Headlines

ಎಎಂಸಿಎ ಪ್ರಾಜೆಕ್ಟ್ ರೇಸ್​ನಿಂದ ಎಚ್​ಎಎಲ್ ಔಟ್; ಈ ಯೋಜನೆಯಿಂದ ನಿರ್ಗಮಿಸಲು ಕಾರಣವಾಯಿತಾ ಈ ಸಂಗತಿ? – Kannada News | Reason why HAL out of race for AMCA fighter jet project

ಬೆಂಗಳೂರು, ಫೆಬ್ರುವರಿ 5: ಸ್ವಂತವಾಗಿ ಐದನೇ ತಲೆಮಾರಿನ ಫೈಟರ್ ಜೆಟ್ ತಯಾರಿಸುವ ಅತ್ಯಂತ ಮಹತ್ವಾಕಾಂಕ್ಷೆಯ ಎಎಂಸಿಎ ಯೋಜನೆಯ (AMCA project) ರೇಸ್​ನಿಂದ ಎಚ್​ಎಎಲ್ ಹೊರಬಿದ್ದಿದೆ. ಟಾಟಾ ಗ್ರೂಪ್, ಕಲ್ಯಾಣಿ ಗ್ರೂಪ್ ಮತ್ತು ಎಲ್ ಅಂಡ್ ಟಿ ನೇತೃತ್ವದ ಗುಂಪುಗಳು (Consortium) ಈಗ ಈ ರೇಸ್​ನಲ್ಲಿ ಉಳಿದಿವೆ. ಮುಂದಿನ ದಿನಗಳಲ್ಲಿ ಒಂದು ಸಂಸ್ಥೆಗೆ ಎಎಂಸಿಎ ಅಭಿವೃದ್ಧಿಪಡಿಸುವ ಮಹತ್ವದ ಪ್ರಾಜೆಕ್ಟ್ ಸಿಗಲಿದೆ. ಬಿಇಎಂಎಲ್, ಬಿಇಎಲ್, ಡಾಟಾ ಪ್ಯಾಟರ್ನ್ಸ್ ಇತ್ಯಾದಿ ಕಂಪನಿಗಳು ಕಲ್ಯಾಣಿ ಗ್ರೂಪ್ ಮತ್ತು ಎಲ್ ಅಂಡ್ ಟಿ ನೇತೃತ್ವದ…

Read More

RCB vs GT: ಏಕಪಕ್ಷೀಯವಾಗಿ ಗುಜರಾತ್ ಮಣಿಸಿ ಸತತ 2ನೇ ಬಾರಿಗೆ ಫೈನಲ್​ಗೇರಿದ ಆರ್​ಸಿಬಿ – Kannada News | Defending Champions RCB Reach Second Consecutive IPL Final with Dominant Q1 Win vs gujarat titans

ಸತತ ಎರಡನೇ ಬಾರಿಗೆ ಐಪಿಎಲ್ ಟ್ರೋಫಿ ಎತ್ತಿಹಿಡಿಯುವ ತವಕದಲ್ಲಿರುವ ಹಾಲಿ ಚಾಂಪಿಯನ್ ಆರ್​ಸಿಬಿ, ತಾನು ಏಕೆ ಮತ್ತೊಮ್ಮೆ ಚಾಂಪಿಯನ್ ಆಗಬೇಕು ಎಂಬುದನ್ನು ಕ್ವಾಲಿಫೈಯರ್ 1 ಪಂದ್ಯದಲ್ಲಿಯೇ ಸಾಭೀತುಪಡಿಸಿದೆ. ಧರ್ಮಶಾಲಾದ ಹಿಮಾಚಲ ಪ್ರದೇಶ ಕ್ರಿಕೆಟ್ ಅಸೋಸಿಯೇಷನ್ ​​ಕ್ರೀಡಾಂಗಣದಲ್ಲಿ ನಡೆದ ಗುಜರಾತ್ ವಿರುದ್ಧದ ಈ ಪಂದ್ಯದಲ್ಲಿ ಕೆಚ್ಚೆದೆಯ ಆಟ ಪ್ರದರ್ಶಿಸಿದ ಆರ್​ಸಿಬಿ ದಾಖಲೆಯ ಗೆಲುವು ದಾಖಲಿಸಿ ಸತತ ಎರಡನೇ ಬಾರಿಗೆ ಐಪಿಎಲ್ ಫೈನಲ್​ಗೇರಿದೆ. ಈ ಪಂದ್ಯದಲ್ಲಿ ಟಾಸ್ ಸೋತು ಮೊದಲು ಬ್ಯಾಟಿಂಗ್‌ ಮಾಡಿದ ಆರ್​ಸಿಬಿ ನಾಯಕ ರಜತ್ ಪಾಟಿದರ್ ಅವರ…

