Headlines

Weekly Career Horoscope: ನಿಮ್ಮ ರಾಶಿಗನುಗುಣವಾಗಿ ಜೂ. 07 ರಿಂದ 13ರ ವರೆಗಿನ ಉದ್ಯೋಗ ಭವಿಷ್ಯ ಇಲ್ಲಿ ತಿಳಿಯಿರಿ – Kannada News

ಜೂನ್ 07ರಿಂದ ಜೂನ್‌ 13ರವರೆಗೆ ಎರಡನೇ ವಾರವಾಗಿದ್ದು ಉದ್ಯೋಗದಲ್ಲಿ ಎಷ್ಟೇ ಎಚ್ಚರಿಕೆಯೂ ಸಾಧ್ಯವಾಗದು. ಬೌದ್ಧಿಕ ಕಸರತ್ತಿನಿಂದ ಆಯಾಸಮಾಡಿಕೊಳ್ಳದೇ ಹೇಗೆ ನಿರ್ವಹಿಸುವುದು ಎಂಬುದನ್ನು ಕೂಲಂಕಷವಾಗಿ ಚಿಂತಿಸಿ ತೀರ್ಮಾನಿಸಿ.‌ ಉತ್ತಮ ಶ್ರೇಯಸ್ಸು ಎಲ್ಲರದ್ದಾಗಲಿ. ​ಮೇಷ ರಾಶಿ : ನಿಮ್ಮದೇ ರಾಶಿಯಲ್ಲಿ ಮಂಗಳನಿರುವುದರಿಂದ ಉದ್ಯೋಗದಲ್ಲಿ ಅಪಾರ ಉತ್ಸಾಹ ಮತ್ತು ಧೈರ್ಯ ಕಂಡುಬರುತ್ತದೆ. ಆದರೆ ಮೀನದಲ್ಲಿರುವ ಶನಿಯ ದೃಷ್ಟಿ ಹಾಗೂ ವೃಷಭದ ಸೂರ್ಯನ ಪ್ರಭಾವದಿಂದಾಗಿ, ಅತಿಯಾದ ಆತುರ ಅಥವಾ ಸಹೋದ್ಯೋಗಿಗಳ ಜೊತೆ ವಾಗ್ವಾದ ಉಂಟಾಗದಂತೆ ಎಚ್ಚರ ವಹಿಸಬೇಕು. ಹೊಸ ಉದ್ಯೋಗಾವಕಾಶಗಳು ಹುಡುಕಿಕೊಂಡು ಬರಲಿವೆ….

Read More

ಲಂಡನ್‌ನಲ್ಲಿ ಭಾರತದ ಮುಖ್ಯ ನ್ಯಾಯಮೂರ್ತಿ ಸೂರ್ಯ ಕಾಂತ್‌ ಭಾಷಣಕ್ಕೆ ಅಡ್ಡಿ: ತೀವ್ರ ಆಕ್ರೋಶ ಹೊರಹಾಕಿದ ಹೈಕಮಿಷನ್! – Kannada News

ಸುಪ್ರೀಂ ಕೋರ್ಟ್​ ಮುಖ್ಯ ನ್ಯಾಯಮೂರ್ತಿ (CJI) ಸೂರ್ಯ ಕಾಂತ್ Image Credit source: India Today ನವದೆಹಲಿ, ಜೂನ್ 06: ಲಂಡನ್‌ನಲ್ಲಿ ಸುಪ್ರೀಂ ಕೋರ್ಟ್​ ಮುಖ್ಯ ನ್ಯಾಯಮೂರ್ತಿ (CJI) ಸೂರ್ಯ ಕಾಂತ್ ಅವರು ಭಾಗವಹಿಸಿದ್ದ ಕಾರ್ಯಕ್ರಮವೊಂದರಲ್ಲಿ ಕೆಲವರು ಗದ್ದಲ ಸೃಷ್ಟಿಸಿ, ಅಡ್ಡಿಪಡಿಸಿರುವ ಘಟನೆ ನಡೆದಿದೆ. ಈ ವರ್ತನೆಯನ್ನು ಲಂಡನ್‌ನಲ್ಲಿರುವ ಭಾರತೀಯ ಹೈಕಮಿಷನ್ (ರಾಯಭಾರ ಕಚೇರಿ) ತೀವ್ರವಾಗಿ ಖಂಡಿಸಿದೆ. ಇದು ಸಭ್ಯತೆಯಿಂದ ಕೂಡಿದ ನಡವಳಿಕೆಯಲ್ಲ. ಗೌರವಾನ್ವಿತ ಕಾರ್ಯಕ್ರಮಗಳಲ್ಲಿ ಇಂತಹ ವರ್ತನೆಗಳನ್ನು ಒಪ್ಪಲು ಸಾಧ್ಯವಿಲ್ಲ. ಯಾವುದೇ ಭಿನ್ನಾಭಿಪ್ರಾಯಗಳಿದ್ದರೂ ಅವುಗಳನ್ನು ಶಾಂತಿಯುತ…

