ಒಂದೇ ತಂಡವಾದ ಎರಡು ಟೀಮ್​​ಗಳು..! – Kannada News

ಆಸ್ಟ್ರೇಲಿಯಾದ ಪ್ರತಿಷ್ಠಿತ ಟಿ20 ಟೂರ್ನಿ ಬಿಗ್ ಬ್ಯಾಷ್ ಲೀಗ್​ನ (BBL) ಎರಡು ತಂಡಗಳು ವಿಲೀನಗೊಂಡಿವೆ. ಮೆಲ್ಬೋರ್ನ್ ನಗರದ ಸಾಂಪ್ರದಾಯಿಕ ಎದುರಾಳಿಗಳಾದ ‘ಮೆಲ್ಬೋರ್ನ್ ಸ್ಟಾರ್ಸ್’ (Melbourne Stars) ಮತ್ತು ‘ಮೆಲ್ಬೋರ್ನ್ ರೆನೆಗೇಡ್ಸ್’ (Melbourne Renegades) ತಂಡಗಳು ಈಗ ಒಂದಾಗಿದ್ದು, ಮುಂಬರುವ ಸೀಸನ್​​ನಲ್ಲಿ ಒಂದೇ ತಂಡವಾಗಿ ಕಣಕ್ಕಿಳಿಯಲಿದೆ.

ವಿಲೀನದ ಹಿಂದಿನ ಮುಖ್ಯ ಉದ್ದೇಶವೇನು?

ಬಿಬಿಎಲ್ ಟೂರ್ನಿಯನ್ನು ಸಂಪೂರ್ಣವಾಗಿ ಖಾಸಗೀಕರಣಗೊಳಿಸಲು ಕ್ರಿಕೆಟ್ ಆಸ್ಟ್ರೇಲಿಯಾ ಸಜ್ಜಾಗುತ್ತಿದೆ. ಈ ಹಿನ್ನೆಲೆಯಲ್ಲಿ, ಎರಡು ಪ್ರತ್ಯೇಕ ತಂಡಗಳನ್ನು ನಡೆಸಿ ಸಂಪನ್ಮೂಲಗಳನ್ನು ವ್ಯರ್ಥ ಮಾಡುವ ಬದಲು, ಆಡಳಿತವನ್ನು ಸುಗಮಗೊಳಿಸಲು ಕ್ರಿಕೆಟ್ ವಿಕ್ಟೋರಿಯಾ ಈ ನಿರ್ಧಾರ ಮಾಡಿದೆ.

ಈ ಮೂಲಕ ಒಂದು ಬಲಿಷ್ಠ ತಂಡವನ್ನು ರೂಪಿಸಿ ಖಾಸಗಿ ಹೂಡಿಕೆದಾರರಿಗೆ (ಮುಖ್ಯವಾಗಿ ಐಪಿಎಲ್ ಫ್ರಾಂಚೈಸಿಗಳಿಗೆ) ಕೋಟ್ಯಂತರ ರೂಪಾಯಿಗೆ ಮಾರಾಟ ಮಾಡುವುದು ಇದರ ಹಿಂದಿನ ತಂತ್ರವಾಗಿದೆ.

ಹೊಸ ತಂಡದ ರೂಪರೇಷೆ ಹೇಗಿರಲಿದೆ?

  • ಹೊಸ ಹೆಸರು ಮತ್ತು ಬಣ್ಣ: ಸ್ಟಾರ್ಸ್‌ನ ಹಸಿರು ಮತ್ತು ರೆನೆಗೇಡ್ಸ್‌ನ ಕೆಂಪು ಬಣ್ಣದ ಜರ್ಸಿಗಳು ಇನ್ಮುಂದೆ ಇರುವುದಿಲ್ಲ. ಹೊಸದಾಗಿ ರೂಪುಗೊಳ್ಳುವ ‘ಸೂಪರ್ ಟೀಮ್’ಗೆ ಕೇವಲ ‘ಮೆಲ್ಬೋರ್ನ್’ ಎಂದು ಹೆಸರಿಡಲಾಗುವುದು. ಇದು ವಿಕ್ಟೋರಿಯಾ ರಾಜ್ಯದ ಸಾಂಪ್ರದಾಯಿಕ ಗಾಢ ನೀಲಿ (Navy Blue) ಬಣ್ಣದ ಜರ್ಸಿಯನ್ನು ಧರಿಸಲಿದೆ. ತಂಡದ ಉಪನಾಮವನ್ನು (Nickname) ಶೀಘ್ರದಲ್ಲೇ ಅಂತಿಮಗೊಳಿಸಲಾಗುತ್ತದೆ.
  • ಹೋಮ್ ಗ್ರೌಂಡ್: ಈ ಹೊಸ ಸಂಯೋಜಿತ ತಂಡವು ಜಗತ್ತಿನ ಐತಿಹಾಸಿಕ ಕ್ರೀಡಾಂಗಣವಾದ ಮೆಲ್ಬೋರ್ನ್ ಕ್ರಿಕೆಟ್ ಮೈದಾನವನ್ನು (MCG) ತನ್ನ ಪ್ರಮುಖ ತವರೂಡನ್ನಾಗಿ ಮಾಡಿಕೊಳ್ಳಲಿದೆ.
  • ಮುಖ್ಯಸ್ಥರು: ರೆನೆಗೇಡ್ಸ್ ತಂಡದ ಜನರಲ್ ಮ್ಯಾನೇಜರ್ ಆಗಿದ್ದ ಜೇಮ್ಸ್ ರೋಸೆನ್‌ಗಾರ್ಟನ್ ಅವರು ಈ ಹೊಸ ಮೆಲ್ಬೋರ್ನ್ ತಂಡದ ಜಿಎಂ ಆಗಿ ಜವಾಬ್ದಾರಿ ವಹಿಸಿಕೊಳ್ಳಲಿದ್ದಾರೆ.

ಆಟಗಾರರ ಒಪ್ಪಂದಗಳ ಕಥೆಯೇನು?

ಮುಂಬರುವ 2026-27ರ ಬಿಬಿಎಲ್ ಸೀಸನ್‌ಗಾಗಿ ಈಗಾಗಲೇ ಒಪ್ಪಂದ ಮಾಡಿಕೊಂಡಿರುವ ಆಟಗಾರರ ಹಿತಾಸಕ್ತಿಯನ್ನು ಕಾಯ್ದುಕೊಳ್ಳಲಾಗಿದೆ. ಮೆಲ್ಬೋರ್ನ್ ಸ್ಟಾರ್ಸ್ ಪರ ಆಡುತ್ತಿದ್ದ ಗ್ಲೆನ್ ಮ್ಯಾಕ್ಸ್‌ವೆಲ್, ಮಾರ್ಕಸ್ ಸ್ಟೊಯಿನಿಸ್ ಮತ್ತು ರೆನೆಗೇಡ್ಸ್ ಪರ ಆಡುತ್ತಿದ್ದ ಜೇಕ್ ಫ್ರೇಸರ್-ಮೆಕ್‌ಗುರ್ಕ್ ಅವರಂತಹ ಸ್ಟಾರ್ ಆಟಗಾರರು ಸದ್ಯಕ್ಕೆ ತಮ್ಮ ತಮ್ಮ ಒಪ್ಪಂದದ ಪಟ್ಟಿಯಲ್ಲೇ ಮುಂದುವರಿಯಲಿದ್ದಾರೆ. ಖಾಸಗಿ ಹೂಡಿಕೆದಾರರು ಸಿಗುವವರೆಗೂ ಈ ಒಪ್ಪಂದಗಳು ಬದಲಾಗುವುದಿಲ್ಲ.

ಆಸ್ಟ್ರೇಲಿಯನ್ ಕ್ರಿಕೆಟ್‌ನಲ್ಲಿ ಗೊಂದಲ!

ಕ್ರಿಕೆಟ್ ವಿಕ್ಟೋರಿಯಾದ ಈ ದಿಢೀರ್ ಘೋಷಣೆ ಬಿಬಿಎಲ್ ಆಟಗಾರರು ಮತ್ತು ಇತರೆ ರಾಜ್ಯಗಳ ಕ್ರಿಕೆಟ್ ಮಂಡಳಿಗಳಿಗೆ ತೀವ್ರ ಆಘಾತ ನೀಡಿದೆ. ತಮಗೆ ಯಾವುದೇ ಮುನ್ಸೂಚನೆ ನೀಡದೆ ಈ ನಿರ್ಧಾರ ಕೈಗೊಳ್ಳಲಾಗಿದೆ ಎಂದು ಆಟಗಾರರು ಆತಂಕ ವ್ಯಕ್ತಪಡಿಸಿದ್ದಾರೆ.

ಇತ್ತ ನ್ಯೂ ಸೌತ್ ವೇಲ್ಸ್, ಕ್ವೀನ್ಸ್‌ಲ್ಯಾಂಡ್ ಮತ್ತು ಸೌತ್ ಆಸ್ಟ್ರೇಲಿಯಾ ಕ್ರಿಕೆಟ್ ಸಂಸ್ಥೆಗಳು ಈ ವಿಲೀನದ ವಿರುದ್ಧ ಅಸಮಾಧಾನ ಹೊರಹಾಕಿದ್ದು, ಕ್ರಿಕೆಟ್ ಆಸ್ಟ್ರೇಲಿಯಾ ಜೊತೆ ತುರ್ತು ಸಭೆಗೆ ಆಗ್ರಹಿಸಿವೆ.

ಮೆಲ್ಬೋರ್ನ್ ಡರ್ಬಿ ಮಿಸ್:

ಮೆಲ್ಬೋರ್ನ್ ಸ್ಟಾರ್ಸ್ ಮತ್ತು ಮೆಲ್ಬೋರ್ನ್ ರೆನೆಗೇಡ್ಸ್ ಎರಡೂ ತಂಡಗಳು ಶುರುವಾಗಿ 15 ವರ್ಷಗಳು ಆಗಿವೆ.ಅಂದರೆ ಕಳೆದ ಹದಿನೈದು ವರ್ಷಗಳಿಂದ ಎರಡೂ ತಂಡಗಳ ಅಭಿಮಾನಿಗಳು ಮೆಲ್ಬೋರ್ನ್ ಸ್ಟಾರ್ಸ್ ಮತ್ತು ಮೆಲ್ಬೋರ್ನ್ ರೆನೆಗೇಡ್ಸ್ ನಡುವಣ ಪಂದ್ಯವನ್ನು ಪ್ರತಿಷ್ಠಿತೆಯಾಗಿ ಪರಿಗಣಿಸಿದ್ದರು.

