Gold Rates: ಚಿನ್ನ, ಬೆಳ್ಳಿ ಬೆಲೆ ಭರ್ಜರಿ ಏರಿಕೆ; ಇಲ್ಲಿದೆ ದರಪಟ್ಟಿ

Gold Rates: ಚಿನ್ನ, ಬೆಳ್ಳಿ ಬೆಲೆ ಭರ್ಜರಿ ಏರಿಕೆ; ಇಲ್ಲಿದೆ ದರಪಟ್ಟಿ

ಬೆಂಗಳೂರು, ಏಪ್ರಿಲ್ 8: ಬಹಳ ದಿನಗಳ ನಂತರ ಚಿನ್ನ ಮತ್ತು ಬೆಳ್ಳಿ ಬೆಲೆಗಳೆರಡೂ ಕೂಡ ಭಾರೀ ಪ್ರಮಾಣದಲ್ಲಿ ಹೆಚ್ಚಳ ಕಂಡಿವೆ. ಚಿನ್ನದ ಬೆಲೆ (Gold Rates) ಒಂದು ಗ್ರಾಮ್​ಗೆ 300ರಿಂದ 500 ರೂಗಳಷ್ಟು ಏರಿಕೆ ಪಡೆದಿದೆ. ಬೆಳ್ಳಿ ಬೆಲೆಯೂ ಕೂಡ ಒಂದು ಗ್ರಾಮ್​ಗೆ 10 ರೂನಷ್ಟು ದುಬಾರಿಗೊಂಡಿದೆ. ಚೀನಾ ದೇಶದ ಸೆಂಟ್ರಲ್ ಬ್ಯಾಂಕ್ ಸತತವಾಗಿ ಚಿನ್ನದ ಖರೀದಿ ಮಾಡುತ್ತಿರುವುದು ಬೆಲೆ ಹೆಚ್ಚಳಕ್ಕೆ ಒಂದು ಕಾರಣವಾಗಿರಬಹುದು. ಭಾರತದಲ್ಲಿ ಸದ್ಯ 10 ಗ್ರಾಮ್​ನ 22 ಕ್ಯಾರಟ್ ಚಿನ್ನದ ಬೆಲೆ 1,41,000 ರುಪಾಯಿ ಇದೆ. 24 ಕ್ಯಾರಟ್​ನ ಅಪರಂಜಿ ಚಿನ್ನದ ಬೆಲೆ 1,53,820 ರುಪಾಯಿ ಆಗಿದೆ. 100 ಗ್ರಾಮ್ ಬೆಳ್ಳಿ ಬೆಲೆ 26,000 ರುಪಾಯಿ ಇದೆ. ಬೆಂಗಳೂರಿನಲ್ಲಿ ಚಿನ್ನದ ಬೆಲೆ 10 ಗ್ರಾಮ್​ಗೆ 1,41,000 ರುಪಾಯಿ ಆಗಿದೆ, ಬೆಳ್ಳಿ ಬೆಲೆ 100 ಗ್ರಾಮ್​ಗೆ 26,000 ರುಪಾಯಿಯಲ್ಲಿ ಇದೆ. ತಮಿಳುನಾಡು, ಕೇರಳ ಮೊದಲಾದ ಕೆಲವೆಡೆ ಈ ಲೋಹದ ಬೆಲೆ 26,500 ರೂ ಇದೆ.

ಭಾರತದಲ್ಲಿರುವ ಚಿನ್ನ, ಬೆಳ್ಳಿ ಬೆಲೆ (ಏಪ್ರಿಲ್ 8ಕ್ಕೆ)

  • 24 ಕ್ಯಾರಟ್​ನ 1 ಗ್ರಾಂ ಚಿನ್ನದ ಬೆಲೆ: 15,382 ರೂ
  • 22 ಕ್ಯಾರಟ್​ನ 1 ಗ್ರಾಂ ಚಿನ್ನದ ಬೆಲೆ: 14,100 ರೂ
  • 18 ಕ್ಯಾರಟ್​ನ 1 ಗ್ರಾಂ ಚಿನ್ನದ ಬೆಲೆ: 11,537 ರೂ
  • ಬೆಳ್ಳಿ ಬೆಲೆ 1 ಗ್ರಾಂಗೆ: 260 ರೂ

ಬೆಂಗಳೂರಿನಲ್ಲಿ ಚಿನ್ನ, ಬೆಳ್ಳಿ ಬೆಲೆ

  • 24 ಕ್ಯಾರಟ್​ನ 1 ಗ್ರಾಂ ಚಿನ್ನದ ಬೆಲೆ: 15,382 ರೂ
  • 22 ಕ್ಯಾರಟ್​ನ 1 ಗ್ರಾಂ ಚಿನ್ನದ ಬೆಲೆ: 14,100 ರೂ
  • ಬೆಳ್ಳಿ ಬೆಲೆ 1 ಗ್ರಾಂಗೆ: 260 ರೂ

ವಿವಿಧ ನಗರಗಳಲ್ಲಿರುವ 22 ಕ್ಯಾರಟ್ ಚಿನ್ನದ ಬೆಲೆ (1 ಗ್ರಾಮ್​ಗೆ)

  • ಬೆಂಗಳೂರು: 14,100 ರೂ
  • ಚೆನ್ನೈ: 14,200 ರೂ
  • ಮುಂಬೈ: 14,100 ರೂ
  • ದೆಹಲಿ: 14,115 ರೂ
  • ಕೋಲ್ಕತಾ: 14,100 ರೂ
  • ಕೇರಳ: 14,100 ರೂ
  • ಅಹ್ಮದಾಬಾದ್: 14,105 ರೂ
  • ಜೈಪುರ್: 14,115 ರೂ
  • ಲಕ್ನೋ: 14,115 ರೂ
  • ಭುವನೇಶ್ವರ್: 14,100 ರೂ

ಇದನ್ನೂ ಓದಿ: ಅಮೆರಿಕ, ಜಪಾನ್, ಜರ್ಮನಿಗೂ ಸಾಧ್ಯವಾಗದ ಅಡ್ವಾನ್ಸ್ಡ್ ರಿಯಾಕ್ಟರ್ ಸಾಧಿಸಿದ ಭಾರತ; ದೇಶದ ಇಂಧನ ಭವಿಷ್ಯ ಸುರಕ್ಷಿತ?

ವಿದೇಶಗಳಲ್ಲಿ 22 ಕ್ಯಾರಟ್ ಚಿನ್ನದ ಬೆಲೆ (1 ಗ್ರಾಮ್​ಗೆ)

  • ಮಲೇಷ್ಯಾ: 590 ರಿಂಗಿಟ್ (13,699 ರುಪಾಯಿ)
  • ದುಬೈ: 517.50 ಡಿರಾಮ್ (13,047 ರುಪಾಯಿ)
  • ಅಮೆರಿಕ: 145 ಡಾಲರ್ (13,420 ರುಪಾಯಿ)
  • ಸಿಂಗಾಪುರ: 191.30 ಸಿಂಗಾಪುರ್ ಡಾಲರ್ (13,889 ರುಪಾಯಿ)
  • ಕತಾರ್: 514 ಕತಾರಿ ರಿಯಾಲ್ (13,047 ರೂ)
  • ಸೌದಿ ಅರೇಬಿಯಾ: 530 ಸೌದಿ ರಿಯಾಲ್ (13,063 ರುಪಾಯಿ)
  • ಓಮನ್: 55.20 ಒಮಾನಿ ರಿಯಾಲ್ (13,270 ರುಪಾಯಿ)
  • ಕುವೇತ್: 42.95 ಕುವೇತಿ ದಿನಾರ್ (12,953 ರುಪಾಯಿ)

ವಿವಿಧ ನಗರಗಳಲ್ಲಿರುವ ಬೆಳ್ಳಿ ಬೆಲೆ (1 ಗ್ರಾಮ್​ಗೆ)

  • ಬೆಂಗಳೂರು: 260 ರೂ
  • ಚೆನ್ನೈ: 265 ರೂ
  • ಮುಂಬೈ: 260 ರೂ
  • ದೆಹಲಿ: 260 ರೂ
  • ಕೋಲ್ಕತಾ: 260 ರೂ
  • ಕೇರಳ: 265 ರೂ
  • ಅಹ್ಮದಾಬಾದ್: 260 ರೂ
  • ಜೈಪುರ್: 260 ರೂ
  • ಲಕ್ನೋ: 260 ರೂ
  • ಭುವನೇಶ್ವರ್: 265 ರೂ
  • ಪುಣೆ: 260

(ಗಮನಿಸಿ: ಇಲ್ಲಿ ನೀಡಲಾಗಿರುವ ಚಿನ್ನ ಮತ್ತು ಬೆಳ್ಳಿ ಬೆಲೆ ನಿಖರ ಎಂದು ಖಾತ್ರಿಪಡಿಸಲು ಸಾಧ್ಯವಿಲ್ಲ. ಪ್ರಮುಖ ಅಭರಣದಂಗಡಿಗಳಿಂದ ಶೇಖರಿಸಿದ ಮಾಹಿತಿ ಇದು. ಜೊತೆಗೆ, ಈ ದರದ ಮೇಲೆ ಜಿಎಸ್​ಟಿ, ಮೇಕಿಂಗ್ ಚಾರ್ಜಸ್ ಇತ್ಯಾದಿ ಶುಲ್ಕಗಳು ಬೀಳಬಹುದು.)

ಇನ್ನಷ್ಟು ವಾಣಿಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

Source link

ಕಾರ್ಪೊರೇಟ್ ಕೆಲಸ ತೊರೆದು ಕ್ಲೌಡ್ ಕಿಚನ್ ಶುರು ಮಾಡಿದ ಯುವ ಉದ್ಯಮಿ!

