Headlines

ರೋಗಿಯ ಅಸಹಾಯಕತೆಯನ್ನೇ ಬಂಡವಾಳ ಮಾಡಿಕೊಂಡ ವಂಚಕರು: ಚಿಕಿತ್ಸೆ ಕೊಡಿಸುವ ನೆಪದಲ್ಲಿ ವಂಚನೆ – Kannada News

ಬೆಂಗಳೂರು, ಜೂನ್​ 05: ಪಾರ್ಶ್ವವಾಯು ಕಾಯಿಲೆಗೆ ತುತ್ತಾಗಿದ್ದ ವ್ಯಕ್ತಿಗೆ ಚಿಕಿತ್ಸೆ ಕೊಡಿಸುವ ನೆಪದಲ್ಲಿ ಅಪರಿಚಿತರಿಬ್ಬರು ವಂಚನೆ (fraud) ಮಾಡಿದ್ದಾರೆ. ಜೀರಿಗೆ ಕಷಾಯ ಕುಡಿಸಿ 70 ಸಾವಿರ ರೂ ಹಣ ಪಡೆದು ಪರಾರಿಯಾಗಿರುವಂತಹ ಘಟನೆ ಬೆಂಗಳೂರು (bengaluru) ಚಂದ್ರಾಲೇಔಟ್ ವ್ಯಾಪ್ತಿಯ ಕಲ್ಯಾಣನಗರದಲ್ಲಿ ನಡೆದಿದೆ. ಸದ್ಯ ಮೋಸ ಹೋಗಿರುವ ವ್ಯಕ್ತಿ ಪೊಲೀಸ್ ಠಾಣೆಗೆ ದೂರು ನೀಡಿದ್ದು, ವಂಚಕರ ಸೆರೆಗೆ ಖಾಕಿ ಬಲೆ ಬೀಸಿದೆ. ಮುಖ್ಯಾಂಶಗಳು ರೋಗಿಯ ಅಸಹಾಯಕತೆಯನ್ನೇ ಬಂಡವಾಳ ಮಾಡಿಕೊಂಡ ಕಿರಾತಕರು 20 ದಿನದಲ್ಲಿ ಎದ್ದು ಓಡಾಡ್ತೀರಿ ಅಂತ ಪುಂಗಿದ್ದರು…

Read More

ಬೆಂಗಳೂರು ವಿಶ್ವವಿದ್ಯಾಲಯದ 100 ಎಕರೆ ಜಾಗದ ಮೇಲೆ ಕಣ್ಣಾಕಿದ ಕೇಂದ್ರ ಸರ್ಕಾರ! – Kannada News

ಬೆಂಗಳೂರು, (ಜೂನ್ 05): ರಾಜ್ಯದ ಸರ್ಕಾರಿ ವಿಶ್ವವಿದ್ಯಾಲಯಗಳಲ್ಲಿ (Karnataka Universities)  ಬೆಂಗಳೂರು ವಿಶ್ವವಿದ್ಯಾಲಯ (Bengaluru University) ಪ್ರಮುಖವಾಗಿದ್ದು, ಗುಣಮಟ್ಟದ ಶಿಕ್ಷಣಕ್ಕೆ ಹೆಸರುವಾಸಿಯಾಗಿದೆ. 1200 ಎಕರೆ ಜಾಗದಲ್ಲಿ ಸ್ಥಾಪನೆಯಾದ ಬೆಂಗಳೂರು ವಿಶ್ವವಿದ್ಯಾಲ ಕ್ರಮೇಣ ಕಿರಿದಾಗಿದ್ದು,  ಈಗಾಗಲೇ 300ಕ್ಕೂ ಹೆಚ್ಚು ಎಕರೆ ಜಾಗವನ್ನು ಕೇಂದ್ರ ಹಾಗೂ ರಾಜ್ಯ ಸರ್ಕಾರದ ಸಂಸ್ಥೆಗಳಿಗೆ ಬಿಟ್ಟುಕೊಡಲಾಗಿದೆ. ಈ ವಿಚಾರಕ್ಕೆ ವಿರೋಧವಿದ್ದು,  ಇದರ ಮಧ್ಯೆ ಇದೀಗ ಮತ್ತೆ ಜ್ಞಾನಭಾರತಿ ಆವರಣದ ಮೇಲೆ  ಕೇಂದ್ರದ ಕಣ್ಣು ಬಿದ್ದಿದೆ. ಒಲಿಂಪಿಕ್ಸ್ ಟ್ರೈನಿಂಗ್ ಸೆಂಟರ್​ಗೆ 100 ಎಕರೆ ಜಾಗ ಬೇಕು…

