2 ದಿನಗಳಲ್ಲಿ 33 ವಿಕೆಟ್ ಪತನ: ರೋಚಕ ಘಟ್ಟದಲ್ಲಿ ‘ಲಾರ್ಡ್ಸ್’​ ಟೆಸ್ಟ್

ಲಾರ್ಡ್ಸ್​ನಲ್ಲಿ ನಡೆಯುತ್ತಿರುವ ಇಂಗ್ಲೆಂಡ್ ಹಾಗೂ ನ್ಯೂಝಿಲೆಂಡ್ ನಡುವಣ ಮೊದಲ ಟೆಸ್ಟ್ ಪಂದ್ಯವು ರೋಚಕಘಟ್ಟದತ್ತ ಸಾಗಿದೆ. ಅದು ಕೂಡ ಕೇವಲ 2 ದಿನಗಳಲ್ಲಿ 33 ವಿಕೆಟ್​ಗಳ ಪತನದೊಂದಿಗೆ. ಈ ಪಂದ್ಯದಲ್ಲಿ ಟಾಸ್ ಗೆದ್ದ ನ್ಯೂಝಿಲೆಂಡ್ ತಂಡವು ಬೌಲಿಂಗ್ ಆಯ್ದುಕೊಂಡಿದ್ದರು.

ಅದರಂತೆ ಮೊದಲ ಇನಿಂಗ್ಸ್ ಆಡಿದ ಇಂಗ್ಲೆಂಡ್ ತಂಡವು ಕೇವಲ 140 ರನ್​ಗಳಿಗೆ ಆಲೌಟ್ ಆಗಿದ್ದರು. ಇದಕ್ಕುತ್ತರವಾಗಿ ಮೊದಲ ಇನಿಂಗ್ಸ್ ಆಡಿದ ನ್ಯೂಝಿಲೆಂಡ್ ಕೇವಲ 113 ರನ್​ಗಳಿಗೆ ಸರ್ಪಪತನ ಕಂಡಿತು.

27 ರನ್​ಗಳ ಅಲ್ಪ ಮುನ್ನಡೆಯೊಂದಿಗೆ ದ್ವಿತೀಯ ಇನಿಂಗ್ಸ್ ಆರಂಭಿಸಿದ ಇಂಗ್ಲೆಂಡ್  226 ರನ್​​ಗಳಿಸಿ ಆಲೌಟ್ ಆಗಿದೆ. ಈ ಮೂಲಕ ದ್ವಿತೀಯ ಇನಿಂಗ್ಸ್​ನಲ್ಲಿ ನ್ಯೂಝಿಲೆಂಡ್ ತಂಡಕ್ಕೆ 254 ರನ್​ಗಳ ಗುರಿ ನೀಡಿದೆ.

ಈ ಗುರಿ ಬೆನ್ನತ್ತಿರುವ ನ್ಯೂಝಿಲೆಂಡ್ ತಂಡವು ದ್ವಿತೀಯ ದಿನದಾಟದ ಅಂತ್ಯಕ್ಕೆ 3 ವಿಕೆಟ್ ಕಳೆದುಕೊಂಡು ಕೇವಲ 36 ರನ್​ ಕಲೆಹಾಕಿದೆ.

ಇನ್ನೂ 3 ದಿನದಾಟಗಳು ಬಾಕಿಯಿದ್ದು, ನ್ಯೂಝಿಲೆಂಡ್ ತಂಡವು ಗೆಲ್ಲಲು 218 ರನ್​​ ಕಲೆಹಾಕಬೇಕಿದೆ. ಅತ್ತ ಇಂಗ್ಲೆಂಡ್ ತಂಡಕ್ಕೆ 7 ವಿಕೆಟ್​ಗಳ ಅವಶ್ಯಕತೆಯಿದೆ. ಹೀಗಾಗಿ ಮೂರನೇ ದಿನದಾಟದಲ್ಲಿ ಫಲಿತಾಂಶ ನಿರ್ಧಾರವಾಗುವ ಸಾಧ್ಯತೆ ಹೆಚ್ಚಿದೆ.

 

Source link

ಬರ್ತ್ ಡೇ ಪಾರ್ಟಿ ಆಚರಿಸುತ್ತಿದ್ದಾಗಲೇ ಕುಸಿದು ಬಿದ್ದ ಕಟ್ಟಡ: ಕೂದಲೆಳೆ ಅಂತರದಲ್ಲಿ ಪಾರಾದ 15 ಯುವಕರು – Kannada News

ಬೆಳಗಾವಿ, ಜೂನ್ 6: ಧಾರಾಕಾರ ಮಳೆಗೆ ಹಳೆಯ ಕಟ್ಟಡವೊಂದು ದಿಢೀರನೆ ಕುಸಿದು ಬಿದ್ದಿದ್ದು, 15 ಯುವಕರು ಕೂದಲೆಳೆ ಅಂತರದಲ್ಲಿ ಪ್ರಾಣಾಪಾಯದಿಂದ ಪಾರಾಗಿರುವ ರೋಮಾಂಚಕ ಘಟನೆ ಬೆಳಗಾವಿ ಜಿಲ್ಲೆಯ ಅಥಣಿ ಪಟ್ಟಣದಲ್ಲಿ ನಡೆದಿದೆ. ಅಂದಹಾಗೆ, ಘಟನೆ ವೇಳೆ ಯುವಕರು ಸ್ನೇಹಿತನ ಬರ್ತ್​​ ಡೇ ಪಾರ್ಟಿ ಆಚರಿಸುತ್ತಿದ್ದರು. ಅಥಣಿ ಪಟ್ಟಣದ ಹಳದಿ ಕಟ್ಟಡವೊಂದರಲ್ಲಿ ಯುವಕರ ತಂಡವೊಂದು ತಮ್ಮ ಸ್ನೇಹಿತನ ಹುಟ್ಟುಹಬ್ಬವನ್ನು ಸಂಭ್ರಮದಿಂದ ಆಚರಿಸುತ್ತಿತ್ತು. ಈ ವೇಳೆ ಕಟ್ಟಡದಿಂದ ವಿಚಿತ್ರವಾದ ಶಬ್ದ ಕೇಳಿಬಂದಿದೆ. ಅಪಾಯದ ಮುನ್ಸೂಚನೆ ಅರಿತ ಯುವಕರು ತಕ್ಷಣವೇ ಜಾಗರೂಕರಾಗಿ ಕಟ್ಟಡದಿಂದ ಹೊರಗೆ ಓಡಿ ಬಂದಿದ್ದಾರೆ. ಇವರು ಹೊರಬರುತ್ತಿದ್ದಂತೆ ಇಡೀ ಕಟ್ಟಡವು ಧರಾಶಾಯಿಯಾಗಿದೆ. ಯುವಕರ ಸಮಯಪ್ರಜ್ಞೆಯಿಂದಾಗಿ ಭಾರಿ ದುರಂತವೊಂದು ತಪ್ಪಿದೆ. ಅಥಣಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

‘ನಟಿಯನ್ನು ಕೀಳಾಗಿ ತೋರಿಸೋ ಉದ್ದೇಶವಿರಲಿಲ್ಲ’; ಜಾನ್ವಿ ಹೊಕ್ಕುಳ ಪ್ರದರ್ಶನದ ಬಗ್ಗೆ ನಿರ್ದೇಶಕರ ಸ್ಪಷ್ಟನೆ – Kannada News

‘ಪೆದ್ದಿ’ ಸಿನಿಮಾ ಮೂಲಕ ಜಾನ್ವಿ ಕಪೂರ್ ಅವರು ದಕ್ಷಿಣದಲ್ಲಿ ಸಾಕಷ್ಟು ಜನಪ್ರಿಯತೆ ಪಡೆದುಕೊಳ್ಳಬಹದು ಎಂಬುದು ಅನೇಕರ ಊಹೆ ಆಗಿತ್ತು. ಆದರೆ, ಊಹೆ ತಪ್ಪಾಗಿದೆ. ಜಾನ್ವಿ ಕಪೂರ್ ಅವರನ್ನು (Janhvi Kapoor) ಕೇವಲ ಗ್ಲಾಮರ್ ಗೊಂಬೆಯಾಗಿ ಬಳಕೆ ಮಾಡಿಕೊಳ್ಳಾಗಿದೆ. ‘ದೇವರ’ ಸಿನಿಮಾದಲ್ಲೂ ಇದೇ ರೀತಿಯಲ್ಲಿ ಜಾನ್ವಿ ಪಾತ್ರ ಇತ್ತು. ಈಗ ‘ಪೆದ್ದಿ’ ಚಿತ್ರದಲ್ಲೂ ಅದು ಮುಂದುವರಿದಿದೆ. ಈ ವಿಷಯ ಸಾಕಷ್ಟು ಚರ್ಚೆ ಆಗುತ್ತಿದ್ದು, ನಿರ್ದೇಶಕ ಬುಚ್ಚಿ ಬಾಬು ಸನ ಅವರನ್ನು ಟೀಕೆ ಮಾಡಲಾಗಿದೆ. ಈ ವಿಷಯವಾಗಿ ಅವರು ಸ್ಪಷ್ಟನೆ ನೀಡಿದ್ದಾರೆ.

