Davanagere-Bagalkot ByPolls 2026: ನಾಳೆ ದಾವಣಗೆರೆ ದಕ್ಷಿಣ, ಬಾಗಲಕೋಟೆಯಲ್ಲಿ ಮತದಾನ; ಅಂಕಿ ಅಂಶ ಇಲ್ಲಿದೆ

Davanagere-Bagalkot ByPolls 2026: ನಾಳೆ ದಾವಣಗೆರೆ ದಕ್ಷಿಣ, ಬಾಗಲಕೋಟೆಯಲ್ಲಿ ಮತದಾನ; ಅಂಕಿ ಅಂಶ ಇಲ್ಲಿದೆ

ಬೆಂಗಳೂರು, ಏಪ್ರಿಲ್ 08: ಕರ್ನಾಟಕದಲ್ಲಿ ಉಪಚುನಾವಣೆ (by-election) ಕದನ ಕ್ಲೈಮ್ಯಾಕ್ಸ್ ಘಟ್ಟಕ್ಕೆ ತಲುಪಿದೆ. ಆಡಳಿತಾರೂಢ ಕಾಂಗ್ರೆಸ್‌ಗೆ ಪ್ರತಿಷ್ಠೆ ಮತ್ತು ಪ್ರತಿಪಕ್ಷ ಬಿಜೆಪಿ ಸವಾಲಿನ ಪ್ರಶ್ನೆಯಾಗಿರುವ ದಾವಣಗೆರೆ ದಕ್ಷಿಣ ಮತ್ತು ಬಾಗಲಕೋಟೆ ಎರಡು ಕ್ಷೇತ್ರಗಳಲ್ಲಿ ಮತದಾನಕ್ಕೆ ಕ್ಷಣಗಣನೆ ಶುರುವಾಗಿದೆ. ಒಂದೆಡೆ ಚುನಾವಣೆ ಅಧಿಕಾರಿಗಳು ಕೊನೆಯ ಹಂತದ ಎಲ್ಲಾ ಸಿದ್ಧತೆಗಳನ್ನು ಮಾಡಿಕೊಂಡಿದ್ದಾರೆ. ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಬಿಗಿ ಪೊಲೀಸ್​ ಭದ್ರತೆ ಕೈಗೊಳ್ಳಲಾಗಿದೆ. ಮತದಾರರು ಕೂಡ ತಮ್ಮ ನೆಚ್ಚಿನ ಅಭ್ಯರ್ಥಿಗಳಿಗೆ ವೋಟ್​ ಮಾಡಲು ಸಜ್ಜಾಗಿದ್ದಾರೆ.

ಕ್ಲೈಮ್ಯಾಕ್ಸ್ ಹಂತಕ್ಕೆ ಉಪಚುನಾವಣೆ 

ಜಿದ್ದಾಜಿದ್ದಿಗೆ ಸಾಕ್ಷಿಯಾಗಿರುವ ದಾವಣಗೆರೆ ದಕ್ಷಿಣ ಮತ್ತು ಬಾಗಲಕೋಟೆ 2 ಕ್ಷೇತ್ರಗಳ ಉಪಚುನಾವಣೆ ಸಮರ ಕ್ಲೈಮ್ಯಾಕ್ಸ್ ಹಂತಕ್ಕೆ ಬಂದಿದೆ. ಮತದಾನಕ್ಕೆ ಕ್ಷಣಗಣನೆ ಆರಂಭವಾಗಿದೆ. ಮಂಗಳವಾರ ಸಂಜೆ 5.30ಕ್ಕೆ ಬಹಿರಂಗ ಪ್ರಚಾರಕ್ಕೆ ತೆರೆ ಬಿದ್ದಿತ್ತು. ಕಳೆದೊಂದು ವಾರದಿಂದ ಕ್ಷೇತ್ರದಲ್ಲೇ ಬೀಡುಬಿಟ್ಟು ಬಿರುಸಿನ ಪ್ರಚಾರ ನಡೆಸಿದ್ದ ನಾಯಕರು ಕ್ಷೇತ್ರಬಿಟ್ಟು ವಾಪಸ್ ತೆರಳಿದ್ದಾರೆ. ಇಂದು ಅಭ್ಯರ್ಥಿಗಳು ಮನೆಮನೆ ಪ್ರಚಾರ ನಡೆಸಲಿದ್ದು, ನಾಳೆ ಬೆಳಗ್ಗೆ 7 ಗಂಟೆಯಿಂದ ಸಂಜೆ 6ಗಂಟೆಯವರೆೆಗೆ ಮತದಾನ ನಡೆಯಲಿದೆ.

ಬಾಗಲಕೋಟೆ ಕ್ಷೇತ್ರದಲ್ಲಿ ಮತದಾನಕ್ಕೆ ಸಕಲ ಸಿದ್ಧತೆ

ಬಾಗಲಕೋಟೆ ನಗರ ಕ್ಷೇತ್ರ ಬಿಜೆಪಿ ಮತ್ತು ಕಾಂಗ್ರೆಸ್‌ ನಡುವೆ ನೇರಾನೇರಾ ಫೈಟ್‌ ಕಾರಣವಾಗಿದೆ. ನಾಳೆ ವೋಟಿಂಗ್ ನಡೆಯಲಿದ್ದು, ಅಂತಿಮ ಸಿದ್ಧತೆ ಮಾಡಿಕೊಳ್ಳಲಾಗಿದೆ. ನವನಗರದ ಪ್ರಥಮ ದರ್ಜೆ ಕಾಲೇಜಿನಲ್ಲಿ ಮಸ್ಟರಿಂಗ್ ಕಾರ್ಯ ನಡೆಯಿತು. ಮತಗಟ್ಟೆಗಳೊಂದಿಗೆ ಸಿಬ್ಬಂದಿ ಕೆಎಸ್‌ಆರ್‌ಟಿಸಿ ಮತ್ತು ಖಾಸಗಿ ಬಸ್‌ಗಳಲ್ಲಿ ತಮ್ಮ ತಮ್ಮ ಬೂತ್‌ಗಳತ್ತ ತೆರಳಿದ್ದಾರೆ.

ಇದನ್ನೂ ಓದಿ: ಬಾಗಲಕೋಟೆ ಉಪ ಚುನಾವಣೆಗೆ ಕೊನೇ ಹಂತದ ಸಿದ್ಧತೆ ಹೇಗಿದೆ ಗೊತ್ತಾ?