Read More

ಹೆಚ್ಚು ಬೆವರುತ್ತೀರಾ? ಈ ರೀತಿಯಾಗುವುದಕ್ಕೆ ಕಾರಣ ಏನ್ ಗೊತ್ತಾ? – Kannada News

ಬೆವರುವುದು (Excessive Sweating) ದೇಹದ ಸಹಜ ಪ್ರಕ್ರಿಯೆಯಾಗಿದೆ. ದೇಹದ ಉಷ್ಣತೆಯನ್ನು ನಿಯಂತ್ರಿಸಲು ಬೆವರು ಸಹಾಯ ಮಾಡುತ್ತದೆ. ಬಿಸಿಲು, ವ್ಯಾಯಾಮ ಅಥವಾ ಒತ್ತಡದ ಸಂದರ್ಭಗಳಲ್ಲಿ ಬೆವರು ಬರುವುದು ಸಾಮಾನ್ಯ. ಆದರೆ ಕೆಲವರಿಗೆ ಯಾವುದೇ ಹೆಚ್ಚು ಶಾರೀರಿಕ ಕೆಲಸವಿಲ್ಲದೇ ಹೆಚ್ಚು ಬೆವರು ಬರುವ ಸಮಸ್ಯೆ ಕಾಣಿಸಬಹುದು. ಇದನ್ನು ಸಾಮಾನ್ಯವೆಂದು ನಿರ್ಲಕ್ಷ್ಯ ಮಾಡಬಾರದು ಎಂದು ಆರೋಗ್ಯ ತಜ್ಞರು ಹೇಳುತ್ತಾರೆ. ಹೆಚ್ಚು ಬೆವರುವುದು ಕೆಲವೊಮ್ಮೆ ದೈನಂದಿನ ಜೀವನ, ಕೆಲಸದ ಸಾಮರ್ಥ್ಯ ಮತ್ತು ಆತ್ಮವಿಶ್ವಾಸದ ಮೇಲೂ ಪರಿಣಾಮ ಬೀರುತ್ತದೆ. ಕೆಲವು ಮಂದಿಗೆ ಕೈಗಳ ತಳಭಾಗ,…