Read More

KCET Results 2026: ಕೆಸಿಇಟಿ ಫಲಿತಾಂಶ ಪ್ರಕಟ, ಸಚಿವರ ಸುದ್ದಿಗೋಷ್ಠಿ ನೇರಪ್ರಸಾರ – Kannada News

ಬೆಂಗಳೂರು, ಜೂನ್ 06: ರಾಜ್ಯದಾದ್ಯಂತ ಇಂಜಿನಿಯರಿಂಗ್, ಫಾರ್ಮಸಿ, ಕೃಷಿ ವಿಜ್ಞಾನ ಸೇರಿದಂತೆ ವಿವಿಧ ವೃತ್ತಿಪರ ಕೋರ್ಸ್‌ಗಳ ಪ್ರವೇಶಕ್ಕಾಗಿ ಬರೆದಿದ್ದ ಕರ್ನಾಟಕ ಸಾಮಾನ್ಯ ಪ್ರವೇಶ ಪರೀಕ್ಷೆ (KCET) ಫಲಿತಾಂಶ ಇಂದು (ಜೂನ್ 6) ಪ್ರಕಟವಾಗಲಿದೆ. ಈ ಹಿನ್ನೆಲೆ ಉನ್ನತ ಶಿಕ್ಷಣ ಸಚಿವ ಡಾ. ಶರಣಪ್ರಕಾಶ ಪಾಟೀಲ್ ಅವರು ಅಧಿಕೃತ ಸುದ್ದಿಗೋಷ್ಠಿ ನಡೆಸಿ ಫಲಿತಾಂಶವನ್ನು ಬಿಡುಗಡೆ ಮಾಡುತ್ತಿದ್ದಾರೆ. ರಾಜ್ಯದ ಸುಮಾರು 3 ಲಕ್ಷಕ್ಕೂ ಹೆಚ್ಚು ವಿದ್ಯಾರ್ಥಿಗಳ ಭವಿಷ್ಯವನ್ನು ನಿರ್ಧರಿಸುವ ಈ ಫಲಿತಾಂಶವು ಮಧ್ಯಾಹ್ನ 2 ಗಂಟೆಯಿಂದ ವಿದ್ಯಾರ್ಥಿಗಳಿಗೆ ಆನ್‌ಲೈನ್‌ನಲ್ಲಿ ಲಭ್ಯವಾಗಲಿದೆ….

Read More

ಬಾಕ್ಸ್ ಆಫೀಸ್‌ನಲ್ಲಿ ಮಕಾಡೆ ಮಲಗಿದ ಬಾಬಿ ಡಿಯೋಲ್ ‘ಬಂದರ್’; ಮೊದಲ ದಿನ ಲಕ್ಷಗಳಲ್ಲಿ ಗಳಿಕೆ – Kannada News

ಖ್ಯಾತ ನಿರ್ದೇಶಕ ಅನುರಾಗ್ ಕಶ್ಯಪ್ ಹಾಗೂ ಬಾಲಿವುಡ್ ನಟ ಬಾಬಿ ಡಿಯೋಲ್ ಕಾಂಬಿನೇಷನ್‌ನ ‘ಬಂದರ್’ ಚಿತ್ರ (Bandar Movie) ಶುಕ್ರವಾರ ಚಿತ್ರಮಂದಿರಗಳಲ್ಲಿ ಬಿಡುಗಡೆಯಾಗಿದೆ. ಆದರೆ, ಈ ಇಬ್ಬರು ದಿಗ್ಗಜರ ಮೊದಲ ಸಿನಿಮಾ ಬಾಕ್ಸ್ ಆಫೀಸ್‌ನಲ್ಲಿ ತೀವ್ರ ನಿರಾಶಾದಾಯಕ ಪ್ರತಿಕ್ರಿಯೆ ಪಡೆದುಕೊಂಡಿದೆ. ಬಾಕ್ಸ್ ಆಫೀಸ್ ಟ್ರ್ಯಾಕರ್ ಸಾಕ್ನಿಲ್ಕ್ ಪ್ರಕಾರ, ಚಿತ್ರವು ತನ್ನ ಮೊದಲ ದಿನ ದೇಶಾದ್ಯಂತ ಕೇವಲ 50 ಲಕ್ಷ ನೆಟ್ ಕಲೆಕ್ಷನ್ ಮಾಡಿದ್ದು, ಕನಿಷ್ಠ 1 ಕೋಟಿ ರೂಪಾಯಿ ಗಡಿ ದಾಟಲು ಕೂಡ ವಿಫಲವಾಗಿದೆ. ಚಿತ್ರದ ಒಟ್ಟು…