Read More

ಐಪಿಎಲ್ ಟಿಕೆಟ್ ಬ್ಲಾಕ್ ದಂಧೆಗೆ ಪೊಲೀಸರ ಬ್ರೇಕ್: 24 ಮಂದಿ ಅರೆಸ್ಟ್, 17 ಕೇಸ್ ದಾಖಲು! – Kannada News | IPL 2026: Bengaluru Police Crack Down on Ticket Black Marketing; 24 Arrested and 37 Tickets Seized

ಬೆಂಗಳೂರು, ಏಪ್ರಿಲ್ 28: ಐಪಿಎಲ್ ಪಂದ್ಯಾವಳಿಗಳ ಸಂದರ್ಭದಲ್ಲಿ ಅಕ್ರಮವಾಗಿ ಹೆಚ್ಚಿನ ಬೆಲೆಗೆ ಟಿಕೆಟ್‌ಗಳನ್ನು ಮಾರಾಟ ಮಾಡುತ್ತಿದ್ದ ಬ್ಲಾಕ್ ಮಾರ್ಕೆಟ್ ದಂಧೆಕೋರರಿಗೆ ಬೆಂಗಳೂರು ಪೊಲೀಸರು ಬಿಸಿ ಮುಟ್ಟಿಸಿದ್ದಾರೆ. ಕಳೆದ ಒಂದು ತಿಂಗಳ ಅವಧಿಯಲ್ಲಿ, ಪೊಲೀಸರು 17 ಪ್ರಕರಣಗಳನ್ನು ದಾಖಲಿಸಿದ್ದು, ಈ ಸಂಬಂಧ 24 ಮಂದಿಯನ್ನು ಬಂಧಿಸಿದ್ದಾರೆ. ಇವರಿಂದ 37 ಐಪಿಎಲ್ ಟಿಕೆಟ್‌ಗಳನ್ನು ವಶಪಡಿಸಿಕೊಳ್ಳಲಾಗಿದೆ. ನಗರದ ಕಬ್ಬನ್ ಪಾರ್ಕ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ 16 ಪ್ರಕರಣಗಳು ದಾಖಲಾಗಿದ್ದರೆ, ಹಲಸೂರು ಗೇಟ್ ಪೊಲೀಸ್ ಠಾಣೆಯಲ್ಲಿ ಒಂದು ಪ್ರಕರಣ ದಾಖಲಾಗಿದೆ. ಕ್ರಿಕೆಟ್ ಪ್ರೇಮಿಗಳ…

Read More

ರಾಷ್ಟ್ರಪತಿ ಭವನದಲ್ಲಿ ರೋಹಿತ್ ಶರ್ಮಾಗೆ ಪದ್ಮಶ್ರೀ ಪ್ರಶಸ್ತಿ ಪ್ರದಾನ – Kannada News | Indian Cricket Star Rohit Sharma Awarded Padma Shri for Historic Contributions

ದೆಹಲಿ: ಭಾರತ ಕ್ರಿಕೆಟ್ ತಂಡದ ಮಾಜಿ ನಾಯಕ ಹಾಗೂ ವಿಶ್ವಕಪ್ ವಿಜೇತ ಬ್ಯಾಟರ್ ರೋಹಿತ್ ಶರ್ಮಾ ಅವರಿಗೆ ದೇಶದ ನಾಲ್ಕನೇ ಅತ್ಯುನ್ನತ ನಾಗರಿಕ ಗೌರವವಾದ ‘ಪದ್ಮಶ್ರೀ’ (Padma Shri) ಪ್ರಶಸ್ತಿಯನ್ನು ಪ್ರದಾನ ಮಾಡಲಾಗಿದೆ. ದೆಹಲಿಯ ರಾಷ್ಟ್ರಪತಿ ಭವನದಲ್ಲಿ ಮಂಗಳವಾರ ಸಂಜೆ ನಡೆದ ಭವ್ಯ ನಾಗರಿಕ ಗೌರವ ಪ್ರದಾನ ಸಮಾರಂಭದಲ್ಲಿ (Civil Investiture Ceremony) ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ರೋಹಿತ್ ಶರ್ಮಾಗೆ ಪ್ರಶಸ್ತಿ ನೀಡಿ ಗೌರವಿಸಿದರು. ಇದು ಭಾರತೀಯ ಕ್ರಿಕೆಟ್ ಇತಿಹಾಸದಲ್ಲಿ ಮತ್ತೊಂದು ಹೆಮ್ಮೆಯ ಕ್ಷಣವಾಗಿದೆ. ಕಳೆದ…

