Headlines

ಪತ್ರಕರ್ತ ಜಯಪ್ರಕಾಶ್ ಶೆಟ್ಟಿ ನಟನೆಯ ‘ಬನ’ ಸಿನಿಮಾದ ರಿಲೀಸ್ ದಿನಾಂಕ ಘೋಷಣೆ – Kannada News | Journalists Jayaprakash Shetty Bana Movie Release Date Announced

ನಿರೀಕ್ಷೆ ಮೂಡಿಸಿರುವ ‘ಬನ’ (Bana) ಸಿನಿಮಾದ ಬಿಡುಗಡೆ ದಿನಾಂಕ ಘೋಷಣೆಯಾಗಿದೆ. ಈ ಸಿನಿಮಾ ತುಳು (Tulu) ಮತ್ತು ಕನ್ನಡ ಭಾಷೆಗಳಲ್ಲಿ ಅಕ್ಟೊಬರ್ 23ರಂದು ಬಿಡುಗಡೆಯಾಗಲಿದೆ. ಬಹಳ ವರ್ಷಗಳ ನಂತರ ನಾಗ ಕಥೆಯ ಚಿತ್ರವೊಂದು ಬರುತ್ತಿದ್ದು ತುಳು ಚಿತ್ರರಂಗದ ಇತಿಹಾಸದಲ್ಲೇ ನಾಗ ಕಥೆಯನ್ನು ಹೊಂದಿರುವ ಮೊದಲ ಚಿತ್ರ ಇದು ಎನ್ನಲಾಗಿದೆ. ಸುದ್ದಿ ನಿರೂಪಕ, ಪತ್ರಕರ್ತ ಜಯಪ್ರಕಾಶ್ ಶೆಟ್ಟಿ (Jayaprakash Shetty) ಅವರು ನಟಿಸಿದ್ದಾರೆ ಎಂಬುದು ಈ ಸಿನಿಮಾದ ವಿಶೇಷ. ‘ಬನ’ ಚಿತ್ರದ ಟ್ರೇಲರ್ ಈ ವರ್ಷ ನಾಗರ ಪಂಚಮಿ…

Read More

ಬಡವರ ಹೊಟ್ಟೆಗೆ ಕನ್ನ ಹಾಕಿದ ಮಾಜಿ ಜಿ.ಪಂ ಸದಸ್ಯನ ಮಗ: ಯಾದಗಿರಿಯಲ್ಲಿ ಬಟಾ ಬಯಲಾಯ್ತು ಅಕ್ರಮ ಅಕ್ಕಿ ದಂಧೆ – Kannada News | Karnataka Annabhagya Scam: Yadgir Officials Raid Illegal Rice Godown

ಯಾದಗಿರಿ, ಜು.21: ಬಡವರ ಹೊಟ್ಟೆ ತುಂಬಿಸಬೇಕಿದ್ದ ಸರ್ಕಾರದ ‘ಅನ್ನಭಾಗ್ಯ’ ಯೋಜನೆಯ ಅಕ್ಕಿ ದಂದೆಕೋರರ ಪಾಲಾಗುತ್ತಿರುವ ಗಂಭೀರ ಪ್ರಕರಣವೊಂದು ಯಾದಗಿರಿ ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ. ಶಹಾಪುರ ತಾಲೂಕಿನ ಉಕ್ಕಿನಾಳ್ ತಾಂಡಾದ ಬಳಿ ಅಕ್ರಮವಾಗಿ ನೂರಾರು ಕ್ವಿಂಟಾಲ್ ಅಕ್ಕಿ ಶೇಖರಿಸಿಟ್ಟಿದ್ದ ಗೋಡೌನ್ ಮೇಲೆ ಅಧಿಕಾರಿಗಳು ದಾಳಿ ನಡೆಸಿ 82 ಕ್ವಿಂಟಾಲ್ ಅಕ್ಕಿಯನ್ನು ಸೀಜ್ ಮಾಡಿದ್ದಾರೆ. ಈ ವೇಳೆ ಸ್ಥಳಕ್ಕಾಗಮಿಸಿದ ಖದೀಮರು ಅಧಿಕಾರಿಗಳಿಗೆ ಲಾರಿ ಸಮೇತ ಬೆಂಕಿ ಹಚ್ಚುವುದಾಗಿ ಬೆದರಿಕೆ ಒಡ್ಡಿದ ಹೈಡ್ರಾಮಾವೂ ನಡೆದಿದೆ. ಉಕ್ಕಿನಾಳ್ ತಾಂಡಾದ ಜಮೀನೊಂದರ ಬಳಿ ಗೋಡೌನ್…

