‘ಮಹಾಕವಿ’ ಸಿನಿಮಾದಲ್ಲಿ ಪಂಪನ ಪಾತ್ರ ಮಾಡಿದ ಖ್ಯಾತ ನಟ ಕಿಶೋರ್ – Kannada News | Actor Kishore as Pampa in Baraguru Ramachandrappa Mahakavi movie

ಹಿರಿಯ ನಿರ್ದೇಶಕ ಬರಗೂರು ರಾಮಚಂದ್ರಪ್ಪ ಅವರ ‘ಮಹಾಕವಿ’ ಸಿನಿಮಾದಲ್ಲಿ ಖ್ಯಾತ ನಟ ಕಿಶೋರ್ (Kishore) ಅವರು ಮುಖ್ಯ ಭೂಮಿಕೆ ನಿಭಾಯಿಸುತ್ತಿದ್ದಾರೆ. ಶಮಿತಾ ಮಲ್ನಾಡ್ ಅವರು ಈ ಚಿತ್ರಕ್ಕೆ ಸಂಗೀತ ನೀಡುತ್ತಿದ್ದಾರೆ. ಇದು ಬರಗೂರು ರಾಮಚಂದ್ರಪ್ಪ ಅವರ 25ನೇ ಸಿನಿಮಾ ಎಂಬುದು ವಿಶೇಷ. ಈ ಸಿನಿಮಾದ ಬಗ್ಗೆ ಕಿಶೋರ್ ಅವರು ಟಿವಿ9 ಜೊತೆ ಮಾತನಾಡಿದ್ದಾರೆ. ‘ಸಾಹಿತ್ಯದ ವಿದ್ಯಾರ್ಥಿಯಾಗಿ ಈ ಸಿನಿಮಾದಲ್ಲಿ ನಟಿಸಿದ್ದಕ್ಕೆ ನನಗೆ ಬಹಳ ಖುಷಿ ಮತ್ತು ಹೆಮ್ಮೆ ಇದೆ. ಈ ರೀತಿಯ ಅವಕಾಶ ಸಿಗುವುದು ವಿರಳ. ಬರಗೂರು ರಾಮಚಂದ್ರಪ್ಪ ಅವರು ಪಂಪನ ಕುರಿತು ಸಿನಿಮಾ ಮಾಡುತ್ತಾರೆ ಎಂದಾಗ ಅದಕ್ಕೆ ನಿಖರತೆ ಸಿಗುತ್ತದೆ. ಇದು ಪಂಪನ ಜೀವನ ಕಥನ ಅಲ್ಲ. ಅವನ ಆಲೋಚನೆಗಳು, ಕಾವ್ಯ, ಚಿಂತನೆಗಳನ್ನು ಇಟ್ಟುಕೊಂಡು ಮಾಡಿದ ಸಿನಿಮಾ. ಇಂದಿಗೂ ಕೂಡ ಪಂಪ ಹೇಗೆ ಪ್ರಸ್ತುತ ಎಂಬುದು ಈ ಸಿನಿಮಾ ಮೂಲಕ ಗೊತ್ತಾಗುತ್ತದೆ’ ಎಂದು ಕಿಶೋರ್ ಅವರು ಹೇಳಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Source link

2 ಲಕ್ಷ ರೂ. ಲಂಚ ಸ್ವೀಕರಿಸುತ್ತಿದ್ದಾಗ ಲೋಕಾಯುಕ್ತ ಬಲೆಗೆ ಬಿದ್ದ ಕೋಲಾರ ಜಿ.ಪಂ ನರೇಗಾ ಇಂಜಿನಿಯರ್ – Kannada News | NREGA Bribe Scandal: Kolar Zilla Panchayat Engineer Caught by Lokayukta Police

ಕೋಲಾರ ಜು. 21: ನರೇಗಾ ಯೋಜನೆಯಡಿ ಕೈಗೆತ್ತಿಕೊಳ್ಳಲಾಗಿದ್ದ ಕಾಮಗಾರಿಗಳ ಬಿಲ್ ಮಂಜೂರು ಮಾಡಲು ಬೃಹತ್ ಮೊತ್ತದ ಲಂಚಕ್ಕೆ ಬೇಡಿಕೆಯಿಟ್ಟಿದ್ದ ಕೋಲಾರ ಜಿಲ್ಲಾ ಪಂಚಾಯತ್‌ನ ನರೇಗಾ ವಿಭಾಗದ ಜೂನಿಯರ್ ಇಂಜಿನಿಯರ್ ಹಾಗೂ ಆತನ ಸಹಾಯಕ ಮಂಗಳವಾರ ಲೋಕಾಯುಕ್ತ ಪೊಲೀಸರ ಬಲೆಗೆ ಬಿದ್ದಿದ್ದಾರೆ.

ಕೋಲಾರ ಜಿಲ್ಲಾ ಪಂಚಾಯತ್ ನರೇಗಾ ಕಾಮಗಾರಿಯ ತಾಂತ್ರಿಕ ಇಂಜಿನಿಯರ್ ಕೃಷ್ಣಮೂರ್ತಿ ಹಾಗೂ ಅವರ ಸಹಾಯಕ ಹುಸೇನ್ ಅಲಿ ಲೋಕಾಯುಕ್ತ ದಾಳಿಯಲ್ಲಿ ಬಂಧನಕ್ಕೊಳಗಾದ ಭ್ರಷ್ಟ ಅಧಿಕಾರಿಗಳಾಗಿದ್ದಾರೆ. ಕೋಲಾರ ಜಿಲ್ಲೆಯ ಮುಳಬಾಗಿಲು ತಾಲೂಕಿನ ಮುಡಿಯನೂರು ಗ್ರಾಮದ ಗುತ್ತಿಗೆದಾರ ಕೃಷ್ಣಮೂರ್ತಿ ಅವರು ನರೇಗಾ ಯೋಜನೆಯಡಿ ನೆರವೇರಿಸಿದ್ದ ಕಾಮಗಾರಿಗಳ ಬಿಲ್ ಮಂಜೂರು ಮಾಡಲು ಇಂಜಿನಿಯರ್ ಕೃಷ್ಣಮೂರ್ತಿ ಹಾಗೂ ಸಹಾಯಕ ಹುಸೇನ್ ಅಲಿ ಬರೋಬ್ಬರಿ 4 ಲಕ್ಷ ರೂಪಾಯಿ ಲಂಚಕ್ಕೆ ಬೇಡಿಕೆಯಿಟ್ಟಿದ್ದರು.

ಲಂಚ ನೀಡಲು ಇಷ್ಟವಿಲ್ಲದ ಗುತ್ತಿಗೆದಾರ ಕೃಷ್ಣಮೂರ್ತಿಯವರು ಈ ಕುರಿತು ಕೋಲಾರ ಲೋಕಾಯುಕ್ತ ಪೊಲೀಸರಿಗೆ ದೂರು ನೀಡಿದ್ದರು. ಮಂಗಳವಾರ ಕೋಲಾರ ಜಿಲ್ಲಾ ಪಂಚಾಯಿತಿ ಕಚೇರಿಯಲ್ಲಿ ಗುತ್ತಿಗೆದಾರನಿಂದ ಮುಂಗಡವಾಗಿ 2 ಲಕ್ಷ ರೂಪಾಯಿ ಲಂಚದ ಹಣ ಪಡೆಯುತ್ತಿದ್ದಾಗ ಲೋಕಾಯುಕ್ತ ಸಿಬ್ಬಂದಿ ದಾಳಿ ನಡೆಸಿ, ಇಬ್ಬರನ್ನೂ ಹಣದ ಸಮೇತ ರೆಡ್ ಹ್ಯಾಂಡ್‌ ಆಗಿ ವಶಕ್ಕೆ ಪಡೆದಿದ್ದಾರೆ.

ಇದನ್ನೂ ಓದಿ: ಬಡವರ ಹೊಟ್ಟೆಗೆ ಕನ್ನ ಹಾಕಿದ ಮಾಜಿ ಜಿ.ಪಂ ಸದಸ್ಯನ ಮಗ: ಯಾದಗಿರಿಯಲ್ಲಿ ಬಟಾ ಬಯಲಾಯ್ತು ಅಕ್ರಮ ಅಕ್ಕಿ ದಂಧೆ

ಲೋಕಾಯುಕ್ತ ಇನ್ಸ್‌ಪೆಕ್ಟರ್ ರೇಣುಕಾ ಅವರ ನೇತೃತ್ವದಲ್ಲಿ ನಡೆಸಲಾದ ಈ ಯಶಸ್ವಿ ಕಾರ್ಯಾಚರಣೆಯಲ್ಲಿ ಲಂಚದ ಹಣವನ್ನು ಜಪ್ತಿ ಮಾಡಲಾಗಿದ್ದು, ಭ್ರಷ್ಟ ಅಧಿಕಾರಿ ಕೃಷ್ಣಮೂರ್ತಿ ಹಾಗೂ ಅವರ ಸಹಾಯಕ ಹುಸೇನ್ ಅಲಿ ಅವರನ್ನು ಬಂಧಿಸಲಾಗಿದೆ. ಇಬ್ಬರ ವಿರುದ್ಧವೂ ಭ್ರಷ್ಟಾಚಾರ ತಡೆ ಕಾಯ್ದೆಯಡಿ ಪ್ರಕರಣ ದಾಖಲಿಸಿಕೊಂಡು ಮುಂದಿನ ಕಾನೂನು ಕ್ರಮ ಕೈಗೊಳ್ಳಲಾಗಿದೆ.

