Headlines

ಮುಂದಿನ ತಿಂಗಳು ಪಿಎಸ್​ಐ, ಕಾನ್ಸ್​ಟೇಬಲ್​ ಹುದ್ದೆ ನೇಮಕಾತಿ ಅಧಿಸೂಚನೆ ಹೊರಡಿಸ್ತೇವೆ: ಪ್ರಿಯಾಂಕ್ ಖರ್ಗೆ – Kannada News | Karnataka Home Minister Priyank Kharge Announces Major Police Reforms and Recruitment Drives

ಬೆಂಗಳೂರು, ಜುಲೈ 06: ಗೃಹ ಸಚಿವ ಪ್ರಿಯಾಂಕ್ ಖರ್ಗೆ ರಾಜ್ಯ ಪೊಲೀಸ್ ಇಲಾಖೆಯಲ್ಲಿ ಹಲವು ಮಹತ್ವದ ಸುಧಾರಣೆಗಳನ್ನು ಮತ್ತು ನೇಮಕಾತಿ ಪ್ರಕ್ರಿಯೆಗಳನ್ನು ಘೋಷಿಸಿದ್ದಾರೆ. ಪೊಲೀಸ್ ಇಲಾಖೆಯ ಸಿಬ್ಬಂದಿಗಳ ವರ್ಗಾವಣೆ, ಹುದ್ದೆಗಳ ತರ್ಕಬದ್ಧಗೊಳಿಸುವಿಕೆ ಮತ್ತು ಸಮರ್ಪಕ ಕಾರ್ಯನಿರ್ವಹಣೆಗಾಗಿ ಮೇಜರ್ ಸರ್ಜರಿ ಅಗತ್ಯವಿದೆ ಎಂದು ಅವರು ಹೇಳಿದ್ದಾರೆ. ಸದ್ಯ ಕೆಲವು ಸಿಬ್ಬಂದಿಗಳು ಒಂದೇ ಸ್ಥಳದಲ್ಲಿ ದೀರ್ಘಕಾಲದಿಂದ ಕಾರ್ಯನಿರ್ವಹಿಸುತ್ತಿದ್ದು, ಇದರ ಬದಲಾವಣೆಗೆ ಮುಖ್ಯಮಂತ್ರಿಗಳೂ ಆಸಕ್ತಿ ವಹಿಸಿದ್ದಾರೆ ಎಂದು ಖರ್ಗೆ ತಿಳಿಸಿದ್ದಾರೆ. ಪೊಲೀಸ್ ಇಲಾಖೆಯ ನೇಮಕಾತಿ ಕುರಿತು ಮಾತನಾಡಿದ ಅವರು, ಈಗಾಗಲೇ 7,000…

