Headlines

ಪಂಚಮಸಾಲಿ ಗುರುಪೀಠದಿಂದ ಉಚ್ಛಾಟನೆ ಮಾಡಿರುವ ಬಗ್ಗೆ ವಚನಾನಂದ ಸ್ವಾಮೀಜಿ ಮಾತು

ದಾವಣಗೆರೆ, ಏಪ್ರಿಲ್​ 13: ಹರಿಹರ ತಾಲೂಕಿನ ಹನಗವಾಡಿ ಬಳಿಯ ಗುರುಪೀಠದಿಂದ ವಚನಾನಂದ ಸ್ವಾಮೀಜಿಯನ್ನ ಉಚ್ಚಾಟನೆ ಮಾಡಿದ್ದಕ್ಕೆ ಮಠದ ಭಕ್ತರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಧರ್ಮದರ್ಶಿಗಳು ಹೋಗುತ್ತಿದ್ದ ವಾಹನಕ್ಕೆ ಚಪ್ಪಲಿ ತೋರಿಸಿ ಭಕ್ತರು ಆಕ್ರೋಶ ಹೊರಹಾಕಿದ್ದಾರೆ. ಹೀಗಾಗಿ ಹನಗವಾಡಿಯ ಪಂಚಮಸಾಲಿ ಗುರುಪೀಠದ ಎದುರು ಭಾರೀ ಹೈಡ್ರಾಮಾವೇ ನಡೆದಿದೆ. ಇನ್ನು ಈ ವೇಳೆ ಮಾಧ್ಯಮದವರೊಂದಿಗೆ ಮಾತನಾಡಿದ ವಚನಾನಂದಶ್ರೀ, ನನ್ನ ಉಚ್ಚಾಟನೆ ಹಾಸ್ಯಾಸ್ಪದ. ಟ್ರಸ್ಟ್​ನವರಿಗೆ ಲೆಕ್ಕ ಕೇಳಿದ್ದಕ್ಕೆ ಟಾರ್ಗೆಟ್​ ಮಾಡುತ್ತಿದ್ದಾರೆ. ವ್ಯವಸ್ಥಿತವಾಗಿ ಷಡ್ಯಂತ್ರ ಮಾಡಿ ನನ್ನನ್ನು ಉಚ್ಚಾಟನೆ ಮಾಡಿದ್ದಾರೆ ಎಂದು ಆರೋಪಿಸಿದರು. ಶ್ವಾಸಪೀಠದಿಂದಲೇ…

Read More

ಪಾಕಿಸ್ತಾನದಲ್ಲಿ ‘ಧುರಂಧರ್ 2’ ಅಬ್ಬರ: ಮುಗಿಬಿದ್ದ ಜನ ಸರ್ವರ್ ಕ್ರ್ಯಾಶ್ – Kannada News | Dhurandhar 2 movie trending number 1 in Pakistan

‘ಧುರಂಧರ್ 2’ (Dhurandhar 2) ಸಿನಿಮಾ ಭಾರತ ಮಾತ್ರವಲ್ಲದೆ ವಿಶ್ವ ಬಾಕ್ಸ್ ಆಫೀಸ್​​ನಲ್ಲಿ ಅಬ್ಬರಿಸಿದೆ. 1800 ಕೋಟಿಗೂ ಹೆಚ್ಚು ಮೊತ್ತ ಗಳಿಕೆ ಮಾಡಿದೆ. ಆದರೆ ಈ ಸಿನಿಮಾ ಸೌದಿ ರಾಷ್ಟ್ರಗಳು, ಪಾಕಿಸ್ತಾನ ಇನ್ನೂ ಕೆಲವೆಡೆ ನಿಷೇಧಕ್ಕೆ ಒಳಗಾಗಿತ್ತು. ಅದರಲ್ಲೂ ಸಿನಿಮಾ ಕತೆಯೇ ಪಾಕಿಸ್ತಾನದ ಭಯೋತ್ಪಾದನೆಯ ವಿರುದ್ಧ ಇರುವಂಥಹದ್ದು. ಆದರೂ ಸಹ ಇದೀಗ ಪಾಕಿಸ್ತಾನದ ಜನ ಮುಗಿಬಿದ್ದು ‘ಧುರಂಧರ್ 2’ ಸಿನಿಮಾ ನೋಡಿದ್ದಾರೆ. ಈಗ ಮಾತ್ರವಲ್ಲ ಈ ಹಿಂದೆ ‘ಧುರಂಧರ್’ ಮೊದಲ ಭಾಗ ಬಿಡುಗಡೆ ಆದಾಗಲೂ ಸಹ ಪಾಕ್​​ನ…