ಇದೀಗ ಮೆಲ್ಬೋರ್ನ್​ ತಂಡಗಳ ವಿಲೀನದಿಂದಾಗಿ ಮೆಲ್ಬೋರ್ನ್ ಡರ್ಬಿ ಪಂದ್ಯಗಳು ಮಿಸ್ ಆಗಲಿವೆ. ಅಲ್ಲದೆ ಒಂದು ದಶಕದಿಂದ ಬೆಂಬಲಿಸುತ್ತಾ ಬಂದಿದ್ದ ಅಭಿಮಾನಿಗಳೂ ಕೂಡ ಈ ವಿಲೀನದ ಬಗ್ಗೆ ಸೋಷಿಯಲ್ ಮೀಡಿಯಾದಲ್ಲಿ ಆಕ್ರೋಶ ಹೊರಹಾಕುತ್ತಿದ್ದಾರೆ.

ಇದನ್ನೂ ಓದಿ: ಇದೆಂತಾ ಅನ್ಯಾಯ… ಈ ಮೂವರ ಬದಲಿಗೆ ಆ ಮೂವರಿಗೆ ಸ್ಥಾನ..!

ಒಟ್ಟಾರೆಯಾಗಿ ಹೇಳುವುದಾದರೆ, ಈ ವಿಲೀನದಿಂದಾಗಿ ಬಿಬಿಎಲ್‌ನ ಅತ್ಯಂತ ರೋಮಾಂಚಕ ‘ಮೆಲ್ಬೋರ್ನ್ ಡರ್ಬಿ’ ಪಂದ್ಯಗಳು ಇನ್ಮುಂದೆ ಇರುವುದಿಲ್ಲ ಎನ್ನುವುದು ಕಹಿ ಸತ್ಯ. ಕಳೆದ 15 ವರ್ಷಗಳಿಂದ ತಮ್ಮ ನೆಚ್ಚಿನ ತಂಡಗಳನ್ನು ಪ್ರಾಣಕ್ಕಿಂತ ಹೆಚ್ಚಾಗಿ ಪ್ರೀತಿಸಿ, ಬೆಂಬಲಿಸುತ್ತಾ ಬಂದಿದ್ದ ಅಭಿಮಾನಿಗಳಿಗೆ ಈ ದಿಢೀರ್ ಬದಲಾವಣೆಯನ್ನು ಅರಗಿಸಿಕೊಳ್ಳಲು ಸಾಧ್ಯವಾಗುತ್ತಿಲ್ಲ ಎಂಬುದು ಕೂಡ ಅಷ್ಟೇ ಸತ್ಯ.

Source link

ರಾಜ್ಯದ ಹಲವು ಜಿಲ್ಲೆಗಳಲ್ಲಿ ಜನರ ನೆಮ್ಮದಿ ಕಸಿದ ಮಳೆರಾಯ: ಮನೆಗಳಿಗೆ ನುಗ್ಗಿದ ನೀರು, ಕುಸಿದ ಸೇತುವೆ

Source link

5 ಕಟ್ಟಡಗಳು, 13 ಪ್ಲಾಟ್​ಗಳು, 2 ಕೋಟಿ ರೂ. ನಗದು, ಒಡಿಶಾ ಎಂಜಿನಿಯರ್ ಬಳಿ ಸಿಕ್ಕಿದ್ದೇನು? – Kannada News

ಭುವನೇಶ್ವರ, ಜೂನ್ 07: ದೇಶಾದ್ಯಂತ ಸರ್ಕಾರಿ ವಲಯದಲ್ಲಿ ಪಾರದರ್ಶಕತೆ, ಪ್ರಾಮಾಣಿಕತೆ ಹಾಗೂ ಜವಾಬ್ದಾರಿ ಆಡಳಿತವನ್ನು ಖಚಿತಪಡಿಸುವ ನಿಟ್ಟಿನಲ್ಲಿ ಒಡಿಶಾ ರಾಜ್ಯ ವಿಜಿಲೆನ್ಸ್​ ಇಲಾಖೆಯು ಕಾರ್ಯಾಚರಣೆಯೊಂದನ್ನು ನಡೆಸಿದೆ. ಕಂಧಮಾಲ್ ಜಿಲ್ಲೆಯ ಬಾಲಿಗುಡದ ಸಮಗ್ರ ಬುಡಕಟ್ಟು ಅಭಿವೃದ್ಧಿ ಸಂಸ್ಥೆಯ ಸಹಾಯ ಕಾರ್ಯನಿರ್ವಾಹಕ ಎಂಜಿನಿಯರ್ ವೈಕುಂಠನಾಥ್ ಬೆಹೆರಾ ವಿರುದ್ಧ ಬಂದ ಸಾರ್ವಜನಿಕ ದೂರುಗಳಿಗೆ ತಕ್ಷಣವೇ ಸ್ಪಂದಿಸಿರುವ ಅಧಿಕಾರಿಗಳು, ಬೃಹತ್ ಮಟ್ಟದ ಆಸ್ತಿ ಶೋಧ ನಡೆಸಿದ್ದಾರೆ.

ಜೂನ್ 6, 2026 ರಂದು ಭುವನೇಶ್ವರದ ವಿಶೇಷ ವಿಜಿಲೆನ್ಸ್ ನ್ಯಾಯಾಲಯದ ಶೋಧ ವಾರಂಟ್ ಮೇರೆಗೆ ಇಬ್ಬರು ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿಗಳು, ಐದು ಡಿಎಸ್‌ಪಿಗಳು ಮತ್ತು ಆರು ಇನ್ಸ್‌ಪೆಕ್ಟರ್‌ಗಳನ್ನೊಳಗೊಂಡ ದಕ್ಷ ಅಧಿಕಾರಿಗಳ ತಂಡವು ಈ ಆಪರೇಷನ್ ಅನ್ನು ಅತ್ಯಂತ ವ್ಯವಸ್ಥಿತವಾಗಿ ಪೂರ್ಣಗೊಳಿಸಿದೆ.

ಕಟ್ಟುನಿಟ್ಟಿನ ತನಿಖೆ ಮತ್ತು ಪಾರದರ್ಶಕ ಆಸ್ತಿ ಪತ್ತೆ
ಸಾರ್ವಜನಿಕ ಹಣದ ಪಾವತಿ ಹಾಗೂ ಆಡಳಿತದಲ್ಲಿ ಉತ್ತರದಾಯಿತ್ವವನ್ನು ಕಾಪಾಡುವ ನಿಟ್ಟಿನಲ್ಲಿ ಅಧಿಕಾರಿಗಳು ಒಡಿಶಾದ ಭುವನೇಶ್ವರ, ಬರಿಪಾದ, ಧರ್ಮಶಾಲಾ ಮತ್ತು ಬಾಲಿಗುಡ ಸೇರಿದಂತೆ ಒಟ್ಟು ಒಂಬತ್ತು ಪ್ರಮುಖ ಸ್ಥಳಗಳಲ್ಲಿ ಏಕಕಾಲಕ್ಕೆ ದಾಳಿ ನಡೆಸಿದರು. ಈ ಪಾರದರ್ಶಕ ಶೋಧದ ವೇಳೆ ತನಿಖಾಧಿಕಾರಿಗಳು ಭ್ರಷ್ಟಾಚಾರದ ಮೂಲಗಳನ್ನು ಯಶಸ್ವಿಯಾಗಿ ಪತ್ತೆಹಚ್ಚಿದ್ದಾರೆ.
ಭುವನೇಶ್ವರದ ಪ್ರಮುಖ ವಾಣಿಜ್ಯ ಮತ್ತು ವಸತಿ ವಲಯಗಳಾದ ನೀಲಾದ್ರಿ ವಿಹಾರ್, ಶೈಲಶ್ರೀ ವಿಹಾರ್ ಮತ್ತು ಕಾನನ್ ವಿಹಾರ್‌ಗಳಲ್ಲಿ ಸುಸಜ್ಜಿತವಾದ 5 ಬೃಹತ್ ಕಟ್ಟಡಗಳು ಹಾಗೂ ವಿವಿಧ ಜಿಲ್ಲೆಗಳಲ್ಲಿ ಹರಡಿರುವ 13 ಉನ್ನತ ಮೌಲ್ಯದ ಭೂ ಪ್ಲಾಟ್‌ಗಳನ್ನು ವಿಜಿಲೆನ್ಸ್ ಇಲಾಖೆ ಕಣ್ಗಾವಲಿಗೆ ತಂದಿದೆ.

ಮತ್ತಷ್ಟು ಓದಿ: ಬೆಂಗಳೂರು: ಎಸ್​​ಬಿಐ ಬ್ಯಾಂಕ್ ಒಕ್ಕೂಟಕ್ಕೆ ಕೋಟ್ಯಂತರ ರೂ ವಂಚನೆ; ದೀಪಕ್ ಕೇಬಲ್ಸ್ ಲಿಮಿಟೆಡ್ ನಿರ್ದೇಶಕ ಅರೆಸ್ಟ್​

ತನಿಖೆಯ ಅತ್ಯಂತ ಪ್ರಮುಖ ಮೈಲಿಗಲ್ಲಾಗಿ, ಭುವನೇಶ್ವರದ ಆಕ್ಸಿಸ್ ಬ್ಯಾಂಕ್ ಮತ್ತು ಯೂನಿಯನ್ ಬ್ಯಾಂಕ್ ಆಫ್ ಇಂಡಿಯಾ ಶಾಖೆಗಳಲ್ಲಿ ಆರೋಪಿಯ ಪತ್ನಿಯ ಹೆಸರಿನಲ್ಲಿದ್ದ ಬ್ಯಾಂಕ್ ಲಾಕರ್‌ಗಳನ್ನು ತೆರೆದ ಅಧಿಕಾರಿಗಳು, ಅಲ್ಲಿ ಅಕ್ರಮವಾಗಿ ಸಂಗ್ರಹಿಸಿಡಲಾಗಿದ್ದ ಸುಮಾರು 2 ಕೋಟಿ ರೂ. ನಗದನ್ನು ವಶಪಡಿಸಿಕೊಂಡಿದ್ದಾರೆ.

