Headlines

ಇಡೀ ಇಂದೋರ್​ಗೆ ನೀರು ಪೂರೈಸುತ್ತಿದ್ದ ಟ್ಯಾಂಕಿನಲ್ಲಿತ್ತು ವ್ಯಕ್ತಿಯ ಶವ, 30 ವರ್ಷಗಳ ಹಿಂದೆ ಏನಾಗಿತ್ತು? – Kannada News | Indore’s Bhagirathpura Recalls a Disturbing Water Tank Tragedy After 30 Years

ಇಂದೋರ್, ಜನವರಿ 05: ಇಂದೋರ್​ನಲ್ಲಿ ಚರಂಡಿ ನೀರು( Sewage Water) ಕುಡಿಯುವ ನೀರಿನ ಜತೆ ಮಿಶ್ರಣವಾಗಿ ಹಲವು ಜನರ ಜೀವಕ್ಕೆ ಕುತ್ತು ತಂದಿದೆ. ಆದರೆ ಭಾಗೀರಥಪುರದಲ್ಲಿ ಈ ರೀತಿಯ ದುರಂತ ಹೊಸದೇನಲ್ಲ. ಇಂದೋರ್​ 30 ವರ್ಷಗಳ ಹಿಂದೆ ನಡೆದಿರುವ ಘಟನೆಯನ್ನು ಅಲ್ಲಿನ ಜನತೆ ನೆನಪಿಸಿಕೊಂಡಿದ್ದಾರೆ. ಸುಭಾಷ್ ಚೌಕ್ ಟ್ಯಾಂಕ್‌ನಲ್ಲಿ ಕೊಳೆತ ಶವವೊಂದು ಪತ್ತೆಯಾಗಿತ್ತು. ಸಾವಿರಾರು ಜನರು ಆ ಟ್ಯಾಂಕಿನ ನೀರನ್ನೇ ಕುಡಿದಿದ್ದರು. ಪಶ್ಚಿಮ ಇಂದೋರ್‌ನ ಸಾವಿರಾರು ಮನೆಗಳಿಗೆ ವಾರಗಳವರೆಗೆ ನೀರು ಪೂರೈಸುತ್ತಿದ್ದ ಟ್ಯಾಂಕ್‌ನೊಳಗೆ ಮಾನವ ಅಸ್ಥಿಪಂಜರ ಪತ್ತೆಯಾಗಿತ್ತು….

Read More

ತಮಿಳುನಾಡು ಚುನಾವಣೆಯಲ್ಲಿ ಮತ ಹಾಕಿದ ಸೆಲೆಬ್ರಿಟಿಸ್; ಇಲ್ಲಿವೆ ಫೋಟೋಸ್ – Kannada News | Kollywood Stars Vote: Ajith, Rajinikanth, Vijay and More Cast Ballots in Tamil Nadu Polls

ಕಾಲಿವುಡ್ ನಟ ಅಜಿತ್ ಅವರು ಮುಂಜಾನೆಯೇ ಬಂದು ಮತ ಹಾಕಿದ್ದಾರೆ. ಈ ಮೊದಲು ಅವರು ರೇ್ ಕಾರಣಕ್ಕೆ ವಿದೇಶಕ್ಕೆ ತೆರಳಿದ್ದರು. ಅವರು ಮತ ಹಾಕಲು ಚೆನ್ನೈಗೆ ಬಂದಿದ್ದರು ಎನ್ನಲಾಗಿದೆ. Source link

Read More

Numerology Prediction: ಸಂಖ್ಯಾಶಾಸ್ತ್ರ ಪ್ರಕಾರ ಜನ್ಮಸಂಖ್ಯೆ 7, 8, 9ರ ಜನವರಿ 28ರ ದಿನಭವಿಷ್ಯ