Read More

Correct Way To Bath: ಸ್ನಾನ ಮಾಡುವ ಸಂದರ್ಭದಲ್ಲಿ ಮೊದಲು ದೇಹದ ಯಾವ ಭಾಗಕ್ಕೆ ನೀರು ಹಾಕಬೇಕು ಗೊತ್ತೇ? – Kannada News | Correct way to bath according to Ayurveda

ದೇಹವನ್ನು ಸ್ವಚ್ಛವಾಗಿಡಲು ಪ್ರತಿನಿತ್ಯ ಸ್ನಾನ (bath) ಮಾಡಲೇಬೇಕು. ಸ್ನಾನವು ದೇಹವನ್ನು ಶುದ್ಧೀಕರಿಸುವುದಲ್ಲದೆ, ನಮಗೆ ತಾಜಾತನವನ್ನು ನೀಡುತ್ತದೆ. ಆಯುರ್ವೇದದ ಪ್ರಕಾರ ಸ್ನಾನ ಮಾಡಲು ಸರಿಯಾದ ಕ್ರಮವಿದ್ದು, ಸ್ನಾನ ಮಾಡುವಾಗ, ಮೊದಲು ಪಾದಗಳ ಮೇಲೆ ನೀರನ್ನು ಸುರಿಯಬೇಕು. ಇದು ದೇಹದ ಉಷ್ಣತೆಯನ್ನು ಕಾಪಾಡಿಕೊಳ್ಳುತ್ತದೆ. ಆದರೆ ಅನೇಕ ಜನರು ಸ್ನಾನ ಮಾಡುವಾಗ ಮೊದಲು ನೀರನ್ನು ತಲೆ ಮೇಲೆ ಸುರಿಯುತ್ತಾರೆ. ಇದು ಸ್ನಾನ ಮಾಡುವ ಸರಿಯಾದ ಕ್ರಮವಲ್ಲ. ಇದರಿಂದ ದೇಹದ ಮೇಲೆ ಪ್ರತಿಕೂಲ ಪರಿಣಾಮಗಳನ್ನು ಬೀರುತ್ತದೆ. ಹಾಗಾಗಿ ಆಯುರ್ವೇದದ ಪ್ರಕಾರ ಸ್ನಾನ ಮಾಡುವ…

Read More

ಕೊಲೆ ಆರೋಪಿ ದರ್ಶನ್ ಭೇಟಿಗೆ ಆಗಮಿಸಿದ ನಟಿ ರಕ್ಷಿತಾ ಪ್ರೇಮ್, ಪತ್ನಿ ವಿಜಯಲಕ್ಷ್ಮೀ – Kannada News | Actress Rakshita Prem and Vijayalakshmi Meet Darshan in Jail

ನಟ ದರ್ಶನ್ ಅವರು ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಜೈಲುಪಾಲಾಗಿ ಕಂಬಿ ಎಣಿಸುತ್ತಿದ್ದಾರೆ. ಜಾಮೀನು ಪಡೆಯಲು ಅವರು ಮಾಡಿದ ಎಲ್ಲ ಪ್ರಯತ್ನಗಳೂ ವ್ಯರ್ಥ ಆಗಿವೆ. ಅವರನ್ನು ನೋಡಲು ಆಪ್ತರು ಮತ್ತು ಕುಟುಂಬದವರು ಪರಪ್ಪನ ಅಗ್ರಹಾರ ಜೈಲಿಗೆ ಆಗಮಿಸುತ್ತಿದ್ದಾರೆ. ಮಂಗಳವಾರ (ಜುಲೈ 21) ನಟಿ ರಕ್ಷಿತಾ ಪ್ರೇಮ್ ಮತ್ತು ಪತ್ನಿ ವಿಜಯಲಕ್ಷ್ಮಿ ಅವರು ಪರಪ್ಪನ ಅಗ್ರಹಾರ ಸೆಂಟ್ರಲ್ ಜೈಲಿಗೆ ಭೇಟಿ ನೀಡಿ, ದರ್ಶನ್ (Darshan) ಜೊತೆ ಮಾತನಾಡಿದ್ದಾರೆ. ರಕ್ಷಿತಾ ಪ್ರೇಮ್ ಮತ್ತು ವಿಜಯಲಕ್ಷ್ಮೀ ಅವರು 2 ಕಾರುಗಳಲ್ಲಿ ಪ್ರತ್ಯೇಕವಾಗಿ ಜೈಲಿಗೆ…