ರಾಜ್ಯದ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

ದೆಹಲಿ ಹೈಕೋರ್ಟ್ ಆದೇಶದ ಬೆನ್ನಲ್ಲೇ ಉಪವಾಸ ಸತ್ಯಾಗ್ರಹ ನಿರತ ಸೋನಮ್ ವಾಂಗ್ಚುಕ್ ಮೇದಾಂತ ಆಸ್ಪತ್ರೆಗೆ ಶಿಫ್ಟ್ – Kannada News | Sonam Wangchuk shifted to Gurugram Medanta Hospital after Delhi High Court order

ನವದೆಹಲಿ, ಜುಲೈ 21: ದೆಹಲಿ ಹೈಕೋರ್ಟ್ ನೀಡಿದ ಆದೇಶದ ಬೆನ್ನಲ್ಲೇ, ಕಳೆದ 24 ದಿನಗಳಿಂದ ಅನಿರ್ದಿಷ್ಟಾವಧಿ ಉಪವಾಸ ಸತ್ಯಾಗ್ರಹ ನಡೆಸುತ್ತಿರುವ ಸಾಮಾಜಿಕ ಕಾರ್ಯಕರ್ತ ಸೋನಮ್ ವಾಂಗ್ಚುಕ್ (Sonam Wangchuk) ಅವರನ್ನು ಇಂದು ದೆಹಲಿಯ ಸಫ್ದರ್‌ಜಂಗ್ ಆಸ್ಪತ್ರೆಯಿಂದ ಗುರುಗ್ರಾಮದ ಮೇದಾಂತ ಆಸ್ಪತ್ರೆಗೆ ಸ್ಥಳಾಂತರಿಸಲಾಗಿದೆ. ನೀಟ್ ಪರೀಕ್ಷಾ ಅಕ್ರಮಗಳನ್ನು ಖಂಡಿಸಿ ಜೂನ್ 28ರಿಂದ ಅನಿರ್ದಿಷ್ಟಾವಧಿ ಉಪವಾಸ ಸತ್ಯಾಗ್ರಹ ನಡೆಸುತ್ತಿರುವ ಸೋನಮ್ ವಾಂಗ್ಚುಕ್ ಅವರನ್ನು ತಕ್ಷಣವೇ ಸಫ್ದರ್‌ಜಂಗ್ ಆಸ್ಪತ್ರೆಯಿಂದ ಮೇದಾಂತ ಆಸ್ಪತ್ರೆಗೆ ಸ್ಥಳಾಂತರಿಸುವಂತೆ ದೆಹಲಿ ಹೈಕೋರ್ಟ್ ನಿರ್ದೇಶನ ನೀಡಿತ್ತು.

ದೆಹಲಿ ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿ ಡಿ.ಕೆ. ಉಪಾಧ್ಯಾಯ ಮತ್ತು ನ್ಯಾಯಮೂರ್ತಿ ತೇಜಸ್ ಕಾರಿಯಾ ಅವರಿದ್ದ ವಿಭಾಗೀಯ ಪೀಠವು, ಸೋನಮ್ ವಾಂಗ್ಚುಕ್ ಅವರನ್ನು ಮೇದಾಂತ ಆಸ್ಪತ್ರೆಗೆ ಸ್ಥಳಾಂತರಿಸುವುದರಿಂದ ಅವರ ಮೂಲಭೂತ ಹಕ್ಕುಗಳನ್ನು ರಕ್ಷಿಸಿದಂತಾಗುತ್ತದೆ ಎಂದು ಅಭಿಪ್ರಾಯಪಟ್ಟಿದೆ. ಅಲ್ಲದೆ, ಚಿಕಿತ್ಸೆಯ ಸಮಯದಲ್ಲಿ ಅವರ ಆರೋಗ್ಯವನ್ನು ಹತ್ತಿರದಿಂದ ಮೇಲ್ವಿಚಾರಣೆ ಮಾಡಲು ಅರ್ಹ ವೈದ್ಯರ ತಂಡವನ್ನು ರಚಿಸಲು ಸೂಚಿಸಿದೆ.

ಇದನ್ನೂ ಓದಿ: ಸೋನಮ್ ವಾಂಗ್ಚುಕ್ 3 ವಾರಗಳ ಉಪವಾಸ ಸತ್ಯಾಗ್ರಹ ಅಂತ್ಯಕ್ಕೆ ಷರತ್ತು ವಿಧಿಸಿದ ಪತ್ನಿ

ವಿಚಾರಣೆಯ ವೇಳೆ, ಸೋನಮ್ ವಾಂಗ್ಚುಕ್ ಅವರನ್ನು ಮೇದಾಂತ ಆಸ್ಪತ್ರೆಗೆ ಸ್ಥಳಾಂತರಿಸಲು ತನಗೆ ಯಾವುದೇ ಅಭ್ಯಂತರವಿಲ್ಲ ಎಂದು ಕೇಂದ್ರ ಸರ್ಕಾರ ದೆಹಲಿ ಹೈಕೋರ್ಟ್‌ಗೆ ತಿಳಿಸಿತು. ಜಂತರ್ ಮಂತರ್ ಪ್ರತಿಭಟನಾ ಸ್ಥಳದಲ್ಲಿದ್ದ ವಾಂಗ್ಚುಕ್ ಅವರ ಅನಿರ್ದಿಷ್ಟಾವಧಿ ಉಪವಾಸ ಸತ್ಯಾಗ್ರಹದ ವೇಳೆ ಆರೋಗ್ಯ ಕ್ಷೀಣಿಸಿದ ಕಾರಣ ಅವರನ್ನು ಸಫ್ದರ್‌ಜಂಗ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಹೈಕೋರ್ಟ್ ಆದೇಶದ ನಂತರ, ಅವರ ಚಿಕಿತ್ಸೆಯು ಇನ್ನು ಗುರುಗ್ರಾಮದ ಮೇದಾಂತ ಆಸ್ಪತ್ರೆಯಲ್ಲಿ ಮುಂದುವರಿಯಲಿದೆ.

ಇದನ್ನೂ ಓದಿ: ದೆಹಲಿ ಪ್ರತಿಭಟನಾಕಾರರ ಮೇಲೆ ದೌರ್ಜನ್ಯ; ಉಪವಾಸ ಸತ್ಯಾಗ್ರಹ ಮುಂದುವರಿಸಲು ಸೋನಮ್ ವಾಂಗ್ಚುಕ್ ನಿರ್ಧಾರ

ಇಂದು ಸೋನಮ್ ವಾಂಗ್ಚುಕ್ ಅವರ ಅನಿರ್ದಿಷ್ಟಾವಧಿ ಉಪವಾಸ ಸತ್ಯಾಗ್ರಹವು 24ನೇ ದಿನಕ್ಕೆ ಕಾಲಿಟ್ಟಿದೆ. ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆ ಸೇರಿದಂತೆ ಪ್ರತಿಭಟನಾಕಾರರ ಬೇಡಿಕೆಗಳನ್ನು ಈಡೇರಿಸುವವರೆಗೆ ತಾವು ಉಪವಾಸ ಸತ್ಯಾಗ್ರಹವನ್ನು ಹಿಂಪಡೆಯುವುದಿಲ್ಲ ಎಂದು ಅವರು ಪಟ್ಟು ಹಿಡಿದಿದ್ದಾರೆ. ಸುದೀರ್ಘ ಉಪವಾಸದ ಹೊರತಾಗಿಯೂ, ಅವರ ಆರೋಗ್ಯ ಸ್ಥಿತಿಯು ಸ್ಥಿರವಾಗಿದೆ ಎಂದು ಸಫ್ದರ್‌ಜಂಗ್ ಆಸ್ಪತ್ರೆಯ ವೈದ್ಯರು ತಿಳಿಸಿದ್ದರು.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

87 ಕೇಸ್ ಭೇದಿಸಿದ ದಾವಣಗೆರೆ ಪೊಲೀಸರು: ಚಿನ್ನ, ಬೆಳ್ಳಿ ಸೇರಿ 3.91 ಕೋಟಿ ರೂ. ಸ್ವತ್ತು ವಾರಸುದಾರರಿಗೆ ಹಸ್ತಾಂತರ – Kannada News | Davangere police cracks 87 cases And assets worth rs 3 crore handed over to owners

ದಾವಣಗೆರೆ, (ಜುಲೈ 21): ದಾವಣಗೆರೆ ಜಿಲ್ಲಾ ಪೊಲೀಸರು ವಿವಿಧ ಠಾಣೆಗಳಲ್ಲಿ ದಾಖಲಾಗಿದ್ದ ಒಟ್ಟು 87 ಪ್ರಕರಣಗಳನ್ನು ಭೇದಿಸಿದ್ದು, ಒಂದೂವರೆ ಕೆ.ಜಿ ಚಿನ್ನಾಭರಣ, ಹದಿನೆಂಟು ಕೆ.ಜಿ ಬೆಳ್ಳಿ, ಕಾರು, ಮೊಬೈಲ್‌ ಸೇರಿದಂತೆ ಒಟ್ಟು 3.91 ಕೋಟಿ ರೂಪಾಯಿ ವಸ್ತುಗಳನ್ನ ವಶಕ್ಕೆ ಪಡೆದುಕೊಂಡು ವಾರಸುದಾರರಿಗೆ ಹಸ್ತಾಂತರಿಸಿದ್ದಾರೆ.‌ ಒಂದು ಅಂದರೆ 2025 ಡಿಸೆಂಬರ್ 20ರಿಂದ 2026 ಜುಲೈ 20ರ ತನಕ ಜಿಲ್ಲೆಯ ವಿವಿಧ ಠಾಣೆಗಳಲ್ಲಿ ವರದಿಯಾಗಿದ್ದ 87 ಪ್ರಕರಣಗಳನ್ನು ಭೇದಿಸಿರುವ ಪೊಲೀಸರು, ಮೂವರು ಅಂತಾರಾಜ್ಯ ಆರೋಪಿಗಳನ್ನು ಬಂಧಿಸಿದ್ದಾರೆ.

3.91 ಕೋಟಿ ರೂ ಮೌಲ್ಯದ ವಸ್ತುಗಳನ್ನು ಜಪ್ತಿ

ಇನ್ನು 3.91 ಕೋಟಿ ರೂ ಮೌಲ್ಯದ ವಸ್ತುಗಳನ್ನು ಜಪ್ತಿ ಮಾಡಿದ್ದು,  ಆ 1.66 ಕೆಜಿ ಚಿನ್ನ, 56.55 ಲಕ್ಷ ಮೌಲ್ಯದ ಮೊಬೈಲ್​ಗಳು, 18.56 ಕೆಜಿ ಬೆಳ್ಳಿ, 4 ಲಕ್ಷ ಮೌಲ್ಯದ ಕೃಷಿ ಸಾಮಗ್ರಿಗಳು 22.94 ಲಕ್ಷ ರೂ. ಮೌಲ್ಯದ 31 ವಾಹನಗಳು ವಶಕ್ಕೆ ಪಡೆದುಕೊಂಡಿದ್ದಾರೆ.

