CJP Protest: ಸಿಜೆಪಿ ಪ್ರತಿಭಟನೆ, ಹಿಂಸಾಚಾರ, ಕಲ್ಲು ತೂರಾಟ,ಮೂವರು ಎಸಿಪಿ ಸೇರಿ 5 ಪೊಲೀಸರಿಗೆ ಗಾಯ – Kannada News | CJP Protest Violence: 5 Police Including ACPs Injured at Delhi Jantar Mantar

ನವದೆಹಲಿ, ಜುಲೈ 23: ನೀಟ್(NEET) ಪರೀಕ್ಷೆಯಲ್ಲಿನ ಅಕ್ರಮದ ವಿರುದ್ಧ ಹಾಗೂ ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಒತ್ತಾಯಿಸಿ ನವದೆಹಲಿಯ ಜಂತರ್ ಮಂತರ್‌ನಲ್ಲಿ ಕಾಕ್ರೋಚ್ ಜನತಾ ಪಾರ್ಟಿ ನಡೆಸುತ್ತಿರುವ ಪ್ರತಿಭಟನೆ ಹಿಂಸಾತ್ಮಕ ರೂಪ ಪಡೆದುಕೊಂಡಿದೆ. ಜಂತರ್ ಮಂತರ್, ಕನ್ನಾಟ್ ಪ್ಲೇಸ್ (CP) ಮತ್ತು ಟಾಲ್‌ಸ್ಟಾಯ್ ಮಾರ್ಗದಲ್ಲಿ ಪ್ರತಿಭಟನಾಕಾರರು ಮತ್ತು ಪೊಲೀಸರ ನಡುವೆ ಭಾರಿ ಘರ್ಷಣೆ ನಡೆದಿದ್ದು, ಮೂವರು ಸಹಾಯಕ ಪೊಲೀಸ್ ಕಮಿಷನರ್‌ಗಳು (ACP) ಸೇರಿದಂತೆ ಐವರು ಭದ್ರತಾ ಸಿಬ್ಬಂದಿ ಗಂಭೀರವಾಗಿ ಗಾಯಗೊಂಡಿದ್ದಾರೆ.

ರಾತ್ರಿ 8:30 ರ ಸುಮಾರಿಗೆ ಪರಿಸ್ಥಿತಿಯನ್ನು ನಿಯಂತ್ರಿಸಲು ರ‍್ಯಾಪಿಡ್ ಆಕ್ಷನ್ ಫೋರ್ಸ್ (RAF) ಹಾಗೂ ದೆಹಲಿ ಪೊಲೀಸ್ ಸಿಬ್ಬಂದಿ ಸ್ಥಳದಲ್ಲಿದ್ದರು. ಪ್ರತಿಭಟನಾಕಾರರ ನಡುವೆ ನುಸುಳಿದ ಕೆಲವು ದುಷ್ಕರ್ಮಿಗಳು ಪೊಲೀಸರ ಮೇಲೆ ಏಕಾಏಕಿ ಕಲ್ಲುಗಳು ಹಾಗೂ ಗಾಜಿನ ಬಾಟಲಿಗಳಿಂದ ದಾಳಿ ನಡೆಸಲು ಪ್ರಾರಂಭಿಸಿದರು. ಈ ದಾಳಿಯಲ್ಲಿ ಕನ್ನಾಟ್ ಪ್ಲೇಸ್ ಎಸಿಪಿ ವಿವೇಕ್ ಭಗತ್ ಸೇರಿದಂತೆ ಇತರ ಅಧಿಕಾರಿಗಳು ಗಾಯಗೊಂಡಿದ್ದು, ತಕ್ಷಣವೇ ಅವರನ್ನು ಆರ್‌ಎಂಎಲ್ (RML) ಆಸ್ಪತ್ರೆಗೆ ದಾಖಲಿಸಲಾಗಿದೆ.

ಕತ್ತಿ-ಖುಕ್ರಿ ಬಳಕೆಯ ಆರೋಪ: ಕೆಲವು ದುಷ್ಕರ್ಮಿಗಳು ಮಾರಕಾಸ್ತ್ರಗಳಾದ ಕತ್ತಿ ಮತ್ತು ಖುಕ್ರಿಗಳನ್ನು ಝಳಪಿಸುತ್ತಾ ಭದ್ರತಾ ಪಡೆಗಳ ಮೇಲೆ ಹಲ್ಲೆಗೆ ಯತ್ನಿಸಿದರು ಎಂದು ವರದಿಗಳು ತಿಳಿಸಿವೆ. ಪೊಲೀಸರು ಹಾಗೂ ಆರ್‌ಎಎಫ್ ಸಿಬ್ಬಂದಿ ರಕ್ಷಣೆಗಾಗಿ ಮತ್ತು ಗುಂಪನ್ನು ಚದುರಿಸಲು ಭಾರಿ ಲಾಠಿಚಾರ್ಜ್ ನಡೆಸಿದರು. ಉದ್ವಿಗ್ನತೆ ಹೆಚ್ಚಾಗಿದ್ದರಿಂದ ಪ್ರತಿಭಟನಾಕಾರರನ್ನು ಕನ್ನಾಟ್ ಪ್ಲೇಸ್ ಮತ್ತು ಟಾಲ್‌ಸ್ಟಾಯ್ ಮಾರ್ಗದಿಂದ ಹಿಂದೆ ಸರಿಸಲು ಪೊಲೀಸರು ಅಶ್ರುವಾಯು ಶೆಲ್‌ಗಳನ್ನು ಪ್ರಯೋಗಿಸಿದರು.

ಮತ್ತಷ್ಟು ಓದಿ: ನೀಟ್ ಪರೀಕ್ಷಾ ಅಕ್ರಮದ ತೀವ್ರ ಪ್ರತಿಭಟನೆ ನಡುವೆ ವೈರಲ್ ಆಯ್ತು ಅರವಿಂದ್ ಅವರ ಎರಡು ವರ್ಷಗಳ ಹಳೆಯ ಭವಿಷ್ಯವಾಣಿ

ಇಂಟರ್ನೆಟ್ ಬಂದ್ ಮಧ್ಯೆಯೂ ಕೋಲಾಹಲ
ಹಿಂಸಾಚಾರ ನಿಯಂತ್ರಿಸಲು ನವದೆಹಲಿ ವ್ಯಾಪ್ತಿಯಲ್ಲಿ ಇಂಟರ್ನೆಟ್ ಸೇವೆಯನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿತ್ತು. ಆದಾಗ್ಯೂ, ಜಂತರ್ ಮಂತರ್, ಜನಪಥ್ ಹಾಗೂ ಟಾಲ್‌ಸ್ಟಾಯ್ ಮಾರ್ಗಗಳಲ್ಲಿ ಹೆಚ್ಚಿನ ಸಂಖ್ಯೆಯ ಎಸ್​ಎಂಎಸ್ ಮತ್ತು ಬಲ್ಕ್ ಮೆಸೇಜಿಂಗ್ ವಿನಿಮಯ ನಡೆದಿರುವುದು ಅಧಿಕಾರಿಗಳ ಗಮನಕ್ಕೆ ಬಂದಿದೆ. ಇಂಟರ್ನೆಟ್ ಇಲ್ಲದಿದ್ದರೂ ನೆಟ್‌ವರ್ಕ್‌ನಲ್ಲಿ ಎಸ್‌ಎಂಎಸ್ ವಿನಿಮಯ ಸಾರ್ವಕಾಲಿಕ ಹೆಚ್ಚಳ ಕಂಡಿರುವುದು ಸಂಘಟಕರು ಸಂದೇಶ ರವಾನಿಸಲು ಪರ್ಯಾಯ ಮಾರ್ಗ ಬಳಸಿದ್ದನ್ನು ಎತ್ತಿ ತೋರಿಸಿದೆ.

ಪ್ರಸ್ತುತ ಪರಿಸ್ಥಿತಿ ಮತ್ತು ಹೆಚ್ಚುವರಿ ಮಾಹಿತಿ
ಪ್ರಸ್ತುತ ಜಂತರ್ ಮಂತರ್‌ನಲ್ಲಿ ಪರಿಸ್ಥಿತಿ ಶಾಂತವಾಗಿದ್ದರೂ, ಕನ್ನಾಟ್ ಪ್ಲೇಸ್ ಹಾಗೂ ಸುತ್ತಮುತ್ತಲಿನ ರಸ್ತೆಗಳಲ್ಲಿ ಭಾರಿ ಪ್ರಮಾಣದ ಮಿಲಿಟರಿ ಹಾಗೂ ಪೋಲಿಸ್ ಪಡೆಗಳನ್ನು ನಿಯೋಜಿಸಲಾಗಿದೆ. ನೀಟ್  ಪರೀಕ್ಷೆ ಅಕ್ರಮ ಖಂಡಿಸಿ ಸಿಜೆಪಿ  ಯುವಜನರು ಜಂತರ್ ಮಂತರ್‌ನಲ್ಲಿ ನಡೆಸುತ್ತಿರುವ ಧರಣಿ ಕಳೆದ ಒಂದು ತಿಂಗಳಿನಿಂದ ನಡೆಯುತ್ತಿದ್ದು, ಸೋಮವಾರದ ‘ಸಂಸತ್ ಚಲೋ’ ಘರ್ಷಣೆ ಹಾಗೂ ಬುಧವಾರ ಸುಪ್ರೀಂ ಕೋರ್ಟ್ ವಿಚಾರಣೆ ನಿರಾಕರಿಸಿದ ಬೆನ್ನಲ್ಲೇ ಈ ಹೊಸ ಹಿಂಸಾಚಾರ ಭಡಕಾಯಿಸಿದೆ.

