Karnataka Weather Forecast: ಕರಾವಳಿಯಲ್ಲಿಂದು ವರುಣಾರ್ಭಟ! ಆರೆಂಜ್ ಅಲರ್ಟ್ ಘೋಷಣೆ – Kannada News
ಬೆಂಗಳೂರು, ಜೂನ್ 06: ಕಾಲಿಡುತ್ತಿರುವ ಮುಂಗಾರು ಮಳೆಯ (Weather) ಅಬ್ಬರ ಕರ್ನಾಟಕದಲ್ಲಿ ಜೋರಾಗಿದೆ. ಮುಂದಿನ ಕೆಲವು ದಿನಗಳ ಕಾಲ ರಾಜ್ಯದಾದ್ಯಂತ ವ್ಯಾಪಕ ಮಳೆಯಾಗುವ ಸಾಧ್ಯತೆಯಿದ್ದು, ಹವಾಮಾನ ಇಲಾಖೆ ವಿವಿಧ ಜಿಲ್ಲೆಗಳಿಗೆ ಜಾಗರೂಕತೆಯ ಮುನ್ನೆಚ್ಚರಿಕೆಗಳನ್ನು ನೀಡಿದೆ. ರಾಜ್ಯದ ಹಲವು ಜಿಲ್ಲೆಗಳಿಗೆ ಇಂದು ಯೆಲ್ಲೋ ಅಲರ್ಟ್ ಘೋಷಿಸಿದ್ದು, ಕರಾವಳಿಗೆ ಆರೆಂಜ್ ಅಲರ್ಟ್ ನೀಡಲಾಗಿದೆ. ಮುಖ್ಯಾಂಶಗಳು ಕರಾವಳಿಯ ಮೂರು ಜಿಲ್ಲೆಗಳಿಗೆ ಭಾರಿ ಮಳೆಯ ‘ಆರೆಂಜ್ ಅಲರ್ಟ್’ ಘೋಷಣೆ. ಮಲೆನಾಡು ಸೇರಿದಂತೆ ಒಂಬತ್ತು ಜಿಲ್ಲೆಗಳಲ್ಲಿ ‘ಯೆಲ್ಲೋ ಅಲರ್ಟ್’ ಮುನ್ನೆಚ್ಚರಿಕೆ. ರಾಜ್ಯದಾದ್ಯಂತ ಬಿರುಗಾಳಿ, ಗುಡುಗು…