Headlines

‘ನಮ್ಮ ಪರಮಾಣು ಹಕ್ಕನ್ನು ಕಸಿದುಕೊಳ್ಳಲು ಯಾರಿಂದಲೂ ಸಾಧ್ಯವಿಲ್ಲ’: ಇರಾನ್ ಅಧ್ಯಕ್ಷರ ಗುಡುಗು – Kannada News | No one can deny Iran its nuclear rights, says president Masoud Pezeshkian

ಟೆಹ್ರಾನ್, ಏಪ್ರಿಲ್ 19: ಇರಾನ್‌ನ ಪರಮಾಣು ಕಾರ್ಯಕ್ರಮದ ಸುತ್ತಲಿನ ಅಂತರಾಷ್ಟ್ರೀಯ ಬಿಕ್ಕಟ್ಟು ಮತ್ತೆ ತಾರಕಕ್ಕೇರಿದೆ. “ಒಂದು ರಾಷ್ಟ್ರದ ಕಾನೂನುಬದ್ಧ ಹಕ್ಕುಗಳನ್ನು ಕಸಿದುಕೊಳ್ಳಲು ಅಮೆರಿಕ ಯಾರು?” ಎಂದು ಪ್ರಶ್ನಿಸುವ ಮೂಲಕ ಇರಾನ್ ಅಧ್ಯಕ್ಷ ಮಸೂದ್ ಪೆಜೆಶ್ಕಿಯಾನ್ (Masoud Pezeshkian) ಭಾನುವಾರ (ಏಪ್ರಿಲ್ 19) ಡೊನಾಲ್ಡ್ ಟ್ರಂಪ್ ನೇತೃತ್ವದ ಅಮೆರಿಕ ಸರ್ಕಾರದ ವಿರುದ್ಧ ನೇರ ವಾಗ್ದಾಳಿ ನಡೆಸಿದ್ದಾರೆ. ಇತ್ತೀಚಿನ ಮಾತುಕತೆಗಳಲ್ಲಿ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರು ಇರಾನ್ ತನ್ನ ಪರಮಾಣು ಹಕ್ಕುಗಳನ್ನು ತ್ಯಜಿಸಬೇಕು ಎಂದು ಪ್ರತಿಪಾದಿಸಿದ್ದರು. ಇದಕ್ಕೆ ಕಠಿಣವಾಗಿ…

Read More

ಚೆನ್ನಮ್ಮ ದೇವೇಗೌಡ ನಿಧನ: ಸೋಮವಾರ ಈ ತಾಲೂಕಿನ ಶಾಲೆ-ಕಾಲೇಜ್​ಗಳಿಗೆ ರಜೆ ಘೋಷಣೆ! – Kannada News | Holiday declared for school and colleges in holenarasipura On July 20 Over Chennamma Devegowda funeral

ಹಾಸನ, (ಜುಲೈ 19) : ಮಾಜಿ ಪ್ರಧಾನಿ ದೇವೇಗೌಡರ (HD Deve Gowda) ಪತ್ನಿ ಚೆನ್ನಮ್ಮ (Chennamma Devegowda) ನಿಧನರಾಗಿದ್ದು, ನಾಳೆ ಅಂದರೆ ಜುಲೈ 20ರಂದು ಹಾಸನ ಜಿಲ್ಲೆಯ ಹೊಳೆನರಸೀಪುರ ತಾಲೂಕಿನ ಮಾವಿನಕೆರೆ ಶ್ರೀರಂಗನಾಥಸ್ವಾಮಿ ಬೆಟ್ಟದ ತಪ್ಪಲು ಪ್ರದೇಶದಲ್ಲಿರುವ ಕ್ಯಾತನಹಳ್ಳಿಯಲ್ಲಿ ಸಕಲ ಸರ್ಕಾರಿ ಗೌರವಗಳೊಂದಿಗೆ ಅಂತ್ಯಕ್ರಿಯೆ ನಡೆಯಲಿದೆ. ಇದಕ್ಕಾಗಿ ಈಗಾಗಲೇ ಹಾಸನ ಜಿಲ್ಲಾಡಳಿತ ಸಹ ಸಕಲ ಸಿದ್ಧತೆಗಳನ್ನು ಮಾಡಿಕೊಂಡಿದ್ದು, ಮುಂಜಾಗ್ರತಾ ಕ್ರಮವಾಗಿ ತಾಲೂಕಿನ ಎಲ್ಲಾ ಶಾಲಾ ಕಾಲೇಜುಗಳಿಗೆ (school and colleges) ರಜೆ ಘೋಷಣೆ ಮಾಡಿದೆ. ಹೌದು..ಸೋಮವಾರ…

