ಕೃತಿ ಹಾಗೂ ವಿವಿಧ ಜನಾಂಗಗಳ ಸೌಹಾರ್ದಯುತ ಸಹಬಾಳ್ವೆಗೆ ಹೆಸರಾಗಿರುವ ಸಿಂಗಾಪುರ ಸರ್ಕಾರವು ತನ್ನ ದೇಶದಲ್ಲಿರುವ ಭಾರತ ಮೂಲದ ನಾಗರಿಕರ ಹಿತರಕ್ಷಣೆಗಾಗಿ ಅತ್ಯಂತ ಶ್ಲಾಘನೀಯ ಹಾಗೂ ದೃಢವಾದ ಹೆಜ್ಜೆಯನ್ನಿಟ್ಟಿದೆ. ಸಿಂಗಾಪುರದಲ್ಲಿರುವ ಭಾರತೀಯ ಸಮುದಾಯವನ್ನು ನಕಾರಾತ್ಮಕವಾಗಿ ಚಿತ್ರಿಸಲು ಹಾಗೂ ಜನಾಂಗೀಯ ವಿಭಜನೆ ಸೃಷ್ಟಿಸಲು ವಿದೇಶಿ ಮೂಲಗಳಿಂದ ಹರಡಲಾಗುತ್ತಿದ್ದ 14 ದ್ವೇಷಪೂರಿತ ಆನ್‌ಲೈನ್ ಪೋಸ್ಟ್‌ಗಳನ್ನು ಅಲ್ಲಿನ ಸರ್ಕಾರ ತಕ್ಷಣವೇ ನಿರ್ಬಂಧಿಸಿ ಆದೇಶ ಹೊರಡಿಸಿದೆ.

ಸರ್ಕಾರದ ಈ ತ್ವರಿತ ಮತ್ತು ಕಟ್ಟುನಿಟ್ಟಿನ ಕ್ರಮವು ಸಿಂಗಾಪುರದಲ್ಲಿರುವ ಲಕ್ಷಾಂತರ ಭಾರತೀಯರಲ್ಲಿ ಸುರಕ್ಷತೆಯ ಭಾವನೆಯನ್ನು ಮೂಡಿಸಿದೆ ಮತ್ತು ದೇಶದ ಸಾಮಾಜಿಕ ಏಕತೆಯನ್ನು ಮತ್ತಷ್ಟು ಗಟ್ಟಿಗೊಳಿಸಿದೆ. ಸಿಂಗಾಪುರದ ಗೃಹ ವ್ಯವಹಾರಗಳ ಸಚಿವಾಲಯವು (MHA) ಪರಿಸ್ಥಿತಿಯನ್ನು ಅತ್ಯಂತ ಗಂಭೀರವಾಗಿ ಪರಿಗಣಿಸಿ, ‘ಆನ್‌ಲೈನ್ ಕ್ರಿಮಿನಲ್ ಹಾರ್ಮ್ಸ್ ಆಕ್ಟ್ 2023’ ಅಡಿಯಲ್ಲಿ ತನ್ನ ವಿಶೇಷ ಅಧಿಕಾರವನ್ನು ಚಲಾಯಿಸಿದೆ.

ಯೂಟ್ಯೂಬ್, ಫೇಸ್‌ಬುಕ್ ಮತ್ತು ಎಕ್ಸ್ (ಟ್ವಿಟರ್) ನಂತಹ ಪ್ರಮುಖ ಅಂತಾರಾಷ್ಟ್ರೀಯ ಇಂಟರ್ನೆಟ್ ಮಾಧ್ಯಮ ವೇದಿಕೆಗಳಿಗೆ ಸಿಂಗಾಪುರ ಪೊಲೀಸರು ಕಟ್ಟುನಿಟ್ಟಿನ ನಿರ್ದೇಶನ ನೀಡಿದ್ದಾರೆ. ಈ ಪೋಸ್ಟ್‌ಗಳು ಸಿಂಗಾಪುರದ ಯಾವುದೇ ಬಳಕೆದಾರರಿಗೆ ಗೋಚರಿಸದಂತೆ ತಕ್ಷಣವೇ ಪ್ರವೇಶವನ್ನು ಸಂಪೂರ್ಣವಾಗಿ ನಿರ್ಬಂಧಿಸಲು ಆದೇಶಿಸಲಾಗಿದೆ.

ಲಿಟಲ್ ಇಂಡಿಯಾದ ಜನನಿಬಿಡ ಬೀದಿಗಳು ಹಾಗೂ ಸಾಂಪ್ರದಾಯಿಕ ಧಾರ್ಮಿಕ ಕಾರ್ಯಕ್ರಮಗಳ ಚಿತ್ರಗಳನ್ನು ದುರುಪಯೋಗಪಡಿಸಿಕೊಂಡು ವಾಸ್ತವವನ್ನು ವಿರೂಪಗೊಳಿಸಲು ಯತ್ನಿಸಿದ ಜಾಲವನ್ನು ಸರ್ಕಾರ ಯಶಸ್ವಿಯಾಗಿ ಹತ್ತಿಕ್ಕಿದೆ.

ಮತ್ತಷ್ಟು ಓದಿ: Video: ಖಾಲಿ ರಸ್ತೆಯಲ್ಲೂ ಗ್ರೀನ್ ಸಿಗ್ನಲ್ ಬರುವವರೆಗೂ ಕಾದು ನಿಂತ ವ್ಯಕ್ತಿ

‘ಚಾನೆಲ್ ನ್ಯೂಸ್ ಏಷ್ಯಾ’ ವರದಿಯ ಪ್ರಕಾರ, ಉನ್ನತ ಮಟ್ಟದ ತನಿಖಾ ಸಂಸ್ಥೆಗಳು ಈ ಆಕ್ಷೇಪಾರ್ಹ ಪೋಸ್ಟ್‌ಗಳ ಮೂಲವನ್ನು ಪತ್ತೆಹಚ್ಚಿದ್ದು, ಇವು ಚೀನಾದ ಆನ್‌ಲೈನ್ ಪ್ಲಾಟ್‌ಫಾರ್ಮ್ ಒಂದರಲ್ಲಿ ಹುಟ್ಟಿಕೊಂಡಿದ್ದವು ಎಂಬುದನ್ನು ಬಹಿರಂಗಪಡಿಸಿವೆ. ಅಲ್ಲಿಂದ ಇವುಗಳನ್ನು ಇತರ ವೆಬ್‌ಸೈಟ್‌ಗಳು ಹಂಚಿಕೊಂಡಿದ್ದವು.

ಕಾನೂನು ಸಚಿವ ಎಡ್ವಿನ್ ಟಾಂಗ್ ಅವರು ಮಾತನಾಡಿ, ಯಾವುದೇ ವಿದೇಶಿ ಸರ್ಕಾರಗಳು ಈ ವಿಷಯದ ಹರಡುವಿಕೆಯನ್ನು ಸಂಘಟಿಸಿವೆ ಎಂಬುದಕ್ಕೆ ಪ್ರಸ್ತುತ ಯಾವುದೇ ಪುರಾವೆಗಳಿಲ್ಲ. ಆದರೆ, ಮೂಲ ಯಾವುದೇ ಇರಲಿ, ನಮ್ಮ ಸಮಾಜದಲ್ಲಿ ಸೌಹಾರ್ದತೆಯನ್ನು ಕೆಡಿಸುವ ಇಂತಹ ಪ್ರಯತ್ನಗಳನ್ನು ನಾವು ಕಟುವಾಗಿ ವಿರೋಧಿಸುತ್ತೇವೆ, ಎಂದು ಸ್ಪಷ್ಟಪಡಿಸಿದ್ದಾರೆ.

ಸಿಂಗಾಪುರವು ಬಹುಸಂಸ್ಕೃತಿಯ ಸುಂದರ ಸಮಾಜವಾಗಿದ್ದು, ಇಲ್ಲಿ ಎಲ್ಲಾ ಜನಾಂಗೀಯ ಮತ್ತು ಧಾರ್ಮಿಕ ಸಮುದಾಯಗಳನ್ನು ಸಮಾನ ಗೌರವ ಮತ್ತು ಪ್ರೀತಿಯಿಂದ ನೋಡಲಾಗುತ್ತದೆ. ಭಾರತೀಯರ ಸಮಗ್ರತೆ ಮತ್ತು ಘನೆತೆಗೆ ಧಕ್ಕೆ ತರುವ ಯಾವುದೇ ದ್ವೇಷ ಸಂದೇಶಗಳನ್ನು ನಮ್ಮ ದೇಶದಲ್ಲಿ ಸಹಿಸುವುದಿಲ್ಲ.

