Headlines

ಪತ್ನಿಯಿಂದ ಬೇರೆಯಾದ ನಂತರವೂ ಒತ್ತಾಯದ ದೈಹಿಕ ಸಂಪರ್ಕ: ಪತಿಗೆ ಶಾಕ್​​ ಕೊಟ್ಟ ಹೈಕೋರ್ಟ್​​

ಬೆಂಗಳೂರು, ಏಪ್ರಿಲ್​​ 08: ಪತ್ನಿಯಿಂದ ಬೇರೆಯಾದ ನಂತರವೂ ಒತ್ತಾಯದಿಂದ ಆಕೆಯ ಜೊತೆಗೆ ದೈಹಿಕ ಸಂಪರ್ಕ ಬೆಳಸಿರುವ ಪ್ರಕರಣ ಸಂಬಂಧ ಪತಿಯ ವಿರುದ್ಧದ ಕೇಸ್ ರದ್ದುಪಡಿಸಲು ಸಾಧ್ಯವಿಲ್ಲ ಎಂದಯ ಕರ್ನಾಟಕ ಹೈಕೋರ್ಟ್ ತಿಳಿಸಿದೆ. ಅದಾಗಲೇ ದಂಪತಿ ಬೇರೆಯಾಗಿದ್ದರೂ ಪತ್ನಿಯ ಇಚ್ಛೆಗೆ ವಿರುದ್ಧವಾಗಿ ಆಕೆಯ ಜೊತೆ ದೈಹಿಕ ಸಂಪರ್ಕ ಬೆಳೆಸಿದ್ದ ಕಾರಣ ಪತಿಯ ವಿರುದ್ಧ ಐಪಿಸಿ ಸೆ. 376(ಬಿ) ಅಡಿ ಕೇಸ್ ದಾಖಲಾಗಿತ್ತು. ಪತ್ನಿ ದಾಖಲಿಸಿದ್ದ ಕೇಸ್ ರದ್ದು ಕೋರಿ ಹೈಕೋರ್ಟ್​ಗೆ ಪತಿ ಸಲ್ಲಿಸಿದ್ದ ಅರ್ಜಿಯ ವಿಚಾರಣೆ ವೇಳೆ ನ್ಯಾಯಾಲಯ…

Read More

ಚುನಾವಣೆ ಹತ್ತಿರ ಆದಾಗಲೇ ಡಿವೋರ್ಸ್ ವಿಷಯ ಬಹಿರಂಗ ಮಾಡಿದ್ದಕ್ಕೆ ದಳಪತಿ ವಿಜಯ್ ಗರಂ

ತಮಿಳುನಾಡು ಚುನಾವಣೆಯ (Tamil Nadu Elections) ಕಾವು ಏರುತ್ತಿರುವ ಬೆನ್ನಲ್ಲೇ, ನಟ ಮತ್ತು ರಾಜಕಾರಣಿ ದಳಪತಿ ವಿಜಯ್ ಅವರು ಬುಧವಾರ (ಏಪ್ರಿಲ್ 8) ತಿರುನಲ್ವೇಲಿಯಲ್ಲಿ ಹಮ್ಮಿಕೊಳ್ಳಲಾಗಿದ್ದ ಸಮಾವೇಶದಲ್ಲಿ ವಿರೋಧಿಗಳ ವಿರುದ್ಧ ವಾಗ್ದಾಳಿ ನಡೆಸಿದರು. ತಮ್ಮ ವೈಯಕ್ತಿಕ ಜೀವನದ ಏರಿಳಿತಗಳು ಮತ್ತು ತಮ್ಮ ಕೊನೆಯ ಸಿನಿಮಾ ‘ಜನ ನಾಯಕನ್’ ಎದುರಿಸುತ್ತಿರುವ ಸೆನ್ಸಾರ್ ಸಮಸ್ಯೆಗಳ ಹಿಂದೆ ರಾಜಕೀಯ ಷಡ್ಯಂತ್ರವಿದೆ ಎಂದು ಅವರು ಆರೋಪಿಸಿದ್ದಾರೆ. ವಿಚ್ಛೇದನದ ಸುದ್ದಿ ಹೊರಬಂದಿದ್ದರ ಹಿಂದೆ ರಾಜಕೀಯ ಪಿತೂರಿ ಇದೆ ಎಂದು ದಳಪತಿ ವಿಜಯ್ (Thalapathy Vijay)…