ಬೆಂಗಳೂರು, ಏಪ್ರಿಲ್ 08: ಓದು ಮುಗಿಸಿ, ಕೆಲಸ ಹಿಡಿದು, ಆರಾಮದಾಯಕ ಜೀವನ ಕಟ್ಟಿಕೊಂಡರೆ ಸಾಕು ಎನ್ನುವ ಮನೋಭಾವ ಹಲವು ಯುವಕರಿಗಿದೆ. ಆದರೆ ಕೆಲವೇ ಕೆಲವರು ಮಾತ್ರ ರಿಸ್ಕ್ ತೆಗೆದುಕೊಂಡು ತಾವೇ ಒಂದು ಸ್ಟಾರ್ಟ್​ಅಪ್ (Startup) ಮಾಡಲು ಮುಂದಾಗುತ್ತಾರೆ. ಅಂತೆಯೇ ನಗರದಲ್ಲಿ ಯುವ ಉದ್ಯಮಿಯೊಬ್ಬರು ತಮ್ಮ ಕಾರ್ಪೊರೇಟ್ ವೃತ್ತಿಯನ್ನು ತೊರೆದು ಹೊಸ ಪ್ರಯೋಗಕ್ಕೆ ಕೈಹಾಕಿರುವ ಘಟನೆ ಗಮನಸೆಳೆದಿದೆ. ನಗರದ ಎಲೆಕ್ಟ್ರಾನಿಕ್ ಸಿಟಿ ಫೇಸ್ 1 ಪ್ರದೇಶದ 23 ವರ್ಷದ ವ್ಯಕ್ತಿಯೊಬ್ಬರು ತಮ್ಮದೇ ಫ್ಲಾಟ್‌ನಿಂದ ಕ್ಲೌಡ್ ಕಿಚನ್ ಆರಂಭಿಸಿ ಸ್ವಯಂ ಉದ್ಯಮದ ದಾರಿಗೆ ಹೆಜ್ಜೆಯಿಟ್ಟಿದ್ದಾರೆ.

ವ್ಯಕ್ತಿಯ ಪೋಸ್ಟ್​ನಲ್ಲೇನಿದೆ?

ಸ್ವಂತವಾಗಿ ಎಲ್ಲ ಕಾರ್ಯಗಳನ್ನು ನಿರ್ವಹಿಸುವ ಈ ವ್ಯಕ್ತಿ, ಅಡುಗೆ ಮಾಡುವುದರಿಂದ ಹಿಡಿದು ಸ್ವಚ್ಛತೆ, ಪ್ಯಾಕಿಂಗ್ ಮತ್ತು ವಿತರಣೆಯವರೆಗೆ ಎಲ್ಲಾ ಜವಾಬ್ದಾರಿಗಳನ್ನು ತಾನೇ ಹೊರುವುದಾಗಿ ಹೇಳಿದ್ದಾರೆ. ಕಡಿಮೆ ಬಂಡವಾಳದಲ್ಲೇ ಈ ಪ್ರಯತ್ನ ಆರಂಭಿಸಿದ್ದು, ಮುಖ್ಯವಾಗಿ ಆಹಾರ ಪ್ಯಾಕೇಜಿಂಗ್ ಹಾಗೂ ಆನ್‌ಲೈನ್ ಆಹಾರ ವಿತರಣೆ ವೇದಿಕೆ ಜೊಮಾಟೋದಲ್ಲಿ ನೋಂದಣಿ ಮಾಡಲು ಮಾತ್ರ ಹಣ ಬಳಸಿರುವುದಾಗಿ ತಿಳಿಸಿದ್ದಾರೆ.

ತನ್ನ ಈ ನಿರ್ಧಾರವನ್ನು ಅವರು ತಮ್ಮ ರೆಡಿಟ್ ಖಾತೆಯಲ್ಲಿ ಹಂಚಿಕೊಂಡಿದ್ದು, 23ನೇ ವಯಸ್ಸಿನಲ್ಲಿ ಕೆಲಸ ಬಿಟ್ಟು ನಾನು ಇಂದು ಧೈರ್ಯದಿಂದ ಒಂದು ಹೆಜ್ಜೆ ಮುಂದಿಟ್ಟಿದ್ದೇನೆ ಎಂದು ಬರೆದುಕೊಂಡಿದ್ದಾರೆ. ನನ್ನ ಬಳಿ ದೊಡ್ಡ ಯೋಜನೆ ಅಥವಾ ಹೆಚ್ಚಿನ ಹಣವಿಲ್ಲ. ಆದರೆ ಸ್ವಂತವಾಗಿ ಏನಾದರೂ ಮಾಡಲು ಮನಸ್ಸಾಯಿತು ಎಂದು ತನ್ನ ನಿರ್ಧಾರವನ್ನು ವಿವರಿಸಿದ್ದಾರೆ.

ಇದೇ ವೇಳೆ, ಈ ಪ್ರಯತ್ನ ಯಶಸ್ವಿಯಾಗುತ್ತದೆಯೋ ಅಥವಾ ವಿಫಲವಾಗುತ್ತದೆಯೋ ಎಂಬುದು ತಿಳಿದಿಲ್ಲ ಎಂದು ಬರೆದುಕೊಂಡಿರುವ ಬಳಕೆದಾರ, ಯಾವುದೇ ಫಲಿತಾಂಶ ಬಂದರೂ ತನ್ನ ಅನುಭವಗಳನ್ನು ಹಂಚಿಕೊಳ್ಳುವುದಾಗಿ ತಿಳಿಸಿದ್ದಾರೆ.

ಈ ಘಟನೆ ಇಂದಿನ ಯುವಜನರಲ್ಲಿ ಹೆಚ್ಚುತ್ತಿರುವ ಸ್ಟಾರ್ಟ್‌ಅಪ್ ಮನೋಭಾವ ಮತ್ತು ಅಪಾಯ ಸ್ವೀಕರಿಸುವ ಧೈರ್ಯವನ್ನು ಪ್ರತಿಬಿಂಬಿಸುತ್ತದೆ. ಸಾಂಪ್ರದಾಯಿಕ ಉದ್ಯೋಗಗಳನ್ನು ಬಿಟ್ಟು ಸ್ವಂತ ಉದ್ಯಮ ಆರಂಭಿಸುವ ಪ್ರವೃತ್ತಿ ನಗರಗಳಲ್ಲಿ ಹೆಚ್ಚುತ್ತಿರುವುದು ಗಮನಾರ್ಹವಾಗಿದೆ.

ಇದನ್ನೂ ಓದಿ ಹಿಂದಿ ಮಾತ್ರವಲ್ಲ, ಕನ್ನಡವೂ ಸೇರಿ 9 ಭಾಷೆಗಳಿಗೆ ಅನ್ವಯವಾಗಲಿದೆ ಗ್ರೇಡಿಂಗ್! ಗ್ರೇಡ್ ಕೊಡೋದು ಹೇಗೆ ಗೊತ್ತಾ?

ನೆಟ್ಟಿಗರ ರಿಯಾಕ್ಷನ್ ಏನು?

ವ್ಯಕ್ತಿಯ ಹೊಸ ನಿರ್ಧಾರಕ್ಕೆ ಪ್ರೋತ್ಸಾಹಿಸಿರುವ ನೆಟ್ಟಿಗರು ತರಹೇವಾರಿ ಕಾಮೆಂಟ್ ಹಾಕಿದ್ದಾರೆ. ಒಬ್ಬ ಯೂಸರ್, ನಿಮ್ಮ ಕ್ಲೌಡ್ ಕಿಚನ್ ಹೆಸರು ತಿಳಿಸಿ; ನಾವು ಪ್ರಚಾರ ಮಾಡುತ್ತೇವೆ ಎಂದರೆ, ಇನ್ನೊಬ್ಬ ಯೂಸರ್, ನೀವು ತಯಾರಿಸುವ ಆಹಾರದ ಸುಂದರವಾದ ಫೋಟೋಗಳನ್ನು ಹಾಕಿಕೊಳ್ಳಿ ಮತ್ತು ಆ ತಿನಿಸಿನ ಕುರಿತ ಮಾಹಿತಿ ಹಂಚಿಕೊಳ್ಳಿ ಎಂದಿದ್ದಾರೆ.

ಇನ್ನೂರ್ವ ಕಾಮೆಂಟ್ ಮಾಡಿ, ಇದೇ ರೀತಿಯ ಪ್ರಯತ್ನ ಮಾಡುತ್ತಿದ್ದ ದಂಪತಿಗೆ ತಾನೂ ಏರ್ ಫ್ರೈಯರ್ ಮಾರಾಟ ಮಾಡುದ್ದು, ಇಂದಿನ ಆರ್ಥಿಕತೆಗೆ ನಮ್ಮ ಸ್ವಂತ ವ್ಯವಹಾರ ಇರುವುದು ಒಳಿತು. ಸಂಬಳವನ್ನೇ ನಂಬಿ ಕೂರುವುದಕ್ಕೆ ಆಗುವುದಿಲ್ಲ ಎಂದಿದ್ದಾರೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

 

Source link

ಸಾಲದ ವಿಚಾರದಲ್ಲಿ ರಾಜ್‌ಪಾಲ್ ಯಾದವ್​ರನ್ನು ಅಪಹಾಸ್ಯ ಮಾಡಿದವರಿಗೆ ಸಲ್ಮಾನ್ ನೇರ ಉತ್ತರ

ಇತ್ತೀಚೆಗೆ ನಡೆದ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ನಟ ರಾಜ್‌ಪಾಲ್ ಯಾದವ್ ಅವರನ್ನು ಅಪಹಾಸ್ಯ ಮಾಡಲಾಗಿತ್ತು. ಈ ವಿಡಿಯೋ ವೈರಲ್ ಆದ ನಂತರ, ಸಲ್ಮಾನ್ ಖಾನ್ ಈಗ ರಾಜ್‌ಪಾಲ್ ಅವರನ್ನು ಬೆಂಬಲಿಸಿದ್ದಾರೆ. ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಡಾಲರ್ ದರ ಏರಿಕೆಯ ಬಗ್ಗೆ ಮಾತನಾಡುವಾಗ, ಕಾರ್ಯಕ್ರಮದ ನಿರೂಪಕ, ಪತ್ರಕರ್ತ ಸೌರಭ್ ದ್ವಿವೇದಿ, ಚೆಕ್ ಬೌನ್ಸ್ ವಿಷಯದ ಬಗ್ಗೆ ರಾಜ್‌ಪಾಲ್ ಅವರನ್ನು ಅಣಕಿಸಿದರು. ಡಾಲರ್ ದರ ಹೆಚ್ಚಾದರೂ ಅಥವಾ ಕಡಿಮೆಯಾದರೂ, ನೀವು ಅದಕ್ಕೆ ತಕ್ಕಂತೆ ಸಾಲದ ಮೊತ್ತವನ್ನು ಮರುಪಾವತಿಸಬೇಕಾಗುತ್ತದೆ ಎಂದು ಅವರು ಹೇಳಿದ್ದರು. ಈಗ, ಈ ಕುರಿತು ಸಲ್ಮಾನ್ ಖಾನ್ ಅವರ ಪೋಸ್ಟ್ ಚರ್ಚೆಗೆ ಬಂದಿದೆ.