ಬಾಗಲಕೋಟೆ ವಿಧಾನಸಭಾ ಕ್ಷೇತ್ರದಲ್ಲಿ ಒಟ್ಟು 2,59,797 ಮತದಾರರಿದ್ದು, ಅವರಲ್ಲಿ ಪುರುಷರು 1,26,999, ಮಹಿಳೆಯರು-1,32,775, ಇತರರು-23 ಮತ್ತು ಅಂಚೆ ಮತದಾರರು-170. ಒಟ್ಟು 09 ಅಭ್ಯರ್ಥಿಗಳು ಕಣದಲ್ಲಿದಿದ್ದಾರೆ. ಒಟ್ಟು 332 ಮತಗಟ್ಟೆಗಳ ಸ್ಥಾಪನೆ ಮಾಡಲಾಗಿದೆ. 1,564 ಚುನಾವಣಾ ಸಿಬ್ಬಂದಿ ನಿಯೋಜಿಸಲಾಗಿದ್ದು, ಸೂಕ್ಷ್ಮ, ಅತಿಸೂಕ್ಷ್ಮ ಮತಗಟ್ಟೆಗಳನ್ನು ಗುರುತಿಸಲಾಗಿದೆ. 80 ವರ್ಷ ಮೇಲ್ಪಟ್ಟವರಿಗೆ ಮನೆಯಲ್ಲೇ ಮತದಾನಕ್ಕೆ ವ್ಯವಸ್ಥೆ ಕಲ್ಪಿಸಿದ್ದು, ಮತಗಟ್ಟೆಗಳ ಬಳಿ ವ್ಹೀಲ್ ಚೇರ್ ವ್ಯವಸ್ಥೆಯನ್ನು ಮಾಡಲಾಗಿದೆ. ಯುವ ಮತದಾನ ಕೇಂದ್ರ ಮತ್ತು ಮಹಿಳೆಯರಿಗಾಗಿ ಎರಡು ಸಖಿ ಮತಗಟ್ಟೆಗಳನ್ನು ತೆರೆಯಲಾಗಿದ್ದು ಗಮನ ಸೆಳೆಯುತ್ತಿವೆ.

ಬಿಗಿ ಭದ್ರತೆ

ಇನ್ನು 1 ಎಸ್​ಪಿ, 2 ಎಎಸ್​ಪಿ,10 ಜನ ಡಿವೈಎಸ್​ಪಿ, ಸಿಪಿಐ, ಪಿಎಸ್ಐ, ಎಎಸ್​ಐ, ಪೊಲೀಸ್ ಕಾನ್ಸ್ಟೇಬಲ್, ಸಿಎಪಿಎಫ್​ ಪಡೆ ಸೇರಿ ಒಟ್ಟು 2500 ಜನ ಸೇರಿದಂತೆ ಮತದಾನ ಪ್ರಕ್ರಿಯೆಗೆ 1564 ಸಿಬ್ಬಂದಿಯನ್ನ ಭದ್ರತೆಗೆ ನಿಯೋಜಿಸಲಾಗಿದೆ.

ದಾವಣಗೆರೆ ದಕ್ಷಿಣದಲ್ಲಿ ಒಟ್ಟು 284 ಮತಗಟ್ಟೆಗಳ ನಿರ್ಮಾಣ

ಇತ್ತ ದಾವಣಗೆರೆ ದಕ್ಷಿಣ ಕ್ಷೇತ್ರದಲ್ಲೂ ಭರ್ಜರಿ ಸಿದ್ಧತೆ ಮಾಡಿಕೊಳ್ಳಲಾಗಿದೆ. ದಾವಣಗೆರೆಯಲ್ಲಿ ಮುಕ್ತ ಮತ್ತು ಶಾಂತಿಯುತ ಮತದಾನಕ್ಕೆ ಸಕಲ ಸಿದ್ಧತೆ ಮಾಡಿಕೊಳ್ಳಲಾಗಿದೆ. ಪಿಬಿ ರಸ್ತೆಯ ಬಳಿ ಇರುವ ಡಿಆರ್‌ಆರ್‌ ಸ್ಕೂಲ್‌ನಲ್ಲಿ ಬೆಳಗ್ಗೆಯಿಂದಲೇ ಮಸ್ಟರಿಂಗ್ ಕಾರ್ಯ ನಡೆಯಿತು. ಸಿಬ್ಬಂದಿ ತಮ್ಮ ಕೇಂದ್ರದ ಮತಯಂತ್ರವನ್ನ ಪಡೆದುಕೊಂಡು ಮತಗಟ್ಟೆಯತ್ತ ತೆರಳಿದ್ದಾರೆ. ಚುನಾವಣಾ ಕರ್ತವ್ಯಕ್ಕೆ ತೆರಳುವ ಸಿಬ್ಬಂದಿಗೆ ವೈದ್ಯಕೀಯ ಪರೀಕ್ಷೆ ಕೂಡ ಮಾಡಲಾಗಿದೆ.

ಇದನ್ನೂ ಓದಿ: ದಾವಣಗೆರೆ ದಕ್ಷಿಣ ಕ್ಷೇತ್ರದ ಆಳ ಅಗಲ: ಕಣದಲ್ಲಿ 25 ಅಭ್ಯರ್ಥಿಗಳು; ಮಹಿಳಾ ಮತದಾರರೇ ಹೆಚ್ಚು

ದಾವಣಗೆರೆ ದಕ್ಷಿಣದಲ್ಲಿ ಒಟ್ಟು 284 ಮತಗಟ್ಟೆಗಳ ನಿರ್ಮಾಣ ಮಾಡಲಾಗಿದ್ದು, ಇದರಲ್ಲಿ
76 ಸೂಕ್ಷ್ಮ ಮತಗಟ್ಟೆಗಳೆಂದು ಗುರುತಿಸಲಾಗಿದೆ. 1,489 ಚುನಾವಣಾ ಸಿಬ್ಬಂದಿ ನಿಯೋಜನೆ ಮಾಡಲಾಗಿದೆ. ಮತಗಟ್ಟೆಯ 200 ಮೀಟರ್ ವ್ಯಾಪ್ತಿಯಲ್ಲಿ ನಿಷೇಧಾಜ್ಞೆ ಜಾರಿಮಾಡಲಾಗಿದೆ. ಎಲ್ಲ ಮತಗಟ್ಟೆಯಲ್ಲಿ ವೆಬ್‌ಕಾಸ್ಟಿಂಗ್ ವ್ಯವಸ್ಥೆ ಇದೆ. ಇನ್ನು ಒಟ್ಟು 2,31072 ಮತದಾರರಿದ್ದು, ಮಹಿಳಾ ಮತದಾರರೇ ಹೆಚ್ಚಿದ್ದಾರೆ. ಕಣದಲ್ಲಿ 25 ಅಭ್ಯರ್ಥಿಗಳಿದ್ದಾರೆ. ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಬಿಗಿಭದ್ರತೆ ಕೈಗೊಳ್ಳಲಾಗಿದೆ. ಸಾವಿರಕ್ಕೂ ಹೆಚ್ಚು ಪೊಲೀಸರನ್ನು ಭದ್ರತೆ ನಿಯೋಜಿಸಲಾಗಿದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Source link

