Karnataka 2nd PUC Result 2026: ಸಚಿವ ಮಧುಬಂಗಾರಪ್ಪ ಸುದ್ದಿಗೋಷ್ಠಿ ನೇರಪ್ರಸಾರ

Karnataka 2nd PUC Result 2026: ಸಚಿವ ಮಧುಬಂಗಾರಪ್ಪ ಸುದ್ದಿಗೋಷ್ಠಿ ನೇರಪ್ರಸಾರ

ಬೆಂಗಳೂರು, (ಏಪ್ರಿಲ್ 09): ಪ್ರಸಕ್ತ ಸಾಲಿನ ದ್ವಿತೀಯ ಪಿಯುಸಿ ಪರೀಕ್ಷೆ ಬರೆದಿರುವ ಲಕ್ಷಾಂತರ ವಿದ್ಯಾರ್ಥಿಗಳ ಕಾಯುವಿಕೆ ಅಂತ್ಯವಾಗಿದೆ. ಹೌದು…2026ನೇ ಸಾಲಿನ ದ್ವಿತೀಯ ಪಿಯುಸಿ ಫಲಿತಾಂಶ ಆನ್​​ಲೈನ್​​ನಲ್ಲಿ ಪ್ರಕಟವಾಗಿದೆ. ಈ ಮೊದಲು ಶಿಕ್ಷಣ ಸಚಿವರು ಸುದ್ದಿಗೋಷ್ಠಿ ನಡೆಸಿ ಬಳಿಕ ಫಲಿತಾಂಶ ಪ್ರಕಟಿಸುವುದು ವಾಡಿಕೆ. ಆದ್ರೆ, ದಾವಣಗೆರೆ ದಕ್ಷಿಣ ಹಾಗೂ ಬಾಗಲಕೋಟೆ ವಿಧಾನಸಭೆ ಉಪಚುನಾವಣೆಯ ಸಂಬಂಧ ಚುನಾವಣಾ ನೀತಿ ಸಂಹಿತೆ ಜಾರಿಯಲ್ಲಿರುವುದರಿಂದ ಮೊದಲು ವೈಬ್‌ಸೈಟ್‌ನಲ್ಲಿ ಫಲಿತಾಂಶ ಪ್ರಕಟಿಸಲಾಗಿದ್ದು, ಇದೀಗ ಶಿಕ್ಷಣ ಸಚಿವ ಮಧುಬಂಗಾರಪ್ಪ ಅವರು ಸುದ್ದಿಗೋಷ್ಠಿ ಫಲಿತಾಂಶವನ್ನು ಪ್ರಕಟಿಸಿದ್ದು, ಯಾರು ಟಾಪರ್, ಯಾವ ಜಿಲ್ಲೆ ಫಸ್ಟ್ ಎನ್ನುವುದನ್ನು ನೋಡಿ.

Source link

ಮುಂದಿನ ವಾರ ಗ್ರಹಗಳ ಬದಲಾವಣೆ; ಈ ರಾಶಿಗೆ ಅದೃಷ್ಟದ ಸುರಿಮಳೆ

​ಪ್ರಸ್ತುತ ಆಕಾಶಮಂಡಲದಲ್ಲಿ ಗುರುವು ಮಿಥುನ ರಾಶಿಯಲ್ಲಿ ಸಂಚರಿಸುತ್ತಿರುವುದು ಮತ್ತು ಶನಿಯು ಮೀನ ರಾಶಿಯಲ್ಲಿ ಇರುವುದು ರಾಜ್ಯದ ಆಡಳಿತಾರೂಢರಿಗೆ ಸವಾಲು ಮತ್ತು ಅವಕಾಶ ಎರಡನ್ನೂ ಒಟ್ಟಿಗೆ ತರುತ್ತಿದೆ. ಗುರುವಿನ ಪ್ರಭಾವದಿಂದಾಗಿ ಹೊಸ ಯೋಜನೆಗಳ ಘೋಷಣೆಯಾಗಬಹುದು, ಆದರೆ ಶನಿಯ ಪ್ರಭಾವದಿಂದಾಗಿ ಆ ಯೋಜನೆಗಳ ಅನುಷ್ಠಾನದಲ್ಲಿ ವಿರೋಧ ಪಕ್ಷಗಳಿಂದ ತೀವ್ರ ಟೀಕೆ ವ್ಯಕ್ತವಾಗಲಿದೆ.

​ಗೆಲುವು ಪಡೆಯುವ ರಾಶಿಗಳು:

  • ಮೇಷ: ಸೂರ್ಯನು ನಿಮ್ಮ ರಾಶಿಯಲ್ಲಿ ಉಚ್ಚ ಸ್ಥಾನದಲ್ಲಿರುವುದರಿಂದ, ಈ ರಾಶಿಯ ನಾಯಕರಿಗೆ ಸಿಂಹ ಬಲ ಬರಲಿದೆ. ಅನಿರೀಕ್ಷಿತವಾಗಿ ದೊಡ್ಡ ಜವಾಬ್ದಾರಿಗಳು ಹುಡುಕಿಕೊಂಡು ಬರಬಹುದು. ಸರ್ಕಾರಿ ಮಟ್ಟದ ಮಾತುಕತೆಗಳಲ್ಲಿ ನಿಮ್ಮದೇ ಮೇಲುಗೈ ಆಗಲಿದೆ.
  • ಕುಂಭ: ನಿಮ್ಮ ರಾಶ್ಯಾಧಿಪತಿ ಶನಿಯು ಎರಡನೇ ಮನೆಯಲ್ಲಿರುವುದರಿಂದ ಆರ್ಥಿಕ ಮತ್ತು ಸಂಪನ್ಮೂಲ ಕ್ರೋಢೀಕರಣದಲ್ಲಿ ಯಶಸ್ಸು ಸಿಗಲಿದೆ. ಗುಪ್ತವಾಗಿ ನಡೆಸುವ ರಾಜಕೀಯ ತಂತ್ರಗಳು ಫಲಪ್ರದವಾಗಲಿವೆ.

​ಮಿಶ್ರ ಫಲದ ರಾಶಿಗಳು:

  • ​ಕರ್ಕಾಟಕ: ಚಂದ್ರನ ಚಲನೆಯಿಂದಾಗಿ ವಾರದ ಆರಂಭದಲ್ಲಿ ಅಸ್ಥಿರತೆ ಇರಲಿದ್ದರೂ, ವಾರಾಂತ್ಯಕ್ಕೆ ಪರಿಸ್ಥಿತಿ ಸುಧಾರಿಸಲಿದೆ. ಸಾರ್ವಜನಿಕ ಭಾಷಣ ಮಾಡುವಾಗ ಎಚ್ಚರವಿರಲಿ; ಮಾತು ತಪ್ಪಾಗಿ ಅರ್ಥೈಸಲ್ಪಡಬಹುದು.
  • ಮಕರ: ಪರಿಶ್ರಮಕ್ಕೆ ತಕ್ಕ ಪ್ರತಿಫಲ ಸಿಗಲಿದೆ, ಆದರೆ ವಿರೋಧಿಗಳ ಕುತಂತ್ರದಿಂದಾಗಿ ಗೆಲುವು ಸ್ವಲ್ಪ ವಿಳಂಬವಾಗಬಹುದು. ತಾಳ್ಮೆಯೇ ನಿಮ್ಮ ಯಶಸ್ಸಿನ ಮಂತ್ರ.

​ಸೋಲುವ ರಾಶಿಗಳು:

  • ಕನ್ಯಾ: ಸಪ್ತಮ ಸ್ಥಾನದಲ್ಲಿ ರಾಹುವಿನ ಸಂಚಾರವಿರುವುದರಿಂದ ಮಿತ್ರ ಪಕ್ಷಗಳಿಂದ ಅಥವಾ ಆಪ್ತರಿಂದಲೇ ನಂಬಿಕೆ ದ್ರೋಹವಾಗುವ ಸಾಧ್ಯತೆಯಿದೆ. ಒಪ್ಪಂದಗಳಿಗೆ ಸಹಿ ಹಾಕುವ ಮುನ್ನ ಎಚ್ಚರಿಕೆ ಅಗತ್ಯ.
  • ಮಿಥುನ: ಹತ್ತನೇ ಮನೆಯಲ್ಲಿ ರಾಹು-ಬುಧರ ಯುತಿಯಿಂದಾಗಿ ನಿರ್ಧಾರಗಳನ್ನು ತೆಗೆದುಕೊಳ್ಳುವಲ್ಲಿ ಗೊಂದಲ ಉಂಟಾಗಬಹುದು. ತಪ್ಪು ಮಾಹಿತಿಯ ಆಧಾರದ ಮೇಲೆ ನೀವು ಇಡುವ ಹೆಜ್ಜೆ ರಾಜಕೀಯವಾಗಿ ದೊಡ್ಡ ಬೆಲೆ ತೆರುವಂತೆ ಮಾಡಬಹುದು.

ವಿಶೇಷ ಸೂಚನೆ ಎಂದರೆ ಮಂಗಳನು ಶನಿಯೊಂದಿಗೆ ಯುತಿಯಲ್ಲಿರುವುದರಿಂದ ರಾಜಕೀಯ ವಲಯದಲ್ಲಿ ತೀವ್ರ ಸ್ವರೂಪದ ವಾಕ್ಸಮರ ಅಥವಾ ಆಂತರಿಕ ಬಂಡಾಯ ಏಳುವ ಸಾಧ್ಯತೆಯಿದೆ. ಹಳೆಯ ನಾಯಕರ ಪ್ರಭಾವ ಕಡಿಮೆಯಾಗಿ, ಹೊಸ ಮುಖಗಳಿಗೆ ಹೆಚ್ಚಿನ ಆದ್ಯತೆ ಸಿಗುವಂತಹ ಬೆಳವಣಿಗೆಗಳು ತೆರೆಮರೆಯಲ್ಲಿ ನಡೆಯಲಿವೆ. ​ಈ ಬದಲಾವಣೆಗಳು ವಿಶೇಷವಾಗಿ ಏಪ್ರಿಲ್ ೧೪ರ ಸೌರಮಾನ ಯುಗಾದಿ ಅನಂತರ ವೇಗ ಪಡೆಯಲಿವೆ.

