ಬಿಬಿಎಂಪಿ ಕಸ ಗುತ್ತಿಗೆ ವಿವಾದ: ಪರಿಶೀಲನೆಗೆ ಉನ್ನತ ಮಟ್ಟದ ಸಮಿತಿ ರಚನೆ – Kannada News
ಬೆಂಗಳೂರು, ಜೂನ್ 7: ಮುಂದಿನ 30 ವರ್ಷಗಳಿಗೆ ಬೆಂಗಳೂರಿನ ಕಸ ನಿರ್ವಹಿಸುವ ಗುತ್ತಿಗೆಗೆ (Garbage Management) ಅನುಮೋದನೆ ನೀಡಿದ್ದ ಸರ್ಕಾರ ಇದೀಗ ಮನಸು ಬದಲಾಯಿಸಿದೆ. 39,437 ಕೋಟಿ ರೂಗಳ ಬೃಹತ್ ಟೆಂಡರ್ ವಿವಾದಕ್ಕೆ ಸಂಬಂಧಿಸಿದಂತೆ ಕರ್ನಾಟಕ ಸರ್ಕಾರವು ತನಿಖಾ ಸಮಿತಿಯನ್ನು ರಚಿಸಿದೆ. ಈ ಟೆಂಡರ್ನಲ್ಲಿನ ವೆಚ್ಚವು ಅತಿಯಾಗಿದೆಯೆಂದು ಮತ್ತು 30 ವರ್ಷಗಳ ಸುದೀರ್ಘ ಅವಧಿಗೆ ಒಂದೇ ಕಂಪನಿಗೆ ಗುತ್ತಿಗೆ ನೀಡಿರುವುದು ಸರಿಯಲ್ಲವೆಂದು ರಾಜ್ಯ ಹಣಕಾಸು ಇಲಾಖೆಯು ತೀವ್ರ ಆಕ್ಷೇಪ ವ್ಯಕ್ತಪಡಿಸಿತ್ತು. ಈ ಹಿನ್ನೆಲೆಯಲ್ಲಿ ಟೆಂಡರ್ ನಿಯಮಗಳನ್ನು ಪರಿಶೀಲಿಸಲು…