ಬಹು ನಿರೀಕ್ಷಿತ ಧಾರವಾಡ-ಬೆಳಗಾವಿ ರೈಲು ಮಾರ್ಗಕ್ಕೆ ಸ್ಥಳೀಯರ ತೀವ್ರ ವಿರೋಧ: ಕಾರಣ ಇಲ್ಲಿದೆ

ಬಹು ನಿರೀಕ್ಷಿತ ಧಾರವಾಡ-ಬೆಳಗಾವಿ ರೈಲು ಮಾರ್ಗಕ್ಕೆ ಸ್ಥಳೀಯರ ತೀವ್ರ ವಿರೋಧ: ಕಾರಣ ಇಲ್ಲಿದೆ

ಧಾರವಾಡ, ಏಪ್ರಿಲ್​​ 08: ಉತ್ತರ ಕರ್ನಾಟಕದ ಮಹತ್ವಾಕಾಂಕ್ಷೆಯ ಯೋಜನೆಯಾಗಿರುವ ಧಾರವಾಡ-ಬೆಳಗಾವಿ ನಡುವಿನ ರೈಲು ಮಾರ್ಗ ನಿರ್ಮಾಣಕ್ಕೆ ಸ್ಥಳೀಯರಿಂದ ತೀವ್ರ ವಿರೋಧ ವ್ಯಕ್ತವಾಗಿದೆ. ನೂತನ ರೈಲು ಮಾರ್ಗದ ನೀಲ ನಕ್ಷೆಯ ಆಧಾರದಲ್ಲಿ ಸರ್ಕಾರದ ಹಾಗೂ ಖಾಸಗಿಯವರ ನೂರಾರು ಕಟ್ಟಡಗಳು ಕಾಮಗಾರಿ ಕಾರಣಕ್ಕೆ ನೆಲಸಮವಾಗಲಿದ್ದು, ಕೃಷಿ ಭೂಮಿಯೂ ರೈತರ ಕೈತಪ್ಪುವ ಆತಂಕ ಎದುರಾಗಿದೆ. ಹೀಗಾಗಿ ರೈಲು ಮಾರ್ಗ ಬದಲಾವಣೆ ಮಾಡುವಂತೆ ಆಗ್ರಹ ಕೇಳಿಬಂದಿದೆ.

ಕೈಗಾರಿಕಾ ಪ್ರದೇಶಕ್ಕಾಗಿ ಈಗಾಗಲೇ ಧಾರವಾಡ ತಾಲೂಕಿನ ಮುಮ್ಮಿಗಟ್ಟಿ, ಬೇಲೂರು, ಚಿಕ್ಕಮಲ್ಲಿಗವಾಡ ಗ್ರಾಮಸ್ಥರು ತಮ್ಮೆಲ್ಲ ಭೂಮಿಯನ್ನು ಕಳೆದುಕೊಂಡಿದ್ದಾರೆ. ಹೀಗಿರುವಾಗ ಪ್ರಸ್ತುತ ಸಿದ್ಧವಾಗಿರುವ ನೀಲ ನಕ್ಷೆಯ ಅನ್ವಯ ಧಾರವಾಡ-ಬೆಳಗಾವಿ ನಡುವಿನ ರೈಲು ಮಾರ್ಗ ನಿರ್ಮಾಣ ಆಗಿದ್ದೇ ಆದಲ್ಲಿ, ಬೇಲೂರು ಕೈಗಾರಿಕಾ ಪ್ರದೇಶದಲ್ಲಿನ ಕೇಂದ್ರೀಯ ಉಗ್ರಾಣದ ನೂತನ ಕಟ್ಟಡ ಸೇರಿದಂತೆ ಮತ್ತಿತರ ಕೋಟ್ಯಾಂತರ ರೂಪಾಯಿ ಬೆಲೆಬಾಳುವ ಕಟ್ಟಡಗಳು‌ ನೆಲಸಮವಾಗಲಿವೆ. ಅಲ್ಲದೆ ಈ ರೈಲು ಮಾರ್ಗ ಪುಣೆ-ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ 50 ಮೀಟರ್ ಪಕ್ಕದಲ್ಲೇ ಹಾದು ಹೋಗಲಿರುವ ಕಾರಣ, ಭವಿಷ್ಯದಲ್ಲಿ ಹೆದ್ದಾರಿಯನ್ನು ಮತ್ತಷ್ಟು ವಿಸ್ತರಣೆ ಮಾಡಲು ಕೂಡ ಈ ಯೋಜನೆಯಿಂದ ಹಿನ್ನಡೆಯಾಗಲಿದೆ ಎಂಬುದು ಸ್ಥಳೀಯರ ವಾದ.

ಇದನ್ನೂ ಓದಿ: ಕೈದಿಗಳ ಕಳ್ಳಾಟಕ್ಕಿಲ್ಲ ಬ್ರೇಕ್​; ಪರಪ್ಪನ ಅಗ್ರಹಾರದ ಬಳಿಕ ಹುಬ್ಬಳ್ಳಿಯ ಉಪ ಕಾರಾಗೃಹದಲ್ಲಿಯೂ ಮೊಬೈಲ್​​ಗಳು ಪತ್ತೆ

ಧಾರವಾಡ-ಬೆಳಗಾವಿ ಮಧ್ಯೆ ಒಟ್ಟು 73 ಕಿ.ಮೀ. ನೂತನ ರೈಲು ಮಾರ್ಗ ನಿರ್ಮಾಣವಾಗಬೇಕಿದ್ದು, ಈ ಮಾರ್ಗಕ್ಕೆ‌ ಮೊದಲು ಅಂದಾಜು 927.42 ಕೋಟಿ ರೂಪಾಯಿ ವೆಚ್ಚ ಅಂದಾಜಿಸಲಾಗಿತ್ತಾದರೂ ಈಗ ಆ ಮೊತ್ತ 2,509 ಕೋಟಿಗೆ ಹೆಚ್ಚಿದೆ ಎನ್ನಲಾಗಿದೆ. ಧಾರವಾಡ ಜಿಲ್ಲೆಯಲ್ಲಿ 225 ಹಾಗೂ ಬೆಳಗಾವಿ ಜಿಲ್ಲೆಯಲ್ಲಿ 602 ಎಕರೆ ಜಮೀನು ಈ ಮಾರ್ಗದ ನಿರ್ಮಾಣಕ್ಕೆ ಅಗತ್ಯವಿದ್ದು, ಸಣ್ಣ ರೈತರ ಜಮೀನಿನ ಮೂಲಕ ಈ ಮಾರ್ಗವೇನಾದರೂ ಹಾದು ಹೋದರೆ ಅನ್ನದಾತರು ಸಂಕಷ್ಟಕ್ಕೆ ಸಿಲುಕಲಿದ್ದಾರೆ. ಉಳಿಯುವ ತುಂಡು ಜಮೀನಿನಲ್ಲಿ ಕೃಷಿ ಮಾಡಲಾಗದಿರೋದು ಒಂದೆಡೆಯಾದರೆ, ಮಾರೋಣ ಎಂದರೆ ಜಾಗದ ಮೌಲ್ಯವೂ ಕಡಿಮೆಯಾಗಬಹುದೆಂಬ ಆತಂಕ ಕಾಡತೊಡಗಿದೆ.

ಇನ್ನು ಎಲ್ಲವೂ ಅಂದುಕೊಂಡಂತೆ ಆಗಿದ್ದರೆ ಇಷ್ಟೊತ್ತಿಗೆ ಈ ಮಾರ್ಗ ನಿರ್ಮಾಣವಾಗಿ ಸಾರ್ವಜನಿಕರಿಗೆ ಸೇವೆ ಲಭ್ಯವಾಗಬೇಕಿತ್ತು. ಆದರೆ ರಾಜ್ಯ ಸರಕಾರ ತನ್ನ ಪಾಲಿನ ಜವಾಬ್ದಾರಿಯಾಗಿರುವ ಭೂಸ್ವಾಧೀನ ಪ್ರಕ್ರಿಯೆಯನ್ನು ಸರಿಯಾಗಿ ನಿರ್ವಹಿಸದ ಕಾರಣ ಕಾಮಗಾರಿ ವಿಳಂಬವಾಗಿದೆ. ಈ ನಡುವೆ ಮಾರ್ಗ ನಿರ್ಮಾಣಕ್ಕೆ ಸ್ಥಳೀಯರ ವಿರೋಧವೂ ಕೇಳಿಬಂದಿರುವ ಕಾರಣ ಯೋಜನೆಗೆ ಮತ್ತಷ್ಟು ಸಮಸ್ಯೆ ಎದುರಾಗುವ ಸಾಧ್ಯತೆ ಇದೆ ಎನ್ನಲಾಗಿದೆ.

ಮತ್ತಷ್ಟು ಸುದ್ದಿ ಓದಲು ಇಲ್ಲಿ ಕ್ಲಿಕ್​​ ಮಾಡಿ.

Source link

ಜೂ. ಎನ್‌ಟಿಆರ್, ಪ್ರಶಾಂತ್ ನೀಲ್ ಸಿನಿಮಾ ಸ್ಥಗಿತ? ಗಾಳಿ ಸುದ್ದಿಗೆ ಬ್ರೇಕ್ ಹಾಕಿದ ನಿರ್ಮಾಪಕರು

ಸ್ಯಾಂಡಲ್‌ವುಡ್‌ನ ಖ್ಯಾತ ನಿರ್ದೇಶಕ ಪ್ರಶಾಂತ್ ನೀಲ್ (Prashanth Neel) ಮತ್ತು ಟಾಲಿವುಡ್​ನ ಸ್ಟಾರ್ ನಟ ಜೂನಿಯರ್ ಎನ್‌ಟಿಆರ್ ಕಾಂಬಿನೇಷನ್‌ನ ಬಹುನಿರೀಕ್ಷಿತ ಚಿತ್ರದ ಬಗ್ಗೆ ಹಬ್ಬಿದ್ದ ವದಂತಿಗಳಿಗೆ ಈಗ ತೆರೆ ಬಿದ್ದಿದೆ. ಈ ಚಿತ್ರವು ಸ್ಥಗಿತಗೊಂಡಿದೆ ಎಂಬ ಸುದ್ದಿಯನ್ನು ನಿರ್ಮಾಣ ಸಂಸ್ಥೆಯು ಅಧಿಕೃತವಾಗಿ ನಿರಾಕರಿಸಿದೆ. ಈ ಚಿತ್ರಕ್ಕೆ ತಾತ್ಕಾಲಿಕವಾಗಿ ‘ಡ್ರ್ಯಾಗನ್’ (Dragon) ಅಥವಾ #NTRNeel ಎಂದು ಕರೆಯಲಾಗುತ್ತಿದೆ. ಈ ಸಿನಿಮಾದ ಚಿತ್ರೀಕರಣವು ನಿಂತಿದೆ ಎಂಬ ಮಾತುಗಳು ಕಳೆದ ಕೆಲವು ದಿನಗಳಿಂದ ಕೇಳಿಬರುತ್ತಿದ್ದವು.