Read More

WPL 2026: ರಣರೋಚಕ ಪಂದ್ಯದಲ್ಲಿ ಹಾಲಿ ಚಾಂಪಿಯನ್​ಗಳಿಗೆ ಮಣ್ಣು ಮುಕ್ಕಿಸಿದ ಆರ್​ಸಿಬಿ

ನವಿ ಮುಂಬೈನ ಡಿವೈ ಪಾಟೀಲ್ ಕ್ರೀಡಾಂಗಣದಲ್ಲಿ ನಡೆದ ಆರ್​ಸಿಬಿ ಹಾಗೂ ಮುಂಬೈ ಇಂಡಿಯನ್ಸ್ ನಡುವಿನ ಮಹಿಳಾ ಪ್ರೀಮಿಯರ್ ಲೀಗ್​ನ ನಾಲ್ಕನೇ ಆವೃತ್ತಿಯ ಉದ್ಘಾಟನಾ ಪಂದ್ಯದಲ್ಲಿ ಹಾಲಿ ಚಾಂಪಿಯನ್ ಮುಂಬೈ ಇಂಡಿಯನ್ಸ್ ತಂಡವನ್ನು ಮಣಿಸಿದ ಆರ್​ಸಿಬಿ ಲೀಗ್​ನಲ್ಲಿ ಗೆಲುವಿನ ಶುಭಾರಂಭ ಮಾಡಿದೆ. ರಣರೋಚಕತೆಯಿಂದ ಕೂಡಿದ್ದ ಈ ಪಂದ್ಯದಲ್ಲಿ ಕೊನೆಯ ಎಸೆತದವರೆಗೂ ಯಾವ ತಂಡಕ್ಕೆ ಗೆಲುವು ಸಿಗಲಿದೆ ಎಂಬುದನ್ನು ಹೇಳುವುದು ಕಷ್ಟಕರವಾಗಿತ್ತು. ಆದಾಗ್ಯೂ ಆರ್​​ಸಿಬಿ ಪರ ಆಲ್​ರೌಂಡರ್ ಪ್ರದರ್ಶನ ನೀಡಿದ ನಡಿನ್ ಡಿ ಕ್ಲರ್ಕ್​ ಕೊನೆಯ ಓವರ್​ನಲ್ಲಿ 2 ಸಿಕ್ಸರ್…

Read More

ಕರ್ನಾಟಕ ಪೊಲೀಸ್ ಮಹಾನಿರ್ದೇಶಕ ಎಂ.ಎ.ಸಲೀಂ ಸೇವಾವಧಿ ವಿಸ್ತರಣೆ, ಎಷ್ಟು ವರ್ಷ? – Kannada News | karnataka government extends DG and IGP Dr MA saleem Working service Till 2027

ಬೆಂಗಳೂರು, (ಏಪ್ರಿಲ್ 16): ಕರ್ನಾಟಕ ರಾಜ್ಯ ಪೊಲೀಸ್ ಮುಖ್ಯಸ್ಥ(ಡಿಜಿ-ಐಜಿಪಿ) ಎಂ.ಎ.ಸಲೀಂ (DG and IGP Dr MA saleem) ಸೇವಾವಧಿಯನ್ನು ವಿಸ್ತರಣೆ ಮಾಡಲಾಗಿದೆ. 2025ರ ಮೇನಲ್ಲಿ ಪ್ರಭಾರ ರಾಜ್ಯ ಪೊಲೀಸ್ ಮಹಾನಿರ್ದೇಶಕರಾಗಿದ್ದ ಎಂ.ಎ.ಸಲೀಂ ಅವರ ಸೇವಾವಧಿಯನ್ನು 2027ರ ಆ.29ರವರೆಗೆ ವಿಸ್ತರಣೆ ರಾಜ್ಯ ಸರ್ಕಾರ ಇಂದು ಏಪ್ರಿಲ್ 16) ಆದೇಶ ಹೊರಡಿಸಿದೆ. 1993ರ ಬ್ಯಾಚ್ IPS ಅಧಿಕಾರಿಯಾಗಿರುವ ಎಂ.ಎ.ಸಲೀಂ ಅವರು 2025ರ ಮೇನಲ್ಲಿ ಪ್ರಭಾರ ರಾಜ್ಯ ಪೊಲೀಸ್ ಮಹಾನಿರ್ದೇಶಕರಾಗಿ ನೇಮಕರಾಗಿದ್ದು, ಈ ವರ್ಷದ ಜೂನ್​ನಲ್ಲಿ ನಿವೃತ್ತಿಯಾಗಬೇಕಿತ್ತು. ಆದ್ರೆ, 22.09.2006ರ…

Read More

ಕೆಎಸ್‌ಆರ್‌ಟಿಸಿ ಭರ್ಜರಿ ಕಾರ್ಯಾಚರಣೆ: ಟಿಕೆಟ್ ಇಲ್ಲದೆ ಪ್ರಯಾಣಿಸಿದವರಿಂದ ಒಂದೇ ತಿಂಗಳಲ್ಲಿ 9 ಲಕ್ಷ ರೂ. ದಂಡ ವಸೂಲಿ – Kannada News | KSRTC Collects Around Rs 9 Lakh Fine From Ticketless Passengers in Month Long Crackdown