ಇದನ್ನೂ ಓದಿ: ಬೆಂಗಳೂರಿನಲ್ಲಿ 26.6 ಕೋಟಿ ಡ್ರಗ್ಸ್, ನಕಲಿ ನೋಟು ಪ್ರಿಂಟಿಂಗ್ ಜಾಲ ಭೇದಿಸಿದ ಪೊಲೀಸರು

2 ಸಾವಿರ ಹೆಲ್ಮೆಟ್, 85 ಸೈಲೆನ್ಸರ್, ಹಾರ್ನ್ಸ್, ಸ್ಪೀಕರ್ ಡಕ್ ನಾಶ ಸಂಚಾರ ನಿಯಮಗಳನ್ನು ಉಲ್ಲಂಘಿಸಿ ವಾಹನಗಳಿಗೆ ಅಳವಡಿಸಿದ್ದ ಕಳಪೆ ಗುಣಮಟ್ಟದ ಸುಮಾರು 2,000ಕ್ಕೂ ಹೆಚ್ಚು ಆಫ್ ಹೆಲ್ಮೆಟ್‌ಗಳು, ದ್ವಿಚಕ್ರ ವಾಹನಗಳಲ್ಲಿ ಆಳವಡಿಸಿಕೊಂಡಿದ್ದ ಕರ್ಕಶ ಧ್ವನಿ ಮಾಡುವ 85ಕ್ಕೂ ಹೆಚ್ಚು ಡಿಫೆಕ್ಟಿವ್ ಸೈಲೆನ್ಸರ್​​ಗಳು, ಇತರೆ ವಾಹನಗಳಲ್ಲಿ ಆಳವಡಿಸಿಕೊಂಡಿದ್ದ 25 ಹಾರ್ನ್​​ಗಳನ್ನು ಮತ್ತು 10 ಸ್ಪೀಕರ್ ಡಕ್‌ಗಳನ್ನು ಬುಲ್ಡೋಜರ್ ಮೂಲಕ ಎಸ್ಪಿ ಶೇಖರ್ ಹೆಚ್.ಟಿ. ಅವರ ಸಮ್ಮುಖದಲ್ಲಿ ಪೊಲೀಸರು ನಾಶಪಡಿಸಿದರು.

ಎಸ್ಪಿ ಶ್ಲಾಘನೆ

ಇನ್ನು ಈ ಬಗ್ಗೆ ಎಸ್ಪಿ ಶೇಖರ್ ಹೆಚ್.ಟಿ. ಅವರು ಮಾತನಾಡಿ, “ಜಿಲ್ಲಾ ಪೊಲೀಸ್ ವತಿಯಿಂದ ವಿವಿಧ ಠಾಣೆಗಳ ವ್ಯಾಪ್ತಿಯಲ್ಲಿ ವಶಕ್ಕೆ ಪಡೆದಿದ್ದ ವಸ್ತುಗಳು ಹಿಂದಿರುಗಿಸುವ ಕಾರ್ಯಕ್ರಮ ಹಮ್ಮಿಕೊಂಡಿದ್ದೆವು. ಈ ಪ್ರಾಪರ್ಟಿ ಪರೇಡ್‌ನಲ್ಲಿ ಜಪ್ತಿ ಪಡಿಸಿಕೊಂಡಿದ್ದ ಒಟ್ಟು 87 ಪ್ರಕರಣಗಳಿಗೆ ಸಂಬಂಧಿಸಿದಂತೆ 22.94 ಲಕ್ಷ ಮೌಲ್ಯದ ವಿವಿಧ ಮಾದರಿಯ 31 ವಾಹನಗಳು, 90.67 ಲಕ್ಷ ನಗದು ಹಣ, 2.17 ಕೋಟಿ ಮೌಲ್ಯದ 1668.314 ಗ್ರಾಂ ಬಂಗಾರದ ಆಭರಣಗಳು ಹಾಗು 18.569 ಕೆ.ಜಿ. ಬೆಳ್ಳಿ, ‌ಮೊಬೈಲ್, 56.55 ಲಕ್ಷ ರೂ. ಮೌಲ್ಯದ ವಿವಿಧ ಮಾದರಿಯ 377 ಮೊಬೈಲ್ ಪೋನ್‌ಗಳು, 4,87 ಲಕ್ಷ ಮೌಲ್ಯದ ಕೃಷಿ ಉಪಕರಣಗಳು, ಅಡಿಕೆ, ಬೋರವೆಲ್ ವೈರ್, ಮೋಟರ್ ಮತ್ತು ಇತರೆ ವಸ್ತುಗಳು ಸೇರಿ ಒಟ್ಟು 3,91,69,136 ಮೌಲ್ಯದ ಸ್ವತ್ತು ಕಳವು ಪ್ರಕರಣಗಳಲ್ಲಿನ ವಸ್ತುಗಳನ್ನು ವಶಕ್ಕೆ ಪಡೆದು ವಾರಸುದಾರಿಗೆ ಹಸ್ತಾಂತರ ಮಾಡಿದ್ದೇವೆ ಎಂದು ವಿವರಿಸಿದರು.

ಐಎಸ್ಐ ಮಾರ್ಕ್ ಇಲ್ಲದ ಆಫ್ ಹೆಲ್ಮೆಟ್​​ಗಳು, ಸೈಲೆನ್ಸರ್​​ಗಳು, ಕರ್ಕಶ ಶಬ್ದದ ಹಾರ್ನ್ ಹಾಗು ಡಕ್​​ಗಳನ್ನು ಬುಲ್ಡೋಜರ್ ಸಹಾಯದಿಂದ ನಾಶ ಪಡಿಸಲಾಗಿದೆ. ಎಲ್ಲಾ ಸಿಬ್ಬಂದಿಗೆ ಅಭಿನಂದನೆ‌ಗಳು, ಎಲ್ಲರೂ ಉತ್ತಮವಾಗಿ ಕೆಲಸ ಮಾಡಿದ್ದಾರೆ” ಎಂದು ಶ್ಲಾಘಿಸಿದರು.

ಕರ್ನಾಟಕದ ಮತ್ತಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

Source link

National Flag Day 2026: ತ್ರಿವರ್ಣ ಧ್ವಜ ಭಾರತದ ಹೆಮ್ಮೆಯ ಸಂಕೇತ – Kannada News | National Flag Day 2026: What is the purpose of National Flag Day?

ರಾಷ್ಟ್ರೀಯ ಧ್ವಜ ದಿನImage Credit source: Getty Images

ತ್ರಿವರ್ಣ ಧ್ವಜವು (National Flag) ಕೇವಲ ಧ್ವಜವಲ್ಲ, ಅದು ಭಾರತದ ಸ್ವಾತಂತ್ರ್ಯ, ಏಕತೆ, ಪ್ರಜಾಪ್ರಭುತ್ವ ಮೌಲ್ಯಗಳು ಮತ್ತು ಶೌರ್ಯ, ತ್ಯಾಗದ ಅಮರ ಸಂಕೇತವಾಗಿದೆ. ತ್ರಿವರ್ಣ ಧ್ವಜವನ್ನು ನೋಡಿದಾಗ ಪ್ರತಿಯೊಬ್ಬರ ಭಾರತೀಯರಲ್ಲೂ ದೇಶಭಕ್ತಿಯ ಭಾವನೆ ಜಾಗೃತಗೊಳ್ಳುತ್ತದೆ. ಭಾರತ ಮಾತೆಯನ್ನು ಸ್ವತಂತ್ರಗೊಳಿಸಲು ತಮ್ಮ ಸರ್ವಸ್ವವನ್ನೂ ತ್ಯಾಗ ಮಾಡಿದ ಲಕ್ಷಾಂತರ ಸ್ವಾತಂತ್ರ್ಯ ಹೋರಾಟಗಾರರ ತ್ಯಾಗ, ಹೋರಾಟ ಮತ್ತು ಬಲಿದಾನವನ್ನು ಇದು ನೆನಪಿಸುತ್ತದೆ. ತ್ರಿವರ್ಣ ಧ್ವಜವು ಆಕಾಶದೆತ್ತರ ಹಾರಿದಾಗಲೆಲ್ಲಾ, ಇದು ಭಾರತದ ಏಕತೆ, ಸಮಗ್ರತೆ ಮತ್ತು ಪ್ರಜಾಪ್ರಭುತ್ವ ಮೌಲ್ಯಗಳನ್ನು ರಕ್ಷಿಸುವುದು ಅತ್ಯುನ್ನತವಾದುದು ಎಂಬ ಸಂದೇಶವನ್ನು ರವಾನಿಸುತ್ತದೆ. ತ್ರಿವರ್ಣ ಧ್ವಜದ ಈ ಮಹತ್ವ ಮತ್ತು ಭಾರತವು ಈ ತ್ರಿವರ್ಣ ಧ್ವಜವನ್ನು ಅಳವಡಿಸಿಕೊಂಡ ದಿನವನ್ನು ಗೌರವಿಸುವ ಸಲುವಾಗಿ ಪ್ರತಿವರ್ಷ ಜುಲೈ 22 ರಂದು ರಾಷ್ಟ್ರೀಯ ಧ್ವಜ ದಿನವನ್ನು ಆಚರಿಸಲಾಗುತ್ತದೆ.

ರಾಷ್ಟ್ರೀಯ ಧ್ವಜ ದಿನದ ಇತಿಹಾಸವೇನು?

ಆಗಸ್ಟ್ 15, 1947 ರಂದು ಬ್ರಿಟಿಷ್ ಆಳ್ವಿಕೆಯಿಂದ ದೇಶ ಸ್ವಾತಂತ್ರ್ಯ ಪಡೆಯುವ ಕೆಲವೇ ದಿನಗಳ ಮೊದಲು, ಸಂವಿಧಾನ ಸಭೆಯು ಜುಲೈ 22, 1947 ರಂದು ಅಧೀಕೃತವಾಗಿ ತ್ರಿವರ್ಣ ಧ್ವಜವನ್ನು ಭಾರತದ ರಾಷ್ಟ್ರೀಯ ಧ್ವಜವಾಗಿ ಅಂಗೀಕರಿಸಿತು. ಭಾರತದ ರಾಷ್ಟ್ರೀಯ ಧ್ವಜವನ್ನು ಅಳವಡಿಸಿಕೊಂಡದ್ದನ್ನು ಸ್ಮರಿಸುವ ಸಲುವಾಗಿ ನಮ್ಮ ದೇಶದಲ್ಲಿ ಪ್ರತಿವರ್ಷ ಜುಲೈ  22 ರಂದು ರಾಷ್ಟ್ರೀಯ ಧ್ವಜ ದಿನವನ್ನು ಆಚರಿಸಲಾಗುತ್ತದೆ. ಮಾಹಿತಿಗಳ ಪ್ರಕಾರ, ಭಾರತದ ಏಕತೆ, ಸಮಗ್ರತೆ ಮತ್ತು ಸಾರ್ವಭೌಮತ್ವದ ಸಂಕೇತವನ್ನು ಗೌರವಿಸುವ ಈ ದಿನವು ಹೆಚ್ಚಿನ  ಮಹತ್ವವನ್ನು ಹೊಂದಿದೆ.

ರಾಷ್ಟ್ರೀಯ ಧ್ವಜ ದಿನದ ಮಹತ್ವವೇನು?