1999 ರಲ್ಲಿ ಕೇವಲ 6,000 ರೂ. ಮಾಸಿಕ ವೇತನಕ್ಕೆ ಜೂನಿಯರ್ ಎಂಜಿನಿಯರ್ ಆಗಿ ಸೇವೆಗೆ ಸೇರಿ, ಇತ್ತೀಚೆಗೆ 2026 ರ ಫೆಬ್ರವರಿಯಲ್ಲಿ ಸಹಾಯಕ ಕಾರ್ಯನಿರ್ವಾಹಕ ಎಂಜಿನಿಯರ್ ಆಗಿ ಬಡ್ತಿ ಪಡೆದಿದ್ದ ವೈಕುಂಠ ನಾಥ್ ಬೆಹೆರಾ ಅವರ ಆದಾಯಕ್ಕಿಂತ ಹೆಚ್ಚಿನ ಆಸ್ತಿ ಗಳಿಕೆಯ ಇಡೀ ಜಾಲವನ್ನು ತಾಂತ್ರಿಕ ವಿಭಾಗದ ನೆರವಿನೊಂದಿಗೆ ನಿಖರವಾಗಿ ಮೌಲ್ಯಮಾಪನ ಮಾಡಲಾಗುತ್ತಿದೆ.

ಇತ್ತೀಚಿನ ವರ್ಷಗಳಲ್ಲಿ ಒಡಿಶಾ ವಿಜಿಲೆನ್ಸ್ ಇಲಾಖೆ ನಡೆಸಿದ ಅತ್ಯಂತ ಯಶಸ್ವಿ ಮತ್ತು ಅತಿ ದೊಡ್ಡ ಆಪರೇಷನ್‌ಗಳಲ್ಲಿ ಇದು ಒಂದಾಗಿದೆ. ಸಾರ್ವಜನಿಕರ ಹಿತ ಕಾಯುವಲ್ಲಿ ಮತ್ತು ಭ್ರಷ್ಟಾಚಾರ ಮುಕ್ತ ಸಮಾಜವನ್ನು ನಿರ್ಮಿಸುವಲ್ಲಿ ಇಲಾಖೆ ತೋರಿಸಿರುವ ಈ ತ್ವರಿತ ನಡೆ ಇಡೀ ವ್ಯವಸ್ಥೆಯ ಮೇಲಿನ ನಂಬಿಕೆಯನ್ನು ಹೆಚ್ಚಿಸಿದೆ.

ಪ್ರಸ್ತುತ ಪತ್ತೆಯಾಗಿರುವ ಎಲ್ಲಾ ದಾಖಲೆಗಳು ಹಾಗೂ ಹೂಡಿಕೆಗಳನ್ನು ನ್ಯಾಯಾಲಯದ ನಿಯಮಾವಳಿಗಳ ಪ್ರಕಾರ ಪರಿಶೀಲಿಸಲಾಗುತ್ತಿದ್ದು, ತಪ್ಪಿತಸ್ಥರಿಗೆ ಕಠಿಣ ಕಾನೂನು ಶಿಕ್ಷೆ ಖಾತರಿಪಡಿಸುವ ಮೂಲಕ ಭವಿಷ್ಯದಲ್ಲಿ ಇಂತಹ ಅಕ್ರಮಗಳು ಮರುಕಳಿಸದಂತೆ ಇಡೀ ಸರ್ಕಾರಿ ಇಲಾಖೆಗೆ ಸ್ಪಷ್ಟ ಹಾಗೂ ಭರವಸೆಯ ಸಂದೇಶವನ್ನು ರವಾನಿಸಲಾಗಿದೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Source link

‘ರಣವೀರ್ ಸಿಂಗ್‌ ಶಕ್ತಿಮಾನ್ ಆಗಲು ಮುಖೇಶ್ ಖನ್ನಾ ಒಪ್ಪಿಲ್ಲ ಎಂಬುದೆಲ್ಲ ಪ್ರಚಾರದ ಗಿಮಿಕ್’ – Kannada News

ಭಾರತದ ಮೊದಲ ಸೂಪರ್ ಹೀರೋ ‘ಶಕ್ತಿಮಾನ್’ (Shaktimaan) ಮತ್ತೆ ಸುದ್ದಿಯಲ್ಲಿದೆ. ಈ ಐಕಾನಿಕ್ ಕಥೆಯನ್ನು ಬಿಗ್ ಸ್ಕ್ರೀನ್ ಮೇಲೆ ತರಲು ಬಾಲಿವುಡ್‌ನಲ್ಲಿ ಪ್ರಯತ್ನ ನಡೆಯುತ್ತಿರುವುದು ಹಳೆಯ ವಿಷಯವಾದರೂ, ಶಕ್ತಿಮಾನ್ ಪಾತ್ರಕ್ಕೆ ಯಾರು ಆಯ್ಕೆಯಾಗಲಿದ್ದಾರೆ ಎಂಬ ಸುದ್ದಿಯೇ ಸದ್ಯದ ದೊಡ್ಡ ಚರ್ಚೆ. ಶಕ್ತಿಮಾನ್ ಪಾತ್ರಧಾರಿ ಹಾಗೂ ನಿರ್ಮಾಪಕ ಮುಖೇಶ್ ಖನ್ನಾ (Mukesh Khanna) ಅವರು ರಣವೀರ್ ಸಿಂಗ್ ಆಯ್ಕೆಯನ್ನು ತೀವ್ರವಾಗಿ ವಿರೋಧಿಸುತ್ತಾ ಬಂದಿದ್ದಾರೆ. ಆದರೆ, ಈಗ ಈ ಇಡೀ ವಿವಾದದ ಹಿಂದೆ ಪ್ರಚಾರದ ಗಿಮಿಕ್ ಅಡಗಿದೆ ಎಂದು ಸಹನಟ ಲಲಿತ್ ಪರಿಮೂ ಹೇಳಿದ್ದಾರೆ.

‘ರಣವೀರ್ ಸಿಂಗ್ ಅವರು ಮುಖೇಶ್ ಖನ್ನಾ ಆಫೀಸ್‌ಗೆ ಬಂದು, ಶಕ್ತಿಮಾನ್ ಪಾತ್ರ ನೀಡುವಂತೆ ಮೂರು ಗಂಟೆಗಳ ಕಾಲ ಕಾಡಿ ಬೇಡಿದರೂ ಮುಖೇಶ್ ಒಪ್ಪಲಿಲ್ಲ’ ಎಂದು ಹರಿದಾಡುತ್ತಿರುವ ಸುದ್ದಿಯ ಬಗ್ಗೆ ಲಲಿತ್ ಪರಿಮೂ ಅವರಿಗೆ ಪ್ರಶ್ನೆ ಎದುರಾಯಿತು. ಇದಕ್ಕೆ ಉತ್ತರಿಸಿದ ಅವರು, ‘ನಾನು ಮುಖೇಶ್ ವಿರುದ್ಧ ಏನನ್ನೂ ಹೇಳಲು ಬಯಸುವುದಿಲ್ಲ. ಆದರೆ ಇವತ್ತಿನ ಕಾಲ ಪಬ್ಲಿಸಿಟಿ ಜಮಾನಾ. ಸಿನಿಮಾ ಅಥವಾ ಟಿವಿ ಶೋಗಳಿಗಾಗಿ ಜನ ಬೇಕಂತಲೇ ಇಂತಹ ಪಬ್ಲಿಸಿಟಿ ಗಿಮಿಕ್‌ಗಳನ್ನು ಮಾಡುತ್ತಾರೆ. ಜನಮನದಲ್ಲಿ ಸುದ್ದಿ ಸೃಷ್ಟಿಸಲು ಏನಾದರೊಂದು ಮಾಡಬೇಕಾಗುತ್ತದೆ. ಮುಖೇಶ್ ಖನ್ನಾ ಕೂಡ ಅದೇ ಹಾದಿಯಲ್ಲಿ ಯೋಚಿಸುತ್ತಿದ್ದಾರೆ ಅನ್ನಿಸುತ್ತಿದೆ’ ಎಂದಿದ್ದಾರೆ.

‘ಅಲ್ಲಿ ನಡೆದ ನಿಜವಾದ ಸತ್ಯ ಏನೆಂಬುದು ಯಾರಿಗೂ ಗೊತ್ತಿಲ್ಲ, ಅದನ್ನು ಕಾಲವೇ ನಿರ್ಧರಿಸಬೇಕು’ ಎಂದು ಲಲಿತ್ ಮಾರ್ಮಿಕವಾಗಿ ನುಡಿದಿದ್ದಾರೆ. ಇದೇ ವೇಳೆ ರಣವೀರ್ ಸಿಂಗ್ ಅವರ ನಟನೆಯನ್ನು ಲಲಿತ್ ಪರಿಮೂ ಮುಕ್ತಕಂಠದಿಂದ ಶ್ಲಾಘಿಸಿದ್ದಾರೆ. ಇತ್ತೀಚೆಗಷ್ಟೇ ಬಾಕ್ಸ್ ಆಫೀಸ್‌ನಲ್ಲಿ ಧೂಳೆಬ್ಬಿಸಿದ ‘ಧುರಂಧರ್’ ಸಿನಿಮಾದಲ್ಲಿ ರಣವೀರ್ ನಟನೆಯನ್ನು ಕೊಂಡಾಡಿದ ಅವರು, ‘ರಣವೀರ್ ಅದ್ಭುತ ನಟ, ಅವರಿಗೆ ಶಕ್ತಿಮಾನ್ ಪಾತ್ರವನ್ನು ನಿಭಾಯಿಸುವ ಎಲ್ಲಾ ಶಕ್ತಿ ಇದೆ’ ಎಂದಿದ್ದಾರೆ ಲಲಿತ್ ಪರಿಮೂ.

