ಬೆಲೆ ಏರಿಕೆ ಅಬ್ಬರದ ನಡುವೆ ಗ್ರಾಹಕರಿಗೆ ಮತ್ತೊಂದು ಶಾಕ್​​: ಖಾಸಗಿ ಬಸ್​​ಗಳ ಟಿಕೆಟ್​​ ದರವೂ ಹೆಚ್ಚಳ – Kannada News | Karnataka private bus fares jump 20 30 percent amid fuel price surge

ಬೆಂಗಳೂರು, ಮೇ 15: ಇಂಧನ, ಅಗತ್ಯ ಸಾಮಾಗ್ರಿಗಳ ಬೆಲೆಯೇರಿಕೆಯಿಂದ (Price Hike) ಈಗಾಗಲೇ ಕಂಗಾಲಾಗಿರುವ ಸಾಮಾನ್ಯ ಜನರಿಗೆ ಖಾಸಗಿ ಬಸ್​​ ಮಾಲೀಕರು ಮತ್ತೊಂದು ಶಾಕ್​​ ಕೊಟ್ಟಿದ್ದಾರೆ. ಪೆಟ್ರೋಲ್, ಡಿಸೇಲ್ ದರ ಏರಿಕೆ ಹಿನ್ನೆಲೆ ಇಂದು ಮಧ್ಯರಾತ್ರಿಯಿಂದಲೇ ಖಾಸಗಿ ಬಸ್‌ ಟಿಕೆಟ್ ದರ ಏರಿಕೆಗೆ ತೀರ್ಮಾನಿಸಲಾಗಿದೆ. ಶೇ.20-30ರಷ್ಟು ದರ ಏರಿಕೆಯಾಗಲಿದ್ದು, ಬೆಲೆ ಏರಿಕೆ ಅಬ್ಬರದ ಪರಿಣಾಮ ಈಗಾಗಲೇ ಸೋತು ಸುಣ್ಣವಾಗಿರುವ ಜನರಿಗೆ ಇದರಿಂದ ಮತ್ತಷ್ಟು ಹೊರೆಯಾಗಲಿದೆ. ಮುಖ್ಯಾಂಶಗಳು ಬೆಲೆ ಏರಿಕೆಯಿಂದ ತತ್ತರಿಸಿರುವ ಸಾರ್ವಜನಿಕರಿಗೆ ಮತ್ತೊಂದು ಶಾಕ್​​ ಇಂದು ಮಧ್ಯರಾತ್ರಿಯಿಂದ…

Read More

ಟಿಪ್ಪು ಸುಲ್ತಾನನನ್ನು ಸಮಾಧಿಯಿಂದ ಮತ್ತೆ ಜೀವಂತಗೊಳಿಸಲಾಗುತ್ತಿದೆ: ಬಿಜೆಪಿ ವಿರುದ್ಧ ಶಿವಸೇನೆ ಟೀಕೆ – Kannada News | Malegaon Tipu Sultan Photo Sparks Row: Shiv Sena Slams BJP, Revives Historical Debate

