Headlines

ಹಾರ್ಮುಜ್ ಜಲಸಂಧಿಯಲ್ಲಿ ಮಹಾ ಸುಂಕದ ಸಮರ, ಟ್ರಂಪ್ ಅವರ ಶೇ.20 ಶುಲ್ಕದ ಬೇಡಿಕೆಗೆ ಇರಾನ್ ಕೌಂಟರ್ – Kannada News | Hormuz Strait Tariff War: Trump’s 20 percent Fee Sparks Iran Counter and Global Oil Crisis

ಟೆಹ್ರಾನ್, ಜುಲೈ 14: ಜಾಗತಿಕ ತೈಲ ಮಾರುಕಟ್ಟೆಯ ಜೀವನಾಡಿಯಾಗಿರುವ ಹಾರ್ಮುಜ್ ಜಲಸಂಧಿ(Hormuz Strait)ಯ ನಿಯಂತ್ರಣ ಮತ್ತು ಸುಂಕದ ವಿಚಾರವಾಗಿ ಅಮೆರಿಕ ಅಧ್ಯಕ್ಷ ಡೊನಾಲ್ಡ್​ ಟ್ರಂಪ್ ಮತ್ತು ಇರಾನ್ ನಡುವೆ ತೀವ್ರ ಮಾತಿನ ಚಕಿಮಕಿ ನಡೆದಿದೆ. ಜಲಸಂಧಿಯ ಮೂಲಕ ಹಾದು ಹೋಗುವ ವಿಶ್ವದ ಎಲ್ಲಾ ವಾಣಿಜ್ಯ ಹಡಗುಗಳ ಸರಕುಗಳ ಮೇಲೆ ಬರೋಬ್ಬರಿ ಶೇ.20ರಷ್ಟು ಸುರಕ್ಷತಾ ಶುಲ್ಕ ವಿಧಿಸುವ ಟ್ರಂಪ್ ಯೋಜನೆ ಬಗ್ಗೆ ಇರಾನ್ ತಮಾಷೆ ಮಾಡಿದೆ. ಇದಕ್ಕೆ ಎಕ್ಸ್​​ ಪೋಸ್ಟ್​ ಮೂಲಕ ಪ್ರತಿಕ್ರಿಯಿಸಿರುವ ಇರಾನ್ ವಿದೇಶಾಂಗ ಸಚಿವ ಸಯ್ಯದ್…

Read More

Video: ರಂಗದಲ್ಲಿ ಯಕ್ಷಗಾನ ಕಲಾವಿದನೊಂದಿಗೆ ಹೆಜ್ಜೆ ಹಾಕಿದ ಪುಟಾಣಿ

ಪುಟಾಣಿ ಮಕ್ಕಳೇ (little kids) ಹಾಗೆ ಹಾಡು ಕೇಳಿದ ತಕ್ಷಣ ಕುಣಿಯಲು ಶುರು ಮಾಡ್ತಾರೆ. ಸೋಶಿಯಲ್ ಮೀಡಿಯಾದಲ್ಲಿ ಈ ಪುಟಾಣಿಗಳ ಡ್ಯಾನ್ಸ್ ವಿಡಿಯೋಗಳು ವೈರಲ್ ಆಗುತ್ತಿರುತ್ತವೆ. ಇದೀಗ ರಂಗದಲ್ಲಿ ಯಕ್ಷಗಾನ ಕಲಾವಿದ ಕುಣಿಯುತ್ತಿದ್ದರೆ, ಯಕ್ಷಗಾನ (Yakshagana) ನೋಡಲು ಬಂದ ಪುಟಾಣಿಯೂ ಅವರ ಜತೆಯಲ್ಲಿ ಹೆಜ್ಜೆ ಹಾಕಿದೆ. ಈ ಮುದ್ದಾದ ವಿಡಿಯೋ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದ್ದು ನೆಟ್ಟಿಗರು ಫಿದಾ ಆಗಿದ್ದಾರೆ. ಸುಬ್ರಮಣ್ಯ ಭಾಗವತ್ (Subramanya Bhagwat) ಹೆಸರಿನ ಫೇಸ್ ಬುಕ್ ಖಾತೆಯಲ್ಲಿ ಹಂಚಿಕೊಳ್ಳಲಾದ ವಿಡಿಯೋದಲ್ಲಿ ಪುಟಾಣಿಯ ಯಕ್ಷಗಾನ…