ಸಲ್ಮಾನ್ ಹೇಳಿದ್ದೇನು?

‘ರಾಜ್‌ಪಾಲ್ ಅವರೇ ನೀವು ಕಳೆದ 30 ವರ್ಷಗಳಿಂದ ಈ ಉದ್ಯಮದಲ್ಲಿ ಕೆಲಸ ಮಾಡುತ್ತಿದ್ದೀರಿ ಮತ್ತು ನಾವು ನಿಮಗೆ ವಿವಿಧ ಚಿತ್ರಗಳಲ್ಲಿ ನಿರಂತರವಾಗಿ ಪಾತ್ರಗಳನ್ನು ನೀಡುತ್ತಿದ್ದೇವೆ. ಏಕೆಂದರೆ ನಿಮ್ಮ ಕೆಲಸ ನಮಗೆ ತಿಳಿದಿದೆ ಮತ್ತು ನಿಮ್ಮ ಪಾತ್ರವು ಚಿತ್ರಕ್ಕೆ ನಿಜವಾದ ಅರ್ಥವನ್ನು ನೀಡುತ್ತದೆ. ನಿಮಗೆ ಬಹಳಷ್ಟು ಕೆಲಸ ಸಿಗುತ್ತಲೇ ಇರುತ್ತದೆ ಮತ್ತು ನೀವು ಡಾಲರ್ ಬೆಲೆಗೆ ಕೆಲಸ ಮಾಡುತ್ತಲೇ ಇರುತ್ತೀರಿ. ಇದು ನಿಜ. ನೆನಪಿಡಿ.. ಕೆಲವೊಮ್ಮೆ ವಿಷಯಗಳು ಹರಿವಿನ ಸಮಯದಲ್ಲಿ ನಿಮ್ಮ ಬಾಯಿಂದ ಜಾರಿಹೋಗುತ್ತವೆ. ನೀವು ಉತ್ತರಿಸಲು ಏನಾದರೂ ಇದ್ದರೆ, ಅದನ್ನು ನೆನಪಿಡಿ. ಪೂರ್ಣ ಮನಸ್ಸಿನಿಂದ ಕೆಲಸ ಮಾಡಿರಿ. ಡಾಲರ್‌ನ ಮೌಲ್ಯ ಹೆಚ್ಚಾದರೂ ಅಥವಾ ಕಡಿಮೆಯಾದರೂ ಏನು ವ್ಯತ್ಯಾಸವಾಗುತ್ತದೆ? ಹಣ ನೀಡೋದು ಭಾರತದಲ್ಲಿ ತಾನೇ’ ಎಂದು ಸಲ್ಮಾನ್ ಹೇಳಿದರು.

ಸಲ್ಮಾನ್ ಅವರ ಪೋಸ್ಟ್‌ಗೆ ಪ್ರತಿಕ್ರಿಯಿಸಿದ ರಾಜ್‌ಪಾಲ್ ಯಾದವ್, ‘ಸಲ್ಮಾನ್ ಭಾಯ್.. ನನ್ನ 30 ವರ್ಷಗಳ ಪ್ರಯಾಣವನ್ನು ಮೆಚ್ಚಿದ್ದಕ್ಕಾಗಿ ತುಂಬಾ ಧನ್ಯವಾದಗಳು. ನೀವು ಯಾವಾಗಲೂ ಅಣ್ಣನಂತೆ ನನಗೆ ದಾರಿ ತೋರಿಸಿದ್ದೀರಿ, ಲವ್ ಭಾಯ್’ ಎಂದರು.

ಇದನ್ನೂ ಓದಿ: ಸಹಾಯ ಮಾಡಿದವರ ಹೆಸರು ಹೇಳಲ್ಲ: ಖಡಕ್ ಆಗಿ ತಿಳಿಸಿದ ರಾಜ್​ಪಾಲ್ ಯಾದವ್

ರಾಜ್‌ಪಾಲ್ ತಮ್ಮ ಸಾಮಾಜಿಕ ಮಾಧ್ಯಮ ಖಾತೆಗಳಲ್ಲಿ ವೀಡಿಯೊವನ್ನು ಪೋಸ್ಟ್ ಮಾಡಿ ಜಾಕೀರ್ ಖಾನ್ ಮತ್ತು ಸೌರಭ್ ದ್ವಿವೇದಿ ಅವರನ್ನು ಟ್ರೋಲ್ ಮಾಡಬೇಡಿ ಎಂದು ತಮ್ಮ ಅಭಿಮಾನಿಗಳಿಗೆ ಮನವಿ ಮಾಡಿದರು. ‘ಇವರು ಇಬ್ಬರು ನನ್ನ ಸಹೋದರರಂತೆ, ಆದ್ದರಿಂದ ನೀವು ಅವರಿಗೆ ಏನಾದರೂ ಕೆಟ್ಟದ್ದನ್ನು ಹೇಳಿದರೆ, ಅದು ನನಗೆ ಕೆಟ್ಟದ್ದನ್ನು ಹೇಳಿದಂತೆ” ಎಂದು ರಾಜ್‌ಪಾಲ್ ತಮ್ಮ ಔದಾರ್ಯವನ್ನು ತೋರಿಸಿದರು.

ಏನಾಯಿತು?

ಏಪ್ರಿಲ್ 5 ರಂದು ಮುಂಬೈನಲ್ಲಿ ಸ್ಕ್ರೀನ್ ಅವಾರ್ಡ್ಸ್ ನಡೆಯಿತು. ಈ ಬಾರಿ, ಪತ್ರಕರ್ತ ಸೌರಭ್ ದ್ವಿವೇದಿ ಮತ್ತು ಹಾಸ್ಯನಟ ಜಾಕಿರ್ ಖಾನ್ ಪ್ರಶಸ್ತಿ ಪ್ರದಾನ ಸಮಾರಂಭದ ನಿರೂಪಣೆ ಮಾಡಿದರು. ವೇದಿಕೆಗೆ ಬಂದ ನಂತರ, ಸೌರಭ್, ಡಾಲರ್ ಏರಿಳಿತ, ಯುವಕರು ಮತ್ತು ಇತರ ವಿಷಯಗಳ ಬಗ್ಗೆ ಕಾಮೆಂಟ್ ಮಾಡುವಾಗ ರಾಜ್‌ಪಾಲ್ ಯಾದವ್ ಅವರನ್ನು ಗೇಲಿ ಮಾಡಿದರು. ‘ಡಾಲರ್ ದರ ಹೆಚ್ಚಾದರೂ ಅಥವಾ ಕಡಿಮೆಯಾದರೂ.. ನೀವು ಸಾಲ ಪಡೆದ ಮೊತ್ತವನ್ನೇ ಹಿಂದಿರುಗಿಸಬೇಕಾಗುತ್ತದೆ’ ಎಂದು ಸೌರಭ್ ಸಾಲದ ಬಗ್ಗೆ ರಾಜ್‌ಪಾಲ್ ಅವರನ್ನು ಗೇಲಿ ಮಾಡಿದರು. ಸೌರಭ್ ಅವರ ಈ ಮಾತುಗಳನ್ನು ಕೇಳಿದ ನಂತರ, ಪ್ರೇಕ್ಷಕರಲ್ಲಿ ಕುಳಿತಿದ್ದ ರಾಜ್‌ಪಾಲ್ ಇದ್ದಕ್ಕಿದ್ದಂತೆ ಸುಮ್ಮನಾದರು ಈ ವೀಡಿಯೊ ವೈರಲ್ ಆದಾಗ, ರಾಜ್‌ಪಾಲ್ ಅವರ ಅನೇಕ ಅಭಿಮಾನಿಗಳು ಇದನ್ನು ಅವಮಾನಕರ ಎಂದು ಕರೆದರು ಮತ್ತು ಸೌರಭ್ ಅವರನ್ನು ಟೀಕಿಸಲು ಪ್ರಾರಂಭಿಸಿದರು. ಚೆಕ್ ಬೌನ್ಸ್ ಪ್ರಕರಣದಲ್ಲಿ ರಾಜ್‌ಪಾಲ್ ಯಾದವ್ ಜೈಲಿನಲ್ಲಿ ಶರಣಾಗಬೇಕಾಯಿತು.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Source link

ಕ್ಷುಲ್ಲಕ ಕಾರಣಕ್ಕೆ ಪ್ರೇಮಿಗಳ ದುರಂತ ಅಂತ್ಯ: ಮೊದಲು ಯುವತಿ ಆತ್ಮಹತ್ಯೆ, ವಿಷಯ ಕೇಳಿ ಯುವಕನೂ ಸೂಸೈಡ್​​

ಬಾಗಲಕೋಟೆ, ಏಪ್ರಿಲ್​​ 08: ವೈಮನಸ್ಸಿನ ಕಾರಣಕ್ಕೆ ಪ್ರೇಮಿಗಳಿಬ್ಬರು ದುರಂತ ಅಂತ್ತ ಕಂಡಿರುವ ಘಟನೆ ಬಾಗಲಕೋಟೆಯಲ್ಲಿ ನಡೆದಿದೆ. ಬನಹಟ್ಟಿಯ KHDC ಕಾಲೋನಿಯಲ್ಲಿ ಪ್ರಿಯತಮೆ ನೇಣಿಗೆ ಶರಣಾಗಿದ್ದರೆ, ವಿಷಯ ತಿಳಿದ ಪ್ರಿಯತಮ ರಬಕವಿಬನಹಟ್ಟಿ ತಾಲೂಕಿನ ಅಸ್ಕಿ ಗ್ರಾಮದಲ್ಲಿ ಪ್ರಾಣ ಕಳೆದುಕೊಂಡಿದ್ದಾನೆ. ಪವಿತ್ರಾ(19) ಮತ್ತು ಕಾರ್ತಿಕ್​ ನಾಯಕ್(19)​ ಮೃತ ಪ್ರೇಮಿಗಳಾಗಿದ್ದಾರೆ. ನಿನ್ನೆ ಇಬ್ಬರ ಮಧ್ಯೆಯೂ ವೈಮನಸ್ಸು ಉಂಟಾಗಿ ಜಗಳ ನಡೆದಿತ್ತು. ಇದಾದ ಬಳಿಕ ಮನನೊಂದು ಮೊದಲು ಪವಿತ್ರಾ ಮನೆಯಲ್ಲಿ ನೇಣಿಗೆ ಶರಣಾಗಿದ್ದಳು ಎನ್ನಲಾಗಿದೆ. ಸ್ಥಳಕ್ಕೆ ಬನಹಟ್ಟಿ ಠಾಣಾ ಪೊಲೀಸರು ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ.