ಪುಣೆ, ಫೆಬ್ರವರಿ 16: ಮಹಾರಾಷ್ಟ್ರದ ಮಾಲೆಗಾಂವ್ ಮಹಾನಗರ ಪಾಲಿಕೆ ಕಚೇರಿಯಲ್ಲಿ ಟಿಪ್ಪು ಸುಲ್ತಾನ್​​(Tipu Sultan) ನ ಫೋಟೊ ಹಾಕಿದ್ದ ಬಗ್ಗೆ ವಿವಾದ ಭುಗಿಲೆದ್ದಿದೆ. ಶಿವಸೇನೆ ಸೇರಿದಂತೆ ಹಲವಾರು ಹಿಂದೂ ಸಂಘಟನೆಗಳು ತಮ್ಮ ವಿರೋಧ ವ್ಯಕ್ತಪಡಿಸಿವೆ. ಶಿವಸೇನೆ (ಯುಬಿಟಿ) ತನ್ನ ಮುಖವಾಣಿ ಸಾಮ್ನಾದಲ್ಲಿ ಟಿಪ್ಪು ಸುಲ್ತಾನ್ ವಿವಾದದ ಬಗ್ಗೆ ಬಿಜೆಪಿಯನ್ನು ಗುರಿಯಾಗಿಸಿಕೊಂಡಿದೆ. ಔರಂಗಜೇಬ್ ಮತ್ತು ಅಫ್ಜಲ್ ಖಾನ್ ಅವರಂತೆ ಟಿಪ್ಪು ಸುಲ್ತಾನನನ್ನು ಈಗ ಸಮಾಧಿಯಿಂದ ಮತ್ತೆ ಜೀವಂತಗೊಳಿಸಲಾಗುತ್ತಿದೆ ಎಂದು ಅದು ಹೇಳಿದೆ. ಔರಂಗಜೇಬ್ ಮತ್ತು ಅಫ್ಜಲ್ ಖಾನ್ ಅವರಂತೆ…

Read More

ನಾಯಿ ಕಡಿತ ನಿರ್ಲಕ್ಷಿಸಲು ಸಾಧ್ಯವಿಲ್ಲ, ಬೀದಿ ನಾಯಿಗಳನ್ನು ತೆರವುಗೊಳಿಸುವಂತೆ ಸುಪ್ರೀಂ ಖಡಕ್ ಆದೇಶ – Kannada News | Supreme Court of India Calls for Action on Rising Stray Dog Concerns

ನವದೆಹಲಿ, ಮೇ 19: ದೇಶಾದ್ಯಂತ ಸಾರ್ವಜನಿಕ ಸ್ಥಳಗಳು ಮತ್ತು ರಸ್ತೆಗಳಿಂದ ಬೀದಿ ನಾಯಿಗಳನ್ನು ಸಂಪೂರ್ಣವಾಗಿ ತೆರವುಗೊಳಿಸುವ ಹಾಗೂ ಅವುಗಳ ನಿಯಂತ್ರಣಕ್ಕೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್ ಮಂಗಳವಾರ ಅತ್ಯಂತ ಕಟ್ಟುನಿಟ್ಟಿನ ಆದೇಶ ಹೊರಡಿಸಿದೆ. ಬೀದಿ ನಾಯಿಗಳ ನಿಯಂತ್ರಣಕ್ಕೆ ಸಂಬಂಧಿಸಿದಂತೆ ತಾನು ನವೆಂಬರ್ 2025 ರಲ್ಲಿ ನೀಡಿದ್ದ ಐತಿಹಾಸಿಕ ಆದೇಶವನ್ನು ಮಾರ್ಪಡಿಸಲು ಅಥವಾ ಹಿಂಪಡೆಯಲು ಕೋರಿ ಸಲ್ಲಿಕೆಯಾಗಿದ್ದ ಎಲ್ಲಾ ಅರ್ಜಿಗಳನ್ನು ನ್ಯಾಯಾಲಯವು ಸಂಪೂರ್ಣವಾಗಿ ವಜಾಗೊಳಿಸಿದೆ. ಸಾರ್ವಜನಿಕ ಸ್ಥಳಗಳಲ್ಲಿ ಬೀದಿ ನಾಯಿಗಳ ಉಪಸ್ಥಿತಿಯು ಮತ್ತು ಅವುಗಳ ಜನಸಂಖ್ಯೆ ಹೆಚ್ಚುತ್ತಿರುವುದು ಅತ್ಯಂತ ಆತಂಕಕಾರಿ…

Read More

ಬೆಳಗಾವಿ: ಉಪನ್ಯಾಸಕನೊಂದಿಗೆ ಮೆಡಿಕಲ್ ಕಾಲೇಜು ವಿದ್ಯಾರ್ಥಿನಿ ನಾಪತ್ತೆ, ಮಗಳಿಗಾಗಿ ಕಣ್ಣೀರು ಹಾಕಿದ ಹೆತ್ತವರು – Kannada News | Belagavi Shocker: Athani Student Vanishes with Lecturer; Parents Claim Kidnapping