ಬೆಂಗಳೂರು, ಜೂನ್ 27: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯ (KSRTC) ಬಸ್‌ಗಳಲ್ಲಿ ಟಿಕೆಟ್ ಪಡೆಯದೇ ಕದ್ದುಮುಚ್ಚಿ ಪ್ರಯಾಣಿಸುವವರ ವಿರುದ್ಧ ಸಾರಿಗೆ ಸಂಸ್ಥೆ ಮೇ ತಿಂಗಳಿನಲ್ಲಿ ಭರ್ಜರಿ ಕಾರ್ಯಾಚರಣೆ ನಡೆಸಿದೆ. ಕರ್ನಾಟಕ ಹಾಗೂ ನೆರೆಯ ರಾಜ್ಯಗಳಲ್ಲಿ ಸಂಚರಿಸುವ ಕೆಎಸ್‌ಆರ್‌ಟಿಸಿ ಬಸ್‌ಗಳಲ್ಲಿ ಜಾಗೃತ ದಳದ ಸಿಬ್ಬಂದಿ ನಡೆಸಿದ ದಿಢೀರ್ ತಪಾಸಣೆಯ ವೇಳೆ ಸಿಕ್ಕಿಬಿದ್ದ ಟಿಕೆಟ್ ರಹಿತ ಪ್ರಯಾಣಿಕರಿಂದ ಒಟ್ಟು 8.94 ಲಕ್ಷ ರೂಪಾಯಿ ದಂಡ ವಸೂಲಿ ಮಾಡಲಾಗಿದೆ. ಸಂಸ್ಥೆಯ ಆದಾಯಕ್ಕೆ ನಷ್ಟ ಉಂಟುಮಾಡುವವರನ್ನು ಪತ್ತೆ ಹಚ್ಚಲು ಈ ವಿಶೇಷ…

Read More

30 ರಿಂದ 35 ನೇ ವಯಸ್ಸಿನಲ್ಲಿ ಬಿಪಿ ಬರುವುದನ್ನು ತಡೆಯಲು ಈ ಟ್ರಿಕ್ಸ್ ಪಾಲಿಸಿ ನೋಡಿ! – Kannada News | Causes of Hypertension in Youth & How to Manage

ಇತ್ತೀಚಿನ ದಿನಗಳಲ್ಲಿ ಆರೋಗ್ಯ ಸಮಸ್ಯೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿರುವುದನ್ನು ಕಾಣಬಹುದು. ಚಿಕ್ಕ ವಯಸ್ಸಿನಲ್ಲಿಯೇ ಅಧಿಕ ರಕ್ತದೊತ್ತಡದ ಸಮಸ್ಯೆ (Hypertension) ಕಂಡುಬರುತ್ತಿರುವುದು ಬಹಳ ಕಳವಳಕಾರಿ ವಿಷಯ. ಅದರಲ್ಲಿಯೂ 30 ರಿಂದ 35 ವರ್ಷ ವಯಸ್ಸಿನವರಲ್ಲಿ ರಕ್ತದೊತ್ತಡ ಅಂದರೆ ಬಿಪಿ ಹೆಚ್ಚಾಗಿ ಕಂಡುಬರುತ್ತಿದೆ. ಇದಕ್ಕೆ ಕಾರಣಗಳು ಹಲವಾರಾದರೂ ಕೂಡ, ನಾವು ದಿನನಿತ್ಯ ಸೇವನೆ ಮಾಡುವ ಆಹಾರ, ಹದಗೆಟ್ಟ ಜೀವನಶೈಲಿ, ಮತ್ತು ಮಾನಸಿಕ ಒತ್ತಡ ಈ ಸಮಸ್ಯೆಯ ಹೆಚ್ಚಳಕ್ಕೆ ಗಮನಾರ್ಹ ಅಂಶವಾಗಿದೆ. ಅದರಲ್ಲಿಯೂ ಅಧಿಕ ರಕ್ತದೊತ್ತಡ ಬಹಳ ಅಪಾಯಕಾರಿಯಾಗಿದ್ದು ಇದನ್ನು ನಿಯಂತ್ರಿಸದಿದ್ದರೆ,…

