ಬಹು ನಿರೀಕ್ಷಿತ ಧಾರವಾಡ-ಬೆಳಗಾವಿ ರೈಲು ಮಾರ್ಗಕ್ಕೆ ಸ್ಥಳೀಯರ ತೀವ್ರ ವಿರೋಧ: ಕಾರಣ ಇಲ್ಲಿದೆ
ಧಾರವಾಡ, ಏಪ್ರಿಲ್ 08: ಉತ್ತರ ಕರ್ನಾಟಕದ ಮಹತ್ವಾಕಾಂಕ್ಷೆಯ ಯೋಜನೆಯಾಗಿರುವ ಧಾರವಾಡ-ಬೆಳಗಾವಿ ನಡುವಿನ ರೈಲು ಮಾರ್ಗ ನಿರ್ಮಾಣಕ್ಕೆ ಸ್ಥಳೀಯರಿಂದ ತೀವ್ರ ವಿರೋಧ ವ್ಯಕ್ತವಾಗಿದೆ. ನೂತನ ರೈಲು ಮಾರ್ಗದ ನೀಲ ನಕ್ಷೆಯ ಆಧಾರದಲ್ಲಿ ಸರ್ಕಾರದ ಹಾಗೂ ಖಾಸಗಿಯವರ ನೂರಾರು ಕಟ್ಟಡಗಳು ಕಾಮಗಾರಿ ಕಾರಣಕ್ಕೆ ನೆಲಸಮವಾಗಲಿದ್ದು, ಕೃಷಿ ಭೂಮಿಯೂ ರೈತರ ಕೈತಪ್ಪುವ ಆತಂಕ ಎದುರಾಗಿದೆ. ಹೀಗಾಗಿ ರೈಲು ಮಾರ್ಗ ಬದಲಾವಣೆ ಮಾಡುವಂತೆ ಆಗ್ರಹ ಕೇಳಿಬಂದಿದೆ. ಕೈಗಾರಿಕಾ ಪ್ರದೇಶಕ್ಕಾಗಿ ಈಗಾಗಲೇ ಧಾರವಾಡ ತಾಲೂಕಿನ ಮುಮ್ಮಿಗಟ್ಟಿ, ಬೇಲೂರು, ಚಿಕ್ಕಮಲ್ಲಿಗವಾಡ ಗ್ರಾಮಸ್ಥರು ತಮ್ಮೆಲ್ಲ ಭೂಮಿಯನ್ನು ಕಳೆದುಕೊಂಡಿದ್ದಾರೆ….