ಚಿಕ್ಕೋಡಿ, ಜ.21: ಉಪನ್ಯಾಸಕನೊಂದಿಗೆ ಮೆಡಿಕಲ್ ಕಾಲೇಜು ವಿದ್ಯಾರ್ಥಿನಿ ನಾಪತ್ತೆಯಾಗಿರುವ (Athani student missing) ಘಟನೆ ಬೆಳಗಾವಿಯ ಅಥಣಿ ಪಟ್ಟಣ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಇದೀಗ ವಿದ್ಯಾರ್ಥಿನಿಯ ಮನೆಯವರು ಉಪನ್ಯಾಸಕ ನಮ್ಮ ಮಗಳನ್ನು ಕಿಡ್ನಾಪ್​​ ಮಾಡಿದ್ದಾನೆ ಎಂದು ಆರೋಪಿಸಿದ್ದಾರೆ. ಇದೀಗ ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಕೂಡ ದೂರ ದಾಖಲಿಸಿಕೊಂಡಿದ್ದಾರೆ. ಬೆಳಗಾವಿಯ ಅಥಣಿ ಪಟ್ಟಣದ ಕಾಲೇಜ್​​​​ವೊಂದರಲ್ಲಿ ವ್ಯಾಸಾಂಗ ಮಾಡುತ್ತಿದ್ದ ವಿದ್ಯಾರ್ಥಿನಿ ಕಾಣೆಯಾಗಿದ್ದಾರೆ ಎಂದು ಹೇಳಲಾಗಿದೆ. ಈ ಘಟನೆಯು ಸ್ಥಳೀಯವಾಗಿ ಸಾಕಷ್ಟು ಸಂಚಲನ ಮೂಡಿಸಿದೆ. ಹಾಗೂ ಸಾರ್ವಜನಿಕರಲ್ಲೂ ಕೂಡ ಆತಂಕ…

Read More

ಥ್ರಿಲ್ಲರ್ ಸೂಪರ್ ಥ್ರಿಲ್ಲರ್… ಕೊನೆಯ ಎಸೆತದಲ್ಲಿ ಸಿಕ್ಸ್, ಮ್ಯಾಚ್ ವಿನ್ – Kannada News | Ollie Peake Stuns Scorchers With Insane Final Ball Finish

ಆಸ್ಟ್ರೇಲಿಯಾದಲ್ಲಿ ನಡೆಯುತ್ತಿರುವ ಬಿಗ್ ಬ್ಯಾಷ್​ ಲೀಗ್​ನ 26ನೇ ಪಂದ್ಯವು ರಣರೋಚಕ ಹೋರಾಟಕ್ಕೆ ಸಾಕ್ಷಿಯಾಗಿದೆ. ಪರ್ತ್​ನಲ್ಲಿ ನಡೆದ ಈ ಪಂದ್ಯದಲ್ಲಿ ಮೆಲ್ಬೋರ್ನ್ ರೆನೆಗೇಡ್ಸ್ ಹಾಗೂ ಪರ್ತ್​ ಸ್ಕಾಚರ್ಸ್​ ತಂಡಗಳು ಮುಖಾಮುಖಿಯಾಗಿದ್ದವು. ಈ ಮ್ಯಾಚ್​ನಲ್ಲಿ ಮೊದಲು ಬ್ಯಾಟ್ ಮಾಡಿದ ಪರ್ತ್ ಸ್ಕಾಚರ್ಸ್ ತಂಡವು 19.2 ಓವರ್​ಗಳಲ್ಲಿ 127 ರನ್​ಗಳಿಸಿ ಆಲೌಟ್ ಆಯಿತು. 128 ರನ್​ಗಳ ಸುಲಭ ಗುರಿ ಬೆನ್ನತ್ತಿದ ಮೆಲ್ಬೋರ್ನ್​ ರೆನೆಗೇಡ್ಸ್ ತಂಡವು 72 ರನ್​ಗಳಿಸುವಷ್ಟರಲ್ಲಿ 5 ವಿಕೆಟ್ ಕಳೆದುಕೊಂಡಿತು. ಈ ಹಂತದಲ್ಲಿ ಕಣಕ್ಕಿಳಿದ 19 ವರ್ಷದ ಯುವ ದಾಂಡಿಗ…

