ಫುಟ್​​ಬಾಲ್ ವಿಶ್ವಕಪ್​​ನಲ್ಲೂ ‘ರಾಮಾಯಣ’, ಇದು ಸಾಮಾನ್ಯ ಸಾಹಸ ಅಲ್ಲ

ಪುಟ್ಬಾಲ್ (Footbal world cup) ವಿಶ್ವಕಪ್, ಇಡೀ ವಿಶ್ವದಲ್ಲಿ ಅತಿ ಹೆಚ್ಚು ಜನ ಒಂದೇ ಬಾರಿಗೆ ನೋಡುವ ಕ್ರೀಡಾಕೂಟ. ಇತ್ತೀಚೆಗೆ ಮುಕ್ತಾಯವಾಗಿ ಐಪಿಎಲ್ ಅನ್ನು ಒಂದು ಬಾರಿ ಹಾಟ್​​ಸ್ಟಾರ್​​ನಲ್ಲಿ ಸುಮಾರು 55 ಕೋಟಿ ಜನ ವೀಕ್ಷಿಸಿದ್ದು, ಅದು ಈ ವರೆಗಿನ ದಾಖಲೆ ಎಂದಾಗಿತ್ತು. ಆದರೆ ಫುಟ್​​ಬಾಲ್​​ನ ಒಂದು ಮ್ಯಾಚನ್ನು ಒಂದೇ ಬಾರಿಗೆ ಸುಮಾರು 100 ಕೋಟಿಗೂ ಹೆಚ್ಚು ಜನ ವೀಕ್ಷಿಸುತ್ತಾರೆ. ಐಪಿಎಲ್​​ ಕ್ರೀಡಾಕೂಟದ ಒಟ್ಟು ಖರ್ಚು, ಆಟಗಾರರ ಸಂಬಳವನ್ನೂ ಸೇರಿಸಿ ಗರಿಷ್ಠ ಎಂದರೆ 5000 ಕೋಟಿ ಆಗಿರಬಹದು. ಫಿಫಾ 2026ರ ಒಟ್ಟು ಖರ್ಚು 35 ಸಾವಿರ ಕೋಟಿಗೂ ಹೆಚ್ಚು ಎನ್ನಲಾಗುತ್ತದೆ. ಇಂಥಹಾ ವಿಶ್ವ ಜನಪ್ರಿಯ ಕ್ರೀಡಾಕೂಟದ ನಡುವಲ್ಲಿ ಭಾರತದ ಸಿನಿಮಾ ‘ರಾಮಾಯಣ’ದ ಗ್ಲಿಂಪ್ಸ್ ಪ್ರದರ್ಶನ ಆಗಲಿದೆ.

ಹೌದು, ಈ ಬಾರಿಯ ಫೀಫಾ 2026 ಪಂದ್ಯಾವಳಿಯ ಪಂದ್ಯಗಳ ನಡುವೆ ಭಾರತದ ಸಿನಿಮಾ ‘ರಾಮಾಯಣ’ದ ಗ್ಲಿಂಪ್ಸ್ ಪ್ರಸಾರ ಆಗಲಿದೆ. ಆ ಮೂಲಕ ‘ರಾಮಾಯಣ’ ಚಿತ್ರತಂಡ ಹಿಂದೆಂದೂ ಯಾವ ಭಾರತೀಯ ಸಿನಿಮಾ ಮಾಡಿರದ ಪ್ರಚಾರ ಸಾಹಸವನ್ನು ಮಾಡಲು ಮುಂದಾಗಿದೆ. ಕೆಲ ವಾರಗಳ ಹಿಂದಷ್ಟೆ ಅಮೆರಿಕದ ಪ್ರತಿಷ್ಟಿತ ಕಾಮಿಕಾನ್​​ನಲ್ಲಿ ‘ರಾಮಾಯಣ’ದ ಅದ್ಧೂರಿ ಪ್ರಚಾರ ಮಾಡಲಾಗಿತ್ತು. ಈಗ ನೇರವಾಗಿ ವಿಶ್ವದ ಅತ್ಯಂತ ದುಬಾರಿ, ಅತಿ ಹೆಚ್ಚು ಜನರು ನೋಡುವ ಇವೆಂಟ್​​ ನಲ್ಲಿ ಪ್ರಚಾರ ಮಾಡಲು ಮುಂದಾಗಿದೆ.

ಫುಟ್​​ಬಾಲ್ ವಿಶ್ವಕಪ್ ಅತ್ಯಂತ ದುಬಾರಿ ಕ್ರೀಡಾಕೂಟ ಆಗಿರುವ ಕಾರಣ ಇಲ್ಲಿ ಜಾಹೀರಾತಿಗೆ ಅವಕಾಶ ಪಡೆಯಲು ಸಹ ಭಾರಿ ಮೊತ್ತದ ಹಣವನ್ನೇ ಖರ್ಚು ಮಾಡಬೇಕಾಗುತ್ತದೆ. ಹಾಗಿದ್ದಲ್ಲಿಯೂ ‘ರಾಮಾಯಣ’ ಚಿತ್ರತಂಡ ಫುಟ್​​ಬಾಲ್ ಪಂದ್ಯದ ನಡುವೆ ಸಿನಿಮಾದ 20 ರಿಂದ 30 ಸೆಕೆಂಡುಗಳ ದೃಶ್ಯವನ್ನು ಪ್ರದರ್ಶಿಸಲು ಮುಂದಾಗಿದೆ. ಇದು ದೊಡ್ಡ ಖರ್ಚಿನ ಬಾಬತ್ತಾಗಲಿದೆ.

ಇದನ್ನೂ ಓದಿ:ಮ್ಯಾಂಗೋ ಪಚ್ಚ ಸಿನಿಮಾದಲ್ಲಿ ಮಿಂಚಿದ ಕಾಜಲ್ ಕುಂದರ್

‘ರಾಮಾಯಣ’ ಸಿನಿಮಾವನ್ನು ನಮಿತ್ ಮಲ್ಹೋತ್ರಾ ಮತ್ತು ಯಶ್ ಅವರು ಜಂಟಿಯಾಗಿ ನಿರ್ಮಾಣ ಮಾಡಿದ್ದಾರೆ. ಸಿನಿಮಾನಲ್ಲಿ ರಾಮನ ಪಾತ್ರದಲ್ಲಿ ರಣ್​​ಬೀರ್ ಕಪೂರ್ ನಟಿಸಿದ್ದಾರೆ. ಸೀತೆಯ ಪಾತ್ರದಲ್ಲಿ ಸಾಯಿ ಪಲ್ಲವಿ ನಟಿಸಿದ್ದಾರೆ. ರಾವಣನ ಪಾತ್ರದಲ್ಲಿ ಯಶ್ ಅವರು ನಟಿಸಿದ್ದಾರೆ. ಸಿನಿಮಾವನ್ನು ‘ದಂಗಲ್’ ಖ್ಯಾತಿಯ ನಿತೀಶ್ ತಿವಾರಿ ನಿರ್ದೇಶನ ಮಾಡಿದ್ದಾರೆ. ಸಿನಿಮಾ ಇದೇ ವರ್ಷ ದೀಪಾವಳಿಗೆ ಬಿಡುಗಡೆ ಆಗಲಿದೆ.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Source link

ತ್ರಿಕೋನ ಸರಣಿಗಾಗಿ ಶ್ರೀಲಂಕಾಕ್ಕೆ ತೆರಳಿದ ಭಾರತ ಎ ತಂಡ; ವೈಭವ್ ಹಿಂದೆ ಬಿದ್ದ ಫ್ಯಾನ್ಸ್ – Kannada News

