ಬಿಜೆಪಿ ಶಾಸಕ ಶರಣು ಸಲಗರ್​​ಗೆ ಬಂಧನದ ಭೀತಿ: 2023ರ ಬಕ್ರೀದ್ ಗಲಾಟೆ ಕೇಸ್‌ನಲ್ಲಿ ಶಾಸಕನಿಗೆ ಬಿಗ್ ಶಾಕ್ – Kannada News

ಬೀದರ್, ಜೂ.6: 2023ರ ಬಕ್ರೀದ್ ಹಬ್ಬದ ವೇಳೆ ನಡೆದ ಗೋಹತ್ಯೆ ಗಲಾಟೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಜೆಪಿ ಶಾಸಕ ಶರಣು ಸಲಗರ್ ಬಂಧನದ ಭೀತಿ ಎದುರಿಸುತ್ತಿದ್ದಾರೆ. ಬೆಂಗಳೂರಿನ 42ನೇ ಎಸಿಜೆಎಂ ನ್ಯಾಯಾಲಯ ಶಾಸಕರ ವಿರುದ್ಧ ಜಾಮೀನು ರಹಿತ (ನಾನ್‌ಬೈಲೆಬಲ್) ಬಂಧನ ವಾರಂಟ್ ಹೊರಡಿಸಿದೆ. 2023ರ ಜುಲೈ 1ರಂದು ನಡೆದ ಘಟನೆಯಲ್ಲಿ, ಅಕ್ರಮ ಗೋಹತ್ಯೆ ತಡೆಯಲು ಶಾಸಕರು ಮುಸ್ಲಿಂ ಸಮುದಾಯದ ಮನೆಯೊಂದಕ್ಕೆ ತೆರಳಿ ಗಲಾಟೆ ಮಾಡಿದ್ದರು ಎನ್ನಲಾಗಿದೆ. ಈ ಪ್ರಕರಣದ ವಿಚಾರಣೆಗೆ ಬರುವಂತೆ ಶಾಸಕ ಶರಣು ಸಲಗರ್​​ಗೆ ಹಲವು ಬಾರಿ ನೋಟಿಸ್ ನೀಡಲಾಗಿದ್ದರೂ, ಅವರು ಹಾಜರಾಗಿರಲಿಲ್ಲ. ಈ ಹಿನ್ನೆಲೆಯಲ್ಲಿ ನ್ಯಾಯಾಲಯ ಬಂಧನ ವಾರಂಟ್ ಜಾರಿ ಮಾಡಿದ್ದು, ಯಾವುದೇ ಕ್ಷಣದಲ್ಲಾದರೂ ಶಾಸಕರನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸುವ ಸಾಧ್ಯತೆಗಳಿವೆ. ಶಾಸಕರನ್ನು ಬಂಧಿಸಲು ಪೊಲೀಸರು ಅವರ ಬಸವಕಲ್ಯಾಣ ನಿವಾಸಕ್ಕೆ ತೆರಳಿದ್ದರೂ, ಶಾಸಕರು ಅಲ್ಲಿ ಲಭ್ಯವಿರದ ಕಾರಣ ವಾಪಸ್ ತೆರಳಿದ್ದಾರೆ. ಸದ್ಯ ಶಾಸಕರು ಎಲ್ಲಿದ್ದಾರೆ ಎಂಬ ಮಾಹಿತಿ ಲಭ್ಯವಾಗಿಲ್ಲ.

ವಿಡಿಯೋ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

‘ಮ್ಯಾಂಗೊ ಪಚ್ಚ’ ಸಿನಿಮಾ ಬಗ್ಗೆ ನಟ ಸುದೀಪ್ ಮಾತು: ವಿಡಿಯೋ – Kannada News

ಸುದೀಪ್ (Sudeep) ಅವರ ಪತ್ನಿ ಮತ್ತು ಪುತ್ರಿ ನಿರ್ಮಾಣ ಮಾಡಿರುವ, ಸುದೀಪ್ ಅವರ ಅಕ್ಕನ ಮಗ ಸಂಚಿತ್ ಸಂಜಯ್ ನಟಿಸಿರುವ ‘ಮ್ಯಾಂಗೊ ಪಚ್ಚ’ ಸಿನಿಮಾ ನಿನ್ನೆ (ಜೂನ್ 5) ಬಿಡುಗಡೆ ಆಗಿದ್ದು, ಸಿನಿಮಾ ಬಿಡುಗಡೆ ಬಳಿಕ ಸುದೀಪ್ ಅವರು ಪತ್ರಿಕಾಗೋಷ್ಠಿ ನಡೆಸಿ ಸಿನಿಮಾ ಬಗ್ಗೆ ಮಾತನಾಡಿದರು. ಈ ವೇಳೆ ಸಿನಿಮಾ ಬಗ್ಗೆ, ಸಿನಿಮಾ ಬಿಡುಗಡೆ ಆದ ಬಳಿಕ ನಡೆದ ಕೆಲವು ಬೆಳವಣಿಗೆಗಳ ಬಗ್ಗೆ ಮಾತನಾಡಿದರು. ಸಿನಿಮಾನಲ್ಲಿ ತಮ್ಮ ಸೋದರಳಿಯನ ನಟನೆ, ಸಿನಿಮಾದ ಮೇಕಿಂಗ್ ಇನ್ನೂ ಕೆಲ ವಿಷಯಗಳ ಬಗ್ಗೆ ಸುದೀಪ್ ಅವರು ಲೋಕಾಭಿರಾಮವಾಗಿ ಮಾತನಾಡಿದ್ದು, ವಿಡಿಯೋ ಇಲ್ಲಿದೆ…

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Source link

ಕಾಸರಗೋಡಿನಲ್ಲಿ ಭಾರೀ ಮಳೆಗೆ ದುರಂತ: ಆಟವಾಡುತ್ತಿದ್ದಾಗ ಮಣ್ಣು ಕುಸಿದು ಮಕ್ಕಳಿಬ್ಬರು ಸಾವು – Kannada News

ಮಂಗಳೂರು, ಜೂನ್​​ 06: ಕೇರಳಂನ ಕಾಸರಗೋಡು ಜಿಲ್ಲೆಯಾದ್ಯಂತ ವರುಣಾರ್ಭಟ ತೀವ್ರಗೊಂಡಿದೆ. ಧಾರಾಕಾರ ಮಳೆಗೆ (Rain) ಮಣ್ಣು ಕುಸಿದು ಬಿದ್ದ ಪರಿಣಾಮ ಮಕ್ಕಳಿಬ್ಬರು ದಾರುಣವಾಗಿ ಸಾವನ್ನಪ್ಪಿರುವಂತಹ (death) ಘಟನೆ ಕಾಸರಗೋಡು ಜಿಲ್ಲೆಯ ಅಡೂರು ಎಂಬಲ್ಲಿ ನಡೆದಿದೆ. ಮುನ್ಸಿರ್(10) ಮತ್ತು ಮುಜಮ್ಮಿಲ್ (14) ಮೃತ‌ ಮಕ್ಕಳು. ಅಡೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

ಮುಖ್ಯಾಂಶಗಳು

  • ಕಾಸರಗೋಡಿನಲ್ಲಿ ವರುಣನ ಅಟ್ಟಹಾಸ
  • ಮಳೆಯಿಂದ ಕುಸಿದ ಮಣ್ಣು
  • ಘಟನೆಯಲ್ಲಿ ಇನ್ನೋರ್ವ ಮಗುವಿನ ಸ್ಥಿತಿ ಗಂಭೀರ

ನಡೆದಿದ್ದೇನು?

ಸದ್ಯ ಕಾಸರಗೋಡು ಜಿಲ್ಲೆಯಾದ್ಯಂತ ವರುಣಾರ್ಭಟ ಜೋರಾಗಿದೆ. ಮಕ್ಕಳು ತಮ್ಮ ಮನೆಯ ಸಮೀಪ ಆಟವಾಡುತ್ತಿದ್ದಾಗ ನಿರಂತರ ಮಳೆಯಿಂದಾಗಿ ನೆನೆದಿದ್ದ ಆವರಣ ಗೋಡೆಯು ಮಣ್ಣಿನ ಸಮೇತ ಕುಸಿದು ಬಿದ್ದಿದೆ. ಪರಿಣಾಮ ಮೂವರು ಮಕ್ಕಳು ಮಣ್ಣಿನಡಿ ಸಿಲುಕಿಕೊಂಡಿದ್ದಾರೆ. ಘಟನೆ ತಿಳಿಯುತ್ತಿದ್ದಂತೆಯೇ ಸ್ಥಳೀಯರು ಮತ್ತು ಅಡೂರು ಠಾಣೆಯ ಪೊಲೀಸರು ಯುದ್ಧೋಪಾದಿಯಲ್ಲಿ ಜಂಟಿ ರಕ್ಷಣಾ ಕಾರ್ಯಾಚರಣೆ ನಡೆಸಿದರಾದರೂ, ದುರದೃಷ್ಟವಶಾತ್ ಇಬ್ಬರು ಮಕ್ಕಳು ಅದಾಗಲೇ ಸಾವನ್ನಪ್ಪಿದ್ದು, ಮತ್ತೊಂದು ಮಗುವಿನ ಸ್ಥಿತಿ ಗಂಭೀರವಾಗಿದೆ.