Read More

ಸೌರ ಯುಗಾದಿಯ ಪರಿಣಾಮದಿಂದ ಏನೆಲ್ಲ ಬದಲಾವಣೆಯಾಗಲಿದೆ…

ಸೌರಮಾನ ಯುಗಾದಿಯು ಏಪ್ರಿಲ್ 14ರಂದು ಆಗಲಿದ್ದು ಸಂದರ್ಭದಲ್ಲಿ ಗ್ರಹಗಳ ಸ್ಥಿತಿಗತಿಗಳು ಕೇವಲ ವೈಯಕ್ತಿಕ ಜೀವನದ ಮೇಲಲ್ಲದೆ, ಇಡೀ ಸಮಾಜದ ಆರ್ಥಿಕ, ರಾಜಕೀಯ ಮತ್ತು ಸಾಂಸ್ಕೃತಿಕ ಮಗ್ಗಲುಗಳ ಮೇಲೆ ಗಾಢವಾದ ಪರಿಣಾಮ ಬೀರಲಿವೆ. ಈ ಸಂಧಿಕಾಲದ ಕುರಿತು ಅವಲೋಕನ ಅಗತ್ಯ. ​ಸೌರಮಾನ ಯುಗಾದಿಯ ದಿನದಂದು ಗ್ರಹಗಳ ಸಂಯೋಜನೆಯು ಸಾಮಾಜಿಕವಾದ ಅನೇಕ ಬದಲಾವಣೆಗೆ ಕಾರಣವೂ ಆಗಲಿದೆ. ​ಈ ಬಾರಿಯ ಯುಗಾದಿಯು ಪರಿವರ್ತನೆಯ ಕಾಲ ಎಂದು ಕರೆಯಲ್ಪಡಲು ಪ್ರಮುಖ ಕಾರಣವೆಂದರೆ ಬೃಹತ್ ಗ್ರಹಗಳಾದ ಶನಿ, ರಾಹು ಮತ್ತು ಗುರುವಿನ ವಿಶಿಷ್ಟ ನಡೆ….

Read More

ಟಾಟಾ ಏಸ್, ಕಾರಿನ ನಡುವೆ ಭೀಕರ ಅಪಘಾತ: ಮೂವರ ಸ್ಥಿತಿ ಗಂಭೀರ

ಹಾವೇರಿ, ಏಪ್ರಿಲ್​​ 08: ಜಿಲ್ಲೆಯ ಹಾನಗಲ್ ತಾಲೂಕಿನ ಬಾಳಂಬೀಡ ಕ್ರಾಸ್ ಬಳಿ ಭೀಕರ ರಸ್ತೆ ಅಪಘಾತ ಸಂಭವಿಸಿದೆ. ಟಾಟಾ ಏಸ್ ವಾಹನ ಹಾಗೂ ಕಾರು ನಡುವೆ ಮುಖಾಮುಖಿ ಡಿಕ್ಕಿಯಾಗಿ ಮೂವರು ಗಂಭೀರವಾಗಿ ಗಾಯಗೊಂಡಿದ್ದಾರೆ. ಗಾಯಗೊಂಡವರನ್ನು ತಕ್ಷಣವೇ ಜಿಲ್ಲಾ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಅರೇಮಲ್ಲಾಪುರ ಗ್ರಾಮದಿಂದ ಹಾನಗಲ್ ಕಡೆಗೆ ಮದುವೆ ಸಮಾರಂಭದ ಅಡುಗೆ ಮಾಡಲು ತೆರಳುತ್ತಿದ್ದ ಟಾಟಾ ಏಸ್ ವಾಹನಕ್ಕೆ ಎದುರಿನಿಂದ ಬರುತ್ತಿದ್ದ ಕಾರು ಡಿಕ್ಕಿ ಹೊಡೆದಿದೆ. ಆಡೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಪ್ರಕರಣ ದಾಖಲಾಗಿದ್ದು,…