ರಥದ ಚಕ್ರಕ್ಕೆ ಸಿಲುಕಿ ವ್ಯಕ್ತಿ ಸಾವು

ಕಲಬುರಗಿ ತಾಲೂಕಿನ ಹಾಗರಗುಂಡಗಿ ಗ್ರಾಮದಲ್ಲಿ ನಡೆದ ಶರಣಬಸವೇಶ್ವರರ ಜಾತ್ರೆಯಲ್ಲಿ ರಥದ ಚಕ್ರಕ್ಕೆ ಸಿಲುಕಿ ವ್ಯಕ್ತಿಯೋರ್ವರು ದಾರುಣವಾಗಿ ಮೃತಪಟ್ಟಿದ್ದಾರೆ. ವಿನೋದ್ ರೆಡ್ಡಿ(40) ಮೃತರಾಗಿದ್ದು, ನಿನ್ನೆ ಸಂಜೆ ನಡೆದ ಘಟನೆ ತಡವಾಗಿ ಬೆಳಕಿಗೆ ಬಂದಿದೆ. ಫರಹತಬಾದ್​ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಇದನ್ನೂ ಓದಿ: ಪತ್ನಿಯ ಪ್ರಿಯಕರನಿಂದಲೇ ನಡೀತು ಪತಿಯ ಕೊಲೆ! ಸ್ನೇಹಿತನಂತೆ ನಟಿಸಿದ ವ್ಯಕ್ತಿ ಮಾಡಿದ್ದೇನು ಗೊತ್ತಾ?

ಈಜಲು ಹೋಗಿ ನೀರುಪಾಲಾಗಿದ್ದ ಯುವಕನ ಶವ ಪತ್ತೆ

ತುಂಗಾ ನದಿಯಲ್ಲಿ ಈಜಲು ಹೋಗಿ ನೀರುಪಾಲಾಗಿದ್ದ ಯುವಕನ ಶವ ಪತ್ತೆಯಾಗಿದೆ. ನಿನ್ನೆ ಸಂಜೆ ಕಲ್ಲು ಬಂಡೆ ಮೇಲೆ ಮೊಬೈಲ್, ಚಪ್ಪಲಿ, ಬಟ್ಟೆ ಇಟ್ಟು ಈಜಲು ಹೋಗಿದ್ದ ಯುವಕ ಅಕ್ಷಯ್ (26) ನೀರುಪಾಲಾಗಿದ್ದ. ತುಂಗಾ ನದಿಯಲ್ಲಿ ಈಜು ತಜ್ಞ ಈಶ್ವರ ಮಲ್ಪೆ ಶೋಧ ಕಾರ್ಯಾಚರಣೆ ನಡೆಸಿದ್ದು, ಅಕ್ಷಯ್​​ ಶವ ಪತ್ತೆ ಮಾಡಿದ್ದಾರೆ. ಮೃತದೇಹವನ್ನು ತೀರ್ಥಹಳ್ಳಿ ಆಸ್ಪತ್ರೆಗೆ ರವಾನೆ ಮಾಡಲಾಗಿದ್ದು, ತೀರ್ಥಹಳ್ಳಿ ಪೊಲೀಸ್ ಠಾಣೆಯಲ್ಲಿ ಈ ಬಗ್ಗೆ ಪ್ರಕರಣ ದಾಖಲಾಗಿದೆ.

ಮತ್ತಷ್ಟು ಸುದ್ದಿ ಓದಲು ಇಲ್ಲಿ ಕ್ಲಿಕ್​​ ಮಾಡಿ.

Source link

‘ಮರಿ, ನಿಮಗಿಂತ ಮೊದಲೇ ನಾನು ಧುರಂಧರ್ 2 ನೋಡಿದೀನಿ’; ದೀಪಿಕಾ ಖಡಕ್ ತಿರುಗೇಟು

ಬಾಲಿವುಡ್ ಸಿನಿಮಾ ‘ಧುರಂಧರ್ 2’ ರಿಲೀಸ್ ಆಗಿ ಮೆಚ್ಚುಗೆ ಪಡೆಯಿತು. ಈ ಚಿತ್ರ ಭಾರತದಲ್ಲೇ ಸಾವಿರಾರು ಕೋಟಿ ರೂಪಾಯಿ ಗಳಿಕೆ ಮಾಡಿ ದಾಖಲೆ ನಿರ್ಮಿಸಿದೆ. ಈ ಚಿತ್ರವನ್ನು ಕ್ರಿಕೆಟರ್​​ಗಳು, ರಾಜಕೀಯ ನಾಯಕರು ಸೇರಿದಂತೆ ಅನೇಕರು ಹಾಡಿ ಹೊಗಳಿದ್ದಾರೆ. ಆದರೆ, ಕಥಾ ನಾಯಕ ರಣವೀರ್ ಸಿಂಗ್ ಪತ್ನಿ ದೀಪಿಕಾ ಪಡುಕೋಣೆ (Deepika Padukone) ಮಾತ್ರ ಈ ವಿಷಯದಲ್ಲಿ ಮೌನ ವಹಿಸಿದ್ದರು. ಈ ಬಗ್ಗೆ ಚರ್ಚೆ ಶುರುವಾಗಿತ್ತು. ಇದಕ್ಕೆ ದೀಪಿಕಾ ಉತ್ತರ ನೀಡಿದ್ದಾರೆ.

ಇನ್​​ಸ್ಟಾಗ್ರಾಮ್ ಒಂದರಲ್ಲಿ ವಿಡಿಯೋ ವೈರಲ್ ಆಗಿದೆ. ಈ ವಿಡಿಯೋನ ಮಾರ್ಚ್ 23ರಂದು ಪೋಸ್ಟ್ ಮಾಡಲಾಗಿದೆ. ಅಂದರೆ, ‘ಧುರಂಧರ್ 2’ ರಿಲೀಸ್ ಆದ ಕೇವಲ ನಾಲ್ಕು ದಿನಕ್ಕೆ ಈ ವಿಡಿಯೋ ಅಪ್​​ಲೋಡ್ ಮಾಡಲಾಗಿದೆ. ಇದರಲ್ಲಿ ದೀಪಿಕಾ ‘ಧುರಂಧರ್ 2’ ಸಿನಿಮಾ ನೋಡಿಲ್ಲ ಎಂದು ಟೀಕಿಸಲಾಗಿತ್ತು.

ಇದಕ್ಕೆ ದೀಪಿಕಾ ಪಡುಕೋಣೆ ಕಮೆಂಟ್ ಮೂಲಕವೇ ಉತ್ತರ ಕೊಟ್ಟಿದ್ದಾರೆ. ‘ನೀವೆಲ್ಲರೂ ಸಿನಿಮಾ ನೋಡುವುದಕ್ಕೂ ಮೊದಲೇ ನಾನು ‘ಧುರಂಧರ್ 2’ ಚಿತ್ರವನ್ನು ನೋಡಿದ್ದೇನೆ. ನನ್ನನ್ನು ಮೂರ್ಖತನ ತೋರಿಸಲು ಬಂದು, ನಿಮ್ಮ ಮೂರ್ಖತನ ಬಯಲಾಗಿದೆ’ ಎಂದು ಖಾರವಾಗಿ ಪ್ರತಿಕ್ರಿಯಿಸಿದ್ದಾರೆ.

‘ಧುರಂಧರ್ 2’ ಚಿತ್ರವನ್ನು ಎಲ್ಲರೂ ಹಾಡಿ ಹೊಗಳುತ್ತಿದ್ದಾರೆ. ಸಿನಿಮಾ ನೋಡುವವರೆಲ್ಲರೂ ಈಗಾಗಲೇ ಚಿತ್ರವನ್ನು ನೋಡಿಯಾಗಿದೆ. ಆದರೂ ದೀಪಿಕಾ ಮಾತ್ರ ಈ ವಿಷಯದಲ್ಲಿ ಸೈಲೆಂಟ್ ಆಗಿರುವುದು ಏಕೆ ಎಂಬುದು ಅನೇಕರ ಪ್ರಶ್ನೆ ಆಗಿತ್ತು. ಈಗ ಕೊನೆಗೂ ಅದಕ್ಕೆ ಉತ್ತರ ಸಿಕ್ಕಿದೆ.