Guru-Shukra Transit: ಏಪ್ರಿಲ್ 17 ಅಮಾವಾಸ್ಯೆ; ಗುರು-ಶುಕ್ರ ಸಂಚಾರದಿಂದ 4 ರಾಶಿಗೆ ರಾಜಯೋಗ

ಜ್ಯೋತಿಷ್ಯ ಶಾಸ್ತ್ರದ ಪ್ರಕಾರ, ಮುಂಬರುವ ಏಪ್ರಿಲ್ 17ರ ಅಮಾವಾಸ್ಯೆಯು ಅತ್ಯಂತ ಮಹತ್ವದ ಬದಲಾವಣೆಗಳಿಗೆ ಸಾಕ್ಷಿಯಾಗಲಿದೆ. ಈ ದಿನ ಗುರು ಮತ್ತು ಶುಕ್ರ ಗ್ರಹಗಳು ತಮ್ಮ ಸ್ಥಾನಗಳನ್ನು ಬದಲಾಯಿಸುವುದಲ್ಲದೆ, ಚಂದ್ರನು ಕುಂಭ ರಾಶಿಯಿಂದ ಮೀನ ರಾಶಿಗೆ ಪ್ರವೇಶಿಸಲಿದ್ದಾನೆ. ಈ ಗ್ರಹಗಳ ಸಂಚಾರದ ಫಲವಾಗಿ ನಾಲ್ಕು ಪ್ರಮುಖ ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆಯಲಿದೆ. ಸಾಮಾನ್ಯವಾಗಿ ಅಮಾವಾಸ್ಯೆಯನ್ನು ಸಂಕಷ್ಟದ ಸಮಯವೆಂದು ಭಾವಿಸಿದರೂ, ಈ ಬಾರಿ ರೂಪುಗೊಳ್ಳುತ್ತಿರುವ ಗ್ರಹಗತಿಗಳು ಕೆಲವು ರಾಶಿಗಳಿಗೆ ರಾಜಯೋಗದ ಫಲ ನೀಡಲಿವೆ.

ಈ ವಿಶೇಷ ದಿನದಂದು ನಾಲ್ಕು ಪ್ರಮುಖ ಗ್ರಹಗಳ ಸಂಯೋಗವು ಏಕಕಾಲದಲ್ಲಿ ಸಂಭವಿಸುತ್ತಿದ್ದು, ಇದರಿಂದ ‘ಬುಧಾದಿತ್ಯ ರಾಜಯೋಗ’ ಮತ್ತು ‘ಮಂಗಳಾದಿತ್ಯ ರಾಜಯೋಗ’ಗಳಂತಹ ಪವಿತ್ರ ಯೋಗಗಳು ಸೃಷ್ಟಿಯಾಗುತ್ತಿವೆ. ಈ ಶುಭ ಯೋಗಗಳ ಪ್ರಭಾವದಿಂದಾಗಿ ಕುಂಭ, ಕರ್ಕಾಟಕ, ಧನು ಮತ್ತು ತುಲಾ ರಾಶಿಯವರಿಗೆ ಆರ್ಥಿಕ ಲಾಭದ ಜೊತೆಗೆ ಜೀವನದ ವಿವಿಧ ಕ್ಷೇತ್ರಗಳಲ್ಲಿ ಅಭೂತಪೂರ್ವ ಯಶಸ್ಸು ಸಿಗಲಿದೆ. ವಿಶೇಷವಾಗಿ ವೃತ್ತಿಜೀವನ ಮತ್ತು ಕೌಟುಂಬಿಕ ಜೀವನದಲ್ಲಿ ಇದ್ದ ಅಡೆತಡೆಗಳು ಈ ದಿನದಿಂದ ನಿವಾರಣೆಯಾಗಲಿವೆ.

ಕುಂಭ ರಾಶಿ:

ಕುಂಭ ರಾಶಿಯವರಿಗೆ ಈ ಅಮಾವಾಸ್ಯೆಯು ಅತ್ಯಂತ ಶುಭದಾಯಕವಾಗಿರಲಿದೆ. ನಾಲ್ಕು ಗ್ರಹಗಳ ಸಂಯೋಗದಿಂದಾಗಿ ನಿಮ್ಮ ದಾಂಪತ್ಯ ಜೀವನದಲ್ಲಿ ಸಾಮರಸ್ಯ ಹೆಚ್ಚಾಗಲಿದ್ದು, ಕುಟುಂಬದೊಂದಿಗೆ ಸಂತೋಷದ ಕ್ಷಣಗಳನ್ನು ಕಳೆಯುವಿರಿ. ವಿಶೇಷವಾಗಿ ಮಾಧ್ಯಮ ಮತ್ತು ಸೃಜನಶೀಲ ರಂಗದಲ್ಲಿ ಕಾರ್ಯನಿರ್ವಹಿಸುತ್ತಿರುವವರಿಗೆ ಸಮಾಜದಲ್ಲಿ ಉತ್ತಮ ಮನ್ನಣೆ ಮತ್ತು ಗೌರವ ಪ್ರಾಪ್ತಿಯಾಗಲಿದೆ. ನಿಮ್ಮ ಎಲ್ಲಾ ಪ್ರಯತ್ನಗಳಿಗೆ ಅದೃಷ್ಟದ ಸಂಪೂರ್ಣ ಬೆಂಬಲ ಈ ಅವಧಿಯಲ್ಲಿ ದೊರೆಯಲಿದೆ.

ಕರ್ಕಾಟಕ ರಾಶಿ:

ಕರ್ಕಾಟಕ ರಾಶಿಯ ಜನರಿಗೆ ಇದು ಹೊಸ ಆರಂಭದ ಸಮಯವಾಗಿದೆ. ನೀವು ದೀರ್ಘಕಾಲದಿಂದ ಹೊಸ ವ್ಯವಹಾರ ಅಥವಾ ಉದ್ಯಮವನ್ನು ಪ್ರಾರಂಭಿಸಲು ಯೋಚಿಸುತ್ತಿದ್ದರೆ, ಅದಕ್ಕೆ ಇದು ಅತ್ಯಂತ ಸೂಕ್ತ ಕ್ಷಣ. ಕೆಲಸದ ಸ್ಥಳದಲ್ಲಿ ಎದುರಿಸುತ್ತಿದ್ದ ತೊಂದರೆಗಳು ದೂರವಾಗಿ, ಆರ್ಥಿಕವಾಗಿ ಸದೃಢರಾಗುವ ಅವಕಾಶಗಳಿವೆ. ಮನಸ್ಸಿಗೆ ನೆಮ್ಮದಿ ನೀಡುವಂತಹ ವಾತಾವರಣ ಮನೆಯಲ್ಲಿ ನಿರ್ಮಾಣವಾಗಲಿದ್ದು, ಒಟ್ಟಾರೆಯಾಗಿ ಇದು ನಿಮಗೆ ಲಾಭದಾಯಕ ದಿನಗಳಾಗಿರಲಿವೆ.

ಇದನ್ನೂ ಓದಿ: ಮುಯ್ಯಿ ರೂಪದಲ್ಲಿ ಕೊಡುವ ಹಣಕ್ಕೆ 1ರೂ. ಸೇರಿಸಿ ಕೊಡಬೇಕು ಯಾಕೆ ಗೊತ್ತಾ?

