ನೆಲಮಂಗಲ, ಏಪ್ರಿಲ್ 9: ನೆಲಮಂಗಲದ ಅಡಕಮಾರನಹಳ್ಳಿಯಲ್ಲಿನ ಆಹಾರ ಸಂಗ್ರಹ ಗೋದಾಮಿನಲ್ಲಿ ಬುಧವಾರ ರಾತ್ರಿ ಭೀಕರ ಬೆಂಕಿ ಅವಘಡ ಸಂಭವಿಸಿದೆ. ಆಂಜನೇಯ ದೇಗುಲದ ಬಳಿ ಇರುವ ಗೋದಾಮಿನಲ್ಲಿ ಸಂಭವಿಸಿದ ಈ ದುರ್ಘಟನೆಯಲ್ಲಿ ಗೋದಾಮಿನಲ್ಲಿದ್ದ ಕೋಟ್ಯಂತರ ರೂಪಾಯಿ ಮೌಲ್ಯದ ಆಹಾರ ಪದಾರ್ಥಗಳು ಬೆಂಕಿಗೆ ಆಹುತಿಯಾಗಿ ಸಂಪೂರ್ಣ ಸುಟ್ಟು ಭಸ್ಮವಾಗಿವೆ. ಅವಘಡದ ಕುರಿತು ಮಾಹಿತಿ ಲಭ್ಯವಾಗುತ್ತಿದ್ದಂತೆಯೇ ನೆಲಮಂಗಲ ಅಗ್ನಿಶಾಮಕ ದಳದ ಸಿಬ್ಬಂದಿ ತಕ್ಷಣವೇ ಸ್ಥಳಕ್ಕೆ ದೌಡಾಯಿಸಿ ಬೆಂಕಿ ನಂದಿಸುವ ಕಾರ್ಯಾಚರಣೆಯನ್ನು ಕೈಗೊಂಡಿದ್ದಾರೆ. ರಾತ್ರಿ ಸುಮಾರು 10 ಗಂಟೆಯ ಸುಮಾರಿಗೆ ಬೆಂಕಿ ಕಾಣಿಸಿಕೊಂಡಿದೆ ಎಂದು ಪ್ರತ್ಯಕ್ಷದರ್ಶಿಗಳು ತಿಳಿಸಿದ್ದಾರೆ. ಶಾರ್ಟ್ ಸರ್ಕ್ಯೂಟ್ನಿಂದ ಅಗ್ನಿ ದುರಂತ ಸಂಭವಿಸಿರಬಹುದು ಎಂದು ಪ್ರಾಥಮಿಕ ವರದಿಗಳು ತಿಳಿಸಿವೆ.
ಈ ಗೋದಾಮು 18 ವರ್ಷಗಳ ಹಿಂದೆ 20 ಕೋಟಿ ರೂ. ವೆಚ್ಚದಲ್ಲಿ ನಿರ್ಮಿಸಲಾಗಿತ್ತು. ರಾತ್ರಿ ವೇಳೆ ಘಟನೆ ಸಂಭವಿಸಿದ್ದರಿಂದ ಯಾವುದೇ ಕಾರ್ಮಿಕರು ಸ್ಥಳದಲ್ಲಿ ಇರಲಿಲ್ಲ. ಹೀಗಾಗಿ ಯಾವುದೇ ಪ್ರಾಣಾಪಾಯ ಅಥವಾ ಗಾಯಗಳಾಗಿಲ್ಲ ಎಂದು ಗೋದಾಮಿನ ಮಾಲಿಕ ಪದ್ಮರಾಜ್ ತಿಳಿಸಿದ್ದಾರೆ.
ವರದಿ: ಮಂಜುನಾಥ್, ಟಿವಿ9 ನೆಲಮಂಗಲ
ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿಕ್ಲಿಕ್ ಮಾಡಿ
ಬೆಂಗಳೂರು, ಏ.9: ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ (KSEAB) ಇಂದು ದ್ವಿತೀಯ ಪಿಯುಸಿ ಪರೀಕ್ಷೆಯ ಫಲಿತಾಂಶವನ್ನು ಅಧಿಕೃತವಾಗಿ ಪ್ರಕಟಿಸಲಿದೆ. ರಾಜ್ಯದಾದ್ಯಂತ ಸುಮಾರು 7 ಲಕ್ಷಕ್ಕೂ ಹೆಚ್ಚು ವಿದ್ಯಾರ್ಥಿಗಳು ಬರೆದಿದ್ದ ಪರೀಕ್ಷೆಯ ಫಲಿತಾಂಶ ಮತ್ತು ಅಂಕಪಟ್ಟಿ ಡೌನ್ಲೋಡ್ ಮಾಡಲು ಸಮಯ ನಿಗದಿಯಾಗಿದೆ. ಇಂದು (ಏಪ್ರಿಲ್ 9, 2026) ಇಂದು ಮಧ್ಯಾಹ್ನ ಸಚಿವ ಮಧು ಬಂಗಾರಪ್ಪ ಅವರು ಸುದ್ದಿಗೋಷ್ಠಿ ನಡೆಸಿ ಅಧಿಕೃತವಾಗಿ ಫಲಿತಾಂಶ ಘೋಷಿಸಲಿದ್ದಾರೆ.
ಮಂಡಳಿಯ ಅಧಿಕೃತ ವೆಬ್ಸೈಟ್ನಲ್ಲಿ ಇಂದು ಸಂಜೆ 5:00 ಗಂಟೆಯ ನಂತರ ವಿದ್ಯಾರ್ಥಿಗಳು ತಮ್ಮ ‘ಮಾರ್ಕ್ಸ್ ಮೆಮೊ’ ಅಥವಾ ಅಂಕಪಟ್ಟಿಯನ್ನು ವೀಕ್ಷಿಸಬಹುದು ಮತ್ತು ಡೌನ್ಲೋಡ್ ಮಾಡಿಕೊಳ್ಳಬಹುದು. karresults.nic.in ಮತ್ತು kseab.karnataka.gov.in ನಲ್ಲಿ ನಿಮ್ಮ ಫಲಿತಾಂಶವನ್ನು ನೋಡಬಹುದು.
ಅಂಕಪಟ್ಟಿ ಡೌನ್ಲೋಡ್ ಮಾಡುವುದು ಹೇಗೆ?
ಮೊದಲಿಗೆ ಅಧಿಕೃತ ವೆಬ್ಸೈಟ್ karresults.nic.in ಗೆ ಭೇಟಿ ನೀಡಿ.
ಮುಖಪುಟದಲ್ಲಿ “2nd PUC Result 2026” ಲಿಂಕ್ ಮೇಲೆ ಕ್ಲಿಕ್ ಮಾಡಿ.
ನಿಮ್ಮ ನೋಂದಣಿ ಸಂಖ್ಯೆ (Registration Number) ಮತ್ತು ವಿಷಯದ ಗುಂಪನ್ನು (Stream – Science/Arts/Commerce) ನಮೂದಿಸಿ.
‘Submit’ ಬಟನ್ ಒತ್ತಿದಾಗ ನಿಮ್ಮ ಫಲಿತಾಂಶ ಪರದೆಯ ಮೇಲೆ ಕಾಣಿಸುತ್ತದೆ.
ನಿಮ್ಮ ಅಂಕಪಟ್ಟಿಯನ್ನು ಡೌನ್ಲೋಡ್ ಮಾಡಿ ಪ್ರಿಂಟ್ ತೆಗೆದುಕೊಳ್ಳಿ.
ಹಿಂದಿನ ವರ್ಷದ ಪಿಯುಸಿ ಫಲಿತಾಂಶಗಳನ್ನು ಏಪ್ರಿಲ್ 8, 2025 ರಂದು ಪ್ರಕಟಿಸಲಾಯಿತು , ಒಟ್ಟಾರೆ ಉತ್ತೀರ್ಣ ಶೇಕಡಾ 73.45%. ಸುಮಾರು 6.37 ಲಕ್ಷ ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದರು. 3.4 ಲಕ್ಷ ಮಹಿಳಾ ಅಭ್ಯರ್ಥಿಗಳಲ್ಲಿ ಹುಡುಗಿಯರು ಹುಡುಗರಿಗಿಂತ ಹೆಚ್ಚಿನ ಸಾಧನೆ ಮಾಡಿದ್ದಾರೆ, ಶೇ. 77.8 ರಷ್ಟು ಉತ್ತೀರ್ಣರಾಗಿದ್ದರೆ, 2.9 ಲಕ್ಷ ಪುರುಷ ವಿದ್ಯಾರ್ಥಿಗಳಲ್ಲಿ ಶೇ. 68.2 ರಷ್ಟು ಮಾತ್ರ ಉತ್ತೀರ್ಣರಾಗಿದ್ದಾರೆ.