ಪ್ರತಿಭಟನೆಯ ಹೆಸರಿನಲ್ಲಿ ಕಿಡಿಗೇಡಿಗಳು ನುಸುಳಿ ಸಾರ್ವಜನಿಕ ಆಸ್ತಿಗೆ ಧಕ್ಕೆ ತರಲು ಹಾಗೂ ಪೋಲಿಸರ ಮೇಲೆ ದಾಳಿ ಮಾಡಲು ಯತ್ನಿಸುತ್ತಿದ್ದು, ಕಲ್ಲು ತೂರಾಟ ನಡೆಸಿದವರನ್ನು ಪತ್ತೆಹಚ್ಚಲಾಗುತ್ತಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Source link

ಜೋಳ ತಿಂದು ಅಡ್ಡಾದಿಡ್ಡಿ ಓಡಿದ ಆನೆ ಮರಿ: 3 ಸಾಕಾನೆಗಳೊಂದಿಗೆ ಬರೋಬ್ಬರಿ 6 ಗಂಟೆ ಭರ್ಜರಿ ಕಾರ್ಯಾಚರಣೆ – Kannada News | Dadadahalli Crop Damage: Mysuru Forest Dept Rescues Elephant Calf from Cornfield

ಮೈಸೂರು, ಜು.23: ಆಹಾರ ಹುಡುಕಿಕೊಂಡು ಬಂದು ಮುಸುಕಿನ ಜೋಳದ ಹೊಲದಲ್ಲಿ ಬಿಡಾರ ಹೂಡಿದ್ದ ಮರಿಯಾನೆಯೊಂದನ್ನು ಅರಣ್ಯ ಇಲಾಖೆ ಸಿಬ್ಬಂದಿ ಸುದೀರ್ಘ 6 ಗಂಟೆಗಳ ಕಾರ್ಯಾಚರಣೆ ಬಳಿಕ ಯಶಸ್ವಿಯಾಗಿ ಕಾಡಿಗೆ ಅಟ್ಟಿದ್ದಾರೆ. ಮೈಸೂರು ಜಿಲ್ಲೆ ಸರಗೂರು ತಾಲೂಕಿನ ದಡದಹಳ್ಳಿ ಗ್ರಾಮದಲ್ಲಿ ಈ ಘಟನೆ ನಡೆದಿದ್ದು, ಸ್ಥಳೀಯ ಗ್ರಾಮಸ್ಥರಲ್ಲಿ ತೀವ್ರ ಆತಂಕ ಮೂಡಿಸಿತ್ತು. ದಡದಹಳ್ಳಿ ಗ್ರಾಮದ ರೈತ ಮಹಿಳೆ ಸಣ್ಣಮ್ಮ ಎಂಬುವರಿಗೆ ಸೇರಿದ ಜಮೀನಿನಲ್ಲಿ ಬೆಳೆದಿದ್ದ ಜೋಳದ ತೋಟಕ್ಕೆ ಈ ಆನೆ ಮರಿ ನುಗ್ಗಿತ್ತು. 2 ವರ್ಷ ಪ್ರಾಯದ ಈ ಗಂಡಾನೆ ಮರಿ ಕಳೆದ 4 ದಿನಗಳಿಂದ ಅದೇ ಜಮೀನಿನಲ್ಲೇ ತಂಗಿ, ಮುಸುಕಿನ ಜೋಳದ ಬೆಳೆಯನ್ನು ತಿಂದಲ್ಲದೆ ತುಳಿದು ನಾಶಪಡಿಸಿದೆ. ಇದರಿಂದಾಗಿ ಸಣ್ಣಮ್ಮ ಅವರಿಗೆ ಅಪಾರ ಪ್ರಮಾಣದ ಬೆಳೆ ನಷ್ಟ ಉಂಟಾಗಿದೆ. ಸತತವಾಗಿ ಹೊಲದಲ್ಲೇ ತಂಗಿದ್ದ ಆನೆ ಮರಿಯನ್ನು ಕಾಡಿಗೆ ಅಟ್ಟಲು ಅರಣ್ಯ ಇಲಾಖೆ ಸಿಬ್ಬಂದಿ 3 ಸಾಕಾನೆಗಳನ್ನು ಕರೆತಂದು ಪ್ರತ್ಯೇಕ ಕಾರ್ಯಾಚರಣೆ ಆರಂಭಿಸಿದರು. ಕಾರ್ಯಾಚರಣೆ ವೇಳೆ ಆನೆ ಮರಿ ಸೆರೆಗೆ ಸಿಗದೆ, ಬೆದರಿ ಹೊಲದಲ್ಲಿ ಅಡ್ಡಾದಿಡ್ಡಿ ಓಡಾಡಲು ಶುರು ಮಾಡಿತು. ಇದರಿಂದಾಗಿ ಅಧಿಕಾರಿಗಳು ಹಾಗೂ ಸಿಬ್ಬಂದಿ ಆನೆ ಮರಿಯನ್ನು ಸುರಕ್ಷಿತವಾಗಿ ಹೊರತರಲು ಹರಸಾಹಸ ಪಡಬೇಕಾಯಿತು. ಅರಣ್ಯ ಸಿಬ್ಬಂದಿ ಹಾಗೂ ಸಾಕಾನೆಗಳ ತಂಡದ ಸತತ 6 ಗಂಟೆಗಳ ಕಾರ್ಯಾಚರಣೆಯ ನಂತರ, ಮರಿಯಾನೆಗೆ ಯಾವುದೇ ಗಾಯಗಳಾಗದಂತೆ ಸುರಕ್ಷಿತವಾಗಿ ಪಕ್ಕದ ಅರಣ್ಯ ಪ್ರದೇಶದತ್ತ ಕಳುಹಿಸುವಲ್ಲಿ ಇಲಾಖೆಯ ಸಿಬ್ಬಂದಿ ಯಶಸ್ವಿಯಾಗಿದ್ದಾರೆ. ಮರಿಯಾನೆ ಕಾಡಿಗೆ ಮರಳುತ್ತಿದ್ದಂತೆಯೇ ದಡದಹಳ್ಳಿ ಗ್ರಾಮಸ್ಥರು ನಿರಾಳರಾಗಿದ್ದಾರೆ.

ವಿಡಿಯೋ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

ಸೋಲಿಗೆ ಹೆದರಬಾರದು: ಶ್ರೇಯಸ್ ಅಯ್ಯರ್ ಕಿವಿಮಾತು – Kannada News | Fear Failure, Play to Save Yourself: Shreyas Iyer

ಭಾರತ ಮತ್ತು ಝಿಂಬಾಬ್ವೆ ನಡುವಣ ಟಿ20 ಸರಣಿ ಇಂದಿನಿಂದ (ಜುಲೈ 23) ಶುರುವಾಗಲಿದೆ. ಈ ಸರಣಿಗೂ ಮುನ್ನ ಟೀಮ್ ಇಂಡಿಯಾ ನಾಯಕ ಶ್ರೇಯಸ್ ಅಯ್ಯರ್ ತಮ್ಮ ಯುವ ಪಡೆಗೆ ಬಲಿಷ್ಠ ಸಂದೇಶವೊಂದನ್ನು ನೀಡಿದ್ದಾರೆ. ಆಟಗಾರರು ತಮ್ಮ ಸಾಮರ್ಥ್ಯವನ್ನು ಪೂರ್ಣವಾಗಿ ಪ್ರದರ್ಶಿಸಬೇಕಾದರೆ ಮೊದಲು ಸೋಲಿನ ಭಯದಿಂದ ಹೊರಬರಬೇಕು ಎಂದು ತಿಳಿಸಿದ್ದಾರೆ.

ಹರಾರೆಯಲ್ಲಿ ನಡೆದ ಪಂದ್ಯದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಶ್ರೇಯಸ್ ಅಯ್ಯರ್, ರಕ್ಷಣಾತ್ಮಕ ಮನಸ್ಥಿತಿಯು ಪ್ರದರ್ಶನದ ಮೇಲೆ ಕೆಟ್ಟ ಪರಿಣಾಮ ಬೀರುತ್ತದೆ ಎಂದು ಒತ್ತಿ ಹೇಳಿದ್ದಾರೆ.

“ಆಟಗಾರರು ಸೋಲಿಗೆ ಹೆದರಬಾರದು ಎಂದು ನಾನು ಭಾವಿಸುತ್ತೇನೆ. ಏಕೆಂದರೆ ಮನಸ್ಸಿನಲ್ಲಿ ಅಂತಹ ಆಲೋಚನೆಗಳು ಇದ್ದಾಗ, ನೀವು ನಿಮ್ಮನ್ನು ರಕ್ಷಿಸಿಕೊಳ್ಳಲು ಸ್ವಲ್ಪ ಯೋಚಿಸಿ ಆಡುತ್ತೀರಿ. ಆ ಭಯವಿಲ್ಲದಿದ್ದಾಗ ಮಾತ್ರ, ನಿಮ್ಮಿಂದ ಅತ್ಯುತ್ತಮ ಪ್ರದರ್ಶನ ಹೊರಬರಲು ಸಾಧ್ಯ,” ಎಂದು ಶ್ರೇಯಸ್ ಅಯ್ಯರ್ ಹೇಳಿದ್ದಾರೆ.

ಟೀಕೆಗಳನ್ನು ನಿರ್ಲಕ್ಷಿಸಿ:

ಇತ್ತೀಚಿನ ಪಂದ್ಯಗಳ ಸೋಲಿನ ನಂತರ ಕೇಳಿಬರುತ್ತಿರುವ ಸಾಮಾಜಿಕ ಜಾಲತಾಣಗಳ ಟೀಕೆಗಳು ಮತ್ತು ಬಾಹ್ಯ ವಾದಗಳನ್ನು ನಿರ್ಲಕ್ಷಿಸಿ, ಪ್ರಸ್ತುತ ಕ್ಷಣದ ಮೇಲೆ ಮಾತ್ರ ಗಮನ ಹರಿಸುವಂತೆ ಅಯ್ಯರ್ ಸಲಹೆ ನೀಡಿದ್ದಾರೆ.