Read More

‘ಗೌರಿ’ ಧಾರಾವಾಹಿ ನಟಿ ನಂದಿನಿ ನಿಧನ: ಆರ್​ಆರ್​ ನಗರದಲ್ಲಿ ದುರಂತ ಅಂತ್ಯ – Kannada News | Gauri Serial actress Nandini CM Death in Bengaluru

ಕನ್ನಡ ಮತ್ತು ತಮಿಳು ಧಾರಾವಾಹಿಗಳಲ್ಲಿ (Serial) ನಟಿಸಿ ಖ್ಯಾತಿ ಪಡೆದಿದ್ದ ನಂದಿನಿ ಸಿಎಂ (Nandini CM) ಅವರು ನಿಧನರಾಗಿದ್ದಾರೆ. ಆತ್ಮಹತ್ಯೆ ಮಾಡಿಕೊಂಡು ಅವರು ಕೊನೆಯುಸಿರು ಎಳೆದಿದ್ದಾರೆ ಎನ್ನಲಾಗುತ್ತಿದೆ. ಬೆಂಗಳೂರಿನ ಆರ್​ಆರ್​ ನಗರದಲ್ಲಿ ನಂದಿನಿ ಅವರು ಸಾವಿಗೆ ಶರಣಾಗಿದ್ದಾರೆ. ಅವರ ಸಾವಿಗೆ (Nandini CM Death) ನಿಖರ ಕಾರಣ ಏನು ಎಂಬುದು ಇನ್ನಷ್ಟೇ ಗೊತ್ತಾಗಬೇಕಿದೆ. ಬಣ್ಣದ ಲೋಕದಲ್ಲಿ ಮಿಂಚುವ ಕನಸು ಕಂಡಿದ್ದ ನಂದಿನಿ ಅವರು ಈ ರೀತಿ ದುರಂತ ಅಂತ್ಯ ಕಂಡಿರುವುದು ನೋವಿನ ಸಂಗತಿ. ಕನ್ನಡದ ‘ಜೀವ ಹೂವಾಗಿದೆ’,…

Read More

ಸೋಪ್ ಕಂಪನಿ ಜಾಹೀರಾತು ಪ್ರಕರಣದಲ್ಲಿ ಕೋರ್ಟ್​​ಗೆ ಹೋದ ತಮನ್ನಾಗೆ ಹಿನ್ನಡೆ – Kannada News | Tamannaah Bhatia’s Rs 1 Cr Claim Against Soap Co. Dismissed by Madras HC: 16 Year Legal Battle Ends

ನಟಿ ತಮನ್ನಾ ಭಾಟಿಯಾ ಅವರಿಗೆ ಮದ್ರಾಸ್ ಹೈಕೋರ್ಟ್‌ನಲ್ಲಿ ಹಿನ್ನಡೆಯಾಗಿದೆ. ಖಾಸಗಿ ಸೋಪ್ ಕಂಪನಿಯ ವಿರುದ್ಧ ಅವರು ಸಲ್ಲಿಸಿದ್ದ 1 ಕೋಟಿ ರೂ. ಪರಿಹಾರ ಅರ್ಜಿಯನ್ನು ನ್ಯಾಯಾಲಯ ವಜಾಗೊಳಿಸಿದೆ. ಈ ಪ್ರಕರಣ ಸುಮಾರು 16 ವರ್ಷಗಳ ಹಿಂದಿನದು ಎಂದೆ ನೀವು ನಂಬಲೇಬೇಕು. ಹಾಗಾದರೆ ಏನಿದು ಪ್ರಕರಣ? ಅವರ ವಾದವೇನು? ಆ ಬಗ್ಗೆ ಇಲ್ಲಿದೆ ವಿವರ. ಅಕ್ಟೋಬರ್ 2008ರಲ್ಲಿ, ತಮನ್ನಾ ಸೋಪ್ ಕಂಪನಿಯೊಂದಿಗೆ ಒಪ್ಪಂದಕ್ಕೆ ಸಹಿ ಹಾಕಿದ್ದರು. ಒಪ್ಪಂದದ ಪ್ರಕಾರ, ಅವರು ಒಂದು ವರ್ಷದ ಅವಧಿಗೆ (ಅಕ್ಟೋಬರ್ 2009 ರವರೆಗೆ)…