ಜಿಲ್ಲೆಗಳಲ್ಲಿ ಧಾರಾಕಾರ ಮಳೆ: ಹಲವೆಡೆ ಅವಾಂತರಗಳು

ರಾಜ್ಯದ ಕೆಲ ಜಿಲ್ಲೆಗಳಲ್ಲಿ ಧಾರಾಕಾರ ಮಳೆ ಸುರಿದಿದ್ದು, ಹಲವೆಡೆ ಅವಾಂತರಗಳು ಸಂಭವಿಸಿವೆ. ಬಿಸಿಲಿನಿಂದ ಕಂಗೆಟ್ಟಿದ್ದ ಬಾಗಲಕೋಟೆಗೆ ವರುಣ ತಂಪೆರೆದಿದ್ದಾನೆ. ಅರ್ಧ ಗಂಟೆಗೂ ಹೆಚ್ಚು ಕಾಲ ಸುರಿದ ಭಾರಿ ಮಳೆಗೆ ನವನಗರದ ರಸ್ತೆಗಳು ಸಂಪೂರ್ಣ ಜಲಾವೃತಗೊಂಡಿವೆ. ಜಿಲ್ಲಾ ಕ್ರೀಡಾಂಗಣದ ಬಳಿಯ ರಸ್ತೆಗಳು ಹಳ್ಳದಂತಾಗಿ ವಾಹನ ಸಂಚಾರಕ್ಕೆ ತೀವ್ರ ಅಡಚಣೆಯಾಗಿದೆ. ಜಲಾವೃತ ರಸ್ತೆಯಲ್ಲೇ ವಾಹನ ಸವಾರರು ಹರಸಾಹಸಪಟ್ಟು ಮನೆಯ ಕಡೆ ಪ್ರಯಾಣಿಸಿದರು.

ಇದನ್ನೂ ಓದಿ: ಮೊದಲ ಮಳೆಗೆ ಕೊಚ್ಚಿಹೋಯ್ತು ರಾಷ್ಟ್ರೀಯ ಹೆದ್ದಾರಿ!: ಮೂಡುಬಿದಿರೆ ಮಿಜಾರಿನಲ್ಲಿ NH-169 ರಸ್ತೆ ಕುಸಿತ

ಇನ್ನು ಗದಗ ಜಿಲ್ಲೆಯ ಹಲವೆಡೆ ಮಳೆಯ ಆರ್ಭಟ ಜೋರಾಗಿದೆ. ನಿರಂತರ ಮಳೆಯಿಂದ ಗದಗ ನಗರದ ಪಂಚರಹೊಂಡ ಬಳಿಯ ರಸ್ತೆ ಕೆರೆಯಂತಾಗಿದೆ. ರಸ್ತೆಯಲ್ಲಿ ಎರಡರಿಂದ ಮೂರು ಅಡಿ ನೀರು ನಿಂತಿದ್ದರಿಂದ ವಾಹನ ಸವಾರರು ಪರದಾಡುವಂತಾಗಿದೆ. ಪ್ರಮುಖ ಮಾರುಕಟ್ಟೆಗೆ ಹೋಗುವ ರಸ್ತೆಯೂ ಜಲಾವೃತಗೊಂಡಿದೆ.

ಈಜಲು ತೆರಳಿದ್ದ ಬಾಲಕ ಮಲಪ್ರಭಾ ನದಿಯಲ್ಲಿ ಮುಳುಗಿ ಸಾವು

ಈಜಲು ಹೋಗಿದ್ದ ಬಾಲಕ ಮಲಪ್ರಭಾ ನದಿಯಲ್ಲಿ ಮುಳುಗಿ ಸಾವನ್ನಪ್ಪಿರುವಂತಹ ಘಟನೆ ಬೆಳಗಾವಿ ಜಿಲ್ಲೆಯ ಬೈಲಹೊಂಗಲ ತಾಲೂಕಿನ ವಕ್ಕುಂದ ಗ್ರಾಮದಲ್ಲಿ ನಡೆದಿದೆ. ಆಳ ತಿಳಿಯದೇ ನದಿಯಲ್ಲಿ‌ ಮುಳುಗಿ ಮಹೇಶ್ ಗಣಾಚಾರಿ (15) ಮೃತಪಟ್ಟಿದ್ದಾನೆ. ಸದ್ಯ ಅಗ್ನಿಶಾಮಕ ದಳ ಸಿಬ್ಬಂದಿ ಶೋಧ ನಡೆಸಿ ಬಾಲಕನ ಶವ ಹೊರತೆಗೆದಿದ್ದಾರೆ. ಬಾಲಕನ ಮೃತದೇಹ ಸಿಗುತ್ತಿದ್ದಂತೆ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ. ಬೈಲಹೊಂಗಲ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On – 9:18 pm, Sat, 6 June 26

Source link

‘ಈ ಬೆದರಿಕೆ ಬೇಡ’: ಪವನ್ ಕಲ್ಯಾಣ್ ಸಹೋದರನಿಗೆ ಪ್ರಕಾಶ್ ರೈ ಎಚ್ಚರಿಕೆ – Kannada News

ಪ್ರಕಾಶ್ ರೈ (Prakash Raj) ಮೊದಲಿನಿಂದಲೂ ಸಾಮಾಜಿಕ ಜಾಲತಾಣದಲ್ಲಿ ಸಕ್ರಿಯರು. ರಾಜಕೀಯ ವಿಷಯಗಳ ಬಗ್ಗೆ ‘ಜಸ್ಟ್ ಆಸ್ಕಿಂಗ್’ ಹ್ಯಾಷ್ ಟ್ಯಾಗ್ ಅಡಿಯಲ್ಲಿ ತಮ್ಮ ಅಭಿಪ್ರಾಯಗಳನ್ನು ಹಂಚಿಕೊಳ್ಳುತ್ತಿರುತ್ತಾರೆ. ಬಹುತೇಕ, ಬಿಜೆಪಿಯ ಸಿದ್ಧಾಂತಗಳನ್ನು ವಿರೋಧಿಸಿ ಟ್ವೀಟ್​​ಗಳನ್ನು ಮಾಡುತ್ತಿರುತ್ತಾರೆ. ಕಳೆದ ಒಂದೆರಡು ದಿನಗಳಿಂದ ಆಂಧ್ರ ಪ್ರದೇಶ ಡಿಸಿಎಂ ಪವನ್ ಕಲ್ಯಾಣ್ ವಿರುದ್ಧ ಸರಣಿ ಟ್ವೀಟ್​​ಗಳನ್ನು ಮಾಡುತ್ತಿದ್ದಾರೆ. ಇದೀಗ ಪವನ್ ಕಲ್ಯಾಣ್ ಅವರ ಸಹೋದರ ನಾಗಬಾಬು ಅವರ ಟ್ವೀಟ್ ಒಂದಕ್ಕೆ ಪ್ರತಿಕ್ರಿಯೆ ನೀಡಿರುವ ಪ್ರಕಾಶ್ ರೈ, ‘ಈ ಬೆದರಿಕೆ ಎಲ್ಲ ಬೇಡ’ ಎಂದು ಗಡುಸಾಗಿ ಹೇಳಿದ್ದಾರೆ.

ತೆಲಂಗಾಣದಲ್ಲಿ ಪವನ್ ಕಲ್ಯಾಣ್ ಅವರ ರ್ಯಾಲಿಗೆ ಅನುಮತಿ ನಿರಾಕರಿಸಲಾಗಿತ್ತು. ಇದನ್ನು ತೀವ್ರವಾಗಿ ಖಂಡಿಸಿದ್ದ ಪವನ್ ಕಲ್ಯಾಣ್, ‘ತೆಲಂಗಾಣ ಯಾರಪ್ಪನ ಆಸ್ತಿಯಲ್ಲ’ ಎಂದು ಗುಡುಗಿದ್ದರು. ಪವನ್ ಅವರ ಆ ಭಾಷಣದ ಬಗ್ಗೆ ಪರ-ವಿರೋಧ ಚರ್ಚೆಗಳು ಚಾಲ್ತಿಯಲ್ಲಿದ್ದವು. ಈ ಸಂದರ್ಭದಲ್ಲಿ ಪ್ರಕಾಶ್ ರೈ, ಪವನ್ ಕಲ್ಯಾಣ್ ಕಾಲೆಳೆದು ಟ್ವೀಟ್ ಮಾಡಿದ್ದರು. ಆ ಟ್ವೀಟ್​​ಗೆ ವಿರುದ್ಧವಾಗಿ ಪವನ್ ಕಲ್ಯಾಣ್ ಆಪ್ತ, ಪ್ರಕಾಶ್ ರೈ ಕುರಿತು ಏಕವನಚದಲ್ಲಿ ಟ್ವೀಟ್ ಮಾಡಿ ಆಕ್ರೋಶ ವ್ಯಕ್ತಪಡಿಸಿದ್ದರು. ಅದರ ಬೆನ್ನಲ್ಲೆ ಇದೀಗ ಪ್ರಕಾಶ್ ರೈ ಅವರು ಪವನ್ ಕಲ್ಯಾಣ್ ಅವರ ಸಹೋದರ ನಾಗಬಾಬು ಅವರ ಟ್ವೀಟ್​​ಗೆ ಖಾರವಾಗಿ ಪ್ರತಿ ಟ್ವೀಟ್ ಮಾಡಿದ್ದಾರೆ.