Read More

ಕರ್ನಾಟಕ ಹವಾಮಾನ ವರದಿ: ಮುಂದಿನ 3 ದಿನ ರಾಜ್ಯದ ಹಲವೆಡೆ ಗುಡುಗು ಸಹಿತ ಮಳೆಯ ಮುನ್ಸೂಚನೆ – Kannada News | Karnataka Weather Forecast: IMD Predicts Thunderstorms, Heavy Rain for Bengaluru, South Interior Districts for 3 Days

ಬೆಂಗಳೂರು, ಮೇ 2: ಕರ್ನಾಟಕದ ದಕ್ಷಿಣ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಮುಂದಿನ ಮೂರು ದಿನಗಳ ಕಾಲ ಗುಡುಗು, ಮಿಂಚು ಹಾಗೂ ಬಲವಾದ ಗಾಳಿ ಸಹಿತ ಮಳೆಯಾಗುವ (Weather Forecast) ಸಾಧ್ಯತೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆ (IMD) ಮತ್ತು ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರ (KSNDMC) ಮುನ್ಸೂಚನೆ ನೀಡಿವೆ. ಮುನ್ಸೂಚನೆಯ ಮುಖ್ಯಾಂಶಗಳು ದಕ್ಷಿಣ ಒಳನಾಡು ಹವಾಮಾನ: ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಕೋಲಾರ, ಮಂಡ್ಯ, ಮೈಸೂರು, ಮತ್ತು ರಾಮನಗರ ಜಿಲ್ಲೆಗಳಲ್ಲಿ ಮೇ…

Read More

‘ಆ ಚಿತ್ರದಲ್ಲಿ ಕೆಲಸ ಮಾಡಿದ್ದು ನನ್ನ ಜೀವನದ ದೊಡ್ಡ ತಪ್ಪು’: ಪ್ರಭಾಸ್ ಸಿನಿಮಾ ಬಗ್ಗೆ ಬೇಸರ – Kannada News | Manoj Muntashir said working in Adipursh movie is biggest mistake of his life

ದೊಡ್ಡ ಬಜೆಟ್​​, ದೊಡ್ಡ ಸ್ಟಾರ್ ನಟರ ಸಿನಿಮಾಗಳಲ್ಲಿ ಕೆಲಸ ಮಾಡಲು ಅವಕಾಶ ಸಿಕ್ಕರೆ ಸಾಕೆಂದು ಕಾದು ಕುಳಿತಿರುವ ಹಲವಾರು ನಟ-ನಟಿಯರು, ತಂತ್ರಜ್ಞರು ಇದ್ದಾರೆ. ಆದರೆ ಇಲ್ಲೊಬ್ಬರು, ಅತಿ ದೊಡ್ಡ ಬಜೆಟ್​​ನ, ದೊಡ್ಡ ನಿರ್ಮಾಣ ಸಂಸ್ಥೆಯ ಮತ್ತು ಪ್ರಭಾಸ್ ಅಂಥಹಾ ದೊಡ್ಡ ಸ್ಟಾರ್ ನಟನ ಸಿನಿಮಾನಲ್ಲಿ ಕೆಲಸ ಮಾಡಿ, ಈಗ ಆ ಸಿನಿಮಾನಲ್ಲಿ ಕೆಲಸ ಮಾಡಿದ್ದು ನಾನು ಮಾಡಿದ ದೊಡ್ಡ ತಪ್ಪು, ಆ ಸಿನಿಮಾನಲ್ಲಿ ನಾನ ಮಾಡಿದ ಕೆಲಸಕ್ಕೆ ನಾಚಿಕೆ ಆಗುತ್ತಿದೆ’ ಎಂದಿದ್ದಾರೆ. ಪ್ರಭಾಸ್ ನಟನೆಯ ‘ಆದಿಪುರುಷ್’ ಸಿನಿಮಾ…

Read More

ಡಿಕೆ ಶಿವಕುಮಾರ್ ಪ್ರಮಾಣ ವಚನ ಹಿನ್ನೆಲೆ 90 ಸಾವಿರ ಮನೆಗಳಿಗೆ ‘ಲಾಡು’ ಭಾಗ್ಯ; ಶಾಸಕ ಶ್ರೀನಿವಾಸ್ ಭರ್ಜರಿ ತಯಾರಿ! – Kannada News

