Gold Rate Today: ಚಿನ್ನ, ಬೆಳ್ಳಿ ಬೆಲೆ ಮತ್ತೂ ಕುಸಿತ; ಇಲ್ಲಿದೆ ದರಪಟ್ಟಿ – Kannada News | Gold Price Today on 3rd February 2026, Gold And Silver Rates In Bengaluru, Delhi, Mumbai | Latest News in Kannada

ಬೆಂಗಳೂರು, ಫೆಬ್ರುವರಿ 3: ಚಿನ್ನದ ಬೆಲೆಯ ಸತತ ಕುಸಿತ ಮುಂದುವರಿಯುತ್ತಿದೆ. ನಿನ್ನೆ ಸೋಮವಾರ ಸುಮಾರು 700-800 ರೂಗಳಷ್ಟು ಇಳಿದಿದ್ದ ಚಿನ್ನದ ಬೆಲೆ (Gold Rates) ಇವತ್ತು ಮಂಗಳವಾರ 100-150 ರೂ ಕಡಿಮೆಗೊಂಡಿದೆ. ಅಪರಂಜಿ ಚಿನ್ನದ ಬೆಲೆ 15,175-15,200 ರೂ ಶ್ರೇಣಿಯಲ್ಲಿದೆ. ಆಭರಣ ಚಿನ್ನದ ಬೆಲೆ 13,900 ರೂನಿಂದ 13,925 ರೂ ಶ್ರೇಣಿಯಲ್ಲಿದೆ. ವಿದೇಶಗಳಲ್ಲಿ ಹೆಚ್ಚಿನ ಕಡೆ ಇದರ ಬೆಲೆ ಸಖತ್ ಕುಸಿತವಾಗಿದೆ. ಬೆಳ್ಳಿ ಬೆಲೆಯ ಭರ್ಜರಿ ಕುಸಿತವೂ ಮುಂದುವರಿದಿದೆ. ಮಂಗಳವಾರ ಗ್ರಾಮ್​ಗೆ 20 ರೂ ಕಡಿಮೆ ಆಗಿದೆ. ಕೆಲ ದಿನಗಳ ಹಿಂದಷ್ಟೇ 425 ರೂ ಇದ್ದ ಬೆಳ್ಳಿ ಬೆಲೆ ಈಗ 280 ರೂಗೆ ಇಳಿದಿದೆ. ಭಾರತದಲ್ಲಿ ಸದ್ಯ 10 ಗ್ರಾಮ್​ನ 22 ಕ್ಯಾರಟ್ ಚಿನ್ನದ ಬೆಲೆ 1,39,100 ರುಪಾಯಿ ಇದೆ. 24 ಕ್ಯಾರಟ್​ನ ಅಪರಂಜಿ ಚಿನ್ನದ ಬೆಲೆ 1,51,750 ರುಪಾಯಿ ಆಗಿದೆ. 100 ಗ್ರಾಮ್ ಬೆಳ್ಳಿ ಬೆಲೆ 28,000 ರುಪಾಯಿ ಇದೆ. ಬೆಂಗಳೂರಿನಲ್ಲಿ ಚಿನ್ನದ ಬೆಲೆ 10 ಗ್ರಾಮ್​ಗೆ 1,39,100 ರುಪಾಯಿ ಆಗಿದೆ, ಬೆಳ್ಳಿ ಬೆಲೆ 100 ಗ್ರಾಮ್​ಗೆ 28,000 ರುಪಾಯಿಯಲ್ಲಿ ಇದೆ. ತಮಿಳುನಾಡು, ಕೇರಳ ಮೊದಲಾದ ಕೆಲವೆಡೆ ಈ ಲೋಹದ ಬೆಲೆ 28,000 ರೂ ಇದೆ.

ಭಾರತದಲ್ಲಿರುವ ಚಿನ್ನ, ಬೆಳ್ಳಿ ಬೆಲೆ (ಫೆಬ್ರುವರಿ 3ಕ್ಕೆ)

  • 24 ಕ್ಯಾರಟ್​ನ 1 ಗ್ರಾಂ ಚಿನ್ನದ ಬೆಲೆ: 15,175 ರೂ
  • 22 ಕ್ಯಾರಟ್​ನ 1 ಗ್ರಾಂ ಚಿನ್ನದ ಬೆಲೆ: 13,910 ರೂ
  • 18 ಕ್ಯಾರಟ್​ನ 1 ಗ್ರಾಂ ಚಿನ್ನದ ಬೆಲೆ: 11,381 ರೂ
  • ಬೆಳ್ಳಿ ಬೆಲೆ 1 ಗ್ರಾಂಗೆ: 280 ರೂ

ಬೆಂಗಳೂರಿನಲ್ಲಿ ಚಿನ್ನ, ಬೆಳ್ಳಿ ಬೆಲೆ

  • 24 ಕ್ಯಾರಟ್​ನ 1 ಗ್ರಾಂ ಚಿನ್ನದ ಬೆಲೆ: 15,175 ರೂ
  • 22 ಕ್ಯಾರಟ್​ನ 1 ಗ್ರಾಂ ಚಿನ್ನದ ಬೆಲೆ: 13,910 ರೂ
  • ಬೆಳ್ಳಿ ಬೆಲೆ 1 ಗ್ರಾಂಗೆ: 280 ರೂ

ವಿವಿಧ ನಗರಗಳಲ್ಲಿರುವ 22 ಕ್ಯಾರಟ್ ಚಿನ್ನದ ಬೆಲೆ (1 ಗ್ರಾಮ್​ಗೆ)

  • ಬೆಂಗಳೂರು: 13,910 ರೂ
  • ಚೆನ್ನೈ: 14,030 ರೂ
  • ಮುಂಬೈ: 13,910 ರೂ
  • ದೆಹಲಿ: 13,925 ರೂ
  • ಕೋಲ್ಕತಾ: 13,910 ರೂ
  • ಕೇರಳ: 13,910 ರೂ
  • ಅಹ್ಮದಾಬಾದ್: 13,915 ರೂ
  • ಜೈಪುರ್: 13,925 ರೂ
  • ಲಕ್ನೋ: 13,925 ರೂ
  • ಭುವನೇಶ್ವರ್: 13,915 ರೂ

ಇದನ್ನೂ ಓದಿ: ಏಷ್ಯನ್ ದೇಶಗಳ ಪೈಕಿ ಭಾರತಕ್ಕೆ ಕಡಿಮೆ ಟ್ಯಾರಿಫ್; ಅತಿ ಕಡಿಮೆ ಸುಂಕ ಎದುರಿಸುತ್ತಿರುವ ರಾಷ್ಟ್ರಗಳಿವು…

ವಿದೇಶಗಳಲ್ಲಿ 22 ಕ್ಯಾರಟ್ ಚಿನ್ನದ ಬೆಲೆ (1 ಗ್ರಾಮ್​ಗೆ)

  • ಮಲೇಷ್ಯಾ: 590 ರಿಂಗಿಟ್ (13,540 ರುಪಾಯಿ)
  • ದುಬೈ: 522.50 ಡಿರಾಮ್ (12,857 ರುಪಾಯಿ)
  • ಅಮೆರಿಕ: 145.50 ಡಾಲರ್ (13,151 ರುಪಾಯಿ)
  • ಸಿಂಗಾಪುರ: 192.30 ಸಿಂಗಾಪುರ್ ಡಾಲರ್ (13,686 ರುಪಾಯಿ)
  • ಕತಾರ್: 522 ಕತಾರಿ ರಿಯಾಲ್ (12,944 ರೂ)
  • ಸೌದಿ ಅರೇಬಿಯಾ: 533 ಸೌದಿ ರಿಯಾಲ್ (12,846 ರುಪಾಯಿ)
  • ಓಮನ್: 55.30 ಒಮಾನಿ ರಿಯಾಲ್ (12,991 ರುಪಾಯಿ)
  • ಕುವೇತ್: 42.47 ಕುವೇತಿ ದಿನಾರ್ (12,574 ರುಪಾಯಿ)

ವಿವಿಧ ನಗರಗಳಲ್ಲಿರುವ ಬೆಳ್ಳಿ ಬೆಲೆ (1 ಗ್ರಾಮ್​ಗೆ)

  • ಬೆಂಗಳೂರು: 280 ರೂ
  • ಚೆನ್ನೈ: 280 ರೂ
  • ಮುಂಬೈ: 280 ರೂ
  • ದೆಹಲಿ: 280 ರೂ
  • ಕೋಲ್ಕತಾ: 280 ರೂ
  • ಕೇರಳ: 280 ರೂ
  • ಅಹ್ಮದಾಬಾದ್: 280 ರೂ
  • ಜೈಪುರ್: 280 ರೂ
  • ಲಕ್ನೋ: 280 ರೂ
  • ಭುವನೇಶ್ವರ್: 280 ರೂ
  • ಪುಣೆ: 280

(ಗಮನಿಸಿ: ಇಲ್ಲಿ ನೀಡಲಾಗಿರುವ ಚಿನ್ನ ಮತ್ತು ಬೆಳ್ಳಿ ಬೆಲೆ ನಿಖರ ಎಂದು ಖಾತ್ರಿಪಡಿಸಲು ಸಾಧ್ಯವಿಲ್ಲ. ಪ್ರಮುಖ ಅಭರಣದಂಗಡಿಗಳಿಂದ ಶೇಖರಿಸಿದ ಮಾಹಿತಿ ಇದು. ಜೊತೆಗೆ, ಈ ದರದ ಮೇಲೆ ಜಿಎಸ್​ಟಿ, ಮೇಕಿಂಗ್ ಚಾರ್ಜಸ್ ಇತ್ಯಾದಿ ಶುಲ್ಕಗಳು ಬೀಳಬಹುದು.)

