Headlines

ಪುನೀತ್ ಹೆಸರಲ್ಲಿ ದುಡ್ಡು ಮಾಡ್ತಾರೆ ಎಂದವರಿಗೆ ಗಿಲ್ಲಿ ಸ್ಟೈಲ್​​ನಲ್ಲಿ ಉತ್ತರ ಕೊಟ್ಟ ಅನುಶ್ರೀ

ಆ್ಯಂಕರ್ ಅನುಶ್ರೀ ಅವರು (Anushree) ಪುನೀತ್ ರಾಜ್​​ಕುಮಾರ್ ಅವರ ದೊಡ್ಡ ಅಭಿಮಾನಿ. ಈ ಕಾರಣದಿಂದಲೇ ಅನುಶ್ರೀ ಅವರ ಯೂಟ್ಯೂಬ್ ಲೋಗೋದಲ್ಲಿ ಪುನೀತ್ ಫೋಟೋ ಸೇರಿಸಿಕೊಂಡಿದ್ದಾರೆ. ಪುನೀತ್ ನಿಧನದ ಬಳಿಕ ಅನುಶ್ರೀ ಸಾಕಷ್ಟು ಬಾರಿ ಬಿಕ್ಕಿ ಬಿಕ್ಕಿ ಅತ್ತಿದ್ದಿದೆ. ತಮ್ಮ ಮದುವೆಯಲ್ಲಿ ಪುನೀತ್ ಫೋಟೋ ಇಟ್ಟು ಅವರು ಪೂಜಿಸಿದ್ದರು. ಇದು ಪುನೀತ್ ಮೇಲೆ ಅವರಿಗೆ ಇರೋ ಪ್ರೀತಿಗೆ ಸಾಕ್ಷಿ. ಆದರೆ, ಕೆಲವರು ಇದನ್ನು ಟ್ರೋಲ್ ಮಾಡಿದ್ದು ಇದೆ. ಇದಕ್ಕೆ ಅನುಶ್ರೀ ಖಡಕ್ ಉತ್ತರ ನೀಡಿದ್ದಾರೆ. ಪುನೀತ್ ಅವರನ್ನು ಅನುಶ್ರೀ…

Read More

ಕೃನಾಲ್ ಪಾಂಡ್ಯ ಬೌಲಿಂಗ್​ಗೆ ಬ್ಯಾನ್ ಭೀತಿ?

IPL 2026: ಐಪಿಎಲ್ 2026ರ ಸೀಸನ್‌ನಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ಪರ ಆಡುತ್ತಿರುವ ಆಲ್-ರೌಂಡರ್ ಕೃನಾಲ್ ಪಾಂಡ್ಯ (Krunal Pandya) ತಮ್ಮ ವಿಭಿನ್ನ ಬೌಲಿಂಗ್ ಶೈಲಿಯಿಂದ ಭಾರಿ ಚರ್ಚೆಗೆ ಕಾರಣವಾಗಿದ್ದಾರೆ. ಒಬ್ಬ ಸ್ಪಿನ್ನರ್ ಆಗಿದ್ದರೂ 120-125 ಕಿ.ಮೀ. ವೇಗದಲ್ಲಿ ಬೌಲಿಂಗ್ ಮಾಡುತ್ತಿರುವುದು ಅಭಿಮಾನಿಗಳಲ್ಲಿ ಮತ್ತು ವಿಮರ್ಶಕರಲ್ಲಿ ಕುತೂಹಲ ಹಾಗೂ ಅನುಮಾನಗಳನ್ನು ಮೂಡಿಸಿದೆ. ಚರ್ಚೆಗೆ ಕಾರಣವೇನು? ಏಪ್ರಿಲ್ 5, 2026 ರಂದು ನಡೆದ ಸಿಎಸ್‌ಕೆ (CSK) ವಿರುದ್ಧದ ಪಂದ್ಯದಲ್ಲಿ ಕೃನಾಲ್ ಪಾಂಡ್ಯ ಬರೋಬ್ಬರಿ 126.1 ಕಿ.ಮೀ. ವೇಗದಲ್ಲಿ…