ಜನಾಂಗೀಯ ಸಾಮರಸ್ಯ ಮತ್ತು ಸಾಮಾಜಿಕ ಸಮತೋಲನವನ್ನೇ ತನ್ನ ಅತಿ ದೊಡ್ಡ ಶಕ್ತಿ ಎಂದು ನಂಬಿರುವ ಸಿಂಗಾಪುರ ಸರ್ಕಾರವು, ಯಾವುದೇ ವದಂತಿಗಳನ್ನು ಕುರುಡಾಗಿ ನಂಬದಂತೆ ಮತ್ತು ಸಾಮಾಜಿಕ ಮಾಧ್ಯಮಗಳಲ್ಲಿ ಮಾಹಿತಿಯ ಸತ್ಯಾಸತ್ಯತೆಯನ್ನು ಪರಿಶೀಲಿಸುವಂತೆ ತನ್ನ ನಾಗರಿಕರಲ್ಲಿ ಜಾಗೃತಿ ಮೂಡಿಸುತ್ತಿದೆ. ಸಿಂಗಾಪುರ ಸರ್ಕಾರದ ಈ ಮಾದರಿ ನಡೆ ಜಾಗತಿಕ ಮಟ್ಟದಲ್ಲಿ ಭಾರತೀಯ ಸಮುದಾಯದ ರಕ್ಷಣೆಗೆ ದಿಕ್ಸೂಚಿಯಾಗಿದೆ.

ಅಂತಾರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Source link

15ನೇ ವಯಸ್ಸಿನಲ್ಲಿ ಕಣಕ್ಕಿಳಿದರೂ ಈ ವಿಶ್ವ ದಾಖಲೆ ಮುರಿಯಲು ಸಾಧ್ಯವಾಗಲ್ಲ! – Kannada News

ಅಂತಾರಾಷ್ಟ್ರೀಯ ಕ್ರಿಕೆಟ್‌ನ ಒತ್ತಡ ಮತ್ತು ಸವಾಲುಗಳನ್ನು ಎದುರಿಸಲು ಅಪಾರ ಅನುಭವ ಬೇಕು. ಆದರೆ, ಕ್ರಿಕೆಟ್ ಇತಿಹಾಸದಲ್ಲಿ ಕೆಲವೇ ಕೆಲವು ಅದ್ಭುತ ಪ್ರತಿಭೆಗಳು ತಮ್ಮ ಬಾಲ್ಯದಲ್ಲೇ ದೇಶವನ್ನು ಪ್ರತಿನಿಧಿಸಿ ಜಗತ್ತನ್ನು ಆಶ್ಚರ್ಯಚಕಿತಗೊಳಿಸಿದ್ದಾರೆ. ಅಂತಹ ಕಿರಿಯ ವಯಸ್ಸಿನ ಸಾಧಕರ ಪಟ್ಟಿಗೆ ಸೇರ್ಪಡೆಯಾಗಲು ಇದೀಗ ವೈಭವ್ ಸೂರ್ಯವಂಶಿ (Vaibhav Sooryavanshi) ಸಜ್ಜಾಗಿದ್ದಾರೆ.

ಅಂದರೆ ಐರ್ಲೆಂಡ್, ಇಂಗ್ಲೆಂಡ್ ಟಿ20 ಸರಣಿಗೆ ಹಾಗೂ ಏಷ್ಯನ್​ ಗೇಮ್ಸ್​ ಟಿ20 ಟೂರ್ನಿಗೆ ಆಯ್ಕೆ ಮಾಡಲಾದ ಟೀಮ್ ಇಂಡಿಯಾದಲ್ಲಿ ವೈಭವ್ ಸೂರ್ಯವಂಶಿ ಸ್ಥಾನ ಪಡೆದಿದ್ದಾರೆ. ಈ ಸರಣಿಗಳಲ್ಲಿ ಕಣಕ್ಕಿಳಿದರೆ ವೈಭವ್ ಸೂರ್ಯವಂಶಿ ಟೀಮ್ ಇಂಡಿಯಾ ಪರ ಅಂತಾರಾಷ್ಟ್ರೀಯ ಪಂದ್ಯವಾಡಿದ ಅತ್ಯಂತ ಕಿರಿಯ ಆಟಗಾರ ಎನಿಸಿಕೊಳ್ಳಲಿದ್ದಾರೆ.

ಸದ್ಯ ಈ ದಾಖಲೆ ಮಾಸ್ಟರ್ ಬ್ಲಾಸ್ಟರ್ ಸಚಿನ್ ತೆಂಡೂಲ್ಕರ್ ಹೆಸರಿನಲ್ಲಿದೆ. 1989 ರಲ್ಲಿ ಸಚಿನ್ ಭಾರತದ ಪರ ಮೊದಲ ಪಂದ್ಯವಾಡುವಾಗ ಅವರ ವಯಸ್ಸು 16 ವರ್ಷ 205 ದಿನಗಳು.

ಇದೀಗ ವೈಭವ್ ಸೂರ್ಯವಂಶಿ ವಯಸ್ಸು 15 ವರ್ಷ. ಅಂದರೆ ಐರ್ಲೆಂಡ್ ಅಥವಾ ಇಂಗ್ಲೆಂಡ್ ವಿರುದ್ಧದ ಟಿ20 ಸರಣಿಯಲ್ಲಿ ವೈಭವ್ ಕಣಕ್ಕಿಳಿದರೆ ಸಚಿನ್ ತೆಂಡೂಲ್ಕರ್ ಅವರ ದಾಖಲೆ ಮುರಿಯಲಿದ್ದಾರೆ. ಇದಾಗ್ಯೂ ವೈಭವ್ ಸೂರ್ಯವಂಶಿಗೆ ವಿಶ್ವ ದಾಖಲೆ ನಿರ್ಮಿಸಲು ಸಾಧ್ಯವಾಗುವುದಿಲ್ಲ.

ಏಕೆಂದರೆ ಅಂತಾರಾಷ್ಟ್ರೀಯ ಕ್ರಿಕೆಟ್​​ನಲ್ಲಿ 14 ವರ್ಷಕ್ಕೆ ಪಂದ್ಯವಾಡಿದ ಆಟಗಾರರಿದ್ದಾರೆ. ಈ ಸಾಧನೆ ಮಾಡಿದ ಮೊದಲ ಆಟಗಾರನ ಹೆಸರು ಹಸನ್ ರಾಝ.

  • 1996 ರಲ್ಲಿ ಹಸನ್ ರಾಝ ಪಾಕಿಸ್ತಾನ್ ಪರ ಮೊದಲ ಟೆಸ್ಟ್ ಪಂದ್ಯವಾಡುವಾಗ ಅವರ ವಯಸ್ಸು ಕೇವಲ ವಯಸ್ಸು ಕೇವಲ 14 ವರ್ಷ 227 ದಿನಗಳು.
  • ಟೆಸ್ಟ್ ಆಡಿದ ಕೆಲವೇ ದಿನಗಳಲ್ಲಿ (14 ವರ್ಷ 233 ದಿನಗಳು) ಏಕದಿನ ಕ್ರಿಕೆಟ್‌ಗೂ ಪದಾರ್ಪಣೆ ಮಾಡಿ ಎರಡೂ ಫಾರ್ಮ್ಯಾಟ್‌ಗಳಲ್ಲಿ ಕಣಕ್ಕಿಳಿದ ಅತ್ಯಂತ ಕಿರಿಯ ಆಟಗಾರ ಎಂಬ ದಾಖಲೆಯನ್ನು ಹಸನ್ ರಾಝ ನಿರ್ಮಿಸಿದ್ದಾರೆ.

ಪುರುಷರ ಟಿ20 ಅಂತಾರಾಷ್ಟ್ರೀಯ ಕ್ರಿಕೆಟ್​ನಲ್ಲಿ ಕಣಕ್ಕಿಳಿದ ಕಿರಿಯ ಆಟಗಾರ ಎಂಬ ರೊಮೇನಿಯಾದ ಮೇರಿಯನ್ ಗೆರಾಸಿಮ್ ಹೆಸರಿನಲ್ಲಿದೆ.

  • 2020 ರಲ್ಲಿ ಬಲ್ಗೇರಿಯಾ ವಿರುದ್ಧ ಕಣಕ್ಕಿಳಿದಾಗ ಮೇರಿಯನ್ ಗೆರಾಸಿಮ್ ಅವರ ವಯಸ್ಸು 14 ವರ್ಷ 16 ದಿನಗಳು.

ಅಂದರೆ ಅಂತಾರಾಷ್ಟ್ರೀಯ ಕ್ರಿಕೆಟ್​​ನಲ್ಲಿ ಕಣಕ್ಕಿಳಿದ ಅತ್ಯಂತ ಕಿರಿಯ ಆಟಗಾರ ಎಂಬ ದಾಖಲೆ ರೊಮೇನಿಯಾದ ಮೇರಿಯನ್ ಗೆರಾಸಿಮ್ ಹೆಸರಿನಲ್ಲಿದೆ. ಈ ದಾಖಲೆಯನ್ನು ಮುರಿಯಲು ಯಾರಿಗೂ ಸಾಧ್ಯವಿಲ್ಲ.

ಇದನ್ನೂ ಓದಿ: ಇದೆಂತಾ ಅನ್ಯಾಯ… ಈ ಮೂವರ ಬದಲಿಗೆ ಆ ಮೂವರಿಗೆ ಸ್ಥಾನ..!