‘ಉಪ್ಪೇನಾ’ ಸಿನಿಮಾದಲ್ಲಿ ಮರ್ಹಾದೆ ಹತ್ಯೆ ಬಗ್ಗೆ ಹೇಳಿದ್ದ ಬುಚ್ಚಿ ಬಾಬು ಸನಾ ಅವರು ಸಾಕಷ್ಟು ಎಚ್ಚರಿಕೆಯಿಂದ ನಡೆದುಕೊಂಡಿದ್ದರು. ಈ ಕಾರಣಕ್ಕೆ ಅವರಿಗೆ ಪ್ರಶಂಸೆ ಸಿಕ್ಕಿತ್ತು. ಆದರೆ, ‘ಪೆದ್ದಿ’ ಸಿನಿಮಾದಲ್ಲಿ ನಾಯಕಿ ಜಾನ್ವಿ ಕಪೂರ್ ಅವರನ್ನು ತೋರಿಸಿದ ರೀತಿ ಅನೇಕರಿಗೆ ಇಷ್ಟ ಆಗಿಲ್ಲ.

‘ಪೆದ್ದಿ’ ಸಿನಿಮಾದಲ್ಲಿ ಜಾನ್ವಿ ಮುಖ ತೋರಿಸಿದ್ದಕ್ಕಿಂತ, ಅಂಗಾಗ ಪ್ರದರ್ಶನ ಮಾಡಿದ್ದೇ ಹೆಚ್ಚು ಎಂಬ ಆರೋಪವನ್ನು ಕೆಲವರು ಮಾಡಿದ್ದಾರೆ. ಇದು ಬುಚ್ಚಿ ಬಾಬು ಸನಾ ಅವರಿಗೆ ಶಾಕಿಂಗ್ ಎನಿಸಿದೆ. ‘ಇಷ್ಟೊಂದು ನೆಗೆಟಿವ್ ವಿಮರ್ಶೆ ಬರುತ್ತದೆ ಎಂದು ನಾನು ಅಂದುಕೊಂಡಿರಲಿಲ್ಲ’ ಎಂದು ಅವರು ಹೇಳಿದ್ದಾರೆ. ‘ರಾಮ್ ಚರಣ್ ಮತ್ತು ಜಾನ್ವಿ ಕಪೂರ್ ನಡುವಿನ ಒಂದು ಸುಂದರ ಪ್ರೇಮಕಥೆಯನ್ನು ತೋರಿಸುವುದು ನಮ್ಮ ಮುಖ್ಯ ಉದ್ದೇಶವಾಗಿತ್ತು’ ಎಂದು ಅವರು ಹೇಳಿದ್ದಾರೆ.

ಇದನ್ನೂ ಓದಿ: ‘ಪೆದ್ದಿ’ ಸಿನಿಮಾನಲ್ಲಿ ಜಾನ್ಹವಿ ಕಪೂರ್ ಪಾತ್ರದ ಬಗ್ಗೆ ಟೀಕೆ ಏಕೆ?

‘ಈ ಪಾತ್ರದ ಚಿತ್ರಣವು ಯಾವುದೇ ವಿವಾದ ಸೃಷ್ಟಿಸುವ ಉದ್ದೇಶ ಹೊಂದಿರಲಿಲ್ಲ. ‘ಪೆದ್ದಿ’ ಚಿತ್ರವು ಒಂದು ಹಳ್ಳಿ ಸೊಗಡಿನ, ಹೈ-ಎನರ್ಜಿ ಡ್ರಾಮಾ ಕಥಾಹಂದರವನ್ನು ಹೊಂದಿದ್ದು, ಅದಕ್ಕೆ ಪೂರಕವಾಗಿಯೇ ಈ ಪಾತ್ರವನ್ನು ವಿನ್ಯಾಸಗೊಳಿಸಲಾಗಿತ್ತು. ನಟಿಯ ಪಾತ್ರವನ್ನು ಎಲ್ಲೂ ಕೀಳಾಗಿ ಬಿಂಬಿಸುವ ಉದ್ದೇಶ ತಮಗಿರಲಿಲ್ಲ’ ಎಂದು ನಿರ್ದೇಶಕರು ನೇರವಾಗಿ ತಿಳಿಸಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Source link

ಟೀಮ್ ಇಂಡಿಯಾದ ಹೊಸ ಆಶಾಕಿರಣ: ಯಾರು ಈ ಮಾನವ್ ಸುತಾರ್? – Kannada News

ಅಫ್ಘಾನಿಸ್ತಾನ್ ವಿರುದ್ಧದ ಟೆಸ್ಟ್ ಪಂದ್ಯದ ಮೂಲಕ ಟೀಮ್ ಇಂಡಿಯಾಗೆ ಮತ್ತೊಬ್ಬ ಆಟಗಾರನ ಎಂಟ್ರಿಯಾಗಿದೆ. ಈ ಬಾರಿ ಟೆಸ್ಟ್ ಕ್ರಿಕೆಟ್​ಗೆ ಪಾದಾರ್ಪಣೆ ಮಾಡಿದ ಆಟಗಾರನ ಹೆಸರು ಮಾನವ್ ಸುತಾರ್ (Manav Suthar). ವಯಸ್ಸು ಕೇವಲ 23. ಇತ್ತ ಟೀಮ್ ಇಂಡಿಯಾದಲ್ಲಿ ಯುವ ಆಟಗಾರನ ಹೆಸರು ಕಾಣಿಸಿಕೊಳ್ಳುತ್ತಿದ್ದಂತೆ ಯಾರು ಈ ಮಾನವ್ ಸುತಾರ್ ಎಂಬ ಹುಡುಕಾಟ ಕೂಡ ಶುರುವಾಗಿದೆ. ಅಷ್ಟಕ್ಕೂ ಯಾರು ಈ ಸುತಾರ್?

ಮಾನವ್ ಸುತಾರ್, ರಾಜಸ್ಥಾನದ ಶ್ರೀ ಗಂಗಾನಗರದ ನಿವಾಸಿ. ಬಾಲ್ಯದಿಂದಲೇ ಕ್ರಿಕೆಟ್‌ನಲ್ಲಿ ತೀವ್ರ ಆಸಕ್ತಿ ಹೊಂದಿದ್ದ ಸುತಾರ್, ಸ್ಥಳೀಯ ಕ್ರಿಕೆಟ್​ನಲ್ಲಿ ಭಾರೀ ಹೆಸರು ಮಾಡಿದ್ದರು. ಅದರಲ್ಲೂ ಬಾಲ್ಯದಿಂದಲೇ ‘ಸ್ಪಾಟ್ ಬೌಲಿಂಗ್’ (ಒಂದೇ ಜಾಗಕ್ಕೆ ಚೆಂಡು ಹಾಕುವುದು) ಮೂಲಕ ಎಲ್ಲರ ಗಮನ ಸೆಳೆದಿದ್ದರು.

ಈ ಗಮನ ಸೆಳೆಯುವಿಕೆಯೊಂದಿಗೆ 2022 ರಲ್ಲಿ ರಾಜಸ್ಥಾನ್ ರಣಜಿ ತಂಡದಲ್ಲಿ ಸ್ಥಾನ ಪಡೆದ ಮಾನವ್ ಸುತಾರ್ ಆ ಬಳಿಕ ಹಿಂತಿರುಗಿ ನೋಡಿಲ್ಲ. ಇದೀಗ ಭಾರತದ ಭರವಸೆಯ ಯುವ ಸ್ಪಿನ್ ಆಲ್​ರೌಂಡರ್ ಆಗಿ ಟೀಮ್ ಇಂಡಿಯಾಗೆ ಎಂಟ್ರಿ ಕೊಟ್ಟಿದ್ದಾರೆ. ಹೀಗೆ ಎಂಟ್ರಿ ಕೊಡುವ ಮುನ್ನ ಸುತಾರ್ ಸಾಧಿಸಿದ ಸಾಧನೆಗಳ ಸಂಕ್ಷಿಪ್ತ ಮಾಹಿತಿ ಇಲ್ಲಿದೆ…

  •  ರಣಜಿ ಟ್ರೋಫಿ ದಾಖಲೆ: 2022-23ರ ರಣಜಿ ಟ್ರೋಫಿ ಸೀಸನ್‌ನಲ್ಲಿ ಕೇವಲ 6 ಪಂದ್ಯಗಳಿಂದ 39 ವಿಕೆಟ್ ಕಬಳಿಸಿ ರಾಜಸ್ಥಾನದ ಪರ ಅತಿ ಹೆಚ್ಚು ವಿಕೆಟ್ ಪಡೆದ ಬೌಲರ್ ಎನಿಸಿಕೊಂಡಿದ್ದರು.
  • ಇಂಡಿಯಾ ‘ಎ’ ಪರ ಸಾಧನೆ: 2023ರ ಎಮರ್ಜಿಂಗ್ ಏಷ್ಯಾ ಕಪ್‌ನಲ್ಲಿ ಭಾರತ ‘ಎ’ ತಂಡವನ್ನು ಪ್ರತಿನಿಧಿಸಿದ್ದ ಸುತಾರ್  ಎರಡನೇ ಗರಿಷ್ಠ ವಿಕೆಟ್ ಟೇಕರ್ (10 ವಿಕೆಟ್) ಆಗಿದ್ದರು. ಇತ್ತೀಚೆಗೆ ಆಸ್ಟ್ರೇಲಿಯಾ ‘ಎ’ ವಿರುದ್ಧದ ಪಂದ್ಯದಲ್ಲಿ 107 ರನ್‌ಗಳಿಗೆ 5 ವಿಕೆಟ್ ಪಡೆದು ಮಿಂಚಿದ್ದರು.
  • ಪ್ರಥಮ ದರ್ಜೆ ಕ್ರಿಕೆಟ್: ಫಸ್ಟ್ ಕ್ಲಾಸ್​ ಕ್ರಿಕೆಟ್​ನಲ್ಲಿ 29 ಪಂದ್ಯಗಳನ್ನಾಡಿರುವ ಮಾನಸ್ ಸುತಾರ್ ಒಟ್ಟು 129 ವಿಕೆಟ್‌ಗಳನ್ನು ಕಬಳಿಸಿದ್ದಾರೆ. ಹಾಗೆಯೇ | 945 ರನ್‌ಗಳನ್ನು ಕಲೆಹಾಕಿದ್ದಾರೆ.
  •  ಲಿಸ್ಟ್ ‘ಎ’: 25 ಲಿಸ್ಟ್​ ಎ ಪಂದ್ಯಗಳನ್ನಾಡಿರುವ ಸುತಾರ್ ಈವರೆಗೆ ಪಡೆದಿರುವುದು  34 ವಿಕೆಟ್‌ಗಳು. ಹಾಗೆಯೇ ಬ್ಯಾಟ್ ಮೂಲಕ 350 ರನ್‌ಗಳ ಕೊಡುಗೆ ನೀಡಿದ್ದಾರೆ.

