Headlines

ಫಾರಂಹೌಸ್‌ಗೆ ನುಗ್ಗಿ ನಾಯಿ ಮೇಲೆ ಚಿರತೆ ಅಟ್ಯಾಕ್! ಸಿಸಿ ಕ್ಯಾಮೆರಾದಲ್ಲಿ ಸೆರೆಯಾಯ್ತು ಭೀಕರ ದೃಶ್ಯ

ನಂಜನಗೂಡು, ಮಾ.14: ಮೈಸೂರು ಜಿಲ್ಲೆಯ ನಂಜನಗೂಡು ತಾಲೂಕಿನ ಹೊರಳವಾಡಿ ಗೇಟ್ ಬಳಿ ಚಿರತೆಯೊಂದು ಪ್ರತ್ಯಕ್ಷವಾಗಿದ್ದು, ಜನವಸತಿ ಪ್ರದೇಶಕ್ಕೆ ನುಗ್ಗಿ ಸಾಕುಪ್ರಾಣಿಗಳ ಮೇಲೆ ದಾಳಿ ನಡೆಸುತ್ತಿದೆ. ಮಧ್ಯರಾತ್ರಿ ಫಾರಂಹೌಸ್‌ವೊಂದಕ್ಕೆ ನುಗ್ಗಿದ ಚಿರತೆ ನಾಯಿಯನ್ನು ಎಳೆದುಕೊಂಡು ಹೋಗಲು ಯತ್ನಿಸಿದ ಘಟನೆ ಸ್ಥಳೀಯರಲ್ಲಿ ಭೀತಿ ಹುಟ್ಟಿಸಿದೆ. ಹೊರಳವಾಡಿ ಗೇಟ್ ಸಮೀಪವಿರುವ ಗಿರೀಶ್ ಎಂಬುವರಿಗೆ ಸೇರಿದ ‘ಅಭಿ ಫಾರಂ ಹೌಸ್’ಗೆ ಮಧ್ಯರಾತ್ರಿ ಚಿರತೆ ನುಗ್ಗಿದೆ. ಅವರು ಸಾಕಿರುವ ನಾಯಿಯ ಮೇಲೆ ಏಕಾಏಕಿ ದಾಳಿ ನಡೆಸಿ ಎಳೆದುಕೊಂಡು ಹೋಗಲು ಪ್ರಯತ್ನಿಸಿದೆ. ಚಿರತೆ ದಾಳಿ ಮಾಡುತ್ತಿದ್ದಂತೆ…

Read More

ಮಂಡ್ಯ: ಪ್ರೀತಿಸಿ ಮದುವೆಯಾದ ಅಳಿಯನ ಮನೆಗೆ ಬೆಂಕಿ ಹಚ್ಚಿದ ಮಾವ! ಎಲ್ಲವೂ ಸುಟ್ಟು ಭಸ್ಮ – Kannada News | Karnataka Village Fury: Enraged Father in Law Burns Son in Law’s Home Over Love Marriage

ಮಂಡ್ಯ, ಫೆ.21: ಪ್ರೀತಿಸಿ ಮದುವೆಯಾದ ಅಳಿಯನ ಮೇಲೆ ಕೋಪಗೊಂಡ ಮಾವನೊಬ್ಬ ಅಳಿಯನ ಮನೆಗೇ ಬೆಂಕಿ ಹಚ್ಚಿರುವ ಘಟನೆ ಮದ್ದೂರು ತಾಲೂಕಿನ ಚುಂಚಗಹಳ್ಳಿ ಗ್ರಾಮದಲ್ಲಿ ನಡೆದಿದೆ. ಮನೆಯಲ್ಲಿದ್ದ ವಸ್ತುಗಳು ಬೆಂಕಿಗಾಹುತಿಯಾಗಿದ್ದು, ಅದೃಷ್ಟವಶಾತ್ ಪ್ರಾಣಾಪಾಯ ತಪ್ಪಿದೆ. ಚುಂಚಗಹಳ್ಳಿ ಗ್ರಾಮದ ವಿನೋದ್ ಮತ್ತು ಕಾವ್ಯಾ ಎಂಬುವರು ಕಳೆದ ಹಲವು ವರ್ಷಗಳಿಂದ ಪರಸ್ಪರ ಪ್ರೀತಿಸುತ್ತಿದ್ದರು. ಆದರೆ ಇವರ ಪ್ರೀತಿಗೆ ಕಾವ್ಯಾ ಮನೆಯಲ್ಲಿ ತೀವ್ರ ವಿರೋಧವಿತ್ತು. ಮನೆಯವರ ವಿರೋಧದ ನಡುವೆಯೂ ಈ ಜೋಡಿ ಕಳೆದ ಗುರುವಾರ ಮದುವೆಯಾಗಿತ್ತು. ತನ್ನ ಮಗಳು ವಿರೋಧದ ನಡುವೆ ಮದುವೆಯಾಗಿದ್ದರಿಂದ…