Read More

ಗಿಡ ನೆಟ್ಟು ವಿಶ್ವ ಪರಿಸರ ದಿನ ಆಚರಿಸಿದ ಪ್ರಧಾನಿ ಮೋದಿ

ನವದೆಹಲಿ, ಜೂನ್ 5: ವಿಶ್ವ ಪರಿಸರ ದಿನದ ಸಂದರ್ಭದಲ್ಲಿ ಪ್ರಧಾನಿ ನರೇಂದ್ರ ಮೋದಿ (PM Narendra Modi) ದೇಶದ ಜನತೆಗೆ ಶುಭಾಶಯಗಳನ್ನು ಕೋರಿದ್ದಾರೆ. ಇದೇ ವೇಳೆ ಪರಿಸರವನ್ನು ರಕ್ಷಿಸಲು ಮತ್ತು ಸಂರಕ್ಷಿಸಲು ಶ್ರಮಿಸುತ್ತಿರುವ ಎಲ್ಲರನ್ನೂ ಅವರು ಮುಕ್ತಕಂಠದಿಂದ ಶ್ಲಾಘಿಸಿದ್ದಾರೆ. ಹಾಗೇ, ಗಿಡ ನೆಡುವ ಮೂಲಕ ಪರಿಸರ ದಿನವನ್ನು ಆಚರಿಸಿದ್ದಾರೆ. ಎಕ್ಸ್​ನಲ್ಲಿ ಪೋಸ್ಟ್ ಮಾಡಿರುವ ಪ್ರಧಾನಿ ಮೋದಿ, “ಎಲ್ಲರಿಗೂ ವಿಶ್ವ ಪರಿಸರ ದಿನದ ಹಾರ್ದಿಕ ಶುಭಾಶಯಗಳು. ಪರಿಸರ ಸಂರಕ್ಷಣೆಯ ಬಗ್ಗೆ ಅಪಾರ ಕಾಳಜಿ ಹೊಂದಿರುವ ಪ್ರತಿಯೊಬ್ಬರಿಗೂ ನಾನು ಅಭಿನಂದನೆ…

Read More

IND vs AFG: ಟೆಸ್ಟ್ ಪಂದ್ಯಕ್ಕೆ ಮಳೆ ಅಡ್ಡಿ; ಹೇಗಿರಲಿದೆ ಪಿಚ್ ಹಾಗೂ ಪ್ಲೇಯಿಂಗ್ 11? – Kannada News

ಭಾರತ ಮತ್ತು ಅಫ್ಘಾನಿಸ್ತಾನ (India vs Afghanistan) ತಂಡಗಳು ಏಕೈಕ ಟೆಸ್ಟ್ ಪಂದ್ಯದಲ್ಲಿ ಮುಖಾಮುಖಿಯಾಗುತ್ತಿವೆ. ಈ ಎರಡೂ ತಂಡಗಳ ನಡುವಿನ ಮೊದಲ ಟೆಸ್ಟ್ ಪಂದ್ಯ 2018 ರಲ್ಲಿ ಬೆಂಗಳೂರಿನ ಎಂ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆದಿತ್ತು. ಈ ಪಂದ್ಯದಲ್ಲಿ ಭಾರತ ಅಫ್ಘಾನಿಸ್ತಾನವನ್ನು ಇನ್ನಿಂಗ್ಸ್ ಮತ್ತು 262 ರನ್‌ಗಳಿಂದ ಸೋಲಿಸಿತು. ಈಗ ಎರಡೂ ತಂಡಗಳು ಎರಡನೇ ಬಾರಿಗೆ ಮುಖಾಮುಖಿಯಾಗಲಿವೆ. ಈ ಪಂದ್ಯವು ನ್ಯೂ ಚಂಡೀಗಢದ ಮಹಾರಾಜ ಯಾದವೇಂದ್ರ ಸಿಂಗ್ ಅಂತರರಾಷ್ಟ್ರೀಯ ಕ್ರೀಡಾಂಗಣದಲ್ಲಿ ನಡೆಯಲಿದೆ. ಆದರೆ ಅದಕ್ಕೂ ಮುನ್ನ ಈ ಪಂದ್ಯದ…

Read More

ಮತ್ತೆ ಬರುತ್ತಿದೆ ‘ಅಗ್ನಿಸಾಕ್ಷಿ’ ಧಾರಾವಾಹಿ: ಶಮಂತ್ ಗೌಡ ಹೇಳಿದ್ದೇನು?