ಧನು ರಾಶಿ:

ಧನು ರಾಶಿಯವರಿಗೆ ಉದ್ಯೋಗ ಮತ್ತು ವೃತ್ತಿಜೀವನದ ದೃಷ್ಟಿಯಿಂದ ಈ ಸಮಯವು ವರದಾನವಾಗಲಿದೆ. ರಾಜಯೋಗದ ಪ್ರಭಾವದಿಂದಾಗಿ ಬಹಳ ದಿನಗಳಿಂದ ನಿರುದ್ಯೋಗಿಗಳಾಗಿರುವವರಿಗೆ ಉತ್ತಮ ಸಂಸ್ಥೆಗಳಲ್ಲಿ ಕೆಲಸ ಸಿಗುವ ಸಾಧ್ಯತೆಗಳು ಹೆಚ್ಚಿವೆ. ವೃತ್ತಿಜೀವನದಲ್ಲಿ ಬಡ್ತಿ ಅಥವಾ ವರ್ಗಾವಣೆಯ ನಿರೀಕ್ಷೆಯಲ್ಲಿದ್ದವರಿಗೆ ಶುಭ ಸುದ್ದಿ ಕೇಳಿಬರಲಿದೆ. ಈ ರಾಶಿಯವರು ಆರ್ಥಿಕವಾಗಿ ಚೇತರಿಸಿಕೊಳ್ಳುವುದಲ್ಲದೆ, ತಮ್ಮ ಹಳೆಯ ಸಾಲಗಳಿಂದಲೂ ಮುಕ್ತಿ ಪಡೆಯುವ ಮಾರ್ಗಗಳು ಗೋಚರಿಸಲಿವೆ.

ತುಲಾ ರಾಶಿ:

ಕೊನೆಯದಾಗಿ, ತುಲಾ ರಾಶಿಯವರಿಗೆ ಈ ಅಮಾವಾಸ್ಯೆಯು ಸಮಾಜದಲ್ಲಿ ಗೌರವ ಮತ್ತು ಪ್ರತಿಷ್ಠೆಯನ್ನು ತಂದುಕೊಡಲಿದೆ. ನೀವು ಕೈಗೊಳ್ಳುವ ಪ್ರತಿಯೊಂದು ನಿರ್ಧಾರವೂ ನಿಮಗೆ ಲಾಭವನ್ನು ತಂದುಕೊಡಲಿದ್ದು, ವೈವಾಹಿಕ ಜೀವನದಲ್ಲಿ ಸುಖ-ಶಾಂತಿ ನೆಲೆಸಲಿದೆ. ಸಮಾಜದ ಪ್ರಭಾವಿ ವ್ಯಕ್ತಿಗಳ ಪರಿಚಯವಾಗಲಿದ್ದು, ಅದು ನಿಮ್ಮ ಮುಂದಿನ ಬೆಳವಣಿಗೆಗೆ ಸಹಕಾರಿಯಾಗಲಿದೆ. ಒಟ್ಟಾರೆಯಾಗಿ, ಈ ಅಮಾವಾಸ್ಯೆಯು ತುಲಾ ರಾಶಿಯವರ ಬದುಕಿನಲ್ಲಿ ಸಕಾರಾತ್ಮಕ ಬದಲಾವಣೆಯ ಗಾಳಿ ಬೀಸಲಿದೆ.

ಮತ್ತಷ್ಟು ಆಧ್ಯಾತ್ಮಿಕ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

ಕನ್ನಡದ ಮೆಚ್ಚಿನ ಸಿನಿಮಾ, ಮೆಚ್ಚಿನ ನಟ ಯಾರೆಂದು ತಿಳಿಸಿದ ಟೊವಿನೊ

ಮಲಯಾಳಂ ಚಿತ್ರರಂಗದ ಸ್ಟಾರ್ ನಟರುಗಳಲ್ಲಿ ಒಬ್ಬರಾಗಿರುವ ಟೊವಿನೊ ಥಾಮಸ್ (Tovino Thomas) ನಿನ್ನೆ (ಏಪರಿಲ್ 07) ಬೆಂಗಳೂರಿಗೆ ಬಂದಿದ್ದರು. ಅವರ ನಟನೆಯ ಹೊಸ ಪ್ಯಾನ್ ಇಂಡಿಯಾ ಸಿನಿಮಾ ‘ಪಲ್ಲಿಚಟ್ಟಂಬಿ’ ಇದೇ ವಾರ ಬಿಡುಗಡೆ ಆಗುತ್ತಿದ್ದು, ಸಿನಿಮಾದ ಪ್ರಚಾರಕ್ಕಾಗಿ ಅವರು ಆಗಮಿಸಿದ್ದರು. ಈ ವೇಳೆ ಟಿವಿ9 ಜೊತೆಗೆ ಮಾತನಾಡಿದ ಟೊವಿನೊ ಥಾಮಸ್, ತಮ್ಮ ಸಿನಿಮಾದ ಜೊತೆಗೆ ಕನ್ನಡ ಸಿನಿಮಾಗಳ ಬಗ್ಗೆಯೂ ಮಾತನಾಡಿದ್ದಾರೆ. ತಮಗೆ ಇಷ್ಟವಾದ ಕನ್ನಡ ಸಿನಿಮಾ, ಇಷ್ಟವಾದ ಕನ್ನಡದ ನಟರು, ‘ಟಾಕ್ಸಿಕ್’ ಸಿನಿಮಾನಲ್ಲಿ ನಟನೆ ಇನ್ನಿತರೆ ವಿಷಯಗಳ ಬಗ್ಗೆ ಅವರು ಮಾತನಾಡಿದ್ದಾರೆ. ವಿಡಿಯೋ ನೋಡಿ…

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Source link

DC vs GT IPL 2026 Live Score: ಗೆಲುವಿನ ಖಾತೆ ತೆರೆಯುತ್ತಾ ಗುಜರಾತ್? – Kannada News | Delhi Capitals vs Gujarat Titans IPL 2026 Live Cricket Score DC vs GT Match on 8th April latest news in Kannada

ಐಪಿಎಲ್ 2026 ರ 14 ನೇ ಪಂದ್ಯ ಗುಜರಾತ್ ಟೈಟಾನ್ಸ್ ಮತ್ತು ಡೆಲ್ಲಿ ಕ್ಯಾಪಿಟಲ್ಸ್ ನಡುವೆ ನಡೆಯಲಿದೆ. ಡೆಲ್ಲಿ ಕ್ಯಾಪಿಟಲ್ಸ್ ತಂಡವು ತನ್ನ ತವರು ಮೈದಾನವಾದ ಅರುಣ್ ಜೇಟ್ಲಿ ಕ್ರೀಡಾಂಗಣದಲ್ಲಿ ಆಡಲಿದ್ದು, ಹ್ಯಾಟ್ರಿಕ್ ಗೆಲುವಿನ ನಿರೀಕ್ಷೆಯಲ್ಲಿದೆ. ಇತ್ತ ಗುಜರಾತ್ ಟೈಟಾನ್ಸ್ ತಂಡವು ತನ್ನ ಹಿಂದಿನ ಎರಡೂ ಪಂದ್ಯಗಳಲ್ಲಿ ಸೋತಿದ್ದು ತನ್ನ ಮೊದಲ ಗೆಲುವನ್ನು ಎದುರು ನೋಡುತ್ತಿದೆ.