ಜನ್ಮಸಂಖ್ಯೆ 7 (ಯಾವುದೇ ತಿಂಗಳಿನ 7, 16, 25ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 7): ಗೃಹಾಲಂಕಾರ ವಸ್ತುಗಳ ಖರೀದಿಗಾಗಿ ಹೆಚ್ಚಿನ ಹಣವನ್ನು ಖರ್ಚು ಮಾಡಲಿದ್ದೀರಿ. ಇದರಿಂದ ನಿಮಗೆ ಸಮಾಧಾನ- ತೃಪ್ತಿ ಸಿಗಲಿದೆ. ದೀರ್ಘ ಕಾಲದಿಂದ ನಿಮ್ಮ ಜತೆಗಿದ್ದು ಕೆಲಸ ಮಾಡಿಕೊಂಡಿದ್ದ ವ್ಯಕ್ತಿಯೊಬ್ಬರು ದೂರದ ಪ್ರದೇಶಗಳಿಗೆ ತೆರಳುವ ವಿಚಾರ ತಿಳಿದುಬರಲಿದೆ. ಇದರಿಂದ ಭಾವನಾತ್ಮಕವಾಗಿ ಸ್ವಲ್ಪ ಕುಗ್ಗಿದಂತೆ ಭಾವನೆ ಮೂಡಲಿದೆ. ಆಸ್ತಮಾ ಸಮಸ್ಯೆ ಇರುವಂಥವರು ಸಾಮಾನ್ಯಕ್ಕಿಂತ ಹೆಚ್ಚಿನ ಎಚ್ಚರಿಕೆಯನ್ನು ವಹಿಸಿ. ಔಷಧ- ಮಾತ್ರೆಗಳಲ್ಲಿ ಬದಲಾವಣೆ ಮಾಡಿಕೊಂಡಿದ್ದೀರಿ ಅಂತಾದರೆ ಅದರಿಂದ ಆಗಿರುವ…

Read More

ಅರ್ಹತೆ ಪಡೆದರೂ ಏಷ್ಯನ್ ಗೇಮ್ಸ್​ನಿಂದ ಭಾರತ ಫುಟ್‌ಬಾಲ್ ತಂಡ ಹೊರಕ್ಕೆ! – Kannada News | Indian football teams will not play in the Asian Games 2026

ಭಾರತದ ಪುರುಷರ ಮತ್ತು ಮಹಿಳೆಯರ ರಾಷ್ಟ್ರೀಯ ಫುಟ್‌ಬಾಲ್ ತಂಡಗಳು ಮುಂಬರುವ ಏಷ್ಯನ್ ಗೇಮ್ಸ್ 2026 ಟೂರ್ನಿಯಿಂದ ಅಧಿಕೃತವಾಗಿ ಹೊರಬಿದ್ದಿವೆ. ಇದಕ್ಕೆ ಮುಖ್ಯ ಕಾರಣ ಕ್ರೀಡಾ ಸಚಿವಾಲಯದ ಕಠಿಣ ನಿಯಮಾವಳಿಗಳು. ಅಂದರೆ ಭಾರತ ಸರ್ಕಾರದ ಯುವಜನ ವ್ಯವಹಾರಗಳು ಮತ್ತು ಕ್ರೀಡಾ ಸಚಿವಾಲಯವು ಬಹು-ಕ್ರೀಡಾಕೂಟಗಳಿಗೆ ಕಳುಹಿಸುವ ತಂಡಗಳಿಗೆ ಕಟ್ಟುನಿಟ್ಟಾದ ನಿಯಮಗಳನ್ನು ಜಾರಿಗೆ ತಂದಿದೆ. ಏಷ್ಯನ್ ಗೇಮ್ಸ್ ಕೇವಲ ಅನುಭವ ಪಡೆಯುವ ಪ್ರವಾಸವಲ್ಲ. ಅದು ಪದಕ ಗೆಲ್ಲುವ ವೇದಿಕೆ ಎಂದು ಕೇಂದ್ರ ಕೀಡಾ ಸಚಿವಾಲಯ ಸ್ಪಷ್ಟಪಡಿಸಿದೆ. ಅಲ್ಲದೆ ಇದಕ್ಕಾಗಿಯೇ ಸರ್ಕಾರ ಕೆಲ…

Read More

ಗಣರಾಜ್ಯೋತ್ಸವದ ಧ್ವಜಾರೋಹಣದ ವೇಳೆ ಬಿದ್ದ ಧ್ವಜಸ್ತಂಭ; ಕೂದಲೆಳೆ ಅಂತರದಿಂದ ತೆಲಂಗಾಣ ಸಚಿವ ಪಾರು – Kannada News | Telangana minister V Srihari narrowly escapes injury after flagpole collapses during Republic Day