Read More

ಆತನಿಗೆ ಮಹಿಳೆಯರ ಒಳ ಉಡುಪು ಮಾತ್ರ ಬೇಕು: ನಮಗೆ ತುಂಬಾ ಭಯ ಆಗ್ತಿದೆ ಎಂದ ಗೃಹಿಣಿ

ಚಾಮರಾಜನಗರ, ಏ.8: ಜಿಲ್ಲೆಯಲ್ಲಿ ಮಹಿಳೆಯರ ಒಳ ಉಡುಪುಗಳನ್ನು ಕದಿಯುವ ಸೈಕೋಪಾತ್ ಒಬ್ಬನ ಉಪಟಳದಿಂದ ಸ್ಥಳೀಯ ನಿವಾಸಿಗಳು, ವಿಶೇಷವಾಗಿ ಗೃಹಿಣಿಯರು ತೀವ್ರ ಆತಂಕಕ್ಕೊಳಗಾಗಿದ್ದಾರೆ. ಹೌಸಿಂಗ್ ಬೋರ್ಡ್ ಕಾಲೋನಿ, ಇಂದಿರಾನಗರ ಮತ್ತು ಕರಿನಂಜಿಪುರ ಸುತ್ತಮುತ್ತಲ ಪ್ರದೇಶಗಳಲ್ಲಿ ಸುಮಾರು ಒಂದೂವರೆ ತಿಂಗಳಿನಿಂದ ಈ ವಿಚಿತ್ರ ಕೃತ್ಯಗಳು ವರದಿಯಾಗುತ್ತಿವೆ. ರಾತ್ರಿ 12 ರಿಂದ ಬೆಳಗಿನ ಜಾವ 3 ಗಂಟೆಯ ನಡುವೆ, ಒಬ್ಬ ಅಪರಿಚಿತ ವ್ಯಕ್ತಿ ಮಹಿಳೆಯರ ವೇಷಧರಿಸಿ ಮನೆಗಳ ಮುಂದೆ ಒಣಗಲು ಹಾಕಿರುವ ಮಹಿಳೆಯರ ಒಳ ಉಡುಪುಗಳನ್ನು ಗುರಿಯಾಗಿಸಿಕೊಂಡು ಕಳವು ಮಾಡುತ್ತಿದ್ದಾನೆ. ಈ…

Read More

14 ತಿಂಗಳು ಕೋಮಾದಲ್ಲಿದ್ದ ಅಮೆರಿಕದ ಭಾರತೀಯ ವಿದ್ಯಾರ್ಥಿನಿಯ ದುರಂತ ಅಂತ್ಯ

ಮುಂಬೈ, ಏಪ್ರಿಲ್ 8: ಆಕೆ ಎಷ್ಟು ಸುಂದರಿಯೋ ಅಷ್ಟೇ ಜಾಣೆ. ಹೀಗಾಗಿಯೇ ತನ್ನ 35ನೇ ವಯಸ್ಸಿನಲ್ಲೂ ಹೊಸತೇನಾದರೂ ಕಲಿಯಬೇಕೆಂಬ ಬಯಕೆಯಿಂದ ಅವರು ಅಮೆರಿಕಕ್ಕೆ ಹಾರಿದ್ದರು. ಆದರೆ, ಅದೊಂದು ಅಪಘಾತ ಆಕೆಯ ಕನಸನ್ನು ನುಚ್ಚುನೂರು ಮಾಡಿಬಿಟ್ಟಿತ್ತು. ಮಗಳು ವಿದೇಶದಲ್ಲಿ ಓದಿ ಜೀವನದಲ್ಲಿ ಹೆಚ್ಚೆಚ್ಚು ಸಾಧನೆ ಮಾಡುತ್ತಾಳೆ ಎಂಬ ಕನಸು ಕಂಡಿದ್ದ ಆಕೆಯ ತಂದೆ ತಮ್ಮ ಮಗಳ ಸ್ಥಿತಿಯನ್ನು ನೋಡಿ ಮಮ್ಮಲ ಮರುಗಿದ್ದರು. ಭೀಕರ ಕಾರು ಅಪಘಾತದಲ್ಲಿ (Car Accident) ಗಾಯಗೊಂಡಿದ್ದ ನೀಲಂ ಶಿಂಧೆ (Neelam Tanaji Shinde) ಎಂಬ…

Read More

2nd PUC Result: ಸರ್ವರ್ ಕಿರಿಕಿರಿಗೆ ಬೈ ಹೇಳಿ, ವೆಬ್‌ಸೈಟ್‌ಗಿಂತಲೂ ಮೊದಲೇ ದ್ವಿತೀಯ PUC ರಿಸಲ್ಟ್​ ನೋಡಿ