Read More

Weekly Love Astrology: ಈ ರಾಶಿಯ ಪ್ರೇಮ ಸಂಬಂಧ ವಿವಾಹ ಹಂತಕ್ಕೆ ತಲುಪಲು ಈ ವಾರ ಸುಸಮಯ! – Kannada News

ವಾರದ ಪ್ರೇಮ – ಪ್ರೀತಿ ಭವಿಷ್ಯImage Credit source: Pinterest ಜೂನ್ 07ರಿಂದ ಜೂನ್ 13ರವರೆಗೆ ಈ ತಿಂಗಳ ಎರಡನೇ ವಾರವಾಗಿದ್ದು, ಶುಕ್ರನು ಚಂದ್ರನ ರಾಶಿಯಲ್ಲಿಯೂ ಶನಿಯ ಆಧಿಪತ್ಯದ ನಕ್ಷತ್ರದಲ್ಲಿಯೂ ಇರುವನು. ಪ್ರೇಮ ಅಥವಾ ದಾಂಪತ್ಯದಲ್ಲಿ ಸುಮಧುರ ಕ್ಷಣಗಳನ್ನು ಕಳೆಯಬಹುದಾದರೂ ಭಯ ಆತಂಕಗಳು ನಿಮ್ಮೊಳಗೆ ಕಾಡುವುದು. ವನದುರ್ಗೆಯನ್ನು ಪ್ರಾರ್ಥಿಸಿ, ಭಯವನ್ನು ದೂರಮಾಡಿ. ​​ಮೇಷ ರಾಶಿ: ನಿಮ್ಮ ರಾಶ್ಯಧಿಪತಿ ಮಂಗಲ ಸ್ವಕ್ಷೇತ್ರದಲ್ಲಿದ್ದಾನೆ. ಪ್ರೇಮ ಜೀವನದಲ್ಲಿ ಉತ್ಸಾಹ ಮತ್ತು ಆಕರ್ಷಣೆ ಹೆಚ್ಚಾಗಲಿದೆ. ಸಂಗಾತಿಯೊಂದಿಗೆ ನೇರ ನಡೆ ಹಾಗೂ ಮಾತುಕತೆ ಬಾಂಧವ್ಯವನ್ನು…

Read More

ತಾಳ್ಮೆ ಕಳೆದುಕೊಂಡಿಲ್ಲ, ಮಾತು ತಪ್ಪಿದ್ದಕ್ಕೆ ಬೇಸರವಷ್ಟೇ: ರಾಜೀನಾಮೆ ಬಗ್ಗೆ ಸಚಿವ ರಾಮಲಿಂಗಾರೆಡ್ಡಿ ಮಹತ್ವದ ಹೇಳಿಕೆ – Kannada News

ಬೆಂಗಳೂರು, ಜೂನ್ 6: ಖಾತೆ ಹಂಚಿಕೆ ಅಸಮಾಧಾನದ ಹಿನ್ನೆಲೆಯಲ್ಲಿ ರಾಜೀನಾಮೆ ನೀಡಿ ಸಂಚಲನ ಮೂಡಿಸಿದ್ದ ಹಿರಿಯ ನಾಯಕ ರಾಮಲಿಂಗಾರೆಡ್ಡಿ ಇಂದು (ಜೂನ್ 6) ಬೆಂಗಳೂರಿನ ಕೋರಮಂಗಲ ಕಚೇರಿಯಲ್ಲಿ ಸುದ್ದಿಗೋಷ್ಠಿ ನಡೆಸಿ ತಮ್ಮ ಮುಂದಿನ ನಡೆಯ ಬಗ್ಗೆ ಸ್ಪಷ್ಟನೆ ನೀಡಿದ್ದಾರೆ. ‘ನನ್ನ ರಾಜೀನಾಮೆಯನ್ನು ಅಂಗೀಕಾರ ಮಾಡುವುದಿಲ್ಲ ಎಂದು ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಹಾಗೂ ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲ ಹೇಳಿದ್ದಾರೆ. ನಾನು ನನ್ನ ಸ್ಪಷ್ಟ ಅಭಿಪ್ರಾಯವನ್ನು ನಾಯಕರ ಮುಂದೆ ಇಟ್ಟಿದ್ದೇನೆ’ ಎಂದು ಅವರು ತಿಳಿಸಿದರು. ಇದೇ…