ಏಕೆಂದರೆ ಐಸಿಸಿ (ICC) ಈಗ ಅಂತರರಾಷ್ಟ್ರೀಯ ಕ್ರಿಕೆಟ್ ಆಡಲು ಕನಿಷ್ಠ 15 ವರ್ಷ ವಯಸ್ಸಾಗಿರಬೇಕು ಎಂಬ ನಿಯಮವನ್ನು ತಂದಿದೆ. ಹೀಗಾಗಿ, ಮೇರಿಯನ್ ಗೆರಾಸಿಮ್ ಹಾಗೂ ಹಸನ್ ರಾಝ ಹೆಸರಿನಲ್ಲಿರುವ ದಾಖಲೆಗಳು ಕ್ರಿಕೆಟ್ ಇತಿಹಾಸದಲ್ಲಿ ಶಾಶ್ವತವಾಗಿ ಉಳಿಯಲಿದೆ ಎನ್ನಬಹುದು.

Source link

ದೆಹಲಿಯ ಪ್ರಾಧ್ಯಾಪಕಿಯನ್ನು ಕೊಲ್ಲಲು 1,400 ಕಿ.ಮೀ ದೂರದಿಂದ ಬಂದಿದ್ದ ಹಂತಕರು – Kannada News

ನವದೆಹಲಿ, ಜೂನ್ 07: ಇತ್ತೀಚೆಗಷ್ಟೇ ದೆಹಲಿ ವಿಶ್ವವಿದ್ಯಾಲಯದ ಶಿವಾಜಿ ಕಾಲೇಜಿನ ಪ್ರಾಧ್ಯಾಪಕಿ ದೇಬೋಸ್ಮಿತ್ ಪಾಲ್ ಅವರ ಕೊಲೆ(Murder) ನಡೆದಿತ್ತು. ಅವರನ್ನು ಹತ್ಯೆ ಮಾಡಲು ಹಂತಕರು 1,400 ಕಿ.ಮೀ ದೂರದಿಂದ ಬಂದಿದ್ದರು ಎನ್ನುವ ಮಾಹಿತಿ ಲಭ್ಯವಾಗಿದೆ. ಅಷ್ಟೇ ಅಲ್ಲದೆ ಪೊಲೀಸರು ಕೇವಲ ಮುರು ದಿನಗಳಲ್ಲಿ ಆರೋಪಿಗಳನ್ನು ಪತ್ತೆ ಹಚ್ಚಿದ್ದಾರೆ. ಪೊಲೀಸರ ಈ ತತ್‌ಕ್ಷಣದ ಮತ್ತು ವ್ಯವಸ್ಥಿತ ಕಾರ್ಯಾಚರಣೆಯು ಸಾರ್ವಜನಿಕರಲ್ಲಿ ಸುರಕ್ಷತೆ ಹಾಗೂ ನ್ಯಾಯಾಂಗ ವ್ಯವಸ್ಥೆಯ ಮೇಲಿನ ನಂಬಿಕೆಯನ್ನು ಮತ್ತಷ್ಟು ಬಲಪಡಿಸಿದೆ.

 ಆರೋಪಿಗಳನ್ನು ಪೊಲೀಸರು ಪತ್ತೆಹಚ್ಚಿದ್ದು ಹೇಗೆ?
ಪೂರ್ವ ದೆಹಲಿಯ ವಸುಧಾರ ಎನ್‌ಕ್ಲೇವ್‌ನಲ್ಲಿರುವ ಸತ್ಯಂ ಅಪಾರ್ಟ್‌ಮೆಂಟ್‌ನಲ್ಲಿ ಬುಧವಾರ ಈ ಘಟನೆ ನಡೆದಿತ್ತು. ದರೋಡೆಯ ಯಾವುದೇ ಕುರುಹು ಇಲ್ಲದ ಈ ನಿಗೂಢ ಪ್ರಕರಣವನ್ನು ಭೇದಿಸಲು ದೆಹಲಿ ಪೊಲೀಸರು ಅತ್ಯಾಧುನಿಕ ಹಾಗೂ ತಾಂತ್ರಿಕ ತನಿಖಾ ವಿಧಾನಗಳನ್ನು ಬಳಸಿದರು.

ಅಪಾರ್ಟ್‌ಮೆಂಟ್‌ನ ಸಿಸಿಟಿವಿ ದೃಶ್ಯಾವಳಿಗಳನ್ನು ಸೂಕ್ಷ್ಮವಾಗಿ ಪರಿಶೀಲಿಸಿದಾಗ, ಮಗುವಿನೊಂದಿಗೆ ಬಂದಿದ್ದ ಶಂಕಿತ ದಂಪತಿ ಕಣ್ಣಿಗೆ ಬಿದ್ದಿದ್ದಾರೆ. ಕೊಲೆಗಾರರು ಬಟ್ಟೆ ಬದಲಾಯಿಸಿ ಹೊರಹೋಗಲು ಬಳಸಿದ ಖಾಸಗಿ ಕ್ಯಾಬ್ ಅನ್ನು ಪೊಲೀಸರು ತಕ್ಷಣವೇ ಪತ್ತೆಹಚ್ಚಿ, ಅದರ ಚಾಲಕನನ್ನು ವಶಕ್ಕೆ ಪಡೆದರು. ಆತನ ರೈಡ್ ಬುಕಿಂಗ್ ವಿವರಗಳು ಮತ್ತು ಜಿಪಿಎಸ್ (GPS) ದತ್ತಾಂಶಗಳ ಮೂಲಕ ಪ್ರಯಾಣಿಕರ ಮೂಲ ಗುರುತನ್ನು ಪತ್ತೆಹಚ್ಚಲಾಯಿತು.

ಪೊಲೀಸರು ಅಂದು ವಸತಿ ಸಂಕೀರ್ಣಕ್ಕೆ ಭೇಟಿ ನೀಡಿದ್ದ 200 ವ್ಯಕ್ತಿಗಳಲ್ಲಿ 13 ಮುಖ್ಯ ಶಂಕಿತರನ್ನು ಶಾರ್ಟ್‌ಲಿಸ್ಟ್ ಮಾಡಿದರು. ತಕ್ಷಣವೇ ರಚನೆಯಾದ 7 ವಿಶೇಷ ಪೊಲೀಸ್ ತಂಡಗಳು ನಾಲ್ಕು ರಾಜ್ಯಗಳಲ್ಲಿ ಏಕಕಾಲಕ್ಕೆ ಮಿಂಚಿನ ದಾಳಿ ನಡೆಸಿ, ನೂರಾರು ಜನರನ್ನು ಪ್ರಶ್ನಿಸಿ, ಅಂತಿಮವಾಗಿ ಬಂಗಾಳದ ಬರ್ಧಮಾನ್‌ನಲ್ಲಿ ಆರೋಪಿಗಳನ್ನು ಲಾಕ್ ಮಾಡಿದರು.

ಮತ್ತಷ್ಟು ಓದಿ: ಅಪ್ರಾಪ್ತೆ ಕಿಡ್ನಾಪ್ ವೇಳೆ ಅಡ್ಡ ಬಂದ ವ್ಯಕ್ತಿಯ ಕೊಲೆ: ಕೊನೆಗೂ ಸಿಕ್ಕಿಬಿದ್ದ ಲವ್ ಬರ್ಡ್ಸ್ ಹಾಗೂ ಹಂತಕರು!

ಕೊಲೆಯ ಹಿಂದಿನ ಉದ್ದೇಶ
ಪ್ರಾಧ್ಯಾಪಕಿ ದೇಬೋಸ್ಮಿತಾ ಪಾಲ್ ಅವರು ಪಶ್ಚಿಮ ಬಂಗಾಳದಲ್ಲಿ ತಮ್ಮ ಅಜ್ಜನಿಂದ ಪಿತ್ರಾರ್ಜಿತವಾಗಿ ಕೋಟ್ಯಂತರ ರೂಪಾಯಿ ಮೌಲ್ಯದ ಆಸ್ತಿಯನ್ನು ಪಡೆದಿದ್ದರು. ಬಂಧಿತ ಆರೋಪಿಗಳು ಆ ಮನೆಯಲ್ಲಿ ಬಾಡಿಗೆದಾರರಾಗಿದ್ದು, ಅದನ್ನು ಅಕ್ರಮವಾಗಿ ಸ್ವಾಧೀನಪಡಿಸಿಕೊಳ್ಳಲು ಸಂಚು ರೂಪಿಸಿದ್ದರು. ಪಾಲ್ ಅವರು ಮನೆಯನ್ನು ಖಾಲಿ ಮಾಡುವಂತೆ ಕಾನೂನಾತ್ಮಕವಾಗಿ ಒತ್ತಡ ಹೇರುತ್ತಿದ್ದ ಹಿನ್ನೆಲೆಯಲ್ಲಿ ಈ ಕೃತ್ಯ ಎಸಗಲಾಗಿತ್ತು.

ಪಾಲ್ ಅವರ ಸಹೋದರಿ ದೇವರತಿ ಅವರು ನೀಡಿದ ದೂರಿನ ಮೇರೆಗೆ ಅತ್ಯಂತ ಸಕ್ರಿಯವಾಗಿ ಕಾರ್ಯಪ್ರವೃತ್ತರಾದ ಪೊಲೀಸರು ಆಸ್ತಿ ಹಪಹಪಿಯ ಇಡೀ ಜಾಲವನ್ನು ಜಗತ್ತಿನ ಮುಂದೆ ತಂದಿದ್ದಾರೆ.