  • ರಾಷ್ಟ್ರೀಯ ಧ್ವಜ ದಿನವು ಕೇವಲ ಧ್ವಜವನ್ನು ಗೌರವಿಸುವ ದಿನವಲ್ಲ, ಇದು ಭಾರತದ ಸ್ವಾತಂತ್ರ್ಯ ಹೋರಾಟಕ್ಕೆ ಸಂಬಂಧಿಸಿದ ಮೌಲ್ಯಗಳು ಮತ್ತು ತ್ಯಾಗಗಳನ್ನು ನಾವೆಲ್ಲರೂ ಸ್ಮರಿಸಲು ಒಂದು ಅವಕಾಶವಾಗಿ ಕಾರ್ಯನಿರ್ವಹಿಸುತ್ತದೆ.
  • ರಾಷ್ಟ್ರೀಯ ಧ್ವಜ ದಿನವು ದೇಶದ ಶ್ರೀಮಂತ ಪರಂಪರೆ, ವೈವಿಧ್ಯಮಯ ಸಂಸ್ಕೃತಿ ಹಾಗೂ ನಮ್ಮ ದೇಶ ಪ್ರಗತಿ ಮತ್ತು ಏಕತೆಯ ಕಡೆಗೆ ನಡೆಯುತ್ತಿರುವ ಪ್ರಯಾಣವನ್ನು ಪ್ರತಿನಿಧಿಸುತ್ತದೆ.
  • ರಾಷ್ಟ್ರೀಯ ಧ್ವಜ ದಿನವು ಕೇವಲ ಒಂದು ಐತಿಹಾಸಿಕ ಘಟನೆಯ ಸ್ಮರಣೆಯಲ್ಲ, ಬದಲಾಗಿ ಪ್ರತಿಯೊಬ್ಬ ಭಾರತೀಯನಿಗೂ ನಮ್ಮ ರಾಷ್ಟ್ರೀಯ ಧ್ವಜದ ಮಹತ್ವ ಮತ್ತು ಗೌರವದ ಬಗ್ಗೆ ಅರಿವು ಮೂಡಿಸುವ ಸಂದರ್ಭವಾಗಿದೆ.
  • ಹೊಸ ಪೀಳಿಗೆಗಳಿಗೆ ತ್ರಿವರ್ಣ ಧ್ವಜದ ಇತಿಹಾಸ ಮತ್ತು ಪರಂಪರೆಯನ್ನು ಪರಿಚಯಿಸುವುದು, ರಾಷ್ಟ್ರೀಯ ಏಕತೆ ಮತ್ತು ಸಮಗ್ರತೆಯ ಚೈತನ್ಯವನ್ನು ಬಲಪಡಿಸುವುದು, ಸ್ವಾತಂತ್ರ್ಯ ಹೋರಾಟಗಾರರ ತ್ಯಾಗಗಳನ್ನು ಸ್ಮರಿಸುವುದು, ಸಂವಿಧಾನ ಮತ್ತು ಪ್ರಜಾಪ್ರಭುತ್ವ ಮೌಲ್ಯಗಳಿಗೆ ಗೌರವವನ್ನು ಬೆಳೆಸುವುದು ಮತ್ತು ದೇಶಭಕ್ತಿ ಮತ್ತು ನಾಗರಿಕ ಕರ್ತವ್ಯದ ಬಗ್ಗೆ ಜಾಗೃತಿ ಮೂಡಿಸುವುದು ಈ ದಿನದ ಉದ್ದೇಶವಾಗಿದೆ.

ಇದನ್ನೂ ಓದಿ: ಅಂತಾರಾಷ್ಟ್ರೀಯ ಚೆಸ್ ದಿನದ ಇತಿಹಾಸ, ಮಹತ್ವ ತಿಳಿಯಿರಿ

ತ್ರಿವರ್ಣ ಧ್ವಜದ ವಿನ್ಯಾಸ ಮತ್ತು ಅದರ ಬಣ್ಣಗಳ ಮಹತ್ವ:

” ತಿರಂಗ ” ಎಂದು ಕರೆಯಲ್ಪಡುವ ಭಾರತ ರಾಷ್ಟ್ರ ಧ್ವಜವು ಸಮಾನ ಅಗಲದ ಮೂರು ಅಡ್ಡ ಪಟ್ಟೆಗಳನ್ನು ಹೊಂದಿದೆ. ಬಿಳಿ ಪಟ್ಟಿಯ ಮಧ್ಯದಲ್ಲಿ 24 ಕಡ್ಡಿಗಳನ್ನು ಹೊಂದಿರುವ ಕಡು ನೀಲಿ ಅಶೋಕ ಚಕ್ರವಿದೆ. ಮತ್ತು ಈ ತ್ರಿವರ್ಣ ಧ್ವಜವು  2:3 ಅನುಪಾತದಲ್ಲಿವೆ. ಈ ವಿನ್ಯಾಸವು ಆಳವಾದ ಸಂಕೇತಗಳನ್ನು ಹೊಂದಿದ್ದು, ಭಾರತೀಯ ರಾಷ್ಟ್ರದ ಮೌಲ್ಯಗಳು ಮತ್ತು ಆಕಾಂಕ್ಷೆಗಳನ್ನು ಪ್ರತಿಬಿಂಬಿಸುತ್ತದೆ. ತ್ರಿವರ್ಣ ಧ್ವಜದಲ್ಲಿರುವ ಕೇಸರಿ ಬಣ್ಣವು ಧೈರ್ಯ, ತ್ಯಾಗ ಮತ್ತು ರಾಷ್ಟ್ರದ ಮೇಲಿನ ಭಕ್ತಿಯನ್ನು ಸಂಕೇತಿಸುತ್ತದೆ. ಬಿಳಿ ಬಣ್ಣವು  ಶಾಂತಿ, ಸತ್ಯವನ್ನು ಸಂಕೇತಿಸುತ್ತದೆ, ಮತ್ತು ಹಸಿರು ಬಣ್ಣವು ಸಮೃದ್ಧಿ, ಅಭಿವೃದ್ಧಿ ಮತ್ತು ಶುಭದ ಸಂಕೇತವಾಗಿದೆ. ಇನ್ನೂ ತ್ರಿವರ್ಣ ಧ್ವಜದ ಮಧ್ಯದಲ್ಲಿರುವ ಅಶೋಕ ಚಕ್ರವು ಧೈರ್ಯ, ತಾಳ್ಮೆ, ಸ್ವಯಂ ತ್ಯಾಗ, ಸತ್ಯತೆ, ಸದಾಚಾರ, ಪ್ರೀತಿ, ಆಧ್ಯಾತ್ಮಿಕ ಜ್ಞಾನ, ನೈತಿಕತೆ, ಕಲ್ಯಾಣ, ಉದ್ಯಮ, ಸಮೃದ್ಧಿ ಮತ್ತು ನಂಬಿಕೆಯಂತಹ ತತ್ವಗಳನ್ನು ಪ್ರತಿನಿಧಿಸುತ್ತವೆ. ಅಲ್ಲದೆ ಅಶ್ರೋಕ ಚಕ್ರದ ಕಡ್ಡಿಗಳು ದಿನದ ಇಪ್ಪತ್ತನಾಲ್ಕು ಗಂಟೆಗಳನ್ನು ಪ್ರತಿನಿಧಿಸುವುದರಿಂದ ಇದನ್ನು ಸಮಯದ ಚಕ್ರ ಎಂದೂ ಸಹ ಕರೆಯಲಾಗುತ್ತದೆ.

ತ್ರಿವರ್ಣ ಧ್ವಜವನ್ನು ಹಾರಿಸುವಾಗ, ಇಳಿಸುವಾಗ ಪಾಲಿಸಬೇಕಾದ ನಿಯಮಗಳೇನು?

  • ಧ್ವಜವನ್ನು ಯಾವಾಗಲೂ ಗೌರವಯುತವಾಗಿ ಹಾರಿಸಬೇಕು ಮತ್ತು ಘನತೆಯಿಂದ ನಿಧಾನವಾಗಿ ಕೆಳಗಿಳಿಸಬೇಕು. ಕೆಳಗಿಳಿಸಿದ ನಂತರ ಅದನ್ನು ಮಡಚಿ ಸುರಕ್ಷಿತ ಸ್ಥಳದಲ್ಲಿಡಬೇಕು.
  •  ತ್ರಿವರ್ಣ ಧ್ವಜವನ್ನು ಎಂದಿಗೂ ತಲೆ ಕೆಳಗಾಗಿ ಪ್ರದರ್ಶಿಸಬಾರದು. ಮೇಲಿನ ಫಲಕದ ಬಣ್ಣವು ಕೇಸರಿ, ಮಧ್ಯ ಬಿಳಿ ಮತ್ತು ಕೆಳಗಿನ ಫಲಕವು ಹಸಿರು ಬಣ್ಣದ್ದಾಗಿರಬೇಕು.
  • ಹಾನಿಗೊಳಗಾದ ಅಥವಾ ಸ್ವಚ್ಛವಾಗಿರದ ಧ್ವಜವನ್ನು ಎಂದಿಗೂ ಪ್ರದರ್ಶಿಸಬಾರದು. ನೀವು ಹಾರಿಸುವ ರಾಷ್ಟ್ರ ಧ್ವಜ ಪರಿಪೂರ್ಣ ಸ್ಥಿತಿಯಲ್ಲಿ ಇರಬೇಕು.
  • ಧ್ವಜ ಸಂಹಿತೆಯ ಪ್ರಕಾರ, ಕೈಯಿಂದ ನೇಯ್ದ, ಯಂತ್ರದಿಂದ ತಯಾರಿಸಿದ ಹತ್ತಿ, ಪಾಲಿಯೆಸ್ಟರ್, ಉಣ್ಣೆ ಅಥವಾ ರೇಷ್ಮೆ ಖಾದಿ ಬಂಟಿಂಗ್‌ನಿಂದ ತಯಾರಿಸಿದ ರಾಷ್ಟ್ರ ಧ್ವಜಗಳನ್ನು ಹಾರಿಸಬಹುದು.
  • ಧ್ವಜದ ಗಾತ್ರ ಏನೇ ಇರಲಿ ಧ್ವಜ ಸಂಹಿತೆಯ ಪ್ರಕಾರ ತ್ರಿವರ್ಣ ಧ್ವಜ 3:2 ಅನುಪಾತದಲ್ಲಿರಬೇಕು. ಮತ್ತು ಧ್ವಜದ ಮಧ್ಯ ಭಾಗವು 24 ಸಮಾನ ಅಂತರದ ಗೆರೆಗಳೊಂದಿಗೆ ಕಡು ನೀಲಿ ಬಣ್ಣದಲ್ಲಿನ ಅಶೋಕ ಚಕ್ರವನ್ನು ಹೊಂದಿರಬೇಕು.
  • ಒಂದು ವೇಳೆ ತ್ರಿವರ್ಣ ಧ್ವಜ ಹಾನಿಗೊಳಗಾದರೆ ಅದನ್ನು ಕಸದ ಬುಟ್ಟಿ ಅಥವಾ ಇನ್ನಾವುದೇ ಸ್ಥಳದಲ್ಲಿ ಎಸೆಯಬಾರದು ಬದಲಿಗೆ ಗೌರವಯುತವಾಗಿ ಸುಡಬೇಕು ಅಥವಾ ಹೂಳಬೇಕು. ಸುಟ್ಟ ನಂತರ ಆ ಬೂದಿಯನ್ನು ನದಿ ನೀರಿನಲ್ಲಿ ಬಿಡಬೇಕು.
  • ಧ್ವಜವನ್ನು ಸಾರ್ವಜನಿಕವಾಗಿ ಉದ್ದೇಶಪೂರ್ವಕವಾಗಿ ಹರಿದು ಹಾಕಬಾರದು, ಸುಡಬಾರದು ಅಥವಾ ವಿರೂಪಗೊಳಿಸಬಾರದು, ಏಕೆಂದರೆ ಇದು ಅಪರಾಧವಾಗಿದೆ.

