Headlines

‘ದಿ ಕೇರಳ ಸ್ಟೋರಿ 2’ ಸಿನಿಮಾ ಬಿಡುಗಡೆಗೆ ತಡೆ ಕೋರಿ ಹೈಕೋರ್ಟ್​​ಗೆ ಅರ್ಜಿ: ನೋಟಿಸ್ ಜಾರಿ – Kannada News | The Kerala Story 2 controversy: HC issues notice to CBFC and movie team

‘ದಿ ಕೇರಳ ಸ್ಟೋರಿ 2’ (The Kerala Story 2) ಸಿನಿಮಾಗೆ ಸಂಬಂಧಿಸಿದ ವಿವಾದ ಹೆಚ್ಚಾಗುತ್ತಲೇ ಇದೆ. ಈ ಸಿನಿಮಾದಲ್ಲಿ ಕೋಮುವಾದದ ಅಂಶಗಳು ಇವೆ ಎಂಬ ಕಾರಣದಿಂದ ಹಲವರು ವಿರೋಧ ವ್ಯಕ್ತಪಡಿಸುತ್ತಿದ್ದಾರೆ. ಕೇರಳದಲ್ಲಿ ಈ ಚಿತ್ರಕ್ಕೆ ವಿರೋಧ ವ್ಯಕ್ತವಾಗುತ್ತಿದೆ. ಕೇರಳ ಸಿಎಂ ಪಿಣರಾಯಿ ವಿಜಯನ್ ಅವರು ಸಿನಿಮಾ ಬಗ್ಗೆ ಅಸಮಾಧಾನ ಹೊರಹಾಕಿದ್ದಾರೆ. ಅದರ ಬೆನ್ನಲ್ಲೇ ಸಿನಿಮಾದ ಬಿಡುಗಡೆಗೆ ತಡೆ ಕೋರಿ ಕೇರಳ ಹೈಕೋರ್ಟ್​​ಗೆ (Kerala High Court) ಅರ್ಜಿ ಸಲ್ಲಿಸಲಾಗಿದೆ. ಇದರಿಂದ ಚಿತ್ರತಂಡಕ್ಕೆ ಸಂಕಷ್ಟ ಎದುರಾಗಿದೆ. ಕಣ್ಣೂರಿನ…

Read More

Video: ವಿದ್ಯಾರ್ಥಿಗಳ ಕೈಯಲ್ಲಿ ಕಾರು ತೊಳೆಸಿದ ಶಿಕ್ಷಕ – Kannada News | Karnataka Teacher Uday Makes Students Wash Car; Education Dept Acts

ಉತ್ತರ ಕನ್ನಡ, ಡಿ.30: ಶಾಲೆ ವಿದ್ಯಾರ್ಥಿಗಳಿಂದ ಕಾರು ತೊಳೆಸಿದ ಘಟನೆ ಉತ್ತರ ಕನ್ನಡ ಜಿಲ್ಲೆಯ ಹಳಿಯಾಳ ತಾಲೂಕಿನ ಬಿ.ಕೆ.ಹಳ್ಳಿಯ ಸರ್ಕಾರಿ ಶಾಲೆಯಲ್ಲಿ ನಡೆದಿದೆ. ಶಿಕ್ಷಕ ಉದಯ್​​ ವಿದ್ಯಾರ್ಥಿಗಳಿಂದ ಶಾಲೆ ಮಕ್ಕಳಿಂದ ಕಾರು ತೊಳೆಸಿದ್ದಾರೆ. ಶಾಲಾ ಅವಧಿಯಲ್ಲೇ ತನ್ನ ಕಾರು ತೊಳೆಯುವಂತೆ ವಿದ್ಯಾರ್ಥಿಗಳಿಗೆ ಹೇಳಿದ್ದಾರೆ. ಮಕ್ಕಳು ಕಾರು ಕ್ಲಿನ್​​ ಮಾಡುವ ವಿಡಿಯೋವನ್ನು ವ್ಯಕ್ತಿಯೊಬ್ಬರು ಸೋಶಿಯಲ್​​ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ. ಈ ಹಿಂದೆಯೂ ಕೂಡ ಶಿಕ್ಷಕ ಉದಯ್​​​​​​ ಇಂತಹ ಕೆಲಸ ಮಾಡಿಸಿದ್ದರು ಎಂದು ಹೇಳಿದ್ದಾರೆ. ಈ ಬಗ್ಗೆ ಶಿಕ್ಷಣ ಇಲಾಖೆಗೆ ದೂರು…