ಅಪರಾಧ ಎಸಗಿ 1,400 ಕಿಲೋಮೀಟರ್ ದೂರ ಓಡಿಹೋದರೂ ಕಾನೂನಿನ ಕೈಯಿಂದ ತಪ್ಪಿಸಿಕೊಳ್ಳಲು ಸಾಧ್ಯವಿಲ್ಲ ಎಂಬುದನ್ನು ದೆಹಲಿ ಪೊಲೀಸರು ಸಾಬೀತುಪಡಿಸಿದ್ದಾರೆ. ತಂತ್ರಜ್ಞಾನ, ತ್ವರಿತ ನಿರ್ಧಾರ ಮತ್ತು ಇಲಾಖೆಗಳ ನಡುವಿನ ಸೌಹಾರ್ದಯುತ ಸಮನ್ವಯತೆಯಿಂದಾಗಿ ಈ ಭೀಕರ ಪ್ರಕರಣವು ಅತ್ಯಂತ ವೇಗವಾಗಿ ತಾರ್ಕಿಕ ಅಂತ್ಯಕ್ಕೆ ತಲುಪಿದ್ದು, ಮೃತ ಪ್ರಾಧ್ಯಾಪಕಿಯ ಕುಟುಂಬಕ್ಕೆ ಶೀಘ್ರ ನ್ಯಾಯ ಸಿಗುವ ಹಾದಿ ಸುಗಮವಾಗಿದೆ. ಪಾಲ್ 2022ರಲ್ಲಿ ಗಂಡನಿಂದ ಬೇರೆಯಾಗಿದ್ದರು, ಆಗ ಮದುವೆಯಾಗಿ ಐದು ವರ್ಷಗಳಾಗಿತ್ತು. ಅವರ ಪತಿ ಬೆಂಗಳೂರಿನಲ್ಲಿ ನೆಲೆಸಿದ್ದಾರೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Source link

ಗೃಹ ಬಳಕೆಯ ಸಿಲಿಂಡರ್ ಬೆಲೆ ಏರಿಕೆ: ರಾಜ್ಯದ ಗೃಹಿಣಿಯರು ಏನಂದ್ರು ನೋಡಿ – Kannada News

ಬೆಂಗಳೂರು, ಜೂನ್​ 07: ಬೆಲೆ ಏರಿಕೆಯಿಂದ ಕಂಲಾಗಿ ಹೋಗ್ತಿರುವ ಸಾಮಾನ್ಯ ಜನರಿಗೆ ತೈಲ ಕಂಪನಿಗಳು ಮತ್ತೊಂದು ಬಿಗ್ ಶಾಕ್ ನೀಡಿವೆ. ಅಗತ್ಯ ವಸ್ತುಗಳ ಬೆಲೆ ಏರಿಕೆಯಿಂದ ಕಂಗೆಟ್ಟಿದ್ದ ಸಾರ್ವಜನಿಕರ ಅಡುಗೆ ಮನೆಗೆ ಈಗ ನೇರವಾಗಿ ಬೆಂಕಿ ಬಿದ್ದಿದೆ. ಗೃಹ ಬಳಕೆ ಗ್ಯಾಸ್ ಸಿಲಿಂಡರ್ ಬೆಲೆ 29 ರೂಪಾಯಿ ಹೆಚ್ಚಳವಾಗಿದೆ. ಸದ್ಯ ಇದು ಜನ ಸಾಮಾನ್ಯರಿಗೆ ದೊಡ್ಡ ಶಾಕ್​ ಉಂಟುಮಾಡಿದೆ. ಕಳೆದ ಮೂರು ತಿಂಗಳಲ್ಲಿ ಅಡುಗೆ ಅನಿಲ ದರ 89 ರೂಪಾಯಿ ಹೆಚ್ಚಳವಾಗಿದೆ. ಸಿಲಿಂಡರ್ ಬುಕ್ ಮಾಡಿದ ನಂತರ ಒಂದು ಅಥವಾ ಎರಡು ತಿಂಗಳುಗಳ ಕಾಲ ಕಾಯಬೇಕಾದ ಪರಿಸ್ಥಿತಿ ನಿರ್ಮಾಣವಾಗಿದೆ. ಬೆಲೆ ಹೆಚ್ಚಾಗಿರುವುದರಿಂದ ಮನೆಯಲ್ಲಿ ಅಡುಗೆ ಮಾಡುವುದು ಅನಿವಾರ್ಯವಾಗಿದೆ. ಆದರೆ, ಗ್ಯಾಸ್ ಬೆಲೆ ಏರಿಕೆಯು ಅಡುಗೆ ವೆಚ್ಚವನ್ನು ಗಣನೀಯವಾಗಿ ಹೆಚ್ಚಿಸಿದೆ. ಬೇಳೆ, ಎಣ್ಣೆ, ಅಕ್ಕಿಯಂತಹ ಅಗತ್ಯ ವಸ್ತುಗಳ ಬೆಲೆಯೂ ಗಗನಕ್ಕೇರಿದೆ ಎಂದು ಜನರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ.

Source link

IND vs AFG: ಬೃಹತ್ ಮೊತ್ತ ಪೇರಿಸಿ ಡಿಕ್ಲೇರ್ ಘೋಷಿಸಿದ ಟೀಮ್ ಇಂಡಿಯಾ – Kannada News

ಅಫ್ಘಾನಿಸ್ತಾನ್ ವಿರುದ್ಧದ ಟೆಸ್ಟ್ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಟೀಮ್ ಇಂಡಿಯಾ ಬೃಹತ್ ಮೊತ್ತ ಪೇರಿಸಿ ಪ್ರಥಮ ಇನಿಂಗ್ಸ್ ಅಂತ್ಯಗೊಳಿಸಿದೆ. ಮುಲ್ಲನ್​ಪುರ್​ನ ಮಹಾರಾಜ ಯಾದವೀಂದ್ರ ಸಿಂಗ್ ಅಂತರಾಷ್ಟ್ರೀಯ ಕ್ರಿಕೆಟ್ ಸ್ಟೇಡಿಯಂನಲ್ಲಿ ನಡೆಯುತ್ತಿರುವ ಈ ಪಂದ್ಯದಲ್ಲಿ ಟಾಸ್ ಗೆದ್ ಟೀಮ್ ಇಂಡಿಯಾ ನಾಯಕ ಶುಭ್​​ಮನ್ ಗಿಲ್ ಬ್ಯಾಟಿಂಗ್ ಆಯ್ದುಕೊಂಡಿದ್ದರು.

ಅದರಂತೆ ಮೊದಲು ಬ್ಯಾಟ್ ಮಾಡಿದ ಟೀಮ್ ಇಂಡಿಯಾಗೆ ಕೆಎಲ್ ರಾಹುಲ್ ಹಾಗೂ ಯಶಸ್ವಿ ಜೈಸ್ವಾಲ್ ಉತ್ತಮ ಆರಂಭ ಒದಗಿಸಿದ್ದರು. ಆರಂಭದಿಂದಲೇ ಎಚ್ಚರಿಕೆಯ ಬ್ಯಾಟಿಂಗ್​ಗೆ ಒತ್ತು ನೀಡಿದ್ದ ಈ ಜೋಡಿಯು ಮೊದಲ ವಿಕೆಟ್​ಗೆ 41 ರನ್​ಗಳ ಜೊತೆಯಾಟವಾಡಿದ್ದರು. ಈ ಹಂತದಲ್ಲಿ 24 ರನ್​ಗಳಿಸಿದ್ದ ಜೈಸ್ವಾಲ್ ವಿಕೆಟ್ ಕೀಪರ್​ಗೆ ಕ್ಯಾಚಿತ್ತು ನಿರ್ಗಮಿಸಿದರು.

ಆ ಬಳಿಕ ಜೊತೆಗೂಡಿದ ಕೆಎಲ್ ರಾಹುಲ್ ಹಾಗೂ ಸಾಯಿ ಸುದರ್ಶನ್ ಭರ್ಜರಿ ಬ್ಯಾಟಿಂಗ್ ಪ್ರದರ್ಶಿಸಿದರು. ಇದರ ನಡುವೆ 104 ಎಸೆತಗಳಲ್ಲಿ 81 ರನ್ ಬಾರಿಸಿದ ಸಾಯಿ ಸುದರ್ಶನ್ ಬಿರುಸಿನ ಬ್ಯಾಟಿಂಗ್​ಗೆ ಮುಂದಾಗಿ ಕ್ಯಾಚ್ ನೀಡಿದರು.

ಇದಾಗ್ಯೂ ಮತ್ತೊಂದೆಡೆ ಕ್ರೀಸ್ ಕಚ್ಚಿ ಆಡಿದ ಕೆಎಲ್ ರಾಹುಲ್ 165 ಎಸೆತಗಳಲ್ಲಿ 11 ಫೋರ್​ಗಳೊಂದಿಗೆ ಶತಕ ಸಿಡಿಸಿದರು. ಅದರೆ ಶತಕದ ಬೆನ್ನಲ್ಲೇ ರಾಹಲ್ (100) ಕೂಡ ಕ್ಯಾಚ್ ನೀಡಿ ನಿರ್ಗಮಿಸಿದರು.