ಸುತಾರ್ ಸ್ಪೆಷಲ್ ಏನು?

ಮೊದಲೇ ಹೇಳಿದಂತೆ ಮಾನವ್ ಸುತಾರ್ ಸ್ಪಿನ್ ಆಲ್​ರೌಂಡರ್. ಈಗಾಲೇ ಟೀಮ್ ಇಂಡಿಯಾದ ಮಾಜಿ ಸ್ಪಿನ್ನರ್  ರವಿಚಂದ್ರನ್ ಅಶ್ವಿನ್ ಅವರಂತಹ ದಿಗ್ಗಜರೇ ಸುತಾರ್ ಬೌಲಿಂಗ್ ಶೈಲಿಯನ್ನು ಶ್ಲಾಘಿಸಿದ್ದಾರೆ.

ಚೆಂಡಿಗೆ ಅವರು ನೀಡುವ ‘ರೆವಲ್ಯೂಷನ್’ (ತಿರುವು) ಮತ್ತು ಡ್ರಿಫ್ಟ್ ಎದುರಾಳಿ ಬ್ಯಾಟರ್‌ಗಳನ್ನು ಸುಲಭವಾಗಿ ವಂಚಿಸುತ್ತದೆ. ಹೀಗಾಗಿ ಅವರು ಟೀಮ್ ಇಂಡಿಯಾದ ಮುಂದಿನ ಸ್ಪಿನ್ ಅಸ್ತ್ರವಾಗಲಿದ್ದಾರೆ ಎಂದು ಅಶ್ವಿನ್ ಭವಿಷ್ಯ ನುಡಿದಿದ್ದಾರೆ.

ಇಂದಿನ ಯುವ ಬೌಲರ್‌ಗಳು ಟಿ20 ಶೈಲಿಗೆ ಹೊಂದಿಕೊಂಡು ವೇಗವಾಗಿ ಬೌಲಿಂಗ್ ಮಾಡಲು ಇಷ್ಟಪಟ್ಟರೆ, ಮಾನವ್ ಮಾತ್ರ ಗಂಟೆಗಟ್ಟಲೆ ಒಂದೇ ಜಾಗಕ್ಕೆ ಚೆಂಡು ಹಾಕುವ (ಸ್ಪಾಟ್ ಬೌಲಿಂಗ್) ಹಳೆಯ ಪದ್ಧತಿಯನ್ನು ರೂಢಿಸಿಕೊಂಡಿದ್ದಾರೆ.

ಅಲ್ಲದೆ ಪ್ರಥಮ ದರ್ಜೆ ಕ್ರಿಕೆಟ್‌ನಲ್ಲಿ ಅವರ ಎಕಾನಮಿ ರೇಟ್ 3 ಕ್ಕಿಂತ ಕಡಿಮೆ ಇದೆ ಎಂದರೆ ಅವರ ನಿಯಂತ್ರಣ ಎಷ್ಟು ಅದ್ಭುತವಾಗಿದೆ ಎಂದು ತಿಳಿಯುತ್ತದೆ.

ಸ್ಪಿನ್ ಆಲ್​ರೌಂಡರ್ ಆಗಿದ್ದರೂ ಸುತಾರ್, ಕೇವಲ ಕೊನೆಯಲ್ಲಿ ಬಂದು ಬ್ಯಾಟ್ ಬೀಸುವ ಆಟಗಾರನಲ್ಲ. ತಂಡ ಸಂಕಷ್ಟದಲ್ಲಿದ್ದಾಗ ಮಾಗಿದ ಬ್ಯಾಟರ್‌ನಂತೆ ಆಡಬಲ್ಲರು. ಪ್ರಥಮ ದರ್ಜೆ ಕ್ರಿಕೆಟ್‌ನಲ್ಲಿ ಈಗಾಗಲೇ 120 ರನ್‌ಗಳ ಭರ್ಜರಿ ಶತಕ ಮತ್ತು 6 ಅರ್ಧಶತಕಗಳನ್ನು ಬಾರಿಸಿ ತಮ್ಮ ಬ್ಯಾಟಿಂಗ್ ಕ್ಲಾಸ್ ಪ್ರದರ್ಶಿಸಿದ್ದಾರೆ.

ಒಂದೇ ಇನಿಂಗ್ಸ್​ನಲ್ಲಿ 8 ವಿಕೆಟ್​:

ರಣಜಿ ಟ್ರೋಫಿಯಲ್ಲಿ ಹಿಮಾಚಲ ಪ್ರದೇಶದ ವಿರುದ್ಧ ಕೇವಲ 33 ರನ್ ನೀಡಿ 8 ವಿಕೆಟ್ ಕಬಳಿಸಿ ಮಿಂಚಿದ್ದರು. ಈ ಅದ್ಭುತ ಪ್ರದರ್ಶನದೊಂದಿಗೆ ಮಾನವ್ ಸುತಾರ್ ಎಲ್ಲರ ಗಮನ ಸೆಳೆದಿದ್ದರು.

ಮಾನವ್ ಅವರ ಈ ಪ್ರತಿಭೆಯನ್ನು ಗುರುತಿಸಿದ ಅಶ್ವಿನ್, ಅವರನ್ನು ಚೆನ್ನೈನಲ್ಲಿರುವ ತಮ್ಮ ಕ್ರಿಕೆಟ್ ಅಕಾಡೆಮಿಗೆ ಕರೆಸಿಕೊಂಡು ವಿಶೇಷ ತರಬೇತಿ ಹಾಗೂ ಮಾರ್ಗದರ್ಶನ ನೀಡಿದ್ದಾರೆ.

ಇದನ್ನೂ ಓದಿ: ಕೆಎಲ್​ ರಾಹುಲ್ ‘ಅನ್‌ಸೋಲ್ಡ್’ ಆಗಲು ಇದುವೇ ಅಸಲಿ ಕಾರಣ!

ಸದ್ಯ ಭಾರತ ತಂಡದಲ್ಲಿ ರವೀಂದ್ರ ಜಡೇಜಾ ಅವರ ನಂತರ ಆ ಜಾಗವನ್ನು ತುಂಬಬಲ್ಲ ಅತ್ಯಂತ ಯೋಗ್ಯ ಎಡಗೈ ಸ್ಪಿನ್ ಆಲ್‌ರೌಂಡರ್ ಆಗಿ ಮಾನವ್ ಸುತಾರ್ ಕಾಣಿಸಿಕೊಳ್ಳುತ್ತಿದ್ದಾರೆ. ಹೀಗಾಗಿ ಮುಂಬರುವ ದಿನಗಳಲ್ಲಿ ಮಾನವ್ ಸುತಾರ್ ಟೀಮ್ ಇಂಡಿಯಾದ ಪ್ರಮುಖ ಆಟಗಾರನಾಗಿ ಗುರುತಿಸಿಕೊಳ್ಳುವುದರಲ್ಲಿ ಯಾವುದೇ ಸಂಶಯವಿಲ್ಲ.

Published On – 9:44 am, Sat, 6 June 26

Source link

ಪಾಕ್ ಉಗ್ರನ ಜತೆ ಸಂಪರ್ಕ ಹೊಂದಿದ್ದ ಇಬ್ಬರ ಬಂಧನ: ಕರ್ನಾಟಕದಲ್ಲಿ ಬೇರೂರುತ್ತಿವೆ ಉಗ್ರರ ಸ್ಲೀಪರ್ ಸೆಲ್! – Kannada News

ಅಲ್ಲಾಬಕ್ಷು ಮತ್ತು ಜಮೀರ್ ಖಾನ್Image Credit source: tv9

ಬೆಂಗಳೂರು, ಜೂನ್ 6: ರಾಜ್ಯದಲ್ಲಿ ವಿದೇಶಿ ಉಗ್ರರ ನೆಟ್‌ವರ್ಕ್ ಮತ್ತು ಸ್ಲೀಪರ್ ಸೆಲ್‌ಗಳು ಸಕ್ರಿಯವಾಗಿರುವ ಆತಂಕಕಾರಿ ವಿಚಾರ ಬಯಲಾಗಿದೆ. ಪಾಕಿಸ್ತಾನ (Pakistan) ಮೂಲದ ಶಂಕಿತ ಉಗ್ರನೊಂದಿಗೆ ನಿರಂತರ ಸಂಪರ್ಕದಲ್ಲಿದ್ದುಕೊಂಡು, ದೇಶದ ಭದ್ರತೆಗೆ ಧಕ್ಕೆ ತರಲು ಹಾಗೂ ಭಯೋತ್ಪಾದಕ ಕೃತ್ಯ ಎಸಗಲು ಸಂಚು ರೂಪಿಸುತ್ತಿದ್ದ ಇಬ್ಬರು ಯುವಕರನ್ನು ತುಮಕೂರು (Tumakur) ನಗರ ಪೊಲೀಸರು ಭರ್ಜರಿ ಕಾರ್ಯಾಚರಣೆ ನಡೆಸಿ ಬಂಧಿಸಿದ್ದಾರೆ. ಬಂಧಿತರನ್ನು ತುಮಕೂರು ನಿವಾಸಿ ಅಲ್ಲಾಬಕ್ಷು (24) ಮತ್ತು ದಾವಣಗೆರೆಯ ಬಿಡಿ ಲೇಔಟ್ ನಿವಾಸಿ ಜಮೀರ್ ಖಾನ್ (22) ಎಂದು ಗುರುತಿಸಲಾಗಿದೆ. ಕೇಂದ್ರ ಗುಪ್ತಚರ ಇಲಾಖೆ ನೀಡಿದ ಮಹತ್ವದ ಸುಳಿವಿನ ಆಧಾರದ ಮೇಲೆ ಈ ಜಂಟಿ ಕಾರ್ಯಾಚರಣೆ ನಡೆದಿದೆ.