Read More

NEET 2026: ನೀಟ್ ಯುಜಿ ಮರುಪರೀಕ್ಷೆ ಬರೆಯಲಿದ್ದಾರೆ 22 ಲಕ್ಷಕ್ಕೂ ಹೆಚ್ಚು ಅಭ್ಯರ್ಥಿಗಳು; ಸಿಸಿಟಿವಿ ಕಣ್ಗಾವಲು, ಹೈ-ಸೆಕ್ಯುರಿಟಿ – Kannada News | NEET UG Re exam preparations CCTV surveillance security tightened for over 22 lakh candidates

ನವದೆಹಲಿ, ಜೂನ್ 20: ದೇಶಾದ್ಯಂತ ತೀವ್ರ ಕುತೂಹಲ ಮೂಡಿಸಿರುವ NEET-UG ಮರುಪರೀಕ್ಷೆಗೆ ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (NTA) ಮತ್ತು ಕೇಂದ್ರ ಸರ್ಕಾರ ಹಿಂದೆಂದೂ ಕಾಣದ ರೀತಿಯಲ್ಲಿ ಅಭೂತಪೂರ್ವ ಬಿಗಿ ಭದ್ರತೆಯನ್ನು ಕೈಗೊಂಡಿದೆ. 22 ಲಕ್ಷಕ್ಕೂ ಹೆಚ್ಚು ವೈದ್ಯಕೀಯ ಆಕಾಂಕ್ಷಿಗಳು ಬರೆಯಲಿರುವ ಈ ಪರೀಕ್ಷೆಯಲ್ಲಿ ಯಾವುದೇ ರೀತಿಯ ಅಕ್ರಮ ಅಥವಾ ಪೇಪರ್ ಲೀಕ್ ಆಗದಂತೆ ತಡೆಯಲು ಸಿಸಿಟಿವಿ ಲೈವ್ ಕಣ್ಗಾವಲು, ಕೃತಕ ಬುದ್ಧಿಮತ್ತೆ (AI) ತಂತ್ರಜ್ಞಾನ ಮತ್ತು ಪೊಲೀಸ್ ಬೆಂಗಾವಲು ಸೇರಿದಂತೆ ಹೈ-ಟೆಕ್ ಭದ್ರತಾ ವ್ಯವಸ್ಥೆಯನ್ನು ಜಾರಿಗೊಳಿಸಲಾಗಿದೆ. ಪರೀಕ್ಷಾ…

Read More

Bedroom Vastu: ಮಲಗುವ ಕೋಣೆಯಲ್ಲಿ ಈ ವಸ್ತು ಇಡಲೇಬೇಡಿ; ದಾಂಪತ್ಯದಲ್ಲಿ ಬಿರುಕಿಗೆ ಇದೇ ಮುಖ್ಯ ಕಾರಣ!