ರಾಹುಲ್ ನಿ್ರ್ಗಮನದ ಬಳಿಕ ಇನಿಂಗ್ಸ್ ಕಟ್ಟುವ ಜವಾಬ್ದಾರಿಯನ್ನು ಶುಭ್​​ಮನ್ ಗಿಲ್ ಹಾಗೂ ರಿಷಭ್ ಪಂತ್ ಹೆಗಲೇರಿಸಿಕೊಂಡರು. ಅದರಂತೆ ಗಿಲ್ 138 ಎಸೆತಗಳಲ್ಲಿ ಸೆಂಚುರಿ ಪೂರೈಸಿದರೆ, ರಿಷಭ್ ಪಂತ್ 70 ಎಸೆತಗಳಲ್ಲಿ ಅರ್ಧಶತಕ ಸಿಡಿಸಿದರು.

ಆ ಬಳಿಕ ಬಂದ ವಾಅಷಿಂಗ್ಟನ್ ಸುಂದರ್ ಅಜೇಯ 51 ರನ್ ಬಾರಿಸಿದರು.  ಈ ಭರ್ಜರಿ ಬ್ಯಾಟಿಂಗ್ ನೆರವಿನೊಂದಿಗೆ ಟೀಮ್ ಇಂಡಿಯಾ ಮೊದಲ ಇನಿಂಗ್ಸ್​ನಲ್ಲಿ 8 ವಿಕೆಟ್ ಕಳೆದುಕೊಂಡು 564 ರನ್​ಗಳಿಸಿ ಡಿಕ್ಲೇರ್ ಘೋಷಿಸಿದೆ.

ಭಾರತ (ಪ್ಲೇಯಿಂಗ್ XI): ಕೆಎಲ್ ರಾಹುಲ್, ಯಶಸ್ವಿ ಜೈಸ್ವಾಲ್, ಸಾಯಿ ಸುದರ್ಶನ್, ಶುಭ್​ಮನ್ ಗಿಲ್ (ನಾಯಕ), ರಿಷಭ್ ಪಂತ್ (ವಿಕೆಟ್ ಕೀಪರ್), ಧ್ರುವ್ ಜುರೆಲ್, ವಾಷಿಂಗ್ಟನ್ ಸುಂದರ್, ಮಾನವ್ ಸುತಾರ್, ಕುಲದೀಪ್ ಯಾದವ್, ಮೊಹಮ್ಮದ್ ಸಿರಾಜ್, ಪ್ರಸಿದ್ಧ್ ಕೃಷ್ಣ.

ಇದನ್ನೂ ಓದಿ: ವಿಶ್ವ ದಾಖಲೆ: ಕೇವಲ 5 ಎಸೆತಗಳಲ್ಲಿ ಮುಗಿದ ಟಿ20 ಪಂದ್ಯ

ಅಫ್ಘಾನಿಸ್ತಾನ್ (ಪ್ಲೇಯಿಂಗ್ XI): ಸೇದಿಕುಲ್ಲಾ ಅಟಲ್, ರಹಮಾನುಲ್ಲಾ ಗುರ್ಬಾಝ್, ಅಬ್ದುಲ್ ಮಲಿಕ್, ರಹಮತ್ ಶಾ, ಹಶ್ಮತುಲ್ಲಾ ಶಾಹಿದಿ (ನಾಯಕ), ಅಫ್ಸರ್ ಝಜೈ(ವಿಕೆಟ್ ಕೀಪರ್), ಅಝ್ಮತುಲ್ಲಾ ಒಮಝಾಹಿ, ಶರಫುದ್ದೀನ್ ಅಶ್ರಫ್, ನಂಗಿಯಾಲೈ ಖರೋಟಿ, ಝಿಯಾವುರ್ ರಹಮಾನ್ ಶರೀಫಿ, ಮೊಹಮ್ಮದ್ ಶರೀಫಿ.

Source link

ಬಿಬಿಎಂಪಿ ಕಸ ಗುತ್ತಿಗೆ ವಿವಾದ: ಪರಿಶೀಲನೆಗೆ ಉನ್ನತ ಮಟ್ಟದ ಸಮಿತಿ ರಚನೆ – Kannada News

ಬೆಂಗಳೂರು, ಜೂನ್ 7: ಮುಂದಿನ 30 ವರ್ಷಗಳಿಗೆ ಬೆಂಗಳೂರಿನ ಕಸ ನಿರ್ವಹಿಸುವ ಗುತ್ತಿಗೆಗೆ (Garbage Management) ಅನುಮೋದನೆ ನೀಡಿದ್ದ ಸರ್ಕಾರ ಇದೀಗ ಮನಸು ಬದಲಾಯಿಸಿದೆ. 39,437 ಕೋಟಿ ರೂಗಳ ಬೃಹತ್ ಟೆಂಡರ್ ವಿವಾದಕ್ಕೆ ಸಂಬಂಧಿಸಿದಂತೆ ಕರ್ನಾಟಕ ಸರ್ಕಾರವು ತನಿಖಾ ಸಮಿತಿಯನ್ನು ರಚಿಸಿದೆ. ಈ ಟೆಂಡರ್‌ನಲ್ಲಿನ ವೆಚ್ಚವು ಅತಿಯಾಗಿದೆಯೆಂದು ಮತ್ತು 30 ವರ್ಷಗಳ ಸುದೀರ್ಘ ಅವಧಿಗೆ ಒಂದೇ ಕಂಪನಿಗೆ ಗುತ್ತಿಗೆ ನೀಡಿರುವುದು ಸರಿಯಲ್ಲವೆಂದು ರಾಜ್ಯ ಹಣಕಾಸು ಇಲಾಖೆಯು ತೀವ್ರ ಆಕ್ಷೇಪ ವ್ಯಕ್ತಪಡಿಸಿತ್ತು. ಈ ಹಿನ್ನೆಲೆಯಲ್ಲಿ ಟೆಂಡರ್ ನಿಯಮಗಳನ್ನು ಪರಿಶೀಲಿಸಲು ಸರ್ಕಾರವು ಉನ್ನತ ಮಟ್ಟದ ಸಮಿತಿಯನ್ನು ರಚಿಸಿದೆ ಎಂದು ಡೆಕನ್ ಹೆರಾಲ್ಡ್ ಪತ್ರಿಕೆಯಲ್ಲಿ ವರದಿಯಾಗಿದೆ.

ಈ ನಾಲ್ಕು ಸದಸ್ಯರ ಸಮಿತಿಯಲ್ಲಿ ಅರಣ್ಯ, ಪರಿಸರ ಮತ್ತು ಪರಿಸರ ವಿಜ್ಞಾನ ಇಲಾಖೆಯ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಅಂಜುಮ್ ಪರ್ವೇಜ್, ಹಣಕಾಸು ಇಲಾಖೆಯ ಕಾರ್ಯದರ್ಶಿ ಡಾ. ಪಿ.ಸಿ. ಜಾಫರ್, ಗ್ರೇಟರ್ ಬೆಂಗಳೂರು ಅಥಾರಿಟಿಯ (GBA) ಮುಖ್ಯ ಇಂಜಿನಿಯರ್ ಮತ್ತು ಜಿಬಿಎ ಮುಖ್ಯ ಆಯುಕ್ತ ಎಂ. ಮಹೇಶ್ವರ ರಾವ್ (ಸದಸ್ಯ ಕಾರ್ಯದರ್ಶಿ) ಇದ್ದಾರೆ.

ಇದನ್ನೂ ಓದಿ: ಬೆಂಗಳೂರು ಪೂರ್ವ ನಗರ ನಿಗಮದಿಂದ ಬೃಹತ್ ಸ್ವಚ್ಛತಾ ಸಪ್ತಾಹ; 100 ಟನ್ ಕಸ ವಿಲೇವಾರಿ!

ಹಣಕಾಸು ಇಲಾಖೆ ಎತ್ತಿರುವ ಆಕ್ಷೇಪಣೆಗಳನ್ನು ಕೂಲಂಕಷವಾಗಿ ಪರಿಶೀಲಿಸಿ, ಏಳು ದಿನಗಳೊಳಗೆ ಸರ್ಕಾರಕ್ಕೆ ವರದಿ ಸಲ್ಲಿಸುವಂತೆ ಸಮಿತಿಗೆ ಸೂಚಿಸಲಾಗಿದೆ.

