Headlines

ಸಹದ್ಯೋಗಿಗಳೊಂದಿಗೆ ಈ ಒಂದಷ್ಟು ವಿಚಾರಗಳ ಬಗ್ಗೆ ಮಾತನಾಡದಿದ್ದರೆಯೇ ಒಳ್ಳೆಯದು

ನಮ್ಮ ಏಳಿಗೆಯಲ್ಲಿ ನೋಡಿ ವಿಷಕಾರುವಂತಹ ಸಂಬಂಧಿಕರು ಇರುವಂತೆ, ಆಫೀಸ್‌ನಲ್ಲಿಯೂ ನಮ್ಮ ಕೆಲಸ ಕಾರ್ಯಗಳನ್ನು ನೋಡಿ, ಸಹಿಸಿಕೊಳ್ಳದ ಒಂದಷ್ಟು ಸಹದ್ಯೋಗಿಗಳಿರುತ್ತಾರೆ. ಆದ್ದರಿಂದ ಆಫೀಸ್‌ನಲ್ಲಿ (office) ಎಷ್ಟು ಜಾಗರೂಕರಾಗಿದ್ದರೂ ಕಡಿಮೆಯೇ. ಅದರಲ್ಲೂ ಮಾತನಾಡುವಾಗ ಮೈಯೆಲ್ಲಾ ಕಣ್ಣಾಗಿರಬೇಕು. ಏಕೆಂದರೆ ಒಂದು ತಪ್ಪು ಮಾತು ಕೂಡ ನಮ್ಮ ಕೆಲಸ, ಹೆಸರು ಹಾಗೂ ಭವಿಷ್ಯಕ್ಕೆ ಕುತ್ತು ತರುವ ಸಾಧ್ಯತೆ ಇರುತ್ತದೆ. ಹಾಗಾಗಿ ಆಫೀಸ್‌ನಲ್ಲಿ ಮಾತುಕತೆ ನಡೆಸುವಾಗ ಸ್ವಲ್ಪ ಜಾಗರೂಕರಾಗಿರಬೇಕು. ಅದರಲ್ಲೂ ಈ ಒಂದಷ್ಟು ವಿಚಾರಗಳನ್ನು ಅಪ್ಪಿತಪ್ಪಿಯೂ ಸಹದ್ಯೋಗಿಗಳೊಂದಿಗೆ ಶೇರ್‌ ಮಾಡಬಾರದು. ಸಹದ್ಯೋಗಿಗಳೊಂದಿಗೆ ಶೇರ್‌ ಮಾಡಿಕೊಳ್ಳಲೇಬಾರದ…

Read More

ಎಲ್​ಪಿಜಿ ಕೊರತೆ: ರಾಜ್ಯ ಸರ್ಕಾರದಿಂದ ಆಟೋ ಚಾಲಕರಿಗೆ ಮಹತ್ವದ ಪ್ರಕಟಣೆ

ಬೆಂಗಳೂರು, ಏಪ್ರಿಲ್ 08: ಕರ್ನಾಟಕದಲ್ಲಿ ಗ್ಯಾಸ್​ ಸಿಗದೆ ಆಟೋ ಚಾಲಕರಿಗೆ ಸಂಕಷ್ಟ ಎದುರಾಗಿದೆ. ದಿನವಿಡಿ ದುಡಿಮೆ ಬಿಟ್ಟು ಬಂಕ್​ಗಳ ಬಳಿ ಗಂಟೆಗಟ್ಟಲೇ ಕಾಯುವಂತ ಸ್ಥಿತಿ ನಿರ್ಮಾಣವಾಗಿದೆ. ಇದರಿಂದ ಆಟೋ ಚಾಲಕರು ಹೈರಾಣಾಗಿ ಹೋಗಿದ್ದಾರೆ. ಈ ಮಧ್ಯೆ ಆಟೋ ಗ್ಯಾಸ್ (Auto LPG)​​ ಕೊರತೆ ಬಗ್ಗೆ ವಂದತಿಗಳು ಕೂಡ ಹರಿದಾಡಿದ್ದವು. ಸದ್ಯ ಆಟೋ ಎಲ್​ಪಿಜಿ ಸರಬರಾಜು ಕುರಿತು ಸ್ಪಷ್ಟನೆ ನೀಡಿರುವ ರಾಜ್ಯ ಸರ್ಕಾರ,  ಸರಬರಾಜಿನಲ್ಲಿ ವ್ಯತ್ಯಾಸ ಕಂಡುಬಂದಿದ್ದರೂ ಯಾವುದೇ ತೊಂದರೆ ಇಲ್ಲ ಎಂದು ಹೇಳಿದೆ. ಪ್ರತಿದಿನ 83ರಿಂದ 94…

