ಬದರಿನಾಥದಲ್ಲೂ ದೇಣಿಗೆ ಹಗರಣ, ಸಿಸಿಟಿವಿಯಲ್ಲಿ ಕಳ್ಳರ ಕೈಚಳಕ ಬಯಲು – Kannada News | Badrinath Temple Donation Scam: SIT Arrests Senior Official After CCTV Exposes Theft
ಬದರಿನಾಥ, ಜುಲೈ 18: ದೇಶದ ಅತ್ಯಂತ ಪವಿತ್ರ ಚಾರ್ ಧಾಮ್ ಯಾತ್ರಾ ಸ್ಥಳಗಳಲ್ಲಿ ಒಂದಾದ ಬದರಿನಾಥದಲ್ಲೂ ಭಕ್ತರು ದೇವರಿಗೆ ಅರ್ಪಿಸಿದ ಕಾಣಿಕೆ ಹಣವನ್ನು ದೋಚುತ್ತಿದ್ದ ಬೃಹತ್ ಜಾಲವನ್ನು ವಿಶೇಷ ತನಿಖಾ ತಂಡ (SIT) ಭೇದಿಸಿದೆ. ಭಕ್ತರು ತಟ್ಟೆಯಲ್ಲಿ ನೀಡುತ್ತಿದ್ದ ಕಾಣಿಕೆ ಹಣ ಮತ್ತು ಬೆಲೆಬಾಳುವ ವಸ್ತುಗಳನ್ನು ಕಳ್ಳತನ ಮಾಡುತ್ತಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಎಸ್ಐಟಿ ಅಧಿಕಾರಿಗಳು ಈಗ ‘ಬದರಿನಾಥ-ಕೇದಾರನಾಥ ದೇವಾಲಯ ಸಮಿತಿ’ಯ (BKTC) ಹಿರಿಯ ಕಾಯಂ ಅಧಿಕಾರಿಯನ್ನು ಬಂಧಿಸಿದ್ದಾರೆ. ಈ ಹಗರಣದಲ್ಲಿ ಇಬ್ಬರನ್ನು ಬಂಧಿಸಿದ್ದಾರೆ. ದೇವಾಲಯದ ಸಿಸಿಟಿವಿ (CCTV)…