ಪವನ್ ಕಲ್ಯಾಣ್ ಅವರ ಚಿತ್ರ ಹಂಚಿಕೊಂಡಿದ್ದ ನಾಗಬಾಬು ‘ನಾಯಕನ ಮಾತು ಅಂತಿಮ. ಯಾರೂ ಅವನ ದಾರಿಯಲ್ಲಿ ಸಮಸ್ಯೆಗಳನ್ನು ನೋಡಿಲ್ಲ, ನಾಯಕನಿಗೆ ಮಾತ್ರ ಯಾವುದು ಸರಿ ಮತ್ತು ಯಾವುದು ತಪ್ಪು ಎಂದು ತಿಳಿದಿದೆ. ನಿಮ್ಮ ಅನುಮಾನಗಳನ್ನು ಮುಚ್ಚಿ, ನಿಮ್ಮ ನಾಲಿಗೆಯನ್ನು ಮೌನಗೊಳಿಸಿ ಮತ್ತು ಪ್ರಶ್ನೆಗಳನ್ನು ಮಾಡದೆ ನಾಯಕನನ್ನು ಅನುಸರಿಸಿ’ ಎಂದು ಬರೆದಿದ್ದರು.

ಇದನ್ನೂ ಓದಿ:ಪ್ರಭಾಸ್ ಸಿನಿಮಾದಿಂದ ಹೊರಬಂದ ಪ್ರಕಾಶ್ ರೈ: ಕಾರಣವೇನು?

ಇದಕ್ಕೆ ಪ್ರತಿಕ್ರಿಯೆ ನೀಡಿರುವ ಪ್ರಕಾಶ್ ರೈ, ‘ಅನುಮಾನಗಳನ್ನು ಸುಮ್ಮನಾಗಿಸಿ, ನಾಲಗಿಯನ್ನು ಮೌನವಾಗಿಸಿ, ಪ್ರಶ್ನೆಗಳನ್ನು ಕೇಳಬೇಡಿ’ ಎಂಬ ನಿಮ್ಮ ಮಾತಿನ ಅರ್ಥವೇನು? ನಾವೇನು ಕುದುರೆಗಳಾ? ನೀವು ಹೇಳಿದಂತೆ ಕೇಳಿಕೊಂಡು ಇರಲು? ಈ ಬೆದರಿಕೆಗಳೆಲ್ಲ ಬೇಡ. ಪ್ರಶ್ನೆ ಮಾಡುವುದು ನಮ್ಮ ಹಕ್ಕು. ಯಾವ ನಾಯಕನೇ ಆದರು, ಜನರಿಗೆ ಉತ್ತರ ಕೊಡುವ ಜವಾಬ್ದಾರಿ ಆತನ ಮೇಲೆ ಇರುತ್ತದೆ. ಅರ್ಥ ಆಯಿತೆ?’ ಎಂದು ಪ್ರಕಾಶ್ ರೈ ಪ್ರಶ್ನೆ ಮಾಡಿದ್ದಾರೆ.

ನಾಗಬಾಬು ಅವರು ಪ್ರಕಾಶ್ ರೈ ಅವರ ಜನಸೇನಾ ಪಕ್ಷದ ಪ್ರಮುಖ ಮುಖಂಡರುಗಳಲ್ಲಿ ಒಬ್ಬರು. ಪವನ್ ಕಲ್ಯಾಣ್ ಅವರ ಸ್ವಂತ ಅಣ್ಣ ಸಹ. ಪವನ್ ಕಲ್ಯಾಣ್ ಅವರ ರಾಜಕೀಯ ಜರ್ನಿಯಲ್ಲಿ ನಾಗಬಾಬು ಸಹ ಪ್ರಮುಖ ಪಾತ್ರ ನಿರ್ವಹಿಸಿದ್ದಾರೆ. ಮೆಗಾಸ್ಟಾರ್ ಚಿರಂಜೀವಿ, ನಾಗಬಾಬು ಮತ್ತು ಪವನ್ ಕಲ್ಯಾಣ್ ತೆಲುಗು ಚಿತ್ರರಂಗದ ಮೆಗಾ ಸಹೋದರರು ಎಂದೇ ಖ್ಯಾತರು.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Source link

ಕಾಂಗ್ರೆಸ್ ಸರ್ಕಾರ ವರ್ಷದೊಳಗೆ ಪತನಗೊಳ್ಳಲಿದೆ, ಇದು ದೆಹಲಿ ಮಟ್ಟದಿಂದ ಬಂದಿರುವ ಪಕ್ಕಾ ಮಾಹಿತಿ ಎಂದ ಶಾಸಕ ಸಮೃದ್ಧಿ ಮಂಜುನಾಥ್ – Kannada News

ಕೋಲಾರ, ಜೂ.6: ಜಿಲ್ಲೆಯಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ಮುಳಬಾಗಿಲು ಶಾಸಕ ಸಮೃದ್ಧಿ ಮಂಜುನಾಥ್ ಅವರು ಕಾಂಗ್ರೆಸ್ ಸರ್ಕಾರ ಕುರಿತು ಗಂಭೀರ ಆರೋಪಗಳನ್ನು ಮಾಡಿದ್ದು, ಮುಂದಿನ ಒಂದು ವರ್ಷದೊಳಗೆ ಸರ್ಕಾರ ಪತನಗೊಳ್ಳಲಿದೆ ಎಂದು ಭವಿಷ್ಯ ನುಡಿದಿದ್ದಾರೆ. ದೆಹಲಿಯಿಂದ ಬಂದ ಮಾಹಿತಿ ಬಂದಿದೆ ಎಂದು ಹೇಳಿದ್ದಾರೆ.  ಕಾಂಗ್ರೆಸ್ ಸರ್ಕಾರದಲ್ಲಿ ವಿಕೆಟ್ ಮೇಲೆ ವಿಕೆಟ್ ಉರುಳುತ್ತಿದ್ದು, ಇದು ಸರ್ಕಾರದೊಳಗಿನ ಆಂತರಿಕ ಭಿನ್ನಾಭಿಪ್ರಾಯ ಮತ್ತು ಅಸಮಾಧಾನವನ್ನು ಸ್ಪಷ್ಟವಾಗಿ ಪ್ರತಿಬಿಂಬಿಸುತ್ತದೆ. ಕೆ.ಎಚ್. ಮುನಿಯಪ್ಪ ಅವರಂತಹ ಹಿರಿಯ ನಾಯಕರು ಬಹಿರಂಗವಾಗಿ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಅವರು ಕೂಡ ಕಾಂಗ್ರೆಸ್​​​ನಿಂದ ದೂರು ಹೋಗುವ ಸಾಧ್ಯತೆ ಇದೆ ಎಂದು ಹೇಳಿದ್ದಾರೆ. ಈಗಾಗಲೇ ಸಚಿವ ರಾಮಲಿಂಗಾರೆಡ್ಡಿ ಸಹ ತಮ್ಮ ಸ್ವಾಭಿಮಾನಕ್ಕೆ ಧಕ್ಕೆ ಆಗುತ್ತಿದೆ ಎಂದು ಹೇಳಿಕೆ ನೀಡಿರುವುದನ್ನು ಮಂಜುನಾಥ್ ನೆನಪಿಸಿದ್ದಾರೆ. ಕಾಂಗ್ರೆಸ್ ಸರ್ಕಾರದಲ್ಲಿ ಹಿರಿಯ ನಾಯಕರಿಗೆ ಸೂಕ್ತ ಮರ್ಯಾದೆ ಸಿಗುತ್ತಿಲ್ಲ, ಅವರಿಗೆ ಅವಮಾನವಾಗುತ್ತಿದೆ ಎಂದು  ಶಾಸಕ ಸಮೃದ್ಧಿ ಮಂಜುನಾಥ್  ಹೇಳಿದ್ದಾರೆ.