Read More

ಡಿಕೆ ಶಿವಕುಮಾರ್​ಗೆ ಪಟ್ಟಾಭಿಷೇಕದ ತಯಾರಿ: ಸಿಎಂ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ ಬೆನ್ನಲ್ಲೇ ದೆಹಲಿಗೆ ಡಿಸಿಎಂ

ಸಿದ್ದರಾಮಯ್ಯ ಹಾಗೂ ಡಿಕೆ ಶಿವಕುಮಾರ್Image Credit source: tv9 ಬೆಂಗಳೂರು, ಮೇ 29: ಕರ್ನಾಟಕ ಕಾಂಗ್ರೆಸ್ (Congress) ಕೋಟೆಯಲ್ಲಿ ಕೊನೆಗೂ ಅಧಿಕಾರ ಹಂಚಿಕೆ ಗೊಂದಲಕ್ಕೆ ತೆರೆಬಿದ್ದಿದ್ದು, ರಾಜ್ಯ ರಾಜಕೀಯ ಚಟುವಟಿಕೆಗಳು ಈಗ ದೆಹಲಿ ಮಟ್ಟಕ್ಕೆ ಶಿಫ್ಟ್ ಆಗಿವೆ. ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ (Siddaramaiah) ಅಧಿಕೃತವಾಗಿ ರಾಜೀನಾಮೆ ನೀಡುತ್ತಿದ್ದಂತೆಯೇ, ನೂತನ ಮುಖ್ಯಮಂತ್ರಿಯಾಗಿ ಉಪಮುಖ್ಯಮಂತ್ರಿ, ಕನಕಪುರ ಬಂಡೆ ಡಿಕೆ ಶಿವಕುಮಾರ್ (DK Shivakumar) ಪಟ್ಟಾಭಿಷೇಕಕ್ಕೆ ವೇದಿಕೆ ಸಿದ್ಧವಾಗುತ್ತಿದೆ. ಬುಧವಾರ ನಡೆದ ಸಚಿವರ ಉಪಾಹಾರ ಕೂಟದಲ್ಲೇ ಸಿದ್ದರಾಮಯ್ಯ ಅವರು, ‘ಮುಂದಿನ ಸಿಎಂ…

Read More

30 ದಿನ ಮಾಂಸಾಹಾರ ಸೇವಿಸದಿದ್ದರೆ ಏನಾಗುತ್ತೆ ನೋಡಿ… – Kannada News | What Happens When You Quit Meat for 30 Days?