Source link

IPL 2026: ಸಿಎಸ್​ಕೆಗೆ ತಪ್ಪದ ಸಂಕಷ್ಟ; ಧೋನಿ ಆಗಮನ ಮತ್ತಷ್ಟು ವಿಳಂಬ

Source link

ಮತ್ತೆ ಬಾಲಿವುಡ್​​ಗೆ ಹಾರಿದ ಧನುಶ್, ಆನಂದ್ ಜೊತೆ ನಾಲ್ಕನೇ ಸಿನಿಮಾ

ಧನುಶ್ (Dhanush), ತಮಿಳು ಚಿತ್ರರಂಗದ ಸ್ಟಾರ್ ನಟ, ತೆಲುಗು ರಾಜ್ಯಗಳಲ್ಲಿಯೂ ಸಾಕಷ್ಟು ಅಭಿಮಾನಿಗಳನ್ನು ಹೊಂದಿದ್ದಾರೆ. ಧನುಶ್ ಅವರು ದಕ್ಷಿಣದಲ್ಲಿ ಮಾತ್ರವಲ್ಲ ಹಿಂದಿ ಭಾಷಿಕ ಪ್ರದೇಶದಲ್ಲೂ ದೊಡ್ಡ ಅಭಿಮಾನಿ ವರ್ಗ ಹೊಂದಿದ್ದಾರೆ. ಅದಕ್ಕೆ ಮುಖ್ಯ ಕಾರಣ ಅವರ ನಟನೆಯ ‘ರಾಂಝನಾ’ ಸಿನಿಮಾ. 2013 ರಲ್ಲಿ ಬಿಡುಗಡೆ ಆಗಿದ್ದ ಹಿಂದಿ ಸಿನಿಮಾ ‘ರಾಂಝನಾ’ ಹಿಂದಿಯ ಕಲ್ಟ್ ಕ್ಲಾಸಿಕ್​​ಗಳಲ್ಲಿ ಒಂದು. ಅದಾದ ಬಳಿಕ ಸತತವಾಗಿ ಧನುಶ್ ಹಿಂದಿ ಸಿನಿಮಾಗಳಲ್ಲಿ ನಟಿಸುತ್ತಲೇ ಬರುತ್ತಿದ್ದಾರೆ.

ಧನುಶ್ ಮತ್ತು ಬಾಲಿವುಡ್ ನಿರ್ದೇಶಕ ಆನಂದ್ ಎಲ್ ರಾಯ್ ಅವರದ್ದು ಜೋಡಿಯೇ ಆಗಿಬಿಟ್ಟಿದೆ. ಇತ್ತೀಚೆಗಷ್ಟೆ ಧನುಶ್, ಕೃತಿ ಸನೋನ್ ನಟಿಸಿದ್ದ ‘ತೇರೆ ಇಷ್ಕ್ ಮೇ’ ಸಿನಿಮಾವನ್ನು ಆನಂದ್ ಎಲ್ ರಾಯ್ ನಿರ್ದೇಶಿಸಿದ್ದು, ಸಿನಿಮಾ ಸಾಧಾರಣ ಹಿಟ್ ಅಷ್ಟೇ ಆಯ್ತಾದರೂ ಸಿನಿಮಾದ ಬಗ್ಗೆ ಒಳ್ಳೆಯ ಅಭಿಪ್ರಾಯಗಳೇ ವ್ಯಕ್ತವಾಗಿದ್ದವು. ಇದೀಗ ಧನುಶ್ ಅವರು ಮತ್ತೊಮ್ಮೆ ಹಿಂದಿ ಸಿನಿಮಾನಲ್ಲಿ ನಟಿಸಲು ಸಜ್ಜಾಗಿದ್ದಾರೆ. ಮತ್ತೊಮ್ಮೆ ಆನಂದ್ ಅವರೇ ಧನುಶ್ ಅವರ ಸಿನಿಮಾ ನಿರ್ದೇಶಿಸುತ್ತಿದ್ದಾರೆ.

ಈ ವರೆಗೆ ಆನಂದ್ ಅವರು, ಧನುಶ್ ಅನ್ನು ಸ್ಟ್ರೀಟ ಲವ್ವರ್, ಠಪೋರಿ ರೀತಿಯ ಪಾತ್ರಗಳಲ್ಲೇ ತೋರಿಸಿದ್ದರು. ಆದರೆ ಮೊದಲ ಬಾರಿಗೆ ಧನುಶ್ ಅವರಿಗಾಗಿ ಐತಿಹಾಸಿಕ ಕತೆಯನ್ನು ಆನಂದ್ ಅವರು ಹೆಣೆದಿದ್ದಾರೆ. ಆನಂದ್ ಅವರು ಪೀರಿಯಡ್ ಲವ್ ಸ್ಟೋರಿ ಒಂದನ್ನು ಹೆಣೆದಿದ್ದು, ಸಿನಿಮಾನಲ್ಲಿ ಧನುಶ್ ಜೊತೆಗೆ ಕೃತಿ ಸನೋನ್ ನಾಯಕಿಯಾಗಿ ನಟಿಸಲಿದ್ದಾರೆ. ‘ತೇರೆ ಇಷ್ಕ್ ಮೇ’ ಸಿನಿಮಾನಲ್ಲಿಯೂ ಕೃತಿ ಸನೋನ್ ನಾಯಕಿ ಆಗಿದ್ದರು. ಧನುಶ್ ಅಂಥಹಾ ನಟನ ಮುಂದೆ ಸಹ ಅದ್ಭುತವಾಗಿ ನಟಿಸಿ ಸೈ ಎನಿಸಿಕೊಂಡಿದ್ದರು. ಹಾಗಾಗಿ ಇದೇ ಜೋಡಿಯನ್ನು ಆನಂದ್ ಅವರು ತಮ್ಮ ಹೊಸ ಸಿನಿಮಾಕ್ಕೂ ಮುಂದುವರೆಸಿದ್ದಾರೆ.

ಇದನ್ನೂ ಓದಿ:ಒಟ್ಟಾಗಿ ಹೊಸ ಪ್ರಾಜೆಕ್ಟ್ ಘೋಷಣೆ ಮಾಡಿದ ಧನುಶ್ ಹಾಗೂ ಸ್ಪಂದನಾ

‘ರಾಂಝನಾ’, ‘ಅತರಂಗಿ ರೇ’, ‘ತೇರೆ ಇಷ್ಕ್ ಮೇ’ ಸಿನಿಮಾಗಳು ಧನುಶ್ ಮತ್ತು ಆನಂದ್ ಎಲ್ ರಾಯ್ ಅವರ ಕಾಂಬಿನೇಷನ್​​ನಲ್ಲಿ ಈ ವರೆಗೆ ಮೂಡಿ ಬಂದಿದ್ದು, ಈ ಮೂರು ಸಿನಿಮಾಗಳು ಅದ್ಭುತ ಪ್ರೇಮಕತೆಯನ್ನು ಒಳಗೊಂಡಿವೆ. ಇದೀಗ ಮೊದಲ ಬಾರಿಗೆ ಆನಂದ್ ಅವರು ಐತಿಹಾಸಿಕ ಹಿನ್ನೆಲೆಯುಳ್ಳ ಪ್ರೇಮಕತೆ ನಿರ್ದೇಶಿಸಲು ಕೈ ಹಾಕಿದ್ದಾರೆ. ಧನುಶ್ ಅವರೂ ಸಹ ಐತಿಹಾಸಿಕ ರೀತಿಯ ಪಾತ್ರಗಳಲ್ಲಿ ನಟಿಸಿರುವುದು ಕಡಿಮೆಯೇ. ಹಾಗಾಗಿ ಸಹಜವಾಗಿಯೇ ಈ ಸಿನಿಮಾದ ಬಗ್ಗೆ ಸಿನಿಮಾ ಪ್ರೇಮಿಗಳಿಗೆ ಕುತೂಹಲ ಇದೆ.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Source link