ಬದಲಾದ ಜೀವನಶೈಲಿಯಲ್ಲಿ ಮಲಗುವ ಕೋಣೆ (Bedroom) ನಮ್ಮ ಬದುಕಿನ ಅವಿಭಾಜ್ಯ ಅಂಗವಾಗಿದೆ. ಇಂದು ಪ್ರತಿಯೊಬ್ಬರಿಗೂ ವೈಯಕ್ತಿಕ ಸ್ಥಳದ (Privacy) ಅಗತ್ಯವಿರುವುದರಿಂದ, ಬೆಡ್‌ರೂಂ ವಿನ್ಯಾಸ ಮತ್ತು ಅಲ್ಲಿನ ಅಲಂಕಾರಿಕ, ಇತರ ವಸ್ತುಗಳ ಜೋಡಣೆಯನ್ನು ತಮ್ಮ ಇಷ್ಟದಂತೆ ಮಾಡಿಬಿಡುತ್ತಾರೆ. ಆದರೆ ವಾಸ್ತು ತಜ್ಞರ ಪ್ರಕಾರ, ಮಲಗುವ ಕೋಣೆಯಲ್ಲಿ ಕೆಲವು ವಸ್ತುಗಳನ್ನು ಇಡುವುದರಿಂದ ನಕಾರಾತ್ಮಕ ಶಕ್ತಿ ಹೆಚ್ಚಾಗಿ ದಾಂಪತ್ಯದಲ್ಲಿ ಬಿರುಕು ಅಥವಾ ಆರೋಗ್ಯ ಸಮಸ್ಯೆಗಳು ಉಂಟಾಗಬಹುದು. ಬೆಡ್‌ರೂಂನಲ್ಲಿ ಈ 4 ವಸ್ತುಗಳಿದ್ದರೆ ಇಂದೇ ತೆಗೆಯಿರಿ: ಕನ್ನಡಿ ಮತ್ತು ಪ್ರತಿಬಿಂಬದ ಎಚ್ಚರ: ಮಲಗುವ…

Read More

ಡಾಲರ್ ಎದುರು ರುಪಾಯಿ ಹೇಗೆ ಬೇಕಾದರೂ ಕುಸಿಯಲಿ ಬಿಡಿ, ಚಿಂತೆ ಬೇಡ: ಹಣಕಾಸು ಆಯೋಗ ಅಧ್ಯಕ್ಷ ಪನಗರಿಯಾ – Kannada News | Indias rupee value economist panagariya advises rbi against intervention

ನವದೆಹಲಿ, ಮೇ 22: ಡಾಲರ್ ಎದುರು ರುಪಾಯಿ ಮೌಲ್ಯ (Dollar vs Rupee) ಕಳೆದ ಎರಡು ದಿನದಿಂದ ಸ್ವಲ್ಪ ಚೇತರಿಸಿಕೊಂಡಿದೆ. ಆದರೂ ಕೂಡ ಇತ್ತೀಚಿನ ವರ್ಷಗಳಿಂದ ರುಪಾಯಿ ಮೌಲ್ಯ ಸಿಕ್ಕಾಪಟ್ಟೆ ಕುಸಿದಿದೆ. ಇನ್ನೂ ಕೂಡ ಪ್ರತೀ ಡಾಲರ್​ಗೆ ರುಪಾಯಿ ಮೌಲ್ಯ 96ರ ಗಡಿ ಮೇಲೆಯೇ ಇದೆ. ಬಹಳಷ್ಟು ಜನರು ರುಪಾಯಿ ಮೌಲ್ಯ ಕುಸಿತದ ವಿಚಾರದಲ್ಲಿ ಸರ್ಕಾರದ ವಿರುದ್ಧ ಕಿಡಿಕಾರುತ್ತಿದ್ದಾರೆ. ಇದೇ ವೇಳೆ, ಖ್ಯಾತ ಅರ್ಥಶಾಸ್ತ್ರಜ್ಞ ಅರವಿಂದ್ ಪನಗರಿಯಾ (Arvind Panagariya) ಅವರು ರುಪಾಯಿ ಮೌಲ್ಯ ಏರಿಳಿತದ ಬಗ್ಗೆ…

Read More

ಚಂದಾಪುರದಲ್ಲಿ ಅಗ್ನಿ ದುರಂತ: ಏಕಾಏಕಿ ಹೊತ್ತಿ ಉರಿದ 4 ಖಾಸಗಿ ಬಸ್‌ಗಳು – Kannada News | Anekal Bus Fire: Four Private Buses Gutted in Chandapura Parking Lot Inferno

