Headlines

ಈಕೆಗೆ ಅನುಕಂಪ ತೋರಿಸಿದ್ದೇ ತಪ್ಪಾಯಿತು: ಮದುವೆ ಹಾಲ್​​ನಲ್ಲಿ 120 ಗ್ರಾಂ ಚಿನ್ನಾಭರಣ ಕದ್ದ ಬುರ್ಖಾಧಾರಿ ಕಳ್ಳಿ

ಶಿವಮೊಗ್ಗ ಮಾ.11: ನಗರದ ಮದುವೆ ಸಮಾರಂಭಗಳಲ್ಲಿ ಸಂಚಲನ ಮೂಡಿಸಿದ್ದ ಸರಣಿ ಕಳ್ಳತನ ಪ್ರಕರಣವನ್ನು ಭೇದಿಸುವಲ್ಲಿ ತುಂಗಾ ನಗರ ಪೊಲೀಸರು ಯಶಸ್ವಿಯಾಗಿದ್ದಾರೆ. ಬುರ್ಖಾ ಧರಿಸಿ, ವಬ್ಯಾಗ್ ಹಿಡಿದು ಗಪ್‌ಚುಪ್ ಆಗಿ ಚಿನ್ನಾಭರಣ ಎಗರಿಸುತ್ತಿದ್ದ ಸುಳೆಬೈಲು ನಿವಾಸಿ ರುಕ್ಸಾರ್ ಫಿರ್ದೋಸ್ ಎಂಬಾಕೆಯನ್ನು ಪೊಲೀಸರು ಬಂಧಿಸಿದ್ದಾರೆ. ಶಿವಮೊಗ್ಗದ ಇಲಿಯಾಜ್ ನಗರದ ಪ್ರಸಿದ್ಧ ‘ಶಾದಿ ಮಹಲ್’ನಲ್ಲಿ ಕಳೆದ ಕೆಲವು ತಿಂಗಳುಗಳಿಂದ ನಿರಂತರವಾಗಿ ಕಳ್ಳತನಗಳು ವರದಿಯಾಗುತ್ತಿದ್ದವು. ಮದುವೆಗೆ ಬಂದವರು ತಮ್ಮ ಆಭರಣಗಳನ್ನು ಬ್ಯಾಗ್‌ನಲ್ಲಿ ಇಡುವುದನ್ನೇ ಸಂಚು ಹೂಡಿ ಕಾಯುತ್ತಿದ್ದ ಈ ಮಹಿಳೆ, ಕ್ಷಣಾರ್ಧದಲ್ಲಿ ಅವುಗಳನ್ನು…

Read More

ಕಾರ್ಯಕ್ರಮದಲ್ಲಿ ಕುಸಿದುಬಿದ್ದ ಲೋಕಾಯುಕ್ತ ನಿವೃತ್ತ ನ್ಯಾಯಮೂರ್ತಿ ಸಂತೋಷ್ ಹೆಗ್ಡೆ

ಬೆಂಗಳೂರು, (ಏಪ್ರಿಲ್ 03): ಲೋಕಾಯುಕ್ತ ನಿವೃತ್ತ ನ್ಯಾಯಮೂರ್ತಿ ಸಂತೋಷ್‌ ಹೆಗ್ಡೆಯವರು (Lokayukta retired justice santosh hegde ) ಕಾರ್ಯಕ್ರಮವೊಂದರಲ್ಲಿ ಭಾಗವಹಿಸಿದ್ದ ವೇಳೆ ಏಕಾಏಕಿ ಕುಸಿದು ಬಿದ್ದಿದ್ದಾರೆ. ಅವರನ್ನು ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಬೆಂಗಳೂರಿನ ಕೊಂಡಜ್ಜಿ ಬಸಪ್ಪ ಸಭಾಂಗಣದಲ್ಲಿ ಇಂದು (ಏಪ್ರಿಲ್ 03) ಸ್ಕೌಟ್ಸ್ & ಗೈಡ್ಸ್ ಆಯುಕ್ತ PGR ಸಿಂಧ್ಯಾಗೆ ಅಭಿನಂದನಾ ಸಮಾರಂಭದಲ್ಲಿ ಸಂತೋಷ್ ಹೆಗ್ಡೆ ಭಾಗವಹಿಸಿದ್ದು, ಈ ವೇಳೆ ಭಾಷಣ ಮಾಡುವಾಗ ಅಸ್ವಸ್ಥಗೊಂಡಿದ್ದಾರೆ. ಬಳಿಕ ಭಾಷಣ ಮುಗಿಸಿ ವೇದಿಕೆ ಮೇಲಿನ ಕುರ್ಚಿ…

Read More

ಕೊಲೆ ಆರೋಪಿಯನ್ನು 68 ಬಾರಿ ಮಾರಕಾಸ್ತ್ರಗಳಿಂದ ಕೊಚ್ಚಿದ ಪುಂಡರು: ವ್ಯಕ್ತಿ ಬದುಕಿದ್ದೇ ಪವಾಡ!