ಈ ಹಿಂದೆ ‘ಲಕ್ಷ್ಮಿ ಬಾರಮ್ಮ’ ಧಾರಾವಾಹಿಯಲ್ಲಿ (Serial) ನಟಿಸಿದ್ದ ಮಾಜಿ ಬಿಗ್​​ಬಾಸ್ ಸ್ಪರ್ಧಿ ಶಮಂತ್ ಇದೀಗ ‘ಅಗ್ನಿಸಾಕ್ಷಿ’ ಧಾರಾವಾಹಿಯಲ್ಲಿ ನಟಿಸುತ್ತಿದ್ದಾರೆ. ಈ ಹಿಂದೆ ಪ್ರಸಾರವಾಗಿದ್ದ ‘ಅಗ್ನಿಸಾಕ್ಷಿ’ ಧಾರಾವಾಹಿ ಸಖತ್ ಹಿಟ್ ಆಗಿತ್ತು, ಲಕ್ಷಾಂತರ ಮನೆ ಮಂದಿಯ ಮನ ಗೆದ್ದಿತ್ತು. ಇದೀಗ ಅದೇ ಹೆಸರಿನಲ್ಲೇ ಧಾರಾವಾಹಿ ಮತ್ತೆ ಬರುತ್ತಿದೆ. ಈ ಬಾರಿ ಒಬ್ಬ ಅಹಂಕಾರಿ ನಾಯಕ ಹಾಗೂ ಸ್ವಾಭಿಮಾನಿ ನಾಯಕಿಯ ನಡುವೆ ನಡೆಯುವ ಕತೆಯನ್ನು ಒಳಗೊಂಡಿದೆ. ಶಮಂತ್, ‘ಅಗ್ನಿಸಾಕ್ಷಿ’ ಧಾರಾವಾಹಿಯಲ್ಲಿ ನಾಯಕನಾಗಿ ನಟಿಸುತ್ತಿದ್ದಾರೆ. ಧಾರಾವಾಹಿ ಬಗ್ಗೆ ಅವರೇನು ಹೇಳಿದರು?…

Read More

ಬಿಜೆಪಿಗೆ ರಾಜೀನಾಮೆ ನೀಡಿ ಬಂದ ಅಣ್ಣಾಮಲೈಗೆ ಭರ್ಜರಿ ಸ್ವಾಗತ, ಫ್ಯಾನ್ಸ್ ಹರ್ಷೋದ್ಘಾರ ಹೇಗಿದೆ ನೋಡಿ – Kannada News

ಚೆನ್ನೈ, (ಜೂನ್ 05): ಕಡೆಗೂ ಸಿಂಗಂ ಖ್ಯಾತಿಯ ಅಣ್ಣಾಮಲೈ ಬಿಜೆಪಿ ಪಕ್ಷಕ್ಕೆ ಗುಡ್‌ಬೈ ಹೇಳಿದ್ದಾರೆ. ಪಕ್ಷದ ಪ್ರಾಥಮಿಕ ಸದಸ್ಯತ್ವಕ್ಕೆ ಅಣ್ಣಾಮಲೈ ನೀಡಿರುವ ರಾಜೀನಾಮೆಯನ್ನು ಬಿಜೆಪಿ ಅಂಗೀಕರಿಸಿದೆ. ಈ ಮೂಲಕ ಕಳೆದ ಮೂರು ದಿನಗಳಿಂದ ನಡೆಯುತ್ತಿದ್ದ ಹಗ್ಗ-ಜಗ್ಗಾಟ ಅಂತ್ಯಗೊಂಡಿದೆ. ಆದರೆ ಅಣ್ಣಾಮಲೈ ಪಕ್ಷ ತೊರೆಯುತ್ತಿದ್ದಂತೇ, ಬಿಜೆಪಿ ನಾಯಕರು ಭಿನ್ನ ಹೇಳಿಕೆಗಳನ್ನು ನೀಡಲಾರಂಭಿಸಿದ್ದಾರೆ. “ಅಣ್ಣಾಮಲೈ ಹೊರಹೋಗುವುದರಿಂದ ಪಕ್ಷಕ್ಕೆ ಯಾವ ನಷ್ಟವೂ ಇಲ್ಲ ಎಂದು ತಮಿಳುನಾಡು ಬಿಜೆಪಿ ರಾಜ್ಯಾಧ್ಯಕ್ಷ ನೈನಾರ್‌ ನಾಗೇಂದ್ರನ್‌ ಹೇಳಿಕೆ ನೀಡಿದ್ದಾರೆ. ಇನ್ನೊಂದೆಡೆ ರಾಜೀನಾಮೆ ಅಂಗೀಕರಿಸುತ್ತಿದ್ದಂತೆಯೇ ದೆಹಲಿಯಿಂದ ಚೆನ್ನೈಗೆ…