Read More

ಸಂಧಾನದ ವೇಳೆ ಬೇಡಿಕೆ ಬದಲಾಯಿಸಿದ ರಾಹುಲ್ ಗಾಂಧಿ; ಕೇಂದ್ರ ಸಚಿವ ಜಿತೇಂದ್ರ ಸಿಂಗ್ ಆರೋಪ – Kannada News | Went Back On His Word Union Minister Jitendra Singh accuses Rahul Gandhi for Changing his Demand

ನವದೆಹಲಿ, ಜುಲೈ 21: ದೆಹಲಿಯ ಪ್ರಧಾನಿ ಸರ್ಕಾರಿ ನಿವಾಸದ ಎದುರು ಇಂದು ಸಂಜೆ ದೊಡ್ಡ ಹೈಡ್ರಾಮಾ ನಡೆದಿದೆ. ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಮತ್ತು ನಿನ್ನೆ ಸಿಜೆಪಿ ಪ್ರತಿಭಟನಾಕಾರರ ಮೇಲೆ ನಡೆದ ಪೊಲೀಸ್ ದೌರ್ಜನ್ಯವನ್ನು ಖಂಡಿಸಿ ಕಾಂಗ್ರೆಸ್ ನಾಯಕರು (Congress Protest in Delhi) ಪ್ರಧಾನಿ ಮೋದಿ ನಿವಾಸದ ಹೊರಗೆ ಧರಣಿ ಸತ್ಯಾಗ್ರಹ ನಡೆಸಿದ್ದರು. ಈ ವೇಳೆ ಸಂಧಾನ ಮಾತುಕತೆಗೆ ತೆರಳಿದ್ದ ಕೇಂದ್ರ ಸಚಿವ ಜಿತೇಂದ್ರ ಸಿಂಗ್ ರಾಹುಲ್ ಗಾಂಧಿ (Rahul Gandhi) ಮಾತುಕತೆಯ ವೇಳೆ ಯು-ಟರ್ನ್…

Read More

Maruti Suzuki: 30,000 ರೂವರೆಗೂ ಏರಿಕೆಯಾಗಲಿದೆ ಮಾರುತಿ ಸುಜುಕಿಯ ವಿವಿಧ ಕಾರುಗಳ ಬೆಲೆ – Kannada News | Maruti Suzuki to hike prices of its various model cars by upto Rs 30k

ಮಾರುತಿ ಸುಜುಕಿ ಸ್ವಿಫ್ಟ್ ಕಾರುImage Credit source: PTI ನವದೆಹಲಿ, ಜುಲೈ 21: ಭಾರತದ ನಂಬರ್ ಒನ್ ಕಾರು ತಯಾರಕ ಸಂಸ್ಥೆಯಾದ ಮಾರುತಿ ಸುಜುಕಿ ತನ್ನ ವಿವಿಧ ಕಾರುಗಳ ಬೆಲೆಯನ್ನು ಏರಿಸಲಿದೆ. ಮುಂದಿನ ತಿಂಗಳಿಂದ (ಆಗಸ್ಟ್ 2026) ಜಾರಿಗೆ ಬರುವಂತೆ ಮಾರುತಿ ಸುಜುಕಿ (Maruti Suzuki) ತನ್ನ ವಿವಿಧ ಮಾಡಲ್​ಗಳ ಕಾರುಗಳ ಬೆಲೆಯನ್ನು ₹30,000 ವರೆಗೆ ಏರಿಕೆ ಮಾಡುವುದಾಗಿ ಘೋಷಿಸಿದೆ. ಕಾರು ಉತ್ಪಾದನಾ ವೆಚ್ಚಗಳು (Input costs) ಮತ್ತು ಹಣದುಬ್ಬರದ ಒತ್ತಡ ನಿರಂತರವಾಗಿ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಈ…

