Daily Devotional: ನಿಮ್ಮ ಲಗ್ನಕ್ಕೆ ಅನುಗುಣವಾಗಿ ಅದೃಷ್ಟ ದೇವತೆ ತಿಳಿಯಿರಿ; ಜ್ಯೋತಿಷ್ಯ ಸಲಹೆ ಇಲ್ಲಿದೆ – Kannada News | Astrology Insights: Identifying Your Adrushta Devate for Each Ascendant

ಜ್ಯೋತಿಷ್ಯ ಶಾಸ್ತ್ರದಲ್ಲಿ, ಲಗ್ನ, ರಾಶಿ ಮತ್ತು ನಕ್ಷತ್ರಗಳು ಪ್ರಮುಖ ಪಾತ್ರ ವಹಿಸುತ್ತವೆ. ಇವುಗಳಲ್ಲಿ ಲಗ್ನವು ಅತ್ಯಂತ ಮೂಲಭೂತವಾಗಿದ್ದು, ವ್ಯಕ್ತಿಯ ಜನನದ ಸಮಯದ ಆಧಾರದ ಮೇಲೆ ಇದನ್ನು ನಿರ್ಧರಿಸಲಾಗುತ್ತದೆ. ಪ್ರತಿ ಲಗ್ನಕ್ಕೂ ಒಂದು ನಿರ್ದಿಷ್ಟ ಅದೃಷ್ಟ ದೇವತೆ ಇರುತ್ತದೆ. ಈ ಅದೃಷ್ಟ ದೇವತೆಯನ್ನು ಲಗ್ನದಿಂದ ಪಂಚಮ ಸ್ಥಾನದ ಅಧಿಪತಿಯ ಮೂಲಕ ಗುರುತಿಸಲಾಗುತ್ತದೆ. ಪಂಚಮಾಧಿಪತಿಯು ನಿಮ್ಮ ಜೀವನಪೂರ್ತಿ ನಿಮ್ಮ ಅದೃಷ್ಟ ದೇವತೆಯಾಗಿರುತ್ತಾನೆ. ಈ ದೇವತೆಯನ್ನು ನಿಯಮಿತವಾಗಿ ಆರಾಧಿಸುವುದರಿಂದ ಶುಭ ಫಲಗಳು ಲಭಿಸುತ್ತವೆ ಮತ್ತು ಅದೃಷ್ಟ ಕೂಡಿಬರುತ್ತದೆ ಎಂದು ಖ್ಯಾತ ಜ್ಯೋತಿಷಿ ಮತ್ತು ವಾಸ್ತು ಶಾಸ್ತ್ರಜ್ಞರಾದ ಡಾ. ಬಸವರಾಜ್ ಗುರೂಜಿಯವರು ತಮ್ಮ ನಿತ್ಯಭಕ್ತಿ ಕಾರ್ಯಕ್ರಮದಲ್ಲಿ ವಿವರಿಸಿದ್ದಾರೆ.

ವಿವಿಧ ಲಗ್ನಗಳಿಗೆ ಅದೃಷ್ಟ ದೇವತೆಗಳು:

ಮೇಷ ಲಗ್ನ:

ಮೇಷ ಲಗ್ನದಲ್ಲಿ ಜನಿಸಿದವರಿಗೆ ಪಂಚಮ ಸ್ಥಾನವು ಸಿಂಹ ರಾಶಿಯಾಗಿರುತ್ತದೆ. ಸಿಂಹ ರಾಶಿಯ ಅಧಿಪತಿ ಸೂರ್ಯ ದೇವ. ಆದ್ದರಿಂದ, ಮೇಷ ಲಗ್ನದವರು ಪ್ರತಿದಿನ ಸೂರ್ಯ ದೇವನನ್ನು ಆರಾಧಿಸುವುದರಿಂದ ಅದೃಷ್ಟ ಲಭಿಸುತ್ತದೆ. ಸೂರ್ಯ ನಮಸ್ಕಾರ ಮಾಡುವುದರಿಂದ ಶುಭ ಫಲಗಳು ದೊರೆಯುತ್ತವೆ.

ವೃಷಭ ಲಗ್ನ:

ವೃಷಭ ಲಗ್ನಕ್ಕೆ ಪಂಚಮ ಸ್ಥಾನವು ಕನ್ಯಾ ರಾಶಿಯಾಗಿರುತ್ತದೆ. ಕನ್ಯಾ ರಾಶಿಯ ಅಧಿಪತಿ ಬುಧ. ವೃಷಭ ಲಗ್ನದವರು ವಿಷ್ಣುವನ್ನು ಆರಾಧಿಸುವುದರಿಂದ ಸಾಕಷ್ಟು ಶುಭವಾಗುತ್ತದೆ.

ಮಿಥುನ ಲಗ್ನ:

ಮಿಥುನ ಲಗ್ನಕ್ಕೆ ಪಂಚಮ ಸ್ಥಾನವು ತುಲಾ ರಾಶಿಯಾಗಿರುತ್ತದೆ. ತುಲಾ ರಾಶಿಯ ಅಧಿಪತಿ ಶುಕ್ರ. ಈ ಲಗ್ನದವರು ಶ್ರೀ ಮಹಾಲಕ್ಷ್ಮಿಯನ್ನು ಆರಾಧಿಸುವುದರಿಂದ ಶುಭ ಫಲಗಳು ಪ್ರಾಪ್ತವಾಗುತ್ತವೆ.

ಕರ್ಕ ಲಗ್ನ:

ಕರ್ಕ ಲಗ್ನದವರಿಗೆ ವೃಶ್ಚಿಕ ರಾಶಿಯು ಪಂಚಮ ಸ್ಥಾನವಾಗುತ್ತದೆ. ಈ ಲಗ್ನದ ಅದೃಷ್ಟ ದೇವತೆ ಸುಬ್ರಹ್ಮಣ್ಯ ಸ್ವಾಮಿ. ಸುಬ್ರಹ್ಮಣ್ಯನನ್ನು ಆರಾಧಿಸುವುದರಿಂದ ಅದೃಷ್ಟ ವೃದ್ಧಿಯಾಗುತ್ತದೆ.

ಸಿಂಹ ಲಗ್ನ:

ಸಿಂಹ ಲಗ್ನದವರಿಗೆ ಧನುಸ್ಸು ರಾಶಿಯು ಪಂಚಮ ಸ್ಥಾನವಾಗಿರುತ್ತದೆ. ಧನುಸ್ಸಿನ ಅಧಿಪತಿ ಗುರು. ಸಿಂಹ ಲಗ್ನದವರು ಶಿವನನ್ನು ಆರಾಧಿಸುವುದರಿಂದ ಸಾಕಷ್ಟು ಶುಭವಾಗುತ್ತದೆ.

ಕನ್ಯಾ ಲಗ್ನ:

ಕನ್ಯಾ ಲಗ್ನದವರಿಗೆ ಮಕರ ರಾಶಿಯು ಪಂಚಮ ಸ್ಥಾನವಾಗಿರುತ್ತದೆ. ಮಕರದ ಅಧಿಪತಿ ಶನಿ. ಕನ್ಯಾ ಲಗ್ನದವರು ಶಿವನನ್ನು ಆರಾಧಿಸುವುದರಿಂದ ಶುಭ ಫಲಗಳನ್ನು ಪಡೆಯುತ್ತಾರೆ.

ತುಲಾ ಲಗ್ನ:

ತುಲಾ ಲಗ್ನದವರು ರುದ್ರನನ್ನು ಆರಾಧಿಸುವುದು ಅತ್ಯಂತ ಶುಭಕರ ಎಂದು ಜ್ಯೋತಿಷ್ಯ ಶಾಸ್ತ್ರ ಹೇಳುತ್ತದೆ.

ವೃಶ್ಚಿಕ ಲಗ್ನ:

ವೃಶ್ಚಿಕ ಲಗ್ನದವರು ಶಿವನನ್ನು ಆರಾಧಿಸುವುದರಿಂದ ಶುಭವಾಗುತ್ತದೆ.