ಈ ಚಿತ್ರದಲ್ಲಿ ಜೂನಿಯರ್ ಎನ್‌ಟಿಆರ್ ಅವರು ವಿವಿಧ ಲುಕ್‌ಗಳಲ್ಲಿ ಕಾಣಿಸಿಕೊಳ್ಳಲಿದ್ದಾರೆ ಎನ್ನಲಾಗಿದ್ದು, ಇತ್ತೀಚಿನ ಫೋಟೋಶೂಟ್‌ನಲ್ಲಿ ಅವರ ಲುಕ್ ಬಗ್ಗೆ ಪ್ರಶಾಂತ್ ನೀಲ್ ಮತ್ತು ಎನ್‌ಟಿಆರ್ ಅತೃಪ್ತಿ ಹೊಂದಿದ್ದಾರೆ. ಈ ಕಾರಣದಿಂದ ಸರಿಯಾದ ಲುಕ್ ಸಿಗುವವರೆಗೆ ಶೂಟಿಂಗ್ ಸ್ಥಗಿತಗೊಳಿಸಲಾಗಿದೆ ಎಂದು ಕೆಲವು ಮಾಧ್ಯಮಗಳು ವರದಿ ಮಾಡಿದ್ದವು.

ಆದರೆ ಈ ವಿಚಾರಕ್ಕೆ ಸಂಬಂಧಿಸಿದಂತೆ ನಿರ್ಮಾಣ ಸಂಸ್ಥೆಯಾದ ‘ಮೈತ್ರಿ ಮೂವೀ ಮೇಕರ್ಸ್’ ಕಡೆಯಿಂದ ಸ್ಪಷ್ಟನೆ ಸಿಕ್ಕಿದೆ. ಈ ಕುರಿತು ಎಕ್ಸ್ (ಟ್ವಿಟ್ಟರ್) ಮೂಲಕ ಸ್ಪಷ್ಟನೆ ನೀಡಿರುವ ನಿರ್ಮಾಣ ಸಂಸ್ಥೆಯು, ಸಿನಿಮಾದ ಕೆಲಸಗಳು ಯೋಜಿತವಾಗಿಯೇ ಸಾಗುತ್ತಿವೆ ಎಂದು ಸ್ಪಷ್ಟಪಡಿಸಿದೆ. ಈ ವಿಷಯ ಕೇಳಿ ಅಭಿಮಾನಿಗಳು ನಿಟ್ಟುಸಿರು ಬಿಟ್ಟಿದ್ದಾರೆ.

‘ನಟನ ಲುಕ್ ಅಥವಾ ಚಿತ್ರೀಕರಣ ಸ್ಥಗಿತದ ಬಗ್ಗೆ ಹರಡುತ್ತಿರುವ ಸುದ್ದಿಯಲ್ಲಿ ಯಾವುದೇ ಸತ್ಯಾಂಶವಿಲ್ಲ. ಸಿನಿಮಾವು ಈ ಮೊದಲಿನ ಪ್ಲಾನ್ ಪ್ರಕಾರವೇ ಸಾಗುತ್ತಿದೆ. ಇದು ಕೇವಲ ಮುಂದಿನ ಹಂತದ ಚಿತ್ರೀಕರಣಕ್ಕೆ ತಯಾರಿ ಮಾಡುವ ಸಲುವಾಗಿ ನೀಡಿದ ವಿರಾಮ ಅಷ್ಟೇ. ದಯವಿಟ್ಟು ಯಾರೂ ಅಧಿಕೃತವಲ್ಲದ ಮಾಹಿತಿಯನ್ನು ನಂಬಬೇಡಿ’ ಎಂದು ‘ಮೈತ್ರಿ ಮೂವೀ ಮೇಕರ್ಸ್’ ತಿಳಿಸಿದೆ.

ಇದನ್ನೂ ಓದಿ: ‘ಧುರಂಧರ್ 2’ ಚಿತ್ರದ ಖ್ಯಾತ ನಟನಿಗೆ ಸಿನಿಮಾ ಅವಕಾಶ ಕೊಟ್ಟ ಪ್ರಶಾಂತ್ ನೀಲ್

‘ಕೆಜಿಎಫ್: ಚಾಪ್ಟರ್ 1’, ‘ಕೆಜಿಎಫ್: ಚಾಪ್ಟರ್ 2’ ಮತ್ತು ‘ಸಲಾರ್’ ಸಿನಿಮಾಗಳ ಮೂಲಕ ಪ್ಯಾನ್ ಇಂಡಿಯಾ ಮಟ್ಟದಲ್ಲಿ ಸದ್ದು ಮಾಡಿರುವ ಪ್ರಶಾಂತ್ ನೀಲ್ ಅವರು ಜೂನಿಯರ್ ಎನ್‌ಟಿಆರ್ ಜೊತೆ ಕೈಜೋಡಿಸಿರುವುದು ಅಭಿಮಾನಿಗಳಲ್ಲಿ ಭಾರೀ ಕುತೂಹಲ ಮೂಡಿಸಿದೆ. ಈ ಚಿತ್ರವನ್ನು ಅತ್ಯಂತ ಅದ್ದೂರಿ ಬಜೆಟ್​ನಲ್ಲಿ ನಿರ್ಮಾಣ ಮಾಡಲಾಗುತ್ತಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Source link

ಚಾಮರಾಜನಗರ: ಹುಲಿಗೆ ಇಟ್ಟಿದ್ದ ಬೋನಿಗೆ ಬಿದ್ದ 4 ವರ್ಷದ ಚಿರತೆ

ಚಾಮರಾಜನಗರ, ಏಪ್ರಿಲ್​​ 08: ಗುಂಡ್ಲುಪೇಟೆ ತಾಲೂಕಿನ ಪಡಗೂರು ಗ್ರಾಮದ ಮಹದೇವಸ್ವಾಮಿ ಎಂಬವರ ಜಮೀನಿನಲ್ಲಿ ಹುಲಿ ಸೆರೆಗೆ ಇಟ್ಟಿದ್ದ ಬೋನಿಗೆ 4 ವರ್ಷದ ಚಿರತೆ ಬಿದ್ದಿರುವ ಘಟನೆ ನಡೆದಿದೆ. ಬಂಡೀಪುರ ಹುಲಿ ಸಂರಕ್ಷಿತಾರಣ್ಯ ಪ್ರದೇಶ ವ್ಯಾಪ್ತಿಯಲ್ಲಿ ಪಡಗೂರಿನಲ್ಲಿ ಕಳೆದ 10 ದಿನದಿಂದ ಹುಲಿ ಮತ್ತು ಚಿರತೆಗಳ ಓಡಾಟ ಕಂಡುಬಂದಿತ್ತು. ಈ ಹಿನ್ನೆಲೆ ಹುಲಿಯ ಸೆರೆಗಾಗಿ ಅರಣ್ಯ ಇಲಾಖೆ ಸಿಬ್ಬಂದಿ ಬೋನ್​​ ಇಟ್ಟಿದ್ದರು. ಬೋನಿಗೆ ಬಿದ್ದ ಚಿರತೆಯನ್ನು ಸುರಕ್ಷಿತ ಪ್ರದೇಶಕ್ಕೆ ಬಿಡುವುದಾಗಿ ಅರಣ್ಯ ಇಲಾಖೆಯ ಸಿಬ್ಬಂದಿ ತಿಳಿಸಿದ್ದಾರೆ. ಈಗ ಚಿರತೆ ಬೋನಿಗೆ ಬಿದ್ದರೂ ಹುಲಿ ದಾಳಿ ಆತಂಕ ಮಾತ್ರ ಗ್ರಾಮಸ್ಥರಲ್ಲಿ ಹಾಗೇ ಉಳಿದುಕೊಂಡಿದೆ.

ಮತ್ತಷ್ಟು ವಿಡಿಯೋ ನೋಡಲು ಇಲ್ಲಿ ಕ್ಲಿಕ್​​ ಮಾಡಿ.

