Headlines

ಕಾಂಗ್ರೆಸ್ “ಬಣವಿ ಸುಟ್ಟು ಅರಳು ಮುಕ್ಕುವ” ಕೆಲಸ ಮಾಡುತ್ತಿದೆ: ಕೇಂದ್ರ ಸಚಿವ ಜೋಶಿ ಕಿಡಿ

ಬೆಂಗಳೂರು, (ಮಾರ್ಚ್ 13): ಮಧ್ಯಪ್ರಾಚ್ಯದ ಯುದ್ಧ (War) ಸಂದಿಗ್ಧ ಪರಿಸ್ಥಿತಿಯಲ್ಲಿ ದೇಶದಲ್ಲಿ ಎಲ್ಲೂ ಗ್ಯಾಸ್ (LPG Gas) ಮತ್ತು ಪೆಟ್ರೋಲಿಯಂ ಉತ್ಪನ್ನಗಳ ಕೊರತೆಯಿಲ್ಲ. ಆದರೆ, ಕಾಂಗ್ರೆಸ್ (Congress)  ಪಕ್ಷ “ಬಣವಿ ಸುಟ್ಟು ಅರಳು ಮುಕ್ಕುವ” ಕೆಲಸ ಮಾಡುತ್ತಿದೆ. ದೇಶದಲ್ಲಿ ಈ ಹಿಂದೆಲ್ಲಾ ಕ್ರೈಸಿಸ್ ಉಂಟಾದಾಗ ವಿಪಕ್ಷ ಸ್ಥಾನದಲ್ಲಿದ್ದ ಬಿಜೆಪಿ ಅತ್ಯಂತ ಜವಾಬ್ದಾರಿಯಿಂದ ನಡೆದುಕೊಂಡಿದೆ. ಆದರೆ, ಸದ್ಯದ ಪರಿಸ್ಥಿತಿಯಲ್ಲಿ ವಿಪಕ್ಷ ಕಾಂಗ್ರೆಸ್ ತೀರಾ ತೀರಾ ಬೇಜವಾಬ್ದಾರಿಯಿಂದ ನಡೆದುಕೊಳ್ಳುತ್ತಿದೆ ಎಂದು ಕೇಂದ್ರ ಹೊಸ ಮತ್ತು ನವೀಕರಿಸಬಹುದಾದ ಇಂಧನ ಸಚಿವ ಪ್ರಲ್ಹಾದ…

Read More

ಚೆನ್ನೈನಲ್ಲಿ ಗೀತಾ ಶಿವರಾಜ್​ಕುಮಾರ್ ಹುಟ್ಟುಹಬ್ಬ ಆಚರಿಸಿದ ಶಿವಣ್ಣ ಫ್ಯಾನ್ಸ್ – Kannada News | Fans celebrate Geetha Shivarajkumar birthday in Chennai amid shooting

ಗೀತಾ ಶಿವರಾಜ್​ಕುಮಾರ್ (Geetha Shiva Rajkumar) ಅವರಿಗೆ ಹುಟ್ಟುಹಬ್ಬದ ಸಂಭ್ರಮ. ಅವರ ಜನ್ಮದಿನವನ್ನು ಅಭಿಮಾನಿಗಳು ಸಡಗರದಿಂದ ಆಚರಿಸಿದ್ದಾರೆ. ಕೇಕ್ ಕಟ್ ಮಾಡಿ ಸಂಭ್ರಮಿಸಲಾಗಿದೆ. ಶಿವರಾಜ್​ಕುಮಾರ್ ಅವರು ಈಗ ಶೂಟಿಂಗ್ ಸಲುವಾಗಿ ಚೆನ್ನೈನಲ್ಲಿ ಇದ್ದಾರೆ. ಅವರ ಜೊತೆ ಗೀತಾ ಕೂಡ ಇದ್ದಾರೆ. ಹಾಗಾಗಿ ಅಭಿಮಾನಿಗಳು ಕರ್ನಾಟಕದಿಂದ ಚೆನ್ನೈಗೆ ಹೋಗಿ ಅಲ್ಲಿಯೇ ಹುಟ್ಟುಹಬ್ಬವನ್ನು ಸೆಲೆಬ್ರೇಟ್ ಮಾಡಿದ್ದಾರೆ. ಆ ಸಂದರ್ಭದ ವಿಡಿಯೋ ಲಭ್ಯವಾಗಿದೆ. ಶಿವರಾಜ್​ಕುಮಾರ್ ಅವರ ವೃತ್ತಿಜೀವನಕ್ಕೆ ಗೀತಕ್ಕ ಸದಾ ಬೆಂಬಲವಾಗಿ ನಿಂತಿದ್ದಾರೆ. ಅನಾರೋಗ್ಯದ ಕಷ್ಟದ ದಿನಗಳಲ್ಲಿ ಕೂಡ ಕಾಳಜಿ ಮಾಡಿದ್ದಾರೆ….