ಸದ್ಯದ ಪರಿಸ್ಥಿತಿಯಲ್ಲಿ ಇಡೀ ತಂಡವು ಒಗ್ಗಟ್ಟಿನಿಂದ ಆಡುವುದು ಮುಖ್ಯವಾಗಿದ್ದು, ವೈಯಕ್ತಿಕ ಪ್ರದರ್ಶನಗಳ ಬಗ್ಗೆ ನಂತರ ಯೋಚಿಸಬಹುದು ಎಂದು ಇದೇ ವೇಳೆ ಟೀಮ್ ಇಂಡಿಯಾ ನಾಯಕ ತಿಳಿಸಿದ್ದಾರೆ.

ಟೀಮ್ ಇಂಡಿಯಾ ಮುಂದಿರುವ ಸವಾಲುಗಳು:

ಭಾರತೀಯ ಟಿ20 ತಂಡವು ಪ್ರಸ್ತುತ ಪ್ರಮುಖ ಪರಿವರ್ತನೆಯ ಹಂತದಲ್ಲಿದ್ದು, ಈ ಪ್ರವಾಸವು ಅತ್ಯಂತ ನಿರ್ಣಾಯಕವಾಗಿದೆ. ಇಂಗ್ಲೆಂಡ್ ಮತ್ತು ಐರ್ಲೆಂಡ್ ವಿರುದ್ಧದ ಸರಣಿಗಳಲ್ಲಿ ಸೋಲು ಕಂಡಿರುವ ಭಾರತ ತಂಡವು ತೀವ್ರ ಒತ್ತಡದಲ್ಲಿದೆ. ಅದರಲ್ಲೂ ಶ್ರೇಯಸ್ ಅಯ್ಯರ್ ನಾಯಕತ್ವ ವಹಿಸಿಕೊಂಡ ಆರಂಭಿಕ ಏಳು ಪಂದ್ಯಗಳಲ್ಲಿ ತಂಡಕ್ಕೆ ಇನ್ನೂ ಗೆಲುವು ಸಿಕ್ಕಿಲ್ಲ.

ಇತ್ತ ಪಂದ್ಯ ಆರಂಭವಾಗಲು ಕೇವಲ 24 ಗಂಟೆಗಳ ಮುಂಚಿತವಾಗಿ ಭಾರತ ತಂಡವು ಝಿಂಬಾಬ್ವೆ ತಲುಪಿದೆ. ಹೀಗಾಗಿ ಹರಾರೆ ಸ್ಪೋರ್ಟ್ಸ್ ಕ್ಲಬ್‌ನ ಪಿಚ್ ಮತ್ತು ಹವಾಮಾನಕ್ಕೆ ಬೇಗನೆ ಹೊಂದಿಕೊಳ್ಳುವುದು ತಂಡದ ಮುಂದಿರುವ ದೊಡ್ಡ ಸವಾಲಾಗಿದೆ.

ಇದನ್ನೂ ಓದಿ: IND vs ZIM: ಟೀಮ್ ಇಂಡಿಯಾದ 7 ಆಟಗಾರರು ಅಲಭ್ಯ..!

ಕ್ಯಾಪ್ಟನ್ ಶ್ರೇಯಸ್ ಅಯ್ಯರ್ ನೇತೃತ್ವದ ಯುವ ಪಡೆ ಈ ಸವಾಲುಗಳನ್ನು ಹೇಗೆ ಮೆಟ್ಟಿ ನಿಲ್ಲಲಿದೆ ಎಂಬುದಕ್ಕೆ ಮೊದಲ ಪಂದ್ಯದಲ್ಲೇ ಉತ್ತರ ಸಿಗಲಿದೆ. ಸತತ ಸೋಲುಗಳ ಬೆನ್ನಲ್ಲೇ ಝಿಂಬಾಬ್ವೆ ವಿರುದ್ಧದ ಈ ಸರಣಿಯಲ್ಲಿ ಟೀಮ್ ಇಂಡಿಯಾ ಕಮ್ಯಾಂಡಿಂಗ್ ಪ್ರದರ್ಶನ ನೀಡಿ ಗೆಲುವಿನ ಹಳಿಗೆ ಮರಳಲಿದೆಯೇ ಎಂಬುದನ್ನು ಕಾದು ನೋಡಬೇಕಿದೆ.

Source link

ಕಡಿಮೆ ಸ್ಕ್ರೀನ್ ಟೈಮ್ ಇದ್ದರೂ ‘ಜನ ನಾಯಗನ್’ ಒಪ್ಪಿದ್ದೇಕೆ ಪೂಜಾ ಹೆಗ್ಡೆ? ಅಸಲಿ ಕಾರಣ ಇಲ್ಲಿದೆ – Kannada News | Why Pooja Hegde Accepted Vijay Jana Nayagan Despite Short Screentime

ದಳಪತಿ ವಿಜಯ್ ನಟನೆಯ ಕೊನೆಯ ಸಿನಿಮಾ ‘ಜನ ನಾಯಗನ್’ ಇಂದು (ಜುಲೈ 23) ಜಗತ್ತಿನಾದ್ಯಂತ ಬಿಡುಗಡೆಯಾಗಿದೆ. ಈ ಸಿನಿಮಾದಲ್ಲಿ ಸ್ಟಾರ್ ನಟಿ ಪೂಜಾ ಹೆಗ್ಡೆ ಕೂಡ ನಟಿಸಿದ್ದಾರೆ. ಆದರೆ ಈ ಚಿತ್ರದಲ್ಲಿ ಅವರಿಗೆ ತುಂಬಾ ಕಡಿಮೆ ಸ್ಕ್ರೀನ್ ಟೈಮ್ ಇದೆ ಎಂದು ನಿರ್ದೇಶಕ ಎಚ್. ವಿನೋದ್ ಇತ್ತೀಚೆಗೆ ಹೇಳಿದ್ದರು. ಆದರೂ ಪೂಜಾ ಹೆಗ್ಡೆ ಈ ಚಿತ್ರದಲ್ಲಿ ನಟಿಸಲು ಒಪ್ಪಿಕೊಂಡಿದ್ದು ಯಾಕೆ ಎಂಬ ಅಸಲಿ ಕಾರಣ ಈಗ ಹೊರಬಿದ್ದಿದೆ.

ವಿಜಯ್ ಮೇಲಿನ ಗೌರವಕ್ಕಾಗಿ ಒಪ್ಪಿದ ಪೂಜಾ

‘ಈ ಸಿನಿಮಾದಲ್ಲಿ ಪೂಜಾ ಹೆಗ್ಡೆ ಅವರಿಗೆ ಕೆಲವು ಪ್ರಮುಖ ದೃಶ್ಯಗಳಿವೆ. ಇದು ದಳಪತಿ ವಿಜಯ್ ಅವರ ಕೊನೆಯ ಸಿನಿಮಾವಾಗಿದೆ. ಇದರ ನಂತರ ಅವರು ಪೂರ್ಣ ಪ್ರಮಾಣದಲ್ಲಿ ರಾಜಕೀಯದಲ್ಲೇ ಬ್ಯುಸಿ ಆಗಲಿದ್ದಾರೆ. ಹೀಗಾಗಿ ಈ ಸಿನಿಮಾವನ್ನು ನೆನಪಿನಲ್ಲಿ ಉಳಿಯುವಂತೆ ಮಾಡಲು ಪೂಜಾ ಹೆಗ್ಡೆ ತಕ್ಷಣ ಒಪ್ಪಿಕೊಂಡರು’ ಎಂದು ಅವರ ಆಪ್ತ ಮೂಲಗಳು ತಿಳಿಸಿವೆ. ‘ಬೀಸ್ಟ್’ ಸಿನಿಮಾದಲ್ಲಿ ವಿಜಯ್ ಮತ್ತು ಪೂಜಾ ಜೋಡಿಯನ್ನು ಜನ ಇಷ್ಟಪಟ್ಟಿದ್ದರು. ವಿಜಯ್ ಮೇಲಿನ ಗೌರವ ಮತ್ತು ಸ್ನೇಹಕ್ಕಾಗಿ ಅವರು ಈ ಸಿನಿಮಾಗೆ ಹಸಿರು ನಿಶಾನೆ ತೋರಿಸಿದ್ದಾರೆ.

ಸಿನಿಮಾದಲ್ಲಿ ಬೇರೆ ಯಾರೆಲ್ಲಾ ಇದ್ದಾರೆ?

ಈ ಚಿತ್ರದಲ್ಲಿ ವಿಜಯ್ ಮತ್ತು ಪೂಜಾ ಹೆಗ್ಡೆ ಮಾತ್ರವಲ್ಲದೆ ಬಾಲಿವುಡ್ ನಟ ಬಾಬಿ ಡಿಯೋಲ್ ಮತ್ತು ಮಮಿತಾ ಬೈಜು ಕೂಡ ಪ್ರಮುಖ ಪಾತ್ರಗಳಲ್ಲಿ ಕಾಣಿಸಿಕೊಂಡಿದ್ದಾರೆ.

‘ಜನ ನಾಯಕನ್’ ಕಥೆ ಏನು?