ಮುಖ್ಯಾಂಶಗಳು

  • ಇನ್‌ಸ್ಟಾಗ್ರಾಮ್ ಮೂಲಕ ಪಾಕ್ ಉಗ್ರನ ಸಂಪರ್ಕ.
  • ಎಕ್ಸ್ ಮತ್ತು ವಾಟ್ಸ್ ಆ್ಯಪ್ ಗ್ರೂಪ್‌ ಸೃಷ್ಟಿ.
  • ಪುಣೆ ಮೌಲ್ವಿ ಹತ್ಯೆಗೆ ಪ್ರತಿಕಾರಕ್ಕೆ ಸಂಚು.

ಐಸಿಸ್ ಫಂಡಿಂಗ್ ಲಿಂಕ್ ಮತ್ತು ಬಾಂಬ್ ಸ್ಫೋಟದ ಸ್ಕೆಚ್

ದಾವಣಗೆರೆ ಎಸ್ಪಿ ಡಾ. ಎಚ್.ಟಿ. ಶೇಖರ್ ಅವರ ಮಾರ್ಗದರ್ಶನದಲ್ಲಿ ಸ್ಥಳೀಯ ಪೊಲೀಸರ ಸಹಕಾರದೊಂದಿಗೆ ತುಮಕೂರು ಪೊಲೀಸರು ರೈಲ್ವೆ ನಿಲ್ದಾಣದ ಸಿಸಿಟಿವಿ ಕ್ಯಾಮೆರಾಗಳ ದೃಶ್ಯಾವಳಿಗಳನ್ನು ಪರಿಶೀಲಿಸಿ ಆರೋಪಿಗಳನ್ನು ವಶಕ್ಕೆ ಪಡೆದಿದ್ದಾರೆ. ಆರೋಪಿಗಳು ಬೇರೆಡೆಗೆ ಪರಾರಿಯಾಗಲು ಯತ್ನಿಸುತ್ತಿದ್ದಾಗ ಸಿಕ್ಕಿಬಿದ್ದಿದ್ದಾರೆ. ಮೂಲಗಳ ಪ್ರಕಾರ, ಇವರು ಪಾಕಿಸ್ತಾನದ ಐಸಿಸ್ (ISIS) ಉಗ್ರ ಸಂಘಟನೆಗೆ ಫಂಡಿಂಗ್ ಮಾಡುತ್ತಿದ್ದ ಜಾಲದೊಂದಿಗೆ ನೇರ ಸಂಪರ್ಕ ಹೊಂದಿದ್ದರು. ಅಷ್ಟೇ ಅಲ್ಲದೆ, ಭಾರತದ ವಿವಿಧೆಡೆ ಭಾರಿ ಪ್ರಮಾಣದ ಬಾಂಬ್ ಸ್ಫೋಟಗಳನ್ನು ನಡೆಸಲು ವ್ಯವಸ್ಥಿತ ಸಂಚು ಹೂಡುತ್ತಿದ್ದರು ಎಂಬ ಆಘಾತಕಾರಿ ಮಾಹಿತಿ ತನಿಖೆಯಲ್ಲಿ ಬೆಳಕಿಗೆ ಬಂದಿದೆ.

ಪಾಕ್ ಉಗ್ರ ರಾಣಾ ಹೆಣೆದಿದ್ದ ಬಲೆ

ಕಳೆದ ಒಂದು ತಿಂಗಳ ಹಿಂದೆ ಪಾಕಿಸ್ತಾನ ಮೂಲದ ‘ರಾಣಾ’ ಎಂಬಾತ ಇನ್‌ಸ್ಟಾಗ್ರಾಮ್ (Instagram) ಮೂಲಕ ಈ ಯುವಕರನ್ನು ಸಂಪರ್ಕಿಸಿದ್ದ. ನಂತರ ಇವರೆಲ್ಲರೂ ಎಕ್ಸ್ (ಟ್ವಿಟರ್) ಖಾತೆಯಲ್ಲಿ ದೇಶವಿರೋಧಿ ಹಾಗೂ ಪ್ರಚೋದನಾತ್ಮಕ ಚರ್ಚೆಗಳನ್ನು ನಡೆಸುತ್ತಿದ್ದರು. ಅಷ್ಟಕ್ಕೆ ನಿಲ್ಲದೆ, ವಾಟ್ಸ್ ಆ್ಯಪ್‌ನಲ್ಲಿ ಗ್ರೂಪ್ ಒಂದನ್ನು ರಚಿಸಿಕೊಂಡು ಅದರಲ್ಲಿ ಉತ್ತರ ಭಾರತದ ಹಲವು ಮುಸ್ಲಿಂ ಯುವಕರನ್ನು ಸೇರಿಸಿಕೊಳ್ಳಲಾಗಿತ್ತು. ಆರಂಭದಲ್ಲಿ ಧರ್ಮದ ಆಚರಣೆಗಳು ಮತ್ತು ಧರ್ಮಗುರುಗಳ ಪ್ರವಚನಗಳನ್ನು ಹಂಚಿಕೊಳ್ಳುತ್ತಿದ್ದ ರಾಣಾ, ತದನಂತರ ‘ನಮ್ಮ ಸಮುದಾಯಕ್ಕೆ ಯಾವುದೇ ತೊಂದರೆಯಾದರೂ ನಾವೆಲ್ಲರೂ ಒಟ್ಟಾಗಿ ಎದುರಿಸಬೇಕು, ತಡೆಯಬೇಕು’ ಎಂದು ಇವರ ತಲೆಗೆ ವಿಷ ತುಂಬಿ ಬ್ರೈನ್‌ವಾಶ್ ಮಾಡಿದ್ದ.

ಪ್ರತಿಕಾರಕ್ಕೆ ಚರ್ಚೆ: ಸ್ಲೀಪರ್ ಸೆಲ್ ಆತಂಕ

ಇತ್ತೀಚೆಗೆ ಮಹಾರಾಷ್ಟ್ರದ ಪುಣೆಯಲ್ಲಿ ನಡೆದಿದ್ದ ಮೌಲ್ವಿ ಹತ್ಯೆಗೆ ದೇಶದೊಳಗೆ ಭೀಕರ ಪ್ರತಿಕಾರ ತೀರಿಸಿಕೊಳ್ಳುವ ಕುರಿತು ಈ ವಾಟ್ಸ್ ಆ್ಯಪ್ ಗ್ರೂಪ್‌ನಲ್ಲಿ ಉಗ್ರ ರಾಣಾ ಚರ್ಚೆ ಆರಂಭಿಸಿದ್ದ ಎನ್ನಲಾಗಿದೆ. ದೇಶದ ಆಂತರಿಕ ಭದ್ರತೆಗೆ ತೀವ್ರ ಧಕ್ಕೆ ಉಂಟಾಗುವ ಮತ್ತು ಭಯೋತ್ಪಾದಕ ದಾಳಿ ನಡೆಯುವ ಗಂಭೀರ ಶಂಕೆ ವ್ಯಕ್ತವಾದ ಹಿನ್ನೆಲೆಯಲ್ಲಿ ಕೇಂದ್ರ ಗುಪ್ತಚರ ಇಲಾಖೆಯು ರಾಜ್ಯ ಪೊಲೀಸರನ್ನು ಅಲರ್ಟ್ ಮಾಡಿತ್ತು.

ಇದನ್ನೂ ಓದಿ: ಪಾಕ್ ಉಗ್ರನ ಜತೆ ಯುವಕರಿಬ್ಬರ ನಂಟು ಬೆಸಿದಿದ್ಹೇಗೆ? ಇಲ್ಲಿದೆ ಕರ್ನಾಟಕ-ಪಾಕ್ ಜಾಲದ ರಹಸ್ಯ

ಮೊದಲಿಗೆ ತುಮಕೂರಿನಲ್ಲಿ ಅಲ್ಲಾಬಕ್ಷುನನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದಾಗ ಆತ ದಾವಣಗೆರೆಯ ಜಮೀರ್ ಖಾನ್ ಹೆಸರನ್ನು ಬಾಯಿಬಿಟ್ಟಿದ್ದ. ಸದ್ಯ ಇಬ್ಬರನ್ನೂ ಬಂಧಿಸಿರುವ ತುಮಕೂರು ನಗರ ಪೊಲೀಸರು ತೀವ್ರ ವಿಚಾರಣೆ ನಡೆಸುತ್ತಿದ್ದು, ರಾಜ್ಯದಲ್ಲಿ ಇವರ ಹಿಂದೆ ಇರುವ ದೊಡ್ಡ ಸ್ಲೀಪರ್ ಸೆಲ್ ನೆಟ್‌ವರ್ಕ್ ಭೇದಿಸಲು ಮುಂದಾಗಿದ್ದಾರೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