ಅನುದಾನ ಹಂಚಿಕೆಯಲ್ಲಿ ತಾರತಮ್ಯ ನಡೆಯುತ್ತಿದೆ. ಕೆಲವರಿಗೆ ಮೆಚ್ಚುಗೆಗಾಗಿ ಅನುದಾನ ನೀಡಲಾಗುತ್ತಿದ್ದು, ಉಳಿದವರನ್ನು ಕಡೆಗಣಿಸಲಾಗುತ್ತಿದೆ ಎಂದು ಹೇಳಿದ್ದಾರೆ. ಸದ್ಯದ ಪರಿಸ್ಥಿತಿಯಲ್ಲಿ ಮತ ಕೇಳಲು ಹೋದರೆ, ಜನ ಮೂರು ವರ್ಷವೂ ಆಗಿಲ್ಲ ಮತ್ತೆ ಚುನಾವಣೆಯೇ ಎಂದು ಪ್ರಶ್ನಿಸುತ್ತಾರೆ.  ಅಭಿವೃದ್ಧಿ ಇಲ್ಲ, ಅನುದಾನ ಇಲ್ಲದ ಕಾರಣ ಜನರು ಬೇಸರಗೊಂಡಿದ್ದಾರೆ ಎಂದು ಮಂಜುನಾಥ್ ಅಕ್ರೋಶ ವ್ಯಕ್ತಪಡಿಸಿದ್ದಾರೆ. ಡಿ.ಕೆ. ಶಿವಕುಮಾರ್ ಅವರು ಅಧಿಕಾರಕ್ಕೆ ಬಂದ ನಂತರ ಸರ್ಕಾರವು ಅಗ್ನಿಪರೀಕ್ಷೆ ಎದುರಿಸುತ್ತಿದೆ ಎಂದು ಮಂಜುನಾಥ್ ಹೇಳಿದ್ದಾರೆ. ಸರ್ಕಾರದಲ್ಲಿ ಸೀನಿಯರ್ ನಾಯಕರಿಗೆ ಅಗೌರವ ತೋರಲಾಗುತ್ತಿದ್ದು, ಇದನ್ನು ಆದಷ್ಟು ಬೇಗ ನಿಲ್ಲಿಸಬೇಕು. ಇಲ್ಲವಾದಲ್ಲಿ ವಿಕೆಟ್ ಮೇಲೆ ವಿಕೆಟ್ ಬೀಳುತ್ತಾ ಹೋಗುತ್ತದೆ ಎಂದು ಎಚ್ಚರಿಕೆ ನೀಡಿದ್ದಾರೆ.

ವಿಡಿಯೋ ಇಲ್ಲಿದೆ ನೋಡಿ:

ಮುಖ್ಯಾಂಶಗಳು:

ಕಾಂಗ್ರೆಸ್ ಸರ್ಕಾರ ಕುರಿತು ಗಂಭೀರ ಆರೋಪ ಮಾಡಿದ ಶಾಸಕ ಸಮೃದ್ಧಿ ಮಂಜುನಾಥ್

ಒಂದು ವರ್ಷದೊಳಗೆ ಸರ್ಕಾರ ಪತನಗೊಳ್ಳಲಿದೆ ಎಂದು ಭವಿಷ್ಯ

ಕಾಂಗ್ರೆಸ್ ಸರ್ಕಾರದಲ್ಲಿ ಹಿರಿಯ ನಾಯಕರಿಗೆ ಸೂಕ್ತ ಮರ್ಯಾದೆ ಸಿಗುತ್ತಿಲ್ಲ

ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಅಧಿಕಾರಕ್ಕೆ ಬಂದ ನಂತರ ಸರ್ಕಾರಕ್ಕೆ “ಅಗ್ನಿಪರೀಕ್ಷೆ”

ಇದನ್ನೂ ಓದಿ: ಸಿಎಂ ಡಿಕೆ ಶಿವಕುಮಾರ್​​​ ಹೇಳಿದ ಆ ಒಂದು ಮಾತು ನನ್ನ ನಿರ್ಧಾರ ಬದಲಿಸಿದೆ ಎಂದ ರಾಮಲಿಂಗಾರೆಡ್ಡಿ

ಕೋಲಾರ ಜಿಲ್ಲೆಯ ಅಭಿವೃದ್ಧಿ ಕುರಿತು ಮಾತನಾಡಿದ ಸಮೃದ್ಧಿ ಮಂಜುನಾಥ್ , ಜಿಲ್ಲೆಯ ನಾಡಿಮಿಡಿತ ಗೊತ್ತಿಲ್ಲದವರನ್ನು ಉಸ್ತುವಾರಿ ಸಚಿವರನ್ನಾಗಿ ಮಾಡಿದ್ದರಿಂದ ಜಿಲ್ಲೆಯ ಅಭಿವೃದ್ಧಿ ಕುಂಠಿತವಾಗಿದೆ ಎಂದು ಆರೋಪಿಸಿದ್ದಾರೆ. ಕೋಲಾರ ಜಿಲ್ಲೆಗೆ ನ್ಯಾಯ ಸಿಗಬೇಕಾದರೆ, ಜಿಲ್ಲೆಯ ಬಗ್ಗೆ ಸಮಗ್ರ ಅರಿವಿರುವ ಸ್ಥಳೀಯ ಶಾಸಕರೊಬ್ಬರನ್ನು ಸಚಿವರನ್ನಾಗಿ ಮಾಡಬೇಕು ಎಂದು ಮುಖ್ಯಮಂತ್ರಿ ಡಿಕೆ ಶಿವಕುಮಾರ್​​ ಅವರಿಗೆ ಮನವಿ ಮಾಡಿದ್ದಾರೆ. ಇದು ಕೋಲಾರ ಜಿಲ್ಲೆಯ ಅಭಿವೃದ್ಧಿಗೆ ನಿರ್ಣಾಯಕವಾಗಲಿದೆ ಎಂದು ಅವರು ಒತ್ತಿಹೇಳಿದ್ದಾರೆ. ಹಿಂದೆ ಹೊರಗಿನವರು ಸಚಿವರಾಗಿ ಒನ್‌ ವೇ ರಾಜಕೀಯ ಮಾಡಿದ್ದಾರೆ. ಅದರಿಂದ ಜಿಲ್ಲೆಗೆ ಪ್ರಯೋಜನವಾಗಿಲ್ಲ ಎಂದು ಮಂಜುನಾಥ್ ತಮ್ಮ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಕೋಲಾರ ಜಿಲ್ಲೆಯ ಮೂರು-ನಾಲ್ಕು ಜನ ಸಮರ್ಥ ಶಾಸಕರಲ್ಲಿ ಒಬ್ಬರನ್ನು ಸಚಿವರನ್ನಾಗಿ ಮಾಡಿದರೆ, ಜಿಲ್ಲೆಗೆ ನ್ಯಾಯ ಸಿಕ್ಕಂತಾಗುತ್ತದೆ ಎಂದು ಅವರು ಮನವಿ ಮಾಡಿಕೊಂಡಿದ್ದಾರೆ.

ರಾಜಕೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

World Food Safety Day 2026: ಉತ್ತಮ ಆರೋಗ್ಯಕ್ಕಾಗಿ ಸೇವಿಸಿ ಶುದ್ಧ, ಸುರಕ್ಷಿತ ಆಹಾರ – Kannada News

ವಿಶ್ವ ಆಹಾರ ಸುರಕ್ಷತಾ ದಿನImage Credit source: vecteezy

ನೀರು, ಗಾಳಿಯಂತೆ ನಮ್ಮ ಬದುಕಿಗೆ ಆಹಾರ (Food) ತುಂಬಾನೇ ಮುಖ್ಯ. ನಾವು ಆಹಾರವೇನೋ ಸೇವನೆ ಮಾಡುತ್ತೇವೆ. ಆದರೆ ಇಂದಿನ ದಿನಗಳಲ್ಲಿ ನಾವುಗಳು ಕಲ್ಮಶ, ರಾಸಯನಿಕಯುಕ್ತ ಹಾಗೂ ಕಳಪೆ ಗುಣಮಟ್ಟದ ಆಹಾರವನ್ನು ಸೇವನೆ ಮಾಡುತ್ತಿದ್ದೇವೆ. ಕಳಪೆ ಗುಣಮಟ್ಟದ ಆಹಾರ ಸೇವನೆಯಿಂದ ಸಾಕಷ್ಟು ಆರೋಗ್ಯ ಸಮಸ್ಯೆಗಳು ಉದ್ಭವಿಸುತ್ತವೆ. ಆಹಾರದ ವಿಷಯದಲ್ಲಿ ನಾವು ತೋರುವ ಸಣ್ಣ ನಿರ್ಲಕ್ಷ್ಯವೂ ಜೀವಕ್ಕೆ ಮಾರಕವಾಗಬಹುದು. ಹೌದು ಕಳಪೆ ಗುಣಮಟ್ಟದ ಆಹಾರ ಫುಡ್‌ ಪಾಯಿಸನ್‌, ಅತಿಸಾರ ಮತ್ತು ಕ್ಯಾನ್ಸರ್ ಸೇರಿದಂತೆ ವಿವಿಧ ಕಾಯಿಲೆಗಳಿಗೆ ಕಾರಣವಾಗಬಹುದು.  ಹಾಗಾಗಿ ಶುದ್ಧ ಮತ್ತು ಆರೋಗ್ಯಕರ ಆಹಾರದ ಮಹತ್ವವನ್ನು ಸಾರಲು, ಆರೋಗ್ಯಕರ ಆಹಾರ ಸೇವನೆ ಎಷ್ಟು ಮುಖ್ಯ ಎಂಬುದರ ಬಗ್ಗೆ ಜನರಲ್ಲಿ ಜಾಗೃತಿ ಮೂಡಿಸಲು ಪ್ರತಿವರ್ಷ ಜೂನ್‌ 7 ರಂದು ವಿಶ್ವ ಆಹಾರ ಸುರಕ್ಷತಾ ದಿನವನ್ನು ಆಚರಿಸಲಾಗುತ್ತದೆ. ಈ ದಿನದ ಹಿನ್ನೆಲೆಯೇನು ಎಂಬುದನ್ನು ತಿಳಿಯೋಣ ಬನ್ನಿ.