ಇನ್ನು ಈ ವರ್ಷವೂ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ನಿರೀಕ್ಷಿತ ಫಲಿತಾಂಶ ಬಾರದ ವಿದ್ಯಾರ್ಥಿಗಳು ಧೃತಿಗೆಡಬೇಕಿಲ್ಲ. ಕರ್ನಾಟಕ ಸರ್ಕಾರವು ಜಾರಿಗೆ ತಂದಿರುವ ಹೊಸ ಮೂರು ಪರೀಕ್ಷೆಗಳ ವ್ಯವಸ್ಥೆಯಡಿ (Exam 1, 2, & 3) ನಿಮಗೆ ಅಂಕ ಸುಧಾರಿಸಿಕೊಳ್ಳಲು ಹಾಗೂ ಅನುತ್ತೀರ್ಣರಾದ ವಿಷಯಗಳನ್ನು ಪಾಸು ಮಾಡಲು ಉತ್ತಮ ಅವಕಾಶವಿದೆ. ಫಲಿತಾಂಶದಲ್ಲಿ ಕಡಿಮೆ ಅಂಕ ಬಂದಿದೆ ಎನಿಸಿದರೆ, ಅಂಕಗಳನ್ನು ಹೆಚ್ಚಿಸಿಕೊಳ್ಳಲು ಈ ಪರೀಕ್ಷೆ ಬರೆಯಬಹುದು. ಎರಡೂ ಪರೀಕ್ಷೆಗಳಲ್ಲಿ ಯಾವುದರಲ್ಲಿ ಹೆಚ್ಚು ಅಂಕ ಬರುತ್ತದೆಯೋ ಅದನ್ನು ಪರಿಗಣಿಸಲಾಗುತ್ತದೆ. ಒಂದು ವೇಳೆ ಪರೀಕ್ಷೆ-2 ರಲ್ಲೂ ಅನುತ್ತೀರ್ಣರಾದರೆ ಅಥವಾ ಅಂಕ ತೃಪ್ತಿ ನೀಡದಿದ್ದರೆ, ಜೂನ್ 2026 ರಲ್ಲಿ ನಡೆಯಲಿರುವ ಪರೀಕ್ಷೆ-3 (Exam 3) ಕ್ಕೆ ಹಾಜರಾಗಲು ಮತ್ತೊಂದು ಅವಕಾಶವಿರುತ್ತದೆ.
ದಾವಣಗೆರೆ, ಬಾಗಲಕೋಟೆ, ಏಪ್ರಿಲ್ 9: ಕರ್ನಾಟಕದ (Karnataka By Elections) ವಿಧಾನಸಭೆ ಕ್ಷೇತ್ರಗಳಾದ ದಾವಣಗೆರೆ ದಕ್ಷಿಣ ಮತ್ತು ಬಾಗಲಕೋಟೆ ವಿಧಾನಸಭಾ ಕ್ಷೇತ್ರಗಳಿಗೆ ಇಂದು ಉಪಚುನಾವಣೆ (Assembly ByPolls) ನಡೆಯುತ್ತಿದೆ. ಹಿರಿಯ ನಾಯಕರಾದ ಶಾಮನೂರು ಶಿವಶಂಕರಪ್ಪ ಮತ್ತು ಎಚ್.ವೈ. ಮೇಟಿ ಅವರ ನಿಧನದಿಂದ ತೆರವಾಗಿದ್ದ ಈ ಸ್ಥಾನಗಳಿಗೆ ಇಂದು ಮತದಾನ ಪ್ರಕ್ರಿಯೆ ನಡೆಯುತ್ತಿದ್ದು, ಮತದಾರರು ಯಾರ ಕೈ ಹಿಡಿಯಲಿದ್ದಾರೆ ಎಂಬುದು ಕುತೂಹಲ ಮೂಡಿಸಿದೆ. ಆಡಳಿತಾರೂಢ ಕಾಂಗ್ರೆಸ್ಗೆ ಎರಡೂ ಕ್ಷೇತ್ರಗಳು ಪ್ರತಿಷ್ಠೆಯ ಕಣವಾಗಿದ್ದು, ಅತ್ತ ಪ್ರತಿಪಕ್ಷ ಬಿಜೆಪಿ ಸಹ ಗೆಲುವಿಗೆ ಶತಾಯಗತಾಯ ಶ್ರಮಿಸುತ್ತಿದೆ.
ದಾವಣಗೆರೆ ದಕ್ಷಿಣ ಕ್ಷೇತ್ರದ ವಿವರ
ದಾವಣಗೆರೆ ದಕ್ಷಿಣ ಕ್ಷೇತ್ರದಲ್ಲಿ ಕಾಂಗ್ರೆಸ್ನಿಂದ ಸಮರ್ಥ್ ಶಾಮನೂರು ಮಲ್ಲಿಕಾರ್ಜುನ್ ಮತ್ತು ಬಿಜೆಪಿಯಿಂದ ಶ್ರೀನಿವಾಸ್ ಟಿ. ದಾಸಕರಿಯಪ್ಪ ಸೇರಿದಂತೆ ಒಟ್ಟು 14 ಅಭ್ಯರ್ಥಿಗಳು ಕಣದಲ್ಲಿದ್ದಾರೆ.
ಬಾಗಲಕೋಟೆ ಕ್ಷೇತ್ರದ ವಿವರ
ಕಾಂಗ್ರೆಸ್ನ ಉಮೇಶ್ ಮೇಟಿ ಮತ್ತು ಬಿಜೆಪಿಯ ವೀರಣ್ಣ ಚರಂತಿಮಠ ಸೇರಿದಂತೆ ಒಟ್ಟು 20 ಅಭ್ಯರ್ಥಿಗಳ ಅದೃಷ್ಟ ಪರೀಕ್ಷೆ ನಡೆಯುತ್ತಿದೆ.
ಸಿಬ್ಬಂದಿ ಮತ್ತು ಭದ್ರತೆ
ಚುನಾವಣಾ ಕರ್ತವ್ಯಕ್ಕಾಗಿ 1,430ಕ್ಕೂ ಹೆಚ್ಚು ಸಿಬ್ಬಂದಿಯನ್ನು ನಿಯೋಜಿಸಲಾಗಿದೆ. ಹೃದಯಾಘಾತ ಮತ್ತು ಬಿಪಿ ಸಮಸ್ಯೆ ಇರುವ ಸಿಬ್ಬಂದಿಗಾಗಿ ಪ್ರತಿ ಕೇಂದ್ರದಲ್ಲೂ ಹೆಲ್ತ್ ಚೆಕಪ್ ವ್ಯವಸ್ಥೆ ಮಾಡಲಾಗಿದೆ ಎರಡೂ ಕ್ಷೇತ್ರಗಳಾದ್ಯಂತ ವ್ಯಾಪಕ ಬಂದೋಬಸ್ತ್ ನಡುವೆ ಮತದಾನಕ್ಕೆ ವ್ಯವಸ್ಥೆ ಮಾಡಲಾಗಿದೆ.
ಮತದಾನದ ಸಮಯ ಮತ್ತು ಸೌಲಭ್ಯ
ಬೆಳಿಗ್ಗೆ 7 ಗಂಟೆಯಿಂದ ಸಂಜೆ 6 ಗಂಟೆಯವರೆಗೆ ಮತದಾನಕ್ಕೆ ಅವಕಾಶ ಕಲ್ಪಿಸಲಾಗಿದೆ. ಹಿರಿಯ ನಾಗರಿಕರು ಮತ್ತು ಅಂಗವಿಕಲರನ್ನು ಮತಗಟ್ಟೆಗೆ ಕರೆತರಲು ಜಿಲ್ಲಾಡಳಿತವು ಉಚಿತ ವಾಹನ ಸೌಲಭ್ಯವನ್ನು ಒದಗಿಸಿದೆ. ಸುಡು ಬಿಸಿಲಿನ ಹಿನ್ನೆಲೆಯಲ್ಲಿ ಮತಗಟ್ಟೆಗಳಲ್ಲಿ ಕುಡಿಯುವ ನೀರು ಮತ್ತು ನೆರಳಿನ ವ್ಯವಸ್ಥೆ ಮಾಡಲಾಗಿದೆ. ಇಂದು ದಾಖಲಾಗುವ ಮತಗಳ ಎಣಿಕೆಯು ಮೇ 4ರಂದು ನಡೆಯಲಿದ್ದು, ಅಂದು ಫಲಿತಾಂಶ ಪ್ರಕಟವಾಗಲಿದೆ.