ಆದರೆ, ಟಿವಿ ಶೋ ನೀಡಿದ ಮ್ಯಾಜಿಕ್ ಅನ್ನು ಸಿನಿಮಾ ನೀಡಬಲ್ಲದೇ ಎಂಬ ಅನುಮಾನವನ್ನೂ ಲಲಿತ್ ಪರಿಮೂ ಅವರು ವ್ಯಕ್ತಪಡಿಸಿದ್ದಾರೆ. ‘ಶಕ್ತಿಮಾನ್ 350 ಎಪಿಸೋಡ್‌ಗಳಲ್ಲಿ ಸಾಕಷ್ಟು ಕಥೆಯನ್ನು ಹೇಳಿದೆ. ಇಂದಿನ ಜನರೇಷನ್ ಸೂಪರ್ ಹೀರೋ ಸಿನಿಮಾವನ್ನು ಅಂತಾರಾಷ್ಟ್ರೀಯ ಗುಣಮಟ್ಟದಲ್ಲಿ ನಿರೀಕ್ಷಿಸುತ್ತದೆ. ತಾಂತ್ರಿಕವಾಗಿ ಸಿನಿಮಾ ಅತಿ ಉನ್ನತ ಮಟ್ಟದಲ್ಲಿ ಮೂಡಿಬರದಿದ್ದರೆ, ಹಳೆಯ ಮ್ಯಾಜಿಕ್ ಮರುಸೃಷ್ಟಿಸುವುದು ಕಷ್ಟ’ ಎಂದು ಅಭಿಪ್ರಾಯಪಟ್ಟಿದ್ದಾರೆ.

ಇದನ್ನೂ ಓದಿ: ಹುಡುಗಿ ಸಿಕ್ಕರೆ ಮದುವೆ ಆಗ್ತೀನಿ: 67ನೇ ವಯಸ್ಸಿನಲ್ಲಿ ಆಸೆ ತಿಳಿಸಿದ ‘ಶಕ್ತಿಮಾನ್’ ನಟ ಮುಕೇಶ್ ಖನ್ನಾ

ಈ ಹಿಂದೆ ಮುಖೇಶ್ ಖನ್ನಾ ಯೂಟ್ಯೂಬ್ ಸಂದರ್ಶನವೊಂದರಲ್ಲಿ ರಣವೀರ್ ಸಿಂಗ್ ವಿರುದ್ಧ ಕಿಡಿಕಾರಿದ್ದರು. ‘ಆ ಪಾಪದ ಹುಡುಗ ರಣವೀರ್ ನನ್ನ ಎದುರು ಮೂರು ಗಂಟೆ ಕುಳಿತಿದ್ದ ಎಂಬುದು ನಿಜ. ಆದರೆ ಆತನ ಮುಖದಲ್ಲಿ ಶಕ್ತಿಮಾನ್ ಪಾತ್ರಕ್ಕೆ ಬೇಕಾದ ತೇಜಸ್ಸು ಇಲ್ಲ. ಆತನನ್ನು ನೋಡಿದರೆ ಯಾರನ್ನೋ ಮೋಸ ಮಾಡುವ ಚಂಚಲ ಸ್ವಭಾವದವನಂತೆ ಕಾಣುತ್ತಾನೆ. ಬೇಕಿದ್ದರೆ ಆತ ವಿಲನ್ ಪಾತ್ರ ಮಾಡಲಿ, ಶಕ್ತಿಮಾನ್ ಆಗಲು ಸಾಧ್ಯವಿಲ್ಲ’ ಎಂದು ಖಡಾಖಂಡಿತವಾಗಿ ಹೇಳಿದ್ದರು.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Source link

Karnataka Weather Forecast: ಕರಾವಳಿಯಲ್ಲಿ ಅಬ್ಬರಿಸಲಿರುವ ವರುಣ, ಮೂರು ಜಿಲ್ಲೆಗಳಿಗೆ ಆರೆಂಜ್ ಅಲರ್ಟ್! – Kannada News

ಕರಾವಳಿಯಲ್ಲಿ ಅಬ್ಬರಿಸಲಿರುವ ವರುಣ, ಮೂರು ಜಿಲ್ಲೆಗಳಿಗೆ ಆರೆಂಜ್ ಅಲರ್ಟ್!

ಬೆಂಗಳೂರು, ಜೂನ್ 07: ರಾಜ್ಯದಲ್ಲಿ ಮುಂಗಾರು ಮಳೆ (Weather) ಚುರುಕುಗೊಂಡಿದ್ದು, ಮುಂದಿನ ಕೆಲವು ದಿನಗಳ ಕಾಲ ವಿವಿಧ ಜಿಲ್ಲೆಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ವಿಶೇಷವಾಗಿ ಕರಾವಳಿ ಕರ್ನಾಟಕ ಮತ್ತು ಉತ್ತರ ಒಳನಾಡಿನ ಹಲವು ಭಾಗಗಳಲ್ಲಿ ಬಿರುಗಾಳಿ ಸಹಿತ ಭಾರಿ ಮಳೆಯಾಗುವ ಮುನ್ನೆಚ್ಚರಿಕೆ ನೀಡಲಾಗಿದೆ.

ಮುಖ್ಯಾಂಶಗಳು

  • ಕರ್ನಾಟಕದ ಕರಾವಳಿ ಜಿಲ್ಲೆಗಳಿಗೆ ಹವಾಮಾನ ಇಲಾಖೆಯಿಂದ ಆರೆಂಜ್ ಅಲರ್ಟ್ ಘೋಷಿಸಲಾಗಿದೆ.
  • ರಾಜ್ಯದ ಒಟ್ಟು ಹತ್ತು ಜಿಲ್ಲೆಗಳಲ್ಲಿ ಭಾರಿ ಮಳೆಯ ಯೆಲ್ಲೋ ಅಲರ್ಟ್ ನೀಡಲಾಗಿದೆ.
  • ಉತ್ತರ ಒಳನಾಡಿನಲ್ಲಿ ಬಿರುಗಾಳಿ ಸಹಿತ ಹಗುರದಿಂದ ಸಾಧಾರಣ ಮಳೆಯ ಮುನ್ಸೂಚನೆ ಇದೆ.

ರಾವಳಿಗೆ ‘ಆರೆಂಜ್ ಅಲರ್ಟ್’ ಭೀತಿ

ಕರಾವಳಿ ಕರ್ನಾಟಕದ ಜಿಲ್ಲೆಗಳಲ್ಲಿ ವರುಣನ ಆರ್ಭಟ ಜೋರಾಗಿರಲಿದೆ. ಉತ್ತರ ಕನ್ನಡ, ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳ ಕೆಲವು ಪ್ರದೇಶಗಳಲ್ಲಿ ಭಾರಿ ಇಂದ ಅತಿ ಭಾರಿ ಮಳೆ ಹಾಗೂ ಗುಡುಗು ಸಹಿತ ಗಾಳಿ ಬೀಸುವ ಸಾಧ್ಯತೆಯಿದೆ. ಈ ಅವಧಿಯಲ್ಲಿ ಗಂಟೆಗೆ 30 ರಿಂದ 40 ಕಿಲೋಮೀಟರ್ ವೇಗದಲ್ಲಿ ನಿರಂತರ ಬಲವಾದ ಗಾಳಿ ಬೀಸಬಹುದು. ಈ ಹಿನ್ನೆಲೆಯಲ್ಲಿ ಹವಾಮಾನ ಇಲಾಖೆಯು ಈ ಮೂರು ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಘೋಷಿಸಿದೆ.

10 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್

ರಾಜ್ಯದ ಒಟ್ಟು 10 ಜಿಲ್ಲೆಗಳಲ್ಲಿ ಹವಾಮಾನ ಇಲಾಖೆಯು ಯೆಲ್ಲೋ ಅಲರ್ಟ್ ಜಾರಿಗೊಳಿಸಿದೆ. ಬೆಳಗಾವಿ, ಧಾರವಾಡ, ಹಾವೇರಿ, ಗದಗ, ಕೊಪ್ಪಳ, ರಾಯಚೂರು ಸೇರಿದಂತೆ ಮಲೆನಾಡು ಹಾಗೂ ದಕ್ಷಿಣ ಒಳನಾಡಿನ ಚಿಕ್ಕಮಗಳೂರು, ಹಾಸನ, ಕೊಡಗು ಮತ್ತು ಶಿವಮೊಗ್ಗ ಜಿಲ್ಲೆಗಳಲ್ಲಿ ಭಾರಿ ಮಳೆಯಾಗುವ ಮುನ್ಸೂಚನೆ ಇರುವುದರಿಂದ ಸಾರ್ವಜನಿಕರು ಹಾಗೂ ರೈತರು ಅಗತ್ಯ ಮುನ್ನೆಚ್ಚರಿಕೆ ವಹಿಸುವಂತೆ ಸೂಚಿಸಲಾಗಿದೆ. ಬಿರುಗಾಳಿ ಮತ್ತು ಗುಡುಗಿನ ಸಂದರ್ಭದಲ್ಲಿ ಸುರಕ್ಷಿತ ಸ್ಥಳಗಳಲ್ಲಿ ಆಶ್ರಯ ಪಡೆಯಲು ಕೋರಲಾಗಿದೆ.

ಉತ್ತರ ಒಳನಾಡಿನಲ್ಲಿ ಗುಡುಗು ಸಹಿತ ಮಳೆ

ಉತ್ತರ ಒಳನಾಡಿನ ಜಿಲ್ಲೆಗಳಲ್ಲೂ ಮಳೆಯ ಪ್ರಭಾವ ಹೆಚ್ಚಿರಲಿದೆ. ಧಾರವಾಡ, ಗದಗ, ಹಾವೇರಿ, ಕೊಪ್ಪಳ, ರಾಯಚೂರು ಮತ್ತು ಬೆಳಗಾವಿ ಜಿಲ್ಲೆಗಳ ಒಂದೆರಡು ಕಡೆಗಳಲ್ಲಿ ಗಂಟೆಗೆ 40 ರಿಂದ 50 ಕಿಲೋಮೀಟರ್ ವೇಗದ ಬಲವಾದ ಬಿರುಗಾಳಿಯೊಂದಿಗೆ ಭಾರಿ ಮಳೆಯಾಗುವ ಸಾಧ್ಯತೆಯಿದೆ. ಉಳಿದಂತೆ ಬಾಗಲಕೋಟೆ, ಬೀದರ್, ಕಲಬುರಗಿ, ವಿಜಯಪುರ ಮತ್ತು ಯಾದಗಿರಿ ಜಿಲ್ಲೆಗಳ ಅನೇಕ ಕಡೆಗಳಲ್ಲಿ ಬಿರುಗಾಳಿ ಸಹಿತ ಹಗುರದಿಂದ ಸಾಧಾರಣ ಮಳೆಯಾಗುವ ನಿರೀಕ್ಷೆಯಿದೆ

ಕರ್ನಾಟಕದ ಮತ್ತಷ್ಟು ಸುದ್ದಿ ಓದಲು ಇಲ್ಲಿ ಕ್ಲಿಕ್​​ ಮಾಡಿ.