Read More

ಕ್ಲಿಯರ್ ಔಟ್ ಆಗಿದ್ದರೂ… ನಾಟಕವಾಡಿ ಬಚಾವಾದ ಕೆಎಲ್ ರಾಹುಲ್! – Kannada News

ಮುಲ್ಲನ್‌ಪುರ ಕ್ರೀಡಾಂಗಣದಲ್ಲಿ ಭಾರತ ಮತ್ತು ಅಫ್ಘಾನಿಸ್ತಾನ್ ನಡುವಣ ಟೆಸ್ಟ್ ಪಂದ್ಯ ನಡೆಯುತ್ತಿದೆ. ಈ ಪಂದ್ಯದ ಮೊದಲ ದಿನದಾಟದಲ್ಲೇ ಸ್ವಾರಸ್ಯಕರ ಘಟನೆ ನಡೆದಿದೆ. ಅದು ಕೂಡ ಕೆಎಲ್ ರಾಹುಲ್ ಅವರ ನಾಟಕದೊಂದಿಗೆ..! ಹೌದು, ಈ ಮ್ಯಾಚ್​ನಲ್ಲಿ ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ಮಾಡುತ್ತಿರುವ ಟೀಮ್ ಇಂಡಿಯಾ ಪರ ಯಶಸ್ವಿ ಜೈಸ್ವಾಲ್ ಹಾಗೂ ಕೆಎಲ್ ರಾಹುಲ್ ಇನಿಂಗ್ಸ್ ಆರಂಭಿಸಿದ್ದರು. ಈ ಪಂದ್ಯದ 11ನೇ ಓವರ್‌ನಲ್ಲಿ ಅಫ್ಘಾನಿಸ್ತಾನದ ವೇಗಿ ಝಿಯಾವುರ್ ರೆಹಮಾನ್ ಎಸೆದ ಚೆಂಡನ್ನು ರಾಹುಲ್ ಕಟ್ ಮಾಡಲು ಯತ್ನಿಸಿದರು. ಈ…

Read More

Karnataka CET 2026 Toppers: ಕೆಸಿಇಟಿ ಫಲಿತಾಂಶ ಪ್ರಕಟ; ಈ ಬಾರಿಯೂ ಹೆಣ್ಣು ಮಕ್ಕಳದ್ದೇ ಮೇಲುಗೈ! – Kannada News

ಕೆಸಿಇಟಿ ಫಲಿತಾಂಶ ಟಾಪರ್‌ಗಳ ಪಟ್ಟಿ ಬೆಂಗಳೂರು: ಲಕ್ಷಾಂತರ ವಿದ್ಯಾರ್ಥಿಗಳು ಕಾತರದಿಂದ ಕಾಯುತ್ತಿದ್ದ 2026ನೇ ಸಾಲಿನ ಕರ್ನಾಟಕ ಸಾಮಾನ್ಯ ಪ್ರವೇಶ ಪರೀಕ್ಷೆಯ (UGCET) ಫಲಿತಾಂಶವನ್ನು ಕರ್ನಾಟಕ ಪರೀಕ್ಷಾ ಪ್ರಾಧಿಕಾರವು (KEA) ಇಂದು ಅಧಿಕೃತವಾಗಿ ಬಿಡುಗಡೆ ಮಾಡಿದೆ. ಫಲಿತಾಂಶದ ಜೊತೆಯಲ್ಲೇ ರಾಜ್ಯದ ಅತ್ಯಂತ ಪೈಪೋಟಿಯುಕ್ತ ವೃತ್ತಿಪರ ಕೋರ್ಸ್‌ಗಳಾದ ಇಂಜಿನಿಯರಿಂಗ್ ಹಾಗೂ ವೆಟರ್ನರಿ (ಪಶುಸಂಗೋಪನೆ) ವಿಭಾಗದ ಟಾಪರ್‌ಗಳ ಪಟ್ಟಿಯನ್ನು ಸಹ ಪ್ರಕಟಿಸಲಾಗಿದ್ದು, ಈ ಬಾರಿಯೂ ಹೆಣ್ಣು ಮಕ್ಕಳೇ ಮೇಲುಗೈ ಸಾಧಿಸಿದ್ದಾರೆ. ಇಂಜಿನಿಯರಿಂಗ್ ವಿಭಾಗದಲ್ಲಿ ತನಿಷಾ ಕಾರ್ತಿಕ್ ಸಾಧನೆ: ರಾಜ್ಯಾದ್ಯಂತ ತೀವ್ರ ಕುತೂಹಲ…