– ಲೋಹಿತ ಹೆಬ್ಬಾರ್

Source link

ನವ ವಿವಾಹಿತೆ ನಾಪತ್ತೆ ಕೇಸ್​​ಗೆ ಟ್ವಿಸ್ಟ್​: ಮುಸ್ಲಿಂ ಯುವಕನ ಜೊತೆ ಯುವತಿ ಪತ್ತೆ; ಪೊಲೀಸ್​​ ಠಾಣೆಯಲ್ಲಿ ಹೈಡ್ರಾಮಾ

ಕೊಪ್ಪಳ, ಏಪ್ರಿಲ್​​ 09: ಇಲ್ಲಿನ ಗೌರಿ ಅಂಗಳ ನಿವಾಸಿ ನಾಗರಾಜ್​​ ಎಂಬವರನ್ನು ವಿವಾಹವಾಗಿದ್ದ ರಾಯಚೂರು ಜಿಲ್ಲೆಯ ಸಿಂದನೂರಿನ ಸಂಜನಾ ಎಂಬಾಕೆ ಮದುವೆಯಾಗಿ ಎರಡು ತಿಂಗಳಲ್ಲೇ ಪತಿ ಬಿಟ್ಟು ನಾಪತ್ತೆ ಆಗಿದ್ದಳು. ವಿಷಯ ತಿಳಿದ ಮಾವ ಅಂದರೆ ಪತಿಯ ತಂದೆ ಹೃದಯಾಘಾತದಿಂದ ಮೃತಪಟ್ಟ ಕಾರಣ ಘಟನೆ ಭಾರಿ ಸುದ್ದಿಯಾಗಿತ್ತು. ಈ ಪ್ರಕರಣಕ್ಕೀಗ ಭರ್ಜರಿ ಟ್ವಿಸ್ಟ್​​ ಸಿಕ್ಕಿದ್ದು, ಕಳೆದ 20 ದಿನಗಳ ಹಿಂದೆ ಮಿಸ್​​ ಆಗಿದ್ದ ಯುವತಿ ಸಂಜನಾ ಮುಸ್ಲಿಂ ಯುವಕನೋರ್ವನ ಜೊತೆ ನಿನ್ನೆ ಹುಬ್ಬಳ್ಳಿಯಲ್ಲಿ ಪತ್ತೆಯಾಗಿದ್ದಾಳೆ. ರಾಜಾಭಕ್ಷಿ ಎಂಬಾತನ ಜೊತೆ ನವ ವಿವಾಹಿತೆಯನ್ನು ಪತ್ತೆ ಮಾಡಿರುವ ಪೊಲೀಸರು, ಇಬ್ಬರನ್ನೂ ಕೊಪ್ಪಳದ ಮಹಿಳಾ ಠಾಣೆಗೆ ಕರೆತಂದಿದ್ದಾರೆ.

ಮೂಲತಃ ಗದಗ ಜಿಲ್ಲೆ ನಿವಾಸಿಯಾಗಿರೋ ರಾಜಾಭಕ್ಷಿ ಆಟೋ ಚಾಲಕನಾಗಿದ್ದು, ಅದಾಗಲೇ ಈತನಿಗೆ ಮದುವೆ ಕೂಡ ಆಗಿದೆ. ಹೀಗಿದ್ದರೂ ಆತ ಸಂಜನಾಳನ್ನು ಕರೆದುಕೊಂಡು ಹೋಗಿದ್ದ ಎಂಬ ವಿಚಾರವೀಗ ಬಯಲಾಗಿದೆ. ಇನ್ನು  ಇವರಿಬ್ಬರನ್ನು ಪೊಲೀಸ್​​ ಠಾಣೆಗೆ ಕರೆತರುತ್ತಿದ್ದಂತೆ ಸಂಜನಾ ಪತಿ ಸೇರಿ ಸಂಬಂಧಿಕರು ಸ್ಥಳಕ್ಕೆ ದೌಡಾಯಿಸಿದ್ದಾರೆ. ಈ ನಡುವೆಯೂ ತನಗೆ ರಾಜಾಭಕ್ಷಿನೇ ಬೇಕು ಎಂದು ಸಂಜನಾ ಹಠ ಹಿಡಿದಿದ್ದರೆ, ಈಕೆಯ ಹುಚ್ಚಾಟಕ್ಕೆ ಅದಾಗಲೇ ನಮ್ಮ ಮನೆಯಲ್ಲಿ ಇಂದು ಜೀವ ಹೋಗಿದೆ. ಹೀಗಾಗಿ ನಮಗೆ ಪರಿಹಾರ ಬೇಕು ಎಂದು ನಾಗರಾಜ್​​ ಕುಟುಂಬ ಪಟ್ಟು ಹಿಡಿದಿದೆ.

ಇದನ್ನೂ ಓದಿ: ಪತಿ ಬಿಟ್ಟು ನವವಿವಾಹಿತೆ ನಾಪತ್ತೆ; ವಿಷಯ ತಿಳಿದ ಮಾವ ಹೃದಯಾಘಾತದಿಂದ ಸಾವು!

ಎರಡೂ ಕುಟುಂಬಳ ಪರಸ್ಪರ ಒಪ್ಪಿಗೆಯ ಮೇಲೆಯೇ ಕೊಪ್ಪಳದ ಪಾರ್ಥಾ ಕಲ್ಯಾಣ ಮಂಟಪದಲ್ಲಿ ಫೆಬ್ರವರಿ 8ರಂದು ನಾಗರಾಜ್​​ ಮತ್ತು ಸಂಜನಾ ವಿವಾಹ ನಡೆದಿತ್ತು. ಆ ಬಳಿಕ ದಂಪತಿ ನಾಗರಾಜ್​​ ಅವರ ಮನೆಯ ಮೇಲಿನ ಮಹಡಿಯಲ್ಲಿ ವಾಸವಿದ್ದರು. ಈ ನಡುವೆ ಮಾರ್ಚ್​​ 21ರ ರಾತ್ರಿ ರಾತ್ರಿ 8.30ರ ಸುಮಾರಿಗೆ ಸಂಜನಾ ತನಗೆ ಆರೋಗ್ಯ ಸರಿ ಇಲ್ಲದ ಕಾರಣ ಔಷಧ ತರುವಂತೆ ಪತಿ ನಾಗರಾಜ್​​ಗೆ ತಿಳಿಸಿದ್ದಾಳೆ. ಹೀಗಾಗಿ ಮಾತ್ರೆ ತರಲೆಂದು ತೆರಳಿದ್ದ ನಾಗರಾಜ್​​ 15 ನಿಮಿಷಗಳ ಬಳಿಕ ಮನೆಗೆ ಹಿಂದಿರುಗಿದ್ದಾರೆ. ಆದರೆ ಆ ವೇಳೆ ಹೆಂಡತಿ ಸಂಜನಾ ಮನೆಯಲ್ಲಿ ಇಲ್ಲದಿರೋದು ಗಮನಕ್ಕೆ ಬಂದಿದೆ. ಹೀಗಾಗಿ ಕೆಳ ಮಹಡಿಯಲ್ಲಿರುವ ಸಹೋದರನ ಮನೆಗೆ ತೆರಳಿ ನಾಗರಾಜ್​​ ಪತ್ನಿ ಬಗ್ಗೆ ವಿಚಾರಿಸಿದ್ದಾರೆ. ಆದರೆ ಆಕೆ ಇಲ್ಲಿಗೆ ಬಂದಿಲ್ಲ ಎಂಬ ಉತ್ತರ ದೊರೆತಿದೆ. ಸಂಬಂಧಿಕರ ಮನೆಗಳಲ್ಲಿ ವಿಚಾರಿಸಿದಾಗಲೂ ಆಕೆಯ ಬಗ್ಗೆ ಮಾಹಿತಿ ಸಿಗದ ಕಾರಣ ಪತಿ ನಾಗರಾಜ್​​ ಈ ಬಗ್ಗೆ ದೂರು ದಾಖಲಿಸಿದ್ದರು. ಆ ಬೆನ್ನಲ್ಲೇ ಸೊಸೆ ನಾಪತ್ತೆಯಾಗಿರುವ ವಿಚಾರ ತಿಳಿದ ನಾಗರಾಜ್​​ ತಂದೆ ಖಂಡೆಪ್ಪ ಹೃದಯಾಘಾತದಿಂದ ಮೃತಪಟ್ಟಿದ್ದರು.

ಮತ್ತಷ್ಟು ಸುದ್ದಿ ಓದಲು ಇಲ್ಲಿ ಕ್ಲಿಕ್​​ ಮಾಡಿ.

Source link

IPL 2026: ತವರಿನಿಂದ ಹೊರಗೆ ಆರ್​ಸಿಬಿಗೆ ಮೊದಲ ಪಂದ್ಯ; ಎದುರಾಳಿ ಯಾರು ಗೊತ್ತಾ?

ಐಪಿಎಲ್‌ನ (IPL 2026) ಹಾಲಿ ಚಾಂಪಿಯನ್ ಆಗಿರುವ ಆರ್​​ಸಿಬಿ (RCB) ಇದುವರೆಗೆ ಆಡಿರುವ ಮೊದಲ ಎರಡು ಪಂದ್ಯಗಳನ್ನು ಗೆದ್ದುಕೊಂಡಿದೆ. ತನ್ನ ತವರಿನಲ್ಲಿ ಮೊದಲ ಎರಡು ಪಂದ್ಯಗಳನ್ನು ಆಡಿದ ಆರ್​ಸಿಬಿ ಎರಡು ಪಂದ್ಯಗಳಲ್ಲೂ ಏಕಪಕ್ಷೀಯ ಗೆಲುವು ಸಾಧಿಸಿದೆ. ಲೀಗ್​ನ ಉದ್ಘಾಟನಾ ಪಂದ್ಯದಲ್ಲಿ ಬಲಿಷ್ಠ ಬ್ಯಾಟಿಂಗ್‌ ವಿಭಾಗವನ್ನು ಹೊಂದಿರುವ ಸನ್​ರೈಸರ್ಸ್​ ಹೈದರಾಬಾದ್ ತಂಡವನ್ನು ಏಕಪಕ್ಷೀಯವಾಗಿ ಸೋಲಿಸಿದ್ದ ಆರ್​ಸಿಬಿ, ಅದಾದ ಬಳಿಕ ನಡೆದಿದ್ದ ಎರಡನೇ ಪಂದ್ಯದಲ್ಲಿ ಐದು ಬಾರಿಯ ಚಾಂಪಿಯನ್ ಸಿಎಸ್​ಕೆ ತಂಡವನ್ನು ಕೂಡ ಏಕಪಕ್ಷೀಯವಾಗಿ ಸೋಲಿಸಿತ್ತು. ಇದೀಗ ತವರಿನಿಂದ ಹೊರಗೆ ಮೊದಲ ಪಂದ್ಯವನ್ನಾಡಲು ರಜತ್ ಪಡೆ ಸಜ್ಜಾಗಿದೆ. ಹೀಗಾಗಿ ತವರಿನ ಹೊರಗೆ ಆರ್​ಸಿಬಿ ಯಾವ ರೀತಿಯ ಪ್ರದರ್ಶನ ನೀಡುತ್ತದೆ ಎಂಬುದನ್ನು ನೋಡಲು ಅಭಿಮಾನಿಗಳು ಕಾತುರರಾಗಿದ್ದಾರೆ.