ವಿಶ್ವ ಆಹಾರ ಸುರಕ್ಷತಾ ದಿನದ ಇತಿಹಾಸವೇನು?

ವಿಶ್ವ ಆಹಾರ ಸುರಕ್ಷತಾ ದಿನವನ್ನು ಮೊದಲು ಜೂನ್ 7, 2019 ರಂದು ಆಚರಿಸಲಾಯಿತು. ವಿಶ್ವಸಂಸ್ಥೆಯ ಸಾಮಾನ್ಯ ಸಭೆಯು ಡಿಸೆಂಬರ್ 2018 ರಲ್ಲಿ ನಿರ್ಣಯವನ್ನು ಅಂಗೀಕರಿಸುವ ಮೂಲಕ ಈ ದಿನವನ್ನು ಅಧಿಕೃತವಾಗಿ ಗುರುತಿಸಿತು. ಇದು ಜಾಗತಿಕವಾಗಿ ಆಹಾರ ಭದ್ರತೆಯನ್ನು ಉತ್ತೇಜಿಸಲು ವಿಶ್ವಸಂಸ್ಥೆಯ ಆಹಾರ ಮತ್ತು ಕೃಷಿ ಸಂಸ್ಥೆ (FAO) ಮತ್ತು ವಿಶ್ವ ಆರೋಗ್ಯ ಸಂಸ್ಥೆ (WHO) ಜಂಟಿ ಉಪಕ್ರಮವಾಗಿದೆ. 2019 ರಿಂದ ಈ ದಿನವನ್ನು  ಪ್ರತಿವರ್ಷ ಆಚರಿಸುತ್ತಾ ಬರಲಾಗುತ್ತಿದೆ.

ಇದನ್ನೂ ಓದಿ: ಪರಿಸರವನ್ನು ಸಂರಕ್ಷಿಸುವ ಜವಾಬ್ದಾರಿ ನಮ್ಮೆಲ್ಲರ ಮೇಲಿದೆ

ವಿಶ್ವ ಆಹಾರ ಸುರಕ್ಷತಾ ದಿನದ ಮಹತ್ವವೇನು?

  • ಸುರಕ್ಷಿತ ಮತ್ತು ಸ್ವಚ್ಛ ಆಹಾರವು ನಮ್ಮ ಆರೋಗ್ಯ ಮತ್ತು ಜೀವನದ ಅಡಿಪಾಯ ಎಂದು ಈ ದಿನ ನಮಗೆ ನೆನಪಿಸುತ್ತದೆ.
  • ವಿಶ್ವ ಆಹಾರ ಸುರಕ್ಷತಾ ದಿನದ ಉದ್ದೇಶ ಎಲ್ಲರಿಗೂ ಸುರಕ್ಷಿತ ಮತ್ತು ಪೌಷ್ಟಿಕ ಆಹಾರ ಲಭ್ಯವಾಗುವಂತೆ ನೋಡಿಕೊಳ್ಳುವುದಾಗಿದೆ.
  • ಬ್ಯಾಕ್ಟೀರಿಯಾ, ವಿಷಕಾರಿ ವಸ್ತುಗಳು, ರಾಸಾಯನಿಕಗಳು ಅಥವಾ ಆಹಾರದಲ್ಲಿನ ಕಲ್ಮಶಗಳು ಫುಡ್‌ ಪಾಯಿಸನ್‌, ಅತಿಸಾರ ಮತ್ತು ಕ್ಯಾನ್ಸರ್ ಸೇರಿದಂತೆ ವಿವಿಧ ಕಾಯಿಲೆಗಳಿಗೆ ಕಾರಣವಾಗಬಹುದು. ಉತ್ಪಾದನೆಯಿಂದ ಬಳಕೆಯವರೆಗೆ ಆಹಾರ ಪ್ರಕ್ರಿಯೆಯ ಉದ್ದಕ್ಕೂ ನೈರ್ಮಲ್ಯ ಮತ್ತು ಸುರಕ್ಷತೆಯನ್ನು ಕಾಪಾಡಿಕೊಳ್ಳುವ ಮಹತ್ವದ ಬಗ್ಗೆ ಸರ್ಕಾರಗಳು, ಉತ್ಪಾದನಾ ಕಂಪನಿಗಳು, ವ್ಯಾಪಾರಿಗಳು ಮತ್ತು ಗ್ರಾಹಕರಲ್ಲಿ ಜಾಗೃತಿ ಮೂಡಿಸುವುದು ಈ ದಿನದ ಪ್ರಮುಖ ಉದ್ದೇಶವಾಗಿದೆ.
  • ಈ ದಿನವು ಗ್ರಾಹಕರಿಗೆ ಆಹಾರವನ್ನು ಖರೀದಿಸುವಾಗ ಅಥವಾ ತಯಾರಿಸುವಾಗ ನೈರ್ಮಲ್ಯ ಮತ್ತು ಗುಣಮಟ್ಟಕ್ಕೆ ಗಮನ ಕೊಡಲು ಅರಿವು ಮೂಡಿಸುತ್ತದೆ.
  • ವಿಶ್ವ ಆಹಾರ ಸುರಕ್ಷತಾ ದಿನವು ಕೇವಲ ಜಾಗೃತಿಯ ದಿನವಲ್ಲ, ಬದಲಾಗಿ ನಮ್ಮ ಬಗ್ಗೆ, ನಮ್ಮ ಕುಟುಂಬಗಳ ಬಗ್ಗೆ ಮತ್ತು ನಮ್ಮ ಸಮಾಜಕ್ಕೆ ನಮ್ಮ ಜವಾಬ್ದಾರಿಯ ಜ್ಞಾಪನೆಯಾಗಿದೆ.

ಜೀವನಶೈಲಿ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

U-18 Hockey Asia Cup 2026: ಚಿನ್ನ ಗೆದ್ದ ಪುರುಷರ ತಂಡ; ಕಂಚಿಗೆ ಮುತ್ತಿಕ್ಕಿದ ಮಹಿಳಾ ಪಡೆ – Kannada News

ಜಪಾನ್‌ನ ಕಾಕಮಿಗಹರಾದಲ್ಲಿ ನಡೆದ 2026 ರ ಪುರುಷರ 18 ವರ್ಷದೊಳಗಿನವರ ಹಾಕಿ ಏಷ್ಯಾಕಪ್‌ (Hockey U-18 Asia Cup 2026) ಫೈನಲ್‌ ಪಂದ್ಯದಲ್ಲಿ ಭಾರತೀಯ ಜೂನಿಯರ್ ಪುರುಷರ ಹಾಕಿ ತಂಡ ಇತಿಹಾಸ ನಿರ್ಮಿಸಿದೆ. ಭಾರತದ ಯುವ ಹಾಕಿ ಪಡೆ ಅದ್ಭುತ ಪ್ರದರ್ಶನ ನೀಡಿ, ಆತಿಥೇಯ ಜಪಾನ್ ತಂಡವನ್ನು ಅವರದೇ ಅಂಗಳದಲ್ಲಿ 4-1 ಗೋಲುಗಳಿಂದ ಸೋಲಿಸಿ ಪ್ರಶಸ್ತಿಯನ್ನು ಗೆದ್ದು ಚಿನ್ನದ ಪದಕಕ್ಕೆ ಮುತ್ತಿಕ್ಕಿದೆ. ತಂಡದ ಈ ಐತಿಹಾಸಿಕ ಗೆಲುವಿನಲ್ಲಿ ಪ್ರಮುಖ ಪಾತ್ರವಹಿಸಿದ ಆಶಿಶ್ ತಾನಿ ಪೂರ್ಣಿ, ಫೈನಲ್‌ ಪಂದ್ಯದಲ್ಲಿ ಹ್ಯಾಟ್ರಿಕ್ ಗೋಲು ಬಾರಿಸಿ ತಂಡವನ್ನು ಚಾಂಪಿಯನ್ ಮಾಡಿದರು.