Read More

ಅಲ್ಲು ಅರ್ಜುನ್ ಸಿನಿಮಾ ‘ರಾಕಾ’ ಟೈಟಲ್ ಅರ್ಥವೇನು? ಶುರುವಾಗಿದೆ ಚರ್ಚೆ

‘ಪುಷ್ಪ 2’ ಅಂತಹ ಬ್ಲಾಕ್‌ಬಸ್ಟರ್ ಚಿತ್ರದ ನಂತರ ಅಲ್ಲು ಅರ್ಜುನ್ ಹೊಸ ಸಿನಿಮಾ ಘೋಷಿಸಿದ್ದಾರೆ. ಬನ್ನಿ ತಮ್ಮ ಮುಂದಿನ ಚಿತ್ರವನ್ನು ಅಟ್ಲೀ ಅವರೊಂದಿಗೆ ಮಾಡುತ್ತಿದ್ದಾರೆ. ಬಾಲಿವುಡ್ ಬೆಡಗಿ ದೀಪಿಕಾ ಪಡುಕೋಣೆ ನಾಯಕಿಯಾಗಿ ಆಯ್ಕೆಯಾಗಿದ್ದಾರೆ. ತಮಿಳಿನಲ್ಲಿ ದೊಡ್ಡ ಬಜೆಟ್ ಚಿತ್ರಗಳಿಗೆ ಹೆಸರು ವಾಸಿಯಾಗಿರುವ ಸನ್ ಪಿಕ್ಚರ್ಸ್ ಸುಮಾರು 800 ಕೋಟಿ ರೂ. ಬಜೆಟ್‌ನಲ್ಲಿ ಈ ಚಿತ್ರವನ್ನು ನಿರ್ಮಿಸುತ್ತಿದೆ. ಕಳೆದ ವರ್ಷ ಪ್ರಾರಂಭವಾದ ಈ ಚಿತ್ರದ ಚಿತ್ರೀಕರಣವು ಇಲ್ಲಿಯವರೆಗೆ ವರ್ಕಿಂಗ್ ಟೈಟಲ್‌ನೊಂದಿಗೆ ಮುಗಿದಿದೆ. ಅಲ್ಲು ಅರ್ಜುನ್ ಅವರ ಹುಟ್ಟುಹಬ್ಬದಂದು (ಏಪ್ರಿಲ್…

Read More

Hindu Ritual: ತಿಥಿ ಊಟಕ್ಕೆ ಹೋಗಿ ಬಂದರೆ ಕೆಟ್ಟದ್ದೇ ಆಗುತ್ತಾ? ತಜ್ಞರು ಹೇಳುವುದೇನು?

ಯಾರೇ ದೈವಾಧೀನರಾದಾಗ, ಸ್ವರ್ಗಸ್ಥರಾದಾಗ ಅಥವಾ ವೈಕುಂಠ ಪ್ರಯಾಣ ಬೆಳೆಸಿದಾಗ, ಅವರ ನೆನಪಿನಲ್ಲಿ ತಿಥಿ ಊಟ ಅಥವಾ ತಿಥಿ ಆಹಾರವನ್ನು ಸೇವಿಸುವ ಪದ್ಧತಿ ನಮ್ಮ ಸಂಪ್ರದಾಯದಲ್ಲಿದೆ. ಆದರೆ, ಈ ತಿಥಿ ಊಟವನ್ನು ಸೇವಿಸಬಹುದೇ ಅಥವಾ ಇದು ಏನಾದರೂ ತೊಂದರೆಯನ್ನು ತರುತ್ತದೆಯೇ ಎಂಬ ಬಗ್ಗೆ ಹಲವರಲ್ಲಿ ಪ್ರಶ್ನೆಗಳು ಮತ್ತು ಸಂಶಯಗಳಿವೆ. ಕೆಲವರು ತಿಥಿ ಊಟಕ್ಕೆ ಹೋಗಲು ನಿರಾಕರಿಸುತ್ತಾರೆ, ಇದರಿಂದ ಅದೃಷ್ಟ ಕೆಡುತ್ತದೆ ಅಥವಾ ಅಶುಭವಾಗುತ್ತದೆ ಎಂದು ಭಾವಿಸುತ್ತಾರೆ. ಈ ಬಗ್ಗೆ ಖ್ಯಾತ ಜ್ಯೋತಿಷಿ ಮತ್ತು ವಾಸ್ತು ಶಾಸ್ತ್ರಜ್ಞರಾದ ಡಾ. ಬಸವರಾಜ್…

Read More

Video: ಡಿವೈಡರ್​ಗೆ ಗುದ್ದಿ ವಿರುದ್ಧ ದಿಕ್ಕಿನಲ್ಲಿ ಬಂದು ಕಾರಿಗೆ ಡಿಕ್ಕಿ ಹೊಡೆದ ಕಲ್ಲಿದ್ದಲು ಟ್ರಕ್, 4 ಮಂದಿ ಸಾವು