ಡಿಕೆ ಶಿವಕುಮಾರ್ ಪ್ರಮಾಣ ವಚನ ಹಿನ್ನೆಲೆ 90 ಸಾವಿರ ಮನೆಗಳಿಗೆ ‘ಲಾಡು’ ಭಾಗ್ಯImage Credit source: Tv9 kannada ನೆಲಮಂಗಲ, ಜೂ.2: ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಡಿ.ಕೆ. ಶಿವಕುಮಾರ್ (DK Shivakumar) ಅವರು ಪ್ರಮಾಣ ವಚನ ಸ್ವೀಕರಿಸಲಿರುವ ಐತಿಹಾಸಿಕ ಕ್ಷಣಕ್ಕೆ ಇಡೀ ನೆಲಮಂಗಲ ವಿಧಾನಸಭಾ ಕ್ಷೇತ್ರವೇ ವಧುವಿನಂತೆ ಸಿಂಗಾರಗೊಳ್ಳುತ್ತಿದ್ದು, ಹಬ್ಬದ ವಾತಾವರಣ ನಿರ್ಮಾಣವಾಗಿದೆ. ಕ್ಷೇತ್ರದ ಪ್ರತಿ ಹಳ್ಳಿಯ ಪ್ರತಿ ಮನೆಯಲ್ಲೂ ಸಂಭ್ರಮ ಮನೆ ಮಾಡಿದ್ದು, ಈ ಐತಿಹಾಸಿಕ ಸಂತಸವನ್ನು ಹಂಚಿಕೊಳ್ಳಲು ಸ್ಥಳೀಯ ಶಾಸಕರಾದ ಶ್ರೀನಿವಾಸ್ ಅವರ ನೇತೃತ್ವದಲ್ಲಿ…

Read More

ಸಿದ್ದರಾಮಯ್ಯ ಪತ್ನಿಗೆ ರಾಜ್ಯಸಭಾ ಆಫರ್ ನೀಡಿದ್ದ ರಾಹುಲ್ ಗಾಂಧಿ: ಬೇಡವೆಂದಿದ್ದ ಮಾಜಿ ಸಿಎಂ ಇಟ್ಟಿದ್ದು ಬೇರೆಯೇ ಬೇಡಿಕೆ!

ಡಿಕೆ ಶಿವಕುಮಾರ್ ಹಾಗೂ ಸಿದ್ದರಾಮಯ್ಯImage Credit source: tv9 ಬೆಂಗಳೂರು, ಜೂನ್ 1: ರಾಜ್ಯದಲ್ಲಿ ಸಿಎಂ ಹುದ್ದೆ ಬದಲಾವಣೆಯ ಜತೆಗೆ ಸಂಪುಟ ರಚನೆಯ ಕಸರತ್ತು ಅಂತಿಮ ಘಟ್ಟ ತಲುಪಿದೆ. ಸಚಿವ ಸಂಪುಟದಲ್ಲಿ ಯಾರೆಲ್ಲ ಇರಬೇಕು ಎಂಬುದು ಮತ್ತು ಇತರ ಪ್ರಮುಖ ರಾಜಕೀಯ ನಿರ್ಧಾರಗಳ ಕುರಿತು ಚರ್ಚಿಸಲು ನಿರ್ಗಮಿತ ಸಿಎಂ ಸಿದ್ದರಾಮಯ್ಯ (Siddaramaiah) ಹಾಗೂ ನಿಯೋಜಿತ ಸಿಎಂ ಡಿಕೆ ಶಿವಕುಮಾರ್ (DK Shivakumar) ಇಂದು (ಜೂನ್ 1) ದೆಹಲಿಗೆ ತೆರಳುತ್ತಿದ್ದಾರೆ. ಸಂಭಾವ್ಯ ಸಚಿವರ ಪಟ್ಟಿ ಅಂತಿಮಗೊಳಿಸಲು ಹೈಕಮಾಂಡ್ ನಾಯಕರೊಂದಿಗೆ…