ಆರಂಭದಲ್ಲೇ ಒತ್ತಡ ಹೇರಿದ ಭಾರತ

ಪಂದ್ಯದ ಆರಂಭದಿಂದಲೂ ಭಾರತ ತಂಡವು ಆತಿಥೇಯರ ಮೇಲೆ ಒತ್ತಡ ಹೇರುತ್ತಲೇ ಇತ್ತು. ಪಂದ್ಯದ ಎರಡನೇ ನಿಮಿಷದಲ್ಲಿ ಭಾರತಕ್ಕೆ ಪೆನಾಲ್ಟಿ ಕಾರ್ನರ್ ಸಿಕ್ಕಿತು, ಅದನ್ನು ಆಶಿಶ್ ತಾನಿ ಪೂರ್ಣಿ (2′) ಅದ್ಭುತವಾಗಿ ಗೋಲಾಗಿ ಪರಿವರ್ತಿಸಿ ಭಾರತಕ್ಕೆ ಆರಂಭದಲ್ಲಿ 1-0 ಮುನ್ನಡೆ ಒದಗಿಸಿದರು. ಮೊದಲ ಕ್ವಾರ್ಟರ್‌ನಲ್ಲಿ ಜಪಾನ್ ಮತ್ತೆ ಚೇತರಿಸಿಕೊಳ್ಳಲು ಪ್ರಯತ್ನಿಸಿತ್ತಾದರೂ ಭಾರತದ ರಕ್ಷಣಾ ಪಡೆ ಪ್ರತಿ ದಾಳಿಯನ್ನು ವಿಫಲಗೊಳಿಸಿತು. ಎರಡನೇ ಕ್ವಾರ್ಟರ್‌ನ ಕೊನೆಯ ನಿಮಿಷಗಳಲ್ಲಿ ಭಾರತ ಪಂದ್ಯದ ಮೇಲೆ ಸಂಪೂರ್ಣ ಹಿಡಿತ ಸಾಧಿಸಿತು.

28ನೇ ನಿಮಿಷದಲ್ಲಿ, ಆಶಿಶ್ ತಾನಿ ಪೂರ್ಣಿ ತಮ್ಮ ಎರಡನೇ ಗೋಲು ಬಾರಿಸಿ ಭಾರತದ ಮುನ್ನಡೆಯನ್ನು 2-0ಕ್ಕೆ ವಿಸ್ತರಿಸಿದರು. ಕೇವಲ ಎರಡು ನಿಮಿಷಗಳ ನಂತರ, ಅಂದರೆ ಪಂದ್ಯದ 30ನೇ ನಿಮಿಷದಲ್ಲಿ ನಾಯಕ ಕೇತನ್ ಕುಶ್ವಾಹ, ಪ್ರಹ್ಲಾದ್ ರಾಜ್‌ಭರ್ ನೀಡಿದ ಅದ್ಭುತ ಪಾಸ್‌ನಲ್ಲಿ ಅದ್ಭುತ ಫೀಲ್ಡ್ ಗೋಲು ಬಾರಿಸಿದರು. ಈ ಮೂಲಕ ಭಾರತ ತಂಡ ಪಂದ್ಯದ ಅರ್ಧಾವಧಿಯಲ್ಲಿ 3-0 ಮುನ್ನಡೆಯನ್ನು ಪಡೆದುಕೊಂಡಿತು. ಮೂರನೇ ಕ್ವಾರ್ಟರ್‌ನಲ್ಲಿಯೂ ಭಾರತದ ಪ್ರಾಬಲ್ಯ ಮುಂದುವರೆಯಿತು. 34ನೇ ನಿಮಿಷದಲ್ಲಿ ಸಿಕ್ಕ ಪೆನಾಲ್ಟಿ ಕಾರ್ನರ್ ಅನ್ನು ಆಶಿಶ್ (34′) ಗೋಲಾಗಿ ಪರಿವರ್ತಿಸಿದರು, ಇದರಿಂದಾಗಿ ಸ್ಕೋರ್ 4-0ಗೆ ತಲುಪಿತು. ನಾಲ್ಕನೇ ಕ್ವಾರ್ಟರ್‌ನಲ್ಲಿ, ಜಪಾನ್‌ನ ನುಮಾಡಾ ಗಕು (52′) ಪೆನಾಲ್ಟಿ ಸ್ಟ್ರೋಕ್‌ ಮೂಲಕ ತಂಡದ ಪರ ಏಕೈಕ ಗೋಲು ದಾಖಲಿಸಿದರು. ಆದರೆ ಆ ಹೊತ್ತಿಗೆ ಭಾರತದ ಗೆಲುವು ಖಚಿತವಾಗಿತ್ತು.

ಬಹುಮಾನ ಘೋಷಿಸಿದ ಹಾಕಿ ಇಂಡಿಯಾ

ಪುರುಷರ ತಂಡದ ಜೊತೆಗೆ, ಮಹಿಳಾ ತಂಡವೂ ಕಂಚಿನ ಪದಕ ಗೆದ್ದಿತು. ಈ ಅದ್ಭುತ ಪ್ರದರ್ಶನದ ನಂತರ, ಹಾಕಿ ಇಂಡಿಯಾ ಎರಡೂ ತಂಡಗಳಿಗೆ ನಗದು ಬಹುಮಾನವನ್ನು ಘೋಷಿಸಿದೆ. ಚಿನ್ನದ ಪದಕ ಗೆದ್ದ ಭಾರತೀಯ ಅಂಡರ್ -18 ಪುರುಷರ ಹಾಕಿ ತಂಡದ ಪ್ರತಿಯೊಬ್ಬ ಆಟಗಾರನಿಗೆ ತಲಾ 3 ಲಕ್ಷ ಮತ್ತು ಸಹಾಯಕ ಸಿಬ್ಬಂದಿಯ ಪ್ರತಿಯೊಬ್ಬ ಸದಸ್ಯನಿಗೆ ತಲಾ 1.5 ಲಕ್ಷ ನಗದು ಬಹುಮಾನವನ್ನು ನೀಡಿದೆ. ಭಾರತೀಯ ಅಂಡರ್ -18 ಮಹಿಳಾ ಹಾಕಿ ತಂಡದ ಪ್ರತಿಯೊಬ್ಬ ಆಟಗಾರ್ತಿಯರಿಗೆ ತಲಾ 1 ಲಕ್ಷ ಮತ್ತು ಸಹಾಯಕ ಸಿಬ್ಬಂದಿಗೆ ತಲಾ 50,000 ನಗದು ಬಹುಮಾನವನ್ನು ಘೋಷಿಸಿದೆ.

ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

ಮುಜಾಫರ್‌ಪುರ ಅಗ್ನಿ ದುರಂತ; ಸಾವಿನ ಸಂಖ್ಯೆ 7ಕ್ಕೆ ಏರಿಕೆ, ಆಸ್ಪತ್ರೆ ನೋಂದಣಿ ರದ್ದು, ಮೂವರ ಬಂಧನ – Kannada News

ಮುಜಾಫರ್‌ಪುರ, ಜೂನ್ 6: ಬಿಹಾರದ ಮುಜಾಫರ್‌ಪುರದ ಖಾಸಗಿ ಆಸ್ಪತ್ರೆಯೊಂದರಲ್ಲಿ ಸಂಭವಿಸಿದ ಭೀಕರ ಅಗ್ನಿ ಅವಘಡದಲ್ಲಿ (Fire Accident) ಚಿಕಿತ್ಸೆ ಫಲಕಾರಿಯಾಗದೆ ಇಂದು ಮತ್ತೊಬ್ಬ ರೋಗಿ ಮೃತಪಟ್ಟಿದ್ದಾರೆ. ಇದರೊಂದಿಗೆ ದುರಂತದಲ್ಲಿ ಸಾವನ್ನಪ್ಪಿದವರ ಒಟ್ಟು ಸಂಖ್ಯೆ 7ಕ್ಕೆ ಏರಿಕೆಯಾಗಿದೆ. ಈ ಘಟನೆಗೆ ಸಂಬಂಧಿಸಿದಂತೆ ಅಧಿಕಾರಿಗಳು ಆಸ್ಪತ್ರೆಯ ನೋಂದಣಿಯನ್ನು ತಕ್ಷಣದಿಂದಲೇ ರದ್ದುಗೊಳಿಸಿದ್ದು, ಸುರಕ್ಷತಾ ಲೋಪಗಳ ಆರೋಪದ ಮೇಲೆ ಮೂವರು ಸಿಬ್ಬಂದಿಯನ್ನು ಬಂಧಿಸಿ ತನಿಖೆ ಚುರುಕುಗೊಳಿಸಿದ್ದಾರೆ.