ಜೀವನಶೈಲಿ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On – 9:49 pm, Tue, 21 July 26

Source link

ನೇರಳೆ ಹಣ್ಣು ತಿಂದರೆ ನಿಜವಾಗಿಯೂ ಡಯಾಬಿಟಿಸ್ ನಿಯಂತ್ರಿಸಬಹುದೇ? – Kannada News | Jamun and Diabetes: Benefits, Risks and Scientific Facts

ಬೇಸಿಗೆ ಮತ್ತು ಮಳೆಗಾಲದಲ್ಲಿ ಹೆಚ್ಚು ಲಭ್ಯವಾಗುವ ಜಾಮೂನ್ ಹಣ್ಣು ಅಥವಾ ನೇರಳೆ ಹಣ್ಣು (Jamun/Black Plum) ತನ್ನ ವಿಶಿಷ್ಟ ರುಚಿಯ ಜೊತೆಗೆ ಆರೋಗ್ಯಕ್ಕೂ ಹಲವು ಪ್ರಯೋಜನಗಳನ್ನು ನೀಡುತ್ತದೆ. ವಿಶೇಷವಾಗಿ, ನೇರಳೆ ಹಣ್ಣು ತಿಂದರೆ ಮಧುಮೇಹ (ಡಯಾಬಿಟಿಸ್) ನಿಯಂತ್ರಣಕ್ಕೆ ಬರುತ್ತದೆ ಎಂಬ ನಂಬಿಕೆ ವರ್ಷಗಳಿಂದ ಜನರಲ್ಲಿ ಇದೆ. ಕೆಲವರು ಈ ಹಣ್ಣಿನ ಬೀಜವನ್ನು ಒಣಗಿಸಿ ಪುಡಿ ಮಾಡಿ ನೀರಿನಲ್ಲಿ ಬೆರೆಸಿ ಸೇವಿಸಿದರೆ ರಕ್ತದಲ್ಲಿನ ಸಕ್ಕರೆ ಪ್ರಮಾಣ ಕಡಿಮೆಯಾಗುತ್ತದೆ ಎಂದು ನಂಬುತ್ತಾರೆ. ಆದರೆ, ಈ ನಂಬಿಕೆ ಎಷ್ಟರ ಮಟ್ಟಿಗೆ ಸತ್ಯ ಮತ್ತು ಈ ಬಗ್ಗೆ ತಜ್ಞರ ಅಭಿಪ್ರಾಯವೇನು ಎಂಬುದನ್ನು ಸ್ಟೋರಿ ಮೂಲಕ ತಿಳಿದುಕೊಳ್ಳಿ.

ಕೈಲಾಶ್ ದೀಪಕ್ ಆಸ್ಪತ್ರೆಯ ಎಂಡೋಕ್ರಿನಾಲಜಿ ತಜ್ಞ ಡಾ. ನಿಶಾಂತ್ ಜೈನ್ ಅವರ ಪ್ರಕಾರ, ನೇರಳೆ ಹಣ್ಣು ಮಧುಮೇಹಿಗಳಿಗೆ ಆರೋಗ್ಯಕರ ಆಹಾರದ ಭಾಗವಾಗಬಹುದು. ಆದರೆ ಇದು ಮಧುಮೇಹಕ್ಕೆ ಔಷಧಿಯಲ್ಲ ಮತ್ತು ವೈದ್ಯರು ಸೂಚಿಸಿದ ಔಷಧಿ ಅಥವಾ ಇನ್ಸುಲಿನ್‌ಗೆ ಪರ್ಯಾಯವೂ ಅಲ್ಲ ಎಂದು ಅವರು ಸ್ಪಷ್ಟಪಡಿಸುತ್ತಾರೆ.

ನೇರಳೆ ಹಣ್ಣಿನಲ್ಲಿರುವ ಪೋಷಕಾಂಶಗಳು

  • ವಿಟಮಿನ್ C
  • ಆಹಾರ ನಾರು (Fiber)
  • ಪೊಟ್ಯಾಸಿಯಮ್
  • ಮೆಗ್ನೀಷಿಯಮ್
  • ಕಬ್ಬಿಣ (Iron)
  • ಆಂಥೋಸಯಾನಿನ್ (Anthocyanins)
  • ಫ್ಲೇವನಾಯ್ಡ್ಸ್ (Flavonoids)
  • ಎಲ್ಯಾಜಿಕ್ ಆಸಿಡ್ (Ellagic Acid)
  • ಜ್ಯಾಂಬೋಲಿನ್ (Jamboline)

ಇವುಗಳು ಶಕ್ತಿಶಾಲಿ ಆಂಟಿಆಕ್ಸಿಡೆಂಟ್‌ಗಳಾಗಿ ಕಾರ್ಯನಿರ್ವಹಿಸಿ ದೇಹದ ಕೋಶಗಳನ್ನು ಆಕ್ಸಿಡೇಟಿವ್ ಸ್ಟ್ರೆಸ್‌ನಿಂದ ರಕ್ಷಿಸಲು ಸಹಾಯ ಮಾಡುತ್ತವೆ. ಮಧುಮೇಹ ಇರುವವರಲ್ಲಿ ಈ ರೀತಿಯ ಕೋಶ ಹಾನಿ ಹೆಚ್ಚಾಗಿ ಕಂಡುಬರುವ ಸಾಧ್ಯತೆ ಇದೆ.

ನೇರಳೆ ಹಣ್ಣು ರಕ್ತದಲ್ಲಿನ ಸಕ್ಕರೆಯನ್ನು ಹೇಗೆ ನಿಯಂತ್ರಿಸಲು ಸಹಾಯ ಮಾಡಬಹುದು?

ಕೆಲವು ಆರಂಭಿಕ ಅಧ್ಯಯನಗಳ ಪ್ರಕಾರ, ನೇರಳೆ ಹಣ್ಣಿನಲ್ಲಿರುವ ಕೆಲವು ನೈಸರ್ಗಿಕ ಸಂಯುಕ್ತಗಳು ಆಹಾರದಲ್ಲಿನ ಪಿಷ್ಟ (Starch) ಸಕ್ಕರೆಯಾಗಿ ಪರಿವರ್ತನೆಯಾಗುವ ವೇಗವನ್ನು ನಿಧಾನಗೊಳಿಸಬಹುದು. ಜೊತೆಗೆ, ದೇಹದಲ್ಲಿ ಇನ್ಸುಲಿನ್ ಪರಿಣಾಮಕಾರಿಯಾಗಿ ಕೆಲಸ ಮಾಡಲು ಸಹಾಯ ಮಾಡುವ ಸಾಧ್ಯತೆಯೂ ಇದೆ. ಇದಲ್ಲದೆ, ನೇರಳೆ ಹಣ್ಣಿನ ಗ್ಲೈಸೆಮಿಕ್ ಇಂಡೆಕ್ಸ್ (GI) ಕಡಿಮೆ ಇರುತ್ತದೆ. ಜೊತೆಗೆ ಇದರಲ್ಲಿ ಫೈಬರ್ ಅಂಶ ಅಧಿಕವಾಗಿ ಇರುವುದರಿಂದ ಊಟದ ನಂತರ ರಕ್ತದಲ್ಲಿನ ಸಕ್ಕರೆ ತಕ್ಷಣ ಏರಿಕೆಯಾಗುವುದಿಲ್ಲ.
ಇದರಿಂದ ಮಧುಮೇಹ ನಿಯಂತ್ರಣಕ್ಕೆ ಸಹಾಯಕವಾಗುವ ಸಾಧ್ಯತೆ ಇದೆ. ಆದರೆ, ಇದನ್ನು ಖಚಿತಪಡಿಸಲು ಇನ್ನೂ ದೊಡ್ಡ ಪ್ರಮಾಣದ ಅಧ್ಯಯನಗಳು ಅಗತ್ಯವಿದೆ ಎಂದು ತಜ್ಞರು ಹೇಳಿದ್ದಾರೆ.

ನೇರಳೆ ಹಣ್ಣಿನ ಬೀಜದ ಪುಡಿ ನಿಜವಾಗಿಯೂ ಪ್ರಯೋಜನಕಾರಿಯೇ?

ಆಯುರ್ವೇದ ಮತ್ತು ಸಾಂಪ್ರದಾಯಿಕ ವೈದ್ಯಕೀಯ ಪದ್ಧತಿಯಲ್ಲಿ ನೇರಳೆ ಹಣ್ಣಿನ ಬೀಜದ ಪುಡಿಯನ್ನು ಮಧುಮೇಹ ನಿಯಂತ್ರಣಕ್ಕೆ ಬಳಸಲಾಗುತ್ತದೆ. ಆದರೆ ಇದನ್ನು ಬೆಂಬಲಿಸುವ ಬಲವಾದ ವೈಜ್ಞಾನಿಕ ಸಾಕ್ಷ್ಯಗಳು ಇನ್ನೂ ಸೀಮಿತವಾಗಿವೆ. ಆದ್ದರಿಂದ ವೈದ್ಯರ ಸಲಹೆ ಇಲ್ಲದೆ ಜಾಂಬು ಬೀಜದ ಪುಡಿಯನ್ನು ಔಷಧಿಯಂತೆ ಬಳಸುವುದು ಸೂಕ್ತವಲ್ಲ.

ಇದನ್ನೂ ಓದಿ: ವೀಳ್ಯದೆಲೆಯ ಆರೋಗ್ಯ ರಹಸ್ಯ: ತಲೆನೋವು, ಗ್ಯಾಸ್, ಬಾಯಿ ದುರ್ವಾಸನೆಗೆ ನೈಸರ್ಗಿಕ ಪರಿಹಾರ

ಹೆಚ್ಚು ನೇರಳೆ ಹಣ್ಣು ತಿಂದರೆ ಏನಾಗಬಹುದು?

  • ಮಲಬದ್ಧತೆ
  • ಹೊಟ್ಟೆ ಉಬ್ಬರ
  • ಅಜೀರ್ಣ
  • ಹೊಟ್ಟೆ ನೋವಿನಂತಹ ಸಮಸ್ಯೆಗಳು ಕಾಣಿಸಬಹುದು.