Read More

ಮೃತ ಮಹಿಳೆಯ ಕುಟುಂಬದವರಿಗೆ ಪರಿಹಾರ ನೀಡದ್ದಕ್ಕೆ ಕೆಕೆಆರ್​ಟಿಸಿ ಬಸ್ಸನ್ನೇ ಜಪ್ತಿ ಮಾಡಿದ್ರು!

ಬೀದರ್, ಜೂನ್ 6: ನ್ಯಾಯಾಲಯದ ಆದೇಶವಾಗಿದ್ದರೂ ಅಪಘಾತದಲ್ಲಿ ಮೃತಪಟ್ಟ ಮಹಿಳೆಯ ಕುಟುಂಬಕ್ಕೆ ನಿಗದಿತ ಪರಿಹಾರ ಮೊತ್ತ ನೀಡಲು ವಿಳಂಬ ಮಾಡಿದ ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಗೆ (KKRTC) ಬೀದರ್ ನ್ಯಾಯಾಲಯ ಭಾರಿ ಶಾಕ್ ನೀಡಿದೆ. ಕೋರ್ಟ್ ಆದೇಶ ಪಾಲಿಸದ ಹಿನ್ನೆಲೆಯಲ್ಲಿ ಕೆಕೆಆರ್‌ಟಿಸಿ ಸಂಸ್ಥೆಗೆ ಸೇರಿದ ಬಸ್ಸನ್ನೇ ಜಪ್ತಿ ಮಾಡಲಾಗಿದೆ. 2021 ರ ಆಗಸ್ಟ್ 15 ರಂದು ಭಾಲ್ಕಿ ತಾಲೂಕಿನ ಟೆಕ್ನಿ ಗ್ರಾಮದ ಬಳಿ ಭೀಕರ ರಸ್ತೆ ಅಪಘಾತ ಸಂಭವಿಸಿತ್ತು. ಈ ಅಪಘಾತದಲ್ಲಿ ರೇಖಾ ಸುನೀಲ್ (35)…

Read More

ಬಾಲಿವುಡ್ ಸ್ಟಾರ್ ನಿರ್ದೇಶಕನ ಚಿತ್ರಕ್ಕೆ ರವಿ ಬಸ್ರೂರು ಮ್ಯೂಸಿಕ್

ಮಲಯಾಳಂನಲ್ಲಿ ಸಿದ್ಧವಾದ ‘ದೃಶ್ಯಂ’  (Drishyam) ಸರಣಿ ಅದೇ ಹೆಸರಲ್ಲಿ ಹಿಂದಿಗೂ ರಿಮೇಕ್ ಆಗಿದೆ. ಈಗಾಗಲೇ ಎರಡು ಭಾಗ ತೆರೆಗೆ ಬಂದಿದ್ದು, ಮೂರನೇ ಭಾಗದ ಶೂಟಿಂಗ್ ಮುಕ್ತಾಯಗೊಂಡಿದೆ. ಈ ವರ್ಷದ ಅಕ್ಟೋಬರ್ 2ರಂದು ಸಿನಿಮಾ ತೆರೆಗೆ ಬರಲು ಸಜ್ಜಾಗುತ್ತಿದೆ. ಈ ಬಾರಿ ಈ ಚಿತ್ರದಲ್ಲಿ ಕನ್ನಡಿಗರು ಹೆಮ್ಮೆಪಡುವಂತಹ ದೊಡ್ಡ ಸುದ್ದಿಯೊಂದಿದೆ. ಹೌದು, ಭಾರತೀಯ ಚಿತ್ರರಂಗದ ಸ್ಟಾರ್ ಮ್ಯೂಸಿಕ್ ಡೈರೆಕ್ಟರ್, ಕನ್ನಡಿಗ ರವಿ ಬಸ್ರೂರು ಅವರಿಗೆ ‘ದೃಶ್ಯಂ 3’ ಚಿತ್ರಕ್ಕೆ ಸಂಗೀತ ನೀಡುವ ಆಫರ್ ಸಿಕ್ಕಿದೆ. ವಿಶೇಷವೆಂದರೆ, ‘ದೃಶ್ಯಂ’ ಸರಣಿಯ…

Read More