Read More

‘ಗುಜರಾತ್ ಜನ ಅನಕ್ಷರಸ್ಥರು’ ಎಂದಿದ್ದ ಖರ್ಗೆ: ವಿವಾದ ಭುಗಿಲೇಳುತ್ತಿದ್ದಂತೆ ಕ್ಷಮೆಯಾಚಿಸಿದ ಕಾಂಗ್ರೆಸ್ ಅಧ್ಯಕ್ಷ

ನವದೆಹಲಿ, ಏಪ್ರಿಲ್ 08: ಕೇರಳ ಚುನಾವಣಾ ಪ್ರಚಾರದ ಸಂದರ್ಭದಲ್ಲಿ ಗುಜರಾತ್ ಜನರ ಬಗ್ಗೆ ನೀಡಿದ್ದ ವಿವಾದಾತ್ಮಕ ಹೇಳಿಕೆಗೆ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ(Mallikarjun Kharge) ಕ್ಷಮೆಯಾಚಿಸಿದ್ದಾರೆ. ತಮ್ಮ ಹೇಳಿಕೆಗಳನ್ನು ಉದ್ದೇಶಪೂರ್ವಕವಾಗಿಯೇ ತಿರುಚಲಾಗಿದೆ, ನಾನು ಕ್ಷಮೆಯಾಚಿಸುತ್ತೇನೆ ಎಂದು ಅವರು ಹೇಳಿದ್ದಾರೆ. ಗುಜರಾತ್ ಜನ ಅನಕ್ಷರಸ್ಥರು ಎಂದು ಖರ್ಗೆ ನೀಡಿದ್ದ ಹೇಳಿಕೆ ವಿವಾದದ ಸ್ವರೂಪ ಪಡೆಯುತ್ತಿದ್ದಂತೆ ಕ್ಷಮೆಯಾಚಿಸಿದ್ದಾರೆ. ಕೇರಳದಲ್ಲಿ ಮಾಡಿದ ಚುನಾವಣಾ ಭಾಷಣದ ಬಗ್ಗೆ ಖರ್ಗೆ ಸ್ಪಷ್ಟೀಕರಣ ನೀಡಿದ್ದು, ತಮ್ಮ ಹೇಳಿಕೆಗಳನ್ನು ಉದ್ದೇಶಪೂರ್ವಕವಾಗಿ ತಪ್ಪಾಗಿ  ಅರ್ಥೈಸಲಾಗುತ್ತಿದೆ ಎಂದು ಹೇಳಿದ್ದಾರೆ. ಗುಜರಾತ್…

Read More

Vasthu Tips: ಸೌಂದರ್ಯಕ್ಕೆ ಮಾತ್ರವಲ್ಲ, ಸಮೃದ್ಧಿಗೂ ಅಲೋವೆರಾ; ಈ ದಿಕ್ಕಿನಲ್ಲಿ ಗಿಡವಿದ್ದರೆ ಬದಲಾಗುತ್ತೆ ನಿಮ್ಮ ಲಕ್!