ಮಧುಮೇಹಕ್ಕೆ ಈಗಾಗಲೇ ಔಷಧಿ ಅಥವಾ ಇನ್ಸುಲಿನ್ ತೆಗೆದುಕೊಳ್ಳುತ್ತಿರುವವರು ನೇರಳೆ ಹಣ್ಣನ್ನು ಮಿತವಾಗಿ ಸೇವಿಸಬೇಕು. ಅಗತ್ಯವಿದ್ದರೆ ವೈದ್ಯರ ಸಲಹೆ ಪಡೆಯುವುದು ಉತ್ತಮ.

ನೇರಳೆ ಹಣ್ಣು ತಿನ್ನುವಾಗ ಗಮನಿಸಬೇಕಾದ ವಿಷಯಗಳು:

  • ಖಾಲಿ ಹೊಟ್ಟೆಯಲ್ಲಿ ನೇರಳೆ ಹಣ್ಣು ತಿನ್ನಬೇಡಿ.
  • ಹಾಲಿನೊಂದಿಗೆ ಅಥವಾ ಹಾಲು ಕುಡಿಯುವ ಮೊದಲು/ತಕ್ಷಣದ ನಂತರ ನೇರಳೆ ಹಣ್ಣು ಸೇವಿಸಬೇಡಿ.
  • ಒಂದು ಬಾರಿ ಸುಮಾರು 8–10 ನೇರಳೆ ಹಣ್ಣು (ಸುಮಾರು 75–100 ಗ್ರಾಂ) ಸಾಕಾಗಬಹುದು. ನಿಮ್ಮ ಆರೋಗ್ಯ ಸ್ಥಿತಿಗೆ
  • ಅನುಗುಣವಾಗಿ ವೈದ್ಯರು ಅಥವಾ ಪೌಷ್ಟಿಕ ತಜ್ಞರ ಸಲಹೆ ಪಡೆಯಿರಿ.
  • ತಾಜಾ ಹಣ್ಣನ್ನೇ ಸೇವಿಸುವುದು ಉತ್ತಮ.

ಈ ಕ್ರಮಗಳನ್ನು ಕಡ್ಡಾಯವಾಗಿ ಪಾಲಿಸಬೇಕು:

  • ಸಮತೋಲನ ಆಹಾರ ಸೇವನೆ
  • ಪ್ರತಿದಿನ ವ್ಯಾಯಾಮ
  • ನಿಯಮಿತವಾಗಿ ರಕ್ತದಲ್ಲಿನ ಸಕ್ಕರೆ ಪರೀಕ್ಷೆ
  • ವೈದ್ಯರು ಸೂಚಿಸಿದ ಔಷಧಿಗಳನ್ನು ಸರಿಯಾಗಿ ಸೇವಿಸುವುದು
  • ಆರೋಗ್ಯಕರ ಜೀವನಶೈಲಿ ಅನುಸರಿಸುವುದು

ಸೂಚನೆ: ಈ ಲೇಖನವು ಆರೋಗ್ಯ ಜಾಗೃತಿಗಾಗಿ ಮಾತ್ರ. ಮಧುಮೇಹ ಅಥವಾ ಇತರ ಆರೋಗ್ಯ ಸಮಸ್ಯೆಗಳಿಗೆ ಸಂಬಂಧಿಸಿದ ಯಾವುದೇ ನಿರ್ಧಾರ ಕೈಗೊಳ್ಳುವ ಮೊದಲು ಅರ್ಹ ವೈದ್ಯರ ಸಲಹೆ ಪಡೆಯಿರಿ.

ಆರೋಗ್ಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

ಪತ್ರಕರ್ತ ಜಯಪ್ರಕಾಶ್ ಶೆಟ್ಟಿ ನಟನೆಯ ‘ಬನ’ ಸಿನಿಮಾದ ರಿಲೀಸ್ ದಿನಾಂಕ ಘೋಷಣೆ – Kannada News | Journalists Jayaprakash Shetty Bana Movie Release Date Announced

ನಿರೀಕ್ಷೆ ಮೂಡಿಸಿರುವ ‘ಬನ’ (Bana) ಸಿನಿಮಾದ ಬಿಡುಗಡೆ ದಿನಾಂಕ ಘೋಷಣೆಯಾಗಿದೆ. ಈ ಸಿನಿಮಾ ತುಳು (Tulu) ಮತ್ತು ಕನ್ನಡ ಭಾಷೆಗಳಲ್ಲಿ ಅಕ್ಟೊಬರ್ 23ರಂದು ಬಿಡುಗಡೆಯಾಗಲಿದೆ. ಬಹಳ ವರ್ಷಗಳ ನಂತರ ನಾಗ ಕಥೆಯ ಚಿತ್ರವೊಂದು ಬರುತ್ತಿದ್ದು ತುಳು ಚಿತ್ರರಂಗದ ಇತಿಹಾಸದಲ್ಲೇ ನಾಗ ಕಥೆಯನ್ನು ಹೊಂದಿರುವ ಮೊದಲ ಚಿತ್ರ ಇದು ಎನ್ನಲಾಗಿದೆ. ಸುದ್ದಿ ನಿರೂಪಕ, ಪತ್ರಕರ್ತ ಜಯಪ್ರಕಾಶ್ ಶೆಟ್ಟಿ (Jayaprakash Shetty) ಅವರು ನಟಿಸಿದ್ದಾರೆ ಎಂಬುದು ಈ ಸಿನಿಮಾದ ವಿಶೇಷ.

‘ಬನ’ ಚಿತ್ರದ ಟ್ರೇಲರ್ ಈ ವರ್ಷ ನಾಗರ ಪಂಚಮಿ ಹಬ್ಬದ ದಿನ ಬಿಡುಗಡೆ ಆಗಲಿದೆ. ತುಳುವಿನ ಈ ಸಿನಿಮಾದಲ್ಲಿ ಹಿರಿಯ ಪತ್ರಕರ್ತ ಜಯಪ್ರಕಾಶ್ ಶೆಟ್ಟಿ ಅವರು ಇದೇ ಮೊದಲ ಬಾರಿಗೆ ಅಭಿನಯಿಸಿದ್ದಾರೆ. ರಾಷ್ಟ್ರ ಪ್ರಶಸ್ತಿ ವಿಜೇತ ಕಲಾವಿದೆ ರೂಪಾ ವರ್ಕಡಿ ಅವರು ಮುಖ್ಯ ಪಾತ್ರವನ್ನು ನಿರ್ವಹಿಸಿದ್ದಾರೆ. ‘ಈಶಿ ಪ್ರೊಡಕ್ಷನ್’ ಬ್ಯಾನರ್ ಮೂಲಕ ಮನೋಹರ್ ರೈ ವೈಪಾಲ ಅವರು ಈ ಚಿತ್ರವನ್ನು ನಿರ್ಮಾಣ ಮಾಡಿದ್ದಾರೆ.

ನಿತಿನ್ ರೈ ಕುಕ್ಕುವಳ್ಳಿ ನುಳಿಯಾಲು ಅವರು ‘ಬನ’ ಸಿನಿಮಾವನ್ನು ನಿರ್ದೇಶಿಸಿದ್ದಾರೆ. ತುಳುನಾಡಿನಲ್ಲಿ ನಾಗಾರಾಧನೆ ಹೆಚ್ಚು ಆಚರಣೆಯಲ್ಲಿದೆ. ಈಗ ಅದೇ ವಿಚಾರದ ಕುರಿತು ‘ಬನ’ ಸಿನಿಮಾ ಮೂಡಿಬರುತ್ತಿದೆ. ಈ ಚಿತ್ರದ ಕಥೆ ಹೇಗಿರಬಹುದು ಎಂಬುದನ್ನು ತಿಳಿಯುವ ಕೌತುಕ ಮೂಡಿದೆ. ಜಯಪ್ರಕಾಶ್ ಶೆಟ್ಟಿ ನಟಿಸಿರುವ ಕಾರಣದಿಂದ ಅವರ ಅಭಿಮಾನಿಗಳಿಗೂ ಸಿನಿಮಾ ಮೇಲೆ ನಿರೀಕ್ಷೆ ಹೆಚ್ಚಿದೆ.

ಇದನ್ನೂ ಓದಿ: ಸಂಭಾವನೆ ಪಡೆಯದೇ ತುಳು ಸಿನಿಮಾದಲ್ಲಿ ನಟಿಸಿದ ಸುನೀಲ್ ಶೆಟ್ಟಿ

ಕನ್ನಡದ ಅನೇಕ ಪ್ರತಿಷ್ಠಿತ ಮಾಧ್ಯಮ ಸಂಸ್ಥೆಗಳಲ್ಲಿ ಜಯಪ್ರಕಾಶ್ ಶೆಟ್ಟಿ ಅವರು ಕೆಲಸ ಮಾಡಿದ್ದಾರೆ. ಆ ಮೂಲಕ ಅವರು ಕರ್ನಾಟಕದಲ್ಲಿ ಮನೆಮಾತಾಗಿದ್ದಾರೆ. ‘ಬನ’ ಚಿತ್ರದಲ್ಲಿ ಅವರ ಪಾತ್ರದ ಬಗ್ಗೆ ಜನರಿಗೆ ಕೌತುಕ ಮೂಡಿದೆ. ಬಿಡುಗಡೆ ಆಗಿರುವ ಪೋಸ್ಟರ್ ನೋಡಿದರೆ ಕಥೆಯ ಬಗ್ಗೆ ಕುತೂಹಲ ಹೆಚ್ಚುವಂತಿದೆ. ಟ್ರೇಲರ್ ನೋಡಲು ಸಿನಿಪ್ರಿಯರು ಕಾದಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Source link

ಬಡವರ ಹೊಟ್ಟೆಗೆ ಕನ್ನ ಹಾಕಿದ ಮಾಜಿ ಜಿ.ಪಂ ಸದಸ್ಯನ ಮಗ: ಯಾದಗಿರಿಯಲ್ಲಿ ಬಟಾ ಬಯಲಾಯ್ತು ಅಕ್ರಮ ಅಕ್ಕಿ ದಂಧೆ – Kannada News | Karnataka Annabhagya Scam: Yadgir Officials Raid Illegal Rice Godown

ಯಾದಗಿರಿ, ಜು.21: ಬಡವರ ಹೊಟ್ಟೆ ತುಂಬಿಸಬೇಕಿದ್ದ ಸರ್ಕಾರದ ‘ಅನ್ನಭಾಗ್ಯ’ ಯೋಜನೆಯ ಅಕ್ಕಿ ದಂದೆಕೋರರ ಪಾಲಾಗುತ್ತಿರುವ ಗಂಭೀರ ಪ್ರಕರಣವೊಂದು ಯಾದಗಿರಿ ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ. ಶಹಾಪುರ ತಾಲೂಕಿನ ಉಕ್ಕಿನಾಳ್ ತಾಂಡಾದ ಬಳಿ ಅಕ್ರಮವಾಗಿ ನೂರಾರು ಕ್ವಿಂಟಾಲ್ ಅಕ್ಕಿ ಶೇಖರಿಸಿಟ್ಟಿದ್ದ ಗೋಡೌನ್ ಮೇಲೆ ಅಧಿಕಾರಿಗಳು ದಾಳಿ ನಡೆಸಿ 82 ಕ್ವಿಂಟಾಲ್ ಅಕ್ಕಿಯನ್ನು ಸೀಜ್ ಮಾಡಿದ್ದಾರೆ. ಈ ವೇಳೆ ಸ್ಥಳಕ್ಕಾಗಮಿಸಿದ ಖದೀಮರು ಅಧಿಕಾರಿಗಳಿಗೆ ಲಾರಿ ಸಮೇತ ಬೆಂಕಿ ಹಚ್ಚುವುದಾಗಿ ಬೆದರಿಕೆ ಒಡ್ಡಿದ ಹೈಡ್ರಾಮಾವೂ ನಡೆದಿದೆ.