Read More

SA vs NZ: ನಿರ್ಣಾಯಕ ಪಂದ್ಯದಲ್ಲಿ ಗೆದ್ದ ದಕ್ಷಿಣ ಆಫ್ರಿಕಾ

ದಕ್ಷಿಣ ಆಫ್ರಿಕಾ ಹಾಗೂ ನ್ಯೂಜಿಲೆಂಡ್ (South Africa vs New Zealand) ನಡುವೆ ನಡೆಯುತ್ತಿರುವ ಐದು ಪಂದ್ಯಗಳ ಟಿ20 ಸರಣಿಯ ನಾಲ್ಕನೇ ಪಂದ್ಯದಲ್ಲಿ ಆಫ್ರಿಕಾ ತಂಡ ಗೆಲುವು ಸಾಧಿಸಿದೆ. ವೆಲ್ಲಿಂಗ್ಟನ್‌ನಲ್ಲಿ ನಡೆದ ಈ ಪಂದ್ಯದಲ್ಲಿ ದಕ್ಷಿಣ ಆಫ್ರಿಕಾ, ನ್ಯೂಜಿಲೆಂಡ್ ತಂಡವನ್ನು 19 ರನ್‌ಗಳಿಂದ ಸೋಲಿಸಿತು. ಈ ಗೆಲುವಿನೊಂದಿಗೆ ಉಭಯ ತಂಡಗಳ ನಡುವಿನ ಈ ಸರಣಿಯನ್ನು 2-2 ರಿಂದ ಸಮಬಲಗೊಂಡಿದೆ. ಹೀಗಾಗಿ ಐದನೇ ಪಂದ್ಯವನ್ನು ಗೆಲ್ಲುವ ತಂಡಕ್ಕೆ ಸರಣಿ ಕೈವಶವಾಗಿದೆ. ಈ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್ ಮಾಡಿದ ದಕ್ಷಿಣ…

Read More

ಪಾಕ್ ವಿರುದ್ಧದ ಪಂದ್ಯ ಮುಗಿಯುವ ಮುನ್ನವೇ ವಿಶ್ವಕಪ್ ಸೆಮಿಫೈನಲ್‌ಗೇರಿದ ಭಾರತ – Kannada News | U19 World Cup: India Qualifies for Semi finals via NRR after Pakistan Thriller

ಅಂಡರ್-19 ಏಕದಿನ ವಿಶ್ವಕಪ್‌ನ (U19 World Cup 2026) ಮಾಡು-ಮರು ಪಂದ್ಯದಲ್ಲಿ ಭಾರತ ಮತ್ತು ಪಾಕಿಸ್ತಾನ (India vs Pakistan) ತಂಡಗಳು ಪರಸ್ಪರ ಮುಖಾಮುಖಿಯಾಗಿದ್ದವು. ಈ ಪಂದ್ಯದಲ್ಲಿ, ಟಾಸ್ ಸೋತು ಮೊದಲು ಬ್ಯಾಟಿಂಗ್ ಮಾಡಿದ ಟೀಂ ಇಂಡಿಯಾ 252 ರನ್ ಕಲೆಹಾಕಿತು. ತಂಡದ ಪರ ಮೊದಲ ಮೂವರು ಪ್ರಮುಖ ಬ್ಯಾಟ್ಸ್‌ಮನ್‌ಗಳು ಬೇಗನೇ ಔಟ್ ಆದರು. ಇದರಿಂದಾಗಿ, ಟೀಂ ಇಂಡಿಯಾದ ಮೇಲೆ ಒತ್ತಡ ಹೆಚ್ಚಾಯಿತು. ಆದಾಗ್ಯೂ ಮಧ್ಯಮ ಕ್ರಮಾಂಕದಲ್ಲಿ ವೇದಾಂತ್ ತ್ರಿವೇದಿ ತಂಡದ ಇನ್ನಿಂಗ್ಸ್ ನಿಭಾಯಿಸಿ 68 ರನ್‌…