ಆರ್​ಸಿಬಿ ಮತ್ತು ರಾಜಸ್ಥಾನ್ ನಡುವಿನ ಐಪಿಎಲ್ 2026 ರ 16 ನೇ ಪಂದ್ಯ ಯಾವಾಗ ನಡೆಯಲಿದೆ?

ಆರ್​ಸಿಬಿ ಮತ್ತು ರಾಜಸ್ಥಾನ್ ನಡುವಿನ ಐಪಿಎಲ್ 2026 ರ 16 ನೇ ಪಂದ್ಯವು ಏಪ್ರಿಲ್ 10 ರ ಶುಕ್ರವಾರದಂದು ನಡೆಯಲಿದೆ.

ಆರ್​ಸಿಬಿ ಮತ್ತು ರಾಜಸ್ಥಾನ್ ನಡುವಿನ ಐಪಿಎಲ್ 2026 ರ 16 ನೇ ಪಂದ್ಯ ಎಲ್ಲಿ ನಡೆಯಲಿದೆ?

ಆರ್​ಸಿಬಿ ಮತ್ತು ರಾಜಸ್ಥಾನ್ ನಡುವಿನ ಐಪಿಎಲ್ 2026 ರ 16 ನೇ ಪಂದ್ಯ ಬರ್ಸಾಪರ ಸ್ಟೇಡಿಯಂ, ಗುವಾಹಟಿಯಲ್ಲಿ ನಡೆಯಲಿದೆ.

ಆರ್​ಸಿಬಿ ಮತ್ತು ರಾಜಸ್ಥಾನ್ ನಡುವಿನ ಐಪಿಎಲ್ 2026 ರ 16 ನೇ ಪಂದ್ಯ ಯಾವ ಸಮಯಕ್ಕೆ ಪ್ರಾರಂಭವಾಗುತ್ತದೆ?

ಆರ್​ಸಿಬಿ ಮತ್ತು ರಾಜಸ್ಥಾನ್ ನಡುವಿನ ಐಪಿಎಲ್ 2026 ರ 16 ನೇ ಪಂದ್ಯವು ಭಾರತೀಯ ಕಾಲಮಾನ ಸಂಜೆ 7:30 ಕ್ಕೆ ಪ್ರಾರಂಭವಾಗಲಿದ್ದು, ಟಾಸ್ ಸಂಜೆ 7 ಗಂಟೆಗೆ ನಡೆಯಲಿದೆ.

ಆರ್​ಸಿಬಿ ಮತ್ತು ರಾಜಸ್ಥಾನ್ ನಡುವಿನ ಐಪಿಎಲ್ 2026 ರ 16 ನೇ ಪಂದ್ಯವನ್ನು ಟಿವಿಯಲ್ಲಿ ವೀಕ್ಷಿಸುವುದು ಹೇಗೆ?

ನೀವು ಸ್ಟಾರ್ ಸ್ಪೋರ್ಟ್ಸ್ ನೆಟ್‌ವರ್ಕ್‌ನಲ್ಲಿ ಟಿವಿಯಲ್ಲಿ ಆರ್​ಸಿಬಿ ಮತ್ತು ರಾಜಸ್ಥಾನ್ ನಡುವಿನ ಐಪಿಎಲ್ 2026 ರ 16 ನೇ ಪಂದ್ಯವನ್ನು ವೀಕ್ಷಿಸಬಹುದು.

ಆರ್​ಸಿಬಿ ಮತ್ತು ರಾಜಸ್ಥಾನ್ ನಡುವಿನ ಐಪಿಎಲ್ 2026 ರ 16 ನೇ ಪಂದ್ಯವನ್ನು ಮೊಬೈಲ್‌ನಲ್ಲಿ ವೀಕ್ಷಿಸುವುದು ಹೇಗೆ?

ಜಿಯೋ-ಹಾಟ್‌ಸ್ಟಾರ್ ಅಪ್ಲಿಕೇಶನ್ ಬಳಸಿಕೊಂಡು ನಿಮ್ಮ ಮೊಬೈಲ್​ಲ್ಲಿ ಆರ್​ಸಿಬಿ ಮತ್ತು ರಾಜಸ್ಥಾನ್ ನಡುವಿನ ಐಪಿಎಲ್ 2026 ರ 16ನೇ ಪಂದ್ಯವನ್ನು ನೀವು ವೀಕ್ಷಿಸಬಹುದು.

ವಿರಾಟ್ ಕೊಹ್ಲಿ ಹೆಸರು ಕೇಳುತ್ತಿದ್ದಂತೆ ಕೆರಳಿ ಕೆಂಡವಾದ ಬಾಬರ್ ಆಝಂ

ಉಭಯ ತಂಡಗಳು

ರಾಜಸ್ಥಾನ್ ರಾಯಲ್ಸ್: ಯಶಸ್ವಿ ಜೈಸ್ವಾಲ್, ವೈಭವ್ ಸೂರ್ಯವಂಶಿ, ಧ್ರುವ್ ಜುರೆಲ್ (ವಿಕೆಟ್ ಕೀಪರ್), ರಿಯಾನ್ ಪರಾಗ್ (ನಾಯಕ), ಶಿಮ್ರಾನ್ ಹೆಟ್ಮೆಯರ್, ರವೀಂದ್ರ ಜಡೇಜಾ, ಜೋಫ್ರಾ ಆರ್ಚರ್, ನಾಂದ್ರೆ ಬರ್ಗರ್, ಸಂದೀಪ್ ಶರ್ಮಾ, ರವಿ ಬಿಷ್ಣೋಯ್, ಬ್ರಿಜೇಶ್ ಶರ್ಮಾ, ಲುವಾನ್ ಸಿಂಗ್-ಪ್ರೇರಿರಾ, ರವಿ ಬಿಷ್ಣೋಯ್, ಎಸ್. ತುಷಾರ್ ದೇಶಪಾಂಡೆ, ಆಡಮ್ ಮಿಲ್ನೆ, ದಸುನ್ ಶನಕ, ಕುಲದೀಪ್ ಸೇನ್, ಯುದ್ವೀರ್ ಸಿಂಗ್ ಚರಕ್, ಶುಭಂ ದುಬೆ, ಕ್ವೀನಾ ಎಂಫಕಾ, ವಿಘ್ನೇಶ್ ಪುತ್ತೂರು, ಅಮನ್ ರಾವ್ ಪೆರಾಲ.

ಆರ್​ಸಿಬಿ ಪೂರ್ಣ ತಂಡ: ರಜತ್ ಪಾಟಿದಾರ್, ವಿರಾಟ್ ಕೊಹ್ಲಿ, ದೇವದತ್ತ್ ಪಡಿಕ್ಕಲ್, ರಜತ್ ಪಾಟಿದಾರ್, ಫಿಲ್ ಸಾಲ್ಟ್, ಜಿತೇಶ್ ಶರ್ಮಾ, ಜೋರ್ಡಾನ್ ಕಾಕ್ಸ್, ಕೃನಾಲ್ ಪಾಂಡ್ಯ, ಸ್ವಪ್ನಿಲ್ ಸಿಂಗ್, ಟಿಮ್ ಡೇವಿಡ್, ರೊಮಾರಿಯೋ ಶೆಫರ್ಡ್, ಜಾಕೋಬ್ ಬೆಥೆಲ್, ವೆಂಕಟೇಶ್ ಅಯ್ಯರ್, ಸಾತ್ವಿಕ್ ದೇಸ್ವಾಲ್, ಮಂಗೇಶ್ ಯಾದವ್, ವಿಕ್ಕಿ ಓಸ್ತ್ವಾಲ್, ವಿಹಾನ್ ಮಲ್ಹೋತ್ರಾ, ಕಾನಿಷ್ಕ್ ಚೌಹಾಣ್, ಜೋಶ್ ಹೇಜಲ್​ವುಡ್, ರಸಿಖ್ ದಾರ್, ಸುಯಶ್ ಶರ್ಮಾ, ಭುವನೇಶ್ವರ್ ಕುಮಾರ್, ನುವಾನ್ ತುಷಾರ, ಅಭಿನಂದನ್ ಸಿಂಗ್, ಜಾಕೋಬ್ ಡಫಿ,

ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

Summer Health Tips: ಮಂಗಳೂರಿಗರೇ ಸೆಖೆ ತುಂಬಾ ಇದ್ಯಾ? ಹಾಗಿದ್ರೆ ಅದರಿಂದ ಪಾರಾಗಲು ಇಲ್ಲಿದೆ ಆರೋಗ್ಯ ತಜ್ಞರು ನೀಡಿರುವ ಟಿಪ್ಸ್

