Headlines

ಮಹಿಳಾ ಮೀಸಲಾತಿ ಮಸೂದೆಗೆ ಸೋಲು; ಇಂದು ರಾತ್ರಿ 8.30ಕ್ಕೆ ದೇಶವನ್ನು ಉದ್ದೇಶಿಸಿ ಪ್ರಧಾನಿ ಮೋದಿ ಭಾಷಣ – Kannada News | PM Modi will address the nation tonight at 8.30 after womens reservation bill defeat in Lok Sabha

ನವದೆಹಲಿ, ಏಪ್ರಿಲ್ 18: ದೇಶದಲ್ಲಿ ಮಹಿಳಾ ಮೀಸಲಾತಿ (Women’s Quota Bill) ಜಾರಿಗೆ ತರುವ ಮಸೂದೆ ಲೋಕಸಭೆಯಲ್ಲಿ ಸೋತ ಹಿನ್ನೆಲೆಯಲ್ಲಿ ಇಂದು ರಾತ್ರಿ 8.30ಕ್ಕೆ ಪ್ರಧಾನಿ ನರೇಂದ್ರ ಮೋದಿ (PM Narendra Modi) ದೇಶವನ್ನು ಉದ್ದೇಶಿಸಿ ಮಾತನಾಡಲಿದ್ದಾರೆ. ಮಹಿಳಾ ಮೀಸಲಾತಿ ಅನುಷ್ಠಾನದ ವಿಷಯ ಮತ್ತು ವಿರೋಧ ಪಕ್ಷಗಳು ಶುಕ್ರವಾರ ಸಂವಿಧಾನ (131ನೇ ತಿದ್ದುಪಡಿ) ಮಸೂದೆಯ ವಿರುದ್ಧ ಮತ ಚಲಾಯಿಸಿದ ಹಿನ್ನೆಲೆಯಲ್ಲಿ ಸಂಸತ್ತಿನಲ್ಲಿ ನಡೆದ ಬೆಳವಣಿಗೆಗಳ ಬಗ್ಗೆ ಪ್ರಧಾನಿ ಮೋದಿ ಇಂದು ರಾತ್ರಿ ಚರ್ಚಿಸುವ ನಿರೀಕ್ಷೆಯಿದೆ. 2011ರ ಜನಗಣತಿಯ…

Read More

ಲಿವರ್ ಡಿಟಾಕ್ಸ್ ಡ್ರಿಂಕ್ಸ್: ನಿಜವಾಗಿಯೂ ಪ್ರಯೋಜನಕಾರಿಯೇ ಅಥವಾ ಕೇವಲ ಟ್ರೆಂಡಿ ಪಾನೀಯವೇ? – Kannada News | Do Liver Cleanse Drinks Work? Doctors Explain the Truth

ಇತ್ತೀಚಿನ ವರ್ಷಗಳಲ್ಲಿ ಲಿವರ್ ಡಿಟಾಕ್ಸ್ ಡ್ರಿಂಕ್ಸ್‌ಗಳು (Liver Detox Drinks) ಆರೋಗ್ಯಕಾಡುವ ನಿಟ್ಟಿನಲ್ಲಿ ಹೊಸ ಟ್ರೆಂಡ್ ಸೃಷ್ಠಿ ಮಾಡಿದೆ. ಸಾಮಾಜಿಕ ಜಾಲತಾಣಗಳಲ್ಲಿ ಹಲವರು ಈ ಪಾನೀಯಗಳು ದೇಹದಲ್ಲಿನ ವಿಷಕಾರಿ ಅಂಶಗಳನ್ನು ಹೊರಹಾಕಿ ಲಿವರ್‌ನ್ನು ಶುದ್ಧಗೊಳಿಸುತ್ತವೆ ಎಂದು ಹೇಳುತ್ತಿದ್ದಾರೆ. ಈ ಡ್ರಿಂಕ್ಸ್‌ನಲ್ಲಿರುವ ನಿಂಬೆ, ಶುಂಠಿ, ಅರಿಶಿನ ಮತ್ತು ಜೇನು ಮುಂತಾದ ನೈಸರ್ಗಿಕ ಪದಾರ್ಥಗಳು ಆರೋಗ್ಯಕ್ಕೆ ಬಹಳ ಒಳ್ಳೆಯದು. ಆದರೂ ಕೂಡ ಇದರಿಂದ ಲಿವರ್‌ (Liver) ಸಂಪೂರ್ಣವಾಗಿ ಶುದ್ಧಗೊಳ್ಳುತ್ತದೆಯೇ, ಇಲ್ಲವೇ ಎಂಬುದು ವೈಜ್ಞಾನಿಕವಾಗಿ ಸಾಬೀತಾಗಿಲ್ಲ. ಹಾಗಾಗಿ ಈ ಬಗ್ಗೆ ತಜ್ಞರ…