Hindu Astrology: ಮೊದಲ ಮಗು ಹೆಣ್ಣು ಜನಿಸಿದರೆ ತಂದೆಯ ಅದೃಷ್ಟವೇ ಬದಲಾಗುತ್ತಾ? ಶಾಸ್ತ್ರಗಳು ಹೇಳುವುದೇನು? – Kannada News

ಹಿಂದೂ ಧರ್ಮದಲ್ಲಿ ಹೆಣ್ಣು ಮಕ್ಕಳನ್ನು ಸಾಕ್ಷಾತ್ ಮಹಾಲಕ್ಷ್ಮಿಯ ಸ್ವರೂಪ ಎಂದು ಪೂಜಿಸಲಾಗುತ್ತದೆ. ಪ್ರತಿಯೊಂದು ಮನೆಯಲ್ಲೂ ಹೆಣ್ಣು ಮಗುವಿನ ಜನನವು ಸೌಭಾಗ್ಯದ ಸಂಕೇತ ಎಂದೇ ನಂಬಲಾಗಿದೆ. ಅದರಲ್ಲೂ ವಿಶೇಷವಾಗಿ, ದಂಪತಿಗಳಿಗೆ ಮೊದಲ ಮಗುವಾಗಿ ಹೆಣ್ಣು ಮಗು ಜನಿಸಿದರೆ ಅದು ಅತ್ಯಂತ ಶುಭ ಹಾಗೂ ಆ ಮನೆಯ ಅದೃಷ್ಟವೇ ಬದಲಾಗುತ್ತದೆ ಎಂದು ಜ್ಯೋತಿಷ್ಯ ತಜ್ಞರು ಹೇಳುತ್ತಾರೆ. ಮನೆಯಲ್ಲಿ ಹೆಣ್ಣು ಮಗುವಿನ ಜನನವಾದರೆ ತಂದೆಯ ಜಾತಕ ಬದಲಾಗುತ್ತದೆಯೇ? ಆ ಮನೆಯಲ್ಲಿ ಯಾವ ಗ್ರಹಗಳ ಬಲ ಹೆಚ್ಚಿರುತ್ತದೆ? ಈ ಕುರಿತು ಜ್ಯೋತಿಷ್ಯ ಶಾಸ್ತ್ರ ಮತ್ತು ಪುರಾಣಗಳು ಏನು ಹೇಳುತ್ತವೆ ಎಂಬ ಆಸಕ್ತಿದಾಯಕ ಮಾಹಿತಿ ಇಲ್ಲಿದೆ.

ತಂದೆಯ ಭಾಗ್ಯ ಬದಲಾಯಿಸುವ ‘ಮಹಾಲಕ್ಷ್ಮಿ’:

ಜ್ಯೋತಿಷ್ಯ ಶಾಸ್ತ್ರದ ಪ್ರಕಾರ, ಮೊದಲ ಹೆಣ್ಣು ಮಗು ಜನಿಸಿದ ತಕ್ಷಣ ಆಕೆಯ ತಂದೆಯ ಜಾತಕದಲ್ಲಿ ಧನಾತ್ಮಕ ಬದಲಾವಣೆಗಳು ಆರಂಭವಾಗುತ್ತವೆ. ಮಗು ಬೆಳೆಯುತ್ತಿದ್ದಂತೆ ತಂದೆಯ ವೃತ್ತಿಜೀವನದಲ್ಲಿ (Career) ದೊಡ್ಡ ಯಶಸ್ಸು ಸಿಗುತ್ತದೆ. ಉದ್ಯೋಗದಲ್ಲಿ ಪ್ರಗತಿ, ವ್ಯಾಪಾರದಲ್ಲಿ ಲಾಭ ಹಾಗೂ ಅನಿರೀಕ್ಷಿತ ಧನಾಗಮನವಾಗುತ್ತದೆ. ಹೆಣ್ಣು ಮಗುವಿನ ಪಾದಗುಣ ತಂದೆಯ ಆರ್ಥಿಕ ಸ್ಥಿತಿಯನ್ನು ಉತ್ತಮಗೊಳಿಸುತ್ತದೆ ಎಂಬುದು ಶತಶತಮಾನಗಳ ನಂಬಿಕೆ.

ಚಂದ್ರ ಮತ್ತು ಶುಕ್ರ ಗ್ರಹಗಳ ಅಪಾರ ಬಲ:

ಯಾವ ಮನೆಯಲ್ಲಿ ಹೆಣ್ಣು ಮಗು ಜನಿಸುತ್ತದೆಯೋ, ಆ ಮನೆಯಲ್ಲಿ ಚಂದ್ರ ಮತ್ತು ಶುಕ್ರ ಗ್ರಹಗಳ ಬಲ ಹೆಚ್ಚಿರುತ್ತದೆ ಎಂದು ತಜ್ಞರು ಹೇಳುತ್ತಾರೆ. ಶುಕ್ರ ಗ್ರಹ ಸಂಪತ್ತು, ಐಶ್ವರ್ಯ ಮತ್ತು ಭೌತಿಕ ಸುಖವನ್ನು ನೀಡುವ ಗ್ರಹ ಮತ್ತು ಚಂದ್ರ ಗ್ರಹ ಮನಸ್ಸಿಗೆ ಶಾಂತಿ ಮತ್ತು ಸಕಾರಾತ್ಮಕತೆಯನ್ನು ತರುವ ಗ್ರಹ.

ಈ ಎರಡು ಗ್ರಹಗಳ ಆಶೀರ್ವಾದದಿಂದಾಗಿ ಹೆಣ್ಣು ಮಗುವಿರುವ ಮನೆಯಲ್ಲಿ ಧನಧಾನ್ಯಗಳಿಗೆ ಯಾವುದೇ ಕೊರತೆ ಇರುವುದಿಲ್ಲ. ಅಲ್ಲದೆ, ಪೋಷಕರ ಜೀವನದಲ್ಲಿ ಮಾನಸಿಕ ಶಾಂತಿ ಮತ್ತು ನೆಮ್ಮದಿ ನೆಲೆಸುತ್ತದೆ. ಹೆಣ್ಣು ಮಗು ಸದಾ ನಗುತ್ತಾ, ಸಂತೋಷದಿಂದಿರುವ ಮನೆಯಲ್ಲಿ ಲಕ್ಷ್ಮಿ ದೇವಿಯು ಖಾಯಂ ಆಗಿ ವಾಸಿಸುತ್ತಾಳೆ.

ಇದನ್ನೂ ಓದಿ: ಅನುಷ್ಕಾ ಶರ್ಮಾ ಕತ್ತಿನಲ್ಲಿರುವ ತುಳಸಿ ಮಾಲೆ ಗಮನಿಸಿದ್ದೀರಾ? ಧರಿಸುವುದರ ಹಿಂದಿನ ಅಸಲಿ ಕಾರಣ ಇಲ್ಲಿದೆ

‘ಕನ್ಯಾದಾನ’ದಿಂದ ಏಳು ತಲೆಮಾರುಗಳಿಗೆ ಮೋಕ್ಷ:

ಹಿಂದೂ ಧರ್ಮದಲ್ಲಿ ಎಲ್ಲ ದಾನಗಳಿಗಿಂತ ‘ಕನ್ಯಾದಾನ’ಕ್ಕೆ ಅತ್ಯುನ್ನತ ಸ್ಥಾನ ನೀಡಲಾಗಿದೆ. ಹೆಣ್ಣು ಮಗುವನ್ನು ಹೆತ್ತು, ಸಾಕಿ-ಸಲಹಿ ಮತ್ತೊಂದು ಮನೆಗೆ ದಾನವಾಗಿ (ಮದುವೆ ಮಾಡಿ) ನೀಡುವುದು ಪೋಷಕರು ಮಾಡುವ ಪರಮ ಪವಿತ್ರ ಕಾರ್ಯವಾಗಿದೆ.

ಪುರಾಣಗಳ ಪ್ರಕಾರ:

ಒಂದು ಕನ್ಯಾದಾನ ಮಾಡುವುದು ಬರೋಬ್ಬರಿ ನೂರು ಯಜ್ಞಗಳನ್ನು ಮಾಡಿದ ಪುಣ್ಯಕ್ಕೆ ಸಮಾನವಾಗಿದೆ. ಮಗಳನ್ನು ಕನ್ಯಾದಾನ ಮಾಡಿ ಅತ್ತೆಯ ಮನೆಗೆ ಕಳುಹಿಸಿಕೊಡುವ ಪೋಷಕರ ಏಳು ತಲೆಮಾರುಗಳ ಪಿತೃಗಳಿಗೆ ಮೋಕ್ಷ ಸಿಗುತ್ತದೆ ಎಂದು ಜ್ಯೋತಿಷ್ಯ ವಿದ್ವಾಂಸರು ಹೇಳುತ್ತಾರೆ.

