Headlines

ಬಡ ಮಕ್ಕಳ ಹೊಟ್ಟೆಮೇಲೆ ಹೊಡೆದ ವಾರ್ಡನ್; 3 ದಿನ ಅನ್ನ-ನೀರಿಲ್ಲದೆ ಪಕ್ಕದ ಹಾಸ್ಟೆಲ್‌ನಲ್ಲಿ ಕೈಚಾಚಿದ ವಿದ್ಯಾರ್ಥಿಗಳು! – Kannada News

ರಾಯಚೂರು, ಜೂನ್ 06: ಕಡು ಬಡತನದ ಹಿನ್ನೆಲೆಯಿಂದ ಬಂದು, ವಿದ್ಯಾಭ್ಯಾಸಕ್ಕಾಗಿ ಸರ್ಕಾರಿ ವಸತಿ ನಿಲಯಗಳನ್ನೇ ನಂಬಿಕೊಂಡಿರುವ ವಿದ್ಯಾರ್ಥಿಗಳಿಗೆ ಜಿಲ್ಲೆಯಲ್ಲೊಂದು ಭೀಕರ ಅನ್ಯಾಯ ನಡೆದಿದೆ. ಜಿಲ್ಲೆಯ (Raichur) ಡಾ. ಬಿ.ಆರ್. ಅಂಬೇಡ್ಕರ್ ಮೆಟ್ರಿಕ್ ನಂತರದ ವಸತಿ ನಿಲಯದಲ್ಲಿ ಕಳೆದ ಮೂರು ದಿನಗಳಿಂದ ಊಟ ಮತ್ತು ಕುಡಿಯುವ ನೀರಿಲ್ಲದೆ ವಿದ್ಯಾರ್ಥಿಗಳು ತೀವ್ರ ಪರದಾಟ ನಡೆಸಿದ್ದಾರೆ. ಹಸಿವಿನ ನೋವು ತಾಳಲಾರದೇ ನೂರಾರು ವಿದ್ಯಾರ್ಥಿಗಳು ಸಮಾಜ ಕಲ್ಯಾಣ ಇಲಾಖೆಯ ಜಿಲ್ಲಾ ಕಚೇರಿ ಎದುರು ಬೀದಿಗಿಳಿದು ಆಕ್ರೋಶ ಹೊರಹಾಕಿದ್ದಾರೆ. ಮುಖ್ಯಾಂಶಗಳು ರಾಯಚೂರಿನ ಸರ್ಕಾರಿ ಹಾಸ್ಟೆಲ್‌ನಲ್ಲಿ…

Read More

2 ದಿನಗಳಲ್ಲಿ 33 ವಿಕೆಟ್ ಪತನ: ರೋಚಕ ಘಟ್ಟದಲ್ಲಿ ‘ಲಾರ್ಡ್ಸ್’​ ಟೆಸ್ಟ್

ಲಾರ್ಡ್ಸ್​ನಲ್ಲಿ ನಡೆಯುತ್ತಿರುವ ಇಂಗ್ಲೆಂಡ್ ಹಾಗೂ ನ್ಯೂಝಿಲೆಂಡ್ ನಡುವಣ ಮೊದಲ ಟೆಸ್ಟ್ ಪಂದ್ಯವು ರೋಚಕಘಟ್ಟದತ್ತ ಸಾಗಿದೆ. ಅದು ಕೂಡ ಕೇವಲ 2 ದಿನಗಳಲ್ಲಿ 33 ವಿಕೆಟ್​ಗಳ ಪತನದೊಂದಿಗೆ. ಈ ಪಂದ್ಯದಲ್ಲಿ ಟಾಸ್ ಗೆದ್ದ ನ್ಯೂಝಿಲೆಂಡ್ ತಂಡವು ಬೌಲಿಂಗ್ ಆಯ್ದುಕೊಂಡಿದ್ದರು. ಅದರಂತೆ ಮೊದಲ ಇನಿಂಗ್ಸ್ ಆಡಿದ ಇಂಗ್ಲೆಂಡ್ ತಂಡವು ಕೇವಲ 140 ರನ್​ಗಳಿಗೆ ಆಲೌಟ್ ಆಗಿದ್ದರು. ಇದಕ್ಕುತ್ತರವಾಗಿ ಮೊದಲ ಇನಿಂಗ್ಸ್ ಆಡಿದ ನ್ಯೂಝಿಲೆಂಡ್ ಕೇವಲ 113 ರನ್​ಗಳಿಗೆ ಸರ್ಪಪತನ ಕಂಡಿತು. 27 ರನ್​ಗಳ ಅಲ್ಪ ಮುನ್ನಡೆಯೊಂದಿಗೆ ದ್ವಿತೀಯ ಇನಿಂಗ್ಸ್ ಆರಂಭಿಸಿದ…