ಇದನ್ನೂ ಓದಿ: ಪತಿಯ ಸಿನಿಮಾ ದೊಡ್ಡ ಸಕಸ್ಸ್ ಕಂಡರೂ ತುಟಿಪಿಟಿಕ್ ಎನ್ನದ ದೀಪಿಕಾ ಪಡುಕೋಣೆ

ದೀಪಿಕಾ ಪಡುಕೋಣೆ ಸಿನಿಮಾ ನೋಡದೇ ಇರಬಹುದು ಎಂಬುದನ್ನು ನಾನಾ ರೀತಿಯಲ್ಲಿ ಬಿಂಬಿಸಲಾಯಿತು. ದೀಪಿಕಾ ಪಡುಕೋಣೆ ಅವರು 2020ರಲ್ಲಿ ಜೆಡಿಯು ಪ್ರತಿಭಟನೆಗೆ ಬೆಂಬಲ ಕೊಟ್ಟಿದ್ದರು. ಅವರನ್ನು ಎಡಪಂಕ್ತಿಯರ ಸಾಲಿನಲ್ಲಿ ಗುರುತಿಸಲಾಯಿತು. ‘ಧುರಂಧರ್ 2’ ಸಿನಿಮಾಗಳು ಬಲ ಪಂಥೀಯ ತತ್ವಗಳನ್ನು ಹೊಂದಿವೆ. ಈ ಕಾರಣದಿಂದ ದೀಪಿಕಾ ಮೌನ ತಾಳಿರಬಹುದು ಎನ್ನಲಾಗಿತ್ತು.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Source link

SSLC Exam: ಹಿಂದಿ ಮಾತ್ರವಲ್ಲ, ಕನ್ನಡವೂ ಸೇರಿ 9 ಭಾಷೆಗಳಿಗೆ ಅನ್ವಯವಾಗಲಿದೆ ಗ್ರೇಡಿಂಗ್! ಗ್ರೇಡ್ ಕೊಡೋದು ಹೇಗೆ ಗೊತ್ತಾ?

ಬೆಂಗಳೂರು, ಏಪ್ರಿಲ್ 8: ರಾಜ್ಯದ ಎಸ್ಎಸ್​ಎಲ್​​ಸಿ (SSLC) ವಿದ್ಯಾರ್ಥಿಗಳ ಮೇಲಿನ ಶೈಕ್ಷಣಿಕ ಒತ್ತಡವನ್ನು ಕಡಿಮೆ ಮಾಡುವ ನಿಟ್ಟಿನಲ್ಲಿ ಶಿಕ್ಷಣ ಸಚಿವ ಮಧು ಬಂಗಾರಪ್ಪ ಇತ್ತೀಚೆಗೆ ಕ್ರಾಂತಿಕಾರಿ ನಿರ್ಧಾರ ಪ್ರಕಟಿಸಿದ್ದಾರೆ. ಇನ್ಮುಂದೆ ಎಸ್ಎಸ್​ಎಲ್​​ಸಿ ಪರೀಕ್ಷೆಯಲ್ಲಿ ತೃತೀಯ ಭಾಷೆಗೆ ಅಂಕ ಇರುವುದಿಲ್ಲ. ಕೇವಲ ಗ್ರೇಡಿಂಗ್ (Grading system) ವ್ಯವಸ್ಥೆ ಇರಲಿದೆ. ಅಲ್ಲದೆ, ಈ ಭಾಷೆಯಲ್ಲಿ ಪಾಸ್ ಅಥವಾ ಫೇಲ್ ಎಂಬ ಪದ್ಧತಿ ಇರುವುದಿಲ್ಲ ಎಂದು ಅವರು ತಿಳಿಸಿದ್ದಾರೆ. ಪ್ರಮುಖವಾಗಿ ಹಿಂದಿ ಹೇರಿಕೆ ತಡೆಯಲು ಸರ್ಕಾರ ಈ ನಿರ್ಧಾರ ಕೈಗೊಂಡಿದೆ ಎನ್ನಲಾಗಿದ್ದರೂ, ತೃತೀಯ ಭಾಷೆಯಾಗಿ ಕನ್ನಡ ಕಲಿಯುವವರಿಗೂ ಇದು ಅನ್ವಯವಾಗುತ್ತದೆ!

ಕರ್ನಾಟಕದಲ್ಲಿ ಪ್ರಥಮ ಭಾಷೆಯಾಗಿ ಸಂಸ್ಕೃತ, ಉರ್ದು ಇತ್ಯಾದಿ ಬೇರೆ ಭಾಷೆ ಕಲಿಯುವವರಿಗೆ ಕನ್ನಡ ಮೂರನೇ ಭಾಷೆಯಾಗಿರುತ್ತದೆ. ಹಾಗಾದರೆ ರಾಜ್ಯದ ಎಸ್​ಎಸ್​ಎಲ್​ಸಿ ಪರೀಕ್ಷೆಯಲ್ಲಿ ಎಷ್ಟು ತೃತೀಯ ಭಾಷೆಗಳಿವೆ ಎಂಬ ಮಾಹಿತಿ ಇಲ್ಲಿದೆ.

ಯಾವೆಲ್ಲಾ ಭಾಷೆಗಳು ತೃತೀಯ ಭಾಷೆ ಪಟ್ಟಿಯಲ್ಲಿವೆ?

2025-26ನೇ ಶೈಕ್ಷಣಿಕ ಸಾಲಿನಿಂದ ಕರ್ನಾಟಕ ಎಸ್ಎಸ್​ಎಲ್​​ಸಿ ಪರೀಕ್ಷೆಯಲ್ಲಿ ಒಟ್ಟು 9 ಭಾಷೆಗಳನ್ನು ತೃತೀಯ ಭಾಷೆಯಾಗಿ ಆಯ್ಕೆ ಮಾಡಿಕೊಳ್ಳಲು ಅವಕಾಶವಿದೆ. ಅವುಗಳೆಂದರೆ;

  • ಹಿಂದಿ
  • ಕನ್ನಡ
  • ಇಂಗ್ಲಿಷ್
  • ಉರ್ದು
  • ಸಂಸ್ಕೃತ
  • ಕೊಂಕಣಿ
  • ತುಳು
  • ಮರಾಠಿ
  • ಅರೇಬಿಕ್

ಪರೀಕ್ಷಾ ಅಂಕಗಳ ಲೆಕ್ಕಾಚಾರ ಬದಲಾವಣೆ

ಈ ಮೊದಲು ಎಸ್ಎಸ್​ಎಲ್​​ಸಿ ಪರೀಕ್ಷೆಯು ಒಟ್ಟು 625 ಅಂಕಗಳಿಗೆ ನಡೆಯುತ್ತಿತ್ತು. ಇದರಲ್ಲಿ ತೃತೀಯ ಭಾಷೆಗೆ 100 ಅಂಕಗಳನ್ನು ನಿಗದಿಪಡಿಸಲಾಗಿತ್ತು. ಆದರೆ, ಹೊಸ ನಿಯಮದಂತೆ ತೃತೀಯ ಭಾಷೆಯ ಅಂಕಗಳನ್ನು ಅಂತಿಮ ಫಲಿತಾಂಶದ ಒಟ್ಟು ಮೊತ್ತಕ್ಕೆ ಪರಿಗಣಿಸುವುದಿಲ್ಲ. ಹೀಗಾಗಿ, ಇನ್ಮುಂದೆ ಒಟ್ಟು ಅಂಕಗಳ ಸಂಖ್ಯೆ 525ಕ್ಕೆ ಇಳಿಕೆಯಾಗಲಿದೆ. ಈ ಭಾಷೆಗೆ ಬದಲಾಗಿ ಎ, ಬಿ, ಸಿ, ಡಿ ಎಂಬ ಗ್ರೇಡ್‌ಗಳನ್ನು ನೀಡಲಾಗುತ್ತದೆ.

ಗ್ರೇಡ್ ನಿರ್ಣಯ ಹೇಗೆ?

ಸದ್ಯ, ಎ, ಬಿ, ಸಿ, ಡಿ ಗ್ರೇಡ್ ನಿರ್ಣಯಿಸುವ ಬಗೆ ಹೇಗೆ ಎಂಬ ಬಗ್ಗೆ ಶಿಕ್ಷಣ ಇಲಾಖೆ ಇನ್ನೂ ಅಂತಿಮ ನಿರ್ಧಾರಕ್ಕೆ ಬಂದಿಲ್ಲ. ಮುಂದಿನ ಕೆಲವೇ ದಿನಗಳಲ್ಲಿ ಈ ಬಗ್ಗೆ ಸಭೆ ನಡೆಸಿ ಅಂತಿಮ ನಿರ್ಧಾರ ಪ್ರಕಟಿಸಲಿದೆ.

ಮತ್ತಷ್ಟು ಶಿಕ್ಷಣ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

Airports: ಭಾರತದ ವಿಮಾನ ನಿಲ್ದಾಣಗಳಲ್ಲಿನ ಪಾರ್ಕಿಂಗ್​, ಲ್ಯಾಂಡಿಂಗ್ ಶುಲ್ಕ ಕಡಿತ

ನವದೆಹಲಿ, ಏಪ್ರಿಲ್ 08: ದೇಶಾದ್ಯಂತ ಎಲ್ಲಾ ಪ್ರಮುಖ ವಿಮಾನ ನಿಲ್ದಾಣ(Airport)ಗಳಲ್ಲಿ ದೇಶೀಯ ವಿಮಾನಗಳ ಲ್ಯಾಂಡಿಂಗ್ ಮತ್ತು ಪಾರ್ಕಿಂಗ್ ಶುಲ್ಕವನ್ನು ಶೇಕಡಾ 25 ರಷ್ಟು ಕಡಿಮೆ ಮಾಡಲಾಗಿದೆ. ಭಾರತೀಯ ವಿಮಾನ ನಿಲ್ದಾಣಗಳ ಆರ್ಥಿಕ ನಿಯಂತ್ರಣ ಪ್ರಾಧಿಕಾರ (AERA) ಈ ಒಂದು ಪ್ರಮುಖ ನಿರ್ಧಾರವನ್ನು ತೆಗೆದುಕೊಂಡಿದೆ. ಈ ಕಡಿತವು ತಕ್ಷಣದಿಂದ ಜಾರಿಗೆ ಬರಲಿದ್ದು, ಮುಂದಿನ ಮೂರು ತಿಂಗಳವರೆಗೆ ಜಾರಿಯಲ್ಲಿರುತ್ತದೆ. ಮೂರು ತಿಂಗಳ ನಂತರ, ಮುಂದಿನ ನಿರ್ಧಾರಗಳನ್ನು ತೆಗೆದುಕೊಳ್ಳುವ ಮೊದಲು AERA ಮಾರುಕಟ್ಟೆ ಪರಿಸ್ಥಿತಿಗಳು, ವಿಮಾನಯಾನ ಸಂಸ್ಥೆಗಳ ಆರ್ಥಿಕ ಸ್ಥಿತಿ ಮತ್ತು ಉದ್ಯಮದ ಸವಾಲುಗಳನ್ನು ಪರಿಶೀಲಿಸುತ್ತದೆ.