ಮಾಂಸಾಹಾರ (Meat) ಸೇವನೆ ಆರೋಗ್ಯಕ್ಕೆ ಹಲವು ರೀತಿಯಲ್ಲಿ ಪ್ರಯೋಜನಕಾರಿ. ಆದರೆ ಇತ್ತೀಚಿನ ದಿನಗಳಲ್ಲಿ ಒಂದಿಷ್ಟು ಜನ ಮಾಂಸಾಹಾರ ಸೇವನೆಯಿಂದ ಹಿಂದೆ ಸರಿಯುತ್ತಿದ್ದಾರೆ. ಅದರ ಬದಲಾಗಿ ಸಸ್ಯಹಾರಿಗಳಾಗುತ್ತಿದ್ದಾರೆ. ಹಾಗಾಗಿ ಆರೋಗ್ಯ ಕಾಪಾಡಿಕೊಳ್ಳಲು ಮಾಂಸಾಹಾರ ತ್ಯಜಿಸಬೇಕೇ ಅಥವಾ ಬೇಡವೇ ಎಂಬ ಗೊಂದಲ ಕೆಲವರದ್ದು. ನಿಯಮಿತವಾಗಿ ಮಾಂಸಾಹಾರ ತಿನ್ನುವ ನೀವು 30 ದಿನಗಳು ಅಂದರೆ ಒಂದು ತಿಂಗಳು ಮಾಂಸವನ್ನು ಸೇವಿಸದಿದ್ದರೆ ಅದು ನಿಮ್ಮ ದೇಹದ ಮೇಲೆ ಯಾವ ರೀತಿಯ ಪರಿಣಾಮ ಬೀರುತ್ತದೆ ಎಂಬುದು ನಿಮಗೆ ತಿಳಿದಿದೆಯೇ, ಹಾಗಾದರೆ ಈ ಸ್ಟೋರಿ ಓದಿ,…

Read More

ಸ್ಥಳೀಯ ಸಂಸ್ಥೆ ಚುನಾವಣೆಗಳಲ್ಲಿ ಇವಿಎಂ ಬದಲು ‘ಬ್ಯಾಲೆಟ್ ಪೇಪರ್ʼ ಬಳಕೆ: ಸಂಪುಟ ನಿರ್ಧಾರ – Kannada News | Karnataka Cabinet Decides Used ballot papers In Local Body Polls instead of evm

ಬೆಂಗಳೂರು, (ಫೆಬ್ರವರಿ, 05): ಕರ್ನಾಟಕದ  (Karnataka) ಬಹುತೇಕ ಗ್ರಾಮ ಪಂಚಾಯಿತಿಗಳ   ಅಧಿಕಾರಾವಧಿ ಇದೇ ಫೆಬ್ರವರಿ-ಮಾರ್ಚ್‌ನಲ್ಲಿ ಮುಗಿಯಲಿದೆ. ಹೀಗಾಗಿ ಚುನಾವಣೆ ನಡೆಯುವವರೆಗೂ ಸರ್ಕಾರ ಆಡಳಿತಾಧಿಕಾರಿಗಳ ನೇಮಕಕ್ಕೆ ಆದೇಶ ಹೊರಡಿಸಿದೆ. ಮತ್ತೊಂದೆಡೆ  2026ರ ಏಪ್ರಿಲ್-ಮೇ ತಿಂಗಳಲ್ಲಿ ಚುನಾವಣೆ (Gram Panchayt Elections) ನಡೆಸಲು ಸರ್ಕಾರ ಸಿದ್ಧತೆ ನಡೆಸಿದ್ದು, ಈ ಸಂಬಂಧ ಜಿಲ್ಲಾಧಿಕಾರಿಗಳಿಗೆ ಪೂರ್ವಸಿದ್ಧತೆಗೆ ನಿರ್ದೇಶನ ನೀಡಲಾಗಿದೆ. ಈ ಎಲ್ಲಾ ಬೆಳವಣಿಗಗಳ ನಡುವೆ ಮುಂಬರುವ ಗ್ರಾಮ ಪಂಚಾಯಿತಿ ಚುನಾವಣೆಯಲ್ಲಿ ಬ್ಯಾಲೆಟ್ ಪೇಪರ್ ಬಳಕೆಗೆ ಇಂದಿನ ಸಚಿವ ಸಂಪುಟ  ಸಭೆಯಲ್ಲಿ ನಿರ್ಧರಿಸಲಾಗಿದೆ. ಇಂದು…