Read More

ಕೊನೆಗೂ ಕೊಹ್ಲಿಯ ದಾಖಲೆ ಮುರಿದ ಸೂರ್ಯಕುಮಾರ್ ಯಾದವ್ – Kannada News | Suryakumar Yadav Breaks Virat Kohli’s Huge Record

ಟೀಮ್ ಇಂಡಿಯಾ ನಾಯಕ ಸೂರ್ಯಕುಮಾರ್ ಯಾದವ್ (Suryakumar Yadav) ಟಿ20 ಕ್ರಿಕೆಟ್​ನಲ್ಲಿ ಹೊಸ ದಾಖಲೆ ಬರೆದಿದ್ದಾರೆ. ಅದು ಕೂಡ ದಾಖಲೆಗಳ ಸರದಾರ ವಿರಾಟ್ ಕೊಹ್ಲಿಯ (virat kohli) ಭರ್ಜರಿ ದಾಖಲೆಯನ್ನು ಮುರಿಯುವ ಮೂಲಕ. ಮುಂಬೈನ ವಾಂಖೆಡೆ ಸ್ಟೇಡಿಯಂನಲ್ಲಿ ನಡೆದ ಟಿ20 ವಿಶ್ವಕಪ್​ನ ಮೂರನೇ ಪಂದ್ಯದಲ್ಲಿ ಭಾರತ ಮತ್ತು ಯುಎಸ್​ಎ ತಂಡಗಳು ಮುಖಾಮುಖಿಯಾಗಿದ್ದವು. ಈ ಪಂದ್ಯದಲ್ಲಿ ಟಾಸ್ ಗೆದ್ದ ಯುಎಸ್​ಎ ತಂಡದ ನಾಯಕ ಮೊನಾಂಕ್ ಪಟೇಲ್ ಭಾರತ ತಂಡವನ್ನು ಬ್ಯಾಟಿಂಗ್ ಆಹ್ವಾನಿಸಿದ್ದರು. ಅದರಂತೆ ಮೊದಲು ಬ್ಯಾಟ್ ಮಾಡಿದ ಟೀಮ್…

Read More

ಎಸ್​ಯುವಿಯಲ್ಲಿ ರಾಶಿಗಟ್ಟಲೆ ಶಾಲಾ ಮಕ್ಕಳನ್ನು ತುಂಬಿದ ವಿಡಿಯೋ ವೈರಲ್ – Kannada News | Viral Video Shows School children Risking Lives In Overcrowded Vehicle In Kushinagar

ಖುಷಿನಗರ, ಜನವರಿ 3: ಉತ್ತರ ಪ್ರದೇಶದ ಖುಷಿನಗರ ಜಿಲ್ಲೆಯ ಪದ್ರೌನಾದಲ್ಲಿ ಶಾಲಾ ಮಕ್ಕಳನ್ನು ಅಪಾಯಕಾರಿಯಾಗಿ ಶಾಲಾ ವ್ಯಾನ್​​ನಲ್ಲಿ ತುಂಬಿರುವ ವಿಡಿಯೋವೊಂದು ವೈರಲ್ (Viral Video) ಆಗಿದೆ. ಎಸ್​ಯುವಿಯಲ್ಲಿ ಕೆಲವರು ಹಿಂಭಾಗದಿಂದ ನಿಂತಿರುವುದನ್ನು ಅಥವಾ ನೇತಾಡುತ್ತಿರುವುದನ್ನು ವಿಡಿಯೋದಲ್ಲಿ ನೋಡಬಹುದು. ಇದಕ್ಕೆ ಆಕ್ರೋಶ ವ್ಯಕ್ತವಾಗಿದೆ. ಮಕ್ಕಳ ಸುರಕ್ಷತೆ, ಶಾಲಾ ಸಾರಿಗೆ ಸೌಲಭ್ಯಗಳ ಕೊರತೆ ಮತ್ತು ಆಡಳಿತಾತ್ಮಕ ನಿರ್ಲಕ್ಷ್ಯದ ಬಗ್ಗೆ ಈ ವಿಡಿಯೋ ಗಂಭೀರ ಕಳವಳವನ್ನು ಹುಟ್ಟುಹಾಕಿದೆ. ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ Source link

Read More

ದೇಹದಲ್ಲಿ ವಿಟಮಿನ್ ಎ ಕೊರತೆಯಾಗಿದೆ ಎಂಬುದನ್ನು ತಿಳಿದುಕೊಳ್ಳುವುದು ಹೇಗೆ? ನಿರ್ಲಕ್ಷಿಸಿದರೆ ಏನಾಗುತ್ತೆ?

