ರಾಜ್ಯಸಭೆ ಚುನಾವಣೆ ನಾಮಪತ್ರಕ್ಕೆ ನಾಳೆ ಕೊನೆ ದಿನ: ಅಭ್ಯರ್ಥಿಯನ್ನ ಅಂತಿಮಗೊಳಿಸದ ಬಿಜೆಪಿ, ಜೆಡಿಎಸ್; ಇಂದು ಘೋಷಣೆ ಸಾಧ್ಯತೆ – Kannada News
ಬೆಂಗಳೂರು, ಜೂನ್ 07: ರಾಜ್ಯಸಭೆ ಚುನಾವಣೆಗೆ ನಾಮಪತ್ರ ಸಲ್ಲಿಸಲು ನಾಳೆಯೇ ಕೊನೆಯ ದಿನ. ಇತ್ತ ಬಿಜೆಪಿ (BJP) ಮತ್ತು ಜೆಡಿಎಸ್ ಮೈತ್ರಿಕೂಟದಲ್ಲಿ ಇನ್ನೂ ಅಭ್ಯರ್ಥಿಗಳ ಆಯ್ಕೆ ಅಂತಿಮಗೊಂಡಿಲ್ಲ. ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡರನ್ನು (HD Deve Gowda) ಎನ್ಡಿಎ ಅಭ್ಯರ್ಥಿಯಾಗಿ ಮತ್ತೊಮ್ಮೆ ರಾಜ್ಯಸಭೆಗೆ ಕಳುಹಿಸುವ ಬಗ್ಗೆ ಬಿಜೆಪಿ ಹೈಕಮಾಂಡ್ ಇನ್ನೂ ಅಂತಿಮ ನಿರ್ಧಾರ ಪ್ರಕಟಿಸಿಲ್ಲ. ಇಂದು ಮಧ್ಯಾಹ್ನದ ಬಳಿಕ ಬಿಜೆಪಿ ಅಭ್ಯರ್ಥಿ ಘೋಷಣೆ ಸಾಧ್ಯತೆ ಇದೆ. ಒಂದು ವೇಳೆ ದೇವೇಗೌಡರು ಸ್ಪರ್ಧಿಸಲು ಒಪ್ಪದಿದ್ದರೆ, ಉಭಯ ಪಕ್ಷಗಳಿಗೂ ಸಮ್ಮತಿಯಾಗುವ…