ನಡೆದಿತ್ತು ಭರ್ಜರಿ ಪ್ರಚಾರ
ಈ ಉಪ ಚುನಾವಣೆಯನ್ನು ಪ್ರತಿಷ್ಠೆಯಾಗಿ ತೆಗೆದುಕೊಂಡಿರುವ ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿಕೆ ಶಿವಕುಮಾರ್ ಹಾಗೂ ಸಂಪುಟ ಸಚಿವರು ಬಿರುಸಿನ ಪ್ರಚಾರ ನಡೆಸಿದ್ದಾರೆ. ಬಾಗಲಕೋಟೆಯಲ್ಲಂತೂ ಸಿದ್ದರಾಮಯ್ಯನವರೇ ಖುದ್ದು ನಾಲ್ಕೈದು ದಿನ ಪ್ರಚಾರ ನಡೆಸಿದ್ದಾರೆ.
ಅತ್ತ ಪ್ರತಿಪಕ್ಷ ಬಿಜೆಪಿಯಿಂದ ರಾಜ್ಯ ಘಟಕದ ಅಧ್ಯಕ್ಷ ಬಿ.ವೈ. ವಿಜಯೇಂದ್ರ ಮತ್ತು ವಿರೋಧ ಪಕ್ಷದ ನಾಯಕ ಆರ್. ಅಶೋಕ ಅವರು ಪ್ರಚಾರದ ಮುಂಚೂಣಿಯಲ್ಲಿದ್ದರು. ಅದರಲ್ಲೂ ಬಾಗಲಕೋಟೆಯಲ್ಲಿ ವೀರಣ್ಣ ಚರಂತಿಮಠ ಪರವಾಗಿ ಬಿ.ವೈ. ವಿಜಯೇಂದ್ರ ಅವರು ಬಿರುಸಿನ ರೋಡ್ ಶೋ ಮತ್ತು ಸಾರ್ವಜನಿಕ ಸಭೆಗಳನ್ನು ನಡೆಸುವ ಮೂಲಕ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ನೇರ ಸವಾಲು ಹಾಕಿದರು. ಇನ್ನು ದಾವಣಗೆರೆಯಲ್ಲಿ ಶ್ರೀನಿವಾಸ್ ಟಿ. ದಾಸಕರಿಯಪ್ಪ ಪರವಾಗಿ ಸ್ಥಳೀಯ ನಾಯಕರು ಮನೆ ಮನೆಗೆ ತೆರಳಿ ಪ್ರಚಾರ ನಡೆಸಿದರು. ವಿಶೇಷವೆಂದರೆ, ಬಿಜೆಪಿಯಿಂದ ಉಚ್ಚಾಟನೆಗೊಂಡಿದ್ದರೂ ಸಹ, ಬಾಗಲಕೋಟೆಯಲ್ಲಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರು ಪಕ್ಷದ ಅಭ್ಯರ್ಥಿ ಪರವಾಗಿ ಅಬ್ಬರದ ಪ್ರಚಾರ ನಡೆಸಿ ಗಮನ ಸೆಳೆದಿದ್ದಾರೆ.
ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿಕ್ಲಿಕ್ ಮಾಡಿ
ದೆಹಲಿ, ಏ.9: ದೇಶದ ಗಮನ ಸೆಳೆದಿರುವ ಕೇರಳ, ಅಸ್ಸಾಂ ಮತ್ತು ಕೇಂದ್ರಾಡಳಿತ ಪ್ರದೇಶವಾದ ಪುದುಚೇರಿಯಲ್ಲಿ ಇಂದು ವಿಧಾನಸಭಾ ಚುನಾವಣೆಯ (Assembly Elections 2026 Voting) ಮತದಾನ ಪ್ರಕ್ರಿಯೆ ಬಿರುಸಿನಿಂದ ಸಾಗಿದೆ. ಈ ಮೂರೂ ರಾಜ್ಯಗಳಲ್ಲಿ ಸರ್ಕಾರ ರಚನೆಗಾಗಿ ರಾಜಕೀಯ ಪಕ್ಷಗಳ ನಡುವೆ ತೀವ್ರ ಪೈಪೋಟಿ ಏರ್ಪಟ್ಟಿದೆ.
ಕೇರಳ: ಕೇರಳದ 140 ವಿಧಾನಸಭಾ ಕ್ಷೇತ್ರಗಳಿಗೆ ಒಂದೇ ಹಂತದಲ್ಲಿ ಮತದಾನ ನಡೆಯುತ್ತಿದೆ. ಆಡಳಿತಾರೂಢ ಎಲ್ಡಿಎಫ್ (LDF) ಮತ್ತು ಪ್ರತಿಪಕ್ಷ ಯುಡಿಎಫ್ (UDF) ನಡುವೆ ನೇರ ಹಣಾಹಣಿ ಏರ್ಪಟ್ಟಿದ್ದರೆ, ಬಿಜೆಪಿ ಕೂಡ ಪ್ರಬಲ ಪೈಪೋಟಿ ನೀಡುತ್ತಿದೆ.
ಅಸ್ಸಾಂ: ಅಸ್ಸಾಂನಲ್ಲಿ ಇಂದು ಮತದಾನ ನಡೆಯುತ್ತಿದೆ. ಇಲ್ಲಿ ಬಿಜೆಪಿ ನೇತೃತ್ವದ ಮೈತ್ರಿಕೂಟ ಅಧಿಕಾರ ಉಳಿಸಿಕೊಳ್ಳಲು ಪ್ರಯತ್ನಿಸುತ್ತಿದ್ದರೆ, ಕಾಂಗ್ರೆಸ್ ಮೈತ್ರಿಕೂಟ ಅಧಿಕಾರ ಹಿಡಿಯಲು ಕಸರತ್ತು ನಡೆಸುತ್ತಿದೆ.
ಪುದುಚೇರಿ: 30 ವಿಧಾನಸಭಾ ಕ್ಷೇತ್ರಗಳನ್ನು ಹೊಂದಿರುವ ಪುದುಚೇರಿಯಲ್ಲಿ ಇಂದು ಒಂದೇ ಹಂತದಲ್ಲಿ ಮತದಾನ ಪ್ರಕ್ರಿಯೆ ಆರಂಭವಾಗಿದೆ. ಎನ್ಆರ್ಸಿ (NRC) ಮತ್ತು ಬಿಜೆಪಿ ಮೈತ್ರಿಕೂಟ ಹಾಗೂ ಕಾಂಗ್ರೆಸ್ ನೇತೃತ್ವದ ಮೈತ್ರಿಕೂಟದ ನಡುವೆ ಇಲ್ಲಿ ಸಮರ ಏರ್ಪಟ್ಟಿದೆ.
ಬೆಳಗ್ಗೆ 7 ಗಂಟೆಯಿಂದಲೇ ಮತದಾನ ಆರಂಭವಾಗಲಿದೆ, ಜನರು ಉತ್ಸಾಹದಿಂದ ಮತಗಟ್ಟೆಗಳತ್ತ ಧಾವಿಸುತ್ತಿದ್ದಾರೆ. ಬಿಸಿಲಿನ ತಾಪ ಹೆಚ್ಚಾಗುವ ಮುನ್ನವೇ ಮತ ಚಲಾಯಿಸಲು ಹಿರಿಯ ನಾಗರಿಕರು ಕೂಡ ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸುತ್ತಿದ್ದಾರೆ. ಯಾವುದೇ ಅಹಿತಕರ ಘಟನೆ ನಡೆಯದಂತೆ ಬಿಗಿ ಪೊಲೀಸ್ ಬಂದೋಬಸ್ತ್ ಏರ್ಪಡಿಸಲಾಗಿದೆ.