ವಿಟಮಿನ್ ಎ (Vitamin A) ಬಗ್ಗೆ ಸಾಮಾನ್ಯವಾಗಿ ಎಲ್ಲರಿಗೂ ತಿಳಿದಿರಬಹುದು. ದೇಹವನ್ನು ಆರೋಗ್ಯಕರವಾಗಿಡಲು ಇದು ಪ್ರಮುಖ ಪಾತ್ರ ವಹಿಸುತ್ತದೆ. ಅದಕ್ಕೂ ಮಿಗಿಲಾಗಿ ಕಣ್ಣಿನ ದೃಷ್ಟಿಯನ್ನು ಉತ್ತಮವಾಗಿರಿಸಲು, ರೋಗನಿರೋಧಕ ಶಕ್ತಿಯನ್ನು ಬಲಪಡಿಸಲು ಮತ್ತು ಚರ್ಮವನ್ನು ಆರೋಗ್ಯಕರವಾಗಿಡಲು ಸಹಾಯ ಮಾಡುತ್ತದೆ. ವಿಟಮಿನ್ ಎ ಕೊರತೆಯಿಂದ ಕಣ್ಣುಗಳಿಗೆ ಸಂಬಂಧಿಸಿದ ಸಮಸ್ಯೆಗಳು, ಪದೇಪದೇ ಸೋಂಕುಗಳು ಮತ್ತು ಚರ್ಮ ಒಣಗುವಂತಹ ಸಮಸ್ಯೆಗಳು ಕಾಣಿಸಿಕೊಳ್ಳಬಹುದು. ಅದರಲ್ಲಿಯೂ ಚಿಕ್ಕ ಮಕ್ಕಳು, ಗರ್ಭಿಣಿಯರು ಮತ್ತು ದುರ್ಬಲ ರೋಗನಿರೋಧಕ ಶಕ್ತಿಯುಳ್ಳವರಲ್ಲಿ ವಿಟಮಿನ್ ಎ ಕೊರತೆಯ ಅಪಾಯ ಹೆಚ್ಚಾಗಿರುತ್ತದೆ. ಸಮತೋಲನಯುತ ಆಹಾರದ…

Read More

ಎಬೋಲಾ ಆತಂಕ; ಕಾಂಗೋ, ಉಗಾಂಡಾ, ದಕ್ಷಿಣ ಸುಡಾನ್‌ ಪ್ರಯಾಣಿಕರಿಗೆ ಭಾರತದಿಂದ ಮಾರ್ಗಸೂಚಿ ಬಿಡುಗಡೆ – Kannada News | Ebola Outbreak India issues guidelines for passengers traveling to Congo, Uganda and South Sudan

ನವದೆಹಲಿ, ಮೇ 24: ಆಫ್ರಿಕಾ ದೇಶಗಳಲ್ಲಿ ಹರಡುತ್ತಿರುವ ಭೀಕರ ಎಬೋಲಾ (Ebola) ಸಾಂಕ್ರಾಮಿಕ ರೋಗದ ಹಿನ್ನೆಲೆಯಲ್ಲಿ ಭಾರತ ಸರ್ಕಾರವು ನಮ್ಮ ದೇಶದ ನಾಗರಿಕರಿಗೆ ಅತ್ಯಂತ ಮಹತ್ವದ ಮಾರ್ಗಸೂಚಿಯನ್ನು (Travel Advisory) ಬಿಡುಗಡೆ ಮಾಡಿದೆ. ಕಾಂಗೋ (DRC), ಉಗಾಂಡಾ ಮತ್ತು ದಕ್ಷಿಣ ಸುಡಾನ್ ದೇಶಗಳಿಗೆ ಅನಗತ್ಯವಾಗಿ ಪ್ರಯಾಣಿಸಬೇಡಿ ಎಂದು ಕೇಂದ್ರ ಆರೋಗ್ಯ ಸಚಿವಾಲಯವು ಭಾರತೀಯರಿಗೆ ಸೂಚಿಸಿದೆ. ಇತ್ತೀಚೆಗೆ ಡೆಮಾಕ್ರಟಿಕ್ ರಿಪಬ್ಲಿಕ್ ಆಫ್ ಕಾಂಗೋ (DRC) ಮತ್ತು ಉಗಾಂಡಾ ದೇಶಗಳಲ್ಲಿ ಎಬೋಲಾ ವೈರಸ್‌ನ ಅತ್ಯಂತ ಅಪರೂಪದ ಹಾಗೂ ಅಪಾಯಕಾರಿ ತಳಿಯಾದ…

Read More

ಶ್ರೀಲಂಕಾ ಕಡೆ ಹೊರಟ ಇರಾನಿನ 2ನೇ ಹಡಗು; ಮತ್ತೆ ದಾಳಿಯ ಭೀತಿಯಲ್ಲಿ ಅಧಿಕಾರಿಗಳು – Kannada News | 2nd Iranian Ship Heads To Sri Lanka Officials Say It Could Be Targeted