 

Source link

ಸ್ವಾಮೀಜಿ ಬೆತ್ತಲೆ ವೀಡಿಯೋ ಕಾಲ್ ಕೇಸಿಗೆ ಸ್ಫೋಟಕ ಟ್ವಿಸ್ಟ್​: ಆರೋಪಿಸಿದ ಮಹಿಳೆಯೇ ನಾಪತ್ತೆ

ಬೆಂಗಳೂರು/ವಿಜಯಪುರ, (ಏಪ್ರಿಲ್ 08): ಕೂಡಲಸಂಗಮ ಪಂಚಮಸಾಲಿ ಪೀಠದ ಜಯಮೃತ್ಯುಂಜಯ ಸ್ವಾಮೀಜಿ (Basava Jaya Mruthyunjaya Swamiji) ವಿರುದ್ಧ  ಬೆಂಗಳೂರು ಮೂಲದ ಮಹಿಳೆಯೊಬ್ಬರು (Bengaluru Woman) ಲೈಂಗಿಕ ಕಿರುಕುಳ ಮತ್ತು ಬ್ಲಾಕ್‌ಮೇಲ್ ಆರೋಪ ಹೊರಿಸಿದ್ದು, ಈ ಪ್ರಕರಣ ಭಾರೀ ಸಂಚಲನ ಮೂಡಿಸಿದೆ. ಆದ್ರೆ, ಮಹಿಳಾ ಆಯೋಗಕ್ಕೆ (women commission) ದೂರು ನೀಡಿದ್ದ ಮಹಿಳೆ ಇದೀಗ ದಿಢೀರ್ ನಾಪತ್ತೆಯಾಗಿದ್ದಾರೆ.ಮಠಕ್ಕೆ ಕರೆಸಿ ನನ್ನೊಂದಿಗೆ ಅಸಭ್ಯವಾಗಿ ವರ್ತಿಸಿದ್ದು, ಆ ವಿಡಿಯೋ ಮಾಡಿಕೊಂಡು ಪ್ರತಿನಿತ್ಯ ರಾತ್ರಿ ಬೆತ್ತಲೆ ವಿಡಿಯೋ ಕಾಲ್ ಮಾಡುವಂತೆ ಬ್ಲ್ಯಾಕ್ ಮೇಲ್ ಮಾಡುತ್ತಿದ್ದಾರೆ. ಹೀಗೆ ಜಯಮೃತ್ಯುಂಜಯ ಸ್ವಾಮೀಜಿ ವಿರುದ್ಧ ಸಾಲು ಸಾಲು ಆರೋಪ ಮಾಡಿದ್ದ ಮಹಿಳೆ ನಾಪತ್ತೆಯಾಗಿದ್ದು, ಪೊಲೀಸರು ಎಷ್ಟೇ ಹುಡುಕಾಡುತ್ತಿದ್ದರೂ ಸಹ ಸಂಪರ್ಕಕ್ಕೆ ಸಿಗುತ್ತಿಲ್ಲ.

ಸ್ವಾಮೀಜಿ ವಿರುದ್ಧ ಆರೋಪ ಮಾಡಿದ್ದ ಮಹಿಳೆ ನಾಪತ್ತೆ

ಸ್ವಾಮೀಜಿ ವಿರುದ್ಧ ಆರೋಪ ಮಾಡಿದ ಮಹಿಳೆ ನಾಪತ್ತೆ ಜಯಮೃತ್ಯುಂಜಯ ಸ್ವಾಮೀಜಿ ವಿರುದ್ಧ ಹಲವು ಆರೋಪಗಳನ್ನು ಮಾಡಿದ್ದು, ಈ ಸಂಬಂಧ ಅವರ ವಿರುದ್ಧ ಸೂಕ್ತ ಕ್ರಮಕೈಗೊಳ್ಳುವಂತೆ ಮಹಿಳೆ ಮಹಿಳಾ ಆಯೋಗಕ್ಕೆ ದೂರು ನೀಡಿದ್ದಾರೆ. ಈ ಹಿನ್ನೆಲೆಯಲ್ಲಿ ಪೊಲೀಸರು, ಸಂತ್ರಸ್ತ ಮಹಿಳೆಯಿಂದ ಅಧಿಕೃತ ದೂರು ಪಡೆಯಲು ಮುಂದಾಗಿದ್ದಾರೆ. ಆದ್ರೆ, ಮಹಿಳೆ ಮಾತ್ರ ನಿಗೂಢವಾಗಿ ನಾಪತ್ತೆಯಾಗಿದ್ದಾಳೆ. ಪೊಲೀಸರು ಎಷ್ಟೇ ಸಂಪರ್ಕಕ್ಕೆ ಯತ್ನ ಮಾಡಿದ್ರೂ ಸಂತ್ರಸ್ಥೆ ಸಂಪರ್ಕಕ್ಕೆ ಸಿಗುತ್ತಿಲ್ಲ. ಮಹಿಳೆಯ ಅಧಿಕೃತ ನಿವಾಸಕ್ಕೂ ಪೊಲೀಸರು ತೆರಳಿ ಪರಿಶೀಲನೆ ಮಾಡಿದರೂ ಸಹ ಪತ್ತೆಯಾಗಿಲ್ಲ. ಮಹಿಳೆ ಫೋನ್ ನಂಬರ್ ಕೂಡ ಸ್ವಿಚ್ಡ್ ಆಫ್ ಆಗಿದೆ. ಹೀಗಾಗಿ ಪೊಲೀಸರು ಸದ್ಯಕ್ಕೆ ಯಾವುದೇ ಪ್ರಕರಣ ದಾಖಲಿಸಿಕೊಂಡಿಲ್ಲ.

ಇದನ್ನೂ ಓದಿ: ‘ಬೆತ್ತಲೆ ವೀಡಿಯೋ ಕಾಲ್ ಮಾಡು ಎಂದು ಪೀಡಿಸುತ್ತಾರೆ’: ಬಸವಜಯ ಮೃತ್ಯುಂಜಯ ಸ್ವಾಮೀಜಿ ಮೇಲೆ ಲೈಂಗಿಕ ದೌರ್ಜನ್ಯದ ಆರೋಪ!

ಸ್ವಾಮೀಜಿಯಿಂದ ದೂರು ದಾಖಲು

ಮಹಿಳೆ ಮಹಿಳಾ ಆಯೋಗಕ್ಕೆ ದೂರು ನೀಡುತ್ತಿದ್ದಂತೆಯೆ ಅತ್ತ ವಿಜಯಪುರ ಗ್ರಾಮೀಣ ಠಾಣೆಗೆ ಸ್ವಾಮೀಜಿ ಹನಿಟ್ರ್ಯಾಪ್ ದೂರು ದಾಖಲಿಸಿದ್ದಾರೆ.  ಹಲ್ಲೆ ನಡೆಸಿ ನಂತರ ಹಣಕ್ಕಾಗಿ ಬ್ಲ್ಯಾಕ್‌ಮೇಲ್ ಮಾಡಲಾಗುತ್ತಿದೆ ಎಂದು ಬಸವಜಯ ಮೃತ್ಯುಂಜಯ ಸ್ವಾಮೀಜಿ ಅವರು ತಮ್ಮ ಶಿಷ್ಯ ಸಂತೋಷ ಮಂಜಣ್ಣಿ ಮೂಲಕ ವಿಜಯಪುರ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.

ಮಹಿಳೆಯು ಅನಾಥಾಶ್ರಮ ನಡೆಸುತ್ತಿರುವುದಾಗಿ ಸುಳ್ಳು ಹೇಳಿ ಪರಿಚಯ ಮಾಡಿಕೊಂಡಿದ್ದಳು. ನನ್ನ ತೇಜೋವಧೆ ಮಾಡುವುದಾಗಿ ಬೆದರಿಸಿ 3 ಕೋಟಿ ರೂಪಾಯಿ ನೀಡುವಂತೆ ಬ್ಲಾಕ್‌ಮೇಲ್ ಮಾಡುತ್ತಿದ್ದಾಳೆ ಎಂದು ದೂರಿನಲ್ಲಿ ಉಲ್ಲೇಖಿಸಿದ್ದಾರೆ. ಸಂಬಂಧ ಮಹಿಳೆ ಸೇರಿದಂತೆ ಹಲವರ ವಿರುದ್ಧ ಎಫ್​ಐಆರ್ ದಾಖಲಾಗಿದ್ದು, ಪೊಲೀಸರು ತನಿಖೆ ನಡೆಸಿದ್ದಾರೆ.

ಇದನ್ನೂ ಓದಿ: ಸ್ವಾಮೀಜಿಯನ್ನು ಹನಿಟ್ರಾಪ್ ಮಾಡಲು ನಡೆದಿತ್ತಾ ಸಂಚು?: ಇದರ ಹಿಂದೆ ಶಾಸಕ ಕಾಶಪ್ಪನವರ್ ಕೈವಾಡ ಇದ್ಯಾ? ದೂರಿನಲ್ಲಿ ಬಿಚ್ಚಿಟ್ಟ ಸತ್ಯ!

ಸ್ವಾಮೀಜಿ ದೂರಿಗೆ ಹೆದರಿ ತಲೆಮರೆಸಿಕೊಂಡ್ರಾ?

ಸ್ವಾಮೀಜಿ ದೂರಿಗೆ ತಲೆಮರೆಸಿಕೊಂಡ್ರಾ? ಬೆಂಗಳೂರಿನ ಮಹಿಳೆ ಮಹಿಳಾ ಆಯೋಗಕ್ಕೆ ದೂರು ನೀಡುತ್ತಿದ್ದಂತೆಯೇ ಅತ್ತ ವಿಜಯಪುರಲ್ಲಿ ಜಯಮೃತ್ಯುಂಜಯ ಸ್ವಾಮೀಜಿ ಸಹ ಮಹಿಳೆ ಸೇರಿದಂತೆ ಇತರರ ವಿರುದ್ಧ ಹನಿಟ್ರ್ಯಾಪ್ ದೂರು ನೀಡಿದ್ದು, ಈ ಸಂಬಂಧ ವಿಜಯಪುರ ಪೊಲೀಸರು ಎಫ್​​ಐಆರ್ ದಾಖಸಿಕೊಂಡು ಮಹಿಳೆ ಹಾಗೂ ಖಾಸಗಿ ಚಾನಲ್ ಎಂಡಿ ಸೇರಿದಂತೆ ಇತರೆ ಆರೋಪಿಗಳಿಗಾಗಿ ಹುಡುಕಾಟ ನಡೆಸಿದ್ದಾರೆ. ಬೆಂಗಳೂರು, ಮಂಡ್ಯ, ವಿಜಯಪುರ ಸೇರಿದಂತೆ ಪಕ್ಕದ ರಾಜ್ಯಗಳಲ್ಲೂ ಕಾರ್ಯಚರಣೆ ನಡೆಸಿದ್ದಾರೆ. ಇದರಿಂದ ಭಯಗೊಂಡು ಮಹಿಳೆ ತಲೆಮರೆಸಿಕೊಂಡ್ರಾ ಎನ್ನುವ ಅನುಮಾಗಳು ವ್ಯಕ್ತವಾಗಿವೆ.