ಜಾರ್ಖಂಡ್, ಏಪ್ರಿಲ್ 09: ಕಲ್ಲಿದ್ದಲು ಟ್ರಕ್​ ಸ್ಕಾರ್ಪಿಯೋಗೆ ಡಿಕ್ಕಿ ಹೊಡೆದ ಪರಿಣಾಮ ನಾಲ್ವರು ಸಾವನ್ನಪ್ಪಿರುವ ಘಟನೆ ಜಾರ್ಖಂಡ್​​ನಲ್ಲಿ ನಡೆದಿದೆ. ಜಾರ್ಖಂಡ್​​ನ ದನ್ಬಾನ್​​ನಲ್ಲಿ ಕಲ್ಲಿದ್ದಲು ತುಂಬಿದ್ದ ಟ್ರಕ್ ಒಂದು ನಿಯಂತ್ರಣ ಕಳೆದುಕೊಂಡು ಡಿವೈಡರ್​ಗೆ ಡಿಕ್ಕಿ ಹೊಡೆದು ಬಳಿಕ ವಿರುದ್ಧ ದಿಕ್ಕಿಗೆ ಬಂದು ಸ್ಕಾರ್ಪಿಯೋಗೆ ಡಿಕ್ಕಿ ಹೊಡೆದ ಪರಿಣಾಮ ಒಂದೇ ಕುಟುಂಬದ ನಾಲ್ವರು ಮೃತಪಟ್ಟಿದ್ದಾರೆ. ಕಾರು ಸಂಪೂರ್ಣವಾಗಿ ನಜ್ಜುಗುಜ್ಜಾಗಿದೆ. ಅಪಘಾತದ ಬಳಿಕ ಟ್ರಕ್ ಕೂಡ ಮಗುಚಿ ಬಿದ್ದಿದ್ದು, ಕಲ್ಲಿದ್ದಲು ರಸ್ತೆ ತುಂಬಾ ಹರಡಿತ್ತು.   ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್…

Read More

ಬಾಗಲಕೋಟೆ: ಬೆಳಗ್ಗೆಯೇ ಹೆಚ್ಚಿನ ಸಂಖ್ಯೆಯಲ್ಲಿ ಮತಗಟ್ಟೆಗಳಿಗೆ ಆಗಮಿಸಿದ ಮತದಾರರು

ಬಾಗಲಕೋಟೆ, ಏಪ್ರಿಲ್ 9: ಬಾಗಲಕೋಟೆ ವಿಧಾನಸಭಾ ಉಪಚುನಾವಣೆಗೆ ಮತದಾನ ಪ್ರಕ್ರಿಯೆ ಬೆಳಗ್ಗೆ 7 ಗಂಟೆಯಿಂದ ಸಂಜೆ 6 ಗಂಟೆಯವರೆಗೆ ನಡೆಯುತ್ತಿದೆ. ಹೆಚ್. ವೈ. ಮೇಟಿ ಅವರ ಅಕಾಲಿಕ ನಿಧನದಿಂದ ತೆರವಾದ ಈ ಕ್ಷೇತ್ರಕ್ಕಾಗಿ ಬಿಜೆಪಿ ಮತ್ತು ಕಾಂಗ್ರೆಸ್ ನಡುವೆ ನೇರ ಹಣಾಹಣಿ ಏರ್ಪಟ್ಟಿದೆ. ಎರಡೂ ಪಕ್ಷಗಳ ಪ್ರಮುಖ ನಾಯಕರು ತೀವ್ರ ಪ್ರಚಾರ ನಡೆಸಿದ್ದಾರೆ. ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಆರು ದಿನಗಳ ಕಾಲ ಕ್ಷೇತ್ರದಲ್ಲಿ ಬೀಡುಬಿಟ್ಟು ಪ್ರಚಾರ ಮಾಡಿದರೆ, ಬಿಜೆಪಿ ಅಭ್ಯರ್ಥಿ ವೀರಣ್ಣ ಚರಂತಿಮಠ ಪರವಾಗಿ ಮಾಜಿ ಸಿಎಂ…

Read More

ಮುಂಬೈ ಸೆಷನ್ಸ್ ನ್ಯಾಯಾಲಯದಲ್ಲಿ ಭದ್ರತಾ ಲೋಪ: ಪೊಲೀಸ್ ಮೇಲೆಯೇ ಹಲ್ಲೆ ನಡೆಸಿ ವಿಚಾರಣಾಧೀನ ಆರೋಪಿ ಪರಾರಿ