ಮಂಗಳೂರಿನಂತಹ ಕರಾವಳಿ ಪ್ರದೇಶಗಳಲ್ಲಿ ಬೇಸಿಗೆ ಸಮಯದಲ್ಲಿ ಅತಿ ಹೆಚ್ಚು ಉಷ್ಣತೆ ಮತ್ತು ಆರ್ದ್ರತೆ ಕಂಡುಬರುತ್ತದೆ ಎಂಬುದು ತಿಳಿದಿರುವ ವಿಚಾರ. ಈ ರೀತಿ ಬಿಸಿಲಿನ ತಾಪಮಾನ ಹೆಚ್ಚಾಗಿರುವಲ್ಲಿ ಆರೋಗ್ಯವನ್ನು ಕಾಪಾಡಿಕೊಳ್ಳುವುದು ಅತ್ಯಂತ ಮುಖ್ಯವಾಗಿದೆ. ಸರಿಯಾದ ಜೀವನಶೈಲಿ ಮತ್ತು ಆಹಾರ ಪದ್ಧತಿಯನ್ನು ಅನುಸರಿಸುವುದರಿಂದ ಬೇಸಿಗೆಯಲ್ಲಿ ಕಂಡುಬರುವ ಆರೋಗ್ಯ ಸಮಸ್ಯೆಗಳಿಂದ ಅನಾಯಾಸವಾಗಿ ತಪ್ಪಿಸಿಕೊಳ್ಳಬಹುದು. ಆಯುರ್ವೇದದ ಪ್ರಕಾರ ಈ ಕಾಲವನ್ನು ಗ್ರೀಷ್ಮ ಋತು ಎಂದು ಕರೆಯಲಾಗುತ್ತದೆ. ಬೇಸಿಗೆಯ ಸಮಯದಲ್ಲಿ ದೇಹದಲ್ಲಿ ಪಿತ್ತದ ಪ್ರಮಾಣ ಹೆಚ್ಚಾಗುತ್ತದೆ. ಮಂಗಳೂರುಂತಹ ತೇವಾಂಶ ಇರುವ ಪ್ರದೇಶದಲ್ಲಿ ಇದು ಇನ್ನಷ್ಟು ಪರಿಣಾಮ ಬೀರುತ್ತದೆ. ಆದ್ದರಿಂದ ಗ್ರೀಷ್ಮ ಋತುಚರ್ಯೆಯನ್ನು ಅನುಸರಿಸುವುದು ಅತ್ಯವಶ್ಯಕ. ಅದಕ್ಕಾಗಿಯೇ ಟಿವಿ9 ಕನ್ನಡ ಈ ವಿಷಯದ ಕುರಿತು ಮತ್ತಷ್ಟು ಮಾಹಿತಿ ಕಲೆ ಹಾಕಲು ಉಡುಪಿ ಎಸ್‌ಡಿಎಮ್‌ ಆಯುರ್ವೇದ ಕಾಲೇಜು (SDM College of Ayurveda, Udupi) ಮತ್ತು ಆಸ್ಪತ್ರೆಯ ಕಾಯಚಿಕಿತ್ಸಾ ವಿಭಾಗದ ಸಹಾಯಕ ಪ್ರಾಧ್ಯಾಪಕಿ ಡಾ.ಮೋನಿಷಾಪಿ ಅವರನ್ನು ಸಂಪರ್ಕಿಸಿದ್ದು ಅವರು ಈ ಬಗ್ಗೆ ಹೆಚ್ಚಿನ ಮಾಹಿತಿ ನೀಡಿದ್ದಾರೆ.

ಈ ಸಮಯದಲ್ಲಿ ಸೂರ್ಯನ ಬೆಳಕು ಮಿತವಾಗಿ ಉಪಯುಕ್ತವಾಗಬಹುದು, ವಿಟಮಿನ್ ಡಿ ಮಟ್ಟವನ್ನು ಹೆಚ್ಚಿಸಲು, ಮನಸ್ಥಿತಿಗಳನ್ನು ನಿಯಂತ್ರಿಸಲು ಮತ್ತು ಆರೋಗ್ಯ ಪ್ರಯೋಜನಗಳನ್ನು ಒದಗಿಸಲು ಸಹಾಯ ಮಾಡುತ್ತದೆ. ಆದರೂ ಕೂಡ ಹೆಚ್ಚಿನ ಪ್ರಮಾಣವು ಪಿತ್ತ ಮಟ್ಟವನ್ನು ಹೆಚ್ಚಿಸುತ್ತದೆ, ಅಂಗಾಂಶಗಳನ್ನು ಒಣಗಿಸುತ್ತದೆ ಮತ್ತು ದೇಹದಲ್ಲಿನ ಓಜಸ್ (ಪ್ರಮುಖ ಶಕ್ತಿ) ಅನ್ನು ದುರ್ಬಲಗೊಳಿಸುತ್ತದೆ, ಇದು ಚರ್ಮದ ಆರೋಗ್ಯದ ಮೇಲೆ ಪರಿಣಾಮ ಬೀರುತ್ತದೆ. ಈ ಸಮಯದಲ್ಲಿ ದೇಹದ ಬಲ ಕಡಿಮೆಯಾಗುತ್ತದೆ ಹಾಗೂ ಪಚನ ಶಕ್ತಿ ಕೂಡ ಕಡಿಮೆ ಇರುತ್ತದೆ. ಹಾಗಾಗಿ ಈ ಸಂದರ್ಭದಲ್ಲಿ ಶೀತಲ, ಮಧುರ ಮತ್ತು ದ್ರವ ಆಹಾರಗಳನ್ನು ಸೇವಿಸಬೇಕು. ಹಾಲು, ಮಜ್ಜಿಗೆ, ತೆಂಗಿನಕಾಯಿ ನೀರು ಮತ್ತು ಹಣ್ಣುಗಳ ರಸಗಳು ದೇಹಕ್ಕೆ ತಂಪು ನೀಡುತ್ತವೆ.

ಬೇಸಿಗೆಗೆ ತಂಪಾಗಿಸುವ ಆಹಾರಗಳು:

ನಾವು ಈ ಸಮಯದಲ್ಲಿ ನೈಸರ್ಗಿಕವಾಗಿ ತಂಪಾಗಿಸುವ, ರಸಭರಿತವಾದ ಮತ್ತು ಜೀರ್ಣಿಸಿಕೊಳ್ಳಲು ಸುಲಭವಾದ ಆಹಾರಗಳನ್ನು ಸೇವಿಸಬೇಕು.

ಮಜ್ಜಿಗೆ: ಹಗುರ, ಜೀರ್ಣಕ್ರಿಯೆಗೆ ಅನುಕೂಲಕರ ಮತ್ತು ತಂಪಾಗಿಸುವ ಪಾನೀಯ. ಮಜ್ಜಿಗೆಯಲ್ಲಿ ಒಂದು ಚಿಟಿಕೆ ಜೀರಿಗೆ ಸೇರಿಸುವುದರಿಂದ ಅದರ ಪರಿಣಾಮ ಹೆಚ್ಚಾಗುತ್ತದೆ.
ಎಳನೀರು: ಇದು ಪ್ರಕೃತಿಯ ಪರಿಪೂರ್ಣ ಎಲೆಕ್ಟ್ರೋಲೈಟ್ ಪಾನೀಯವಾಗಿದ್ದು, ಇದನ್ನು ಬೆಳಿಗ್ಗೆ ಮಧ್ಯಾಹ್ನದ ಸಮಯದಲ್ಲಿ ಸೇವಿಸುವುದು ಉತ್ತಮ.
ಗಿಡಮೂಲಿಕೆಗಳ ಕಷಾಯ: ಕೊತ್ತಂಬರಿ ಬೀಜ ಅಥವಾ ಸೋಂಪು ಬೀಜದ ನೀರು ಶಾಖ ಮತ್ತು ಆಮ್ಲೀಯತೆಯನ್ನು ಕಡಿಮೆ ಮಾಡುತ್ತದೆ.
ಆಮ್ಲಾ ಜ್ಯೂಸ್: ರೋಗನಿರೋಧಕ ಶಕ್ತಿಯನ್ನು ಬಲಪಡಿಸುತ್ತದೆ.
ಹಣ್ಣುಗಳು: ಕಲ್ಲಂಗಡಿ, ದ್ರಾಕ್ಷಿ ಮತ್ತು ದಾಳಿಂಬೆ.
ತರಕಾರಿಗಳು: ಸೌತೆಕಾಯಿಗಳು, ಸೋರೆಕಾಯಿಗಳು ಮತ್ತು ಎಲೆಗಳ ತರಕಾರಿಗಳು.
ಧಾನ್ಯ: ಅಕ್ಕಿ ಮತ್ತು ಬಾರ್ಲಿ.
ಡೈರಿ: ಪಿತ್ತ ಸಮತೋಲನಕ್ಕೆ ತಾಜಾ ಹಾಲು ಮತ್ತು ತುಪ್ಪದ ಸೇವನೆಯ ಮಿತಿಯ ಅಗತ್ಯವಿದೆ.

ಇದನ್ನೂ ಓದಿ: Cold Water Vs Warm Water: ಬಿಸಿ ನೀರು ಅಥವಾ ತಣ್ಣೀರು; ಬೇಸಿಗೆಯಲ್ಲಿ ಕುಡಿಯಲು ಯಾವುದು ಬೆಸ್ಟ್?

ಈ ಸಲಹೆಗಳನ್ನು ತಪ್ಪದೆ ಪಾಲಿಸಿ:

ಸಾಮಾನ್ಯವಾಗಿ ಈ ಸಮಯದಲ್ಲಿ ಹೆಚ್ಚು ಖಾರ ಮತ್ತು ಎಣ್ಣೆಯ ಪದಾರ್ಥಗಳನ್ನು ಕಡಿಮೆ ಬಳಸುವುದು ಉತ್ತಮ, ದಿನವಡಿ ಸಾಕಷ್ಟು ನೀರು ಕುಡಿಯಬೇಕು ದೇಹವನ್ನು ಹೈಡ್ರೇಟ್ ಆಗಿಟ್ಟುಕೊಳ್ಳಬೇಕು, ಬಿಸಿಲಿನಿಂದ ರಕ್ಷಣೆ ಪಡೆಯಲು ಹತ್ತಿ ಬಟ್ಟೆಗಳನ್ನು ಧರಿಸಬೇಕು, ಛತ್ರಿ- ಸನ್ ಗ್ಲಾಸ್ ಬಳಸುವುದರಿಂದ ಕಣ್ಣು ಮತ್ತು ಚರ್ಮವನ್ನು ರಕ್ಷಿಸಬಹುದು. ಬೆಳಿಗ್ಗೆ 11 ರಿಂದ ಮಧ್ಯಾಹ್ನ 3 ರವರೆಗೆ ನೇರ ಸೂರ್ಯನ ಬೆಳಕಿಗೆ ಒಡ್ಡಿಕೊಳ್ಳುವುದನ್ನು ತಪ್ಪಿಸಬೇಕು ಮತ್ತು ಸ್ವಲ್ಪ ವಿಶ್ರಾಂತಿಯನ್ನು ತೆಗೆದುಕೊಳ್ಳಬೇಕು. ಸರಿಯಾದ ನಿದ್ರೆ, ನಿಯಮಿತ ಸ್ನಾನ ಮತ್ತು ಸ್ವಚ್ಛತೆ ಕೂಡ ಮುಖ್ಯ ಬೆವರು ಕಾರಣದಿಂದ ಚರ್ಮದ ಸಮಸ್ಯೆಗಳು ಉಂಟಾಗಬಹುದು ಆದ್ದರಿಂದ ದಿನಕ್ಕೆ ಎರಡು ಬಾರಿ ಸ್ನಾನ ಮಾಡುವುದು ಉತ್ತಮ. ಯೋಗ ಮತ್ತು ಧ್ಯಾನದಿಂದ ಮಾನಸಿಕ ಸಮತೋಲನವನ್ನು ಕಾಪಾಡಬಹುದು.