ಹಣಕಾಸು ಇಲಾಖೆ ವ್ಯಕ್ತಪಡಿಸಿದ ಪ್ರಮುಖ ಆಕ್ಷೇಪಣೆಗಳು

  • ಸರ್ಕಾರವು ಈ ಯೋಜನೆಗಾಗಿ 33,047 ಕೋಟಿ ರೂ. ವೆಚ್ಚವಾಗಬಹುದೆಂದು ಅಂದಾಜಿಸಿತ್ತು, ಆದರೆ ಬಿಡ್‌ದಾರರು 39,437 ಕೋಟಿ ರೂ. ಕೋಟ್ ಮಾಡಿದ್ದಾರೆ. ಅಂದರೆ ಅಂದಾಜಿನ ಮೊತ್ತಕ್ಕಿಂತ ಸುಮಾರು 6,390 ಕೋಟಿ ರೂ. ಹೆಚ್ಚು. ಇದು ಹಣಕಾಸು ಇಲಾಖೆ ತಕರಾರು ಎತ್ತಿರುವ ಒಂದು ಸಂಗತಿ.
  • ಒಪ್ಪಂದದಲ್ಲಿ ವಾರ್ಷಿಕ 5% ದರ ಏರಿಕೆಯ ಷರತ್ತು ಇದೆ. 30 ವರ್ಷಗಳ ಅವಧಿಯಲ್ಲಿ ಇದು ಮೂಲ ದರಕ್ಕಿಂತ ಸುಮಾರು 4.5 ಪಟ್ಟು ಅಧಿಕವಾಗಲಿದೆ ಎಂದೂ ಇಲಾಖೆ ಎಚ್ಚರಿಸಿದೆ.
  • ಇಡೀ ನಗರದ ಕಸ ನಿರ್ವಹಣೆಯನ್ನು 30 ವರ್ಷಗಳ ಕಾಲ ಒಬ್ಬರೇ ಖಾಸಗಿ ಕಂಪನಿಗೆ ನೀಡುವುದರಿಂದ “ವೆಂಡರ್ ಲಾಕ್-ಇನ್” (Vendor Lock-in) ಪರಿಸ್ಥಿತಿ ಉಂಟಾಗುತ್ತದೆ ಎಂಬ ಆತಂಕ ವ್ಯಕ್ತವಾಗಿದೆ.
  • ಟೆಂಡರ್ ಪ್ರಕಾರ, 30 ವರ್ಷ ಕಾಲ ವಾರ್ಷಿಕವಾಗಿ ಶೇ. 5ರಷ್ಟು ಏರಿಕೆ ಮಾಡಬೇಕು. ಇದಾದರೆ 30 ವರ್ಷದ ಬಳಿಕ ಕಸ ನಿರ್ವಹಣೆಯ ಗುತ್ತಿಗೆಯ ವೆಚ್ಚ ಈಗಿರುವುದಕ್ಕಿಂತ ನಾಲ್ಕೂವರೆ ಪಟ್ಟು ಹೆಚ್ಚುತ್ತದೆ ಎಂಬುದು ಹಣಕಾಸು ಇಲಾಖೆಯ ತಗಾದೆ.
  • ಸರ್ಕಾರವೇ ಭೂಮಿ ಒದಗಿಸುತ್ತಿರುವಾಗ, ಇಷ್ಟು ದೀರ್ಘಾವಧಿಯ (30 ವರ್ಷ) ಅವಶ್ಯಕತೆಯಿಲ್ಲ ಎಂದು ಅಭಿಪ್ರಾಯಪಟ್ಟಿರುವ ಇಲಾಖೆ, ಇದನ್ನು 10 ವರ್ಷಗಳಿಗೆ ಸೀಮಿತಗೊಳಿಸುವಂತೆ ಮತ್ತು ವಾರ್ಷಿಕ ಏರಿಕೆ ದರವನ್ನು 2.5%ಕ್ಕೆ ಮಿತಿಗೊಳಿಸುವಂತೆ ಶಿಫಾರಸು ಮಾಡಿತ್ತು.

ಇದನ್ನೂ ಓದಿ: Bengaluru Air Quality: ಬೆಂಗಳೂರಿನಲ್ಲಿ ಉತ್ತಮ ವಾಯು ಗುಣಮಟ್ಟ: ಸಿಲ್ಕ್ ಬೋರ್ಡ್‌ನಲ್ಲಿ ಮಾತ್ರ ಕೊಂಚ ಏರಿಕೆ

ಈ ಟೆಂಡರ್ ಅನ್ನು ದೆಹಲಿ ಮೂಲದ ‘ಡೆಲ್ಲಿ ಎಂಎಸ್‌ಡಬ್ಲ್ಯೂ ಸೊಲ್ಯೂಷನ್ಸ್ ಲಿಮಿಟೆಡ್’ಗೆ ನೀಡಲಾಗಿದೆ. ಇದು ಹೈದರಾಬಾದ್ ಮೂಲದ ರಾಮ್ಕಿ ಗ್ರೂಪ್‌ನ ಸಹವರ್ತಿ ಸಂಸ್ಥೆಯಾಗಿದೆ.

ಇನ್ನಷ್ಟು ರಾಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

Source link

ಸ್ವಕ್ಷೇತ್ರ ಕನಕಪುರಕ್ಕೆ ಡಿಕೆ ಶಿವಕುಮಾರ್ ಭೇಟಿ: ನಿಮ್ಮೊಂದಿಗೆ ಸದಾ ಇರ್ತೆನೆ ಎಂಬ ಸಂದೇಶ ರವಾನಿಸಿದ ಸಿಎಂ – Kannada News

ರಾಮನಗರ, ಜೂನ್​​ 07: ಸಿಎಂ ಆಗಿ ಅಧಿಕಾರದ ಗದ್ದುಗೆ ಏರಿರುವ ಡಿಕೆ ಶಿವಕುಮಾರ್ (DK Shivakumar), ತಮ್ಮ ಸೀಮೆಯ ಜನರಿಗೆ ಇಂದು ಕೃತಜ್ನತೆ ಸಲ್ಲಿಸಿದ್ದಾರೆ. ಮುಖ್ಯಮಂತ್ರಿ ಪಟ್ಟಕ್ಕೇರಿದ ಬಳಿಕ ಮೊದಲ ಬಾರಿಗೆ, ಸ್ವಕ್ಷೇತ್ರ ಕನಕಪುರಕ್ಕೆ (Kanakapura) ಭೇಟಿ ಕೊಟ್ಟಿದ್ದಾರೆ. ಜನರ ನಡುವೆ ನಿಂತು, ನಾನು ನಿಮ್ಮ ಮನೆ ಮಗ, ನಿಮ್ಮೊಂದಿಗೆ ಸದಾ ಇರುತ್ತೇನೆ ಎನ್ನುವ ಸಂದೇಶ ರವಾನಿಸಿದ್ದಾರೆ.

ಮೆಟ್ರೋದಲ್ಲಿ ಪ್ರಯಾಣ

ಇನ್ನು ಕನಕಪುರಕ್ಕೆ ತೆರಳುವ ಮುನ್ನ ಸಿಎಂ ಡಿಕೆ ಶಿವಕುಮಾರ್, ಮಾದರಿ ಹೆಜ್ಜೆಯೊಂದನ್ನ ಇಟ್ಟರು. ಝೀರೋ ಟ್ರಾಫಿಕ್ ತಪ್ಪಿಸುವುದಕ್ಕಾಗಿ ವಿಧಾನಸೌಧದದಿಂದ ರೇಷ್ಮೆ ಸಂಸ್ಥೆವರೆಗೆ ಮೆಟ್ರೋದಲ್ಲಿಯೇ ತೆರಳಿದರು. ಮೆಟ್ರೋದಲ್ಲಿ ಪ್ರಯಾಣ ವೇಳೆ, ಜನರೊಂದಿಗೆ ಆತ್ಮೀಯವಾಗಿ ಬೆರೆತು, ಮಾತುಕತೆ ಮಾಡಿದರು. ಸಿಲ್ಕ್ ಇನ್‌ಸ್ಟಿಟ್ಯೂಟ್​ನಿಂದ ಕನಕಪುರಕ್ಕೆ ಕಾರಿನಲ್ಲಿ ಸಿಎಂ ಡಿಕೆ ಶಿವಕುಮಾರ್​ ಪ್ರಯಾಣ ಬೆಳಸಿದರು. ಬೆಂಗಳೂರು ದಕ್ಷಿಣ ಜಿಲ್ಲೆಯ ಹಾರೋಹಳ್ಳಿಗೆ ಆಗಮಿಸಿದ ಸಿಎಂರನ್ನ ಶಾಸಕ ಇಕ್ಬಾಲ್​​ ಸ್ವಾಗತಿಸಿದರು. ಆಂಜನೇಯ ಸ್ವಾಮಿ ದೇವಸ್ಥಾನದಿಂದ ಬಸ್ ನಿಲ್ದಾಣದ ಸರ್ಕಲ್​ವರೆಗೆ ಮೆರವಣಿಗೆ ಮಾಡಿದರು.