ಬೀಡಿ, ಸಿಗರೇಟ್ ವಿಚಾರಕ್ಕೆ ಜೈಲಲ್ಲೇ ಡಿಶುಂ ಡಿಶುಂ: ಸಿಬ್ಬಂದಿ ಮೇಲೆ ಕೈದಿಗಳ ಅಟ್ಯಾಕ್​

ಬಳ್ಳಾರಿ, ಏಪ್ರಿಲ್​​ 08: ಜೈಲು ಎಂದರೆ ಮಾಡಿದ ತಪ್ಪಿಗೆ ಅಪರಾಧಿಗಳು ಶಿಕ್ಷೆಯ ಅವಧಿಯನ್ನು ಕಳೆಯಬೇಕಾದ ಮತ್ತು ತಮ್ಮನ್ನು ತಾವು ತಿದ್ದುಕೊಳ್ಳಬೇಕಾದ ಜಾಗ. ಆದರೆ ಪ್ರಸ್ತುತವಾಗಿ ರಾಜ್ಯದ ಜೈಲುಗಳು ಇವಕ್ಕೆ ತದ್ವಿರುದ್ಧವಾಗಿವೆ. ಮನಃ ಪರಿವರ್ತನೆ ಮಾಡಿಕೊಳ್ಳುವ ಬದಲು ಕೈದಿಗಳು ಹೊರಗಿನಗಿಂತಲೂ ಬಂಧೀಖಾನೆಗಳಲ್ಲಿ ಐಷಾರಾಮಿ ಜೀವನ ನಡೆಸುತ್ತಿದ್ದಾರೆ. ಇರೋದು ಕಾರಗೃಹದಲ್ಲಿ ಅನ್ನೋದು ಒಂದನ್ನು ಹೊರತು ಪಡಿಸಿದರೆ ದುಡ್ಡು ಕೊಟ್ಟರೆ ಏನು ಬೇಕಾದರೂ ಇಲ್ಲಿ ಸಿಗುತ್ತೆ ಎಂಬ ಸ್ಥಿತಿ ಇದೆ. ರಾಜಾತಿಥ್ಯ ಪ್ರಕರಣಗಳ ಬಗ್ಗೆ ಸಾಲು ಸಾಲು ವರದಿಯಾಗುತ್ತಿದ್ದರೂ, ಕೈದಿಗಳ ಪುಂಡಾಟಕ್ಕೆ ಮಾತ್ರ ಇನ್ನೂ ಬ್ರೇಕ್​​ ಬಿದ್ದಿಲ್ಲ.

ಇನ್ನು ಜೈಲು ಸಿಬ್ಬಂದಿಗೆ ಹೆದರಬೇಕಿದ್ದ ಕೈದಿಗಳು ಅವರನ್ನೇ ಹೆದರಿಸುತ್ತಿರೋದು, ಇಲಾಖೆಯ ವೈಫಲ್ಯಕ್ಕೆ ಹಿಡಿದ ಕೈಗನ್ನಡಿಯೇ ಸರಿ. ಮೊನ್ನೆ ಮೊನ್ನೆಯಷ್ಟೇ ಮೊಬೈಲ್​​ ತಪಾಸಣೆಗೆ ಹೋದ ಸಿಬ್ಬಂದಿಗೆ ಪರಪ್ಪನ ಅಗ್ರಹಾರದ ಕೈದಿಗಳು ಬೆದರಿಕೆ ಹಾಕಿರುವ ಘಟನೆ ಮಾಸುವ ಮುನ್ನವೇ ಇತ್ತ ಬಳ್ಳಾರಿಯಲ್ಲಿಯೂ ಇಂತಹುದೇ ಘಟನೆ ನಡೆದಿದೆ. ಸೆಂಟ್ರಲ್ ಜೈಲಿನಲ್ಲಿ ಬೀಡಿ, ಸಿಗರೇಟ್ ನೀಡದಿರುವ ವಿಚಾರಕ್ಕೆ ಸಿಬ್ಬಂದಿ ಮೇಲೆಯೇ ಕೈದಿಗಳು ಹಲ್ಲೆ ನಡೆಸಿದ್ದಾರೆ. ಜೈಲರ್ ಅಶೋಕ ಹೊಸಮನಿ ಜೊತೆ ಮಾತಿನಚಕಮಕಿ ನಡೆಸಿದ ಕೈದಿಗಳು, ವಾಗ್ವಾದದ ನಂತರ ದಾಳಿ ನಡೆಸಿದ್ದಾರೆ. ಅಲ್ತಾಫ್, ರಶೀದ್ ಸೇರಿದಂತೆ ಐವರು ಕೈದಿಗಳಿಂದ ಅಟ್ಯಾಕ್​​ ನಡೆದಿದ್ದು, ಈ ಸಂಬಂಧ ಬಳ್ಳಾರಿಯ ಬ್ರೂಸ್​ಪೇಟೆ ಪೊಲೀಸ್ ಠಾಣೆಯಲ್ಲಿ ಕೇಸ್ ದಾಖಲಾಗಿದೆ.

ಇದನ್ನೂ ಓದಿ: ಕೆಐಎಡಿಬಿ ಕಚೇರಿಯಲ್ಲಿ 16 ಕೋಟಿ ಲೂಟಿ! ಗುತ್ತಿಗೆ ನೌಕರ ಸೇರಿ ಏಳು ಮಂದಿ ಮೇಲೆ ಎಫ್ಐಆರ್

ಕಾರವಾರ ಜೈಲಿನಲ್ಲೂ ನಡೆದಿತ್ತು ಇಂತಹುದ್ದೇ ಘಟನೆ

ತಂಬಾಕು ಮತ್ತು ಇನ್ನಿತರೆ ಮದಕ ವಸ್ತುಗಳ ಬಳಕೆಗೆ ಆಸ್ಪದ ನೀಡದ ಕಾರಣಕ್ಕೆ ಮೂವರು ಸಿಬ್ಬಂದಿ ಮತ್ತು ಜೈಲರ್ ಮೇಲೆ ಕೈದಿಗಳು ಹಲ್ಲೆಗೆ ಮುಂದಾದ ಘಟನೆ ಕೆಲ ತಿಂಗಳುಗಳ ಹಿಂದೆಯಷ್ಟೇ ಕಾರವಾರ ಜೈಲಿನಲ್ಲಿಯೂ ನಡೆದಿತ್ತು. ಮಂಗಳೂರು ಮೂಲದ ಮೊಹಮ್ಮದ್ ಅಬ್ದುಲ್, ಫಯಾನ್ ಹಾಗೂ ಕೌಶಿಕ್ ನಿಹಾಲ್ ಎಂಬವರು ಅಟ್ಯಾಕ್​​ಗೆ ಯತ್ನಿಸಿದ್ದರು. ವಿಷಯ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಧಾವಿಸಿದ್ದ ಹೆಚ್ಚಿನ ಪೊಲೀಸರು ಪರಿಸ್ಥಿತಿ ನಿಯಂತ್ರಣಕ್ಕೆ ತಂದಿದ್ದರು.

