Headlines

ಶ್ರೇಯಸ್ ಅಯ್ಯರ್​ಗೆ ಇಲ್ಲ ಚಾನ್ಸ್: 3ನೇ ಕ್ರಮಾಂಕಕ್ಕೆ ಎಡಗೈ ದಾಂಡಿಗ ಫಿಕ್ಸ್

ಭಾರತ ಮತ್ತು ನ್ಯೂಝಿಲೆಂಡ್ ನಡುವಣ ಟಿ೨೦ ಸರಣಿ ಇಂದಿನಿಂದ (ಜ.21) ಶುರುವಾಗಲಿದೆ. ಈ ಪಂದ್ಯದಲ್ಲಿ ಟೀಮ್ ಪರ ಕಣಕ್ಕಿಳಿಯುವವರು ಯಾರು ಎಂಬುದೇ ಈಗ ಕುತೂಹಲ. ಏಕೆಂದರೆ ಭಾರತ ತಂಡದ ಕೊನೆಯ ಟಿ೨೦ ಪಂದ್ಯದಲ್ಲಿ ಕಾಣಿಸಿಕೊಂಡಿದ್ದ ತಿಲಕ್ ವರ್ಮಾ ಹಾಗೂ ಜಿತೇಶ್ ಶರ್ಮಾ ಈ ಸರಣಿಯಿಂದ ಹೊರಗುಳಿದಿದ್ದಾರೆ. ಹೀಗಾಗಿ ಟೀಮ್ ಇಂಡಿಯಾ ಪ್ಲೇಯಿಂಗ್ ಇಲೆವೆನ್​ನಲ್ಲಿ ಎರಡು ಬದಲಾವಣೆ ಕಂಡು ಬರುವುದು ಖಚಿತ. ಅದರಲ್ಲೂ ಎಡಗೈ ದಾಂಡಿಗ ತಿಲಕ್ ವರ್ಮಾ ಬದಲಿಗೆ ಕಣಕ್ಕಿಳಿಯುವವರು ಯಾರು ಎಂಬುದೇ ಪ್ರಶ್ನೆಯಾಗಿತ್ತು. ಈ ಪ್ರಶ್ನೆಗೆ…

Read More

ಅಬಕಾರಿ ಇಲಾಖೆಗೆ ಕೋಟ್ಯಂತರ ರೂ ಟಾರ್ಗೆಟ್​​: ಸರ್ಕಾರದ ಹೊಸ ನೀತಿಗೆ ವ್ಯಾಪಾರಿಗಳ ವಿರೋಧ

ಬೆಂಗಳೂರು, ಮಾರ್ಚ್​​ 06: ಸಿಎಂ ಸಿದ್ದರಾಮಯ್ಯ ಇಂದು ತಮ್ಮ ದಾಖಲೆಯ 17ನೇ ಬಜೆಟ್ (Budget) ಮಂಡಿಸಿದ್ದಾರೆ. 3 ಗಂಟೆ 30 ನಿಮಿಷಗಳ ಕಾಲ ಭಾಷಣ ಮಾಡಿದ ಸಿಎಂ, ಮಕ್ಕಳಿಂದ ವೃದ್ಧರವರೆಗೂ ಎಲ್ಲರಿಗೂ ಒಂದೊಂದು ಕೊಡುಗೆ ನೀಡಿದ್ದಾರೆ. ಆದರೆ ಮದ್ಯಪ್ರಿಯರಿಗೆ ಶಾಕ್ ನೀಡಲಾಗಿದೆ. ಮದ್ಯದ ಅಂಶ ಆಧರಿಸಿ ತೆರಿಗೆ ವಿಧಿಸಲು ನಿರ್ಧಾರ ಮಾಡಿರೋದು ದರ ಹೆಚ್ಚಳದ ಸುಳಿವು ಕೊಟ್ಟಿದೆ. ಅಬಕಾರಿ ಇಲಾಖೆಯಿಂದ 45 ಸಾವಿರ ಕೋಟಿ ಸಂಗ್ರಹದ ಗುರಿ ನೀಡಿದೆ. ಸದ್ಯ ಸರ್ಕಾರ ನೀಡಿರುವ ಟಾರ್ಗೆಟ್​ ಬಗ್ಗೆ ಮದ್ಯ…

Read More

ಕೋಲಾರದಲ್ಲಿ ಪಿಂಚಣಿ ಹಣಕ್ಕೂ ಪರದಾಟ: ನಿತ್ಯ ಅಲೆದು ಅಲೆದು ಕಂಗಾಲಾದ ವೃದ್ಧರು, ಅಂಗವಿಕಲ ಪಿಂಚಣಿದಾರರು