ಅಲೋವೆರಾ ಎಂದರೆ ತಕ್ಷಣ ನೆನಪಾಗುವುದು ಚರ್ಮ ಮತ್ತು ಕೂದಲಿನ ಸೌಂದರ್ಯ. ಆದರೆ, ಭಾರತೀಯ ಪರಂಪರೆ ಮತ್ತು ವಾಸ್ತು ಶಾಸ್ತ್ರದಲ್ಲಿ ಅಲೋವೆರಾಗೆ ಅತ್ಯಂತ ಪವಿತ್ರವಾದ ಸ್ಥಾನವಿದೆ. ಇದನ್ನು ಲಕ್ಷ್ಮಿ ದೇವಿಯ ಸಾಕಾರ ರೂಪವೆಂದು ಪರಿಗಣಿಸಲಾಗಿದ್ದು, ಮನೆಯಲ್ಲಿ ಸರಿಯಾದ ದಿಕ್ಕಿನಲ್ಲಿ ಇರಿಸುವುದರಿಂದ ಆರ್ಥಿಕ ಸಂಕಷ್ಟಗಳು ದೂರವಾಗಿ ಸುಖ-ಸಮೃದ್ಧಿ ನೆಲೆಸುತ್ತದೆ ಎಂಬ ನಂಬಿಕೆಯಿದೆ. ಪುರಾಣಗಳಲ್ಲಿ ಮರ-ಗಿಡಗಳ ಮಹತ್ವ: ದ್ವಾಪರ ಯುಗದಲ್ಲಿ ಶ್ರೀಕೃಷ್ಣನು ಬಲರಾಮನಿಗೆ ಗಿಡಮರಗಳ ಶ್ರೇಷ್ಠತೆಯನ್ನು ವಿವರಿಸುತ್ತಾ, “ಪ್ರತಿಯೊಂದು ಸಸ್ಯವೂ ಮನುಷ್ಯನಿಗೆ ಉಪಯುಕ್ತವಾಗಿದ್ದು, ಅವು ದೇವರಿಗೆ ಸಮಾನ” ಎಂದು ಹೇಳಿದ್ದಾನೆ. ಮರಗಳು…

Read More

ಕಥೆ ಕದ್ದ ಆರೋಪ: ಆದಿತ್ಯ ಧರ್ ಬಗ್ಗೆ ಹೇಳಿಕೆ ನೀಡದಂತೆ ಸಂತೋಷ್​ ಕುಮಾರ್​ಗೆ ಕೋರ್ಟ್ ಆದೇಶ

ಬಾಲಿವುಡ್‌ನ ಖ್ಯಾತ ನಿರ್ದೇಶಕ ಆದಿತ್ಯ ಧರ್ ಅವರ ‘ಧುರಂಧರ್’ (Dhurandhar) ಚಿತ್ರದ ಕಥೆಗೆ ಸಂಬಂಧಿಸಿದಂತೆ ಅವಹೇಳನಕಾರಿ ಹೇಳಿಕೆಗಳನ್ನು ನೀಡದಂತೆ ಸಂತೋಷ್ ಕುಮಾರ್ ಆರ್‌ಎಸ್‌ (Santosh Kumar RS) ಅವರಿಗೆ ಬಾಂಬೆ ಹೈಕೋರ್ಟ್ ಮಧ್ಯಂತರ ತಡೆ ನೀಡಿದೆ. ಆದಿತ್ಯ ಧರ್ ಸಲ್ಲಿಸಿದ್ದ ಮಾನನಷ್ಟ ಮೊಕದ್ದಮೆಯ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಆರಿಫ್ ಎಸ್. ಡಾಕ್ಟರ್ ಅವರ ಪೀಠವು ಈ ಆದೇಶ ಹೊರಡಿಸಿದೆ. ಇದರಿಂದಾಗಿ ಆದಿತ್ಯ ಧರ್ (Aditya Dhar) ಅವರಿಗೆ ಕಾನೂನು ಹೋರಾಟದಲ್ಲಿ ಮೊದಲ ಹಂತದ ಜಯ ಸಿಕ್ಕಂತೆ ಆಗಿದೆ….