ವಿದ್ಯಾರ್ಥಿಗಳು ಪರಿಶ್ರಮದ ಓದಿಗೆ ಫಲಸಿಗಬಹುದು. ಸಂಗಾತಿಯ ಪರೀಕ್ಷೆ ನಡೆಯುವುದು. ಉತ್ಸಾಹಕ್ಕೆ ತೊಂದರೆ ಬರುವ ಕಡೆ ನೀವು ಇರಲಾರಿರಿ. ಕಾರ್ಯಸ್ಥಾನದಲ್ಲಿ ಗೊಂದಲದ, ಹತಾಶೆಯ ವಾತಾವರಣ ಇರಬಹುದು. ಇಂದು ನಿಮ್ಮ ಮಾತಿನಲ್ಲಿ ಕಠೋರತೆ ಇರಲಿದ್ದು, ಅದನ್ನು ಕಡಿಮೆ ಮಾಡಿಕೊಳ್ಳಬೇಕು. ಕಾರ್ಯಕ್ಷೇತ್ರದಲ್ಲಿ ನಿಮ್ಮ ಯೋಗ್ಯತೆಗೆ ತಕ್ಕಂತೆ ಕೆಲಸ ಸಿಗುತ್ತದೆ. ಹಿರಿಯರ ಸೇವೆಯಲ್ಲಿ ನೀವು ಇರುವಿರಿ. ನಕಾರಾತ್ಮಕ ಆಲೋಚನೆಗಳನ್ನು ತಲೆಯಿಂದ ತೆಗೆಯಿರಿ.
ವೃಷಭ ರಾಶಿ:
ನಿಮ್ಮ ಮೇಲೆ ಸಹಾನುಭೂತಿಯು ಉಂಟಾಗುವ ಸಾಧ್ಯತೆ ಇದೆ. ನಿಮ್ಮನ್ನು ನೀವೇ ಕಾಪಾಡಿಕೊಳ್ಳಿ. ಹಲವು ದಿನಗಳಿಂದ ಸೋಲಿನ ವಾರ್ತೆ ಕೇಳಿದ್ದ ನಿಮಗೆ ಗೆಲವಿನ ಸೂಚನೆ ಸಿಗಲಿದ್ದು ಉತ್ಸಾಹ ಬರಲಿದೆ. ನೀವು ಅಪರಿಚಿತರ ಸಂಪರ್ಕವನ್ನು ಹೆಚ್ಚು ಮಾಡುವಿರಿ. ಹೂಡಿಕೆಯಲ್ಲಿ ದೀರ್ಘಾವಧಿಯ ಯೋಜನೆಗಳು ಮಾಡಿಕೊಳ್ಳಿ. ಪ್ರಭಾವಿಗಳ ಭೇಟಿಯಿಂದ ಸಂತೋಷವಾಗಲಿದೆ. ಬೇರೆ ಸ್ಥಳದಲ್ಲಿ ನಿಮ್ಮ ವಾಸವು ಇರಬಹುದು. ಯಾರದೋ ಸಂತೋಷಕ್ಕಾಗಿ ನೀವು ದುಡಿಯಬೇಕಾಗಬಹುದು.
ಮಿಥುನ ರಾಶಿ:
ಇಂದು ನಿಮ್ಮ ಸಾಮಾರ್ಥ್ಯವನ್ನು ವ್ಯಕ್ತಪಡಿಸಲು ಸಕಾಲ. ಎಲ್ಲವುದೂ ಅಂದುಕೊಂಡಂತೆ ಆಗದು. ಸಹೋದರರಿಂದ ಸಲಹೆ ಪಡೆದು ಮುನ್ನಡೆಯಿರಿ. ಗಾಳಿ ಸುದ್ದಿಗಳು ನಿಮ್ಮ ಮನಸ್ಸಿಗೆ ತೊಂದರೆ ಕೊಡುವುದು. ಭೂಮಿಯ ವ್ಯವಹಾರದಲ್ಲಿ ನಿಮಗೆ ಅನುಕೂಲ ಕಡಿಮೆ ಇರುವುದು. ನಿಮ್ಮ ಜವಾಬ್ದಾರಿಯನ್ನು ಇತರರು ಮಾಡಬೇಕಾಗಬಹುದು. ನಿಮಗೆ ಬೇಕಾದ ಆರ್ಥಿಕಬೆಂಬಲವನ್ನು ಯಾರೂ ಸೂಚಿಸದೇ ಇರಬಹುದು. ಮಹಿಳೆಯರು ಉನ್ನತ ಅಧಿಕಾರವನ್ನು ಪಡೆದು ಅಹಂಕಾರ ಮಡುವುದು ಬೇಡ.
ಕರ್ಕಾಟಕ ರಾಶಿ:
ನಿಮ್ಮ ಸಾಹಿತ್ಯದ ಅಭಿರುಚಿ ಇಂದು ಪ್ರಸಿದ್ಧಿಗೆ ಬರುವುದು. ಮಕ್ಕಳಿಗೆ ಯೋಗ್ಯವಾದ ಮಾರ್ಗದರ್ಶನವನ್ನು ಮಾಡಿ. ನಿಮ್ಮ ಇಷ್ಟದ ವಿಷಯಗಳಿಗಾಗಿ ಸಾಕಷ್ಟು ಹಣವನ್ನು ಖರ್ಚು ಮಾಡುತ್ತೀರಿ. ನಿಮ್ಮವರ ವಿಶ್ವಾಸವನ್ನು ನೀವು ಸುಲಭವಾಗಿ ಗೆಲ್ಲಲು ಸಾಧ್ಯವಾಗುತ್ತದೆ. ಮನೆಯ ಸ್ಥಳವನ್ನು ಬದಲಾಯಿಸುವ ಅನಿವಾರ್ಯತೆ ಬಂದೀತು. ಅನ್ಯಾನ್ಯ ಮಾರ್ಗಗಳಿಂದ ಹಣವು ಬರಬಹುದು. ಕಳೆದಕೊಂಡ ವಸ್ತುವಿಗೆ ತೀವ್ರ ಹುಡುಕಾಟ ಇರುವುದು.
ಸಿಂಹ ರಾಶಿ:
ಮಾತು ಕಡಿಮೆ, ಕಾರ್ಯ ಹೆಚ್ಚು ಮಾಡುವತ್ತ ಗಮನ ಹರಿಸುವುದು ಉತ್ತಮ. ಪ್ರಭಾವೀ ವ್ಯಕ್ತಿಗಳ ಭೇಟಿ ನಿಮ್ಮ ಮನೋಬಲವನ್ನು ಹೆಚ್ಚಿಸುತ್ತದೆ. ಕುಟುಂಬದೊಂದಿಗೆ ಸಮಸ್ಯೆಗಳನ್ನು ಹಂಚಿಕೊಳ್ಳಿ. ನಿಮ್ಮ ಗೆಳತಿಯ ಜೊತೆ ಅಸಭ್ಯವಾಗಿ ನಡೆದುಕೊಳ್ಳಬೇಡಿ. ಕೈಗೆ ಬಂದ ಹಣ ಆಸ್ಪತ್ರೆಯ ಪಾಲಾಗಬಹುದು. ನೀವು ಇಂದು ಆರಂಭಿಸುವ ಕೆಲಸವು ಹೆಚ್ಚು ಸಮಯವನ್ನು ಪಡೆಯಬಹುದು. ಅಕಾರಣವಾಗಿ ಸಂತೋಷಪಡುವಿರಿ. ಈ ದಿನದ ಆರಂಭವು ಬಹಳ ಉತ್ಸಾಹದಿಂದ ಇರುವುದು.
ಕನ್ಯಾ ರಾಶಿ:
ನಿಮ್ಮ ನೋವು ಕುಟುಂಬದ ಅಸಮಾಧಾನಕ್ಕೆ ಕಾರಣವಾಗಬಹುದು. ಮಕ್ಕಳ ಆರೋಗ್ಯದ ವಿಷಯದಲ್ಲಿ ಗಮನವಿರಲಿ. ಪ್ರಣಯದ ಸಂಬಂಧಿಸಿದಂತೆ ಹೆಚ್ಚು ಬೇಡಿಕೆಗಳು ಬರಬಹುದು. ಹಳೆಯ ನೆನಪುಗಳು ನಿಮ್ಮನ್ನು ಘಾಸಿಮಾಡಬಹುದು. ನಿಮ್ಮ ಸಂಬಂಧಿಕರಿಂದ ಕೆಲವು ಉತ್ತಮ ಸಲಹೆಯನ್ನು ಪಡೆಯಬಹುದು. ಕಾನೂನು ಪ್ರಕರಣದಲ್ಲಿ ನೀವು ಗೆಲ್ಲುವ ಎಲ್ಲ ಸಾಧ್ಯತೆಗಳಿವೆ. ನಿಮ್ಮ ಉದ್ಯೋಗವನ್ನು ಅಪಹಾಸ್ಯ ಮಾಡುವರು.