Read More

Madhav Gadgil Death: ಪ್ರಖ್ಯಾತ ಪರಿಸರ ವಿಜ್ಞಾನಿ ಮಾಧವ ಗಾಡ್ಗೀಳ್ ನಿಧನ – Kannada News | Renowned Ecologist Madhav Gadgil Dies in Pune After Short Illness

ಪುಣೆ, ಜನವರಿ 08: ಪ್ರಖ್ಯಾತ ಪರಿಸರ ವಿಜ್ಞಾನಿ ಮಾಧವ ಗಾಡ್ಗೀಳ್ ನಿಧನರಾಗಿದ್ದಾರೆ. ಪಶ್ಚಿಮ ಘಟ್ಟಗಳು ಹಾಗೂ ಪರಿಸರ ಸಂರಕ್ಷಣೆಗೆ ತಮ್ಮ ಇಡೀ ಜೀವನವನ್ನು ಅವರು ಮುಡಿಪಾಗಿಟ್ಟಿದ್ದರು. ಅವರು ಪುಣೆಯಲ್ಲಿ ಕೊನೆಯುಸಿರೆಳೆದಿದ್ದು ಅವರಿಗೆ 83 ವರ್ಷ ವಯಸ್ಸಾಗಿತ್ತು. ಅವರು ಕೆಲವು ಸಮಯದಿಂದ ಅನಾರೋಗ್ಯದಿಂದ ಬಳಲುತ್ತಿದ್ದರು. ಪಶ್ಚಿಮ ಘಟ್ಟಗಳಲ್ಲಿ ಮೂಲಸೌಕರ್ಯ ಮತ್ತು ಅಭಿವೃದ್ಧಿ ಯೋಜನೆಗಳನ್ನು ನಿರ್ಮಿಸುವುದು ಹಾನಿಕಾರಕ ಪರಿಣಾಮಗಳಿಗೆ ಕಾರಣವಾಗಬಹುದು ಎಂದು ಅವರು ಎಚ್ಚರಿಕೆ ನೀಡುತ್ತಲೇ ಇದ್ದರು. ಮಾಹಿತಿ ಶೀಘ್ರ ಅಪ್​ಡೇಟ್ ಆಗಲಿದೆ Source link

Read More

Pahalgam Terror Attack: ಪಹಲ್ಗಾಮ್ ಭಯೋತ್ಪಾದಕ ದಾಳಿಗೆ ಒಂದು ವರ್ಷ, ಗಾಯಗೊಂಡಿದ್ದ ಸ್ವರ್ಗಕ್ಕೆ ಮರಳಿದ ಚೈತನ್ಯ, ಚೇತರಿಕೆಯ ಹಾದಿ ಹೇಗಿದೆ? – Kannada News | Kashmir’s Resilience: Pahalgam Recovers from Terror, Welcomes Tourists Back with Enhanced Security

ಪಹಲ್ಗಾಮ್, ಏಪ್ರಿಲ್ 21: ಒಂದು ವರ್ಷದ ಹಿಂದೆ, ಪಹಲ್ಗಾಮ್‌(Pahalgam)ನ ಬೀದಿಗಳು ಸ್ತಬ್ಧವಾಗಿದ್ದವು. ಪ್ರವಾಸಿಗರ ಗದ್ದಲದ ಬದಲು ಸೈರನ್ ಸದ್ದು ಮತ್ತು ಆತಂಕ ಮನೆಮಾಡಿತ್ತು. ದಾಳಿಯ ನಂತರದ ತಿಂಗಳುಗಳಲ್ಲಿ ಹೋಟೆಲ್‌ಗಳು ಖಾಲಿ ಬಿದ್ದಿದ್ದವು, ಕುದುರೆ ಸವಾರರು ಕೆಲಸವಿಲ್ಲದೆ ಕಂಗಾಲಾಗಿದ್ದರು. ಆದರೆ, ಕಾಶ್ಮೀರದ ಜನರ ಅದಮ್ಯ ಚೇತರಿಕೆ ಶಕ್ತಿ ಮತ್ತು ಬದಲಾದ ಭದ್ರತಾ ವ್ಯವಸ್ಥೆ ಇಂದು ಪಹಲ್ಗಾಮ್ ಅನ್ನು ಮತ್ತೆ ಪ್ರವಾಸಿಗರ ನೆಚ್ಚಿನ ತಾಣವನ್ನಾಗಿ ಮಾಡಿದೆ. ಭದ್ರತೆಯೇ ಪ್ರವಾಸಿಗರ ಭರವಸೆ ದಾಳಿಯ ನಂತರ, ಪ್ರವಾಸಿಗರ ವಿಶ್ವಾಸವನ್ನು ಮರಳಿ ಗಳಿಸುವುದು ದೊಡ್ಡ…