ಸುಡುವ ಬಿಸಿಲಿನ ನಡುವೆ ನಮ್ಮ ಮಾನಸಿಕ ಹಾಗೂ ದೈಹಿಕ ಆರೋಗ್ಯ ಸೇರಿದಂತೆ ಒಟ್ಟಾರೆ ನಮ್ಮ ಆರೋಗ್ಯವನ್ನು ಕಾಪಾಡಿಕೊಳ್ಳುವತ್ತ ಗಮನಹರಿಸಬೇಕು. ಜಾಗತಿಕ ತಾಪಮಾನವು ಪ್ರಸ್ತುತ ಮಟ್ಟಕ್ಕಿಂತ ಹೆಚ್ಚಾದರೆ, ಜನರು ಬಿಸಿ ಮತ್ತು ಆರ್ದ್ರ ವಾತಾವರಣದಿಂದ ಅನಾರೋಗ್ಯಕ್ಕೆ ಒಳಗಾಗುತ್ತಾರೆ. ಆದ್ದರಿಂದ ಈ ಕ್ರಮಗಳನ್ನು ಅನುಸರಿಸಿದರೆ ಮಂಗಳೂರು ಬೇಸಿಗೆಯಲ್ಲಿ ಆರೋಗ್ಯವನ್ನು ಕಾಪಾಡಿಕೊಳ್ಳಬಹುದು.

ಆರೋಗ್ಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

ನಾಸಿಕ್​ನ ಐಟಿ ಕಂಪನಿಯಲ್ಲಿ ಮಹಿಳೆಯರ ಮತಾಂತರ, ಲೈಂಗಿಕ ದೌರ್ಜನ್ಯ ದಂಧೆ ಬಯಲು

ನಾಸಿಕ್, ಏಪ್ರಿಲ್ 9: ಮಹಾರಾಷ್ಟ್ರದ (Maharashtra) ನಾಸಿಕ್‌ನ ಪ್ರತಿಷ್ಠಿತ ಬಹುರಾಷ್ಟ್ರೀಯ ಐಟಿ ಕಂಪನಿಯೊಂದರಲ್ಲಿ ಮಹಿಳಾ ಸಹೋದ್ಯೋಗಿಗಳಿಗೆ ಕಿರುಕುಳ, ಲೈಂಗಿಕ ದೌರ್ಜನ್ಯ ಮತ್ತು ಬ್ಲ್ಯಾಕ್‌ಮೇಲ್ ಮಾಡಿದ್ದಕ್ಕಾಗಿ ಆಸಿಫ್ ಅನ್ಸಾರಿ, ಶಫಿ ಶೇಖ್, ಶಾರುಖ್ ಖುರೇಷಿ, ರಜಾ ಮೆಮನ್ ಮತ್ತು ತೌಸಿಫ್ ಅತ್ತರ್ ಅವರನ್ನು ಬಂಧಿಸಲಾಗಿದೆ. ಒಟ್ಟು 8 ಮಹಿಳಾ ಉದ್ಯೋಗಿಗಳು  ದೂರುಗಳನ್ನು ದಾಖಲಿಸಿದ್ದಾರೆ ಮತ್ತು ಒಬ್ಬ ಪುರುಷ ಉದ್ಯೋಗಿಯಿಂದ ಒಂದು ದೂರು ದಾಖಲಾಗಿದೆ. ಅವರ ಮೇಲೆ ಇಸ್ಲಾಂ ಧರ್ಮಕ್ಕೆ ಮತಾಂತರಗೊಳ್ಳುವಂತೆ ಒತ್ತಡ ಹೇರಲಾಗಿತ್ತು. ಈ ಪ್ರಕರಣಕ್ಕೆ ಸಂಬಂಧಿಸಿದಂತೆ 6 ಜನರನ್ನು ಬಂಧಿಸಲಾಗಿದೆ.

ನಾಸಿಕ್‌ನ ಪ್ರಸಿದ್ಧ ಬಹುರಾಷ್ಟ್ರೀಯ ಕಂಪನಿಯ ಆಘಾತಕಾರಿ ಪ್ರಕರಣಗಳು ಬಹಿರಂಗಗೊಂಡಿವೆ. ಈ ಕಂಪನಿಯಲ್ಲಿ ಕೆಲಸ ಮಾಡುವ ಯುವತಿಯರಿಗೆ ಉತ್ತಮ ವೃತ್ತಿಜೀವನದ ಆಮಿಷವೊಡ್ಡಲಾಯಿತು. ಆ ಕಂಪನಿಯಲ್ಲಿ ಕೆಲಸ ಮಾಡುವ 8 ಯುವತಿಯರನ್ನು ಲೈಂಗಿಕವಾಗಿ ಶೋಷಿಸುತ್ತಿದ್ದರು. ಮತಾಂತರಕ್ಕೆ ಅವರ ಮೇಲೆ ಒತ್ತಡ ಹೇರಲು ಪ್ರಯತ್ನಿಸಲಾಗುತ್ತಿತ್ತು ಎಂಬ ವಿಷಯ ಬೆಳಕಿಗೆ ಬಂದಿದೆ. ಈ ಪ್ರಕರಣವು ರಾಜ್ಯಾದ್ಯಂತ ಕೋಲಾಹಲವನ್ನು ಸೃಷ್ಟಿಸಿದೆ.


ಇದನ್ನೂ ಓದಿ: ಹಿಂದೂ ಯುವತಿಯನ್ನ ಮತಾಂತರಕ್ಕೆ ಯತ್ನ: ಸಮೀರ್ ನನ್ನು ಪೊಲೀಸರಿಗೆ ಒಪ್ಪಿಸಿದ ಹಿಂದೂ ಸಂಘಟನೆಗಳು

ಕಂಪನಿಯ ಕೆಲವು ತಂಡದ ನಾಯಕರು ಯುವತಿಯರನ್ನು ವ್ಯವಸ್ಥಿತವಾಗಿ ಬ್ರೈನ್ ವಾಶ್ ಮಾಡುತ್ತಿದ್ದರು. ಅವರನ್ನು ಪ್ರೀತಿಯ ಬಲೆಗೆ ಬೀಳಿಸಿ ಮದುವೆಗೆ ಆಮಿಷ ಒಡ್ಡಲಾಗುತ್ತಿತ್ತು. ಈ ಹಿನ್ನೆಲೆಯಲ್ಲಿ ಇಬ್ಬರು ವಿವಾಹಿತ ಮಹಿಳೆಯರು ಸೇರಿದಂತೆ 8 ಯುವತಿಯರು ಒಟ್ಟು 9 ಲೈಂಗಿಕ ದೌರ್ಜನ್ಯ ಮತ್ತು ಕಿರುಕುಳ ಪ್ರಕರಣಗಳನ್ನು ದಾಖಲಿಸಿದ್ದರು. ಮಹಿಳೆಯರನ್ನು ಮಾತ್ರವಲ್ಲದೆ ಒಬ್ಬ ಯುವಕನನ್ನೂ ಬಲವಂತವಾಗಿ ಮತಾಂತರಿಸಲಾಗಿದೆ ಎಂಬ ಆಘಾತಕಾರಿ ಸಂಗತಿ ಬೆಳಕಿಗೆ ಬಂದಿದೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

ಪಾಸ್‌ಪೋರ್ಟ್ ಬೇಡ, ಮುಖ ಸ್ಕ್ಯಾನ್ ಮಾಡಿದ್ರೆ ಸಾಕು: ಬೆಂಗಳೂರು ವಿಮಾನ ನಿಲ್ದಾದಲ್ಲಿ ಹೊಸ ಮೈಲಿಗಲ್ಲು

ಬೆಂಗಳೂರು, ಏಪ್ರಿಲ್​​ 09: ದೇಶೀಯ ವಿಮಾನ ಪ್ರಯಾಣಿಕರಿಗೆ ಈಗಾಗಲೇ ಅತ್ಯಾಧುನಿಕ ‘ಡಿಜಿ ಯಾತ್ರಾ’ ಸೌಲಭ್ಯವನ್ನು ಒದಗಿಸುತ್ತಿರುವ ಬೆಂಗಳೂರಿನ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ (KIA), ಇದೀಗ ಅಂತಾರಾಷ್ಟ್ರೀಯ ಪ್ರಯಾಣಿಕರಿಗೂ ಮುಖಚಹರೆ (Biometric) ಆಧಾರಿತ ಸ್ಪರ್ಶರಹಿತ ಪ್ರಯಾಣದ ಅನುಭವ ನೀಡಲು ಸಜ್ಜಾಗಿದೆ. ಬೆಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ನಿಯಮಿತ (BIAL), ಇಂಡಿಗೋ, ಡಿಜಿ ಯಾತ್ರಾ ಫೌಂಡೇಶನ್ ಹಾಗೂ ಅಂತಾರಾಷ್ಟ್ರೀಯ ವಾಯು ಸಾರಿಗೆ ಸಂಘಟನೆ (IATA) ಜಂಟಿಯಾಗಿ, ಅಂತಾರಾಷ್ಟ್ರೀಯ ಪ್ರಯಾಣಿಕರಿಗಾಗಿ ಟಿಕೆಟ್ ಬುಕಿಂಗ್‌ನಿಂದ ಹಿಡಿದು ಬೋರ್ಡಿಂಗ್‌ವರೆಗಿನ ಸಂಪೂರ್ಣ ಸಂಪರ್ಕರಹಿತ ಪ್ರಯಾಣದ ತಾಂತ್ರಿಕ ಪ್ರಯೋಗವನ್ನು ಯಶಸ್ವಿಯಾಗಿ ನಡೆಸಿವೆ.

ಭಾರತದಲ್ಲಿ ಇದೇ ಮೊದಲು!