ಮತ್ತಷ್ಟು ಆಧ್ಯಾತ್ಮಿಕ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

ಮಂಗಳೂರು ಬಳಿ ಡ್ರಗ್ಸ್ ಸಾಗಿಸುತ್ತಿದ್ದ ಮೂವರು ಪೊಲೀಸ್ ಬಲೆಗೆ: ಕಲಬುರಗಿಯಲ್ಲಿ ವಂಚಿಸುತ್ತಿದ್ದ ಬಿಹಾರಿಗಳ ಬಂಧನ – Kannada News

ಬೆಂಗಳೂರು, ಜೂನ್ 6: ದಕ್ಷಿಣ ಕನ್ನಡ (Dakshina Kannada) ಸೇರಿದಂತೆ ರಾಜ್ಯದ ಮೂರು ಜಿಲ್ಲೆಗಳಲ್ಲಿ ವಿಭಿನ್ನ ಅಪರಾಧ ಪ್ರಕರಣಗಳು ವರದಿಯಾಗಿದ್ದು, ಸಾರ್ವಜನಿಕರಲ್ಲಿ ತಲ್ಲಣ ಮೂಡಿಸಿವೆ. ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳದಲ್ಲಿ ಕಾರಿನಲ್ಲಿ ಭಾರಿ ಪ್ರಮಾಣದ ಮಾದಕವಸ್ತು ಸಾಗಿಸುತ್ತಿದ್ದ ಮೂವರನ್ನು ಪೊಲೀಸರು ಹೆಡೆಮುರಿ ಕಟ್ಟಿದ್ದಾರೆ. ಇತ್ತ ಕಲಬುರಗಿಯಲ್ಲಿ ನಿರುದ್ಯೋಗಿಗಳಿಗೆ ನಕಲಿ ಸರ್ಕಾರಿ ನೌಕರಿ ಮತ್ತು ನೀಟ್ (NEET) ಪರೀಕ್ಷೆ ಪಾಸ್ ಮಾಡಿಸುವುದಾಗಿ ನಂಬಿಸಿ ವಂಚಿಸುತ್ತಿದ್ದ ಬಿಹಾರ ಮೂಲದ ಇಬ್ಬರು ಅಂತರ್ರಾಜ್ಯ ವಂಚಕರನ್ನು ಬಂಧಿಸಲಾಗಿದೆ. ಇನ್ನು ವಿಜಯನಗರ ಜಿಲ್ಲೆಯ ಕೂಡ್ಲಿಗಿಯಲ್ಲಿ ರಾತ್ರೋರಾತ್ರಿ ಮುಸುಕುಧಾರಿ ಕಳ್ಳರ ಗ್ಯಾಂಗ್ ಓಡಾಡುತ್ತಿರುವುದು ಸಿಸಿಟಿವಿಯಲ್ಲಿ ಸೆರೆಯಾಗಿದ್ದು, ಜನರಲ್ಲಿ ಭೀತಿ ಮೂಡಿಸಿದೆ.

ಮುಖ್ಯಾಂಶಗಳು

  • ಬಂಟ್ವಾಳದಲ್ಲಿ ಲಕ್ಷಾಂತರ ಮೌಲ್ಯದ ಎಂಡಿಎಂಎ ಜಪ್ತಿ.
  • ಕಲಬುರಗಿಯಲ್ಲಿ ಬಿಹಾರ ಮೂಲದ ಇಬ್ಬರು ವಂಚಕರ ಬಂಧನ.
  • ಕೂಡ್ಲಿಗಿಯಲ್ಲಿ ಸಿಸಿಟಿವಿಯಲ್ಲಿ ಸೆರೆಯಾಯ್ತು ಕಳ್ಳರ ಓಡಾಟದ ದೃಶ್ಯ.

ಬಂಟ್ವಾಳದಲ್ಲಿ 7.64 ಲಕ್ಷ ರೂ. ಮೌಲ್ಯದ ಎಂಡಿಎಂಎ ಡ್ರಗ್ಸ್ ಜಪ್ತಿ

ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪೊಲೀಸರು ಭಾರಿ ಕಾರ್ಯಾಚರಣೆ ನಡೆಸಿದ್ದಾರೆ. ಮೆಲ್ಕಾರ್ ಫ್ಲೈಓವರ್ ಬಳಿ ಕಾರಿನಲ್ಲಿ ಮಾದಕವಸ್ತು ಸಾಗಿಸುತ್ತಿದ್ದ ಖಚಿತ ಮಾಹಿತಿ ಮೇರೆಗೆ ದಾಳಿ ನಡೆಸಿದ ಪೊಲೀಸರು ಜುಬೈರ್, ಮೊಹಮ್ಮದ್ ಸವಾದ್ ಹಾಗೂ ರಶೀದ್ ಎಂಬ ಮೂವರು ಆರೋಪಿಗಳನ್ನು ಬಂಧಿಸಿದ್ದಾರೆ. ಬಂಧಿತರಿಂದ ಅಂದಾಜು 7.64 ಲಕ್ಷ ರೂಪಾಯಿ ಮೌಲ್ಯದ ಎಂಡಿಎಂಎ (MDMA) ಮಾದಕವಸ್ತು, ಸಾಗಾಟಕ್ಕೆ ಬಳಸಿದ್ದ ಕಾರು ಹಾಗೂ ಮೂರು ಮೊಬೈಲ್ ಫೋನ್‌ಗಳನ್ನು ವಶಪಡಿಸಿಕೊಳ್ಳಲಾಗಿದೆ. ಈ ಕುರಿತು ಬಂಟ್ವಾಳ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರಿದಿದೆ.

ಸರ್ಕಾರಿ ನೌಕರಿ, ನೀಟ್ ಆಮಿಷವೊಡ್ಡುತ್ತಿದ್ದ ಅಂತಾರಾಜ್ಯ ವಂಚಕರ ಬಂಧನ

ಕಲಬುರಗಿ ನಗರದಲ್ಲಿ ನಿರುದ್ಯೋಗಿ ಯುವಕರನ್ನು ಟಾರ್ಗೆಟ್ ಮಾಡಿ ಲಕ್ಷಾಂತರ ರೂಪಾಯಿ ವಂಚಿಸುತ್ತಿದ್ದ ಬಿಹಾರ ಮೂಲದ ಇಬ್ಬರು ಅಂತಾರಾಜ್ಯ ವಂಚಕರನ್ನು ಪೊಲೀಸರು ಬಂಧಿಸಿದ್ದಾರೆ. ಬಂಧಿತರನ್ನು ಪ್ರೇಮಶಾಮಕುಮಾರ್ (ಪ್ರೇಮ್) ಮತ್ತು ಗಣೇಶ್ ಕುಮಾರ್ ಎಂದು ಗುರುತಿಸಲಾಗಿದೆ. ಈ ಗ್ಯಾಂಗ್ ರಾಜ್ಯ ಮತ್ತು ಕೇಂದ್ರ ಸರ್ಕಾರಿ ನೌಕರಿ ಕೊಡಿಸುವುದಾಗಿ ಹಾಗೂ ನೀಟ್ ಪರೀಕ್ಷೆಯಲ್ಲಿ ಉತ್ತೀರ್ಣ ಮಾಡಿಸುವುದಾಗಿ ನಂಬಿಸಿ ತಲಾ 5 ಲಕ್ಷ ರೂಪಾಯಿ ಬೇಡಿಕೆಯಿಟ್ಟು ವಂಚನೆಗೆ ಮುಂದಾಗಿತ್ತು. ಬಂಧಿತ ಆರೋಪಿಗಳ ಬಳಿ ಸದ್ಯ ಹಲವು ನಕಲಿ ದಾಖಲೆ ಪತ್ರಗಳು ಪತ್ತೆಯಾಗಿದ್ದು, ಪೊಲೀಸರು ಜಾಲದ ಬೆನ್ನು ಬಿದ್ದಿದ್ದಾರೆ.

ವಿಜಯನಗರ: ರಾತ್ರೋರಾತ್ರಿ ಮುಸುಕುಧಾರಿಗಳ ಓಡಾಟ

ವಿಜಯನಗರ ಜಿಲ್ಲೆಯ ಕೂಡ್ಲಿಗಿ ಪಟ್ಟಣದ ಬಸವೇಶ್ವರ ವೃತ್ತದ ಸುತ್ತಮುತ್ತಲಿನ ಮನೆಗಳ ಬಳಿ ರಾತ್ರಿ ವೇಳೆ ಮುಸುಕುಧಾರಿ ಕಳ್ಳರು ಸಂಚು ರೂಪಿಸುತ್ತಿರುವುದು ಬೆಳಕಿಗೆ ಬಂದಿದೆ. ಮುಖಕ್ಕೆ ಮಾಸ್ಕ್ ಹಾಗೂ ಕೈಗೆ ಗ್ಲೌಸ್ ಧರಿಸಿರುವ ಕಳ್ಳರ ಗ್ಯಾಂಗ್ ಮನೆಗಳ ಮುಂಭಾಗ ಅನುಮಾನಾಸ್ಪದವಾಗಿ ಓಡಾಡುತ್ತಿರುವುದು ಸ್ಥಳೀಯ ಸಿಸಿಟಿವಿ (CCTV) ಕ್ಯಾಮೆರಾಗಳಲ್ಲಿ ಸೆರೆಯಾಗಿದೆ. ಈ ದೃಶ್ಯ ಕಂಡು ಕೂಡ್ಲಿಗಿ ಪಟ್ಟಣದ ಜನತೆ ಬೆಚ್ಚಿಬಿದ್ದಿದ್ದಾರೆ. ಸದ್ಯಕ್ಕೆ ಯಾವುದೇ ಮನೆ ಕಳ್ಳತನವಾಗಿಲ್ಲ ಎಂದು ಕೂಡ್ಲಿಗಿ ಪೊಲೀಸರು ಮಾಹಿತಿ ನೀಡಿದ್ದು, ರಾತ್ರಿ ಗಸ್ತು ಚುರುಕುಗೊಳಿಸಿದ್ದಾರೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

IND vs AFG: ಯುವ ಆಟಗಾರ ಪಾದಾರ್ಪಣೆ: ಹೀಗಿದೆ ಟೀಮ್ ಇಂಡಿಯಾ ಪ್ಲೇಯಿಂಗ್ 11 – Kannada News

ಭಾರತ ಮತ್ತು ಅಫ್ಘಾನಿಸ್ತಾನ್ ನಡುವಣ ಟೆಸ್ಟ್ ಪಂದ್ಯ ಶುರುವಾಗಿದೆ. ಮುಲ್ಲನ್​ಪುರ್​ನ ಮಹಾರಾಜ ಯಾದವೀಂದ್ರ ಸಿಂಗ್ ಅಂತರಾಷ್ಟ್ರೀಯ ಕ್ರಿಕೆಟ್ ಸ್ಟೇಡಿಯಂನಲ್ಲಿ ನಡೆಯುತ್ತಿರುವ ಈ ಪಂದ್ಯದಲ್ಲಿ ಟಾಸ್ ಗೆದ್ದಿರುವ ಟೀಮ್ ಇಂಡಿಯಾ ನಾಯಕ ಶುಭ್​​ಮನ್ ಗಿಲ್ ಬ್ಯಾಟಿಂಗ್ ಆಯ್ದುಕೊಂಡಿದ್ದಾರೆ. ಅದರಂತೆ ಅಫ್ಘಾನಿಸ್ತಾನ್ ತಂಡ ಮೊದಲು ಬೌಲಿಂಗ್ ಮಾಡಲಿದೆ.