ಸ್ವಾಮೀಜಿಯದ್ದು ಎನ್ನಲಾದ ಕೆಲವು ಖಾಸಗಿ ವಿಡಿಯೋ ತುಣುಕುಗಳು ಇತ್ತೀಚೆಗೆ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿರುವುದು ಪ್ರಕರಣಕ್ಕೆ ಮತ್ತಷ್ಟು ತಿರುವು ನೀಡಿದೆ. ಒಂದು ಕಡೆ ಮಹಿಳೆಯು ಲೈಂಗಿಕ ದೌರ್ಜನ್ಯದ ಆರೋಪ ಮಾಡಿದರೆ, ಮತ್ತೊಂದೆಡೆ ಸ್ವಾಮೀಜಿ “ಇದು ವ್ಯವಸ್ಥಿತ ಪಿತೂರಿ ಮತ್ತು ಹನಿಟ್ರ್ಯಾಪ್ ಮಾದರಿಯ ಬ್ಲಾಕ್‌ಮೇಲ್,”ಎಂದು ಹೇಳಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಈ ಸಂಬಂಧ ಪೊಲೀಸರು ತನಿಖೆ ಮುಂದುವರಿಸಿದ್ದು, ಅಂತಿಮವಾಗಿ ಈ ಪ್ರಕರಣ ಯಾವ ಹಂತಕ್ಕೆ ಬಂದು ನಿಲ್ಲಲಿದೆ ಎನ್ನುವುದನ್ನು ಕಾದುನೋಡಬೇಕಿದೆ.

ಕರ್ನಾಟಕದ ಮತ್ತಷ್ಟು ಸುದ್ದಿ ಓದಲು ಇಲ್ಲಿ ಕ್ಲಿಕ್ ಮಾಡಿ.

Source link

IPL 2026: ನಂಬಲಸಾಧ್ಯ..! ಬುಮ್ರಾ ಸೇರಿದಂತೆ ಈ ಆರು ಬೌಲರ್​ಗಳಿಗೆ ಇನ್ನೂ ವಿಕೆಟ್ ಸಿಕ್ಕಿಲ್ಲ

Source link

ಲೇ ಆಫ್ ಅಂದ್ರೆ ಭಯವಿಲ್ಲ, ಇದು ಹೊಸ ಆರಂಭ!: ಕೆಲಸ ಕಳೆದುಕೊಂಡರೂ ಸಂಭ್ರಮಿಸಿದ ಬೆಂಗಳೂರಿನ ಸಾಫ್ಟ್‌ವೇರ್ ಎಂಜಿನಿಯರ್

ಬೆಂಗಳೂರು, ಏ.8: ಬೆಂಗಳೂರಿನಲ್ಲಿ ದಿನಕ್ಕೊಂದು ಲೇ ಆಫ್ ಸುದ್ದಿಗಳು ಬರುತ್ತಿದೆ. ಎಐ ಪರಿಣಾಮದಿಂದ, ಇನ್ನು ಅನೇಕರ ಕಾರಣದಿಂದ ಕೆಲಸ ಕಳೆದುಕೊಳ್ಳುತ್ತಿದ್ದಾರೆ ಎಂಬ ಮಾತುಗಳು ಇದೆ. ಲೇ ಆಫ್ ಆದ್ರೆ ಎಲ್ಲರಿಗೂ ಆತಂಕ ಆಗುತ್ತಿದೆ. ಮುಂದಿನ ಜೀವನ ಹೇಗೆ? ಇಎಂಐಗಳನ್ನು ಕಟ್ಟುವುದು ಎಂಬ ಯೋಚನೆಗಳು ಇರುತ್ತದೆ. ಆದರೆ ಇಲ್ಲೊಬ್ಬರು ಐಟಿ ಉದ್ಯೋಗಿ ಅಷ್ಟು ದೊಡ್ಡ ಕೆಲಸವನ್ನು ಕಳೆದುಕೊಂಡು ಬಿಂದಾಸ್​​ ಆಗಿದ್ದಾರೆ. ಬೆಂಗಳೂರು ಮೂಲದ ಟೆಕ್ಕಿಯೊಬ್ಬರು ಕೆಲಸ ಕಳೆದುಕೊಂಡ ನಂತರ ಪೋಸ್ಟ್​​ವೊಂದನ್ನು ಹಂಚಿಕೊಂಡಿದ್ದಾರೆ. ಇದೀಗ ಈ ಸುದ್ದಿ ಸಾಮಾಜಿಕ ಜಾಲತಾಣದಲ್ಲಿ ಭಾರೀ ವೈರಲ್​​ ಆಗಿದೆ.

ಈ ಟೆಕ್ಕಿಯು ತಾನು ಕೆಲಸ ಕಳೆದುಕೊಂಡಿರುವುದನ್ನು ಸಕಾರಾತ್ಮಕವಾಗಿ ಸ್ವೀಕರಿಸಿದ್ದಾರೆ. “ಕಳೆದ ಕೆಲವು ವರ್ಷಗಳಿಂದ ನಿರಂತರ ಕೆಲಸದ ಒತ್ತಡದಲ್ಲಿದ್ದೆ. ಈಗ ಸಿಕ್ಕಿರುವ ಈ ಬಿಡುವು ನನ್ನ ವೈಯಕ್ತಿಕ ಬೆಳವಣಿಗೆಗೆ ಮತ್ತು ಕುಟುಂಬದೊಂದಿಗೆ ಸಮಯ ಕಳೆಯಲು ಸಿಕ್ಕ ಅವಕಾಶ,” ಎಂದು ಅವರು ಬರೆದುಕೊಂಡಿದ್ದಾರೆ. ಅಲ್ಲದೆ, ಹಣಕಾಸಿನ ಸ್ವಾತಂತ್ರ್ಯ (Financial Freedom) ಮತ್ತು ಉಳಿತಾಯದ ಮಹತ್ವದ ಬಗ್ಗೆಯೂ ಅವರು ಬೆಳಕು ಚೆಲ್ಲಿದ್ದಾರೆ. “ನನ್ನನ್ನು ಕೆಲಸದಿಂದ ವಜಾ ಮಾಡಲಾಗಿದೆ, ಆದರೂ ನನಗೆ ಸಂತೋಷವಾಗುತ್ತಿದೆ…. ಮತ್ತು ಇಲ್ಲ, ನನ್ನ ಕೈಯಲ್ಲಿ ಯಾವುದೇ ಆಫರ್ ಇಲ್ಲ… ನನಗೆ ಅದ್ಭುತವೆನಿಸಲು ಒಂದೇ ಕಾರಣವೆಂದರೆ ನನಗೆ EMI ನಲ್ಲಿ ಮನೆ ಇಲ್ಲದಿರುವುದು” ಎಂದು ಪೋಸ್ಟ್‌ನಲ್ಲಿ ಹೇಳಲಾಗಿದೆ.

ಇದನ್ನೂ ಓದಿ: ಬೆಂಗಳೂರಿನಲ್ಲಿ ಬೇಸಿಗೆಯ ಬಿಸಿ ತಪ್ಪಿಸಲು ಬಾಗಿಲು ತೆರೆದಿಟ್ಟು ಮಲಗಿದ್ದ ಮಹಿಳೆಗೆ ಕಾದಿತ್ತು ಶಾಕ್!

ಈ ಪೋಸ್ಟ್ ಬೆನ್ನಲ್ಲೇ ನೆಟ್ಟಿಗರು ಎರಡು ಗುಂಪುಗಳಾಗಿ ವಿಂಗಡಣೆಯಾಗಿದ್ದಾರೆ. ಒಂದು ವರ್ಗದ ಜನರು ಅವರ ಸಕಾರಾತ್ಮಕ ಮನೋಭಾವವನ್ನು ಶ್ಲಾಘಿಸಿದರೆ, ಇನ್ನೊಂದು ವರ್ಗವು “ಇದು ಎಲ್ಲರಿಗೂ ಸಾಧ್ಯವಿಲ್ಲ, ಸಾಲ ಮತ್ತು ಆರ್ಥಿಕ ಸಂಕಷ್ಟದಲ್ಲಿರುವವರಿಗೆ ಲೇ ಆಫ್ ಒಂದು ಶಾಪ,” ಎಂದು ಅಭಿಪ್ರಾಯಪಟ್ಟಿದ್ದಾರೆ. ಬೆಂಗಳೂರಿನಲ್ಲಿ ಜೀವನ ವೆಚ್ಚ ಮತ್ತು ಮನೆ ಬಾಡಿಗೆ ಹೆಚ್ಚುತ್ತಿರುವ ಈ ಸಮಯದಲ್ಲಿ ಕೆಲಸ ಕಳೆದುಕೊಳ್ಳುವುದು ಸವಾಲಿನ ಕೆಲಸ ಎಂಬ ಚರ್ಚೆಯೂ ತೀವ್ರಗೊಂಡಿದೆ.

ರಾಜ್ಯದ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

 

Source link

ಭಾರತದ ಅತಿದೊಡ್ಡ ಟ್ರೇಡಿಂಗ್ ಪಾರ್ಟ್ನರ್: ಅಮೆರಿಕವನ್ನು ಹಿಂದಿಕ್ಕಿದ ಚೀನಾ

ನವದೆಹಲಿ, ಏಪ್ರಿಲ್ 8: ಚೀನಾ (China) 2025-26ರ ಹಣಕಾಸು ವರ್ಷದಲ್ಲಿ ಭಾರತದ ಅತಿದೊಡ್ಡ ಟ್ರೇಡಿಂಗ್ ಪಾರ್ಟ್ನರ್ ಎನಿಸಿದೆ. ಈ ವಿಚಾರದಲ್ಲಿ ಅಮೆರಿಕವನ್ನು ಚೀನಾ ಹಿಂದಿಕ್ಕಿದೆ ಎಂದು ಭಾರತದಲ್ಲಿರುವ ಚೀನಾ ರಾಯಭಾರ ಕಚೇರಿಯ ವಕ್ತಾರ ಶು ಫೇಹೋಂಗ್ ತಿಳಿಸಿದ್ದಾರೆ. ಕಳೆದ ಹಣಕಾಸು ವರ್ಷದ ಮೊದಲ 11 ತಿಂಗಳ ದತ್ತಾಂಶವನ್ನು ಆಧಾರವಾಗಿಟ್ಟುಕೊಂಡು ಅವರು ಈ ಟ್ವೀಟ್ ಮಾಡಿದ್ದಾರೆ.