Read More

‘ಟಾಕ್ಸಿಕ್’, ‘ಧುರಂಧರ್ 2’ ಕಾರಣಕ್ಕೆ ರಿಲೀಸ್ ದಿನಾಂಕ ಬದಲಿಸಿದ ಸಿನಿಮಾಗಳೆಷ್ಟು? – Kannada News | Many movies changed their release date to Toxic and Dhurandhar 2

ಯಶ್ (Yash) ನಟನೆಯ ‘ಟಾಕ್ಸಿಕ್’ ಸಿನಿಮಾದ ಬಿಡುಗಡೆ ಮುಂದೂಡಲ್ಪಟ್ಟಿದೆ. ಮಾರ್ಚ್ 19ರಂದು ಬಿಡುಗಡೆ ಆಗಬೇಕಿದ್ದ ಈ ಸಿನಿಮಾ ಈಗ ಜೂನ್ 4ಕ್ಕೆ ಬಿಡುಗಡೆ ಆಗಲಿದೆ. ‘ಟಾಕ್ಸಿಕ್’ ಸಿನಿಮಾದ ಜೊತೆಗೆ ಮಾರ್ಚ್ 19ರಂದೇ ‘ಧುರಂಧರ್ 2’ ಸಿನಿಮಾ ಸಹ ಬಿಡುಗಡೆ ಆಗಬೇಕಿತ್ತು. ಆದರೆ ‘ಟಾಕ್ಸಿಕ್’ ಮುಂದೂಡಲ್ಪಟ್ಟಿರುವ ಕಾರಣ ಈಗ ‘ಧುರಂಧರ್ 2’ ಮಾತ್ರವೇ ಬಿಡುಗಡೆ ಆಗುತ್ತಿದೆ. ಅಸಲಿಗೆ ಮಾರ್ಚ್ 19ಕ್ಕೆ ಮತ್ತು ಅದರ ಆಸು-ಪಾಸು ಹಲವು ದಕ್ಷಿಣದ ಸಿನಿಮಾಗಳು ಬಿಡುಗಡೆ ಆಗಬೇಕಿತ್ತು. ಆದರೆ ‘ಟಾಕ್ಸಿಕ್’ ಮತ್ತು ‘ಧುರಂಧರ್ 2’…

Read More

ಯುದ್ಧಕ್ಕೆ ಸಿದ್ಧ ಎಂದ ಸುದೀಪ್ ಮಾತಿಗೆ ಅರ್ಜುನ್ ಜನ್ಯ ಮೊದಲ ರಿಯಾಕ್ಷನ್ – Kannada News | Arjun Janya reaction to Kichcha Sudeep controversial statement

ನಟ ಕಿಚ್ಚ ಸುದೀಪ್ (Kichcha Sudeep) ಅವರು ಹುಬ್ಬಳ್ಳಿಯಲ್ಲಿ ನಡೆದ ‘ಮಾರ್ಕ್’ ಸಿನಿಮಾದ ಪ್ರೀ-ರಿಲೀಸ್ ಕಾರ್ಯಕ್ರಮದಲ್ಲಿ ‘ಮಾತಿಗೆ ಬದ್ಧ, ಯುದ್ಧಕ್ಕೆ ಸಿದ್ಧ’ ಎಂದು ಹೇಳಿದ್ದರು. ಹಾಗಾದರೆ ಅವರು ಆ ಮಾತು ಹೇಳಿದ್ದು ಯಾರಿಗೆ ಎಂಬ ಪ್ರಶ್ನೆ ಜನರಲ್ಲಿ ಮೂಡಿತ್ತು. ‘ಮಾರ್ಕ್’ ತೆರೆಕಾಣುತ್ತಿರುವ ದಿನವೇ (ಡಿಸೆಂಬರ್ 25) ಅರ್ಜುನ್ ಜನ್ಯ ನಿರ್ದೇಶನದ ‘45’ ಸಿನಿಮಾ ರಿಲೀಸ್ ಆಗುತ್ತಿದೆ. ಈ ಬಗ್ಗೆ ಅರ್ಜುನ್ ಜನ್ಯ (Arjun Janya) ಅವರು ಟಿವಿ9 ಜೊತೆ ಮಾತನಾಡಿ ಪ್ರತಿಕ್ರಿಯೆ ನೀಡಿದ್ದಾರೆ. ‘ಪೈರಸಿಗೋಸ್ಕರ ತಾವು ಆ…