ಭಾರತದಲ್ಲಿ ಇದೇ ಮೊದಲ ಬಾರಿಗೆ ಇಂತಹದೊಂದು ವಿನೂತನ ಪ್ರಯೋಗ ನಡೆದಿದ್ದು, ಜಾಗತಿಕ ಮಟ್ಟದಲ್ಲಿ ತಡೆರಹಿತ ವಿಮಾನ ಪ್ರಯಾಣ ವ್ಯವಸ್ಥೆಯ ಅನುಷ್ಠಾನದತ್ತ ಇದು ಮಹತ್ವದ ಹೆಜ್ಜೆ ಎಂದೇ ಪರಿಗಣಿಸಲಾಗಿದೆ. ಈ ವರ್ಷದ ಆರಂಭದಲ್ಲಿ ಇಂಡಿಗೋ ಹಾಗೂ ಡಿಜಿ ಯಾತ್ರಾ ಫೌಂಡೇಶನ್ ಸಂಸ್ಥೆಗಳು, ಪ್ರಯಾಣಿಕರ ದತ್ತಾಂಶ ಸುರಕ್ಷತೆಗಾಗಿ ‘ಸೆಲ್ಫ್-ಸೋವರಿನ್ ಐಡೆಂಟಿಟಿ’ (ಎಸ್‌ಎಸ್‌ಐ) ಎಂಬ ಸ್ವಯಂ-ಗುರುತು ವ್ಯವಸ್ಥೆ ಹಾಗೂ ಬೋರ್ಡಿಂಗ್ ಪಾಸ್‌ಗಳನ್ನು ಸುಲಭವಾಗಿ ವರ್ಗಾಯಿಸಲು ‘ಆ್ಯಪ್-ಟು-ಆ್ಯಪ್’ ತಂತ್ರಜ್ಞಾನವನ್ನು ಪರಿಚಯಿಸಿದ್ದವು. ಇದೇ ಯಶಸ್ವಿ ಮಾದರಿಯನ್ನು ಇದೀಗ ಬಿಐಎಎಲ್ ನೆರವಿನೊಂದಿಗೆ ಅಂತಾರಾಷ್ಟ್ರೀಯ ಪ್ರಯಾಣಕ್ಕೂ ವಿಸ್ತರಿಸಿ, ಅದರ ಕಾರ್ಯಸಾಧ್ಯತೆಯನ್ನು ಯಶಸ್ವಿಯಾಗಿ ಸಾಬೀತುಪಡಿಸಲಾಗಿದೆ.

ಇದನ್ನೂ ಓದಿ: ಮತ್ತೊಂದು ಐತಿಹಾಸಿಕ ಮೈಲಿಗಲ್ಲು ಸಾಧಿಸಿದ ಬೆಂಗಳೂರು ಕೆಂಪೇಗೌಡ ವಿಮಾನ ನಿಲ್ದಾಣ..!

ಅಂತಾರಾಷ್ಟ್ರೀಯ ಪ್ರಯಾಣಿಕರ ಸಂಖ್ಯೆ ಗಣನೀಯವಾಗಿ ಹೆಚ್ಚುತ್ತಿದ್ದು, ಈ ತಂತ್ರಜ್ಞಾನದ ಅಳವಡಿಕೆಯು ಪ್ರಯಾಣದ ಸಮಯವನ್ನು ಉಳಿಸುವುದಲ್ಲದೆ, ಭದ್ರತೆಯನ್ನೂ ಹೆಚ್ಚಿಸಲಿದೆ. ವಿಶೇಷವೆಂದರೆ, ಸ್ಪರ್ಶರಹಿತ ಪ್ರಯಾಣ ವ್ಯವಸ್ಥೆಯನ್ನು ಜಾಗತಿಕ ಮಟ್ಟದಲ್ಲಿ ಜಾರಿಗೆ ತರುವ ಈ ಪ್ರತಿಷ್ಠಿತ ಯೋಜನೆಯಲ್ಲಿ ಪಾಲ್ಗೊಂಡಿರುವ ಭಾರತದ ಏಕೈಕ ಏರ್​​ಪೋರ್ಟ್​​ಎಂಬ ಹೆಗ್ಗಳಿಕೆಗೆ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಭಾಜನವಾಗಿದೆ.

ಕಾರ್ಯನಿರ್ವಹಣೆ ಹೇಗೆ?

ಪ್ರಯಾಣಿಕರ ಗುರುತನ್ನು ಮುಂಚಿತವಾಗಿಯೇ ಸುರಕ್ಷಿತವಾಗಿ ದೃಢೀಕರಿಸಿ, ವಿಮಾನ ನಿಲ್ದಾಣದ ಎಲ್ಲಾ ಹಂತಗಳಲ್ಲಿ ಮುಖ ಗುರುತಿನ (ಫೇಸ್ ರೆಕಗ್ನಿಷನ್) ಮೂಲಕ ಪರಿಶೀಲಿಸುವ ವ್ಯವಸ್ಥೆಯನ್ನು ರೂಪಿಸಲಾಗಿದೆ. ಈ ವ್ಯವಸ್ಥೆ ಟಿಕೆಟ್ ಬುಕ್ಕಿಂಗ್‌ನಿಂದ ಹಿಡಿದು ವಿಮಾನ ನಿಲ್ದಾಣದ ಒಳಗೆ ಪ್ರವೇಶಿಸುವವರೆಗಿನ ಸಂಪೂರ್ಣ ಪ್ರಯಾಣವನ್ನು ಒಳಗೊಂಡಿದೆ. ಎಲ್ಲಾ ಭದ್ರತಾ ತಪಾಸಣೆಗಳಲ್ಲಿ ಬಯೋಮೆಟ್ರಿಕ್ ತಂತ್ರಜ್ಞಾನ ಬಳಸಲಾಗಿದೆ. ಆ ಮೂಲಕ ಇನ್ನು ಮುಂದೆ ಪಾಸ್‌ಪೋರ್ಟ್ ಅಥವಾ ಬೋರ್ಡಿಂಗ್ ಪಾಸ್ ತೋರಿಸುವ ಬದಲು, ಪ್ರಯಾಣಿಕರು ತಮ್ಮ ಮುಖವನ್ನು ಸ್ಕ್ಯಾನ್ ಮಾಡಿಸುವ ಮೂಲಕ ಸುಲಭವಾಗಿ ಪ್ರಯಾಣ ಮಾಡಬಹುದಾಗಿದೆ.

ಈ ತಂತ್ರಜ್ಞಾನ ‘ಸೆಲ್ಫ್-ಸೋವೆರಿನ್ ಐಡೆಂಟಿಟಿ’ (SSI) ಮಾದರಿಯನ್ವಯ ಕೆಲಸ ಮಾಡಲಿದೆ. ಇದರಿಂದ ವ್ಯಕ್ತಿಯ ಗುರುತು ಸುರಕ್ಷಿತವಾಗಿ ಸಂಗ್ರಹವಾಗಿದ್ದು, ತಕ್ಷಣವೇ ವಿವಿಧ ವ್ಯವಸ್ಥೆಗಳ ಮೂಲಕ ಪರಿಶೀಲನೆಗೊಳಗಾಗುತ್ತದೆ. ಇದಲ್ಲದೆ, ಏರ್‌ಲೈನ್ ಆ್ಯಪ್‌ಗಳು ಮತ್ತು ವಿಮಾನ ನಿಲ್ದಾಣ ವ್ಯವಸ್ಥೆಗಳು ಪರಸ್ಪರ ಸಂಪರ್ಕ ಹೊಂದಿದ್ದು, ಪ್ರಯಾಣಿಕರಿಗೆ ಬೋರ್ಡಿಂಗ್ ಪಾಸ್ ಮತ್ತು ಪ್ರಯಾಣ ವಿವರಗಳು ಸ್ವಯಂಚಾಲಿತವಾಗಿ ಲಭ್ಯವಾಗುತ್ತವೆ.

ಮತ್ತಷ್ಟು ಸುದ್ದಿ ಓದಲು ಇಲ್ಲಿ ಕ್ಲಿಕ್​​ ಮಾಡಿ.

Source link

ಕೆಲ ಮನೆಗಳಲ್ಲಿ ನೀರು ತುಂಬಿದ ಲೋಟದೊಳಗೆ ನಿಂಬೆಹಣ್ಣು ಇಟ್ಟಿರುವುದನ್ನು ನೋಡಿದ್ದೀರಾ? ಅದರ ಅದ್ಭುತ ಲಾಭಗಳೇನು ಗೊತ್ತಾ?

ನಮ್ಮ ಸುತ್ತಮುತ್ತಲಿನ ವಾತಾವರಣವು ಮನಸ್ಸು ಮತ್ತು ಜೀವನದ ಮೇಲೆ ನೇರ ಪರಿಣಾಮ ಬೀರುತ್ತದೆ. ಮನೆಯಲ್ಲಿ ಸಕಾರಾತ್ಮಕತೆ ಇದ್ದರೆ ಮಾತ್ರ ನೆಮ್ಮದಿ ನೆಲೆಸಲು ಸಾಧ್ಯ. ವಾಸ್ತು ಶಾಸ್ತ್ರ ಮತ್ತು ಆಧ್ಯಾತ್ಮಿಕ ನಂಬಿಕೆಗಳ ಪ್ರಕಾರ, ನಿಂಬೆಹಣ್ಣು ಕೇವಲ ಆಹಾರ ಪದಾರ್ಥವಲ್ಲ, ಅದು ನಕಾರಾತ್ಮಕ ಶಕ್ತಿಗಳನ್ನು ಹೀರಿಕೊಳ್ಳುವ ಅದ್ಭುತ ಶಕ್ತಿಯನ್ನು ಹೊಂದಿದೆ. ನೀವು ಜೀವನದಲ್ಲಿ ಸಣ್ಣಪುಟ್ಟ ಅಡೆತಡೆಗಳಿಂದ ಬೇಸತ್ತಿದ್ದರೆ, ಈ ಕೆಳಗಿನ ಸರಳ ಹಾಗೂ ಪ್ರಭಾವಶಾಲಿ ವಾಸ್ತು ಸಲಹೆಯನ್ನು ಒಮ್ಮೆ ಪ್ರಯತ್ನಿಸಿ ನೋಡಿ.

ಈ ಪರಿಹಾರವನ್ನು ಮಾಡುವುದು ಹೇಗೆ?