2025ರ ಏಪ್ರಿಲ್​ನಿಂದ 2026ರ ಫೆಬ್ರುವರಿವರೆಗಿನ 11 ತಿಂಗಳಲ್ಲಿ ಭಾರತ ಮತ್ತು ಅಮೆರಿಕ ನಡುವಿನ ವ್ಯಾಪಾರ 127.8 ಬಿಲಿಯನ್ ಡಾಲರ್​ನಷ್ಟು ಇತ್ತು. ಅದೇ ಅವಧಿಯಲ್ಲಿ ಭಾರತ ಮತ್ತು ಚೀನಾ ನಡುವೆ 137 ಬಿಲಿಯನ್ ಡಾಲರ್ ವ್ಯಾಪಾರ ನಡೆದಿದೆ. ಸತತ 11 ತಿಂಗಳು ಭಾರತಕ್ಕೆ ಚೀನಾವೇ ಅತಿದೊಡ್ಡ ಟ್ರೇಡಿಂಗ್ ಪಾರ್ಟ್ನರ್ ಆಗಿರುವುದು ಸಂತೋಷದ ಸಂಗತಿ ಎಂದು ಚೀನಾ ರಾಯಭಾರ ವಕ್ತಾರರು ಎಕ್ಸ್​ನಲ್ಲಿ ಪೋಸ್ಟ್ ಮಾಡಿದ್ದಾರೆ.

ಇದನ್ನೂ ಓದಿ: ಹಾರ್ಮುಜ್ ಜಲಸಂಧಿಯಲ್ಲಿ ಹಡಗುಳಿಂದ ಟೋಲ್ ವಸೂಲಿಗೆ ಇರಾನ್ ಯೋಜನೆ; ಅಂತಾರಾಷ್ಟ್ರೀಯ ನಿಯಮಗಳು ಏನು ಹೇಳುತ್ತವೆ?

ಎರಡು ತಿಂಗಳ ಹಿಂದೆ, ಇರಾನ್ ಯುದ್ಧಕ್ಕೆ ಮೊದಲು ಮುಂಬೈನಲ್ಲಿರುವ ಚೀನಾದ ಕಾನ್ಸುಲ್ ಜನರಲ್ ಆದ ಖಿನ್ ಜೀ ಅವರು ಭಾರತ ಹಾಗೂ ಚೀನಾ ದೇಶಗಳ ಆರ್ಥಿಕ ಬೆಳವಣಿಗೆ ಕುರಿತ ಮಾತನಾಡಿದ್ದರು. ಈ ಎರಡು ದೇಶಗಳು ದೊಡ್ಡ ಆರ್ಥಿಕತೆ ಹೊಂದಿವೆ. ಬಹುಪಕ್ಷೀಯ ವ್ಯಾಪಾರ ವಹಿವಾಟುಗಳನ್ನು ಬೆಂಬಲಿಸುತ್ತವೆ. ಹೀಗಾಗಿ, ಬಾಹ್ಯ ಪರಿಣಾಮಗಳಿಂದ ಭಾರತ ಮತ್ತು ಚೀನಾ ವ್ಯಾಪಾರ ಕುಂಠಿತಗೊಳ್ಳುವುದಿಲ್ಲ ಎಂದು ಹೇಳಿದ್ದರು.

ಚೀನಾ ಭಾರತದ ಅತಿದೊಡ್ಡ ಟ್ರೇಡಿಂಗ್ ಪಾರ್ಟ್ನರ್ ಎನಿಸಿದರೂ, ಎರಡು ದೇಶಗಳ ನಡುವಿನ ವ್ಯಾಪಾರ ಅಂತರ ಬಹಳ ಅಗಾಧವಾಗಿದೆ. ಚೀನಾ ಎದುರು ಭಾರತ ವಿಪರೀತ ಟ್ರೇಡ್ ಡೆಫಿಸಿಟ್ ಹೊಂದಿದೆ. ಆದರೆ, ಅಮೆರಿಕ ಎದುರು ಭಾರತ ಟ್ರೇಡ್ ಸರ್​ಪ್ಲಸ್ ಸ್ಥಿತಿ ಹೊಂದಿದೆ.

ಇದನ್ನೂ ಓದಿ: ಯುಎಇಗೆ ಸಾಲ ವಾಪಸ್ ಕೊಟ್ಟರೆ ಪಾಕಿಸ್ತಾನದ ಆರ್ಥಿಕ ಪರಿಸ್ಥಿತಿ ಏನಾಗಬಹುದು? ಇಲ್ಲಿದೆ ಇಂಟರೆಸ್ಟಿಂಗ್ ಲೆಕ್ಕಾಚಾರ

2025-26ರ ಹಣಕಾಸು ವರ್ಷದಲ್ಲಿ ಏಪ್ರಿಲ್​ನಿಂದ ಜನವರಿವರೆಗೆ ಚೀನಾಗೆ ಭಾರತ ರಫ್ತು ಮಾಡಿದ್ದು 15.88 ಬಿಲಿಯನ್ ಡಾಲರ್. ಆದರೆ, ಆಮದು ಮಾಡಿಕೊಂಡಿದ್ದು 108.18 ಬಿಲಿಯನ್ ಡಾಲರ್. ಈ ಅವಧಿಯಲ್ಲಿ ಅಮೆರಿಕಕ್ಕೆ ಭಾರತ 73.7 ಬಿಲಿಯನ್ ಡಾಲರ್ ರಫ್ತು ಮಾಡಿದರೆ, 44.1 ಬಿಲಿಯನ್ ಡಾಲರ್ ಮಾತ್ರವೇ ಆಮದು ಮಾಡಿಕೊಂಡಿರುವುದು. ಹೀಗಾಗಿ, ಭಾರತಕ್ಕೆ ಅಮೆರಿಕ ಮುಖ್ಯವಾದ ಟ್ರೇಡಿಂಗ್ ಪಾರ್ಟ್ನರ್ ಮಾತ್ರವಲ್ಲ, ಅತಿದೊಡ್ಡ ರಫ್ತು ಮಾರುಕಟ್ಟೆಯೂ ಆಗಿದೆ.

ಇನ್ನಷ್ಟು ವಾಣಿಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

Source link

Cold Water Vs Warm Water: ಬಿಸಿ ನೀರು ಅಥವಾ ತಣ್ಣೀರು; ಬೇಸಿಗೆಯಲ್ಲಿ ಕುಡಿಯಲು ಯಾವುದು ಬೆಸ್ಟ್?

ಬೇಸಿಗೆಯ ಧಗೆಗೆ ಪದೇ ಪದೇ ಬಾಯಾರಿಕೆಯಾಗುವುದು ಸಹಜ. ಉಷ್ಣತೆ ಹೆಚ್ಚಾಗುತ್ತಿರುವ ಈ ಸಮಯದಲ್ಲಿ, ಹೈಡ್ರೇಟ್ ಆಗಿರುವುದು ಬಹಳ ಮುಖ್ಯ. ಆದರೆ ಬೇಸಿಗೆಯಲ್ಲಿ ಬಿಸಿ ನೀರಿನ ಸೇವನೆ ಮಾಡಲು ಯಾರೂ ಇಷ್ಟಪಡುವುದಿಲ್ಲ. ಹೆಚ್ಚಿನವರು ತಣ್ಣೀರನ್ನೇ ಕುಡಿಯಲು ಇಷ್ಟಪಡುತ್ತಾರೆ. ಬಿಸಿ ನೀರು ಅಥವಾ ಸಾಮಾನ್ಯ ತಾಪಮಾನದಲ್ಲಿರುವ ನೀರು ಅಂದರೆ ಉಗುರು ಬೆಚ್ಚಗಿನ ನೀರು (Lukewarm Water) ಆರೋಗ್ಯಕ್ಕೆ ಹೆಚ್ಚು ಒಳ್ಳೆಯದಾದರೂ ಕೂಡ ಬಿಸಿ ನೀರು ಕುಡಿಯಲು ಮನಸ್ಸು ಬರುವುದಿಲ್ಲ. ಹಾಗಾಗಿ ಫ್ರಿಡ್ಜ್ ನಲ್ಲಿಟ್ಟ ಐಸ್ ಆಗಿರುವ ನೀರು, ತಂಪಾದ ನೀರು, ಈ ರೀತಿ ಅರೆಕ್ಷಣಕ್ಕೆ ಖುಷಿ ಕೊಡುವುದನ್ನೇ ಕುಡಿಯುತ್ತಾರೆ. ಹಾಗಾದರೆ ಆರೋಗ್ಯ ತಜ್ಞರ ಪ್ರಕಾರ ಈ ಸಮಯದಲ್ಲಿ ಯಾವ ರೀತಿಯ ನೀರು ಆರೋಗ್ಯಕ್ಕೆ ಒಳ್ಳೆಯದು, ಬಿಸಿ ನೀರು ಕುಡಿಯುವುದರಿಂದ ಸಿಗುವ ಪ್ರಯೋಜನವೇನು ತಿಳಿದುಕೊಳ್ಳಿ.

ತಣ್ಣೀರು ಕುಡಿಯುವುದರಿಂದಾಗುವ ಪರಿಣಾಮ;

ಬೇಸಿಗೆಯಲ್ಲಿ ತಣ್ಣೀರು ತಕ್ಷಣ ತಂಪು ನೀಡಿದರೂ, ಅದನ್ನು ಹೆಚ್ಚಿನ ಪ್ರಮಾಣದಲ್ಲಿ ಕುಡಿಯುವುದರಿಂದ ಜೀರ್ಣಕ್ರಿಯೆಯ ಮೇಲೆ ಪರಿಣಾಮ ಬೀರುವ ಸಾಧ್ಯತೆ ಇದೆ. ತಣ್ಣೀರು ದೇಹದ ಒಳಗಿನ ತಾಪಮಾನವನ್ನು ತಕ್ಷಣ ಕಡಿಮೆ ಮಾಡುವುದರಿಂದ ಜೀರ್ಣಕ್ರಿಯೆ ನಿಧಾನಗೊಳ್ಳಬಹುದು. ವಿಶೇಷವಾಗಿ ಊಟದ ನಂತರ ತಣ್ಣೀರು ಕುಡಿಯುವುದರಿಂದ ಆಹಾರ ಸರಿಯಾಗಿ ಜೀರ್ಣವಾಗದೇ ಅಜೀರ್ಣ ಸಮಸ್ಯೆಗಳು ಉಂಟಾಗಬಹುದು.