ಮತ್ತಷ್ಟು ಸುದ್ದಿ ಓದಲು ಇಲ್ಲಿ ಕ್ಲಿಕ್​​ ಮಾಡಿ.

Source link

ಬೇರೆಯವರ ಪ್ಯಾನ್ ಕಾರ್ಡ್ ದಾಖಲೆ ಬಳಸಿ ಸಾಲ ಸೂರೆಗೊಂಡ ವಂಚಕರು; ನಿಮ್ಮ ಪ್ಯಾನ್ ದುರ್ಬಳಕೆ ಗುರುತಿಸುವುದು ಹೇಗೆ?

ಬೆಂಗಳೂರು, ಏಪ್ರಿಲ್ 8: ಆಧಾರ್, ಪ್ಯಾನ್ ಇತ್ಯಾದಿ ವೈಯಕ್ತಿಕ ದಾಖಲೆಗಳನ್ನು ಎಲ್ಲೆಂದರಲ್ಲಿ ನೀಡಬಾರದು ಎಂದು ಸರ್ಕಾರ ಪದೇ ಪದೇ ಹೇಳುತ್ತಿರುತ್ತದೆ. ವಂಚಕರು ಈ ದಾಖಲೆಗಳನ್ನು ದುರ್ಬಳಕೆ ಮಾಡಿಕೊಳ್ಳುವ ಸಾಧ್ಯತೆ ಇರುತ್ತದೆ. ಇತ್ತೀಚೆಗೆ ಸೋಷಿಯಲ್ ಮೀಡಿಯಾದಲ್ಲಿ ಬಹಿರಂಗವಾದ ಘಟನೆಯೊಂದು ಈ ಎಚ್ಚರಿಕೆಯನ್ನು ಪುಷ್ಟೀಕರಿಸುತ್ತದೆ. ಒಬ್ಬ ವ್ಯಕ್ತಿಯ ಪ್ಯಾನ್ ಕಾರ್ಡ್ (PAN) ಅನ್ನು ಪಡೆದು, ದುರುಳರು 22 ಲಕ್ಷ ರೂ ಮೊತ್ತದ ಐದು ವಿವಿಧಗಳನ್ನು ಮಾಡಿದ್ದಾರೆ. ಉತ್ತಮವಾಗಿದ್ದ ಆ ವ್ಯಕ್ತಿಯ ಕ್ರೆಡಿಟ್ ಸ್ಕೋರ್ ಒಮ್ಮೆಗೇ ಕುಸಿದಿದೆ. ಈ ಘಟನೆಯನ್ನು ಟ್ಯಾಕ್ಸ್ ಅಡ್ವೈಸರಿ ಸಂಸ್ಥೆಯಾದ ಟ್ಯಾಕ್ಸ್​ಬಡ್ಡಿ ಎಕ್ಸ್​ನಲ್ಲಿ ಪೋಸ್ಟ್ ಮಾಡಿ ವಿವರಿಸಿದೆ.

ಪ್ಯಾನ್ ದುರ್ಬಳಕೆ ಪತ್ತೆ ಮಾಡುವುದು ಹೇಗೆ?

ನಿಯಮಿತವಾಗಿ ನೀವು ಕ್ರೆಡಿಟ್ ರಿಪೋರ್ಟ್ ಪರಿಶೀಲಿಸುವ ಅಭ್ಯಾಸ ರೂಢಿಸಿಕೊಳ್ಳಿ. ಕ್ರೆಡಿಟ್ ಬ್ಯೂರೋಗಳಾದ ಸಿಬಿಲ್, ಎಕ್ಸ್​ಪೀರಿಯನ್, ಈಕ್ವಿಫ್ಯಾಕಸ್ ಅಥವಾ ಸಿಆರ್​ಐಎಫ್, ಯಾವುದಾದರೂ ಒಂದರಲ್ಲಿ ನೀವು ಕ್ರೆಡಿಟ್ ಸ್ಕೋರ್ ಮತ್ತು ರಿಪೋರ್ಟ್ ಪಡೆಯಬಹುದು. ನಿಮ್ಮ ಪ್ಯಾನ್ ಮತ್ತು ಮೊಬೈಲ್ ನಂಬರ್ ಇದ್ದರೆ ಸಾಕು.

ಇದನ್ನೂ ಓದಿ: ಸೀಸ್​ಫೈರ್ ಮಾತ್ರವಲ್ಲ, ಭಾರತದ ಷೇರು ಮಾರುಕಟ್ಟೆ ಗರಿಗೆದರಲು ಇಲ್ಲಿವೆ 7 ಕಾರಣಗಳು

ಕ್ರೆಡಿಟ್ ಸ್ಕೋರ್ ಅನ್ನು ಎಷ್ಟು ಬಾರಿ ಬೇಕಾದರೂ ನೋಡಬಹುದು. ಕ್ರೆಡಿಟ್ ರಿಪೋರ್ಟ್ ಅನ್ನು ವರ್ಷಕ್ಕೆ ಒಮ್ಮೆ ಉಚಿತವಾಗಿ ಪಡೆಯಬಹುದು. ಹೆಚ್ಚು ಬೇಕೆಂದರೆ ಒಂದಿಷ್ಟು ಶುಲ್ಕ ಕೊಡಬೇಕು.

ದುರ್ಬಳಕೆ ಪತ್ತೆ ಸಾಧ್ಯತೆ

ನೀವು ಕ್ರೆಡಿಟ್ ಸ್ಕೋರ್ ಮೊದಲು ಪರಿಶೀಲಿಸಬಹುದು. ಸ್ಕೋರ್ ಅಸಹಜವಾಗಿ ವ್ಯತ್ಯಾಸಗೊಂಡಿದ್ದರೆ ಅಲರ್ಟ್ ಆಗಿರಿ. ಕೂಡಲೇ ಕ್ರೆಡಿಟ್ ರಿಪೋರ್ಟ್ ಪಡೆಯಿರಿ. ಈ ರಿಪೋರ್ಟ್​ನಲ್ಲಿ ನಿಮ್ಮ ಪ್ಯಾನ್ ಅಡಿಯಲ್ಲಿ ದಾಖಲಾದ ಎಲ್ಲಾ ಲೋನ್ ದಾಖಲೆ, ಕ್ರೆಡಿಟ್ ಕಾರ್ಡ್ ದಾಖಲೆಗಳ ಮಾಹಿತಿ ಇರುತ್ತದೆ. ನೀವು ಭಾಗಿಯಾಗಿರದ ಚಟುವಟಿಕೆ ಯಾವುದಾದರೂ ಇದ್ದರೆ ತತ್​ಕ್ಷಣವೇ ಕ್ರೆಡಿಟ್ ಬ್ಯೂರೋಗೆ ದೂರು ಕೊಡಿ.

ನಿಮ್ಮ ಪ್ಯಾನ್ ಬಳಸಿ ಯಾರಾದರೂ ಸಾಲ ಪಡೆದಿದ್ದರೆ, ಆ ಬ್ಯಾಂಕ್​ಗೆ ಹೋಗಿಯೂ ದೂರು ಕೊಡಬಹುದು. ಇದರಿಂದ ನಿಮ್ಮದಲ್ಲದ ತಪ್ಪಿಗೆ ನೀವು ಬಲಿಯಾಗುವುದನ್ನು ತಪ್ಪಿಸಬಹುದು.