ಒಂದು ಶುದ್ಧವಾದ ಮತ್ತು ಪಾರದರ್ಶಕವಾದ ಗಾಜಿನ ಲೋಟವನ್ನು ತೆಗೆದುಕೊಳ್ಳಿ. ಅದರಲ್ಲಿ ಶುದ್ಧವಾದ ನೀರನ್ನು ತುಂಬಿಸಿ. ಒಂದು ತಾಜಾ ಹಳದಿ ನಿಂಬೆಹಣ್ಣನ್ನು ಆ ನೀರಿನೊಳಗೆ ಹಾಕಿ. ಈ ಲೋಟವನ್ನು ನಿಮ್ಮ ಮನೆ ಅಥವಾ ಕಚೇರಿಯ ಸಭಾಂಗಣದಲ್ಲಿ (Hall) ಎಲ್ಲರಿಗೂ ಕಾಣಿಸುವಂತಹ ಜಾಗದಲ್ಲಿ ಇರಿಸಿ. ಪ್ರತಿ ಶನಿವಾರ ಅಥವಾ ಮಂಗಳವಾರ ಈ ನೀರನ್ನು ಬದಲಾಯಿಸಿ, ಹಳೆಯ ನಿಂಬೆಹಣ್ಣನ್ನು ಹೊರಹಾಕಿ ಹೊಸ ನಿಂಬೆಹಣ್ಣನ್ನು ಇಡುವುದು ಅತ್ಯಂತ ಶುಭ.

ಈ ಪರಿಹಾರದಿಂದ ದೂರವಾಗುವ ಸಮಸ್ಯೆಗಳು:

ಕಾರಣವಿಲ್ಲದೆ ಕುಟುಂಬ ಸದಸ್ಯರ ನಡುವೆ ಸಣ್ಣ ವಿಷಯಗಳಿಗೂ ಜಗಳವಾಗುತ್ತಿದ್ದರೆ, ಈ ನಿಂಬೆಹಣ್ಣಿನ ನೀರು ಮನೆಯಲ್ಲಿ ಶಾಂತಿಯುತ ವಾತಾವರಣವನ್ನು ನಿರ್ಮಿಸುತ್ತದೆ. ವ್ಯಾಪಾರ ಸ್ಥಳದಲ್ಲಿ ಅಥವಾ ನಿಮ್ಮ ಆಫೀಸ್ ಟೇಬಲ್ ಮೇಲೆ ಈ ರೀತಿ ನಿಂಬೆಹಣ್ಣನ್ನು ಇಡುವುದರಿಂದ ಜನರ ಕೆಟ್ಟ ದೃಷ್ಟಿ ದೂರವಾಗಿ, ಲಾಭದ ಹಾದಿ ಸುಗಮವಾಗುತ್ತದೆ. ಇದಲ್ಲದೇ ಬೇರೆಯವರ ದುಷ್ಟ ಕಣ್ಣಿನಿಂದ (Evil Eye) ನಿಮ್ಮ ಕೆಲಸಗಳು ಅರ್ಧಕ್ಕೆ ನಿಂತುಹೋಗುತ್ತಿದ್ದರೆ ಅಥವಾ ಮನೆಯಲ್ಲಿ ಯಾರಾದರೂ ಪದೇ ಪದೇ ಅನಾರೋಗ್ಯಕ್ಕೆ ತುತ್ತಾಗುತ್ತಿದ್ದರೆ ಇದು ರಾಮಬಾಣದಂತೆ ಕೆಲಸ ಮಾಡುತ್ತದೆ.

ಇದನ್ನೂ ಓದಿ: ಮುಯ್ಯಿ ರೂಪದಲ್ಲಿ ಕೊಡುವ ಹಣಕ್ಕೆ 1ರೂ. ಸೇರಿಸಿ ಕೊಡಬೇಕು ಯಾಕೆ ಗೊತ್ತಾ?

ಮನೆಗೆ ಬಂದ ಕೂಡಲೇ ಅಕಾರಣ ಭಯ ಅಥವಾ ಒತ್ತಡ ಉಂಟಾಗುತ್ತಿದ್ದರೆ, ಈ ಪರಿಹಾರವು ಮನೆಯೊಳಗೆ ಸಕಾರಾತ್ಮಕ ಕಂಪನಗಳನ್ನು (Positive Vibrations) ಸೃಷ್ಟಿಸಿ ಮನಸ್ಸನ್ನು ಶಾಂತಗೊಳಿಸುತ್ತದೆ. ರಾತ್ರಿ ವೇಳೆ ಕೆಟ್ಟ ಕನಸು ಬೀಳುವವರು ಅಥವಾ ಮನೆಯಲ್ಲಿ ಯಾರೋ ಇದ್ದಾರೆ ಎಂಬ ಭ್ರಮೆಯಿರುವವರು ಈ ಪದ್ಧತಿಯನ್ನು ಅನುಸರಿಸುವುದರಿಂದ ಮಾನಸಿಕ ಧೈರ್ಯ ಹೆಚ್ಚುತ್ತದೆ.

ಯಾಕೆ ಈ ಪರಿಹಾರ ಮುಖ್ಯ?

ವಿಜ್ಞಾನದ ಪ್ರಕಾರವೂ ನಿಂಬೆಹಣ್ಣು ತನ್ನ ಸುವಾಸನೆಯಿಂದ ಪರಿಸರವನ್ನು ತಾಜಾವಾಗಿಡುತ್ತದೆ. ಆಧ್ಯಾತ್ಮಿಕವಾಗಿ, ನಿಂಬೆಹಣ್ಣು ನಕಾರಾತ್ಮಕ ಶಕ್ತಿಯನ್ನು ತನ್ನೊಳಗೆ ಎಳೆದುಕೊಂಡು ವಾತಾವರಣವನ್ನು ಶುದ್ಧೀಕರಿಸುತ್ತದೆ.

ಮತ್ತಷ್ಟು ಆಧ್ಯಾತ್ಮಿಕ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

ಮುಖಾಮುಖಿ ಆಗಲಿವೆ ‘ಧುರಂಧರ್ 2’-‘ಟಾಕ್ಸಿಕ್’; ಹೇಗೆ?

‘ಧುರಂಧರ್ 2’ ಹಾಗೂ ‘ಟಾಕ್ಸಿಕ್’ ನಡುವೆ ಕ್ಲ್ಯಾಶ್ ಆಗಲಿದೆ ಎಂಬ ವಿಷಯ ಸಾಕಷ್ಟು ಚರ್ಚೆ ಹುಟ್ಟುಹಾಕಿತ್ತು. ಯಾವಾಗ ‘ಟಾಕ್ಸಿಕ್’ ಸಿನಿಮಾ ರಿಲೀಸ್ ಮುಂದಕ್ಕೆ ಹೋಯಿತೋ ಆಗ ಈ ಚರ್ಚೆ ಕೂಡ ಕೊನೆ ಆಯಿತು. ಈಗ ‘ಧುರಂದರ್ 2’ ಹಾಗೂ ‘ಟಾಕ್ಸಿಕ್’ ಒಂದೇ ಸಮಯದಲ್ಲಿ ರಿಲೀಸ್ ಆಗಲಿವೆ! ಅರೆ ಇದೇನು ಅಂತೀರಾ? ಆ ಬಗ್ಗೆ ಇಲ್ಲಿದೆ ವಿವರ.

ರಣವೀರ್ ಸಿಂಗ್ ಹಾಗೂ ಆದಿತ್ಯ ಧಾರ್ ಅವರು ‘ಧುರಂಧರ್: ದಿ ರಿವೇಂಜ್’ ಮೂಲಕ ಹಲ್​ಚಲ್ ಸೃಷ್ಟಿಸಿದ್ದಾರೆ. ಈ ಚಿತ್ರ ಬಾಕ್ಸ್ ಆಫೀಸ್​​​ನಲ್ಲಿ ಧೂಳೆಬ್ಬಿಸಿದೆ. ಎಷ್ಟೇ ದೊಡ್ಡ ಬಜೆಟ್ ಸಿನಿಮಾ ಆದರೂ, ಎಷ್ಟೇ ಜನಪ್ರಿಯತೆ ಪಡೆದರೂ 50 ದಿನಗಳ ಬಳಿಕ ಒಟಿಟಿಯಲ್ಲಿ ರಿಲೀಸ್ ಆಗುತ್ತವೆ. ಆದರೆ, ‘ಧುರಂಧರ್ 2’ ವಿಷಯದಲ್ಲಿ ಆ ರೀತಿ ಆಗುವುದಿಲ್ಲ ಎನ್ನಲಾಗಿದೆ. ಮಾರ್ಚ್ 19ರಲ್ಲಿ ರಣವೀರ್ ನಟನೆಯ ಈ ಸಿನಿಮಾ ರಿಲೀಸ್ ಆಗಿದೆ. ಎರಡು ತಿಂಗಳ ಅವಧಿ ಎಂದರೂ ಮೇ 15ಕ್ಕೆ ಚಿತ್ರ ಒಟಿಟಿಯಲ್ಲಿ ರಿಲೀಸ್ ಆಗಬೇಕಿತ್ತು.

ಆದರೆ, ಒಟಿಟಿ ರಿಲೀಸ್ ಪ್ಲ್ಯಾನ್ ಬೇರೆಯದೇ ಇದೆ ಎನ್ನಲಾಗಿದೆ. ಸದ್ಯ ಎಲ್ಲೆಲ್ಲೂ ಐಪಿಎಲ್ ಹವಾ ಜೋರಾಗಿದೆ. ಐಪಿಎಲ್ ಜ್ವರ ಮೇ 31ರವರೆಗೆ ಇರಲಿದೆ. ಇದು ಸಿನಿಮಾ ಒಟಿಟಿ ರಿಲೀಸ್ ಮೇಲೆ ಪ್ರಭಾವ ಬೀರಬಹುದು ಎಂದು ಹೇಳಲಾಗುತ್ತಾ ಇದೆ. ಐಪಿಎಲ್ ಪ್ರಸಾರ ಕಾಣುತ್ತಿರುವುದು ಜಿಯೋ ಹಾಟ್​ ಸ್ಟಾರ್​​ನಲ್ಲಿ. ಈ ಸಿನಿಮಾ ಪ್ರಸಾರ ಕಾಣೋದು ಕೂಡ ಇದೇ ಒಟಿಟಿಯಲ್ಲಿ.

‘ಧುರಂಧರ್ 2’ ಸಿನಿಮಾ ಥಿಯೇಟರ್​​​ನಲ್ಲಿ ಈಗಾಗಲೇ ಸಾಕಷ್ಟು ದಾಖಲೆಗಳನ್ನು ಬರೆದಿದೆ. ಈ ದಾಖಲೆಯನ್ನು ಒಟಿಟಿಯಲ್ಲಿಯೂ ‘ಬರೆಯಲು ಈ ಸಿನಿಮಾ ಸಿದ್ಧವಾಗಿದೆ. ಇದಕ್ಕೆ ಕ್ರಿಕೆಟ್ ಅಡ್ಡಿ ಆಗಬಹುದು ಎಂಬ ಭಯ ಇದೆ. ಹೀಗಾಗಿ, ಜೂನ್ 1ರ ಬಳಿಕ ಸಿನಿಮಾ ಒಟಿಟಿಯಲ್ಲಿ ರಿಲೀಸ್ ಆಗಬಹುದು.