ಹೈದರಾಬಾದ್, ಜನವರಿ 26: ಇಂದು ತೆಲಂಗಾಣದ ನಾರಾಯಣಪೇಟೆ ಜಿಲ್ಲೆಯಲ್ಲಿ ನಡೆದ ಗಣರಾಜ್ಯೋತ್ಸವ (Republic Day) ಆಚರಣೆಯ ಸಂದರ್ಭದಲ್ಲಿ ರಾಷ್ಟ್ರಧ್ವಜ ಹಾರಿಸುತ್ತಿದ್ದಾಗ ಧ್ವಜಸ್ತಂಭ ಕುಸಿದು ಬಿದ್ದಿದೆ. ಅದೃಷ್ಟವಶಾತ್ ಕೂದಲೆಳೆ ಅಂತರದಿಂದ ಭಾರಿ ಅನಾಹುತವೊಂದು ತಪ್ಪಿದೆ. ತೆಲಂಗಾಣದ ಪಶುಸಂಗೋಪನಾ ಸಚಿವ ವಿ. ಶ್ರೀಹರಿ ಧ್ವಜಾರೋಹಣ ಮಾಡುತ್ತಿದ್ದಾಗ ಧ್ವಜಸ್ತಂಭ ಮುರಿದು ಬಿದ್ದಿದೆ. ಅವರು ಯಾವುದೇ ಗಾಯಗಳಿಲ್ಲದೆ ಪಾರಾಗಿದ್ದಾರೆ. ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ Source link

Read More

ಸಿದ್ದರಾಮಯ್ಯ ಶಾಲು ಬಗ್ಗೆ ಸದನದಲ್ಲಿ ಸ್ವಾರಸ್ಯಕರ ಮಾತು!

ಬೆಂಗಳೂರು, (ಮಾರ್ಚ್ 25): ವಿಧಾನಸಭೆಯಲ್ಲಿ ಬಜೆಟ್​ ಮೇಲಿನ ಚರ್ಚೆಗೆ ಸಿಎಂ ಸಿದ್ದರಾಮಯ್ಯ ಉತ್ತರ ನೀಡುವ ವೇಳೆ ಕೆಲ ಸ್ವಾರಸ್ಯಕರ ಪ್ರಸಂಗಗಳು ಜರುಗಿವೆ. ಅದರಲ್ಲೂ ಮುಖ್ಯವಾಗಿ ಡಿಕೆ ಶಿವಕುಮಾರ್ ಶಾಲ್ ಹಾಕುತ್ತಿರುವ ಬಗ್ಗೆ ಚರ್ಚೆಯಾಗಿದ್ದು, ಬಿಜೆಪಿ ಶಾಸಕ ಸುನೀಲ್​ಕುಮಾರ್​ ಮಧ್ಯಪ್ರವೇಶಿಸಿ, ನೀವು ಶಾಲು ಹಾಕಿದ‌ಮೇಲೆ ಮುಖ್ಯಮಂತ್ರಿ ಆಗಿದ್ದೀರಿ. ಅದಕ್ಕೆ‌ ಡಿಕೆ ಕೂಡ ಶಾಲು ಹಾಕ್ತಿದ್ದಾರೆಂದು ಸಿದ್ದರಾಮಯ್ಯನವರ ಕಾಲೆಳೆದರು. ಇದಕ್ಕೆ ಪ್ರತಿಕ್ರಿಯಿಸಿದ ಸಿದ್ದರಾಮಯ್ಯ, ಮೊದಲು ಟವೆಲ್ ಹಾಕುತ್ತಿದ್ದೆ. ಅದು ಯಾವಾಗಲೂ ಬಿದ್ದು ಹೋಗುತ್ತಿತ್ತು. ಅವತ್ತಿನಿಂದ ನಾನು ಶಾಲು ಹಾಕ್ತಿರೋದು, ಬೇರೆ…

Read More

ಪಾಕಿಸ್ತಾನ ಸೇನಾ ಮುಖ್ಯಸ್ಥ ಶಾಂತಿ ರಾಯಭಾರಿಯಲ್ಲ,’ತೈಲ ರಾಯಭಾರಿ’: ಅಸಿಮ್ ಮುನೀರ್ ವಿರುದ್ಧ ಸ್ಫೋಟಕ ವರದಿ ಬಯಲು – Kannada News | Asim Munir Exposed: Pakistan Army Chief’s Secret Oil Deal Behind Iran Saudi Peace