ತುಲಾ ರಾಶಿ:
ನೀವು ನಿಮ್ಮ ಕೆಲಸದ ಮೇಲೆ ಮಾತ್ರ ಗಮನಹರಿಸಿದರೆ ಉತ್ತಮ. ಏನಾದರೂ ಬಾಲಿಶವಾದದ್ದನ್ನು ಮಾಡುವ ಮೊದಲು ನಿಮ್ಮ ವರ್ತನೆಯ ಪರಿಣಾಮದ ಬಗ್ಗೆ ಆಲೋಚಿಸಿ. ರಾತ್ರಿ ವೇಳೆಪ್ರಯಾಣ ಬೇಡ. ದಾಂಪತ್ಯಜೀವನ ಅಪರೂಪದ ಕ್ಷಣಗಳ ಇಂದಿರಲಿವೆ. ನೀವು ಹೆಚ್ಚು ಭೌತಿಕ ವಿಷಯಗಳ ಮೇಲೆ ಮನಸ್ಸನ್ನು ಕೇಂದ್ರೀಕರಿಸುವಿರಿ. ಅನಿರೀಕ್ಷಿತ ದೂರ ಪ್ರಯಾಣವನ್ನು ಮಾಡಲಿದ್ದೀರಿ. ಇಂದು ಹಣದ ವಿಚಾರದಲ್ಲಿ ನಿಮಗೆ ಹಿನ್ನಡೆಯಾಗುವುದು. ಇನ್ನೊಬ್ಬರ ಬಗ್ಗೆ ಆಡಿಕೊಳ್ಳುವುದು ಸರಿ ಎನಿಸದು.
ವೃಶ್ಚಿಕ ರಾಶಿ:
ಅವಿವಾಹಿತರಿಗೆ ಕಂಕಣ ಭಾಗ್ಯ ಕೂಡಿಬರಲಿದೆ. ಸ್ಪರ್ಧಾತ್ಮಕ ಕ್ರೀಡೆಗಳಲ್ಲಿ ಜಯಗಳಿಸುವ ಸಾಧ್ಯತೆ ಇದೆ. ಪ್ರೇಯಸಿ ಜೊತೆ ಸುತ್ತಾಟ ಮಾಡುವಿರಿ. ಸಂಸ್ಥೆಯ ಪ್ರಮುಖರಿಗೆ ಒಳಗನವರಿಂದ ಆತಂಕ. ವ್ಯಾಪಾರಿಗಳಿಗೆ ಹಳೆಯ ಹೂಡಿಕೆಯ ಕಾರಣದಿಂದಾಗಿ ಇಂದು ನಷ್ಟವಾಗುವ ಸಾಧ್ಯತೆ ಇದೆ. ನೀವು ಯಾರಿಗಾದರೂ ಹಣವನ್ನು ಸಾಲವಾಗಿ ನೀಡಿದ್ದರೆ, ಅದನ್ನು ಮರಳಿ ಪಡೆಯುವ ಸಾಧ್ಯತೆ ತುಂಬಾ ಕಡಿಮೆ. ಯಾರದೋ ಮಾತಿನಿಂದ ನಿಮ್ಮ ನೆಮ್ಮದಿಯನ್ನು ಕಳೆದುಕೊಳ್ಳುವ ಅವಶ್ಯಕತೆ ಇಲ್ಲ.
ಧನು ರಾಶಿ:
ನೀವು ವ್ಯಾಪಾರದ ಕಾರಣಕ್ಕೆ ಕೈಗೊಂಡ ಪ್ರಯಾಣವು ದೀರ್ಘಾವಧಿಯಲ್ಲಿ ಪ್ರಯೋಜನಕಾರಿ ಎಂದು ಸಾಬೀತಾಗುತ್ತದೆ. ಅನಿರೀಕ್ಷಿತ ರೂಪದಲ್ಲಿ ವೈವಾಹಿಕ ಸಂಬಂಧಗಳು ಕೂಡಿ ಬರಲಿದೆ. ಸಣ್ಣ ನೌಕರರಿಗೆ ಜೀವನದ ಮೇಲೆ ಉತ್ಸಾಹ ಆರಂಭವಾಗಲಿದೆ. ಕೂಡಲೇ ಬೇಕಾದ ಚಿಕಿತ್ಸೆಗೆ ಗಮನಕೊಡಿ. ರಾಜಕೀಯದಲ್ಲಿ ನಿಮಗೆ ಜನಬೆಂಬಲ ಹೆಚ್ಚಾಗಬಹುದು. ನೀವು ಧಾರ್ಮಿಕ ಚಟುವಟಿಕೆಗಳಲ್ಲಿ ಶ್ರದ್ಧೆ ಹೆಚ್ಚಿರುವುದು. ಇನ್ನೊಬ್ಬರನ್ನು ಹಿಂದಿಕ್ಕಲು ಪ್ರಯತ್ನ ಪೂರ್ವಕವಾಗಿ ಕಾರ್ಯ ಮಾಡುವಿರಿ.
ಮಕರ ರಾಶಿ:
ಸುತ್ತಲೂ ನಿಮ್ಮ ಪ್ರಿಯತಮೆಯ ಪ್ರೀತಿಯನ್ನು ಅನುಭವಿಸುತ್ತೀರಿ. ಕುಟುಂಬದಲ್ಲಿ ಕೆಲವು ಸಮಸ್ಯೆಗಳಿರುತ್ತವೆ. ಇಂದು ಪುಣ್ಯಕಾರ್ಯದಿಂದ ಪ್ರಾಣಾಪಾಯ ತಪ್ಪಿರುವುದು. ಸಹೋದ್ಯೋಗಿಗಳ ಬಗ್ಗೆ ಪೂರ್ವಾಗ್ರಹವಿರುವುದು. ನೀವು ಸಂಬಂಧಿಕರ ಜೊತೆ ಸ್ವಲ್ಪ ಸಮಯ ಒಟ್ಟಿಗೆ ಕುಳಿತು ಕೌಟುಂಬಿಕ ಸಮಸ್ಯೆಯನ್ನು ಬಗೆಹರಿಸಿಕೊಳ್ಳುವಿರಿ. ಕ್ರಿಯಾಶೀಲತೆಯು ನಿಮ್ಮ ಅಧಿಕಾರಕ್ಕೆ ಪೂರಕವಾಗಿರುವುದು. ನಿಮ್ಮ ಸಹನೆಯನ್ನು ಪರೀಕ್ಷಿಸುವ ಸಂದರ್ಭಗಳು ಬರಬಹುದು.
ಕುಂಭ ರಾಶಿ:
ಸಾಮಾಜಿಕ ಕಾರ್ಯಗಳಿಗೆ ಹಾಜರಾಗಲು ಅವಕಾಶಗಳಿರಬಹುದು ಹಾಗೂ ಇದು ನಿಮ್ಮನ್ನು ಪ್ರಭಾವಿ ವ್ಯಕ್ತಿಗಳ ಜೊತೆ ನಿಕಟ ಸಂಪರ್ಕ ಹೊಂದುವಂತೆ ಮಾಡಬಹುದು. ಮನೆಯವರು ನಿಮ್ಮ ವರ್ತನೆಗೆ ಆಕ್ರೋಶ ವ್ಯಕ್ತಪಡಿಸಬಹುದು. ಇಂದು ನಿಮಗಾಗಿ ಯಾರಾದರೂ ಸಹಕಾರವನ್ನು ನೀಡಲು ಬರಬಹುದು. ಹೆಚ್ಚುತ್ತಿರುವ ವೆಚ್ಚಗಳನ್ನು ಕಡಿವಾಣ ಹಾಕಿಕೊಳ್ಳಿ. ಉನ್ನತ ಸ್ಥಾನಕ್ಕೆ ಹೋಗುವ ಆಯ್ಕೆಯ ಪಟ್ಟಿಯಲ್ಲಿ ನೀವಿರುವಿರಿ.