Read More

ಬರ್ತ್ ಡೇ ಪಾರ್ಟಿ ಆಚರಿಸುತ್ತಿದ್ದಾಗಲೇ ಕುಸಿದು ಬಿದ್ದ ಕಟ್ಟಡ: ಕೂದಲೆಳೆ ಅಂತರದಲ್ಲಿ ಪಾರಾದ 15 ಯುವಕರು – Kannada News

ಬೆಳಗಾವಿ, ಜೂನ್ 6: ಧಾರಾಕಾರ ಮಳೆಗೆ ಹಳೆಯ ಕಟ್ಟಡವೊಂದು ದಿಢೀರನೆ ಕುಸಿದು ಬಿದ್ದಿದ್ದು, 15 ಯುವಕರು ಕೂದಲೆಳೆ ಅಂತರದಲ್ಲಿ ಪ್ರಾಣಾಪಾಯದಿಂದ ಪಾರಾಗಿರುವ ರೋಮಾಂಚಕ ಘಟನೆ ಬೆಳಗಾವಿ ಜಿಲ್ಲೆಯ ಅಥಣಿ ಪಟ್ಟಣದಲ್ಲಿ ನಡೆದಿದೆ. ಅಂದಹಾಗೆ, ಘಟನೆ ವೇಳೆ ಯುವಕರು ಸ್ನೇಹಿತನ ಬರ್ತ್​​ ಡೇ ಪಾರ್ಟಿ ಆಚರಿಸುತ್ತಿದ್ದರು. ಅಥಣಿ ಪಟ್ಟಣದ ಹಳದಿ ಕಟ್ಟಡವೊಂದರಲ್ಲಿ ಯುವಕರ ತಂಡವೊಂದು ತಮ್ಮ ಸ್ನೇಹಿತನ ಹುಟ್ಟುಹಬ್ಬವನ್ನು ಸಂಭ್ರಮದಿಂದ ಆಚರಿಸುತ್ತಿತ್ತು. ಈ ವೇಳೆ ಕಟ್ಟಡದಿಂದ ವಿಚಿತ್ರವಾದ ಶಬ್ದ ಕೇಳಿಬಂದಿದೆ. ಅಪಾಯದ ಮುನ್ಸೂಚನೆ ಅರಿತ ಯುವಕರು ತಕ್ಷಣವೇ ಜಾಗರೂಕರಾಗಿ…

Read More

‘ನಟಿಯನ್ನು ಕೀಳಾಗಿ ತೋರಿಸೋ ಉದ್ದೇಶವಿರಲಿಲ್ಲ’; ಜಾನ್ವಿ ಹೊಕ್ಕುಳ ಪ್ರದರ್ಶನದ ಬಗ್ಗೆ ನಿರ್ದೇಶಕರ ಸ್ಪಷ್ಟನೆ – Kannada News

‘ಪೆದ್ದಿ’ ಸಿನಿಮಾ ಮೂಲಕ ಜಾನ್ವಿ ಕಪೂರ್ ಅವರು ದಕ್ಷಿಣದಲ್ಲಿ ಸಾಕಷ್ಟು ಜನಪ್ರಿಯತೆ ಪಡೆದುಕೊಳ್ಳಬಹದು ಎಂಬುದು ಅನೇಕರ ಊಹೆ ಆಗಿತ್ತು. ಆದರೆ, ಊಹೆ ತಪ್ಪಾಗಿದೆ. ಜಾನ್ವಿ ಕಪೂರ್ ಅವರನ್ನು (Janhvi Kapoor) ಕೇವಲ ಗ್ಲಾಮರ್ ಗೊಂಬೆಯಾಗಿ ಬಳಕೆ ಮಾಡಿಕೊಳ್ಳಾಗಿದೆ. ‘ದೇವರ’ ಸಿನಿಮಾದಲ್ಲೂ ಇದೇ ರೀತಿಯಲ್ಲಿ ಜಾನ್ವಿ ಪಾತ್ರ ಇತ್ತು. ಈಗ ‘ಪೆದ್ದಿ’ ಚಿತ್ರದಲ್ಲೂ ಅದು ಮುಂದುವರಿದಿದೆ. ಈ ವಿಷಯ ಸಾಕಷ್ಟು ಚರ್ಚೆ ಆಗುತ್ತಿದ್ದು, ನಿರ್ದೇಶಕ ಬುಚ್ಚಿ ಬಾಬು ಸನ ಅವರನ್ನು ಟೀಕೆ ಮಾಡಲಾಗಿದೆ. ಈ ವಿಷಯವಾಗಿ ಅವರು ಸ್ಪಷ್ಟನೆ…