ಬೆಂಗಳೂರು, ಮಾರ್ಚ್​​ 11: ವ್ಯಕ್ತಿಯೋರ್ವನ ಮೇಲೆ ಹಾಡು ಹಗಲೇ ನಡು ರಸ್ತೆಯಲ್ಲಿ  ಯುವಕರು ಮಾರಕಾಸ್ತ್ರಗಳಿಂದ ದಾಳಿ ನಡೆಸಿರುವ ಆಘಾತಕಾರಿ ಘಟನೆ ಬೆಂಗಳೂರಿನ ಮಾಗಡಿ ರಸ್ತೆ ಪೊಲೀಸ್ ಠಾಣಾ ವ್ಯಾಪ್ತಿಯ ಅಗ್ರಹಾರ ದಾಸರಹಳ್ಳಿಯಲ್ಲಿ ನಡೆದಿದೆ. ಮಾರ್ಚ್​​ 9ರಂದೇ ನಡೆದಿರುವ ಘಟನೆ ತಡವಾಗಿ ಬೆಳಕಿಗೆ ಬಂದಿದ್ದು, ಪೊಲೀಸರ ಭಯವೇ ಇಲ್ಲದಂತೆ ದುಷ್ಕರ್ಮಿಗಳು ಅಟ್ಟಹಾಸ ಮೆರೆದಿದ್ದಾರೆ. ಸಂತೋಷ್​​ ಎಂಬಾತನ ಮೇಲೆ ಡೆಡ್ಲಿ ಅಟ್ಯಾಕ್​​ ನಡೆದಿದ್ದು, ಒಂದೆರಡಲ್ಲ ಬರೋಬ್ಬರಿ 68 ಬಾರಿ ಮಾರಕಾಸ್ತ್ರಗಳಿಂದ ದಾಳಿ ನಡೆದಿದೆ. ದಾಳಿ ನಡೆಸಿರೋದು ಶರತ್​​ ಮತ್ತು ಗ್ಯಾಂಗ್​​…

Read More

‘ದಿ ರಾಜಾ ಸಾಬ್’ ಸೋಲಿನ ಬಳಿಕ ಹೊಸ ಸಿನಿಮಾ ಘೋಷಿಸಿದ ನಿರ್ದೇಶಕ ಮಾರುತಿ

ಪ್ಯಾನ್ ಇಂಡಿಯಾ ಸ್ಟಾರ್ ಪ್ರಭಾಸ್ ನಟನೆಯ ‘ದಿ ರಾಜಾ ಸಾಬ್’ (The Raja Saab) ಸಿನಿಮಾದ ಮೇಲೆ ಭಾರಿ ನಿರೀಕ್ಷೆ ಇಟ್ಟುಕೊಳ್ಳಲಾಗಿತ್ತು. ಆ ಚಿತ್ರಕ್ಕೆ ನಿರ್ದೇಶಕ ಮಾರುತಿ ಅವರು ಆ್ಯಕ್ಷನ್-ಕಟ್ ಹೇಳಿದ್ದರು. ಪ್ರಭಾಸ್ ಅವರ ಮೊದಲ ಹಾರರ್ ಸಿನಿಮಾ ಎಂಬ ಕಾರಣಕ್ಕೆ ಹೈಪ್ ಹೆಚ್ಚಿತ್ತು. ಆದರೆ ಬಾಕ್ಸ್ ಆಫೀಸ್‌ನಲ್ಲಿ ಆ ಸಿನಿಮಾ ಮಕಾಡೆ ಮಲಗಿತು. ‘ದಿ ರಾಜಾ ಸಾಬ್’ ಸಿನಿಮಾದ ಸೋಲನ್ನು ಒಪ್ಪಿಕೊಂಡಿರುವ ನಿರ್ದೇಶಕ ಮಾರುತಿ (Director Maruthi) ಈಗ ತಮ್ಮ ಮುಂದಿನ ಸಿನಿಮಾ ಬಗ್ಗೆ ಮಾಹಿತಿ…

Read More

ಫೈನಲ್​ನಲ್ಲಿ RCB ತಂಡದ ಎದುರಾಳಿ ಯಾರು?