Read More

UPSC NDA NA I 2026: ಭೂಸೇನೆ, ನೌಕಾಪಡೆ, ವಾಯುಪಡೆಯಲ್ಲಿ 394 ಹುದ್ದೆಗಳಿಗೆ ನೇಮಕಾತಿ; ಪಿಯುಸಿ ಪಾಸಾಗಿದ್ರೆ ಸಾಕು – Kannada News | UPSC NDA NA I 2026 Notification: Apply for Army, Navy, Air Force Officer Posts

ಕೇಂದ್ರ ಲೋಕಸೇವಾ ಆಯೋಗ (UPSC) ರಾಷ್ಟ್ರೀಯ ರಕ್ಷಣಾ ಅಕಾಡೆಮಿ, ನೌಕಾ ಅಕಾಡೆಮಿ ಪರೀಕ್ಷೆ (NDA & NA) I, 2026 ರ ಅಧಿಸೂಚನೆಯನ್ನು ಬಿಡುಗಡೆ ಮಾಡಿದೆ. ಭಾರತೀಯ ಸೇನೆ, ನೌಕಾಪಡೆ ಮತ್ತು ವಾಯುಪಡೆಯಲ್ಲಿ ಅಧಿಕಾರಿಯಾಗಿ ದೇಶಕ್ಕೆ ಸೇವೆ ಸಲ್ಲಿಸುವ ಕನಸು ಕಾಣುವ ದೇಶದ ಯುವಕರಿಗೆ ಅರ್ಜಿ ಸಲ್ಲಿಸಲು ಇದೊಂದು ಸುವರ್ಣವಕಾಶ. ಈ ಬಾರಿ ಯುಪಿಎಸ್‌ಸಿ ಒಟ್ಟು 394 ಹುದ್ದೆಗಳನ್ನು ಪ್ರಕಟಿಸಿದ್ದು, ಇದರಲ್ಲಿ ಪುರುಷ ಮತ್ತು ಮಹಿಳಾ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುತ್ತದೆ. ಇದರಲ್ಲಿ, ಎನ್‌ಡಿಎಯ 157 ನೇ ಕೋರ್ಸ್‌ಗೆ…

Read More

Vastu Guide: ಒಂದೇ ಮನೆಯಲ್ಲಿ ಎರಡು ದೇವರ ಕೋಣೆ ಇರುವುದು ಅಶುಭವೇ? ಶಾಸ್ತ್ರಗಳು ಹೇಳುವುದೇನು? – Kannada News | Vastu Guide: Two Pooja Rooms at Home? Rules for Mandir Placement and Harmony

ಹಿಂದೂ ಸಂಪ್ರದಾಯದಲ್ಲಿ ಪೂಜೆ ಮತ್ತು ಪ್ರಾರ್ಥನೆಗಳಿಗೆ ಅತ್ಯುನ್ನತ ಸ್ಥಾನವಿದೆ. ದೇವರನ್ನು ನಿಯಮಿತವಾಗಿ ಭಕ್ತಿಯಿಂದ ಪೂಜಿಸುವುದರಿಂದ ದೈವಿಕ ಆಶೀರ್ವಾದಗಳು ಲಭಿಸುವುದಲ್ಲದೆ, ಮನೆಯಲ್ಲಿ ಸಕಾರಾತ್ಮಕ ಶಕ್ತಿ ಹೆಚ್ಚಾಗುತ್ತದೆ ಎಂಬ ಬಲವಾದ ನಂಬಿಕೆಯಿದೆ. ಇದೇ ಕಾರಣಕ್ಕಾಗಿ ಬಹುತೇಕ ಪ್ರತಿಯೊಂದು ಮನೆಯಲ್ಲೂ ಒಂದು ವಿಶೇಷ ಪೂಜಾ ಸ್ಥಳ ಅಥವಾ ಪುಟ್ಟ ದೇವಾಲಯವನ್ನು ಸ್ಥಾಪಿಸಲಾಗುತ್ತದೆ. ಈ ಪವಿತ್ರ ಸ್ಥಳದಲ್ಲಿ ದಿನದಲ್ಲಿ ಸ್ವಲ್ಪ ಸಮಯ ಧ್ಯಾನ ಮಾಡುವುದು ಅಥವಾ ಪ್ರಾರ್ಥಿಸುವುದರಿಂದ ಮನಸ್ಸಿಗೆ ಅಪಾರ ಶಾಂತಿ ಸಿಗುತ್ತದೆ ಮತ್ತು ದೈನಂದಿನ ಮಾನಸಿಕ ಒತ್ತಡವೂ ದೂರವಾಗುತ್ತದೆ. ವಾಸ್ತು ಶಾಸ್ತ್ರದ…