ಇದೊಂದು ಪಕ್ಕಾ ಪೊಲಿಟಿಕಲ್ ಕಥೆಯಾಗಿದೆ. ಸಮಾಜದಲ್ಲಿ ನಡೆಯುವ ಅನ್ಯಾಯದ ವಿರುದ್ಧ ಸಾಮಾನ್ಯ ಮನುಷ್ಯನೊಬ್ಬ ಹೇಗೆ ತಿರುಗಿ ಬೀಳುತ್ತಾನೆ ಎಂಬುದೇ ಸಿನಿಮಾದ ಒನ್ ಲೈನ್ ಸ್ಟೋರಿ. ಜನರ ಪರವಾಗಿ ಹೋರಾಡುವ ಅವನು ಹೇಗೆ ಒಬ್ಬ ನಾಯಕನಾಗಿ ಬೆಳೆಯುತ್ತಾನೆ ಮತ್ತು ಎದುರಾಗುವ ಸವಾಲುಗಳನ್ನು ಹೇಗೆ ಎದುರಿಸುತ್ತಾನೆ ಎಂಬುದನ್ನು ಚಿತ್ರದಲ್ಲಿ ತೋರಿಸಲಾಗಿದೆ.

ಇದನ್ನೂ ಓದಿ: ಭಾರಿ ಸಂಭಾವನೆ ಡಿಮ್ಯಾಂಡ್: ಬ್ಯಾಕ್ ಟು ಬ್ಯಾಕ್ ಆಫರ್ ಕಳೆದುಕೊಳ್ಳುತ್ತಿದ್ದಾರಾ ಪೂಜಾ ಹೆಗ್ಡೆ?

ಕೊನೆಗೂ ಬಿಡುಗಡೆಯಾದ ಸಿನಿಮಾ

ಈ ಸಿನಿಮಾ ಮೊದಲು 2026ರ ಜನವರಿ 9 ರಂದು ಬಿಡುಗಡೆಯಾಗಬೇಕಿತ್ತು. ಆದರೆ ಸೆನ್ಸಾರ್ ಮಂಡಳಿಯ ಸಮಸ್ಯೆಯಿಂದಾಗಿ ತಡವಾಗಿತ್ತು. ಚಿತ್ರದ ಕೆಲವು ದೃಶ್ಯಗಳು ಧಾರ್ಮಿಕ ಭಾವನೆಗಳಿಗೆ ಧಕ್ಕೆ ತರುತ್ತವೆ ಎಂಬ ದೂರು ಕೇಳಿಬಂದಿತ್ತು. ಆ ನಂತರ ಪರಿಶೀಲನಾ ಸಮಿತಿಯು ಚಿತ್ರಕ್ಕೆ ‘ಎ’ ಪ್ರಮಾಣಪತ್ರ ನೀಡಿದೆ. ಎಲ್ಲಾ ಅಡೆತಡೆಗಳನ್ನು ಮುಗಿಸಿ ಕೊನೆಗೂ ಸಿನಿಮಾ ಇಂದು ಚಿತ್ರಮಂದಿರಗಳಲ್ಲಿ ಧೂಳೆಬ್ಬಿಸುತ್ತಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Source link

Vasthu Tips: ಅಡುಗೆಮನೆ ಮತ್ತು ಸ್ನಾನಗೃಹ ಅಕ್ಕಪಕ್ಕದಲ್ಲಿರುವುದು ಅಶುಭವೇ? ವಾಸ್ತು ಶಾಸ್ತ್ರ ಹೇಳುವುದೇನು? – Kannada News | Kitchen Bathroom Vastu Defects: Simple Remedies to Boost Home’s Positive Energy

ನಮ್ಮ ಜೀವನದಲ್ಲಿ ಮನೆ ಎಂಬುದು ಕೇವಲ ವಾಸಿಸುವ ಸ್ಥಳವಲ್ಲ, ಅದು ನೆಮ್ಮದಿ ಮತ್ತು ಧನಾತ್ಮಕ ಶಕ್ತಿಯ ಕೇಂದ್ರ. ಹೀಗಾಗಿ, ಗೃಹ ನಿರ್ಮಾಣ ಮತ್ತು ಮನೆಯ ವಿನ್ಯಾಸದಲ್ಲಿ ವಾಸ್ತು ಶಾಸ್ತ್ರಕ್ಕೆ ಹೆಚ್ಚಿನ ಪ್ರಾಮುಖ್ಯತೆ ನೀಡಲಾಗುತ್ತದೆ. ವಾಸ್ತು ತತ್ವಗಳನ್ನು ಸರಿಯಾಗಿ ಅನುಸರಿಸುವುದರಿಂದ ಮನೆಯಲ್ಲಿ ಸಕಾರಾತ್ಮಕತೆ ಹೆಚ್ಚಾಗುತ್ತದೆ. ಆದರೆ, ಅರಿವಿಲ್ಲದೇ ಮಾಡುವ ಸಣ್ಣಪುಟ್ಟ ವಾಸ್ತು ತಪ್ಪುಗಳು ಕುಟುಂಬದ ಸದಸ್ಯರ ಆರೋಗ್ಯ ಮತ್ತು ಆರ್ಥಿಕ ಸ್ಥಿತಿಯ ಮೇಲೆ ತೀವ್ರ ನಕಾರಾತ್ಮಕ ಪರಿಣಾಮವನ್ನು ಬೀರಬಹುದು.

ಅಡುಗೆಮನೆ ಮತ್ತು ಸ್ನಾನಗೃಹ ಅಕ್ಕಪಕ್ಕದಲ್ಲಿದ್ದರೆ ಏನಾಗುತ್ತದೆ?

ಸಾಮಾನ್ಯವಾಗಿ ಮಾರ್ಡನ್​​ ಮನೆಗಳ ನಿರ್ಮಾಣದಲ್ಲಿ ಜಾಗದ ಕೊರತೆಯಿಂದಾಗಿ ಅಡುಗೆಮನೆ ಮತ್ತು ಸ್ನಾನಗೃಹಗಳನ್ನು (Bathroom) ಅಕ್ಕಪಕ್ಕದಲ್ಲೇ ನಿರ್ಮಿಸುವುದನ್ನು ಕಾಣಬಹುದು. ಆದರೆ ವಾಸ್ತು ಶಾಸ್ತ್ರದ ಪ್ರಕಾರ, ಈ ರೀತಿ ಅಡುಗೆಮನೆ ಮತ್ತು ಬಾತ್‌ರೂಮ್‌ಗಳು ಒಂದಕ್ಕೊಂದು ತಾಕಿಕೊಂಡಿರುವುದು ದೊಡ್ಡ ವಾಸ್ತು ದೋಷವೆಂದು ಪರಿಗಣಿಸಲಾಗುತ್ತದೆ. ಅಡುಗೆಮನೆಯು ‘ಅಗ್ನಿ’ ತತ್ವವನ್ನು ಪ್ರತಿನಿಧಿಸಿದರೆ, ಸ್ನಾನಗೃಹವು ‘ಜಲ’ ಮತ್ತು ತ್ಯಾಜ್ಯ ಶಕ್ತಿಯನ್ನು ಪ್ರತಿನಿಧಿಸುತ್ತದೆ. ಇವೆರಡೂ ಪರಸ್ಪರ ವಿರುದ್ಧ ಶಕ್ತಿಗಳಾಗಿರುವುದರಿಂದ, ಈ ವಿನ್ಯಾಸವು ಮನೆಯಲ್ಲಿ ನಕಾರಾತ್ಮಕ ಶಕ್ತಿಯ ಹರಿವನ್ನು ಹೆಚ್ಚಿಸುತ್ತದೆ.

ಇದನ್ನೂ ಓದಿ: ಚಿಕ್ಕ ಮಕ್ಕಳಿಗೆ ಕನ್ನಡಿ ತೋರಿಸಬಾರದು ಏಕೆ? ಆಧ್ಯಾತ್ಮಿಕ ಮತ್ತು ವೈಜ್ಞಾನಿಕ ಕಾರಣ ಇಲ್ಲಿದೆ

ವಾಸ್ತು ದೋಷ ನಿವಾರಣೆಗೆ ಇಲ್ಲಿದೆ ಸರಳ ಪರಿಹಾರ:

ಒಂದು ವೇಳೆ ನಿಮ್ಮ ಮನೆಯಲ್ಲಿ ಈಗಾಗಲೇ ಅಡುಗೆಮನೆ ಹಾಗೂ ಸ್ನಾನಗೃಹಗಳು ಅಕ್ಕಪಕ್ಕದಲ್ಲೇ ಇದ್ದು, ಅವುಗಳನ್ನು ತಕ್ಷಣವೇ ಕೆಡವಿ ಬದಲಾಯಿಸಲು ಸಾಧ್ಯವಾಗದಿದ್ದರೆ ಚಿಂತಿಸಬೇಕಾಗಿಲ್ಲ. ಕೆಲವು ಸರಳ ಹಾಗೂ ಪರಿಣಾಮಕಾರಿ ಪರಿಹಾರಗಳ ಮೂಲಕ ಈ ದೋಷದ ಪ್ರಭಾವವನ್ನು ಕಡಿಮೆ ಮಾಡಬಹುದು.