ಟೆಹ್ರಾನ್, ಜುಲೈ 24: ಸೌದಿ ಅರೇಬಿಯಾ ಮತ್ತು ಇರಾನ್(Iran) ನಡುವೆ ಸೌಹಾರ್ದತೆ ತರಲು ‘ಶಾಂತಿ ರಾಯಭಾರಿ’ಯಂತೆ ಮಧ್ಯಸ್ಥಿಕೆ ವಹಿಸಿದ್ದ ಪಾಕಿಸ್ತಾನ ಸೇನಾ ಮುಖ್ಯಸ್ಥ ಜನರಲ್ ಅಸಿಮ್ ಮುನೀರ್ ಅವರ ನಿಜಬಣ್ಣ ಬಯಲಾಗಿದೆ. ಇರಾನ್ ಮತ್ತು ಸೌದಿ ಅರೇಬಿಯಾ ನಡುವಿನ ರಾಜತಾಂತ್ರಿಕ ಒಪ್ಪಂದದ ಹಿಂದೆ ಯಾವುದೇ ಶಾಂತಿಯ ಉದ್ದೇಶವಿರಲಿಲ್ಲ, ಬದಲಿಗೆ ಅಸಿಮ್ ಮುನೀರ್ ಮತ್ತು ಇರಾನ್ ಮಿಲಿಟರಿ ಅಧಿಕಾರಿಯ ‘ಖಾಸಗಿ ತೈಲ ವ್ಯವಹಾರದ’ ಹಿತಾಸಕ್ತಿ ಅಡಗಿತ್ತು ಎಂದು ‘ಟೈಮ್ಸ್ ಆಫ್ ಇಸ್ರೇಲ್’ ಪ್ರಕಟಿಸಿದ ಸ್ಫೋಟಕ ವರದಿಯೊಂದು ಜಗಜ್ಜಾಹೀರುಗೊಳಿಸಿದೆ. ಇರಾನ್…

Read More

Ashes 2025: ಸತತ ಆರು ದಿನ ಮದ್ಯ ಸೇವನೆ; ಇಂಗ್ಲೆಂಡ್‌ ಆಟಗಾರರ ವಿರುದ್ಧ ತನಿಖೆಗೆ ಆದೇಶ – Kannada News | Ashes Debacle: England Cricket Team’s 6 Day Alcohol Binge Allegations

ಆಸ್ಟ್ರೇಲಿಯಾ ಹಾಗೂ ಇಂಗ್ಲೆಂಡ್‌ (England vs Australia) ನಡುವೆ ನಡೆಯುತ್ತಿರುವ ಐದು ಪಂದ್ಯಗಳ ಆಶಸ್ (Ashes) ಸರಣಿ ಇದುವರೆಗೆ ಏಕಪಕ್ಷೀಯವಾಗಿ ನಡೆದಿದೆ. ನಡೆದಿರುವ 3 ಪಂದ್ಯಗಳಲ್ಲೂ ಆತಿಥೇಯ ಆಸ್ಟ್ರೇಲಿಯಾವೇ ಜಯದ ನಗೆ ಬೀರಿದೆ. ಇತ್ತ ಈ ಪ್ರವಾಸದಲ್ಲಾದರೂ ಆಸ್ಟ್ರೇಲಿಯಾವನ್ನು ಮಣಿಸುವ ಗುರಿಯೊಂದಿಗೆ ಕಣಕ್ಕಿಳಿದಿದ್ದ ಇಂಗ್ಲೆಂಡ್‌ ಸೋತು ಸುಣ್ಣವಾಗಿದೆ. ಈ ರೀತಿಯ ಅವಮಾನಕರ ಸೋಲಿನ ನಡುವೆಯೂ ಇಂಗ್ಲೆಂಡ್‌ ಆಟಗಾರರ ಮೇಲೆ ಗಂಭೀರವಾದ ಆರೋಪವೊಂದು ಕೇಳಿಬಂದಿದ್ದು, ಕಾಂಗರೂಗಳ ನಾಡಲ್ಲಿ ಆಂಗ್ಲ ಆಟಗಾರರು ಸತತ 6 ದಿನ ಮದ್ಯ ಸೇವನೆ ಮಾಡಿದ…