Read More

ಟೀಮ್ ಇಂಡಿಯಾದ ಹೊಸ ಆಶಾಕಿರಣ: ಯಾರು ಈ ಮಾನವ್ ಸುತಾರ್? – Kannada News

ಅಫ್ಘಾನಿಸ್ತಾನ್ ವಿರುದ್ಧದ ಟೆಸ್ಟ್ ಪಂದ್ಯದ ಮೂಲಕ ಟೀಮ್ ಇಂಡಿಯಾಗೆ ಮತ್ತೊಬ್ಬ ಆಟಗಾರನ ಎಂಟ್ರಿಯಾಗಿದೆ. ಈ ಬಾರಿ ಟೆಸ್ಟ್ ಕ್ರಿಕೆಟ್​ಗೆ ಪಾದಾರ್ಪಣೆ ಮಾಡಿದ ಆಟಗಾರನ ಹೆಸರು ಮಾನವ್ ಸುತಾರ್ (Manav Suthar). ವಯಸ್ಸು ಕೇವಲ 23. ಇತ್ತ ಟೀಮ್ ಇಂಡಿಯಾದಲ್ಲಿ ಯುವ ಆಟಗಾರನ ಹೆಸರು ಕಾಣಿಸಿಕೊಳ್ಳುತ್ತಿದ್ದಂತೆ ಯಾರು ಈ ಮಾನವ್ ಸುತಾರ್ ಎಂಬ ಹುಡುಕಾಟ ಕೂಡ ಶುರುವಾಗಿದೆ. ಅಷ್ಟಕ್ಕೂ ಯಾರು ಈ ಸುತಾರ್? ಮಾನವ್ ಸುತಾರ್, ರಾಜಸ್ಥಾನದ ಶ್ರೀ ಗಂಗಾನಗರದ ನಿವಾಸಿ. ಬಾಲ್ಯದಿಂದಲೇ ಕ್ರಿಕೆಟ್‌ನಲ್ಲಿ ತೀವ್ರ ಆಸಕ್ತಿ ಹೊಂದಿದ್ದ ಸುತಾರ್,…

Read More

ಪಾಕ್ ಉಗ್ರನ ಜತೆ ಸಂಪರ್ಕ ಹೊಂದಿದ್ದ ಇಬ್ಬರ ಬಂಧನ: ಕರ್ನಾಟಕದಲ್ಲಿ ಬೇರೂರುತ್ತಿವೆ ಉಗ್ರರ ಸ್ಲೀಪರ್ ಸೆಲ್! – Kannada News

ಅಲ್ಲಾಬಕ್ಷು ಮತ್ತು ಜಮೀರ್ ಖಾನ್Image Credit source: tv9 ಬೆಂಗಳೂರು, ಜೂನ್ 6: ರಾಜ್ಯದಲ್ಲಿ ವಿದೇಶಿ ಉಗ್ರರ ನೆಟ್‌ವರ್ಕ್ ಮತ್ತು ಸ್ಲೀಪರ್ ಸೆಲ್‌ಗಳು ಸಕ್ರಿಯವಾಗಿರುವ ಆತಂಕಕಾರಿ ವಿಚಾರ ಬಯಲಾಗಿದೆ. ಪಾಕಿಸ್ತಾನ (Pakistan) ಮೂಲದ ಶಂಕಿತ ಉಗ್ರನೊಂದಿಗೆ ನಿರಂತರ ಸಂಪರ್ಕದಲ್ಲಿದ್ದುಕೊಂಡು, ದೇಶದ ಭದ್ರತೆಗೆ ಧಕ್ಕೆ ತರಲು ಹಾಗೂ ಭಯೋತ್ಪಾದಕ ಕೃತ್ಯ ಎಸಗಲು ಸಂಚು ರೂಪಿಸುತ್ತಿದ್ದ ಇಬ್ಬರು ಯುವಕರನ್ನು ತುಮಕೂರು (Tumakur) ನಗರ ಪೊಲೀಸರು ಭರ್ಜರಿ ಕಾರ್ಯಾಚರಣೆ ನಡೆಸಿ ಬಂಧಿಸಿದ್ದಾರೆ. ಬಂಧಿತರನ್ನು ತುಮಕೂರು ನಿವಾಸಿ ಅಲ್ಲಾಬಕ್ಷು (24) ಮತ್ತು ದಾವಣಗೆರೆಯ…