ಕೋಲಾರ, ಏಪ್ರಿಲ್​ 08: ವೃದ್ಧಾಪ್ಯ, ಅಂಗವಿಕಲ, ವಿಧವಾ ವೇತನ (pension) ಇವೆಲ್ಲವೂ ಸರ್ಕಾರ ಮನೆ ಬಾಗಿಲಿಗೆ ತಲುಪಬೇಕಾದ ಯೋಜನೆಗಳು. ಆ ಹಣವನ್ನೇ ನಂಬಿ ಹಿರಿಯ ಜೀವಗಳು ಬದುಕುತ್ತಿವೆ. ಆದರೆ ತಮ್ಮ ಹಣಕ್ಕಾಗಿ ಪರದಾಡುವ ಪರಿಸ್ಥಿತಿ ನಿರ್ಮಾಣವಾಗಿದೆ. ಸುಡುಬಿಸಿಲಿನಲ್ಲಿ ಅಂಚೆ ಕಚೇರಿ ಬಳಿ ಕಾದು ಕುಳಿತುಕೊಳ್ಳಬೇಕಾದ ಪರಿಸ್ಥಿತಿ ಎದುರಾಗಿದೆ. ಅಷ್ಟೇ ಅಲ್ಲದೆ ಕಮಿಷನ್ ಕೊಟ್ಟರು ಹಣ ಮಾತ್ರ ಸರಿಯಾದ ಸಮಯಕ್ಕೆ ಸಿಗದಿರುವುದು ಸಾಕಷ್ಟು ತೊಂದರೆ ಅನುಭವಿಸುವಂತಾಗಿದೆ. ಎಲ್ಲಾ ರೀತಿಯ ಪಿಂಚಣಿದಾರರಿಗೆ ಮನೆ ಬಾಗಿಲಿಗೆ ಪಿಂಚಣಿ ಹಣ ತಿಂಗಳ ಒಳಗಾಗಿ…

Read More

15,000 ಜನರನ್ನು ಕೊಲ್ಲುವ ಪಿತೂರಿ; ಮುಂಬೈನಲ್ಲಿ ಮೊಹರಂ ಮೆರವಣಿಗೆ ವೇಳೆ ಸಿಕ್ಕಿದ್ದ ವ್ಯಕ್ತಿ ಬಾಯ್ಬಿಟ್ಟ ಭಯಾನಕ ವಿಚಾರ – Kannada News | Mumbai man caught with toxic pills during muharram procession reveals chilling intention of killing 15,000 people

ಅಪರಾಧದ ಸಾಂದರ್ಭಿಕ ಚಿತ್ರImage Credit source: Getty Images ಮುಂಬೈ, ಜೂನ್ 28: ಇಲ್ಲಿನ ಬೈಕುಲ್ಲಾ ಪ್ರದೇಶದಲ್ಲಿ ಮೊಹರಂ ಮೆರವಣಿಗೆಯಲ್ಲಿ (Muharram Procession) ಭಾಗವಹಿಸಿದ್ದ ಜನರಿಗೆ “ನೋವು ನಿವಾರಕ” (Painkiller) ಎಂದು ಸುಳ್ಳು ಹೇಳಿ, ವಿಷಕಾರಿ ಮಾತ್ರೆಗಳನ್ನು ವಿತರಿಸುತ್ತಿದ್ದ ವ್ಯಕ್ತಿಯೊಬ್ಬನನ್ನು ಪೊಲೀಸರು ಬಂಧಿಸಿದ್ದಾರೆ. ಫಯಾಜ್ ಪ್ರೇಮ್​ಜಿ (Fayyaz Premji) ಎನ್ನುವ ಈತ ನೀಡಿದ್ದ ಮಾತ್ರೆ ನುಂಗಿ ಹಲವರು ಅಸ್ವಸ್ಥಗೊಂಡಿದ್ದಾರೆ. ಅದೃಷ್ಟವಶಾತ್, ಸಾವಿರಾರು ಜನರು ಈತನ ಸಾವಿನ ಪಾಶಕ್ಕೆ ಸಿಲುಕುವುದರಿಂದ ಬಚಾವಾಗಿದ್ದಾರೆ. ಈತನ ಪೊಲೀಸ್ ವಿಚಾರಣೆ ವೇಳೆ, ಈ…

Read More

VIDEO: ಇದು WPL ಇತಿಹಾಸದ ಅತ್ಯಂತ ದುಬಾರಿ ಓವರ್..! – Kannada News | WPL 2026: Sneh Rana bowls most expensive over in WPL history