ಮುಖ್ಯಮಂತ್ರಿ ಆಗಿದ್ದರೂ ನಾನು ನಿಮ್ಮ ಸೇವಕ: ಡಿಕೆ ಶಿವಕುಮಾರ್

ಈ ವೇಳೆ ಜನರನ್ನು ಉದ್ದೇಶಿಸಿ ಮಾತನಾಡಿದ ಸಿಎಂ ಡಿಕೆ ಶಿವಕುಮಾರ್​, ನೀವು ಗೆಲ್ಲಿಸಿದ್ದಕ್ಕೆ ನಾನು ಮುಖ್ಯಮಂತ್ರಿ ಆಗಿದ್ದೇನೆ. ಮುಖ್ಯಮಂತ್ರಿ ಆಗಿದ್ದರೂ ನಾನು ನಿಮ್ಮ ಸೇವಕ. ನಿಮ್ಮೆಲ್ಲರ ಆಶೀರ್ವಾದದಿಂದ ನಾನು ಸಫಲವಾಗಿದ್ದೇನೆ. ನಿಮ್ಮ ಏನೇ ಸಮಸ್ಯೆ ಇದ್ದರೂ ನಮ್ಮ ಮನೆಯ ಬಾಗಿಲು ತೆರೆದಿರುತ್ತೆ. ನಿಮ್ಮ ಸಮಸ್ಯೆಗಳಿಗೆ ಪರಿಹಾರ ನೀಡುತ್ತೇನೆ ಎಂದರು. ನನ್ನ ಮೇಲೆ ವಿಶ್ವಾಸ ಇಟ್ಟು ಇಕ್ಬಾಲ್ ಹುಸೇನ್​​ರನ್ನು ಗೆಲ್ಲಿಸಿದ್ದೀರಿ. ಇಕ್ಬಾಲ್ ಹುಸೇನ್ ಹೆಸರಿಗೆ ಮಾತ್ರ, ರಾಮನಗರಕ್ಕೆ ನಾನೇ ಶಾಸಕ ಎಂದು ಹೇಳಿದ್ದಾರೆ.

ಇದನ್ನೂ ಓದಿ: CM DKS in Metro: ಮೆಟ್ರೋ ಪ್ರಯಾಣಿಕರ ಜೊತೆ ಸಿಎಂ ಡಿ.ಕೆ ಶಿವಕುಮಾರ್ ಫೋಟೋ !

ಬೆಂಗಳೂರು ದಕ್ಷಿಣ ಜಿಲ್ಲೆ ಎಂದು ಘೋಷಿಸಿದ್ದು ಐತಿಹಾಸಿಕ ನಿರ್ಧಾರ. ಹೆಸರು ಬದಲಾವಣೆಯಿಂದ ನಿಮ್ಮ ಭೂಮಿಯ ಬೆಲೆ ಹೆಚ್ಚಾಯಿತು. ಬೆಂಗಳೂರು ದಕ್ಷಿಣ ಜಿಲ್ಲೆ ಮಾಡೋದಕ್ಕೆ ಕೆಲವರು ವಿರೋಧಿಸಿದರು. ಜಿಲ್ಲೆಯ ಹೆಸರು ಬದಲಾವಣೆಯಿಂದ ಈಗ ಎಲ್ಲರಿಗೂ ಅರ್ಥವಾಗುತ್ತಿದೆ. ಹಾರೋಹಳ್ಳಿ ಅಭಿವೃದ್ಧಿಗೆ ಪ್ರತ್ಯೇಕ ಮೀಟಿಂಗ್ ಮಾಡುತ್ತೇನೆ. ಕನಕಪುರದಲ್ಲಿ ಶೀಘ್ರದಲ್ಲೇ ಮೆಡಿಕಲ್ ಕಾಲೇಜು ನಿರ್ಮಾಣಕ್ಕೆ ಶಂಕುಸ್ಥಾಪನೆ ಮಾಡುತ್ತೇವೆ. ತುಮಕೂರು, ಬೆಂಗಳೂರು ಗ್ರಾಮಾಂತರ ಭಾಗದವರಿಗೂ ಅನುಕೂಲವಾಗುತ್ತದೆ. ಇಲ್ಲಿನ ಜನರು ಬೆಂಗಳೂರಿಗೆ ವಲಸೆ ಹೋಗುವುದನ್ನು ತಪ್ಪಿಸುತ್ತೇವೆ. ಉತ್ತಮ ವಿದ್ಯಾಭ್ಯಾಸ ಇಲ್ಲೇ ದೊರಕುವಂತೆ ಮಾಡುತ್ತೇವೆ ಎಂದರು.

ದೇವರು ಅವಕಾಶ ಮಾತ್ರ ಕೊಡುತ್ತಾನೆ: ಸಿಎಂ

ಇನ್ನು ಬಿಜೆಪಿ ದೂರ ಇಡಬೇಕು ಎಂದು ಅನಿತಾ ಕುಮಾರಸ್ವಾಮಿಗೆ ಬೆಂಬಲ ನೀಡಿದ್ದೆ. ಜೆಡಿಎಸ್ ಪಕ್ಷದವರಿಗೆ ಕಾಂಗ್ರೆಸ್ ಪಕ್ಷದ ಬಾಗಿಲು ತೆಗೆದಿದೆ. ದೇವರು ವರ, ಶಾಪ ಕೊಡಲ್ಲ, ಅವಕಾಶ ಮಾತ್ರ ಕೊಡುತ್ತಾನೆ. ಮುಂದಿನ ಬಾರಿ 136 ಸೀಟ್​​ಗಿಂತಲೂ ಹೆಚ್ಚು ಬೆಂಬಲ ನೀಡಬೇಕು ಎಂದು ಸಿಎಂ ಡಿಕೆ ಶಿವಕುಮಾರ್ ಹೇಳಿದ್ದಾರೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Source link

ಚಿನ್ನಸ್ವಾಮಿ ಸ್ಟೇಡಿಯಂ ಸಿಸಿಟಿವಿ ವಿವಾದಕ್ಕೆ ಭಾರಿ ಟ್ವಿಸ್ಟ್: ಬಾಕಿ ಹಣ ನೀಡದೆ ಅಮಾಯಕರ ಮೇಲೆ ಸುಳ್ಳು ಕೇಸ್ ಹಾಕಿದ ಆರೋಪ – Kannada News

ಚಿನ್ನಸ್ವಾಮಿ ಸ್ಟೇಡಿಯಂ ಸಿಸಿಟಿವಿ ವಿವಾದಕ್ಕೆ ಭಾರಿ ಟ್ವಿಸ್ಟ್

ಬೆಂಗಳೂರು, ಜೂನ್ 07: ಎಂ. ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಐಪಿಎಲ್ ಪಂದ್ಯಗಳ ವೇಳೆ ಸಿಸಿಟಿವಿ ವೈರ್ ಕಟ್ (CCTV wire cut) ಮಾಡಲಾಗಿತ್ತು ಎಂಬ ಆರೋಪದ ಬೆನ್ನಲ್ಲೇ ಈಗ ಪ್ರಕರಣಕ್ಕೆ ಭಾರಿ ಟ್ವಿಸ್ಟ್ ಸಿಕ್ಕಿದೆ. ಪಂದ್ಯದ ವೇಳೆ ಯಾವುದೇ ದುಷ್ಕೃತ್ಯ ಅಥವಾ ಭದ್ರತಾ ಲೋಪ ಆಗಿರಲಿಲ್ಲ, ಬದಲಿಗೆ ಬಾಕಿ ಹಣ ನೀಡದೇ ವಂಚಿಸಲು ಸಿಸಿಟಿವಿ ತಂತ್ರಜ್ಞಾನ ಸಂಸ್ಥೆಗಳು ಅಮಾಯಕರ ಮೇಲೆ ಸುಳ್ಳು ಕೇಸ್ ದಾಖಲಿಸಿ ಕಣ್ಣಿಗೆ ಮಣ್ಣೆರಚುವ ಕೆಲಸ ಮಾಡಿವೆ ಎಂಬ ಗಂಭೀರ ಆರೋಪ ಕೇಳಿಬಂದಿದೆ.

ಮುಖ್ಯಾಂಶಗಳು

  • ಚಿನ್ನಸ್ವಾಮಿ ಸ್ಟೇಡಿಯಂ ಸಿಸಿಟಿವಿ ಪ್ರಕರಣಕ್ಕೆ ಈಗ ಹೊಸ ಟ್ವಿಸ್ಟ್ ಸಿಕ್ಕಿದೆ.
  • ಬಾಕಿ ನಲವತ್ತು ಲಕ್ಷ ರೂಪಾಯಿ ನೀಡದೆ ವಂಚಿಸಿರುವ ಆರೋಪ ಕೇಳಿಬಂದಿದೆ.
  • ತಪ್ಪು ಮುಚ್ಚಿಕೊಳ್ಳಲು ಅಮಾಯಕ ಯುವಕರ ಮೇಲೆ ಸುಳ್ಳು ಕೇಸ್ ಹಾಕಲಾಗಿದೆ.