Read More

ಸಿದ್ದರಾಮಯ್ಯ ಟಗರು ಇದ್ದಂತೆ; ಯಾವಾಗ ಗುದ್ದಬೇಕೋ ಗುದ್ದುತ್ತದೆ: ಸಚಿವ ಮಹದೇವಪ್ಪ – Kannada News | Minister H.C. Mahadevappa Defends CM Siddaramaiah: A Strong Leader, Not Weak

ಬೆಂಗಳೂರು, ಏಪ್ರಿಲ್​ 18: ಸಿಎಂ ಯಾವಾಗ ದುರ್ಬಲ ಆಗಿದ್ದಾರೆ. ಯಾವಾಗಲೂ ಗಟ್ಟಿನೇ ಅವರು. ಟಗರು ಟಗರೆ ಅಲ್ವಾ? ಯಾವಾಗ ಗುದ್ದಬೇಕೋ ಗುದ್ದುತ್ತದೆ ಎಂದು ಸಿಎಂ ಪರ ಬ್ಯಾಟ್ ಬೀಸಿದ್ದಾರೆ. ಸಿಎಂ ಅಸಹಾಯಕರು ಎಂಬ ಕೆ.ಎನ್.ರಾಜಣ್ಣ ಹೇಳಿಕೆ ವಿಚಾರವಾಗಿ ಮಾತನಾಡಿದ ಅವರು, ಕಾಂಗ್ರೆಸ್ ಪಕ್ಷಕ್ಕೆ ಮುಸ್ಲಿಮರು, ದಲಿತರು ಮತ್ತು ಹಿಂದುಳಿದ ವರ್ಗಗಳು ಬೆನ್ನೆಲುಬಾಗಿದ್ದಾರೆ. ರಾಜಣ್ಣ ಅವರಿಗೆ ಸಿಎಂ ಮೇಲೆ‌ ಪ್ರೀತಿ ಇದೆಯಲ್ಲ, ಹಾಗಾಗಿ ಅವರು ಜೋರಾಗಿ ಮಾತಾಡಬೇಕು ಅಂತಾರೆ. ಟಗರು ಸುಮ್ ಸುಮ್ಮನೆ ಗುದ್ದ ಬೇಕು ಅಂತಿಲ್ವಲ್ಲ. ಈಗ…

Read More

ಹಾಸನ ಪೊಲೀಸರ ಭರ್ಜರಿ ಕಾರ್ಯಾಚರಣೆ: 15 ವರ್ಷಗಳ ಹಿಂದೆ ಜೈಲಿನಿಂದ ತಪ್ಪಿಸಿಕೊಂಡಿದ್ದ ಆರೋಪಿ ಗೋವಾದಲ್ಲಿ ಅರೆಸ್ಟ್! – Kannada News | Hassan Cops’ 15 Year Hunt Ends: Sakaleshpur Jail Escapee Channakeshav Recaptured from Goa