ಮೀನ ರಾಶಿ :
ನೀವು ನಿಮ್ಮ ಕೆಲಸದ ಮೇಲೆ ಮಾತ್ರ ಗಮನಹರಿಸಿದರೆ ಉತ್ತಮ. ಇತರರಿಗೆ ಒಳ್ಳೆಯದನ್ನು ಮಾಡುವ ಕಾರ್ಯಕ್ಕೆ ಪ್ರತಿಫಲವಿದೆ. ರಾಜಕೀಯ ನಾಯಕರಿಗೆ ಅನಿರೀಕ್ಷಿತ ಬೆಂಬಲ. ಕಾರ್ಯಕ್ಕೆ ಮತ್ತಷ್ಟು ಉತ್ಸಾಹ. ನೀವು ಒಳ್ಳೆಯ ಅಭಿವೃದ್ಧಿ ಸಾಧಿಸುತ್ತಿದ್ದ ಹಾಗೆ ಪ್ರೇಮ ಜೀವನ ಒಳ್ಳೆಯ ತಿರುವು ತೆಗೆದುಕೊಳ್ಳುತ್ತದೆ. ನೀವು ನಿರಾಸೆ ಅನುಭವಿಸುತ್ತೀರಿ. ನಿಮ್ಮ ಆರ್ಥಿಕ ಪರಿಸ್ಥಿತಿಯು ಮೊದಲಿಗಿಂತ ಉತ್ತಮವಾಗಿದ್ದು, ಹೂಡಿಕೆಯ ಕಡೆ ಗಮನವಿರುವುದು.
ಇಂದಿನ ಪಂಚಾಂಗ:
ಶಾಲಿವಾಹನ ಶಕೆ ೧೯೪೯ರ ಪರಾಭವ ಸಂವತ್ಸರದ ಉತ್ತರಾಯಣ, ಋತು : ವಸಂತ, ಚಾಂದ್ರಮಾಸ : ಚೈತ್ರ, ಸೌರ ಮಾಸ : ಮೀನ, ಮಹಾನಕ್ಷತ್ರ : ರೇವತೀ, ವಾರ : ಗುರು, ಪಕ್ಷ : ಕೃಷ್ಣ, ತಿಥಿ : ಅಷ್ಟಮೀ, ನಿತ್ಯನಕ್ಷತ್ರ : ಪೂರ್ವಾಷಾಢಾ, ಯೋಗ : ವರಿಯಾನ್, ಕರಣ : ತೈತಿಲ, ಸೂರ್ಯೋದಯ – 06 – 16 am, ಸೂರ್ಯಾಸ್ತ – 06 – 36 pm, ಇಂದಿನ ಶುಭಾಶುಭ ಕಾಲ : ರಾಹು ಕಾಲ 13:59 – 15:31, ಯಮಗಂಡ ಕಾಲ 06:16 – 07:49, ಗುಳಿಕ ಕಾಲ 19:21 – 10:54
ದೆಹಲಿಯ ಅರುಣ್ ಜೇಟ್ಲಿ ಮೈದಾನದಲ್ಲಿ ನಡೆದ ಐಪಿಎಲ್ 2026 ರ 14ನೇ ಪಂದ್ಯದಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ಹಾಗೂ ಗುಜರಾತ್ ಟೈಟಾನ್ಸ್ ತಂಡಗಳು ಮುಖಾಮುಖಿಯಾಗಿದ್ದವು. ಈ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್ ಮಾಡಿದ ಗುಜರಾತ್ 211 ರನ್ ಕಲೆಹಾಕಿತು. ಈ ಗುರಿ ಬೆನ್ನಟ್ಟಿದ ಡೆಲ್ಲಿ ತಂಡ ಗೆಲುವಿಗಾಗಿ ಕೊನೆಯವರೆಗೂ ಹೋರಾಟ ನೀಡಿತ್ತಾದರೂ ಅದು ಸಾಧ್ಯವಾಗಲಿಲ್ಲ. ಡೆಲ್ಲಿ ಪರ ರಾಹುಲ್ 92 ರನ್ಗಳ ಇನ್ನಿಂಗ್ಸ್ ಹಾಗೂ ಕೊನೆಯಲ್ಲಿ ಡೇವಿಡ್ ಮಿಲ್ಲರ್ 41 ರನ್ಗಳ ಇನ್ನಿಂಗ್ಸ್ ಆಡಿದರಾದರೂ ತಂಡವನ್ನು ಗೆಲುವಿನ ದಡ ಮುಟ್ಟಿಸುವಲ್ಲಿ ಎಡವಿದರು. ಇದು ಈ ಆವೃತ್ತಿಯಲ್ಲಿ ಡೆಲ್ಲಿ ತಂಡದ ಮೊದಲ ಸೋಲಾದರೆ, ಇತ್ತ ಗುಜರಾತ್ ತಂಡ ಈ ಸೀಸನ್ನಲ್ಲಿ ತನ್ನ ಗೆಲುವಿನ ಖಾತೆ ತೆರೆದಿದೆ.
21 ರನ್ ನೀಡಿದ ಸಿರಾಜ್
ಈ ಪಂದ್ಯದ 18ನೇ ಓವರ್ವರೆಗೂ ಗುಜರಾತ್ ಪಂದ್ಯದ ಮೇಲೆ ಹಿಡಿತ ಸಾಧಿಸಿತ್ತು. ಡೆಲ್ಲಿ ಗೆಲುವಿಗೆ 12 ಎಸೆತಗಳಲ್ಲಿ 35 ರನ್ ಬೇಕಿತ್ತು. ಈ ವೇಳೆ 19ನೇ ಓವರ್ ಬೌಲ್ ಮಾಡಿದ ಸಿರಾಜ್ ಬರೋಬ್ಬರಿ 21 ರನ್ ಬಿಟ್ಟುಕೊಟ್ಟರು. ಈ ಓವರ್ನಲ್ಲಿ ಮಿಲ್ಲರ್ 2 ಸಿಕ್ಸರ್ ಹಾಗೂ 1 ಬೌಂಡರಿ ಬಾರಿಸಿದರೆ, ವಿಪ್ರಾಜ್ 1 ಬೌಂಡರಿ ಬಾರಿಸಿದರು. ಹೀಗಾಗಿ ಕೊನೆಯ ಓವರ್ನಲ್ಲಿ ಡೆಲ್ಲಿ ಗೆಲುವಿಗೆ 14 ರನ್ ಬೇಕಿತ್ತು.
20ನೇ ಓವರ್ ರೋಚಕತೆ
20ನೇ ಓವರ್ ಎಸೆದ ಪ್ರಸಿದ್ಧ್ ಕೃಷ್ಣ ಅವರ ಮೊದಲ ಎಸೆತವನ್ನು ವಿಪ್ರಾಜ್ ಬೌಂಡರಿಗಟ್ಟಿದರು. ಆದರೆ ಮುಂದಿನ ಎಸೆತದಲ್ಲಿಯೇ ವಿಪ್ರಜ್ ನಿಗಮ್ ಔಟಾದರು. ನಂತರ ಬಂದ ಕುಲ್ದೀಪ್ ಯಾದವ್ ಮೊದಲ ಎಸೆತದಲ್ಲಿ ಸಿಂಗಲ್ ತೆಗೆದುಕೊಂಡರು. ಸ್ಟ್ರೈಕ್ಗೆ ಬಂದ ಮಿಲ್ಲರ್ ನಾಲ್ಕನೇ ಎಸೆತದಲ್ಲಿ ಸಿಕ್ಸರ್ ಬಾರಿಸಿದರು. ಹೀಗಾಗಿ ದೆಹಲಿ ಗೆಲುವಿಗೆ ಎರಡು ರನ್ಗಳ ಅಗತ್ಯವಿತ್ತು. ಐದನೇ ಎಸೆತದಲ್ಲಿ ಮಿಲ್ಲರ್ ಬಿಗ್ ಶಾಟ್ ಹೊಡೆಯಲು ಯತ್ನಿಸಿದರು. ಆದರೆ ಅದರಲ್ಲಿ ಯಶಸ್ವಿಯಾಗಲಿಲ್ಲ. ಆದರೆ ಇಲ್ಲಿ ಸಿಂಗಲ್ ತೆಗೆದುಕೊಳ್ಳುವ ಅವಕಾಶವಿತ್ತು, ಆದರೆ ಮಿಲ್ಲರ್ ಸಿಂಗಲ್ ನಿರಾಕರಿಸಿದರು. ಒಂದು ವೇಳೆ ಮಿಲ್ಲರ್ ಸಿಂಗಲ್ ತೆಗೆದುಕೊಂಡಿದ್ದರೆ, ಪಂದ್ಯ ಟೈ ಆಗುತ್ತಿತ್ತು.