ಒಂದೆಡೆ ಭಾರತ ಹಾಗೂ ಅಫ್ಘಾನಿಸ್ತಾನ ತಂಡಗಳು ಟೆಸ್ಟ್ ಪಂದ್ಯದಲ್ಲಿ ಕಣಕ್ಕಿಳಿಯಲು ಸಜ್ಜಾಗಿದ್ದರೆ, ಇನ್ನೊಂದೆಡೆ ತಿಲಕ್ ವರ್ಮಾ (Tilak Varma) ನೇತೃತ್ವದ ಭಾರತ ಎ ತಂಡ (India A squad) ತ್ರಿಕೋನ ಸರಣಿಗಾಗಿ ಶ್ರೀಲಂಕಾಗೆ ತೆರಳಿದೆ. ಭಾರತ, ಶ್ರೀಲಂಕಾ ಹಾಗೂ ಅಫ್ಘಾನಿಸ್ತಾನ ಎ ತಂಡಗಳ ನಡುವೆ ಏಕದಿನ ತ್ರಿಕೋನ ಸರಣಿ (Tri-nation series) ನಡೆಯಲಿದೆ. ಈ ಸರಣಿಗಾಗಿ ಬಿಸಿಸಿಐ ಈಗಾಗಲೇ ಭಾರತ ಎ ತಂಡವನ್ನು ಸಹ ಪ್ರಕಟಿಸಿದೆ. ಜೂನ್ 9 ರಿಂದ ಪ್ರಾರಂಭವಾಗಲಿರುವ ತ್ರಿಕೋನ ಸರಣಿಗಾಗಿ ಭಾರತ ಯುವ ಪಡೆ ಇಂದು ಭಾರತದಿಂದ ಶ್ರೀಲಂಕಾಗೆ ತೆರಳಿದೆ ತಂಡದ ಆಟಗಾರರು ಜೊತೆಯಾಗಿ ಶ್ರೀಲಂಕಾಗೆ ಪ್ರಯಾಣಿಸಿರುವ ಫೋಟೋಗಳನ್ನು ಬಿಸಿಸಿಐ ಹಂಚಿಕೊಂಡಿದೆ.

ತಿಲಕ್ ನಾಯಕ, ಪರಾಗ್ ಉಪನಾಯಕ

ಮೇಲೆ ಹೇಳಿದಂತೆ ಈ ಸರಣಿಗೆ ತಿಲಕ್ ವರ್ಮಾ ಅವರನ್ನು ಭಾರತ ಎ ತಂಡದ ನಾಯಕರನ್ನಾಗಿ ನೇಮಿಸಲಾಗಿದ್ದು, ರಿಯಾನ್ ಪರಾಗ್​ಗೆ ಉಪನಾಯಕತ್ವ ನೀಡಲಾಗಿದೆ. ಈ ಸರಣಿಯ ನಂತರ ಭಾರತ ಎ, ಶ್ರೀಲಂಕಾ ಎ ವಿರುದ್ಧ ಎರಡು ಬಹು-ದಿನದ (ರೆಡ್-ಬಾಲ್) ಪಂದ್ಯಗಳನ್ನು ಸಹ ಆಡಲಿದೆ. ಈ ಟೆಸ್ಟ್ ಪಂದ್ಯಗಳಿಗೆ ತಂಡವನ್ನು ನಂತರ ಪ್ರಕಟಿಸಲಾಗುವುದು. ತ್ರಿಕೋನ ಸರಣಿಯು ಜೂನ್ 9 ರಂದು ಪ್ರಾರಂಭವಾಗಲಿದ್ದು, ಜೂನ್ 21 ರಂದು ಫೈನಲ್ ಪಂದ್ಯ ನಡೆಯಲಿದೆ. ಎಲ್ಲಾ ತಂಡಗಳು ಪರಸ್ಪರ ಎರಡು ಬಾರಿ ಮುಖಾಮುಖಿಯಾಗಲಿದ್ದು, ಅಗ್ರ ಎರಡು ತಂಡಗಳು ಫೈನಲ್‌ನಲ್ಲಿ ಮುಖಾಮುಖಿಯಾಗಲಿವೆ.

ಏಕದಿನ ತ್ರಿಕೋನ ಸರಣಿ ವೇಳಾಪಟ್ಟಿ

  • ಜೂನ್ 9: ಭಾರತ ಎ vs ಶ್ರೀಲಂಕಾ ಎ
  • ಜೂನ್ 11: ಭಾರತ ಎ vs ಅಫ್ಘಾನಿಸ್ತಾನ ಎ
  • ಜೂನ್ 13: ಅಫ್ಘಾನಿಸ್ತಾನ ಎ ವಿರುದ್ಧ ಶ್ರೀಲಂಕಾ ಎ
  • ಜೂನ್ 15: ಭಾರತ ಎ vs ಶ್ರೀಲಂಕಾ ಎ
  • ಜೂನ್ 17: ಭಾರತ ಎ vs ಅಫ್ಘಾನಿಸ್ತಾನ ಎ
  • ಜೂನ್ 19: ಅಫ್ಘಾನಿಸ್ತಾನ ಎ ವಿರುದ್ಧ ಶ್ರೀಲಂಕಾ ಎ
  • ಜೂನ್ 21: ಫೈನಲ್ ಪಂದ್ಯ

ಶ್ರೀಲಂಕಾದಲ್ಲಿ ವೈಭವ್ ಕ್ರೇಜ್ ಹೇಗಿದೆ ನೋಡಿ

ಏಕದಿನ ತ್ರಿಕೋನ ಸರಣಿಗೆ ಭಾರತ ಎ ತಂಡ: ತಿಲಕ್ ವರ್ಮಾ (ನಾಯಕ), ಪ್ರಿಯಾಂಶ್ ಆರ್ಯ, ವೈಭವ್ ಸೂರ್ಯವಂಶಿ, ರಿಯಾನ್ ಪರಾಗ್ (ಉಪನಾಯಕ), ಆಯುಷ್ ಬದೋನಿ, ನಿಶಾಂತ್ ಸಿಂಧು, ಸೂರ್ಯಾಂಶ್ ಶೆಡ್ಗೆ, ಪ್ರಭುಸಿಮ್ರಾನ್ ಸಿಂಗ್ (ವಿಕೆಟ್ ಕೀಪರ್), ಕುಮಾರ್ ಕುಶಾಗ್ರ (ವಿಕೆಟ್ ಕೀಪರ್), ವಿಪ್ರಜ್ ನಿಗಮ್, ಯಶ್ ಠಾಕೂರ್, ಯುಧ್ವೀರ್ ಸಿಂಗ್, ಅಂಶುಲ್ ಕಾಂಬೋಜ್, ಅರ್ಷದ್ ಖಾನ್, ಅನುಕೂಲ್ ರಾಯ್.

Source link

ಸುದೀಪ್ ಅಕ್ಕನ ಮಗನ ಸಿನಿಮಾನಲ್ಲಿ, ಶ್ರೀಮುರಳಿ ಅಕ್ಕನ ಮಗ

ಸುದೀಪ್ (Sudeep) ಅಕ್ಕನ ಮಗ ಸಂಚಿತ್ ಸಂಜೀವ್ ನಟನೆಯ ‘ಮ್ಯಾಂಗೊ ಪಚ್ಚ’ ಸಿನಿಮಾ ಇಂದು (ಜೂನ್ 4) ಬಿಡುಗಡೆ ಆಗಿದೆ. ಸಿನಿಮಾಕ್ಕೆ ನಟ ಸುದೀಪ್ ಅವರು ಸಿನಿಮಾಕ್ಕೆ ಬೆಂಬಲ ನೀಡಿದ್ದು, ಸಿನಿಮಾಕ್ಕೆ ಸುದೀಪ್ ಅವರ ಪತ್ನಿ ಮತ್ತು ಮಗಳು ಬಂಡವಾಳ ಹೂಡಿದ್ದರು. ವಿಶೇಷವೆಂದರೆ ಇದೇ ಸಿನಿಮಾನಲ್ಲಿ ನಟ ಶ್ರೀಮುರಳಿ ಅವರ ಅಕ್ಕನ ಮಗ ಜೈ ಸಹ ನಟಿಸಿದ್ದಾರೆ. ಅವರಿಗೂ ಇದು ಮೊದಲ ಸಿನಿಮಾ ಅಂತೆ. ತಮ್ಮ ಹಾಗೂ ಸಂಚಿತ್ ಸಂಗೀವ್ ನಡುವಿನ ಬಾಂಧವ್ಯದ ಬಗ್ಗೆ ಜೈ ಅವರು ಟಿವಿ9 ಜೊತೆಗೆ ಮಾತನಾಡಿದ್ದಾರೆ. ವಿಡಿಯೋ ನೋಡಿ…