ಇನ್ನು ಈ ಪಂದ್ಯದ ಮೂಲಕ 23 ವರ್ಷದ ಯುವ ಸ್ಪಿನ್ನರ್ ಮಾನವ್ ಸುತಾರ್ ಟೀಮ್ ಇಂಡಿಯಾ ಪರ ಪಾದಾರ್ಪಣೆ ಮಾಡಿದ್ದಾರೆ. ಅದರಂತೆ ಉಭಯ ತಂಡಗಳ ಪ್ಲೇಯಿಂಗ್ ಇಲೆವೆನ್ ಈ ಕೆಳಗಿನಂತಿದೆ…

ಭಾರತ (ಪ್ಲೇಯಿಂಗ್ XI): ಕೆಎಲ್ ರಾಹುಲ್, ಯಶಸ್ವಿ ಜೈಸ್ವಾಲ್, ಸಾಯಿ ಸುದರ್ಶನ್, ಶುಭ್​ಮನ್ ಗಿಲ್ (ನಾಯಕ), ರಿಷಭ್ ಪಂತ್ (ವಿಕೆಟ್ ಕೀಪರ್), ಧ್ರುವ್ ಜುರೆಲ್, ವಾಷಿಂಗ್ಟನ್ ಸುಂದರ್, ಮಾನವ್ ಸುತಾರ್, ಕುಲದೀಪ್ ಯಾದವ್, ಮೊಹಮ್ಮದ್ ಸಿರಾಜ್, ಪ್ರಸಿದ್ಧ್ ಕೃಷ್ಣ.

8 ವರ್ಷಗಳ ಬಳಿಕ ಮುಖಾಮುಖಿ:

ಭಾರತ ಮತ್ತು ಅಫ್ಘಾನಿಸ್ತಾನ್ ತಂಡ ಈವರೆಗೆ ಒಂದು ಟೆಸ್ಟ್ ಪಂದ್ಯದಲ್ಲಿ ಮಾತ್ರ ಮುಖಾಮುಖಿಯಾಗಿದೆ. ಅದು ಸಹ 2018 ರಲ್ಲಿ. ಈ ಪಂದ್ಯದಲ್ಲಿ ಟೀಮ್ ಇಂಡಿಯಾ ಇನಿಂಗ್ಸ್ ಹಾಗೂ 262 ರನ್​ಗಳ ಜಯ ಸಾಧಿಸಿತ್ತು.

ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ನಡೆದಿದ್ದ ಈ ಮ್ಯಾಚ್​ನಲ್ಲಿ ಟಾಸ್ ಗೆದ್ದ ಅಂದಿನ ಟೀಮ್ ಇಂಡಿಯಾ ನಾಯಕ ಅಜಿಂಕ್ಯ ರಹಾನೆ ಬ್ಯಾಟಿಂಗ್ ಆಯ್ದುಕೊಂಡಿದ್ದರು.

  • ಮೊದಲು ಬ್ಯಾಟ್ ಮಾಡಿದ ಟೀಮ್ ಇಂಡಿಯಾ ಮೊದಲ ಇನಿಂಗ್ಸ್​ನಲ್ಲಿ 474 ರನ್​ ಕಲೆಹಾಕಿದ್ದರು.
  • ಇದಕ್ಕುತ್ತರವಾಗಿ ಮೊದಲ ಇನಿಂಗ್ಸ್ ಆಡಿದ ಅಫ್ಘಾನಿಸ್ತಾನ್ ತಂಡ 109 ರನ್​ಗಳಿಗೆ ಆಲೌಟ್ ಆಗಿದ್ದರು.
  • ಟೀಮ್ ಇಂಡಿಯಾ ಫಾಲೋಆನ್ ಹೇರಿದ ಹಿನ್ನಲೆ ಅಫ್ಘಾನಿಸ್ತಾನ್ ದ್ವಿತೀಯ ಇನಿಂಗ್ಸ್ ಆರಂಭಿಸಿದ್ದರು.
  • ದ್ವಿತೀಯ ಇನಿಂಗ್ಸ್​ನಲ್ಲಿ ಅಫ್ಘಾನಿಸ್ತಾನ್ ತಂಡವು ಕೇವಲ 103 ರನ್​ಗಳಿಸಿ ಆಲೌಟ್ ಆಯಿತು.
  • ಈ ಮೂಲಕ ಟೀಮ್ ಇಂಡಿಯಾ ಇನಿಂಗ್ಸ್ ಹಾಗೂ 262 ರನ್​ಗಳ ಭರ್ಜರಿ ಜಯ ಸಾಧಿಸಿದ್ದರು.

ಇದೀಗ ಬರೋಬ್ಬರಿ 8 ವರ್ಷಗಳ ಬಳಿಕ ಉಭಯ ತಂಡಗಳು ಟೆಸ್ಟ್ ಕ್ರಿಕೆಟ್​ನಲ್ಲಿ ಮತ್ತೊಮ್ಮೆ ಮುಖಾಮುಖಿಯಾಗಿದ್ದಾರೆ. ಈ ಬಾರಿ ಅಫ್ಘಾನ್ ಪಡೆ ಎದುರಿಸುತ್ತಿರುವುದು ಯಂಗ್ ಇಂಡಿಯಾವನ್ನು. ಹೀಗಾಗಿ ಉಭಯ ತಂಡಗಳಿಂದ ಭರ್ಜರಿ ಪೈಪೋಟಿಯನ್ನು ನಿರೀಕ್ಷಿಸಬಹುದು.

ಭಾರತ ಟೆಸ್ಟ್ ತಂಡ: ಶುಭ್​ಮನ್ ಗಿಲ್ (ನಾಯಕ), ಯಶಸ್ವಿ ಜೈಸ್ವಾಲ್, ಕೆಎಲ್ ರಾಹುಲ್ (ಉಪ ನಾಯಕ), ಸಾಯಿ ಸುದರ್ಶನ್, ರಿಷಭ್ ಪಂತ್, ದೇವದತ್ ಪಡಿಕ್ಕಲ್, ನಿತೀಶ್ ಕುಮಾರ್ ರೆಡ್ಡಿ, ವಾಷಿಂಗ್ಟನ್ ಸುಂದರ್, ಕುಲ್ದೀಪ್ ಯಾದವ್, ಮೊಹಮ್ಮದ್ ಸಿರಾಜ್, ಪ್ರಸಿದ್ಧ್ ಕೃಷ್ಣ, ಮಾನವ್ ಸುತಾರ್, ಗುರ್ನೂರ್ ಬ್ರಾರ್, ಧ್ರುವ್ ಜುರೆಲ್, ಹರ್ಷ್ ದುಬೆ.

ಇದನ್ನೂ ಓದಿ: FIFA World cup 2026: ಫುಟ್‌ಬಾಲ್ ಆಟವನ್ನೇ ಬದಲಿಸಲಿದೆ ಹೊಸ ನಿಯಮಗಳು!

ಅಫ್ಘಾನಿಸ್ತಾನ್ ಟೆಸ್ಟ್ ತಂಡ: ಹಶ್ಮತುಲ್ಲಾ ಶಾಹಿದಿ (ನಾಯಕ), ಅಬ್ದುಲ್ ಮಲಿಕ್, ಸೇದಿಕುಲ್ಲಾ ಅಟಲ್, ರಹಮತ್ ಷಾ, ರಹಮಾನುಲ್ಲಾ ಗುರ್ಬಾಝ್, ರಹಮಾನುಲ್ಲಾ ಝದ್ರಾನ್, ಅಫ್ಸರ್ ಝಜೈ, ಇಕ್ರಮ್ ಅಲಿಖಿಲ್, ಅಜ್ಮತುಲ್ಲಾ ಒಮಝಾಹಿ, ಶರಫುದಿನ್ ಅಶ್ರಫ್, ನಂಗಿಯಾಲೈ ಖರೋಟಿ, ಖೈಸ್ ಅಹ್ಮದ್, ಬಿಲಾಲ್ ಸಮಿ, ಜಿಯಾ ಶರೀಫಿ, ಸಲೀಂ ಸಫಿ.