ಇನ್ನಷ್ಟು ವಾಣಿಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

Source link

ಏಷ್ಯನ್ ದೇಶಗಳ ಪೈಕಿ ಭಾರತಕ್ಕೆ ಕಡಿಮೆ ಟ್ಯಾರಿಫ್; ಅತಿ ಕಡಿಮೆ ಸುಂಕ ಎದುರಿಸುತ್ತಿರುವ ರಾಷ್ಟ್ರಗಳಿವು… – Kannada News | India among the countries with lowest US tariffs, markets react positively

ನವದೆಹಲಿ, ಫೆಬ್ರುವರಿ 3: ಭಾರತದ ಪ್ರಧಾನಿ ನರೇಂದ್ರ ಮೋದಿ ಮತ್ತು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರು ತಮ್ಮ ಎರಡು ದೇಶಗಳ ನಡುವೆ ವ್ಯಾಪಾರ ಒಪ್ಪಂದ ಏರ್ಪಟ್ಟಿರುವುದನ್ನು ಖಚಿತಪಡಿಸಿದ್ದಾರೆ. ಭಾರತದ ಮೇಲೆ ಅಮೆರಿಕ ವಿಧಿಸಿರುವ ಶೇ. 25 ಪ್ರತಿಸುಂಕವನ್ನು ಶೇ. 18ಕ್ಕೆ ಇಳಿಸಲಾಗಿದೆ. ರಷ್ಯನ್ ತೈಲ ಖರೀದಿಸುವುದಕ್ಕೆ ಪ್ರತಿಯಾಗಿ ಭಾರತಕ್ಕೆ ದಂಡವಾಗಿ ವಿಧಿಸಿದ್ದ ಶೇ. 25 ಸುಂಕವನ್ನೂ ಕೈಬಿಡುತ್ತಿರುವುದಾಗಿ ಟ್ರಂಪ್ ಹೇಳಿದ್ದಾರೆ. ಇದರೊಂದಿಗೆ ಭಾರತದ ಸರಕುಗಳ ಮೇಲೆ ಅಮೆರಿಕದ ಟ್ಯಾರಿಫ್ ಶೇ. 50ರಿಂದ ಶೇ. 18ಕ್ಕೆ ಇಳಿಯಲಿದೆ.

ಭಾರತ ಮತ್ತು ಅಮೆರಿಕ ನಡುವೆ ಮುಕ್ತ ವ್ಯಾಪಾರ ಒಪ್ಪಂದದ ಮಾತುಕತೆ ಬಹುತೇಕ ಪೂರ್ಣಗೊಳ್ಳುವ ಸ್ಥಿತಿಯಲ್ಲಿದೆ. ಈ ಡೀಲ್​ಗೆ ಸಹಿ ಬಿದ್ದ ಬಳಿಕ ಹೊಸ ಟ್ಯಾರಿಫ್ ದರ ಜಾರಿಗೆ ಬರುತ್ತದೆ. ಆದರೆ, ರಷ್ಯನ್ ತೈಲ ಖರೀದಿಯನ್ನು ಭಾರತ ಕಡಿಮೆ ಮಾಡಿದೆ ಎಂದು ಅಮೆರಿಕ ಹೇಳಿಕೊಂಡಿದೆ. ಈ ಬಗ್ಗೆ ಭಾರತದಿಂದ ಯಾವುದೇ ಸ್ಪಷ್ಟನೆ ಬಂದಿಲ್ಲ. ರಷ್ಯಾ ಮತ್ತು ಇರಾನ್ ಬದಲು ಅಮೆರಿಕ ಹಾಗೂ ವೆನೆಜುವೆಲಾದಿಂದ ಭಾರತ ತೈಲ ಖರೀದಿಸುತ್ತದೆ ಎಂದು ಟ್ರಂಪ್ ಹೇಳಿಕೊಂಡಿದ್ದಾರೆ. ಈ ಬಗ್ಗೆಯೂ ಭಾರತದಿಂದ ಸ್ಪಷ್ಟನೆ ಇನ್ನೂ ಬಂದಿಲ್ಲ. ಅದೇನೇ ಇದ್ದರೂ ಅಮೆರಿಕವು ಭಾರತದ ಸರಕುಗಳ ಮೇಲಿನ ಟ್ಯಾರಿಫ್ ಅನ್ನು ಶೇ. 18ಕ್ಕೆ ಇಳಿಸುತ್ತೇನೆಂದಿರುವುದು ಹೌದು. ವಿಶ್ವದ ಹೆಚ್ಚಿನ ದೇಶಗಳಿಗೆ ಹೋಲಿಸಿದರೆ ಭಾರತಕ್ಕೆ ಕಡಿಮೆ ಟ್ಯಾರಿಫ್ ವಿಧಿಸಲಾಗಿದೆ.

ಇದನ್ನೂ ಓದಿ: ಕರ್ನಾಟಕ ರೈಲ್ವೆಗೆ ಭರಪೂರ ಕೊಡುಗೆ: ಬಜೆಟ್​ನಲ್ಲಿ ಏನೂ ಸಿಕ್ಕಿಲ್ಲ ಎಂದವರಿಗೆ ಅಂಕಿಅಂಶ ಸಮೇತ ಅಶ್ವಿನಿ ವೈಷ್ಣವ್ ತಿರುಗೇಟು

ಅಮೆರಿಕದಿಂದ ಹೆಚ್ಚಿನ ಟ್ಯಾರಿಫ್ ಎದುರಿಸುತ್ತಿರುವ ದೇಶಗಳು

  • ಭಾರತ: ಶೇ. 18
  • ಥಾಯ್ಲೆಂಡ್: ಶೇ. 19
  • ಕಾಂಬೋಡಿಯಾ: ಶೇ. 19
  • ಮಲೇಷ್ಯಾ: ಶೇ. 19
  • ಪಾಕಿಸ್ತಾನ: ಶೇ. 19
  • ಬಾಂಗ್ಲಾದೇಶ: ಶೇ. 20
  • ವಿಯೆಟ್ನಾಂ: ಶೇ. 20
  • ಸೌತ್ ಆಫ್ರಿಕಾ: ಶೇ. 30
  • ಚೀನಾ: ಶೇ. 37
  • ಲಾವೊಸ್: ಶೇ. 40
  • ಮಯನ್ಮಾರ್: ಶೇ. 40
  • ಬ್ರೆಜಿಲ್: ಶೇ 50

ಅಮೆರಿಕದಿಂದ ಅತಿಕಡಿಮೆ ಟ್ಯಾರಿಫ್ ಎದುರಿಸುತ್ತಿರುವ ದೇಶಗಳು

  • ಬ್ರಿಟನ್: ಶೇ. 10
  • ಯೂರೋಪಿಯನ್ ಒಕ್ಕೂಟ: ಶೇ. 15
  • ಸ್ವಿಟ್ಜರ್​ಲ್ಯಾಂಡ್: ಶೇ. 15
  • ಜಪಾನ್: ಶೇ. 15
  • ಸೌತ್ ಕೊರಿಯಾ: ಶೇ. 15

ಡೊನಾಲ್ಡ್ ಟ್ರಂಪ್ ತಮ್ಮ ಟ್ರೂತ್ ಸೋಷಿಯಲ್​ನಲ್ಲಿ ನೀಡಿರುವ ಹೇಳಿಕೆ ಪ್ರಕಾರ, ಅಮೆರಿಕದ ಸರಕುಗಳ ಮೇಲೆ ಟ್ಯಾರಿಫ್ ಅನ್ನು ಭಾರತ ಸೊನ್ನೆಗೆ ಇಳಿಸಲಿದೆ. ಅಮೆರಿಕದ ಕೃಷಿ ಉತ್ಪನ್ನಗಳಿಗೆ ಭಾರತ ಮಾರುಕಟ್ಟೆ ಪ್ರವೇಶ ನೀಡಲಿದೆ. ಆದರೆ, ಈ ಬಗ್ಗೆಯೂ ಭಾರತದ ವತಿಯಿಂದ ಹೇಳಿಕೆ ಬಂದಿಲ್ಲ.