ಧನು ಲಗ್ನ:

ಧನು ಲಗ್ನದವರು ನರಸಿಂಹನನ್ನು ಆರಾಧಿಸುವುದರಿಂದ ಸಾಕಷ್ಟು ಶುಭ ಫಲಗಳು ಪ್ರಾಪ್ತವಾಗುತ್ತವೆ.

ಮಕರ ಲಗ್ನ:

ಮಕರ ಲಗ್ನದವರಿಗೆ ವೃಷಭ ರಾಶಿಯು ಪಂಚಮ ಸ್ಥಾನವಾಗುತ್ತದೆ. ಈ ಲಗ್ನದವರು ದೇವಿಯನ್ನು ಆರಾಧಿಸುವುದು ಬಹಳ ಒಳ್ಳೆಯದು.

ಇದನ್ನೂ ಓದಿ: ಮನೆಯ ಈ ದಿಕ್ಕಿನಲ್ಲಿ ಜೋಡಿ ಒಂಟೆಯ ಪ್ರತಿಮೆ ಇರಿಸಿ; ಹಣಕ್ಕೆಂದೂ ಕೊರತೆಯಾಗದು!

ಕುಂಭ ಲಗ್ನ:

ಕುಂಭ ಲಗ್ನದವರಿಗೆ ಮಿಥುನ ರಾಶಿಯು ಪಂಚಮ ಸ್ಥಾನವಾಗುತ್ತದೆ. ಈ ಲಗ್ನದವರು ವಿಷ್ಣುವನ್ನು ಆರಾಧಿಸುವುದರಿಂದ ಶುಭವಾಗುತ್ತದೆ.

ಮೀನ ಲಗ್ನ:

ಮೀನ ಲಗ್ನದವರಿಗೆ ಕರ್ಕಾಟಕ ರಾಶಿಯು ಪಂಚಮ ಸ್ಥಾನವಾಗುತ್ತದೆ. ಈ ಲಗ್ನದವರು ದುರ್ಗಾ ದೇವಿಯನ್ನು ಆರಾಧಿಸುವುದರಿಂದ ಸಾಕಷ್ಟು ಶುಭ.

ಹೀಗೆ, ನಿಮ್ಮ ಲಗ್ನಕ್ಕೆ ಅನುಗುಣವಾದ ಅದೃಷ್ಟ ದೇವತೆಯನ್ನು ತಿಳಿದು, ಅವರನ್ನು ಶ್ರದ್ಧೆಯಿಂದ ಪೂಜಿಸುವುದರಿಂದ ಆ ದೇವರ ಕೃಪೆಯು ದೊರೆತು ಜೀವನದಲ್ಲಿ ಅದೃಷ್ಟ ಮತ್ತು ಸನ್ಮಂಗಳಗಳು ಕೂಡಿಬರುತ್ತವೆ. ಇದು ನಂಬಿಕೆ ಮತ್ತು ಶಾಸ್ತ್ರದ ಆಧಾರವಾಗಿದೆ ಎಂದು ಗುರೂಜಿ ಸಲಹೆ ನೀಡಿದ್ದಾರೆ.

ಮತ್ತಷ್ಟು ಆಧ್ಯಾತ್ಮಿಕ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

ಐತಿಹಾಸಿಕ ದೇವರ ನಕ್ಲೇಸ್ ಕದ್ದುಕೊಂಡು ಹೋದ್ರಾ ಮುಜರಾಯಿ ಇಲಾಖೆ ಅಧಿಕಾರಿ? – Kannada News | Bengaluru dharmaraya swamy temple drupadi deve necklace theft Alleged On muzrai department Nagaraj

ಬೆಂಗಳೂರು (ಫೆಬ್ರವರಿ.03): ಐತಿಹಾಸಿಕ ಬೆಂಗಳೂರು  ಕರಗಕ್ಕೆ (Bengaluru Karaga)ಹೆಸರಾಗಿರುವ ಧರ್ಮರಾಯ ಸ್ವಾಮಿ ದೇವಸ್ಥಾನದಲ್ಲಿ ( dharmaraya swamy temple) ಭಾರೀ ಅವ್ಯವಹಾರ ಮತ್ತು ಕಳ್ಳತನ ನಡೆದಿದೆ ಎಂಬ ಸ್ಫೋಟಕ ಆರೋಪ ಕೇಳಿಬಂದಿದೆ. ದೇವಸ್ಥಾನದ ಆವರಣದಲ್ಲಿ ಹುಂಡಿ ಎಣಿಕೆ ಮಾಡುವಾಗ ಸಿಕ್ಕಿದ್ದ ದ್ರೌಪದಿ ದೇವಿಯ 120 ಗ್ರಾಂ ತೂಕದ ಚಿನ್ನದ ಸರವನ್ನು ಮುಜರಾಯಿ ಇಲಾಖೆಯ ಕಾರ್ಯನಿರ್ವಾಹಕ ಅಧಿಕಾರಿ (EO) ನಾಗರಾಜ್ ಅವರು ಕದ್ದು ಜೇಬಿಗೆ ಹಾಕಿಕೊಂಡಿದ್ದಾರೆ ಎಂದು ದೇವಸ್ಥಾನದ ಆಡಳಿತ ಮಂಡಳಿಯ ನಿಕಟಪೂರ್ವ ಅಧ್ಯಕ್ಷ ಸತೀಶ್ ಗಂಭೀರ ಆರೋಪ ಮಾಡಿದ್ದಾರೆ.

ಬೆಂಗಳೂರಿನಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಸತೀಶ್, ಮುಜರಾಯಿ ಇಲಾಖೆಯ ಅಧಿಕಾರಿಗಳ ವಿರುದ್ಧ ಸಾಲು ಸಾಲು ಭ್ರಷ್ಟಾಚಾರದ ಆರೋಪಗಳನ್ನು ಹೊರಿಸಿದ್ದಾರೆ. ‘ಹುಂಡಿ ಎಣಿಕೆ ಕಾರ್ಯ ನಡೆಯುತ್ತಿದ್ದಾಗ ದೇವಿಗೆ ಸೇರಿದ 120 ಗ್ರಾಂ ತೂಕದ ಚಿನ್ನದ ಸರ ಪತ್ತೆಯಾಗಿತ್ತು. ನಿಯಮದ ಪ್ರಕಾರ ದೇವಸ್ಥಾನದ ಯಾವುದೇ ಆಸ್ತಿಯು ಸೂಕ್ತ ಪ್ರಕ್ರಿಯೆ ಇಲ್ಲದೆ ದೇವಸ್ಥಾನದ ಆವರಣ ಬಿಟ್ಟು ಹೊರಹೋಗುವಂತಿಲ್ಲ. ಆದರೆ, ಇಒ ನಾಗರಾಜ್ ಅವರು ಕಾನೂನು ಉಲ್ಲಂಘಿಸಿ ಆ ಸರವನ್ನು ತಮ್ಮ ಜೇಬಿಗೆ ಹಾಕಿಕೊಂಡು ಹೋಗಿದ್ದಾರೆ. ಈ ದೃಶ್ಯಾವಳಿಗಳು ಸಿಸಿಟಿವಿಯಲ್ಲಿ ಸೆರೆಯಾಗಿದ್ದು, ನಾನು ಆರ್‌ಟಿಐ (RTI) ಮೂಲಕ ಮಾಹಿತಿ ಪಡೆದು ವಿಡಿಯೋ ಪರಿಶೀಲಿಸಿದಾಗ ಸತ್ಯ ಬಯಲಾಗಿದೆ ಎಂದಿದ್ದಾರೆ.