ಇದರಿಂದ ಫಲಿತಾಂಶ ನಿರ್ಣಹಿಸಲು ಸೂಪರ್ ಓವರ್ ಆಡಬೇಕಿತ್ತು. ಆದರೆ ಮಿಲ್ಲರ್ ಸಿಂಗಲ್ ನಿರಾಕರಿಸಿದ್ದು, ಡೆಲ್ಲಿ ಸೋಲಿಗೆ ಪ್ರಮುಖ ಕಾರಣವಾಯಿತು. ಉಳಿದಂತೆ ಆರನೇ ಎಸೆತದಲ್ಲಿ ಮಿಲ್ಲರ್ಗೆ ರನ್ ಗಳಿಸಲು ಆಗಲಿಲ್ಲ. ಚೆಂಡು ನೇರವಾಗಿ ಕೀಪರ್ ಕೈಗೆ ಹೋಯಿತು. ಕೀಪರ್ ಬಟ್ಲರ್ ಚೆಂಡನ್ನು ಹಿಡಿದು ವಿಕೆಟ್ಗೆ ಹೊಡದರು, ಇತ್ತ ನಾನ್ ಸ್ಟ್ರೈಕ್ನಲ್ಲಿದ್ದ ಕುಲ್ದೀಪ್ ಯಾದವ್ ತಮ್ಮ ಅಜಾಗರೂಕತೆಯಿಂದ ರನೌಟ್ ಆದರು. ಇದರಿಂದಾಗಿ ಗುಜರಾತ್ ಒಂದು ರನ್ನಿಂದ ಪಂದ್ಯವನ್ನು ಗೆದ್ದುಕೊಂಡಿತು.
ಟೆಹ್ರಾನ್, ಏಪ್ರಿಲ್ 8: ಅಮೆರಿಕದ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಇರಾನ್ ಜೊತೆ ಕದನ ವಿರಾಮ ಘೋಷಿಸಿದ 24 ಗಂಟೆಗಳ ಒಳಗೆ ಲೆಬನಾನ್ (Lebanon Attack) ಮೇಲೆ ಇಸ್ರೇಲ್ ದಾಳಿ ನಡೆಸಿತ್ತು. ಇದಕ್ಕೆ ಪ್ರತಿಕ್ರಿಯೆಯಾಗಿ ಇರಾನ್ ಮತ್ತೆ ಹಾರ್ಮುಜ್ ಜಲಸಂಧಿಯನ್ನು ಮುಚ್ಚಿದೆ. ಇಂದು ಮುಂಜಾನೆ ಅಮೆರಿಕ ಮತ್ತು ಇರಾನ್ ಎರಡು ವಾರಗಳ ಕದನ ವಿರಾಮವನ್ನು ಘೋಷಿಸಿದ್ದವು. ಇದರ ಭಾಗವಾಗಿ ಇರಾನ್ ಹಾರ್ಮುಜ್ ಜಲಸಂಧಿಯನ್ನು ಪುನಃ ತೆರೆಯಲು ಒಪ್ಪಿಕೊಂಡಿತ್ತು. ಆದರೆ, ಇಸ್ರೇಲ್ ಲೆಬನಾನ್ ಮೇಲೆ ನಡೆಸಿದ ದಾಳಿಯನ್ನು ಖಂಡಿಸಿರುವ ಇರಾನ್ ಮತ್ತೆ ಹಾರ್ಮುಜ್ ಜಲಸಂಧಿಯನ್ನು ಮುಚ್ಚಿದೆ. ಅಲ್ಲದೆ, ಕದನವಿರಾಮವನ್ನು ಹಿಂಪಡೆಯುವ ಎಚ್ಚರಿಕೆಯನ್ನೂ ನೀಡಿದೆ.
ಇದೀಗ ಟೆಹ್ರಾನ್ ಮತ್ತೊಮ್ಮೆ ಹಾರ್ಮುಜ್ ಜಲಸಂಧಿಯನ್ನು ಮುಚ್ಚಿರುವುದರಿಂದ, ಅಮೆರಿಕ ಮತ್ತು ಇರಾನ್ ನಡುವೆ ಇಂದು ಘೋಷಿಸಲಾದ ಎರಡು ವಾರಗಳ ಕದನ ವಿರಾಮವು ರದ್ದಾಗುವ ಸಾಧ್ಯತೆಯಿದೆ.
ಇರಾನ್ ಜೊತೆ ಕದನ ವಿರಾಮಕ್ಕೆ ಅಮೆರಿಕದ ನಿರ್ಧಾರಕ್ಕೆ ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಸಾರ್ವಜನಿಕವಾಗಿ ಬೆಂಬಲ ವ್ಯಕ್ತಪಡಿಸಿದ್ದಾರೆ. ಆದರೆ ಆ ಒಪ್ಪಂದ ಲೆಬನಾನ್ ಅನ್ನು ಒಳಗೊಂಡಿಲ್ಲ ಎಂದು ಹೇಳಿದ್ದಾರೆ.
“ಇರಾನ್ ವಿರುದ್ಧದ ದಾಳಿಗಳನ್ನು ಎರಡು ವಾರಗಳ ಕಾಲ ಸ್ಥಗಿತಗೊಳಿಸುವ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ನಿರ್ಧಾರವನ್ನು ಇಸ್ರೇಲ್ ಬೆಂಬಲಿಸುತ್ತದೆ. ಇದಕ್ಕೆ ಇರಾನ್ ಜಲಸಂಧಿಯನ್ನು ತಕ್ಷಣವೇ ತೆರೆಯಬೇಕು. ಅಮೆರಿಕ, ಇಸ್ರೇಲ್ ಮತ್ತು ಈ ಪ್ರದೇಶದ ದೇಶಗಳ ಮೇಲಿನ ಎಲ್ಲಾ ದಾಳಿಗಳನ್ನು ನಿಲ್ಲಿಸಲಿದೆ” ಎಂದು ನೆತನ್ಯಾಹು ಎಕ್ಸ್ನಲ್ಲಿ ಪೋಸ್ಟ್ ಮಾಡಿದ್ದರು.
ಬಂಡಿ ಮಹಾಕಾಳಿ ದೇವಸ್ಥಾನದಲ್ಲಿ ‘ಸೀತಾ ರಾಮ ರಾಜು’ (Seetha Rama Raju) ಸಿನಿಮಾ ಮುಹೂರ್ತ ನಡೆದಿದೆ. ಈ ಸಿನಿಮಾದಲ್ಲಿ ಬಿಗ್ ಬಾಸ್ ಖ್ಯಾತಿಯ ಕಾರ್ತಿಕ್ ಮಹೇಶ್ ಅವರು ನಟಿಸುತ್ತಿದ್ದಾರೆ. ‘ಮ್ಯಾಟ್ರಿಕ್ಸ್ ಮೂವೀ ಮೇಕರ್ಸ್’ ಸಂಸ್ಥೆಯ ಮೂಲಕ ಈ ಸಿನಿಮಾ ನಿರ್ಮಾಣ ಆಗುತ್ತಿದೆ. ಸುದ್ದಿಗೋಷ್ಠಿಯಲ್ಲಿ ಕಾರ್ತಿಕ್ ಮಹೇಶ್ ಅವರು ಮಾತನಾಡಿ, ಸಿನಿಮಾ ಬಗ್ಗೆ ಮಾಹಿತಿ ನೀಡಿದರು. ‘ನನಗೆ ತುಂಬ ಇಷ್ಟ ಆದ ಕಥೆ ಇದು. ತುಂಬಾ ಒಳ್ಳೆಯ ಲವ್ ಸ್ಟೋರಿ ಇದೆ. ಈ ಕಥೆ ನನ್ನನ್ನು ತುಂಬ ಕಾಡಿದೆ. ಸಂಗೀತಕ್ಕೆ ಈ ಸಿನಿಮಾದಲ್ಲಿ ಒತ್ತು ಇದೆ. ಭಾವುಕ ಸನ್ನಿವೇಶಗಳು ಕೂಡ ಇವೆ. ನಾನು 100 ಪರ್ಸೆಂಟ್ಗಿಂತ ಹೆಚ್ಚು ಶ್ರಮ ಹಾಕಿ ಕೆಲಸ ಮಾಡುತ್ತೇನೆ’ ಎಂದು ಕಾರ್ತಿಕ್ ಮಹೇಶ್ (Karthik Mahesh) ಅವರು ಹೇಳಿದರು. ಇದೇ ಸಿನಿಮಾದಲ್ಲಿ ಪಿ. ರವಿಶಂಕರ್ ಕೂಡ ಅಭಿನಯಿಸುತ್ತಿದ್ದಾರೆ.