ಇದನ್ನೂ ಓದಿ: ಜಾಗತಿಕ ಶಾಂತಿಗೆ ಟ್ರಂಪ್ ನಾಯಕತ್ವ ಅತ್ಯಗತ್ಯ; ಸುಂಕ ಕಡಿತದ ಬಳಿಕ ಅಮೆರಿಕಕ್ಕೆ ಪ್ರಧಾನಿ ಮೋದಿ ಧನ್ಯವಾದ

ಭಾರತ ಹಾಗೂ ಅಮೆರಿಕ ನಡುವೆ ಟ್ರೇಡ್ ಡೀಲ್ ಕುದುರಿದೆ ಎನ್ನುವ ಸುದ್ದಿಯು ಭಾರತೀಯ ಷೇರು ಮಾರುಕಟ್ಟೆಯ ಮೇಲೆ ಸಕಾರಾತ್ಮಕ ಪರಿಣಾಮ ಬೀರಿದೆ. ನಿಫ್ಟಿ, ಸೆನ್ಸೆಕ್ಸ್​ನ ಎಲ್ಲಾ ಸೂಚ್ಯಂಕಗಳೂ ಹಸಿರು ಬಣ್ಣಕ್ಕೆ ತಿರುಗಿವೆ. ಭಾರತದ ಅನೇಕ ಉದ್ದಿಮೆಗಳು ಉತ್ಸಾಹದಿಂದ ಗರಿಗೆದರುವಂತಾಗಿದೆ.

ಇನ್ನಷ್ಟು ವಾಣಿಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

Source link

ಸಿಲಿಕಾನ್ ಸಿಟಿಗೇ ಬಂತು ಚಿರತೆ! ಬೆಂಗಳೂರಿನ ಅಂಜನಾಪುರದ ಬಳಿ ಕಾಣಿಸಿಕೊಂಡ ಚಿರತೆ, ಸಿಸಿಟಿವಿ ವಿಡಿಯೋ ವೈರಲ್ – Kannada News | Leopard Spotted in Bengaluru’s Anjanapura, CCTV Video Sparks Panic Near Turahalli Forest

ಬೆಂಗಳೂರು, ಫೆಬ್ರವರಿ 3: ಅಂಜನಾಪುರ ಬಳಿ ಚಿರತೆ ಕಾಣಿಸಿಕೊಂಡಿದ್ದು, ಸ್ಥಳೀಯ ನಿವಾಸಿಗಳಲ್ಲಿ ಭಾರಿ ಆತಂಕ ಮೂಡಿಸಿದೆ. ಅಂಜನಾಪುರ 7ನೇ ಬ್ಲಾಕ್ ರಸ್ತೆಯಲ್ಲಿ ಮಧ್ಯರಾತ್ರಿ ಸುಮಾರು 2 ಗಂಟೆ ಸುಮಾರಿಗೆ ಚಿರತೆ ಓಡಾಡುತ್ತಿರುವ ದೃಶ್ಯ ಮನೆಯೊಂದರ ಸಿಸಿಟಿವಿ ಕ್ಯಾಮರಾದಲ್ಲಿ ಸೆರೆಯಾಗಿದೆ. ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡಿದ್ದು, ಸ್ಥಳೀಯರಲ್ಲಿ ಆತಂಕ ಸೃಷ್ಟಿಸಿದೆ. ತುರಹಳ್ಳಿ ಅರಣ್ಯ ಪ್ರದೇಶದ ಸಮೀಪದಲ್ಲೇ ಅಂಜನಾಪುರ ಇರುವುದರಿಂದ ಅರಣ್ಯದಿಂದಲೇ ಚಿರತೆ ನುಗ್ಗಿರಬಹುದು ಎಂಬ ಶಂಕೆ ವ್ಯಕ್ತವಾಗಿದೆ.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

ಕರ್ನಾಟಕದ 3 ಸಾವಿರಕ್ಕೂ ಹೆಚ್ಚು ಸರ್ಕಾರಿ ಶಾಲೆಗಳಿಗೆ ಸ್ಮಾರ್ಟ್​ ಕ್ಲಾಸ್ ಭಾಗ್ಯ! – Kannada News | Karnataka Govt Schools Get Rs.91.5 Cr for Smart Classes: Boosting Digital Education

ಕರ್ನಾಟಕದ 3 ಸಾವಿರಕ್ಕೂ ಹೆಚ್ಚು ಸರ್ಕಾರಿ ಶಾಲೆಗಳಿಗೆ ಸ್ಮಾರ್ಟ್​ ಕ್ಲಾಸ್ ಭಾಗ್ಯ!

ಬೆಂಗಳೂರು, ಫೆಬ್ರುವರಿ 03: ರಾಜ್ಯದ ಸರ್ಕಾರಿ ಶಾಲೆಗಳಲ್ಲಿ ಡಿಜಿಟಲ್ ಶಿಕ್ಷಣ ವಿಸ್ತಾರಗೊಳಿಸಲು ಸಮಗ್ರ ಶಿಕ್ಷಣ ಕರ್ನಾಟಕದಡಿ ಸ್ಮಾರ್ಟ್ ಕ್ಲಾಸ್  (Smart Class) ಸ್ಥಾಪನೆಗೆ ಅನುಮೋದನೆ ಸಿಕ್ಕಿದೆ. ಯೋಜನಾ ಅನುಮೋದನ ಮಂಡಳಿಯ ತೀರ್ಮಾನದಂತೆ, 3862 ಶಾಲೆಗಳಲ್ಲಿ 9154.80 ಲಕ್ಷ ರೂ. ವೆಚ್ಚದಲ್ಲಿ ಸ್ಮಾರ್ಟ್ ಕ್ಲಾಸ್ ರೂಮ್ ಯೋಜನೆ ಅನುಷ್ಠಾನಗೊಳ್ಳಲಿದೆ.

ರಾಜ್ಯದ ಸರ್ಕಾರಿ ಶಾಲೆಗಳಲ್ಲಿ ಕಂಪ್ಯೂಟರ್ ಆಧಾರಿತ ಶಿಕ್ಷಣವನ್ನು ಬಲಪಡಿಸುವ ಉದ್ದೇಶದಿಂದ 5,000 ಶಾಲೆಗಳಲ್ಲಿ ಕಂಪ್ಯೂಟರ್ ಪ್ರಯೋಗಾಲಯಗಳು ಹಾಗೂ ಸ್ಮಾರ್ಟ್ ಕ್ಲಾಸ್‌ಗಳನ್ನು ಸ್ಥಾಪಿಸಲಾಗುತ್ತಿದೆ ಎಂದು ಶಿಕ್ಷಣ ಮತ್ತು ಸಾಕ್ಷರತಾ ಸಚಿವ ಮಧು ಬಂಗಾರಪ್ಪ ಹಿಂದೆಯೂ ಹೇಳಿಕೆ ನೀಡಿದ್ದರು. ಇದೀಗ ಹಿರಿಯ ಪ್ರಾಥಮಿಕ ಶಾಲೆಗಳಿಗೆ 3 ಸಾವಿರ ಲಕ್ಷ ರೂ. ಗೂ ಹೆಚ್ಚು ಹಣ ಮೀಸಲಿಡಲಾಗಿದ್ದು, ಹಿರಿಯ ಪ್ರಾಥಮಿಕ ಶಾಲೆಗಳು ಮತ್ತು ಪ್ರೌಢ/ಉನ್ನತ ಪ್ರೌಢ ಶಾಲೆಗಳಿಗೆ 4 ಸಾವಿರ ಲಕ್ಷ ರೂ. ಮೀಸಲಿಡಲಾಗಿದೆ ಎಂದು ಹೇಳಲಾಗಿದೆ. ಇದರ ಮೂಲಕ ವಿದ್ಯಾರ್ಥಿಗಳಿಗೆ ತಾಂತ್ರಿಕ ಮತ್ತು ಡಿಜಿಟಲ್ ಶಿಕ್ಷಣ ಸೌಲಭ್ಯ ವಿಸ್ತಾರಗೊಳ್ಳಲಿದೆ ಮತ್ತು ಶಾಲಾ ಶಿಕ್ಷಣ ಗುಣಮಟ್ಟದಲ್ಲಿ ಸುಧಾರಣೆ ಕಾಣಬಹುದಾಗಿದೆ.

ಯಾವೆಲ್ಲಾ ವಿಭಾಗಗಳಿಗೆ ಎಷ್ಟೆಷ್ಟು ಅನುದಾನ ಮೀಸಲು

  •  1631 ಹಿರಿಯ ಪ್ರಾಥಮಿಕ ಶಾಲೆಗಳಿಗೆ 3914.40 ಲಕ್ಷ ರೂಗಳು ಮೀಸಲು
  •  95 ಕಸ್ತೂರಬಾ ಗಾಂಧಿ ಬಾಲಿಕಾ ವಿದ್ಯಾಲಯಗಳಿಗೆ 114 .00 ಲಕ್ಷ ರೂ ಮೀಸಲು
  • 1326 ಹಿರಿಯ ಪ್ರಾಥಮಿಕ ಶಾಲೆಗಳು ಹಾಗೂ 651 ಪ್ರೌಢ/ಉನ್ನತ ಪ್ರೌಢ ಶಾಲೆಗಳಿಗೆ 4744.80 ಲಕ್ಷ ಮೀಸಲು
  • 4. 159 ಪ್ರೌಢ/ಉನ್ನತ ಪ್ರೌಢ ಶಾಲೆಗಳಿಗೆ 381.6 ಲಕ್ಷ ಮೀಸಲು