Read More

ನಂದಿನಿ ಉತ್ಪನ್ನಗಳಿಗೆ ಬೇಡಿಕೆ ಹೆಚ್ಚಿದ ಹಿನ್ನೆಲೆ ಭರ್ಜರಿ ಗಿಪ್ಟ್; ರೈತರ ಕೈ ಸೇರಲಿದೆ ಲಾಭದ ಹಣ!

ಚಿಕ್ಕಬಳ್ಳಾಪುರ, ಮಾರ್ಚ್​ 07: ನಂದಿನಿ ಉತ್ಪನ್ನಗಳಿಗೆ (Nandini Products) ಹೆಚ್ಚುತ್ತಿರುವ ಬೇಡಿಕೆಯ ಹಿನ್ನೆಲೆ ಚಿಕ್ಕಬಳ್ಳಾಪುರ ಜಿಲ್ಲಾ ಹಾಲು ಉತ್ಪಾದಕರ ಸಹಕಾರ ಸಂಘ (ಚಿಮುಲ್) ಉತ್ತಮ ಲಾಭ ಗಳಿಸಿದ್ದು, ಅದರ ಲಾಭವನ್ನು ರೈತರಿಗೆ ಹಂಚಲು ಮುಂದಾಗಿದೆ. ಮುಂದಿನ ಮೇ ತಿಂಗಳವರೆಗೆ ಚಿಮುಲ್ ಪ್ರತಿ ಲೀಟರ್​ಗೆ ಹೆಚ್ಚಿನ ದರ ನೀಡುವ ಮೂಲಕ ರೈತರಿಗೆ ಶುಭ ಸುದ್ದಿ ನೀಡಿದೆ. ಒಂದು ಲೀಟರ್​ಗೆ ಒಂದೂವರೆ ರೂ. ಹೆಚ್ಚಳ! ಚಿಮುಲ್ ಪ್ರಸ್ತುತ ಸುಮಾರು 2 ಕೋಟಿ ರೂಪಾಯಿ ಲಾಭದಲ್ಲಿದ್ದು, ರೈತರಿಗೆ ಪ್ರೋತ್ಸಾಹ ನೀಡುವ ಉದ್ದೇಶದಿಂದ…

Read More

ಮಹದೇವಪುರ, ಎಲೆಕ್ಟ್ರಾನಿಕ್ ಸಿಟಿಯಲ್ಲಿ ಮಾ. 8ಕ್ಕೆ ಕಿಮ್ಸ್ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ ಉದ್ಘಾಟನೆ: ಜ್ಯೂನಿಯರ್ ಎನ್‌ಟಿಆರ್ ಭಾಗಿ