  • ಬಾಗಿಲನ್ನು ಸದಾ ಮುಚ್ಚಿಡಿ: ಸ್ನಾನಗೃಹವನ್ನು ಬಳಸಿದ ತಕ್ಷಣವೇ ಅದರ ಬಾಗಿಲನ್ನು ಸಂಪೂರ್ಣವಾಗಿ ಮುಚ್ಚಿಡುವುದನ್ನು ಅಭ್ಯಾಸ ಮಾಡಿಕೊಳ್ಳಿ. ಇದು ಬಾತ್‌ರೂಮ್‌ನಿಂದ ಹೊರಹೊಮ್ಮುವ ನಕಾರಾತ್ಮಕ ಶಕ್ತಿ ಹಾಗೂ ದುರ್ವಾಸನೆಯು ಅಡುಗೆಮನೆಗೆ ಪ್ರವೇಶಿಸುವುದನ್ನು ತಡೆಯುತ್ತದೆ.
  • ಶುಚಿತ್ವಕ್ಕೆ ಮೊದಲ ಆದ್ಯತೆ: ಸ್ನಾನಗೃಹವನ್ನು ಸದಾ ಸ್ವಚ್ಛ ಹಾಗೂ ಶುಷ್ಕವಾಗಿ (Dry) ಇಟ್ಟುಕೊಳ್ಳಿ. ತೇವಾಂಶ ಮತ್ತು ಕೊಳೆ ಹೆಚ್ಚಾದಷ್ಟು ನಕಾರಾತ್ಮಕ ಶಕ್ತಿಯ ಪ್ರಭಾವವೂ ಹೆಚ್ಚಾಗುತ್ತದೆ.
  • ಕರ್ಪೂರ ಅಥವಾ ವಾಸ್ತು ಉಪ್ಪು ಬಳಸಿ: ಸ್ನಾನಗೃಹದ ಒಂದು ಮೂಲೆಯಲ್ಲಿ ಗಾಜಿನ ಬೌಲ್‌ನಲ್ಲಿ ಕಲ್ಲು ಉಪ್ಪು (ಸಮುದ್ರದ ಉಪ್ಪು) ಅಥವಾ ಕರ್ಪೂರವನ್ನು ಇಡುವುದರಿಂದ ಅದು ವಾತಾವರಣದಲ್ಲಿರುವ ನಕಾರಾತ್ಮಕ ಅಲೆಗಳನ್ನು ಹೀರಿಕೊಳ್ಳುತ್ತದೆ.

ನಿಮ್ಮ ಮನೆಯ ವಾಸ್ತು ದೋಷಗಳನ್ನು ಸಕಾಲದಲ್ಲಿ ಗುರುತಿಸಿ ಈ ರೀತಿಯ ಸರಳ ಪರಿಹಾರಗಳನ್ನು ಅಳವಡಿಸಿಕೊಳ್ಳುವುದರಿಂದ, ಮನೆಯಲ್ಲಿ ಮತ್ತೆ ಧನಾತ್ಮಕ ಶಕ್ತಿ, ನೆಮ್ಮದಿ ಮತ್ತು ಸಮೃದ್ಧಿ ನೆಲೆಸುವಂತೆ ಮಾಡಬಹುದು.

ಮತ್ತಷ್ಟು ಆಧ್ಯಾತ್ಮಿಕ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On – 7:31 am, Thu, 23 July 26

Source link

ನಮ್ಮ ಒಂದೇ ಒಂದು ಸೇತುವೆ ಮುಟ್ಟಿದರೂ ಸುಮ್ಮನಿರಲ್ಲ, ಟ್ರಂಪ್ ಬೆದರಿಕೆಗೆ ಇರಾನ್ ಭಾರಿ ತಿರುಗೇಟು, ಹಾರ್ಮುಜ್ ಜಲಸಂಧಿಯಲ್ಲಿ ಉದ್ವಿಗ್ನತೆ – Kannada News | US Iran Escalation: Trump’s Infrastructure Threats and Iran’s Retaliation in Hormuz Strait

ಟೆಹ್ರಾನ್, ಜುಲೈ 23: ಇರಾನ್(Iran) ಹಾಗೂ ಅಮೆರಿಕ ನಡುವಿನ ಸಂಘರ್ಷ ಈಗ ಮೂಲಸೌಕರ್ಯ ಮತ್ತು ಇಂಧನ ನೆಲೆಗಳನ್ನು ಧ್ವಂಸಗೊಳಿಸುವ ಹಂತಕ್ಕೆ ಬಂದು ತಲುಪಿದೆ. ಹಾರ್ಮುಜ್ ಜಲಸಂಧಿಯಲ್ಲಿ ಹಡಗುಗಳ ಮೇಲಿನ ದಾಳಿಗೆ ಪ್ರತಿಕ್ರಿಯೆಯಾಗಿ ಇರಾನ್​ನ ಸೇತುವೆಗಳು ಮತ್ತು ವಿದ್ಯುತ್ ಸ್ಥಾವರಗಳನ್ನು ನಾಶಪಡಿಸುವುದಾಗಿ ಅಮೆರಿಕ ಅಧ್ಯಕ್ಷ ಡೊನಾಲ್ಡ್​ ಟ್ರಂಪ್ ಬೆದರಿಕೆ ಹಾಕಿದ ಬೆನ್ನಲ್ಲೇ, ಪ್ರದೇಶದಾದ್ಯಂತ ಇರುವ ಅಮೆರಿಕನ್ ಹಿತಾಸಕ್ತಿಯ ಎಲ್ಲಾ ಸೇತುವೆಗಳು ಹಾಗೂ ಇಂಧನ ಮೂಲಸೌಕರ್ಯಗಳನ್ನು ನಾವು ಧ್ವಂಸಗೊಳಿಸುತ್ತೇವೆ ಎಂದು ಇರಾನ್ ಎಚ್ಚರಿಕೆ ನೀಡಿದೆ.

ಇರಾನಿನ ಹಿರಿಯ ಅಧಿಕಾರಿಯೊಬ್ಬರು ಮಾತನಾಡಿ, ಅಮೆರಿಕನ್ನರು ಇರಾನ್‌ನ ಯಾವುದೇ ವಿದ್ಯುತ್ ಸ್ಥಾವರ ಅಥವಾ ಸೇತುವೆಯನ್ನು ಗುರಿಯಾಗಿಸಿಕೊಂಡರೆ, ಇಡೀ ಪಶ್ಚಿಮ ಏಷ್ಯಾ ಪ್ರಾಂತ್ಯದಲ್ಲಿ ಅಮೆರಿಕ ಆಸಕ್ತಿ ಹೊಂದಿರುವ ಮೂಲಸೌಕರ್ಯಗಳ ಮೇಲೆ ಇರಾನ್ ತಕ್ಷಣವೇ ಪ್ರತ್ಯಾಕ್ರಮಣ ಮಾಡಲಿದೆ ಎಂದು ಎಚ್ಚರಿಕೆ ನೀಡಿದ್ದಾರೆ.

ಇರಾನ್ ವಿದೇಶಾಂಗ ಸಚಿವ ಸಯೀದ್ ಅಬ್ಬಾಸ್ ಅರಘ್ಚಿ ಐ ಫಾರ್ ಆ್ಯನ್ ಐ ಸಿದ್ಧಾಂತವನ್ನು ಪುನರುಚ್ಚರಿಸಿದ್ದು, ನಮ್ಮ ದೇಶದ ಮೂಲಸೌಕರ್ಯಗಳ ಮೇಲೆ ಯಾವುದೇ ದಾಳಿ ನಡೆದರೂ ಅದಕ್ಕೆ ತಕ್ಕ ಮತ್ತು ಪ್ರಬಲ ಪ್ರತ್ಯುತ್ತರ ನೀಡುವುದಂತೂ ಸತ್ಯ. ಹಾರ್ಮುಜ್ ಜಲಸಂಧಿಯ ಮೇಲಿನ ಸಾರ್ವಜನಿಕ ಸಾರ್ವಭೌಮತ್ವ ಮತ್ತು ನಿಯಂತ್ರಣವನ್ನು ನಾವು ಯಾವುದೇ ಕಾರಣಕ್ಕೂ ಬಿಟ್ಟುಕೊಡುವುದಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.

ಮತ್ತಷ್ಟು ಓದಿ: ಕುವೈತ್, ಬಹ್ರೇನ್‌ನಲ್ಲಿರುವ ಅಮೆರಿಕದ ಸೇನಾ ನೆಲೆಗಳ ಮೇಲೆ ಇರಾನ್ ಕ್ಷಿಪಣಿ ದಾಳಿ; ಟ್ರಂಪ್​ಗೆ ಎಚ್ಚರಿಕೆ!

ಸತತ 12 ನೇ ರಾತ್ರಿಯೂ ಅಮೆರಿಕ ಕ್ಷಿಪಣಿ ದಾಳಿ: ಹೆಚ್ಚಿದ ಸಾವು-ನೋವು
ಒಂದೆಡೆ ಬೆದರಿಕೆಗಳ ವಿನಿಮಯ ನಡೆಯುತ್ತಿದ್ದರೆ, ಇನ್ನೊಂದೆಡೆ ಸಮರ ಭೂಮಿಯಲ್ಲಿ ಭಾರಿ ಹಾನಿ ಸಂಭವಿಸುತ್ತಿದೆ. ಇರಾನ್ ವಿರುದ್ಧ ಸತತ 12 ನೇ ರಾತ್ರಿಯೂ ಭಾರಿ ದಾಳಿ ನಡೆಸಿರುವುದಾಗಿ ಅಮೆರಿಕ ಸೇನೆ  ದೃಢಪಡಿಸಿದೆ. ಪಶ್ಚಿಮ ಇರಾನ್‌ನ ಅಹ್ವಾಜ್, ರಾಮ್‌ಶೀರ್ ಮತ್ತು ಶಾಲಮ್ಚೆ ಗಡಿ ಭಾಗಗಳಲ್ಲಿ ಅಮೆರಿಕ ನಡೆಸಿದ ಕ್ಷಿಪಣಿ ದಾಳಿಯಲ್ಲಿ ಕನಿಷ್ಠ ಮೂವರು ಸಾವನ್ನಪ್ಪಿದ್ದು, ಹಲವಾರು ಜನರು ಗಾಯಗೊಂಡಿದ್ದಾರೆ ಎಂದು ಇರಾನ್ ರಾಜ್ಯ ಮಾಧ್ಯಮಗಳು ವರದಿ ಮಾಡಿವೆ.

