4 ದಿನ ಕಾಡಿನಲ್ಲಿದ್ದ ಯುವತಿ ಮೇಲೆ ಈಗ ನಕ್ಸಲ್ ಶಂಕೆ! ಈ ಬಗ್ಗೆ ಶರಣ್ಯ ಹೇಳಿದ್ದೇನು?
ಬೆಂಗಳೂರು, ಏ.9: ಕೊಡಗಿನ ತಡಿಯಂಡಮೋಳ್ ಬೆಟ್ಟದಲ್ಲಿ ಟ್ರೆಕ್ಕಿಂಗ್ಗೆ ತೆರಳಿ ದಾರಿ ತಪ್ಪಿದ್ದ ಕೇರಳದ ಶರಣ್ಯ ಎಂಬ ಯುವತಿ, ನಾಲ್ಕು ದಿನಗಳ ಕಾಲ ದಟ್ಟ ಕಾಡಿನಲ್ಲಿ ಕಳೆದ ನಂತರ ಸುರಕ್ಷಿತವಾಗಿ ಹೊರಬಂದಿದ್ದಾರೆ. ಆದರೆ, ಈ ಘಟನೆ ಈಗ ವಿವಾದಕ್ಕೆ ಈಡಾಗಿದೆ. ಆಕೆ ಪಬ್ಲಿಸಿಟಿಗಾಗಿ ಹೀಗೆ ಮಾಡಿದ್ದಾರೆ ಎಂಬ ಆರೋಪಗಳು ಕೇಳಿಬರುತ್ತಿವೆ. ಇದಕ್ಕೆ ಪ್ರತಿಕ್ರಿಯಿಸಿರುವ ಶರಣ್ಯ, “ನಾನು ಪ್ರಾಣ ಉಳಿಸಿಕೊಳ್ಳಲು ಝರಿಗಳ ನೀರು ಕುಡಿದು ಬದುಕಿದೆನೇ ಹೊರತು, ಯಾವುದೇ ನಾಟಕ ಮಾಡಿಲ್ಲ” ಎಂದು ಸ್ಪಷ್ಟಪಡಿಸಿದ್ದಾರೆ. ದಟ್ಟ ಕಾಡು ಮತ್ತು ಬೆಟ್ಟಗುಡ್ಡಗಳ…