Read More

ಶೇ.85ರಷ್ಟು ದೃಷ್ಟಿ ಕಳೆದುಕೊಂಡಿದ್ದಾರಂತೆ ಪಾಕ್ ಮಾಜಿ ಪ್ರಧಾನಿ ಇಮ್ರಾನ್​ ಖಾನ್, ಸುಪ್ರೀಂಕೋರ್ಟ್​​ನಲ್ಲಿ ಕಣ್ಣೀರಿಟ್ಟ ಸಹೋದರಿ – Kannada News | Imran Khan Losing Eyesight in Adiala Jail: Sister Pleads in Pakistan Supreme Court

ಇಸ್ಲಾಮಾಬಾದ್, ಫೆಬ್ರವರಿ 13: ಪಾಕಿಸ್ತಾನದ ಮಾಜಿ ಪ್ರಧಾನಿ ಇಮ್ರಾನ್ ಖಾನ್(Imran Khan) ಆರೋಗ್ಯದ ಬಗ್ಗೆ ಪ್ರಮುಖ ಮಾಹಿತಿಯೊಂದು ಹೊರಬಿದ್ದಿದೆ. ಅವರನ್ನು ಜೈಲಿನಲ್ಲಿ ಕೆಟ್ಟದಾಗಿ ನಡೆಸಿಕೊಳ್ಳಲಾಗುತ್ತಿದೆ, ಅದರ ಪರಿಣಾಮವಾಗಿ ಶೇ.85ರಷ್ಟು ದೃಷ್ಟಿ ಕಳೆದುಕೊಂಡಿದ್ದಾರೆ ಎಂದು ಸುಪ್ರೀಂಕೋರ್ಟ್​ ಎದುರು ಇಮ್ರಾನ್ ಸಹೋದರಿ ಕಣ್ಣೀರಿಟ್ಟಿದ್ದಾರೆ. ಪಾಕಿಸ್ತಾನದ ಸುಪ್ರೀಂ ಕೋರ್ಟ್ ತಕ್ಷಣದ ವೈದ್ಯಕೀಯ ಪರೀಕ್ಷೆಗೆ ಆದೇಶಿಸಿದೆ. ನ್ಯಾಯಾಲಯಕ್ಕೆ ಸಲ್ಲಿಸಲಾದ ವರದಿಯಲ್ಲಿ ಇಮ್ರಾನ್ ಖಾನ್ ಅವರ ಬಲಗಣ್ಣಿನ ಸುಮಾರು ಶೇ. 85 ರಷ್ಟು ದೃಷ್ಟಿ ಕಳೆದುಕೊಂಡಿದ್ದಾರೆ ಎಂದು ಹೇಳಲಾಗಿದೆ. ಮುಖ್ಯ ನ್ಯಾಯಮೂರ್ತಿ ಯಾಹ್ಯಾ ಅಫ್ರಿದಿ…

Read More

ಬೆಂಗಳೂರು ಮತ್ತು ಮುಂಬೈ ನಡುವೆ ಹೊಸ ವಂದೇ ಭಾರತ್ ಸ್ಲೀಪರ್ ರೈಲಿಗೆ ಸಿಕ್ತು ಗ್ರೀನ್ ಸಿಗ್ನಲ್!

ಬೆಂಗಳೂರು, ಏಪ್ರಿಲ್ 11: ದೇಶದ ಪ್ರಮುಖ ನಗರಗಳಾದ ಬೆಂಗಳೂರು ಮತ್ತು ಮುಂಬೈ ನಡುವಿನ ರೈಲು ಸಂಪರ್ಕಕ್ಕೆ ಮಹತ್ವದ ಉತ್ತೇಜನ ದೊರೆತಿದ್ದು, ಈ ಮಾರ್ಗದಲ್ಲಿ ವಂದೇ ಭಾರತ್ ಸ್ಲೀಪರ್ ರೈಲು (Vande Bharath Sleeper train) ಸೇವೆಗೆ ಕೇಂದ್ರ ಸರ್ಕಾರ ಅನುಮೋದನೆ ನೀಡಿದೆ. ಈ ಹೊಸ ರೈಲು ಕೆಎಸ್ಆರ್ ಬೆಂಗಳೂರು ಮತ್ತು ಮುಂಬೈನ ಛತ್ರಪತಿ ಶಿವಾಜಿ ಮಹಾರಾಜ್ ಟರ್ಮಿನಸ್ (CSMT) ನಡುವೆ ಚಲಿಸಲಿದೆ. ಪಿ ಸಿ ಮೋಹನ್ ನಿರಂತರ ಪ್ರಯತ್ನ ಈ ಹಿಂದೆ ಈ ವಿಷಯವನ್ನು ಮುನ್ನೆಲೆಗೆ ತಂದಿದ್ದ…

Read More