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Source link

‘ಜನ ನಾಯಗನ್’ ಸಿನಿಮಾ ಬಿಡುಗಡೆಗೆ ಮಾಡಲು ಬಿಡಲ್ಲ: ವಾಟಾಳ್ ಕ್ಯಾತೆ – Kannada News

ಪ್ಯಾನ್ ಇಂಡಿಯಾ (Pan India) ಜಮಾನಾನಲ್ಲಿ ಒಂದು ರಾಜ್ಯದ ಸಿನಿಮಾ ಮತ್ತೊಂದು ರಾಜ್ಯದಲ್ಲಿ ಬಿಡುಗಡೆ ಆಗುವುದು ಸಾಮಾನ್ಯ ವಿಷಯ ಎಂದಾಗಿದೆ. ಕರ್ನಾಟಕವಂತೂ ಪ್ಯಾನ್ ಇಂಡಿಯಾ ಮಾರುಕಟ್ಟೆಯ ಬಲು ಪ್ರಮುಖ ನಗರವಾಗಿದೆ. ಐಪಿಎಲ್ ಮುಗಿದಿದ್ದು, ಸಾಲು-ಸಾಲು ಸಿನಿಮಾಗಳು ಬಿಡುಗಡೆಗೆ ತಯಾರಾಗುತ್ತಿವೆ. ಅವುಗಳಲ್ಲಿ ಕೆವಿಎನ್ ನಿರ್ಮಾಣದ ತಮಿಳುನಾಡಿ ಸಿಎಂ ವಿಜಯ್ ನಟನೆಯ ‘ಜನ ನಾಯಗನ್’ ಸಹ ಒಂದು. ಆದರೆ ಇದೀಗ ಕನ್ನಡಪರ ಸಂಘಟನೆಗಳ ಮುಖಂಡ ವಾಟಾಳ್ ನಾಗರಾಜ್ ಮಾತನಾಡಿ, ತಾವು ‘ಜನ ನಾಯಗನ್’ ಸಿನಿಮಾ ಬಿಡುಗಡೆಗೆ ವಿರೋಧ ವ್ಯಕ್ತಪಡಿಸುತ್ತಿದ್ದು, ಬಿಡುಗಡೆಗೆ ತಡೆಯುತ್ತೇವೆ ಎಂದಿದ್ದಾರೆ.

ಇಂದು (ಜೂನ್ 05) ಮಾಧ್ಯಮಗಳ ಜೊತೆಗೆ ಮಾತನಾಡಿದ ವಾಟಾಳ್ ನಾಗರಾಜ್, ‘ಈಗಿನ ತಮಿಳುನಾಡು ಮುಖ್ಯಮಂತ್ರಿ ವಿಜಯ್, ಮೇಕೆದಾಟು ಯೋಜನೆಗೆ ವಿರೋಧ ವ್ಯಕ್ತಪಡಿಸುತ್ತಿದ್ದಾರೆ. ಅವರು ನಟರಾಗಿದ್ದವರು ಈಗ ಅಧಿಕಾರಕ್ಕೆ ಬಂದಿದ್ದಾರೆ. ನಟನೆ ಮಾಡುವುದು ಸುಲಭ ಆದರೆ ಅಧಿಕಾರ ನಡೆಸುವುದು ಕಷ್ಟ. ಮೇಕೆದಾಟಿಗೆ ವಿರೋಧ ಮಾಡಿದರೆ ಕರ್ನಾಟಕದಲ್ಲಿ ಅವರ ಯಾವುದೇ ಸಿನಿಮಾ ಬಿಡುಗಡೆಗೆ ಅವಕಾಶ ಕೊಡಲ್ಲ’ ಎಂದು ವಾಟಾಳ್ ಹೇಳಿದ್ದಾರೆ.

ಇದನ್ನೂ ಓದಿ:‘ಪೆದ್ದಿ’ ಸಿನಿಮಾನಲ್ಲಿ ಜಾನ್ಹವಿ ಕಪೂರ್ ಪಾತ್ರದ ಬಗ್ಗೆ ಟೀಕೆ ಏಕೆ?

ಈಗಾಗಲೇ ಕಮಲ್ ಹಾಸನ್ ಅವರ ಸಿನಿಮಾವನ್ನು ರಾಜ್ಯದಲ್ಲಿ ಬಿಡುಗಡೆ ಆಗದಂತೆ ತಡೆಯಲು ಯಶಸ್ವಿ ಆಗಿದ್ದೇವೆ. ಕಮಲ್ ಹಾಸನ್, ಕನ್ನಡದ ಬಗ್ಗೆ ನಿಕೃಷ್ಟವಾಗಿ ಮಾತನಾಡಿದ್ದನ್ನು ವಿರೋಧಿಸಿ ಅವರಿಗೆ ಬುದ್ಧೀ ಕಲಿಸಿದ್ದೇವೆ. ಅದೇ ರೀತಿ, ಮೇಕೆದಾಟಿಗೆ ವಿರೋಧ ಮಾಡುತ್ತಿರುವ ತಮಿಳುನಾಡು ಸಿಎಂ ಅವರಿಗೂ ನಾವು ಬುದ್ಧಿ ಕಲಿಸುತ್ತೇವೆ’ ಎಂದು ವಾಟಾಳ್ ಹೇಳಿದ್ದಾರೆ. ವಿಜಯ್ ಅವರು ಸಿಎಂ ಆದ ಬಳಿಕ ಮೇಕೆದಾಟು ವಿವಾದದ ಬಗ್ಗೆ ಸುಪ್ರೀಂಕೋರ್ಟ್​​ನಲ್ಲಿ ಪುನರ್​​ಪರಿಶೀಲನೆ ಅರ್ಜಿ ಹಾಕಿದ್ದಾರೆ. ಅಲ್ಲದೆ ಇತ್ತೀಚೆಗೆ ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿ ಆದಾಗ ಮೇಕೆದಾಟು ಬಗ್ಗೆ ಪ್ರಸ್ತಾಪಿಸಿದ್ದು, ಯೋಜನೆಗೆ ವಿರೋಧ ವ್ಯಕ್ತಪಡಿಸಿದ್ದಾರೆ. ವಿಜಯ್ ಅವರ ಈ ಕರ್ನಾಟಕ ವಿರೋಧಿ ಚಿಂತನೆ ಕನ್ನಡಪರ ಸಂಘಟನೆಗಳನ್ನು ಕೆರಳಿಸಿದೆ.

ವಿಜಯ್ ನಟನೆಯ ‘ಜನ ನಾಯಗನ್’ ಸಿನಿಮಾ ಶೀಘ್ರವೇ ಬಿಡುಗಡೆ ಆಗುವ ಸಾಧ್ಯತೆ ಇದೆ. ಜನವರಿಯಲ್ಲೇ ಬಿಡುಗಡೆ ಆಗಬೇಕಿದ್ದ ಈ ಸಿನಿಮಾ ಈ ವರೆಗೆ ಬಿಡುಗಡೆ ಆಗಿಲ್ಲ. ಕೆವಿಎನ್ ನಿರ್ಮಾಣ ಸಂಸ್ಥೆ ಈ ಸಿನಿಮಾವನ್ನು ನಿರ್ಮಿಸಿದೆ. ಒಂದೊಮ್ಮೆ ‘ಜನ ನಾಯಗನ್’ ಸಿನಿಮಾ ಕರ್ನಾಟಕದಲ್ಲಿ ಬಿಡುಗಡೆ ಆಗದಿದ್ದಲ್ಲಿ ನಿರ್ಮಾಪಕರಿಗೆ ಭಾರಿ ದೊಡ್ಡ ನಷ್ಟವೇ ಆಗಲಿದೆ.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Source link

ಯಾವುದೇ ಕಾರಣಕ್ಕೂ ರಾಮಲಿಂಗಾರೆಡ್ಡಿ ಖಾತೆ ಬದಲಾವಣೆ ಇಲ್ಲ: ಕಡ್ಡಿ ಮುಂರಿದಂತೆ ಹೇಳಿದ ಹೈಕಮಾಂಡ್ – Kannada News