ಬೆಂಗಳೂರು, (ಏಪ್ರಿಲ್ 08): ದ್ವಿತೀಯ ಪಿಯುಸಿ ಫಲಿತಾಂಶದ (2nd PUC Results) ದಿನಾಂಕದ ಗೊಂದಲಕ್ಕೆ ತೆರೆ ಬಿದ್ದಿದ್ದು, ನಾಳೆ ಅಂದರೆ ಏಪ್ರಿಲ್​​ 9 ರಂದು ಫಲಿತಾಂಶ ಪ್ರಕಟಣೆಯಾಗಲಿದೆ ಎಂದು ಪರೀಕ್ಷಾ ಮಂಡಳಿಯ ಅಧಿಕಾರಿಗಳು ತಿಳಿಸಿದ್ದಾರೆ. ಶಿಕ್ಷಣ ಸಚಿವ ಮಧು ಬಂಗಾರಪ್ಪ (Madhu Bangarappa) ಅವರು ಸುದ್ದಿಗೋಷ್ಠಿ ನಡೆಸಿ ಫಲಿತಾಂಶ ಪ್ರಕಟಿಸಲಿದ್ದಾರೆ. ನಂತರ ಮಧ್ಯಾಹ್ನ 3ಗಂಟೆಗೆ ಅಧಿಕೃತ ವೆಬ್‌ಸೈಟ್​​ನಲ್ಲಿ ರಿಸಲ್ಟ್​ ನೋಡಬಹುದಾಗಿದೆ. ಇನ್ನು ವಿಶೇಷ ಅಂದ್ರೆ ಇದೇ ಮೊದಲ ಬಾರಿಗೆ ವಿದ್ಯಾರ್ಥಿಗಳ ಫಲಿತಾಂಶದ ಅಂಕಪಟ್ಟಿಯನ್ನು (Marks Card) ಡಿಜಿಲಾಕರ್…

Read More

ಸೀಸ್​ಫೈರ್ ಮಾತ್ರವಲ್ಲ, ಭಾರತದ ಷೇರು ಮಾರುಕಟ್ಟೆ ಗರಿಗೆದರಲು ಇಲ್ಲಿವೆ 7 ಕಾರಣಗಳು

ನವದೆಹಲಿ, ಏಪ್ರಿಲ್ 8: ಭಾರತದ ಷೇರು ಮಾರುಕಟ್ಟೆಯ (Stock market) ಪ್ರಮುಖ ಸೂಚ್ಯಂಕಗಳು ಇಂದು ಬುಧವಾರ ಸಿಕ್ಕಾಪಟ್ಟೆ ಹಿಗ್ಗಿವೆ. ನಿಫ್ಟಿ ಮತ್ತು ಸೆನ್ಸೆಕ್ಸ್ ಸೂಚ್ಯಂಕಗಳು ಹತ್ತಿರ ಹತ್ತಿರ ಶೇ. 4ರಷ್ಟು ಹೆಚ್ಚಿವೆ. ಬಿಎಸ್​ಇ ಸೆನ್ಸೆಕ್ಸ್ 2,946.32 ಅಂಕಗಳಷ್ಟು (ಶೇ. 3.95) ಅಧಿಕಗೊಂಡು 77,562.90 ಮಟ್ಟ ಮುಟ್ಟಿದೆ. ಎನ್​ಎಸ್​ಇ ನಿಫ್ಟಿ ಸೂಚ್ಯಂಕವು 873.70 ಅಂಕಗಳಷ್ಟು (ಶೇ 3.78) ಏರಿಕೆ ಕಂಡು 23,997.35 ಮಟ್ಟ ಮುಟ್ಟಿದೆ. ಮಾರುಕಟ್ಟೆಯಲ್ಲಿ ಇವತ್ತು ಹಿನ್ನಡೆ ಕಂಡ ಷೇರುಗಳ ಸಂಖ್ಯೆ 498 ಮಾತ್ರ. ಬರೋಬ್ಬರಿ 3,705…