Read More

Patanjali Online: ಈ ಪತಂಜಲಿ ಪ್ಲಾಟ್​ಫಾರ್ಮ್​ಗಳಲ್ಲಿ ರಿಯಾಯಿತಿ ದರದಲ್ಲಿ ಉತ್ಪನ್ನಗಳನ್ನು ಖರೀದಿಸುವ ಅವಕಾಶ – Kannada News | Patanjali Ayurveda’s online platforms give good discounts and cashback offers on its products

ಪತಂಜಲಿ ಆಯುರ್ವೇದ (Patanjali Ayurveda) ತನ್ನ ಗ್ರಾಹಕರಿಗೆ ಆನ್‌ಲೈನ್ ಶಾಪಿಂಗ್ ಸೇವೆ ನೀಡುತ್ತಿದೆ. ಸೋಪ್, ಟೂತ್‌ಪೇಸ್ಟ್, ಹಿಟ್ಟು, ತುಪ್ಪ ಮತ್ತು ಆಯುರ್ವೇದ ಔಷಧಿಗಳಿಂದ ಹಿಡಿದು, ಅದರ ಎಲ್ಲಾ ಉತ್ಪನ್ನಗಳನ್ನು ಈಗ ನಿಮ್ಮ ಮನೆಯಿಂದಲೇ ಆನ್​ಲೈನ್ ಮೂಲಕ ಆರ್ಡರ್ ಮಾಡಬಹುದು. ಕಂಪನಿಯ ಅಧಿಕೃತ ವೆಬ್‌ಸೈಟ್ ಮೂಲಕ ಆರ್ಡರ್ ಮಾಡುವಾಗ ಗ್ರಾಹಕರು ಗಮನಾರ್ಹ ರಿಯಾಯಿತಿಗಳನ್ನು ಸಹ ಪಡೆಯುತ್ತಾರೆ. ಪತಂಜಲಿ ಉತ್ಪನ್ನಗಳನ್ನು ಖರೀದಿಸಲು ಅಂಗಡಿಗೆ ಹೋಗಲು ಸಾಧ್ಯವಾಗದವರಿಗೆ ಈ ಫೀಚರ್ ಪ್ರಯೋಜನಕಾರಿಯಾಗಿದೆ. ಅವರು ಈಗ ತಮ್ಮ ಮನೆಯಿಂದಲೇ ಆನ್‌ಲೈನ್‌ನಲ್ಲಿ ಆರ್ಡರ್ ಮಾಡಬಹುದು….

Read More

ಡಿವೋರ್ಸ್ ಬಗ್ಗೆ ಮನಬಿಚ್ಚಿ ಮಾತನಾಡಿದ ನಟಿ ನಿವೇದಿತಾ ಗೌಡ – Kannada News | Niveditha Gowda talks about her divorce with Chandan Shetty