ಹಾಸನ, ಏ.18: ಪೊಲೀಸರು ತಮ್ಮ ಕಾರ್ಉಕ್ಷಮತೆಯಲ್ಲಿ ದೊಡ್ಡ ಸಾಧನೆಯೊಂದನ್ನು ಮಾಡಿದ್ದಾರೆ. ಇದೀಗ ಪೊಲೀಸ್​​ ಇಲಾಖೆಯ ಈ ಸಾಧನೆ ಭಾರೀ ಮೆಚ್ಚುಗೆಗೆ ಕಾರಣವಾಗಿದೆ.2011ರಲ್ಲಿ ಸಕಲೇಶಪುರ ಜೈಲಿನಿಂದ ನಾಪತ್ತೆಯಾಗಿದ್ದ ವಿಚಾರಣಾಧೀನ ಖೈದಿಯನ್ನು ಹದಿನೈದು ವರ್ಷಗಳ ನಂತರ ಪತ್ತೆಹಚ್ಚುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ. ಬಂಧಿತ ವ್ಯಕ್ತಿಯನ್ನು ಸಕಲೇಶಪುರ ತಾಲೂಕಿನ ನಲ್ಲುಲ್ಲಿ ಗ್ರಾಮದ ಚನ್ನಕೇಶವ @ ಕೇಶವ@ ಸುರೇಶ ಬಿನ್ ಲೇಟ್ ಸಣ್ಣೇಗೌಡ ಎಂದು ಗುರುತಿಸಲಾಗಿದೆ. ಈತ ಈ ಹಿಂದೆ ಕೊಲೆ ಯತ್ನ ಪ್ರಕರಣವೊಂದರಲ್ಲಿ ಬಂಧಿತನಾಗಿ ಸಕಲೇಶಪುರ ಜೈಲು ಸೇರಿದ್ದನು. 2011ರಲ್ಲಿ ಸಕಲೇಶಪುರ ಜೈಲಿನಲ್ಲಿದ್ದ…

Read More

ಈ ವಾರ ಒಟಿಟಿಗೆ ಬಂದಿವೆ ನೋಡಲೇಬೇಕಾದ ಸಿನಿಮಾಗಳು: ಪಟ್ಟಿ ಇಲ್ಲಿದೆ

ವಿಜಯ್ ರಾಘವೇಂದ್ರ ನಟನೆಯ ‘ಸೀತಾರಾಮ್ ಬಿನೋಯಿ ಕೇಸ್ ನಂ 18’ 2021 ರಲ್ಲಿ ಬಿಡುಗಡೆ ಆಗಿ ಸದ್ದು ಮಾಡಿತ್ತು. ಇದೇ ವರ್ಷದ ಆರಂಭದಲ್ಲಿ ‘ಸೆಕೆಂಡ್ ಕೇಸ್ ಆಫ್ ಸೀತಾರಾಮ್’ ಸಿನಿಮಾ ಕನ್ನಡ ಮತ್ತು ತೆಲುಗಿನಲ್ಲಿ ಏಕಕಾಲಕ್ಕೆ ಬಿಡುಗಡೆ ಆಗಿ ಹಿಟ್ ಆಯ್ತು. ಇದೀಗ ಈ ಸಿನಿಮಾ ಒಟಿಟಿಗೆ ಬಂದಿದೆ. ಅಮೆಜಾನ್ ಪ್ರೈಂನಲ್ಲಿ ಸಿನಿಮಾ ನೋಡಬಹುದಾಗಿದೆ. ‘ಸಂಭವವಮ್ ಅಧ್ಯಯಮ್ ಒನ್ನು’ ಮಲಯಾಳಂನ ಮತ್ತೊಂದು ಅದ್ಭುತ ಕ್ರೈಂ ಥ್ರಿಲ್ಲರ್ ಕತೆ. ಮೂವರು ಪೊಲೀಸರು, ಕಾಣೆ ಆಗಿರುವ ಮತ್ತೊಬ್ಬ ಪೊಲೀಸ್ ಅಧಿಕಾರಿಯನ್ನು…