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Source link

Video: ಕಾಡುಕೋಣ ಹೇಗೆ ಘೀಳಿಡುತ್ತಿದೆ ಗೊತ್ತಾ? ಈ ವಿಡಿಯೋ ನೋಡಿ – Kannada News | Have you ever seen a wild gaur roar, video goes viral

ಮಾನವನ ಸ್ವಾರ್ಥಕ್ಕೆ ಕಾಡು ಪ್ರಾಣಿಗಳ (wild animals) ಆವಾಸ ಸ್ಥಾನಗಳು ನಾಶವಾಗುತ್ತಿದೆ. ಹೀಗಾಗಿ ಕ್ರೂರ ಪ್ರಾಣಿಗಳು ಜನವಸತಿ ಪ್ರದೇಶದತ್ತ ಬರುತ್ತಿವೆ. ಅದಲ್ಲದೇ, ಈ ಕಾಡುಕೋಣಗಳು ಜನರ ಮೇಲೆ ದಾಳಿ ಮಾಡುವ ಸುದ್ದಿಗಳನ್ನು ನೀವು ಕೇಳಿರುತ್ತೀರಿ.  ವೈರಲ್‌ ಆಗಿರುವ ಈ ವಿಡಿಯೋದಲ್ಲಿ ದೈತ್ಯಾಕಾರದ ಕಾಡು ಕೋಣ (wild gaur) ಘೀಳಿಡುವುದನ್ನು ನೋಡಿದ್ರೆ ಮೈ ಜುಮ್ ಎನ್ನುತ್ತೆ. ಇದಕ್ಕೆ ಸಂಬಂಧಿಸಿದ ಕ್ಲಿಪಿಂಗ್‌ ವೈರಲ್‌ ಆಗುತ್ತಿದ್ದಂತೆ ಈ ದೃಶ್ಯ ನೋಡಿದ ನೆಟ್ಟಿಗರು ಕಾಮೆಂಟ್‌ ಮಾಡಿದ್ದಾರೆ.

ಸಿ ಆರ್ ನಾಗೇಶ್ (C. R Nagesh) ಹೆಸರಿನ ಫೇಸ್ ಬುಕ್ ಹೆಸರಿನ ಖಾತೆಯಲ್ಲಿ ಹಂಚಿ ಕೊಳ್ಳಲಾಗಿದೆ. ಈ ವಿಡಿಯೋದಲ್ಲಿ ಕಾಡುಕೋಣವೊಂದು ಮುಖವನ್ನೆತ್ತಿ ಘೀಳಿಡುವುದನ್ನು ನೋಡಬಹುದು.

ವೈರಲ್ ವಿಡಿಯೋ ಇಲ್ಲಿದೆ

ಇದನ್ನೂ ಓದಿ: ಬೈಕ್ ಶೋರೂಂನೊಳಗೆ ನುಗ್ಗಿದ ಕಾಡುಕೋಣ; ಶಾಕಿಂಗ್ ವಿಡಿಯೋ ವೈರಲ್

ಈ ವಿಡಿಯೋ ಅಧಿಕ ವೀಕ್ಷಣೆಗಳನ್ನು ಪಡೆದುಕೊಂಡಿದ್ದು, ಒಬ್ಬ ಬಳಕೆದಾರ ದೀರ್ಘವಾದ ಓಂಕಾರ ಎಂದಿದ್ದಾರೆ. ಮತ್ತೊಬ್ಬರು ಇದು ಯಾವ ಊರಲ್ಲಿ ಮಾರಾರ್ರೆ, ಸೈತಾನ್ ಇದ್ದ ಹಾಗೆ ಇದೆ ಎಂದು ಕಾಮೆಂಟ್ ಮಾಡಿದ್ದಾರೆ. ಇನ್ನೊಬ್ಬರು, ನೀನೇ ರಾಜ ಕಣೋ ಎಂದು ತಮಾಷೆಯಾಗಿ ಹೇಳಿದ್ದಾರೆ.

ಇನ್ನಷ್ಟು ವೈರಲ್ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

ರೋಹಿತ್ ಶೆಟ್ಟಿ ಮನೆಮೇಲಿನ ದಾಳಿಗೆ ನಾಲ್ಕು ತಿಂಗಳ ಹಿಂದೆಯೇ ನಡೆದಿತ್ತು ಪ್ಲ್ಯಾನ್ – Kannada News | Rohit Shetty Attack: Bishnoi Gang Targets Bollywood, Police Probe Intensifies

ಬಾಲಿವುಡ್‌ನಲ್ಲಿ ಈಗ ಭಯದ ವಾತಾವರಣ ಸೃಷ್ಟಿ ಆಗಿದೆ. ಏಕೆಂದರೆ ಕಳೆದ ಕೆಲವು ತಿಂಗಳುಗಳಲ್ಲಿ, ಅನೇಕ ಪ್ರಸಿದ್ಧ ಮತ್ತು ಜನಪ್ರಿಯ ಸೆಲೆಬ್ರಿಟಿಗಳ ಮನೆಗಳ ಮೇಲೆ ಗುಂಡಿನ ದಾಳಿ ನಡೆದಿದೆ. ಕೆಲವು ದಿನಗಳ ಹಿಂದೆ, ಬಾಲಿವುಡ್ ನಿರ್ದೇಶಕ ರೋಹಿತ್ ಶೆಟ್ಟಿ (Rohit Shetty) ಅವರ ಮನೆಯ ಮೇಲೆ ಗುಂಡಿನ ದಾಳಿ ನಡೆದಿತ್ತು. ಕುಖ್ಯಾತ ದರೋಡೆಕೋರ ಲಾರೆನ್ಸ್ ಬಿಷ್ಣೋಯ್ ಗ್ಯಾಂಗ್ ಈ ಗುಂಡಿನ ದಾಳಿಯ ಜವಾಬ್ದಾರಿಯನ್ನು ವಹಿಸಿಕೊಂಡಿದೆ. ಸೋಶಿಯಲ್ ಮೀಡಿಯಾದಲ್ಲಿ ಪೋಸ್ಟ್ ಪೋಸ್ಟ್ ಮಾಡುವ ಮೂಲಕ ಬಿಷ್ಣೋಯ್ ಗ್ಯಾಂಗ್ ಘಟನೆಯ ಜವಾಬ್ದಾರಿಯನ್ನು ವಹಿಸಿಕೊಂಡಿದೆ. ರೋಹಿತ್ ಶೆಟ್ಟಿ ಮನೆಯ ಹೊರಗೆ ಗುಂಡಿನ ದಾಳಿ ನಡೆಸಲು 4 ತಿಂಗಳ ಹಿಂದೆಯೇ ಸಂಚು ರೂಪಿಸಲಾಗಿತ್ತು.

ಆರೋಪಿಯು ಶೂಟಿಂಗ್‌ಗೆ ಬಳಸಿದ್ದ ಸ್ಕೂಟರ್ ಅನ್ನು ಕೇವಲ 4 ತಿಂಗಳ ಹಿಂದೆ ಖರೀದಿಸಿದ್ದ. ಆರೋಪಿ ಅಮನ್ ಮರೋಟೆ ಈ ಬೈಕನ್ನು ಇತರ ಇಬ್ಬರು ಆರೋಪಿಗಳಿಗೆ ನೀಡಿದ್ದ. ಅವರು ಮುಂಬೈಗೆ ಬಂದು ಈ ಬೈಕನ್ನು ಪ್ರಮುಖ ಶೂಟರ್‌ಗೆ ತಲುಪಿಸಿದ್ದರು. ಈ ಬೈಕನ್ನು ತೆಗೆದುಕೊಂಡು ಆರೋಪಿಯು ರೋಹಿತ್ ಶೆಟ್ಟಿ ಮನೆಗೆ ಹೋಗಿ ಶೆಟ್ಟಿ ಮನೆಯ ಮೇಲೆ ಗುಂಡು ಹಾರಿಸಿದ್ದಾನೆ.

ಪೊಲೀಸರು ಇದುವರೆಗೆ 4 ಆರೋಪಿಗಳನ್ನು ಬಂಧಿಸಿದ್ದಾರೆ. ಇನ್ನೂ ಇಬ್ಬರು ತಲೆಮರೆಸಿಕೊಂಡಿದ್ದಾರೆ. ಇದಷ್ಟೇ ಅಲ್ಲ, ತಲೆಮರೆಸಿಕೊಂಡಿರುವ ಆರೋಪಿಯು ಶುಭಂ ಲೋಂಕರ್ ಜೊತೆ ನಿರಂತರ ಸಂಪರ್ಕದಲ್ಲಿದ್ದಾನೆ ಎಂಬುದು ಬೆಳಕಿಗೆ ಬಂದಿದೆ. ಆರೋಪಿ ಶುಭಂ ಲೋಂಕರ್ ಆರೋಪಿಗಳನ್ನು ಸಂಪರ್ಕಿಸಲು ಸಿಗ್ನಲ್ ಆ್ಯಪ್ ಬಳಸಿದ್ದಾನೆ.