ಇದನ್ನೂ ಓದಿ: ಧುರಂಧರ್ ರಣವೀರ್ ಸಿಂಗ್ ಸಿನಿಮಾ ಎಂದು ಹೇಳಲು ಸಾಧ್ಯವಿಲ್ಲ; ಕರೀನಾ ಕಪೂರ್

ಜೂನ್ 4ರಂದು ‘ಟಾಕ್ಸಿಕ್’ ಸಿನಿಮಾ ಥಿಯೇಟರ್​ನಲ್ಲಿ ರಿಲೀಸ್ ಆಗುತ್ತಿದೆ. ಇದೇ ವೇಳೆ ‘ಧುರಂಧರ್ 2’ ಒಟಿಟಿಗೆ ಬಂದರೆ ಎರಡೂ ಸಿನಿಮಾಗಳ ಮಧ್ಯೆ ಸಣ್ಣ ಕ್ಲ್ಯಾಶ್ ಅನ್ನು ನಿರೀಕ್ಷಿಸಬಹುದು.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Source link

ಸ್ಮಾರ್ಟ್ ಆಗಿ ಪ್ಲಾನ್ ಮಾಡಿ; ಈ 4 ಹಣಕಾಸು ತಪ್ಪುಗಳನ್ನು ಮಾಡದಿರಿ

ಮಧ್ಯಮ ವರ್ಗದ ಜನರು ಶ್ರೀಮಂತಿಕೆ (wealthy) ಪಡೆಯುವುದು ಅಷ್ಟು ಸುಲಭದ ಸಂಗತಿಯಲ್ಲ. ಖರ್ಚು ಮಾಡಲು ನಾನಾ ಮಾರ್ಗಗಳು ತೆರೆದುಕೊಂಡಿರುವ ಇವತ್ತಿನ ಕಾಲಘಟ್ಟದಲ್ಲಿ ಹಣ ಉಳಿಸುವುದು ಬಹಳ ಕಷ್ಟದ ಕೆಲಸ. ಹಣದ ವಿಚಾರದಲ್ಲಿ ಎಸಗುವ ಒಂದು ತಪ್ಪು ಹಲವು ಸಂಪತ್ತು ಗಳಿಕೆಯನ್ನು ನಶಿಸುವಂತೆ ಮಾಡಬಲ್ಲುದು. ಮಧ್ಯಮ ವರ್ಗದ ಜನರು ಹಣವಂತರಾಗಬೇಕೆಂದರೆ ಕೆಲ ತಪ್ಪುಗಳಿಂದ ದೂರ ಇರುವುದು ಲೇಸು. ಈ ಕುರಿತು ಒಂದಷ್ಟು ಮಾಹಿತಿ ಇಲ್ಲಿದೆ.

ಇತಿ ಮಿತಿ ಮೀರಿ ಹೋಗುವುದು…

ಹಾಸಿಗೆ ಇದ್ದಷ್ಟು ಕಾಲು ಚಾಚಿ ಎಂದು ದೊಡ್ಡವರು ಹೇಳುತ್ತಾರೆ. ನಮ್ಮ ಆದಾಯದ ಮಿತಿಯೊಳಗೆ ಎಲ್ಲಾ ಖರ್ಚು ವೆಚ್ಚ, ಹೂಡಿಕೆಗಳು ಇರಬೇಕು. ತೀರಾ ಅಗತ್ಯ ಇಲ್ಲದ ಐಷಾರಾಮಿ ವಸ್ತುಗಳಿಂದ ದೂರವೇ ಇರಿ. ಮೌಲ್ಯ ಕಡಿಮೆ ಆಗುವ ಸರಕುಗಳಿಗೆ ಹಣ ಹಾಕುವ ಬದಲು, ಈಕ್ವಿಟಿ, ಬಾಂಡ್, ಮ್ಯೂಚುವಲ್ ಫಂಡ್, ಗೋಲ್ಡ್, ಎಫ್​ಡಿ ಇತ್ಯಾದಿ ಮೌಲ್ಯವರ್ಧನೆಯ ಆಸ್ತಿಗಳಲ್ಲಿ ಹಣ ಹೂಡಿಕೆ ಮಾಡಿ.

ಇದನ್ನೂ ಓದಿ: ಪಿಪಿಎಫ್​ನಲ್ಲಿ ಕೇವಲ 1 ಪರ್ಸಂಟ್ ಬಡ್ಡಿಗೆ ಸಾಲ? ಯಾವ ವರ್ಷ, ಎಷ್ಟು ಅವಧಿ ಇತ್ಯಾದಿ ನಿಯಮಗಳು ತಿಳಿದಿರಿ

ಸಾಲ ಮಾಡಿಯಾದ್ರೂ ತುಪ್ಪ ತಿನ್ನು…

ಇರುವುದೊಂದೇ ಜೀವನ. ಇದ್ದಷ್ಟು ದಿನ ಠಾಕು ಠೀಕಾಗಿ ಬದುಕುತ್ತೇನೆ ಎಂದುಕೊಂಡು ಸಾಲ ಸೋಲ ಮಾಡುವುದು ಬದುಕಲ್ಲ. ಅದು ಭವಿಷ್ಯದ ನರಕಕ್ಕೆ ಮಾಡುವ ದಾರಿ. ಅದರಲ್ಲೂ ಕ್ರೆಡಿಟ್ ಕಾರ್ಡ್ ಮೋಡಿಗೆ ಬಿದ್ದರೆ ಕಷ್ಟ. ಬೇಡದ ಖರ್ಚುಗಳಿಗೆ ಪುಸಲಾಯಿಸುತ್ತೆ ಈ ಕ್ರೆಡಿಟ್ ಕಾರ್ಡ್. ಹಾಗೆಯೇ, ಪ್ರೀಪೇಡ್ ಲೋನ್ ಸಿಗುತ್ತೆ ಎಂದು ಪರ್ಸನಲ್ ಲೋನ್ ಪಡೆಯುವ ಚಾಳಿಯೂ ಹಲವರಿಗೆ ಇರುತ್ತದೆ. ಇವೆಲ್ಲವೂ ಅನಗತ್ಯ ವೆಚ್ಚಗಳಿಗೆ ದಾರಿ ಮಾಡಿಕೊಡುವ ಸಂಗತಿಗಳು, ಹುಷಾರಾಗಿರಿ.

ಆರೋಗ್ಯ ಚೆನ್ನಾಗಿದ್ದೇನೆ, ನನಗ್ಯಾಕೆ ಇನ್ಷೂರೆನ್ಸ್

ಗಟ್ಟಿ ಮುಟ್ಟಾಗಿದ್ದೇನೆ. ಈಗ್ಯಾಕೆ ನನಗೆ ಇನ್ಷೂರೆನ್ಸ್. ವಯಸ್ಸಾದಾಗ ನೋಡಿಕೊಳ್ಳೋಣ ಎಂದು ನೀವಂದುಕೊಂಡಿದ್ದರೆ ಅದು ತಪ್ಪು. ಪ್ರತೀ ವ್ಯಕ್ತಿಗೂ ಲೈಫ್ ಇನ್ಷೂರೆನ್ಸ್, ಹೆಲ್ತ್ ಇನ್ಷೂರೆನ್ಸ್ ಇರಬೇಕು. ಸಣ್ಣ ವಯಸ್ಸಲ್ಲೇ ಹೆಲ್ತ್ ಇನ್ಷೂರೆನ್ಸ್ ಮಾಡಿಸಿದಾಗ ಪ್ರೀಮಿಯಮ್ ಕಡಿಮೆ ಇರುತ್ತದೆ. ಆರೋಗ್ಯ ಯಾವ ವಯಸ್ಸಲ್ಲಿ ಹೇಗೆ ಏರುಪೇರಾಗುತ್ತೆ ಯಾರಿಗೂ ಗೊತ್ತಿರುವುದಿಲ್ಲ.

ಇದನ್ನೂ ಓದಿ: ಇಪಿಎಫ್, ಎನ್​ಪಿಎಸ್ ಮತ್ತು ಮ್ಯೂಚುವಲ್ ಫಂಡ್; ರಿಟೈರ್ಮೆಂಟ್ ಪ್ಲಾನಿಂಗ್​ಗೆ ಯಾವುದು ಉತ್ತಮ?

ಒಂದೇ ಕಡೆ ಹೂಡಿಕೆ ಮಾಡುವುದು

ಹೂಡಿಕೆ ಮಾಡುವುದು ಒಳ್ಳೆಯ ನಿರ್ಧಾರ. ಆದರೆ, ಬಹಳ ಜನರು ತಮ್ಮಲ್ಲಿರುವ ಎಲ್ಲಾ ಹಣವನ್ನೂ ಒಂದೇ ಕಡೆ ಇರಿಸಿಬಿಡುವುದುಂಟು. ಉದಾಹರಣೆಗೆ, ಎಲ್ಲವನ್ನೂ ಬ್ಯಾಂಕ್ ಡೆಪಾಸಿಟ್​ಗೆ ಹಾಕುವುದು, ಅಥವಾ ಮ್ಯೂಚುವಲ್ ಫಂಡ್​ಗಳಲ್ಲಿ ಹಾಕುವುದು, ಅಥವಾ ರಿಯಲ್ ಎಸ್ಟೇಟ್​ಗಳಲ್ಲಿ ಹಾಕುವುದು ಹೀಗೆ. ಇದು ತಪ್ಪು ಕ್ರಮ. ಹೂಡಿಕೆಯಲ್ಲಿ ವಿಸ್ತಾರ ಮತ್ತು ವೈವಿಧ್ಯತೆ ಇರಬೇಕು. ವಿವಿಧ ಅಸೆಟ್ ಕ್ಲಾಸ್​ಗಳಲ್ಲಿ ಹೂಡಿಕೆ ಇರಬೇಕು. ಒಂದು ಬಿದ್ದರೆ ಮತ್ತೊಂದು ನಿಮ್ಮ ಕೈಹಿಡಿಯಬಹುದು. ಮಾರುಕಟ್ಟೆ ಕುಸಿದಾಗ ಠೇವಣಿಗಳು, ಬಾಂಡ್​ಗಳು ಕೈಹಿಡಿಯಬಹುದು.

ಇನ್ನಷ್ಟು ಪರ್ಸನಲ್ ಫೈನಾನ್ಸ್ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

Source link

Exit mobile version