Source link

K Annamalai: ಬಿಜೆಪಿ ತೊರೆದ 24 ಗಂಟೆಗಳಲ್ಲೇ ಅಣ್ಣಾಮಲೈ ಅವರ ಹೊಸ ಆಂದೋಲನಕ್ಕೆ 14 ಲಕ್ಷ ಜನರ ಸೇರ್ಪಡೆ – Kannada News

ಚೆನ್ನೈ, ಜೂನ್ 07: ತಮಿಳುನಾಡು(Tamil Nadu) ರಾಜಕೀಯ ಇತಿಹಾಸದಲ್ಲೇ ಹಿಂದೆಂದೂ ಕಾಣದ ಅದ್ಭುತ ಮತ್ತು ಭರವಸೆಯ ಜನಬೆಂಬಲವೊಂದು ಯುವ ನಾಯಕ ಕೆ. ಅಣ್ಣಾಮಲೈ(K Annamalai) ಅವರಿಗೆ ವ್ಯಕ್ತವಾಗಿದೆ. ಜೂನ್ 5 ರ ಶುಕ್ರವಾರದಂದು ಬಿಜೆಪಿಗೆ ಸೌಹಾರ್ದಯುತವಾಗಿ ರಾಜೀನಾಮೆ ನೀಡಿದ ಕೇವಲ 24 ಗಂಟೆಗಳ ಅವಧಿಯಲ್ಲಿ, ಅಣ್ಣಾಮಲೈ ಅವರು ಆರಂಭಿಸಿರುವ ಹೊಸ ರಾಜಕೀಯ ಆಂದೋಲನಕ್ಕೆ ಬರೋಬ್ಬರಿ 13,85,763 (ಸುಮಾರು 14 ಲಕ್ಷ) ನಾಗರಿಕರು ಸಕ್ರಿಯ ಸದಸ್ಯರಾಗಿ ಸೇರ್ಪಡೆಗೊಳ್ಳುವ ಮೂಲಕ ಭರ್ಜರಿ ಮುನ್ನುಡಿ ಬರೆದಿದ್ದಾರೆ.

ಯುವಕರು ಮತ್ತು ಸಾಮಾನ್ಯ ನಾಗರಿಕರು ಸ್ವಯಂಪ್ರೇರಿತವಾಗಿ ಹರಿದುಬರುತ್ತಿರುವುದು ದಕ್ಷಿಣ ಭಾರತದ ರಾಜಕಾರಣದಲ್ಲಿ ಹೊಸ ಪ್ರಜಾಪ್ರಭುತ್ವದ ಅಲೆಯ ಸಂಕೇತವಾಗಿ ಹೊರಹೊಮ್ಮಿದೆ.

ಸೌಹಾರ್ದಯುತ ನಿರ್ಗಮನ ಮತ್ತು ಹೊಸ ದೃಷ್ಟಿಕೋನ
ಕಳೆದ 18 ತಿಂಗಳಿನಿಂದ ತಮಿಳುನಾಡಿನ ಸಾಂಸ್ಕೃತಿಕ ಹಾಗೂ ಪ್ರಗತಿಪರ ರಾಜಕೀಯದ ಕುರಿತು ಹೈಕಮಾಂಡ್​ನೊಂದಿಗೆ ಚರ್ಚಿಸಿದ್ದ ಅಣ್ಣಾಮಲೈ, ಉನ್ನತ ನಾಯಕತ್ವಕ್ಕೆ ಯಾವುದೇ ಹೊರೆಯಾಗಬಾರದೆಂಬ ಕಾರಣಕ್ಕೆ ಮುಕ್ತವಾಗಿ ಹೊರಬಂದಿದ್ದಾರೆ. ರಾಜೀನಾಮೆಯನ್ನು ರಾಷ್ಟ್ರೀಯ ಅಧ್ಯಕ್ಷ ನಿತಿನ್ ನಬಿನ್ ಗೌರವಯುತವಾಗಿ ಅಂಗೀಕರಿಸಿದ್ದಾರೆ.

ತಮಿಳುನಾಡಿನ ಸರ್ವತೋಮುಖ ಬೆಳವಣಿಗೆ ಮತ್ತು ಸಾಂಸ್ಕೃತಿಕ ಬೇರುಗಳನ್ನು ಗಟ್ಟಿಗೊಳಿಸುವ ನನ್ನ ಆಲೋಚನೆಗಳಿಗಾಗಿ ಈ ಹೆಜ್ಜೆ ಇಟ್ಟಿದ್ದೇನೆ. ಉನ್ನತ ನಾಯಕರೊಂದಿಗೆ ಸಮಾಲೋಚಿಸಿಯೇ ಸೌಹಾರ್ದಯುತವಾಗಿ ಈ ಸ್ವತಂತ್ರ ಹಾದಿಯನ್ನು ಆಯ್ದುಕೊಂಡಿದ್ದೇನೆ ಎಂದು ಅಣ್ಣಾಮಲೈ ಹೇಳಿದ್ದಾರೆ.

ಮತ್ತಷ್ಟು ಓದಿ: ಬಿಜೆಪಿಗೆ ರಾಜೀನಾಮೆ ನೀಡಿ ಬಂದ ಅಣ್ಣಾಮಲೈಗೆ ಭರ್ಜರಿ ಸ್ವಾಗತ, ಫ್ಯಾನ್ಸ್ ಹರ್ಷೋದ್ಘಾರ ಹೇಗಿದೆ ನೋಡಿ

ಅಣ್ಣಾಮಲೈ ಅವರ ಕರೆಗೆ ಸಿಕ್ಕ ಅಭೂತಪೂರ್ವ ಸ್ಪಂದನೆಯಿಂದಾಗಿ ಅವರ ಆಂದೋಲನದ ಅಧಿಕೃತ ವೆಬ್‌ಸೈಟ್‌ನಲ್ಲಿ ಕೇವಲ ಒಂದು ದಿನದಲ್ಲಿ 14 ಲಕ್ಷಕ್ಕೂ ಹೆಚ್ಚು ಜನ ನೋಂದಾಯಿಸಿಕೊಂಡಿದ್ದಾರೆ. ಸ್ವಯಂಸೇವಕರೇ ನಮ್ಮ ಜೀವಾಳ. ಶಿಕ್ಷಣ, ಆರೋಗ್ಯ, ಪರಿಸರ ಮತ್ತು ಯುವ ನಾಯಕತ್ವದ ಮೂಲಕ ತಳಮಟ್ಟದಲ್ಲಿ ನಿಜವಾದ ಬದಲಾವಣೆ ತರುವುದು ನಮ್ಮ ಗುರಿ ಎಂದು ವೆಬ್‌ಸೈಟ್ ಸಂದೇಶ ಸಾರಿದೆ.

ಮುಂದಿನ ಗುರಿ: ತಮಿಳುನಾಡಿನಲ್ಲಿ ಹೊಸ ನಾಯಕತ್ವದ ಉದಯ
ವಂಶಪಾರಂಪರ್ಯ ಮತ್ತು ಗಣ್ಯರ ರಾಜಕಾರಣಕ್ಕೆ ಮುಕ್ತಿ ಹಾಡಿ, ಶಾಶ್ವತ ಶಾಸಕರು ಮತ್ತು ಸಂಸದರ ಸಂಸ್ಕೃತಿಯನ್ನು ಕೊನೆಗೊಳಿಸುವುದಾಗಿ ಅಣ್ಣಾಮಲೈ ವಿಶ್ವಾಸ ವ್ಯಕ್ತಪಡಿಸಿದ್ದಾರೆ. ತಮಿಳುನಾಡಿನ ಮುಂದಿನ ಲೋಕಸಭಾ ಚುನಾವಣೆಯಲ್ಲಿ ತಮ್ಮ ಆಂದೋಲನವು ಸಕ್ರಿಯವಾಗಿ ಸ್ಪರ್ಧಿಸಲಿದ್ದು, ಜನಸಾಮಾನ್ಯರ ಮನೆಯ ಮಕ್ಕಳಿಗೆ ನಾಯಕತ್ವದ ಹಕ್ಕು ಸಿಗಲಿದೆ ಎಂದು ಭರವಸೆ ನೀಡಿದ್ದಾರೆ.

ರಾಜಕೀಯವು ಕೇವಲ ಆಯ್ದ ಕೆಲವರಿಗಷ್ಟೇ ಸೀಮಿತವಲ್ಲ, ಅದು ಸಾಮಾನ್ಯ ನಾಗರಿಕರ ಶಕ್ತಿ ಎಂಬುದನ್ನು ಸಾಬೀತುಪಡಿಸಲು ನನ್ನೊಂದಿಗೆ ಕೈಜೋಡಿಸಿ ಎಂಬ ಅವರ ಆಶಾವಾದಿ ಕರೆಗೆ ಇಡೀ ತಮಿಳುನಾಡು ಅತ್ಯಂತ ಸಕಾರಾತ್ಮಕವಾಗಿ ಸ್ಪಂದಿಸಿದ್ದು, ಭವಿಷ್ಯದ ಪೀಳಿಗೆಗೆ ಭದ್ರ ಬುನಾದಿ ಸಿಕ್ಕಂತಾಗಿದೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Source link

Horoscope Today: ಇಂದು ಈ ರಾಶಿಯವರು ಅನುಮಾನಗಳನ್ನು ಬದಿಗಿಟ್ಟರೆ ಶುಭ

ಟಿವಿ9 ಡಿಜಿಟಲ್ ವಾಹಿನಿಯಲ್ಲಿ ಖ್ಯಾತ ಜ್ಯೋತಿಷಿ ಡಾ. ಬಸವರಾಜ ಗುರೂಜಿ ಅವರು 2026ರ ಜೂನ್ 07, ಭಾನುವಾರದ ದೈನಂದಿನ ರಾಶಿ ಭವಿಷ್ಯವನ್ನು ಪ್ರಸ್ತುತಪಡಿಸಿದ್ದಾರೆ. ಈ ದಿನ ಪರಾಭವ ನಾಮ ಸಂವತ್ಸರ, ಅಧಿಕ ಜೇಷ್ಠ ಮಾಸದಲ್ಲಿ, ಕುಂಭ ರಾಶಿಯ ಶತಭಿಷಾ ನಕ್ಷತ್ರದಲ್ಲಿ ಚಂದ್ರ ಸಂಚಾರ ಮಾಡಲಿರುವ ಈ ದಿನ, ಸೂರ್ಯ ನಮಸ್ಕಾರಕ್ಕೆ ಹೆಚ್ಚಿನ ಮಹತ್ವವಿದೆ ಎಂದು ಗುರೂಜಿ ತಿಳಿಸಿದ್ದಾರೆ. ಇದು ವಿಶ್ವ ಆಹಾರ ಸುರಕ್ಷತಾ ದಿನ ಕೂಡ ಆಗಿದ್ದು, ಮಿತ ಆಹಾರ ಮತ್ತು ಹಸಿದವರಿಗೆ ಅನ್ನ ನೀಡುವ ಮಹತ್ವವನ್ನು ಒತ್ತಿಹೇಳಲಾಗಿದೆ.