ಬೆಂಗಳೂರು, (ಜೂನ್ 05): ಸರ್ಕಾರ ರಚನೆಯಾಗಿ ಎರಡು ದಿನವಾಯ್ತು. 48 ಗಂಟೆ ಕಳೆಯೊವಷ್ಟರಲ್ಲೇ ಅಸಮಾಧಾನದ ಬಾಂಬ್ ಸಿಡಿದಿದೆ. ಕೊಟ್ಟ ಮಾತು, Word Power is World Power ಎಂದು ಸಿಎಂ ಡಿಕೆ ಶಿವಕುಮಾರ್ (DK Shivakumar) ಹೇಳಿದ್ದ ಮಾತನ್ನ ಉಲ್ಲೇಖಿಸಿ ರಾಮಲಿಂಗಾರೆಡ್ಡಿ  (DK Shivakumar)  ಬೆಂಬಲಿಗರು ರಾಂಗ್ ಆಗಿದ್ರೆ, ಇನ್ನೊಂದೆಡೆ ಬೆಂಗಳೂರಿನ ಪವರ್ ಫುಲ್ ರಾಜಕಾರಣಿ ರಾಮಲಿಂಗಾರೆಡ್ಡಿ ಅವರು ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಹೌದು…ಸರ್ಕಾರಕ್ಕೆ ಬಂಗಾರದ ಖಜಾನೆ, ಸರ್ಕಾರದ ಆರ್ಥಿಕತೆಯ ಪವರ್ ಹೌಸ್ ಇದೇ ಪವರ್ ಹೌಸ್‌ಗಾಗಿ ಡಿಕೆ ಸರ್ಕಾರದಲ್ಲಿ ಹಗ್ಗಜಗ್ಗಾಟ ನಡೀತಿದೆ. ಬೆಂಗಳೂರು ಅಭಿವೃದ್ಧಿ ಖಾತೆ ಸಿಗುತ್ತೆಂಬ ನಿರೀಕ್ಷೆಯಲ್ಲಿದ್ದ ಸೌಮ್ಯ ಸ್ವಭಾದ ರಾಜಕಾರಣಿ, ಬೆಂಗಳೂರಲ್ಲಿ ಹಿಡಿತ ಹೊಂದಿರುವ ನಾಯಕ ರಾಮಲಿಂಗಾರೆಡ್ಡಿ ರಾಜೀನಾಮೆ ನೀಡಿದ್ದು, ನೀವು ಕೊಟ್ಟ ಜಲಸಂಪನ್ಮೂಲ ಸಚಿವ ಸ್ಥಾನ ನನಗೆ ಬೇಡ. ಆತ್ಮಸಾಕ್ಷಿಗೆ ವಿರುದ್ಧವಾಗಿ ಕೆಲಸ ಮಾಡಲು ಆಗಲ್ಲ ಅಂತಾ ಮಂತ್ರಿ ಸ್ಥಾನ ತೊರೆದಿದ್ದಾರೆ. ಇದರಿಂದ ಅಲ್ಲೋಲ ಕಲ್ಲೋಲ ಸೃಷ್ಟಿಸಿದ್ದು, ಸಿಎಂ ಡಿಕೆ ಶಿವಕುಮಾರ್ ಅವರು ರಾಮಲಿಂಗಾರೆಡ್ಡಿ ಮನವೊಲಿಕೆಗೆ ಇನ್ನಿಲ್ಲದ ಕಸರತ್ತು ನಡೆಸಿದ್ದಾರೆ. ಆದ್ರೆ, ಹೈಕಮಾಂಡ್ ಮಾತ್ರ ಯಾವುದೇ ಕಾರಣಕ್ಕೂ ಖಾತೆ ಬದಲಾವಣೆ ಇಲ್ಲ ಎಂದು ಕಡ್ಡಿ ಮುಂರಿದಂತೆ ಹೇಳಿದೆ.

ಮಾತುಕತೆ ಮೂಲಕ ರಾಮಲಿಂಗಾರೆಡ್ಡಿ ಮನವೊಲಿಸುವಂತೆ ಸಿಎಂ ಡಿಕೆ ಶಿವಕುಮಾರ್ ಗೆ ಸೂಚನೆ ನೀಡಿದೆ. ಆದ್ರೆ, ರಾಮಲಿಂಗಾರೆಡ್ಡಿ ಖಾತೆ ಬದಲಾವಣೆ ಮಾಡಿ ಬೆಂಗಳೂರು ಅಭಿವೃದ್ಧಿ ಖಾತೆ ನೀಡಲು ಹೈಕಮಾಂಡ್ ನಿರಾಕರಿಸಿದೆ. ಯಾಕಂದ್ರೆ, ಒಬ್ಬರ ಬೇಡಿಕೆಗೆ ಸ್ಪಂದಿಸಿದರೆ ಇತರೆ ಸಚಿವರು ಸಹ ತಮ್ಮ ಖಾತೆ ಬದಲಾವಣೆ ಮಾಡುವಂತೆ ಒತ್ತಡದ ಹೇರುವ ಸಾಧ್ಯತೆಗಳಿವೆ. ಈಗ ಮಾತ್ರವಲ್ಲ ಮುಂದೆ ಸಂಪುಟ ವಿಸ್ತರಣೆ ವೇಳೆಯೂ ಬೇಡಿಕೆ ಹೆಚ್ಚಾಗುವ ಸಾಧ್ಯತೆಯಿದೆ. ಆದ್ದರಿಂದ ರಾಮಲಿಂಗಾರೆಡ್ಡಿ ಖಾತೆ ಬದಲಾವಣೆಗೆ ಹೈಕಮಾಂಡ್ ಒಪ್ಪಿಗೆ ನೀಡುತ್ತಿಲ್ಲ ಎಂದು ತಿಳಿದುಬಂದಿದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

Source link

ರೋಗಿಯ ಅಸಹಾಯಕತೆಯನ್ನೇ ಬಂಡವಾಳ ಮಾಡಿಕೊಂಡ ವಂಚಕರು: ಚಿಕಿತ್ಸೆ ಕೊಡಿಸುವ ನೆಪದಲ್ಲಿ ವಂಚನೆ – Kannada News

ಬೆಂಗಳೂರು, ಜೂನ್​ 05: ಪಾರ್ಶ್ವವಾಯು ಕಾಯಿಲೆಗೆ ತುತ್ತಾಗಿದ್ದ ವ್ಯಕ್ತಿಗೆ ಚಿಕಿತ್ಸೆ ಕೊಡಿಸುವ ನೆಪದಲ್ಲಿ ಅಪರಿಚಿತರಿಬ್ಬರು ವಂಚನೆ (fraud) ಮಾಡಿದ್ದಾರೆ. ಜೀರಿಗೆ ಕಷಾಯ ಕುಡಿಸಿ 70 ಸಾವಿರ ರೂ ಹಣ ಪಡೆದು ಪರಾರಿಯಾಗಿರುವಂತಹ ಘಟನೆ ಬೆಂಗಳೂರು (bengaluru) ಚಂದ್ರಾಲೇಔಟ್ ವ್ಯಾಪ್ತಿಯ ಕಲ್ಯಾಣನಗರದಲ್ಲಿ ನಡೆದಿದೆ. ಸದ್ಯ ಮೋಸ ಹೋಗಿರುವ ವ್ಯಕ್ತಿ ಪೊಲೀಸ್ ಠಾಣೆಗೆ ದೂರು ನೀಡಿದ್ದು, ವಂಚಕರ ಸೆರೆಗೆ ಖಾಕಿ ಬಲೆ ಬೀಸಿದೆ.

ಮುಖ್ಯಾಂಶಗಳು

  • ರೋಗಿಯ ಅಸಹಾಯಕತೆಯನ್ನೇ ಬಂಡವಾಳ ಮಾಡಿಕೊಂಡ ಕಿರಾತಕರು
  • 20 ದಿನದಲ್ಲಿ ಎದ್ದು ಓಡಾಡ್ತೀರಿ ಅಂತ ಪುಂಗಿದ್ದರು ವಂಚಕರು
  • ಜೀರಿಗೆ ಕಷಾಯ ಕುಡಿಸಿ 70 ಸಾವಿರ ಪೀಕಿದರು

ಅಪರಿಚಿತರಿಬ್ಬರಿಂದ ವಂಚನೆ

ಬೆಂಗಳೂರಿನ ಚಂದ್ರಾಲೇಔಟ್ ಬಳಿಯ ಕಲ್ಯಾಣನಗರ ನಿವಾಸಿ ಲಕ್ಷ್ಮಣ್​ ಎಂಬುವವರಿಗೆ ಅಪರಿಚಿತರಿಬ್ಬರು ವಂಚನೆ ಮಾಡಿದ್ದಾರೆ. ಲಕ್ಷ್ಮಣ್ ಎಂಬುವವರು ಸುಮಾರು ವರ್ಷಗಳಿಂದ ಪಾರ್ಶ್ವವಾಯುಗೆ ತುತ್ತಾಗಿದ್ದು, ಚಿಕಿತ್ಸೆ ಪಡೆಯುತ್ತಿದ್ದರು. ಬೇರೆ ಬೇರೆ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆದರೂ ಏನು ಪ್ರಯೋಜನ ಆಗಿರಲಿಲ್ಲ. ಹೀಗಿರುವಾಗ ಅದೊಂದು ವಂಚನೆಯ ಗ್ಯಾಂಗ್ ಇವರ ಬೆನ್ನು ಬಿದ್ದಿದ್ದಾರೆ. ಲಕ್ಷ್ಮಣ್​​ರವರ ಮಾಹಿತಿ ಪಡೆದು ಸಂಪರ್ಕ ಮಾಡಿದ ಐನಾತಿಗಳು ಪಾರ್ಶ್ವವಾಯುಗೆ ಚಿಕಿತ್ಸೆ ಕೊಡುತ್ತೇವೆ ಅಂತ ಹೇಳಿದ್ದಾರೆ. ಇವರ ಮಾತು ನಂಬಿದ ಲಕ್ಷ್ಮಣ್ ಅವರನ್ನು ತಮ್ಮ ಮನೆಗೆ ಕರೆಸಿಕೊಂಡಿದ್ದಾರೆ.