ಬೆಂಗಳೂರು, ಮಾರ್ಚ್ 7: ಬೆಂಗಳೂರು ನಗರದಲ್ಲಿ ಆರೋಗ್ಯ ಸೇವೆಗಳ ವಿಸ್ತರಣೆ ನಿಟ್ಟಿನಲ್ಲಿ ಮತ್ತೊಂದು ದೊಡ್ಡ ಹೆಜ್ಜೆ ಇಡಲಾಗಿದ್ದು, ಕಿಮ್ಸ್ ಗ್ರೂಪ್ ಆಫ್ ಹಾಸ್ಪಿಟಲ್ಸ್ (KIMS Group of Hospitals) ವತಿಯಿಂದ ನಿರ್ಮಿಸಲಾಗಿರುವ ಹೊಸ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಗಳು ಮಾರ್ಚ್ 8 ರಂದು ಲೋಕಾರ್ಪಣೆಯಾಗಲಿವೆ. ಮಹದೇವಪುರ ಮತ್ತು ಎಲೆಕ್ಟ್ರಾನಿಕ್ ಸಿಟಿಯಲ್ಲಿ ನಿರ್ಮಾಣಗೊಂಡಿರುವ ಈ ಆಸ್ಪತ್ರೆಗಳ ಉದ್ಘಾಟನಾ ಕಾರ್ಯಕ್ರಮಕ್ಕೆ ತೆಲುಗು ಚಿತ್ರರಂಗದ ಖ್ಯಾತ ನಟ ಜ್ಯೂನಿಯರ್ ಎನ್​ಟಿಆರ್ ಮುಖ್ಯ ಅತಿಥಿಯಾಗಿ ಭಾಗವಹಿಸಲಿದ್ದಾರೆ. ಆಸ್ಪತ್ರೆಗಳ ಉದ್ಘಾಟನಾ ಸಮಾರಂಭವು ಬೆಂಗಳೂರಿನ ಎಲೆಕ್ಟ್ರಾನಿಕ್ ಸಿಟಿಯಲ್ಲಿರುವ…

Read More

ಹುಲಿಗೆಮ್ಮ ದೇವಿ ಹುಂಡಿಯಲ್ಲಿ ಅಪಾರ ಆಭರಣ! 44 ದಿನಗಳಲ್ಲಿ 1.09 ಕೋಟಿ ರೂ. ಹಣ ಸಂಗ್ರಹ! – Kannada News | Huligemma Temple Records Over Rs 1 Crore Hundi Collection, Devotees Offer Gold and Silver Ornaments in Koppal

ಕೊಪ್ಪಳ, ಜನವರಿ 9: ಕೊಪ್ಪಳ ತಾಲೂಕಿನ ಹುಲಿಗಿಯಲ್ಲಿರುವ ಪ್ರಸಿದ್ಧ ದೇವತೆ ಶ್ರೀ ಹುಲಿಗೆಮ್ಮ ದೇವಸ್ಥಾನದ ಹುಂಡಿಯಲ್ಲಿ ಅಪಾರ ಪ್ರಮಾಣದ ಹಣ ಹಾಗೂ ಆಭರಣ ಸಂಗ್ರಹವಾಗಿದೆ. ಕಳೆದ 44 ದಿನಗಳಲ್ಲಿ ದೇವಸ್ಥಾನದಲ್ಲಿ ಒಟ್ಟು 1.09 ಕೋಟಿ ರೂಪಾಯಿ ಸಂಗ್ರಹವಾಗಿದ್ದು, ಭಕ್ತರಿಂದ 90 ಗ್ರಾಂ ಬಂಗಾರ ಹಾಗೂ 4.70 ಕೆಜಿ ಬೆಳ್ಳಿ ಆಭರಣಗಳು ಸಮರ್ಪಣೆಯಾಗಿವೆ. ಕಳೆದ ನವೆಂಬರ್ 24ರಂದು ನಡೆದ ಹಿಂದಿನ ಹುಂಡಿ ಎಣಿಕೆಯಲ್ಲಿ 87.26 ಲಕ್ಷ ರೂಪಾಯಿ ಸಂಗ್ರಹ ದಾಖಲಾಗಿತ್ತು. ಇದೀಗ ಹುಂಡಿ ಹಣ ಒಂದು ಕೋಟಿ ರೂಪಾಯಿ…