ವುಮೆನ್ಸ್ ಪ್ರೀಮಿಯರ್ ಲೀಗ್ ಇತಿಹಾಸದಲ್ಲೇ ಅತ್ಯಂತ ದುಬಾರಿ ಓವರ್ ಎಸೆದ ಹೀನಾಯ ದಾಖಲೆಯೊಂದು ಸ್ನೇಹ್ ರಾಣಾ ಹೆಸರಿಗೆ ಸೇರ್ಪಡೆಯಾಗಿದೆ. ಇದರೊಂದಿಗೆ ವುಮೆನ್ಸ್ ಪ್ರೀಮಿಯರ್ ಲೀಗ್​ನ ಒಂದು ಓವರ್​ನಲ್ಲಿ ಅತ್ಯಧಿಕ ರನ್​ಗಳಿಸಿದ ಭರ್ಜರಿ ದಾಖಲೆಯೊಂದು ಸೋಫಿ ಡಿವೈನ್ ಹೆಸರಿಗೆ ಸೇರ್ಪಡೆಯಾಗಿದೆ. ಹೌದು, ಮುಂಬೈನ ಡಿವೈ ಪಾಟೀಲ್ ಸ್ಟೇಡಿಯಂನಲ್ಲಿ ನಡೆದ ವುಮೆನ್ಸ್ ಪ್ರೀಮಿಯರ್ ಲೀಗ್​ನ 4ನೇ ಪಂದ್ಯದಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ಬೌಲರ್ ಸ್ನೇಹ್ ರಾಣಾ ವಿರುದ್ಧ ಸೋಫಿ ಡಿವೈನ್ ಬರೋಬ್ಬರಿ 32 ರನ್​ ಚಚ್ಚಿದ್ದಾರೆ. ಈ ಪಂದ್ಯದ 6ನೇ ಓವರ್​ನಲ್ಲಿ…

Read More

ಪ್ರಭಾಸ್ ಸಿನಿಮಾ ನಿರ್ದೇಶಕನ ಸಂಭಾವನೆ ಎಷ್ಟು ಕೋಟಿ ಗೊತ್ತೆ? – Kannada News | Prabhas starrer The Raja Saab movie director get 18 crore rs as remuneration

ಪ್ರಭಾಸ್ (Prabhas) ಭಾರತದ ಟಾಪ್ ಪ್ಯಾನ್ ಇಂಡಿಯಾ (Pan India) ನಟ. ಅವರ ಸಂಭಾವನೆ ನೂರು ಕೋಟಿಯನ್ನೂ ದಾಟಿದೆ. ಕೆಲ ಸಿನಿಮಾಗಳಿಗೆ 150 ಕೋಟಿ ರೂಪಾಯಿ ಸಂಭಾವನೆಯನ್ನೂ ಸಹ ಪ್ರಭಾಸ್ ಪಡೆಯುತ್ತಿದ್ದಾರೆ. ಅವರಿಗಿರುವ ಮಾರುಕಟ್ಟೆಗೆ ತಕ್ಕಂತೆ ಸಂಭಾವನೆ ನಿಗದಿ ಪಡಿಸಿಕೊಂಡಿದ್ದಾರೆ. ಆದರೆ ಅವರಿಂದಾಗಿ ಅವರ ಸಿನಿಮಾಗಳ ತಂತ್ರಜ್ಞರ ಸಂಭಾವನೆಯೂ ಏರಿಕೆ ಆಗಿದೆ. ಇದೀಗ ಪ್ರಭಾಸ್ ‘ದಿ ರಾಜಾ ಸಾಬ್’ ಹೆಸರಿನ ಸಿನಿಮಾನಲ್ಲಿ ನಟಿಸಿದ್ದು, ಸಿನಿಮಾದ ನಿರ್ದೇಶಕನ ಸಂಭಾವನೆ ಎಷ್ಟು ಕೋಟಿ ಗೊತ್ತೆ? ಆ ಸಂಭಾವನೆ ಮೊತ್ತದಲ್ಲಿ ನಾಲ್ಕೈದು…

Read More

ಸಾವಿನಲ್ಲೂ ಒಂದಾದ ಸಹೋದರರು! ಅಣ್ಣನ ಅಗಲಿಕೆಯ ದುಃಖದಲ್ಲೇ ತಮ್ಮನೂ ವಿಧಿವಶ – Kannada News | Kalaburagi Tragedy: Brother Dies of Grief After Elder Sibling’s Death