ಈ ಪ್ರಕರಣದಲ್ಲಿ ಮುಂಬೈ ಅಪರಾಧ ವಿಭಾಗವು ಲಾರೆನ್ಸ್ ಬಿಷ್ಣೋಯ್ ಅವರ ಹೇಳಿಕೆಯನ್ನು ದಾಖಲಿಸುವ ಸಾಧ್ಯತೆಯಿದೆ. ರೋಹಿತ್ ಶೆಟ್ಟಿ ಗುಂಡಿನ ದಾಳಿ ಪ್ರಕರಣದಲ್ಲಿ ಲಾರೆನ್ಸ್ ಹೇಳಿಕೆಯನ್ನು ದಾಖಲಿಸಲು ಅಪರಾಧ ವಿಭಾಗದ ಅಧಿಕಾರಿಗಳು ಗುಜರಾತ್‌ನ ಶಬರಮತಿ ಜೈಲಿಗೆ ಹೋಗಲಿದ್ದಾರೆ ಎನ್ನಲಾಗಿದೆ. ಕೆಲವು ಕಾನೂನು ಸಮಸ್ಯೆಗಳಿಂದಾಗಿ, ಲಾರೆನ್ಸ್ ಬಿಷ್ಣೋಯ್​ನ ಪೊಲೀಸ್ ಕಸ್ಟಡಿಗೆ ಪಡೆಯಲು ಸಾಧ್ಯವಾಗಿಲ್ಲ.

ಇದನ್ನೂ ಓದಿ:‘ಗೋಲ್​​ಮಾಲ್’ ನಿರ್ದೇಶಕ ರೋಹಿತ್ ಶೆಟ್ಟಿ ಮನೆ ಮೇಲೆ ಗುಂಡಿನ ದಾಳಿ 

ಮೊದಲು ನಟ ಸಲ್ಮಾನ್ ಖಾನ್ ಅವರ ಮನೆ ಮೇಲೆ, ನಂತರ ಬಾಬಾ ಸಿದ್ದಿಕಿ ಅವರ ಮನೆ ಮೇಲೆ ಮತ್ತು ಈಗ ರೋಹಿತ್ ಶೆಟ್ಟಿ ಅವರ ಮನೆಯ ಮೇಲೆ ಗುಂಡು ಹಾರಿಸಲಾಯಿತು. ಈ ಎಲ್ಲಾ ಅಪರಾಧಗಳನ್ನು ಬಿಷ್ಣೋಯ್ ಗ್ಯಾಂಗ್ ಮಾಡಿದ್ದಾರೆ ಎಂಬುದು ಬಹಿರಂಗವಾಗಿದೆ. ರೋಹಿತ್ ಶೆಟ್ಟಿ ಪ್ರಕರಣದಲ್ಲೂ, ಅಪರಾಧ ವಿಭಾಗದ ಅಧಿಕಾರಿಗಳು ನ್ಯಾಯಾಲಯದ ಅನುಮತಿಯೊಂದಿಗೆ ಲಾರೆನ್ಸ್ ಅವರನ್ನು ಪ್ರಶ್ನಿಸುವ ಸಾಧ್ಯತೆಯಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Source link

ಪಾಕಿಸ್ತಾನ್ ತಂಡ ಭಾರತ ವಿರುದ್ಧ ಆಡಲು ಹೆದರುತ್ತಿದ್ದೆ ಅಂದುಕೊಳ್ಳುತ್ತಿದ್ದಾರೆ! – Kannada News | Danish Kaneria Slams Pakistan’s T20 World Cup 2026 boycott

ಭಾರತದ ವಿರುದ್ಧದ ಟಿ20 ವಿಶ್ವಕಪ್ ಪಂದ್ಯವನ್ನು ಬಹಿಷ್ಕರಿಸುವ ಬೆದರಿಕೆಯೊಡ್ಡಿರುವ ಪಾಕಿಸ್ತಾನ್ ಕ್ರಿಕೆಟ್ ಬೋರ್ಡ್​ನ ನಡೆಯನ್ನು ಪಾಕ್​ನ ಮಾಜಿ ಆಟಗಾರ ದಾನಿಶ್ ಕನೇರಿಯಾ ಖಂಡಿಸಿದ್ದಾರೆ. ಈ ಬಗ್ಗೆ ಖಾಸಗಿ ಚಾನೆಲ್​ ಜೊತೆ ಮಾತನಾಡಿರುವ ಅವರು, ಪಾಕ್​ನ ಈ ನಿರ್ಧಾರದಿಂದ ಎಲ್ಲರೂ ನಮ್ಮ ತಂಡ ಭಾರತದ ವಿರುದ್ಧ ಆಡಲು ಹೆದರುತ್ತಿದ್ದಾರೆ ಎಂಬ ಸಂದೇಶ ರವಾನೆಯಾಗುತ್ತಿದೆ ಎಂದಿದ್ದಾರೆ.

ಇದಕ್ಕೂ ಮುನ್ನ ಪಾಕಿಸ್ತಾನ್ ತಂಡವು ಭಾರತದಲ್ಲಿ ಆಡಲು ನಿರಾಕರಿಸಿತ್ತು. ಅಲ್ಲದೆ ತಟಸ್ಥ ಸ್ಥಳದಲ್ಲಿ ಪಂದ್ಯ ಆಯೋಜಿಸಬೇಕೆಂದು ಬೇಡಿಕೆಯಿಟ್ಟಿದ್ದರು. ಅದರಂತೆ ಇದೀಗ ಶ್ರೀಲಂಕಾದಲ್ಲಿ ಭಾರತ ಮತ್ತು ಪಾಕಿಸ್ತಾನ್ ನಡುವಣ ಪಂದ್ಯವನ್ನು ಆಯೋಜಿಸಲಾಗುತ್ತಿದೆ. ಇದೀಗ ಈ ಪಂದ್ಯವನ್ನು ಬಹಿಷ್ಕರಿಸುವುದಾಗಿ ಪಾಕಿಸ್ತಾನ್ ಹೇಳುತ್ತಿದೆ. ಇದರಲ್ಲಿ ಯಾವುದೇ ಅರ್ಥವಿಲ್ಲ ಎಂದು ಕನೇರಿಯಾ ಹೇಳಿದ್ದಾರೆ.

ಪಾಕಿಸ್ತಾನ್ ಕ್ರಿಕೆಟ್ ಬೋರ್ಡ್ ತೆಗೆದುಕೊಂಡಿರುವ ಈ ನಿರ್ಧಾರದಿಂದ, ಪಾಕಿಸ್ತಾನವು ಭಾರತವನ್ನು ಎದುರಿಸಲು ಹೆದರುತ್ತಿದೆ ಎಂದು ಜನರು ಭಾವಿಸುತ್ತಿದ್ದಾರೆ. ಅಂತಹದೊಂದು ಸಂದೇಶ ರವಾನೆ ಆಗುತ್ತಿದೆ. ಭಯದ ಕಾರಣದಿಂದಲೇ ಅವರು ಆಡಲು ನಿರಾಕರಿಸುತ್ತಿದ್ದಾರೆ ಎನ್ನಲಾಗುತ್ತಿದೆ. ಹೀಗಾಗಿ ಪಿಸಿಬಿ ತನ್ನ ನಿರ್ಧಾರವನ್ನು ಬದಲಿಸಬೇಕೆಂದು ದಾನಿಶ್ ಕನೇರಿಯಾ ಆಗ್ರಹಿಸಿದ್ದಾರೆ.

ಪಾಕ್ ಕ್ರಿಕೆಟ್ ಮಂಡಳಿಯು, ಟಿ20 ವಿಶ್ವಕಪ್ ಟೂರ್ನಿಯಿಂದ ಹೊರಗುಳಿದಿರುವ ಬಾಂಗ್ಲಾದೇಶ್​ಗೆ ಬೆಂಬಲವಾಗಿ ಪಂದ್ಯ ಬಹಿಷ್ಕರಿಸುವ ನಿರ್ಧಾರ ತೆಗೆದುಕೊಂಡಿದೆ. ಇದರ ಬದಲು ಪಿಸಿಬಿ ತನ್ನದೇ ಆದ ಕ್ರಿಕೆಟ್ ಅಭಿವೃದ್ಧಿಗೆ ಆದ್ಯತೆ ನೀಡಬೇಕು.

ಹೀಗಾಗಿ ಫೆಬ್ರವರಿ 15 ರಂದು ಕೊಲಂಬೊದಲ್ಲಿ ನಡೆಯಲಿರುವ ಟಿ20 ವಿಶ್ವಕಪ್​ನ 27ನೇ ಪಂದ್ಯದಲ್ಲಿ ಭಾರತದ ವಿರುದ್ಧ ಪಾಕಿಸ್ತಾನ್ ಕಣಕ್ಕಿಳಿಯಬೇಕು. ಬಹಿಷ್ಕಾರದಂತಹ ನಿರ್ಧಾರದಿಂದ ಪಾಕಿಸ್ತಾನ್ ಕ್ರಿಕೆಟ್ ಮಂಡಳಿ ಹಿಂದೆ ಸರಿಯಬೇಕು ಎಂದು ದಾನಿಶ್ ಕನೇರಿಯಾ ಆಗ್ರಹಿಸಿದ್ದಾರೆ.

ಬಹಿಷ್ಕಾರದಿಂದ ಯಾರಿಗೆ ಲಾಭ?