ನವದೆಹಲಿ, ಮಾರ್ಚ್ 5: ಯುನೈಟೆಡ್ ಸ್ಟೇಟ್ಸ್ ಜಲಾಂತರ್ಗಾಮಿ ನೌಕೆ ಬುಧವಾರ ಇರಾನಿನ ಯುದ್ಧನೌಕೆಯನ್ನು ಧ್ವಂಸಗೊಳಿಸಿ, 87 ನಾವಿಕರು ಸಾವನ್ನಪ್ಪಿದ್ದರು. ಅದರ ಬೆನ್ನಲ್ಲೇ ಇಂದು ಎರಡನೇ ಇರಾನಿನ (Iran) ಯುದ್ಧನೌಕೆ ತಮ್ಮ ದೇಶದ ಪ್ರಾದೇಶಿಕ ನೀರಿನ ಕಡೆಗೆ ಚಲಿಸಿದಂತೆ ಶ್ರೀಲಂಕಾದ ಅಧಿಕಾರಿಗಳು ಕಳವಳ ವ್ಯಕ್ತಪಡಿಸಿದ್ದಾರೆ. ಹಿಂದಿನ ದಾಳಿಯ ನಂತರ ಹೊಸ ಹಡಗಿನ ಮೇಲೂ ದಾಳಿಯಾಗಬಹುದು ಎಂದು ಅಧಿಕಾರಿಗಳು ಕಳವಳ ವ್ಯಕ್ತಪಡಿಸಿದ್ದಾರೆ. ಇರಾನ್ ಶ್ರೀಲಂಕಾದ ಜಲಪ್ರದೇಶಕ್ಕೆ ಪ್ರವೇಶವನ್ನು ಬಯಸಿದೆ. ಶ್ರೀಲಂಕಾ ಅಧ್ಯಕ್ಷ ಅನುರ ಕುಮಾರ ದಿಸಾನಾಯಕೆ ಅವರು, ಯುದ್ಧನೌಕೆಯನ್ನು ಸುರಕ್ಷತೆಗಾಗಿ…

Read More

‘ಪುನೀತ್ ರಾಜ್​​ಕುಮಾರ್ ಊಟಕ್ಕೆ ಬನ್ನಿ ಅಂದಿದ್ರು’; ಮೈಸೂರಿನ ಭೇಟಿ ನೆನೆದ ರಾವ್ ರಮೇಶ್ – Kannada News | Rao Ramesh Recalls Heartwarming Memory With Puneeth Rajkumar During KGF 2 Shooting in Mysuru

ಕನ್ನಡ ಚಿತ್ರರಂಗದಲ್ಲಿ ತಮ್ಮ ವಿಶಿಷ್ಟ ನಟನೆಯ ಮೂಲಕ ಗುರುತಿಸಿಕೊಂಡಿರುವ ನಟ ಕೋಮಲ್ ಕುಮಾರ್ ಅಭಿನಯದ ‘ತೆನಾಲಿ ಡಿಎ, ಎಲ್‌ಎಲ್‌ಬಿ’ ಸಿನಿಮಾ ಸದ್ಯ ಪ್ರೇಕ್ಷಕರಲ್ಲಿ ಕುತೂಹಲ ಮೂಡಿಸಿದೆ. ಈ ಚಿತ್ರದಲ್ಲಿ ಪ್ರಮುಖ ಪಾತ್ರವೊಂದರಲ್ಲಿ ನಟಿಸಿರುವ ಬಹುಭಾಷಾ ನಟ ರಾವ್ ರಮೇಶ್ ಅವರು ಚಿತ್ರದ ಕುರಿತು ಮಾತನಾಡಿದ್ದಾರೆ. ಈ ವೇಳೆ ಅವರು ಪುನೀತ್ ರಾಜ್​​ಕುಮಾರ್ ಅವರನ್ನು ನೆನಪಿಸಿಕೊಂಡಿದ್ದಾರೆ. ‘ತೆನಾಲಿ ಡಿಎ, ಎಲ್‌ಎಲ್‌ಬಿ’ ಸಿನಿಮಾದಲ್ಲಿ ತಮ್ಮ ಪಾತ್ರಕ್ಕೆ ರಾವ್ ರಮೇಶ್ ಅವರೇ ಸ್ವತಃ ಕನ್ನಡದಲ್ಲಿ ಡಬ್ ಮಾಡಲಿದ್ದಾರೆ. ಈ ಮೂಲಕ ಅವರು…