ಹಾರ್ಮುಜ್ ಜಲಸಂಧಿಯಲ್ಲಿ ತೈಲ ಟ್ಯಾಂಕರ್‌ಗಳ ತಡೆ

ಸಂಘರ್ಷದ ನಡುವೆಯೇ ಇರಾನ್‌ನ ‘ರೆವಲ್ಯೂಷನರಿ ಗಾರ್ಡ್ಸ್’  ಹಾರ್ಮುಜ್ ಜಲಸಂಧಿಯ ಮೂಲಕ ಹಾದುಹೋಗಲು ಯತ್ನಿಸುತ್ತಿದ್ದ ಮೂರು ತೈಲ ಟ್ಯಾಂಕರ್‌ಗಳನ್ನು ತಡೆದಿರುವುದಾಗಿ ಹೇಳಿಕೊಂಡಿದೆ. ದಾಳಿಯ ಭೀತಿಯಿಂದ ಒಂದು ಹಡಗು ಸ್ಫೋಟಗೊಂಡು ಬೆಂಕಿ ಹೊತ್ತಿಕೊಂಡರೆ, ಉಳಿದೆರಡು ಹಡಗುಗಳು ವಾಪಸ್ ತೆರಳಿವೆ ಎಂದು ಮೂಲಗಳು ತಿಳಿಸಿವೆ.

ಜಾಗತಿಕ ಆತಂಕಕ್ಕೆ ಕಾರಣವೇನು?
ಪ್ರಪಂಚದ ಶೇಕಡಾ 20 ಕ್ಕೂ ಹೆಚ್ಚು ಕಚ್ಚಾ ತೈಲ ಮತ್ತು ಅನಿಲ ಸಾಗಣೆಯಾಗುವುದು ಕೇವಲ ‘ಹಾರ್ಮುಜ್ ಜಲಸಂಧಿ’ಎಂಬ ಕಿರಿದಾದ ಜಲಮಾರ್ಗದ ಮೂಲಕವೇ. ಅಮೆರಿಕ ಮತ್ತು ಇರಾನ್ ನಡುವಿನ ಸರಣಿ ದಾಳಿಗಳಿಂದಾಗಿ ಈ ಮಾರ್ಗದಲ್ಲಿ ಹಡಗುಗಳ ಸಂಚಾರ ಸ್ತಬ್ಧಗೊಂಡರೆ, ಇಡೀ ವಿಶ್ವದಲ್ಲಿ ತೈಲ ಅಭಾವ ಸೃಷ್ಟಿಯಾಗಿ ಪೆಟ್ರೋಲ್, ಡೀಸೆಲ್ ಬೆಲೆಗಳು ಗಗನಕ್ಕೇರುವ ಭೀತಿ ಎದುರಾಗಿದೆ.

ಅಂತಾರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Source link

ಶಿಲ್ಪಾ ಶೆಟ್ಟಿಗೆ ವ್ಯಾಲೆಂಟೈನ್ಸ್ ಡೇ ಗಿಫ್ಟ್ ಆಗಿ ಐಪಿಎಲ್ ಟೀಮ್ ಕೊಟ್ಟಿದ್ದ ರಾಜ್ ಕುಂದ್ರಾ – Kannada News | Raj Kundra 82 Cr IPL Gift to Shilpa Shetty: Revealed In Interview

ಬಾಲಿವುಡ್ ನಟಿ ಶಿಲ್ಪಾ ಶೆಟ್ಟಿ ಪತಿ, ಉದ್ಯಮಿ ರಾಜ್ ಕುಂದ್ರಾ ಈಗ ಮತ್ತೆ ಸುದ್ದಿಯಲ್ಲಿದ್ದಾರೆ. ಅವರು ಇತ್ತೀಚಿನ ಸಂದರ್ಶನವೊಂದರಲ್ಲಿ ಹಳೆಯ ನೆನಪೊಂದನ್ನು ಬಿಚ್ಚಿಟ್ಟಿದ್ದಾರೆ. ತಮ್ಮ ಪತ್ನಿ ಶಿಲ್ಪಾ ಶೆಟ್ಟಿಗೆ ವ್ಯಾಲೆಂಟೈನ್ಸ್ ಡೇ ಗಿಫ್ಟ್ ನೀಡಲು ಐಪಿಎಲ್ ತಂಡದ ಪಾಲನ್ನು ಖರೀದಿಸಿದ್ದಾಗಿ ಹೇಳಿದ್ದಾರೆ. ಅವರು ರಾಜಸ್ಥಾನ್ ರಾಯಲ್ಸ್ ತಂಡದ ಮಾಲೀಕರಾಗಿದ್ದರು.

82 ಕೋಟಿ ರೂಪಾಯಿಯ ವ್ಯಾಲೆಂಟೈನ್ಸ್ ಡೇ ಗಿಫ್ಟ್

ರಾಜ್ ಕುಂದ್ರಾ 2009ರಲ್ಲಿ ರಾಜಸ್ಥಾನ್ ರಾಯಲ್ಸ್ ತಂಡದ ಪಾಲನ್ನು ಖರೀದಿಸಿದ್ದರು. ಇದಕ್ಕಾಗಿ ಅವರು ಬರೋಬ್ಬರಿ 81.9 ಕೋಟಿ ರೂಪಾಯಿ ಖರ್ಚು ಮಾಡಿದ್ದರು. ಈ ಬಗ್ಗೆ ಮಾತನಾಡಿದ ಅವರು, ‘ನಾನು ಇದನ್ನು ಶಿಲ್ಪಾಗೆ ವ್ಯಾಲೆಂಟೈನ್ಸ್ ಡೇ ಗಿಫ್ಟ್ ಆಗಿ ನೀಡಿದ್ದೆ’ ಎಂದಿದ್ದಾರೆ. ಅಂದು ರಾಜಸ್ಥಾನ್ ರಾಯಲ್ಸ್ ತಂಡದಲ್ಲಿ ರಾಜ್ ಕುಂದ್ರಾ ಶೇಕಡಾ 11.7 ರಷ್ಟು ಪಾಲು ಹೊಂದಿದ್ದರು.

700 ಕೋಟಿಯ ತಂಡ ಈಗ 16,000 ಕೋಟಿ

‘ನಾನು ಆ ತಂಡವನ್ನು ಖರೀದಿಸಿದಾಗ ಅದರ ಒಟ್ಟು ಮೌಲ್ಯ 700 ಕೋಟಿ ರೂಪಾಯಿ ಆಗಿತ್ತು. ಆದರೆ ಈಗ ಅದರ ಮೌಲ್ಯ ಬರೋಬ್ಬರಿ 16,000 ಕೋಟಿ ರೂಪಾಯಿಗೆ ಏರಿದೆ. ಆ ಸಮಯದಲ್ಲಿ ಐಪಿಎಲ್‌ನಲ್ಲಿ ಅತಿ ದೊಡ್ಡ ಸಿಂಗಲ್ ಚೆಕ್ ಹೂಡಿಕೆ ಮಾಡಿದ್ದು ನಾನೇ. ಐಪಿಎಲ್ ಇಷ್ಟೊಂದು ದೊಡ್ಡ ಮಟ್ಟಕ್ಕೆ ಬೆಳೆಯುತ್ತದೆ ಎಂದು ನಾನೊಬ್ಬನೇ ಮೊದಲು ನಂಬಿದ್ದೆ’ ಎಂದು ಅವರು ಹೆಮ್ಮೆಯಿಂದ ಹೇಳಿಕೊಂಡಿದ್ದಾರೆ.

ಐಪಿಎಲ್ ತಂಡಗಳ ಗಳಿಕೆ ಎಷ್ಟು?

ಐಪಿಎಲ್ ತಂಡಗಳ ಬಿಸಿನೆಸ್ ಬಗ್ಗೆಯೂ ರಾಜ್ ಕುಂದ್ರಾ ಮಾತನಾಡಿದ್ದಾರೆ. ‘ಮೊದಲ 5-6 ವರ್ಷ ತಂಡಗಳಿಗೆ ಯಾವುದೇ ಲಾಭ ಇರಲಿಲ್ಲ. ಆದರೆ ಈಗ ಪ್ರತಿ ಐಪಿಎಲ್ ತಂಡ ವರ್ಷಕ್ಕೆ 200 ರಿಂದ 500 ಕೋಟಿ ರೂಪಾಯಿ ಲಾಭ ಗಳಿಸುತ್ತಿದೆ. ಇದರಲ್ಲಿ ಶೇಕಡಾ 70 ರಷ್ಟು ಹಣ ಟಿವಿ ಹಕ್ಕುಗಳಿಂದ ಬರುತ್ತದೆ. ಇನ್ನುಳಿದ ಹಣ ಸ್ಪಾನ್ಸರ್‌ಶಿಪ್ ಮತ್ತು ಟಿಕೆಟ್ ಮಾರಾಟದಿಂದ ಬರುತ್ತದೆ’ ಎಂದು ಅವರು ವಿವರಿಸಿದ್ದಾರೆ.

ಬೆಟ್ಟಿಂಗ್ ವಿವಾದದ ಬಗ್ಗೆ ಸ್ಪಷ್ಟನೆ

2013 ರ ಐಪಿಎಲ್ ಬೆಟ್ಟಿಂಗ್ ಹಗರಣದಲ್ಲಿ ರಾಜ್ ಕುಂದ್ರಾ ಹೆಸರು ಕೇಳಿಬಂದಿತ್ತು. ಈ ಕಾರಣಕ್ಕೆ ಅವರಿಗೆ ಲೈಫ್ ಬ್ಯಾನ್ ವಿಧಿಸಲಾಗಿತ್ತು. ರಾಜಸ್ಥಾನ್ ರಾಯಲ್ಸ್ ತಂಡವನ್ನು ಕೂಡ ಎರಡು ವರ್ಷ ನಿಷೇಧಿಸಲಾಗಿತ್ತು.