ಪಾಕಿಸ್ತಾನ್ ತಂಡವು ಪಂದ್ಯ ಬಹಿಷ್ಕರಿಸಿದರೆ ಭಾರತ ತಂಡಕ್ಕೆ ಸಂಪೂರ್ಣ 2 ಅಂಕಗಳು ದೊರೆಯಲಿದೆ. ಇದರಿಂದ ಪಾಕಿಸ್ತಾನ್ ತಂಡದ ನೆಟ್ ರನ್ ರೇಟ್ ಮೇಲೆ ಪರಿಣಾಮ ಬೀರಲಿದೆ. ಇದಾಗ್ಯೂ ಐಸಿಸಿ ಹಾಗೂ ಬಿಸಿಸಿಐ ಆದಾಯಕ್ಕೆ ಹೊಡೆತ ನೀಡುವ ಸಲುವಾಗಿ ಪಾಕಿಸ್ತಾನ್ ಕ್ರಿಕೆಟ್ ಮಂಡಳಿ ಪಂದ್ಯ ಬಹಿಷ್ಕರಿಸುವ ಬೆದರಿಕೆಯೊಡ್ಡಿದೆ.

ಇದನ್ನೂ ಓದಿ: 19 ಟೀಮ್​ಗಳಲ್ಲಿ ಟೀಮ್ ಇಂಡಿಯಾ 2 ತಂಡಗಳ ವಿರುದ್ಧ ಗೆದ್ದಿಲ್ಲ..!

ಈ ಬೆದರಿಕೆ ಬೆನ್ನಲ್ಲೇ ತನ್ನ ನಿರ್ಧಾರವನ್ನು ಮರುಪರಿಶೀಲಿಸುವಂತೆ ಪಾಕಿಸ್ತಾನ್ ಕ್ರಿಕೆಟ್ ಮಂಡಳಿಗೆ ಐಸಿಸಿ ಸೂಚಿಸಿದೆ. ಇದಾಗ್ಯೂ ಪಾಕಿಸ್ತಾನ್ ಕ್ರಿಕೆಟ್ ಮಂಡಳಿ ಭಾರತದ ವಿರುದ್ಧದ ಪಂದ್ಯವನ್ನು ಬಹಿಷ್ಕರಿಸಿದರೆ ಐಸಿಸಿ ಕಠಿಣ ಕ್ರಮ ಕೈಗೊಳ್ಳುವ ಸಾಧ್ಯತೆಯಿದೆ.

Source link

‘ಧುರಂದರ್ 2’ ಚಿತ್ರದಲ್ಲಿ ಅಕ್ಷಯ್ ಖನ್ನಾ ಇರೋದು ಖಚಿತ; ಸಿಕ್ತು ಪಕ್ಕಾ ಸಾಕ್ಷಿ – Kannada News | Akshaye Khanna returns in Dhurandhar 2 Team confirms by tagging

2025ರಲ್ಲಿ ಭಾರಿ ಯಶಸ್ಸು ಕಂಡ ಸಿನಿಮಾ ಎಂದರೆ ಅದು ‘ಧುರಂಧರ್’. ಈ ಸಿನಿಮಾದಲ್ಲಿ ಹೀರೋ ರಣವೀರ್ ಸಿಂಗ್. ಆದರೆ ಹೆಚ್ಚು ಹೈಲೈಟ್ ಆಗಿದ್ದು ಖಳನಟ ಅಕ್ಷಯ್ ಖನ್ನಾ. ಪ್ರೇಕ್ಷಕರು ಅಕ್ಷಯ್ ಖನ್ನಾ (Akshaye Khanna) ನಟನೆಯನ್ನು ಸಖತ್ ಇಷ್ಟಪಟ್ಟರು. ಈ ಚಿತ್ರದಿಂದಾಗಿ ಅಕ್ಷಯ್ ಖನ್ನಾ ಅವರ ಖ್ಯಾತಿ ಹೆಚ್ಚಾಯಿತು. ಈಗ ‘ಧುರಂದರ್ 2’ ಸಿನಿಮಾ ಬಿಡುಗಡೆಗೆ ಸಜ್ಜಾಗುತ್ತಿದೆ. ಆದರೆ ಈ ಸಿನಿಮಾದಲ್ಲಿ ಅಕ್ಷಯ್ ಖನ್ನಾ ಇರುತ್ತಾರಾ ಇಲ್ಲವಾ ಎಂಬ ಪ್ರಶ್ನೆ ಎದುರಾಗಿತ್ತು. ಯಾಕೆಂದರೆ, ‘ಧುರಂದರ್’ ಕ್ಲೈಮ್ಯಾಕ್ಸ್​​ನಲ್ಲಿ ಅಕ್ಷಯ್ ಖನ್ನಾ ಪಾತ್ರ ಸಾಯುತ್ತದೆ. ಹಾಗಾದರೆ ಅವರು ‘ಧುರಂಧರ್ 2’ (Dhurandhar 2) ಸಿನಿಮಾದಲ್ಲಿ ಹೇಗೆ ಇರಲು ಸಾಧ್ಯ? ಅದಕ್ಕೆ ಈಗ ಉತ್ತರ ಸಿಕ್ಕಿದೆ.

‘ಧುರಂಧರ್ 2’ ಸಿನಿಮಾದಲ್ಲಿ ಅಕ್ಷಯ್ ಖನ್ನಾ ಅವರ ಪಾತ್ರ ಇರುತ್ತದೆ ಎಂಬುದು ಖಚಿತವಾಗಿದೆ. ಪಾಕಿಸ್ತಾನದ ಲಿಯಾರಿ ಪ್ರಾಂತ್ಯದ ಗ್ಯಾಂಗ್​ಸ್ಟರ್ ರೆಹಮಾನ್ ಡಕಾಯಿತ್ ಅಲಿಯಾಸ್ ರೆಹಮಾನ್ ಬಲೋಚ್ ಎಂಬ ಪಾತ್ರವನ್ನು ಅಕ್ಷಯ್ ಖನ್ನಾ ‘ಧುರಂಧರ್’ ಸಿನಿಮಾದಲ್ಲಿ ನಿಭಾಯಿಸಿದ್ದರು. ಕ್ಲೈಮ್ಯಾಕ್ಸ್​​ನಲ್ಲಿ ಆ ಪಾತ್ರ ಅಂತ್ಯವಾಗಿದ್ದರೂ ಕೂಡ ಈಗ ಸೀಕ್ವೆಲ್​​ನಲ್ಲಿ ಫ್ಲ್ಯಾಶ್​​ನಬ್ಯಾಕ್ ದೃಶ್ಯಗಳ ಮೂಲಕ ಮತ್ತೆ ಅವರನ್ನು ತೋರಿಸಲಾಗುವುದು.

ಇಂದು (ಫೆಬ್ರವರಿ 3) ‘ಧುರಂಧರ್ 2’ ಸಿನಿಮಾದ ಫಸ್ಟ್ ಲುಕ್ ಪೋಸ್ಟರ್ ಬಿಡುಗಡೆ ಆಗಿದೆ. ಅಲ್ಲದೇ, ಟೀಸರ್ ಕೂಡ ರಿಲೀಸ್ ಆಗಲಿದೆ. ಇದನ್ನು ತಿಳಿಸಲು ಸೋಶಿಯಲ್ ಮೀಡಿಯಾದಲ್ಲಿ ಪೋಸ್ಟ್ ಮಾಡಲಾಗಿದೆ. ಅದರಲ್ಲಿ ಚಿತ್ರತಂಡದ ಪ್ರಮುಖ ಕಲಾವಿದರು ಮತ್ತು ತಂತ್ರಜ್ಞರನ್ನು ಟ್ಯಾಗ್ ಮಾಡಲಾಗಿದೆ. ಅಕ್ಷಯ್ ಖನ್ನಾ ಅವರ ಹೆಸರನ್ನೂ ಕೂಡ ಹ್ಯಾಶ್​ಟ್ಯಾಗ್ ಮೂಲಕ ಪ್ರಸ್ತಾಪಿಸಲಾಗಿದೆ.

ಅಕ್ಷಯ್ ಖನ್ನಾ ಅವರು ‘ಧುರಂಧರ್ 2’ ಸಿನಿಮಾದಲ್ಲಿ ಕಾಣಿಸಿಕೊಳ್ಳುವುದು ಖಚಿತ ಆದ್ದರಿಂದಲೇ ಅವರ ಹೆಸರನ್ನು ಈ ಪೋಸ್ಟ್​ನಲ್ಲಿ ಬರೆಯಲಾಗಿದೆ. ಇದರಿಂದ ಅಭಿಮಾನಿಗಳಿಗೆ ಖುಷಿ ಆಗಿದೆ. ಮಾರ್ಚ್ 19ರಂದು ‘ಧುರಂಧರ್ 2’ ಸಿನಿಮಾ ರಿಲೀಸ್ ಆಗಲಿದೆ. ಅದೇ ದಿನ ‘ಟಾಕ್ಸಿಕ್’ ಕೂಡ ಬಿಡುಗಡೆ ಆಗಲಿದೆ. ಹಾಗಾಗಿ ಭಾರಿ ಪೈಪೋಟಿ ಏರ್ಪಡಲಿದೆ.