Read More

ಬಿಎಂಟಿಸಿ ಪ್ರಯಾಣಿಕರಿಗೆ ಗುಡ್​ನ್ಯೂಸ್​​: ಮೆಟ್ರೋ ಮಾದರಿಯಲ್ಲಿ ಆನ್‌ಲೈನ್ ಟಿಕೆಟ್ ವ್ಯವಸ್ಥೆ ಜಾರಿಗೆ ಪ್ಲ್ಯಾನ್​​ – Kannada News

ಬೆಂಗಳೂರು, ಜೂನ್​​ 05: ಶಕ್ತಿ ಯೋಜನೆಯ ಅಭೂತಪೂರ್ವ ಯಶಸ್ಸಿನ ಬೆನ್ನಲ್ಲೇ ಬಿಎಂಟಿಸಿ ಬಸ್‌ಗಳಲ್ಲಿ ಟಿಕೆಟ್ ಪಡೆಯಲು ಪಡುತ್ತಿರುವ ಪ್ರಯಾಣಿಕರ ಕಷ್ಟಕ್ಕೆ ಮುಕ್ತಿ ಹಾಡಲು ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆಯು (BMTC) ನಮ್ಮ ಮೆಟ್ರೋ ಮಾದರಿಯಲ್ಲೇ ಆನ್‌ಲೈನ್ ಕ್ಯೂಆರ್ (QR) ಟಿಕೆಟ್ ಖರೀದಿಸುವ ಹೊಸ ಪ್ಲ್ಯಾನ್​ ಜಾರಿಗೆ ಮುಂದಾಗಿದೆ.​ ಇದಕ್ಕೆ ಪ್ರಯಾಣಿಕರು ಸಂತಸ ವ್ಯಕ್ತಪಡಿಸುತ್ತಿದ್ದಾರೆ. ಮುಖ್ಯಾಂಶಗಳು ನಮ್ಮ ಮೆಟ್ರೋ ಮಾದರಿಯಲ್ಲೇ ಬಿಎಂಟಿಸಿಯಲ್ಲೂ ಆನ್‌ಲೈನ್ ಟಿಕೆಟ್ ಖರೀದಿಸಲು ಅವಕಾಶ ಬಿಎಂಟಿಸಿ ಬಸ್ ಹತ್ತುವ ಮುನ್ನವೇ ಮೊಬೈಲ್ ಮೂಲಕ ಕ್ಯೂಆರ್ ಟಿಕೆಟ್…

Read More

ಹೆಚ್ಚು ಆಂಟಿಬಯೋಟಿಕ್ ಸೇವನೆಯಿಂದ ಕರುಳಿನ ಆರೋಗ್ಯ ಹದಗೆಡಬಹುದೇ? ತಜ್ಞರು ಹೇಳುವುದೇನು? – Kannada News