ಕಲಬುರಗಿ, ಜನವರಿ 28: ಅಣ್ಣ ಸತ್ತ ಮರು ದಿನವೇ ಆತನ ಸಾವಿನ ದುಃಖವನ್ನು ತಡೆಯಲಾರದೆ ತಮ್ಮನೂ ಕೊನೆಯುಸಿರೆಳೆದ ಹೃದಯವಿದ್ರಾವಕ ಘಟನೆ ಕಲಬುರಗಿ ಜಿಲ್ಲೆಯ ಅಫಜಲಪುರ ತಾಲೂಕಿನ ಬಡದಾಳ ಗ್ರಾಮದಲ್ಲಿ ನಡೆದಿದೆ. ಅಣ್ಣನ ಅಗಲಿಕೆಯಿಂದ ಮಾನಸಿಕವಾಗಿ ಕುಸಿದಿದ್ದ ಶಿವರಾಯ ಅವರು ಆಘಾತದಿಂದ ಸಾವನ್ನಪ್ಪಿರುವುದಾಗಿ ಹೇಳಲಾಗುತ್ತಿದೆ. ಅಣ್ಣನ ಸಾವಿನ ದುಃಖದಲ್ಲೇ ತಮ್ಮ ಸಾವು ಗ್ರಾಮದ ಹಿರಿಯ ನಿವಾಸಿ ಬಸವಂತರಾಯ ಸಣ್ಣಕ್ (81) ಜನವರಿ 26ರಂದು ಅನಾರೋಗ್ಯದಿಂದ ಮೃತಪಟ್ಟಿದ್ದರು. ಅವರ ಅಂತ್ಯಸಂಸ್ಕಾರವು ಜನವರಿ 27ರಂದು ನೆರವೇರಿತು. ಈ ಅಂತ್ಯಕ್ರಿಯೆಯಲ್ಲಿ ಭಾಗವಹಿಸಿದ್ದ ಅವರ…

Read More

ಸಿಎಂ ಕುರ್ಚಿ ಕಿತ್ತಾಟ: ಡಿಕೆ ಶಿವಕುಮಾರ್ ಕದ್ದು ಮುಚ್ಚಿ ಮಾತಿಗೆ ಸಿದ್ದರಾಮಯ್ಯ ಗರಂ – Kannada News | Karnataka Power Tussle Reaches Delhi: CM Siddaramaiah Angry On DCM DK Shivakumar

ಬೆಂಗಳೂರು, (ಫೆಬ್ರವರಿ 10): ರಾಜ್ಯ ಕಾಂಗ್ರೆಸ್‌ನಲ್ಲಿ ನಾಯಕತ್ವ ಬದಲಾವಣೆಯ ಗುಸುಗುಸು ಜೋರಾಗಿದೆ. ಬಜೆಟ್​​​ಗೈ ಮುನ್ನವೇ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ದೆಹಲಿಯಲ್ಲಿ ಠಿಕಾಣಿ ಹೂಡಿದ್ದು, ಸಿಎಂ ಹುದ್ದೆಗಾಗಿ ಹೈಕಮಾಂಡ್ ನಾಯಕರ ಮನವೊಲಿಕೆಗೆ ಕಸರತ್ತು ನಡೆಸಿದ್ದಾರೆ ಎಂದು ತಿಳಿದುಬಂದಿದೆ. ಶತಾಯಗತಾಯ ಸಿಎಂ ಪಟ್ಟಕ್ಕೇರಲೇಬೇಕೆಂಬ ಹಠಕ್ಕೆ ಬಿದ್ದಿರುವ ಡಿಕೆಶಿ, ಈ ಬಾರಿ ನೇರವಾಗಿ ಸೋನಿಯಾ ಗಾಂಧಿ ಅವರನ್ನೇ ಭೇಟಿಯಾಗಿ ತಮ್ಮ ಮನದಾಳದ ಮಾತುಗಳನ್ನು ಬಿಚ್ಚಿಡಲು ಸಜ್ಜಾಗಿದ್ದಾರೆ ಎನ್ನಲಾಗಿದೆ. ಡಿಕೆ ಶಿವಕುಮಾರ್ ಅವರ ಈ ಕದ್ದುಮುಚ್ಚಿ ತಂತ್ರಗಾರಿಕೆಗೆ ಸಿಎಂ ಸಿದ್ದರಾಮಯ್ಯ ಕೆಂಡಾಮಂಡಲರಾಗಿದ್ದಾರೆ. ಹೀಗಾಗಿ…