ಇದನ್ನೂ ಓದಿ: ಪಾಕ್ ಉಗ್ರನ ಜತೆ ಯುವಕರಿಬ್ಬರ ನಂಟು ಬೆಸಿದಿದ್ಹೇಗೆ? ಇಲ್ಲಿದೆ ಕರ್ನಾಟಕ-ಪಾಕ್ ಜಾಲದ ರಹಸ್ಯ

ಪಾರ್ಶ್ವವಾಯುಗೆ ಗುಣಪಡಿಸುವುದಾಗಿ ಲಕ್ಷ್ಮಣ್ ಮನೆಗೆ ಬಂದಿದ್ದ ಇಬ್ಬರು ಅಪರಿಚಿತರು, ಮೊದಲಿಗೆ ಮಲ್ಲೇಶ್ವರಂನ ಸಿದ್ದಾಶ್ರಮದಿಂದ ಬಂದಿರುವುದಾಗಿ ಹೇಳಿದ್ದಾರೆ. ನಂತರ ಲಕ್ಷಣ್ ಅವರ ಮನೆಯಲ್ಲೇ ಒಂದು ಗ್ಲಾಸ್​ನಲ್ಲಿ ಜೀರಿಗೆ ಕಷಾಯ ರೆಡಿ ಮಾಡಿ ಕುಡಿಸಿದ್ದಾರೆ. ಕಷಾಯ ಕುಡಿದ ನಂತರ ಈ ಕಿರಾತಕರು, ಇನ್ನು 20 ಇಪ್ಪತ್ತು ದಿನಗಳಲ್ಲಿ ನೀವು ಎದ್ದು ಓಡಾಡುತ್ತೀರಿ ಅಂತ ಪುಂಗಿದ್ದಾರೆ.  ಅಲ್ಲದೆ ಇದಕ್ಕೆ 70 ರೂ ಸಾವಿರ ಖರ್ಚಾಗತ್ತೆ ಅಂತ ಹೇಳಿದ್ದಾರೆ.

70 ಸಾವಿರ ರೂ ಹಣ ಪಡೆದು ಎಸ್ಕೇಪ್

ನಾಳೆಯಿಂದ ನಿಮ್ಮ ಮನೆಗೆ ಬಂದು ನಾವೇ ಮಸಾಜ್ ಮಾಡುತ್ತೇವೆ ಅಂತ ನಂಬಿಸಿದ್ದಾರೆ. ಕೇವಲ ಒಂದು ಲೋಟ ಕಷಾಯ ಕೊಟ್ಟು 70 ಸಾವಿರ ರೂ ಹಣ ಪಡೆದು ವಂಚಕರು ಎಸ್ಕೇಪ್ ಆಗಿದ್ದಾರೆ. ಇದಾದನಂತರ, ಯಾವುದೇ ಚಿಕಿತ್ಸೆಯನ್ನ ನೀಡದೆ, ಫೋನ್ ಸ್ವಿಚ್ ಆಫ್ ಮಾಡ್ಕೊಂಡು ಕಳ್ಳಾಟವಾಡಿದ್ದಾರೆ. ಇತ್ತ ಅನುಮಾನಗೊಂಡ ಲಕ್ಷ್ಮಣ್ ಮಲ್ಲೇಶ್ವರಂನ ಸಿದ್ದಾಶ್ರಮದ ಬಳಿ ಹೋಗಿ ವಿಚಾರಿಸಿದ್ದಾರೆ. ಆವಾಗ ಬಂದಿರುವವರು ವಂಚಕರು ಅನ್ನೋದು ಗೊತ್ತಾಗಿದೆ.

ಇದನ್ನೂ ಓದಿ: ವನ್ಯಜೀವಿ ಬೇಟೆಗಾರರನ್ನು ಬಂಧಿಸಲು ಹೋದ ಅರಣ್ಯಾಧಿಕಾರಿಗಳ ಮೇಲೆ ಹಲ್ಲೆ! ನಾಲ್ವರ ಬಂಧನ

ಹಣ ಕೊಟ್ಟು ಮೋಸ ಹೋದ ಲಕ್ಷ್ಮಣ್, ಕೂಡಲೇ ಚಂದ್ರಲೇಔಟ್ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ. ಸದ್ಯ ಪ್ರಕರಣ ದಾಖಲಾಗಿದ್ದು, ಪೊಲೀಸರು ಸಿಸಿಟಿವಿ ವಶಕ್ಕೆ ಪಡೆದು ತನಿಖೆ ನಡೆಸುತ್ತಿದ್ದಾರೆ. ಕೆಲವು ವೈದ್ಯರು ಕೊಡುವ ಔಷಧಿಗಳಿಂದಲೇ ಕಾಯಿಲೆ ವಾಸಿಯಾಗುವುದಿಲ್ಲ. ಹೀಗಿರುವಾಗ ಜೀರಿಗೆ ನೀರು ಕುಡಿದರೆ ವಾಸಿಯಾಗುತ್ತಾ. ಇಂತಹ ಐನಾತಿಗಳ ಮಾತನ್ನ ನಂಬುವ ಮುಂಚೆ ಹುಷಾರಾಗಿರಿ. ಇಲ್ಲಾ ಅಂದರೆ ನೀವು ಸಾವಿರಾರ ರೂ ಕಳೆದುಕೊಳ್ಳಬಹುದು.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On – 10:24 pm, Fri, 5 June 26

Source link

ಬೆಂಗಳೂರು ವಿಶ್ವವಿದ್ಯಾಲಯದ 100 ಎಕರೆ ಜಾಗದ ಮೇಲೆ ಕಣ್ಣಾಕಿದ ಕೇಂದ್ರ ಸರ್ಕಾರ! – Kannada News

ಬೆಂಗಳೂರು, (ಜೂನ್ 05): ರಾಜ್ಯದ ಸರ್ಕಾರಿ ವಿಶ್ವವಿದ್ಯಾಲಯಗಳಲ್ಲಿ (Karnataka Universities)  ಬೆಂಗಳೂರು ವಿಶ್ವವಿದ್ಯಾಲಯ (Bengaluru University) ಪ್ರಮುಖವಾಗಿದ್ದು, ಗುಣಮಟ್ಟದ ಶಿಕ್ಷಣಕ್ಕೆ ಹೆಸರುವಾಸಿಯಾಗಿದೆ. 1200 ಎಕರೆ ಜಾಗದಲ್ಲಿ ಸ್ಥಾಪನೆಯಾದ ಬೆಂಗಳೂರು ವಿಶ್ವವಿದ್ಯಾಲ ಕ್ರಮೇಣ ಕಿರಿದಾಗಿದ್ದು,  ಈಗಾಗಲೇ 300ಕ್ಕೂ ಹೆಚ್ಚು ಎಕರೆ ಜಾಗವನ್ನು ಕೇಂದ್ರ ಹಾಗೂ ರಾಜ್ಯ ಸರ್ಕಾರದ ಸಂಸ್ಥೆಗಳಿಗೆ ಬಿಟ್ಟುಕೊಡಲಾಗಿದೆ. ಈ ವಿಚಾರಕ್ಕೆ ವಿರೋಧವಿದ್ದು,  ಇದರ ಮಧ್ಯೆ ಇದೀಗ ಮತ್ತೆ ಜ್ಞಾನಭಾರತಿ ಆವರಣದ ಮೇಲೆ  ಕೇಂದ್ರದ ಕಣ್ಣು ಬಿದ್ದಿದೆ. ಒಲಿಂಪಿಕ್ಸ್ ಟ್ರೈನಿಂಗ್ ಸೆಂಟರ್​ಗೆ 100 ಎಕರೆ ಜಾಗ ಬೇಕು ಎಂದು ಕೇಂದ್ರ ಸರ್ಕಾರ ಬೇಡಿಕೆ ಇಟ್ಟಿದೆ. ಆದರೆ ಇದಕ್ಕೆ ಭಾರೀ ವಿರೋಧ ವ್ಯಕ್ತವಾಗಿದೆ.