ಬಸ್​ಗಳು ಬೆಂಕಿಗಾಹುತಿImage Credit source: tv9 kannada ಆನೇಕಲ್, ಜುಲೈ 26: ಬೆಂಗಳೂರು (Bangaluru) ನಗರ ಜಿಲ್ಲೆಯ ಆನೇಕಲ್ ತಾಲೂಕಿನ ಹಳೆ ಚಂದಾಪುರ ಬಳಿಯ ಪಾರ್ಕಿಂಗ್ ಲಾಟ್‌ನಲ್ಲಿ ನಿಲ್ಲಿಸಲಾಗಿದ್ದ ನಾಲ್ಕು ಖಾಸಗಿ ಬಸ್‌ಗಳು ಏಕಾಏಕಿ ಬೆಂಕಿಗಾಹುತಿಯಾದ (bus fire) ಘಟನೆ ನಡೆದಿದೆ. ಮೊದಲು ಒಂದು ಬಸ್​ನಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, ಬಳಿಕ ಒಂದರ ನಂತರ ಮೊತ್ತೊಂದರಂತೆ ನಾಲ್ಕು ಬಸ್​ಗೆ ಬೆಂಕಿ ಹೊತ್ತಿಕೊಂಡಿದೆ. ಸೂರ್ಯನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ. ನಡೆದಿದ್ದೇನು? ಪಾರ್ಕಿಂಗ್ ಲಾಟ್​ನಲ್ಲಿ ನಿಲ್ಲಿಸಿದ್ದ 4 ಬಸ್​ಗಳು…

Read More

ಬೆಂಗಳೂರಿಗರಿಗೆ ಗುಡ್​​ ನ್ಯೂಸ್​​: ನಮ್ಮ ಮೆಟ್ರೋ 3ನೇ ಹಂತಕ್ಕೆ ಕೇಂದ್ರ ಸರ್ಕಾರದಿಂದ ಶೀಘ್ರ ಅನುಮೋದನೆ ಸಾಧ್ಯತೆ – Kannada News

ಬೆಂಗಳೂರು, ಜೂನ್​​ 11: ಡಬಲ್ ಡೆಕ್ಕರ್‌ ಯೋಜನೆ ಸೇರ್ಪಡೆಯಿಂದ ಅನುಮೋದನೆಗಾಗಿ ಬಾಕಿ ಉಳಿದಿದ್ದ ನಮ್ಮ ಮೆಟ್ರೋ 3ನೇ ಹಂತ (Phase-3) ಯೋಜನೆಗೆ ಕೇಂದ್ರ ಸರ್ಕಾರದ ಅನುಮೋದನೆ ದೊರೆಯುವ ಸಾಧ್ಯತೆ ಹೆಚ್ಚಾಗಿದೆ ಎಂದು ಅಧಿಕೃತ ಮೂಲಗಳು ತಿಳಿಸಿವೆ. ಕೇಂದ್ರ ಸಾರ್ವಜನಿಕ ವಲಯದ ಸಂಸ್ಥೆಯಾದ RITES Ltd ಸಿದ್ಧಪಡಿಸಿರುವ ಕರಡು ವರದಿಯಲ್ಲಿ, 44.65 ಕಿ.ಮೀ ಉದ್ದದ ಈ ಯೋಜನೆಯ ಆರ್ಥಿಕ ಆಂತರಿಕ ಆದಾಯ ಪ್ರಮಾಣ (Economic Internal Rate of Return – EIRR) ಶೇ. 15.9ರಷ್ಟಿರಲಿದೆ ಎಂದು ಅಂದಾಜಿಸಲಾಗಿದೆ….

Read More

Virat Kohli: ಆಡಿದ್ದು 2 ಇನಿಂಗ್ಸ್… ಬರೆದದ್ದು ಭರ್ಜರಿ ದಾಖಲೆ  – Kannada News | Virat Kohli becomes the fastest player ever to complete 1000 runs in VHT

15 ವರ್ಷಗಳ ಬಳಿಕ ವಿಜಯ ಹಝಾರೆ ಟೂರ್ನಿಯಲ್ಲಿ ಕಣಕ್ಕಿಳಿದ ವಿರಾಟ್ ಕೊಹ್ಲಿ (Virat Kohli) ಇದೀಗ ಭರ್ಜರಿ ದಾಖಲೆಯೊಂದಿಗೆ ಮರಳಿದ್ದಾರೆ. ಅದು ಕೂಡ ದಿನೇಶ್ ಕಾರ್ತಿಕ್ ಹೆಸರಿನಲ್ಲಿದ್ದ ದೇಶೀಯ ದಾಖಲೆಯನ್ನು ಮುರಿಯುವ ಮೂಲಕ ಎಂಬುದು ವಿಶೇಷ. Source link

Read More