ಮುಂಬೈ, ಏಪ್ರಿಲ್ 09: ನ್ಯಾಯಾಲಯದಲ್ಲಿ ಆರೋಪಿಯೊಬ್ಬ ಪೊಲೀಸ್(Police) ಅಧಿಕಾರಿ ಮೇಲೆ ಹಲ್ಲೆ ನಡೆಸಿ ಪರಾರಿಯಾಗಿರುವ ಘಟನೆ ಮುಂಬೈನಲ್ಲಿ ನಡೆದಿದೆ. ಕೊಲೆ ಯತ್ನದ ಪ್ರಕರಣದ ವಿಚಾರಣಾಧೀನ ಆರೋಪಿ ಹ್ಯಾರಿಸನ್ ಆಂಥೋನಿ ಜೋಸೆಫ್,ಪೊಲೀಸ್ ಕಾನ್ಸ್‌ಟೇಬಲ್ ಮೇಲೆ ಹಲ್ಲೆ ನಡೆಸಿ ಕೈಕೋಳ ಸಮೇತ ಪರಾರಿಯಾಗಿದ್ದು, ಪೊಲೀಸರು ಆರೋಪಿಗಾಗಿ ತೀವ್ರ ಶೋಧ ನಡೆಸುತ್ತಿದ್ದಾರೆ. 42 ವರ್ಷದ ಹ್ಯಾರಿಸನ್ ಆಂಥೋನಿ ಜೋಸೆಫ್ ವಿರುದ್ಧ MCOCA ಅಡಿಯಲ್ಲಿ ಪ್ರಕರಣ ದಾಖಲಾಗಿತ್ತು. ಆತ ಮಾರ್ಚ್ 2024ರಲ್ಲಿ ವ್ಯಕ್ತಿಯೊಬ್ಬರ ಮೇಲೆ ಗುಂಡು ಹಾರಿಸಿದ ಆರೋಪ ಎದುರಿಸುತ್ತಿದ್ದಾನೆ. ಆರ್ಥರ್ ರಸ್ತೆ…

Read More

‘ಕರ್ಣ’ ಧಾರಾವಾಹಿಯಲ್ಲಿ ಮಹಾ ತಿರುವು; ಕರ್ಣನ ತಂದೆ ರಿವೀಲ್

‘ಕರ್ಣ’ ಧಾರಾವಾಹಿ ಹೊಸ ಹೊಸ ತಿರುವುಗಳನ್ನು ಪಡೆದುಕೊಂಡು ಸಾಗುತ್ತಿದೆ. ಈ ಧಾರಾವಾಹಿ ಟಿಆರ್​​​ಪಿಯಲ್ಲೂ ನಂಬರ್ 1 ಸ್ಥಾನದಲ್ಲಿ ಇದೆ. ಹೀಗಿರುವಾಗಲೇ ‘ಕರ್ಣ’ ಧಾರಾವಾಹಿಯಲ್ಲಿ ಒಂದು ಕಟು ಸತ್ಯವೂ ರಿವೀಲ್ ಆಗಿದೆ ಎನ್ನಬಹುದು. ಕರ್ಣನು ರಮೇಶ್ ಮಗ ಎಂಬ ಕಟು ಸತ್ಯವನ್ನು ರಮೇಶ್ ತಂಗಿ ತಾರಾ ರಿವೀಲ್ ಮಾಡಿದ್ದಾಳೆ. ಇದು ಶಾಕಿಂಗ್ ಎನಿಸಿದೆ. ಇದು ಧಾರಾವಾಹಿಯಲ್ಲಿ ದೊಡ್ಡ ತಿರುವಿಗೆ ಕಾರಣ ಆಗಬಹುದು ಎಂದು ಊಹಿಸಲಾಗಿದೆ. ಮುಂದಿನ ಕಥೆ ಮತ್ತಷ್ಟು ರೋಚಕವಾಗಿದೆ. ‘ಕರ್ಣ’ ಧಾರಾವಾಹಿಯಲ್ಲಿ ಹಲವು ತಿರುವುಗಳು ಎದುರಾಗಿವೆ. ಇದರಲ್ಲಿ…