ಎನ್​ಡಿಟಿವಿ ಪ್ರಾಫಿಟ್ ಪ್ರಕಾರ, ವಿಮಾನ ನಿಲ್ದಾಣ ಶುಲ್ಕದಲ್ಲಿನ ಈ ಕಡಿತವು ವಿಮಾನಯಾನ ಸಂಸ್ಥೆಗಳಿಗೆ ವೆಚ್ಚದ ಒತ್ತಡದಿಂದ ಪರಿಹಾರವನ್ನು ನೀಡುವ ನಿರೀಕ್ಷೆಯಿದೆ. ವಿಮಾನಯಾನ ಸಂಸ್ಥೆಗಳು ಈ ಪರಿಹಾರವನ್ನು ಪ್ರಯಾಣಿಕರಿಗೆ ವರ್ಗಾಯಿಸಬಹುದು ಎಂಬ ನಿರೀಕ್ಷೆ ಸ್ವಲ್ಪ ಕಡಿಮೆ ಇದೆ. ಇನ್ನೂ ಯಾವುದೇ ಅಧಿಕೃತ ಘೋಷಣೆ ಮಾಡಲಾಗಿಲ್ಲ. ಏರುತ್ತಿರುವ ಇಂಧನ ಬೆಲೆಗಳು ಮತ್ತು ಕಾರ್ಯಾಚರಣೆಯ ಸವಾಲುಗಳಿಂದಾಗಿ ಇತ್ತೀಚಿನ ತಿಂಗಳುಗಳಲ್ಲಿ ವಿಮಾನಯಾನ ಸಂಸ್ಥೆಗಳು ಈಗಾಗಲೇ ಒತ್ತಡದಲ್ಲಿವೆ.

ಲ್ಯಾಂಡಿಂಗ್ ಮತ್ತು ಪಾರ್ಕಿಂಗ್ ಶುಲ್ಕಗಳು ವಿಮಾನಯಾನ ಸಂಸ್ಥೆಗಳ ಒಟ್ಟು ನಿರ್ವಹಣಾ ವೆಚ್ಚಗಳಲ್ಲಿ ಗಮನಾರ್ಹ ಭಾಗವನ್ನು ಹೊಂದಿವೆ.ಈ ತಾತ್ಕಾಲಿಕ ಪರಿಹಾರವು AERA ನಿಯಂತ್ರಿಸುವ ಎಲ್ಲಾ ಪ್ರಮುಖ ವಿಮಾನ ನಿಲ್ದಾಣಗಳಿಗೆ ಅನ್ವಯಿಸುತ್ತದೆ. ಗಗನಕ್ಕೇರುತ್ತಿರುವ ಇಂಧನ ಬೆಲೆಗಳು ಮತ್ತು ಜಾಗತಿಕ ಉದ್ವಿಗ್ನತೆಗಳ ನಡುವೆ ಸಂಕಷ್ಟದಲ್ಲಿರುವ ಭಾರತೀಯ ವಿಮಾನಯಾನ ಸಂಸ್ಥೆಗಳಿಗೆ ಸ್ವಲ್ಪ ಮಟ್ಟಿಗೆ ಪರಿಹಾರ ಸಿಕ್ಕಂತಾಗಿದೆ.

ಮತ್ತಷ್ಟು ಓದಿ: ‘ವಿಶ್ವದ ಅತ್ಯುತ್ತಮ ಆಗಮನ ನಿಲ್ದಾಣ’ ಪ್ರಶಸ್ತಿ ಪಡೆದ ಕೆಂಪೇಗೌಡ ವಿಮಾನ ನಿಲ್ದಾಣ: ವೇಗ, ಸ್ವಚ್ಛತೆ ಎಲ್ಲದರಲ್ಲೂ ನಂಬರ್​​ ಒನ್

ಪಶ್ಚಿಮ ಏಷ್ಯಾದ ಬಿಕ್ಕಟ್ಟು ಕಚ್ಚಾ ತೈಲ ಬೆಲೆಗಳಲ್ಲಿ ಏರಿಕೆಗೆ ಕಾರಣವಾಗಿರುವುದಲ್ಲದೆ, ವಿಮಾನ ಮಾರ್ಗಗಳಲ್ಲಿನ ಬದಲಾವಣೆಗಳಿಂದಾಗಿ ವಿಮಾನಯಾನ ಸಂಸ್ಥೆಗಳ ಮೇಲೆ ಆರ್ಥಿಕ ಹೊರೆ ಹೆಚ್ಚಿರುವ ಸಮಯದಲ್ಲಿ ಈ ಐತಿಹಾಸಿಕ ಕ್ರಮವು ಬಂದಿದೆ. ಇದರರ್ಥ ವಿಮಾನಯಾನ ಸಂಸ್ಥೆಗಳು ಈಗ ರನ್‌ವೇ ಬಳಕೆ ಮತ್ತು ವಿಮಾನ ಪಾರ್ಕಿಂಗ್‌ಗೆ ಮೊದಲಿಗಿಂತ ಕಾಲು ಭಾಗದಷ್ಟು ಕಡಿಮೆ ಪಾವತಿಸಬೇಕಾಗುತ್ತದೆ.

ಪ್ರಸ್ತುತ ಭೌಗೋಳಿಕ ರಾಜಕೀಯ ಉದ್ವಿಗ್ನತೆಗಳ (ಪಶ್ಚಿಮ ಏಷ್ಯಾ ಬಿಕ್ಕಟ್ಟು) ಪರಿಣಾಮವನ್ನು ತಗ್ಗಿಸಲು ಕೇಂದ್ರ ಸರ್ಕಾರದ ನಿರ್ದೇಶನಗಳನ್ನು ಅನುಸರಿಸಿ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ ಎಂದು ಪ್ರಾಧಿಕಾರವು ತನ್ನ ಅಧಿಕೃತ ಆದೇಶದಲ್ಲಿ ಸ್ಪಷ್ಟಪಡಿಸಿದೆ. ಯುದ್ಧ ಮತ್ತು ಅಂತಾರಾಷ್ಟ್ರೀಯ ಅಸ್ಥಿರತೆಯಿಂದಾಗಿ ವಾಯುಯಾನ ವಲಯದಲ್ಲಿ ಉಂಟಾಗುತ್ತಿರುವ ಆರ್ಥಿಕ ಒತ್ತಡದ ಹಿನ್ನೆಲೆಯಲ್ಲಿ ಈ ತುರ್ತು ಪರಿಹಾರವನ್ನು ನೀಡಿದೆ.

 

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Source link

ಉಗುರಿನ ಎಷ್ಟು ಭಾಗ ಕತ್ತರಿಸಬೇಕು? ತಪ್ಪು ರೀತಿಯಲ್ಲಿ ಉಗುರು ಕಟ್ ಮಾಡಿದರೆ ಬೆರಳಿನ ಮಾಂಸಕ್ಕೆ ಅಪಾಯ

ನಮ್ಮ ದೇಹದ ಅತಿ ಸಣ್ಣ ಅಂಗವಾದ ಉಗುರುಗಳ ಬಗ್ಗೆ ನಾವು ತೋರುವ ನಿರ್ಲಕ್ಷ್ಯ ದೊಡ್ಡ ಆರೋಗ್ಯ ಸಮಸ್ಯೆಗೆ ದಾರಿಯಾಗಬಹುದು. ಅನೇಕರು ಉಗುರುಗಳನ್ನು ಅತಿಯಾಗಿ ಆಳವಾಗಿ ಕತ್ತರಿಸುತ್ತಾರೆ ಅಥವಾ ಹಲ್ಲುಗಳಿಂದ ಕಚ್ಚಿ ತೆಗೆಯುತ್ತಾರೆ. ಇದು ಬೆರಳಿನ ಮಾಂಸ ಮತ್ತು ನರಗಳ ಮೇಲೆ ಕೆಟ್ಟ ಪರಿಣಾಮ ಬೀರುತ್ತದೆ ಎಂದು ಚರ್ಮರೋಗ ತಜ್ಞರು ಎಚ್ಚರಿಸಿದ್ದಾರೆ.

ಉಗುರಿನ ತುದಿಯಲ್ಲಿ ಬೆಳೆದಿರುವ ಬಿಳಿ ಭಾಗವನ್ನು ಮಾತ್ರ ಕತ್ತರಿಸಬೇಕು. ಚರ್ಮ ಮತ್ತು ಉಗುರು ಸೇರುವ ಜಾಗದಿಂದ ಕನಿಷ್ಠ 1 ರಿಂದ 2 ಮಿಲಿಮೀಟರ್‌ ಅಂತರ ಬಿಡುವುದು ಕಡ್ಡಾಯ ಎಂದು ತಜ್ಞರು ಹೇಳುತ್ತಾರೆ. ಪಾದದ ಉಗುರುಗಳನ್ನು ಮೂಲೆಗಳಲ್ಲಿ ಅತಿಯಾಗಿ ಕತ್ತರಿಸುವ ಬದಲು ಯಾವಾಗಲೂ ನೇರವಾಗಿ ಕತ್ತರಿಸಬೇಕು. ಇದು ಉಗುರು ಮಾಂಸದೊಳಗೆ ಬೆಳೆಯುವುದನ್ನು ತಪ್ಪಿಸುತ್ತದೆ ಎಂಬುದು ವೈದ್ಯರ ಅಭಿಪ್ರಾಯ. ತಪ್ಪು ಕತ್ತರಿಸುವಿಕೆಯಿಂದ ಉಗುರು ಪಕ್ಕದ ಮಾಂಸದೊಳಗೆ ನುಗ್ಗಿ ವಿಪರೀತ ನೋವು ನೀಡುತ್ತದೆ. ಇದು ಹೆಚ್ಚಾಗಿ ಕಾಲ್ಬೆರಳುಗಳಲ್ಲಿ ಕಂಡುಬರುತ್ತದೆ.