Read More

ಹಾರ್ಮುಜ್ ಜಲಸಂಧಿಯಲ್ಲಿ ಹಡಗುಳಿಂದ ಟೋಲ್ ವಸೂಲಿಗೆ ಇರಾನ್ ಯೋಜನೆ; ಅಂತಾರಾಷ್ಟ್ರೀಯ ನಿಯಮಗಳು ಏನು ಹೇಳುತ್ತವೆ?

ನವದೆಹಲಿ, ಏಪ್ರಿಲ್ 8: ಹಾರ್ಮುಜ್ ಜಲಸಂಧಿ (Hormuz Strait) ಮೂಲಕ ಸಾಗುವ ಹಡಗುಗಳಿಗೆ ಟೋಲ್ ವಿಧಿಸಲು ಇರಾನ್ ಯೋಜಿಸಿದೆ. ಅಮೆರಿಕ ಮತ್ತು ಇರಾನ್ ನಡುವೆ ಎರಡು ವಾರ ಕದನ ವಿರಾಮ ಘೋಷಣೆ (ceasefire) ಆದ ಬೆನ್ನಲ್ಲೇ ಈ ಟೋಲ್ ವಿಚಾರ ಮುನ್ನೆಲೆಗೆ ಬಂದಿದೆ. ಮಾರ್ಗದಲ್ಲಿ ಸಾಗುವ ಪ್ರತೀ ಹಡಗಿನಿಂದ 2 ಮಿಲಿಯನ್ ಡಾಲರ್ ಶುಲ್ಕ ವಸೂಲಿ ಮಾಡಲು ಇರಾನ್ ಪ್ಲಾನ್ ಹಾಕಿದೆ. ಇರಾನ್​ನ ಸೇನಾಪಡೆಗಳು ಈ ಜಲಸಂಧಿಯನ್ನು ನಿಯಂತ್ರಿಸಿ, ಹಡಗುಗಳ ಸಾಗಣೆಗೆ ಅವಕಾಶ ಮಾಡಿಕೊಡುತ್ತವೆ. ಹಾರ್ಮುಜ್ ಜಲಸಂಧಿಯಲ್ಲಿ…

Read More

‘ಡ್ಯಾನ್ಸ್ ಕರ್ನಾಟಕ ಡ್ಯಾನ್ಸ್’ ಫಿನಾಲೆಗೆ ವೇದಿಕೆ ರೆಡಿ; ಯಾರಾಗ್ತಾರೆ ಚಾಂಪಿಯನ್?

ಜೀ ಕನ್ನಡದಲ್ಲಿ ಪ್ರಸಾರ ಆಗುವ ಡ್ಯಾನ್ಸ್ ಕರ್ನಾಟಕ ಡ್ಯಾನ್ಸ್ (DKD) ಮೂಲಕ ಅನೇಕ ಪ್ರತಿಭೆಗಳಿಗೆ ವೇದಿಕೆ ಸಿಕ್ಕಿದೆ.ಈಗ ‘ಡ್ಯಾನ್ಸ್ ಕರ್ನಾಟಕ ಡ್ಯಾನ್ಸ್ 2025’ ಅಂತಿಮ ಹಂತ ತಲುಪಿದೆ. ಏಪ್ರಿಲ್ 11 ಶನಿವಾರ ಸಂಜೆ 7 ಗಂಟೆಯಿಂದ 9 ಗಂಟೆಯವರೆಗೆ ಮತ್ತು ಏಪ್ರಿಲ್ 12 ಭಾನುವಾರದಂದು ಸಂಜೆ 7 ಗಂಟೆಯಿಂದ 9:30ರವರೆಗೆ ಫಿನಾಲೆ ಜೀ ಕನ್ನಡದಲ್ಲಿ ಪ್ರಸಾರ ಆಗಲಿದೆ. ಈ ವೇಳೆ ವಿಜೇತರ ಹೆಸರನ್ನು ಘೋಷಣೆ ಮಾಡಲಾಗುತ್ತದೆ. ಈ ಬಾರಿಯ ಡಿಕೆಡಿ ಚಾಂಪಿಯನ್ ಯಾರಾಗುತ್ತಾರೆ ಎನ್ನುವ ಕುತೂಹಲ ಮೂಡಿದೆ….