Read More

ಮನೆಗೆ ಪ್ರವೇಶಿಸುವಾಗ ಈ ಲಕ್ಷಣಗಳು ಕಂಡುಬಂದರೆ ಎಚ್ಚರ: ಇದು ನಕಾರಾತ್ಮಕ ಶಕ್ತಿ ಮತ್ತು ವಾಸ್ತು ದೋಷದ ಸಂಕೇತ ಇರಬಹುದು! – Kannada News | Vastu Shastra: 5 Signs of Negative Energy at Home & How to Remove It

ವಾಸ್ತು ಶಾಸ್ತ್ರದ ಪ್ರಕಾರ, ಮನೆಯಲ್ಲಿರುವ ಸಕಾರಾತ್ಮಕ ಶಕ್ತಿಯು ನಮ್ಮ ಜೀವನದಲ್ಲಿ ಪ್ರಗತಿ ಮತ್ತು ಸಂತೋಷವನ್ನು ತರುತ್ತದೆ. ಆದರೆ, ಕೆಲವೊಮ್ಮೆ ಮನೆಯಲ್ಲಿ ನಕಾರಾತ್ಮಕ ಶಕ್ತಿ (Negative Energy) ಅಥವಾ ವಾಸ್ತು ದೋಷಗಳು ಆವರಿಸಿಕೊಂಡಾಗ ನಮಗೆ ಅರಿವಿಲ್ಲದೆಯೇ ಕೆಲವು ಅಸಾಮಾನ್ಯ ಬದಲಾವಣೆಗಳು ಕಂಡುಬರಲು ಪ್ರಾರಂಭಿಸುತ್ತವೆ. ವಾಸ್ತು ಶಾಸ್ತ್ರದ ಪ್ರಕಾರ, ಮನೆಗೆ ಪ್ರವೇಶಿಸಿದ ತಕ್ಷಣ ನಿಮಗೆ ಈ ಕೆಳಗಿನ ಅಸಾಮಾನ್ಯ ಅನುಭವಗಳಾದರೆ, ಅದನ್ನು ನಿರ್ಲಕ್ಷಿಸಬೇಡಿ. ಅದು ಮನೆಯಲ್ಲಿರುವ ನಕಾರಾತ್ಮಕತೆಯ ಸ್ಪಷ್ಟ ಸೂಚನೆಯಾಗಿರಬಹುದು. ನಿರಂತರ ಕೆಟ್ಟ ವಾಸನೆ ಬರುವುದು: ನೀವು ಹೊರಗಿನಿಂದ ಮನೆಗೆ…

Read More

IND vs PAK: ಪಾಕ್ ವಿರುದ್ಧದ ಪಂದ್ಯಕ್ಕೂ ಮುನ್ನ ಫ್ಯಾನ್ಸ್​ಗೆ ಸಿಹಿ ಸುದ್ದಿ ನೀಡಿದ ಸೂರ್ಯ – Kannada News | T20 World Cup 2026: India vs Pakistan Abhishek Sharma, Kuldeep Yadav Confirmed for Tomorrow’s Crucial Match

2026 ರ ಟಿ20 ವಿಶ್ವಕಪ್‌ನಲ್ಲಿ (T20 World Cup 2026) ಭಾರತ ಮತ್ತು ಪಾಕಿಸ್ತಾನ (India vs Pakistan) ನಡುವಿನ ಬಹುನಿರೀಕ್ಷಿತ ಪಂದ್ಯ ನಾಳೆ, ಅಂದರೆ ಫೆಬ್ರವರಿ 15, 2026 ರಂದು ಕೊಲಂಬೊದ ಆರ್. ಪ್ರೇಮದಾಸ ಕ್ರೀಡಾಂಗಣದಲ್ಲಿ ನಡೆಯಲಿದೆ. ಉಭಯ ತಂಡಗಳ ನಡುವಿನ ಈ ಕದನದಲ್ಲಿ ಗೆಲ್ಲುವ ತಂಡವು ನೇರವಾಗಿ ಸೂಪರ್ 8 ಸುತ್ತಿಗೆ ಅರ್ಹತೆ ಪಡೆಯುತ್ತದೆ. ಹೀಗಾಗಿ ಎರಡೂ ತಂಡಗಳು ಗೆಲುವಿಗಾಗಿ ಸಾಕಷ್ಟು ತಯಾರಿ ನಡೆಸುತ್ತಿವೆ. ಆದರೆ ಟೀಂ ಇಂಡಿಯಾಗೆ ಆಟಗಾರರ ಅಲಭ್ಯತೆ ದೊಡ್ಡ ಚಿಂತೆಯಾಗಿತ್ತು….

Read More