ನಿವೇದಿತಾ ಗೌಡ (Niveditha Gowda) ಮತ್ತು ಚಂದನ್ ಶೆಟ್ಟಿ ಅವರ ದಾಂಪತ್ಯ ಮತ್ತು ವಿಚ್ಛೇದನ ಎರಡೂ ಸಹ ಬಹಳ ಚರ್ಚೆಯಲ್ಲಿದ್ದವು. ಬಿಗ್​​ಬಾಸ್​​ ಸೀಸನ್ 5ರ ಸ್ಪರ್ಧಿಗಳಾಗಿದ್ದ ಚಂದನ್ ಶೆಟ್ಟಿ ಮತ್ತು ನಿವೇದಿತಾ ಗೌಡ ಅಲ್ಲಿಯೇ ಪ್ರೀತಿಸಿ ಬಳಿಕ 2020ರ ಫೆಬ್ರವರಿ 24ರಂದು ವಿವಾಹವಾದರು. ಸಾಮಾಜಿಕ ಜಾಲತಾಣದಲ್ಲಿ ಇಬ್ಬರೂ ಕ್ಯೂಟ್ ವಿಡಿಯೋಗಳನ್ನು ಸಹ ಆಗಾಗ್ಗೆ ಹಂಚಿಕೊಳ್ಳುತ್ತಿದ್ದರು. ವಿಡಿಯೋ ನೋಡಿದ ಅಭಿಮಾನಿಗಳು ಇಬ್ಬರದ್ದೂ ಸಿಹಿ ದಾಂಪತ್ಯ ಎಂದುಕೊಂಡಿದ್ದರು. ಆದರೆ ಮದುವೆಯಾಗಿ ನಾಲ್ಕು ವರ್ಷಗಳ ಬಳಿಕ ಅಂದರೆ 2024ರಲ್ಲಿ ಇಬ್ಬರೂ ಪರಸ್ಪರ…

Read More

Railway Vacancy 2026: ರೈಲ್ವೆ ಇಲಾಖೆಯಲ್ಲಿ ಬೃಹತ್ ನೇಮಕಾತಿ; 1,191 ಅಪ್ರೆಂಟಿಸ್ ಹುದ್ದೆಗಳಿಗೆ ಅರ್ಜಿ ಆಹ್ವಾನ – Kannada News | South East Central Railway ITI Apprentice Vacancy 2026: No Exam, Direct Merit Selection

ರೈಲ್ವೆ ಇಲಾಖೆಯಲ್ಲಿ ಬೃಹತ್ ನೇಮಕಾತಿ ನೀವು ಐಟಿಐ (ITI) ಮುಗಿಸಿ ರೈಲ್ವೆ ಇಲಾಖೆಯಲ್ಲಿ ವೃತ್ತಿಜೀವನ ಆರಂಭಿಸಲು ಬಯಸಿದ್ದರೆ ನಿಮಗೊಂದು ಸುವರ್ಣಾವಕಾಶ ಇಲ್ಲಿದೆ. ದಕ್ಷಿಣ ಪೂರ್ವ ಮಧ್ಯ ರೈಲ್ವೆ (SECR) ವಿವಿಧ ಟ್ರೇಡ್‌ಗಳಲ್ಲಿ ಖಾಲಿ ಇರುವ ಒಟ್ಟು 1,191 ಅಪ್ರೆಂಟಿಸ್ ಹುದ್ದೆಗಳ ಭರ್ತಿಗೆ ಅಧಿಕೃತ ಅಧಿಸೂಚನೆ ಹೊರಡಿಸಿದೆ. ಆದ್ದರಿಂದ ಆಸಕ್ತರು ತಡಮಾಡದೇ ಕೂಡಲೇ ಅರ್ಜಿ ಸಲ್ಲಿಸಿ. ಹುದ್ದೆಗಳ ವಿವರಗಳು ರೈಲ್ವೆ ಇಲಾಖೆಯ ಬಿಲಾಸ್‌ಪುರ ಮತ್ತು ರಾಯ್‌ಪುರ ಡಿವಿಷನ್‌ಗಳಲ್ಲಿ ಈ ನೇಮಕಾತಿ ನಡೆಯುತ್ತಿದೆ. ಒಟ್ಟು ಹುದ್ದೆಗಳು: 1,191 ಹುದ್ದೆಯ ಹೆಸರು:…