Read More

ವಿವಾದ ಪುರುಷರಾದ್ರಾ ಮಲ್ಲಿಕಾರ್ಜುನ ಖರ್ಗೆ?: ಟೀಕಿಸುವ ಭರದಲ್ಲಿ ಸಾಲು ಸಾಲು ಕಾಂಟ್ರವರ್ಸಿ!

ಬೆಂಗಳೂರು, ಏಪ್ರಿಲ್​​ 08: ಮಲ್ಲಿಕಾರ್ಜುನ ಖರ್ಗೆ ಕಾಂಗ್ರೆಸ್​​ನ ಹಿರಿಯ ರಾಜಕಾರಣಿ. ಎಐಸಿಸಿಯ ಅಧ್ಯಕ್ಷರೂ ಆಗಿರುವ ಇದೇ ಖರ್ಗೆ ಅದ್ಯಾಕೋ ಗೊತ್ತಿಲ್ಲ ಬೇಕು ಬೇಕಂತಲೇ ವಿವಾದಗಳನ್ನು ಮೈಮೇಲೆ ಎಳೆದುಕೊಳ್ಳುತ್ತಿರುವಂತೆ ಕಾಣುತ್ತಿದೆ. ಮೊನ್ನೆ ಭಾನುವಾರ ಅಸ್ಸಾಂನ ನಿಲಾಂಬಜಾರ್‌ನಲ್ಲಿ ನಡೆದ ಸಾರ್ವಜನಿಕ ಸಭೆಯಲ್ಲಿ ಮಾತನಾಡಿದ್ದ ಇವರು, ಕುರಾನ್‌ನಲ್ಲಿ ನಮಾಜ್ ಮಾಡುವಾಗಲೂ ವಿಷಕಾರಿ ಹಾವನ್ನು ಕಂಡರೆ ಅದನ್ನು ಕೊಲ್ಲಬೇಕು ಎಂದು ಹೇಳಲಾಗಿದೆ. ಆರ್‌ಎಸ್‌ಎಸ್ ಅಥವಾ ಬಿಜೆಪಿ ಕೂಡ ಅದೇ ರೀತಿಯ ಹಾವು, ಅವನ್ನು ಕೊಲ್ಲದಿದ್ದರೆ ನೀವು ಬದುಕಲು ಸಾಧ್ಯವಿಲ್ಲ ಎಂದಿದ್ದು, ಇದೀಗ ಭಾರೀ…

Read More

ಈ ಬಾಬಾ ನನ್ನನ್ನು ಅತ್ಯಾಚಾರ ಮಾಡಿದ್ದಾನೆ: ದಾರಿಯಲ್ಲಿ ಅಳುತ್ತಾ ಸಹಾಯಕ್ಕಾಗಿ ಅಂಗಲಾಚಿದ 17 ವರ್ಷದ ಬಾಲಕಿ