WPL 2026: ವುಮೆನ್ಸ್ ಪ್ರೀಮಿಯರ್ ಲೀಗ್​ನ ಮೊದಲ ಸುತ್ತಿನ ಪಂದ್ಯಗಳು ಪೂರ್ಣಗೊಂಡಿದೆ. ಪ್ರಥಮ ಸುತ್ತಿನಲ್ಲಿ ಕಣಕ್ಕಿಳಿದ 5 ತಂಡಗಳಲ್ಲಿ ಮೂರು ತಂಡಗಳು ಪ್ಲೇಆಫ್​ಗೆ ಪ್ರವೇಶಿಸಿದರೆ, ಎರಡು ಟೀಮ್​ಗಳು ಹೊರಬಿದ್ದಿವೆ. ಪ್ಲೇಆಫ್​ಗೆ ಪ್ರವೇಶಿಸಿರುವ ಮೂರು ತಂಡಗಳಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವು ನೇರವಾಗಿ ಫೈನಲ್​ಗೆ ಎಂಟ್ರಿ ಕೊಟ್ಟಿದೆ. ಇನ್ನು ಡೆಲ್ಲಿ ಕ್ಯಾಪಿಟಲ್ಸ್ ಹಾಗೂ ಗುಜರಾತ್ ಜೈಂಟ್ಸ್ ತಂಡಗಳು ನಾಕೌಟ್ ಹಂತಕ್ಕೇರಿದೆ. ಅಂದರೆ ಎಲಿಮಿನೇಟರ್ ಪಂದ್ಯದಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ಮತ್ತುಗುಜರಾತ್ ಜೈಂಟ್ಸ್ ಮುಖಾಮುಖಿಯಾಗಲಿದ್ದು, ಈ ಪಂದ್ಯದಲ್ಲಿ ಗೆಲ್ಲುವ ತಂಡ ಫೈನಲ್​ಗೆ…

Read More

ಕಸದ ರಾಶಿಯಲ್ಲಿ 59 ಜೀವಂತ ಗುಂಡುಗಳು ಪತ್ತೆ:ಪೊಲೀಸರೇ ಶಾಕ್, ಬೆಚ್ಚಿಬಿದ್ದ ಜನ – Kannada News | 59 Live Bullets Found In Garbage At Belagavi, Police investigation underway

ಬೆಳಗಾವಿ, (ಜೂನ್ 16): ಬೆಳಗಾವಿ (Belagavi) ನಗರದ ಉದ್ಯಮಬಾಗ ಕೈಗಾರಿಕಾ ಪ್ರದೇಶದಲ್ಲಿ ಬರೋಬ್ಬರಿ 59 ಜೀವಂತ ಗುಂಡುಗಳು (Live Bullets) ಪತ್ತೆಯಾಗಿವೆ. ಪೌರ ಕಾರ್ಮಿಕರು ಕಸ ವಿಂಗಡಣೆ ಮಾಡುವ ವೇಳೆಯಲ್ಲಿ ಗುಂಡುಗಳು ಪತ್ತೆಯಾಗಿದ್ದು, ಜನ ಬೆಚ್ಚಿಬಿದ್ದಿದ್ದಾರೆ. ಇನ್ನು ವಿಷಯ ತಿಳಿಯುತ್ತಿದ್ದಂತೆಯೇ ಬೆಳಗಾವಿಯ ಉದ್ಯಮಭಾಗ ಪೊಲೀಸರು ಸ್ಥಳಕ್ಕೆ ದೌಡಾಯಿಸಿ ಪರಿಶೀಲನೆ ನಡೆಸಿದಾಗ ಗುಂಡುಗಳನ್ನು ಕಂಡು ಶಾಕ್ ಆಗಿದ್ದಾರೆ.ಇಷ್ಟು ಗುಂಡುಗಳು ಎಲ್ಲಿಂದ ಬಂದವು ಎಂದು ಒಂದು ಕ್ಷಣ ಪೊಲೀಸರಿಗೂ ಟೆನ್ಷನ್ ಆಗಿದೆ. ಸದ್ಯ ಗುಂಡುಗಳನ್ನು ವಶಕ್ಕೆ ಪಡೆದಿರುವ ಪೊಲೀಸರು ಪ್ರಕರಣ…

Read More

ಗೃಹಲಕ್ಷ್ಮಿಯರಿಗೆ ಭರ್ಜರಿ ಶಾಕ್​​ ಕೊಟ್ಟ ಸರ್ಕಾರ: ರಾಜ್ಯಾದ್ಯಂತ ಒಟ್ಟು 3.89 ಲಕ್ಷ ಫಲಾನುಭವಿಗಳಿಗೆ ಕೊಕ್​​ – Kannada News | Major Jolt to Gruhalakshmi Beneficiaries: Karnataka Government Removes 3.89 Lakh Ineligible Women From the Scheme

