ಮೇಲಾಧಿಕಾರಿಗಳ ಕಿರುಕುಳ, ಕೆಲಸದ ಒತ್ತಡಕ್ಕೆ ಬಲಿಯಾದ್ರಾ ಮಹಿಳಾ ಅಧಿಕಾರಿ?: ಜಿಲ್ಲಾದ್ಯಂತ ಕಂದಾಯ ಸಿಬ್ಬಂದಿ ಧರಣಿ – Kannada News | Karnataka VAOs Tragic Demise: Association Demands Action Against Senior Officers Over Election Duty Pressure
ತುಮಕೂರು,ಜು.4: ಜಿಲ್ಲೆಯ ಗ್ರಾಮ ಆಡಳಿತ ಅಧಿಕಾರಿ ಕುಮಾರಿ ಭುವನಾ ಅವರು ಎಸ್ಐಆರ್ ಕರ್ತವ್ಯಕ್ಕೆ ತೆರಳುವಾಗ ನಡೆದ ಅಪಘಾತದಲ್ಲಿ ನಿಧನರಾಗಿದ್ದಾರೆ. ಅಧಿಕಾರಿಗಳ ವಿಪರೀತ ಕೆಲಸದ ಒತ್ತಡ ಮತ್ತು ಕಿರುಕುಳವೇ ಅವರ ಸಾವಿಗೆ ಕಾರಣ ಎಂದು ಕರ್ನಾಟಕ ರಾಜ್ಯ ಗ್ರಾಮ ಆಡಳಿತ ಅಧಿಕಾರಿಗಳ ಸಂಘ ಆರೋಪಿಸಿದೆ. ಸಂಘದ ರಾಜ್ಯಾಧ್ಯಕ್ಷ ಯೋಗೇಶ್ ನಾಯಕ್ ಮಾತನಾಡಿ, ಬೆಳಗಿನ ಜಾವ 6:30ರ ಸುಮಾರಿಗೆ ಮೇಲಾಧಿಕಾರಿಗಳ ಒತ್ತಡದಿಂದ ಕೆಲಸಕ್ಕೆ ತೆರಳುತ್ತಿದ್ದ ಭುವನಾ ಅವರು ಅಪಘಾತಕ್ಕೀಡಾಗಿದ್ದು, ಆಸ್ಪತ್ರೆಯಲ್ಲಿ ಮೃತಪಟ್ಟಿರುವುದಾಗಿ ವೈದ್ಯರು ದೃಢಪಡಿಸಿದ್ದಾರೆ. ತಹಸೀಲ್ದಾರ್, ಉಪವಿಭಾಗಾಧಿಕಾರಿ, ಅಪರ ಜಿಲ್ಲಾಧಿಕಾರಿ…