ಇಂದು ಮೃತಪಟ್ಟ ಸಂತ್ರಸ್ತರನ್ನು ಮುಜಾಫರ್‌ಪುರ ಜಿಲ್ಲೆಯ ಪಾರ್ರಿ ಗ್ರಾಮದ ನಿವಾಸಿ ಅಂಜನಿ ಕುಮಾರ್ ಸಿಂಗ್ ಎಂದು ಗುರುತಿಸಲಾಗಿದೆ. ಬುಧವಾರ ರಾತ್ರಿ ‘ಪ್ರಸಾದ್ ಆಸ್ಪತ್ರೆ’ಯ ತೀವ್ರ ನಿಗಾ ಘಟಕದಲ್ಲಿ (ICU) ಬೆಂಕಿ ಕಾಣಿಸಿಕೊಂಡಾಗ ಅಂಜನಿ ಸಿಂಗ್ ಅವರನ್ನು ರಕ್ಷಿಸಲಾಗಿತ್ತು. ಆದರೆ, ಚಿಕಿತ್ಸೆ ಪಡೆಯುತ್ತಿದ್ದಾಗ ಅವರು ಕೊನೆಯುಸಿರೆಳೆದಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಬುಧವಾರ ತಡರಾತ್ರಿ ಮುಜಾಫರ್‌ಪುರದ ಪ್ರಸಾದ್ ಆಸ್ಪತ್ರೆಯಲ್ಲಿ ಈ ಘಟನೆ ನಡೆದಿತ್ತು. ಶಾರ್ಟ್ ಸರ್ಕ್ಯೂಟ್‌ನಿಂದಾಗಿ ಬೆಂಕಿ ಹೊತ್ತಿಕೊಂಡಿರಬಹುದು ಎಂದು ಪ್ರಾಥಮಿಕ ತನಿಖೆಯಿಂದ ತಿಳಿದುಬಂದಿದೆ. ಅಧಿಕಾರಿಗಳ ಪ್ರಕಾರ, ಬೆಂಕಿ ಕಾಣಿಸಿಕೊಂಡ ತಕ್ಷಣ ಐಸಿಯು ತುಂಬಾ ದಟ್ಟವಾದ ಹೊಗೆ ಆವರಿಸಿಕೊಂಡಿತ್ತು. ಅಲ್ಲಿ ಹಲವು ರೋಗಿಗಳು ಚಿಕಿತ್ಸೆ ಪಡೆಯುತ್ತಿದ್ದರು. ಗುರುವಾರ ಐವರು ರೋಗಿಗಳು ಮೃತಪಟ್ಟರೆ, ಶುಕ್ರವಾರ ಮತ್ತೊಬ್ಬರು ಸಾವನ್ನಪ್ಪಿದ್ದರು. ಇಂದು ಅಂಜನಿ ಸಿಂಗ್ ಅವರ ಸಾವಿನೊಂದಿಗೆ ಒಟ್ಟು ಮೃತರ ಸಂಖ್ಯೆ 7ಕ್ಕೇರಿದೆ.

ಇದನ್ನೂ ಓದಿ: ದೆಹಲಿಯ ಬೆಂಕಿ ದುರಂತದಲ್ಲಿ ಬಾಂಗ್ಲಾ, ಅಫ್ಘಾನ್, ಆಫ್ರಿಕಾದ ಪ್ರವಾಸಿಗರೂ ಸಾವು; ಹೋಟೆಲ್ ಮಾಲೀಕ ಪರಾರಿ

ಈ ದುರಂತದ ಬೆನ್ನಲ್ಲೇ ಆಸ್ಪತ್ರೆ ಆಡಳಿತ ಮಂಡಳಿಯ ನಿರ್ಲಕ್ಷ್ಯ ಮತ್ತು ಸುರಕ್ಷತಾ ನಿಯಮಗಳ ಉಲ್ಲಂಘನೆ ಮೇಲ್ನೋಟಕ್ಕೆ ಕಂಡುಬಂದ ಹಿನ್ನೆಲೆಯಲ್ಲಿ ಪ್ರಸಾದ್ ಆಸ್ಪತ್ರೆಯ ನೋಂದಣಿಯನ್ನು ತಕ್ಷಣದಿಂದ ಜಾರಿಗೆ ಬರುವಂತೆ ರದ್ದುಗೊಳಿಸಲಾಗಿದೆ. ಅಲ್ಲದೆ, ಜಿಲ್ಲಾ ಸಿವಿಲ್ ಸರ್ಜನ್ ಅವರು ಆಸ್ಪತ್ರೆ ಆಡಳಿತ ಮಂಡಳಿಗೆ ನೋಟಿಸ್ ನೀಡಿದ್ದು, ಮುಂದಿನ 7 ದಿನಗಳ ಒಳಗಾಗಿ ಸೂಕ್ತ ದಾಖಲೆಗಳು ಮತ್ತು ಸಾಕ್ಷ್ಯಗಳೊಂದಿಗೆ ವಿವರವಾದ ಸ್ಪಷ್ಟೀಕರಣವನ್ನು ನೀಡುವಂತೆ ಆದೇಶಿಸಿದ್ದಾರೆ.

ಈ ಘಟನೆಗೆ ಸಂಬಂಧಿಸಿದಂತೆ ಆಸ್ಪತ್ರೆಯ ಮೂವರು ಸಿಬ್ಬಂದಿಯನ್ನು ಪೊಲೀಸರು ಬಂಧಿಸಿದ್ದಾರೆ. ಬೆಂಕಿ ಕಾಣಿಸಿಕೊಂಡ ತಕ್ಷಣ ತುರ್ತು ಪ್ರತಿಕ್ರಿಯೆ ಕ್ರಮಗಳಲ್ಲಿ ಏನಾದರೂ ವೈಫಲ್ಯಗಳಾಗಿದ್ದವೇ? ಮತ್ತು ರೋಗಿಗಳನ್ನು ಸ್ಥಳಾಂತರಿಸಲು ಸರಿಯಾದ ಪ್ರಯತ್ನಗಳನ್ನು ಮಾಡಲಾಗಿತ್ತೇ? ಎಂಬಿತ್ಯಾದಿ ಕೋನಗಳಲ್ಲಿ ತನಿಖೆ ನಡೆಸಲಾಗುತ್ತಿದೆ.

ಇದನ್ನೂ ಓದಿ: ದೆಹಲಿ ಬೆಂಕಿ ದುರಂತ; ಹೋಟೆಲ್ ಮಾಲೀಕ ಬಂಧನ, ನ್ಯಾಯಾಂಗ ತನಿಖೆಗೆ ಆದೇಶ

ಬೆಂಕಿ ಅವಘಡದ ಸಮಯದಲ್ಲಿ ಕೆಲವು ಸಿಬ್ಬಂದಿ ರೋಗಿಗಳನ್ನು ಬಿಟ್ಟು ಆಸ್ಪತ್ರೆಯಿಂದ ಓಡಿಹೋಗಿದ್ದರು ಎಂಬ ಗಂಭೀರ ಆರೋಪಗಳೂ ಕೇಳಿಬಂದಿದ್ದು, ತನಿಖಾಧಿಕಾರಿಗಳು ಈ ಬಗ್ಗೆಯೂ ಪರಿಶೀಲಿಸುತ್ತಿದ್ದಾರೆ. ಈ ದುರಂತವು ಆರೋಗ್ಯ ರಕ್ಷಣಾ ಕೇಂದ್ರಗಳಲ್ಲಿ, ವಿಶೇಷವಾಗಿ ರೋಗಿಗಳು ಸ್ವತಃ ಸ್ಥಳಾಂತರಗೊಳ್ಳಲು ಸಾಧ್ಯವಾಗದ ಐಸಿಯುನಂತಹ ನಿರ್ಣಾಯಕ ವಿಭಾಗಗಳಲ್ಲಿನ ಅಗ್ನಿ ಸುರಕ್ಷತಾ ವ್ಯವಸ್ಥೆಗಳ ಬಗ್ಗೆ ತೀವ್ರ ಕಳವಳ ಮೂಡಿಸಿದೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

IND vs AFG: ಗಂಭೀರ್ ದಾಖಲೆ ಸರಿಗಟ್ಟಿ, ಧೋನಿ, ಗಂಗೂಲಿ ದಾಖಲೆ ಮುರಿದ ಗಿಲ್

Source link

ಕೇರಳದ ಶಾಲೆಯಲ್ಲಿ 150 ವಿದ್ಯಾರ್ಥಿಗಳಿಗೆ ದಿಢೀರನೆ ಅನಾರೋಗ್ಯ; ಕಾರಣ ನಿಗೂಢ – Kannada News

ಮಲಪ್ಪುರಂ, ಜೂನ್ 6: ಕೇರಳದ ಶಾಲೆಯೊಂದರಲ್ಲಿ ಸುಮಾರು 150 ವಿದ್ಯಾರ್ಥಿಗಳು ಏಕಾಏಕಿ ಅನಾರೋಗ್ಯಕ್ಕೆ ಒಳಗಾದ ಹಿನ್ನೆಲೆಯಲ್ಲಿ ಶಾಲೆಯ ತರಗತಿಗಳನ್ನು 1 ವಾರದ ಕಾಲ ಮುಂದೂಡಲಾಗಿದೆ. ಕೇರಳದ (Kerala) ಮಲಪ್ಪುರಂ ಜಿಲ್ಲೆಯ ಕೀಝಾತ್ತೂರು ಎಂಬಲ್ಲಿನ ಸರ್ಕಾರಿ ಮಾದರಿ ಉನ್ನತ ಪ್ರಾಥಮಿಕ ಶಾಲೆಯಲ್ಲಿ ಈ ಆಘಾತಕಾರಿ ಘಟನೆ ಬೆಳಕಿಗೆ ಬಂದಿದೆ.