Read More

ಹಳೆಯ ಮಹಿಳಾ ಮೀಸಲಾತಿ ಮಸೂದೆ ಮಂಡಿಸಿ; ಪ್ರಧಾನಿ ಮೋದಿಗೆ ಪ್ರಿಯಾಂಕಾ ಗಾಂಧಿ ಸವಾಲು – Kannada News | Bring Old Bill We will support you Priyanka Gandhi Challenges PM Modi over Women’s Quota Bill

ನವದೆಹಲಿ, ಏಪ್ರಿಲ್ 18: ಮಹಿಳಾ ಮೀಸಲಾತಿ ಮಸೂದೆಯು (Women’s Reservation Bill) ಲೋಕಸಭೆಯಲ್ಲಿ ಅಂಗೀಕಾರವಾಗಲು ವಿಫಲವಾದ ನಂತರ ಎನ್​ಡಿಎ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ ಕಾಂಗ್ರೆಸ್ ಸಂಸದೆ ಪ್ರಿಯಾಂಕಾ ಗಾಂಧಿ ವಾದ್ರಾ, ಈ ಸಾಂವಿಧಾನಿಕ ತಿದ್ದುಪಡಿ ಮಸೂದೆಯು ಕೇಂದ್ರವು ಶಾಶ್ವತವಾಗಿ ಆಳಲು ಮತ್ತು ದೇಶದಲ್ಲಿ ಪ್ರಜಾಪ್ರಭುತ್ವವನ್ನು ದುರ್ಬಲಗೊಳಿಸಲು ನಡೆಸಿದ ಪಿತೂರಿಯಾಗಿತ್ತು ಎಂದು ಆರೋಪಿಸಿದ್ದಾರೆ. ಸಂವಿಧಾನ (131ನೇ ತಿದ್ದುಪಡಿ) ಮಸೂದೆ, 2026ರ ಲೋಕಸಭೆಯಲ್ಲಿ ಅಂಗೀಕಾರಗೊಳ್ಳಲು ವಿಫಲವಾದ ಒಂದು ದಿನದ ನಂತರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಕಾಂಗ್ರೆಸ್ ಸಂಸದೆ ಪ್ರಿಯಾಂಕಾ ಗಾಂಧಿ…

Read More

ಮೂರು ವಿಧೇಯಕ ಮಿಕ್ಸ್ ಮಾಡಿದ್ದರಿಂದ ಬಿದ್ದೋಗಿದೆ: ಮಹಿಳಾ ಮೀಸಲಾತಿಗೆ ನಮ್ಮ ವಿರೋಧ ಇಲ್ಲ; ಸಿಎಂ ಸಿದ್ದರಾಮಯ್ಯ – Kannada News | We have no objection to Women Reservation Bill: says CM Siddaramaiah

ಬೆಂಗಳೂರು, ಏಪ್ರಿಲ್​ 18: ಶುಕ್ರವಾರ ಲೋಕಸಭೆಯಲ್ಲಿ ಕೇಂದ್ರ ಸರ್ಕಾರ ಮಂಡಿಸಿದ್ದ ಮಹಿಳಾ ಮೀಸಲಾತಿ ಮಸೂದೆಗೆ (Women’s Reservation Bill) ಸೋಲಾಗಿದೆ. ಸದ್ಯ ಇದೇ ವಿಚಾರ ರಾಜ್ಯದಲ್ಲಿ ಕಾಂಗ್ರೆಸ್ ಮತ್ತು ಬಿಜೆಪಿ ನಾಯಕರ ಮಧ್ಯೆ ಕಿತ್ತಾಟಕ್ಕೂ ಕಾರಣವಾಗಿದೆ. ಇದೀಗ ಈ ಬಗ್ಗೆ ಸಿಎಂ ಸಿದ್ದರಾಮಯ್ಯ(Siddaramaiah) ಮಾತನಾಡಿದ್ದು, ಮಹಿಳಾ ಮೀಸಲಾತಿಗೆ ನಮ್ಮ ವಿರೋಧ ಇಲ್ಲ. 2023ರಲ್ಲೇ ಸಂಸತ್​ನಲ್ಲಿ ಮಹಿಳಾ ಮೀಸಲಾತಿ ಬಿಲ್ ಪಾಸ್ ಆಗಿತ್ತು, ಆದರೆ ಕೇಂದ್ರ ಸರ್ಕಾರ ಇದುವರೆಗೆ ಏಕೆ ಅನುಷ್ಠಾನಕ್ಕೆ ತಂದಿಲ್ಲ ಎಂದು ಪ್ರಶ್ನಿಸಿದರು. 3 ವಿಧೇಯಕ…