Read More

ಪ್ರಧಾನಿ ನಿವಾಸದ ಬಳಿ ಧರಣಿ ನಡೆಸುತ್ತಿದ್ದ ರಾಹುಲ್ ಗಾಂಧಿ ಪೊಲೀಸ್ ವಶಕ್ಕೆ  – Kannada News | Delhi Police detained Rahul Gandhi, Priyanka Gandhi from Congress protest site near PM Modi residence

ನವದೆಹಲಿ, ಜುಲೈ 21: ನೀಟ್ ಪ್ರಶ್ನೆಪತ್ರಿಕೆ ಸೋರಿಕೆ (NEET Paper Leak) ಹಗರಣ ಮತ್ತು ಸೋಮವಾರ ನಡೆಸಲಾದ ಯುವ ಪ್ರತಿಭಟನಾಕಾರರ ಮೇಲಿನ ಪೊಲೀಸ್ ದೌರ್ಜನ್ಯವನ್ನು ಖಂಡಿಸಿ ಪ್ರಧಾನಮಂತ್ರಿ ನರೇಂದ್ರ ಮೋದಿ (PM Narendra Modi) ಅವರ ನಿವಾಸದ ಬಳಿ ನಡೆಯುತ್ತಿದ್ದ ವಿರೋಧ ಪಕ್ಷಗಳ ಬೃಹತ್ ಧರಣಿ ಸತ್ಯಾಗ್ರಹವನ್ನು ದೆಹಲಿ ಪೊಲೀಸರು ಇಂದು ಸಂಜೆ ವೇಳೆ ಅಂತ್ಯಗೊಳಿಸಿದ್ದಾರೆ. ಸ್ಥಳದಿಂದ ಕದಲುವುದಿಲ್ಲ ಎಂದು ಪಟ್ಟು ಹಿಡಿದು ರಸ್ತೆಯಲ್ಲೇ ಕುಳಿತಿದ್ದ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ (Rahul Gandhi),…

Read More

ಅದೃಷ್ಟ ಮತ್ತು ಅಂಡಾಶಯದ ಲಾಟರಿ; ತಮ್ಮ ಯಶಸ್ಸಿನ ಸೀಕ್ರೆಟ್ ಬಿಚ್ಚಿಟ್ಟ ವಾರನ್ ಬಫೆಟ್ – Kannada News | Warren Buffett reveals Ovarian Lottery and Luck factors in his success

ವಾರನ್ ಬಫೆಟ್Image Credit source: Ankit Agrawal/Mint via Getty Images ವಿಶ್ವದ ಅತ್ಯಂತ ಯಶಸ್ವಿ ಹಾಗೂ ಪ್ರಸಿದ್ಧ ಹೂಡಿಕೆದಾರರಲ್ಲಿ ಒಬ್ಬರಾದ ವಾರನ್ ಬಫೆಟ್ (Warren Buffett), ತಮ್ಮ ಅಪಾರ ಯಶಸ್ಸಿನ ಹಿಂದಿರುವ ಮುಖ್ಯ ರಹಸ್ಯ “ಅದೃಷ್ಟ” ಎಂದು ಮುಕ್ತವಾಗಿ ಒಪ್ಪಿಕೊಂಡಿದ್ದಾರೆ. ವಿಶ್ವದ ಟಾಪ್-10 ಶ್ರೀಮಂತರಲ್ಲಿ ಒಬ್ಬರಾದ ಅವರು, ಜಗತ್ತಿನ 800 ಕೋಟಿ ಜನಸಂಖ್ಯೆಯಲ್ಲಿ ತಾವು ಅತ್ಯಂತ ಅದೃಷ್ಟಶಾಲಿ 10 ಜನರಲ್ಲಿ ಒಬ್ಬರಿರಬಹುದು ಎಂದಿದ್ದಾರೆ. ತಮ್ಮ ಜೀವನದ ಯಶಸ್ಸಿಗೆ ‘ಅಂಡಾಶಯದ ಲಾಟರಿ’ಯೂ (Ovarian Lottery) ಕಾರಣವಿರಬಹುದು ಎಂದಿದ್ದಾರೆ…