ಉಕ್ಕಿನಾಳ್ ತಾಂಡಾದ ಜಮೀನೊಂದರ ಬಳಿ ಗೋಡೌನ್ ಮಾದರಿಯಲ್ಲಿ ಕಟ್ಟಡ ನಿರ್ಮಿಸಿ, ಬಡವರ ಅನ್ನಭಾಗ್ಯ ಅಕ್ಕಿಯನ್ನು ಅಕ್ರಮವಾಗಿ ಸಂಗ್ರಹಿಸಿಡಲಾಗುತ್ತಿದೆ ಎಂಬ ಖಚಿತ ಮಾಹಿತಿ ಆಹಾರ ಇಲಾಖೆಗೆ ಸಿಕ್ಕಿತ್ತು. ತಕ್ಷಣವೇ ಕಾರ್ಯಪ್ರವೃತ್ತರಾದ ಆಹಾರ ಇಲಾಖೆ ಉಪನಿರ್ದೇಶಕ ಸೋಮಶೇಖರ್ ಬಿರಾದಾರ್ ಹಾಗೂ ತಂಡ ಪೊಲೀಸರ ನೆರವಿನೊಂದಿಗೆ ಸೋಮವಾರ ರಾತ್ರಿ ದಾಳಿ ನಡೆಸಿದೆ. ದಾಳಿಯ ವೇಳೆ ಗೋಡೌನ್‌ನಲ್ಲಿ 202 ಪ್ಲಾಸ್ಟಿಕ್ ಚೀಲಗಳಲ್ಲಿ ತುಂಬಿಸಿಟ್ಟಿದ್ದ ಬರೋಬ್ಬರಿ 82 ಕ್ವಿಂಟಾಲ್ ಸರ್ಕಾರಿ ಅನ್ನಭಾಗ್ಯ ಅಕ್ಕಿ ಪತ್ತೆಯಾಗಿದ್ದು, ಅಧಿಕಾರಿಗಳು ಅದನ್ನು ಜಪ್ತಿ ಮಾಡಿದ್ದಾರೆ.

ಸೀಜ್ ಮಾಡಿದ ಅಕ್ಕಿಯನ್ನು ಶಹಾಪುರಕ್ಕೆ ಸಾಗಿಸಲು ಲಾರಿಗೆ ಲೋಡ್ ಮಾಡಿದ ತಕ್ಷಣ ಸ್ಥಳಕ್ಕೆ ಧಾವಿಸಿದ ದಂದೆಕೋರರ ತಂಡ, “ಅಕ್ಕಿ ತುಂಬಿದ ಲಾರಿಯನ್ನು ಹೇಗೆ ತೆಗೆದುಕೊಂಡು ಹೋಗುತ್ತೀರೋ ನೋಡುತ್ತೇವೆ, ಲಾರಿ ಸಮೇತ ಪೆಟ್ರೋಲ್ ಹಾಕಿ ಸುಟ್ಟು ಹಾಕುತ್ತೇವೆ” ಎಂದು ಕಾರ್ಯಾಚರಣೆಯಲ್ಲಿದ್ದ ಅಧಿಕಾರಿಗಳಿಗೆ ಬಹಿರಂಗವಾಗಿಯೇ ದಮ್ಕಿ ಹಾಕಿದೆ.

ದಂದೆಕೋರರ ಭೀತಿಯಿಂದಾಗಿ ಅಧಿಕಾರಿಗಳು ಲಾರಿಯನ್ನು ನೇರವಾಗಿ ಶಹಾಪುರದ ಗೋಡೌನ್‌ಗೆ ಕೊಂಡೊಯ್ಯಲು ಹೆದರಿ, ರಾತ್ರೋರಾತ್ರಿ ಗೋಗಿ ಪೊಲೀಸ್ ಠಾಣೆಯ ಅಂಗಳದಲ್ಲಿ ನಿಲ್ಲಿಸಿದ್ದಾರೆ. ಬಳಿಕ ಮಂಗಳವಾರ ಬೆಳಿಗ್ಗೆ ಲಾರಿಯನ್ನು ಆಹಾರ ಇಲಾಖೆಯ ಮುಖ್ಯ ಗೋಡೌನ್‌ಗೆ ತಂದು ಅನ್‌ಲೋಡ್ ಮಾಡಲಾಗಿದೆ.

ಇದನ್ನೂ ಓದಿ: ಸಾವಿರ ವರ್ಷ ಕಳೆದರೂ ಕೊರೋನಾ ವೈರಸ್ ಇರುತ್ತೆ, ಭಯ ಬೇಡ ಎಚ್ಚರವಿರಲಿ: ಆರೋಗ್ಯ ಸಚಿವ ಯು.ಟಿ. ಖಾದರ್

ಮಾಜಿ ಜಿ.ಪಂ ಸದಸ್ಯನ ಪುತ್ರನ ವಿರುದ್ಧ ಎಫ್‌ಐಆರ್

ಈ ಗಂಭೀರ ಅಕ್ರಮಕ್ಕೆ ಸಂಬಂಧಿಸಿದಂತೆ ಆಹಾರ ಇಲಾಖೆ ಅಧಿಕಾರಿಗಳು ಮಾಜಿ ಜಿಲ್ಲಾ ಪಂಚಾಯತ್ ಸದಸ್ಯ ಕಿಶನ್ ರಾಠೋಡ್ ಅವರ ಪುತ್ರ, ಅಕ್ರಮ ಅಕ್ಕಿ ದಂದೆಯ ರೂವಾರಿ ಎನ್ನಲಾದ ಲೋಹಿತ್ ರಾಠೋಡ್ ವಿರುದ್ಧ ಗೋಗಿ ಪೊಲೀಸ್ ಠಾಣೆಯಲ್ಲಿ ಅಧಿಕೃತ ದೂರು ದಾಖಲಿಸಿದ್ದಾರೆ. ಯಾದಗಿರಿ ಹಾಗೂ ಸುತ್ತಮುತ್ತಲಿನ ಭಾಗಗಳಲ್ಲಿ ಪಡಿತರ ಚೀಟಿದಾರರಿಂದ ಅಗ್ಗದ ದರಕ್ಕೆ ಅಕ್ಕಿ ಖರೀದಿಸುವ ಡೀಲರ್‌ಗಳು, ಅದನ್ನು ಈ ರೀತಿ ಸೀಕ್ರೆಟ್ ಗೋಡೌನ್‌ಗಳಲ್ಲಿ ಶೇಖರಿಸಿಡುತ್ತಾರೆ. ಬಳಿಕ ಈ ಅಕ್ಕಿಯನ್ನು ಮಹಾರಾಷ್ಟ್ರ ಸೇರಿದಂತೆ ನೆರೆ ರಾಜ್ಯಗಳಿಗೆ ಅಕ್ರಮವಾಗಿ ಸಾಗಿಸಿ, ಅಲ್ಲಿ ರೈಸ್ ಮಿಲ್‌ಗಳಲ್ಲಿ ಪಾಲಿಶ್ ಮಾಡಿ ಮೂರು ಪಟ್ಟು ಹೆಚ್ಚು ದರಕ್ಕೆ ಮಾರುಕಟ್ಟೆಯಲ್ಲಿ ಮಾರಾಟ ಮಾಡುತ್ತಿರುವುದು ತನಿಖೆಯಲ್ಲಿ ತಿಳಿದುಬಂದಿದೆ. ಬಡವರ ಹೊಟ್ಟೆ ತಣಿಸಬೇಕಾದ ಪಡಿತರ ಅಕ್ಕಿ ಈ ರೀತಿ ದಂದೆಕೋರರ ಪಾಲಾಗುತ್ತಿರುವುದಕ್ಕೆ ಸಾರ್ವಜನಿಕರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದು, ಇಲಾಖೆಯು ಅಕ್ರಮ ಜಾಲವನ್ನು ಸಂಪೂರ್ಣವಾಗಿ ಧ್ವಂಸಗೊಳಿಸಬೇಕಿದೆ.

ರಾಜ್ಯದ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

Correct Way To Bath: ಸ್ನಾನ ಮಾಡುವ ಸಂದರ್ಭದಲ್ಲಿ ಮೊದಲು ದೇಹದ ಯಾವ ಭಾಗಕ್ಕೆ ನೀರು ಹಾಕಬೇಕು ಗೊತ್ತೇ? – Kannada News | Correct way to bath according to Ayurveda

ದೇಹವನ್ನು ಸ್ವಚ್ಛವಾಗಿಡಲು ಪ್ರತಿನಿತ್ಯ ಸ್ನಾನ (bath) ಮಾಡಲೇಬೇಕು. ಸ್ನಾನವು ದೇಹವನ್ನು ಶುದ್ಧೀಕರಿಸುವುದಲ್ಲದೆ, ನಮಗೆ ತಾಜಾತನವನ್ನು ನೀಡುತ್ತದೆ. ಆಯುರ್ವೇದದ ಪ್ರಕಾರ ಸ್ನಾನ ಮಾಡಲು ಸರಿಯಾದ ಕ್ರಮವಿದ್ದು, ಸ್ನಾನ ಮಾಡುವಾಗ, ಮೊದಲು ಪಾದಗಳ ಮೇಲೆ ನೀರನ್ನು ಸುರಿಯಬೇಕು. ಇದು ದೇಹದ ಉಷ್ಣತೆಯನ್ನು ಕಾಪಾಡಿಕೊಳ್ಳುತ್ತದೆ. ಆದರೆ ಅನೇಕ ಜನರು ಸ್ನಾನ ಮಾಡುವಾಗ ಮೊದಲು ನೀರನ್ನು ತಲೆ ಮೇಲೆ ಸುರಿಯುತ್ತಾರೆ. ಇದು ಸ್ನಾನ ಮಾಡುವ ಸರಿಯಾದ ಕ್ರಮವಲ್ಲ. ಇದರಿಂದ ದೇಹದ ಮೇಲೆ ಪ್ರತಿಕೂಲ ಪರಿಣಾಮಗಳನ್ನು ಬೀರುತ್ತದೆ. ಹಾಗಾಗಿ ಆಯುರ್ವೇದದ ಪ್ರಕಾರ ಸ್ನಾನ ಮಾಡುವ ಸರಿಯಾದ ವಿಧಾನ ಯಾವುದೆಂದು ತಿಳಿಯೋಣ ಬನ್ನಿ.