ಬಿಸಿನೀರು ಕುಡಿಯುವುದರಿಂದಾಗುವ ಲಾಭಗಳು;

ಸಾಮಾನ್ಯವಾಗಿ ಬಿಸಿ ಅಥವಾ ತುಸು ಬೆಚ್ಚಗಿನ ನೀರು ದೇಹದ ಜೀರ್ಣಕ್ರಿಯೆಯನ್ನು ಸುಧಾರಿಸಲು ಸಹಾಯಕವಾಗಿದೆ. ಇದು ದೇಹದ ಒಳಗಿನ ರಕ್ತಸಂಚಾರವನ್ನು ಸುಧಾರಿಸುತ್ತದೆ ಮತ್ತು ವಿಷಕಾರಿ ಅಂಶಗಳನ್ನು ಹೊರಹಾಕಲು ಸಹಕಾರಿಯಾಗುತ್ತದೆ. ಬೇಸಿಗೆಯಲ್ಲೂ ಸಹ ಬೆಳಿಗ್ಗೆ ಬೆಚ್ಚಗಿನ ನೀರು ಕುಡಿಯುವುದು ದೇಹದ ಮೆಟಾಬಾಲಿಸಂ ಹೆಚ್ಚಿಸಲು ಸಹಾಯ ಮಾಡುತ್ತದೆ ಎಂದು ಆರೋಗ್ಯ ತಜ್ಞರು ಹೇಳುತ್ತಾರೆ.

ಇದನ್ನೂ ಓದಿ: ತಂಪಾದ ನೀರು ನಿಜವಾಗಿಯೂ ಆರೋಗ್ಯಕ್ಕೆ ಒಳ್ಳೆಯದಲ್ಲವೇ? ನಿಜಾಂಶವನ್ನು ತಜ್ಞರಿಂದಲೇ ತಿಳಿದುಕೊಳ್ಳಿ

ಸಾಮಾನ್ಯ ತಾಪಮಾನದಲ್ಲಿರುವ ನೀರೇ ಉತ್ತಮ ಆಯ್ಕೆ:

ತಜ್ಞರ ಪ್ರಕಾರ, ಬೇಸಿಗೆಯಲ್ಲಿ ತಣ್ಣೀರು ಅಥವಾ ತುಂಬಾ ಬಿಸಿ ನೀರಿಗಿಂತ ಸಾಮಾನ್ಯ ತಾಪಮಾನದಲ್ಲಿರುವ ನೀರು ಅಂದರೆ ಉಗುರು ಬೆಚ್ಚಗಿನ ನೀರು ಕುಡಿಯುವುದು ಬಹಳ ಉತ್ತಮ. ಇದು ದೇಹವನ್ನು ಸಮತೋಲನದಲ್ಲಿ ಇಡುತ್ತದೆ ಮತ್ತು ಜೀರ್ಣಕ್ರಿಯೆಯ ಮೇಲೂ ಕೆಟ್ಟ ಪರಿಣಾಮ ಬೀರುವುದಿಲ್ಲ. ವಿಶೇಷವಾಗಿ ಹೊರಗೆ ಹೋಗಿ ಬಂದ ತಕ್ಷಣ ತಣ್ಣೀರು ಕುಡಿಯುವುದನ್ನು ತಪ್ಪಿಸಬೇಕು.

ದಿನಕ್ಕೆ ಎಷ್ಟು ಪ್ರಮಾಣದಲ್ಲಿ ನೀರು ಕುಡಿಯಬೇಕು?

ದೇಹದಲ್ಲಿ ನೀರಿನ ಕೊರತೆ ಆಗದಂತೆ ತಡೆಯಲು ದಿನಕ್ಕೆ ಕನಿಷ್ಠ 2.5 ರಿಂದ 3 ಲೀಟರ್ ನೀರು ಕುಡಿಯುವುದು ಉತ್ತಮ. ಹೆಚ್ಚು ಬೆವರು ಬರುವವರು ಇನ್ನಷ್ಟು ನೀರು ಕುಡಿಯಬೇಕು. ಜೊತೆಗೆ ಹಣ್ಣಿನ ರಸ, ಜ್ಯೂಸ್, ಎಳನೀರು ಮುಂತಾದವುಗಳನ್ನು ಸಹ ಸೇವಿಸಬಹುದು.

ಆರೋಗ್ಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

ತಮಿಳುನಾಡಿನ 9 ಪೊಲೀಸರಿಗೆ ಗಲ್ಲು ಶಿಕ್ಷೆಯಾಗಲು ಈ ಮಹಿಳಾ ಕಾನ್​ಸ್ಟೆಬಲ್ ಕೂಡ ಕಾರಣ!

ಚೆನ್ನೈ, ಏಪ್ರಿಲ್ 8: ತಮಿಳುನಾಡಿನ 9 ಪೊಲೀಸ್ ಸಿಬ್ಬಂದಿಯನ್ನು ಅಪರಾಧಿಗಳು ಎಂದು ಪರಿಗಣಿಸಿ ಶಿಕ್ಷೆ ವಿಧಿಸಲಾಗಿದೆ. ತಂದೆ ಮತ್ತು ಮಗ ಕಸ್ಟಡಿಯಲ್ಲಿ ಸಾವನ್ನಪ್ಪಿದ 5 ವರ್ಷಗಳ ನಂತರ ಆ 9 ಪೊಲೀಸರಿಗೆ ಮರಣದಂಡನೆ (Death Sentence) ವಿಧಿಸಲಾಗಿದೆ. ಈ ಪ್ರಕರಣದಲ್ಲಿ ಪೊಲೀಸ್ ಹೆಡ್ ಕಾನ್‌ಸ್ಟೆಬಲ್ ರೇವತಿ ಬಹಳ ಮುಖ್ಯ ಪಾತ್ರ ವಹಿಸಿದ್ದಾರೆ ಎಂಬುದು ಬಹಳಷ್ಟು ಜನರಿಗೆ ಗೊತ್ತಿಲ್ಲ. ಅವರು ಧೈರ್ಯ ವಹಿಸಿ ಮುಂದೆ ಬಂದು ಆ ದಿನ ನಡೆದ ಘಟನೆಯನ್ನು ಹೇಳದಿದ್ದರೆ ಈ ಪ್ರಕರಣ ಖಂಡಿತ ಈ ಹಂತವನ್ನು ತಲುಪಲು ಸಾಧ್ಯವಾಗುತ್ತಿರಲಿಲ್ಲ.

ಕೊವಿಡ್-19 ಮಾನದಂಡಗಳನ್ನು ಉಲ್ಲಂಘಿಸಿ ತಮ್ಮ ಮೊಬೈಲ್ ಅಂಗಡಿಯನ್ನು ತೆರೆದಿದ್ದಕ್ಕಾಗಿ 2020ರಲ್ಲಿ ಬಂಧಿಸಲ್ಪಟ್ಟಿದ್ದ ಪಿ. ಜಯರಾಜ್ ಮತ್ತು ಅವರ ಮಗ ಜೆ. ಬೆನ್ನಿಕ್ಸ್ ಮೇಲೆ ಅಧಿಕಾರಿಗಳು ಕ್ರೂರವಾಗಿ ಹಲ್ಲೆ ನಡೆಸಿದಾಗ ರೇವತಿ ತೂತುಕುಡಿಯ ಸಾಥನ್‌ಕುಲಂ ಪೊಲೀಸ್ ಠಾಣೆಯಲ್ಲಿ ಕರ್ತವ್ಯದಲ್ಲಿದ್ದರು. ಈ ಪ್ರಕರಣದಲ್ಲಿ ಅಪ್ರೂವರ್ ಆಗಿ ತನ್ನ ಸುರಕ್ಷತೆ, ತನ್ನ ಕುಟುಂಬ ಅಥವಾ ತನ್ನ ಕೆಲಸದ ಬಗ್ಗೆ ಯೋಚನೆ ಮಾಡದೆ ಅವರು ಮ್ಯಾಜಿಸ್ಟ್ರೇಟ್‌ಗೆ ಆ ಘಟನೆ ನಡೆದ ದಿನ ಪೊಲೀಸ್ ಠಾಣೆಯಲ್ಲಿ ನಡೆದ ಘಟನೆಗಳನ್ನು ವಿವರಿಸಿದರು. ಈ ಪ್ರಕರಣದಲ್ಲಿ ಗಲ್ಲು ಶಿಕ್ಷೆಗೊಳಗಾಗಿರುವ ಅಧಿಕಾರಿಗಳು ಸೀನಿಯರ್ಸ್ ಮತ್ತು ಪ್ರಭಾವಶಾಲಿಗಳಾಗಿದ್ದರೆ ರೇವತಿ ಜೂನಿಯರ್ ಕಾನ್‌ಸ್ಟೆಬಲ್ ಆಗಿದ್ದರು. ಆದರೂ ಆಕೆ ದೃಢನಿಶ್ಚಯದಿಂದ ನ್ಯಾಯದ ಪರ ನಿಲ್ಲಲು ನಿರ್ಧರಿಸಿದ್ದರು.