Source link

ಲಾಲ್‌ಬಾಗ್‌ನಲ್ಲಿ ಮಾವು-ಹಲಸು ಮೇಳದ ಸಖತ್ ಕ್ರೇಜ್! ಮೇಳದಲ್ಲಿ ಯಾವೆಲ್ಲಾ ಬಗೆಯ ಮಾವಿನ ಹಣ್ಣುಗಳಿದ್ದವು ನೋಡಿ

Source link

ನಾರ್ವೆಯಲ್ಲಿ ಹೊಸ ಇತಿಹಾಸ ಬರೆದ ಆರ್ ಪ್ರಜ್ಞಾನಂದ – Kannada News

ಭಾರತದ 20 ವರ್ಷದ ಚೆಸ್ ಚತುರ ಆರ್ ಪ್ರಜ್ಞಾನಂದ (R Praggnanandhaa) ನಾರ್ವೆ ಚೆಸ್ 2026 (Norway Chess 2026) ಟೂರ್ನಿಯಲ್ಲಿ ಚಾಂಪಿಯನ್ ಆಗಿ ಹೊರಹೊಮ್ಮಿದ್ದಾರೆ. ಈ ಮೂಲಕ ಈ ಪ್ರಶಸ್ತಿ ಗೆದ್ದ ಮೊದಲ ಭಾರತೀಯ ಎಂಬ ಐತಿಹಾಸಿಕ ಸಾಧನೆ ಮಾಡಿದ್ದಾರೆ. ಓಸ್ಲೋದಲ್ಲಿ ನಡೆದ ಅಂತಿಮ ಸುತ್ತಿನ ರೋಚಕ ಪಂದ್ಯದಲ್ಲಿ ಜರ್ಮನಿಯ ವಿನ್ಸೆಂಟ್ ಕೀಮರ್ ವಿರುದ್ಧ ಭರ್ಜರಿ ಜಯ ಸಾಧಿಸಿ ಈ ಪ್ರಶಸ್ತಿಯನ್ನು ಮುಡಿಗೇರಿಸಿಕೊಂಡಿದ್ದಾರೆ.

ಸೋಲಿನಿಂದ ಗೆಲುವಿಗೆ:

ಟೂರ್ನಿಯ ಮಧ್ಯಭಾಗದಲ್ಲಿ ಸತತ ಎರಡು ಪಂದ್ಯಗಳಲ್ಲಿ ಸೋತು ಅಂಕಪಟ್ಟಿಯ ಕೊನೆಯ ಸ್ಥಾನಕ್ಕೆ ಕುಸಿದಿದ್ದ ಪ್ರಜ್ಞಾನಂದ, ನಂತರ ತೋರಿದ ಆಟ ಅಸಾಧಾರಣವಾಗಿತ್ತು. ಕ್ಲಾಸಿಕಲ್ ಚೆಸ್ ಮಾದರಿಯಲ್ಲಿ ಸತತ 4 ಪಂದ್ಯಗಳನ್ನು ಗೆಲ್ಲುವ ಮೂಲಕ ಅದ್ಭುತ ಕಂಬ್ಯಾಕ್ ಮಾಡಿದರು:

  •  ಅಲಿರೆಝಾ ಫಿರೌಜ್ಜಾ (ಫ್ರಾನ್ಸ್) ವಿರುದ್ಧ ಜಯ
  • ಮ್ಯಾಗ್ನಸ್ ಕಾರ್ಲ್‌ಸನ್ (ವಿಶ್ವದ ನಂ. 1 ಆಟಗಾರ) ವಿರುದ್ಧ ಐತಿಹಾಸಿಕ ಜಯ
  •  ಡಿ ಗುಕೇಶ್ (ಹಾಲಿ ವಿಶ್ವ ಚಾಂಪಿಯನ್) ವಿರುದ್ಧ ಗೆಲುವು
  • ವಿನ್ಸೆಂಟ್ ಕೀಮರ್ (ಜರ್ಮನಿ) ವಿರುದ್ಧ ಅಂತಿಮ ಸುತ್ತಿನಲ್ಲಿ ರೋಚಕ ವಿಜಯ

ಅಂತಿಮ ಸುತ್ತಿನ ಪಂದ್ಯಕ್ಕೆ ಮುನ್ನ ವೆಸ್ಲಿ ಸೋ ಅರ್ಧ ಅಂಕದ ಮುನ್ನಡೆಯಲ್ಲಿದ್ದರು. ಆದರೆ ವೆಸ್ಲಿ ಸೋ ತಮ್ಮ ಪಂದ್ಯವನ್ನು ಡ್ರಾ ಮಾಡಿಕೊಂಡರೆ, ಪ್ರಜ್ಞಾನಂದ ಅವರು ಕೀಮರ್ ವಿರುದ್ಧ ನೇರ ಕ್ಲಾಸಿಕಲ್ ಜಯದೊಂದಿಗೆ 3 ಪೂರ್ಣ ಅಂಕಗಳನ್ನು ಗಳಿಸಿ ಟ್ರೋಫಿಯನ್ನು ಎತ್ತಿಹಿಡಿದರು.

ನಾರ್ವೆ ಚೆಸ್ 2026 ಅಂತಿಮ ಅಂಕಪಟ್ಟಿ:

ವಿಶ್ವದ ಅಗ್ರ ಆರು ಆಟಗಾರರ ನಡುವೆ ನಡೆದ ಈ ಕಠಿಣ ಟೂರ್ನಿಯ ಅಂತಿಮ ಅಂಕ ಪಟ್ಟಿ ಹೀಗಿದೆ:

  1. ಆರ್ ಪ್ರಜ್ಞಾನಂದ (ಭಾರತ)- 18 ಅಂಕಗಳು
  2. ವೆಸ್ಲಿ ಸೋ (ಅಮೆರಿಕ )- 17  ಅಂಕಗಳು
  3. ಅಲಿರೆಝ ಫಿರೌಜ್ಜಾ (ಫ್ರಾನ್ಸ್) 15.5- ಅಂಕಗಳು
  4. ಮ್ಯಾಗ್ನಸ್ ಕಾರ್ಲ್‌ಸನ್ (ನಾರ್ವೆ)- 13 ಅಂಕಗಳು
  5. ವಿನ್ಸೆಂಟ್ ಕೀಮರ್ (ಜರ್ಮನಿ)- 11 ಅಂಕಗಳು
  6. ಡಿ ಗುಕೇಶ್ (ಭಾರತ)- 8 ಅಂಕಗಳು

ಕಾರ್ಲ್‌ಸನ್​ಗೆ ‘ಡಬಲ್’ ಶಾಕ್!

ಈ ಟೂರ್ನಿಯಲ್ಲಿ ಪ್ರಜ್ಞಾನಂದ ಮಾಡಿದ ಮತ್ತೊಂದು ದೊಡ್ಡ ದಾಖಲೆಯೆಂದರೆ, ವಿಶ್ವದ ನಂ. 1 ಆಟಗಾರ ಮ್ಯಾಗ್ನಸ್ ಕಾರ್ಲ್‌ಸನ್ ಅವರನ್ನು ಅವರದ್ದೇ ತವರು ನೆಲದಲ್ಲಿ ಒಂದೇ ಟೂರ್ನಿಯಲ್ಲಿ ಎರಡು ಬಾರಿ ಕ್ಲಾಸಿಕಲ್ ಚೆಸ್‌ನಲ್ಲಿ ಸೋಲಿಸಿದ್ದು (ಒಮ್ಮೆ ಬಿಳಿ ದಾಳಗಳೊಂದಿಗೆ, ಮತ್ತೊಮ್ಮೆ ಕಪ್ಪು ದಾಳಗಳೊಂದಿಗೆ).

ಈ ರೀತಿಯ ‘ಕ್ಲಾಸಿಕಲ್ ಡಬಲ್’ ಸಾಧನೆಯನ್ನು  ಕಾರ್ಲ್‌ಸನ್ ವಿರುದ್ಧ 19 ವರ್ಷಗಳ ಹಿಂದೆ (2007 ರಲ್ಲಿ) ಭಾರತದ ದಿಗ್ಗಜ ವಿಶ್ವನಾಥನ್ ಆನಂದ್ ಮಾಡಿದ್ದರು. ಇದೀಗ ಪ್ರಜ್ಞಾನಂದ ಆ ಅಪರೂಪದ ದಾಖಲೆಯನ್ನು ಸರಿಗಟ್ಟಿದ್ದಾರೆ.

ಇದನ್ನೂ ಓದಿ: ವಿಶ್ವನಾಥನ್ ಆನಂದ್ ಅವರ 19 ವರ್ಷಗಳ ಹಳೆಯ ದಾಖಲೆ ಸರಿಗಟ್ಟಿದ ಪ್ರಜ್ಞಾನಂದ

ತಾಯಿಯ ಫೋನ್ ಕರೆ ತಂದ ಅದೃಷ್ಟ!

ಪ್ರಶಸ್ತಿ ಗೆದ್ದ ನಂತರ ಮಾತನಾಡಿದ ಪ್ರಜ್ಞಾನಂದ, ತಾವು ಸತತ ಸೋಲುಗಳಿಂದ ಕಂಗಾಲಾಗಿದ್ದಾಗ ಅವರ ತಾಯಿ ನಾಗಲಕ್ಷ್ಮಿ ಅವರು ಮಾಡಿದ ಒಂದು ಫೋನ್ ಕರೆ ತಮ್ಮಲ್ಲಿ ಹೊಸ ಭರವಸೆ ತುಂಬಿತು. ಅಲ್ಲದೆ ಆಟದ ಮೇಲಿನ ಗಮನವನ್ನು ಮರಳಿ ತರಲು ಸಹಾಯ ಮಾಡಿತು ಎಂದು ಬಹಿರಂಗಪಡಿಸಿದ್ದಾರೆ. ಆ ಒಂದು ಪ್ರೇರಣೆಯೇ ಸತತ 4 ಪಂದ್ಯಗಳ ಗೆಲುವಿಗೆ ಕಾರಣವಾಯಿತ ಎಂದು ಪ್ರಜ್ಞಾನಂದ, ಸಂತಸ ವ್ಯಕ್ತಪಡಿಸಿದ್ದಾರೆ.

Source link

Exit mobile version