ಕರ್ನಾಟಕದ ಮತ್ತಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

Source link

ಯುವತಿಯರೇ ನಿಮ್ಮ ಖಾಸಗಿ ಫೋಟೋ ಇಟ್ಟುಕೊಂಡು ಯಾರಾದರೂ ಬ್ಲ್ಯಾಕ್‌ಮೇಲ್​​​ ಮಾಡುತ್ತಿದ್ದಾರ? ಹೀಗೆ ಮಾಡಿದ್ರೆ ಸಾಕು – Kannada News | Combat Online Harassment: Women’s Guide to Digital Security and Photo Misuse Solutions

ಸೋಶಿಯಲ್​​ ಮೀಡಿಯಾದಲ್ಲಿ ಹುಡುಗಿಯರ ಡಿಫೇಕ್​ ಮಾಡಿದ ಅಥವಾ ದ್ವೇಷಕ್ಕಾಗಿ ಖಾಸಗಿ ಫೋಟೋಗಳನ್ನು ಹಾಕಿ ಬ್ಲ್ಯಾಕ್‌ಮೇಲ್​​​ ಮಾಡಿರುವ ಅದೆಷ್ಟೋ ಘಟನೆಗಳು ನಡೆದಿದೆ. ಇದರಿಂದ ಸುಮಾರು ಮಹಿಳೆಯರು ಹಾಗೂ ಹುಡುಗಿಯರು (Women’s Digital Safety) ಜೀವನ ಕಳೆದುಕೊಂಡಿರುವ ನಿದರ್ಶನಗಳು ಕೂಡ ನಮ್ಮ ಕಣ್ಮುಂದೆ ಇದೆ. ಅದನ್ನು ತಡೆಯಲು ಹಾಗೂ ಮಹಿಳೆಯ ಡಿಜಿಟಲ್​​ ಸುರಕ್ಷತೆಗಾಗಿ ಹೊಸ ತಂತ್ರವೊಂದನ್ನು ಪೊಲೀಸರೊಬ್ಬರು ಪಾಡ್‌ಕಾಸ್ಟ್​​​ನಲ್ಲಿ ಹೇಳಿದ್ದಾರೆ. ಇದೀಗ ಈ ಬಗ್ಗೆ ಎಕ್ಸ್​​ ಖಾತೆಯಲ್ಲಿ ಪೂರ್ಣಿಮಾ ಎಂಬುವವರು ಹಂಚಿಕೊಂಡಿದ್ದಾರೆ. ಮಹಿಳೆಯರು ಮತ್ತು ಹೆಣ್ಣುಮಕ್ಕಳು ನಿಮ್ಮ ಫೋಟೋ ಅಥವಾ ವೀಡಿಯೊಗಳನ್ನು ಬಳಸಿ ಯಾರಾದರೂ ಬ್ಲ್ಯಾಕ್‌ಮೇಲ್ ಮಾಡುತ್ತಿದ್ದರೆ ಅಥವಾ ಬೆದರಿಕೆ ಹಾಕುತ್ತಿದ್ದರೆ, ಭಯಪಡುವ ಅವಶ್ಯಕತೆ ಇಲ್ಲ ಎಂದು ಅವರು ಹೇಳಿದ್ದಾರೆ.

ನಿಮ್ಮ ಖಾಸಗಿ ಚಿತ್ರಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಳ್ಳುವುದನ್ನು ತಡೆಯಲು stopncii.org ಎಂಬ ವೆಬ್​​​ ಸೈಟ್​​​​ ಬಳಸಿಕೊಳ್ಳಬಹುದು. ಇಲ್ಲಿ ನಿಮ್ಮ ಕೇಸ್ ದಾಖಲಿಸಿ ಮತ್ತು ಯಾವ ಫೋಟೋಗಳ ಬಗ್ಗೆ ಆತಂಕವಿದೆಯೋ ಅವುಗಳನ್ನು ಅಪ್‌ಲೋಡ್ ಮಾಡಬಹುದು. ಸಾಮಾನ್ಯವಾಗಿ 24 ರಿಂದ 48 ಗಂಟೆಗಳೊಳಗೆ ಅಂತಹ ಚಿತ್ರಗಳನ್ನು ಇಂಟರ್ನೆಟ್ ಮತ್ತು ಸೋಶಿಯಲ್ ಮೀಡಿಯಾ ಪ್ಲಾಟ್‌ಫಾರ್ಮ್‌ಗಳಿಂದ ತೆಗೆದುಹಾಕಲಾಗುತ್ತದೆ.ನಿಮ್ಮ ಫೋಟೋ ಅಶ್ಲೀಲವಾಗಿಲ್ಲದಿದ್ದರೂ, ಅದು ನಿಮ್ಮ ವೈಯಕ್ತಿಕ ಫೋಟೋ ಆಗಿದ್ದರೆ ಅದನ್ನು ಡಿಲೀಟ್ ಮಾಡಿಸುವ ಹಕ್ಕು ನಿಮಗಿದೆ.

ಇಲ್ಲಿದೆ ನೋಡಿ ಎಕ್ಸ್​​ ಪೋಸ್ಟ್​:

ಇದು ಹೇಗೆ ಕೆಲಸ ಮಾಡುತ್ತದೆ?

ನೀವು ಇಲ್ಲಿ ಕೇಸ್ ದಾಖಲಿಸಿದ ನಂತರ, ಆ ಫೋಟೋಗಳನ್ನು ಅಪ್‌ಲೋಡ್ ಮಾಡಿದರೆ, ಅವುಗಳ ‘ಡಿಜಿಟಲ್ ಫಿಂಗರ್‌ಪ್ರಿಂಟ್’ (Hash) ಸಿದ್ಧವಾಗುತ್ತದೆ. ನಂತರ ಫೇಸ್‌ಬುಕ್, ಇನ್‌ಸ್ಟಾಗ್ರಾಮ್‌ನಂತಹ ಸಂಸ್ಥೆಗಳು ಆ ಫೋಟೋಗಳನ್ನು ತಮ್ಮ ಪ್ಲಾಟ್‌ಫಾರ್ಮ್‌ಗಳಿಂದ 24 ರಿಂದ 48 ಗಂಟೆಗಳೊಳಗೆ ತೆಗೆದುಹಾಕುತ್ತವೆ. ನಿಮ್ಮ ಮೂಲ ಫೋಟೋಗಳನ್ನು ಅವರು ಸಂಗ್ರಹಿಸುವುದಿಲ್ಲ, ಕೇವಲ ಅದರ ತಾಂತ್ರಿಕ ಕೋಡ್ ಅನ್ನು ಮಾತ್ರ ಬಳಸುತ್ತಾರೆ.

ಇದನ್ನೂ ಓದಿ: ಭಾರತದ ಕಾನೂನು ಅನುಸರಿಸಲು ಆಗಲ್ಲವೆಂದರೆ ಇಲ್ಲಿಂದ ನಿರ್ಗಮಿಸಿ: ವಾಟ್ಸಾಪ್ ವಿರುದ್ಧ ಸುಪ್ರೀಂ ಎಚ್ಚರಿಕೆ