Read More

Daily Devotional: ಮನೆ ಗೋಡೆಗಳಲ್ಲಿ ಅರಳಿ ಗಿಡ ಚಿಗುರಿದರೆ ಅಪಾಯ ಖಂಡಿತ! – Kannada News

ಟಿವಿ9 ಕನ್ನಡ ಡಿಜಿಟಲ್​ನ ನಿತ್ಯಭಕ್ತಿ ಕಾರ್ಯಕ್ರಮದಲ್ಲಿ ಮನೆ ಗೋಡೆಗಳಲ್ಲಿ ಅರಳಿ ಗಿಡ ಚಿಗುರಿದರೆ ಅಪಾಯ ಎಂದು ಡಾ. ಬಸವರಾಜ ಗುರೂಜಿ ತಿಳಿಸಿದ್ದಾರೆ. ಮರಗಳು ನಮಗೆ ಉಸಿರಾಡಲು, ಆಯುಷ್ಯ ವೃದ್ಧಿಸಲು ಸಹಕರಿಸುತ್ತವೆ. ಆದರೆ, ಕೆಲವು ನಿರ್ದಿಷ್ಟ ವೃಕ್ಷಗಳು ಮನೆಯ ಗೋಡೆ, ಕಾಂಪೌಂಡ್ ಅಥವಾ ಚಾವಣಿಯ ಮೇಲೆ ಬೆಳೆದಾಗ ಅದು ಶುಭವೋ ಅಶುಭವೋ ಎಂಬ ಪ್ರಶ್ನೆ ಮೂಡುತ್ತದೆ. ಧರ್ಮಶಾಸ್ತ್ರ ಮತ್ತು ವಾಸ್ತು ಪ್ರಕಾರ, ಈ ರೀತಿಯಾಗಿ ಬೆಳೆಯುವ ಅಶ್ವತ್ಥ (ಅರಳಿ), ಬೇವಿನ ಮತ್ತು ನಿಂಬೆ ಮರಗಳು ಅಷ್ಟು ಶುಭಸೂಚಕವಲ್ಲ. ವಿಶೇಷವಾಗಿ…

Read More

Mars-Saturn Conjunction: ಮೀನ ರಾಶಿಯಲ್ಲಿ ಮಂಗಳ-ಶನಿ ಸಂಯೋಗ; ಈ ಯೋಗದಿಂದ ಹಲವೆಡೆ ಆತಂಕದ ಭೀತಿ

ಮೀನ ರಾಶಿಯಲ್ಲಿ ಮಂಗಳ ಮತ್ತು ಶನಿಯರ ಸಂಯೋಗವು ಜ್ಯೋತಿಷ್ಯ ಶಾಸ್ತ್ರದಲ್ಲಿ ದ್ವಂದ್ವ ಯುದ್ಧದಂತೆ ಭಾಸವಾಗುತ್ತದೆ. ಈ ಯೋಗವು ಏಪ್ರಿಲ್ 30ರಿಂದ ಮೇ 10 ರವೆಗೆ ಇರಲಿದ್ದು ಅನೇಕ ವಿಚಾರಗಳು ಜಾಗತಿಕ ಮಟ್ಟದಲ್ಲಿ ನಡೆಯಲಿವೆ. ಜನರಲ್ಲಿ ಆತಂಕ, ದೇಶ ವಿದೇಶಗಳಲ್ಲಿ ಉನ್ಮಾದದ ಸ್ಥಿತಿಯೂ ಎದುರಾಗಬಹುದು. ಮೀನದಲ್ಲಿರುವಶನಿಯು ಶಿಸ್ತು, ನಿಧಾನಗತಿ ಮತ್ತು ಕರ್ಮದ ಸಂಕೇತವಾದರೆ, ಮಂಗಳನು ವೇಗ, ಆವೇಶ ಮತ್ತು ಶಕ್ತಿಯ ಪ್ರತೀಕ. ಈ ಎರಡು ಶಕ್ತಿಗಳು ಮೀನ ಎಂಬ ಜಲತತ್ವದ ರಾಶಿಯಲ್ಲಿ ಸಂಧಿಸಿದಾಗ ಉಂಟಾಗಲಿದೆ. ​ಜಾಗತಿಕ ಮತ್ತು ಸಾಮಾಜಿಕ…