ತಪ್ಪು ರೀತಿಯಲ್ಲಿ ಕತ್ತರಿಸುವುದರಿಂದ ಆಗುವ ಅಪಾಯಗಳು

ಇನ್‌ಗ್ರೋನ್ ನೇಲ್ : ನೀವು ಉಗುರುಗಳ ಮೂಲೆಗಳನ್ನು ತುಂಬಾ ಆಳವಾಗಿ ಕತ್ತರಿಸಿದಾಗ, ಹೊಸದಾಗಿ ಬೆಳೆಯುವ ಉಗುರು ಪಕ್ಕದ ಮಾಂಸದೊಳಗೆ ನುಗ್ಗುತ್ತದೆ. ಇದು ತೀವ್ರ ನೋವು, ಊತ ಮತ್ತು ಸೋಂಕಿಗೆ ಕಾರಣವಾಗುತ್ತದೆ.

ಪರೋನಿಚಿಯಾ: ಉಗುರಿನ ಸುತ್ತಲಿನ ಚರ್ಮಕ್ಕೆ ಹಾನಿಯಾದಾಗ ಬ್ಯಾಕ್ಟೀರಿಯಾಗಳು ಸುಲಭವಾಗಿ ಒಳಹೋಗುತ್ತವೆ. ಇದರಿಂದ ಬೆರಳಿನ ಸುತ್ತ ಕೀವು ತುಂಬಿಕೊಳ್ಳುವುದು ಮತ್ತು ಕೆಂಪಗಾಗುವುದು ಸಂಭವಿಸುತ್ತದೆ.

ಹೈಪರ್ ಸೆನ್ಸಿಟಿವಿಟಿ: ಉಗುರುಗಳು ಬೆರಳಿನ ತುದಿಗಳಲ್ಲಿರುವ ಸೂಕ್ಷ್ಮ ನರಗಳಿಗೆ ರಕ್ಷಣೆ ನೀಡುತ್ತವೆ. ಅತಿಯಾಗಿ ಕತ್ತರಿಸಿದಾಗ ವಸ್ತುಗಳನ್ನು ಮುಟ್ಟುವಾಗ ಬೆರಳುಗಳಲ್ಲಿ ಚುಚ್ಚಿದಂತಾಗುವ ಅಥವಾ ನೋವಿನ ಅನುಭವವಾಗಬಹುದು.

ಇದನ್ನೂ ಓದಿ: ಪ್ರತಿನಿತ್ಯ ಈ ಎಲೆ ತಿನ್ನಿ ಹೃದಯದ ಆರೋಗ್ಯವೂ ಚೆನ್ನಾಗಿರುತ್ತೆ, ನಿಮ್ಮ ತ್ವಚೆಯೂ ಕಾಂತಿಯುತವಾಗುತ್ತೆ

ವೈದ್ಯಕೀಯ ಸಲಹೆಗಳು:

ನೇಲ್ ಕಟರ್ ಮಾತ್ರ ಬಳಸಿ: ಬ್ಲೇಡ್, ಕತ್ತರಿ ಅಥವಾ ಹಲ್ಲುಗಳಿಂದ ಉಗುರು ಕಡಿಯುವುದು ಅತ್ಯಂತ ಅಪಾಯಕಾರಿ. ಇದು ಉಗುರುಗಳನ್ನು ಸೀಳುವಂತೆ ಮಾಡುತ್ತದೆ.

ಶುಚಿತ್ವಕ್ಕೆ ಆದ್ಯತೆ: ಉಗುರು ಕತ್ತರಿಸುವ ಮೊದಲು ಮತ್ತು ನಂತರ ನೇಲ್ ಕಟರ್ ಅನ್ನು ಆಲ್ಕೋಹಾಲ್ ಅಥವಾ ಸೋಪಿನ ನೀರಿನಿಂದ ಸ್ವಚ್ಛಗೊಳಿಸಿ.

ನೈಸರ್ಗಿಕ ಕವಚವನ್ನು ಮುಟ್ಟಬೇಡಿ: ಉಗುರಿನ ಬುಡದಲ್ಲಿರುವ ತೆಳುವಾದ ಚರ್ಮವನ್ನು (Cuticle) ಎಂದಿಗೂ ಕತ್ತರಿಸಬೇಡಿ. ಇದು ಸೋಂಕು ತಡೆಯುವ ನೈಸರ್ಗಿಕ ತಡೆಗೋಡೆಯಾಗಿದೆ.

ಆರೋಗ್ಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

Char Dham Yatra 2026: ಕೇದಾರನಾಥ-ಬದರಿನಾಥ ಯಾತ್ರಿಕರ ಗಮನಕ್ಕೆ! ಹೆಲಿಕಾಪ್ಟರ್, ಪೂಜಾ ದರಗಳಲ್ಲಿ ಭಾರಿ ಏರಿಕೆ

2026ರ ಉತ್ತರಾಖಂಡದ ಪವಿತ್ರ ಚಾರ್ ಧಾಮ್ ಯಾತ್ರೆಯ ಋತುವು ಆರಂಭವಾಗುತ್ತಿದ್ದು, ಈ ಬಾರಿ ಕೇದಾರನಾಥ ಮತ್ತು ಬದರಿನಾಥ ಧಾಮಗಳಿಗೆ ಭೇಟಿ ನೀಡುವ ಭಕ್ತರು ತಮ್ಮ ಪ್ರಯಾಣದ ಬಜೆಟ್ ಸ್ವಲ್ಪ ಹೆಚ್ಚಿಸಿಕೊಳ್ಳಬೇಕಾಗುತ್ತದೆ. ಬದರಿನಾಥ-ಕೇದಾರನಾಥ ದೇವಾಲಯ ಸಮಿತಿ (BKTC) ಪೂಜಾ ಶುಲ್ಕಗಳನ್ನು ಪರಿಷ್ಕರಿಸಿದೆ ಮತ್ತು ಹೆಲಿಕಾಪ್ಟರ್ ಸೇವೆಗಳಿಗೂ ಹೊಸ ದರಗಳನ್ನು ನಿಗದಿಪಡಿಸಲಾಗಿದೆ. ಆದಾಗ್ಯೂ, ಸಾಮಾನ್ಯ ಭಕ್ತರಿಗೆ ಸಮಾಧಾನದ ಸಂಗತಿಯೆಂದರೆ, ದೇವಾಲಯಗಳಲ್ಲಿನ ಸಾಂಪ್ರದಾಯಿಕ ನಿಯಮಿತ ದರ್ಶನವು ಮೊದಲಿನಂತೆಯೇ ಸಂಪೂರ್ಣವಾಗಿ ಉಚಿತವಾಗಿರುತ್ತದೆ.

ಹೆಲಿಕಾಪ್ಟರ್ ಸೇವೆ ಮತ್ತು ಹೊಸ ದರಗಳು:

ಹೆಲಿಕಾಪ್ಟರ್ ಸೇವೆಗಳಿಗಾಗಿ ಈ ವರ್ಷ ಹೊಸ ಟೆಂಡರ್ ಪ್ರಕ್ರಿಯೆಯನ್ನು ಜಾರಿಗೆ ತರಲಾಗಿದ್ದು, ಒಟ್ಟು ಎಂಟು ನಿರ್ವಾಹಕರು ವಿವಿಧ ಮಾರ್ಗಗಳಲ್ಲಿ ಸೇವೆ ಒದಗಿಸಲಿದ್ದಾರೆ. ಹೊಸ ದರದ ಅನ್ವಯ, ಗುಪ್ತಕಾಶಿಯಿಂದ ಕೇದಾರನಾಥಕ್ಕೆ ಏಕಮುಖ ಪ್ರಯಾಣಕ್ಕೆ 6,077ರೂ., ಫಟಾದಿಂದ 4,840 ಮತ್ತು ಶಿರಸಿಯಿಂದ ರೂ. 3,043 ನಿಗದಿಪಡಿಸಲಾಗಿದೆ. ಈ ಬೆಲೆಗಳಿಗೆ ಜಿಎಸ್‌ಟಿ (GST) ಮತ್ತು ಆನ್‌ಲೈನ್ ಬುಕಿಂಗ್ ಶುಲ್ಕಗಳು ಹೆಚ್ಚುವರಿಯಾಗಿ ಅನ್ವಯಿಸುವುದರಿಂದ ಒಟ್ಟು ವೆಚ್ಚದಲ್ಲಿ ಏರಿಕೆಯಾಗಲಿದೆ. ಕಳೆದ ವರ್ಷಕ್ಕೆ ಹೋಲಿಸಿದರೆ ಫಟಾ ಮಾರ್ಗದಲ್ಲಿ ಬೆಲೆ ಹೆಚ್ಚಳವು ಗಮನಾರ್ಹವಾಗಿದ್ದರೂ, ಶಿರಸಿ ಮಾರ್ಗದ ಪ್ರಯಾಣಿಕರಿಗೆ ದರವು ತುಲನಾತ್ಮಕವಾಗಿ ಸಮಾಧಾನಕರವಾಗಿದೆ.