ಸೈಬರ್ ಕ್ರೈಮ್ ಪೋರ್ಟಲ್

ಭಾರತ ಸರ್ಕಾರದ ಸೈಬರ್ ಕ್ರೈಮ್ ಪೋರ್ಟಲ್‌ನಲ್ಲಿ “Women Anonymous” (suspicious link removed) ಎಂಬ ವಿಶೇಷ ಸೌಲಭ್ಯವಿದೆ. ಇದರ ಮೂಲಕ ನೀವು ನಿಮ್ಮ ಹೆಸರನ್ನು ಹೇಳದೆಯೇ ದೂರು ದಾಖಲಿಸಬಹುದು. ದೂರಿಗೆ ಪೂರಕವಾಗಿ ಫೋಟೋಗಳು, ಕಾಲ್ ರೆಕಾರ್ಡಿಂಗ್, ಫೋನ್ ಸಂಖ್ಯೆ ಅಥವಾ ಸ್ಕ್ರೀನ್‌ಶಾಟ್‌ಗಳಂತಹ ಕನಿಷ್ಠ 2-3 ಸಾಕ್ಷ್ಯಗಳನ್ನು ನೀಡಬೇಕಾಗುತ್ತದೆ. 14 ವರ್ಷದೊಳಗಿನ ಮಕ್ಕಳು ಯಾವುದೇ ರೀತಿಯ ಕಿರುಕುಳ ಅಥವಾ ಶೋಷಣೆಗೆ ಒಳಗಾಗುತ್ತಿದ್ದರೆ, ಅವರ ಪರವಾಗಿ ಇದೇ ಪ್ಲಾಟ್‌ಫಾರ್ಮ್‌ನಲ್ಲಿ ಯಾರಾದರೂ ದೂರು ನೀಡಬಹುದು. ಸೈಬರ್ ಅಪರಾಧಿಗಳ ಗುರಿ ನಿಮ್ಮನ್ನು ಹೆದರಿಸುವುದೇ ಆಗಿರುತ್ತದೆ. ಬೆದರಿಕೆಗೆ ಮಣಿದು ಹಣ ಅಥವಾ ಹೆಚ್ಚಿನ ಫೋಟೋಗಳನ್ನು ನೀಡಬೇಡಿ. ಯಾವುದೇ ತುರ್ತು ಸಂದರ್ಭದಲ್ಲಿ 1930 ಸಂಖ್ಯೆಗೆ ಕರೆ ಮಾಡಿ ದೂರು ನೀಡಿ.

ದೇಶ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On – 2:46 pm, Tue, 3 February 26

Source link

ಒಂದೇ ಕೋಣೆಯಲ್ಲಿ ಸಿಕ್ತು ಮಹಿಳೆ ಮತ್ತು ಕೆಲಸದವನ ಶವ! ವಿದೇಶದಿಂದ ಮರಳಿದ ಪತಿಗೆ ಕಾದಿತ್ತು ಶಾಕ್ – Kannada News | Bengaluru: Elderly Woman Murdered, House Help Dead in Residence

ಒಂದೇ ಕೋಣೆಯಲ್ಲಿ ಸಿಕ್ತು ಮಹಿಳೆ ಮತ್ತು ಕೆಲಸದವನ ಶವ!

ಬೆಂಗಳೂರು, ಫೆಬ್ರುವರಿ 03: ನಗರದಲ್ಲಿ ಭಾನುವಾರ ಬೆಳಗಿನ ಜಾವ 65 ವರ್ಷದ ಮಹಿಳೆಯೊಬ್ಬರು ತಮ್ಮ ನಿವಾಸದಲ್ಲೇ (Bengaluru) ಹತ್ಯೆಯಾಗಿರುವ ಘಟನೆ ಬೆಳಕಿಗೆ ಬಂದಿದೆ. ಅದೇ ಮನೆಯಲ್ಲಿ ಕೆಲಸ ಮಾಡುತ್ತಿದ್ದ ಮನೆ ಕೆಲಸಗಾರನ ಶವವೂ ಅದೇ ಕೊಠಡಿಯಲ್ಲಿ ಪತ್ತೆಯಾಗಿದ್ದು, ಆತ ಆತ್ಮಹತ್ಯೆ ಮಾಡಿಕೊಂಡಿರಬಹುದೆಂದು ಪೊಲೀಸರು ಶಂಕೆ ವ್ಯಕ್ತಪಡಿಸಿದ್ದಾರೆ.

ತನ್ನ ಕೋಣೆಯಲ್ಲೇ ಹತ್ಯೆಯಾದ ವೃದ್ಧೆ

ಮಹಿಳೆಯ ಪತಿ ವಿದೇಶ ಪ್ರವಾಸದಿಂದ ಭಾನುವಾರ ಬೆಳಿಗ್ಗೆ ಬೆಂಗಳೂರಿಗೆ ಮರಳಿದ್ದರು. ಮನೆಯ ಬಾಗಿಲನ್ನು ಬಡಿದ ಪತಿಗೆ ಪತ್ನಿಯಿಂದ ಉತ್ತರ ಸಿಗದ ಕಾರಣ ಆತಂಕಗೊಂಡಿದ್ದರು. ಭಯಗೊಂಡ ಪತಿ ಮನೆಯಲ್ಲೇ ಇದ್ದ ತಮ್ಮ ಪುತ್ರಿಗೆ ಕರೆ ಮಾಡಿ ಮನೆಯೊಳಗೆ ಬಂದಿದ್ದರು. ಈ ವೇಳೆ ಮನೆ ಕೆಲಸಗಾರನು ಸಾಮಾನ್ಯವಾಗಿ ಮಲಗುತ್ತಿದ್ದ ಸ್ಥಳದಲ್ಲಿ ಕಾಣಿಸದಿರುವುದಕ್ಕೆ ವ್ಯಕ್ತಿಯಲ್ಲಿ ಅನುಮಾಣ ಮೂಡಿತ್ತು.

ನಂತರ ಪತ್ನಿ ಮಲಗುವ ಕೋಣೆಗೆ ತೆರಳಿದ ಪತಿಗೆ ಶಾಕ್ ಕಾದಿತ್ತು. ಹಾಸಿಗೆಯ ಮೇಲೆ ಮಹಿಳೆ ಪ್ರಜ್ಞಾಹೀನ ಸ್ಥಿತಿಯಲ್ಲಿ ಪತ್ತೆಯಾಗಿದ್ದು, ಸಮೀಪದಲ್ಲೇ ಮನೆ ಕೆಲಸಗಾರನ ಶವವೂ ಕಂಡುಬಂದಿದೆ. ಇದನ್ನು ಕಂಡ ಪತಿಯ ಕೂಗಾಟಕ್ಕೆ ಪುತ್ರಿ ಧಾವಿಸಿ ಬಂದು ನೋಡಿದಾಗ ಆಕೆಯೂ ದಂಗಾಗಿದ್ದಳು. ನಂತರ ಪುತ್ರಿಯೇ ಪೊಲೀಸರಿಗೆ ಮಾಹಿತಿ ನೀಡಿದ್ದು, ಸ್ಥಳಕ್ಕೆ ಬಂದ ಪೊಲೀಸರು ಇಬ್ಬರ ಶವಗಳನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಿದ್ದಾರೆ.

ಲೈಂಗಿಕ ದೌರ್ಜನ್ಯವಾಗಿರುವ ಸಂದೇಹ

ಪ್ರಾಥಮಿಕ ತನಿಖೆಯಲ್ಲಿ ಮಹಿಳೆಯ ಕುತ್ತಿಗೆಯಲ್ಲಿ ಗಾಯದ ಗುರುತುಗಳು ಕಂಡುಬಂದಿದ್ದು, ಕುತ್ತಿಗೆ ಹಿಸುಕಿ ಹತ್ಯೆ ನಡೆಸಿರುವ ಶಂಕೆ ವ್ಯಕ್ತವಾಗಿದೆ. ಮನೆ ಕೆಲಸಗಾರ ಮದ್ಯ ವ್ಯಸನಿಯಾಗಿದ್ದು, ವೈದ್ಯರು ಆಕೆಯ ಮೇಲೆ ಲೈಂಗಿಕ ದೌರ್ಜನ್ಯ ನಡೆದಿರಬಹುದೆಂದೂ ಊಹಿಸಿದ್ದಾರೆ. ಮರಣೋತ್ತರ ಪರೀಕ್ಷಾ ವರದಿ ಬಂದ ಬಳಿಕ ಘಟನೆಗೆ ಸಂಬಂಧಿಸಿದ ಸಂಪೂರ್ಣ ಸತ್ಯಾಸತ್ಯತೆ ತಿಳಿಯಲಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Source link

15 ವರ್ಷದ ಬಾಲಕನಿಗೆ ಮದ್ಯ ಕುಡಿಸಿದ ಕಂಪನಿ; 7ನೇ ಮಹಡಿಯಿಂದ ಬಿದ್ದು ಅಪ್ರಾಪ್ತ ಸಾವು! – Kannada News | Bengaluru Tragedy: Teen Dies After Company Serves Alcohol to Minors; JJ Act Filed

15 ವರ್ಷದ ಬಾಲಕನಿಗೆ ಮದ್ಯ ಕುಡಿಸಿದ ಕಂಪನಿ!