Read More

CET 2026: NEET ರಿಸಲ್ಟ್ ಲೇಟ್​​; ಈ ಸಲ ಆಪ್ಷನ್ ಎಂಟ್ರಿ ಹೇಗೆ? KEA ನಿರ್ದೇಶಕ ಪ್ರಸನ್ನ ಹೇಳಿದ್ದೇನು? – Kannada News | KEA Executive Director H. Prasanna Clarifies CET Option Entry Amid NEET Delays

ನೀಟ್ ಪರೀಕ್ಷೆಗಳು ವಿಳಂಬವಾಗಿರುವುದರಿಂದ, ಮೆಡಿಕಲ್, ಡೆಂಟಲ್ ಮತ್ತು ಆಯುಷ್ ಕೋರ್ಸ್‌ಗಳ ಸೀಟು ಹಂಚಿಕೆ ಎರಡನೇ ಸುತ್ತಿನಲ್ಲಿ ನಡೆಯಲಿದೆ. ಎಂಸಿಸಿ ಮತ್ತು ಮೆಡಿಕಲ್ ಎಜುಕೇಶನ್ ವಿಭಾಗದಿಂದ ಸೀಟ್ ಮ್ಯಾಟ್ರಿಕ್ಸ್ ಲಭ್ಯವಾದ ನಂತರ ಈ ಪ್ರಕ್ರಿಯೆ ಆರಂಭವಾಗಲಿದೆ ಎಂದು ಕರ್ನಾಟಕ ಪರೀಕ್ಷಾ ಪ್ರಾಧಿಕಾರ (ಕೆಇಎ) ಕಾರ್ಯನಿರ್ವಾಹಕ ನಿರ್ದೇಶಕ ಹೆಚ್. ಪ್ರಸನ್ನ ತಿಳಿಸಿದ್ದಾರೆ ವೈದ್ಯಕೀಯ ಸೀಟು ಮಾತ್ರ ಬಯಸುವ ವಿದ್ಯಾರ್ಥಿಗಳು ಎರಡನೇ ಸುತ್ತಿಗಾಗಿ ಕಾಯಬಹುದು. ಆದರೆ, ವೈದ್ಯಕೀಯ ಸೀಟು ದೊರೆಯದಿದ್ದಲ್ಲಿ ಇಂಜಿನಿಯರಿಂಗ್ ಅಥವಾ ಇತರ ಕೋರ್ಸ್‌ಗಳಿಗೆ ಪ್ರವೇಶ ಪಡೆಯಲು ಇಚ್ಛಿಸುವ ವಿದ್ಯಾರ್ಥಿಗಳು…

Read More

ಎಣ್ಣೆ ಕೊಡಿಸಿಲ್ಲವೆಂದು ಮಚ್ಚು ಹಿಡಿದು ನಡುರಸ್ತೆಯಲ್ಲೇ ವ್ಯಕ್ತಿ ಪುಂಡಾಟ – Kannada News | Man Roams Middle of Road with Machete After Refuses to Give alcohol

ಬೆಂಗಳೂರು, ಜನವರಿ 17: ಪರಿಚಯಸ್ಥ ಎಣ್ಣೆ ಕೊಡಿಸಿಲ್ಲ ಎಂದು ಮಚ್ಚು ಹಿಡಿದು ವ್ಯಕ್ತಿ ಓರ್ವ ನಡುರಸ್ತೆಯಲ್ಲೇ ಪುಂಡಾಟ ಮೆರೆದಿರುವಂತಹ ಘಟನೆ ಬೆಂಗಳೂರು ಬಳಿಯ ಆನೇಕಲ್ ತಾಲೂಕಿನ ಗೌರೇನಹಳ್ಳಿಯಲ್ಲಿ ನಡೆದಿದೆ. ಗೌರೇನಾಹಳ್ಳಿ ಗ್ರಾಮದ ಬಸವರಾಜ್​​​​ ಎಂಬಾತ ಕುಡಿದ ಅಮಲಿನಲ್ಲಿ ಮಚ್ಚು ಹಿಡಿದು ದಾಂದಲೆ ಮಾಡಿದ್ದಾರೆ. ಪರಿಚಯಸ್ಥ ಪ್ರಕಾಶ್​ಗೆ ಬಸವರಾಜ್​​ ಮಚ್ಚು ಹಿಡಿದು ಅವ್ಯಾಚ್ಯ ಶಬ್ದಗಳಿಂದ ನಿಂದಿಸಿದ್ದಾರೆ. ಬಸವರಾಜ್ ಮಚ್ಚುಹಿಡಿದು ಓಡಾಡುವ ದೃಶ್ಯ ಸಿಸಿ ಕ್ಯಾಮರಾದಲ್ಲಿ ಸೆರೆ ಆಗಿದೆ. ಸ್ಥಳಕ್ಕೆ ಆನೇಕಲ್ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ಮಾಡಿದ್ದು,…