Read More

ನಿರ್ದೇಶಕ ರೋಹಿತ್ ಶೆಟ್ಟಿ ಖಾಸಗಿ ಕಾರಿನ ಮೇಲೆ ಪೊಲೀಸ್ ಸ್ಟಿಕ್ಕರ್: ವಿವಾದಕ್ಕೆ ಸ್ಪಷ್ಟನೆ

ಆ್ಯಕ್ಷನ್ ಸಿನಿಮಾಗಳ ಮೂಲಕ ಫೇಮಸ್ ಆದ ಬಾಲಿವುಡ್‌ನ ನಿರ್ದೇಶಕ ರೋಹಿತ್ ಶೆಟ್ಟಿ (Rohit Shetty) ಅವರು ಇದೀಗ ಹೊಸ ವಿವಾದವೊಂದಕ್ಕೆ ಸಿಲುಕಿದ್ದಾರೆ. ತಮ್ಮ ಖಾಸಗಿ ಕಾರುಗಳಲ್ಲಿ ಪೊಲೀಸ್ ಸ್ಟಿಕ್ಕರ್ ಮತ್ತು ಲೈಟ್‌ಗಳನ್ನು ಬಳಸಿದ ಆರೋಪ ಅವರ ಮೇಲೆ ಕೇಳಿಬಂದಿದೆ. ಈ ವಿಚಾರವಾಗಿ ಸೋಷಿಯಲ್ ಮೀಡಿಯಾದಲ್ಲಿ ಭಾರಿ ಚರ್ಚೆ ನಡೆಯುತ್ತಿರುವ ಬೆನ್ನಲ್ಲೇ, ರೋಹಿತ್ ಶೆಟ್ಟಿ ಅವರ ತಂಡವು ಸ್ಪಷ್ಟನೆಯನ್ನು ನೀಡಿದೆ. ಅಷ್ಟಕ್ಕೂ ರೋಹಿತ್ ಶೆಟ್ಟಿ ಅವರು ತಮ್ಮ ಸ್ವಂತ ಕಾರಿನ ಮೇಲೆ ಪೊಲೀಸ್ (Police) ಸ್ಟಿಕ್ಕರ್ ಮತ್ತು ಲೈಟ್…

Read More

ಚುನಾವಣೆ ಸಮಯದಲ್ಲಿ ವಿಜಯ್ ವಿರುದ್ಧ ದ್ವೇಷ ತೀರಿಸಿಕೊಂಡರೇ ನಟ ಅಜಿತ್ ಕುಮಾರ್? – Kannada News | Did Ajith Kumar indirectly said do not vote for Thalapathy Vijay

ತಮಿಳುನಾಡಿನಲ್ಲಿ ಚುನಾವಣೆ ಚಾಲ್ತಿಯಲ್ಲಿದೆ. ಇಂದು (ಏಪ್ರಿಲ್ 23) ಮತದಾನ ನಡೆದಿದೆ. ತಮಿಳು ಚಿತ್ರರಂಗದ ಹಲವಾರು ಸೆಲೆಬ್ರಿಟಿಗಳು ಸಹ ಸಾಲಿನಲ್ಲಿ ನಿಂತು ಮತದಾನ ಮಾಡಿದ್ದಾರೆ. ತಮಿಳು ಚಿತ್ರರಂಗದ ಸೂಪರ್ ಸ್ಟಾರ್ ದಳಪತಿ ವಿಜಯ್ (Thalapathy Vijay) ಸಹ ಚುನಾವಣೆಗೆ ಸ್ಪರ್ಧಿಸಿದ್ದಾರೆ. ತಮಿಳು ಚಿತ್ರರಂಗದಲ್ಲಿ ಹಲವು ವರ್ಷಗಳಿಂದಲೂ ದಳಪತಿ ವಿಜಯ್ ಮತ್ತು ಅಜಿತ್ ಕುಮಾರ್ ಪರಸ್ಪರ ಎದುರಾಳಿಗಳು. ಪರಸ್ಪರರ ಅಭಿಮಾನಿಗಳು ಸಹ ಎದುರಾಳಿಗಳಂತೇ ವರ್ತಿಸುತ್ತಾರೆ. ಇದೆಲ್ಲ ಹೀಗಿರುವಾಗ, ಅಜಿತ್ ಅವರು ಪರೋಕ್ಷವಾಗಿ ದಳಪತಿ ವಿಜಯ್​​ಗೆ ಮತ ಹಾಕಬೇಡಿ ಎಂಬ ಸಂದೇಶ…

Read More