Read More

Mileage in E20 Petrol: ಇ20 ಪೆಟ್ರೋಲ್‌ನಿಂದ ವಾಹನದ ಎಂಜಿನ್ ಹಾಳಾಗುವುದಿಲ್ಲ, ಮೈಲೇಜ್‌ ಸ್ವಲ್ಪ ಕಡಿಮೆ ಆಗಬಹುದು, ಸಂಸತ್ತಿನಲ್ಲಿ ಕೇಂದ್ರ ಸರ್ಕಾರ ಸ್ಪಷ್ಟನೆ – Kannada News | E20 Petrol Mileage and Engine Safety: Govt Clarifies No Damage, Slight Mileage Drop

ನವದೆಹಲಿ, ಜುಲೈ 22: ದೇಶದಲ್ಲಿ ಬಳಕೆಯಲ್ಲಿರುವ ಇ20 ಪೆಟ್ರೋಲ್(Petrol) ಅಂದರೆ ಎಥೆನಾಲ್ ಮಿಶ್ರಿತ ಪೆಟ್ರೋಲ್ ಹಳೆಯ ವಾಹನಗಳ ಎಂಜಿನ್​ಗಳು ಹಾಳಾಗುತ್ತಿವೆ ಎಂಬ ಸಾರ್ವಜನಿಕರ ಆತಂಕಕ್ಕೆ ಕೇಂದ್ರ ಸರ್ಕಾರ ತೆರೆ ಎಳೆದಿದೆ. ಇ20 ಇಂಧನ ಬಳಕೆಯಿಂದ ಹಳೆಯವ ವಾಹನಗಳಲ್ಲಿ ಮೈಲೇಜ್ ಶೇ.3 ರಿಂದ 5ರಷ್ಟು ಕಡಿಮೆಯಾಗಬಹುದೇ ವಿನಃ ಯಾವುದೇ ದೊಡ್ಡ ಹಾನಿಯಾಗುವುದಿಲ್ಲ ಎಂದು ಸರ್ಕಾರ ಸಂಸತ್ತಿನಲ್ಲಿ ಸ್ಪಷ್ಟಪಡಿಸಿದೆ. ರಾಜ್ಯಸಭೆಯಲ್ಲಿ ಎತ್ತಲಾದ ಪ್ರಶ್ನೆಗೆ ಪೆಟ್ರೋಲಿಯಂ ಮತ್ತು ನೈಸರ್ಗಿಕ ಅನಿಲ ಖಾತೆ ರಾಜ್ಯ ಸಚಿವ ಸುರೇಶ್ ಗೋಪಿ ಅವರು ಲಿಖಿತ ಉತ್ತರ…

Read More

ವಿರಾಟ್ ಕೊಹ್ಲಿ ದಾಖಲೆ ಉಡೀಸ್: ಹೊಸ ಇತಿಹಾಸ ಬರೆದ ಶ್ರೇಯಸ್ ಅಯ್ಯರ್ – Kannada News | Team India Captain Shreyas Iyer Creates History in England

ಟೀಮ್ ಇಂಡಿಯಾ ನಾಯಕ ಶ್ರೇಯಸ್ ಅಯ್ಯರ್ (Shreyas Iyer) ಆಂಗ್ಲರ ನಾಡಿನಲ್ಲಿ ಹೊಸ ಇತಿಹಾಸ ಬರೆದಿದ್ದಾರೆ. ಅದು ಕೂಡ ನಾಯಕನಾಗಿ ಇಂಗ್ಲೆಂಡ್ ವಿರುದ್ಧ ಆಡಿದ ಮೊದಲ ಟಿ20 ಪಂದ್ಯದಲ್ಲೇ ಎಂಬುದು ವಿಶೇಷ. ಈ ಪಂದ್ಯದಲ್ಲಿ ಆಕರ್ಷಕ ಅರ್ಧಶತಕ ಸಿಡಿಸಿ ಅಯ್ಯರ್ ದಾಖಲೆಗಳ ಸರದಾರ ವಿರಾಟ್ ಕೊಹ್ಲಿ ಹೆಸರಿನಲ್ಲಿದ್ದ ವಿಶೇಷ ದಾಖಲೆ ಮುರಿದಿದ್ದಾರೆ. (PC: getty images) Source link

Read More