ಇದನ್ನೂ ಓದಿ: 2 ಕೋಟಿಯಿಂದ 21 ಕೋಟಿ ರೂಪಾಯಿಗೆ ಏರಿಕೆ ಆಯ್ತು ಅಕ್ಷಯ್ ಖನ್ನಾ ಸಂಬಳ

2025ರ ಡಿಸೆಂಬರ್ 5ರಂದು ರಿಲೀಸ್ ಆಗಿದ್ದ ‘ಧರಂಧರ್’ ಸಿನಿಮಾ ಬಾಕ್ಸ್ ಆಫೀಸ್​​ನಲ್ಲಿ ಸಾವಿರಾರು ಕೋಟಿ ರೂಪಾಯಿ ಕಲೆಕ್ಷನ್ ಮಾಡಿದೆ. ಆದ್ದರಿಂದ ಸೀಕ್ವೆಲ್ ಮೇಲೆ ಬಹಳ ನಿರೀಕ್ಷೆ ಮನೆ ಮಾಡಿದೆ. ಆದಿತ್ಯ ಧಾರ್ ಅವರು ಈ ಸಿನಿಮಾಗೆ ನಿರ್ದೇಶನ ಮಾಡಿದ್ದಾರೆ. ರಣವೀರ್ ಸಿಂಗ್, ಸಾರಾ ಅರ್ಜುನ್, ಅಕ್ಷಯ್ ಖನ್ನಾ, ಸಂಜಯ್ ದತ್, ಅರ್ಜುನ್ ರಾಮ್​​ಪಾಲ್ ಮುಂತಾದವರು ನಟಿಸಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Published On – 10:45 am, Tue, 3 February 26

Source link

‘ಟಾಕ್ಸಿಕ್​​’ಗೆ ಸೆಡ್ಡು ಹೊಡೆಯಲು ದೊಡ್ಡ ತಂತ್ರ ರೂಪಿಸಿದ ‘ಧುರಂಧರ್’ ನಿರ್ದೇಶಕ – Kannada News | Toxic vs Dhurandhar 2: Yash Film Faces Box Office Clash, Kannada Release Strategy

ಮಾರ್ಚ್ 19ರಂದು ಕನ್ನಡದ ‘ಟಾಕ್ಸಿಕ್’ (Toxic Movie) ಹಾಗೂ ಹಿಂದಿಯ ‘ಧುರಂಧರ್ 2’ ಮಧ್ಯೆ ಬಾಕ್ಸ್ ಆಫೀಸ್ ಕ್ಲ್ಯಾಶ್ ಏರ್ಪಡುತ್ತಿದೆ. ‘ಧುರಂಧರ್’ ಸಿನಿಮಾ ಈಗಾಗಲೇ ತನ್ನನ್ನು ತಾನು ಸಾಬೀತು ಮಾಡಿಕೊಂಡಿದೆ. ಬಾಕ್ಸ್ ಆಫೀಸ್​​ನಲ್ಲಿ ಸಾವಿರ ಕೋಟಿ ಬಾಚಿಕೊಂಡಿದೆ. ಹೀಗಾಗಿ, ‘ಧುರಂಧರ್ 2’ ಚಿತ್ರದ ಮೇಲೆ ನಿರೀಕ್ಷೆ ಹೆಚ್ಚಿದೆ. ಇನ್ನು, ಯಶ್ ನಟನೆಯ ‘ಟಾಕ್ಸಿಕ್’ ಚಿತ್ರಕ್ಕೆ ಸಿಕ್ಕಿರೋ ಹೈಪ್ ಕಡಿಮೆ ಏನು ಇಲ್ಲ. ಈ ಎಲ್ಲಾ ಕಾರಣದಿಂದ ಎರಡೂ ಸಿನಿಮಾಗಳಲ್ಲಿ ಯಾವುದು ಗೆಲ್ಲುತ್ತದೆ ಎಂಬ ಕುತೂಹಲ ಮೂಡಿದೆ. ಈಗ ‘ಟಾಕ್ಸಿಕ್’ ಚಿತ್ರಕ್ಕೆ ಸೆಡ್ಡು ಹೊಡೆಯಲು ‘ಧುರಂಧರ್’ ತಂಡ ದೊಡ್ಡ ಪ್ಲ್ಯಾನ್ ಮಾಡಿದೆ.

‘ಧುರಂಧರ್’ ಸಿನಿಮಾ ಥಿಯೇಟರ್​​​ನಲ್ಲಿ ರಿಲೀಸ್ ಆಗಿದ್ದು ಹಿಂದಿಯಲ್ಲಿ ಮಾತ್ರ. ಹಿಂದಿ ಭಾಷೆ ಅರ್ಥವಾಗದೇ ಇದ್ದವರು ಕೂಡ ತೆರಳಿ ಸಿನಿಮಾ ನೋಡಿದ್ದಾರೆ. ಆದರೆ, ಕೆಲವರು ಹಿಂದಿ ಬರುವುದಿಲ್ಲ ಎಂಬ ಕಾರಣದಿಂದಲೇ ಸಿನಿಮಾ ನೋಡದೇ ಇದ್ದಿರಬಹುದು. ಈ ಪ್ರೇಕ್ಷಕರನ್ನು ಸೆಳೆಯಲು ಒಟಿಟಿಯಲ್ಲಿ ಹಿಂದಿ, ತೆಲುಗು ಹಾಗೂ ತಮಿಳು ಭಾಷೆಯಲ್ಲಿ ‘ಧುರಂಧರ್’ ಪ್ರಸಾರ ಕಂಡಿತು. ಆದರೆ, ಕನ್ನಡ ವರ್ಷನ್ ಇಲ್ಲದೆ ಇರುವುದಕ್ಕೆ ಆಕ್ರೋಶ ವ್ಯಕ್ತವಾಗಿದೆ. ಈಗ ತಪ್ಪನ್ನು ತಿದ್ದಿಕೊಂಡಿದ್ದಾರೆ ನಿರ್ದೇಶಕ ಆದಿತ್ಯ ಧಾರ್.

ಇದನ್ನೂ ಓದಿ: ‘ಟಾಕ್ಸಿಕ್’ ಸಿನಿಮಾ ಟೀಸರ್​​ನಲ್ಲಿ ಅಶ್ಲೀಲತೆ: ಸಿಬಿಎಫ್​​ಸಿ ಮುಖ್ಯಸ್ಥ ಹೇಳಿದ್ದೇನು?

‘ಟಾಕ್ಸಿಕ್’ ಸಿನಿಮಾ ಕನ್ನಡದಲ್ಲಿ ದೊಡ್ಡ ಮಾರುಕಟ್ಟೆ ಪಡೆದುಕೊಳ್ಳೋದು ಫಿಕ್ಸ್. ಇದರ ಜೊತೆಗೆ ಪರಭಾಷೆಯಲ್ಲೂ ಸಿನಿಮಾಗೆ ಸಾಕಷ್ಟು ಕ್ರೇಜ್ ಇದೆ. ಇದು ಎಲ್ಲಾ ರೀತಿಯಲ್ಲೂ ‘ಧುರಂದರ್’ ಚಿತ್ರಕ್ಕೆ ತೊಂದರೆ ತಂದೊಡ್ಡಬಹುದು. ಈಗ ‘ಧುರಂಧರ್ 2’ ಚಿತ್ರವನ್ನು ಕನ್ನಡದಲ್ಲೂ ರಿಲೀಸ್ ಮಾಡೋದಾಗಿ ನಿರ್ದೇಶಕ ಆದಿತ್ಯ ಧಾರ್ ತಿಳಿಸಿದ್ದಾರೆ. ‘ಟಾಕ್ಸಿಕ್’ ಚಿತ್ರಕ್ಕೆ ಸೆಡ್ಡು ಹೊಡೆದು, ಈ ಚಿತ್ರದ ಮಾರುಕಟ್ಟೆಯನ್ನು ಕನ್ನಡಕ್ಕೂ ವಿಸ್ತರಿಸೋ ಆಲೋಚನೆ ಅವರದ್ದು.