ಆ ದಿನ ಜಯರಾಜ್ ಮತ್ತು ಬೆನ್ನಿಕ್ಸ್​ ಮೇಲೆ ತನ್ನದೇ ಪೊಲೀಸ್ ಠಾಣೆಯ ಸಿಬ್ಬಂದಿ ಹಲ್ಲೆ ನಡೆಸುವಾಗ ರೇವತಿ ಅಲ್ಲಿಯೇ ಇದ್ದರು. ಆ ದಿನ ಅವರು ನೈಟ್​ಡ್ಯೂಟಿಯಲ್ಲಿದ್ದರು. ಆಕೆ ರಕ್ತಸಿಕ್ತವಾದ ಅವರಿಬ್ಬರ ಬಟ್ಟೆಗಳನ್ನು ನೋಡಿದ್ದರು, ರಕ್ತ ಅಂಟಿದ ಲಾಠಿಯನ್ನು ನೋಡಿದ್ದರು, ರಕ್ತ ಅಂಟಿದ್ದ ಟೇಬಲ್ ಅನ್ನು ನೋಡಿ ಹೆದರಿದ್ದರು. ನೋವು ತಡೆಯಲಾರದೆ ಜಯರಾಜ್ ನೀರು ಕೇಳಿದಾಗ ರೇವತಿ ನೀರು ಕೊಟ್ಟಿದ್ದರು. ಆ ರಾತ್ರಿ ತನ್ನ ಗಂಡನಿಗೆ ಫೋನ್ ಮಾಡಿ ಠಾಣೆಯಲ್ಲಿ ನಡೆದ ಘಟನೆಯನ್ನು ವಿವರಿಸಿದ್ದರು.

ಇದನ್ನೂ ಓದಿ: ತಂದೆ-ಮಗನ ಲಾಕಪ್ ಡೆತ್ ಪ್ರಕರಣ; ತಮಿಳುನಾಡಿನ 9 ಪೊಲೀಸರಿಗೆ ಮರಣದಂಡನೆ

ಈ ಘಟನೆಯ ವಿಚಾರಣೆಗಾಗಿ ಮ್ಯಾಜಿಸ್ಟ್ರೇಟ್​ ಆಕೆಯನ್ನು ಕರೆಸಿದಾಗ ಆಕೆಯ ಮೇಲೆ ಹಿರಿಯ ಅಧಿಕಾರಿಗಳಿಂದ ಬಹಳ ಒತ್ತಡವಿತ್ತು. ಆದರೂ ತನ್ನನ್ನು ಕೆಲಸದಿಂದ ವಜಾಗೊಳಿಸಿದರೂ ಪರವಾಗಿಲ್ಲ ಎಂದು ಆಕೆ ನಡೆದ ಘಟನೆಯನ್ನು ಧೈರ್ಯವಾಗಿ ವಿವರಿಸಿದ್ದರು. 2020ರಲ್ಲಿ ರೇವತಿ ಧೈರ್ಯವಾಗಿ ಪ್ರತ್ಯಕ್ಷದರ್ಶಿಯಾಗಿ ಹೇಳಿಕೆ ದಾಖಲಿಸದಿದ್ದರೆ ಆ 9 ಅಪರಾಧಿಗಳಿಗೆ ಶಿಕ್ಷೆಯಾಗುತ್ತಿರಲಿಲ್ಲ. ಹೀಗಾಗಿ, ತಂದೆ-ಮಗನ ಲಾಕಪ್ ಡೆತ್ ಪ್ರಕರಣದ ಪ್ರತ್ಯಕ್ಷದರ್ಶಿಯಾದ ರೇವತಿ ಈ ಪ್ರಕರಣದಲ್ಲಿ ಬಹಳ ಮುಖ್ಯ ಪಾತ್ರ ವಹಿಸಿದ್ದಾರೆ.

ಏನಿದು ಪ್ರಕರಣ?:

2020ರಲ್ಲಿ ದೇಶಾದ್ಯಂತ ಸಂಚಲನ ಮೂಡಿಸಿದ್ದ ತಮಿಳುನಾಡಿನ ಸಾಥನ್‌ಕುಲಂ ಲಾಕಪ್ ಡೆತ್ ಪ್ರಕರಣದಲ್ಲಿ ಸೋಮವಾರ ಮಧುರೈ ನ್ಯಾಯಾಲಯವು ಐತಿಹಾಸಿಕ ತೀರ್ಪು ಪ್ರಕಟಿಸಿತ್ತು. ಈ ಘಟನೆಯ ಅಪರಾಧಿಗಳಾದ 9 ಪೊಲೀಸ್ ಸಿಬ್ಬಂದಿಗೆ ಮರಣದಂಡನೆ ವಿಧಿಸಿತ್ತು. ತಮಿಳುನಾಡಿನ ತೂತುಕುಡಿ ಜಿಲ್ಲೆಯ ಸಾಥನ್‌ಕುಲಂನಲ್ಲಿ ಕೊವಿಡ್-19 ಮಾನದಂಡಗಳನ್ನು ಉಲ್ಲಂಘಿಸಿ ರಾತ್ರಿ ವೇಳೆಯಲ್ಲೂ ತಮ್ಮ ಮೊಬೈಲ್ ಅಂಗಡಿಯನ್ನು ತೆರೆದಿದ್ದಕ್ಕಾಗಿ ಶಿಕ್ಷೆಗೊಳಗಾಗಿದ್ದ ಅಪ್ಪ-ಮಗನ ಮೇಲೆ ಪೊಲೀಸರು ಹಲ್ಲೆ ನಡೆಸಿದ್ದರು. ಈ ಘಟನೆಯಲ್ಲಿ ತಂದೆ-ಮಗನಾದ ಪಿ. ಜಯರಾಜ್ ಮತ್ತು ಜೆ. ಬೆನ್ನಿಕ್ಸ್ ಸಾವನ್ನಪ್ಪಿದ್ದರು. ಈ ಸಾವಿಗೆ ತಮಿಳುನಾಡಿನಾದ್ಯಂತ ಭಾರೀ ಆಕ್ರೋಶ ವ್ಯಕ್ತವಾಗಿತ್ತು.

2020ರ ಜೂನ್ 19ರಂದು ನಡೆದಿದ್ದ ಈ ಘಟನೆಯಲ್ಲಿ ಸಾಥನ್​ಕುಲಂ ಪೊಲೀಸ್ ಠಾಣೆಯ ಪೊಲೀಸ್ ಅಧಿಕಾರಿಗಳು ಪಿ. ಜಯರಾಜ್ ಅವರನ್ನು ಬಂಧಿಸಿದ್ದರು. ತನ್ನ ತಂದೆ ಏನೂ ತಪ್ಪು ಮಾಡದಿದ್ದರೂ ಅವರನ್ನೇಕೆ ಬಂಧಿಸಿದ್ದೀರಿ? ಎಂದು ವಿಚಾರಿಸಲು ಪೊಲೀಸ್ ಠಾಣೆಗೆ ಹೋದ ಅವರ ಮಗ ಬೆನ್ನಿಕ್ಸ್ ಅವರ ಜೊತೆಯೂ ವಾಗ್ವಾದ ನಡೆಸಿದ ಪೊಲೀಸರು ಅವರನ್ನೂ ಬಂಧಿಸಿದ್ದರು ಎಂದು ಈ ಪ್ರಕರಣದ ತನಿಖೆ ನಡೆಸಿದ ಸಿಬಿಐ ತಿಳಿಸಿದೆ.

ಇದನ್ನೂ ಓದಿ: ಉಚಿತ ಫ್ರಿಡ್ಜ್, ಪುರುಷರಿಗೂ ಫ್ರೀ ಬಸ್, ಮಹಿಳೆಯರಿಗೆ 2,000 ರೂ.; ತಮಿಳುನಾಡಿಗೆ ಎಐಎಡಿಎಂಕೆ ಬಂಪರ್ ಆಫರ್

ಜೂನ್ 19 ಮತ್ತು 20ರ ಮಧ್ಯರಾತ್ರಿ ಪೊಲೀಸ್ ಅಧಿಕಾರಿಗಳು ಆ ತಂದೆ ಮತ್ತು ಮಗನನ್ನು ಥಳಿಸಿ, ಕ್ರೂರವಾಗಿ ಚಿತ್ರಹಿಂಸೆ ನೀಡಿದರು. ತೀವ್ರವಾದ ಗಾಯಗಳಿಂದ ಬೆನ್ನಿಕ್ಸ್ ಜೂನ್ 22ರಂದು ಮತ್ತು ಜೈರಾಜ್ ಜೂನ್ 23ರಂದು ಸಾವನ್ನಪ್ಪಿದರು. ತಮಿಳುನಾಡು ಸರ್ಕಾರವು ನ್ಯಾಯಯುತ ತನಿಖೆಗಾಗಿ ಈ ಪ್ರಕರಣವನ್ನು ಸಿಬಿಐಗೆ ವರ್ಗಾಯಿಸಿತು. ಸಂಪೂರ್ಣ ತನಿಖೆಯ ನಂತರ ಸಿಬಿಐ 90 ದಿನಗಳಲ್ಲಿ 9 ಆರೋಪಿಗಳ ವಿರುದ್ಧ ಆರೋಪಪಟ್ಟಿ ಸಲ್ಲಿಸಿತು.

ಮದ್ರಾಸ್ ಹೈಕೋರ್ಟ್‌ನ ಮಧುರೈ ಪೀಠವು 5 ವರ್ಷಗಳಲ್ಲಿ ಒಟ್ಟು 105 ಸಾಕ್ಷಿಗಳನ್ನು ವಿಚಾರಣೆ ನಡೆಸಿತು. ಈ ಪ್ರಕರಣದ 10 ಆರೋಪಿಗಳಲ್ಲಿ ಒಬ್ಬರಾದ ವಿಶೇಷ ಸಬ್-ಇನ್ಸ್‌ಪೆಕ್ಟರ್ ಪೌಲ್‌ದುರೈ ಆರೋಗ್ಯ ಸಮಸ್ಯೆಗಳಿಂದಾಗಿ ವಿಚಾರಣೆಯ ಸಮಯದಲ್ಲಿ ನಿಧನರಾದರು. ಉಳಿದ 9 ಪೊಲೀಸರಿಗೆ ಗಲ್ಲು ಶಿಕ್ಷೆ ವಿಧಿಸಲಾಗಿದೆ. ಮರಣದಂಡನೆಯ ಜೊತೆಗೆ ನ್ಯಾಯಾಲಯವು ಅಪರಾಧಿಗಳಿಗೆ ಒಟ್ಟು 1.40 ಕೋಟಿ ರೂ. ದಂಡವನ್ನು ವಿಧಿಸಿ, ಸಂತ್ರಸ್ತರ ಕುಟುಂಬಕ್ಕೆ ಪರಿಹಾರವಾಗಿ ನೀಡಿದೆ.