Read More

CUK Recruitment 2026: ಕರ್ನಾಟಕ ಕೇಂದ್ರೀಯ ವಿವಿಯಲ್ಲಿ ಉದ್ಯೋಗಾವಕಾಶ; ತಿಂಗಳಿಗೆ 42,000ರೂ. ಸಂಬಳ! – Kannada News | CUK JRF Recruitment 2026: Apply for Junior Research Fellow Jobs in Kalaburagi by April 29

ಕರ್ನಾಟಕ ಕೇಂದ್ರೀಯ ವಿಶ್ವವಿದ್ಯಾಲಯವು (CUK) ಖಾಲಿ ಇರುವ ಜೂನಿಯರ್ ರಿಸರ್ಚ್ ಫೆಲೋ (JRF) ಹುದ್ದೆಯನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಿದೆ. ಕಲಬುರಗಿಯಲ್ಲಿ ಸಂಶೋಧನಾ ಕ್ಷೇತ್ರದಲ್ಲಿ ವೃತ್ತಿಜೀವನವನ್ನು ಆರಂಭಿಸಲು ಬಯಸುವ ಉದ್ಯೋಗಾಕಾಂಕ್ಷಿಗಳಿಗೆ ಇದೊಂದು ಉತ್ತಮ ಅವಕಾಶವಾಗಿದ್ದು, ಅಧಿಕೃತ ಅಧಿಸೂಚನೆಯ ಮೂಲಕ ಈ ನೇಮಕಾತಿ ಪ್ರಕ್ರಿಯೆಯನ್ನು ಕೈಗೊಳ್ಳಲಾಗಿದೆ. ಈ ಹುದ್ದೆಗೆ ಆಯ್ಕೆಯಾಗುವ ಅಭ್ಯರ್ಥಿಗಳಿಗೆ ಮಾಸಿಕ 37,000 ರೂ. ನಿಂದ 42,000 ರೂ. ವರೆಗೆ ಆಕರ್ಷಕ ವೇತನ ಶ್ರೇಣಿಯನ್ನು ನೀಡಲಾಗುತ್ತದೆ. ಅಭ್ಯರ್ಥಿಗಳ ಶೈಕ್ಷಣಿಕ ಅರ್ಹತೆ ಮತ್ತು ವಯೋಮಿತಿಯ ಸಡಿಲಿಕೆಯು…

Read More

ಬೇಸಿಗೆಯ ಉರಿ ಬಿಸಿಲಿನಲ್ಲೂ ದೇಹವನ್ನು ತಂಪಾಗಿರಿಸಲು ಈ ಸುಲಭ ಸಲಹೆಗಳನ್ನು ಪ್ರಯತ್ನಿಸಿ – Kannada News | How to keep your body cool in this hot weather? Here’s a tip