Read More

ಕೊಡಗಿನಲ್ಲಿ ಭಾರಿ ಮಳೆ: ಅಪಾಯಮಟ್ಟ ಮೀರಿ ಹರಿಯುತ್ತಿರುವ ನದಿಗಳು, ಭಾಗಮಂಡಲ‌ ತ್ರಿವೇಣಿ ಸಂಗಮ, ಸ್ನಾನಘಟ್ಟ ಜಲಾವೃತ – Kannada News | Kodagu Heavy Rain: Cauvery, Hattihole Rivers Overflow; Harangi Dam Inflow Rises, Bhagamandala Triveni Sangama submerged

ಮಡಿಕೇರಿ, ಆಗಸ್ಟ್ 1: ಕೊಡಗು ಜಿಲ್ಲೆಯಾದ್ಯಂತ ನಿರಂತರ ಮಳೆ ಸುರಿಯುತ್ತಿರುವ ಹಿನ್ನೆಲೆಯಲ್ಲಿ ಹಲವು ನದಿಗಳು ಅಪಾಯಮಟ್ಟ ಮೀರಿ ಹರಿಯುತ್ತಿವೆ. ಕಾವೇರಿ ಹಾಗೂ ಹಟ್ಟಿಹೊಳೆ ನದಿಗಳಲ್ಲಿ ನೀರಿನ ಪ್ರಮಾಣ ಹೆಚ್ಚಾಗಿದ್ದು, ಭಾಗಮಂಡಲದ ತ್ರಿವೇಣಿ ಸಂಗಮ ಹಾಗೂ ಸ್ನಾನಘಟ್ಟ ಜಲಾವೃತಗೊಂಡಿವೆ. ಇದೇ ವೇಳೆ ಹಾರಂಗಿ ಜಲಾಶಯಕ್ಕೂ ಒಳಹರಿವು ಭಾರಿ ಪ್ರಮಾಣದಲ್ಲಿ ಹೆಚ್ಚಾಗಿದೆ. ಮಳೆ ಮುಂದುವರಿದಿರುವ ಹಿನ್ನೆಲೆಯಲ್ಲಿ ನದಿ ಪಾತ್ರದ ಜನರು ಮುನ್ನೆಚ್ಚರಿಕೆ ವಹಿಸುವಂತೆ ಸೂಚಿಸಲಾಗಿದೆ. ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ Source link

Read More

IND vs ENG: ಒಂದೇ ಕೈನಲ್ಲಿ ಅತ್ಯದ್ಭುತ ಕ್ಯಾಚ್ ಹಿಡಿದ ಕೆಎಲ್ ರಾಹುಲ್; ವಿಡಿಯೋ – Kannada News | IND vs ENG 1st ODI: KL Rahul’s Stunning Catch and India’s Bowling Dominate England