Read More

ಆಟವಾಡುತ್ತಾ ಆಟಿಕೆ ನುಂಗಿದ ಮಗು; ಎಂಡೋಸ್ಕೋಪಿ ಮೂಲಕ ಹೊರತೆಗೆದ ವೈದ್ಯರು – Kannada News | Baby boy swallows Hulk toy doctors remove it via endoscopy

ಅಹಮದಾಬಾದ್, ಫೆಬ್ರವರಿ 4: ಮಕ್ಕಳು ಸಾಮಾನ್ಯವಾಗಿ ಆಗಾಗ ತಮ್ಮ ಬಾಯಿಯಲ್ಲಿ ವಸ್ತುಗಳನ್ನು ಹಾಕುವ ಅಭ್ಯಾಸವನ್ನು ಇಟ್ಟುಕೊಂಡಿರುತ್ತಾರೆ. ಈ ಬಗ್ಗೆ ಪೋಷಕರು ನಿರ್ಲಕ್ಷ್ಯ ಮಾಡಬಾರದು. ಇತ್ತೀಚಿನ ಒಂದು ಪ್ರಕರಣದಲ್ಲಿ ಗುಜರಾತ್‌ನ (Gujarat)  ಅಹಮದಾಬಾದ್‌ನ ಒಂದೂವರೆ ವರ್ಷದ ಬಾಲಕ ಆಕಸ್ಮಿಕವಾಗಿ ತನ್ನ ಪ್ಲಾಸ್ಟಿಕ್ ಆಟಿಕೆಯನ್ನು ನುಂಗಿದ್ದ. ವೈದ್ಯಕೀಯ ಚಿಕಿತ್ಸೆಗಾಗಿ ಅವನನ್ನು ತಕ್ಷಣ ಆಸ್ಪತ್ರೆಗೆ ಕರೆದೊಯ್ಯಲಾಯಿತು. ಆಟಿಕೆ ಮಗುವಿನ ಹೊಟ್ಟೆಯಲ್ಲಿ ಸಿಲುಕಿಕೊಂಡಿದ್ದು, ಅವನ ಒಳ ಅಂಗಗಳಿಗೆ ಹಾನಿಯನ್ನುಂಟುಮಾಡುವ ಸಾಧ್ಯತೆಯಿದೆ ಎಂದು ವೈದ್ಯರು ಹೇಳಿದ್ದರು. ವೈದ್ಯರು ಮೊದಲು ಎಕ್ಸ್-ರೇ ನಡೆಸಿದರು. ಇದಾದ ನಂತರ…

Read More

ಬೆಂಗಳೂರಲ್ಲಿ 2BHK ಮನೆಗೆ 70 ಸಾವಿರ ರೂ. ಬಾಡಿಗೆ!, ಭಯಾನಕ ಅನುಭವ ಬಿಚ್ಚಿಟ್ಟ ವ್ಯಕ್ತಿ

ಬೆಂಗಳೂರು, ಏಪ್ರಿಲ್​​ 04: ಸಿಲಿಕಾನ್​​ ಸಿಟಿ ಬೆಂಗಳೂರು ದೇಶದ ಪ್ರಮುಖ ನಗರಗಳಲ್ಲಿ ಒಂದು. ಐಟಿ ಕ್ಷೇತ್ರದ ತವರು ಎಂದೇ ಕರೆಸಿಕೊಳ್ಳುವ ರಾಜ್ಯ ರಾಜಧಾನಿಯಲ್ಲಿ ಅನ್ಯರಾಜ್ಯ ಸೇರಿ ವಿದೇಶಿಯರು ಕೂಡ ಕೆಲಸ ಅರಸಿ ಬಂದು ನೆಲೆಸಿದ್ದಾರೆ. ಇವರ ಜೊತೆಗೆ ವಿದ್ಯಾರ್ಥಿಗಳ ಸಂಖ್ಯೆಯೂ ದೊಡ್ಡ ಪ್ರಮಾಣದಲ್ಲಿ ಇರುವ ಕಾರಣ, ನಗರದಲ್ಲಿ ಏರಿಕೆಯಾಗುತ್ತಿರುವ ಮನೆ ಬೆಲೆಗಳು ಮತ್ತು ಬಾಡಿಗೆ ದರಗಳು ಸಾಮಾನ್ಯ ಜನರಿಗೆ ಕೈಗೆಟುಕದಂತಾಗುತ್ತಿವೆ. ಕಳೆದ ಕೆಲವು ವರ್ಷಗಳಲ್ಲಿ ಆಸ್ತಿ ಬೆಲೆ ಹಾಗೂ ಬಾಡಿಗೆಗಳು ತೀವ್ರವಾಗಿ ಏರಿಕೆಯಾಗಿರುವ ಹಿನ್ನೆಲೆಯಲ್ಲಿ, ವಾಸಕ್ಕೆ ಸೂಕ್ತ…