ಮುಖ್ಯಾಂಶಗಳು

  • ಬೆಂಗಳೂರು ವಿಶ್ವವಿದ್ಯಾಲಯದ 100 ಎಕರೆ ಜಾಗಕ್ಕೆ ಕೇಂದ್ರ ಸರ್ಕಾರ ಬೇಡಿಕೆ
  • ಒಲಿಂಪಿಕ್ಸ್ ಟ್ರೈನಿಂಗ್ ಸೆಂಟರ್ ನಿರ್ಮಾಣಕ್ಕೆ ಕೇಂದ್ರ ಸರ್ಕಾರದ ಪ್ಲಾನ್
  • ವಿಶ್ವವಿದ್ಯಾಲ ಕ್ಯಾಂಪಸ್​ನಲ್ಲಿ ಜಾಗ ಕೊಡಲ್ಲ ಎಂದ ವಿವಿ ಆಡಳಿತ
  • ಬೆಂಗಳೂರು ವಿವಿ ವಿದ್ಯಾರ್ಥಿಗಳಿಂದ ಕೇಂದ್ರ ನಡೆಗೆ ವಿರೋಧ

ಕ್ಯಾಂಪಸ್​ನಲ್ಲಿ ಜಾಗ ಕೊಡಲ್ಲ ಎಂದ ವಿವಿ ಆಡಳಿತ

ಸದ್ಯದ ಮಾಹಿತಿ ಪ್ರಕಾರ ಈಗಾಗಲೇ ಕ್ಯಾಂಪಸ್ ಕಿರಿದಾಗಿದ್ದು, ಶೈಕ್ಷಣಿಕ ವಾತಾವರಣ ಕ್ಷೀಣಿಸುತ್ತಿದೆ. ಹೀಗಾಗಿ ಕೇಂದ್ರ ಈ ಪ್ರಸ್ತಾವನೆಯನ್ನ ನಿರಾಕರಿಸಲು ಬೆಂಗಳೂರು ವಿಶ್ವವಿದ್ಯಾಲಯ ಆಡಳಿತ ನಿರ್ಧರಿಸಿದೆ. ವಿಶ್ವವಿದ್ಯಾಲಯ ವಿದ್ಯಾರ್ಥಿಗಳು ಕೂಡ ಇದಕ್ಕೆ ಸಹಮತ ವ್ಯಕ್ತಪಡಿಸಿದ್ದು, ಕ್ಯಾಂಪಸ್​ನ ವಿಶ್ವವಿದ್ಯಾಲಯಕ್ಕೆ ಸಂಬಂಧಿಸಿದ ಚಟುವಟಿಕೆಗಳಿಗೆ ಮಾತ್ರ ಬಳಕೆಯಾಗಬೇಕು ಎಂದು ಆಗ್ರಹಿಸಿದ್ದಾರೆ.

ಇದನ್ನೂ ಓದಿ: ರಾಮಲಿಂಗಾರೆಡ್ಡಿ ರಾಜೀನಾಮೆ: ಬೆಂಗಳೂರು ನಗರಾಭಿವೃದ್ಧಿ ಖಾತೆಗೆ ಯಾಕಿಷ್ಟು ಡಿಮ್ಯಾಂಡ್?

ಸದ್ಯ ಕ್ಯಾಂಪಸ್​ನಲ್ಲಿರುವ ಭಾರತೀಯ ಕ್ರೀಡಾ ಪ್ರಾಧಿಕಾರದ ಕ್ಯಾಂಪಸ್​ಗೆ ಹೊಂದಿಕೊಂಡಂತೆ ಇರುವ 100 ಎಕರೆ ಜಾಗ ಬೇಕು ಅಂತಾ ರಾಜ್ಯ ಉನ್ನತ ಶಿಕ್ಷಣ ಪರಿಷತ್​ಗೆ ಕೇಂದ್ರ ಬೇಡಿಕೆ ಇಟ್ಟಿದೆ. ಮುಂದಿನ ದಿನಗಳಲ್ಲಿ ವಿಶಾಲವಾದ ಜ್ಞಾನಭಾರತಿ ಆವರಣ ಉಳಿಯುತ್ತಾ ಎನ್ನುವುದನ್ನು ಕಾದುನೋಡಬೇಕಿದೆ.

ವರದಿ: ಲಕ್ಷ್ಮಿ ನರಸಿಂಹ ಟಿವಿ9 ಬೆಂಗಳೂರು

Source link

ಹೆಚ್ಚು ಬೆವರುತ್ತೀರಾ? ಈ ರೀತಿಯಾಗುವುದಕ್ಕೆ ಕಾರಣ ಏನ್ ಗೊತ್ತಾ? – Kannada News

ಬೆವರುವುದು (Excessive Sweating) ದೇಹದ ಸಹಜ ಪ್ರಕ್ರಿಯೆಯಾಗಿದೆ. ದೇಹದ ಉಷ್ಣತೆಯನ್ನು ನಿಯಂತ್ರಿಸಲು ಬೆವರು ಸಹಾಯ ಮಾಡುತ್ತದೆ. ಬಿಸಿಲು, ವ್ಯಾಯಾಮ ಅಥವಾ ಒತ್ತಡದ ಸಂದರ್ಭಗಳಲ್ಲಿ ಬೆವರು ಬರುವುದು ಸಾಮಾನ್ಯ. ಆದರೆ ಕೆಲವರಿಗೆ ಯಾವುದೇ ಹೆಚ್ಚು ಶಾರೀರಿಕ ಕೆಲಸವಿಲ್ಲದೇ ಹೆಚ್ಚು ಬೆವರು ಬರುವ ಸಮಸ್ಯೆ ಕಾಣಿಸಬಹುದು. ಇದನ್ನು ಸಾಮಾನ್ಯವೆಂದು ನಿರ್ಲಕ್ಷ್ಯ ಮಾಡಬಾರದು ಎಂದು ಆರೋಗ್ಯ ತಜ್ಞರು ಹೇಳುತ್ತಾರೆ. ಹೆಚ್ಚು ಬೆವರುವುದು ಕೆಲವೊಮ್ಮೆ ದೈನಂದಿನ ಜೀವನ, ಕೆಲಸದ ಸಾಮರ್ಥ್ಯ ಮತ್ತು ಆತ್ಮವಿಶ್ವಾಸದ ಮೇಲೂ ಪರಿಣಾಮ ಬೀರುತ್ತದೆ. ಕೆಲವು ಮಂದಿಗೆ ಕೈಗಳ ತಳಭಾಗ, ಕಾಲುಗಳು, ಮುಖ ಅಥವಾ ಸಂಪೂರ್ಣ ದೇಹದಲ್ಲೇ ಅಧಿಕ ಬೆವರು ಕಾಣಿಸಬಹುದು. ಆದ್ದರಿಂದ ಇದರ ಹಿಂದೆ ಇರುವ ಕಾರಣಗಳನ್ನು ತಿಳಿದುಕೊಳ್ಳುವುದು ಅಗತ್ಯವಾಗಿದೆ. ಹಾಗಾದರೆ ಹೆಚ್ಚು ಬೆವರು ಬರುವ ಪ್ರಮುಖ ಕಾರಣಗಳೇನು, ಯಾವ ಲಕ್ಷಣಗಳನ್ನು ನಿರ್ಲಕ್ಷ್ಯ ಮಾಡಬಾರದು ಮತ್ತು ಸಮಸ್ಯೆಯನ್ನು ನಿಯಂತ್ರಿಸಲು ಏನು ಮಾಡಬೇಕು ಎಂಬುದನ್ನು ಸ್ಟೋರಿ ಮೂಲಕ ತಿಳಿದುಕೊಳ್ಳಿ.