Read More

ಒಂದು ರನ್ ಸೋಲುಗಳೊಂದಿಗೆ ಹೀಗೊಂದು ದಾಖಲೆ ಬರೆದ ಡೆಲ್ಲಿ ಕ್ಯಾಪಿಟಲ್ಸ್

IPL 2026: ಇಂಡಿಯನ್ ಪ್ರೀಮಿಯರ್ ಲೀಗ್​ನ 14ನೇ ಪಂದ್ಯವು ರಣರೋಚಕ ಹೋರಾಟಕ್ಕೆ ಸಾಕ್ಷಿಯಾಗಿತ್ತು. ದೆಹಲಿಯ ಅರುಣ್ ಜೇಟ್ಲಿ ಸ್ಟೇಡಿಯಂನಲ್ಲಿ ನಡೆದ ಗುಜರಾತ್ ಟೈಟಾನ್ಸ್ (GT) ವಿರುದ್ಧದ ಈ ಪಂದ್ಯದಲ್ಲಿ ಒಂದು ರನ್​ನ ಸೋಲಿನೊಂದಿಗೆ ಡೆಲ್ಲಿ ಕ್ಯಾಪಿಟಲ್ಸ್ (DC) ತಂಡವು ವಿಶೇಷ ದಾಖಲೆಯೊಂದನ್ನು ಬರೆದಿದೆ. ಈ ಮ್ಯಾಚ್​ನಲ್ಲಿ ಟಾಸ್ ಸೋತು ಮೊದಲು ಬ್ಯಾಟ್ ಮಾಡಿದ ಗುಜರಾತ್ ಟೈಟಾನ್ಸ್ ತಂಡವು ಶುಭ್​​ಮನ್ ಗಿಲ್ (70), ಜೋಸ್ ಬಟ್ಲರ್ (52) ಹಾಗೂ ವಾಷಿಂಗ್ಟನ್ ಸುಂದರ್​​ (55) ಅವರ ಅರ್ಧಶತಕಗಳ ನೆರವಿನೊಂದಿಗೆ 20…

Read More

ಸೌಮ್ಯತೆಯಿಂದ ಆಯುಷ್ಯ ಮತ್ತು ಮನಶಾಂತಿ; ಯಾವ ಸ್ಥಳಗಳಲ್ಲಿ ಏರು ಧ್ವನಿಯಲ್ಲಿ ಮಾತನಾಡುವುದು ಆಪತ್ತು ತರುತ್ತದೆ?

ನಮ್ಮ ಸಂಪ್ರದಾಯಗಳು, ಪದ್ಧತಿಗಳು ಮತ್ತು ವಿಧಿವಿಧಾನಗಳ ಮಹತ್ವವನ್ನು ಅರಿಯುವುದು ಮುಖ್ಯ. ತಾಳ್ಮೆ, ಸಹನೆ ಮತ್ತು ನೆಮ್ಮದಿಯ ಜೀವನ ನಡೆಸಲು ನಮ್ಮ ಮಾತುಗಳು ಬಹಳ ಪ್ರಭಾವ ಬೀರುತ್ತವೆ. ಆಯಸ್ಸನ್ನು ಕಡಿಮೆ ಮಾಡುವಲ್ಲಿ ತಪ್ಪು ಮಾತಿನ ಶೈಲಿಗಳ ಪಾತ್ರವಿದೆ. ಕೆಲವು ನಿರ್ದಿಷ್ಟ ಸ್ಥಳಗಳಲ್ಲಿ ಏರು ಧ್ವನಿಯಲ್ಲಿ ಮಾತನಾಡುವುದು ಸೂಕ್ತವಲ್ಲ. ವಿದ್ಯಾಲಯಗಳಲ್ಲಿ, ಆಸ್ಪತ್ರೆಗಳಲ್ಲಿ, ಹಣಕಾಸು ವ್ಯವಹಾರಗಳಲ್ಲಿ, ಪೂಜಾ ಸಮಯದಲ್ಲಿ, ದಾಂಪತ್ಯ ಜೀವನದಲ್ಲಿ, ಮೇಲಧಿಕಾರಿಗಳೊಂದಿಗೆ ಮತ್ತು ಮಕ್ಕಳೊಂದಿಗೆ ಮಾತನಾಡುವಾಗ ಮೃದುವಾದ ಧ್ವನಿ ಬಹಳ ಮುಖ್ಯ. ಜೋರಾಗಿ ಮಾತನಾಡಿದಾಗ ನಮ್ಮ ಜ್ಞಾನ ಕುಂಠಿತವಾಗುತ್ತದೆ ಎಂದು…

Read More