Read More

IND vs ENG: ಏಕದಿನ ಸರಣಿಯಿಂದ ಟೀಂ ಇಂಡಿಯಾದ ಸ್ಟಾರ್ ಪ್ಲೇಯರ್ ಔಟ್; ಬದಲಿಯಾಗಿ ಬಂದಿದ್ಯಾರು? – Kannada News | India vs England ODI Series: Prince Yadav Replaces Harshit Rana for July 14 Series

ಭಾರತ ಹಾಗೂ ಇಂಗ್ಲೆಂಡ್‌ ನಡುವಿನ ಐದು ಪಂದ್ಯಗಳ ಟಿ20 ಸರಣಿ ಅಂತ್ಯವಾಗಿದೆ. ಆತಿಥೇಯ ಇಂಗ್ಲೆಂಡ್‌ ಈ ಚುಟುಕು ಸಮರದಲ್ಲಿ ವಿಶ್ವ ಚಾಂಪಿಯನ್ ಟೀಂ ಇಂಡಿಯಾವನ್ನು 4-0 ಅಂತರದಿಂದ ಮಣಿಸಿ ಮೊಟ್ಟ ಮೊದಲ ಬಾರಿಗೆ ಟಿ20 ಸರಣಿ ಗೆದ್ದ ದಾಖಲೆಯನ್ನು ನಿರ್ಮಿಸಿತು. ಇದೀಗ ಆಂಗ್ಲರ ನಾಡಿನಲ್ಲಿ ಒಂದೇ ಒಂದು ಪಂದ್ಯವನ್ನು ಗೆಲ್ಲಲಾಗದೆ ಮುಜುಗರಕ್ಕೊಳಗಾಗಿರುವ ಟೀಂ ಇಂಡಿಯಾ, ಟಿ20 ಸರಣಿ ಸೋಲಿನ ಅವಮಾನಕ್ಕೆ ಏಕದಿನ ಸರಣಿಯಲ್ಲಿ ಸೇಡು ತೀರಿಸಿಕೊಳ್ಳುವ ಇರಾದೆಯಲ್ಲಿದೆ. ಉಭಯ ತಂಡಗಳ ನಡುವಿನ ಮೂರು ಪಂದ್ಯಗಳ ಏಕದಿನ ಸರಣಿ…

Read More

Video:ದಿನಸಿ ಖರೀದಿಸಿ ವಾಪಸಾಗುತ್ತಿದ್ದಾಗ ಮಹಿಳೆಯನ್ನು ಹಿಂದಿನಿಂದ ಹಿಡಿದುಕೊಂಡು ಖಾಸಗಿ ಅಂಗಗಳ ಮುಟ್ಟಿ ಚಿತ್ರಹಿಂಸೆ ಕೊಟ್ಟ ಯುವಕರು

ಪಾಟ್ನಾ, ಏಪ್ರಿಲ್ 1: ಮನೆಗೆ ದಿನಸಿ ವಸ್ತುಗಳನ್ನು ತರಲು ಹೊರಗೆ ತೆರಳಿದ್ದ ವಿವಾಹಿತ ಮಹಿಳೆ ಮನೆಗೆ ಹಿಂದಿರುಗುವಾಗ ಗುಂಪೊಂದು ಆಕೆಯನ್ನು ಅಡ್ಡಗಟ್ಟಿತ್ತು. ಅದರಲ್ಲಿ ಒಬ್ಬಾತ ಆಕೆಯನ್ನು ಹಿಂದಿನಿಂದ ಹಿಡಿದುಕೊಂಡು ಆಕೆಯ ಖಾಸಗಿ ಅಂಗಗಳನ್ನು ಮುಟ್ಟಿ ಚಿತ್ರಹಿಂಸೆ ನೀಡುತ್ತಿರುವ ವಿಡಿಯೋ ವೈರಲ್ ಆಗಿದೆ. ಆಕೆ ಎಷ್ಟೇ ಆತನನ್ನು ತಡೆಯಲು ಪ್ರಯತ್ನಿಸಿದರೂ ಕೂಡ ಆತ ಪದೇ ಪದೇ ಅದೇ ರೀತಿ ಮಾಡುತ್ತಿರುವುದನ್ನು ವಿಡಿಯೋದಲ್ಲಿ ಕಾಣಬಹುದು. ಇದು ಕೇವಲ ಅಪರಾಧವಲ್ಲ, ಆದರೆ ಕಾನೂನು ಮತ್ತು ಸಮಾಜ ಎರಡಕ್ಕೂ ಬಹಿರಂಗ ಸವಾಲು. ಎರಡು…