ಸ್ನಾನ ಮಾಡುವಾಗ ದೇಹದ ಯಾವ ಭಾಗಕ್ಕೆ ಮೊದಲು ನೀರು ಸುರಿಯಬೇಕು?

ಆಯುರ್ವೇದ ಪ್ರಕಾರ, ಸ್ನಾನವನ್ನು ಪಾದಗಳಿಂದ ಪ್ರಾರಂಭಿಸುವುದು ಉತ್ತಮ. ಪಾದಗಳ ಮೇಲೆ ನೀರನ್ನು ಸುರಿಯುವುದರಿಂದ ದೇಹವು ಕ್ರಮೇಣ ನೀರಿನ ತಾಪಮಾನಕ್ಕೆ ಹೊಂದಿಕೊಳ್ಳುತ್ತದೆ. ಇದು ಮೆದುಳಿಗೆ ಇದ್ದಕ್ಕಿದ್ದಂತೆ ಶೀತದಿಂದ ತೊಂದರೆಗೊಳಗಾಗುವುದನ್ನು ತಡೆಯುತ್ತದೆ. ಇದು ರಕ್ತದ ಹರಿವನ್ನು ನಿಯಂತ್ರಿಸಲು ಸಹಾಯ ಮಾಡುತ್ತದೆ. ತಣ್ಣೀರಿನಲ್ಲಿ ಸ್ನಾನ ಮಾಡುವಾಗ ಈ ನಿಯಮವು ವಿಶೇಷವಾಗಿ ಅನ್ವಯವಾಗುತ್ತದೆ.

ಪಾದಗಳ ಮೇಲೆ ನೀರನ್ನು ಸುರಿದ ನಂತರ, ನೀರನ್ನು ಕೈಗಳ ಮೇಲೆ ಮತ್ತು ನಂತರ ಎದೆಯ ಮೇಲೆ ಸುರಿಯಬೇಕು. ಕೊನೆಯದಾಗಿ ತಲೆಗೆ ನೀರು ಹಾಕಬೇಕು. ತಣ್ಣೀರನ್ನು ನೇರವಾಗಿ ಎದೆಯ ಮೇಲೆ ಸುರಿಯುವುದರಿಂದ ರಕ್ತದ ಹರಿವಿನಲ್ಲಿ ಅಸಮತೋಲನ ಉಂಟಾಗುತ್ತದೆ. ಸ್ನಾನ ಮಾಡುವಾಗ ಮೊದಲು ಪಾದಕ್ಕೆ ನೀರನ್ನು ಹಾಕುವುದರಿಂದ  ದೇಹವು ನೀರಿನ ತಾಪಮಾನಕ್ಕೆ ಕ್ರಮೇಣ ಹೊಂದಿಕೊಳ್ಳಲು ಸಮಯ ಸಿಗುತ್ತದೆ, ಹಠಾತ್ ತಾಪಮಾನ ಬದಲಾವಣೆಗಳಿಂದ ಉಂಟಾಗುವ ಅಸ್ವಸ್ಥತೆಯನ್ನು ಕಡಿಮೆ ಮಾಡುತ್ತದೆ.

ಇದನ್ನೂ ಓದಿ: ಮಳೆಯಲ್ಲಿ ನೆನೆದರೆ ಕೂದಲು ಉದುರುತ್ತದೆಯೇ? ಚರ್ಮರೋಗ ತಜ್ಞರು ಹೇಳುವುದೇನು?

ಸ್ನಾನ ಮಾಡುವಾಗ ತಲೆಯ ಮೇಲೆ ನೇರವಾಗಿ ಏಕೆ ನೀರು ಸುರಿಯಬಾರದು?

ಅನೇಕ ಜನರು ಸ್ನಾನ ಮಾಡುವಾಗ ಮೊದಲು ತಮ್ಮ ತಲೆಯ ಮೇಲೆ ನೀರನ್ನು ಸುರಿಯುತ್ತಾರೆ, ಆದರೆ ಆಯುರ್ವೇದ ಪ್ರಕಾರ ಇದು ಸ್ನಾನ ಮಾಡುವ ಸರಿಯಾದ ವಿಧಾನವಲ್ಲ. ಅದರಲ್ಲೂ ಮೊದಲು ತಣ್ಣೀರನ್ನು ತಲೆಗೆ ಸುರಿಯುವುದರಿಂದ ಕೆಲವು ಜನರಲ್ಲಿ ತಲೆನೋವು, ತಲೆತಿರುಗುವಿಕೆ ಅಥವಾ ಅಸ್ವಸ್ಥತೆ ಉಂಟಾಗಬಹುದು.

ಆಯುರ್ವೇದವು ಸ್ನಾನ ಮಾಡುವಾಗ ತಲೆಯ ಮೇಲೆ ನೀರನ್ನು ಕೊನೆಯದಾಗಿ ಹಾಕಬೇಕು ಎಂದು ಶಿಫಾರಸು ಮಾಡುತ್ತದೆ. ತಲೆಯು ದೇಹದ ಅತ್ಯಂತ ಸೂಕ್ಷ್ಮ ಭಾಗವಾಗಿದ್ದು, ತಣ್ಣೀರನ್ನು ನೇರವಾಗಿ ತಲೆಯ ಮೇಲೆ ಸುರಿಯುವುದರಿಂದ ನರಮಂಡಲದ ಮೇಲೆ ನಕಾರಾತ್ಮಕ ಪರಿಣಾಮ ಬೀರುತ್ತದೆ ಮತ್ತು ಕೆಲವೊಮ್ಮೆ ತಲೆನೋವು ಅಥವಾ ತಲೆತಿರುಗುವಿಕೆಗೆ ಕಾರಣವಾಗಬಹುದು. ಅಲ್ಲದೆ ತಲೆಯ ಮೇಲೆ ಬಿಸಿನೀರನ್ನು ಸುರಿಯುವುದು ಮೆದುಳು ಮತ್ತು ಕೂದಲಿಗೆ ಹಾನಿಕಾರಕ ಎಂದು ಆಯುರ್ವೇದವು ಸ್ಪಷ್ಟವಾಗಿ ಹೇಳುತ್ತದೆ. ಇದು ಕೂದಲಿನ ಬೇರುಗಳನ್ನು ದುರ್ಬಲಗೊಳಿಸುತ್ತದೆ ಮತ್ತು ಕೂದಲು ಉದುರುವಿಕೆಗೆ ಕಾರಣವಾಗಬಹುದು. ತುಂಬಾ ಬಿಸಿಯಾಗಿರುವ ನೀರನ್ನು ತಲೆಯ ಮೇಲೆ ಸುರಿಯುವುದರಿಂದ ಅದು ರಕ್ತದೊತ್ತಡದ ಮೇಲೆ ಪರಿಣಾಮ ಬೀರುತ್ತದೆ, ಮೆದುಳಿನಲ್ಲಿ ರಕ್ತಸ್ರಾವವಾಗುವ ಅಪಾಯವನ್ನು ಹೆಚ್ಚಿಸುತ್ತದೆ.

ಜೀವನಶೈಲಿ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

ಕೊಲೆ ಆರೋಪಿ ದರ್ಶನ್ ಭೇಟಿಗೆ ಆಗಮಿಸಿದ ನಟಿ ರಕ್ಷಿತಾ ಪ್ರೇಮ್, ಪತ್ನಿ ವಿಜಯಲಕ್ಷ್ಮೀ – Kannada News | Actress Rakshita Prem and Vijayalakshmi Meet Darshan in Jail

ನಟ ದರ್ಶನ್ ಅವರು ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಜೈಲುಪಾಲಾಗಿ ಕಂಬಿ ಎಣಿಸುತ್ತಿದ್ದಾರೆ. ಜಾಮೀನು ಪಡೆಯಲು ಅವರು ಮಾಡಿದ ಎಲ್ಲ ಪ್ರಯತ್ನಗಳೂ ವ್ಯರ್ಥ ಆಗಿವೆ. ಅವರನ್ನು ನೋಡಲು ಆಪ್ತರು ಮತ್ತು ಕುಟುಂಬದವರು ಪರಪ್ಪನ ಅಗ್ರಹಾರ ಜೈಲಿಗೆ ಆಗಮಿಸುತ್ತಿದ್ದಾರೆ. ಮಂಗಳವಾರ (ಜುಲೈ 21) ನಟಿ ರಕ್ಷಿತಾ ಪ್ರೇಮ್ ಮತ್ತು ಪತ್ನಿ ವಿಜಯಲಕ್ಷ್ಮಿ ಅವರು ಪರಪ್ಪನ ಅಗ್ರಹಾರ ಸೆಂಟ್ರಲ್ ಜೈಲಿಗೆ ಭೇಟಿ ನೀಡಿ, ದರ್ಶನ್ (Darshan) ಜೊತೆ ಮಾತನಾಡಿದ್ದಾರೆ. ರಕ್ಷಿತಾ ಪ್ರೇಮ್ ಮತ್ತು ವಿಜಯಲಕ್ಷ್ಮೀ ಅವರು 2 ಕಾರುಗಳಲ್ಲಿ ಪ್ರತ್ಯೇಕವಾಗಿ ಜೈಲಿಗೆ ಬಂದಿದ್ದಾರೆ. ದರ್ಶನ್ ನೋಡಲು ರಕ್ಷಿತಾ ಅವರು ಜೈಲಿಗೆ ಬಂದಿರುವುದು ಇದು ಎರಡನೇ ಬಾರಿ. ದರ್ಶನ್ ಮತ್ತು ರಕ್ಷಿತಾ ನಡುವೆ ಅನೇಕ ವರ್ಷಗಳ ಸ್ನೇಹ ಇದೆ. ಹಲವು ಸಿನಿಮಾಗಳಲ್ಲಿ ಅವರು ಜೊತೆಯಾಗಿ ಅಭಿನಯಿಸಿದ್ದರು. ಈಗ ಅವರು ಜೈಲಿನಲ್ಲಿ ಭೇಟಿಯಾಗಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Source link

Exit mobile version