Read More

Hindu Astrology: ಮೊದಲ ಮಗು ಹೆಣ್ಣು ಜನಿಸಿದರೆ ತಂದೆಯ ಅದೃಷ್ಟವೇ ಬದಲಾಗುತ್ತಾ? ಶಾಸ್ತ್ರಗಳು ಹೇಳುವುದೇನು? – Kannada News

ಹಿಂದೂ ಧರ್ಮದಲ್ಲಿ ಹೆಣ್ಣು ಮಕ್ಕಳನ್ನು ಸಾಕ್ಷಾತ್ ಮಹಾಲಕ್ಷ್ಮಿಯ ಸ್ವರೂಪ ಎಂದು ಪೂಜಿಸಲಾಗುತ್ತದೆ. ಪ್ರತಿಯೊಂದು ಮನೆಯಲ್ಲೂ ಹೆಣ್ಣು ಮಗುವಿನ ಜನನವು ಸೌಭಾಗ್ಯದ ಸಂಕೇತ ಎಂದೇ ನಂಬಲಾಗಿದೆ. ಅದರಲ್ಲೂ ವಿಶೇಷವಾಗಿ, ದಂಪತಿಗಳಿಗೆ ಮೊದಲ ಮಗುವಾಗಿ ಹೆಣ್ಣು ಮಗು ಜನಿಸಿದರೆ ಅದು ಅತ್ಯಂತ ಶುಭ ಹಾಗೂ ಆ ಮನೆಯ ಅದೃಷ್ಟವೇ ಬದಲಾಗುತ್ತದೆ ಎಂದು ಜ್ಯೋತಿಷ್ಯ ತಜ್ಞರು ಹೇಳುತ್ತಾರೆ. ಮನೆಯಲ್ಲಿ ಹೆಣ್ಣು ಮಗುವಿನ ಜನನವಾದರೆ ತಂದೆಯ ಜಾತಕ ಬದಲಾಗುತ್ತದೆಯೇ? ಆ ಮನೆಯಲ್ಲಿ ಯಾವ ಗ್ರಹಗಳ ಬಲ ಹೆಚ್ಚಿರುತ್ತದೆ? ಈ ಕುರಿತು ಜ್ಯೋತಿಷ್ಯ ಶಾಸ್ತ್ರ…

Read More

ಮಂಗಳೂರು ಬಳಿ ಡ್ರಗ್ಸ್ ಸಾಗಿಸುತ್ತಿದ್ದ ಮೂವರು ಪೊಲೀಸ್ ಬಲೆಗೆ: ಕಲಬುರಗಿಯಲ್ಲಿ ವಂಚಿಸುತ್ತಿದ್ದ ಬಿಹಾರಿಗಳ ಬಂಧನ – Kannada News

ಬೆಂಗಳೂರು, ಜೂನ್ 6: ದಕ್ಷಿಣ ಕನ್ನಡ (Dakshina Kannada) ಸೇರಿದಂತೆ ರಾಜ್ಯದ ಮೂರು ಜಿಲ್ಲೆಗಳಲ್ಲಿ ವಿಭಿನ್ನ ಅಪರಾಧ ಪ್ರಕರಣಗಳು ವರದಿಯಾಗಿದ್ದು, ಸಾರ್ವಜನಿಕರಲ್ಲಿ ತಲ್ಲಣ ಮೂಡಿಸಿವೆ. ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳದಲ್ಲಿ ಕಾರಿನಲ್ಲಿ ಭಾರಿ ಪ್ರಮಾಣದ ಮಾದಕವಸ್ತು ಸಾಗಿಸುತ್ತಿದ್ದ ಮೂವರನ್ನು ಪೊಲೀಸರು ಹೆಡೆಮುರಿ ಕಟ್ಟಿದ್ದಾರೆ. ಇತ್ತ ಕಲಬುರಗಿಯಲ್ಲಿ ನಿರುದ್ಯೋಗಿಗಳಿಗೆ ನಕಲಿ ಸರ್ಕಾರಿ ನೌಕರಿ ಮತ್ತು ನೀಟ್ (NEET) ಪರೀಕ್ಷೆ ಪಾಸ್ ಮಾಡಿಸುವುದಾಗಿ ನಂಬಿಸಿ ವಂಚಿಸುತ್ತಿದ್ದ ಬಿಹಾರ ಮೂಲದ ಇಬ್ಬರು ಅಂತರ್ರಾಜ್ಯ ವಂಚಕರನ್ನು ಬಂಧಿಸಲಾಗಿದೆ. ಇನ್ನು ವಿಜಯನಗರ ಜಿಲ್ಲೆಯ ಕೂಡ್ಲಿಗಿಯಲ್ಲಿ…