ಬೆಂಗಳೂರು, ಫೆಬ್ರುವರಿ 03: ನಗರದ ಸಂಸ್ಥೆಯೊಂದು ಅಪ್ರಾಪ್ತ ಬಾಲಕರಿಗೆ ಮದ್ಯ ಕುಡಿಸಿದ್ದು, ಅಪ್ರಾಪ್ತನೊಬ್ಬ (Minor) ತನ್ನ ಅಪಾರ್ಟ್‌ಮೆಂಟ್‌ನ 7ನೇ ಮಹಡಿಯಿಂದ ಉರುಳಿ ಬಿದ್ದು ಸಾವನ್ನಪ್ಪಿರುವ​ ಪ್ರಕರಣ ಬೆಳಕಿಗೆ ಬಂದಿದೆ. ಈ ಹಿನ್ನೆಲೆ ಮೃತ ಬಾಲಕನ ಪೋಷಕರು ರಾಜರಾಜೇಶ್ವರಿನಗರ (RR Nagar) ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಜನವರಿಯಲ್ಲಿ ದೂರು ದಾಖಲಿಸಿದ್ದರು. ದೂರಿನಲ್ಲಿ ಉಲ್ಲೇಖಿಸಿದಂತೆ ಕಳೆದ ತಿಂಗಳು ಈ ಘಟನೆ ನಡೆದಿದ್ದು, ತನಿಖೆ ಮುಂದುವರೆದಿದೆ.

ಜೆಜೆ ಆ್ಯಕ್ಟ್ ಅಡಿ ಪ್ರಕರಣ ದಾಖಲು

ಜನವರಿ 31ರ ರಾತ್ರಿ ಸುಮಾರು 9 ಗಂಟೆ 40 ನಿಮಿಷಕ್ಕೆ ಈ ಘಟನೆ ನಡೆದಿದ್ದು, ಡಾ. ವಿಷ್ಣುವರ್ಧನ್ ರಸ್ತೆಯ ಅಪಾರ್ಟ್‌ಮೆಂಟ್‌ನ ನಿವಾಸಿಯಾಗಿರುವ ಮೃತನ ಪಾಲಕರು ಅದೇ ದಿನ ಪೊಲೀಸರಿಗೆ ದೂರು ಸಲ್ಲಿಸಿದ್ದಾರೆ ಎಂದು ತಿಳಿದುಬಂದಿದೆ. ನಂತರ ಪ್ರಕರಣವನ್ನು ಕೈಗೆತ್ತಿಕೊಂಡ ಪೊಲೀಸರು ಹಲವು ಆಯಾಮಗಳನ್ನಿಟ್ಟುಕೊಂಡು ತನಿಖೆ ನಡೆಸಿದ್ದಾರೆ. ಈ ವೇಳೆ ಸತ್ಯಾಂಶ ಹೊರಬಂದಿದ್ದು, 15 ವರ್ಷದ ಬಾಲಕನಿಗೆ ಸಂಸ್ಥೆಯೊಂದು ಸಿರಗೇಟ್ ಮತ್ತು ಮದ್ಯಪಾನ ಮಾಡಿಸಿದೆ ಎಂದು ತಿಳಿದುಬಂದಿದೆ.

ಮೃತ ಬಾಲಕ ಮತ್ತು ಸ್ನೇಹಿತರು ಸ್ಥಳೀಯ ಕಂಪನಿಯಲ್ಲಿದ್ದಾಗ ಈ ಕೃತ್ಯ ನಡೆದಿದ್ದು, ಸಂಸ್ಥೆಯು ಅಪ್ರಾಪ್ತರಿಗೆ ಮದ್ಯ ಕುಡಿಸಿರುವ ಆರೋಪದ ಮೇಲೆ, ಕಂಪನಿಯ ಮಾಲೀಕರು ಹಾಗೂ ಸಿಬ್ಬಂದಿ ವಿರುದ್ಧ ಮಕ್ಕಳ ಆರೈಕೆ ಮತ್ತು ರಕ್ಷಣೆ ಕಾಯಿದೆ (JJ Act) ಮತ್ತು ಕರ್ನಾಟಕ ಮದ್ಯ ಕಾಯ್ದೆಯಡಿಯಲ್ಲಿ ಪ್ರಕರಣ ದಾಖಲಾಗಿದೆ. ಈ ಬಗ್ಗೆ ANI ಎಕ್ಸ್ ಖಾತೆಯಲ್ಲಿ ಪೋಸ್ಟ್ ಮಾಡಲಾಗಿದ್ದು, ಪೋಸ್ಟ್ ಇಲ್ಲಿದೆ.

ಸಾರ್ವಜನಿಕರಿಗೆ ಖಾಕಿ ವಾರ್ನಿಂಗ್

ಪೊಲೀಸರು ಪ್ರಕರಣದ ಎಲ್ಲಾ ಅಂಶಗಳನ್ನು ಪರಿಶೀಲಿಸುತ್ತಿದ್ದು, ಸಂಸ್ಥೆಯ ಮೇಲಿನ ಕ್ರಮ ಕೈಗೊಳ್ಳುವುದರ ಜೊತೆಗೆ ಕೃತ್ಯವೆಸಗಿದವರ ಬಗ್ಗೆ ಹೆಚ್ಚಿನ ಮಾಹಿತಿ ಸಂಗ್ರಹಿಸುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ಪೊಲೀಸರು ಸಾರ್ವಜನಿಕರಿಗೆ ಎಚ್ಚರಿಕೆ ನೀಡಿದ್ದು, ಈ ರೀತಿಯ ಪ್ರಕರಣಗಳು ಮರುಕಳಿಸದಂತೆ ಎಚ್ಚರಿಸಿದ್ದಾರೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On – 10:26 am, Tue, 3 February 26

Source link

ಶ್ರೀಲಂಕಾ ಸ್ಕೋರ್ 189: 173 ರನ್ ಬಾರಿಸಿ ಗೆದ್ದ ಇಂಗ್ಲೆಂಡ್ – Kannada News | Sri Lanka vs England, 2nd T20I Highlights

ಶ್ರೀಲಂಕಾ ವಿರುದ್ಧದ 2ನೇ ಟಿ20 ಪಂದ್ಯದಲ್ಲಿ ಇಂಗ್ಲೆಂಡ್ ತಂಡ ಭರ್ಜರಿ ಜಯ ಸಾಧಿಸಿದೆ. ಪಲ್ಲೆಕೆಲ್ಲೆ ಇಂಟರ್​ನ್ಯಾಷನಲ್ ಸ್ಟೇಡಿಯಂನಲ್ಲಿ ನಡೆದ ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಶ್ರೀಲಂಕಾ ತಂಡವು 20 ಓವರ್​ಗಳಲ್ಲಿ 5 ವಿಕೆಟ್ ಕಳೆದುಕೊಂಡು 189 ರನ್ ಕಲೆಹಾಕಿದ್ದರು.

190 ರನ್​ಗಳ ಗುರಿ ಪಡೆದ ಇಂಗ್ಲೆಂಡ್ ತಂಡದ ಇನಿಂಗ್ಸ್​​ಗೆ ಮಳೆ ಅಡ್ಡಿಯಾಯಿತು. ಹೀಗಾಗಿ ಡಕ್​ವರ್ತ್​ ಲೂಯಿಸ್ ನಿಯಮದ ಪ್ರಕಾರ 17 ಓವರ್​ಗಳಲ್ಲಿ 168 ರನ್​ಗಳ ಗುರಿ ನೀಡಲಾಯಿತು. ಈ ಗುರಿಯನ್ನು ಬೆನ್ನತ್ತಿದ ಇಂಗ್ಲೆಂಡ್ ತಂಡ 16.4 ಓವರ್​ಗಳಲ್ಲಿ 173 ರನ್​ ಬಾರಿಸಿ 6 ವಿಕೆಟ್​ಗಳ ಭರ್ಜರಿ ಜಯ ಸಾಧಿಸಿದೆ.