Read More

ನೇಪಾಳ: ಬಲೆನ್ ಶಾ ಅಧಿಕಾರ ಸ್ವೀಕಾರ ಬೆನ್ನಲ್ಲೇ ಮಾಜಿ ಪ್ರಧಾನಿ ಕೆಪಿ ಶರ್ಮಾ ಒಲಿ ಬಂಧನ

ಕಾಠ್ಮಂಡು, ಮಾರ್ಚ್ 28: ನೇಪಾಳ (Nepal) ರಾಜಕಾರಣದಲ್ಲಿ ಮಹತ್ವದ ಬೆಳವಣಿಗೆಯಾಗಿದ್ದು, ನೂತನ ಪ್ರಧಾನಿಯಾಗಿ ಬಾಲೆನ್ ಶಾ ಹಾಗೂ ಸಂಪುಟ ಸಚಿವರು ಪ್ರಮಾಣವಚನ ಸ್ವೀಕರಿಸಿದ ಮರುದಿನವೇ ಮಾಜಿ ಪ್ರಧಾನಿ ಕೆಪಿ ಶರ್ಮಾ ಒಲಿ (KP Sharma Oli) ಅವರನ್ನು ಬಂಧಿಸಲಾಗಿದೆ. ಕಳೆದ ವರ್ಷ ನಡೆದ ಭ್ರಷ್ಟಾಚಾರ ವಿರೋಧಿ ‘ಜೆನ್ ಜಿ (Gen Z)’ ಪ್ರತಿಭಟನೆಯ ವೇಳೆ ಕನಿಷ್ಠ 77 ಜನರ ಸಾವಿಗೆ ಕಾರಣವಾದ ಹಿಂಸಾಚಾರಕ್ಕೆ ಸಂಬಂಧಿಸಿದಂತೆ ಒಲಿ ವಿರುದ್ಧ ಈ ಕ್ರಮ ಕೈಗೊಳ್ಳಲಾಗಿದೆ. ಒಲಿ ಅವರೊಂದಿಗೆ ಮಾಜಿ ಗೃಹ…

Read More

ಮುಂಬೈನಲ್ಲಿರುವ ಮಹಾರಾಷ್ಟ್ರ ವಿಧಾನ ಭವನಕ್ಕೆ ಬಾಂಬ್ ಬೆದರಿಕೆ

ಮುಂಬೈ, ಮಾರ್ಚ್​ 12: ಮುಂಬೈನಲ್ಲಿರುವ ಮಹಾರಾಷ್ಟ್ರ ವಿಧಾನಭವನಕ್ಕೆ ಬಾಂಬ್ ಬೆದರಿಕೆ(Bomb Threat) ಬಂದಿದೆ. ಇ-ಮೇಲ್ ಮೂಲಕ ಬೆದರಿಕೆ ಹಾಕಲಾಗಿದ್ದು, ತಕ್ಷಣದ ಭದ್ರತಾ ಕ್ರಮ ಕೈಗೊಳ್ಳಲಾಗಿದೆ. ಬಾಂಬ್ ನಿಷ್ಕ್ರಿಯ ದಳ (ಬಿಡಿಎಸ್) ಸೇರಿದಂತೆ ಪೊಲೀಸ್ ತಂಡಗಳು ಸ್ಥಳಕ್ಕೆ ಧಾವಿಸಿ ಪರಿಶೀಲನೆ ನಡೆಸುತ್ತಿವೆ. ಇಂದು(ಮಾರ್ಚ್​​12) ಬೆಳಗ್ಗೆ ಬಿಎಸ್‌ಇ, ವಿಧಾನ ಭವನ ಮತ್ತು ಬಾಂಬೆ ಹೈಕೋರ್ಟ್‌ಗೆ ಬೆದರಿಕೆ ಇ-ಮೇಲ್‌ಗಳು ಬಂದಿವೆ. ಎಲ್ಲಾ ಸ್ಥಳಗಳಲ್ಲಿ ಸಾಕಷ್ಟು ಭದ್ರತಾ ಕ್ರಮಗಳನ್ನು ಅಳವಡಿಸಲಾಗಿದೆ. ಮುಂಬೈ ಪೊಲೀಸರ ಪ್ರಕಾರ, ಆಯಾ ಪೊಲೀಸ್ ಠಾಣೆಗಳಲ್ಲಿ ಸಂಬಂಧಿತ ಕಾನೂನು ಕ್ರಮಗಳನ್ನು…

Read More