Read More

ಕೃಷ್ಣಾ ನದಿಗೆ ಹರಿದುಬಂತು 60,000 ಕ್ಯೂಸೆಕ್ ನೀರು: ಜಲಾವೃತವಾಯ್ತು ಸೇತುವೆ, ಗ್ರಾಮಗಳ ನಡುವೆ ಸಂಪರ್ಕ ಕಡಿತ

ಚಿಕ್ಕೋಡಿ, ಜು.21: ಮಹಾರಾಷ್ಟ್ರದ ಪಶ್ಚಿಮಘಟ್ಟ ಪ್ರದೇಶದಲ್ಲಿ ಅಬ್ಬರದ ಮಳೆಯಿಂದಾಗಿ ಕೃಷ್ಣಾ ನದಿಗೆ ಅಪಾರ ಪ್ರಮಾಣದಲ್ಲಿ ನೀರು ಹರಿದುಬರುತ್ತಿದೆ. ಇದರಿಂದಾಗಿ ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ತಾಲೂಕಿನಲ್ಲಿರುವ ಯಡೂರು ಮತ್ತು ಕಲ್ಲೋಳ ಗ್ರಾಮಗಳನ್ನು ಸಂಪರ್ಕಿಸುವ ಸೇತುವೆ ಸಂಪೂರ್ಣವಾಗಿ ಜಲಾವೃತಗೊಂಡಿದೆ. ಕಳೆದ ಎರಡು ದಿನಗಳಿಂದ ಸುರಿಯುತ್ತಿರುವ ಭಾರೀ ಮಳೆಯ ಪರಿಣಾಮವಾಗಿ ನದಿ ನೀರಿನ ಮಟ್ಟದಲ್ಲಿ ಗಣನೀಯ ಏರಿಕೆ ಕಂಡುಬಂದಿದೆ. ಪ್ರಸ್ತುತ ಕೃಷ್ಣಾ ನದಿಯಲ್ಲಿ ಸುಮಾರು 60,000 ಕ್ಯೂಸೆಕ್ ನೀರು ಹರಿಯುತ್ತಿದ್ದು, ಇದು ಪ್ರವಾಹ ಪರಿಸ್ಥಿತಿಗೆ ಕಾರಣವಾಗಿದೆ. ನದಿ ಮಟ್ಟ ಏರಿಕೆಯಾಗಿದ್ದರಿಂದ ಸೇತುವೆ…

Read More

ಪ್ರಧಾನಿ ಮನೆ ಮುಂದೆ ಕರ್ನಾಟಕದ ಸಿಎಂ ಡಿ.ಕೆ. ಶಿವಕುಮಾರ್ ಕೂಡ ಧರಣಿ – Kannada News | Karnataka CM DK Shivakumar also joins the protest outside th PM Residence in Delhi

ನವದೆಹಲಿ, ಜುಲೈ 21: ನೀಟ್ ಪ್ರಶ್ನೆಪತ್ರಿಕೆ ಸೋರಿಕೆ (NEET Paper Leak)  ಹಗರಣವನ್ನು ಖಂಡಿಸಿ ಹಾಗೂ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಆಗ್ರಹಿಸಿ ನವದೆಹಲಿಯ ಲೋಕ್ ಕಲ್ಯಾಣ್ ಮಾರ್ಗದಲ್ಲಿರುವ ಪ್ರಧಾನಮಂತ್ರಿಗಳ ಅಧಿಕೃತ ನಿವಾಸದ ಮುಂಭಾಗ ನಡೆಯುತ್ತಿರುವ ಕಾಂಗ್ರೆಸ್‌ನ ಬೃಹತ್ ಧರಣಿ ಸತ್ಯಾಗ್ರಹದಲ್ಲಿ ಕರ್ನಾಟಕದ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ (DK Shivakumar), ಕೇರಳದ ಮುಖ್ಯಮಂತ್ರಿ ಸತೀಶನ್ ಸೇರಿದಂತೆ ಹಲವು ಹಿರಿಯ ನಾಯಕರು ಬೆಂಬಲ ವ್ಯಕ್ತಪಡಿಸಿದ್ದಾರೆ. ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಮತ್ತು…

Read More