ಈ ಗೆಲುವಿನೊಂದಿಗೆ ಮೂರು ಪಂದ್ಯದ ಟಿ20 ಸರಣಿಯಲ್ಲಿ ಇಂಗ್ಲೆಂಡ್ ತಂಡ 2-0 ಅಂತರದಿಂದ ಮುನ್ನಡೆ ಸಾಧಿಸಿದೆ. ಇದರೊಂದಿಗೆ ಇಂಗ್ಲೆಂಡ್ ತಂಡವು ಶ್ರೀಲಂಕಾ ವಿರುದ್ಧದ ಸತತ 10 ಟಿ20 ಪಂದ್ಯಗಳನ್ನು ಗೆದ್ದ ಸಾಧನೆಯನ್ನು ಸಹ ಮಾಡಿದೆ.

 

Source link

80 ಕೋಟಿ ರೂಪಾಯಿ ಸಂಭಾವನೆ ಡಿಮ್ಯಾಂಡ್ ಮಾಡುತ್ತಿರುವ ರಿಷಬ್ ಶೆಟ್ಟಿ? – Kannada News | Rishab Shetty reportedly demanding Rs 80 Cr remuneration for new movies

ನಟ, ನಿರ್ದೇಶಕ ರಿಷಬ್ ಶೆಟ್ಟಿ (Rishab Shetty) ಅವರು ಬಹಳ ಕಷ್ಟಪಟ್ಟು ಚಿತ್ರರಂಗದಲ್ಲಿ ಯಶಸ್ಸು ಕಂಡಿದ್ದಾರೆ. ಒಂದಷ್ಟು ವರ್ಷಗಳ ಹಿಂದೆ ರಿಷಬ್ ಶೆಟ್ಟಿ ಅವರ ಹೆಸರು ಕರ್ನಾಟಕಕ್ಕೆ ಮಾತ್ರ ಸೀಮಿತ ಆಗಿತ್ತು. ಆದರೆ ‘ಕಾಂತಾರ’ ಸಿನಿಮಾದಿಂದ ಅವರು ಪ್ಯಾನ್ ಇಂಡಿಯಾ ಸ್ಟಾರ್ ಆದರು. ‘ಕಾಂತಾರ: ಚಾಪ್ಟರ್ 1’ ಸಿನಿಮಾ ಬ್ಲಾಕ್ ಬಸ್ಟರ್ ಹಿಟ್ ಆದ ಬಳಿಕ ಅವರ ಡಿಮ್ಯಾಂಡ್ ಹೆಚ್ಚಾಯಿತು. ಅವರ ಜೊತೆ ಸಿನಿಮಾ ಮಾಡಲು ಪರಭಾಷೆಯ ನಿರ್ಮಾಪಕರು ಮುಂದೆ ಬರುತ್ತಿದ್ದಾರೆ. ರಿಷಬ್ ಶೆಟ್ಟಿ ಅವರ ಸಂಭಾವನೆ (Rishab Shetty Remuneration) ಬಗ್ಗೆ ಈಗೊಂದು ಇಂಟರೆಸ್ಟಿಂಗ್ ವಿಷಯ ಕೇಳಿಬಂದಿದೆ.

‘ಜೈ ಹನುಮಾನ್’, ‘ಛತ್ರಪತಿ ಶಿವಾಜಿ ಮಹಾರಾಜ್’ ಮುಂತಾದ ಸಿನಿಮಾಗಳಲ್ಲಿ ರಿಷಬ್ ಶೆಟ್ಟಿ ಅವರು ನಟಿಸುತ್ತಿದ್ದಾರೆ. ಇವೆಲ್ಲವೂ ಪ್ಯಾನ್ ಇಂಡಿಯಾ ಮಟ್ಟದಲ್ಲಿ ರಿಲೀಸ್ ಆಗಲಿವೆ. ಈಗ ರಿಷಬ್ ಶೆಟ್ಟಿ ಅವರ ಮಾರುಕಟ್ಟೆ ಹಿರಿದಾಗಿದೆ. ಅದಕ್ಕೆ ತಕ್ಕಂತೆ ಅವರು ಸಂಭಾವನೆ ಕೇಳುತ್ತಿದ್ದಾರೆ. ವರದಿಗಳ ಪ್ರಕಾರ, ರಿಷಬ್ ಶೆಟ್ಟಿ ಬರೋಬ್ಬರಿ 80 ಕೋಟಿ ರೂಪಾಯಿ ಡಿಮ್ಯಾಂಡ್ ಮಾಡಿದ್ದಾರೆ.

ಚಿತ್ರರಂಗದಲ್ಲಿ ರಿಷಬ್ ಶೆಟ್ಟಿ ಅವರ ತಮ್ಮ ಸಾಮರ್ಥ್ಯ ಏನು ಎಂಬುದನ್ನು ಸಾಬೀತು ಮಾಡಿದ್ದಾರೆ. ನಿರ್ದೇಶಕನಾಗಿ ‘ಕಿರಿಕ್ ಪಾರ್ಟಿ’, ‘ಕಾಂತಾರ’, ‘ಕಾಂತಾರ: ಚಾಪ್ಟರ್ 1’, ‘ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಕಾಸರಗೋಡು’ ಮುಂತಾದ ಸಿನಿಮಾಗಳಲ್ಲಿ ಅವರು ಯಶಸ್ಸು ಕಂಡಿದ್ದಾರೆ. ನಟನಾಗಿಯೂ ಅವರು ಜನರ ಮನ ಗೆದ್ದಿದ್ದಾರೆ. ಅದಕ್ಕೆ ತಕ್ಕಂತೆ ಅವರ ಸಂಭಾವನೆ ಏರಿಕೆ ಆಗುತ್ತಿದೆ.

ರಿಷಬ್ ಶೆಟ್ಟಿ ನಟಿಸಿ, ನಿರ್ದೇಶನ ಮಾಡಿದ್ದ ‘ಕಾಂತಾರ: ಚಾಪ್ಟರ್ 2’ ಸಿನಿಮಾಗೆ ಬಾಕ್ಸ್ ಆಫೀಸ್​​ನಲ್ಲಿ 850 ಕೋಟಿ ರೂಪಾಯಿಗೂ ಅಧಿಕ ಕಲೆಕ್ಷನ್ ಆಗಿದೆ. ಅವರನ್ನು ನಂಬಿಕೊಂಡು ಹಣ ಹೂಡುವ ನಿರ್ಮಾಪಕರಿಗೆ ನಷ್ಟ ಆಗುವುದಿಲ್ಲ ಎಂಬುದು ಚಿತ್ರರಂಗದಲ್ಲಿ ಖಚಿತ ಆಗಿದೆ. ಆದ್ದರಿಂದ ರಿಷಬ್ ಶೆಟ್ಟಿ ಅವರು ಪ್ರತಿ ಸಿನಿಮಾಗೆ 80 ಕೋಟಿ ರೂಪಾಯಿ ಸಂಭಾವನೆ ಕೇಳುತ್ತಿದ್ದಾರೆ ಎಂದು ವರದಿ ಆಗಿದೆ.