ಶಾಲೆಯ ಸುಮಾರು 150 ವಿದ್ಯಾರ್ಥಿಗಳಲ್ಲಿ ಜ್ವರ, ತಲೆನೋವು, ವಾಂತಿ ಮತ್ತು ಭೇದಿಯಂತಹ ರೋಗಲಕ್ಷಣಗಳು ಕಾಣಿಸಿಕೊಂಡಿವೆ. ಪ್ರಾಥಮಿಕ ತನಿಖೆಯ ಪ್ರಕಾರ, ಇದು ಕಲುಷಿತ ನೀರು ಅಥವಾ ಆಹಾರದ ಸೇವನೆಯಿಂದ ಉಂಟಾದ ಫುಡ್ ಪಾಯ್ಸನಿಂಗ್ ಇರಬಹುದು ಎಂದು ಆರೋಗ್ಯ ಇಲಾಖೆ ಅನುಮಾನ ವ್ಯಕ್ತಪಡಿಸಿದೆ. ಶಾಲೆಯಲ್ಲಿದ್ದ ನೀರಿನ ಮಾದರಿಗಳನ್ನು ಪರೀಕ್ಷೆಗಾಗಿ ಪ್ರಯೋಗಾಲಯಕ್ಕೆ ಕಳುಹಿಸಲಾಗಿದೆ.

ಈ ಪರಿಸ್ಥಿತಿಯ ಗಂಭೀರತೆಯನ್ನು ಪರಿಗಣಿಸಿ, ಮುನ್ನೆಚ್ಚರಿಕಾ ಕ್ರಮವಾಗಿ ಶಾಲೆಯ ತರಗತಿಗಳಿಗೆ 1 ವಾರಗಳ ಕಾಲ ರಜೆ ನೀಡಲು ಜಿಲ್ಲಾಡಳಿತ ಮತ್ತು ಆರೋಗ್ಯ ಇಲಾಖೆ ನಿರ್ಧರಿಸಿದೆ. ಈ ಅವಧಿಯಲ್ಲಿ ಶಾಲೆಯ ಆವರಣ, ನೀರಿನ ಟ್ಯಾಂಕ್‌ಗಳು ಮತ್ತು ಅಡುಗೆ ಕೋಣೆಯನ್ನು ಸಂಪೂರ್ಣವಾಗಿ ಸ್ವಚ್ಛಗೊಳಿಸಲು ಹಾಗೂ ಸ್ಯಾನಿಟೈಸ್ ಮಾಡಲು ಸೂಚಿಸಲಾಗಿದೆ.

ಇದನ್ನೂ ಓದಿ: ಕೊನೆಗೂ ಕೇರಳಕ್ಕೆ ಮುಂಗಾರು ಪ್ರವೇಶ: ಕರ್ನಾಟದಲ್ಲಿ 6 ದಿನ ಭಾರೀ ಮಳೆ, ಯೆಲ್ಲೋ- ಆರೇಂಜ್ ಅಲರ್ಟ್

ಅನಾರೋಗ್ಯಕ್ಕೆ ಒಳಗಾದ ಎಲ್ಲಾ ವಿದ್ಯಾರ್ಥಿಗಳಿಗೆ ಸ್ಥಳೀಯ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಕೊಡಿಸಲಾಗುತ್ತಿದ್ದು, ಸದ್ಯಕ್ಕೆ ಯಾರ ಪರಿಸ್ಥಿತಿಯೂ ಗಂಭೀರವಾಗಿಲ್ಲ ಎಂದು ವೈದ್ಯರು ತಿಳಿಸಿದ್ದಾರೆ. ಇಲಾಖೆಯು ಪರಿಸ್ಥಿತಿಯನ್ನು ಸೂಕ್ಷ್ಮವಾಗಿ ಗಮನಿಸುತ್ತಿದ್ದು, ಪೋಷಕರು ಆತಂಕ ಪಡದಂತೆ ಧೈರ್ಯ ತುಂಬಿದ್ದಾರೆ. ಅನಾರೋಗ್ಯದ ನಿಖರ ಕಾರಣಗಳ ಬಗ್ಗೆ ತನಿಖೆ ನಡೆಯುತ್ತಿದ್ದು, ವಿದ್ಯಾರ್ಥಿಗಳ ಸುರಕ್ಷತೆಯ ದೃಷ್ಟಿಯಿಂದ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ ಎಂದು ಆರೋಗ್ಯ ಅಧಿಕಾರಿಗಳು ತಿಳಿಸಿದ್ದಾರೆ.

ಜಿಲ್ಲಾ ವೈದ್ಯಾಧಿಕಾರಿಗಳು ಪೋಷಕರು ಮತ್ತು ಸಾರ್ವಜನಿಕರಿಗೆ ಧೈರ್ಯ ತುಂಬಿದ್ದು, ಸದ್ಯಕ್ಕೆ ಯಾವುದೇ ಆತಂಕ ಪಡುವ ಅಗತ್ಯವಿಲ್ಲ ಮತ್ತು ಪರಿಸ್ಥಿತಿ ಸಂಪೂರ್ಣ ನಿಯಂತ್ರಣದಲ್ಲಿದೆ ಎಂದು ಭರವಸೆ ನೀಡಿದ್ದಾರೆ. ವೈದ್ಯಕೀಯ ನೆರವು ಅಗತ್ಯವಿರುವ ವಿದ್ಯಾರ್ಥಿಗಳನ್ನು ನಿರ್ವಹಿಸಲು ಸುಲ್ತಾನ್ ಬತ್ತೇರಿ ತಾಲೂಕು ಆಸ್ಪತ್ರೆಯಲ್ಲಿ ಪ್ರತ್ಯೇಕ ವಾರ್ಡ್ ಅನ್ನು ಸ್ಥಾಪಿಸಲಾಗಿದೆ.

ಇದನ್ನೂ ಓದಿ: ಹಣಕೊಡಲಿಲ್ಲವೆಂದು ತಾವೇ ಸರಿಪಡಿಸಿದ್ದ ಬಾಲಕಿಯ ಮೂಳೆಯನ್ನು ಮತ್ತೆ ಮುರಿದು ಕಳುಹಿಸಿದ ವೈದ್ಯರು

ವೈದ್ಯರು ಮತ್ತು ಆರೋಗ್ಯ ಕಾರ್ಯಕರ್ತರು ಮಕ್ಕಳ ಆರೋಗ್ಯದ ಮೇಲೆ ನಿರಂತರ ನಿಗಾ ಇಟ್ಟಿದ್ದು, ಅಗತ್ಯ ಚಿಕಿತ್ಸೆ ನೀಡುತ್ತಿದ್ದಾರೆ. ಬಹುತೇಕ ವಿದ್ಯಾರ್ಥಿಗಳು ಚಿಕಿತ್ಸೆಗೆ ಉತ್ತಮವಾಗಿ ಸ್ಪಂದಿಸುತ್ತಿದ್ದು, ಅವರ ಆರೋಗ್ಯ ಸ್ಥಿರವಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ವಿದ್ಯಾರ್ಥಿಗಳಲ್ಲದೆ, ಅದೇ ಶಾಲೆಯ ಓರ್ವ ಶಿಕ್ಷಕರಿಗೂ ಇಂತಹದೇ ರೋಗಲಕ್ಷಣಗಳು ಕಾಣಿಸಿಕೊಂಡಿದ್ದು, ಅವರ ಮೇಲೂ ನಿಗಾ ಇಡಲಾಗಿದೆ.

ಜೂನ್ 1ರಂದೇ ಕೆಲವು ವಿದ್ಯಾರ್ಥಿಗಳಲ್ಲಿ ರೋಗಲಕ್ಷಣಗಳು ಕಾಣಿಸಿಕೊಳ್ಳಲು ಪ್ರಾರಂಭಿಸಿದ್ದವು. ಆದರೆ, ಈ ದಿಢೀರ್ ಅನಾರೋಗ್ಯದ ಹಿಂದಿನ ನಿಖರವಾದ ಕಾರಣ ಏನೆಂಬುದು ಇನ್ನೂ ಪತ್ತೆಯಾಗಿಲ್ಲ. ಆರೋಗ್ಯ ಇಲಾಖೆಯ ತಂಡಗಳು ಪ್ರಯೋಗಾಲಯದ ಪರೀಕ್ಷೆಗಾಗಿ ಶಾಲೆಯ ಆವರಣ ಮತ್ತು ಸುತ್ತಮುತ್ತಲಿನ ಪ್ರದೇಶಗಳಿಂದ ನೀರಿನ ಹಾಗೂ ಆಹಾರದ ಮಾದರಿಗಳನ್ನು ಸಂಗ್ರಹಿಸಿವೆ. ಈ ಅನಾರೋಗ್ಯವು ಕಲುಷಿತ ಆಹಾರ, ನೀರು, ವೈರಲ್ ಸೋಂಕು ಅಥವಾ ಇನ್ಯಾವುದೇ ಮೂಲದಿಂದ ಉಂಟಾಗಿದೆಯೇ ಎಂಬುದನ್ನು ಪತ್ತೆಹಚ್ಚಲು ಅಧಿಕಾರಿಗಳು ಈಗ ಪರೀಕ್ಷಾ ವರದಿಗಳಿಗಾಗಿ ಕಾಯುತ್ತಿದ್ದಾರೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

Exit mobile version