Read More

ಒಂದೇ ಧಾರಾವಾಹಿಯಲ್ಲಿ ಅಮೃತಾ ರಾಮಮೂರ್ತಿ ಹಾಗೂ ಅಮೂಲ್ಯ ಗೌಡ

ಕಿರುತೆರೆ ನಟಿ ಅಮೂಲ್ಯ ಗೌಡ ಅವರು ದೊಡ್ಡ ಅಭಿಮಾನಿ ಬಳಗ ಹೊಂದಿದ್ದಾರೆ. ಅದೇ ರೀತಿ ಅಮೃತಾ ರಾಮಮೂರ್ತಿ (Amrutha Ramamoorthi) ಕೂಡ ಸಾಕಷ್ಟು ಹೆಸರು ಮಾಡಿದ್ದಾರೆ. ಇಬ್ಬರಿಗೂ ದೊಡ್ಡ ಫ್ಯಾನ್ ಬೇಸ್​ ಇದೆ. ಈಗ ಇಬ್ಬರೂ ಒಂದೇ ಧಾರಾವಾಹಿ ಮೂಲಕ ಬರಲು ರೆಡಿ ಆಗಿದ್ದಾರೆ ಎಂಬುದು ವಿಶೇಷ. ಉದಯ ಟಿವಿಯಲ್ಲಿ ಪ್ರಸಾರ ಆಗಲಿರುವ ಸೀರಿಯಲ್​​ನ ಭಾಗವಾಗಿ ಅಮೂಲ್ಯ ಗೌಡ ಹಾಗೂ ಅಮೃತಾ ರಾಮಮೂರ್ತಿ ಕಾಣಿಸಿಕೊಳ್ಳಲಿದ್ದಾರೆ. ಇದು ಅಭಿಮಾನಿಗಳ ಪಾಲಿಗೆ ಖುಷಿಯ ವಿಷಯ. ಅಮೂಲ್ಯ ಗೌಡ ಕನ್ನಡ ಕಿರುತೆರೆ…

Read More

ಉದ್ಯಮಿಗೆ ಕೋಟ್ಯಂತರ ರೂಪಾಯಿ ವಂಚಿಸಿದ ಆ್ಯಕ್ಸಿಸ್ ಬ್ಯಾಂಕ್ ಮ್ಯಾನೇಜರ್ ಬಂಧನ! – Kannada News | Bengaluru Crime: Axis Bank Manager Arrested for Cheating Businessman of Rs 2.66 Crore in Bagalagunte

ನೆಲಮಂಗಲ, ಜೂನ್ 21: ಕೈತುಂಬಾ ಸಂಬಳ, ಸಮಾಜದಲ್ಲಿ ಗೌರವಾನ್ವಿತ ಹುದ್ದೆಯಲ್ಲಿದ್ದರೂ ದುರಾಸೆಗೆ ಬಿದ್ದು ಉದ್ಯಮಿಯೊಬ್ಬರಿಗೆ ಕೋಟ್ಯಂತರ ರೂಪಾಯಿ ವಂಚಿಸಿದ ಬ್ಯಾಂಕ್ ಮ್ಯಾನೇಜರ್ ಸೇರಿ ಮೂವರು ಆರೋಪಿಗಳು ಬಾಗಲಗುಂಟೆ (Bengaluru Rural) ಪೊಲೀಸರ ಬಲೆಗೆ ಬಿದ್ದಿದ್ದಾರೆ. ಬೆಂಗಳೂರಿನ ಬಾಗಲಗುಂಟೆ ಶಾಖೆಯ ಆ್ಯಕ್ಸಿಸ್ ಬ್ಯಾಂಕ್ ಮ್ಯಾನೇಜರ್ ವಿನೋದ್ ಕುಮಾರ್, ಈತನಿಗೆ ಸಾಥ್ ನೀಡಿದ್ದ ಅರುಣ್ ಕುಮಾರ್ ಮತ್ತು ಕಿರಣ್ ಬಂಧಿತ ಆರೋಪಿಗಳಾಗಿದ್ದಾರೆ. ಮುಖ್ಯಾಂಶಗಳು ಉದ್ಯಮಿಗೆ 2.66 ಕೋಟಿ ವಂಚಿಸಿದ ಆಕ್ಸಿಸ್ ಬ್ಯಾಂಕ್ ಮ್ಯಾನೇಜರ್ ವಿನೋದ್ ಬಂಧನ. 30 ಕೋಟಿ ಬಿಸಿನೆಸ್…

Read More