 

 

 

Source link

Vastu Guidelines: ಮನೆಗೆ ಅತಿಥಿಗಳು ಬಂದರೆ ಅವರ ರೂಂ ಯಾವ ದಿಕ್ಕಿನಲ್ಲಿ ಇರಬೇಕು? ವಾಸ್ತು ಸಲಹೆ ಇಲ್ಲಿದೆ – Kannada News

ಅತಿಥಿಗಳು ಮನೆಗೆ ಬಂದಾಗ ಅವರಿಗೆ ಸೂಕ್ತವಾದ ಸ್ಥಳಾವಕಾಶ ಕಲ್ಪಿಸುವುದು ಭಾರತೀಯ ಸಂಸ್ಕೃತಿಯಲ್ಲಿ ಅತಿಥಿ ದೇವೋಭವ ಎಂಬ ನಂಬಿಕೆಯ ಭಾಗವಾಗಿದೆ. ಆದರೆ, ವಾಸ್ತು ಶಾಸ್ತ್ರದ ಪ್ರಕಾರ, ಅತಿಥಿ ಕೋಣೆಯನ್ನು ಯಾವ ದಿಕ್ಕಿನಲ್ಲಿ ನಿರ್ಮಿಸಬೇಕು ಎಂಬುದು ಬಹಳ ಮುಖ್ಯವಾದ ಅಂಶವಾಗಿದೆ. ಇದು ಮನೆಯ ವಾತಾವರಣ ಮತ್ತು ಅಲ್ಲಿ ವಾಸಿಸುವವರ ಮೇಲೆ ನೇರ ಪರಿಣಾಮ ಬೀರುತ್ತದೆ. ಈ ಬಗ್ಗೆ ಖ್ಯಾತ ಜ್ಯೋತಿಷಿ ಮತ್ತು ವಾಸ್ತು ಶಾಸ್ತ್ರಜ್ಞರಾದ ಡಾ. ಬಸವರಾಜ್ ಗುರೂಜಿಯವರು ತಮ್ಮ ನಿತ್ಯಭಕ್ತಿ ಕಾರ್ಯಕ್ರಮದಲ್ಲಿ ನೀಡಿರುವ ಮಾಹಿತಿ ಇಲ್ಲಿದೆ.

ವಾಸ್ತು ತತ್ವಗಳ ಪ್ರಕಾರ, ಮನೆಯ ಪ್ರತಿಯೊಂದು ದಿಕ್ಕು ನಿರ್ದಿಷ್ಟ ಶಕ್ತಿಯನ್ನು ಹೊಂದಿದೆ. ಅತಿಥಿ ಕೋಣೆಗೆ ಕೆಲವು ದಿಕ್ಕುಗಳು ಸಂಪೂರ್ಣವಾಗಿ ಅಶುಭಕರವೆಂದು ಪರಿಗಣಿಸಲಾಗುತ್ತದೆ. ಉದಾಹರಣೆಗೆ, ಆಗ್ನೇಯ ದಿಕ್ಕಿನಲ್ಲಿ ಅತಿಥಿ ಕೋಣೆ ಇರುವುದು ಅಪಾಯಕಾರಿ. ಈ ದಿಕ್ಕಿನಲ್ಲಿ ಅತಿಥಿ ಕೋಣೆ ಇದ್ದರೆ, ಬಂದು ಹೋಗುವ ಅತಿಥಿಗಳು ಶತ್ರುಗಳಾಗುವ ಸಾಧ್ಯತೆ ಇರುತ್ತದೆ, ಇದರಿಂದ ಮನೆಯ ಸದಸ್ಯರೊಂದಿಗೆ ವೈರತ್ವ ಬೆಳೆಯಬಹುದು. ಇದು ಭವಿಷ್ಯದಲ್ಲಿ ಅನಿರೀಕ್ಷಿತ ಸಮಸ್ಯೆಗಳಿಗೆ ಕಾರಣವಾಗಬಹುದು. ಆದ್ದರಿಂದ, ಆಗ್ನೇಯ ದಿಕ್ಕಿನಲ್ಲಿ ಅತಿಥಿ ಕೋಣೆಯನ್ನು ತಪ್ಪಿಸುವುದು ಉತ್ತಮ.

ಇನ್ನು, ಈಶಾನ್ಯ ದಿಕ್ಕು ದೈವಿಕ ಶಕ್ತಿಯನ್ನು ಆಕರ್ಷಿಸುವ ಪವಿತ್ರ ಸ್ಥಳವಾಗಿದೆ. ಈಶಾನ್ಯ ಮೂಲೆಯಲ್ಲಿ ಅತಿಥಿ ಕೋಣೆ ನಿರ್ಮಿಸಿದರೆ, ಅದು ಮನೆಯಲ್ಲಿ ದೈವಾಂಶವನ್ನು ಕಡಿಮೆ ಮಾಡಿ ಅಶಾಂತಿ, ಕೋಪ ಮತ್ತು ಮನಸ್ತಾಪಗಳಿಗೆ ದಾರಿ ಮಾಡಿಕೊಡುತ್ತದೆ. ಆದ್ದರಿಂದ, ಈಶಾನ್ಯ ದಿಕ್ಕನ್ನು ಅತಿಥಿ ಕೋಣೆಗೆ ಸೂಕ್ತವಲ್ಲ ಎಂದು ವಾಸ್ತು ತಜ್ಞರು ಹೇಳುತ್ತಾರೆ. ಮಕ್ಕಳು ಈಶಾನ್ಯ ಮೂಲೆಯಲ್ಲಿ ಇರುವುದು ಉತ್ತಮ ಎಂದು ಸಲಹೆ ನೀಡಲಾಗಿದೆ.

ಮೂರನೆಯದಾಗಿ, ನೈರುತ್ಯ ದಿಕ್ಕು ಮನೆಯ ಯಜಮಾನನ ಸ್ಥಾನವಾಗಿದೆ. ಈ ದಿಕ್ಕು ಮನೆಯಲ್ಲಿ ಸ್ಥಿರತೆ, ಅಧಿಕಾರ ಮತ್ತು ಸಂಪತ್ತನ್ನು ಸೂಚಿಸುತ್ತದೆ. ನೈರುತ್ಯದಲ್ಲಿ ಅತಿಥಿ ಕೋಣೆ ನಿರ್ಮಿಸಿದರೆ, ಅದು ಮನೆಯ ಯಜಮಾನನ ಸ್ಥಾನಮಾನಕ್ಕೆ ಧಕ್ಕೆ ತರುತ್ತದೆ. ಇದರಿಂದ ಸಂಪತ್ತು ನಾಶ, ಖರ್ಚುಗಳು ಹೆಚ್ಚಾಗುವುದು, ಸಾಲ ಹೆಚ್ಚಾಗುವುದು, ಮನಸ್ತಾಪಗಳು ಉಂಟಾಗುವುದು ಮತ್ತು ಮನೆಯ ಯಜಮಾನನೇ ಮನೆಯನ್ನು ಬಿಟ್ಟು ಹೋಗುವ ಪರಿಸ್ಥಿತಿ ನಿರ್ಮಾಣವಾಗಬಹುದು. ಆದ್ದರಿಂದ, ನೈರುತ್ಯ ದಿಕ್ಕಿನಲ್ಲಿ ಅತಿಥಿ ಕೋಣೆಯನ್ನು ಮಾಡುವುದನ್ನು ಕಟ್ಟುನಿಟ್ಟಾಗಿ ನಿಷೇಧಿಸಲಾಗಿದೆ.

ಇದನ್ನೂ ಓದಿ: ಅನುಷ್ಕಾ ಶರ್ಮಾ ಕತ್ತಿನಲ್ಲಿರುವ ತುಳಸಿ ಮಾಲೆ ಗಮನಿಸಿದ್ದೀರಾ? ಧರಿಸುವುದರ ಹಿಂದಿನ ಅಸಲಿ ಕಾರಣ ಇಲ್ಲಿದೆ

ಅತಿಥಿ ಕೋಣೆಗೆ ಅತ್ಯಂತ ಶುಭಕರವಾದ ದಿಕ್ಕು ವಾಯುವ್ಯ (Northwest) ಮೂಲೆಯಾಗಿದೆ. ಈ ದಿಕ್ಕಿನಲ್ಲಿ ಅತಿಥಿ ಕೋಣೆಯನ್ನು ನಿರ್ಮಿಸುವುದು ಅತಿಥಿಗಳಿಗೆ ಮತ್ತು ಮನೆಯ ಸದಸ್ಯರಿಗೆ ಶುಭವನ್ನು ತರುತ್ತದೆ. ವಾಯುವ್ಯ ದಿಕ್ಕು ಸಂಚಾರ ಮತ್ತು ಚಲನೆಯೊಂದಿಗೆ ಸಂಬಂಧಿಸಿದೆ, ಇದು ಅತಿಥಿಗಳು ಬಂದಾಗ ಆರಾಮವಾಗಿ ತಂಗಲು ಮತ್ತು ಅವರ ಪ್ರವಾಸದ ನಂತರ ಸುಗಮವಾಗಿ ಮರಳಲು ಅನುವು ಮಾಡಿಕೊಡುತ್ತದೆ.