ಈ ಬಗ್ಗೆ ಮಾತನಾಡಿದ ಅವರು, ‘ನಾವು ಸ್ನೇಹಿತರ ಮಧ್ಯೆ ಸುಮ್ಮನೆ 500 ರೂಪಾಯಿಗೆ ಶರತ್ತು ಕಟ್ಟುತ್ತಿದ್ದೆವು. ಅದನ್ನೇ ಬೆಟ್ಟಿಂಗ್ ಎಂದು ದೊಡ್ಡದು ಮಾಡಿದರು. ಇದಕ್ಕಾಗಿ ನಮ್ಮನ್ನು ಬ್ಯಾನ್ ಮಾಡಿದ್ದು ಸರಿಯಲ್ಲ. ಈ ಪ್ರಕರಣದ ವಿಚಾರಣೆ ಇನ್ನೂ ಸುಪ್ರೀಂ ಕೋರ್ಟ್‌ನಲ್ಲಿ ನಡೆಯುತ್ತಿದೆ. ಐಪಿಎಲ್‌ನಲ್ಲಿ ಅಂಡರ್‌ಗ್ರೌಂಡ್ ಬೆಟ್ಟಿಂಗ್ ನಡೆಯುವುದು ನಿಜ. ಆದರೆ ತಂಡದ ಒಳಗಡೆ ಯಾವುದೇ ತಪ್ಪುಗಳು ನಡೆಯುವುದಿಲ್ಲ’ ಎಂದು ತಮ್ಮನ್ನು ಸಮರ್ಥಿಸಿಕೊಂಡಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Source link

ಆಯುಷ್ಮಾನ್ ಭಾರತ್ ಯೋಜನೆ: ಖಾಸಗಿ ಆಸ್ಪತ್ರೆಗಳ ಚಿಕಿತ್ಸಾ ದರ ಪರಿಷ್ಕರಣೆಗೆ ಮುಂದಾದ ಸರ್ಕಾರ – Kannada News | Ayushman Bharat Karnataka Scheme: Govt Plans Treatment Rate Revision, More Private Hospitals to Be Added

ಬೆಂಗಳೂರು, ಜುಲೈ 23: ಬಡ ಹಾಗೂ ಮಧ್ಯಮ ವರ್ಗದ ಜನರಿಗೆ ಗುಣಮಟ್ಟದ ಉಚಿತ ಚಿಕಿತ್ಸೆ ಒದಗಿಸುವ ಉದ್ದೇಶದಿಂದ ಜಾರಿಯಲ್ಲಿರುವ ‘ಆಯುಷ್ಮಾನ್ ಭಾರತ್ ಆರೋಗ್ಯ ಕರ್ನಾಟಕ (Ayushman Bharat-Arogya Karnataka)’ ಯೋಜನೆಯಲ್ಲಿ ಮಹತ್ವದ ಬದಲಾವಣೆ ತರಲು ಆರೋಗ್ಯ ಇಲಾಖೆ ಮುಂದಾಗಿದೆ. ಹಲವು ವರ್ಷಗಳಿಂದ ಚಿಕಿತ್ಸಾ ಪ್ಯಾಕೇಜ್ ದರ ಪರಿಷ್ಕರಣೆ ಆಗದ ಹಿನ್ನೆಲೆಯಲ್ಲಿ ಖಾಸಗಿ ಆಸ್ಪತ್ರೆಗಳು (Private Hospitals) ಚಿಕಿತ್ಸೆ ನೀಡಲು ಹಿಂದೇಟು ಹಾಕುತ್ತಿದ್ದವು. ಇದರಿಂದ ರೋಗಿಗಳು ಆಸ್ಪತ್ರೆಯಿಂದ ಆಸ್ಪತ್ರೆಗೆ ಅಲೆದಾಡುವ ಪರಿಸ್ಥಿತಿ ನಿರ್ಮಾಣವಾಗಿತ್ತು. ಈ ಸಮಸ್ಯೆಗೆ ಪರಿಹಾರ ಕಂಡುಕೊಳ್ಳುವ ಉದ್ದೇಶದಿಂದ ಸರ್ಕಾರ ಈಗ ಚಿಕಿತ್ಸಾ ದರ ಪರಿಷ್ಕರಣೆ ಹಾಗೂ ಯೋಜನೆಯ ವಿಸ್ತರಣೆಗೆ ಸಿದ್ಧತೆ ನಡೆಸಿದೆ.

ಇನ್ನಷ್ಟು ಖಾಸಗಿ ಆಸ್ಪತ್ರೆಗಳಿಗೆ ವಿಸ್ತರಣೆಯಾಗಲಿದೆ ಯೋಜನೆ

ಆರೋಗ್ಯ ಇಲಾಖೆಯ ಪ್ರಕಾರ, ಯೋಜನೆಯಡಿ ಈಗಾಗಲೇ 1,650 ಬಗೆಯ ಚಿಕಿತ್ಸೆಗಳು ಲಭ್ಯವಿದ್ದು, 171 ತುರ್ತು ಚಿಕಿತ್ಸಾ ಸೇವೆಗಳನ್ನು ಸೇರಿಸಲಾಗಿದೆ. ಇದರ ಜೊತೆಗೆ 200ಕ್ಕೂ ಹೆಚ್ಚು ಚಿಕಿತ್ಸಾ ಪ್ಯಾಕೇಜ್‌ಗಳ ದರವನ್ನು ಪರಿಷ್ಕರಿಸುವ ಪ್ರಕ್ರಿಯೆ ನಡೆಯುತ್ತಿದೆ. ಪ್ರಸ್ತುತ ಸುಮಾರು 370 ಖಾಸಗಿ ಆಸ್ಪತ್ರೆಗಳು ಯೋಜನೆಯಡಿ ಕಾರ್ಯನಿರ್ವಹಿಸುತ್ತಿದ್ದು, ಅವುಗಳ ಸಂಖ್ಯೆಯನ್ನು 600ಕ್ಕೂ ಹೆಚ್ಚು ಆಸ್ಪತ್ರೆಗಳಿಗೆ ಹೆಚ್ಚಿಸುವ ಗುರಿ ಹೊಂದಲಾಗಿದೆ.

ಚಿಕಿತ್ಸೆ ನೀಡಲು ಹಿಂದೇಟು ಹಾಕುತ್ತಿರುವ ಖಾಸಗಿ ಆಸ್ಪತ್ರೆಗಳು

ಕಳೆದ ಹಲವು ವರ್ಷಗಳಿಂದ ಪ್ಯಾಕೇಜ್ ದರ ಪರಿಷ್ಕರಣೆ ಆಗದ ಕಾರಣ, ಅನೇಕ ಖಾಸಗಿ ಆಸ್ಪತ್ರೆಗಳು ಯೋಜನೆಯಡಿ ಚಿಕಿತ್ಸೆ ನೀಡಲು ಹಿಂದೇಟು ಹಾಕಿದ್ದವು. ಕೆಲವು ಕಡೆ ರೋಗಿಗಳಿಗೆ ಚಿಕಿತ್ಸೆ ನಿರಾಕರಿಸಿದ ಆರೋಪಗಳು ಕೇಳಿಬಂದಿದ್ದರೆ, ಇನ್ನೂ ಕೆಲವು ಆಸ್ಪತ್ರೆಗಳು ಹೆಚ್ಚುವರಿ ಹಣ ವಸೂಲಿ ಮಾಡುತ್ತಿದ್ದವು ಎಂಬ ದೂರುಗಳೂ ಬಂದಿದ್ದವು.

ಆಯುಷ್ಮಾನ್ ಭಾರತ್ ಆರೋಗ್ಯ ಕರ್ನಾಟಕ ಯೋಜನೆಯಡಿ ಚಿಕಿತ್ಸಗೆ ಸಮಸ್ಯೆಗಳೇನು?

ಯೋಜನೆಯಡಿ ಒಂದು ಕುಟುಂಬಕ್ಕೆ 5 ಲಕ್ಷ ರೂ.ವರೆಗೆ ನಗದುರಹಿತ ಚಿಕಿತ್ಸೆ ಸೌಲಭ್ಯವಿದ್ದರೂ, ಒಂದೇ ಕುಟುಂಬದ ಇಬ್ಬರು ಅಥವಾ ಹೆಚ್ಚಿನ ಸದಸ್ಯರಿಗೆ ಒಂದೇ ಸಮಯದಲ್ಲಿ ದುಬಾರಿ ಚಿಕಿತ್ಸೆ ಅಗತ್ಯವಾದರೆ ಈ ಮಿತಿಯೇ ಸಮಸ್ಯೆಯಾಗುತ್ತಿದೆ. ಅಲ್ಲದೆ, ಕೆಲವು ವಿಶೇಷ ಶಸ್ತ್ರಚಿಕಿತ್ಸೆಗಳು ಇನ್ನೂ ಯೋಜನೆಯ ವ್ಯಾಪ್ತಿಗೆ ಬಂದಿಲ್ಲ ಎಂಬ ಅಸಮಾಧಾನವೂ ವ್ಯಕ್ತವಾಗುತ್ತಿದೆ.

ಈ ಹಿನ್ನೆಲೆಯಲ್ಲಿ ಖಾಸಗಿ ಆಸ್ಪತ್ರೆಗಳ ಪಾಲ್ಗೊಳ್ಳುವಿಕೆಯನ್ನು ಹೆಚ್ಚಿಸಿ, ರೋಗಿಗಳಿಗೆ ಸುಲಭವಾಗಿ ಚಿಕಿತ್ಸೆ ದೊರಕುವಂತೆ ಮಾಡಲು ಆರೋಗ್ಯ ಇಲಾಖೆ ಚಿಕಿತ್ಸಾ ದರ ಪರಿಷ್ಕರಣೆ ಹಾಗೂ ಯೋಜನೆ ವಿಸ್ತರಣೆಗೆ ಮುಂದಾಗಿದೆ. ಈ ಕುರಿತು ಆರೋಗ್ಯ ಇಲಾಖೆ ಆಯುಕ್ತ ಗುರುದತ್ತ ಹೆಗಡೆ ಕೂಡ ಪ್ರತಿಕ್ರಿಯಿಸಿದ್ದು, ದರ ಪರಿಷ್ಕರಣೆ ಪ್ರಕ್ರಿಯೆ ನಡೆಯುತ್ತಿರುವುದಾಗಿ ತಿಳಿಸಿದ್ದಾರೆ.