ಮಥುರಾ, ಏ.8: ಉತ್ತರ ಪ್ರದೇಶದ ಮಥುರಾದಲ್ಲಿ 17 ವರ್ಷದ ಬಾಲಕಿಯೊಬ್ಬಳ ಮೇಲೆ ಅಪರಿಚಿತ ವ್ಯಕ್ತಿಯೊಬ್ಬ ಲೈಂಗಿಕ ದೌರ್ಜನ್ಯ ಎಸಗಿರುವ ಆಘಾತಕಾರಿ ಘಟನೆ ಬೆಳಕಿಗೆ ಬಂದಿದೆ. ಆರೋಪಿತ ವ್ಯಕ್ತಿಯನ್ನು ಬಾಲಕಿಯು ‘ಬಾಬಾ’ (ಸನ್ಯಾಸಿ ಅಥವಾ ಸ್ವಯಂ ಘೋಷಿತ ದೇವಮಾನವ) ಎಂದು ಗುರುತಿಸಿದ್ದು, ಈ ಘಟನೆಯು ಸ್ಥಳೀಯವಾಗಿ ಭಾರಿ ಸಂಚಲನ ಮೂಡಿಸಿದೆ. ವರದಿಗಳ ಪ್ರಕಾರ, ಬಾಲಕಿಯು ರಸ್ತೆಯ ಬದಿಯಲ್ಲಿ ಅಳುತ್ತಾ, ತನಗೆ ಸಹಾಯ ಮಾಡುವಂತೆ ದಾರಿಹೋಕರನ್ನು ವಿನಂತಿಸುತ್ತಿದ್ದಾಗ ಈ ವಿಷಯ ಬೆಳಕಿಗೆ ಬಂದಿದೆ. ತಾನು ಲೈಂಗಿಕ ದೌರ್ಜನ್ಯಕ್ಕೆ ಒಳಗಾಗಿರುವುದಾಗಿ ಅಳುತ್ತಲೇ…

Read More

ಬೆಂಗಳೂರಿನಲ್ಲಿ ಮನೆ ಕಟ್ಟೋರು, ಕಟ್ಟಿದವರು ಈ ವಿಚಾರ ತಿಳಿದಿರಲೇಬೇಕು!

ಬೆಂಗಳೂರು, ಏಪ್ರಿಲ್ 8: ಸಿಲಿಕಾನ್ ಸಿಟಿಯ ಬೆಂಗಳೂರಿನಲ್ಲಿ (Bengaluru) ಸ್ವಂತ ಮನೆ ಕಟ್ಟಬೇಕು ಎಂಬುದು ಪ್ರತಿಯೊಬ್ಬರ ಕನಸು. ಆದರೆ, ನಗರ ಪಾಲಿಕೆಯ ಕಟ್ಟುನಿಟ್ಟಿನ ನಿಯಮಗಳಿಂದಾಗಿ ಅನೇಕರು ಅರಿಯದೇ ‘ಅಕ್ರಮ ಕಟ್ಟಡ’ಗಳ ಮಾಲೀಕರಾಗಿಬಿಡುತ್ತಾರೆ. ಇಂತಹವರಿಗೆ ರಾಜ್ಯ ಸರ್ಕಾರವು ಈಗ ದೊಡ್ಡ ಮಟ್ಟದ ಸಮಾಧಾನಕರ ಸುದ್ದಿಯೊಂದನ್ನು ನೀಡಿದೆ. ಗ್ರೇಟರ್ ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ (GBA) ವ್ಯಾಪ್ತಿಯಲ್ಲಿ ಕಟ್ಟಡ ಉಪವಿಧಿಗಳಿಗೆ ತಿದ್ದುಪಡಿ ತರಲು ಕರಡು ಅಧಿಸೂಚನೆಯನ್ನು ಇತ್ತೀಚೆಗೆ ಪ್ರಕಟಿಸಲಾಗಿದ್ದು, ಸೆಟ್ ಬ್ಯಾಕ್ ಉಲ್ಲಂಘನೆಯ ಮಿತಿಯನ್ನು ಹೆಚ್ಚಿಸಲಾಗಿದೆ. ಈ ಸಂದರ್ಭದಲ್ಲಿ, ಸೆಟ್ ಬ್ಯಾಕ್…

Read More