ದೆಹಲಿಯ ಅರುಣ್ ಜೇಟ್ಲಿ ಮೈದಾನದಲ್ಲಿ ನಡೆದ ಐಪಿಎಲ್ 2026 ರ 14ನೇ ಪಂದ್ಯದಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ಹಾಗೂ ಗುಜರಾತ್ ಟೈಟಾನ್ಸ್ ತಂಡಗಳು ಮುಖಾಮುಖಿಯಾಗಿದ್ದವು. ಈ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್ ಮಾಡಿದ ಗುಜರಾತ್ 211 ರನ್ ಕಲೆಹಾಕಿತು. ಈ ಗುರಿ ಬೆನ್ನಟ್ಟಿದ ಡೆಲ್ಲಿ ತಂಡದ ಪರ ಕನ್ನಡಿಗ ಕೆಎಲ್ ರಾಹುಲ್ ಸ್ಫೋಟಕ ಅರ್ಧಶತಕದ ಇನ್ನಿಂಗ್ಸ್ ಆಡಿದರು.
ಈ ಸೀಸನ್ನಲ್ಲಿ ಇದು ರಾಹುಲ್ ಅವರ ಮೊದಲ ಅರ್ಧಶತಕವಾಗಿದೆ. ಮೊದಲೆರಡು ಪಂದ್ಯಗಳಲ್ಲಿ ಕಳಪೆ ಪ್ರದರ್ಶನ ನೀಡಿ ಎಲ್ಲರ ಕೆಂಗಣ್ಣಿಗೆ ಗುರಿಯಾಗಿದ್ದ ರಾಹುಲ್, ಲೀಗ್ನ ಮೂರನೇ ಪಂದ್ಯದಲ್ಲಿ ಲಯ ಕಂಡುಕೊಂಡು ಕೇವಲ 29 ಎಸೆತಗಳಲ್ಲಿ ತಮ್ಮ ಅರ್ಧಶತಕವನ್ನು ಪೂರೈಸಿದರು. ಇದು ರಾಹುಲ್ ಅವರ ಐಪಿಎಲ್ ವೃತ್ತಿಜೀವನದ 41ನೇ ಅರ್ಧಶತಕವಾಗಿದೆ. ರಾಹುಲ್ ಅವರ ಈ ಅರ್ಧಶತಕದಿಂದಾಗಿ ಡೆಲ್ಲಿ ತಂಡ ಸತತ ಮೂರನೇ ಗೆಲುವಿನತ್ತ ಸಾಗುತ್ತಿದೆ.
ಟೆಹ್ರಾನ್, ಏಪ್ರಿಲ್ 8: ಕದನ ವಿರಾಮ ಘೋಷಿಸಿದ ಕೆಲವು ಗಂಟೆಗಳ ನಂತರ ಇಸ್ರೇಲ್ ಲೆಬನಾನ್ ಮೇಲೆ ದಾಳಿ ನಡೆಸಿದೆ. ಈ ರೀತಿ ಕದನವಿರಾಮವನ್ನು ಉಲ್ಲಂಘಿಸುವುದನ್ನು ಮುಂದುವರಿಸಿದರೆ ಅಮೆರಿಕದ ಕದನವಿರಾಮ (Ceasefire) ಒಪ್ಪಂದದಿಂದ ಹಿಂದೆ ಸರಿಯುವುದಾಗಿ ಇರಾನ್ (Iran) ಬೆದರಿಕೆ ಹಾಕಿದೆ.ಇಸ್ರೇಲಿ ಸೈನ್ಯವು 10 ನಿಮಿಷಗಳ ಅವಧಿಯಲ್ಲಿ ಲೆಬನಾನ್ನಾದ್ಯಂತ ಅನೇಕ ಸ್ಥಳಗಳಲ್ಲಿ 100 ವೈಮಾನಿಕ ದಾಳಿಗಳನ್ನು ಪ್ರಾರಂಭಿಸಿದಾಗ ಇರಾನ್ನಿಂದ ಈ ಹೇಳಿಕೆ ಬಂದಿದೆ.
“ಲೆಬನಾನ್ನಲ್ಲಿ ಇಸ್ರೇಲ್ ಮಾಡಿದ ಅಪರಾಧ ಮತ್ತು ಕದನ ವಿರಾಮ ನಿಯಮಗಳ ಉಲ್ಲಂಘನೆಗೆ ಪ್ರತಿಕ್ರಿಯೆಯಾಗಿ ಇರಾನ್ ಇಸ್ರೇಲ್ ಅನ್ನು ಶಿಕ್ಷಿಸುತ್ತದೆ” ಎಂದು ಹೇಳಿದ್ದಾರೆ.
ಇರಾನ್ ಇಂದು ಹಾರ್ಮುಜ್ ಜಲಸಂಧಿಯಲ್ಲಿ ಸಂಚಾರವನ್ನು ಸ್ಥಗಿತಗೊಳಿಸುವ ಎಚ್ಚರಿಕೆ ನೀಡಿದೆ. ಪಶ್ಚಿಮ ಏಷ್ಯಾದಲ್ಲಿ ನಡೆಯುತ್ತಿರುವ ಸಂಘರ್ಷದ ನಡುವೆ ಇಸ್ರೇಲ್ ಲೆಬನಾನ್ ಮೇಲೆ ದಾಳಿ ಮುಂದುವರಿಸಿದರೆ ಅಮೆರಿಕದ ಜೊತೆಗಿನ ಕದನ ವಿರಾಮದಿಂದ ಹಿಂದೆ ಸರಿಯುವುದಾಗಿ ಬೆದರಿಕೆ ಹಾಕಿದೆ. ಹಾರ್ಮುಜ್ ಮೂಲಕ ತೈಲ ಟ್ಯಾಂಕರ್ಗಳ ಸಾಗಣೆಯನ್ನು ನಿಲ್ಲಿಸಲಾಗಿದೆ ಎಂದು ಇರಾನ್ನ ಫಾರ್ಸ್ ನ್ಯೂಸ್ ವರದಿ ಮಾಡಿದೆ.
ಇರಾನ್ ವಿರುದ್ಧದ ದಾಳಿಯನ್ನು ಎರಡು ವಾರಗಳ ಕಾಲ ಸ್ಥಗಿತಗೊಳಿಸುವ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ನಿರ್ಧಾರವನ್ನು ಬೆಂಬಲಿಸುತ್ತಿದ್ದರೂ ಹೆಜ್ಬೊಲ್ಲಾ ಸಂಘಟನೆಯಿಂದಾಗಿ ಕದನ ವಿರಾಮದ ನಿಯಮಗಳು ಮತ್ತು ಷರತ್ತುಗಳು ಲೆಬನಾನ್ಗೆ ಅನ್ವಯವಾಗುವುದಿಲ್ಲ ಎಂದು ಇಸ್ರೇಲ್ ಹೇಳಿದೆ.
ಇರಾನ್ ವಿದೇಶಾಂಗ ಸಚಿವ ಅಬ್ಬಾಸ್ ಅರಘ್ಚಿ ಅವರು ಇರಾನ್ ಮತ್ತು ಲೆಬನಾನ್ನಲ್ಲಿ ಇಸ್ರೇಲ್ನಿಂದ “ಕದನ ವಿರಾಮ ಉಲ್ಲಂಘನೆ” ಕುರಿತು ಚರ್ಚಿಸಲು ಟೆಹ್ರಾನ್ ಮತ್ತು ವಾಷಿಂಗ್ಟನ್ ನಡುವಿನ ಕದನ ವಿರಾಮಕ್ಕೆ ಮಧ್ಯವರ್ತಿಯಾಗಿದ್ದ ಪಾಕಿಸ್ತಾನಕ್ಕೆ ಕರೆ ಮಾಡಿದ್ದಾರೆ ಎಂದು ಮೂಲಗಳು ತಿಳಿಸಿವೆ.
ಇನ್ನಷ್ಟು ಅಂತಾರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