ಬರ್ಮಿಂಗ್ಹ್ಯಾಮ್‌ನಲ್ಲಿ ನಡೆದ ಭಾರತ ಮತ್ತು ಇಂಗ್ಲೆಂಡ್ (India vs England) ನಡುವಿನ ಮೊದಲ ಏಕದಿನ ಪಂದ್ಯದಲ್ಲಿ ಭಾರತೀಯ ಬೌಲರ್‌ಗಳು ಅದ್ಭುತ ಪ್ರದರ್ಶನ ನೀಡಿ ಇಂಗ್ಲೆಂಡ್‌ ತಂಡವನ್ನು 258 ರನ್​ಗಳಿಗೆ ಆಲೌಟ್ ಮಾಡಿದರು. ಈ ಪಂದ್ಯದಲ್ಲಿ ಟೀಂ ಇಂಡಿಯಾ ಎಲ್ಲಾ ವಿಭಾಗಗಳಲ್ಲ್ಲೂ ಅದ್ಭುತ ಪ್ರದರ್ಶನ ನೀಡಿತು. ಅದರಲ್ಲೂ ಕಳೆದ ಕೆಲವು ದಿನಗಳಿಂದ ಫಿಲ್ಡಿಂಗ್ ವಿಚಾರದಲ್ಲಿ ಟೀಂ ಇಂಡಿಯಾ ಸಾಕಷ್ಟು ತಪ್ಪುಗಳನ್ನು ಮಾಡಿತ್ತು. ಇದರಿಂದಾಗಿ ಸೋಲಿನ ಬೆಲೆಯನ್ನು ತೆತ್ತಿತ್ತು. ಆದರೆ ಏಕದಿನ ಸರಣಿಯಲ್ಲಿ ಟೀಂ ಇಂಡಿಯಾದ ಫಿಲ್ಡಿಂಗ್ ಎಲ್ಲರ ಗಮನ…

Read More

ಹಂಟಾವೈರಸ್ ವೈರಸ್ ಅಪಾಯ: ಭಾರತದಲ್ಲಿ ರೋಗ ಹರಡುವುದನ್ನು ತಡೆಯಲು 165 ಲ್ಯಾಬ್‌ಗಳು ಸಜ್ಜು – Kannada News | Hantavirus Pulmonary Syndrome: What ICMR’s 165 Lab Surveillance Means for You

ಎಂವಿ ಹೋಡಿಯಸ್ ಕ್ರೂಸ್ ಹಡಗಿನಲ್ಲಿ ಇತ್ತೀಚೆಗೆ ಕಾಣಿಸಿಕೊಂಡ ಹಂಟಾವೈರಸ್ (Hantavirus) ಸೋಂಕಿನ ಬಳಿಕ ವಿಶ್ವದ ಹಲವು ದೇಶಗಳು ಎಚ್ಚೆತ್ತುಕೊಂಡಿದೆ. ಈ ವೈರಸ್‌ ಕೆಲವರ ಸಾವಿಗೂ ಕಾರಣವಾಗಿರುವುದರಿಂದ ಭಾರತವೂ ಕೂಡ ಮುನ್ನೆಚ್ಚರಿಕಾ ಕ್ರಮಗಳನ್ನು ಕಠಿಣಗೊಳಿಸಿದೆ. ವಿಶೇಷವಾಗಿ ಹಡಗಿನಲ್ಲಿ ಭಾರತೀಯರು ಇದ್ದ ಕಾರಣ ಆರೋಗ್ಯ ಇಲಾಖೆ ಹೆಚ್ಚಿನ ನಿಗಾ ವಹಿಸಿದೆ. ಭಾರತೀಯ ವೈದ್ಯಕೀಯ ಸಂಶೋಧನಾ ಮಂಡಳಿ (ICMR) ದೇಶದಾದ್ಯಂತ ಇರುವ ಸುಮಾರು 165 ವೈರಸ್ ರಿಸರ್ಚ್ ಮತ್ತು ಡಯಗ್ನೋಸ್ಟಿಕ್ ಲ್ಯಾಬ್‌ಗಳನ್ನು ಸಕ್ರಿಯಗೊಳಿಸಿದೆ. ವಿದೇಶಗಳಿಂದ ಬರುವ ಪ್ರಯಾಣಿಕರಲ್ಲಿ ಹಂಟಾವೈರಸ್ ಲಕ್ಷಣಗಳು ಕಂಡುಬಂದರೆ,…

Read More