ಇದನ್ನೂ ಓದಿ: ಹಾರ್ಮುಜ್ ಜಲಸಂಧಿಯಲ್ಲಿ ಹಡಗುಳಿಂದ ಟೋಲ್ ವಸೂಲಿಗೆ ಇರಾನ್ ಯೋಜನೆ; ಅಂತಾರಾಷ್ಟ್ರೀಯ ನಿಯಮಗಳು ಏನು ಹೇಳುತ್ತವೆ?

ಪ್ಯಾನ್ ದುರ್ಬಳಕೆ ಮಾಡಿದರೆ ನಿಮಗೆ ಆಗುವ ಹಾನಿಗಳು…

ಪ್ಯಾನ್ ದುರ್ಬಳಕೆ ಮಾಡಿಕೊಳ್ಳುವವರು ಉದ್ದೇಶಪೂರ್ವಕವಾಗಿ ವಂಚನೆ ಮಾಡುವಂಥವರೇ ಆಗಿರುತ್ತಾರೆ. ಸಾಲ ಪಡೆದು ಮರುಪಾವತಿಸದೇ ಹೋಗಬಹುದು. ಆಗ ಪ್ಯಾನ್ ನಂಬರ್ ನಿಮ್ಮದಾಗಿರುವುದರಿಂದ ಬ್ಯಾಂಕ್​ನವರು ನಿಮ್ಮ ಬೆನ್ನು ಬೀಳಬಹುದು. ಕ್ರೆಡಿಟ್ ಏಜೆನ್ಸಿಗಳು ನಿಮ್ಮ ಸ್ಕೋರ್ ಅನ್ನು ತಗ್ಗಿಸಬಹುದು.

ಇನ್ನಷ್ಟು ವಾಣಿಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

Source link

ಹಳೆ ಕೇಸ್​​ನಲ್ಲಿ ವಾಟಾಳ್ ನಾಗರಾಜ್ ಅರೆಸ್ಟ್, ಆಟೋದಲ್ಲಿ ಕೋರ್ಟ್​​ಗೆ ಕರೆದೊಯ್ದ ಪೊಲೀಸ್ರು

ಬೆಂಗಳೂರು, (ಏಪ್ರಿಲ್ 08): ಕನ್ನಡಪರ ಹೋರಾಟಗಾರ ವಾಟಾಳ್ ನಾಗರಾಜ್ (Kannada Activist Vatal Nagaraj )  ಅವರನ್ನು ಬೆಂಗಳೂರಿನ ಸವೇಶ್ವರನಗರ ಪೊಲೀಸರು ಬಂಧಿಸಿದ್ದಾರೆ.  42ನೇ ಎಸಿಎಂಎಂ ನ್ಯಾಯಾಲಯ ಅರೆಸ್ಟ್ ವಾರಂಟ್ ಹೊರಡಿಸಿದ ಹಿನ್ನೆಲೆಯಲ್ಲಿ ಇಂದು (ಏಪ್ರಿಲ್ 08) ವಾಟಾಳ್ ನಾಗರಾಜ್ ಅವರನ್ನ ಬಂಧಿಸಿ ಆಟೋದಲ್ಲಿ ಕೋರ್ಟ್​​ಗೆ ಕರೆದುಕೊಂಡು ಹೋಗಿದ್ದಾರೆ. 2021ರಲ್ಲಿ ಕೊರೊನಾ ಸಂದರ್ಭದಲ್ಲಿ ಎಸ್‌ಎಸ್‌ಎಲ್‌ಸಿ ಪರೀಕ್ಷೆಗಳನ್ನು ರದ್ದುಪಡಿಸಿ ವಿದ್ಯಾರ್ಥಿಗಳನ್ನು ಪಾಸ್ ಮಾಡಬೇಕೆಂದು ಆಗಿನ ಶಿಕ್ಷಣ ಸಚಿವ ಸುರೇಶ್ ಕುಮಾರ್ ಅವರ ನಿವಾಸದ ಮುಂದೆ ವಾಟಳ್ ನಾಗರಾಜ್ ಪ್ರತಿಭಟನೆ ನಡೆಸಿದ್ದರು, ಈ ಸಂಬಂಧ ದೂರು ದಾಖಲಾಗಿತ್ತು. ಆದ್ರೆ,ಈ ಪ್ರಕರಣದಲ್ಲಿ ಅವರು ನ್ಯಾಯಾಲಯದ ವಿಚಾರಣೆಗೆ ಹಾಜರಾಗದೇ ಇರುವುದರಿಂದ ಅರೆಸ್ಟ್ ವಾರಂಟ್ ಜಾರಿ ಮಾಡಿದ್ದು, ಅದರಂತೆ ಪೊಲೀಸರು ವಾಟಾಳ್ ನಾಗರಾಜ್ ಅವರನ್ನು ಬಂಧಿಸಿದ್ದಾರೆ.

ಕರ್ನಾಟಕದ ಮತ್ತಷ್ಟು ಸುದ್ದಿ ಓದಲು ಇಲ್ಲಿ ಕ್ಲಿಕ್ ಮಾಡಿ.

Source link

ಸಖತ್ ಫೈಟ್ ಮಾಡ್ತಾರೆ ರಾಮ್ ಗೋಪಾಲ್ ವರ್ಮಾ: ವಿಡಿಯೋ

ರಾಮ್ ಗೋಪಾಲ್ ವರ್ಮಾ (Ram Gopal Varma) ಇತ್ತೀಚೆಗೆ ತಮ್ಮ ಸಿನಿಮಾಗಳಿಗಿಂತಲೂ ತಮ್ಮ ವಿವಾದಾತ್ಮಕ ಹೇಳಿಕೆಗಳು, ಟ್ವೀಟುಗಳಿಂದಲೇ ಹೆಚ್ಚು ಜನಪ್ರಿಯರು. ಇತ್ತೀಚೆಗಷ್ಟೆ ತಾವು ಇನ್ನು ಮುಂದೆ ತೆಲುಗು ಸಿನಿಮಾ ಮಾಡುವುದಿಲ್ಲ, ಹಿಂದಿ ಸಿನಿಮಾ ಮಾಡುವುದಾಗಿ ಘೋಷಿಸಿ, ವಾಸ್ತವ್ಯವನ್ನು ಮುಂಬೈಗೆ ಶಿಫ್ಟ್ ಸಹ ಮಾಡಿದ್ದಾಗಿ ಹೇಳಿಕೊಂಡಿದ್ದಾರೆ. ಇದೀಗ ರಾಮ್ ಗೋಪಾಲ್ ವರ್ಮಾ ವಿಡಿಯೋ ಒಂದನ್ನು ಹಂಚಿಕೊಂಡಿದ್ದು, ವಿಡಿಯೋನಲ್ಲಿ ವರ್ಮಾ ಸಖತ್ ಆಗಿ ಫೈಟ್ ಮಾಡುತ್ತಿದ್ದಾರೆ. ಅವರ ಆಕ್ಷನ್​ ನೆಟ್ಟಿಗರನ್ನು ಅವಾಕ್ಕಾಗಿಸಿದೆ. ವಿಡಿಯೋ ನೋಡಿ…

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

 

Source link

Exit mobile version