ಹೆಚ್ಚು ಬೆವರು ಬರುವುದಕ್ಕೆ ಪ್ರಮುಖ ಕಾರಣಗಳು:

ಅಧ್ಯಯನಗಳ ಪ್ರಕಾರ, ದೇಹದ ತಾಪಮಾನ ನಿಯಂತ್ರಣಕ್ಕೆ ಬೇಕಾದ ಪ್ರಮಾಣಕ್ಕಿಂತ ಹೆಚ್ಚು ಬೆವರು ಬರುವ ಸ್ಥಿತಿಯನ್ನು “ಹೈಪರ್‌ಹೈಡ್ರೋಸಿಸ್” ಎಂದು ಕರೆಯಲಾಗುತ್ತದೆ. ಕೆಲವರಲ್ಲಿ ಇದು ಸಾಮಾನ್ಯ ಸಮಸ್ಯೆಯಾಗಿರಬಹುದು. ಮತ್ತೊಂದೆಡೆ ಕೆಲವು ಆರೋಗ್ಯ ಸಮಸ್ಯೆಗಳೂ ಇದಕ್ಕೆ ಕಾರಣವಾಗಿರಬಹುದು. ಥೈರಾಯ್ಡ್ ಸಮಸ್ಯೆ, ಡಯಾಬಿಟೀಸ್, ಸೋಂಕುಗಳು, ಹಾರ್ಮೋನ್ ಬದಲಾವಣೆ, ಅತಿಯಾದ ತೂಕ ಹಾಗೂ ನರ ವ್ಯವಸ್ಥೆಯ ಸಮಸ್ಯೆಗಳು ಹೆಚ್ಚು ಬೆವರು ಬರುವ ಸಾಧ್ಯತೆಯನ್ನು ಹೆಚ್ಚಿಸಬಹುದು. ಕೆಲವು ಔಷಧಿಗಳ ಪರಿಣಾಮವೂ ಇದಕ್ಕೆ ಕಾರಣವಾಗಬಹುದು ಎಂದು ತಜ್ಞರು ತಿಳಿಸಿದ್ದಾರೆ. ಇನ್ನೂ ಕೆಲವು ಅಧ್ಯಯನಗಳಲ್ಲಿ ಹೆಚ್ಚು ಬೆವರು ಬರುವವರಲ್ಲಿ ವಿಟಮಿನ್ D ಮತ್ತು ಮ್ಯಾಗ್ನೀಷಿಯಂ ಕೊರತೆ ಕಂಡುಬಂದಿದೆ. ಆದರೆ ವಿಟಮಿನ್ D ಕೊರತೆಯೇ ನೇರ ಕಾರಣ ಎಂದು ಇನ್ನೂ ದೃಢಪಟ್ಟಿಲ್ಲ. ಈ ಸಂಬಂಧ ಹೆಚ್ಚಿನ ಸಂಶೋಧನೆ ಅಗತ್ಯವಿದೆ ಎಂದು ಸಂಶೋಧಕರು ತಿಳಿಸಿದ್ದಾರೆ.

ಇದನ್ನೂ ಓದಿ: ಊಟ ಮಾಡುವಾಗ ಬೆವರು ಬರುವುದಕ್ಕೆ ಕಾರಣವೇನು? ಇದು ಯಾವ ಕಾಯಿಲೆಯ ಲಕ್ಷಣ?

ಯಾವ ಲಕ್ಷಣಗಳನ್ನು ನಿರ್ಲಕ್ಷ್ಯ ಮಾಡಬಾರದು?

  • ತೂಕ ಕಡಿಮೆಯಾಗುವುದು
  • ನಿರಂತರ ದೌರ್ಬಲ್ಯ
  • ಹೃದಯ ಬಡಿತ ವೇಗವಾಗುವುದು
  • ತಲೆ ಸುತ್ತುವುದು
  • ಜ್ವರ
  • ಉಸಿರಾಟದ ತೊಂದರೆ
  • ರಾತ್ರಿ ವೇಳೆ ಅತಿಯಾಗಿ ಬೆವರುವುದು

ಸಮಸ್ಯೆಯನ್ನು ನಿಯಂತ್ರಿಸಲು ಏನು ಮಾಡಬೇಕು?

ಪ್ರತಿದಿನ ಸಾಕಷ್ಟು ನೀರು ಕುಡಿಯಬೇಕು ಮತ್ತು ದೇಹವನ್ನು ಹೈಡ್ರೇಟ್ ಆಗಿಡಬೇಕು. ಹಗುರವಾದ ಹಾಗೂ ಆರಾಮದಾಯಕ ಬಟ್ಟೆಗಳನ್ನು ಧರಿಸುವುದು ಉತ್ತಮ. ಅತಿಯಾದ ಬಿಸಿಯ ವಾತಾವರಣದಲ್ಲಿ ಹೆಚ್ಚು ಸಮಯ ಇರುವುದನ್ನು ತಪ್ಪಿಸಬೇಕು. ಸಮತೋಲನ ಆಹಾರ ಸೇವನೆ, ಒತ್ತಡ ನಿಯಂತ್ರಣ ಮತ್ತು ನಿಯಮಿತ ವ್ಯಾಯಾಮ ಆರೋಗ್ಯಕ್ಕೆ ಸಹಾಯಕವಾಗಬಹುದು. ಹೆಚ್ಚು ಬೆವರುವುದು ಪದೇಪದೇ ಕಾಣಿಸಿಕೊಂಡರೆ ವೈದ್ಯರ ಸಲಹೆ ಪಡೆದು ಅಗತ್ಯ ಪರೀಕ್ಷೆ ಮಾಡಿಸಿಕೊಳ್ಳುವುದು ಉತ್ತಮ.

ಆರೋಗ್ಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

ಗಿಡ ನೆಟ್ಟು ವಿಶ್ವ ಪರಿಸರ ದಿನ ಆಚರಿಸಿದ ಪ್ರಧಾನಿ ಮೋದಿ

ನವದೆಹಲಿ, ಜೂನ್ 5: ವಿಶ್ವ ಪರಿಸರ ದಿನದ ಸಂದರ್ಭದಲ್ಲಿ ಪ್ರಧಾನಿ ನರೇಂದ್ರ ಮೋದಿ (PM Narendra Modi) ದೇಶದ ಜನತೆಗೆ ಶುಭಾಶಯಗಳನ್ನು ಕೋರಿದ್ದಾರೆ. ಇದೇ ವೇಳೆ ಪರಿಸರವನ್ನು ರಕ್ಷಿಸಲು ಮತ್ತು ಸಂರಕ್ಷಿಸಲು ಶ್ರಮಿಸುತ್ತಿರುವ ಎಲ್ಲರನ್ನೂ ಅವರು ಮುಕ್ತಕಂಠದಿಂದ ಶ್ಲಾಘಿಸಿದ್ದಾರೆ. ಹಾಗೇ, ಗಿಡ ನೆಡುವ ಮೂಲಕ ಪರಿಸರ ದಿನವನ್ನು ಆಚರಿಸಿದ್ದಾರೆ. ಎಕ್ಸ್​ನಲ್ಲಿ ಪೋಸ್ಟ್ ಮಾಡಿರುವ ಪ್ರಧಾನಿ ಮೋದಿ, “ಎಲ್ಲರಿಗೂ ವಿಶ್ವ ಪರಿಸರ ದಿನದ ಹಾರ್ದಿಕ ಶುಭಾಶಯಗಳು. ಪರಿಸರ ಸಂರಕ್ಷಣೆಯ ಬಗ್ಗೆ ಅಪಾರ ಕಾಳಜಿ ಹೊಂದಿರುವ ಪ್ರತಿಯೊಬ್ಬರಿಗೂ ನಾನು ಅಭಿನಂದನೆ ಸಲ್ಲಿಸುತ್ತೇನೆ. ನಮ್ಮ ಪರಿಸರವನ್ನು ರಕ್ಷಿಸಲು ಮತ್ತು ಸುಸ್ಥಿರ ಬೆಳವಣಿಗೆಯನ್ನು ಉತ್ತೇಜಿಸಲು ನಮ್ಮ ಬದ್ಧತೆಯನ್ನು ಪುನರುಚ್ಚರಿಸುವ ದಿನ ಇದಾಗಿದೆ” ಎಂದು ಬರೆದುಕೊಂಡಿದ್ದಾರೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