ಗಲ್ಲು ಶಿಕ್ಷೆಗೆ ಒಳಗಾಗಿರುವ 9 ಅಪರಾಧಿಗಳು ಕ್ಷಮಾದಾನವನ್ನು ಕೋರಬಹುದು. ಅವರು ತಮಿಳುನಾಡು ರಾಜ್ಯಪಾಲರು (ಲೇಖನ 161) ಮತ್ತು ಭಾರತದ ರಾಷ್ಟ್ರಪತಿಗಳು (ಲೇಖನ 72) ಅವರ ಮುಂದೆ ಕ್ಷಮಾದಾನ ಅರ್ಜಿಗಳನ್ನು ಸಲ್ಲಿಸಬಹುದು.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

ಪತಿಯ ಸಿನಿಮಾ ಪ್ರಚಾರ ಮಾಡಲು ಲಕ್ಷಾಂತರ ಹಣ ಕೇಳಿದ ನಯನತಾರಾ

ಸಿನಿಮಾ (Cinema) ರಂಗದಲ್ಲಿ ಎಲ್ಲವನ್ನೂ ಹಣದ ಮೇಲೆಯೇ ಅಳೆಯಲಾಗುತ್ತದೆ. ಇಲ್ಲಿ ಒಬ್ಬರಿಗೆ ಇನ್ನೊಬ್ಬರು ಹುಟ್ಟುಹಬ್ಬದ ಶುಭಾಶಯ ಕೋರಲು ಸಹ ಹಣದ ಲೆಕ್ಕಾಚಾರ ಇರುತ್ತದೆ. ಇಲ್ಲಿ ಸೆಲೆಬ್ರಿಟಿಗಳು ಹಾಕುವ ಪ್ರತಿ ಪೋಸ್ಟ್ ಹಿಂದೆಯೂ ಏಜೆನ್ಸಿಯೊಂದು ಕೆಲಸ ಮಾಡಿರುತ್ತದೆ. ಸಿನಿಮಾ ಪ್ರಚಾರದ ವಿಷಯದಲ್ಲಂತೂ ಯಾವುದೂ ಉಚಿತವಾಗಿ ಆಗುವುದಿಲ್ಲ. ಯಾವ ಮಟ್ಟಿಗೆಂದರೆ ಇದೀಗ ನಟಿ ನಯನತಾರಾ, ತಮ್ಮ ಪತಿಯ ಹೊಸ ಸಿನಿಮಾದ ಪ್ರಚಾರ ಮಾಡಲು ಲಕ್ಷಾಂತರ ರೂಪಾಯಿ ಹಣ ಕೇಳಿದ್ದಾರೆ ಎಂಬ ಸುದ್ದಿ ಹರಿದಾಡುತ್ತಿದೆ. ಈ ವಿಷಯವನ್ನು ಸ್ವತಃ ಅವರ ಪತಿಯೇ ಹೇಳಿದ್ದಾರೆ.

ನಟಿ ನಯನತಾರಾ ಹಾಗೂ ನಿರ್ದೇಶಕ ವಿಘ್ನೇಶ್ ಕೆಲ ವರ್ಷಗಳ ಹಿಂದಷ್ಟೆ ವಿವಾಹವಾಗಿದ್ದು, ಸೆರೊಗಸಿ ಮೂಲಕ ಅವಳಿ ಮಕ್ಕಳ ಪೋಷಕರು ಸಹ ಆಗಿದ್ದಾರೆ. ಎಲ್ಲಿಗೂ ಗೊತ್ತಿರುವಂತೆ ನಯನತಾರಾ ಸ್ಟಾರ್ ನಟಿ ಆಗಿದ್ದು, ಈಗಲೂ ಸಹ ಹಲವಾರು ಸಿನಿಮಾಗಳಲ್ಲಿ ಬ್ಯುಸಿಯಾಗಿದ್ದಾರೆ. ವಿಘ್ನೇಶ್ ಸಿನಿಮಾ ನಿರ್ದೇಶಕರಾಗಿದ್ದು, ಈ ವರೆಗೆ ನಾಲ್ಕು ಸಿನಿಮಾಗಳನ್ನು ನಿರ್ದೇಶನ ಮಾಡಿದ್ದಾರೆ. ಇದೀಗ ಐದನೇ ಸಿನಿಮಾ ನಿರ್ದೇಶಿಸಿದ್ದು ಇದೇ ಶುಕ್ರವಾರ ಸಿನಿಮಾ ತೆರೆಗೆ ಬರಲಿದೆ.

ವಿಘ್ನೇಶ್ ಶಿವನ್ ‘ಎಲ್​​ಐಕೆ’ (ಲವ್ ಇನ್ಶುರೆನ್ಸ್ ಕಂಪೆನಿ) ಹೆಸರಿನ ಸಿನಿಮಾ ನಿರ್ದೇಶಿಸಿದ್ದು, ಸಿನಿಮಾದ ನಾಯಕ ಪ್ರದೀಪ್ ರಂಗನಾಥನ್. ಸಿನಿಮಾದ ಪ್ರಚಾರ ಚಾಲ್ತಿಯಲ್ಲಿದ್ದು, ಇತ್ತೀಚೆಗಷ್ಟೆ ಸಿನಿಮಾದ ಪ್ರೀ ರಿಲೀಸ್ ಕಾರ್ಯಕ್ರಮ ನಡೆಯಿತು. ಆದರೆ ಈ ಕಾರ್ಯಕ್ರಮಕ್ಕೆ ನಯನತಾರಾ ಹಾಜರಾಗಿರಲಿಲ್ಲ. ಈ ಬಗ್ಗೆ ಮಾತನಾಡಿದ ಪತಿ ವಿಘ್ನೇಶ್, ‘ನನ್ನ ಪತ್ನಿ (ನಯನತಾರಾ) ಅನ್ನು ಅತಿಥಿಯಾಗಿ ಕರೆಯುವಷ್ಟು ಹಣ ನಮ್ಮಲ್ಲಿ ಇಲ್ಲ’ ಎಂದರು. ವಿಘ್ನೇಶ್ ಅವರ ಈ ಮಾತು ಇದೀಗ ವಿವಾದಕ್ಕೆ ಕಾರಣವಾಗಿದೆ.

ಇದನ್ನೂ ಓದಿ:ಮತ್ತೆ ಬಾಲಿವುಡ್​​ಗೆ ನಯನತಾರಾ, ಈ ಬಾರಿ ಮತ್ತೊಬ್ಬ ಖಾನ್​​ಗೆ ಜೋಡಿ

ನಟಿ ನಯನತಾರಾ ಪತಿಯ ಸಿನಿಮಾಕ್ಕೆ ಬೆಂಬಲ ನೀಡುತ್ತಿಲ್ಲ. ಪತಿಯ ಸಿನಿಮಾ ಪ್ರಚಾರ ಮಾಡಲು ಲಕ್ಷಾಂತರ ರೂಪಾಯಿ ಹಣಕ್ಕೆ ಬೇಡಿಕೆ ಇಟ್ಟಿದ್ದಾರೆ ಇದು ಸರಿಯಲ್ಲ ಎಂಬ ಅಭಿಪ್ರಾಯಗಳು ಸಾಮಾಜಿಕ ಜಾಲತಾಣದಲ್ಲಿ ವ್ಯಕ್ತವಾಗಿದೆ. ಆದರೆ ಸಿನಿಮಾ ಎಂಬುದೇ ಉದ್ಯಮ, ‘ಡೋಂಟ್ ಡು ಬ್ಯುಸಿನೆಸ್ ವಿತ್ ಪ್ರೆಶರ್’ ಎಂಬ ಆಂಗ್ಲ ಗಾದೆಯಂತೆ, ಈ ಉದ್ಯಮದಲ್ಲಿ ಯಾವುದನ್ನೂ ಸಹ ಉಚಿತವಾಗಿ ಮಾಡುವಂತಿಲ್ಲ. ಎಲ್ಲದಕ್ಕೂ ಒಂದು ಬೆಲೆ ಇದೆ. ಅದನ್ನು ನಯನತಾರಾ ಚೆನ್ನಾಗಿ ಅರಿತಿದ್ದಾರೆ.

ನಯನತಾರಾ ಪ್ರಸ್ತುತ ಹಲವು ಸಿನಿಮಾಗಳಲ್ಲಿ ಬ್ಯುಸಿಯಾಗಿದ್ದಾರೆ. ತಮಿಳಿನಲ್ಲಿ ‘ಮೂಕುತ್ತಿ ಅಮ್ಮನ್ 2’ ಸಿನಿಮಾನಲ್ಲಿ ನಟಿಸುತ್ತಿದ್ದಾರೆ. ಇದೇ ಸಿನಿಮಾನಲ್ಲಿ ಕನ್ನಡದ ದುನಿಯಾ ವಿಜಿ ಸಹ ನಟಿಸುತ್ತಿದ್ದಾರೆ. ಹಿಂದಿಯಲ್ಲಿ ಸಲ್ಮಾನ್ ಖಾನ್ ಜೊತೆಗೆ ಹೊಸ ಸಿನಿಮಾನಲ್ಲಿ ನಟಿಸಲಿದ್ದಾರೆ. ಕನ್ನಡದ ‘ಟಾಕ್ಸಿಕ್’ ಸಿನಿಮಾನಲ್ಲಿ ನಟಿಸಿದ್ದು ಆ ಸಿನಿಮಾ ಜೂನ್ 4ಕ್ಕೆ ತೆರೆಗೆ ಬರಲಿದೆ. ಮಲಯಾಳಂನಲ್ಲಿ ಮೋಹನ್​​ಲಾಲ್, ಮಮ್ಮುಟಿ, ಫಹಾದ್ ಫಾಸಿಲ್ ಒಟ್ಟಿಗೆ ನಟಿಸಿರುವ ‘ಪೇಟ್ರಿಯಾಟ್’ ಸಿನಿಮಾನಲ್ಲಿ ನಾಯಕಿಯಾಗಿ ನಟಿಸಿದ್ದಾರೆ.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Source link

Exit mobile version