Read More

ಖಾತೆ ಹಂಚಿಕೆ ಕಗ್ಗಂಟು: ದೆಹಲಿಯಲ್ಲಿ ತಡರಾತ್ರಿ ಖರ್ಗೆ ಭೇಟಿಯಾದ ಡಿಕೆಶಿ, ಇಂದು ಸಂಜೆಯೇ ಪಟ್ಟಿ ಫೈನಲ್ ಸಾಧ್ಯತೆ – Kannada News | Karnataka Cabinet Portfolio Sharing: DK Shivakumar Meets Mallikarjun Kharge in Delhi

ಭಾನುವಾರ ರಾತ್ರಿ ದೆಹಲಿಯಲ್ಲಿ ಮಲ್ಲಿಕಾರ್ಜುನ ಖರ್ಗೆ ನಿವಾಸಕ್ಕೆ ತೆರಳಿದ ಸಿಎಂ ಡಿಕೆ ಶಿವಕುಮಾರ್Image Credit source: tv9 ನವದೆಹಲಿ, ಆಗಸ್ಟ್ 10: ಸಚಿವ ಸಂಪುಟ ವಿಸ್ತರಣೆಯಾಗಿ ಒಂದು ವಾರ ಕಳೆದರೂ ನೂತನ ಸಚಿವರಿಗೆ ಖಾತೆ ಹಂಚಿಕೆಗೆ ಕಾಂಗ್ರೆಸ್ (Congress) ಹೈಕಮಾಂಡ್ ಇನ್ನೂ ಗ್ರೀನ್‌ಸಿಗ್ನಲ್ ನೀಡಿಲ್ಲ. ಖಾತೆ ಹಂಚಿಕೆ ಕಗ್ಗಂಟಾಗಿರುವ ಬೆನ್ನಲ್ಲೇ ಮುಖ್ಯಮಂತ್ರಿ ಡಿಕೆ ಶಿವಕುಮಾರ್ (DK Shivakumar) ದೆಹಲಿಗೆ ತೆರಳಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರನ್ನು ತಡರಾತ್ರಿ ಭೇಟಿ ಮಾಡಿ ಮಾತುಕತೆ ನಡೆಸಿದ್ದಾರೆ. ಸಚಿವ ಸ್ಥಾನ…

Read More

ಜಿಬಿಎ ಚುನಾವಣೆ: ಬ್ಯಾಲೆಟ್ ಪೇಪರ್ ಬಳಕೆಗೆ ವಿರೋಧ, ಇವಿಎಂ ಬಳಸುವಂತೆ ಸಂಘ-ಸಂಸ್ಥೆಗಳ ಪಟ್ಟು – Kannada News | GBA Elections: Opposition to Ballot Paper Grows, Citizens Demand EVM Voting