ಕೊಡಬೇಕಿದ್ದ ಹಣ ಕೊಡದೇ ವಂಚನೆ

ಆರ್‌ಸಿಬಿ ಮತ್ತು ಕೆಎಸ್‌ಸಿಎ ಮುಖಾಂತರ ಸ್ಟೇಡಿಯಂನ ಭದ್ರತಾ ನಿಯಮಾವಳಿ (SOP) ಸಂಬಂಧಿಸಿದಂತೆ ಒಟ್ಟು 7 ಕೋಟಿ ರೂಪಾಯಿಗಳ ಯೋಜನೆ ಸಿದ್ಧವಾಗಿತ್ತು. ಇದರಲ್ಲಿ ಹರಿಯಾಣ ಮೂಲದ ಸ್ಟಾಕು (Staqu) ಸಂಸ್ಥೆಗೆ 4.5 ಕೋಟಿಗೆ ಟೆಂಡರ್ ನೀಡಲಾಗಿತ್ತು. ಆ ಬಳಿಕ ಎರಡನೇ ವೆಂಡರ್ ಆಗಿ ಗುಜರಾತ್ ಮೂಲದ ಟೆಕ್‌ಸ್ಟಿಚ್ (Techstitch) ಸಂಸ್ಥೆ ಹಾಗೂ ಅಂತಿಮವಾಗಿ ಪುಣೆ ಮೂಲದ ಐವಿಎಸ್ ಟೆಕ್ ಸೆಕ್ಯೂರ್ ಪ್ರೈವೇಟ್ ಲಿಮಿಟೆಡ್ (IVS Tech Secure Pvt Ltd) ಕಂಪನಿಗೆ ಸಿಸಿಟಿವಿ ಅಳವಡಿಕೆಯ ಹೊಣೆ ಸಿಕ್ಕಿತ್ತು. ಐವಿಎಸ್ ಸಂಸ್ಥೆಯು ಬೆಂಗಳೂರಿನ ಸಿಬ್ಬಂದಿ ಮೂಲಕ 1.2 ಕೋಟಿ ರೂಪಾಯಿಯ ಕೊಟೇಷನ್ ನೀಡಿ ಕೆಲಸ ಮುಗಿಸಿತ್ತು. ಆದರೆ ಮೂರು ಪಂದ್ಯಗಳು ಮುಗಿದ ಬಳಿಕ 1 ಕೋಟಿ ರೂಪಾಯಿ ನೀಡಿ, ಇನ್ನುಳಿದ 40 ಲಕ್ಷ ರೂಪಾಯಿ ಬಾಕಿ ಹಣ ನೀಡದೇ ಕಂಪನಿಗಳು ಸತಾಯಿಸಿದ್ದವು.

ತಪ್ಪು ಮುಚ್ಚಿಹಾಕಲು ಸುಳ್ಳು ಕೇಸ್?

ಕೊನೆಯ ಪಂದ್ಯಕ್ಕೂ ಮುನ್ನ ಕ್ರೀಡಾಂಗಣದಲ್ಲಿ ಪವರ್ ಸಮಸ್ಯೆಯಿಂದಾಗಿ ಸಿಸಿಟಿವಿ ಆಫ್ ಆಗಿತ್ತು. ಈ ವೇಳೆ ಐವಿಎಸ್ ಸಂಸ್ಥೆಯು ಬಾಕಿ ಹಣ ನೀಡುವಂತೆ ಕೇಳಿತ್ತಾದರೂ, ಪಂದ್ಯಕ್ಕೆ ತೊಂದರೆಯಾಗಬಾರದು ಎಂಬ ಕಾರಣಕ್ಕೆ ಅಬ್ದುಲ್ ಕಲಾಂ ಮತ್ತು ಮಂಜುನಾಥ್ ಎಂಬ ಇಬ್ಬರು ಸಿಬ್ಬಂದಿಯನ್ನು ಸ್ಥಳಕ್ಕೆ ಕಳುಹಿಸಿತ್ತು. ಆದರೆ ತಾಂತ್ರಿಕ ಸಮಸ್ಯೆ ಬಗೆಹರಿಸಲಾಗದೆ ಅವರು ಟೆಕ್ನಿಕಲ್ ಟೀಮ್ ಕರೆಯಲು ವಾಪಸ್ ಬಂದಿದ್ದರು. ಇದೇ ಸಿಸಿಟಿವಿ ದೃಶ್ಯಾವಳಿಗಳನ್ನು ಇಟ್ಟುಕೊಂಡು ಸ್ಟಾಕು ಕಂಪನಿಯ ಆದಿತ್ಯ ಭಟ್ ಎಂಬುವವರು ವೈರ್ ಕಟ್ ಮಾಡಿದ್ದಾರೆ ಎಂದು ಅಮಾಯಕರ ಮೇಲೆ ಸುಳ್ಳು ದೂರು ನೀಡಿದ್ದರು.

ಕೋರ್ಟ್ ನಿಯಮಾವಳಿಗೆ ಕಣ್ಣುಕಟ್ಟಿದ ತಂತ್ರಜ್ಞಾನ

ಕಾಲ್ತುಳಿತ ದುರಂತದ ಬಳಿಕ ಎಸ್‌ಒಪಿ ನಿಯಮಗಳನ್ನು ಕಟ್ಟುನಿಟ್ಟಾಗಿ ಪಾಲಿಸುವಂತೆ ಕೋರ್ಟ್ ಸೂಚಿಸಿತ್ತು. ಎಐ (AI) ಕ್ಯಾಮೆರಾಗಳನ್ನು ಅಳವಡಿಸುವುದಾಗಿ ಹೇಳಿ, ಕೇವಲ ಹೆಡ್ ಕೌಂಟ್ ಮಾತ್ರ ಸಾಧ್ಯವಿರುವ ಸಾಮಾನ್ಯ ಕ್ಯಾಮೆರಾಗಳನ್ನು ಅಳವಡಿಸಿ ವಂಚಿಸಲಾಗಿದೆ ಎಂದು ಐವಿಎಸ್ ಪ್ರಾಜೆಕ್ಟ್ ಮ್ಯಾನೇಜರ್ ವರುಣ್ ಹಾಗೂ ಸಿಬ್ಬಂದಿ ಅಚ್ಚುತ್ ಆರೋಪಿಸಿದ್ದಾರೆ. 1.5 ಕೋಟಿ ಬಜೆಟ್‌ನಲ್ಲಿ ಎಐ ಕ್ಯಾಮೆರಾ ಅಳವಡಿಸಲು ಸಾಧ್ಯವೇ ಇಲ್ಲದಿದ್ದರೂ ತಪ್ಪು ಮುಚ್ಚಿಹಾಕಲು ಈ ಹೂಡಿಕೆ ನಾಟಕವಾಡಲಾಗಿದೆ ಎನ್ನಲಾಗಿದೆ.

ಇದನ್ನೂ ಓದಿ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಸಿಸಿಟಿವಿ ವೈರ್ ಕಟ್ ಮಾಡಿದ್ದ ಪ್ರಕರಣಕ್ಕೆ ಬಿಗ್ ಟ್ವಿಸ್ಟ್! ಅಚ್ಚರಿಯ ಕಾರಣ ಬಹಿರಂಗ

ಲಂಚದ ಆರೋಪ

ಕ್ರೀಡಾಂಗಣದಲ್ಲಿ ಕೆಲಸ ಮಾಡಲು ಕೆಎಸ್‌ಸಿಎ ಐಟಿ ಹೆಡ್ ಎನ್ನಲಾದ ರವಿ ಎಂಬಾತ ಆನ್‌ಲೈನ್ ಮೂಲಕ 40 ಸಾವಿರ ಹಾಗೂ ನಗದು ರೂಪದಲ್ಲಿ 2 ಲಕ್ಷಕ್ಕೂ ಅಧಿಕ ಹಣವನ್ನು ಲಂಚವಾಗಿ ಪಡೆದಿದ್ದಾನೆ ಎಂಬ ಆರೋಪವೂ ಕೇಳಿಬಂದಿದೆ. ಈಗ ಬಾಕಿ ಹಣ ಕೇಳಿದರೆ ಕೆಎಸ್‌ಸಿಎ ಹಾಗೂ ಟೆಕ್‌ಸ್ಟಿಚ್ ಕಂಪನಿಗಳು ಒಬ್ಬರ ಮೇಲೊಬ್ಬರು ಕೈ ತೋರಿಸುತ್ತಾ ಜಾರಿಕೊಳ್ಳುತ್ತಿವೆ.

ಪೊಲೀಸ್ ತನಿಖೆಯಲ್ಲೂ ಇದು ಹಣಕಾಸಿನ ವಿಚಾರಕ್ಕೆ ನಡೆದ ಗಲಾಟೆ ಎಂಬುದು ಪತ್ತೆಯಾಗಿದ್ದು, ಇಬ್ಬರು ಯುವಕರಿಗೆ ಸ್ಟೇಷನ್ ಬೇಲ್ ನೀಡಲಾಗಿದೆ. ಆದರೆ ಸುಳ್ಳು ಆರೋಪದಿಂದಾಗಿ ಯುವಕರು ಮುಜುಗರಕ್ಕೊಳಗಾಗಿದ್ದಾರೆ. ಈ ಭದ್ರತಾ ಗೊಂದಲ ಹಾಗೂ 10 ಸಾವಿರ ಐಪಿಎಲ್ ಟಿಕೆಟ್‌ಗಳ ಬೇಡಿಕೆಯೇ ಐಪಿಎಲ್‌ನ ಅಂತಿಮ ಪಂದ್ಯಗಳನ್ನು ಗುಜರಾತ್‌ಗೆ ಸ್ಥಳಾಂತರಿಸಲು ಪ್ರಮುಖ ಕಾರಣವಾಗಿತ್ತು ಎಂಬ ಆಘಾತಕಾರಿ ಅಂಶವೂ ಬೆಳಕಿಗೆ ಬಂದಿದೆ.

ಕರ್ನಾಟಕದ ಮತ್ತಷ್ಟು ಸುದ್ದಿ ಓದಲು ಇಲ್ಲಿ ಕ್ಲಿಕ್​​ ಮಾಡಿ.

Source link

Exit mobile version