ವಾಯುವ್ಯದಲ್ಲಿ ಅತಿಥಿ ಕೋಣೆಯನ್ನು ಸಿದ್ಧಪಡಿಸುವಾಗ, ಕೆಲವು ವಾಸ್ತು ನಿಯಮಗಳನ್ನು ಪಾಲಿಸಬೇಕು. ಹಾಸಿಗೆಯನ್ನು ದಕ್ಷಿಣಕ್ಕೆ ತಲೆ ಮತ್ತು ಉತ್ತರಕ್ಕೆ ಕಾಲುಗಳು ಬರುವಂತೆ ಇಡಬೇಕು. ಅತಿಥಿ ಕೋಣೆಯೊಳಗೆ ಟಿ.ವಿ.ಯನ್ನು ಆಗ್ನೇಯ ದಿಕ್ಕಿನಲ್ಲಿ ಇಡುವುದು ಉತ್ತಮ. ಕೋಣೆಗೆ ತಿಳಿ ನೀಲಿ ಅಥವಾ ಬಿಳಿ ಬಣ್ಣಗಳನ್ನು ಬಳಸುವುದು ಹೆಚ್ಚು ಸೂಕ್ತ. ಹಸಿರು, ಹಳದಿ ಅಥವಾ ಕೆಂಪು ಬಣ್ಣಗಳನ್ನು ಅತಿಥಿ ಕೋಣೆಗೆ ಬಳಸುವುದನ್ನು ತಪ್ಪಿಸಬೇಕು. ಅತಿಥಿ ಕೋಣೆಯಲ್ಲಿ ಹೆಚ್ಚು ವಸ್ತುಗಳನ್ನು ಇಡಬಾರದು, ಸರಳ ಮತ್ತು ಸ್ವಚ್ಛ ವಾತಾವರಣವನ್ನು ಕಾಪಾಡಿಕೊಳ್ಳುವುದು ಅಗತ್ಯ. ಈ ವಾಸ್ತು ನಿಯಮಗಳನ್ನು ಪಾಲಿಸುವುದರಿಂದ ಅತಿಥಿಗಳು ಆರಾಮವಾಗಿ ನೆಲೆಸಿ ಸಂತೋಷದಿಂದ ಮರಳುತ್ತಾರೆ, ಜೊತೆಗೆ ಮನೆಯಲ್ಲಿಯೂ ಸಕಾರಾತ್ಮಕ ಶಕ್ತಿಯ ಹರಿವು ಹೆಚ್ಚುತ್ತದೆ ಎಂದು ಗುರೂಜಿ ಸಲಹೆ ನೀಡಿದ್ದಾರೆ.

ಮತ್ತಷ್ಟು ಆಧ್ಯಾತ್ಮಿಕ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

ಮೆಗಾಸ್ಟಾರ್ ಚಿರಂಜೀವಿ ನಟನೆಯ ಹೊಸ ಸಿನಿಮಾದಲ್ಲಿ ಡಿಂಪಲ್ ಕ್ವೀನ್ ರಚಿತಾ ರಾಮ್? – Kannada News

‘ಮೆಗಾಸ್ಟಾರ್’ ಚಿರಂಜೀವಿ (Megastar Chiranjeevi) ಹಾಗೂ ನಿರ್ದೇಶಕ ಬಾಬಿ ಕಾಂಬಿನೇಷನ್‌ನ ಬಹುನಿರೀಕ್ಷಿತ ‘ಮೆಗಾ 158’ (Mega 158) ಚಿತ್ರದ ಬಗ್ಗೆ ದಿನಕ್ಕೊಂದು ಹೊಸ ಅಪ್‌ಡೇಟ್‌ಗಳು ಹೊರಬರುತ್ತಿದ್ದು, ಸಿನಿಪ್ರೇಕ್ಷಕರಲ್ಲಿ ಕುತೂಹಲ ದುಪ್ಪಟ್ಟಾಗಿದೆ. ‘ವಾಲ್ಟೇರ್ ವೀರಯ್ಯ’ ಚಿತ್ರದ ಭರ್ಜರಿ ಯಶಸ್ಸಿನ ಬಳಿಕ ಈ ಜೋಡಿ ಮತ್ತೊಮ್ಮೆ ಒಂದಾಗಿದ್ದು, ಸದ್ಯ ತಮಿಳುನಾಡಿನ ಪ್ರಕೃತಿ ರಮಣೀಯ ತಾಣ ಪೊಳ್ಳಾಚಿಯಲ್ಲಿ ಚಿತ್ರೀಕರಣ ಬಿರುಸಿನಿಂದ ಸಾಗುತ್ತಿದೆ. ಈ ಸಿನಿಮಾದಲ್ಲಿ ರಚಿತಾ ರಾಮ್ (Rachita Ram) ನಟಿಸುತ್ತಾರೆ ಎಂಬ ಮಾಹಿತಿ ಕೇಳಿಬರುತ್ತಿದೆ.

ಈಗಾಗಲೇ ಮಲ್ಟಿಸ್ಟಾರರ್ ಸಿನಿಮಾದಂತೆ ಕಾಣಿಸುತ್ತಿರುವ ಈ ಬಿಗ್ ಬಜೆಟ್ ಚಿತ್ರಕ್ಕೆ ಈಗ ಕನ್ನಡದ ಖ್ಯಾತ ನಟಿ, ಡಿಂಪಲ್ ಕ್ವೀನ್ ರಚಿತಾ ರಾಮ್ ಎಂಟ್ರಿ ಕೊಟ್ಟಿದ್ದಾರೆ ಎಂಬ ಬಿಸಿಬಿಸಿ ಸುದ್ದಿ ಟಾಲಿವುಡ್ ಅಂಗಳದಲ್ಲಿ ಜೋರಾಗಿ ಹರಿದಾಡುತ್ತಿದೆ. ರಜನಿಕಾಂತ್ ನಟನೆಯ ‘ಕೂಲಿ’ ಚಿತ್ರದ ನೆಗೆಟಿವ್ ಶೆಡ್ ಪಾತ್ರದ ಮೂಲಕ ಧೂಳೆಬ್ಬಿಸಿದ್ದ ರಚಿತಾ ರಾಮ್, ಈಗ ಮೆಗಾಸ್ಟಾರ್ ಚಿತ್ರದಲ್ಲಿ ಅತ್ಯಂತ ಪ್ರಮುಖ ಹಾಗೂ ಬಲಿಷ್ಠ ಪಾತ್ರವೊಂದನ್ನು ಪೋಷಿಸಲಿದ್ದಾರೆ ಎನ್ನಲಾಗಿದೆ.

ಮೂಲಗಳ ಪ್ರಕಾರ, ಈ ವಿಶಿಷ್ಟ ಪಾತ್ರಕ್ಕಾಗಿ ಮೊದಲು ಮಲಯಾಳಂ ಮೂಲದ ನಟಿ ಹನಿ ರೋಸ್ ಅವರನ್ನು ಚಿತ್ರತಂಡ ಸಂಪರ್ಕಿಸಿತ್ತು. ಅವರು ಆರಂಭದಲ್ಲಿ ಆಸಕ್ತಿ ತೋರಿಸಿದರೂ, ಡೇಟ್ಸ್ ಹೊಂದಾಣಿಕೆಯಾಗದ ಕಾರಣ ಚಿತ್ರದಿಂದ ಹೊರನಡೆದಿದ್ದಾರೆ ಎನ್ನಲಾಗಿದೆ. ಇದೀಗ ಆ ಜಾಗಕ್ಕೆ ರಚಿತಾ ರಾಮ್ ಅವರನ್ನು ಕರೆತರಲಾಗಿದ್ದು, ಶೀಘ್ರದಲ್ಲೇ ಅವರು ಪೊಳ್ಳಾಚಿ ಶೆಡ್ಯೂಲ್‌ನಲ್ಲಿ ಚಿತ್ರತಂಡವನ್ನು ಸೇರಿಕೊಳ್ಳಲಿದ್ದಾರೆ ಎಂಬ ಗಾಸಿಪ್ ಹಬ್ಬಿದೆ.

ನಿರ್ದೇಶಕ ಬಾಬಿ ಈ ಬಾರಿ ಕೇವಲ ಆ್ಯಕ್ಷನ್ ಮಾತ್ರವಲ್ಲದೆ, ಕಥೆಯಲ್ಲಿ ನಾಯಕಿಯರ ಪಾತ್ರಗಳಿಗೂ ಅಷ್ಟೇ ತೂಕ ನೀಡಿದ್ದಾರೆ ಎಂಬುದು ಚಿತ್ರದ ತಾರಾಬಳಗವನ್ನು ನೋಡಿದರೆ ತಿಳಿಯುತ್ತದೆ. ಈಗಾಗಲೇ ರಾಷ್ಟ್ರಪ್ರಶಸ್ತಿ ವಿಜೇತ ನಟಿ ಪ್ರಿಯಾಮಣಿ ಹಾಗೂ ಮಲಯಾಳಂನ ಉದಯೋನ್ಮುಖ ನಟಿ ಅನಸ್ವರ ರಾಜನ್ ಚಿತ್ರದ ಭಾಗವಾಗಿದ್ದಾರೆ. ಚಿತ್ರದಲ್ಲಿ ಅನಸ್ವರ ರಾಜನ್ ಅವರು ಚಿರಂಜೀವಿ ಅವರ ಮಗಳ ಪಾತ್ರದಲ್ಲಿ ಕಾಣಿಸಿಕೊಳ್ಳುತ್ತಿರುವುದು ಖಚಿತವಾಗಿದೆ. ಇದರೊಂದಿಗೆ ಗ್ಲಾಮರಸ್ ನಟಿ ನಿವೇತಾ ಪೆತುರಾಜ್ ಕೂಡ ಪ್ರಮುಖ ಪಾತ್ರವೊಂದಕ್ಕೆ ಬಣ್ಣ ಹಚ್ಚುತ್ತಿದ್ದಾರೆ ಎನ್ನಲಾಗಿದೆ.