‘ಟಾಕ್ಸಿಕ್’ ಸಿನಿಮಾದ ಟೀಸರ್ ಸೃಷ್ಟಿಸಿದ ಸಂಚಲನ ತುಂಬಾನೇ ದೊಡ್ಡದು. ಈ ಚಿತ್ರದ ಟೀಸರ್ ಸಾಕಷ್ಟು ಸದ್ದು ಮಾಡಿತು. ಈಗ ‘ಧುರಂಧರ್ 2’ ಟೀಸರ್ ಯಾವ ರೀತಿಯಲ್ಲಿ ಗಮನ ಸೆಳೆಯುತ್ತದೆ ಎಂಬುದನ್ನು ಕಾದು ನೋಡಬೇಕಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Published On – 10:39 am, Tue, 3 February 26

Source link

ಎರಡನೇ ವಿಜಯ್ ಮಲ್ಯ ಆಗಿದ್ದರೇ ಸಿಜೆ ರಾಯ್? ಐಷಾರಾಮಿ ಜೀವನ, ನಷ್ಟದಿಂದ ಆಘಾತ! ಸ್ಫೋಟಕ ಮಾಹಿತಿ ಬಹಿರಂಗ – Kannada News | Was CJ Roy the Second Vijay Mallya? Luxury Lifestyle, Financial Losses and other Revelations Behind his death

ಬೆಂಗಳೂರು, ಫೆಬ್ರವರಿ 3: ಕಾನ್ಫಿಡೆಂಟ್ ಗ್ರೂಪ್‌ ಮುಖ್ಯಸ್ಥ ಹಾಗೂ ಖ್ಯಾತ ಉದ್ಯಮಿ ಸಿಜೆ ರಾಯ್ (CJ Roy) ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಹಲವು ಸ್ಫೋಟಕ ಮಾಹಿತಿಗಳು ಬಹಿರಂಗವಾಗಿವೆ. ಐಷಾರಾಮಿ ಜೀವನಶೈಲಿ, ದುಬಾರಿ ವಾಹನಗಳು ಮತ್ತು ಭವ್ಯ ಬದುಕಿನ ಕಾರಣಕ್ಕೆ ಸಿಜೆ ರಾಯ್ ಅವರನ್ನು ಹಲವರು ‘ಎರಡನೇ ವಿಜಯ್ ಮಲ್ಯ’ ಎಂದೇ ಕರೆಯುತ್ತಿದ್ದರು. ಆದರೆ ವಾಸ್ತವದಲ್ಲಿ ಅವರು ಕಳೆದ ಆರು ತಿಂಗಳಿಂದ ತೀವ್ರ ಆರ್ಥಿಕ ಸಂಕಷ್ಟದಲ್ಲಿ ಇದ್ದರು ಎಂಬುದು ಇದೀಗ ಪೊಲೀಸ್ ಮೂಲಗಳು ನೀಡಿರುವ ಮಾಹಿತಿಯಿಂದ ತಿಳಿದುಬಂದಿದೆ.

ಬ್ಯಾಂಕ್ ಸಾಲವಿಲ್ಲ: ಆದರೂ ನಷ್ಟ ಹೇಗೆ?

ಪೊಲೀಸ್ ಮೂಲಗಳ ಪ್ರಕಾರ, ಸಿಜೆ ರಾಯ್ ತಮ್ಮ ವ್ಯವಹಾರಕ್ಕಾಗಿ ಯಾವುದೇ ಬ್ಯಾಂಕ್ ಸಾಲ ಪಡೆದಿರಲಿಲ್ಲ. ಕರ್ನಾಟಕ, ಕೇರಳ ಮಾತ್ರವಲ್ಲದೆ ವಿದೇಶಗಳಲ್ಲಿಯೂ ಅವರ ವ್ಯವಹಾರ ವಿಸ್ತಾರಗೊಂಡಿತ್ತು. ಆದರೆ ಹೊಸ ಪ್ರಾಜೆಕ್ಟ್‌ಗಳಿಗೆ ಬ್ಯಾಂಕ್ ಹಣದ ಬದಲು ಕೆಲವು ರಾಜಕಾರಣಿಗಳಿಂದಲೇ ಹೂಡಿಕೆ ಬಂದಿತ್ತು. ಆ ಹಣದಲ್ಲಿ ಬಹುಪಾಲು ಅಕ್ರಮ ಹಣ (ಬ್ಲ್ಯಾಕ್ ಮನಿ) ಆಗಿರಬಹುದೆಂಬ ಅನುಮಾನವೂ ತನಿಖಾ ಸಂಸ್ಥೆಗಳಿಗೆ ಮೂಡಿತ್ತು ಎನ್ನಲಾಗಿದೆ.

ಆದರೆ ರಾಯ್ ಕೈಗೊಂಡ ಹೊಸ ಯೋಜನೆಗಳು ನಿರೀಕ್ಷಿತ ಯಶಸ್ಸು ಕಂಡಿರಲಿಲ್ಲ. ಇತ್ತ ಬಂದ ಆದಾಯದ ದೊಡ್ಡ ಭಾಗವನ್ನು ಅವರು ಐಷಾರಾಮಿ ಜೀವನಶೈಲಿಗೆ ಖರ್ಚು ಮಾಡುತ್ತಿದ್ದರು. ಪರಿಣಾಮವಾಗಿ ಹಣಕಾಸು ನಿರ್ವಹಣೆಯಲ್ಲಿ ಅವರು ಸಂಪೂರ್ಣವಾಗಿ ವಿಫಲರಾಗಿದ್ದರು ಎಂದು ಮೂಲಗಳು ತಿಳಿಸಿವೆ.

ರಾಜಕಾರಣಿಗಳಿಂದ ಹಣ ವಾಪಸ್ ಒತ್ತಡ, ಏಜೆನ್ಸಿಗಳ ತನಿಖೆಯಿಂದ ಕುಗ್ಗಿದ್ದ ಉದ್ಯಮಿ?

ಪ್ರಾಜೆಕ್ಟ್‌ಗಳು ನಷ್ಟಕ್ಕೆ ತಿರುಗುತ್ತಿದ್ದಂತೆಯೇ, ಹೂಡಿಕೆ ಮಾಡಿದ ಕೆಲ ರಾಜಕಾರಣಿಗಳು ಹಣ ವಾಪಸ್ ಕೇಳತೊಡಗಿದ್ದರು. ಇದರ ನಡುವೆ ಕೇಂದ್ರ ತನಿಖಾ ಸಂಸ್ಥೆಗಳು ಸಿಜೆರಾಯ್ ಅವರ ವ್ಯವಹಾರಗಳತ್ತ ಗಮನಹರಿಸಿದ್ದವು. ಬ್ಯಾಂಕ್ ಸಾಲವಿಲ್ಲದೆ ಇಷ್ಟು ದೊಡ್ಡ ಮಟ್ಟದ ವ್ಯವಹಾರಕ್ಕೆ ಹಣ ಎಲ್ಲಿಂದ ಬಂತು ಎಂಬ ಪ್ರಶ್ನೆಯೇ ತನಿಖೆಯ ಮೂಲವಾಗಿತ್ತು.

ಒಂದೆಡೆ ಹಣ ಹೂಡಿದವರ ಒತ್ತಡ, ಮತ್ತೊಂದೆಡೆ ಆದಾಯ ತೆರಿಗೆ ಹಾಗೂ ಇತರೆ ಏಜೆನ್ಸಿಗಳ ಪ್ರಶ್ನೆಗಳು, ಇವೆಲ್ಲದಕ್ಕೂ ಉತ್ತರ ನೀಡಲು ಸಾಧ್ಯವಾಗದೆ ಸಿಜೆ ರಾಯ್ ತೀವ್ರ ಮಾನಸಿಕ ಒತ್ತಡಕ್ಕೆ ಒಳಗಾಗಿದ್ದರು ಎನ್ನಲಾಗಿದೆ.

ಮಾನಸಿಕ ಒತ್ತಡ ಹಾಗೂ ಖಿನ್ನತೆ

ಆರ್ಥಿಕವಾಗಿ ಸಂಪೂರ್ಣ ಕುಸಿತ ಕಂಡಿದ್ದ ರಾಯ್, ಮಾನಸಿಕವಾಗಿ ಕೂಡ ಕುಗ್ಗಿಹೋಗಿದ್ದರು. ಕಳೆದ ಕೆಲ ತಿಂಗಳುಗಳಿಂದ ತೀವ್ರ ಮಾನಸಿಕ ಒತ್ತಡ ಹಾಗೂ ಖಿನ್ನತೆಯಿಂದ ಬಳಲುತ್ತಿದ್ದರು. ತನಿಖೆಯಿಂದ ತಮ್ಮ ವ್ಯವಹಾರಗಳ ಎಲ್ಲಾ ಅಂಶಗಳು ಬಹಿರಂಗವಾಗುತ್ತವೆ ಎಂಬ ಭಯವೂ ಅವರನ್ನು ಕಾಡತೊಡಗಿತ್ತು. ಈ ಎಲ್ಲಾ ಒತ್ತಡಗಳು ಒಂದೇ ಸಮಯದಲ್ಲಿ ಎದುರಾದ ಪರಿಣಾಮ ಅವರು ಆತ್ಮಹತ್ಯೆಯ ಕಠಿಣ ನಿರ್ಧಾರಕ್ಕೆ ಬಂದಿರಬಹುದೆಂದು ಪೊಲೀಸ್ ಮೂಲಗಳು ಶಂಕಿಸಿವೆ.

ಇದನ್ನೂ ಓದಿ: ಸಿಜೆ ರಾಯ್ ಸಾವಿನ ಹಿಂದಿತ್ತಾ ಬೇರೆಯದೇ ಕಾರಣ? ಆತ್ಮಹತ್ಯೆಯ ಹಿಂದಿನ ದಿನ ನಡೆದಿದ್ದೇನು?

ಸದ್ಯ, ಆತ್ಮಹತ್ಯೆ ಹಿಂದಿನ ನಿಖರ ಕಾರಣಗಳನ್ನು ತಿಳಿಯಲು ಪೊಲೀಸರು ತನಿಖೆ ಮುಂದುವರಿಸಿದ್ದಾರೆ.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

Exit mobile version