Read More

ದಾವಣಗೆರೆ ದಕ್ಷಿಣ ಕ್ಷೇತ್ರದ ಆಳ ಅಗಲ: ಕಣದಲ್ಲಿ 25 ಅಭ್ಯರ್ಥಿಗಳು; ಮಹಿಳಾ ಮತದಾರರೇ ಹೆಚ್ಚು

ದಾವಣಗೆರೆ, ಏಪ್ರಿಲ್​ 08: ಅಬ್ಬರದ ಪ್ರಚಾರ, ಜಿದ್ದಾಜಿದ್ದಿ ಸ್ಪರ್ಧೆಯಿಂದ ದಾವಣಗೆರೆ ದಕ್ಷಿಣ ಕ್ಷೇತ್ರ (Davanagere Bypoll) ರಾಜ್ಯದ ಗಮನ ಸೆಳೆದಿದೆ. ಕ್ಷೇತ್ರಕ್ಕೆ ನಾಳೆ ಮತದಾನ ನಡೆಯಲಿದೆ. ಕಾಂಗ್ರೆಸ್, ಬಿಜೆಪಿ ಸೇರಿ ಬರೋಬ್ಬರಿ 25 ಜನ ಕಣದಲ್ಲಿದ್ದಾರೆ. ಮೇಲಾಗಿ ಅಲ್ಪಸಂಖ್ಯಾಂತರೇ ಅಧಿಕ ಇರುವ ಕ್ಷೇತ್ರವಾದ ಹಿನ್ನೆಲೆ ಆ ಸಮುದಾಯ ಅಭ್ಯರ್ಥಿಗಳೇ ಎಸ್​​ಡಿಪಿಐ ಸೇರಿ 14 ಜನ ಇದ್ದಾರೆ. ಇನ್ನೇನು ಮತದಾನಕ್ಕೆ ಕೆಲವೇ ಗಂಟೆ ಬಾಕಿಯಿದ್ದು, ಅಂತಿಮ ಹಂತದ ಸಿದ್ಧತೆಗಳು ಭರ್ಜರಿಯಾಗಿ ನಡೆದಿವೆ. ಶಿಗ್ಗಾಂವಿ, ಸಂಡೂರ್ ಹಾಗೂ ಚನ್ನಪಟ್ಟಣ ಮೂರು…

Read More

ಬೆಳಗಾವಿ ಸಿದ್ದೇಶ್ವರ ಜಾತ್ರೆಯಲ್ಲಿ ರಕ್ತದೊಕುಳಿ: ಮನೆ ಮುಂದೆ ಕುಣಿದಿದ್ದಕ್ಕೆ ವ್ಯಕ್ತಿಯ ಬರ್ಬರ ಹತ್ಯೆ

ಬೆಳಗಾವಿ, ಏಪ್ರಿಲ್​ 08: ಸಿದ್ದೇಶ್ವರ ಜಾತ್ರೆಯಲ್ಲಿ ಮನೆ ಮುಂದೆ ಕುಣಿದಿದ್ದಕ್ಕೆ ವ್ಯಕ್ತಿಯ ಕೊಲೆ (Murder) ನಡೆದಿರುವಂತಹ ಘಟನೆ ಜಿಲ್ಲೆಯ ಬೈಲಹೊಂಗಲ ತಾಲೂಕಿನ ಹಣ್ಣಿಕೇರಿಯಲ್ಲಿ ನಡೆದಿದೆ. ಸಂಗನಗೌಡ(50) ಕೊಲೆಯಾದ ವ್ಯಕ್ತಿ. ಪ್ರಕರಣ ಸಂಬಂಧ ಎಂಟು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಇನ್ನು ಘಟನೆ ಸಂಬಂಧ ನೇಸರಗಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ನಡೆದಿದ್ದೇನು? ಸಂಗನಗೌಡ ಮತ್ತು ಆರೋಪಿಗಳ ಎರಡು ಕುಟುಂಬಗಳ ಮಧ್ಯೆ ಕೆಲವು ವರ್ಷಗಳಿಂದ ವೈಷಮ್ಯ ಇತ್ತು. ಸಿದ್ದೇಶ್ವರ ಜಾತ್ರೆ ವೇಳೆ ರಾಜಕೀಯ ವಿರೋಧಿಗಳ ಮನೆ ಮುಂದೆ ಸಂಗನಗೌಡ ಪಾಟೀಲ್…

Read More