ಇದನ್ನೂ ಓದಿ: ನಿಂತು ಹೋಗಿದ್ದ ಬಿಗ್ ಬಜೆಟ್ ಚಿತ್ರ ಕೈಗೆತ್ತಿಕೊಂಡ ರಿಷಬ್? ನಟನೆಯ ಜೊತೆಗೆ ನಿರ್ದೇಶನ

ಸದ್ಯಕ್ಕೆ ಈ ಮಾಹಿತಿ ಕೇವಲ ಅಂತೆ-ಕಂತೆಯ ಹಂತದಲ್ಲಿ ಇದೆ. ಯಾವುದೇ ಚಿತ್ರತಂಡದವರು ಖಚಿತಪಡಿಸಿಲ್ಲ. ರಿಷಬ್ ಶೆಟ್ಟಿ ಅವರು ಸಾರ್ವಜನಿಕವಾಗಿ ತಮ್ಮ ಸಂಭಾವನೆ ಬಗ್ಗೆ ಮಾತನಾಡಿಲ್ಲ. ಪರಭಾಷೆಯ ಕೆಲವು ಮಾಧ್ಯಮಗಳು ಈ ಕುರಿತು ಸುದ್ದಿ ಪ್ರಕಟ ಮಾಡಿವೆ. ರಿಷಬ್ ಶೆಟ್ಟಿ ಅವರ ಸಂಭಾವನೆ 80 ಕೋಟಿ ರೂಪಾಯಿಗೆ ಏರಿಕೆ ಆಗಿದೆ ಎಂದು ವರದಿ ಮಾಡಿವೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Source link

ಬೆಂಚ್​​ ಮೇಲೆ ಕಾಲಿಟ್ಟು ರಾಜ್ಯಸಭೆಯಲ್ಲಿ ಮಾತಾಡಿದ ಸದಸ್ಯ!: ಸತ್ಯ ತಿಳಿಯಲು ಈ ವಿಡಿಯೋ ನೋಡಿ – Kannada News | BJP Member Sadanandan Master Placed His Artificial Legs on the Bench During His First Speech in Rajya Sabha Session

ನವದೆಹಲಿ, ಫೆಬ್ರವರಿ 03: ರಾಜ್ಯಸಭೆಯಲ್ಲಿ ಚೊಚ್ಚಲ ಭಾಷಣದ ವೇಳೆ ಬಿಜೆಪಿ ಸದಸ್ಯ ಸಿ. ಸದಾನಂದನ್ ಮಾಸ್ಟರ್  ತಮ್ಮ ಕೃತಕ ಕಾಲುಗಳನ್ನು ಸದನದ ಬೆಂಚ್​​ ಮೇಲೆ ಪ್ರದರ್ಶಿಸಿ, ತಾವು ಕಾಲುಗಳನ್ನು ಕಳೆದುಕೊಂಡಿದ್ದೇಗೆ ಎಂಬ ಬಗ್ಗೆ ವಿವರಣೆ ನೀಡಿದ ಪ್ರಸಂಗ ನಡೆದಿದೆ. ಪ್ರಜಾಪ್ರಭುತ್ವ, ವಾಕ್ ಸ್ವಾತಂತ್ರ್ಯ, ಸಹಿಷ್ಣುತೆಯ ಬಗ್ಗೆ ಮಾತನಾಡುವ ಎಡಪಂಥೀಯ ರಾಜಕೀಯ ಪಕ್ಷಗಳು ತಮ್ಮ ಸೈದಾಂತಿಕ ವಿರೋಧಿಗಳಿಗೆ ಎಂತಾ ಹಿಂಸೆ ನೀಡಿವೆ ನೋಡಿ ಎಂದು ಅವರು ಹೇಳಿರೋದು ರಾಜ್ಯ ಸಭೆಯಲ್ಲಿ ಕೆಲ ಕಾಲ ಗದ್ದಲಕ್ಕೂ ಕಾರಣವಾಗಿದೆ. 1994ರ ಜನವರಿ 25ರಂದು ಸಿಪಿಐಎಂ ಕಾರ್ಯಕರ್ತರು ಎಂದು ಹೇಳಲಾದ ಗುಂಪು ಇವರ ಮೇಲೆ ದಾಳಿ ನಡೆಸಿತ್ತು. ಕಾಲುಗಳನ್ನು ಕತ್ತರಿಸಿ ಮತ್ತೆ ಜೋಡಣೆಗೆ ಸಿಗಬಾರದೆಂದು ಅಡಗಿಸಿಟ್ಟಿತ್ತು. ಬಳಿಕ ಬಿಜೆಪಿಯಲ್ಲಿ ಸಕ್ರಿಯರಾಗಿದ್ದ ಇವರು ರಾಜ್ಯಸಭಾ ಸದಸ್ಯರಾಗಿ ಆಯ್ಕೆಯಾಗಿದ್ದರು.

ಮತ್ತಷ್ಟು ವಿಡಿಯೋ ನೋಡಲು ಇಲ್ಲಿ ಕ್ಲಿಕ್​​ ಮಾಡಿ.

Source link

ಪಾಕ್ ಸ್ಪಿನ್ನರ್​ನ ಬೌಲಿಂಗ್ ಆ್ಯಕ್ಷನ್ ಕಾನೂನು ಬದ್ಧವೇ? ಅಂಪೈರ್ ಹೇಳಿದ್ದೇನು? – Kannada News | Umpire Anil Chaudhary on Pakistan’s Usman Tariq’s bowling action

ಪಾಕಿಸ್ತಾನ್ ತಂಡದ ಸ್ಪಿನ್ನರ್ ಉಸ್ಮಾನ್ ತಾರಿಖ್ ಅವರ ಬೌಲಿಂಗ್ ಆ್ಯಕ್ಷನ್ ಚರ್ಚೆಗೆ ಕಾರಣವಾಗಿದೆ. ಲಾಹೋರ್​ನ ಗದ್ದಾಫಿ ಸ್ಟೇಡಿಯಂನಲ್ಲಿ ನಡೆದ ಪಾಕಿಸ್ತಾನ್ ವಿರುದ್ಧದ 2ನೇ ಟಿ20 ಪಂದ್ಯದಲ್ಲಿ ಉಸ್ಮಾನ್ ತಾರಿಖ್ ಎಸೆತದಲ್ಲಿ ಆಸ್ಟ್ರೇಲಿಯಾ ದಾಂಡಿಗ ಕ್ಯಾಮರೋನ್ ಗ್ರೀನ್ ಔಟಾಗಿದ್ದರು. ಹೀಗೆ ಔಟಾಗಿ ಪೆವಿಲಿಯನ್​ ಕಡೆ ಹೆಜ್ಜೆ ಹಾಕಿದ್ದ ಗ್ರೀನ್ ಪಾಕ್ ಸ್ಪಿನ್ನರ್​ನ ಬೌಲಿಂಗ್ ಆ್ಯಕ್ಷನ್ ಬಗ್ಗೆ ಪ್ರಶ್ನೆಗಳೆನ್ನೆತ್ತಿದ್ದರು.

ಇದರ ಬೆನ್ನಲ್ಲೇ ಸೋಷಿಯಲ್ ಮೀಡಿಯಾದಲ್ಲೂ ಉಸ್ಮಾನ್ ತಾರಿಖ್ ಅವರ ಬೌಲಿಂಗ್ ಶೈಲಿ ಬಗ್ಗೆ ಚರ್ಚೆ ಶುರುವಾಗಿತ್ತು. ಇದೀಗ ಈ ಚರ್ಚೆಗಳಿಗೆ ಭಾರತದ ಅಂಪೈರ್ ಅನಿಲ್ ಚೌಧರಿ ತೆರೆ ಎಳೆದಿದ್ದಾರೆ.

ಉಸ್ಮಾನ್ ತಾರಿಖ್ ಅವರ ಬೌಲಿಂಗ್ ಶೈಲಿಯ ಬಗ್ಗೆ ಮಾತನಾಡಿದ ಅನಿಲ್ ಚೌಧರಿ, ಅವರ ಬೌಲಿಂಗ್​ನಲ್ಲಿ ಯಾವುದೇ ತಪ್ಪು ಅಥವಾ ಅನುಮಾನಾಸ್ಪದತೆಯನ್ನು ಕಂಡು ಬರುತ್ತಿಲ್ಲ. ತಾರಿಕ್ ಅವರ ಬೌಲಿಂಗ್ ಶೈಲಿ ಸ್ವಲ್ಪ ಸೈಡ್-ಆರ್ಮ್ ಆಗಿದ್ದು, ಅವರು ಚೆಂಡನ್ನು ಎಸೆಯಲು ತುಸು ವಿಳಂಬ ಮಾಡುತ್ತಿದ್ದಾರೆ ಅಷ್ಟೇ. ಆದಾಗ್ಯೂ, ಅವರು ಎಲ್ಲಾ ಚೆಂಡುಗಳನ್ನು ಒಂದೇ ರೀತಿಯಲ್ಲಿ ಬೌಲ್ ಮಾಡುತ್ತಿದ್ದಾರೆ.