Read More

IND vs AFG: ಯುವ ಆಟಗಾರ ಪಾದಾರ್ಪಣೆ: ಹೀಗಿದೆ ಟೀಮ್ ಇಂಡಿಯಾ ಪ್ಲೇಯಿಂಗ್ 11 – Kannada News

ಭಾರತ ಮತ್ತು ಅಫ್ಘಾನಿಸ್ತಾನ್ ನಡುವಣ ಟೆಸ್ಟ್ ಪಂದ್ಯ ಶುರುವಾಗಿದೆ. ಮುಲ್ಲನ್​ಪುರ್​ನ ಮಹಾರಾಜ ಯಾದವೀಂದ್ರ ಸಿಂಗ್ ಅಂತರಾಷ್ಟ್ರೀಯ ಕ್ರಿಕೆಟ್ ಸ್ಟೇಡಿಯಂನಲ್ಲಿ ನಡೆಯುತ್ತಿರುವ ಈ ಪಂದ್ಯದಲ್ಲಿ ಟಾಸ್ ಗೆದ್ದಿರುವ ಟೀಮ್ ಇಂಡಿಯಾ ನಾಯಕ ಶುಭ್​​ಮನ್ ಗಿಲ್ ಬ್ಯಾಟಿಂಗ್ ಆಯ್ದುಕೊಂಡಿದ್ದಾರೆ. ಅದರಂತೆ ಅಫ್ಘಾನಿಸ್ತಾನ್ ತಂಡ ಮೊದಲು ಬೌಲಿಂಗ್ ಮಾಡಲಿದೆ. ಇನ್ನು ಈ ಪಂದ್ಯದ ಮೂಲಕ 23 ವರ್ಷದ ಯುವ ಸ್ಪಿನ್ನರ್ ಮಾನವ್ ಸುತಾರ್ ಟೀಮ್ ಇಂಡಿಯಾ ಪರ ಪಾದಾರ್ಪಣೆ ಮಾಡಿದ್ದಾರೆ. ಅದರಂತೆ ಉಭಯ ತಂಡಗಳ ಪ್ಲೇಯಿಂಗ್ ಇಲೆವೆನ್ ಈ ಕೆಳಗಿನಂತಿದೆ… ಭಾರತ…

Read More

ಲಾಲ್‌ಬಾಗ್‌ನಲ್ಲಿ ಮಾವು-ಹಲಸು ಮೇಳದ ಸಖತ್ ಕ್ರೇಜ್! ಮೇಳದಲ್ಲಿ ಯಾವೆಲ್ಲಾ ಬಗೆಯ ಮಾವಿನ ಹಣ್ಣುಗಳಿದ್ದವು ನೋಡಿ

ಬೆಂಗಳೂರಿನ ಐತಿಹಾಸಿಕ ಲಾಲ್‌ಬಾಗ್‌ನಲ್ಲಿ ತೋಟಗಾರಿಕೆ ಇಲಾಖೆಯು ಆಯೋಜಿಸಿರುವ ಮಾವು ಮತ್ತು ಹಲಸು ಮೇಳವು ಸಾರ್ವಜನಿಕರ ಭಾರೀ ಜನಮನ್ನಣೆಗೆ ಪಾತ್ರವಾಗಿದೆ. ಜೂನ್ 26 ರವರೆಗೆ ನಡೆಯಲಿರುವ ಈ ವಿಶೇಷ ಮೇಳದಲ್ಲಿ ರಾಜ್ಯದ ಬೇರೆ ಬೇರೆ ಜಿಲ್ಲೆಗಳ ರೈತರು ಭಾಗವಹಿಸಿದ್ದು, ತಾವು ಬೆಳೆದ ತಾಜಾ ಹಣ್ಣುಗಳನ್ನು ನೇರವಾಗಿ ಗ್ರಾಹಕರಿಗೆ ಮಾರಾಟ ಮಾಡಲು ಉತ್ತಮ ವೇದಿಕೆ ಕಲ್ಪಿಸಲಾಗಿದೆ. ಮೇಳದಲ್ಲಿ ಮಾಲ್ಗೋಬ, ಮಲ್ಲಿಕಾ, ಸೆಂಧೂರ, ಬಾದಾಮಿ, ತೋತಾಪುರಿ ಹಾಗೂ ರಸಪುರಿ ಸೇರಿದಂತೆ ಹತ್ತಾರು ಜನಪ್ರಿಯ ತಳಿಯ ಮಾವಿನ ಹಣ್ಣುಗಳು ಗ್ರಾಹಕರ ಗಮನ ಸೆಳೆಯುತ್ತಿವೆ….

Read More