ಇದನ್ನೂ ಓದಿ: ಆಯುಷ್ಮಾನ್ ಭಾರತ್ ಹೆಲ್ತ್ ಇನ್ಷೂರೆನ್ಸ್; ಬೆಂಗಳೂರಿನಲ್ಲಿ ಎಐ ಹ್ಯಾಕಥಾನ್ ಶೋಕೇಸ್

ಒಟ್ಟಾರೆಯಾಗಿ, ಬಡ ವರ್ಗದ ಜನರಿಗೆ ಉತ್ತಮ ಆರೋಗ್ಯ ಸೇವೆ ನೀಡುವ ಉದ್ದೇಶದಿಂದ ಜಾರಿಗೆ ಬಂದಿರುವ ಆಯುಷ್ಮಾನ್ ಭಾರತ್ ಆರೋಗ್ಯ ಕರ್ನಾಟಕ ಯೋಜನೆಯನ್ನು ಕಾಲಾನುಗುಣವಾಗಿ ಬಲಪಡಿಸುವ ಅಗತ್ಯ ಬಹುಕಾಲದಿಂದ ಕೇಳಿಬರುತ್ತಿತ್ತು. ಇದೀಗ ಸರ್ಕಾರ ಚಿಕಿತ್ಸಾ ದರ ಪರಿಷ್ಕರಣೆಗೆ ಮುಂದಾಗಿದೆ. ಇದು ರೋಗಿಗಳಿಗೆ ಎಷ್ಟು ಅನುಕೂಲವಾಗಲಿದೆ ಎಂಬುದು ಮುಂದಿನ ದಿನಗಳಲ್ಲಿ ಸ್ಪಷ್ಟವಾಗಬೇಕಿದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

IND vs ZIM: ಟೀಮ್ ಇಂಡಿಯಾದ 7 ಆಟಗಾರರು ಅಲಭ್ಯ..!

Source link

ಚಿತ್ರಮಂದಿರಗಳಲ್ಲಿ ಹಬ್ಬದ ವಾತಾವರಣ ಸೃಷ್ಟಿಸಿದ ‘ಜನ ನಾಯಗನ್’; ಭರ್ಜರಿ ಸೆಲೆಬ್ರೇಷನ್ – Kannada News | Jana Nayagan Release: Thalapathy Vijay Final Film Gets Grand Morning Shows

ದಳಪತಿ ವಿಜಯ್ (Thalapathy Vijay) ನಟನೆಯ ಬಹುನಿರೀಕ್ಷಿತ ‘ಜನ ನಾಯಗನ್’ ಸಿನಿಮಾ ಇಂದು (ಜುಲೈ 23) ರಿಲೀಸ್ ಆಗಿದೆ. ಬೆಂಗಳೂರು ಸೇರಿದಂತೆ ಅನೇಕ ಕಡೆಗಳಲ್ಲಿ ಮುಂಜಾನೆ 6 ಗಂಟೆಗೆ ಶೋ ಆಯೋಜನೆ ಮಾಡಲಾಗಿದೆ. ಈ ಸಿನಿಮಾ ಸ್ವಾಗತ ಜೋರಾಗಿದೆ. ವಿಜಯ್ ಅವರ ಕೊನೆಯ ಸಿನಿಮಾ ಇದು. ಅಲ್ಲದೆ, ಈಗ ವಿಜಯ್ ಸಿಎಂ ಆಗಿರುವುದರಿಂದ ಫ್ಯಾನ್ಸ್ ಚಿತ್ರವನ್ನು ಭರ್ಜರಿ ಸ್ವಾಗತ ಮಾಡಿದ್ದು, ಥಿಯೇಟರ್ ಎದುರು ಹಬ್ಬದ ವಾತಾವರಣ ನಿರ್ಮಾಣ ಆಗಿದೆ.

ಹಲವು ಅಡೆತಡೆಗಳನ್ನು ದಾಟಿ ಬಂದ ಸಿನಿಮಾ

‘ಜನ ನಾಯಗನ್’ ಸಿನಿಮಾ ತೆರೆಗೆ ಬರಲು ಸಾಕಷ್ಟು ಸಮಯ ತಗೆದುಕೊಂಡಿದೆ. ಈ ಚಿತ್ರಕ್ಕೆ ಸಾಕಷ್ಟು ತೊಂದರೆಗಳು ಎದುರಾಗಿದ್ದವು. ಸೆನ್ಸಾರ್ ಮಂಡಳಿ ಸಮಸ್ಯೆ ಮತ್ತು ಆನ್​​ಲೈನ್ ಸೋರಿಕೆಯಂತಹ ಹಲವು ಅಡೆತಡೆಗಳಿಂದ ಸಿನಿಮಾ ತಡವಾಗಿತ್ತು. ಆದರೆ ಈಗ ಎಲ್ಲಾ ಕಷ್ಟಗಳು ಮುಗಿದಿವೆ. ಸಿನಿಮಾ ಎ ಪ್ರಮಾಣಪತ್ರ ಪಡೆದು ಅದ್ಧೂರಿಯಾಗಿ ರಿಲೀಸ್ ಆಗಿದೆ.

ಚಿತ್ರಮಂದಿರಗಳ ಬಳಿ ಹಬ್ಬದ ವಾತಾವರಣ

ಬೆಂಗಳೂರು, ಚೆನ್ನೈ, ಹೈದರಾಬಾದ್ ಮೊದಲಾದ ಕಡೆಯಲ್ಲಿ ಈಗಲೇ ಹಬ್ಬದ ಸಂಭ್ರಮ ಶುರುವಾಗಿದೆ. ವಿಜಯ್ ಅಭಿಮಾನಿಗಳು ಸಂಭ್ರಮಾಚರಣೆ ಆರಂಭಿಸಿದ್ದಾರೆ. ಪ್ರಮುಖ ಸಿಂಗಲ್ ಸ್ಕ್ರೀನ್ ಥಿಯೇಟರ್‌ಗಳ ಮುಂದೆ ವಿಜಯ್ ಅವರ ಬೃಹತ್ ಕಟೌಟ್‌ಗಳನ್ನು ನಿಲ್ಲಿಸಲಾಗಿದೆ. ಬ್ಯಾನರ್‌ಗಳು ಮತ್ತು ತಳಿರು ತೋರಣಗಳಿಂದ ಚಿತ್ರಮಂದಿರಗಳನ್ನು ಅಲಂಕರಿಸಲಾಗಿದೆ.

ಬಾಕ್ಸ್ ಆಫೀಸ್ ದಾಖಲೆ ಬರೆಯುತ್ತಾ ‘ಜನ ನಾಯಗನ್’?

ಸಿನಿಮಾದ ಅಡ್ವಾನ್ಸ್ ಬುಕಿಂಗ್ ತುಂಬಾ ಚೆನ್ನಾಗಿ ನಡೆದಿದೆ. ಬಾಕ್ಸ್ ಆಫೀಸ್‌ನಲ್ಲಿ ಸಿನಿಮಾ ಭರ್ಜರಿ ಓಪನಿಂಗ್ ಪಡೆಯುವ ಎಲ್ಲಾ ಲಕ್ಷಣಗಳು ಕಾಣಿಸುತ್ತಿವೆ. ಚಿತ್ರಕ್ಕೆ ಒಳ್ಳೆಯ ವಿಮರ್ಶೆ ಸಿಕ್ಕರೆ ಮೊದಲ ದಿನವೇ ದಾಖಲೆ ಕಲೆಕ್ಷನ್ ಮಾಡುವುದು ಗ್ಯಾರಂಟಿ. ದಳಪತಿ ವಿಜಯ್ ಅವರ ಕೊನೆಯ ಸಿನಿಮಾ ಥಿಯೇಟರ್‌ನಲ್ಲಿ ಎಷ್ಟರ ಮಟ್ಟಿಗೆ ಧೂಳೆಬ್ಬಿಸಲಿದೆ ಎಂಬುದನ್ನು ಕಾದು ನೋಡಬೇಕಿದೆ.

ಇದನ್ನೂ ಓದಿ: ‘ಜನ ನಾಯಗನ್’ ಪ್ರಚಾರ ಮಾಡದ ಸಿಎಂ ವಿಜಯ್; ಆದರೂ ಹೇಗಿದೆ ಅಭಿಮಾನಿಗಳ ಕ್ರೇಜ್?

ಎಚ್. ವಿನೋದ್ ಈ ಚಿತ್ರವನ್ನು ನಿರ್ದೇಶಿಸಿದ್ದಾರೆ. ಮಮಿತಾ ಬೈಜು ಮತ್ತು ಪೂಜಾ ಹೆಗ್ಡೆ ಮುಖ್ಯ ಪಾತ್ರಗಳಲ್ಲಿ ನಟಿಸಿದ್ದಾರೆ.

ಪ್ರಶ್ನೆ: ಜನ ನಾಯಗನ್ ಸಿನಿಮಾ ಯಾವಾಗ ಬಿಡುಗಡೆ ಆಗಲಿದೆ? 
ಉತ್ತರ:
ಜುಲೈ 23

ಪ್ರಶ್ನೆ: ಇದು ವಿಜಯ್ ಕೊನೆ ಚಿತ್ರವೇ?
ಉತ್ತರ:
ಹೌದು

ಪ್ರಶ್ನೆ: ಚಿತ್ರಕ್ಕೆ ಯಾವ ಪ್ರಮಾಣ ಪತ್ರ ನೀಡಲಾಗಿದೆ?
ಉತ್ತರ: 
ಎ ಪ್ರಮಾಣಪತ್ರ

Source link

Exit mobile version