ಬೆಂಗಳೂರು, ಜೂನ್​​ 15: ರಾಜ್ಯ ಸರ್ಕಾರದ 5 ಗ್ಯಾರಂಟಿ ಯೋಜನೆಗಳಲ್ಲಿ ಒಂದಾಗಿರುವ ಗೃಹಲಕ್ಷ್ಮಿಗೆ ರಾಜ್ಯ ಸರ್ಕಾರ ಮೇಜರ್​​ ಸರ್ಜರಿ ಮಾಡಿದೆ. ಯೋಜನೆಯ ದುರುಪಯೋಗ ಕಂಡು ಬಂದಿರುವ ಹಿನ್ನೆಲೆ ಪರಿಷ್ಕರಣೆ ನಡೆದಿದ್ದು, ಫಲಾನುಭವಿಗಳು ಮರು ಅರ್ಜಿ ಸಲ್ಲಿಸಬೇಕೆಂದು ಸ್ವತಃ ಸಿಎಂ ಡಿ.ಕೆ. ಶಿವಕುಮಾರ್​​ ಅವರೇ ಈಗಾಗಲೇ ಮಾಹಿತಿ ನೀಡಿದ್ದಾರೆ. ಈಗಿರುವ ಮಾಹಿತಿಯ ಪ್ರಕಾರ 1.30 ಕೋಟಿ ಗೃಹಲಕ್ಷ್ಮಿಯರ ಪೈಕಿ 3.89 ಲಕ್ಷ ಫಲಾನುಭವಿಗಳಿಗೆ ಭರ್ಜರಿ ಶಾಕ್​​ ಕೊಟ್ಟಿದೆ. ಗೃಹಲಕ್ಷ್ಮಿ ಯೋಜನೆಯಲ್ಲಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಮಹತ್ವದ…

Read More

ತಮ್ಮ ಕ್ಷೇತ್ರದ ಜಾತ್ರೆಗೆ ಪ್ರಭಾವ ಬಳಸಿ ಸಿಎಂ ಒಂದು ಲೋಡ್ ಸಿಲಿಂಡರ್ ಕೊಡಿಸಿದ್ರಾ ?

ಮೈಸೂರು, (ಮಾರ್ಚ್ 14): ಗಲ್ಫ್ ರಾಷ್ಟ್ರದಲ್ಲಿ ಯುದ್ಧ ನಡೆಯುತ್ತಿರುವುದರಿಂದ ಭಾರತದಲ್ಲಿ ಗ್ಯಾಸ್ ಸಿಲಿಂಡರ್ ಅಭಾವ ಉಂಟಾಗಿದೆ. ಇದು​​ ಹೋಟೆಲ್ ಉದ್ಯಮದ ಕತ್ತು ಹಿಸುಕುವಂತೆ ಮಾಡಿದೆ. ಗ್ಯಾಸ್ ಎಮರ್ಜೆನ್ಸಿ ಗ್ರಾಹಕರ ಉಸಿರುಗಟ್ಟಿಸಿದೆ. ಕಮರ್ಷಿಯಲ್ ಸಿಲಿಂಡರ್​ಗಳು ಸಿಗುತ್ತಿಲ್ಲ. ಕಾಳಸಂತೆಯಲ್ಲಿ ಒನ್ ಟು ಡಬಲ್ ರೇಟ್​ಗೆ ಸೇಲ್ ಮಾಡುತ್ತಿದ್ದಾರೆ. 1 ಸಾವಿರ 950 ರೂಪಾಯಿ ಇರುವ ಸಿಲಿಂಡರ್​ನ 5 ಸಾವಿರ ರೂಪಾಯಿಗೆ ಮಾರಾಟ ಮಾಡುತ್ತಿದ್ದಾರೆ.ಇದರಿಂದ ಸಾಕಷ್ಟು ತೊಂದರೆಗಳು ಆಗುತ್ತಿವೆ. ಇದರ ಮಧ್ಯೆ ಸಿಎಂ ಸಿದ್ದರಾಮಯ್ಯನವರು ತಮ್ಮ ವರುಣಾ ಕ್ಷೇತ್ರದ ವರಕೋಡು ಗ್ರಾಮದ…