ಐಸಿಸಿ ಬೌಲಿಂಗ್ ಮಾರ್ಗಸೂಚಿಗಳ ಪ್ರಕಾರ, ತಮ್ಮ ತೋಳನ್ನು ಬಗ್ಗಿಸುವುದಿಲ್ಲವಾದ್ದರಿಂದ, ಬೌಲಿಂಗ್ ಶೈಲಿ ಸರಿಯಾಗಿದೆ. ಬೌಲಿಂಗ್ ಶೈಲಿ ಸ್ವಲ್ಪ ವಿಭಿನ್ನವಾಗಿದ್ದರೂ, ಅದರಲ್ಲಿ ಯಾವುದೇ ತಪ್ಪಿಲ್ಲ ಎಂದು ಅಂಪೈರ್ ಅನಿಲ್ ಚೌಧರಿ ಹೇಳಿದ್ದಾರೆ.

 

Source link

ಕಮಲಾಕರ ಭಟ್​ ಗುರೂಜಿ ಜೊತೆ ಮಹಿಳೆ ಅಕ್ರಮ ಸಂಬಂಧ: ದೂರು ನೀಡಿದ್ದಕ್ಕೆ ಹಲ್ಲೆ; ಓರ್ವ ಸಾವು – Kannada News | Kamalakar Bhat Guruji’s Illicit Affair: Complaint Leads to Fatal Assault, One Dead in Siddapura, Uttara Kannada

ಆರೋಪಿಗಳು ಮತ್ತು ಮೃತ ವ್ಯಕ್ತಿImage Credit source: Tv9 Kannada

ಕಾರವಾರ, ಫೆಬ್ರವರಿ 03: ಗುರೂಜಿ ಜೊತೆಗೆ ಮಹಿಳೆಯ ಅಕ್ರಮ ಸಂಬಂಧ ವಿಚಾರವಾಗಿ ನಡೆದ ಗಲಾಟೆ ಓರ್ವನ ಕೊಲೆಯಲ್ಲಿ ಅಂತ್ಯವಾಗಿರುವ ಘಟನೆ ಉತ್ತರ ಕನ್ನಡ ಜಿಲ್ಲೆಯ ಸಿದ್ದಾಪುರ ತಾಲೂಕಿನ ಅವರಗುಪ್ಪ ಗ್ರಾಮದಲ್ಲಿ ನಡೆದಿದೆ. ಗುರೂಜಿ ಜೊತೆ ಮಹಿಳೆ ಅನೈತಿಕ ಸಂಬಂಧ ದೂರು ನೀಡಿದ್ದಕ್ಕೆ ದಾಳಿ ನಡೆಸಲಾಗಿದೆ ಎನ್ನಲಾಗಿದ್ದು, ಈ ವೇಳೆ ಓರ್ವ ಮೃತಪಟ್ಟಿದ್ದರೆ ಮತ್ತಿಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ. ಪ್ರಕರಣ ಸಂಬಂಧ ಆರೋಪಿಗಳನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಘಟನೆ ಏನು?

ಸುಚಿತ್ರಾ ಎಂಬ ಮಹಿಳೆ ಶಿವಮೊಗ್ಗ ಮೂಲದ ಕಮಲಾಕರ ಭಟ್ ಗುರೂಜಿ ಜೊತೆಗೆ ಅಕ್ರಮ ಸಂಬಂಧ ಹೊಂದಿದ್ದರು. ಕಮಲಾಕರ್​​ ಮೂಲತಃ ಸಿದ್ದಾಪುರ ಮೂಲದ ಹೆಮ್ಮನಬೈಲ್ ಗ್ರಾಮದವರು. ಸ್ವಾಮೀಜಿ ಜೊತೆ ತಾಯಿಯ ಅಕ್ರಮ ಸಂಬಂಧದ ವಿಚಾರ ಸುಚಿತ್ರಾ ಪುತ್ರಿಗೆ ಗೊತ್ತಾಗಿದ್ದು, ವಿಚಾರವನ್ನು ತಂದೆ ಮಹೇಶ್ ನಾಯ್ಕಗೆ ಆಕೆ ತಿಳಿಸಿದ್ದಳು. ಇದೇ ವಿಚಾರವಾಗಿ ಮಹೇಶ್ ನಾಯ್ಕ ಪೊಲೀಸ್​​ ಠಾಣೆಗೆ ತೆರಳಿ ದೂರು ನೀಡಿದ್ದ ಕಾರಣ ಕಮಲಾಕರ್​​ ಗುರೂಜಿ, ಸುಚಿತ್ರಾ, ಸುಚಿತ್ರಾ ತಂದೆ ಲೋಕನಾಥ್ ಮತ್ತು ಸಹಚರನಿಂದ ಹಲ್ಲೆ ನಡೆಸಲಾಗಿದೆ. ಘಟನೆಯಲ್ಲಿ ಸುಚಿತ್ರಾ ಪತಿ ಮಹೇಶ್​​, ವಸಂತ್ ನಾಯ್ಕ್ ಮತ್ತು ಕುಮಾರ್​​ ಗಂಭೀರ ಗಾಯಗೊಂಡಿದ್ದು, ಈ ಪೈಕಿ ವಸಂತ್ ನಾಯ್ಕ ಆಸ್ಪತ್ರೆ ಮಾರ್ಗ ಮಧ್ಯೆಯೇ ಮೃತಪಟ್ಟಿದ್ದಾರೆ. ಉಳಿದ ಇಬ್ಬರಿಗೆ ಸ್ಥಳೀಯ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗ್ತಿದೆ.

ಇದನ್ನೂ ಓದಿ: 10 ವರ್ಷಗಳ ದ್ವೇಷಕ್ಕೆ ಹರಿದ ನೆತ್ತರು; ತಾಯಿ ಜೊತೆ ಓಡಿ ಹೋದವನ ಬರ್ಬರವಾಗಿ ಕೊಂದ ವ್ಯಕ್ತಿ

ಇನ್ನು ಘಟನೆ ಸಂಬಂಧ ಕೃತ್ಯವೆಸಗಿ ಪರಾರಿಯಾಗುತ್ತಿದ್ದ ಗುರೂಜಿ ಸೇರಿ 7 ಜನರನ್ನು ಪೊಲೀಸರು ವಶಕ್ಕೆ ವಡೆದಿದ್ದಾರೆ. ಶಿವಮೊಗ್ಗದಲ್ಲಿ ಮೂವರು ಹಾಗೂ ಸಿದ್ದಾಪುರದಲ್ಲಿ ನಾಲ್ವರು ಪೊಲೀಸರ ಬಲೆಗೆ ಬಿದ್ದಿದ್ದಾರೆ. ಪ್ರಕರಣದಲ್ಲಿ ಎ1 ಸುಚಿತ್ರಾ, ಎ2 ಲೋಕನಾಥ ಚೌಡಪ್ಪ ನಾಯ್ಕ್, ಎ3 ಅಪರಿಚಿತರು ಹಾಗೂ ಎ4 ಕಮಲಾಕರ ಭಟ್​​ ಸ್ವಾಮೀಜಿ ಆಗಿದ್ದು, ಘಟನೆ ಸಂಬಂಧ ಸಿದ್ದಾಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಮತ್ತಷ್ಟು ಸುದ್ದಿ ಓದಲು ಇಲ್ಲಿ ಕ್ಲಿಕ್​​ ಮಾಡಿ.

Source link

Exit mobile version