ಇದನ್ನೂ ಓದಿ: ನಟಿಯರ ಪರವಾಗಿ ಚಿತ್ರರಂಗಕ್ಕೆ ವಿಶೇಷ ಮನವಿ ಮಾಡಿದ ರಚಿತಾ ರಾಮ್

‘ಟಾಕ್ಸಿಕ್’, ‘ಜನ ನಾಯಗನ್’ ರೀತಿಯ ಬಿಗ್ ಬಜೆಟ್ ಸಿನಿಮಾಗಳನ್ನು ನಿರ್ಮಾಣ ಮಾಡಿರುವ ಕನ್ನಡದ ಪ್ರತಿಷ್ಠಿತ ನಿರ್ಮಾಣ ಸಂಸ್ಥೆಯಾದ ‘ಕೆವಿಎನ್ ಪ್ರೊಡಕ್ಷನ್ಸ್’ ಈಗ ‘ಮೆಗಾ 158’ ಚಿತ್ರದ ಮೂಲಕ ತೆಲುಗು ಚಿತ್ರರಂಗಕ್ಕೆ ಪಾದಾರ್ಪಣೆ ಮಾಡುತ್ತಿದೆ. ವೆಂಕಟ್ ಕೆ. ನಾರಾಯಣ್ ಮತ್ತು ಲೋಕೇಶ್ ಅವರು ಅತ್ಯಂತ ಅದ್ಧೂರಿ ವೆಚ್ಚದಲ್ಲಿ ಈ ಆ್ಯಕ್ಷನ್ ಎಂಟರ್‌ಟೈನರ್ ಸಿನಿಮಾವನ್ನು ಜಂಟಿಯಾಗಿ ನಿರ್ಮಿಸುತ್ತಿದ್ದಾರೆ. ಚಿತ್ರಕ್ಕೆ ಸ್ಟಾರ್ ಮ್ಯೂಸಿಕ್ ಡೈರೆಕ್ಟರ್ ತಮನ್ ಎಸ್. ಸಂಗೀತ ನೀಡುತ್ತಿದ್ದು, ‘ಜೈಲರ್’ ಖ್ಯಾತಿಯ ವಿಜಯ್ ಕಾರ್ತಿಕ್ ಕಣ್ಣನ್ ಅವರ ಛಾಯಾಗ್ರಹಣ ಮಾಡುತ್ತಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Published On – 7:14 am, Sun, 7 June 26

Source link

ಇದೆಂತಾ ಅನ್ಯಾಯ… ಈ ಮೂವರ ಬದಲಿಗೆ ಆ ಮೂವರಿಗೆ ಸ್ಥಾನ..! – Kannada News

ಇಂಡಿಯನ್ ಪ್ರೀಮಿಯರ್ ಲೀಗ್​ನಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ತಂಡವನ್ನು ಸತತ ಎರಡನೇ ಬಾರಿಗೆ ಚಾಂಪಿಯನ್ ಪಟ್ಟಕ್ಕೇರಿಸುವಲ್ಲಿ ಪ್ರಮುಖ ಪಾತ್ರ ವಹಿಸಿದ್ದ ಮೂವರು ಸ್ಟಾರ್ ಆಟಗಾರರಿಗೆ ಬಿಸಿಸಿಐ (BCCI) ಬಿಗ್ ಶಾಕ್ ನೀಡಿದೆ. ಮುಂಬರುವ ಇಂಗ್ಲೆಂಡ್ ಮತ್ತು ಐರ್ಲೆಂಡ್ ಪ್ರವಾಸದ ಟಿ20 ಸರಣಿಗಾಗಿ ಪ್ರಕಟಿಸಲಾದ ಭಾರತ ತಂಡದಲ್ಲಿ ರಜತ್ ಪಾಟಿದಾರ್, ಭುವನೇಶ್ವರ್ ಕುಮಾರ್ ಮತ್ತು ಕೃನಾಲ್ ಪಾಂಡ್ಯ ಅವರಿಗೆ ಸ್ಥಾನ ನೀಡಲಾಗಿಲ್ಲ.

ರಜತ್ ಪಾಟಿದಾರ್‌: ಐಪಿಎಲ್ 2026 ರಲ್ಲಿ ಆರ್‌ಸಿಬಿ ತಂಡವನ್ನು ಅತ್ಯುತ್ತಮವಾಗಿ ಮುನ್ನಡೆಸಿದ ರಜತ್ ಪಾಟಿದಾರ್ ಬ್ಯಾಟಿಂಗ್‌ನಲ್ಲೂ ಅಬ್ಬರಿಸಿದ್ದರು. ಈ ಸೀಸನ್‌ನಲ್ಲಿ ಆಡಿದ 15 ಪಂದ್ಯಗಳಲ್ಲಿ 41.75 ರ ಸರಾಸರಿಯಲ್ಲಿ 501 ರನ್ ಗಳಿಸಿ ಟಾಪ್ ಫಾರ್ಮ್‌ನಲ್ಲಿದ್ದರು. ಆದಾಗ್ಯೂ, ಭಾರತ ಟಿ20 ತಂಡದ ಮಧ್ಯಮ ಕ್ರಮಾಂಕದಲ್ಲಿ ಪಾಟಿದಾರ್​​ಗೆ ಚಾನ್ಸ್​ ನೀಡಲಾಗಿಲ್ಲ.

ಕೃನಾಲ್ ಪಾಂಡ್ಯ: ಆರ್‌ಸಿಬಿ ಮಧ್ಯಮ ಕ್ರಮಾಂಕ ಹಾಗೂ ಸ್ಪಿನ್ ವಿಭಾಗಕ್ಕೆ ಬಲ ತುಂಬಿದ್ದ ಆಲ್‌ರೌಂಡರ್ ಕೃನಾಲ್ ಪಾಂಡ್ಯ ಕೂಡ ಆಯ್ಕೆದಾರರ ಗಮನ ಸೆಳೆಯುವಲ್ಲಿ ವಿಫಲರಾಗಿದ್ದಾರೆ. ಕೃನಾಲ್ ಕಳೆದ ಎರಡು ಸೀಸನ್​​ಗಳಲ್ಲೂ ಅತ್ಯುತ್ತಮ ಪ್ರದರ್ಶನ ನೀಡಿ 29 ವಿಕೆಟ್ ಪಡೆದಿದ್ದರು. ಈ ವೇಳೆ ಕೇವಲ 8.42 ಸರಾಸರಿಯಲ್ಲಿ ಮಾತ್ರ ರನ್ ನೀಡಿದ್ದಾರೆ. ಇದರ ನಡುವೆ 335 ರನ್​ ಕೂಡ ಕಲೆಹಾಕಿದ್ದಾರೆ. ಇದಾಗ್ಯೂ ಸ್ಪಿನ್ ಆಲ್​ರೌಂಡರ್ ಆಗಿ ಕೃನಾಲ್ ಪಾಂಡ್ಯರನ್ನು ಪರಿಗಣಿಸದೇ ಇರುವುದು ಅಚ್ಚರಿಯೇ ಸರಿ.

ಭುವನೇಶ್ವರ್ ಕುಮಾರ್: ಅನುಭವಿ ವೇಗಿ ಭುವನೇಶ್ವರ್ ಕುಮಾರ್ ಈ ಬಾರಿಯ ಐಪಿಎಲ್‌ನಲ್ಲಿ ಬರೋಬ್ಬರಿ ಬರೋಬ್ಬರಿ 28 ವಿಕೆಟ್ ಕಬಳಿಸಿದ್ದರು. ಅಷ್ಟೇ ಅಲ್ಲದೆ ಟೂರ್ನಿಯಲ್ಲಿ ಅತ್ಯುತ್ತಮ ಪ್ರದರ್ಶನ ನೀಡಿದ ಭಾರತೀಯ ವೇಗಿ ಎನಿಸಿಕೊಂಡಿದ್ದರು. ಪವರ್‌ಪ್ಲೇ ಹಾಗೂ ಡೆತ್ ಓವರ್‌ಗಳಲ್ಲಿ ಅದ್ಭುತ ಬೌಲಿಂಗ್ ಪ್ರದರ್ಶಿಸಿರುವ ಭುವಿ ಕೇವಲ 7.94 ಎಕಾನಮಿ ರೇಟ್​​ನಲ್ಲಿ ಮಾತ್ರ ರನ್ ನೀಡಿದ್ದರು. ಇದಾಗ್ಯೂ ಅನುಭವಿ ವೇಗಿಯನ್ನು ಆಯ್ಕೆದಾರರು ಕಡೆಗಣಿಸಿದ್ದಾರೆ.

  • ಇಲ್ಲಿ ಕೃನಾಲ್ ಪಾಂಡ್ಯರನ್ನು ಕಡೆಗಣಿಸಿ ಆಯ್ಕೆ ಮಾಡಿರುವುದು ವಾಷಿಂಗ್ಟನ್ ಸುಂದರ್ ಅವರನ್ನು ಎಂಬುದೇ ಅಚ್ಚರಿ.
  • ಭುವನೇಶ್ವರ್ ಕುಮಾರ್ ಬದಲಿಗೆ ಟೀಮ್ ಇಂಡಿಯಾದಲ್ಲಿ ಸ್ಥಾನ ಪಡೆದಿರುವುದು ಹರ್ಷಿತ್ ರಾಣಾ.
  • ರಜತ್ ಪಾಟಿದಾರ್ ಬದಲಿಗೆ ಔಟ್ ಆಫ್ ಫಾರ್ಮ್​ನಲ್ಲಿರುವ ಆಲ್​ರೌಂಡರ್​ ಅಕ್ಷರ್ ಪಟೇಲ್ ಅವರನ್ನು ಆಯ್ಕೆ ಮಾಡಲಾಗಿದೆ.

ಇದನ್ನೂ ಓದಿ: ವೈಭವ್ ಸೂರ್ಯವಂಶಿ ಎಂಟ್ರಿ: ಟೀಮ್ ಇಂಡಿಯಾದ 3 ತಂಡಗಳು ಪ್ರಕಟ

ಒಟ್ಟಾರೆಯಾಗಿ ಹೇಳುವುದಾದರೆ, ಐಪಿಎಲ್ ಇತಿಹಾಸದಲ್ಲೇ ಸತತ ಎರಡು ಬಾರಿ ಟ್ರೋಫಿ ಗೆದ್ದು ಬೀಗಿದ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ತಂಡದ ಹೀರೊಗಳಿಗೆ ಬಿಸಿಸಿಐ ಕೊಟ್ಟ ಬಹುಮಾನ ಮಾತ್ರ ಶೂನ್ಯ! ಇದಕ್ಕೆ ಸಾಕ್ಷಿ ಈ ಮೂವರು ಮ್ಯಾಚ್​ ವಿನ್ನರ್​​ಗಳನ್ನು ನಿರ್ಲಕ್ಷಿಸಿರುವುದು.

Source link

Exit mobile version