Read More

ಮಹಿಳಾ ಪ್ರಧಾನ ಕಥಾಹಂದರ ಇರುವ ‘ವಿದಿ’ ಸಿನಿಮಾಗೆ ಜಯಮಾಲಾ ಬೆಂಬಲ – Kannada News | Karnataka Film Chamber of Commerce president Jayamala launches poster of female centric movie Vidhi

ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಅಧ್ಯಕ್ಷೆ ಆಗಿರುವ ನಟಿ ಜಯಮಾಲಾ ಅವರು ‘ವಿದಿ’ (Vidhi) ಚಿತ್ರತಂಡಕ್ಕೆ ಸಾಥ್ ನೀಡಿದ್ದಾರೆ. ಈ ಸಿನಿಮಾದಲ್ಲಿ ಮಹಿಳಾ ಪ್ರಧಾನ ಕಥಾಹಂದರ ಇರಲಿದೆ ಎಂದು ಚಿತ್ರತಂಡ ಹೇಳಿದೆ. ಇತ್ತೀಚೆಗೆ ಚಿತ್ರತಂಡದವರು ಜಯಮಾಲಾ ಅವರನ್ನು ಭೇಟಿ ಮಾಡಿದರು. ಈ ವೇಳೆ ಸಿನಿಮಾದ ಪೋಸ್ಟರ್ ಬಿಡುಗಡೆ ಮಾಡಿದ ಜಯಮಾಲಾ (Jayamala) ಅವರು ಚಿತ್ರತಂಡಕ್ಕೆ ಶುಭ ಕೋರಿದರು. ‘ವಿದಿ’ ಸಿನಿಮಾದ ಪೋಸ್ಟರ್‌ ಅನಾವರಣ ಮಾಡಿದ ಬಳಿಕ ಜಯಮಾಲಾ ಅವರು ಮಾತನಾಡಿದರು. ಮಹಿಳಾಪ್ರಧಾನ ಕಥೆ ಇರುವ ಸಿನಿಮಾ ಎಂಬುದನ್ನು…

Read More

ಬೆಂಗಳೂರು: ನಮ್ಮ ಮೆಟ್ರೋ ಪ್ರಯಾಣಿಕರಿಗೆ ಡಬಲ್​​ ಗುಡ್​​ನ್ಯೂಸ್​​ – Kannada News | Namma Metro Pink and Blue Lines will open in 2026

ಬೆಂಗಳೂರು, ಜನವರಿ 06: ಕೊರೊನಾ ಬಳಿಕ ಕೊಂಚ ಇಳಿಕೆಯಾಗಿದ್ದ ಬೆಂಗಳೂರಿನ ಟ್ರಾಫಿಕ್​​ ಸಮಸ್ಯೆ ಈಗ ಮತ್ತೆ ಹಳೆಯ ಸ್ಥಿತಿಗೆ ಮರಳಿದೆ. ಪ್ರತಿದಿನ ವಾಹನ ದಟ್ಟಣೆ ಸಮಸ್ಯೆಗೆ ಸಿಲುಕಿ ಒದ್ದಾಡುತ್ತಿರುವ ಸಿಲಿಕಾನ್​ ಸಿಟಿ ಮಂದಿಗೆ ನಮ್ಮ ಮೆಟ್ರೋ ಗುಡ್​​ನ್ಯೂಸ್​​ ಕೊಟ್ಟಿದ್ದು, ಒಂದಲ್ಲ ಎರಡು ಹೊಸ ಮಾರ್ಗಗಗಳು ಈ ವರ್ಷದಿಂದಲೇ ಕಾರ್ಯಾರಂಭ ಮಾಡಲಿವೆ. ಈಗಾಗಲೇ ಸೇವೆ ಒದಗಿಸುತ್ತಿರುವ ಹಸಿರು, ಗುಲಾಬಿ ಮತ್ತು ಹಳದಿ ಮಾರ್ಗಗಳ ಜೊತೆ ಮತ್ತೆರಡು ಮಾರ್ಗಗಳಲ್ಲಿ ಮೆಟ್ರೋ ರೈಲುಗಳ ಸಂಚಾರದಿಂದ ನಗರದ ಟ್ರಾಫಿಕ್​​ ಸಮಸ್ಯೆಗೆ ಬಹುತೇಕ ಪರಿಹಾರ…

Read More