IND vs AFG: ಟೆಸ್ಟ್ ಪಂದ್ಯಕ್ಕೆ ಮಳೆ ಅಡ್ಡಿ; ಹೇಗಿರಲಿದೆ ಪಿಚ್ ಹಾಗೂ ಪ್ಲೇಯಿಂಗ್ 11? – Kannada News

ಭಾರತ ಮತ್ತು ಅಫ್ಘಾನಿಸ್ತಾನ (India vs Afghanistan) ತಂಡಗಳು ಏಕೈಕ ಟೆಸ್ಟ್ ಪಂದ್ಯದಲ್ಲಿ ಮುಖಾಮುಖಿಯಾಗುತ್ತಿವೆ. ಈ ಎರಡೂ ತಂಡಗಳ ನಡುವಿನ ಮೊದಲ ಟೆಸ್ಟ್ ಪಂದ್ಯ 2018 ರಲ್ಲಿ ಬೆಂಗಳೂರಿನ ಎಂ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆದಿತ್ತು. ಈ ಪಂದ್ಯದಲ್ಲಿ ಭಾರತ ಅಫ್ಘಾನಿಸ್ತಾನವನ್ನು ಇನ್ನಿಂಗ್ಸ್ ಮತ್ತು 262 ರನ್‌ಗಳಿಂದ ಸೋಲಿಸಿತು. ಈಗ ಎರಡೂ ತಂಡಗಳು ಎರಡನೇ ಬಾರಿಗೆ ಮುಖಾಮುಖಿಯಾಗಲಿವೆ. ಈ ಪಂದ್ಯವು ನ್ಯೂ ಚಂಡೀಗಢದ ಮಹಾರಾಜ ಯಾದವೇಂದ್ರ ಸಿಂಗ್ ಅಂತರರಾಷ್ಟ್ರೀಯ ಕ್ರೀಡಾಂಗಣದಲ್ಲಿ ನಡೆಯಲಿದೆ. ಆದರೆ ಅದಕ್ಕೂ ಮುನ್ನ ಈ ಪಂದ್ಯದ ವೇಳೆ ಹವಾಮಾನ ಹೇಗಿರಲಿದೆ. ಪಿಚ್ ಹೇಗಿರಲಿದೆ ಎಂಬುದನ್ನು ನೋಡೋಣ..

ಪಿಚ್ ಹೇಗಿರಲಿದೆ?

ನ್ಯೂ ಚಂಡೀಗಢದ ಮಹಾರಾಜ ಯಾದವೇಂದ್ರ ಸಿಂಗ್ ಅಂತರರಾಷ್ಟ್ರೀಯ ಕ್ರೀಡಾಂಗಣದತು ಪಿಚ್ ಬ್ಯಾಟ್ಸ್‌ಮನ್‌ಗಳು ಮತ್ತು ಬೌಲರ್‌ಗಳಿಗೆ ಸಮಾನವಾಗಿ ನೆರವಾಗುವ ನಿರೀಕ್ಷೆಯಿದೆ. ಈ ಪಿಚ್ ಕಪ್ಪು ಮಣ್ಣಿನಿಂದ ಮಾಡಲ್ಪಟ್ಟಿದ್ದು, ಪಂದ್ಯದ ಆರಂಭದಲ್ಲಿ ಬೌಲರ್‌ಗಳಿಗೆ ಬೌನ್ಸ್ ಸಿಗಲಿದ್ದು, ಮೇಲುಗೈ ಸಾಧಿಸಲು ಅವಕಾಶ ಸಿಗುತ್ತದೆ. ಆಟ ಮುಂದುವರೆದಂತೆ, ಪಿಚ್ ಬ್ಯಾಟಿಂಗ್‌ಗೆ ಉತ್ತಮವಾಗುತ್ತದೆ. ಆದಾಗ್ಯೂ, ಪಂದ್ಯ ಮುಂದುವರೆದಂತೆ ಪಿಚ್ ನಿಧಾನವಾಗಬಹುದು. ಇದರಿಂದ ಸ್ಪಿನ್ನರ್‌ಗಳಿಗೂ ಸಹಾಯ ಸಿಗಬಹುದು.

ಪಂದ್ಯಕ್ಕೆ ಮಳೆ ಅಡ್ಡಿ

ಮುಲ್ಲನ್‌ಪುರದಲ್ಲಿ ಟೆಸ್ಟ್ ಪಂದ್ಯದ ಮೊದಲ ದಿನದಂದು ಮಳೆ ಬರುವ ಸಾಧ್ಯತೆಗಳಿವೆ. ಆದಾಗ್ಯೂ ಮಧ್ಯಾಹ್ನ ತಾಪಮಾನವು 38C ತಲುಪಬಹುದು, ಆದರೆ ಆರ್ದ್ರತೆಯು ಸುಮಾರು 32% ಇರುತ್ತದೆ ಎಂದು ನಿರೀಕ್ಷಿಸಲಾಗಿದೆ. ಬೆಳಿಗ್ಗೆ ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ, ಆದರೆ ದಿನ ಮುಂದುವರೆದಂತೆ ಪರಿಸ್ಥಿತಿಗಳು ಸುಧಾರಿಸುವ ನಿರೀಕ್ಷೆಯಿದೆ. ಪಂದ್ಯದ ಬಹುಪಾಲು ಹವಾಮಾನವು ಸ್ಪಷ್ಟ ಮತ್ತು ಮೋಡ ಕವಿದ ವಾತಾವರಣದಲ್ಲಿ ಉಳಿಯುವ ನಿರೀಕ್ಷೆಯಿದೆ, ಬೆಳಿಗ್ಗೆ ಒಂದೆರಡು ಗಂಟೆಗಳನ್ನು ಹೊರತುಪಡಿಸಿ ದಿನವಿಡೀ ಮಳೆ ಬರುವ ಯಾವುದೇ ಸೂಚನೆಗಳಿಲ್ಲ.

IND vs AFG: ಭಾರತ- ಅಫ್ಘನ್ ಟೆಸ್ಟ್ ಪಂದ್ಯ ಎಷ್ಟು ಗಂಟೆಗೆ ಆರಂಭ? ಯಾವ ಚಾನೆಲ್​ನಲ್ಲಿ ನೇರಪ್ರಸಾರ?

ಎರಡೂ ತಂಡಗಳ ಸಂಭಾವ್ಯ ಪ್ಲೇಯಿಂಗ್ XI

ಭಾರತ ತಂಡ: ಯಶಸ್ವಿ ಜೈಸ್ವಾಲ್, ಕೆಎಲ್ ರಾಹುಲ್, ಸಾಯಿ ಸುದರ್ಶನ್, ಶುಭಮನ್ ಗಿಲ್ (ನಾಯಕ), ರಿಷಭ್ ಪಂತ್ (ವಿಕೆಟ್ ಕೀಪರ್), ದೇವದತ್ ಪಡಿಕ್ಕಲ್, ವಾಷಿಂಗ್ಟನ್ ಸುಂದರ್, ನಿತೀಶ್ ಕುಮಾರ್ ರೆಡ್ಡಿ, ಹರ್ಷ್ ದುಬೆ ಅಥವಾ ಮಾನವ್ ಸುತಾರ್, ಮೊಹಮ್ಮದ್ ಸಿರಾಜ್, ಪ್ರಸಿದ್ಧ್ ಕೃಷ್ಣ.

ಅಫ್ಘಾನಿಸ್ತಾನ ತಂಡ: ರಹಮಾನುಲ್ಲಾ ಗುರ್ಬಾಜ್ (ವಿಕೆಟ್ ಕೀಪರ್), ಸೇದಿಕುಲ್ಲಾ ಅಟಲ್, ರಹಮತ್ ಶಾ, ಹಶ್ಮತುಲ್ಲಾ ಶಾಹಿದಿ (ನಾಯಕ), ಇಕ್ರಮ್ ಅಲಿಖಿಲ್, ಅಜ್ಮತುಲ್ಲಾ ಉಮರ್ಜಾಯ್, ಶರಫುದ್ದೀನ್ ಅಶ್ರಫ್, ನಂಗ್ಯಾಲ್ ಖರೋತೈ, ಕೈಸ್ ಅಹ್ಮದ್, ಬಿಲಾಲ್ ಸಮಿ, ಸಲೀಮ್ ಸಫಿ.

ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

Exit mobile version