ಬೇಸಿಗೆಯ (summer) ಉರಿ ಬಿಸಿಲು ಮತ್ತು ವಿಪರೀತ ಸೆಕೆ ದಿನದಿಂದ ದಿನಕ್ಕೆ ಜಾಸ್ತಿ ಆಗುತ್ತಾ ಹೋಗುತ್ತಿದ್ದು, ಬಿಸಿಲು ಹಾಗೂ ಸೆಕೆಯ ಹೊಡೆತಕ್ಕೆ ಜನ ಹೈರಾಣಾಗಿದ್ದಾರೆ. ಬೇಸಿಗೆಯಲ್ಲಿನ ಈ ತೀವ್ರವಾದ ಶಾಖ ಮತ್ತು ಬಿಸಿಲು ದೇಹದ ಮೇಲೆ ಗಂಭೀರ ಪರಿಣಾಮಗಳನ್ನು ಬೀರುವ ಕಾರಣ ನಿರ್ಜಲೀಕರಣ, ಶಾಖದ ಹೊಡೆತದಂತಹ ಸಮಸ್ಯೆಗಳನ್ನು ತಪ್ಪಿಸಲು ಸರಿಯಾದ ಮುನ್ನೆಚ್ಚರಿಕೆಗಳನ್ನು ತೆಗೆದುಕೊಳ್ಳುವುದು ಬಹಳ ಮುಖ್ಯ. ದೇಹವನ್ನು ಸರಿಯಾಗಿ ತಂಪಾಗಿಸುವುದರಿಂದ ನಿರ್ಜಲೀಕರಣ, ಶಾಖದ ಹೊಡೆತದಂತಹ ಪರಿಣಾಮಗಳನ್ನು ಗಮನಾರ್ಹವಾಗಿ ಕಡಿಮೆ ಮಾಡಬಹುದು. ಸರಿಯಾದ ಆಹಾರ, ಜಲಸಂಚಯನ ಮತ್ತು ಜೀವನಶೈಲಿಯ…

Read More

ಅಮೆರಿಕದಿಂದಾಗಿ ಮತ್ತೆ ಹಾರ್ಮುಜ್ ಜಲಸಂಧಿ ಮುಚ್ಚಿದ ಇರಾನ್ – Kannada News | Iran shuts Strait of Hormuz again accuses US of violating ceasefire

ಟೆಹ್ರಾನ್, ಏಪ್ರಿಲ್ 18: ಇರಾನ್ ಹಾರ್ಮುಜ್ ಜಲಸಂಧಿಯ (Strait of Hormuz) ಮೇಲೆ ಮತ್ತೆ ನಿರ್ಬಂಧಗಳನ್ನು ಹೇರಿದೆ. ನಿರ್ಣಾಯಕ ಜಲಮಾರ್ಗವನ್ನು ಮತ್ತೆ ತೆರೆಯುವ ತನ್ನ ನಿರ್ಧಾರವನ್ನು ಇರಾನ್ ಹಿಂತೆಗೆದುಕೊಂಡಿದೆ. ಅಮೆರಿಕ ಕದನ ವಿರಾಮವನ್ನು ಉಲ್ಲಂಘಿಸಿರುವ ಕಾರಣದಿಂದ ಹಾರ್ಮುಜ್ ಜಲಸಂಧಿಯನ್ನು ಮತ್ತೆ ಮುಚ್ಚಲಾಗುತ್ತಿದೆ ಎಂದು ಇರಾನ್ ಆರೋಪಿಸಿದೆ. ಇರಾನ್ ಸಂಬಂಧಿತ ಹಡಗು ಸಾಗಣೆಯ ಮೇಲಿನ ದಿಗ್ಬಂಧನವನ್ನು ಕೊನೆಗೊಳಿಸುವುದಿಲ್ಲ ಎಂದು ಅಮೆರಿಕ ಹೇಳಿದ ನಂತರ ಇರಾನ್ ಮತ್ತೆ ಹಾರ್ಮುಜ್ ಜಲಸಂಧಿಯ ಮೇಲೆ ನಿರ್ಬಂಧ ಹೇರಿದೆ. ಇರಾನ್ ಬಂದರುಗಳ ಮೇಲಿನ ಅಮೆರಿಕದ…

Read More