Read More

ಶನಿ ಅಮಾವಾಸ್ಯೆ, ವೀಕೆಂಡ್ ಹಿನ್ನೆಲೆ ಮಲೆ ಮಹದೇಶ್ವರನ ದರ್ಶನಕ್ಕೆ ಜನವೋ ಜನ! – Kannada News | Devotee Surge at Male Mahadeshwara Hill for Shani Amavasya and Weekend

ಚಾಮರಾಜನಗರ, ಮೇ 17: ಶನಿ ಅಮಾವಾಸ್ಯೆ ಮತ್ತು ವೀಕೆಂಡ್ ಹಿನ್ನೆಲೆಯಲ್ಲಿ ಮಲೆ ಮಹದೇಶ್ವರ ಬೆಟ್ಟಕ್ಕೆ ಭಕ್ತರ ದಂಡೇ ಹರಿದುಬಂದಿದೆ. ರಾಜ್ಯದ ವಿವಿಧ ಮೂಲೆಗಳಿಂದ ಆಗಮಿಸಿದ ಸಹಸ್ರಾರು ಭಕ್ತರು ಮಾದಪ್ಪನ ದರ್ಶನ ಪಡೆದು ವಿಶೇಷ ಸೇವೆಗಳನ್ನು ಸಲ್ಲಿಸಿದ್ದಾರೆ. ನಿನ್ನೆಯಿಂದಲೂ ಮಾದಪ್ಪನ ಭಕ್ತ ಸಮೂಹವು ಬೆಟ್ಟದ ಕಡೆಗೆ ಬರುತ್ತಿದ್ದು, ದೇವಾಲಯದ ಆವರಣ ಭಕ್ತರಿಂದ ತುಂಬಿಹೋಗಿದೆ. ಭಕ್ತರು ತಮ್ಮ ಭಕ್ತಿ ಸಮರ್ಪಿಸಲು ಚಿನ್ನದ ರಥ, ಬೆಳ್ಳಿ ರಥ, ಹುಲಿ ವಾಹನ, ರುದ್ರಾಕ್ಷಿ ಮಂಟಪ ಹಾಗೂ ಬಸವ ರಥ ಸೇರಿದಂತೆ ಹಲವು ವಿಭಿನ್ನ…

Read More

ಪೋಷಕರೇ ಎಚ್ಚರ: ಬೆಂಗಳೂರಿನ ಸ್ಕೂಲ್ ಬಸ್​ಗಳ ಚಾಲಕರ ಡ್ರಂಕ್ ಆ್ಯಂಡ್ ಡ್ರೈವ್ ತಪಾಸಣೆ ಮಾಡಿದ ಪೊಲೀಸರೇ ಶಾಕ್!

ಬೆಂಗಳೂರು, ಮಾರ್ಚ್ 28: ಮಕ್ಕಳನ್ನು ಸುರಕ್ಷಿತವಾಗಿ ಶಾಲೆಗೆ ಕಳುಹಿಸುತ್ತಿದ್ದೇವೆ ಎಂದು ಭಾವಿಸಿರುವ ಪೋಷಕರಿಗೆ ಇದು ನಿಜಕ್ಕೂ ಆಘಾತಕಾರಿ ಸುದ್ದಿ. ಮಕ್ಕಳ ಭವಿಷ್ಯ ರೂಪಿಸಬೇಕಾದ ಶಾಲಾ ವಾಹನಗಳ ಚಾಲಕರೇ ಕುಡಿದು ಬಸ್ ಚಲಾಯಿಸುತ್ತಾ (Drunk and Drive) ಮಕ್ಕಳ ಪ್ರಾಣದ ಜೊತೆ ಚೆಲ್ಲಾಟವಾಡುತ್ತಿರುವುದು ಬೆಳಕಿಗೆ ಬಂದಿದೆ. ಶುಕ್ರವಾರ (ಮಾರ್ಚ್​​ 27) ಬೆಳ್ಳಂಬೆಳಗ್ಗೆ ಬೆಂಗಳೂರು ಸಂಚಾರ ಪೊಲೀಸರು (Bangalore Traffic Police) ನಡೆಸಿದ ವಿಶೇಷ ಡ್ರಂಕ್ ಆ್ಯಂಡ್ ಡ್ರೈವ್ ಕಾರ್ಯಾಚರಣೆಯಲ್ಲಿ ಭರ್ಜರಿ ಬೇಟೆ ನಡೆದಿದೆ. ಡ್ರಂಕ್ ಆ್ಯಂಡ್ ಡ್ರೈವ್ ಚೆಕ್ಕಿಂಗ್:…

Read More