ಬೆಂಗಳೂರು, ಫೆಬ್ರವರಿ 1: ಆರೇಳು ವರ್ಷಗಳಿಂದ ನನೆಗುದಿಗೆ ಬಿದ್ದಿದ್ದ ಪಾಲಿಕೆ (GBA) ಚುನಾವಣೆಗೆ ರಾಜ್ಯ ಚುನಾವಣಾ ಆಯೋಗ ರೆಡಿಯಾಗಿದೆ. ಸುಪ್ರೀಂ ಕೋರ್ಟ್ ಸೂಚನೆ ಬೆನ್ನಲ್ಲೇ ಕೆಲಸ ಕಾರ್ಯಗಳು ಭರದಿಂದ ಸಾಗಿದ್ದು, ಮತದಾರರ ಅಂತಿಮ ಪಟ್ಟಿ ಹಾಗೂ ಚುನಾವಣಾ ದಿನಾಂಕ‌ ಘೋಷಣೆ ಆಗೋದೊಂದೇ ಬಾಕಿ ಇದೆ. ಉಳಿದಂತೆ 369 ವಾರ್ಡ್ ಹಾಗೂ ಮೀಸಲಾತಿ ಎಲ್ಲವೂ ನಿಗದಿಯಾಗಿದೆ. ಆದರೆ ಈ ಬಾರಿಯ ಚುನಾವಣೆಗೆ ರಾಜ್ಯ ಚುನಾವಣ ಆಯೋಗ ಬ್ಯಾಲೆಟ್ ಪೇಪರ್ ಬಳಕೆ ಮಾಡಲು ಮುಂದಾಗಿರುವುದು ಸಾರ್ವಜನಿಕ ಸಂಘ, ಸಂಸ್ಥೆಗಳ ಸಿಟ್ಟಿಗೆ…

Read More

ದಿನ ಭವಿಷ್ಯ: ಇಂದು ಈ ರಾಶಿಯವರ ಬಗ್ಗೆ ಅನೇಕರಿಗೆ ಅನುಮಾನ – Kannada News | Horoscope 12 February 2026; Dina Rashi Bhavishya Today, Checkout the details here

ಮೇಷ ರಾಶಿ: ಎಲ್ಲರಂತೆ ಒಂದಾಗುವ ಇಚ್ಛೆ ನಿಮ್ಮೊಳಗೆ ಬಾರದು. ತಪ್ಪಿನ ಗಂಭೀರತೆಯನ್ನು ಅರ್ಥಮಾಡಿಕೊಳ್ಳಿ. ಅಸಮಾಧಾನವನ್ನು ಯಾವುದಾದರೊಂದು ರೀತಿಯಲ್ಲಿ ಹೊರಹಾಕಿ. ಕಳೆದು ಹೋದುದರ ಬಗ್ಗೆ ಅತಿಯಾಗಿ ಆಲೋಚಿಸಿ ಫಲವಿಲ್ಲ. ಹಠಮಾರಿ ಸ್ವಭಾವದಿಂದ ಮನೆಯಲ್ಲಿ ತೊಂದರೆ ಆದೀತು. ನಿಮ್ಮ ಯೋಗ್ಯತೆಗೆ ಅನುಗುಣವಾದ ಕಾರ್ಯವನ್ನು ಒಪ್ಪಿಕೊಳ್ಳಿ. ಮೂರನೇ ವ್ಯಕ್ತಿಗಳ ಮೂಲಕ ಇಂದು ನಿಮ್ಮ ಕಾರ್ಯವನ್ನು ಮಾಡಿಸಿಕೊಳ್ಳುವಿರಿ. ವೃಷಭ ರಾಶಿ: ಸಂಗಾತಿಯ ಮಾತುಗಳು ನಿಮ್ಮನ್ನು ಹಿಂಜರಿಯುವಂತೆ ಮಾಡುವುದು. ಅನಿರೀಕ್ಷಿತ ಸಂಪತ್ತನ್ನು ತಂದೆಯಿಂದ ಪಡೆಯುವಿರಿ. ಕಛೇರಿಯ ಕೆಲಸದಲ್ಲಿ ನೀವು ಹೆಚ್ಚು ಆಸ್ಥೆಯನ್ನು ತೋರಿಸಬೇಕಾಗುವುದು. ನಿಮ್ಮ…

Read More