ಇತ್ತೀಚಿನ ದಿನಗಳಲ್ಲಿ ಆಂಟಿಬಯೋಟಿಕ್ ಔಷಧಿಗಳ ಬಳಕೆ ಬಹಳ ಹೆಚ್ಚಾಗಿದೆ. ಜ್ವರ, ಗಂಟಲು ನೋವು, ಸೋಂಕುಗಳಂತಹ ಸಣ್ಣ ಸಮಸ್ಯೆಗಳಿಗೂ ಕೆಲವರು ವೈದ್ಯರ ಸಲಹೆಯಿಲ್ಲದೆ ಆಂಟಿಬಯೋಟಿಕ್ (Antibiotics) ತೆಗೆದುಕೊಳ್ಳುತ್ತಾರೆ. ಆದರೆ, ಈ ಔಷಧಿಗಳನ್ನು ಅತಿಯಾಗಿ ಅಥವಾ ಸರಿಯಾದ ರೀತಿಯಲ್ಲಿ ಬಳಸದಿರುವುದು ಕರುಳಿನ ಆರೋಗ್ಯದ (Gut Health) ಮೇಲೆ ದುಷ್ಪರಿಣಾಮ ಬೀರುವ ಸಾಧ್ಯತೆ ಇದೆ ಎಂದು ಆರೋಗ್ಯ ತಜ್ಞರು ಹೇಳುತ್ತಾರೆ. ಆಂಟಿಬಯೋಟಿಕ್‌ಗಳು ಬ್ಯಾಕ್ಟೀರಿಯಾದಿಂದ ಉಂಟಾಗುವ ಸೋಂಕುಗಳನ್ನು ನಿಯಂತ್ರಿಸಲು ಸಹಾಯ ಮಾಡುತ್ತವೆ. ಸರಿಯಾದ ರೀತಿಯಲ್ಲಿ ವೈದ್ಯರ ಸಲಹೆಯಂತೆ ಬಳಸಿದರೆ ಅವು ಪರಿಣಾಮಕಾರಿ ಔಷಧಿಗಳಾಗಿವೆ….

Read More

ಮಳೆಗಾಲದಲ್ಲಿ ಸೊಳ್ಳೆಗಳನ್ನು ನಿಯಂತ್ರಿಸೋದು ಹೇಗೆ? ಇಲ್ಲಿವೆ ಸುಲಭ ಮಾರ್ಗಗಳು

ನವದೆಹಲಿ, ಜೂನ್ 5: ಈಗಾಗಲೇ ಮಳೆಗಾಲ (Monsoon) ಶುರುವಾಗಿದೆ. ಕರ್ನಾಟಕದಲ್ಲೂ ಮೂರ್ನಾಲ್ಕು ದಿನಗಳಿಂದ ಮಳೆ ಸುರಿಯುತ್ತಲೇ ಇದೆ. ಇಂತಹ ಸಂದರ್ಭದಲ್ಲಿ ನಮ್ಮ ಆರೋಗ್ಯದ ಕಡೆ ವಿಶೇಷವಾದ ಗಮನಹರಿಸುವುದು ಅತ್ಯಗತ್ಯ. ಮಳೆಗಾಲದಲ್ಲಿ ಸೊಳ್ಳೆಗಳ ಕಾಟ ವಿಪರೀತವಾಗಿ ಹೆಚ್ಚಾಗುತ್ತದೆ. ಈ ಸಮಯದಲ್ಲಿ ಡೆಂಗ್ಯೂ, ಮಲೇರಿಯಾ ಮತ್ತು ಚಿಕನ್‌ಗುನ್ಯಾದಂತಹ ರೋಗಗಳು ಹರಡುವ ಅಪಾಯ ಹೆಚ್ಚು. ಮಳೆಗಾಲದಲ್ಲಿ ಸೊಳ್ಳೆಗಳನ್ನು ನಿಯಂತ್ರಿಸಲು ಮತ್ತು ಅವುಗಳಿಂದ ರಕ್ಷಣೆ ಪಡೆಯಲು ಕೆಲವು ಪ್ರಮುಖ ಹಾಗೂ ಸುಲಭವಾದ ಮಾರ್ಗಗಳು ಇಲ್ಲಿವೆ. ಕಿಟಕಿ ಮತ್ತು ಬಾಗಿಲುಗಳನ್ನು ಮುಚ್ಚಿಡಿ: ಮಳೆಗಾಲ ಆರಂಭವಾದ…

Read More