Read More

ಮಣಿಪುರ: ಎರಡು ವರ್ಷಗಳ ಹಿಂದೆ ಸಾಮೂಹಿಕ ಅತ್ಯಾಚಾರಕ್ಕೊಳಗಾಗಿದ್ದ ಯುವತಿ ಸಾವು – Kannada News | Manipur Kuki Woman’s Tragic Death: Survivor Fights for Justice Until End

ಇಂಫಾಲ, ಜನವರಿ 18: ಎರಡು ವರ್ಷಗಳ ಹಿಂದೆ  ಮಣಿಪುರ(Manipur)ದಲ್ಲಿ ಮೈಥಿ ಹಾಗೂ ಕುಕಿ ಸಮುದಾಯಗಳ ನಡುವೆ ನಡೆದ ಘರ್ಷಣೆ ಸಂದರ್ಭದಲ್ಲಿ ಅಪಹರಣಗೊಂಡು ಸಾಮೂಹಿಕ ಅತ್ಯಾಚಾರಕ್ಕೊಳಗಾಗಿದ್ದ ಕುಕಿ ಯುವತಿ ಇಂಫಾಲದಲ್ಲಿ ಸಾವನ್ನಪ್ಪಿದ್ದಾರೆ. ಸಾಮೂಹಿಕ ಅತ್ಯಾಚಾರಕ್ಕೆ ಒಳಗಾದ ಕುಕಿ ಬುಡಕಟ್ಟು ಜನಾಂಗದ ಯುವತಿ ಆಘಾತಕ್ಕೆ ಒಳಗಾಗಿದ್ದರು. ಅದರಿಂದ ಹೊರಬರಲು ಸಾಧ್ಯವಾಗದೆ ಮೃತಪಟ್ಟಿದ್ದಾರೆ. ತಮ್ಮ ಮಗಳು ಜೀವಂತವಾಗಿದ್ದಾಗ ನ್ಯಾಯ ಸಿಗದ ಕಾರಣ ಅವರ ಕುಟುಂಬವು ದುಃಖಿತವಾಗಿದೆ ಎಂದು ಪೋಷಕರು ತಿಳಿಸಿದ್ದಾರೆ. ಎರಡು ವರ್ಷಗಳ ಹಿಂದೆ ಆಕೆ ಅನುಭವಿಸಿದ ಆಳವಾದ ಆಘಾತ ಮತ್ತು…

Read More

Indian Navy Agniveer Musician 2026: ಭಾರತೀಯ ನೌಕಾಪಡೆಯಲ್ಲಿ ನೇಮಕಾತಿ; ಸಂಗೀತ ಆಸಕ್ತ ಯುವಜನರಿಗೆ ಸೇನೆ ಸೇರಲು ಸುವರ್ಣಾವಕಾಶ

ದೇಶದ ರಕ್ಷಣಾ ಪಡೆಯಲ್ಲಿ ಸೇವೆ ಸಲ್ಲಿಸುವುದರ ಜೊತೆಗೆ ಸಂಗೀತ ಕ್ಷೇತ್ರದಲ್ಲಿ ಸಾಧನೆ ಮಾಡಲು ಬಯಸುವ ಯುವಜನರಿಗೆ ಭಾರತೀಯ ನೌಕಾಪಡೆಯು ಅದ್ಭುತ ಅವಕಾಶವೊಂದನ್ನು ಕಲ್ಪಿಸಿದೆ. 2026ನೇ ಸಾಲಿನ ಅಗ್ನಿವೀರ್ MR (ಸಂಗೀತಗಾರ) ಹುದ್ದೆಗಳ ಭರ್ತಿಗಾಗಿ ಅಧಿಕೃತ ಅಧಿಸೂಚನೆಯನ್ನು ಬಿಡುಗಡೆ ಮಾಡಲಾಗಿದ್ದು, ಇದು ವೃತ್ತಿಜೀವನದಲ್ಲಿ ಹೊಸ ಮೈಲಿಗಲ್ಲು ಸ್ಥಾಪಿಸಲು ಬಯಸುವವರಿಗೆ ಉತ್ತಮ ವೇದಿಕೆಯಾಗಿದೆ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಈ ನೇಮಕಾತಿ ಪ್ರಕ್ರಿಯೆಯ ಮೂಲಕ ದೇಶದ ಪ್ರತಿಷ್ಠಿತ ನೌಕಾಪಡೆಯ ಭಾಗವಾಗಬಹುದಾಗಿದೆ. ಈ ನೇಮಕಾತಿಯ ಆನ್‌ಲೈನ್ ಅರ್ಜಿ ಪ್ರಕ್ರಿಯೆಯು ಏಪ್ರಿಲ್ 11,…

Read More