ಕೇದಾರನಾಥದಲ್ಲಿ ಪೂಜಾ ಶುಲ್ಕಗಳ ಏರಿಕೆ:

ಕೇದಾರನಾಥ ದೇವಾಲಯದಲ್ಲಿ ವಿಶೇಷ ಪೂಜೆಗಳ ದರದಲ್ಲಿ ಭಾರಿ ಏರಿಕೆ ಕಂಡುಬಂದಿದೆ. ವಿಶೇಷವಾಗಿ ಒಂದು ದಿನದ ಪೂಜಾ ಶುಲ್ಕವನ್ನು 28,600 ರಿಂದ 51,00 ರೂ.ಗೆ ಹೆಚ್ಚಿಸಲಾಗಿದ್ದು, ಇದು ಸುಮಾರು ಶೇ.78 ರಷ್ಟು ಹೆಚ್ಚಳವಾಗಿದೆ. ಉಳಿದಂತೆ ಮಹಾಭಿಷೇಕಕ್ಕೆ 11,500, ರುದ್ರಾಭಿಷೇಕಕ್ಕೆ 7,500 ರೂ. ಮತ್ತು ಅಖಂಡ ಜ್ಯೋತಿ ಬೆಳಗಿಸಲು 5,100 ರೂ. ನಿಗದಿಪಡಿಸಲಾಗಿದೆ. ಭಕ್ತರು ಶಿವ ಸಹಸ್ರನಾಮ ಪಠಣಕ್ಕೆ 2,500 ಮತ್ತು ಬಾಲಾ ಭೋಗ್ ನೈವೇದ್ಯಕ್ಕೆ 1,500 ರೂ. ಪಾವತಿಸಬೇಕಾಗುತ್ತದೆ.

ಬದರಿನಾಥ ಧಾಮದ ಪರಿಷ್ಕೃತ ದರಪಟ್ಟಿ:

ಬದರಿನಾಥ ಧಾಮದಲ್ಲಿಯೂ ಸಹ ವಿವಿಧ ಧಾರ್ಮಿಕ ವಿಧಿವಿಧಾನಗಳ ಶುಲ್ಕವನ್ನು ಹೆಚ್ಚಿಸಲಾಗಿದೆ. ಇಲ್ಲಿ ಶ್ರೀಮದ್ ಭಾಗವತ ಕಥಾ ಶ್ರವಣದ ಶುಲ್ಕವನ್ನು 51,000 ರಿಂದ ನೇರವಾಗಿ 1,00,000ರೂ. ಕ್ಕೆ ಏರಿಸಲಾಗಿದೆ. ಹಾಗೆಯೇ ಮಹಾಭಿಷೇಕಕ್ಕೆ 5,500, ವೇದ ಮತ್ತು ಗೀತಾ ಪಠಣಕ್ಕೆ 6,000 ಹಾಗೂ ಅಖಂಡ ಜ್ಯೋತಿಗೆ 5,100 ನಿಗದಿಪಡಿಸಲಾಗಿದೆ. ಕಪೂರ್ ಆರತಿ ಮತ್ತು ಖೀರ್ ಭೋಗ್‌ನಂತಹ ಸೇವೆಗಳ ದರಗಳನ್ನೂ ಸಹ ಭಕ್ತರ ಅನುಕೂಲಕ್ಕೆ ತಕ್ಕಂತೆ ಪರಿಷ್ಕರಿಸಲಾಗಿದ್ದರೂ, ಒಟ್ಟಾರೆ ಪೂಜಾ ವೆಚ್ಚದಲ್ಲಿ ಏರಿಕೆ ಕಂಡುಬಂದಿದೆ.

ಇದನ್ನೂ ಓದಿ: ಮುಯ್ಯಿ ರೂಪದಲ್ಲಿ ಕೊಡುವ ಹಣಕ್ಕೆ 1ರೂ. ಸೇರಿಸಿ ಕೊಡಬೇಕು ಯಾಕೆ ಗೊತ್ತಾ?

ಯಾತ್ರಿಕರಿಗೆ ಮುನ್ನೆಚ್ಚರಿಕೆ:

ಈ ವರ್ಷ ಚಾರ್ ಧಾಮ್ ಯಾತ್ರೆಯನ್ನು ಕೈಗೊಳ್ಳಲು ಯೋಜಿಸುತ್ತಿರುವ ಭಕ್ತರು, ತಮ್ಮ ಪ್ರಯಾಣದ ಯೋಜನೆಯನ್ನು ಸಿದ್ಧಪಡಿಸುವಾಗ ಈ ಹೊಸ ದರಗಳನ್ನು ಗಮನದಲ್ಲಿಟ್ಟುಕೊಳ್ಳುವುದು ಅತ್ಯಗತ್ಯ. ವಿಶೇಷ ಪೂಜೆಗಳನ್ನು ಮಾಡಿಸಲು ಇಚ್ಛಿಸುವವರು ಮತ್ತು ಹೆಲಿಕಾಪ್ಟರ್ ಸೇವೆಯನ್ನು ಬಳಸುವವರು ಹೆಚ್ಚುವರಿ ಜಿಎಸ್‌ಟಿ ಮತ್ತು ಸೇವಾ ತೆರಿಗೆಗಳನ್ನು ಒಳಗೊಂಡಂತೆ ವೆಚ್ಚವನ್ನು ಅಂದಾಜು ಮಾಡಿಕೊಳ್ಳಬೇಕು. ದರಗಳಲ್ಲಿ ಏರಿಕೆಯಾಗಿದ್ದರೂ, ಯಾತ್ರೆಯ ಪಾವಿತ್ರ್ಯತೆ ಮತ್ತು ಭಕ್ತರ ಅನುಕೂಲಕ್ಕಾಗಿ ಅಗತ್ಯ ವ್ಯವಸ್ಥೆಗಳನ್ನು ಸುಗಮಗೊಳಿಸಲು ಈ ಕ್ರಮಗಳನ್ನು ಕೈಗೊಳ್ಳಲಾಗಿದೆ ಎಂದು ಸಮಿತಿ ತಿಳಿಸಿದೆ.

ಮತ್ತಷ್ಟು ಆಧ್ಯಾತ್ಮಿಕ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

Viral: ಮನಸ್ಸಿದ್ದರೆ ಪ್ರೀತಿ ಮಾಡು, ಬಾಡಿಗೆ ಇದ್ದರೆ ಕಾಲ್ ಮಾಡು; ವೈರಲ್ ಆಯ್ತು ಆಟೋ ಹಿಂಬದಿ ಬರೆದ ಸಾಲು

ಆಟೋ, ಬೈಕ್ ಗಳ ಹಿಂಭಾಗದಲ್ಲಿ ಬರೆದ ಬರಹಗಳನ್ನು ನೀವು ನೋಡಿದ್ದೀರಬಹುದು. ಕೆಲವು ಸಾಲುಗಳು ನಿಮ್ಮ ನಗುವಿಗೆ ಕಾರಣವಾಗುತ್ತದೆ. ಇನ್ನು ಕೆಲವು ಅರ್ಥಪೂರ್ಣ ಸಾಲುಗಳನ್ನು ನೋಡಿದಾಗ ಆಟೋ ಚಾಲಕನ (auto driver) ಬುದ್ಧಿವಂತಿಕೆಯನ್ನು ಮೆಚ್ಚಿಕೊಳ್ಳುತ್ತೇವೆ. ಇದೀಗ ಆಟೋ ಚಾಲಕನೊಬ್ಬ ಬಾಡಿಗೆ ಇದ್ರೆ ಕಾಲ್ ಮಾಡಿ ಎಂದು ಈ ಸಾಲಿನ ಮೂಲಕ ಹೇಳಿದ್ದಾನೆ. ಮನಸ್ಸಿದ್ದರೆ ಪ್ರೀತಿ ಮಾಡು, ಬಾಡಿಗೆ ಇದ್ದರೆ ಕಾಲ್ ಮಾಡು ಆಟೋ ಹಿಂಬದಿ ಬರೆದ ಸಾಲು ನೆಟ್ಟಿಗರ ಗಮನ ಸೆಳೆಯುತ್ತಿದೆ.

raviraj. naik ಹೆಸರಿನ ಇನ್ಸ್ಟಾಗ್ರಾಮ್ ಖಾತೆಯಲ್ಲಿ ಹಂಚಿಕೊಳ್ಳಲಾದ ವಿಡಿಯೋದಲ್ಲಿ ಆಟೋದ ಹಿಂಬದಿ ಬರೆದ ಅರ್ಥಪೂರ್ಣ ಸಾಲುಗಳನ್ನು ನೋಡಬಹುದು. ಆಟೋ ಚಾಲಕನು, ತನ್ನ ಆಟೋದ ಹಿಂದೆ ಮನಸ್ಸಿದ್ದರೆ ಪ್ರೀತಿ ಮಾಡು, ಬಾಡಿಗೆ ಇದ್ದರೆ ಕಾಲ್ ಮಾಡು ಎಂದು ಬರೆದಿರುವುದನ್ನು ಕಾಣಬಹುದು.

ವೈರಲ್‌ ವಿಡಿಯೋ ಇಲ್ಲಿದೆ

ಇದನ್ನೂ ಓದಿ: ಬದುಕು ನಿತ್ಯ ನಿರಂತರ ಹೋರಾಟ; ಪುಟ್ಟ ಕಂದಮ್ಮನನ್ನು ಪಕ್ಕದಲ್ಲಿ ಕೂರಿಸಿಕೊಂಡು ಆಟೋ ಓಡಿಸುವ ಮಹಿಳೆ

ಈ ವಿಡಿಯೋ ಹದಿನಾಲ್ಕು ಸಾವಿರಕ್ಕೂ ಅಧಿಕ ವೀಕ್ಷಣೆಗಳನ್ನು ಪಡೆದುಕೊಂಡಿವೆ. ಒಬ್ಬ ಬಳಕೆದಾರ, ಇದು ನನ್ನ ಆಟೋ ಹಿಂದೆ ಈ ಲೈನ್ 10 ವರ್ಷ ಹಿಂದೆ ಇದ್ದಿತು ಎಂದು ಹೇಳಿದ್ದಾರೆ. ಇನ್ನೊಬ್ಬರು, ಅಣ್ಣ ನಂಬರ್ ಕೊಡು ಎಂದು ಕಾಲೆಳೆದಿದ್ದಾರೆ. ಮತ್ತೊಬ್ಬರು, ಅಣ್ಣನ ಬುದ್ಧಿವಂತಿಕೆಗೆ ನೀವು ಮೆಚ್ಚುಗೆ ನೀಡಿ ಎಂದಿದ್ದಾರೆ.

ಇನ್ನಷ್ಟು ವೈರಲ್ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

 

Source link

Exit mobile version